Campco Golden jubilee : ಅಡಕೆ ಸಂಶೋಧನೆಗೆ ಬಜೆಟ್‌ನಲ್ಲಿ ಅನುದಾನ: ಕ್ಯಾಂಪ್ಕೊ ಸುವರ್ಣ ಮಹೋತ್ಸವದಲ್ಲಿ ಬೊಮ್ಮಾಯಿ - Vistara News

ದಕ್ಷಿಣ ಕನ್ನಡ

Campco Golden jubilee : ಅಡಕೆ ಸಂಶೋಧನೆಗೆ ಬಜೆಟ್‌ನಲ್ಲಿ ಅನುದಾನ: ಕ್ಯಾಂಪ್ಕೊ ಸುವರ್ಣ ಮಹೋತ್ಸವದಲ್ಲಿ ಬೊಮ್ಮಾಯಿ

ರಾಜ್ಯದಲ್ಲಿ ಅಡಕೆ ಸಂಶೋಧನೆಗಾಗಿ ಬಜೆಟ್‌ನಲ್ಲಿ ವಿಶೇಷ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಅವರು ಕ್ಯಾಂಪ್ಕೊದ (Campco Golden jubilee) ಸಾಧನೆಯನ್ನು ಶ್ಲಾಘಿಸಿದರು.

VISTARANEWS.COM


on

Campco
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪುತ್ತೂರು: ರಾಜ್ಯದಲ್ಲಿ ಅಡಕೆ ಸಂವರ್ಧನೆ, ಅದನ್ನು ಬಾಧಿಸುವ ಸಮಸ್ಯೆಗಳ ಪರಿಹಾರಕ್ಕೆ ರಾಜ್ಯ ಸರಕಾರ ಕಟಿಬದ್ಧವಾಗಿದ್ದು, ಮುಂದಿ ಬಜೆಟ್‌ನಲ್ಲಿ ಅಡಕೆ ಕುರಿತ ಸಂಶೋಧನೆಗೆ ವಿಶೇಷ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಪುತ್ತೂರಿನ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಆಯೋಜನೆಗೊಂಡ ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ನಿಯಮಿತ ಸಂಸ್ಥೆಯ (ಕ್ಯಾಂಪ್ಕೋ) ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ (Campco Golden jubilee) ಅವರು ಮಾತನಾಡಿದರು.

ʻʻರಾಜ್ಯದಲ್ಲಿ ಅಡಕೆ ಬೆಳೆಯುವ ಪ್ರದೇಶ ವಿಸ್ತರಣೆಯಾಗುತ್ತಿದೆ. ಈಗ ನಮ್ಮ ಭಾಗದಲ್ಲೂ (ಹಾವೇರಿ) ಅಡಕೆ ಬೆಳೆ ಆರಂಭವಾಗಿದೆ. ಒಟ್ಟಾರೆ ಬೆಳೆ ಪ್ರದೇಶ ೬.೧೧ ಲಕ್ಷ ಹೆಕ್ಟೇರ್‌ಗಿಂತಲೂ ಹೆಚ್ಚಾಗಿದೆ. ಕೃಷಿ ಕ್ಷೇತ್ರ ಹೆಚ್ಚುವ ಜತೆಗೆ ಸವಾಲುಗಳು ಕೂಡಾ ಹೆಚ್ಚಿವೆ. ಎಲೆ ಚುಕ್ಕಿ ರೋಗ ಈಗ ದೊಡ್ಡ ಸಮಸ್ಯೆಯಾಗಿದೆ. ಇದನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಪರಿಹಾರ ಕಂಡುಕೊಳ್ಳುವುದಕ್ಕಾಗಿ ೧೦ ಕೋಟಿ ರೂ.ಯನ್ನು ನೀಡಿದ್ದೇವೆ. ಇದರ ಜತೆಗೆ ಅಡಿಕೆ ಬೆಳೆ ಸಂಶೋಧನೆಗಾಗಿ ವಿಶೇಷ ಅನುದಾನವನ್ನು ನೀಡಲಾಗುವುದುʼʼ ಎಂದು ಅವರು ಪ್ರಕಟಿಸಿದರು.

ಅಡಕೆ ಬೆಳೆಗಾರರ ಭೂಮಿ ಸಮಸ್ಯೆ ಪರಿಹಾರ
ʻʻಅಡಕೆ ಬೆಳೆಗಾರರು ಕಾಣೆ, ಬಾಣೆ, ಸೊಪ್ಪಿನ ಬೆಟ್ಟದಲ್ಲೂ ಕೃಷಿ ಮಾಡಿದ್ದಾರೆ. ಇದು ಸಮಸ್ಯೆಯಾಗಿದ್ದು, ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಹೀಗಾಗಿ ಕಂದಾಯ ಇಲಾಖೆಯ ಮೂಲಕ ಕೆಲವೇ ದಿನಗಳಲ್ಲಿ ಇದಕ್ಕೆ ಪರಿಹಾರ ಒದಗಿಸುತ್ತೇವೆ. ಡೀಮ್ಡ್‌ ಫಾರೆಸ್ಟ್‌ ಸಮಸ್ಯೆಗಳಿಗೆ ಪರಿಹಾರ ಕೊಡಿಸಿದ ಮಾದರಿಯಲ್ಲೇ ಕಾಣೆ, ಬಾಣೆ, ಸೊಪ್ಪಿನ ಗುಡ್ಡದ ಸಮಸ್ಯೆಗಳಿಗೂ ಪರಿಹಾರ ದೊರೆಯಲಿದೆʼʼ ಎಂದು ಅವರು ಹೇಳಿದರು.

ನಾವೇ ಪರಿಹಾರ ಕೊಡಬೇಕು, ನೀವು ನಮ್ಮವರು
ʻʻಅಡಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ನಾವೇ ಕೊಡಬೇಕು, ಬೇರೆ ಯಾರೂ ಕೊಡಲ್ಲ. ಯಾಕೆಂದರೆ ನೀವೆಲ್ಲ ನಮ್ಮವರು, ಬಧ್ಧತೆ ಇರುವುದು ನಮಗೆ ಮಾತ್ರʼʼ ಎಂದು ಹೇಳುವ ಮೂಲಕ ಚುನಾವಣೆಯಲ್ಲಿ ಬಿಜೆಪಿಯನ್ನೇ ಬೆಂಬಲಿಸಿ ಎಂದು ಸಂದೇಶ ರವಾನಿಸಿದರು.

ಕೋಆಪರೇಟಿಸಂ ಸೂತ್ರ
ದೇಶದಲ್ಲಿರುವ ಕ್ಯಾಪಿಟಲಿಸಂ (ಬಂಡವಾಳಶಾಹಿಗಳು), ಕಮ್ಯುನಿಸಂ (ಕಮ್ಯುನಿಸ್ಟ್‌ ಸಿದ್ಧಾಂತ)ಗಳಿಗೆ ಉತ್ತರ ನೀಡುವುದು ಕೋ-ಓಪರೇಟಿಸಂ (ಸಹಕಾರ ತತ್ವ) ಎಂದು ಹೇಳಿದರು ಬೊಮ್ಮಾಯಿ. ಈ ರೀತಿ ಬಂಡವಾಳಶಾಹಿ ಮತ್ತು ಕಮ್ಯುನಿಸಂಗೆ ಕೋಆಪರೇಟಿಸಂ ಮೂಲಕ ಉತ್ತರ ಕೊಟ್ಟ ಕೀರ್ತಿ ಕ್ಯಾಂಪ್ಕೊ ಸಂಸ್ಥೆಗೆ ಸಲ್ಲುತ್ತದೆ ಎಂದು ಬೊಮ್ಮಾಯಿ ಹೇಳಿದರು.

೧೯೭೩ರಲ್ಲಿ ಸ್ಥಾಪನೆಯಾದ ಸಂಸ್ಥೆ ಅಡಕೆ ಮಾರುಕಟ್ಟೆಗೆ ದೊಡ್ಡ ಮಟ್ಟದ ರಕ್ಷಣೆ ನೀಡಿದೆ. ೧೯೮೦ರಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋಕೋ ಕುಸಿದಾಗ ಚಾಕೊಲೇಟ್‌ ಕಾರ್ಖಾನೆಯನ್ನು ಸ್ಥಾಪಿಸುವ ಮೂಲಕ ಬೆಳೆಗಾರರನ್ನು ಕಾಪಾಡಿತು. ಇವತ್ತು ದೇಶದಲ್ಲೇ ಅತ್ಯಧಿಕ ಅಂದರೆ ೨೬ ಸಾವಿರ ಮೆಟ್ರಿಕ್‌ ಟನ್‌ ಚಾಕೊಲೇಟ್‌ ಉತ್ಪಾದಿಸುವ ಅತಿ ದೊಡ್ಡ ಸಂಸ್ಥೆಯಾಗಿ ಬೆಳೆದು ನಿಂತಿದೆ.

ಕಾಳುಮೆಣಸು, ಅಡಕೆ, ಕೋಕೊ ಸೇರಿದಂತೆ ಕೃಷಿಕರ ಎಲ್ಲ ವಸ್ತುಗಳಿಗೆ ಮಾರುಕಟ್ಟೆ ರಕ್ಷಣೆ ನೀಡುವ ಮೂಲಕ ತಾಯಿಯಾಗಿ ಪೊರೆಯುತ್ತಿದೆ ಎಂದು ಕ್ಯಾಂಪ್ಕೋವನ್ನು ಹೊಗಳಿದರು. ವಾರಾಣಸಿ ಸುಬ್ರಾಯ ಭಟ್‌ ಆದಿಯಾಗಿ ಇದುವರೆಗೆ ಸಂಸ್ಥೆಯನ್ನು ಮುನ್ನಡೆಸಿದ ವ್ಯಕ್ತಿಗಳ ಬದ್ಧತೆಯಿಂದ ಇದು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಅಮಿತ್‌ ಶಾ ಈಗಲೂ ಸಹಕಾರಿ ಸಂಘದ ಅಧ್ಯಕ್ಷರು

ಅಮಿತ್‌ ಅವರಂಥ ಬದ್ಧತೆಯುಳ್ಳ ಸಹಕಾರಿ ವ್ಯಕ್ತಿ ದೇಶದ ಮೊದಲ ಸಹಕಾರಿ ಸಚಿವರಾಗಿರುವುದು ನಮಗೆಲ್ಲ ಅತ್ಯಂತ ಖುಷಿಯ ಸಂಗತಿ ಎಂದ ಅವರು, ಶಾ ಅವರ ಸಹಕಾರಿ ಬದ್ಧತೆ ಎಷ್ಟರಮಟ್ಟಿಗೆ ಇದೆಯೆಂದರೆ ಅವರು ಈಗಲೂ ತಮ್ಮ ಊರಿನ ಸಹಕಾರಿ ಸಂಘದ ಅಧ್ಯಕ್ಷರಾಗಿಯೇ ಮುಂದುವರಿದಿದ್ದಾರೆ. ದೇಶದ ಗೃಹ ಸಚಿವರಾದರೂ ಸಹಕಾರದ ಮೂಲ ನೆಲೆಯನ್ನು ಬಿಟ್ಟುಕೊಟ್ಟಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಅಮೃತ ಕಾಲದಲ್ಲಿ ಐದು ಟ್ರಿಲಿಯನ್‌ ಆರ್ಥಿಕತೆಗೆ ಏರಿಸುವ ಕನಸನ್ನು ಹೊಂದಿದ್ದಾರೆ. ಈ ಅಭಿವೃದ್ಧಿಯ, ಸಾಧನೆಯ ಪಥದಲ್ಲಿ ಸಹಕಾರಿ ಕ್ಷೇತ್ರದ ಪಾಲು ತುಂಬಾ ದೊಡ್ಡದಾಗಿರಲಿದೆ ಎಂದು ಬೊಮ್ಮಾಯಿ ಹೇಳಿದರು.

ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ರೈಲ್ವೇ, ಹೆದ್ದಾರಿ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ ಪ್ರಧಾನಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು. ಪ್ರಧಾನಿ ಮೋದಿ ಅವರು ರೈಲ್ವೆಗೆ ೭,೫೦೦ ಕೋಟಿ ರೂ. ನೀಡಿದ್ದಾರೆ ಎಂದರು.

ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ, ಗೃಹ ಸಚಿವ ಆರಗ ಜ್ಞಾನೇಂದ್ರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ, ಸಹಕಾರ ಸಚಿವ ಸೋಮಶೇಖರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದರಾದ ನಳಿನ್ ಕುಮಾರ್ ಕಟೀಲ್, ಸ್ಥಳೀಯ ಶಾಸಕರಾದ ಸಂಜೀವ ಮಠಂದೂರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಯಾರೆಲ್ಲ ಭಾಗಿಗಳು?

ಕ್ಯಾಂಪ್ಕೊ ಮತ್ತು ಕೃಷಿಕ ಸಹಕಾರಿಗಳ ಮಹಾ ಸಮಾವೇಶದಲ್ಲಿ ಪುತ್ತೂರು, ಕಡಬ, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಭಾಗದ ಸಾರ್ವಜನಿಕರು ಭಾಗಿಯಾಗಿದ್ದಾರೆ. ಜಿಲ್ಲೆಯ ಸಹಕಾರಿ ಇಲಾಖೆಗೆ ಸಂಬಂಧಿಸಿದ 66 ಸಾವಿರ ಫಲಾನುಭವಿಗಳು ಭಾಗವಹಿಸಿದ್ದಾರೆ. ಸಮಾವೇಶದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ಅಧ್ಯಕ್ಷರು ಕಿಶೋರ್ ಕುಮಾರ್ ಕೊಡ್ಗಿ ವಹಿಸಿದ್ದರು. ಹಿರಿಯ ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್‌

1973ರಲ್ಲಿ ಸ್ಥಾಪಿಸಲಾದ ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಘ ಕ್ಯಾಂಪ್ಕೊ ಲಿಮಿಟೆಡ್ ಅಡಿಕೆ, ಕೊಕ್ಕೊ, ರಬ್ಬರ್ ಮತ್ತು ಇದೀಗ ಕರಿಮೆಣಸಿನ ವ್ಯವಹಾರ ಮಾಡುತ್ತದೆ. ಕೊಕ್ಕೊ ಆಧಾರಿತ ಚಾಕೊಲೇಟ್ ಮತ್ತು ಇತರ ಅರೆ-ಸಿದ್ಧ ಕೊಕ್ಕೊ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆ ಮಾಡುತ್ತದೆ. 3576 ರೈತರ ಸದಸ್ಯತ್ವದೊಂದಿಗೆ ಶುರುವಾದ ಕ್ಯಾಂಪ್ಕೋ ಈಗ 1,38,000 ಕ್ಕೂ ಹೆಚ್ಚು ರೈತರ ಸದಸ್ಯತ್ವವನ್ನು ಹೊಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದಕ್ಷಿಣ ಕನ್ನಡ

Drowned In water : ಹೆತ್ತವರ ಕಣ್ಣೆದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

Drowned In water : ಹೆತ್ತವರ ಕಣ್ಣೆದುರಿಗೆ ಇಬ್ಬರು ಪುತ್ರಿಯರು ನೀರುಪಾಲಾದ ದುರಂತ ನಡೆದಿದೆ. ನೇತ್ರಾವತಿ ನದಿ ತೀರಕ್ಕೆ ತೆರಳಿದವರು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Drowned in water
ಸಾಂದರ್ಭಿಕ ಚಿತ್ರ
Koo

ಪುತ್ತೂರು: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ (Drowned In water) ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ.

ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುವಾಗ ಏಕಾಏಕಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ. ಪೋಷಕರ ಮುಂದೆಯೇ ಬಾಲಕಿಯರು ನೀರುಪಾಲಾಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ಮಕ್ಕಳನ್ನು ರಕ್ಷಿಸಲಾಗದೆ ಪೋಷಕರು ಅಸಹಾಯಕರಾಗಿದ್ದರು.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

ರಾಜ್ಯಾದ್ಯಂತ ಹಲವೆಡೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ ಎನ್ನಲಾಗಿದೆ. ಇದರೊಟ್ಟಿಗೆ ಮೇ. 8ರವರೆಗೆ ಹೀಟ್‌ ವೇವ್‌ (Heat Wave) ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ ಇದ್ದರೂ ಕೆಲವೆಡೆ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಸೋಮವಾರದಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ (Karnataka Weather Forecast) ನೀಡಲಿದೆ.

ಈ ಜಿಲ್ಲೆಗಳಲ್ಲಿ ಬಿಸಿ ಬಿಸಿ ವಾತಾವರಣ

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 3 ದಿನಗಳವರೆಗೆ ಕರಾವಳಿಯಲ್ಲಿ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ.

ಇದನ್ನೂ ಓದಿ: Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

ದೇಹದ ಪ್ರತಿರೋಧಕ ಶಕ್ತಿಯನ್ನು ಕುಂದಿಸುವಂಥ ಹವಾಮಾನ ಯಾವುದೇ ದಿನಗಳಲ್ಲೂ ಎದುರಾಗಬಹುದು. ಅದಕ್ಕೇನು ಮಳೆಯೇ ಬೇಕು. ಚಳಿಯೇ ಇರಬೇಕು ಎಂದಿಲ್ಲ. ಈ ಬಿರು ಬೇಸಿಗೆಯಲ್ಲೂ ಕಾಟ ಕೊಡುವ ವೈರಸ್‌ಗಳು ತಪ್ಪುವುದಿಲ್ಲ. ಇದಕ್ಕಾಗಿ ಭದ್ರವಾದ ಪ್ರತಿರೋಧಕ ವ್ಯವಸ್ಥೆಯನ್ನ ನಮ್ಮ ದೇಹ ಹೊಂದಬೇಕಾಗುತ್ತದೆ. ಅದಿಲ್ಲದಿದ್ದರೆ ಬಿಸಿಲಾಘಾತ, ನಿರ್ಜಲೀಕರಣದಿಂದಲೂ ತಪ್ಪಿಸಿಕೊಳ್ಳುವುದಕ್ಕೆ ದೇಹ ಸೋಲುತ್ತದೆ. ಇಂಥ ದಿನಗಳಲ್ಲಿ ನಮ್ಮ ನೆರವಿಗೆ ಬರುವುದು ಹುಳಿ-ಸಿಹಿಯ ಬೆಟ್ಟದ ನೆಲ್ಲಿಕಾಯಿ. ವಿಟಮಿನ್‌ ಸಿ ಅಂಶವನ್ನು ಹೇರಳವಾಗಿ ತುಂಬಿಕೊಂಡಿರುವ ಈ ಪುಟ್ಟ ಕಾಯಿಗಳನ್ನು ಹಲವು ರೀತಿಯಲ್ಲಿ ಸೇವಿಸುವುದರಿಂದ ಬಿಸಿಲ ದಿನಗಳಲ್ಲಿ ದೇಹ ನಿತ್ರಾಣಗೊಳ್ಳದಂತೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತವಾಗದಂತೆ (summer Health Tips) ಕಾಪಾಡಿಕೊಳ್ಳಬಹುದು. ಬಿಸಿಲಿನ ದಿನಗಳಿಗೆ ಪೂರಕವಾಗುವಂತೆ ನೆಲ್ಲಿಕಾಯಿಯನ್ನು ಬಳಸುವುದು ಹೇಗೆ?

pudina gooseberry juice

ಪುದೀನಾ-ನೆಲ್ಲಿ ಪಾನಕ

ವಿಟಮಿನ್‌ ಸಿ, ಇ ಮತ್ತು ಎ, ನಾರು ಹಾಗೂ ವಿಟಮಿನ್‌ ಬಿ1 ಸತ್ವಗಳನ್ನು ಈ ಪಾನಕ ಭರಪೂರ ತುಂಬಿಕೊಂಡಿರುತ್ತದೆ. ಬೇಸಿಗೆಯಲ್ಲಿ ಕಾಡುವ ಜೀರ್ಣಾಂಗಗಳ ಸಮಸ್ಯೆಯಿಂದ ಮುಕ್ತಿ ನೀಡುವಂಥ ಪೇಯವಿದು. ಬೆಟ್ಟದ ನೆಲ್ಲಿಕಾಯಿಗೆ ಚಿಟಿಕೆ ಉಪ್ಪು ಮತ್ತು ಪುದೀನಾ ಎಲೆಗಳನ್ನು ಸೇರಿಸಿ ರುಬ್ಬಿ, ರಸ ತೆಗೆಯಿರಿ. ಇದಕ್ಕೆ ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಅಥವಾ ಹಾಗೆಯೇ ಕುಡಿಯುವವರು ಅಂತೆಯೇ ಕುಡಿಯಬಹುದು.

ನೆಲ್ಲಿ ಸ್ಮೂದಿ

ಇದಕ್ಕಾಗಿ ಮೊಸರು, ಬಾಳೆಹಣ್ಣು, ಕೊಂಚ ಪಾಲಕ್‌ ಎಲೆಗಳು ಮತ್ತು ನೆಲ್ಲಿಕಾಯಿಯನ್ನು ಬ್ಲೆಂಡರ್‌ಗೆ ಹಾಕಿ ತಿರುಗಿಸಿ. ಇದರನ್ನು ಸೋಸಬಾರದು. ಎಲ್ಲ ನಾರಿನಂಶ ಇರುವಂತೆಯೇ ಸೇವಿಸಬೇಕು. ಇದರಿಂದ ಬಾಳೆಹಣ್ಣಿನಲ್ಲಿರುವ ಶರ್ಕರಪಿಷ್ಟಗಳು, ಮೊಸರಿನಲ್ಲಿರುವ ಕೊಬ್ಬು ಮತ್ತು ಪ್ರೊಬಯಾಟಿಕ್‌ ಅಂಶಗಳು, ಪಾಲಕ್‌ನಲ್ಲಿರುವ ಖನಿಜಗಳು ಎಲ್ಲವೂ ನೆಲ್ಲಿ ಕಾಯಿಯ ಜೊತೆಗೆ ಹೊಟ್ಟೆ ಸೇರುತ್ತವೆ. ತೂಕ ಇಳಿಸುವವರು ಇದನ್ನು ಬೆಳಗಿನ ಉಪಹಾರವಾಗಿಯೂ ಸೇವಿಸಬಹುದು.

ನೆಲ್ಲಿ ಸಲಾಡ್‌

ಬೇಸಿಗೆಯಲ್ಲಿ ತಂಪಾದ ಸಲಾಡ್‌ಗಳು ಎಲ್ಲರಿಗೂ ಇಷ್ಟವಾಗುವಂಥವು. ಅದರಲ್ಲೂ ಹುಳಿ-ಸಿಹಿ ರುಚಿಯ ಸಲಾಡ್‌ಗಳು ಮತ್ತೂ ಇಷ್ಟವಾಗುತ್ತವೆ. ಇದಕ್ಕಾಗಿ ನೆಲ್ಲಿಕಾಯಿಯ ಜೊತೆ ಸೌತೇಕಾಯಿ, ದಾಳಿಂಬೆ, ಸೇಬು ಮತ್ತು ಮೊಳಕೆ ಬರಿಸಿದ ಹೆಸರು ಕಾಳುಗಳನ್ನು ತೆಗೆದುಕೊಳ್ಳಿ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಬೇಕಿದ್ದರೆ ಕೊಂಚ ಕಾಳುಮೆಣಸಿನ ಪುಡಿ ಸೇರಿಸಿ. ನಿಮ್ಮ ರುಚಿಕರ ಸಲಾಡ್‌ ಸಿದ್ಧ.

Image Of Gooseberry Benefits

ನೆಲ್ಲಿ ಪಾಪ್ಸಿಕಲ್‌

ತಂಪಾದ ಏನನ್ನು ಕೊಟ್ಟರೂ ಕೈಯೊಡ್ಡುವಂಥ ಸ್ಥಿತಿ ಈ ಬೇಸಿಗೆಯಲ್ಲಿ. ಅದರಲ್ಲೂ ಫ್ರೋಜನ್‌ ತಿಂಡಿಗಳು ಮತ್ತೂ ಇಷ್ಟವಾಗುತ್ತವೆ. ಪಾಪ್ಸಿಕಲ್‌ ರೂಪದಲ್ಲಿ ನಮಗೆ ಪ್ರಿಯವಾದ್ದನ್ನು ಸವಿಯುವುದು ಬೇರೆಯದೇ ಸೊಗಸನ್ನು ನೀಡುತ್ತದೆ. ನೆಲ್ಲಿಕಾಯನ್ನು ರುಬ್ಬಿ ರಸ ತೆಗೆಯಿರಿ. ಇದಕ್ಕೆ ಕೊಂಚ ಜೇನುತುಪ್ಪ ಮತ್ತು ಸಿಹಿ ಮೊಸರು ಬೆರೆಸಿ. ಈ ಮಿಶ್ರಣವನ್ನು ಪಾಪ್ಸಿಕಲ್‌ ಅಚ್ಚಿಗೆ ಸುರಿಯಿರಿ. ಫ್ರೀಜ್‌ ಮಾಡಿ ತೆಗೆದು ಬಾಯಿ ಚಪ್ಪರಿಸಿದರಾಯಿತು.

ಡಿಟಾಕ್ಸ್‌ ನೀರು

ಬರೀ ನೀರು ಕುಡಿಯುವುದಕ್ಕೆ ಸಾಧ್ಯವಿಲ್ಲ ಎನಿಸಿದರೆ, ಐದು ಲೀ ಪಾತ್ರೆಯಲ್ಲಿ ಹತ್ತಿಪ್ಪತ್ತು ಪುದೀನಾ ಎಲೆಗಳು, ಸೌತೆಕಾಯಿ ಗಾಲಿಗಳು ಮತ್ತು ನೆಲ್ಲಿಯ ತುಂಡುಗಳನ್ನು ಧಾರಾಳವಾಗಿ ಸೇರಿಸಿ. ಒಂದೆರಡು ತಾಸು ಹಾಗೆಯೇ ಬಿಡಿ. ನಂತರ ದಿನವಿಡೀ ಈ ನೀರು ಕುಡಿದು ಸಂತೃಪ್ತಿಯಿಂದಿರಿ. ಇದರಿಂದ ಜೀರ್ಣಾಂಗಗಳ ಕ್ಷಮತೆ ಹೆಚ್ಚುತ್ತದೆ.

indian gooseberry

ನೆಲ್ಲಿ ಐಸ್‌ ಟೀ

ಆರೆಂಟು ಪುದೀನಾ ಚಿಗುರುಗಳ ಜೊತೆಗೆ ನೆಲ್ಲಿ ಕಾಯಿಯ ತುಣುಕುಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ. ಇದು ಆರಿದ ಮೇಲೆ ಕೊಂಚ ಜೇನುತುಪ್ಪ ಸೇರಿಸಿ, ಫ್ರಿಜ್‌ನಲ್ಲಿಡಿ. ಬೇಕಾದಾಗ ಈ ಈ ಪೇಯವನ್ನು ತೆಗೆದು, ಕುಡಿದು ಸಂಭ್ರಮಿಸಿ. ನೆಲ್ಲಿಕಾಯಿಯನ್ನು ಅತಿಯಾಗಿ ಸೇವಿಸುವುದೂ ಸಮಸ್ಯೆಗಳನ್ನು ತರಬಹುದು. ಈಗಾಗಲೇ ತೂಕ ಕಡಿಮೆ ಇರುವವರು ಇನ್ನೂ ತೂಕ ಇಳಿದ ನಿದಾರ್ಶನಗಳಿವೆ. ಹಾಗಾಗಿ ತೂಕ ಇಳಿಸುವವರು ಇದನ್ನು ಸೇವಿಸಿದಷ್ಟು, ಕಡಿಮೆ ತೂಕದವರಿಗೆ ಬೇಕಾಗುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather :ಮಳೆಯ ಕಣ್ಣಾ ಮುಚ್ಚಾಲೆ ಆಟ; ವರುಣ ದೇವನ ತಲೆ ಮೇಲೆ ಹೊತ್ತು ತಿರುಗಿದ ಗ್ರಾ.ಪಂ ಪಿಡಿಒ

Karnataka Weather Forecast : ರಾಜ್ಯದಲ್ಲಿ ಆಗಾಗ ಮಳೆಯು (Rain News) ದರ್ಶನ ಕೊಡುತ್ತಿದ್ದರೂ, ಸೂರ್ಯನ ಶಾಖಕ್ಕೆ ಭೂಮಿ ಕಾದ ಕೆಂಡವಾಗುತ್ತಿದೆ. ಬಿಸಿಲ ಧಗೆಯು ಹೆಚ್ಚಾಗುತ್ತಲೇ ಇದ್ದು, ಮಳೆಗಾಗಿ ತಾವರೆಕೆರೆ ಗ್ರಾ.ಪಂ ಪಿಡಿಓ ವರುಣ ದೇವನನ್ನು ಪ್ರತಿಷ್ಠಾಪಿಸಿ ತಲೆ ಮೇಲೆ ಹೊತ್ತು ಪೂಜೆ ಸಲ್ಲಿಸಿದ್ದಾರೆ.

VISTARANEWS.COM


on

By

Karnataka Weather Forecast
ದೇವರ ಮೊರೆ ಹೋದ ತಾವರೆಕೆರೆ ಗ್ರಾ.ಪಂ ಪಿಡಿಒ
Koo

ತುಮಕೂರು/ಬೆಂಗಳೂರು: ಬಿಸಿಲ ಬೇಗೆಗೆ ಬೇಸತ್ತ ಜನರು ಮಳೆಗಾಗಿ (Rain News) ದೇವರ ಮೊರೆ ಹೋಗುತ್ತಿದ್ದಾರೆ. ಮಳೆರಾಯನ (Karnataka Weather Forecast) ಕಣ್ಣಾಮುಚ್ಚಾಲೆ ಆಟ ನಿಲ್ಲಿಸಲೆಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಮಳೆಗಾಗಿ ಪೂಜೆ ನಡೆದಿದೆ.

ತಾವರೆಕೆರೆ ಗ್ರಾ.ಪಂ ಪಿಡಿಒ ನಾಗರಾಜ್ ಅವರು ಸ್ವತಃ ಮಳೆರಾಯನ ಹೊತ್ತು ಜಲಾಭಿಷೇಕ ಮಾಡಿ ಪ್ರಾರ್ಥನೆ ಸಲ್ಲಿಸಿದರು. ವರುಣ ದೇವನನ್ನು ಪ್ರತಿಷ್ಠಾಪಿಸಿ ನಂತರ ತಲೆ ಮೇಲೆ ಹೊತ್ತು ಮನೆ ಮನೆಗೆ ಹೋಗಿ ಪ್ರಾರ್ಥನೆ ಸಲ್ಲಿಸಿದರು. ಭೀಕರ ಬರಗಾಲ ಹಿನ್ನೆಲೆಯಲ್ಲಿ ಮಳೆಗಾಗಿ ಪ್ರಾರ್ಥಿಸಿದರು.

ಇನ್ನೂ‌ ಶನಿವಾರದಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಚಾಮರಾಜನಗರದ ಎಂ.ಎಂ ಹಿಲ್ಸ್‌ನಲ್ಲಿ 4 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 44.7 ಡಿ.ಸೆ ದಾಖಲಾಗಿತ್ತು.

ಇದನ್ನೂ ಓದಿ: Heat Wave: ಬಿಸಿಲಿನ ಬೇಗೆಗೆ ಹೈರಾಣಾದ ದೇಶ; ಹಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲು

ಮತ್ತಷ್ಟು ದಿನ ಬಿಸಿಲ ತಾಪ

ರಣಬಿಸಿಲು, ಉಷ್ಣಗಾಳಿ ಹೊಡೆತಕ್ಕೆ ಜನರು ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಮತ್ತಷ್ಟು ದಿನ ಬಿಸಿಲ ತಾಪ ಹೆಚ್ಚಾಗಲಿದ್ದು, ಆರೋಗ್ಯದ ಕಾಳಜಿ ವಹಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಉಷ್ಣತೆಯು ಇದ್ದಕ್ಕಿದ್ದಂತೆ ತೀಕ್ಷ್ಣವಾಗಿ ಮೇಲೇರಿ, ತನ್ನ ಸಾಮಾನ್ಯ ಮಟ್ಟವನ್ನು ಮೀರುವುದನ್ನು ಶಾಖದ ಅಲೆಗಳು ಅಥವಾ ಹೀಟ್‌ವೇವ್‌ ಎನ್ನಲಾಗುತ್ತದೆ. ಸದ್ಯ ಸಾಮಾನ್ಯ ಮಟ್ಟವನ್ನು ಮೀರಿ, ಉಷ್ಣತೆ ಮೇಲೇರುವುದರಿಂದ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು. ಸುಸ್ತು, ಆಯಾಸ, ಎಚ್ಚರ ತಪ್ಪುವುದು ಆಗಲಿದೆ. ಹೀಗಾಗಿ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ.

ಮೇ.8ರವೆರೆಗೆ ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ ಮತ್ತು ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಲಿದೆ.

ಮಳೆ ಸೂಚನೆ ಇದ್ಯಾ?

ರಾಜ್ಯದ ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇದರ ಹೊರತಾಗಿಯೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಜತೆಗೆ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜಧಾನಿ ಬೆಂಗಳೂರಲ್ಲಿ ಮತ್ತೆ ತಾಪಮಾನ ಏರಿಕೆ

ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ನಿರ್ಮಲ ಆಕಾಶ ಇರಲಿದ್ದು, ಗರಿಷ್ಠ ಉಷ್ಣಾಂಶವು 39ರ ಗಡಿ ದಾಟಲಿದೆ.‌ ಜತೆಗೆ ಆಗಾಗ ಗಾಳಿ ವೇಗವು ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Karnataka Weather Forecast : ಗಂಟೆಗಳ ಕಾಲ ಮಳೆ ಸುರಿದರೂ ವಾತಾವರಣ ಮಾತ್ರ ಕಾದ ಕೆಂಡವಾಗಿಯೇ ಇದೆ. ರಾಜ್ಯಾದ್ಯಂತ ಕೆಲವೆಡೆ ಮಳೆ ಸೂಚನೆ (Rain News) ಇದ್ದರೂ, ಮುಕ್ಕಾಲು ಭಾಗದಲ್ಲಿ ತಾಪಮಾನ ಏರಿಕೆ ಮುಂದುವರಿಯಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ (Rain News) ಮಳೆಯಾಗಲಿದ್ದು, ಹವಾಮಾನ ಇಲಾಖೆ (Karnataka Weather Forecast) ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೊಂದೆಡೆ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು,ಕೊಪ್ಪಳ, ಕಲಬುರಗಿ ಹಾಗೂ ಹಾವೇರಿ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ. ಹೀಗಾಗಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನೂ ರಾಜಧಾನಿ ಬೆಂಗಳೂರಲ್ಲಿ ಮಳೆ ಇದ್ದರೂ ಬಿಸಿಲ ಧಗೆ ಕಡಿಮೆ ಆಗುವುದಿಲ್ಲ. ಹೀಗಾಗಿ ಬೆಂಗಳೂರು ನಗರವು ಸೇರಿ ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ತಾಪಮಾನ ಮುನ್ಸೂಚನೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿಯಂದು ವಾತಾವರಣ ಬೆಚ್ಚಗೆ ಇರಲಿದ್ದು, ಬಿಸಿಗಾಳಿ ಬೀಸಲಿದೆ. ಶಾಖ ತರಂಗ ಎಚ್ಚರಿಕೆಯನ್ನು ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಹೀಟ್‌ ವೇವ್‌ ಇರಲಿದೆ.

ಇದನ್ನೂ ಓದಿ: Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
assault case in bengaluru
ಬೆಂಗಳೂರು1 hour ago

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Prajwal Revanna Case site inspection by SIT team in HD Revanna Basavanagudi residence
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

No Diet Day 2024
ಆರೋಗ್ಯ2 hours ago

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

pakistan team
ಕ್ರೀಡೆ2 hours ago

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Gold Rate Today
ಕರ್ನಾಟಕ2 hours ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Puttakkana makkalu sahana dead
ಕಿರುತೆರೆ2 hours ago

Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

Rekha Jhunjhunwala
ವಾಣಿಜ್ಯ2 hours ago

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

viral news
ಕ್ರಿಕೆಟ್2 hours ago

Viral News: ಕ್ರಿಕೆಟ್‌ ಆಡುವಾಗ ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು; ವಿಡಿಯೊ ಇದೆ

Sunita Williams
ವಿದೇಶ3 hours ago

Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Namma Metro
ಬೆಂಗಳೂರು3 hours ago

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ21 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ22 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ23 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌