Kannada Chalanachitra Cricket : ಕನ್ನಡ ಚಲನಚಿತ್ರ ಕಪ್​ ಕ್ರಿಕೆಟ್​ ಟೂರ್ನಿಯ ಟಿಕೆಟ್​ ಮಾರಾಟಕ್ಕೆ ನಟ ಸುದೀಪ್​ ಚಾಲನೆ - Vistara News

ಕ್ರಿಕೆಟ್

Kannada Chalanachitra Cricket : ಕನ್ನಡ ಚಲನಚಿತ್ರ ಕಪ್​ ಕ್ರಿಕೆಟ್​ ಟೂರ್ನಿಯ ಟಿಕೆಟ್​ ಮಾರಾಟಕ್ಕೆ ನಟ ಸುದೀಪ್​ ಚಾಲನೆ

ಫೆಬ್ರವರಿ 24 ಹಾಗೂ 25ರಂದು ಸ್ಯಾಂಡಲ್​ವುಡ್​ ನಟರ (Kannada Chalanachitra Cricket) ನಡುವಿನ ತಂಡಗಳ ಕ್ರಿಕೆಟ್​ ಟೂರ್ನಿ ನಡೆಯಲಿದೆ.

VISTARANEWS.COM


on

KCC
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್​ವುಡ್​ ನಟರು ಹಾಗೂ ಈ ಕ್ಷೇತ್ರದ ಎಲ್ಲ ಸದಸ್ಯರು ಭಾಗಿಯಾಗುವ ಕನ್ನಡ ಚಲನಚಿತ್ರ ಕಪ್​ನ (Kannada Chalanachitra Cricket) ಟಿಕೆಟ್​ ಮಾರಾಟ ಪ್ರಕ್ರಿಯೆಗೆ ನಟ ಕಿಚ್ಚ ಸುದೀಪ್​ ಅವರು ಭಾನುವಾರ ಚಾಲನೆ ಕೊಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಟಿಕೆಟ್​ ವಿತರಣೆ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಅವರು ಸಾಮಾಜಿಕ ಜಾಲತಾಣಗಳಲ್ಲೂ ಟಿಕೆಟ್ ವಿತರಣೆಯ ವೆಬ್​ಸೈಟ್ (https://in.ticketgenie.in/Tickets/KCC-2023)​ ಮಾಹಿತಿ ಹಂಚಿಕೊಂಡಿದ್ದಾರೆ.

ಫೆಬ್ರವರಿ 24 ಮತ್ತು 25ರಂದು ಕೆಸಿಸಿ ಕ್ರಿಕೆಟ್​ ಟೂರ್ನಮೆಂಟ್​ ನಡೆಯಲಿದೆ. ನಗರದ ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ಪಂದ್ಯ ಆಯೋಜನೆಗೊಂಡಿದೆ. ಫೆಬ್ರವರಿ 24 ರಂದು 4, 6 ಹಾಗೂ 8 ಗಂಟೆಗೆ ಪಂದ್ಯಗಳು ಆಯೋಜನೆಗೊಂಡಿವೆ. 25ರಂದು 2, 4 ಹಾಗೂ 6 ಗಂಟೆಗೆ ಪಂದ್ಯ ನಡೆಯಲಿವೆ. ಟಿಕೆಟ್​ ದರ 150 ರೂಪಾಯಿಯಿಂದ ಆರಂಭಗೊಂಡು 5000 ರೂಪಾಯಿ ತನಕ ನಿಗದಿಯಾಗಿದೆ.

ಇದನ್ನೂ ಓದಿ : Kiccha Sudeep : ವಾಲ್ಮೀಕಿ ಜಾತ್ರೆಗೆ ಬಾರದ ನಟ ಕಿಚ್ಚ ಸುದೀಪ್‌, ಸಿಟ್ಟಿಗೆದ್ದ ಅಭಿಮಾನಿಗಳಿಂದ ಭಾರಿ ದಾಂಧಲೆ, ಲಾಠಿಚಾರ್ಜ್‌

ಜಿ ಪಿಚ್ಚರ್ ಚಾನೆಲ್​ನಲ್ಲಿ ಪಂದ್ಯದ ನೇರಪ್ರಸಾರವಾಗಲಿದೆ. 30 ದೇಶಗಳಲ್ಲಿ ಪಂದ್ಯ ಪ್ರಸಾರವಾಗಲಿದೆ ಎಂದು ಸುದೀಪ್​ ಅವರು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಸಿನಿಮಾ ಕ್ಷೇತ್ರದವನ್ನು ಒಂದು ಕಡೆ ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇವೆ. ಇಲ್ಲೇನಾದರೂ ತಪ್ಪಾದರೆ ಅದನ್ನೇ ದೊಡ್ಡದು ಮಾಡಬೇಡಿ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris 2024 Olympics: ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದ ತರುಣ್‌ ವಿರುದ್ಧ ಟೀಕೆಗಳ ಸುರಿಮಳೆ

Paris 2024 Olympics: ನೆಟ್ಟಿಗರು ಭಾರತೀಯರ ಸಮವಸ್ತ್ರದ ವಿನ್ಯಾಸ ಕಳಪೆ ಗುಣಮಟ್ಟದ್ದಾಗಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜತೆಗೆ ಸಮವಸ್ತ್ರ ವಿನ್ಯಾಸಗೊಳಿಸಿದ ತರುಣ್‌ ತಹಿಲಿಯಾನಿಯ ಅವರನ್ನು ಟ್ರೋಲ್​ ಮಾಡಿದ್ದಾರೆ.

VISTARANEWS.COM


on

Paris 2024 Olympics
Koo

ಪ್ಯಾರಿಸ್‌: ಜಗತ್ತಿನ ಅತಿದೊಡ್ಡ ಕ್ರೀಡಾಕೂಟವಾದ ಪ್ಯಾರಿಸ್​ನಲ್ಲಿ(Paris 2024 Olympics) ನಡೆಯುತ್ತಿರುವ ಒಲಿಂಪಿಕ್ಸ್​ ಉದ್ಘಾಟನ ಸಮಾರಂಭದಲ್ಲಿ ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ(Team India’s Olympic Outfits) ಮಾಡಿದ್ದ ವಿನ್ಯಾಸಕಾರ ತರುಣ್‌ ತಹಿಲಿಯಾನಿಗೆ(Tarun Tahiliani) ನೆಟ್ಟಿಗರು ಹಿಗ್ಗಾಮುಗ್ಗಾ ಬೈದಿದ್ದಾರೆ. ಅಂಬಾನಿ ಮಗನ ಮದುವೆ ವಿಚಾರ ಬಂದಾಗ ನೀವು ಮಾಸ್ಟರ್‌ಪೀಸ್‌ ಆದ ಡ್ರೆಸ್‌ಗಳನ್ನು ವಿನ್ಯಾಸ ಮಾಡುತ್ತೀರಿ. ದೇಶದ ವಿಚಾರ ಬಂದಾಗ ಇಂಥ ಕೆಟ್ಟ ವಿನ್ಯಾಸದ ಡ್ರೆಸ್‌ ಮಾಡುತ್ತೀರಿ. ಭಾರತದ ಕ್ರೀಡಾಪಟುಗಳು ಧರಿಸಿದ್ದ ಸಮವಸ್ತ್ರಗಳು ಕಳೆಪೆ ಗುಣಮಟ್ಟದ್ದಾಗಿತ್ತು, ದೇಶಕ್ಕೆ ಅವಮಾನ ಮಾಡುವ ರೀತಿಯತ್ತು ಎಂದು ಟೀಕೆ ವ್ಯಕ್ತಪಡಿಸಿದ್ದಾರೆ.

ಪಥಸಂಚಲನಕ್ಕೂ ಮುನ್ನ ಧ್ವಜಧಾರಿಗಳಾದ ಪಿವಿ.ವಿ ಸಿಂಧು ಮತ್ತು ಶರತ್‌ ಕಮಲ್‌ ಸೇರಿದಂತೆ ಹಲವು ಭಾರತೀಯ ಕ್ರೀಡಾಪಟುಗಳು ಕೇಸರಿ, ಬಿಳಿ, ಹಸಿರು ಬಣ್ಣಗಳಿಂದ ವಿನ್ಯಾಸ ಮಾಡಲಾಗಿದ್ದ ಸಮವಸ್ತ್ರ ಧರಿಸಿದ್ದ ಚಿತ್ರಗಳನ್ನು ಹಂಚಿಕೊಂಡಿದ್ದರು. ಈ ಫೋಟೊ ಕಂಡ ನೆಟ್ಟಿಗರು ಭಾರತೀಯರ ಸಮವಸ್ತ್ರದ ವಿನ್ಯಾಸ ಕಳಪೆ ಗುಣಮಟ್ಟದ್ದಾಗಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜತೆಗೆ ಸಮವಸ್ತ್ರ ವಿನ್ಯಾಸಗೊಳಿಸಿದ ತರುಣ್‌ ತಹಿಲಿಯಾನಿಯ ಅವರನ್ನು ಟ್ರೋಲ್​ ಮಾಡಿದ್ದಾರೆ.

ಇದನ್ನೂ ಓದಿ Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

“ಡಾ. ನಂದಿತಾ ಅಯ್ಯರ್​ ಎನ್ನುವ ನೆಟ್ಟಿಗರೊಬ್ಬರು ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ, ‘ಹಲೋ ತರುಣ್‌ ತಹಲಿಯಾನಿ, ಇದಕ್ಕಿಂತ ಉತ್ತಮವಾದ ಸೀರೆಗಳನ್ನು ನಾನು ಮುಂಬೈನ ಬೀದಿಗಳಲ್ಲಿ ಬರೀ 200 ರೂಪಾಯಿಗೆ ನೋಡಿದ್ದೇನೆ. ಆದರೆ, ನೀವು ಡಿಸೈನ್‌ ಮಾಡಿದ್ದು ಸಮಾರಂಭಕ್ಕೆ ಧರಿಸುವ ಸೀರೆಗಳಾಗಿರಲಿಲ್ಲ. ಅತ್ಯಂತ ಕಳಪೆ ಮಟ್ಟದಿಂದ ಕೂಡಿದ ವಿನ್ಯಾಸ ಇದಾಗಿತ್ತು. ಇದನ್ನು ನೋಡುವಾಗ ಡೆಡ್‌ಲೈನ್‌ಗೆ ಮೂರು ನಿಮಿಷ ಬಾಕಿ ಇರುವಾಗ ತರಾತುರಿಯಲ್ಲಿ ಪ್ರಿಂಟ್​ ಮಾಡಿದ ಡಿಸೈನ್​ನಂತೆ ತೋರುತ್ತಿದೆ. ದೇಶದಲ್ಲಿರುವ ಶ್ರೀಮಂತ ಜವಳಿ ಸಂಸ್ಕೃತಿ ಹಾಗೂ ಸಂಪ್ರದಾಯಕ್ಕೆ ನೀವು ಮಾಡಿದ ಅವಮಾನ ಇದಾಗಿದೆ” ಎಂದು ಬರೆದುಕೊಂಡು ಟೀಕಿಸಿದ್ದಾರೆ.

ಇಂದು ಭಾರತದ ಸ್ಪರ್ಧೆಗಳ ವಿವರ

ಬ್ಯಾಡ್ಮಿಂಟನ್‌ (ಆರಂಭ: ಮಧ್ಯಾಹ್ನ 12.45)

ಪುರುಷರ ಸಿಂಗಲ್ಸ್‌ ಗ್ರೂಪ್‌ ಹಂತ: ಎಚ್‌.ಎಸ್‌. ಪ್ರಣಯ್‌, ಲಕ್ಷ್ಯ ಸೇನ್‌.

ಮಹಿಳಾ ಸಿಂಗಲ್ಸ್‌ ಗ್ರೂಪ್‌ ಹಂತ: ಪಿ.ವಿ. ಸಿಂಧು.

ಪುರುಷರ ಡಬಲ್ಸ್‌ ಗ್ರೂಪ್‌ ಹಂತ: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌.

ಮಹಿಳಾ ಡಬಲ್ಸ್‌ ಗ್ರೂಪ್‌ ಹಂತ: ತನಿಷಾ ಕ್ರಾಸ್ಟೊ-ಅಶ್ವಿ‌ನಿ ಪೊನ್ನಪ್ಪ.

ಶೂಟಿಂಗ್‌ (ಮಧ್ಯಾಹ್ನ12.45)

ಮಹಿಳೆಯರ 10 ಮೀ. ಏರ್‌ ಪಿಸ್ತೂಲ್‌ ಅರ್ಹತಾ ಸುತ್ತು: ಇಳವೆನಿಲ್‌ ವಲರಿವನ್‌, ರಮಿತಾ ಜಿಂದಲ್‌.

ಪುರುಷರ 10 ಮೀ. ಏರ್‌ ಪಿಸ್ತೂಲ್‌ ಫೈನಲ್‌
ಪುರುಷರ 10 ಮೀ. ಏರ್‌ ರೈಫ‌ಲ್‌ ಅರ್ಹತಾ ಸುತ್ತು:
 ಸಂದೀಪ್‌ ಸಿಂಗ್‌, ಅರ್ಜುನ್‌ ಬಬುಟ.(ಮಧ್ಯಾಹ್ನ 2.45)

ವನಿತೆಯರ 10 ಮೀ. ಏರ್‌ ಪಿಸ್ತೂಲ್‌ ಫೈನಲ್‌: ಮನು ಭಾಕರ್‌ (ಮಧ್ಯಾಹ್ನ, 3.30)

ಆರ್ಚರಿ

ಮಹಿಳೆಯರ ತಂಡ ಸ್ಪರ್ಧೆ, 16ರ ಸುತ್ತು: ದೀಪಿಕಾ ಕುಮಾರಿ, ಅಂಕಿತಾ ಭಕತ್‌, ಭಜನ್‌ ಕೌರ್‌. (ಮಧ್ಯಾಹ್ನ 1.00)

ಮಹಿಳಾ ತಂಡದ ಕಂಚಿನ ಸ್ಪರ್ಧೆ.(ರಾತ್ರಿ 8.18)

ಮಹಿಳಾ ತಂಡದ ಚಿನ್ನದ ಸ್ಪರ್ಧೆ.(ರಾತ್ರಿ 8.41)

ರೋಯಿಂಗ್​


ಪುರುಷರ ಸಿಂಗಲ್‌ ಸ್ಕಲ್ಸ್‌ ರೆಪಿಶಾಜ್‌ ಸುತ್ತು: ಬಲ್ರಾಜ್‌ ಪನ್ವರ್‌.(ಮಧ್ಯಾಹ್ನ 1.06)

ಟೇಬಲ್‌ ಟೆನಿಸ್

ಪುರುಷರ ಸಿಂಗಲ್ಸ್‌: ಶರತ್‌ ಕಮಲ್‌, ಹರ್ಮೀತ್‌ ದೇಸಾಯಿ.

ಮಹಿಳಾ ಸಿಂಗಲ್ಸ್‌: ಮಣಿಕಾ ಬಾತ್ರಾ, ಶ್ರೀಜಾ ಅಕುಲಾ.(ಮಧ್ಯಾಹ್ನ 1.30)

ಬಾಕ್ಸಿಂಗ್‌


ಪುರುಷರ 51 ಕೆಜಿ, 32ರ ಸುತ್ತು: ಅಮಿತ್‌ ಪಂಘಲ್‌.(ಮಧ್ಯಾಹ್ನ 2.30)

ಪುರುಷರ 71 ಕೆಜಿ, 32ರ ಸುತ್ತು: ನಿಶಾಂತ್‌ ದೇವ್‌.(ಮಧ್ಯಾಹ್ನ 3.02)

ಮಹಿಳೆಯರ 50 ಕೆಜಿ, 32ರ ಸುತ್ತು: ನಿಖತ್‌ ಜರೀನ್‌ (ಸಂಜೆ 4.06)

ಈಜು


ಪುರುಷರ 100 ಮೀ. ಬ್ಯಾಕ್‌ಸ್ಟ್ರೋಕ್‌ ಹೀಟ್ಸ್‌: ಶ್ರಿಹರಿ ನಟರಾಜ್‌.

ವನಿತೆಯರ 200 ಮೀ. ಫ್ರೀಸ್ಟೈಲ್‌ ಹೀಟ್ಸ್‌: ಧಿನಿಧಿ ದೇಸಿಂಗೂ. (ಮಧ್ಯಾಹ್ನ 2.30)

ಪುರುಷರ 100 ಮೀ. ಬ್ಯಾಕ್‌ಸ್ಟ್ರೋಕ್‌ ಸೆಮಿಫೈನಲ್‌. (ತಡರಾತ್ರಿ 1.02)

ಮಹಿಳೆಯರ 200 ಮೀ. ಫ್ರೀಸ್ಟೈಲ್‌ ಸೆಮಿಫೈನಲ್‌.(ತಡರಾತ್ರಿ 1.20.)

ಟೆನಿಸ್‌

ಪುರುಷರ ಸಿಂಗಲ್ಸ್‌ ಮೊದಲ ಸುತ್ತು: ಸುಮಿತ್‌ ನಾಗಲ್‌.

ಪುರುಷರ ಡಬಲ್ಸ್‌: ರೋಹನ್‌ ಬೋಪಣ್ಣ-ಶ್ರೀರಾಮ್‌ ಬಾಲಾಜಿ(ಮಧ್ಯಾಹ್ನ 3.30)

Continue Reading

ಕ್ರೀಡೆ

IND vs SL: ಗ್ಲೆನ್​ ಮ್ಯಾಕ್ಸ್​ವೆಲ್​ ಟಿ20 ವಿಶ್ವ ದಾಖಲೆ ಮುರಿದ ಸೂರ್ಯಕುಮಾರ್

IND vs SL: 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 200+ ಸ್ಟ್ರೈಕ್ ರೇಟ್​ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಈ ವೇಳೆ ಆಸ್ಟ್ರೇಲಿಯಾದ ಗ್ಲೆನ್​ ಮ್ಯಾಕ್ಸ್​ವೆಲ್​ ದಾಖಲೆ ಪತನಗೊಂಡಿತು.

VISTARANEWS.COM


on

IND vs SL
Koo

ಪಲ್ಲೆಕೆಲೆ: ಶನಿವಾರ ನಡೆದಿದ್ದ ಶ್ರೀಲಂಕಾ(IND vs SL) ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ಶುಭಾರಂಭ ಮಾಡಿದೆ. ಇದೇ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ನಡೆಸಿ ಅರ್ಧಶತಕ ಬಾರಿಸಿದ ಟೀಮ್​ ಇಂಡಿಯಾದ ನೂತನ ನಾಯಕ ಸೂರ್ಯಕುಮಾರ್​ ಯಾದವ್(​Suryakumar Yadav) ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಟಾಸ್​ ಸೋತು ಮೊದಲು ಬ್ಯಾಟಿಂಗ್​ ಆರಂಭಿಸಿದ ಭಾರತ ತಂಡಕ್ಕೆ ಆರಂಭಿಕರಾದ ಜೈಸ್ವಾಲ್‌-ಗಿಲ್‌ ಸೇರಿಕೊಂಡು ಲಂಕಾ ದಾಳಿಯನ್ನು ಪುಡಿಗಟ್ಟಿದರು. ಆ ಬಳಿಕ ನಾಯಕ ಸೂರ್ಯಕುಮಾರ್​ ಬ್ಯಾಟಿಂಗ್​ ಅಬ್ಬರ ಆರಂಭವಾಯಿತು. ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 200+ ಸ್ಟ್ರೈಕ್ ರೇಟ್​ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಈ ವೇಳೆ ಆಸ್ಟ್ರೇಲಿಯಾದ ಗ್ಲೆನ್​ ಮ್ಯಾಕ್ಸ್​ವೆಲ್​ ದಾಖಲೆ ಪತನಗೊಂಡಿತು.

ಮ್ಯಾಕ್ಸ್​ವೆಲ್(Glenn Maxwell)​ ಒಟ್ಟು 8 ಬಾರಿ 200+ ಸ್ಟ್ರೈಕ್ ರೇಟ್​ನಲ್ಲಿ ಅರ್ಧಶತಕಕ್ಕಿಂತ ಹೆಚ್ಚಿನ ರನ್ ಕಲೆಹಾಕಿದ್ದರು. ಆದರೆ, ಇದೀಗ ಸೂರ್ಯಕುಮಾರ್ 66 ಇನಿಂಗ್ಸ್ ಆಡಿ 9 ಬಾರಿ 200+ ಸ್ಟ್ರೈಕ್ ರೇಟ್​ನಲ್ಲಿ 50 ಕ್ಕಿಂತ ಹೆಚ್ಚಿನ ರನ್ ಬಾರಿಸುವ ಮೂಲಕ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ಸೂರ್ಯ ಈ ಪಂದ್ಯದಲ್ಲಿ 26 ಎಸೆತಗಳಿಂದ 58 ರನ್​ ಚಚ್ಚಿದರು. ಅವರ ಈ ಅಬ್ಬರದ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್​ ಸಿಡಿಯಿತು.

ಇದನ್ನೂ ಓದಿ INDW vs SLW Final: ಇಂದು ಭಾರತ-ಲಂಕಾ ಏಷ್ಯಾ ಕಪ್​ ಫೈನಲ್​; 8ನೇ ಟ್ರೋಫಿ ಮೇಲೆ ಕಣ್ಣಿಟ್ಟ ಹರ್ಮನ್​ಪ್ರೀತ್​​ ಪಡೆ  

ಕೊಹ್ಲಿ ದಾಖಲೆ ಸರಿಗಟ್ಟಿದ ಸೂರ್ಯ


ಈ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಸೂರ್ಯಕುಮಾರ್​ ಅವರು ವಿರಾಟ್​ ಕೊಹ್ಲಿ ದಾಖಲೆಯೊಂದನ್ನು ಸರಿಗಟ್ಟಿದರು. ಹೌದು, ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನ ಪಡೆದರು. ಕೊಹ್ಲಿ ಮತ್ತು ಸೂರ್ಯ ಒಟ್ಟು 16 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಸೂರ್ಯ ಅವರು 69 ಪಂದ್ಯಗಳಲ್ಲಿ ಈ ಸಾಧನೆ ಮಾಡಿದರೆ, ಕೊಹ್ಲಿ 125 ಪಂದ್ಯಗಳನ್ನು ಆಡಿದ್ದಾರೆ.

ಮೊದಲು ಬ್ಯಾಟಿಂಗ್​ ನಡೆಸಿದ ಭಾರತ 7 ವಿಕೆಟಿಗೆ 213 ರನ್‌ ಪೇರಿಸಿದರೆ, ಶ್ರೀಲಂಕಾ 19.2 ಓವರ್‌ಗಳಲ್ಲಿ 170ಕ್ಕೆ ಆಲೌಟ್‌ ಆಯಿತು. ಭಾರತ 43 ರನ್ನುಗಳ ಗೆಲುವು ಸಾಧಿಸಿತು. ಲಂಕಾ ತಂಡದ ಆರಂಭ ನೋಡುವಾಗ ಪಂದ್ಯವನ್ನು ಗೆಲ್ಲಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಪಥುಮ್‌ ನಿಸ್ಸಂಕ-ಕುಸಲ್‌ ಮೆಂಡಿಸ್‌ 8.4 ಓವರ್‌ಗಳಿಂದ 84 ರನ್‌ ಪೇರಿಸಿ ಅಪಾಯಕಾರಿಯಾಗಿ ಗೋಚರಿಸಿದ್ದರು. ನಿಸ್ಸಂಕ 48 ಎಸೆತಗಳಿಂದ 79 (7 ಬೌಂಡರಿ, 4 ಸಿಕ್ಸರ್‌), ಮೆಂಡಿಸ್‌ 45 ರನ್‌ ಬಾರಿಸಿದರು. ರಿಯಾನ್​ ಪರಾಗ್‌ ಕೇವಲ 5 ರನ್‌ ವೆಚ್ಚದಲ್ಲಿ 3 ವಿಕೆಟ್‌ ಉರುಳಿಸಿದ್ದು ಪಂದ್ಯದ ಗತಿಯನ್ನೇ ಬದಲಿಸಿತು. ಭಾರತ ಗೆಲುವಿನ ನಗೆ ಬೀರಿತು. ದ್ವಿತೀಯ ಪಂದ್ಯ ಇಂದು ನಡೆಯಲಿದೆ.

Continue Reading

ಪ್ರಮುಖ ಸುದ್ದಿ

INDW vs SLW Final: ಇಂದು ಭಾರತ-ಲಂಕಾ ಏಷ್ಯಾ ಕಪ್​ ಫೈನಲ್​; 8ನೇ ಟ್ರೋಫಿ ಮೇಲೆ ಕಣ್ಣಿಟ್ಟ ಹರ್ಮನ್​ಪ್ರೀತ್​​ ಪಡೆ  

INDW vs SLW Final: ದಾಂಬುಲಾದ ರಂಗಿರಿ ಕ್ರಿಕೆಟ್​ ಸ್ಟೇಡಿಯಂನ ಪಿಚ್​ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಾಗಿ ಸಹಕಾರಿಯಾಗಿದೆ. ಅದರಲ್ಲೂ ಈ ಪಂದ್ಯ ಹಗಲು ರಾತ್ರಿ ನಡೆಯುವ ಕಾರಣ ಸ್ಪಿನ್ನಿಗೆ ಹೆಚ್ಚು ನೆರವು ನೀಡುತ್ತದೆ. ಹೀಗಾಗಿ ಇತ್ತಂಡಗಳು ಕೂಡ ಟಾಸ್​ ಗೆದ್ದರೆ ಚೇಸಿಂಗ್​ ಹಾಗೂ ಸ್ಪಿನ್​ ಬೌಲಿಂಗ್​ಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಸಾಧ್ಯತೆ ಇದೆ.

VISTARANEWS.COM


on

INDW vs SLW Final
Koo

ದಾಂಬುಲಾ,(ಶ್ರೀಲಂಕಾ): ಇಂದು ನಡೆಯುವ 9ನೇ ಆವೃತ್ತಿಯ ಮಹಿಳಾ ಏಷ್ಯಾಕಪ್​ ಫೈನಲ್​(Womens Asia Cup Final) ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಮತ್ತು ಹಾಲಿ ಚಾಂಪಿಯನ್​ ಭಾರತ(India Women vs Sri Lanka Women Final) ಮುಖಾಮುಖಿಯಾಗಲಿವೆ. 7 ಬಾರಿಯ ಚಾಂಪಿಯನ್​ ಭಾರತವೇ(INDW vs SLW Final) ಈ ಬಾರಿಯ ಪ್ರಶಸ್ತಿ ಗೆಲ್ಲುವ ಹಾಟ್‌ ಫೇವರಿಟ್‌ ಆಗಿದೆ. ಅತ್ತ ಆತಿಥೇಯ ಲಂಕಾ ಚೊಚ್ಚಲ ಪ್ರಶಸ್ತಿ ಗೆಲ್ಲುವ ಇದಾರೆಯಲ್ಲಿದೆ. ಹೀಗಾಗಿ ಈ ಪಂದ್ಯದವನ್ನು ಹೈವೋಲ್ಟೇಜ್​ ಎಂದು ನಿರೀಕ್ಷೆ ಮಾಡಬಹುದು.

ಭಾರತ ಪರ ಬ್ಯಾಟಿಂಗ್​ನಲ್ಲಿ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ ಮತ್ತು ಸ್ಮೃತಿ ಮಂಧಾನ ಎಲ್ಲ ಪಂದ್ಯಗಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಶಫಾಲಿ 184 ರನ್​ ಗಳಿಸಿ ಕೂಟದ ಅತ್ಯಧಿಕ ರನ್​ ಗಳಿಸಿದ ಆಟಗಾರ್ತಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಬೌಲಿಂಗ್ ವಿಭಾಗ ತುಂಬಾನೆ ಘಾತಕವಾಗಿದೆ. ಸ್ಪಿನ್ನ್​ ಮತ್ತು ವೇಗದ ವಿಭಾಗದಲ್ಲಿ ಸಮತೋಲಿತವಾಗಿದೆ. ರಾಧಾ ಯಾದವ್​, ಆಲ್​ರೌಂಡರ್​ ದೀಪ್ತಿ ಶರ್ಮಾ ತಂಡದ ಸ್ಪಿನ್ನರ್​ಗಳಾದರೆ, ವೇಗಿ ರೇಣುಕಾ ಸಿಂಗ್​ ಮತ್ತು ಪೂಜಾ ವಸ್ತ್ರಾಕರ್​ ವೇಗಿಗಳಾಗಿದ್ದಾರೆ.

ಎದುರಾಳಿ ಶ್ರೀಲಂಕಾವನ್ನು ಕಡೆಗಣಿಸುವಂತಿಲ್ಲ. ಕೂಟದ ಗರಿಷ್ಠ ಸ್ಕೋರರ್​ ಎನಿಸಿಕೊಂಡಿರುವ ನಾಯಕಿ ಚಾಮರಿ ಅತಪಟ್ಟು ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಒಂದು ಶತಕ ಕೂಡ ಬಾರಿಸಿದ್ದಾರೆ. ಆಡಿದ 4 ಪಂದ್ಯಗಳಿಂದ 243 ರನ್​ ಕಲೆ ಹಾಕಿದ್ದಾರೆ. ಇವರು ಸಿಡಿದು ನಿಂತರೆ ಪಂದ್ಯದ ಗತಿಯೇ ಬದಲಾಗಬಹುದು. ಹೀಗಾಗಿ ಇವರನ್ನು ಹೆಚ್ಚು ಹೊತ್ತು ಕ್ರೀಸ್​ ಆಕ್ರಮಿಸದಂತೆ ಭಾರತೀಯ ಬೌಲರ್​ಗಳು ನೋಡಿಕೊಳ್ಳುವ ಅಗತ್ಯವಿದೆ.

ದಾಂಬುಲಾದ ರಂಗಿರಿ ಕ್ರಿಕೆಟ್​ ಸ್ಟೇಡಿಯಂನ ಪಿಚ್​ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಾಗಿ ಸಹಕಾರಿಯಾಗಿದೆ. ಅದರಲ್ಲೂ ಈ ಪಂದ್ಯ ಹಗಲು ರಾತ್ರಿ ನಡೆಯುವ ಕಾರಣ ಸ್ಪಿನ್ನಿಗೆ ಹೆಚ್ಚು ನೆರವು ನೀಡುತ್ತದೆ. ಹೀಗಾಗಿ ಇತ್ತಂಡಗಳು ಕೂಡ ಟಾಸ್​ ಗೆದ್ದರೆ ಚೇಸಿಂಗ್​ ಹಾಗೂ ಸ್ಪಿನ್​ ಬೌಲಿಂಗ್​ಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

ಇದುವರೆಗಿನ ಮಹಿಳಾ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಮತ್ತು ಶ್ರೀಲಂಕಾ 5 ಬಾರಿ ಫೈನಲ್​ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತವೇ ಗೆದ್ದು ಬೀಗಿದೆ. ಈ ಬಾರಿಯದ್ದು 6ನೇ ಮುಖಾಮುಖಿ. ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

ಸಂಭಾವ್ಯ ತಂಡಗಳು


ಶ್ರೀಲಂಕಾ: ವಿಶ್ಮಿ ಗುಣರತ್ನೆ, ಚಾಮರಿ ಅಟಪಟ್ಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಹಾಸಿನಿ ಪೆರೇರಾ, ಅನುಷ್ಕಾ ಸಂಜೀವನಿ (ವಾಕ್), ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಇನೋಶಿ ಪ್ರಿಯದರ್ಶನಿ, ಉದೇಶಿಕಾ ಪ್ರಬೋಧನಿ, ಸುಗಂದಿಕಾ ಕುಮಾರಿ, ಅಚಿನಿ ಕುಲಸೂರ್ಯ.

ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಉಮಾ ಚೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೀ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್, ರೇಣುಕಾ ಠಾಕೂರ್ ಸಿಂಗ್.

Continue Reading

ಪ್ರಮುಖ ಸುದ್ದಿ

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Paris Olympics 2024 : ನಾಯಕ ಹರ್ಮನ್​ ಪ್ರೀತ್ ಸಿಂಗ್ ಗಳಿಸಿದ ಪೆನಾಲ್ಟಿ ಸ್ಟ್ರೋಕ್ ಗೋಲಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಪುನರಾಗಮನ ಮಾಡಿತು. ಪ್ಯಾರಿಸ್ ಕ್ರೀಡಾಕೂಟದ ನಂತರ ನಿವೃತ್ತಿ ಘೋಷಿಸುವುದಾಗಿ ಘೋಷಿಸಿದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ ಅವರು ನ್ಯೂಜಿಲೆಂಡ್ ಗೆ 7 ಪೆನಾಲ್ಟಿ ಕಾರ್ನರ್ ಗಳನ್ನು ನಿರಾಕರಿಸಿ ಮಿಂಚಿದರು.

VISTARANEWS.COM


on

Paris Olympics 2024
Koo

ಬೆಂಗಳೂರು: ಭಾರತದ ಪುರುಷರ ಹಾಕಿ ತಂಡ ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024) ತನ್ನ ಮೊದಲ ಪಂದ್ಯದಲ್ಲಿ ರೋಚಕ ಗೆಲುವಿನೊಂದಿಗೆ ತನ್ನ ಅಭಿಯಾನ ಪ್ರಾರಂಭಿಸಿದೆ. ಫ್ರೆಂಚ್ ರಾಜಧಾನಿಯ ಯೆವೆಸ್-ಡು-ಮನೋಯಿರ್ ಸ್ಟೇಡಿಯಂ 2 ರಲ್ಲಿ ಶನಿವಾರ (ಜುಲೈ 27) ನಡೆದ ಗುಂಪು ‘ಬಿ’ ಆರಂಭಿಕ ಪಂದ್ಯದಲ್ಲಿ ಹರ್ಮನ್​ಪ್ರೀತ್​ ಸಿಂಗ್ ಪಡೆ ಮೊದಲ ಕ್ವಾರ್ಟರ್​ನಲ್ಲಿ 0-1 ಅಂತರದ ಹಿನ್ನಡೆ ಎದುರಿಸಿದರೂ ಅಂತಿಮವಾಗಿ 3-2 ಅಂತರದಿಂದ ಗೆದ್ದುಕೊಂಡಿತು. ಮೊದಲ ಕ್ವಾರ್ಟರ್ನಲ್ಲಿ ಭಾರತ ತಂಡ ಹಿನ್ನಡೆ ಅನುಭವಿಸಿದರೂ, ಎರಡನೇ ಮತ್ತು ಮೂರನೇ ಕ್ವಾರ್ಟರ್​ನಲ್ಲಿ ಮನ್ದೀಪ್ ಸಿಂಗ್ ಮತ್ತು ವಿವೇಕ್ ಸಾಗರ್ ಪ್ರಸಾದ್ ಗಳಿಸಿದ ಗೋಲುಗಳ ನೆರವಿನಿಂದ ಭಾರತ ಮೇಲುಗೈ ಸಾಧಿಸಿತು.

ನಾಯಕ ಹರ್ಮನ್​ ಪ್ರೀತ್ ಸಿಂಗ್ ಗಳಿಸಿದ ಪೆನಾಲ್ಟಿ ಸ್ಟ್ರೋಕ್ ಗೋಲಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಪುನರಾಗಮನ ಮಾಡಿತು. ಪ್ಯಾರಿಸ್ ಕ್ರೀಡಾಕೂಟದ ನಂತರ ನಿವೃತ್ತಿ ಘೋಷಿಸುವುದಾಗಿ ಘೋಷಿಸಿದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ ಅವರು ನ್ಯೂಜಿಲೆಂಡ್ ಗೆ 7 ಪೆನಾಲ್ಟಿ ಕಾರ್ನರ್ ಗಳನ್ನು ನಿರಾಕರಿಸಿ ಮಿಂಚಿದರು.

ಮುಂದಿನ ಪಂದ್ಯಗಳಲ್ಲಿ ಕಠಿಣ ಪರೀಕ್ಷೆಗಳನ್ನು ಎದುರಿಸಬೇಕಾಗಿರುವುದರಿಂದ ಪೂಲ್ ಬಿ ಯ ಆರಂಭಿಕ ಪಂದ್ಯದಲ್ಲಿ ಭಾರತಕ್ಕೆ ನಿರ್ಣಾಯಕ ಗೆಲುವಾಗಿದೆ. ಆಸ್ಟ್ರೇಲಿಯಾ, ಬೆಲ್ಜಿಯಂ, ಅರ್ಜೆಂಟೀನಾ ಮತ್ತು ಐರ್ಲೆಂಡ್ ತಂಡಗಳೊಂದಿಗೆ ಭಾರತ ‘ಪೂಲ್’ ನಲ್ಲಿ ಡ್ರಾ ಸಾಧಿಸಿದೆ. ಆರಂಭಿಕ ದಿನದ ಗೆಲುವಿನ ನಂತರ ಭಾರತವು ತಮ್ಮ ಪೂಲ್​ನಲ್ಲಿ ಎರಡನೇ ಸ್ಥಾನಕ್ಕೆ ಏರಿತು.

8ನೇ ನಿಮಿಷಕ್ಕೆ ಹಿನ್ನಡೆ

8ನೇ ನಿಮಿಷದ ಆರಂಭದಲ್ಲೇ ಭಾರತ 0-1ರ ಹಿನ್ನಡೆ ಅನುಭವಿಸಿತ್ತು. ಗ್ರೇಗ್ ಫುಲ್ಟನ್ ಅವರ ನೇತೃತ್ವದ ನ್ಯೂಜಿಲ್ಯಾಂಡ್​ ತಂಡ ಪಂದ್ಯದಲ್ಲಿ ಹಿಡಿತ ಸಾಧಿಸಿತ್ತು. ಆದರೆ ಅವರು ಗೋಲ್ ಪೋಸ್ಟ್​​ ಮುಂದೆ ಸ್ಥಿರತೆ ತೋರಲಿಲ್ಲ. ಅಭಿಷೇಕ್ ಭಾರತಕ್ಕೆ ಆರಂಭಿಕ ಮುನ್ನಡೆ ತರು ಭರವಸೆ ಕೊಟ್ಟರೂ ನ್ಯೂಜಿಲೆಂಡ್​ ಅನುಭವಿ ಗೋಲ್​ಕೀಪರ್​ ಡೊಮಿನಿಕ್ ಡಿಕ್ಸನ್ ತಡೆದರು. ಮೊದಲ ಕ್ವಾರ್ಟರ್​ನಲ್ಲಿ ಗುರ್ಜಂತ್ ಸಿಂಗ್​​ಗೆ ಗ್ರೀನ್ ಕಾರ್ಡ್ ಸಿಕ್ಕಿತು. ಇದು ಭಾರತದ ಸಮಬಲ ಸಾಧಿಸುವ ಅವಕಾಶಗಳಿಗೆ ಅಡ್ಡಿಯಾಯಿತು.

ಇದನ್ನೂ ಓದಿ: IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

ನಿಕ್ ವುಡ್ಸ್ ಹಳದಿ ಕಾರ್ಡ್ ನೊಂದಿಗೆ ಐದು ನಿಮಿಷಗಳ ಕಾಲ ಅಮಾನತುಗೊಂಡಿದ್ದರಿಂದ ನ್ಯೂಜಿಲೆಂಡ್ ಗೆ ಎರಡನೇ ಕ್ವಾರ್ಟರ್ ದೊಡ್ಡ ಹೊಡೆತವಾಯಿತು.

ಶೈಲಿಯಲ್ಲಿ ಪುಟಿದೇಳುವ ಭಾರತ!
ಹರ್ಮನ್ ಪ್ರೀತ್ ಸಿಂಗ್​ಗೆ ಎದುರಾಳಿ ತಂಡ ಪೆನಾಲ್ಟಿ ಕಾರ್ನರ್ ಅವಕಾಶ ನಿರಾಕರಿಸಿದ ಹೊರತಾಗಿಯೂ ನ್ಯೂಜಿಲೆಂಡ್ ನ ಬಲಿಷ್ಠ ಡಿಫೆನ್ಸ್ ವಿಭಾಗ ಕುಸಿಯಿತು. ಎರಡನೇ ಕ್ವಾರ್ಟರ್​ನಲ್ಲಿ ಭಾರತದ ನಾಯಕನಿಗೆ ಎರಡನೇ ಅವಕಾಶ ಸಿಕ್ಕಿತು. ಈ ವೇಳೆ ಗೋಲ್ ಪೋಸ್ಟ್​​ ಸಮೀಪದಲ್ಲಿದ್ದ ಮನ್ದೀಪ್ ಸಿಂಗ್ ಅವರು ಡಿಕ್ಸನ್ ಅವರನ್ನು ಹಿಂದಿಕ್ಕಿ ಭಾರತಕ್ಕೆ 1-1 ಅಂತರದ ಮುನ್ನಡೆ ತಂದುಕೊಟ್ಟರು. ಭಾರತವು ಮೂರನೇ ಕ್ವಾರ್ಟರ್ ಅನ್ನು ಹೊಸ ಆತ್ಮವಿಶ್ವಾಸದೊಂದಿಗೆ ಪ್ರಾರಂಭಿಸಿತು. ಮನ್ದೀಪ್ ಸಿಂಗ್ ಒಂದು ಗೋಲು ಬಾರಿಸಿದರು. ಆದರೆ, ಸ್ಕಾಟ್ ಬಾಯ್ಡೆ ಅವರ ಪ್ರಯತ್ನದ ಮೂಲಕ ನ್ಯೂಜಿಲೆಂಡ್ ತಿರುಗೇಟು ನೀಡಿತು. ಆದರೆ ಕೊನೆಯಲ್ಲಿ ಪೆನಾಲ್ಟಿ ಸ್ಟ್ರೋಕ್​ ಮೂಲಕ ನಾಯಕ ಹರ್ಮನ್​ ಪ್ರೀತ್ ಸಿಂಗ್ ಗೋಲ್ ಗಳಿಸಿ ಭಾರತಕ್ಕೆ ಜಯ ತಂದುಕೊಟ್ಟರು.

Continue Reading
Advertisement
Viral Video
ಪ್ರಮುಖ ಸುದ್ದಿ32 seconds ago

Viral Video: ಚಲಿಸುತ್ತಿದ್ದ ರೈಲಿನ ಹೊರಗೆ ಜೋಷ್‌‌ನಿಂದ ನೇತಾಡಿದ ಯುವಕ; ಏನಾಯಿತು ನೋಡಿ

Elephant attack
ಮಳೆ6 mins ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

Indo-Pak Romance
ವೈರಲ್ ನ್ಯೂಸ್11 mins ago

ದೇಶಗಳ ಗಡಿ ಮೀರಿದ ಮತ್ತೊಂದು ಲವ್‌ಸ್ಟೋರಿ; ಪ್ರಿಯತಮನೊಂದಿಗೆ ಬಾಳಲು ರಾಜಸ್ಥಾನಕ್ಕೆ ಬಂದ ಪಾಕ್‌ ಮಹಿಳೆ

Dog Meat Controversy
ಕರ್ನಾಟಕ17 mins ago

Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

Actor Dhanush new poster from Kubera unveiled on his birthday
ಟಾಲಿವುಡ್26 mins ago

Actor Dhanush: ಧನುಷ್‌ ಬರ್ತ್‌ಡೇ ಸ್ಪೆಷಲ್‌; ‘ಕುಬೇರ’ ಸಿನಿಮಾದಿಂದ ಲುಕ್‌ ಪೋಸ್ಟರ್‌ ಔಟ್‌!

theft case
ಮೈಸೂರು42 mins ago

Theft case : ಪೊಲೀಸ್‌ ಮನೆಯಲ್ಲಿ ಕಳ್ಳರ ಕಳ್ಳಾಟ; ಚಿನ್ನಾಭರಣ ಕದ್ದು ಎಸ್ಕೇಪ್‌

CH Vijayashankar2
ಪ್ರಮುಖ ಸುದ್ದಿ46 mins ago

CH Vijayashankar: ಬಯಸದೇ ಬಂದ ಭಾಗ್ಯ: ಮೇಘಾಲಯ ನೂತನ ರಾಜ್ಯಪಾಲ ಸಿಎಚ್‌ ವಿಜಯಶಂಕರ್

Paris 2024 Shooting
ಕ್ರೀಡೆ57 mins ago

Paris 2024 Shooting: ಶೂಟಿಂಗ್​ನಲ್ಲಿ ಫೈನಲ್​ ಪ್ರವೇಶಿಸಿದ ರಮಿತಾ ಜಿಂದಾಲ್; ಭಾರತಕ್ಕೆ 2 ಪದಕ ನಿರೀಕ್ಷೆ

Ranveer Singh up for new film directed by Aditya Dhar
ಬಾಲಿವುಡ್57 mins ago

Ranveer Singh:‌ ಒಂದೇ ಸಿನಿಮಾದಲ್ಲಿ ಬಾಲಿವುಡ್‌ನ ಐದು ಸ್ಟಾರ್ಸ್; ರಣವೀರ್ ಸಿಂಗ್ ಹೊಸ ಸಿನಿಮಾ ಅನೌನ್ಸ್!

DK Shivakumar
ಕರ್ನಾಟಕ1 hour ago

DK Shivakumar: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant attack
ಮಳೆ6 mins ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ21 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

ಟ್ರೆಂಡಿಂಗ್‌