Blasphemy In Pakistan: ಧರ್ಮನಿಂದನೆ ಆರೋಪ, ವ್ಯಕ್ತಿಯನ್ನು ಜೈಲಿನಿಂದ ಎಳೆದು ಸುಟ್ಟುಹಾಕಿದ ಮೂಲಭೂತವಾದಿಗಳು - Vistara News

ಪ್ರಮುಖ ಸುದ್ದಿ

Blasphemy In Pakistan: ಧರ್ಮನಿಂದನೆ ಆರೋಪ, ವ್ಯಕ್ತಿಯನ್ನು ಜೈಲಿನಿಂದ ಎಳೆದು ಸುಟ್ಟುಹಾಕಿದ ಮೂಲಭೂತವಾದಿಗಳು

Blasphemy In Pakistan: ಇಸ್ಲಾಂ ಧರ್ಮಗ್ರಂಥಕ್ಕೆ ಅವಮಾನ ಎಸಗಿದ್ದಾನೆ ಎಂಬ ಕಾರಣಕ್ಕಾಗಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದರು. ಆದರೆ, ಉದ್ರಿಕ್ತ ಗುಂಪೊಂದು ಠಾಣೆಗೆ ನುಗ್ಗಿ, ವ್ಯಕ್ತಿಯನ್ನು ಹೊರಗೆ ಎಳೆದು ಹತ್ಯೆ ಮಾಡಿದೆ.

VISTARANEWS.COM


on

Blasphemy In Pakistan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ಲಾಮಾಬಾದ್‌: ಧರ್ಮದ ಅಮಲೇರಿಸಿಕೊಂಡಿರುವ ಭಯೋತ್ಪಾದಕರಿಗೆ ಆಶ್ರಯ ನೀಡಿದ ಪಾಕಿಸ್ತಾನ ಈಗ ಆರ್ಥಿಕವಾಗಿ ದಿವಾಳಿಯಾಗಿದೆ. ಹಣಕಾಸು ನೆರವು ನೀಡಿ ಎಂದು ಜಗತ್ತಿನ ಎದುರು ಭಿಕ್ಷಾಪಾತ್ರೆ ಹಿಡಿದು ನಿಂತಿದೆ. ಆಹಾರ ಸಾಮಗ್ರಿಗಳು ಸೇರಿ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಜನ ತತ್ತರಿಸಿದರೂ ನೆರೆರಾಷ್ಟ್ರದಲ್ಲಿ ಮೂಲಭೂತವಾದಿಗಳ ಉಪಟಳ ಮಾತ್ರ ಮುಂದುವರಿದಿದೆ. ಇದಕ್ಕೆ ಉದಾಹರಣೆ ಎಂಬಂತೆ, ಧರ್ಮನಿಂದನೆ (Blasphemy In Pakistan) ಆರೋಪದಿಂದಾಗಿ ಮೂಲಭೂತವಾದಿಗಳು ಪೊಲೀಸ್‌ ಠಾಣೆಗೆ ನುಗ್ಗಿ, ವ್ಯಕ್ತಿಯನ್ನು ಹೊರಗೆಳೆದು, ಆತನಿಗೆ ಬೆಂಕಿ ಹಚ್ಚಿ ಹತ್ಯೆಗೈದಿದ್ದಾರೆ. ಈ ವಿಡಿಯೊ ವೈರಲ್‌ ಆಗಿದೆ.

ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ನಂಕಾನ ಸಾಹಿಬ್‌ನಲ್ಲಿ ಫೆಬ್ರವರಿ ೧೧ರಂದು ಜನ ಪೊಲೀಸ್‌ ಠಾಣೆಗೆ ನುಗ್ಗಿ, ಆರೋಪಿಯನ್ನು ಹೊರಗೆ ಎಳೆದು ಕುಕೃತ್ಯ ಎಸಗಿದ್ದಾರೆ. ವಾರಿಸ್‌ ಇಸ್ಸಾ ಎಂಬ ವ್ಯಕ್ತಿಯು ಇಸ್ಲಾಂ ಧರ್ಮದ ಗ್ರಂಥಕ್ಕೆ ಅವಮಾನ ಮಾಡಿದ ಎಸಗಿದ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದರು. ಆದರೆ, ಕೆರಳಿದ ನೂರಾರು ಜನ ಪೊಲೀಸ್‌ ಠಾಣೆಗೆ ನುಗ್ಗಿ ಹಿಂಸಾಕೃತ್ಯ ಎಸಗಿದ್ದಾರೆ.

ನೂರಾರು ಜನ ನುಗ್ಗಿದ ಕಾರಣ ಠಾಣೆಯಲ್ಲಿದ್ದ ಪೊಲೀಸರಿಗೆ ಪರಿಸ್ಥಿತಿ ನಿಯಂತ್ರಣ ಮಾಡಲು ಆಗಿಲ್ಲ. ಠಾಣೆಗೆ ನುಗ್ಗಿದ ಜನ ವಾರಿಸ್‌ ಇಸ್ಸಾ ಎಂಬ ವ್ಯಕ್ತಿಯನ್ನು ಹೊರಗೆ ಎಳೆದುಕೊಂಡು ಬಂದಿದ್ದಾರೆ. ಆತನಿಗೆ ಮನಬಂದಂತೆ ಥಳಿಸಿ, ಬಟ್ಟೆ ಹರಿದು, ಬೆಂಕಿ ಹಚ್ಚಿದ್ದಾರೆ. ಉದ್ರಿಕ್ತ ಗುಂಪು ಮೈಮೇಲೆ ಎರಗಿ ಹಲ್ಲೆ ನಡೆಸಿದ ಕಾರಣ ಗಂಭೀರವಾಗಿ ಗಾಯಗೊಂಡಿದ್ದ ವಾರಿಸ್‌, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ.

ಇದನ್ನೂ ಓದಿ: Pakistan economic crisis : ಪಾಕಿಸ್ತಾನ 2024ರ ಮಾರ್ಚ್‌ ವೇಳೆಗೆ ದಿವಾಳಿ ಸಂಭವ : ವರದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಗ್ಯಾರಂಟಿ ಉಚಿತ, ಬೆಲೆಯೇರಿಕೆ ಖಚಿತ; ಪೆಟ್ರೋಲ್‌ ಬೆಲೆ ಏರಿಕೆಯಿಂದ ರಾಜ್ಯ ಸರ್ಕಾರಕ್ಕೆ ಎಷ್ಟು ಆದಾಯ?

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಕುರಿತು ಕಳೆದ ಮಾರ್ಚ್‌ನಲ್ಲಿಯೇ ಆರ್ಥಿಕ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ, ಮತಗಳು ಸಿಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಕಡತ ವಾಪಸ್‌ ಕಳುಹಿಸಿದ್ದರು. ಈಗ ಚುನಾವಣೆ ಮುಗಿದ ಕಾರಣ ಬೆಲೆಯೇರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 1 ಸಾವಿರ ಕೋಟಿ ರೂ. ಆದಾಯ ಲಭಿಸಲಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Siddaramaiah
Koo

ಬೆಂಗಳೂರು: ರಾಜ್ಯದ ಜನರಿಗೆ ಮತ್ತೊಂದು ಬೆಲೆಯೇರಿಕೆಯ ಬರೆಯನ್ನು ಕರ್ನಾಟಕ ಸರ್ಕಾರ ಎಳೆದಿದೆ. ಹೌದು, ಕರ್ನಾಟಕದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ (Petrol Diesel Price) ಮಾಡಿ ರಾಜ್ಯ ಸರ್ಕಾರ ಆದೇಶ (Karnataka Government) ಹೊರಡಿಸಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 250 ಕೋಟಿ ರೂ. ಹೆಚ್ಚುವರಿ ಆದಾಯ ಬರಲಿದೆ ಎಂದು ತಿಳಿದುಬಂದಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇರಿಕೆಯಿಂದ ರಾಜ್ಯ ಸರ್ಕಾರಕ್ಕೆ ವ್ಯಾಟ್‌ ರೂಪದಲ್ಲಿ ವರ್ಷಕ್ಕೆ 250 ಕೋಟಿ ರೂ. ಹೆಚ್ಚುವರಿ ಆದಾಯ ಸಿಗಲಿದೆ. ರಾಜ್ಯ ಹಣಕಾಸು ಇಲಾಖೆಯ ಮೂಲಗಳ ಪ್ರಕಾರ, ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ವ್ಯಾಟ್ ರೂಪದಲ್ಲಿ ವರ್ಷಕ್ಕೆ ರೂ. 9,500 ಕೋಟಿ ಆದಾಯವನ್ನು ಗಳಿಸುತ್ತದೆ. ಇದು ತಿಂಗಳಿಗೆ 800 ಕೋಟಿ ರೂ. ಆಗುತ್ತದೆ. ಇನ್ನು ಈಗ ಬೆಲೆಯೇರಿಕೆ ಮಾಡಿರುವುದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ವರ್ಷಕ್ಕೆ 9,750 ಕೋಟಿ ರೂ. ಸಿಗಲಿದೆ ಎಂದು ತಿಳಿದುಬಂದಿದೆ.

ಪ್ರಲ್ಹಾದ್‌ ಜೋಶಿ ಆಕ್ರೋಶ

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್‌ ಡೀಸೆಲ್‌ಗೆ ರಾಜ್ಯದ ಜನ 89.20 ರೂ. ನೀಡಬೇಕಾದರೆ, ಲೀಟರ್‌ ಪೆಟ್ರೋಲ್‌ಗೆ 103 ಆಗಲಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡಲಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇನ್ನು ಶೇ.18.44ರಷ್ಟು ತೆರಿಗೆ ವಸೂಲಿ ಮಾಡಲಿದೆ.

ಸೋಮವಾರದಿಂದ ಪ್ರತಿಭಟನೆ ಎಂದ ಬಿಜೆಪಿ

ರಾಜ್ಯ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಏರಿಕೆ ಮಾಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಸೋಮವಾರದಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. “ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಹಾಗಾಗಿ, ಬೆಲೆಯೇರಿಕೆ ಮೂಲಕ ಜನರ ಮೇಲೆ ಸಿಟ್ಟು ತೀರಿಸಿಕೊಳ್ಳಲಾಗುತ್ತಿದೆ. ಮೊದಲು ವಿದ್ಯುತ್‌ ಬೆಲೆ ಏರಿಕೆ ಮಾಡಿತು. ಆಮೇಲೆ ಸ್ಟ್ಯಾಂಪ್‌ ಡ್ಯೂಟಿ ಏರಿಸಲಾಯಿತು. ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ರಾಜ್ಯದ ಜನರಿಗೆ ಬರೆ ಹಾಕುತ್ತಿದ್ದಾರೆ. ಬೆಲೆ ಏರಿಕೆ ಖಂಡಿಸಿ ಸೋಮವಾರ ಪ್ರತಿಭಟನೆ ಮಾಡುತ್ತೇವೆ” ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

Continue Reading

ಪ್ರಮುಖ ಸುದ್ದಿ

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿ ಘೋಷಣೆ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ. ಒಟ್ಟು 23 ಸಾಹಿತಿಗಳಿಗೆ ಪ್ರಶಸ್ತಿ ನೀಡಲಾಗಿದ್ದು, ಕರ್ನಾಟಕದ ಇಬ್ಬರಿಗೂ ಪ್ರಶಸ್ತಿ ದೊರೆತಿದೆ.

VISTARANEWS.COM


on

Kendra Sahitya Akademi Award
Koo

ನವದೆಹಲಿ/ಬೆಂಗಳೂರು: ದೇಶದ 23 ಲೇಖಕರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು (Kendra Sahitya Akademi Award) ಘೋಷಣೆ ಮಾಡಲಾಗಿದ್ದು, ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ (Shruti BR) ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ (Krishnamurthy Biligere) ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ.

ಶ್ರುತಿ ಬಿ.ಆರ್.‌ ಅವರು ಚಿಕ್ಕಮಗಳೂರಿನ ತರೀಕೆರೆಯವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಕೆಎಎಸ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕವಯತ್ರಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇವರ ಮೊದಲ ಕವನ ಸಂಕಲನವಾದ ‘ಜೀರೋ ಬ್ಯಾಲೆನ್ಸ್’‌ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕಗಳೊಂದಿಗೆ ಪಡೆದಿದ್ದು, ಪಿಎಚ್‌.ಡಿಯನ್ನೂ ಪಡೆದಿದ್ದಾರೆ. ಇವರ ಲೇಖನಗಳು, ಕವಿತೆಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿಳಿಗೆರೆ ಅವರು ಇದೇ ಜಿಲ್ಲೆಯ ಹುಳಿಯಾರಿನ ಬಿಎಂಎಸ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾವಯವ ಕೃಷಿ, ಬೀಜ ನಾಟಿ, ನೀರು ಸಂಗ್ರಹ ಸೇರಿ ಹಲವು ಚಳವಳಿಗಳಲ್ಲೂ ಸಕ್ರಿಯರಾಗಿರುವ ಇವರು, ಸಾಹಿತ್ಯ ಕೃಷಿಯಲ್ಲೂ ನಾಡಿನಾದ್ಯಂತ ಹೆಸರು ಗಳಿಸಿದ್ದಾರೆ. ಕಾವ್ಯ, ಕತೆ, ನಾಟಕಗಳ ರಚನೆ ಮೂಲಕ ಇವರು ನಾಡಿನ ಮನೆಮಾತಾಗಿದ್ದಾರೆ. ಇವರಿಗೆ ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ದೊರೆತಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನೂ ಒಳಗೊಂಡ ತೀರ್ಪುಗಾರರ ಸಮಿತಿ ಮಾಡಿದ ಶಿಫಾರಸಿನಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಕನ್ನಡದ ಖ್ಯಾತ ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತದ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿತ್ತು. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಆನಂದ ಝುಂಜರವಾಡ ಮತ್ತು ಜೆ. ಎನ್. ತೇಜಶ್ರೀ ಅವರಿದ್ದರು.

ಇದನ್ನೂ ಓದಿ: Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Continue Reading

ಕರ್ನಾಟಕ

Actor Darshan: ದರ್ಶನ್‌ ಗ್ಯಾಂಗ್‌ಗೆ ಮತ್ತೆ 5 ದಿನ ಪೊಲೀಸ್‌ ಕಸ್ಟಡಿ; ಜಡ್ಜ್‌ ಮುಂದೆ ಪವಿತ್ರಾ ಗೌಡ ಕಣ್ಣೀರು!

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಈ ಮೊದಲು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು. ಇದೀಗ ಜೂನ್‌ 20ರವರೆಗೆ ಪೊಲೀಸ್‌ ಕಸ್ಟಡಿ ವಿಸ್ತರಿಸಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸ್‌ ಕಸ್ಟಡಿಯಲ್ಲಿದ್ದ ನಟ ದರ್ಶನ್‌ (Actor Darshan) ಸೇರಿ ಇತರ ಆರೋಪಿಗಳನ್ನು ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ಆದೇಶ ನೀಡಿದರು.

ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಅವರು ಕೇಸ್‌ನ ಬಗ್ಗೆ ನ್ಯಾಯಾಧೀಶರಿಗೆ ಮಾಹಿತಿ ನೀಡಿ, ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು ಕೋರಿದರು. ಮತ್ತೊಂದೆಡೆ ಪೊಲೀಸರು ಸ್ಥಳ ಮಹಜರು, ಸಾಕ್ಷ್ಯಗಳ ಕುರಿತ ವರದಿಯನ್ನು ಮುಚ್ಚಿನ ಲಕೋಟೆಯಲ್ಲಿ ನ್ಯಾಯಾಧೀಶರಿಗೆ ಸಲ್ಲಿಸಿದರು. ಬೆಂಗಳೂರು, ಚಿತ್ರದುರ್ಗದಲ್ಲಿ ಮಹಜರು ನಡೆದಿದೆ, ಆದರೆ, ಮೈಸೂರಿನಲ್ಲಿ ಮಹಜರು ಬಾಕಿ ಇದೆ. ಹೀಗಾಗಿ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ದರ್ಶನ್‌ ಪರ ವಕೀಲ ಅನಿಲ್ ಬಾಬು ವಾದ ಮಂಡಿಸಿ, ಆರೋಪಿಗಳಿಗೆ ವಿಚಾರಣೆ ವೇಳೆ ಹಿಂಸೆ ಕೊಟ್ಟಿದ್ದಾರೆ. ಮಹಿಳಾ ಆರೋಪಿ ಪವಿತ್ರಾ ಗೌಡಳನ್ನೂ 6 ದಿನ ವಿಚಾರಣೆ ನಡೆಸಲಾಗಿದೆ. ಎಲ್ಲದಕ್ಕೂ ದರ್ಶನ್‌ ಕಾರಣ ಎಂದರೆ ಹೇಗೆ? ವಿಚಾರಣೆ ಹಂತದಲ್ಲಿದ್ದಾಗಲೇ ದರ್ಶನ್‌ ಮೇಲೆ ಎಲ್ಲಾ ಅರೋಪಗಳನ್ನು ಮಾಡುವುದು ಎಷ್ಟು ಸರಿ? ಪವಿತ್ರಾ ಗೌಡ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ಆರೋಪಿಗಳ ಹೇಳಿಕೆಗಳೂ ಸೋರಿಕೆಯಾಗುತ್ತಿವೆ. ಹೀಗಾಗಿ ಮತ್ತೆ ಕಸ್ಟಡಿಗೆ ನೀಡುವುದು ಬೇಡ ಹೇಳಿದರು.

ಮತ್ತೊಂದೆಡೆ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮುಂದುವರಿಸಿ‌, ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ನೀಡಿ ಹಿಂಸೆ ನೀಡಲಾಗಿದೆ. ಆರೋಪಿಗಳು ಯಾವೆಲ್ಲಾ ಡಿವೈಸ್‌ ಬಳಿಸಿದ್ದಾರೋ, ಅವುಗಳನ್ನು ವಶಕ್ಕೆ ಪಡೆಯಬೇಕು. ಇದಕ್ಕೆ ಸಮಯಾವಕಾಶ ಬೇಕು. ಹೀಗಾಗಿ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.

ಈ ವೇಳೆ ಪವಿತ್ರಾ ಗೌಡ ಪರ ವಕೀಲ ನಾರಾಯಾಣಸ್ವಾಮಿ ಎಂಟ್ರಿಯಾಗಿ, ನನ್ನ ಕಕ್ಷಿದಾರರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ಕೊಟ್ಟಿಲ್ಲ ಎಂದು ಅಸಮಾಧಾನ ಹೊರಹಾಕಿದರು. ವಾದ-ಪ್ರತಿವಾದ ಅಲಿಸಿದ ಬಳಿಕ ನ್ಯಾಯಾಧೀಶರು, 10 ಆರೋಪಿಗಳನ್ನು ಜೂನ್‌ 20ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಿದರು. ಹೀಗಾಗಿ ಅನ್ನಪೂರ್ಣೆಶ್ವರಿ ಠಾಣೆಗೆ ಆರೋಪಿಗಳಿಗೆ ಕರೆದುಕೊಂಡು ಹೋಗಲಾಯಿತು.

ಇದಕ್ಕೂ ಮುನ್ನ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಂತರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಹಿಂದೆ ಕಸ್ಟಡಿಗೆ ನೀಡುವಾಗ ದರ್ಶನ್‌ ಕಣ್ಣೀರು ಹಾಕಿದ್ದರು. ಇದೀಗ ಕೋರ್ಟ್‌ಗೆ ಹಾಜರಾಗುತ್ತಿದ್ದಂತೆ ಎ 1 ಪವಿತ್ರಾ ಗೌಡ ಗಳಗಳನೆ ಅತ್ತಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಠಾಣೆಯಿಂದ ಎರಡು ಜೀಪ್‌ ಹಾಗೂ ಎರಡು ಕೆಎಸ್‌ಆರ್‌ಪಿ ಮಿನಿ ವ್ಯಾನ್‌ನಲ್ಲಿ ಆರೋಪಿಗಳನ್ನು ಕರೆದುಕೊಂಡು ಬರಲಾಗಿತ್ತು. ಆರೋಪಿಗಳನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಠಾಣೆ ಮುಂಭಾಗ ಹಾಗೂ ಕೋರ್ಟ್‌ ಬಳಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿತ್ತು.

ಏನಿದು ಪ್ರಕರಣ?

ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಜೂನ್‌ 9ರಂದು ಸುಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ಇದನ್ನೂ ಓದಿ | Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟ ದರ್ಶನ್‌ ಸೇರಿ 16 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಪವಿತ್ರಾ ಗೌಡ ಎ1, ದರ್ಶನ್‌ ಎ2 ಆಗಿದ್ದಾರೆ.

Continue Reading

ಪ್ರಮುಖ ಸುದ್ದಿ

Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Kendra Sahitya Akademi Award: ಮಾನಸ್‌ ರಂಜನ್‌ ಸಮಾಲ್‌ ಅವರು ರಚಿಸಿದ ಸಣ್ಣ ಕತೆಗಳ ಸಂಕಲನವಾದ ‘ಗಾಪ ಕಲಿಕಾ’ ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಾಗೆಯೇ, ಸಂಜಯ್‌ ಕುಮಾರ್‌ ಪಾಂಡಾ ಅವರ ‘ಹು ಬೈಯಾ’ ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇದು ಕೂಡ ಸಣ್ಣ ಕತೆಗಳ ಸಂಕಲನವಾಗಿದೆ. ಇಬ್ಬರ ಕೃತಿಗಳಿಗೂ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರಶಸ್ತಿ ಘೋಷಿಸಿದೆ/

VISTARANEWS.COM


on

Kendra Sahitya Akademi Award
Koo

ನವದೆಹಲಿ: ಒಡಿಶಾದ ಇಬ್ಬರು ಲೇಖಕರಿಗೆ 2024ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು (Kendra Sahitya Akademi Award 2024) ಅವರಿಗೆ ಘೋಷಣೆ ಮಾಡಲಾಗಿದೆ. ಒಡಿಶಾ ಲೇಖಕರಾದ ಮಾನಸ್‌ ರಂಜನ್‌ ಸಮಾಲ್‌ (Manas Ranjan Samal) ಹಾಗೂ ಸಂಜಯ್‌ ಕುಮಾರ್‌ ಪಾಂಡಾ (Sanjay Kumar Panda) ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ. ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ (Shruti BR) ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ (Krishnamurthy Biligere) ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಎರಡು ವಿಭಾಗಗಳಲ್ಲಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮಾನಸ್‌ ರಂಜನ್‌ ಸಮಾಲ್‌ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಪುರಸ್ಕಾರ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಂಜಯ್‌ ಕುಮಾರ್‌ ಪಾಂಡಾ ಅವರಿಗೆ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ ಘೋಷಿಸಲಾಗಿದೆ. ಮಾನಸ್‌ ರಂಜನ್‌ ಸಮಾಲ್‌ ಅವರು ರಚಿಸಿದ ಸಣ್ಣ ಕತೆಗಳ ಸಂಕಲನವಾದ ‘ಗಾಪ ಕಲಿಕಾ’ (Gapa Kalika) ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಾಗೆಯೇ, ಸಂಜಯ್‌ ಕುಮಾರ್‌ ಪಾಂಡಾ ಅವರ ‘ಹು ಬೈಯಾ’ (Hu Baia) ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇದು ಕೂಡ ಸಣ್ಣ ಕತೆಗಳ ಸಂಕಲನವಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನೂ ಒಳಗೊಂಡ ತೀರ್ಪುಗಾರರ ಸಮಿತಿ ಮಾಡಿದ ಶಿಫಾರಸಿನಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಕನ್ನಡದ ಖ್ಯಾತ ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತದ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿತ್ತು. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಆನಂದ ಝುಂಜರವಾಡ ಮತ್ತು ಜೆ. ಎನ್. ತೇಜಶ್ರೀ ಅವರಿದ್ದರು.

ಭಗವದ್ಗೀತೆಯ ಕುರಿತಾದ ‘ಮಹಾಯುದ್ದಕ್ಕೆ ಮುನ್ನ’ ಅವರ ಮೊದಲ ಪ್ರಕಟಿತ ಕೃತಿಯಾಗಿದೆ. ಭಾಗವತದ ಬಗ್ಗೆ ಬರೆದ ಸರಣಿ ಬರಹಗಳ ಸಂಕಲನ ‘ಸಂಪಿಗೆ ಭಾಗವತ’, ‘ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ’, ‘ಭವ ತಲ್ಲಣ’ ಅವರ ಇತರ ಕೃತಿಗಳಾಗಿವೆ. ಜತೆಗೆ, ಕನ್ನಡದ ಅನೇಕ ಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕವಾಗುತ್ತಲೇ ಇರುತ್ತವೆ.

ಇದನ್ನೂ ಓದಿ: All We Imagine As Light: ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ರಿಜೆಕ್ಟ್‌ ಮಾಡಿದ್ರಂತೆ ಕಾನ್‌ ಪ್ರಶಸ್ತಿ ವಿಜೇತೆ!

Continue Reading
Advertisement
Petrol Diesel Price
ಕರ್ನಾಟಕ43 mins ago

Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

Siddaramaiah
ಕರ್ನಾಟಕ1 hour ago

ಗ್ಯಾರಂಟಿ ಉಚಿತ, ಬೆಲೆಯೇರಿಕೆ ಖಚಿತ; ಪೆಟ್ರೋಲ್‌ ಬೆಲೆ ಏರಿಕೆಯಿಂದ ರಾಜ್ಯ ಸರ್ಕಾರಕ್ಕೆ ಎಷ್ಟು ಆದಾಯ?

Amazon India
ದೇಶ1 hour ago

Amazon India: ನೀರು ಕುಡಿಯುವಂತಿಲ್ಲ, ವಾಶ್ ರೂಮ್ ಗೆ ಹೋಗುವಂತಿಲ್ಲ; ಸಿಬ್ಬಂದಿಗೆ ಅಮೆಜಾನ್ ಕಂಪನಿ ತಾಕೀತು!

HD Kumaraswamy
ಕರ್ನಾಟಕ2 hours ago

HD Kumaraswamy: ಚನ್ನಪಟ್ಟಣ ಜನರನ್ನು ಯಾರೂ ಭಯಪಡಿಸಲು ಆಗಲ್ಲ; ಡಿಕೆ ಬ್ರದರ್ಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

Father's Day Fashion
ಫ್ಯಾಷನ್2 hours ago

Father’s Day Fashion: ಅಪ್ಪಂದಿರ ದಿನಕ್ಕೂ ಉಂಟು ಫ್ಯಾಷನ್‌ ಸ್ಟೇಟ್‌ಮೆಂಟ್ಸ್!

Kendra Sahitya Akademi Award
ಪ್ರಮುಖ ಸುದ್ದಿ2 hours ago

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

Period Pain Relief Food
ಆರೋಗ್ಯ2 hours ago

Period Pain Relief Food: ಪೀರಿಯಡ್‌ನ ನೋವು ನಿವಾರಣೆಗೆ ಈ ಆಹಾರಗಳು ಸೂಕ್ತ

karnataka Weather Forecast
ಮಳೆ2 hours ago

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

Actor Darshan
ಕರ್ನಾಟಕ2 hours ago

Actor Darshan: ದರ್ಶನ್‌ ಗ್ಯಾಂಗ್‌ಗೆ ಮತ್ತೆ 5 ದಿನ ಪೊಲೀಸ್‌ ಕಸ್ಟಡಿ; ಜಡ್ಜ್‌ ಮುಂದೆ ಪವಿತ್ರಾ ಗೌಡ ಕಣ್ಣೀರು!

Kendra Sahitya Akademi Award
ಪ್ರಮುಖ ಸುದ್ದಿ3 hours ago

Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ6 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 day ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌