Motivational story : ಸಮಯವಿಲ್ಲ ಅಂತೀವಲ್ಲಾ.. ಹೊಂದಿಸಿಕೊಂಡರೆ ಎಷ್ಟೊಂದು ಸಮಯವಿದೆ ಅಂತ ಹೇಳಿಕೊಟ್ರು ಪ್ರೊಫೆಸರ್‌! - Vistara News

ಪ್ರಮುಖ ಸುದ್ದಿ

Motivational story : ಸಮಯವಿಲ್ಲ ಅಂತೀವಲ್ಲಾ.. ಹೊಂದಿಸಿಕೊಂಡರೆ ಎಷ್ಟೊಂದು ಸಮಯವಿದೆ ಅಂತ ಹೇಳಿಕೊಟ್ರು ಪ್ರೊಫೆಸರ್‌!

Motivational story : ನಮಗೆ ಲೈಫಲ್ಲಿ ಸಮಯವೇ ಇಲ್ಲ ಅಂತ ಹೇಳ್ತಾ ಇರ್ತೇವೆ. ಸಮಯ ಹೇಗಿರ್ತದೆ, ಅದನ್ನು ಹೇಗೆ ಹೊಂದಿಸಿಕೊಳ್ಳಬೇಕು ಎಂದು ಪ್ರೊಫೆಸರ್‌ ವಿವರಿಸಿದ್ದಾರೆ, ಕೇಳಿಸಿಕೊಳ್ಳಿ.

VISTARANEWS.COM


on

stone pebbles sand
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ- Motivational story
ಪ್ರೊಫೆಸರ್‌ ಸುಧೀಂದ್ರ ಪ್ರಸಾದ್‌ ಅವರು ಕ್ಲಾಸಿನಲ್ಲಿ ಯಾವಾಗಲೂ ಹೊಸ ವಿಷಯಗಳನ್ನು ಹೇಳುವುದಕ್ಕೆ ಹೆಸರಾದವರು. ಆವತ್ತು ಕೂಡಾ ಅವರು ಏನೋ ಹೊಸದನ್ನು ವಿದ್ಯಾರ್ಥಿಗಳಿಗೆ ಹೇಳಬೇಕು ಎಂದುಕೊಂಡು ಬಂದಿದ್ದರು. ಅವರು ಕ್ಲಾಸಿಗೆ ಬಂದಾಗ ಒಂದು ಕೈಯಲ್ಲಿ ಪುಸ್ತಕಗಳ ಜತೆ ಒಂದು ಜಾರ್‌ ಮತ್ತು ಒಂದು ಬಾಕ್ಸ್‌ ಕೂಡಾ ಇತ್ತು.

ತಮ್ಮ ನಿತ್ಯದ ಪಾಠವನ್ನು ಮಾಡಿದ ಬಳಿಕ ಕೊನೆಯಲ್ಲಿ ಅವರು ಜಾರನ್ನು ತೆಗೆದುಕೊಂಡರು. ಇದರಲ್ಲಿ ಏನಿದೆ ಎಂದು ವಿದ್ಯಾರ್ಥಿಗಳನ್ನು ಕೇಳಿದರು. ವಿದ್ಯಾರ್ಥಿಗಳು ʻಅದು ಖಾಲಿಯಾಗಿದೆʼ ಎಂದರು. ಸುಧೀಂದ್ರ ಪ್ರಸಾದ್‌ ಅವರು ಅದಕ್ಕೆ ಕೆಲವು ಕಲ್ಲುಗಳನ್ನು ಹಾಕಿ ತುಂಬಿಸಿದರು. ಆ ಬಳಿಕ ಕೇಳಿದರು: ಈ ಜಾರ್‌ ಫುಲ್‌ ಆಗಿದೆ ಆಲ್ವಾ?

ಆಗ ವಿದ್ಯಾರ್ಥಿಗಳು: ಹೌದು ಸರ್‌ ಫುಲ್‌ ಆಗಿದೆ ಅಂದರು.

ಆಗ ಪ್ರೊಫೆಸರ್‌ ಆ ಜಾರನ್ನು ಸ್ವಲ್ಪ ಶೇಕ್‌ ಮಾಡಿ, ಅದರೊಳಗೆ ಕೆಲವು ಸಣ್ಣ ಕಲ್ಲುಗಳನ್ನು ತುಂಬಿದರು. ವಿದ್ಯಾರ್ಥಿಗಳಿಗೆ ಆಶ್ಚರ್ಯವಾಯಿತು.

ಪ್ರೊಫೆಸರ್‌ ಮತ್ತೆ ಕೇಳಿದರು: ಈಗ ಅದು ತುಂಬಿದೆ ಅನಿಸುತ್ತೆ ಅಲ್ವಾ?
ವಿದ್ಯಾರ್ಥಿಗಳು ಹೌದು ಎಂದರು.

ಪ್ರೊಫೆಸರ್‌ ಮತ್ತೊಮ್ಮೆ ಜಾರನ್ನು ಅಲುಗಾಡಿಸಿ ಸ್ವಲ್ಪ ಮರಳು ತಂದು ಸುರಿದರು. ಅಚ್ಚರಿ ಎಂದರೆ ಅದು ಕೂಡಾ ತುಂಬಿಕೊಂಡಿತು. ಈಗಂತೂ ಫುಲ್‌ ಆಗೇ ಬಿಟ್ಟಿತು ಎಂದು ಮಕ್ಕಳೆಲ್ಲ ಅಭಿಪ್ರಾಯಪಟ್ಟರು.

ಪ್ರೊಫೆಸರ್‌ ಒಂದು ಲೋಟ ನೀರು ತರುವಂತೆ ಒಬ್ಬ ವಿದ್ಯಾರ್ಥಿಗೆ ಸೂಚಿಸಿದರು. ಆತ ತರುತ್ತಿದ್ದಂತೆಯೇ ಅದನ್ನು ಅದರೊಳಗೆ ಸುರಿದರು. ಅದು ಕೂಡಾ ತುಂಬಿಕೊಂಡಿತು.

ವಿದ್ಯಾರ್ಥಿಗಳಿಗೆ ಆಶ್ಚರ್ಯವಾಯಿತು. ನಾವು ಮೊದಲ ಸಲ ಹಾಕಿದ ಕಲ್ಲಿನಿಂದಲೇ ಇಡೀ ಜಾರ್‌ ತುಂಬಿತು ಅಂದುಕೊಂಡಿದ್ದೆವು. ಈಗ ನೋಡಿದರೆ, ಸಣ್ಣ ಕಲ್ಲು, ಮರಳು, ನೀರು ಎಲ್ಲವನ್ನು ಹಾಕಿದರೂ ಇನ್ನೂ ಜಾಗ ಇದೆ ಅಂತಿದೆ ಜಾರು ಅಂತ ಅಚ್ಚರಿಪಟ್ಟರು.

ಆಗ ಪ್ರೊಫೆಸರ್‌ ಇಡೀ ಪ್ರಯೋಗವನ್ನು ವಿವರಿಸಿದರು.
ನೋಡಿ ನಾವು ನಮ್ಮ ಲೈಫಿನಲ್ಲಿ ಜಾರ್‌ನಲ್ಲಿರುವ ದೊಡ್ಡ ಒಂದೆರಡು ಕೆಲಸವನ್ನೋ, ಜವಾಬ್ದಾರಿಯನ್ನೋ ಇಟ್ಟುಕೊಂಡು ಬೇರೆ ವಿಚಾರಗಳಿಗೆ ಜಾಗವೇ ಇಲ್ಲ ಅಂದುಕೊಂಡು ಬಿಟ್ಟಿರುತ್ತೇವೆ. ಆದರೆ, ಗಮನಿಸಿ ನೋಡಿದರೆ ಅವುಗಳ ಜತೆಗೆ ಇನ್ನೂ ಅನೇಕ ವಿಷಯಗಳನ್ನು ಸೇರಿಸಿಕೊಳ್ಳಬಹುದು.

ಇಲ್ಲಿ ನಾವು ಎರಡನೇ ಬಾರಿ ಹಾಕಿದ ಸಣ್ಣ ಸಣ್ಣ ಕಲ್ಲುಗಳಿವೆಯಲ್ಲಾ.. ಇವು ನಾವು ನಮ್ಮ ಪ್ರಧಾನ ಕೆಲಸಗಳ ಜತೆಗೆ ಮಾಡಬಹುದಾದ ಇತರ ಕೆಲಸಗಳು, ನಿಭಾಯಿಸಬಹುದಾದ ಬೇರೆ ಜವಾಬ್ದಾರಿಗಳು, ಸಂಬಂಧಗಳು.

ಮೂರನೇ ಬಾರಿ ಹಾಕಿದ ಮರಳು ಇದೆಯಲ್ಲಾ.. ಇದು ನಾವು ನಮಗಾಗಿ ಸಮಯ ಮಾಡಿಕೊಳ್ಳಬೇಕಾದ ಸಣ್ಣ ಪುಟ್ಟ ಸಂಗತಿಗಳು. ಅದು ನಾವು ನಮ್ಮ ಹವ್ಯಾಸಗಳನ್ನು ಬೆಳೆಸಲು ಮಾಡುವ ಪ್ರಯತ್ನ ಇರಬಹುದು, ಕುಟುಂಬದೊಂದಿಗೆ ಕಳೆಯುವ ಕ್ಷಣಗಳಿರಬಹುದು, ನಮ್ಮ ಮನಸ್ಸನ್ನು ಪ್ರಫುಲ್ಲಿತಗೊಳಿಸುವ ಸಂಗತಿಗಳಿರಬಹುದು.

ನಿಜವೆಂದರೆ, ಇಷ್ಟೆಲ್ಲ ಮಾಡಿದರೂ ಇನ್ನೂ ಉಳಿದಿರುತ್ತದಲ್ಲ.. ಸಮಯ ಅದು ನಮಗೇ ನಾವು ನೀಡಬಹುದಾದ ಮೌನಕಾಲ. ಸುಮ್ಮನೆ ನಾವೇ ಇದ್ದುಬಿಡುವ ಅಂತರಂಗವನ್ನು ಅವಲೋಕಿಸುವ ಸಮಯ.

ಇಷ್ಟು ಹೇಳಿ ಪ್ರೊಫೆಸರ್‌ ಮೌನವಾದರು. ಎಲ್ಲರ ಮನಸಿನೊಳಗೂ ಅವರು ಹೇಳುತ್ತಿದ್ದ ವಿಚಾರಗಳು ಮೆಲ್ಲಗೆ ಇಂಗುತ್ತಿದ್ದವು.

ಇದನ್ನೂ ಓದಿ : Motivational story : ಮುಖ್ಯ ಆಗುವುದು ಯಾವುದು? ನಮಗಿರುವ ಜ್ಞಾನವೋ? ನಮ್ಮ ನಡವಳಿಕೆಯೋ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಯ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Sita Temple: ವೋಟ್‌ ಬ್ಯಾಂಕ್‌ ರಾಜಕೀಯಕ್ಕೆ ಬಿಜೆಪಿಯು ಹೆದರುವುದಿಲ್ಲ. ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಲಲ್ಲಾನಿಗಾಗಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ. ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸಲಾಗಿದೆ. ಇನ್ನು, ಸೀತೆಯ ಜನ್ಮಸ್ಥಳದಲ್ಲಿ ಸೀತೆಗಾಗಿ ಮಂದಿರ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ಇದನ್ನು ಮೋದಿ ಸಾಕಾರಗೊಳಿಸಲಿದ್ದಾರೆ ಎಂದು ಅಮಿತ್‌ ಶಾ ಹೇಳಿದ್ದಾರೆ.

VISTARANEWS.COM


on

Sita Temple
Koo

ಪಟನಾ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ (Ram Mandir) ನಿರ್ಮಾಣ ಮಾಡಲಾಗಿದ್ದು, ಕಳೆದ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲೋಕಾರ್ಪಣೆ ಮಾಡಿದ್ದಾರೆ. ಕೋಟ್ಯಂತರ ಜನ ರಾಮಮಂದಿರಕ್ಕೆ ತೆರಳಿ ಶ್ರೀರಾಮನ ದರ್ಶನ ಪಡೆದಿದ್ದಾರೆ. ಇದರ ಬೆನ್ನಲ್ಲೇ, “ಬಿಹಾರದ ಸೀತಾಮಡಿಯಲ್ಲಿ (Sitamarhi) ಬಿಜೆಪಿಯು ಸೀತೆಗಾಗಿ ಮಂದಿರ (Sita Temple) ನಿರ್ಮಿಸಲಾಗುವುದು” ಎಂದು ಕೇಂದ್ರ ಸಚಿವ ಅಮಿತ್‌ ಶಾ (Amit Shah) ಘೋಷಣೆ ಮಾಡಿದ್ದಾರೆ.

“ವೋಟ್‌ ಬ್ಯಾಂಕ್‌ ರಾಜಕೀಯಕ್ಕೆ ಬಿಜೆಪಿಯು ಹೆದರುವುದಿಲ್ಲ. ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಲಲ್ಲಾನಿಗಾಗಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ. ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸಲಾಗಿದೆ. ಇನ್ನು, ಸೀತೆಯ ಜನ್ಮಸ್ಥಳದಲ್ಲಿ ಸೀತೆಗಾಗಿ ಮಂದಿರ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ರಾಮಮಂದಿರ ನಿರ್ಮಾಣ ಮಾಡಲು ಅಧಿಕಾರದಲ್ಲಿದ್ದವರು ದೂರದಲ್ಲೇ ಉಳಿದರು. ಆದರೆ, ಮೋದಿ ಅವರ ಕಾಲದಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಯಿತು. ಈಗ ಸೀತೆಗಾಗಿ ಯಾರಾದರೂ ರಾಮಮಂದಿರ ನಿರ್ಮಾಣ ಮಾಡಿದರೆ, ಅದು ನರೇಂದ್ರ ಮೋದಿ ಅವರು ಮಾತ್ರ” ಎಂದು ಬಿಹಾರದ ಸೀತಾಮಡಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಅಮಿತ್ ಶಾ ಹೇಳಿದ್ದಾರೆ.

ಸಮಾವೇಶದಲ್ಲಿ ಕಾಂಗ್ರೆಸ್‌ ಹಾಗೂ ಆರ್‌ಜೆಡಿ ವಿರುದ್ಧ ಅಮಿತ್‌ ಶಾ ವಾಗ್ದಾಳಿ ನಡೆಸಿದರು. “ಲಾಲು ಪ್ರಸಾದ್ ಯಾದವ್‌ ಅವರು ಪವರ್‌ ಪಾಲಿಟಿಕ್ಸ್‌ನಿಂದಾಗಿ ಕಾಂಗ್ರೆಸ್‌ ಜತೆ ಸಂಖ್ಯ ಬೆಳೆಸಿದರು. ಲಾಲು ಪ್ರಸಾದ್‌ ಯಾದವ್‌ ಅವರು ತಮ್ಮ ಪುತ್ರನನ್ನು ಸಿಎಂ ಮಾಡಬೇಕು ಎಂಬ ಏಕಮಾತ್ರ ಉದ್ದೇಶದಿಂದ ಅವರು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡರು” ಎಂದು ಟೀಕಿಸಿದರು.

ಹಿಂದು ಗ್ರಂಥಗಳ ಪ್ರಕಾರ, ರಾಜ ಜನಕನು ಸೀತಾಮಡಿಯ ಜಮೀನೊಂದರಲ್ಲಿ ಉಳುಮೆ ಮಾಡುವಾಗ ಮಡಿಕೆಯೊಂದರಿಂದ ಭಗವಾನ್‌ ರಾಮನ ಪತ್ನಿ ಸೀತೆ ಉದ್ಭವಿಸಿದರು ಎಂದು ಹೇಳಲಾಗುತ್ತಿದೆ. ಹಾಗಾಗಿ, ಸೀತಾಮಡಿಯನ್ನು ಪವಿತ್ರ ಸ್ಥಾನ ಎಂದೇ ಹೇಳಲಾಗುತ್ತಿದೆ. ಸೀತಾಮಡಿಯು ಲೋಕಸಭೆ ಕ್ಷೇತ್ರವೂ ಆಗಿದೆ.

ಕೆಲ ದಿನಗಳ ಹಿಂದಷ್ಟೇ ರಾಮಮಂದಿರ ಕುರಿತು ನರೇಂದ್ರ ಮೋದಿ ಮಾತನಾಡಿದ್ದರು. “ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400 ಕ್ಷೇತ್ರಗಳಲ್ಲಿ ಗೆಲ್ಲಿಸಿ ಎಂಬುದಾಗಿ ನಾನು ನಿಮ್ಮಲ್ಲಿ ಮನವಿ ಮಾಡಲು ಹಲವು ಕಾರಣಗಳಿವೆ. ನೀವು ಬಹುಮತ ನೀಡಿದ ಕಾರಣಕ್ಕಾಗಿಯೇ ನಾವು 370ನೇ ವಿಧಿಯನ್ನು ರದ್ದುಗೊಳಿಸಿದೆವು. ಹಾಗಾಗಿ, ಕಾಂಗ್ರೆಸ್‌ 370ನೇ ವಿಧಿಯನ್ನು ಮತ್ತೆ ಜಾರಿಗೆ ತರಬಾರದು, ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಮಸೀದಿ ಬೀಗ ಜಡಿಯಬಾರದು, ನಮ್ಮ ದೇಶದ ದ್ವೀಪಗಳನ್ನು ಬೇರೆ ದೇಶಗಳಿಗೆ ನೀಡಬಾರದು, ಒಬಿಸಿ ಮೀಸಲಾತಿಯನ್ನು ಕಿತ್ತು ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಬಾರದು ಎಂಬ ಕಾರಣಕ್ಕಾಗಿ ಬಿಜೆಪಿಗೆ ಬಹುಮತ ನೀಡಿ” ಎಂಬುದಾಗಿ ಮನವಿ ಮಾಡಿದ್ದರು.

ಇದನ್ನೂ ಓದಿ: PM Modi: ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ ಎಂದ ಮೋದಿ

Continue Reading

ಕ್ರೈಂ

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರು ಹಾಗೂ ಬಂಧಿತರಾಗಿರುವ ಇಬ್ಬರಿಗೆ ಸೇರಿದ ಹಾಸನ ಮತ್ತು ಬೆಂಗಳೂರಿನ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎಸ್ಐಟಿ ಹತ್ತು ಪೆನ್ ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ತೆಗೆದುಕೊಂಡಿದೆ. ಇವುಗಳನ್ನು ಎಫ್‌ಎಸ್‌ಎಲ್‌ ವರದಿಗಾಗಿ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲು ಎಸ್‌ಐಟಿ ನಿರ್ಧರಿಸಿದೆ. ಇದು ಮೂಲ ಕಾಪಿಯೇ? ಅಥವಾ ಒಬ್ಬರಿಂದ ಒಬ್ಬರಿಗೆ ಹಂಚಿಕೆ ಆಗಿರುವುದೇ ಎಂಬ ನಿಟ್ಟಿನಲ್ಲಿ ಎಫ್‌ಎಸ್‌ಎಲ್‌ನಲ್ಲಿ ಪರಿಶಿಲನೆ ನಡೆಸಲಾಗುತ್ತದೆ.

VISTARANEWS.COM


on

Prajwal Revanna Case pen drive and hard disk were found during the raids in Hassan and Bengaluru
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಹಾಗೂ ಬೆಂಗಳೂರಿನ ಹಲವು ಕಡೆ ಎಸ್ಐಟಿ ದಾಳಿ ನಡೆಸಿದ್ದ ವೇಳೆ ಹತ್ತು ಪೆನ್ ಡ್ರೈವ್, ಒಂದು ಹಾರ್ಡ್ ಡಿಸ್ಕ್ ಪತ್ತೆಯಾಗಿದೆ. ಈಗ ಈ ಎಲ್ಲವನ್ನೂ ಎಫ್ಎಸ್ಎಲ್‌ಗೆ ಕಳುಹಿಸಲಾಗಿದೆ.

ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರು ಹಾಗೂ ಬಂಧಿತರಾಗಿರುವ ಇಬ್ಬರಿಗೆ ಸೇರಿದ ಹಾಸನ ಮತ್ತು ಬೆಂಗಳೂರಿನ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎಸ್ಐಟಿ ಹತ್ತು ಪೆನ್ ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ತೆಗೆದುಕೊಂಡಿದೆ.

ಎಫ್‌ಎಸ್‌ಎಲ್‌ಗೆ ರವಾನೆ

ಈ ಎಲ್ಲ ಹತ್ತು ಪೆನ್ ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಅನ್ನು ಎಫ್‌ಎಸ್‌ಎಲ್‌ ವರದಿಗಾಗಿ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲು ಎಸ್‌ಐಟಿ ನಿರ್ಧರಿಸಿದೆ. ಇದು ಮೂಲ ಕಾಪಿಯೇ? ಅಥವಾ ಒಬ್ಬರಿಂದ ಒಬ್ಬರಿಗೆ ಹಂಚಿಕೆ ಆಗಿರುವುದೇ ಎಂಬ ನಿಟ್ಟಿನಲ್ಲಿ ಎಫ್‌ಎಸ್‌ಎಲ್‌ನಲ್ಲಿ ಪರಿಶಿಲನೆ ನಡೆಸಲಾಗುತ್ತದೆ.

ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: HD Devegowda: 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಎಚ್‌ಡಿ ದೇವೇಗೌಡ; ಮೊಮ್ಮಗನ ಕೇಸ್‌ನಿಂದ ಈ ತೀರ್ಮಾನ?

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

ದೇಶ

Hoarding Collapse: 16 ಜನರ ಸಾವಿಗೆ ಕಾರಣವಾದ ಯಮಸ್ವರೂಪಿ ಹೋರ್ಡಿಂಗ್‌ ಕುಸಿತದ ವಿಡಿಯೊ ಇಲ್ಲಿದೆ!

Hoarding Collapse: ಮುಂಬೈ ಮಹಾ ನಗರಪಾಲಿಕೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಅಕ್ರಮವಾಗಿ ಜಾಹೀರಾತು ಫಲಕ ಹಾಕಲಾಗಿದೆ ಎಂದು ಬಿಎಂಸಿ ಹೇಳಿದೆ. ಮುಂಬೈ ಪೊಲೀಸರು ಐಪಿಸಿ 304, 338, 337, ಮತ್ತು 34ರ ಅಡಿಯಲ್ಲಿ ಮಾಲೀಕ ಭವೇಶ್ ಭಿಡೆ ಮತ್ತು ಇತರರ ವಿರುದ್ಧ ಪಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಹೋರ್ಡಿಂಗ್‌ ಕುಸಿತದ ವಿಡಿಯೊ ಭಾರಿ ವೈರಲ್‌ ಆಗಿದೆ.

VISTARANEWS.COM


on

Hoarding Collapse
Koo

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಯಮಸ್ವರೂಪಿ ಹೋರ್ಡಿಂಗ್‌ ಕುಸಿದು (Hoarding Collapse) ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಘಾಟ್ಕೋಪರ್‌ (Ghatkopar) ಪೆಟ್ರೋಲ್‌ ಬಂಕ್‌ ಮೇಲೆ ಹೋರ್ಡಿಂಗ್‌ ಕುಸಿದ ಕಾರಣ 39 ಜನ ಗಾಯಗೊಂಡಿದ್ದಾರೆ. 80ಕ್ಕೂ ಅಧಿಕ ವಾಹನಗಳು ಸಂಪೂರ್ಣವಾಗಿ ಹಾನಿಯಾಗಿವೆ. ಇನ್ನೂ 14 ಜನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ, ಭಾರಿ ಮಳೆಯ ಮಧ್ಯೆಯೇ ಬೃಹತ್‌ ಹೋರ್ಡಿಂಗ್‌ ಕುಸಿದಿರುವ ಭೀಕರ ವಿಡಿಯೊ ಲಭ್ಯವಾಗಿದೆ. ಇದು ಈಗ ವೈರಲ್‌ (Viral Video) ಆಗಿದೆ.

ಮುಂಬಯಿಯಲ್ಲಿ ಏನಾಯಿತು?

ಮುಂಬೈನ ಘಾಟ್‌ಕೋಪರ್‌ನಲ್ಲಿ ಸೋಮವಾರ (ಮೇ 13) ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಿಂದಾಗಿ 70 ಮೀಟರ್ ಎತ್ತರದ ಜಾಹೀರಾತು ಫಲಕ ಕುಸಿದಿದೆ. ಘಾಟ್‌ಕೋಪರ್‌ನ ಚೆಡ್ಡಾನಗರ ಜಂಕ್ಷನ್‌ನಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ಅಕ್ರಮ ಹೋರ್ಡಿಂಗ್ ಬಿದ್ದಿದೆ. ಸೋಮವಾರ ಸಂಜೆ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, 64 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಲ್ಲಿ ಇನ್ನೂ ಸಿಲುಕಿರುವ ದೇಹಗಳನ್ನು ಹೊರತೆಗೆಯಲು ಎನ್‌ಡಿಆರ್‌ಎಫ್ ರಾತ್ರಿ ರಕ್ಷಣಾ ಕಾರ್ಯಾಚರಣೆಯನ್ನು ಅಗೆಯುವ ಯಂತ್ರಗಳೊಂದಿಗೆ ನಡೆಸಿತು.

ಇನ್ನೂ 20ರಿಂದ 30 ಜನರು ಅವಶೇಷಗಳೊಳಗೆ ಸಿಲುಕಿಕೊಂಡಿದ್ದಾರೆ ಎಂದು ಬಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಪೆಟ್ರೋಲ್ ಪಂಪ್‌ನಲ್ಲಿ ಸಂಭವಿಸಿದ ಕುಸಿತದಿಂದಾಗಿ ಅವಶೇಷಗಳನ್ನು ತೆಗೆದುಹಾಕುವಲ್ಲಿ NDRF ಸಮಸ್ಯೆಗಳನ್ನು ಎದುರಿಸುತ್ತಿದೆ, ಇದು ಅಪಾಯಕಾರಿ ಪರಿಸ್ಥಿತಿಗೆ ಕಾರಣವಾಗಬಹುದು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಮೃತರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ಚಿಕಿತ್ಸೆ ನೀಡುವುದಾಗಿ ಘೋಷಿಸಿದರು. ಪಾಲಿಕೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಅಕ್ರಮವಾಗಿ ಜಾಹೀರಾತು ಫಲಕ ಹಾಕಲಾಗಿದೆ ಎಂದು ಬಿಎಂಸಿ ಹೇಳಿದೆ. ಮುಂಬೈ ಪೊಲೀಸರು ಐಪಿಸಿ 304, 338, 337, ಮತ್ತು 34ರ ಅಡಿಯಲ್ಲಿ ಮಾಲೀಕ ಭವೇಶ್ ಭಿಡೆ ಮತ್ತು ಇತರರ ವಿರುದ್ಧ ಪಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜೀವಹಾನಿಗೆ ಸಂತಾಪ ಸೂಚಿಸಿರುವ ರಾಷ್ಟ್ರಪತಿ ಮುರ್ಮು, “ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಹಲವಾರು ಸಾವುನೋವುಗಳ ಸುದ್ದಿ ಅತ್ಯಂತ ದುಃಖಕರವಾಗಿದೆ. ನಾನು ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ಗಾಯಗೊಂಡವರ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಯಶಸ್ಸಿಗೆ ಹಾರೈಸುತ್ತೇನೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Continue Reading

ಪ್ರಮುಖ ಸುದ್ದಿ

PM Narendra Modi: ʼಗೂಂಡಾರಾಜ್‌ʼ ನೆನಪಿಸಿದ ಮೋದಿ, ಉ.ಪ್ರದಲ್ಲಿ ʼಯೋಗಿ ಸ್ವಚ್ಛತಾ ಅಭಿಯಾನʼಕ್ಕೆ ಮೆಚ್ಚುಗೆ

PM Narendra Modi: ಉತ್ತರ ಪ್ರದೇಶದ ಅಜಂಗಢದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಕಾನೂನು ಸುವ್ಯವಸ್ಥೆ ಜಾರಿ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಶ್ಲಾಘಿಸಿದರು. “ಯೋಗಿಜಿ ನನ್ನ ʼಸ್ವಚ್ಛತಾ ಅಭಿಯಾನ’ವನ್ನು ಸರಿಯಾಗಿ ಜಾರಿಗೆ ತಂದಿದ್ದಾರೆ” ಎಂದರು.

VISTARANEWS.COM


on

pm narendra modi yogi adityanath
Koo

ಲಖನೌ: ಈ ಹಿಂದಿನ ʼಗೂಂಡಾರಾಜ್‌ʼ (gunda raj) ಅನ್ನು ತೊಲಗಿಸಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್‌ (Yogi Adityanath) ಅವರು ನನ್ನ ಚಿಂತನೆಯ ʼಸ್ವಚ್ಛತಾ ಅಭಿಯಾನʼವನ್ನು (swacchta abhiyaan) ಸರಿಯಾಗಿ ಜಾರಿಗೆ ತಂದಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಪ್ರಶಂಸಿಸಿದ್ದಾರೆ.

ಉತ್ತರ ಪ್ರದೇಶದ ಅಜಂಗಢದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಕಾನೂನು ಸುವ್ಯವಸ್ಥೆ ಜಾರಿ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಶ್ಲಾಘಿಸಿದರು. “ನೀವು ಸಮಾಜವಾದಿ ಪಾರ್ಟಿಯ ʼಗೂಂಡಾರಾಜ್’ನ ಹಳೆಯ ದಿನಗಳನ್ನು ನೋಡಿದ್ದೀರಿ. ಯೋಗಿಜಿ ನನ್ನ ʼಸ್ವಚ್ಛತಾ ಅಭಿಯಾನ’ವನ್ನು ಸರಿಯಾಗಿ ಜಾರಿಗೆ ತಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಇದ್ದ ಗ್ಯಾಂಗ್‌ಗಳು, ಗಲಭೆಕೋರರು, ಮಾಫಿಯಾಗಳು, ಅಪಹರಣಕಾರರು ಮತ್ತು ಸುಲಿಗೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದಾರೆ” ಎಂದಿದ್ದಾರೆ.

“ಹತ್ತು ವರ್ಷಗಳ ಹಿಂದೆ ಇಲ್ಲಿ ಜನರು ದೇವರ ಭರವಸೆಯಲ್ಲಿ ಬದುಕುತ್ತಿದ್ದರು. ಕೆಲವು ಕಡೆ ಬಾಂಬ್ ದಾಳಿ, ಕೆಲವು ಕಡೆ ಸ್ಲೀಪರ್ ಸೆಲ್, ಕೆಲವು ಕಡೆ ಕೋಮು ಘರ್ಷಣೆ, ಇನ್ನು ಕೆಲವು ಕಡೆ ಭಯೋತ್ಪಾದನೆಯಿಂದ ಸಂಕಷ್ಟ ಪರಿಸ್ಥಿತಿ ಇತ್ತು. ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡರು. ಈ ಹಿಂದಿನ ಸರ್ಕಾರಗಳು ಅಂತಹ ದುಷ್ಟರಿಗೆ ಸಹಕಾರ ನೀಡುತ್ತಿದ್ದವು” ಎಂದರು ಮೋದಿ.

“ಈಗಲೂ ನಿಮ್ಮ ಮೀಸಲಾತಿಯನ್ನು ಕಿತ್ತು ಸಮುದಾಯವೊಂದಕ್ಕೆ ನೀಡಲು ಆ ಪಕ್ಷಗಳು ಚಿಂತಿಸಿವೆ. ಬಜೆಟ್ 15% ಅಲ್ಪಸಂಖ್ಯಾತರ ಹೆಸರಿನಲ್ಲಿ ಹೋಗುತ್ತಿದೆ. 70 ವರ್ಷಗಳಿಂದ ಹಿಂದೂ ಮುಸ್ಲಿಂ ರಾಜಕೀಯ ಮಾಡಿವೆ. ನಾವು ಒಂದಾಗಿ ಹೋಗಬೇಕು, ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು” ಎಂದರು ನುಡಿದರು.

“ಸಿಎಎ ಅಡಿಯಲ್ಲಿ ನಿರಾಶ್ರಿತರಿಗೆ ಪೌರತ್ವ ನೀಡುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ. ಇವರು ದೇಶದಲ್ಲಿ ನಿರಾಶ್ರಿತರಾಗಿ ದೀರ್ಘಕಾಲ ವಾಸಿಸಿದ್ದಾರೆ. ಇವರು ಧರ್ಮದ ಆಧಾರದ ಮೇಲೆ ಮಾಡಿದ ದೇಶ ವಿಭಜನೆಗೆ ಬಲಿಯಾದವರು. ಆದರೆ ವಿರೋಧ ಪಕ್ಷಗಳಾದ ಎಸ್‌ಪಿ ಮತ್ತು ಕಾಂಗ್ರೆಸ್ ಕಾನೂನಿನ ಬಗ್ಗೆ ತಪ್ಪು ಮಾಹಿತಿಯನ್ನು ಹರಡುವ ಮೂಲಕ ಗಲಭೆಗಳನ್ನು ಪ್ರಚೋದಿಸುತ್ತಿವೆ. ಈ ನಿರಾಶ್ರಿತರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ. ಅವರು ಉತ್ತರ ಪ್ರದೇಶ ಮತ್ತು ಇಡೀ ದೇಶದಲ್ಲಿ ಗಲಭೆಯನ್ನು ಸೃಷ್ಟಿಸಲು ಪ್ರಯತ್ನಿಸಿದರು” ಎಂದು ಮೋದಿ ಆರೋಪಿಸಿದರು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

Continue Reading
Advertisement
Sita Temple
ದೇಶ8 seconds ago

Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಯ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Prajwal Revanna Case pen drive and hard disk were found during the raids in Hassan and Bengaluru
ಕ್ರೈಂ9 mins ago

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Chandu Champion Injured Kartik Aaryan looks intense
ಸಿನಿಮಾ14 mins ago

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Money Guide
ಮನಿ-ಗೈಡ್23 mins ago

Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

Hoarding Collapse
ದೇಶ29 mins ago

Hoarding Collapse: 16 ಜನರ ಸಾವಿಗೆ ಕಾರಣವಾದ ಯಮಸ್ವರೂಪಿ ಹೋರ್ಡಿಂಗ್‌ ಕುಸಿತದ ವಿಡಿಯೊ ಇಲ್ಲಿದೆ!

Covaxin
ದೇಶ35 mins ago

Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

pm narendra modi yogi adityanath
ಪ್ರಮುಖ ಸುದ್ದಿ1 hour ago

PM Narendra Modi: ʼಗೂಂಡಾರಾಜ್‌ʼ ನೆನಪಿಸಿದ ಮೋದಿ, ಉ.ಪ್ರದಲ್ಲಿ ʼಯೋಗಿ ಸ್ವಚ್ಛತಾ ಅಭಿಯಾನʼಕ್ಕೆ ಮೆಚ್ಚುಗೆ

Viral video
ವೈರಲ್ ನ್ಯೂಸ್2 hours ago

Viral Video: ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌.. ಜೊಮ್ಯಾಟೊದಿಂದ ಮತ್ತೊಂದು ಎಡವಟ್ಟು

Head Coach
ಕ್ರೀಡೆ2 hours ago

Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌