Accident news: ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ಮೊಬೈಲ್‌ ಕಳ್ಳ‌ ಸಾವು - Vistara News

Latest

Accident news: ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ಮೊಬೈಲ್‌ ಕಳ್ಳ‌ ಸಾವು

ಮೊಬೈಲ್‌ ಕಳ್ಳನೊಬ್ಬ ಮೊಬೈಲ್‌ ಕದ್ದು ಪರಾರಿಯಾಗುತ್ತಿದ್ದಾಗ ಬೈಕ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಆತನ ಸಾವು ಸಂಭವಿಸಿದೆ.

VISTARANEWS.COM


on

mobile thief
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೊಬೈಲ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದ ಬೈಕ್ ಸವಾರ ಡಿವೈಡರ್‌ಗೆ ಡಿಕ್ಕಿ ಹೊಡೆದುದರಿಂದ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಕಬೀರ್ ಪಾಷ ಸಾವನ್ನಪ್ಪಿದ ಬೈಕ್ ಸವಾರ. ಮಾರ್ಕೆಟ್ ಫ್ಲೈಓವರ್ ಮೇಲೆ ಅಪಘಾತ ನಡೆದಿದೆ. ಮೃತನ ಬೈಕ್‌ನಲ್ಲಿ ಎಂಟು ಮೊಬೈಲ್‌ಗಳು ಪತ್ತೆಯಾಗಿವೆ. ಮತ್ತೊಬ್ಬ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.

ಮೊಬೈಲ್ ಕಳ್ಳತನ ಮಾಡಿ ಎಸ್ಕೇಪ್ ಆಗುವ ವೇಳೆ ಆಕ್ಸಿಡೆಂಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಈತ ಕೆಪಿಸಿಸಿ ಕಚೇರಿ ಬಳಿ ಮೊಬೈಲ್ ಕದ್ದು ಎಸ್ಕೇಪ್ ಆಗಿದ್ದ ಬಗ್ಗೆ, ಮಹಿಳೆಯೊಬ್ಬರ ಮೊಬೈಲ್ ಸ್ನಾಚ್ ಮಾಡಿರುವ ಬಗ್ಗೆ ಮಾಹಿತಿಯಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೊಬೈಲ್ ಕಳ್ಳರು ಎನ್ನುವ ಮಾಹಿತಿ ಬಯಲಾಗಿದೆ. ಸಿಟಿ ಮಾರ್ಕೆಟ್ ಸಂಚಾರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ಮಾಜಿ ಡಿಜಿಪಿ ರಾಜೇಶ್ ದಾಸ್ ಮತ್ತು ಇತರ ಕೆಲವು ಮಂದಿ ತೈಯೂರಿನಲ್ಲಿರುವ ತಮ್ಮ ಒಡೆತನದ ಮನೆಗೆ ಅತಿಕ್ರಮವಾಗಿ ನುಗ್ಗಿ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರ ಮಾಜಿ ಪತ್ನಿ ಆರೋಪಿಸಿದ್ದು, ಈ ಕುರಿತು ಕೆಲಂಬಾಕ್ಕಂ ಠಾಣೆಗೆ ದೂರು ನೀಡಿದ್ದರಿಂದ ಅವರನ್ನು (Former DGP Arrested) ಬಂಧಿಸಲಾಯಿತು.

VISTARANEWS.COM


on

By

Former DGP Arrested
Koo

ಚೆನ್ನೈ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ (sexually harassment case) ಈ ಹಿಂದೆ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಡಿಜಿಪಿ ರಾಜೇಶ್ ದಾಸ್ ಅವರನ್ನು (Former DGP Arrested) ವಿಚ್ಛೇದಿತ ಪತ್ನಿಯ ಮನೆಯಲ್ಲಿ ಅಕ್ರಮ ಪ್ರವೇಶ ಆರೋಪದಡಿಯಲ್ಲಿ ಶುಕ್ರವಾರ ಬೆಳಗ್ಗೆ ತಾಂಬರಂ ನಗರ ಪೊಲೀಸರು (Tambaram city police) ಬಂಧಿಸಿದ್ದಾರೆ.

ರಾಜೇಶ್ ದಾಸ್ ಅವರ ವಿಚ್ಛೇದಿತ ಪತ್ನಿ, ತಮಿಳುನಾಡಿನ (tamilnadu) ಇಂಧನ ಕಾರ್ಯದರ್ಶಿ ಬೀಲಾ ವೆಂಕಟೇಶನ್ (Beela Venkatesan) ಅವರು ನೀಡಿದ ದೂರಿನ ಆಧಾರದ ಮೇಲೆ ಈ ವಾರದ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಬೀಲಾ ಅವರು ಈ ವಾರದ ಆರಂಭದಲ್ಲಿ ನೀಡಿದ ದೂರಿನಲ್ಲಿ ದಾಸ್ ಮತ್ತು ಇತರ ಕೆಲವು ಮಂದಿ ತೈಯೂರಿನಲ್ಲಿರುವ ತನ್ನ ಒಡೆತನದ ಮನೆಗೆ ಅತಿಕ್ರಮವಾಗಿ ನುಗ್ಗಿ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಕುರಿತು ಕೆಲಂಬಾಕ್ಕಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ದಾಸ್ ಅವರು ತಾವು ಆ ಮನೆಯ ಕಾಯಂ ನಿವಾಸಿ ಎಂದು ಹೇಳಿಕೊಂಡಿದ್ದರು. ಇಂಧನ ಕಾರ್ಯದರ್ಶಿಯಾಗಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಮನೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕಾಗಿ ಬೀಲಾ ಅವರನ್ನು ದೂಷಿಸಿದ್ದರು. ಈ ಸಂಬಂಧ ಅವರು ಗುರುವಾರ ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದಕ್ಕೆ ಪ್ರತಿಕ್ರಿಯಿಸುವಂತೆ ಬೀಲಾ ಅವರಿಗೆ ಕೋರ್ಟ್ ಸೂಚನೆ ನೀಡಿತ್ತು.

ಪನೈಯೂರಿನಲ್ಲಿರುವ ಅವರ ಮನೆಯಿಂದ ಬಂಧನವನ್ನು ದೃಢಪಡಿಸಿದ ತಾಂಬರಂ ಪೊಲೀಸರು, ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಿದರು. ಕಿರಿಯ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ದಾಸ್‌ ಅವರಿಗೆ ಈ ಹಿಂದೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅವರಿಗೆ ಶಿಕ್ಷೆಯಿಂದ ವಿನಾಯಿತಿ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದ ಬಳಿಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಸದ್ಯ ಅವರಿಗೆ ಕೊಂಚ ರಿಲೀಫ್ ನೀಡಿದೆ.

ಇದನ್ನೂ ಓದಿ: Murder Attempt: ಮಗು ಹೆಣ್ಣೋ ಗಂಡೋ ನೋಡಲು ಹೆಂಡತಿಯ ಹೊಟ್ಟೆ ಸೀಳಿದವನಿಗೆ ಜೀವಾವಧಿ ಶಿಕ್ಷೆ!

Continue Reading

ಲೈಫ್‌ಸ್ಟೈಲ್

Washing Machine Cleaning Tips: ವಾಷಿಂಗ್ ಮೆಷಿನ್ ಹೆಚ್ಚು ಬಾಳಿಕೆ ಬರಬೇಕೆ? ಈ ರೀತಿ ಸ್ವಚ್ಛಗೊಳಿಸಿ

ಮನೆಯಲ್ಲಿರುವ ವಾಷಿಂಗ್ ಮೆಷಿನ್ ಅನ್ನು ತಿಂಗಳಿಗೊಮ್ಮೆಯಾದರೂ ಚೆನ್ನಾಗಿ ಸ್ವಚ್ಛ ಮಾಡಲೇಬೇಕು. ಇಲ್ಲವಾದರೆ ಇದು ಸೋಂಕು ಹರಡುವ ಮೂಲವಾಗಬಹುದು. ವಾಷಿಂಗ್ ಮೆಷಿನ್ ಸ್ವಚ್ಛಗೊಳಿಸಲು ಕೆಲವು ಸರಳ ಟಿಪ್ಸ್ (Washing Machine Cleaning Tips) ಇಲ್ಲಿದೆ.

VISTARANEWS.COM


on

By

Washing Machine Cleaning Tips
Koo

ಮನೆಯಲ್ಲಿರುವ ವಾಷಿಂಗ್ ಮೆಷಿನ್ (Washing Machine Cleaning Tips) ಚೆನ್ನಾಗಿ ಕೆಲಸ ಮಾಡುತ್ತಿದ್ದರೂ ಅದು ಸೂಕ್ಷ್ಮಜೀವಿಗಳಿಂದ (germs) ಮುಕ್ತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಬಹುಮುಖ್ಯ, ಇಲ್ಲವಾದರೆ ಬಟ್ಟೆಯ (cloth) ಮೂಲಕ ಅದು ನಮ್ಮ ದೇಹವನ್ನು ಪ್ರವೇಶಿಸಬಹುದು. ಇದರಿಂದ ಚರ್ಮದ ಕಾಯಿಲೆಗಳು (skin problem) ಕಾಣಿಸಿಕೊಳ್ಳಬಹುದು. ಹೀಗಾಗಿ ವಾಷಿಂಗ್ ಮೆಷಿನ್ ಅನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ.

ವಾಷಿಂಗ್ ಮೆಷಿನ್ ಚೆನ್ನಾಗಿ ಕಾರ್ಯ ನಿರ್ವಹಿಸಲು ಆಗಾಗ್ಗೆ ಸ್ವಚ್ಛಗೊಳಿಸುವುದು ಅತ್ಯಗತ್ಯ. ತಿಂಗಳಿಗೊಮ್ಮೆ ಸ್ವಚ್ಛಗೊಳಿಸಿದರೆ ಉತ್ತಮ. ಇದಕ್ಕಾಗಿ ಕೆಲವೊಂದು ಸರಳ ವಿಧಾನಗಳಿವೆ.

ಯಾವುದರಿಂದ ಸ್ವಚ್ಛಗೊಳಿಸಬಹುದು?

ವಾಷಿಂಗ್ ಮೆಷಿನ್ ಅನ್ನು ಸ್ವಚ್ಛಗೊಳಿಸುವ ಮೊದಲು ಯಾವುದರಿಂದ ಸ್ವಚ್ಛ ಮಾಡುವುದು ಎಂಬುದನ್ನು ನೋಡಿಕೊಳ್ಳಿ. ವಾಷಿಂಗ್ ಮೆಷಿನ್ ಸ್ವಚ್ಛಗೊಳಿಸಲು ಬಿಳಿ ವಿನೆಗರ್, ಅಡಿಗೆ ಸೋಡಾ, ಮೈಕ್ರೋಫೈಬರ್ ಬಟ್ಟೆ ಅಥವಾ ಸ್ಪಾಂಜ್, ಹಳೆಯ ಹಲ್ಲುಜ್ಜುವ ಬ್ರಷ್, ಬಿಸಿ ನೀರು, ಸೌಮ್ಯವಾದ ಸಾಬೂನು ಮತ್ತು ಬಕೆಟ್ ಅಗತ್ಯವಾಗಿರುತ್ತದೆ.

ಡ್ರಾಯರ್‌ಗಳನ್ನು ಸ್ವಚ್ಛಗೊಳಿಸಿ

ವಾಷಿಂಗ್ ಮೆಷಿನ್‌ನಲ್ಲಿ ಮೊದಲು ಡ್ರಾಯರ್‌ಗಳನ್ನು ತೆಗೆದು ಸ್ವಚ್ಛಗೊಳಿಸಿ. ಬಿಸಿ ಸಾಬೂನು ನೀರಿನಿಂದ ಚೆನ್ನಾಗಿ ತೊಳೆಯಿರಿ. ಯಾವುದೇ ಕಲೆಗಳು ಇದ್ದರೆ ಸ್ಕ್ರಬ್ ಮಾಡಲು ಹಳೆಯ ಟೂತ್ ಬ್ರಷ್ ಅನ್ನು ಬಳಸಿ. ಡ್ರಾಯರ್‌ಗಳನ್ನು ಚೆನ್ನಾಗಿ ತೊಳೆಯಿರಿ ಮತ್ತು ಅವುಗಳನ್ನು ಯಂತ್ರಕ್ಕೆ ಮರುಸೇರಿಸುವ ಮೊದಲು ಒಣಗಲು ಬಿಡಿ.

ವಿನೆಗರ್‌ನೊಂದಿಗೆ ಬಿಸಿ ನೀರು

ಎರಡು ಕಪ್ ಬಿಳಿ ವಿನೆಗರ್ ಅನ್ನು ನೇರವಾಗಿ ವಾಷಿಂಗ್ ಮೆಷಿನ್‌ಗೆ ಹಾಕಿ. ಬಿಸಿ ನೀರು ಹಾಕಿ ತಿರುಗಿಸಿ. ವಿನೆಗರ್ ಮೆಷಿನ್‌ನ ಒಳಗೆ ಇರುವ ಶಿಲೀಂಧ್ರವನ್ನು ಕರಗಿಸಲು ಸಹಾಯ ಮಾಡುತ್ತದೆ. ಜೊತೆಗೆ ಅಹಿತಕರ ವಾಸನೆಯನ್ನು ತೊಡೆದುಹಾಕುತ್ತದೆ.

ಬಾಗಿಲನ್ನು ಸ್ವಚ್ಛಗೊಳಿಸಿ

ವಾಷಿಂಗ್ ಮೆಷಿನ್‌ನ ಬಾಗಿಲಿನ ಸಂಧುಗಳನ್ನು ಸ್ವಚ್ಛಗೊಳಿಸಲು ಮರೆಯದಿರಿ. ಇದಕ್ಕಾಗಿ ಸ್ಪ್ರೇ ಬಾಟಲಿಯಲ್ಲಿ ನೀರು ಮತ್ತು ವಿನೆಗರ್‌ ಅನ್ನು ಸಮ ಪ್ರಮಾಣದಲ್ಲಿ ಹಾಕಿ ದ್ರಾವಣವನ್ನು ಬಾಗಿಲಿಗೆ ಸಿಂಪಡಿಸಿ. ಬಳಿಕ ಮೈಕ್ರೋಫೈಬರ್ ಬಟ್ಟೆ ಅಥವಾ ಸ್ಪಂಜನ್ನು ಬಳಸಿ ಉಜ್ಜಿ. ಕೊಳಕು ಸಂಗ್ರಹಗೊಳ್ಳುವ ಭಾಗಗಳತ್ತ ವಿಶೇಷ ಗಮನಕೊಡಿ.

ಇದನ್ನೂ ಓದಿ: Toothpaste Hacks: ಟೂತ್‌ಪೇಸ್ಟ್‌ನಿಂದ ಯಾವೆಲ್ಲ ವಸ್ತುಗಳನ್ನು ಹೊಳೆಯುವಂತೆ ಮಾಡಬಹುದು ನೋಡಿ!

ಫಿಲ್ಟರ್ ತೆಗೆದು ಸ್ವಚ್ಛಗೊಳಿಸಿ

ವಾಷಿಂಗ್ ಮೆಷಿನ್‌ನಲ್ಲಿ ತೆಗೆಯಬಹುದಾದ ಫಿಲ್ಟರ್ ಹೊಂದಿದ್ದರೆ ಅದನ್ನು ಪತ್ತೆ ಮಾಡಿ. ಅದರಲ್ಲಿರುವ ಸಂಗ್ರಹವಾಗಿರುವ ಕೊಳಕು ವಸ್ತುಗಳನ್ನು ತೆಗೆಯಿರಿ. ಫಿಲ್ಟರ್ ಅನ್ನು ಸ್ವಚ್ಛಗೊಳಿಸಲು ಬಿಸಿ ಸಾಬೂನು ನೀರು ಮತ್ತು ಬ್ರಷ್ ಅನ್ನು ಬಳಸಿ. ಅನಂತರ ಅದನ್ನು ಮರುಸ್ಥಾಪಿಸುವ ಮೊದಲು ಅದನ್ನು ಸಂಪೂರ್ಣವಾಗಿ ತೊಳೆಯಿರಿ.

ಬೇಕಿಂಗ್ ಸೋಡಾ ಬಳಸಿ

ವಿನೆಗರ್‌ನಿಂದ ಸ್ವಚ್ಛಗೊಳಿಸಿದ ಬಳಿಕ ಒಂದು ಕಪ್ ಅಡಿಗೆ ಸೋಡಾವನ್ನು ನೇರವಾಗಿ ತೊಳೆಯುವ ಯಂತ್ರಕ್ಕೆ ಹಾಕಿ ಬಿಸಿ ನೀರು ಬೆರೆಸಿ ತಿರುಗಿಸಿ. ಇದು ವಾಷಿಂಗ್ ಮೆಷಿನ್‌ನಲ್ಲಿರುವ ದುರ್ಗಂಧವನ್ನು ದೂರ ಮಾಡುತ್ತದೆ.

ಹೊರಭಾಗ ಸ್ವಚ್ಛತೆ

ವಾಷಿಂಗ್ ಮೆಷಿನ್‌ನ ಮೇಲ್ ಭಾಗವನ್ನು ಸ್ವಚ್ಛವಾದ ಒದ್ದೆ ಬಟ್ಟೆಯಿಂದ ಚೆನ್ನಾಗಿ ಒರೆಸಿ. ಇದರಲ್ಲಿರುವ ಬಟನ್ ಗಳ ಬಗ್ಗೆ ಎಚ್ಚರವಿರಲಿ. ಯಾಕೆಂದರೆ ಈ ಪ್ರದೇಶಗಳು ಕಾಲಾನಂತರದಲ್ಲಿ ಧೂಳು ಮತ್ತು ಕೊಳೆಯನ್ನು ಸಂಗ್ರಹಿಸಬಹುದು.

ಗಾಳಿಯಲ್ಲಿ ಒಣಗಲು ಬಿಡಿ

ವಾಷಿಂಗ್ ಮೆಷಿನ್ ಸ್ವಚ್ಛತೆ ಪೂರ್ಣಗೊಂಡ ಬಳಿಕ ಒಳಭಾಗವನ್ನು ಗಾಳಿಯಲ್ಲಿ ಸಂಪೂರ್ಣವಾಗಿ ಒಣಗಲು ಬಿಡಿ. ಇದಕ್ಕಾಗಿ ಬಾಗಿಲು ತೆರೆದಿಡಿ. ಇದು ಶಿಲೀಂಧ್ರ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತದೆ.

ವಾಷಿಂಗ್ ಮೆಷಿನ್ ಅನ್ನು ತಿಂಗಳಿಗೊಮ್ಮೆಯಾದರೂ ಈ ರೀತಿ ಸ್ವಚ್ಛ ಮಾಡಿದರೆ ಇದು ವಾಷಿಂಗ್ ಮೆಷಿನ್ ಹೆಚ್ಚು ಕಾಲ ಬಾಳಿಕೆ ಬರಲು ಸಹಾಯ ಮಾಡುವುದು.

Continue Reading

ಕ್ರೈಂ

Murder Attempt: ಮಗು ಹೆಣ್ಣೋ ಗಂಡೋ ನೋಡಲು ಹೆಂಡತಿಯ ಹೊಟ್ಟೆ ಸೀಳಿದವನಿಗೆ ಜೀವಾವಧಿ ಶಿಕ್ಷೆ!

ಜನಿಸಲಿರುವ ಮಗು ಗಂಡು ಅಥವಾ ಹೆಣ್ಣು ಎಂದು ತಿಳಿಯಲು ಐವರು ಹೆಣ್ಣು ಮಕ್ಕಳ ತಂದೆ ಪತ್ನಿಯ ಹೊಟ್ಟೆಯನ್ನು ಸೀಳಿದ್ದ. (Murder Attempt). ಇದರಿಂದ ಆಘಾತಗೊಂಡ ಆಕೆ ಬೀದಿಗೆ ಓಡಿ ಹೋಗಿ ತನ್ನನ್ನು ತಾನು ರಕ್ಷಿಸಿಕೊಂಡರೂ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿತ್ತು. ಅದು ಗಂಡು ಮಗುವಾಗಿತ್ತು!

VISTARANEWS.COM


on

By

Murder Attempt
Koo

ಉತ್ತರ ಪ್ರದೇಶ: ಹುಟ್ಟಲಿರುವ ಮಗು ಗಂಡೋ ಹೆಣ್ಣೋ (gender check) ಎಂಬುದನ್ನು ಪರೀಕ್ಷಿಸಲು ಹೆಂಡತಿಯ ಹೊಟ್ಟೆಯನ್ನೇ ಕತ್ತಿಯಿಂದ ಸೀಳಿದ್ದ (Murder Attempt) ಉತ್ತರ ಪ್ರದೇಶದ (uttarpradesh) ಬದೌನ್‌ ಗ್ರಾಮದ ಐವರು ಹೆಣ್ಣು ಮಕ್ಕಳ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬದೌನ್‌ನ ಸಿವಿಲ್ ಲೈನ್ಸ್‌ನ ನಿವಾಸಿ ಪನ್ನಾ ಲಾಲ್ ಶಿಕ್ಷೆಗೆ ಗುರಿಯಾದ ವ್ಯಕ್ತಿ.

2020ರ ಸೆಪ್ಟೆಂಬರ್‌ನಲ್ಲಿ ಪನ್ನಾಲಾಲ್ ಗರ್ಭಿಣಿಯಾಗಿದ್ದ ತನ್ನ ಪತ್ನಿ ಅನಿತಾ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದ. ದಂಪತಿಗೆ ಮದುವೆಯಾಗಿ 22 ವರ್ಷಗಳಾಗಿತ್ತು. ಐದು ಹೆಣ್ಣು ಮಕ್ಕಳಿದ್ದರೂ ಪನ್ನಾ ಲಾಲ್‌ಗೆ ಗಂಡು ಮಗು ಬೇಕೆಂಬ ಹಠವಿತ್ತು. ಇದು ಪತಿ ಪತ್ನಿಯ ನಡುವೆ ನಿರಂತರ ಜಗಳಕ್ಕೆ ಕಾರಣವಾಗುತ್ತಿತ್ತು.

ಇವರಿಬ್ಬರ ಜಗಳದ ಬಗ್ಗೆ ಅನಿತಾ ಅವರ ಕುಟುಂಬಕ್ಕೂ ತಿಳಿದಿತ್ತು. ಅವರು ಇವರಿಬ್ಬರ ನಡುವಿನ ಜಗಳವನ್ನು ನಿಲ್ಲಿಸಲು ಪನ್ನಾ ಲಾಲ್ ಅವರನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ ಪನ್ನಾಲಾಲ್ ಅನಿತಾಗೆ ವಿಚ್ಛೇದನ ನೀಡಿ ಇನ್ನೊಬ್ಬ ಮಹಿಳೆಯನ್ನು ಮದುವೆಯಾಗುವುದಾಗಿ ಬೆದರಿಕೆ ಹಾಕಿದ್ದ.

ಘಟನೆ ನಡೆದ ದಿನದಂದು ದಂಪತಿ ಗರ್ಭದಲ್ಲಿರುವ ಮಗುವಿನ ಲಿಂಗದ ಬಗ್ಗೆ ಮತ್ತೆ ಜಗಳವಾಡಿದ್ದಾರೆ. ಇದರಿಂದ ಕುಪಿತಗೊಂಡ ಪನ್ನಾ ಲಾಲ್ ಅನಿತಾಗೆ ಗಂಡು ಅಥವಾ ಹೆಣ್ಣು ಮಗುವಿದೆಯೇ ಎಂದು ಪರೀಕ್ಷಿಸಲು ಅನಿತಾ ಅವರ ಹೊಟ್ಟೆಯನ್ನು ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದ. ಅನಿತಾ ಜಗಳವಾಡಿದಾಗ ಆಕೆಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದ.

ಪನ್ನಾಲಾಲ್ ಆಕೆಯ ಮೇಲೆ ಹಲ್ಲೆ ನಡೆಸಿದ್ದು, ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಈ ವೇಳೆ ಅವನು ಅವಳನ್ನು ಹಿಡಿದು ಹರಿತವಾದ ಕತ್ತಿಯಿಂದ ಅವಳ ಹೊಟ್ಟೆಯನ್ನು ಕತ್ತರಿಸಿ, ಮಗು ಹೆಣ್ಣೋ ಗಂಡೋ ನೋಡಿಯೇ ಬಿಡುತ್ತೇನೆ ಎಂದು ಅಬ್ಬರಿಸಿದ್ದ. ಆಗ ಆಕೆ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ಆಕೆಯ ಕರುಳು ಹೊಟ್ಟೆಯಿಂದ ನೇತಾಡುವಷ್ಟು ಆಳವಾದ ಗಾಯವಾಗಿತ್ತು.

ಇದನ್ನೂ ಓದಿ: Viral Video: ಮೈದುನನ ಇಬ್ಬರು ಮಕ್ಕಳನ್ನು ವಿಷವಿಕ್ಕಿ ಕೊಂದಳು, ಮೂರನೇ ಮಗುವನ್ನು ಕೊಲ್ಲುವಾಗ ಸಿಕ್ಕಿ ಬಿದ್ದಳು!

ತೀವ್ರವಾಗಿ ಗಾಯಗೊಂಡರೂ ಆಕೆ ಬೀದಿಗೆ ಓಡಿದಳು. ಹತ್ತಿರದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅವಳ ಸಹೋದರ ಅವಳ ಕಿರುಚಾಟವನ್ನು ಕೇಳಿ ಅವಳನ್ನು ರಕ್ಷಿಸಲು ಬಂದ. ಆತನನ್ನು ಕಂಡ ಪನ್ನಾ ಲಾಲ್ ಸ್ಥಳದಿಂದ ಪರಾರಿಯಾದ. ಅನಿತಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆಕೆ ಬದುಕುಳಿದಿದ್ದರೂ, ಆಕೆಯ ಹೊಟ್ಟೆಯಲ್ಲಿದ್ದ ಗಂಡು ಸಾವನ್ನಪ್ಪಿತ್ತು. ಅದು ಗಂಡು ಮಗುವಾಗಿತ್ತು ಎಂದು ಅನಿತಾ ನ್ಯಾಯಾಲಯಕ್ಕೆ ನೀಡಿದ ದೂರಿನಲ್ಲಿ ತಿಳಿಸಿದ್ದರು.

ಆಸ್ತಿ ವಿವಾದದ ಕಾರಣ ಅನಿತಾ ತನ್ನ ಸಹೋದರರೊಂದಿಗೆ ಸೇರಿ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲು ತನಗೆ ತಾನೇ ಗಾಯ ಮಾಡಿಕೊಂಡಿದ್ದಾಳೆ ಎಂದು ಪನ್ನಾಲಾಲ್ ನ್ಯಾಯಾಲಯದಲ್ಲಿ ವಾದಿಸಿದ್ದ. ಆದರೆ ಪನ್ನಾಲಾಲ್ ವಿರುದ್ಧ ಆರೋಪ ಸಾಬೀತಾಗಿರುವುದರಿಂಅ ನ್ಯಾಯಾಲಯ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Continue Reading

ವೈರಲ್ ನ್ಯೂಸ್

Viral Video: ಮೈದುನನ ಇಬ್ಬರು ಮಕ್ಕಳನ್ನು ವಿಷವಿಕ್ಕಿ ಕೊಂದಳು, ಮೂರನೇ ಮಗುವನ್ನು ಕೊಲ್ಲುವಾಗ ಸಿಕ್ಕಿ ಬಿದ್ದಳು!

Viral Video: ಮಲಗಿದ್ದ ಮಗುವಿಗೆ ಮಹಿಳೆಯೊಬ್ಬರು ವಿಷ ನೀಡುತ್ತಿರುವ ಆಘಾತಕಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಎನ್‌ಸಿಎಂ ಇಂಡಿಯಾ ಕೌನ್ಸಿಲ್ ಫಾರ್ ಮೆನ್ ಅಫೇರ್ಸ್ ಹಂಚಿಕೊಂಡಿದೆ. ಇದು ಎಕ್ಸ್ ನಲ್ಲಿ ಭಾರಿ ವೈರಲ್ ಆಗಿದೆ. ಇದರ ಹಿಂದಿನ ಕತೆ ಏನು? ಇಲ್ಲಿದೆ ವಿವರ.

VISTARANEWS.COM


on

By

Viral Video
Koo

ಮೈದುನನ ಮಗನಿಗೆ ಮಹಿಳೆಯೊಬ್ಬಳು ವಿಷವಿಕ್ಕಿರುವ (poison) ಘಟನೆ ರಾಜಸ್ಥಾನದ (Rajasthan) ಬಾರ್ಮರ್ ಜಿಲ್ಲೆಯ ಭದ್ರೇಸ್ ಗ್ರಾಮದಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Viral Video) ಆಗಿದೆ. ಇದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶವೂ ವ್ಯಕ್ತವಾಗುತ್ತಿದೆ.

ಮಲಗಿದ್ದ ಮಗುವಿಗೆ ಮಹಿಳೆಯೊಬ್ಬರು ವಿಷ ನೀಡುತ್ತಿರುವ ಆಘಾತಕಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಎನ್‌ಸಿಎಂ ಇಂಡಿಯಾ ಕೌನ್ಸಿಲ್ ಫಾರ್ ಮೆನ್ ಅಫೇರ್ಸ್ ಹಂಚಿಕೊಂಡಿದೆ. ಇದು ಎಕ್ಸ್ ನಲ್ಲಿ ಭಾರಿ ವೈರಲ್ ಆಗಿದೆ.

ರಾಜಸ್ಥಾನದ ಭದ್ರೇಸ್ ಗ್ರಾಮದಲ್ಲಿ ಹಿರಿಯ ಸಹೋದರನ ಪತ್ನಿ ಗಂಡನ ಕಿರಿಯ ಸಹೋದರನ ಮಗುವಿಗೆ ವಿಷ ನೀಡಿರುವುದಾಗಿ ಹೇಳಲಾಗಿದೆ. ಕಿರಿಯ ಸಹೋದರನ ಇಬ್ಬರು ಮಕ್ಕಳು ಇದೇ ರೀತಿ ಸಾವನ್ನಪ್ಪಿದ್ದರು. ಈ ಬಗ್ಗೆ ಮಗುವಿನ ತಾಯಿಯು ಗಂಡನ ಸಹೋದರನ ಪತ್ನಿ ಜೇಥನಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಳು.

ಹಿಂದೆ ಇಬ್ಬರು ಮಕ್ಕಳು ಇದೇ ರೀತಿ ಸಾವನ್ನಪ್ಪಿದ್ದರಿಂದ ಈ ಬಾರಿ ಎಚ್ಚರಿಕೆಯಿಂದ ಇದ್ದಳು. ಮಗುವಿನ ಹಾಸಿಗೆಯ ಬಳಿ ರೆಕಾರ್ಡ್ ಮಾಡಲು ಕೆಮರಾ ಇರಿಸಿದ್ದಳು. ಸುತ್ತಮುತ್ತ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವುದನ್ನು ಪರೀಕ್ಷಿಸುತ್ತಿದ್ದಳು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಜೇಥನಿ ಎಂಬಾಕೆ ಕೋಣೆಗೆ ಪ್ರವೇಶಿಸುತ್ತಾಳೆ. ಮಗು ಒಂಟಿಯಾಗಿ ಮಲಗಿರುವುದನ್ನು ನೋಡಿ ಮಗುವಿನ ಮೇಲೆ ಇರಿಸಿದ್ದ ಸೊಳ್ಳೆ ಪರದೆಯನ್ನು ಸದ್ದಿಲ್ಲದೆ ತೆಗೆದು ಕೆಲವು ಹನಿಗಳನ್ನು ಮಗುವಿನ ಬಾಯಿಗೆ ಹಾಕಿದಳು.


ಮಗುವನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಮೂರು ದಿನಗಳ ಕಾಲ ಐಸಿಯುನಲ್ಲಿ ಹೋರಾಡಿದ ಮಗು ಈಗ ಚೇತರಿಸಿಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿರುವ ಈ ವಿಡಿಯೋವನ್ನು ಈವರೆಗೆ 17.9 ಲಕ್ಷ ಮಂದಿ ವೀಕ್ಷಿಸಿದ್ದಾರೆ. ಇದನ್ನು ನೋಡಿರುವ ಸಾಕಷ್ಟು ಮಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Miracle case : ಮುರ್ತುಜಾ ಖಾದ್ರಿ ಪವಾಡ; ಅಂತ್ಯಕ್ರಿಯೆ ಮಾಡುವಾಗಲೇ ಕೆಮ್ಮಿದ ಮಗು!

ವೈರಲ್ ಆಗಿರುವ ಈ ವಿಡಿಯೋ ಕುರಿತು ಬಾರ್ಮರ್ ಪೊಲೀಸರು ಪ್ರತಿಕ್ರಿಯಿಸಿದ್ದು, ಇದು ಭದ್ರೇಸ್ ಗ್ರಾಮದ ಮುಖೇಶ್ ಪ್ರಜಾಪತ್ ಅವರ ಮಗನಿಗೆ ವಿಷವಿಕ್ಕಿರುವ ವಿಡಿಯೋ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನೊಂದು ಮಾಹಿತಿ ಪ್ರಕಾರ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಆಕೆ ಈ ರೀತಿ ಮಾಡಿದ್ದಳೆಂದು ಹೇಳಿಲ್ಲ ಎನ್ನಲಾಗಿದೆ.

Continue Reading
Advertisement
Pune Porsche accident
ಕ್ರೈಂ5 mins ago

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಬಾಲಕನ ಅಜ್ಜನೂ ಪೊಲೀಸ್‌ ವಶಕ್ಕೆ

Summer Special Trains
ಬೆಂಗಳೂರು13 mins ago

Summer Special Trains : ನೈರುತ್ಯ ರೈಲ್ವೆಯಿಂದ ಬೇಸಿಗೆ ವಿಶೇಷ ರೈಲುಗಳ ಸಂಚಾರ; ಪಟ್ಟಿ ಇಲ್ಲಿದೆ

Lockup Death
ಕರ್ನಾಟಕ14 mins ago

Lockup Death: ದಾವಣಗೆರೆ ಯುವಕನ ಸಾವು ಪ್ರಕರಣ ಲಾಕಪ್ ಡೆತ್ ಅಲ್ಲ, ಎಫ್ಐಆರ್ ಇಲ್ಲದೆ ಕರೆ ತಂದಿದ್ದು ತಪ್ಪು ಎಂದ ಸಿಎಂ

Hardik Pandya
ಕ್ರೀಡೆ38 mins ago

Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

Prajwal Revanna Case Why did Deve Gowda write a letter to Prajwal and HD Kumaraswamy reveals secret
ರಾಜಕೀಯ39 mins ago

Prajwal Revanna Case: ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದಿದ್ದು ಏಕೆ? ಸೀಕ್ರೆಟ್‌ ರಿವೀಲ್‌ ಮಾಡಿದ ಎಚ್‌ಡಿಕೆ!

Murder case in Mysuru
ಮೈಸೂರು43 mins ago

Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

Gold Rate Today
ಚಿನ್ನದ ದರ44 mins ago

Gold Rate Today: ಚಿನ್ನದ ದರ ಇಂದು ಯಥಾಸ್ಥಿತಿ; 22K- 24K ಬಂಗಾರದ ದರಗಳು ಹೀಗಿವೆ

Shreerastu Shubhamastu Serial Netra Jadhav out
ಕಿರುತೆರೆ56 mins ago

Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

Road Accident
ಕ್ರೈಂ1 hour ago

Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Sreenath Bhasi Movie Shashidhar direction new Movie
ಸ್ಯಾಂಡಲ್ ವುಡ್1 hour ago

Sreenath Bhasi Movie: ʻಮಂಜುಮ್ಮೆಲ್ ಬಾಯ್ಸ್ʼ ನಟನಿಗೆ ಸ್ಯಾಂಡಲ್​ವುಡ್​ ಡೈರೆಕ್ಟರ್ ಆ್ಯಕ್ಷನ್​ ಕಟ್​!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌