7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ - Vistara News

ಕರ್ನಾಟಕ

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಿ ವಾರದ ಒಟ್ಟು ಕೆಲಸದ ದಿನಗಳ ಸಂಖ್ಯೆಯನ್ನು ಐದಕ್ಕೆ ಇಳಿಸಬೇಕು ಎನ್ನುವ ಮಹತ್ವದ ಬೇಡಿಕೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಏಳನೇ ವೇತನ ಆಯೋಗದ (7th pay commission) ಮುಂದಿಟ್ಟಿದೆ.

VISTARANEWS.COM


on

Govt employees ssociation
ಸರ್ಕಾರಿ ನೌಕರರ ಸಂಘ ವತಿಯಿಂದ ಏಳನೇ ವೇತನ ಆಯೋಗದ ಅಧ್ಯಕ್ಷರಿಗೆ ಶಿಫಾರಸುಗಳನ್ನು ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ, ಸಂಘದ ಹಿರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರಿ ಕಚೇರಿಗಳ ಕೆಲಸ ಅವಧಿಯನ್ನು ಈಗಿರುವ ಏಳುವರೆ ಗಂಟೆ ಬದಲಾಗಿ ಎಂಟುವರೆ ಗಂಟೆಗೆ ವಿಸ್ತರಿಸಿ, ತಿಂಗಳ ಮೊದಲ ಮತ್ತು ಕೊನೆಯ ಶನಿವಾರ ಸಾರ್ವತ್ರಿಕ ರಜೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೇಡಿಕೆ ಮುಂದಿಟ್ಟಿದೆ. ಈಗಾಗಲೇ ವಾರದ ಎರಡನೇ ಮತ್ತು ನಾಲ್ಕನೇ ಶನಿವಾರ ಸರ್ಕಾರಿ ಕಚೇರಿಗಳಿಗೆ ರಜೆ ಇರುವುದರಿಂದ ಸಂಘವು ವಾರಕ್ಕೆ ಐದು ದಿನದ ಕೆಲಸಕ್ಕೆ ಬೇಡಿಕೆ ಇಟ್ಟಂತಾಗಿದೆ. ಕರ್ನಾಟಕ ರಾಜ್ಯ 7ನೇ ವೇತನ ಆಯೋಗದ (7th pay commission) ಪ್ರಶ್ನಾವಳಿಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೀಡಲಾದ ಉತ್ತರದಲ್ಲಿ ಈ ಬೇಡಿಕೆಯನ್ನು ಮುಂದಿಡಲಾಗಿದೆ.

ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಾಜ್ಯ 7ನೇ ವೇತನ ಆಯೋಗವನ್ನು ರಚಿಸಿತ್ತು. ಈ ಕುರಿತು ಶಿಫಾರಸುಗಳನ್ನು ಮಾಡುವ ಮುನ್ನ ಸರ್ಕಾರಿ ನೌಕರರ ಬೇಡಿಕೆಗಳ ಬಗ್ಗೆ ಅರಿಯುವುದಕ್ಕಾಗಿ, ರಾಜ್ಯ ಸರ್ಕಾರಿ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ ಆಯೋಗವು ೨೦೨೩ರ ಜನವರಿ ೧೭ರಂದು ಪ್ರಶ್ನಾವಳಿಗಳನ್ನು ಬಿಡುಗಡೆಗೊಳಿಸಿ ಸರ್ಕಾರಿ ನೌಕರರ ಸಂಘದಿಂದ ಉತ್ತರ, ಅಭಿಪ್ರಾಯ ಮತ್ತು ಸಲಹೆಗಳನ್ನು ಕೇಳಿತ್ತು.

ಅದರಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ-ನೌಕರರಿಂದ ಮಾಹಿತಿಗಳನ್ನು ಸಂಗ್ರಹಿಸಿ ೬೫ ಪುಟಗಳ ವರದಿಯನ್ನು ತಯಾರಿಸಿತ್ತು. ಫೆಬ್ರವರಿ ೧೦ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ, ಸಂಘದ ಹಿರಿಯ ಪದಾಧಿಕಾರಿಗಳು ಮತ್ತು ವೃಂದ ಸಂಘದ ಅಧ್ಯಕ್ಷರ ನಿಯೋಗವು ಈ ವರದಿಯನ್ನು ವೇತನ ಆಯೋಗದ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಸದಸ್ಯರಿಗೆ ಒಪ್ಪಿಸಿತು.

ರಾಜ್ಯ 7ನೇ ವೇತನ ಆಯೋಗದ ಪ್ರಶ್ನಾವಳಿಗಳಿಗೆ ಸಲ್ಲಿಸಲಾದ ಉತ್ತರಗಳ ಮುಖ್ಯಾಂಶಗಳು

1. ಹೊಸ ವೇತನ ಶ್ರೇಣಿಗಳ ರಚನೆಗೆ ಅಳವಡಿಸಿಕೊಳ್ಳುವ ಮಾನದಂಡಗಳೇನಿರಬೇಕು?
– ಸಮಾನ ಕೆಲಸಕ್ಕೆ ಸಮಾನ ವೇತನ, ವಿದ್ಯಾರ್ಹತೆ, ಜವಾಬ್ದಾರಿಯ ಗುಣಮಟ್ಟ, ಕಾರ್ಯಕ್ಷಮತೆ, ಕಾರ್ಯಕ್ಷೇತ್ರದ ವ್ಯಾಪ್ತಿ, ಜೊತೆಗೆ ನೆರೆ ರಾಜ್ಯ ಮತ್ತು ಕೇಂದ್ರ ವೇತನ ಮತ್ತು ಭತ್ಯೆಗಳ ಹೋಲಿಕೆ ಮಾಡಬೇಕು.

2. ಕಚೇರಿ ವೇಳೆಯನ್ನು ಹೆಚ್ಚಿಸಿ, ವಾರದ ಕರ್ತವ್ಯ ದಿನಗಳನ್ನು ಕಡಿಮೆ ಮಾಡುವ ಬಗ್ಗೆ
ಸರ್ಕಾರಕ್ಕೆ ಸಾರಿಗೆ, ವಿದ್ಯುತ್, ನೀರು, ಟ್ರಾಫಿಕ್, ಸರ್ಕಾರಿ ವಾಹನಗಳ ಇಂಧನ ಹಾಗೂ ವೆಚ್ಚದಲ್ಲಿ ಆರ್ಥಿಕ ಮಿತವ್ಯಯ ಸಾಧಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಿ ನಿರ್ವಹಣೆ ನೌಕರರಿಗಿರುವಂತೆ-
– ಬೆಳಗ್ಗೆ 10.00ಕ್ಕೆ ಬದಲಾಗಿ ಬೆಳಿಗ್ಗೆ 9.30ರಿಂದ ಹಾಗೂ ಸಂಜೆ 5.30ಕ್ಕೆ ಬದಲಾಗಿ ಸಂಜೆ 6.00ರವರೆಗೆ ಬದಲಾಯಿಸುವುದು.
– ತಿಂಗಳ ಮೊದಲ ಮತ್ತು ಮೂರನೆ ಶನಿವಾರ ಸಾರ್ವತ್ರಿಕ ರಜೆ ನೀಡುವುದು.

೩. ವೇತನ ಹೆಚ್ಚಳ ಹೊರೆ-ಸರಿದೂಗಿಸುವುದು ಹೇಗೆ?
– ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವುದು.
– ಆಡಳಿತದಲ್ಲಿ ತಂತ್ರಜ್ಞಾನವನ್ನು ಹೆಚ್ಚಿಸುವುದು.
– ನೌಕರರಲ್ಲಿ ದಕ್ಷತೆ ಮತ್ತು ನೈಪುಣ್ಯತೆ ಹಾಗೂ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಎಟಿಐ ಮಾದರಿ ತರಬೇತಿ ನೀಡುವುದು.

೪. ವೇತನ ಪರಿಷ್ಕರಣೆಗೆ ಕೇಂದ್ರ-ನೆರೆ ರಾಜ್ಯಗಳ ವೇತನ ಶ್ರೇಣಿಗಳನ್ನು ಪರಿಗಣಿಸಬೇಕೆ?
– ಅನುಕೂಲವಾಗುವ ಕೇಂದ್ರ ಮತ್ತು ಕೇರಳ ರಾಜ್ಯ ನೌಕರರ ವೇತನ-ಭತ್ಯೆಗಳನ್ನು ಪರಿಗಣಿಸುವುದು.

5. ಕೇಂದ್ರಕ್ಕೆ ಸಮಾನ ವೇತನ ನೀಡುವ ಸಾಧ್ಯತೆ ಬಗ್ಗೆ ಸಮಂಜಸವಾದ ಸಮರ್ಥನೆಗಳು
– 6ನೇ ವೇತನ ಆಯೋಗದಲ್ಲಿ ಪ್ರಸ್ತುತ ಮೂಲ ವೇತನಕ್ಕೆ ಹಾಲಿ ಇರುವ ಶೇ.31ರಷ್ಟು ತುಟ್ಟಿಭತ್ಯೆಯನ್ನು ವಿಲೀನಗೊಳಿಸಿ ಶೇ. 40ರಷ್ಟು ಫಿಟ್‌ಮೆಂಟ್ ಸೌಲಭ್ಯವನ್ನು 01.07.2022ರಿಂದ ಜಾರಿಗೆ ತರುವುದು.
– 2026ರಲ್ಲಿ ಪರಿಷ್ಕರಣೆಯಾಗಲಿರುವ ಕೇಂದ್ರ ವೇತನ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಈಗಾಗಲೇ 26 ರಾಜ್ಯಗಳಲ್ಲಿರುವಂತೆ ಯಥಾವತ್ತಾಗಿ ಅನ್ವಯಗೊಳಿಸಲು ಆಯೋಗವು ಸರ್ಕಾರಕ್ಕೆ ಶಿಫಾರಸು ಮಾಡುವುದು.

6. ಹಾಲಿ ಇರುವ ಮುಖ್ಯ ವೇತನ ಶ್ರೇಣಿ ಹಾಗೂ 25 ಪ್ರತ್ಯೇಕ ವೇತನ ಶ್ರೇಣಿಗಳನ್ನು ಮುಂದುವರಿಸಬಹುದೇ?
– ಹಾಲಿ ಇರುವ 25 ಮಾಸ್ಟರ್ ವೇತನ ಶ್ರೇಣಿ ಹಾಗೂ 92 ವೇತನ ಹಂತಗಳನ್ನು ಮುಂದುವರಿಸುವುದು.

7. ನೂತನ ವೇತನ ಶ್ರೇಣಿಗಳನ್ನು ಯಾವ ಆಧಾರ ಮೇಲೆ ರೂಪಿಸಬೇಕು?
– ಹೊಸ ವೇತನ ಶ್ರೇಣಿಗಳನ್ನು 2022ನೇ ಸಾಲಿನ ಬೆಲೆ ಸೂಚ್ಯಾಂಕದ 12 ತಿಂಗಳ ಸರಾಸರಿಯ ಆಧಾರದ ಮೇಲೆ ವೇತನ ಶ್ರೇಣಿಗಳ ದರಗಳನ್ನು ನಿಗದಿಪಡಿಸುವುದು.

8. ಪ್ರಸ್ತುತ ವೇತನ ಮತ್ತು ಭತ್ಯೆಗಳು ಸೇರಿ ಮಾಹೆಯಾನ ಎಷ್ಟಿರಬೇಕು?
– ಕನಿಷ್ಠ 40% ಫಿಟ್‌ಮೆಂಟ್‌ನೊಂದಿಗೆ ಹಾಗೂ ಜೀವನ ನಿರ್ವಹಣೆಯನ್ನಾಧರಿಸಿ…
ಗ್ರೂಪ್ ‘ಡಿ’ ನೌಕರನ ಕನಿಷ್ಠ ಮೂಲ ವೇತನ ರೂ. 31,000ಕ್ಕೆ ನಿಗದಿಗೊಳಿಸುವುದು.

9. ಮುಖ್ಯ ವೇತನ ಶ್ರೇಣಿಯ ಗರಿಷ್ಠ ಹಾಗೂ ಕನಿಷ್ಠ ವೇತನಗಳ ನಡುವಿನ ಅನುಪಾತ ಪುನರ್‌ ಪರಿಶೀಲನೆ ಆಗಬೇಕೆ?
-ಪರಿಷ್ಕರಿಸಲಿರುವ ವೇತನ ಶ್ರೇಣಿಗಳಲ್ಲಿನ ಕನಿಷ್ಠ ಹಾಗೂ ಗರಿಷ್ಠ ವೇತನದ ನಡುವಿನ ಈಗಿರುವ ಅನುಪಾತ 1:5,20 ಬದಲಾಗಿ 1:8.86 ಕ್ಕೆ ನಿಗದಿಪಡಿಸಿ ಶಿಫಾರಸು ಮಾಡುವುದು.

10. ವೇತನ ಶ್ರೇಣಿಗಳ ನಡುವೆ ಇರುವ ಹೋಲಿಕೆ-ಜವಾಬ್ದಾರಿಗಳಿಗೆ ಅನುಗುಣವಾಗಿದೆಯೇ?
– ವೇತನ ಶ್ರೇಣಿಗಳ ನಡುವಿನ ಸಾಪೇಕ್ಷೆಗಳನ್ನು (Relativity) ಸಾಧ್ಯವಾದಷ್ಟು ಮಟ್ಟಿಗೆ ಹಾಗೆಯೇ ಮುಂದುವರಿಸುವುದು ಸಮಂಜಸವಾಗಿರುತ್ತದೆ.

11. ಸರ್ಕಾರಿ ನೌಕರರಿಗೆ ಸೇವೆಯಲ್ಲಿ ಎಷ್ಟು ಮುಂಬಡ್ತಿಗಳಿರಬೇಕು.
– ಒಬ್ಬ ಸರ್ಕಾರಿ ನೌಕರನಿಗೆ ಸೇವಾವಧಿಯಲ್ಲಿ ಕನಿಷ್ಠ 3-4 ಮುಂಬಡ್ತಿ ಅವಕಾಶಗಳು ಲಭ್ಯವಾಗುವಂತೆ ಶಿಫಾರಸ್ಸು ಮಾಡುವುದು.

ಸರ್ಕಾರಿ ನೌಕರರ ಸಂಘ ವತಿಯಿಂದ ಏಳನೇ ವೇತನ ಆಯೋಗದ ಅಧ್ಯಕ್ಷರಿಗೆ ಶಿಫಾರಸುಗಳನ್ನು ಸಲ್ಲಿಸಲಾಯಿತು.

12 ಕನಿಷ್ಠ ವಾರ್ಷಿಕ ವೇತನ ಬಡ್ತಿ ದರ ಎಷ್ಟಿರಬೇಕು?
– ವಾರ್ಷಿಕ ವೇತನ ಬಡ್ತಿಯ ದರವನ್ನು ಕೇರಳ ರಾಜ್ಯದ ಮಾದರಿಯಲ್ಲಿ ಮೂಲ ವೇತನಕ್ಕೆ 3.04% ರಷ್ಟು ನಿಗದಿಪಡಿಸುವುದು.

13. ಸ್ಥಗಿತ ವೇತನ ಬಡ್ತಿ ಸಂಖ್ಯೆ ಬಗ್ಗೆ ನಿಮ್ಮ ಅಭಿಮತ
– ಸ್ಥಗಿತ ವೇತನ ಬಡ್ತಿಯನ್ನು ಹಾಲಿ ಇರುವ 8ರಿಂದ 12ಕ್ಕೆ ಹೆಚ್ಚಿಸುವುದು ಹಾಗೂ ಕಚೇರಿ ಮುಖ್ಯಸ್ಥರು ಮಂಜೂರು ಮಾಡುವುದು.

14. ಸಚಿವಾಲಯ-ಸಚಿವಾಲಯೇತರ ಸಮಾನ ಹುದ್ದೆಗಳ ವೇತನ ಸಮಾನಾಂತರಗೊಳಿಸುವುದು.
– ಸಚಿವಾಲಯ-ಸಚಿವಾಲಯೇತರ ಸಮಾನ ಹುದ್ದೆಗಳ ವೇತನವನ್ನು ಸಮಾನಗೊಳಿಸಲು ಶಿಫಾರಸ್ಸು ಮಾಡುವುದು. ಸಚಿವಾಲಯ ಸಿಬ್ಬಂದಿಗೆ ಕೇಂದ್ರ ಸಚಿವಾಲಯದ ಮಾದರಿಯಲ್ಲಿ ಹಾಗೂ ವಿಧಾನಸಭೆ/ವಿಧಾನ ಪರಿಷತ್ ಸಚಿವಾಲಯಗಳ ನೌಕರರಿಗೆ ಲೋಕಸಭೆ/ರಾಜ್ಯಸಭೆ ಸಚಿವಾಲಯ ಮಾದರಿಯಲ್ಲಿ ಪ್ರತ್ಯೇಕ ವೇತನ ಶ್ರೇಣಿ ಮತ್ತು ಭತ್ಯೆಗಳನ್ನು ಮಂಜೂರು ಮಾಡಲು ಶಿಫಾರಸು ಮಾಡುವುದು.

15. ವಿಶೇಷ ಭತ್ಯೆಗಳು ಹೇಗಿರಬೇಕು?
– ಅತ್ಯಂತ ವಿಶೇಷ-ಕ್ಲಿಷ್ಟಕರ, ಅನಾರೋಗ್ಯಕರ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಪ್ರಸ್ತುತ ನೀಡುತ್ತಿರುವ ವಿಶೇಷ ಭತ್ಯೆಯನ್ನು ದ್ವಿಗುಣಗೊಳಿಸುವುದು.

16. ತುಟ್ಟಿಭತ್ಯೆ ವಿಷಯದಲ್ಲಿ ಅಭಿಮತ
– ಪ್ರತಿ ಆರು ತಿಂಗಳಿಗೆ ನೀಡಲಾಗುವ ತುಟ್ಟಿಭತ್ಯೆಯನ್ನು ಪರಿಷ್ಕೃತ ವೇತನದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ರಾಜ್ಯ ಸರ್ಕಾರಿ ನೌಕರರಿಗೆ ವಿಳಂಬವಿಲ್ಲದೆ ನೀಡುವುದು.

17. ಮನೆ ಬಾಡಿಗೆ ಭತ್ಯೆ
– ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯಲ್ಲಿ ಲಭ್ಯವಿರುವ 2021ರ ಜನಸಂಖ್ಯೆಯ ಮಾಹಿತಿಯನ್ನಾಧರಿಸಿ ನಗರ ಹಾಗೂ ಪಟ್ಟಣ ಪ್ರದೇಶಗಳನ್ನು ಪುನರ್‌ವರ್ಗೀಕರಿಸುವುದು ಹಾಗೂ ಬಿಬಿಎಂಪಿ ವ್ಯಾಪ್ತಿಯನ್ನು ಬೆಂಗಳೂರು ನಗರ ಜಿಲ್ಲೆ ಗಡಿ ವ್ಯಾಪ್ತಿಗೆ ವಿಸ್ತರಿಸುವುದು. ಪ್ರಸ್ತುತ ಜೀವನ ನಿರ್ವಹಣೆ ಆಧಾರದ ಮೇಲೆ ಈ ಕೆಳಕಂಡ ದರದಲ್ಲಿ ಮನೆ ಬಾಡಿಗೆ ಭತ್ಯೆ ನೀಡುವುದು.

೧. ‘ಎ’ ವರ್ಗಕ್ಕೆ -ಶೇ 24 ರಿಂದ ಶೇ.30%
2. ‘ಬಿ’ ವರ್ಗಕ್ಕೆ ಶೇ 16 ರಿಂದ ಶೇ.20
3. ‘ಸಿ’ ವರ್ಗಕ್ಕೆ ಶೇ.8% ರಿಂದ ಶೇ 15%

-ಕೇಂದ್ರ ಮಾದರಿಯಲ್ಲಿ ತುಟ್ಟಿಭತ್ಯೆಯು ಶೇ.25 ಮತ್ತು ಶೇ.50ರ ಹಂತವನ್ನು ತಲುಪಿದಾಗ ಮನೆ ಬಾಡಿಗೆ ಭತ್ಯೆಗಳನ್ನು ಸ್ವಯಂಚಾಲಿತವಾಗಿ ಶೇ. 3ರಷ್ಟು ಹೆಚ್ಚಿಸುವುದು.

18. ರಜಾ ಪ್ರಯಾಣ ರಿಯಾಯಿತಿ (LTC) ಹೇಗಿರಬೇಕು?
ನಮ್ಮ ರಾಜ್ಯದಲ್ಲಿ ಸೇವಾವಧಿಯಲ್ಲಿ 2 ಬಾರಿ ಇದ್ದು, ಕೇಂದ್ರ ಸರ್ಕಾರದಲ್ಲಿ (LTC) ಸೌಲಭ್ಯವು ಪ್ರತಿ 4 ವರ್ಷಕ್ಕೊಮ್ಮೆ ನೀಡುತ್ತಿದ್ದು, ಆದರಂತೆ ನೀಡುವುದು. ಹಾಗೂ ದಿನಭತ್ಯೆಯನ್ನು ಸಹ ನೀಡುವುದು.

19. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)
– ಈ ಯೋಜನೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯೋನ್ಮುಖವಾಗಿದೆ.
– ಸರ್ಕಾರಿ ನೌಕರರು ವಂತಿಗೆ ನೀಡುವುದರಿಂದ ಅವಲಂಬಿತರ ಆದಾಯದ ಮಿತಿಯನ್ನು ತೆಗೆದುಹಾಕುವುದು.
– ವಿವಾಹಿತ ಮಹಿಳಾ ಸರ್ಕಾರಿ ನೌಕರರ ತಂದೆ-ತಾಯಿಯವರನ್ನು ಈ ಯೋಜನೆಯ ವ್ಯಾಪ್ತಿಗೆ ತರುವುದು.
– ಎಲ್ಲಾ ವೈದ್ಯಕೀಯ ಸೇವೆಗಳು ವಿಳಂಬವಿಲ್ಲದೇ ಸರಳವಾಗಿ ಹಾಗೂ ತ್ವರಿತಗತಿಯಲ್ಲಿ ಲಭ್ಯವಾಗಬೇಕು.

20. ಮಹಿಳಾ ಉದ್ಯೋಗಿಗಳ ವಿಶೇಷ ಸಮಸ್ಯೆಗಳ ಕುರಿತು
ಈಗಿರುವ ಸೌಲಭ್ಯಗಳ ಜೊತೆಗೆ ಕೆಳಗಿನ ಸೌಲಭ್ಯಗಳನ್ನು ಒದಗಿಸುವುದು.
-ಮಕ್ಕಳಿಗೆ ದಿನಕ್ಕೆ 2 ಬಾರಿ ಸ್ತನ್ಯಪಾನಕ್ಕಾಗಿ ಅವಕಾಶ ನೀಡುವುದು.
– ನಿಗದಿತ ವೇಳೆಯ ನಂತರ ಕೆಲಸ ಮಾಡಿದ ಸಂದರ್ಭದಲ್ಲಿ ಸುರಕ್ಷಿತವಾಗಿ ಮನೆಗೆ ಬಿಡುವುದು.
– ತಮ್ಮ ಕಾರ್ಯವ್ಯಾಪ್ತಿಯಲ್ಲಿ ಶುಚಿತ್ವವಾದ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸುವುದು.
– ಬಾಡಿಗೆ ತಾಯ್ತನದ ಮಹಿಳಾ ನೌಕರರಿಗೆ ಶಿಶುಪಾಲನಾ, ಹೆರಿಗೆ ರಜೆ ಮಂಜೂರು ಮಾಡುವುದು.
– ಹಾಲಿ ಇರುವ ಶಿಶುಪಾಲನಾ ರಜೆಯ ಮಂಜೂರಾತಿಯನ್ನು ಕನಿಷ್ಠ 15 ದಿನಗಳ ಬದಲಾಗಿ 7 ದಿನಗಳಿಗೆ ನಿಗದಿಪಡಿಸುವುದು.

21. ಇತರೆ ಭತ್ಯೆಗಳು
– ಬೆಟ್ಟಗುಡ್ಡಗಳಿರುವ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ನೌಕರರಿಗೆ ಗಿರಿಭತ್ಯೆಯನ್ನು ಮಂಜೂರು ಮಾಡುವುದು.
– ಪ್ರಸ್ತುತ ನೀಡುತ್ತಿರುವ ವಾಹನ ಭತ್ಯೆ, ಸಮವಸ್ತ್ರ ಭತ್ಯೆ, ಅನ್ಯಸೇವೆ ಭತ್ಯೆ, ವಿಶೇಷಭತ್ಯೆಗಳನ್ನು ದ್ವಿಗುಣಗೊಳಿಸುವುದು.
– ನಿಗದಿತ ಪ್ರಯಾಣ ಭತ್ಯೆ, ಅನ್ಯಸೇವೆ ಭತ್ಯೆ ಹಾಗೂ ಪ್ರಭಾರ ಭತ್ಯೆ ದರವನ್ನು ಹೆಚ್ಚಿಸುವುದು.

22. ವರ್ಗಾವಣೆ ಅನುದಾನ-ಸಾಮಾನು ಸಾಗಣೆ ವೆಚ್ಚ
– ಕೇಂದ್ರ ಮಾದರಿಯಂತೆ ವರ್ಗಾವಣೆಗೊಂಡ/ವಯೋನಿವೃತ್ತಿ ಹೊಂದುವ ರಾಜ್ಯ ಸರ್ಕಾರಿ ನೌಕರರಿಗೆ ಕೊನೆ ಮಾಹೆಯ ಮೂಲವೇತನದ ಶೇ. 8೦ರಷ್ಟು ವರ್ಗಾವಣೆ ಅನುದಾನ ಮತ್ತು ಸಾಮಾನು ಸರಂಜಾಮು ಸಾಗಣೆ ಭತ್ಯೆಯನ್ನು ನೀಡುವಂತೆ ಶಿಫಾರಸ್ಸು ಮಾಡುವುದು.

23. ಪ್ರಯಾಣ ಭತ್ಯೆ ಹಾಗೂ ದಿನಭತ್ಯೆ
ಹಾಗೂ ಊಟ-ಉಪಹಾರಗಳು, ಇಂಧನ ಬೆಲೆ, ಪ್ರಯಾಣ ಸಾರಿಗೆ ವೆಚ್ಚ, ವಸತಿ ದುಬಾರಿಯಾಗಿರುವುದರಿಂದ ಪ್ರಯಾಣ ಭತ್ಯೆ, ದಿನಭತ್ಯೆ ವಿಮಾನ,ರೈಲು ಮತ್ತು ಬಸ್ಸಿನ ದರಗಳನ್ನು ಹೆಚ್ಚಿಸುವುದು.

24. (ಎ)ರಜೆ ಸೌಲಭ್ಯಗಳು ಮತ್ತು ಗಳಿಕೆ ರಜೆ ಅಧ್ಯರ್ಪಣೆ ನಗದೀಕರಣ ಮತ್ತು ನಿವೃತ್ತಿ-ಗಳಿಕೆ ರಜಾ ನಗದೀಕರಣ
– ರಜೆ ಸೌಲಭ್ಯವನ್ನು ಪಡೆಯುವ ಉದ್ದೇಶಕ್ಕಾಗಿ ಮಾತ್ರ ಗಳಿಕೆ ರಜೆಯ ಮಿತಿಯನ್ನು ತೆಗೆದು ಹಾಕುವುದು.
– ನಿವೃತ್ತಿ ನಂತರ 300 ಗಳಿಕೆ ರಜಾ ದಿನಗಳ ನಗದೀಕರಣ ಸೌಲಭ್ಯದ ಗರಿಷ್ಠ ಮಿತಿಯನ್ನು 330ಕ್ಕೆ ಹೆಚ್ಚಿಸುವುದು.
ಬಿ. ಬೈಸಿಕಲ್, ಮೋಟಾರು ವಾಹನ, ಗೃಹ ನಿರ್ಮಾಣ, ಗೃಹ ರಿಪೇರಿ ಮುಂಗಡ
– ರೂ. 25,000-00 ಗಳ ಬಡ್ಡಿರಹಿತ ಹಬ್ಬದ ಮುಂಗಡವನ್ನು ಯಾವುದೇ ಷರತ್ತುಗಳನ್ನು ವಿಧಿಸದೆ ಎಲ್ಲಾ ನೌಕರರಿಗೂ ಮಂಜೂರು ಮಾಡುವುದು.
– ಎಲ್ಲಾ ಮುಂಗಡಗಳ ಮೇಲಿನ ಬಡ್ಡಿಯನ್ನು ಕಡಿಮೆ ಮಾಡುವುದು.
– ಮುಂಗಡದ ಮೊತ್ತವನ್ನು ಮಾರುಕಟ್ಟೆಗಳಿಗೆ ಅನುಗುಣವಾಗಿ ಹೆಚ್ಚಿಸುವುದು.
– ಕನಿಷ್ಠ ವೇತನದ ಮಿತಿಯನ್ನು (Home take Salary) ಶೇ. 60% ರಿಂದ ಶೇ. 40%ಕ್ಕೆ ನಿಗದಿಗೊಳಿಸುವುದು.

(ಸಿ)ಅಂಧ ಮತ್ತು ಅಂಗವಿಕಲ ನೌಕರರಿಗೆ ಈಗ ನೀಡಲಾಗುತ್ತಿರುವ ಮಾಹೆಯಾನ ಮೂಲ ವೇತನದ ಶೇಕಡ 6 ರಂತೆ ವಾಹನ ಭತ್ಯೆ.
– ಅಂಧ ಮತ್ತು ಅಂಗವಿಕಲ ನೌಕರರ ವಾಹನ ಭತ್ಯೆಯನ್ನು ಮೂಲ ವೇತನದ ಶೇ. ೬ರಿಂದ ಶೇ. 10ಕ್ಕೆ ಹೆಚ್ಚಳ ಮಾಡಲು ಶಿಫಾರಸ್ಸು ಮಾಡುವುದು.

25. ಸಾಮೂಹಿಕ ವಿಮಾ ಯೋಜನೆ
– ಒಂದು ಯುನಿಟ್ ದರ ರೂ. 120/-ರಿಂದ 1200/ ಕ್ಕೆ ಹೆಚ್ಚಿಸುವ ಮೂಲಕ ವಿಮಾ ಮೊತ್ತವನ್ನು ಹೆಚ್ಚಿಸುವುದು.
– ಉಳಿತಾಯ ನಿಧಿ ಮತ್ತು ವಿಮಾ ನಿಧಿ ಸದ್ಯದ 70:30ರ ಅನುಪಾತವನ್ನು 75:25 ಮಾರ್ಪಡಿಸುವುದು.
– ಉಳಿತಾಯ ನಿಧಿ ಮೇಲಿನ ಬಡ್ಡಿ ದರವನ್ನು ಶೇ.2ರಷ್ಟು ಹೆಚ್ಚಿಸುವುದು.

26. ಸ್ವಇಚ್ಛಾ ನಿವೃತ್ತಿ
– ಸ್ವಇಚ್ಛಾ ನಿವೃತ್ತಿಗೆ 15 ವರ್ಷ ಕನಿಷ್ಠ ಸೇವೆ ಅಥವಾ 50 ವರ್ಷ ವಯಸ್ಸು ಎನ್ನುವ ಬದಲಾಗಿ 12 ವರ್ಷಗಳ ಸೇವಾವಧಿ ಅಥವಾ 45 ವರ್ಷಗಳ ವಯಸ್ಸಾಗಿರಬೇಕೆಂದು ತಿದ್ದುಪಡಿ ಮಾಡುವುದು.

27. ಪಿಂಚಣಿ ಪ್ರಯೋಜನಗಳು
– ನಿವೃತ್ತಿ ಪಿಂಚಣಿಗಾಗಿ ಕನಿಷ್ಠ ಸೇವೆ-30 ರಿಂದ 25ಕ್ಕೆ ಇಳಿಸುವುದು.
– ಕುಟುಂಬ/ವಿಶ್ರಾಂತಿ ಪಿಂಚಣಿ ಕನಿಷ್ಠ ೧೬,೫೦೦ರಿಂದ ಗರಿಷ್ಠ ರೂ.1,50,000ಕ್ಕೆ ಹೆಚ್ಚಿಸುವುದು.
-ಮರಣ-ನಿವೃತ್ತಿ ಉಪದಾನ-ಗರಿಷ್ಠ ಮಿತಿಯನ್ನು 20 ಲಕ್ಷಗಳಿಂದ 25 ಲಕ್ಷಗಳಿಗೆ ಹೆಚ್ಚಿಸುವುದು.
– ಪರಿವರ್ತಿತ ಹಣವನ್ನು 15 ವರ್ಷಗಳ ಕಾಲ ಪ್ರತಿ ತಿಂಗಳ ಪಿಂಚಣಿಯಲ್ಲಿ ಕಟಾಯಿಸುವ ಪದ್ಧತಿಯನ್ನು ಕೈಬಿಟ್ಟು 12 ವರ್ಷಗಳ ಕಾಲ ಮಾತ್ರ ಪಿಂಚಣಿಯಲ್ಲಿ ಕಟಾಯಿಸುವುದು.

28. ಪಿಂಚಣಿ ಪಾವತಿ ನಿಯಮ ಸರಳೀಕರಣ
-ಎಲೆಕ್ಟ್ರಾನಿಕ್ ಸರ್ವೀಸ್ ರಿಜಿಸ್ಟರ್ ವ್ಯವಸ್ಥೆಯನ್ನು ಶೀಘ್ರ ಜಾರಿಗೊಳಿಸಿ ನಿವೃತ್ತಿ ಹೊಂದುವ ನೌಕರರಿಗೆ ಪಿಂಚಣಿ ಸವಲತ್ತುಗಳನ್ನು ಹೆಚ್.ಆರ್.ಎಂ.ಎಸ್. ತಂತ್ರಾಂಶದ ಮೂಲಕವೇ ಪಡೆಯುವ ಅವಕಾಶ ಕಲ್ಪಿಸುವುದು.

29. ನಿವೃತ್ತ ಪಿಂಚಣಿದಾರರಿಗೆ ತುಟ್ಟಿಭತ್ಯೆ
-ಸೇವಾನಿರತ ನೌಕರರಿಗೆ ನೀಡುವ ವಾರ್ಷಿಕ ವೇತನ ಬಡ್ತಿ ದರದಲ್ಲಿಯೇ ನಿವೃತ್ತ ನೌಕರರಿಗೂ ಸಹ ಸಮನಾಂತರ ತುಟ್ಟಿಭತ್ಯೆಯನ್ನು ನೀಡಲು ಶಿಫಾರಸು ಮಾಡುವುದು.

30. 80 ವರ್ಷ ಮೇಲ್ಪಟ್ಟವರಿಗೆ ಹೆಚ್ಚುವರಿ ನಿವೃತ್ತಿ ವೇತನ
– 80 ವರ್ಷ ಮೇಲ್ಪಟ್ಟವರಿಗೆ ಪಿಂಚಣಿದಾರರಿಗೆ ವಯೋಮಾನವನ್ನಾಧರಿಸಿ ಹೆಚ್ಚುವರಿ ಪಿಂಚಣಿಯನ್ನು ಮಂಜೂರು ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡುವುದು.

31. ಕುಟುಂಬ ಪಿಂಚಣಿ
– ಹಾಲಿ ಇರುವ ಶೇ. 30 ಕುಟುಂಬ ಪಿಂಚಣಿಯ ಪ್ರಮಾಣವನ್ನು ಮೂಲ ವೇತನದ ಶೇ. 40ಕ್ಕೆ ಹೆಚ್ಚಳ ಮಾಡುವುದು.

32. ರಾಷ್ಟ್ರೀಯ ಪಿಂಚಣಿ ಯೋಜನೆ
– ರಾಷ್ಟ್ರದ ಕೆಲವು ರಾಜ್ಯಗಳು ಈಗಾಗಲೇ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿರುವ ಮಾದರಿಯಂತೆ ರಾಜ್ಯದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಗೊಳಿಸಿ ದಿನಾಂಕ:01-4-2006 ರಿಂದ ಅನ್ವಯವಾಗುವಂತೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಶಿಫಾರಸು ಮಾಡುವುದು.
-ಸೇವೆಯಲ್ಲಿರುವ ಎನ್.ಪಿ.ಎಸ್. ಯೋಜನೆಗೆ ಒಳಪಡುವ ನೌಕರನಿಂದ ಇದುವರೆವಿಗೂ ಕಟಾವಣೆಗೊಂಡಿರುವ ಯೋಜನೆಯ ಒಟ್ಟು ಮೊತ್ತವನ್ನು ನೌಕರನಿಗೆ ಹಿಂದಿರುಗಿಸುವುದು ಅಥವಾ ಸಾಮಾನ್ಯ ಭವಿಷ್ಯನಿಧಿ ಖಾತೆ (ಜಿ.ಪಿ.ಎಫ್) ತೆರೆದು ವರ್ಗಾಯಿಸುವುದು.
-ವಯೋನಿವೃತ್ತಿ/ಮೃತಪಟ್ಟಿರುವ ನೌಕರನ ಸೇವಾವಧಿಯಲ್ಲಿ ಕಟಾವಣೆಗೊಂಡ ಎನ್.ಪಿ.ಎಸ್. ಮೊತ್ತವನ್ನು ಅವಲಂಬಿತ ಕುಟುಂಬ ಸದಸ್ಯರಿಗೆ ಮರುಪಾವತಿಸುವುದು.

– ಈಗಾಗಲೇ ಎನ್.ಪಿ.ಎಸ್. ಯೋಜನೆಗೆ ಒಳಪಟ್ಟು ವಯೋನಿವೃತ್ತಿ/ಮೃತಪಟ್ಟಿರುವ ನೌಕರರಿಗೆ ಹಾಗೂ ಸೌಲಭ್ಯಗಳನ್ನು ಹಳೆ ಪಿಂಚಣಿದಾರರ ಮಾದರಿಯಲ್ಲಿ ನಿವೃತ್ತಿ ವೇತನ ಜಾರಿಗೊಳಿಸುವುದು.

33. ಪ್ರಶ್ನಾವಳಿಯಲ್ಲಿ ಒಳಗೊಂಡಿರದ ವಿಷಯಗಳು
– 2,50,363 ಖಾಲಿ ಹುದ್ದೆಗಳ ಭರ್ತಿ ಮಾಡಿ ನೌಕರರನ್ನು ಒತ್ತಡದಿಂದ ಮುಕ್ತಿಗೊಳಿಸಿ ಸಮುದಾಯಕ್ಕೆ ಗುಣಮಟ್ಟದ ನಾಗರಿಕ ಸೇವೆಗಳನ್ನು ನೀಡಲು ಶಿಫಾರಸು ಮಾಡುವುದು.
– ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದಲ್ಲಿ ಪ್ರೋತ್ಸಾಹ ಧನವನ್ನು ನೀಡುವುದು.
-ಶವಸಂಸ್ಕಾರ ಭತ್ತೆಯನ್ನು ರೂ.15000-00 ಗಳನ್ನು 30,000 ರೂ.ಗೆ ಹೆಚ್ಚಿಸುವುದು.
-ಕೇಂದ್ರ ಮಾದರಿಯಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಭತ್ಯೆ ಯೋಜನೆ ಜಾರಿಗೆ ತರುವುದು.

ಇದನ್ನೂ ಓದಿ : CLT Exam | ಸರ್ಕಾರಿ ನೌಕರರ ಕಂಪ್ಯೂಟರ್‌ ಟೆಸ್ಟ್‌; ಗಡುವು ಮಾ.31ರ ವರೆಗೆ ವಿಸ್ತರಣೆ

ವಿಸ್ತಾರ ನ್ಯೂಸ್​ನ ಇನ್ನಷ್ಟು ಸುದ್ದಿಗಳಿಗೆ https://www.facebook.com/vistaranewsspecial ಫೇಸ್​ಬುಕ್​ ಪೇಜ್​ ಫಾಲೊ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Tumkur: ತುಮಕೂರಿನಲ್ಲಿ ಕಾರು ಪಲ್ಟಿ; ಮದುವೆಗೆ ಹೋಗಿದ್ದ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು

Tumkur: ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕಣಿವೆನಹಳ್ಳಿ ಗೇಟ್‌ ಬಳಿ ಕಾರು ಪಲ್ಟಿಯಾಗಿದೆ. ನಾಲ್ವರೂ ತುಮಕೂರಿನಲ್ಲಿ ಮದುವೆ ಆರತಕ್ಷತೆ ಮುಗಿಸಿಕೊಂಡು ಪಾವಗಡಕ್ಕೆ ತೆರಳುತ್ತಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಗುಚಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

VISTARANEWS.COM


on

Tumkur Accident
Koo

ತುಮಕೂರು: ಜಿಲ್ಲೆಯ (Tumkur) ಪಾವಗಡ ತಾಲೂಕಿನಲ್ಲಿ ಕಾರೊಂದು (Pavagada Accident) ಪಲ್ಟಿಯಾಗಿದ್ದು, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವ ಕಾರಣ ಅವರನ್ನು ಬೆಂಗಳೂರಿನ (Bengaluru) ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕಣಿವೆನಹಳ್ಳಿ ಗೇಟ್‌ ಬಳಿ ಕಾರು ಪಲ್ಟಿಯಾಗಿದೆ. ನಾಲ್ವರೂ ತುಮಕೂರಿನಲ್ಲಿ ಮದುವೆ ಆರತಕ್ಷತೆ ಮುಗಿಸಿಕೊಂಡು ಪಾವಗಡಕ್ಕೆ ತೆರಳುತ್ತಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಗುಚಿದೆ. ಕಾರು ಪಲ್ಟಿಯಾದ ತೀವ್ರತೆಗೆ ಒ. ಧನಂಜಯ ಹಾಗೂ ಶ್ರೀಕೃಷ್ಣ ಅವರು ಮೃತಪಟ್ಟಿದ್ದಾರೆ. ಶಿಕ್ಷಕರಾದ ನರಸಿಂಹ ಹಾಗೂ ವೆಂಕಟಾಚಲಪತಿ ಎಂಬುವರು ಗಾಯಗೊಂಡಿದ್ದಾರೆ.

ಒ. ಧನಂಜಯ ಅವರು ಪಾವಗಡ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲರಾಗಿದ್ದರು. ಇನ್ನು ಶ್ರೀಕೃಷ್ಣ ಅವರು ಪಾವಗಡ ತಾಲೂಕಿನ ಗೌಡೇಟಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿದ್ದರು. ಪಲ್ಟಿಯಾದ ತೀವ್ರತೆಗೆ ಕಾರು ಕೂಡ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪಾವಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶನಿವಾರವಷ್ಟೇ (ಮೇ 11) ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮಹಿಳೆಯರು ಮೃತರಾಗಿದ್ದರು. ಬಳ್ಳಿಗೇರಿ ಗ್ರಾಮದ ನಿವಾಸಿಗಳಾದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತರು. ಬಳ್ಳಿಗೇರಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನದ ಎಡಬದಿಯ ಟೈರ್ ಸ್ಫೋಟಗೊಂಡಿದೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

Continue Reading

ಬೆಂಗಳೂರು ಗ್ರಾಮಾಂತರ

Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Engineering Student : ಮನೆಯಿಂದ ಹೊರ ಹೋದ ವಿದ್ಯಾರ್ಥಿ ನಾಪತ್ತೆಯಾಗಿದ್ದ. ಇತ್ತ ಮಗನಿಗಾಗಿ ಹುಡುಕಾಟ ನಡೆಸಿ ಪೋಷಕರು ಸುಸ್ತಾಗಿದ್ದರು. ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಹೆದರಿದ ಇಂಜಿನಿಯರಿಂಗ್‌ ವಿದ್ಯಾರ್ಥಿ ಜಿಗಣಿ ಕೆರೆಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದ. ಇದೀಗ ಮೂರು ದಿನದ ನಂತರ ಮೃತದೇಹ ಪತ್ತೆಯಾಗಿದೆ.

VISTARANEWS.COM


on

By

Engineering Student
ಅಮೃತೇಶ್‌ ಮೃತದೇಹವನ್ನು ಕೆರೆಯಿಂದ ಹೊರತೆಗೆಯುತ್ತಿರುವುದು
Koo

ಆನೇಕಲ್: ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ (Engineering Student) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಫೇಲ್ ಆದ (Exam Fail) ವಿಚಾರ ಪೋಷಕರಿಗೆ ತಿಳಿಯುತ್ತೆಂದು ಹೆದರಿದ ವಿದ್ಯಾರ್ಥಿ ಜಿಗಣಿ ಕೆರೆಗೆ (Jigani lake) ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಘಟನೆ (Bengaluru rural) ನಡೆದಿದೆ. ಅಮೃತೇಶ್ ಪಾಂಡೆ (21) ಆತ್ಮಹತ್ಯೆ ಮಾಡಿಕೊಂಡವನು.

ಹೇಮಲತಾ ಪಾಂಡೆ, ವಿಜಯ್ ಶಂಕರ್ ಪಾಂಡೆ ದಂಪತಿ ಪುತ್ರ ಅಮೃತೇಶ್‌ ಪಾಂಡೆ ಮೂಲತಃ ಬಿಹಾರ ಮೂಲದ ಕುಟುಂಬದವರು. ಕಳೆದ ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಜಿಗಣಿಗೆ ಬಂದು ನೆಲೆಸಿದ್ದರು. ಮಗನಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಬೇಕೆಂದು ಕನಸು ಕಂಡಿದ್ದ ಪೋಷಕರು, ಅದರಂತೆಯೇ ಮೈಸೂರು ರಸ್ತೆಯ ಆರ್.ವಿ ಕಾಲೇಜಿಗೆ ಮಗನನ್ನು ಸೇರಿಸಿದ್ದರು.

ಆರ್.ವಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಮೃತೇಶ್, ಹಾಸ್ಟೆಲ್‌ನಲ್ಲಿ ಇದ್ದುಕೊಂಡು ಕಾಲೇಜಿಗೆ ಹೋಗಿ ಬರುತ್ತಿದ್ದ. ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಮೃತೇಶ್, ಎರಡು ವಿಷಯದಲ್ಲಿ ಫೇಲ್ ಆಗಿದ್ದ. ಸರಿಯಾಗಿ ಕಾಲೇಜಿಗೂ ಹೋಗುತ್ತಿರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: SSLC Student Missing : ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಬಾಲಕ ನಾಪತ್ತೆ!

ಲೋಕಸಭೆ ಚುನಾವಣಾಗೆ ಮತ ಹಾಕಲು ಜಿಗಣಿಗೆ ಬಂದಿದ್ದ ಅಮೃತೇಶ್, ಫೇಲ್ ಆಗಿರುವ ವಿಚಾರ ತಂದೆಗೆ ತಿಳಿಯುತ್ತೆ ಎಂದು ಹೆದರಿಬಿಟ್ಟಿದ್ದ. ಕಾಲೇಜಿನವರು ಫೋನ್ ಮಾಡುತ್ತಾರೆ ಎಂದು ತಂದೆ ಫೋನ್‌ನಲ್ಲಿ ನಂಬರ್‌ಗಳನ್ನು ಬ್ಲಾಕ್ ಮಾಡಿದ್ದ. ಆದರೆ ಇತ್ತ ಅಮೃತೇಶ್‌ ತಂದೆ ವಿಜಯ್‌ ಶಂಕರ್‌ ಆರನೇ ಸೆಮಿಸ್ಟರ್‌ಗೆ ಆಡ್ಮಿಷನ್ ಮಾಡಿ ಕಾಲೇಜಿಗೆ ಬಿಟ್ಟು ಬರುತ್ತೇನೆ ಎಂದು ಹೇಳಿದ್ದಾರೆ. ತಂದೆಯ ಜತೆ ಕಾಲೇಜಿಗೆ ಹೋದರೆ ಫೇಲ್ ಆದ ವಿಚಾರ ತಿಳಿಯುತ್ತೆ. ಸರಿಯಾಗಿ ಕಾಲೇಜಿಗೂ ಹೋಗದೇ ಇರುವುದು ತಿಳಿದು ಬಿಡುತ್ತೆ ಎಂದು ಅಮೃತೇಶ್ ಭಯಗೊಂಡಿದ್ದ.

ಹೀಗಾಗಿ ಮೇ 10ರಂದು ಮನೆಯಿಂದ ಹೊರಟ ಅಮೃತೇಶ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇತ್ತ ಆತನಿಗಾಗಿ ಅಮೃತೇಶ್‌ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಆದರೆ ನಿನ್ನೆ ಜಿಗಣಿ ಕೆರೆಯಲ್ಲಿ ಅಮೃತೇಶ್‌ ಮೃತದೇಹವು ತೇಲಿಕೊಂಡು ಬಂದಿದೆ. ಇದನ್ನು ಕಂಡ ಸ್ಥಳೀಯರು ಕೂಡಲೇ ಜಿಗಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಮೃತದೇಹವು ಅಮೃತೇಶ್‌ದ್ದು ಎಂದು ತಿಳಿದು ಬಂದಿದೆ. ಸದ್ಯ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

HD Revanna: 3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

HD Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾನುವಾರ (ಮೇ 12) ಬೆಳಗ್ಗೆ ವೆಜ್‌ ಪಲಾವ್‌ ಸೇವಿಸಿದ ರೇವಣ್ಣ, ಕಾಫಿ ಕುಡಿದು, ಪೇಪರ್‌ ಓದಿದ್ದಾರೆ. ಕುಟುಂಬಸ್ಥರು, ಆಪ್ತರನ್ನು ಭೇಟಿಯಾಗದ ಕಾರಣ ಪತ್ರಿಕೆಯೇ ಅವರಿಗೆ ಸಂಗಾತಿಯಾದಂತಾಗಿದೆ. ಸೋಮವಾರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಎಚ್‌.ಡಿ.ರೇವಣ್ಣ ಅವರು ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ.

VISTARANEWS.COM


on

HD Revanna
Koo

ಬೆಂಗಳೂರು: ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ (HD Revanna) ಅವರು ಕಳೆದ ಮೂರು ದಿನಗಳಿಂದಲೂ ಕುಟುಂಬಸ್ಥರನ್ನು ಭೇಟಿಯಾಗದೆ ಪರದಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾನುವಾರ (ಮೇ 12) ಬೆಳಗ್ಗೆ ವೆಜ್‌ ಪಲಾವ್‌ ಸೇವಿಸಿದ ರೇವಣ್ಣ, ಕಾಫಿ ಕುಡಿದು, ಪೇಪರ್‌ ಓದಿದ್ದಾರೆ. ಕುಟುಂಬಸ್ಥರು, ಆಪ್ತರನ್ನು ಭೇಟಿಯಾಗದ ಕಾರಣ ಪತ್ರಿಕೆಯೇ ಅವರಿಗೆ ಸಂಗಾತಿಯಾದಂತಾಗಿದೆ. ಇದರ ಮಧ್ಯೆಯೇ, ರೇವಣ್ಣ ಅವರಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಎಚ್‌.ಡಿ.ರೇವಣ್ಣ ಅವರು ಯಾರನ್ನೂ ಭೇಟಿಯಾಗಲು ಸಾಧ್ಯವಾಗಿಲ್ಲ. ಇದರಿಂದಾಗಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಜೈಲಿನ ಬ್ಯಾರಕ್‌ನಲ್ಲಿ ಕೆಲ ಹೊತ್ತು ವಾಕ್‌ ಮಾಡಿದ ರೇವಣ್ಣ, ಬಳಿಕ ದೀರ್ಘ ಅವಧಿಗೆ ಪೇಪರ್‌ ಓದುತ್ತಲೇ ಕುಳಿತಿದ್ದರು ಎಂದು ಜೈಲಿನ ಮೂಲಗಳು ಮಾಹಿತಿ ನೀಡಿವೆ. ರೇವಣ್ಣ ಅವರು ಸೋಮವಾರ (ಮೇ 13) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅವರು ಪರಪ್ಪನ ಅಗ್ರಹಾರದಲ್ಲೇ ಇದ್ದಾರೆ.

ಲೈಂಗಿಕ ದೌರ್ಜನಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಇದಾದ ಬಳಿಕ ಅವರು ಸಲ್ಲಿಸಿದ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌, ಜಾಮೀನು ನೀಡದೆ ಮೇ 13ಕ್ಕೆ ವಿಚಾರಣೆ ಮುಂದೂಡಿತ್ತು. ಹಾಗಾಗಿ, ಸೋಮವಾರ ಮತ್ತೆ ವಿಚಾರಣೆ ನಡೆಯಲಿದ್ದು, ರೇವಣ್ಣ ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ.

ಭವಾನಿ ರೇವಣ್ಣಗೆ 2ನೇ ನೋಟಿಸ್‌

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಎರಡನೇ ನೋಟಿಸ್‌ ಜಾರಿ ಮಾಡಿದೆ. ಮೊದಲ ನೋಟಿಸ್ ಉತ್ತರಿಸದ ಹಿನ್ನೆಲೆಯಲ್ಲಿ ಎರಡನೇ ನೋಟಿಸ್ ಜಾರಿ ಮಾಡಲಾಗಿದೆ. ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿ ಕೇಸ್‌ನಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಈ ಸಂಬಂಧ ಹಲವಾರು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ಸಿದ್ಧವಾಗಿದೆ. ಆದರೆ, ಭವಾನಿ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಭವಾನಿ ವಿಚಾರಣೆಗೆ ಹಾಜರಾಗದಿದ್ದರೆ ಎಸ್‌ಐಟಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ!

Continue Reading

ಮಳೆ

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Karnataka Weather : ರಾಜ್ಯಾದ್ಯಂತ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯು (Rain News) ಅಬ್ಬರಿಸಲಿದೆ. ಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.

ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Tumkur Accident
ಕರ್ನಾಟಕ4 mins ago

Tumkur: ತುಮಕೂರಿನಲ್ಲಿ ಕಾರು ಪಲ್ಟಿ; ಮದುವೆಗೆ ಹೋಗಿದ್ದ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು

Engineering Student
ಬೆಂಗಳೂರು ಗ್ರಾಮಾಂತರ6 mins ago

Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Abdu Rozik Bigg Boss 16 gets engaged
ಸಿನಿಮಾ19 mins ago

Abdu Rozik: ಎಂಗೇಜ್‌ ಆದ ಬಿಗ್‌ ಬಾಸ್‌ ಖ್ಯಾತಿಯ ಅಬ್ದು ರೋಜಿಕ್!

Viral News
ವೈರಲ್ ನ್ಯೂಸ್47 mins ago

Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

Yogi Adityanath
ದೇಶ1 hour ago

ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

Dolly Dhananjay Koti Movie Kannada First song will out
ಸ್ಯಾಂಡಲ್ ವುಡ್1 hour ago

Dolly Dhananjay:  ಡಾಲಿ ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ನಾಳೆ ಬಿಡುಗಡೆ

esim cyber safety column
ಅಂಕಣ1 hour ago

ಸೈಬರ್‌ ಸೇಫ್ಟಿ ಅಂಕಣ: ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ?

Nijjar Killing Case
ವಿದೇಶ2 hours ago

Nijjar Killing Case: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ; ನಾಲ್ಕನೇ ಆರೋಪಿ ಅರೆಸ್ಟ್‌

HD Revanna
ಪ್ರಮುಖ ಸುದ್ದಿ2 hours ago

HD Revanna: 3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

Maggi Tragedy
ದೇಶ2 hours ago

Maggi Tragedy: ಮ್ಯಾಗಿ ತಿಂದ ಬಳಿಕ 10 ವರ್ಷದ ಬಾಲಕ ಸಾವು, ಒಂದೇ ಕುಟುಂಬದ ಐವರು ಅಸ್ವಸ್ಥ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು19 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ3 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌