Dhruva Sarja: ಮೊದಲ ಬಾರಿ ಮಗಳ ಫೋಟೊ ಹಂಚಿಕೊಂಡ ಧ್ರುವ ಸರ್ಜಾ ಪತ್ನಿ ಪ್ರೇರಣಾ - Vistara News

ಸಿನಿಮಾ

Dhruva Sarja: ಮೊದಲ ಬಾರಿ ಮಗಳ ಫೋಟೊ ಹಂಚಿಕೊಂಡ ಧ್ರುವ ಸರ್ಜಾ ಪತ್ನಿ ಪ್ರೇರಣಾ

ಅಕ್ಟೋಬರ್ 2ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಪ್ರೇರಣಾ, ತಮ್ಮ ಮನೆಗೆ ಮಹಾಲಕ್ಷ್ಮಿ ಬಂದಿದ್ದಾಳೆ ಎಂದು ಬರೆದುಕೊಂಡಿದ್ದರು.ಧ್ರುವ ಸರ್ಜಾ (Dhruva Sarja) ಮತ್ತು ಪ್ರೇರಣಾ ವಿವಾಹ 2019ರ ನವೆಂಬರ್​​ನಲ್ಲಿ ನಡೆದಿತ್ತು

VISTARANEWS.COM


on

Dhruva Sarja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಪತ್ನಿ ಪ್ರೇರಣಾ ತಮ್ಮ ಮಗಳ ಫೋಟೊವನ್ನು ಹಂಚಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾ ಮೂಲಕ ಮಗಳನ್ನು ಪರಿಚಯಿಸಿದ್ದಾರೆ. ಅಕ್ಟೋಬರ್ 2ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಪ್ರೇರಣಾ, ತಮ್ಮ ಮನೆಗೆ ಮಹಾಲಕ್ಷ್ಮಿ ಬಂದಿದ್ದಾಳೆ ಎಂದು ಬರೆದುಕೊಂಡಿದ್ದರು. ಈ ಹಿಂದೆ ಬೇಬಿ ಬಂಪ್‌ ಫೋಟೋವನ್ನು ಹಂಚಿಕೊಡಿದ್ದ ಧ್ರುವ, ‘ನಾವು ಜೀವನದ ಹೊಸ ಹಂತಕ್ಕೆ ಏರುತ್ತಿದ್ದೇವೆ. ಅದೊಂದು ದೈವತ್ವದ ಹಂತ. ಶೀಘ್ರದಲ್ಲೇ ಬರುತ್ತಿರುವ ಮಗುವಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ, ಜೈ ಹನುಮಾನ್​’ ಎಂದು ಅಡಿಬರಹದ ಮೂಲಕ ಗಮನ ಸೆಳೆದಿದ್ದರು.

ಧ್ರುವ ಸರ್ಜಾ ಮತ್ತು ಪ್ರೇರಣಾ ವಿವಾಹ 2019ರ ನವೆಂಬರ್​​ನಲ್ಲಿ ನಡೆದಿತ್ತು. ಇದೀಗ ಮಗಳ ಫೋಟೊ ಹಂಚಿಕೊಂಡದ್ದು, ಮುಖ ತೋರಿಸಿಲ್ಲ ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ. ಧ್ರುವ ಸರ್ಜಾ ಸದ್ಯ ಕೆ.ಡಿ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

ಇದನ್ನೂ ಓದಿ: Dhruva Sarja: ಫೆಬ್ರವರಿ 23ರಂದು ಧ್ರುವ ಸರ್ಜಾ ಅಭಿನಯದ ʻಮಾರ್ಟಿನ್‌ʼ ಟೀಸರ್‌ ರಿಲೀಸ್‌?

ಇದನ್ನೂ ಓದಿ: Dhruva Sarja | ʻಕೆಡಿʼ ಚಿತ್ರಕ್ಕೆ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡ ಧ್ರುವ ಸರ್ಜಾ

ಧ್ರುವ ಸರ್ಜಾ ʻಮಾರ್ಟಿನ್‌ʼ ಸಿನಿಮಾದಲ್ಲಿ ಬ್ಯಸಿಯಾಗಿದ್ದಾರೆ. ಎ.ಪಿ ಅರ್ಜುನ್‌ ಮಾರ್ಟಿನ್‌ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ರೂಪೇಶ್ ಶೆಟ್ಟಿ-ಜಾಹ್ನವಿ ಸಿನಿಮಾ ಆಡಿಯೊ ರೈಟ್ಸ್!

Kannada New Movie: ಅಧಿಪತ್ರ ಸಿನಿಮಾದ ಶೂಟಿಂಗ್ ಹಾಗೂ ಮೇಕಿಂಗ್‌ನಿಂದಲೂ ಎಲ್ಲರ ಗಮನ ಸೆಳದಿದೆ . ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ತೆರೆಗೆ ಬರಲು ರೆಡಿಯಾಗುತ್ತಿರುವ ಅಧಿಪತ್ರ ಸಿನಿಮಾದ ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಈ ಚಿತ್ರದ ಆಡಿಯೊ ಹಕ್ಕು ಪ್ರತಿಷ್ಠಿತ ಆಡಿಯೊ ಸಂಸ್ಥೆ ಖರೀದಿ ಮಾಡಿದೆ. 2024 ಬಹು ನಿರೀಕ್ಷಿತ ಸಿನಿಮಾ ಸಾಲಿನಲ್ಲಿ ಅಧಿಪತ್ರ ಕೂಡ ಒಂದು.

VISTARANEWS.COM


on

Kannada New Movie Adhipatra audio rights
Koo

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ (Kannada New Movie) ರೂಪೇಶ್ ಶೆಟ್ಟಿ (Roopesh shetty) ನಟನೆಯ‌ ಬಹು ನಿರೀಕ್ಷಿತ ಸಿನಿಮಾ ʻಅಧಿಪತ್ರʼ.(Adhipatra) ಈಗಾಗಲೇ ಮೇಕಿಂಗ್ ಹಾಗೂ ಕಂಟೆಂಟ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಆಡಿಯೊ ಹಕ್ಕು ಪ್ರತಿಷ್ಠಿತ ಆಡಿಯೊ ಸಂಸ್ಥೆ ಲಹರಿ ಖರೀದಿ ಮಾಡಿದೆ. 2024 ಬಹು ನಿರೀಕ್ಷಿತ ಸಿನಿಮಾ ಸಾಲಿನಲ್ಲಿ ಅಧಿಪತ್ರ ಕೂಡ ಒಂದು.

ಮೇ‌ 10ಕ್ಕೆ ಅಧಿಪತ್ರ ಟೀಸರ್

ಅಧಿಪತ್ರ ಸಿನಿಮಾದ ಶೂಟಿಂಗ್ ಹಾಗೂ ಮೇಕಿಂಗ್‌ನಿಂದಲೂ ಎಲ್ಲರ ಗಮನ ಸೆಳದಿದೆ . ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ತೆರೆಗೆ ಬರಲು ರೆಡಿಯಾಗುತ್ತಿರುವ ಅಧಿಪತ್ರ ಸಿನಿಮಾದ ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಇದೇ ತಿಂಗಳ 10ರಂದು ಲಹರಿ ಆಡಿಯೋದಲ್ಲಿ ಅಧಿಪತ್ರದ ಮೊದಲ ಝಲಕ್ ಹೊರಬೀಳಲಿದೆ. ರೂಪೇಶ್ ಗೆ ಜೋಡಿಯಾಗಿ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಜಾಹ್ನವಿ ಸಾಥ್ ಕೊಟ್ಟಿದ್ದಾರೆ.

ತುಳು ಸಿನಿಮಾರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬಿಗ್ ಬಾಸ್‌ಗೆ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ, ಅಲ್ಲಿಂದ ಕಿರುತೆರೆ ರಿಯಾಲಿಟಿ ಶೋಗಳಲ್ಲಿಯೂ ಕಣಕ್ಕಿಳಿದು ಇದೀಗ ನೇರವಾಗಿ ಸಿನಿಮಾ ನಾಯಕಿಯಾಗಿ ಹೊಸ ಇನಿಂಗ್ಸ್‌ ಆರಂಭಿಸಿದ್ದಾರೆ. ರೂಪೇಶ್‌ ಶೆಟ್ಟಿ ಅಧಿಪತ್ರ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಇವರು ನಿರ್ದೇಶನ ಮಾಡಿದ ಶಾರ್ಟ್ ಫಿಲಂ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರಶಂಸೆ ಪಡೆದಿತ್ತು ಹಾಗೂ ಕೆಲವು ಜಾಹೀರಾತುಗಳಿಗೆ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಚಯನ್ ಶೆಟ್ಟಿ ʼಅಧಿಪತ್ರʼ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಕೆ ಆರ್ ಸಿನಿ ಕಂಬೈನ್ಸ್ ಬ್ಯಾನರ್ ಬಂಡವಾಳ ಹೂಡುತ್ತಿದ್ದು, ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ.

ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಅಧಿಪತ್ರ ಸಿನಿಮಾವನ್ನು . ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್‌ನಡಿ‌ ದಿವ್ಯಾ ನಾರಾಯಣ್, ಕುಲದೀಪ್ ರಾಘವ್ ಲಕ್ಷ್ಮೇ ಗೌಡ ‌ಬಂಡವಾಳ ಹೂಡಿದ್ದು, ಕಾರ್ತಿಕ್ ಶೆಟ್ಟಿ ಹಾಗೂ ಸತೀಶ್ ಶೆಟ್ಟಿ ಸಹ ನಿರ್ಮಾಣದಲ್ಲಿ ಹೆಗಲು ಕೊಟ್ಟಿದ್ದಾರೆ.

Continue Reading

ಸಿನಿಮಾ

Prajwal Revanna Case: ವೈರಲ್ ಆಗುತ್ತಿರುವ 2976 ವಿಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ ಎಂದ ಹರ್ಷಿಕಾ ಪೂಣಚ್ಚ!

Prajwal Revanna Case: ತಮಿಳು ನಟಿ ಕಸ್ತೂರಿ, ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಈ ಆರೋಪ ಪ್ರಕರಣದ ಬಗ್ಗೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ತೆಲುಗು ನಟಿ, ನಿರೂಪಕ ಪರೋಕ್ಷವಾಗಿ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದರು.ಈ ನಡುವೆ ಪ್ರಜ್ವಲ್‌ ಅವರನ್ನು ಭಾರತಕ್ಕೆ ಬರುವಂತೆ ಜೆಡಿಎಸ್‌ ಮುಖಂಡರು ಮನವೊಲಿಸಿದ್ದು, ಅವರು ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್‌ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್‌ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.

VISTARANEWS.COM


on

Prajwal Revanna Case reaction by Harshika Poonacha
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ದಿನೇ ದಿನೆ ಜಟಿಲವಾಗುತ್ತಾ ಸಾಗಿದೆ. ಈ ನಡುವೆ ಅವರ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣದ ಬಗ್ಗೆ ಸಿನಿಮಾ ತಾರೆಯರು ಕೂಡ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟಿ ಹರ್ಷಿಕಾ ಪೂಣಚ್ಚ ಎಕ್ಸ್‌ನಲ್ಲಿ ಈ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.”ದುರದೃಷ್ಟವಶಾತ್ ವೈರಲ್ ಆಗುತ್ತಿರುವ 2976 ವೀಡಿಯೊಗಳಲ್ಲಿ ಒಂದನ್ನು ನಾನು ನೋಡಿದೆʼʼಎಂದು ಬರೆದುಕೊಂಡಿದ್ದಾರೆ.

ಹರ್ಷಿಕಾ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻದುರದೃಷ್ಟವಶಾತ್ ವೈರಲ್ ಆಗುತ್ತಿರುವ 2976 ವೀಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ. ಅದನ್ನು ನೋಡುವುದು ನಿಜಕ್ಕೂ ನೋವಿನ ಸಂಗತಿ. ವಿಡಿಯೊಗಳು ಕಾನೂನುಬದ್ಧ ಮತ್ತು ನೈಜವಾಗಿದ್ದರೆ, ಅಂತಹ ಕೃತ್ಯಗಳನ್ನು ಸೃಷ್ಟಿಸಿದವರು ಖಂಡಿತವಾಗಿಯೂ ದೇಶದ ಕಾನೂನಿನ ಪ್ರಕಾರ ಪರಿಗಣನೆಗೆ ತೆಗೆದುಕೊಳ್ಳಬೇಕು” ಎಂದು ಹರ್ಷಿಕಾ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಮತ್ತೊಂದು ಎಕ್ಸ್‌ನಲ್ಲಿ ʻʻಈ ವಿಡಿಯೊಗಳಲ್ಲಿ ಕಾಣಿಸಿಕೊಂಡಿರುವ ಅಸಂಖ್ಯಾತ ಮಹಿಳೆಯರನ್ನು ನೋಡಿ ನೋವಾಗುತ್ತಿದೆ. ಅವರೆಲ್ಲರೂ ಸಭ್ಯ ಮತ್ತು ಸರಳ ಕುಟುಂಬದಿಂದ ಬಂದವರ ಎಂದು ಕಾಣುತ್ತಾರೆ. ಈ ಸಂತ್ರಸ್ತರ ಮುಖಗಳನ್ನು ವಿವಿಧ ಗುಂಪುಗಳು ರಾಜಕೀಯ ಚರ್ಚೆಗೆ ಬಳಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರʼʼಎಂದು ಬರೆದುಕೊಂಡಿದ್ದಾರೆ.

ʻʻಕೊನೆಪಕ್ಷ ಅಲ್ಲಿರುವ ಮಹಿಳೆಯರ ಮುಖವನ್ನು ಬ್ಲರ್‌ ಮಾಡಬಹುದಿತ್ತು. ಭವಿಷ್ಯದಲ್ಲಿ ಅವರು ಸಮಾಜವನ್ನು ಹೇಗೆ ಎದುರಿಸುತ್ತಾರೆ? ಇನ್ನು ಮುಂದೆ ಅವರನ್ನು ಯಾವ ದೃಷಿಯಲ್ಲಿ ಜನ ನೋಡಲಿದ್ದಾರೆ? ಅವರ ಕುಟುಂಬ ಮತ್ತು ಮಕ್ಕಳ ಗತಿ ಏನು? ಎಂದು ಹರ್ಷಿಕಾ ಕಳವಳ ವ್ಯಕ್ತಪಡಿಸಿದ್ದಾರೆ.

ತಮಿಳು ನಟಿ ಕಸ್ತೂರಿ, ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಈ ಆರೋಪ ಪ್ರಕರಣದ ಬಗ್ಗೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ತೆಲುಗು ನಟಿ, ನಿರೂಪಕ ಪರೋಕ್ಷವಾಗಿ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದರು.

ಈ ನಡುವೆ ಪ್ರಜ್ವಲ್‌ ಅವರನ್ನು ಭಾರತಕ್ಕೆ ಬರುವಂತೆ ಜೆಡಿಎಸ್‌ ಮುಖಂಡರು ಮನವೊಲಿಸಿದ್ದು, ಅವರು ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್‌ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್‌ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಇಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಜ್ವಲ್‌ ಯಾವುದೇ ಸಮಯದಲ್ಲಿ ಬೇಕಿದ್ದರೂ ಭಾರತಕ್ಕೆ ಬರಬಹುದು ಎಂಬ ನಿಟ್ಟಿನಲ್ಲಿ ಶನಿವಾರ ರಾತ್ರಿಯಿಂದಲೇ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಟೀಂ ಬೀಡುಬಿಟ್ಟಿದೆ. ಆದರೆ, ಪ್ರಜ್ವಲ್‌ ರೇವಣ್ಣ ಈವರೆಗೂ ಆಗಮಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಕಾದು ಕಾದು ಅಧಿಕಾರಿಗಳು ಸುಸ್ತಾಗಿದ್ದಾರೆ.

ಆದರೆ, ಈಗಿನ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ಗಾಗಿ ಎಸ್ಐಟಿ, ಗುಪ್ತಚರ ತಂಡಗಳು ಕಾದು ಕುಳಿತಿದ್ದು, ವಿದೇಶಿ ವಿಮಾನಗಳ ಪ್ಯಾಸೆಂಜರ್ ಲಿಸ್ಟ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ. ದುಬೈ, ಮಸ್ಕಟ್, ಪ್ರಾಂಕ್ ಫರ್ಟ್ ವಿಮಾನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

Continue Reading

ಸಿನಿಮಾ

Kareena Kapoor: ʻಯುನಿಸೆಫ್ ಇಂಡಿಯಾʼಗೆ ರಾಯಭಾರಿಯಾದ ಕರೀನಾ ಕಪೂರ್

Kareena Kapoor: ಕರೀನಾ ಕಪೂರ್ ಖಾನ್ (Kareena Kapoor) ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ (Unicef India’s National Ambassador) ನೇಮಕಗೊಂಡಿದ್ದಾರೆ. . ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ಕರೀನಾ ಕಪೂರ್ ಕೊನೆಯದಾಗಿ ‘ಕ್ರೂ’ ಚಿತ್ರದಲ್ಲಿ ಕಾಣಿಸಿಕೊಂಡರು. ಮುಂದೆ ರೋಹಿತ್ ಶೆಟ್ಟಿ ಅವರ ‘ಸಿಂಗಮ್ ಅಗೇನ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Kareena Kapoor appointed Unicef India National Ambassador
Koo

ಬೆಂಗಳೂರು: ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ (Kareena Kapoor) ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ (Unicef India’s National Ambassador) ನೇಮಕಗೊಂಡಿದ್ದಾರೆ. 2014ರಿಂದ ಯುನಿಸೆಫ್‌ ಜತೆ ನಟು ಹೊಂದಿ, ಅದರ ಚಟುವಟಿಕೆಯಲ್ಲಿ ಕ್ರಿಯಾಶೀಲವಾಗಿ ಭಾಗಿಯಾಗುತ್ತಿದ್ದರು. ಇದೀಗ ನಟಿ ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘವಾಗಿ ಟಿಪ್ಪಣಿಯನ್ನು ಬರೆದಿದ್ದಾರೆ. ಗೌರವದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ಭಾಷಣದ ವೇಳೆ ಕರೀನಾ ತಮ್ಮ ಹೊಸ ಜವಾಬ್ದಾರಿಗಳ ಬಗ್ಗೆ ಮಾತನಾಡುತ್ತಾ ಭಾವುಕರಾದರು.

ಕರೀನಾ ಪೋಸ್ಟ್‌ನಲ್ಲಿ ʻʻನನಗೆ ಇದು ಭಾವನಾತ್ಮಕ ದಿನ. ನಾನು ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿರುವುದಕ್ಕೆ ಗೌರವವಿದೆ. ಕಳೆದ 10 ವರ್ಷಗಳಲ್ಲಿ ಯುನಿಸೆಫ್ ಇಂಡಿಯಾ ಜತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಾನು ಆ ಕೆಲಸದ ಬಗ್ಗೆ ಹೆಮ್ಮೆಪಡುತ್ತೇನೆ. ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ. ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ದಣಿವರಿಯಿಲ್ಲದೆ ಶ್ರಮಿಸುತ್ತಿರುವ ಇಡೀ ತಂಡಕ್ಕೆ ವಿಶೇಷ ಧನ್ಯವಾದಗಳುʼʼಎಂದು ಬರೆದುಕೊಂಡಿದ್ದಾರೆ.

ಕರೀನಾ ಕಪೂರ್ ಕೊನೆಯದಾಗಿ ‘ಕ್ರೂ’ ಚಿತ್ರದಲ್ಲಿ ಕಾಣಿಸಿಕೊಂಡರು. ಮುಂದೆ ರೋಹಿತ್ ಶೆಟ್ಟಿ ಅವರ ‘ಸಿಂಗಮ್ ಅಗೇನ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Kareena Kapoor: ಸೈಫ್‌ ಅಲಿಖಾನ್ ರನ್ನು ಮದುವೆಯಾಗಬೇಡಿ ಎಂದು ಜನ ಕರೀನಾಗೆ ಹೇಳಿದ್ದು ಯಾಕೆ?

ಬಾಲಿವುಡ್‌ ಖ್ಯಾತ ನಟಿ ಕರೀನಾ ಕಪೂರ್‌ (Kareena Kapoor) ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ ಎಂದು ಫ್ಯಾನ್ಸ್‌ ಸಂತದಲ್ಲಿ ಇದ್ದಿದ್ದರು. ಆದರೀಗ ವರದಿಯ ಪ್ರಕಾರ ಕರೀನಾ ಅವರು ಟಾಕ್ಸಿಕ್‌ ಸಿನಿಮಾದಿಂದ ಔಟ್‌ ಆಗಿದ್ದಾರೆ ಎನ್ನಲಾಗಿದೆ.ಚಿತ್ರದಲ್ಲಿ ಕರೀನಾ ಕಪೂರ್ ಅವರದ್ದು ಅತಿಥಿ ಪಾತ್ರವಲ್ಲ. ಟಾಕ್ಸಿಕ್‌ ಸಿನಿಮಾದಲ್ಲಿ ಯಶ್‌ ಸಹೋದರಿಯಾಗಿ ಕರೀನಾ ನಟಿಸಬೇಕಿತ್ತು. ಅದಕ್ಕಾಗಿ ಶೂಟಿಂಗ್‌ ಮಾಡಲು ಹಲವು ದಿನಗಳೇ ಬೇಕಿತ್ತು. ಆದರೆ ಕರೀನಾ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಡೇಟ್‌ ಹೊಂದಾಣಿಕೆ ಸಮಸ್ಯೆ ಬಂದ ಕಾರಣ ಕರೀನಾ ಅವರು ಈ ಸಿನಿಮಾದಿಂದ ಹೊರ ಬಂದಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಚಿತ್ರತಂಡ ಇನ್ನೊಬ್ಬ ನಟಿಯನ್ನು ಹುಡುಕುತ್ತಿದ್ದಾರೆ ಎನ್ನಲಾಗಿದೆ.

ಪ್ರಶಾಂತ್‌ ನೀಲ್‌ ನಿರ್ದೇಶನದ ʼಕೆಜಿಎಫ್‌ 2ʼ ಚಿತ್ರದಲ್ಲಿ ಬಾಲಿವುಡ್‌ ತಾರೆಯರಾದ ಸಂಜಯ್‌ ದತ್‌ ಮತ್ತು ರವೀನಾ ಟಂಡನ್‌ ಕಾಣಿಸಿಕೊಂಡಿದ್ದರು. ಯಶ್‌ ಜತೆ ಇವರ ಪಾತ್ರಗಳೂ ಮೆಚ್ಚುಗೆ ಪಡೆದಿದ್ದವು. ಕೆವಿಎನ್ ಪ್ರೊಡಕ್ಷನ್ಸ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ʼಟಾಕ್ಸಿಕ್‌ʼ ಚಿತ್ರವನ್ನು ನಿರ್ಮಿಸಲಿದ್ದಾರೆ.

ಕಳೆದ ತಿಂಗಳು ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್‌, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್‌ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಇದರಿಂದ ಕನ್ಫರ್ಮ್ ಆಗಿದೆ.

Continue Reading

ಬಾಲಿವುಡ್

Sunidhi Chauhan: ಗಾಯಕಿ ಸುನಿಧಿ ಚೌಹಾಣ್ ಮೇಲೆ ಬಾಟಲಿ ಎಸೆತ: ವಿಡಿಯೊ ವೈರಲ್‌!

Sunidhi Chauhan: ಸುನಿಧಿ ಅವರು ಮೇರಿ ಆವಾಜ್‌ ಸುನೋ ರಿಯಾಲಿಟಿ ಶೋನಲ್ಲಿ ಗೆದ್ದಿದ್ದರು. ಗೌತಮಿ ಮುಖರ್ಜಿ ಬಳಿ ಸುನಿಧಿ ಸಂಗೀತ ಅಭ್ಯಾಸ ಮಾಡಿದ್ದರು. ಬಾಬ್ಬಿ ಖಾನ್‌ ಅವರನ್ನು ಸುನಿಧಿ ಮದುವೆಯಾಗಿದ್ದರು. 2003ರಲ್ಲಿ ಇಬ್ಬರೂ ದೂರವಾದರು. 2012ರಲ್ಲಿ ಹೀತೇಶ್‌ ಸೋನಿಕ್‌ ಎಂಬುವರನ್ನು ಸುನಿಧಿ ಮದುವೆಯಾದರು. ಸುನಿಧಿಗೆ ಓರ್ವ ಪುತ್ರನಿದ್ದಾನೆ. ಇದೀಗ ಕಾರ್ಯಕ್ರಮವೊಂದರಲ್ಲಿ ಸುನಿಧಿ ಚೌಹಾಣ್ ಅವರ ಮೇಲೆ ಪ್ರೇಕ್ಷಕರೊಬ್ಬರು ನೀರಿನ ಬಾಟಲಿಯನ್ನು ಎಸೆದಿದ್ದಾರೆ.

VISTARANEWS.COM


on

Sunidhi Chauhan audience member throws bottle at her
Koo

ಬೆಂಗಳೂರು: ನಾಲ್ಕು ವರ್ಷ ಇರುವಾಗಲೇ ಗಾಯಕಿ ಸುನಿಧಿ ಚೌಹಾಣ್ (Sunidhi Chauhan) ಹಾಡಲು ಶುರು ಮಾಡಿದ್ದರು. ದೂರದರ್ಶನದಲ್ಲಿ ʻಮೇರಿ ಆವಾಜ್‌ ಸುನೋʼ ಎಂಬ ಸಿಂಗಿಂಗ್‌ ರಿಯಾಲಿಟಿ ಶೋನಲ್ಲಿ ವಿನ್ನರ್‌ ಆದವರು. ಇದೀಗ ಕಾರ್ಯಕ್ರಮವೊಂದರಲ್ಲಿ ಸುನಿಧಿ ಚೌಹಾಣ್ ಅವರ ಮೇಲೆ ಪ್ರೇಕ್ಷಕರೊಬ್ಬರು ನೀರಿನ ಬಾಟಲಿಯನ್ನು ಎಸೆದಿದ್ದಾರೆ. ಇದೀಗ ಈ ಕ್ಲಿಪ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮಾತ್ರವಲ್ಲ ಸುನಿಧಿ ಚೌಹಾಣ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಕ್ಲಿಪ್‌ನಲ್ಲಿ, ಬಾಟಲಿ ಒಂದು ಕ್ಷಣ ಸುನಿಧಿ ಚೌಹಾಣ್ ಮೇಲೆ ಬೀಳುತ್ತಿದ್ದಂತೆ ಗಾಬರಿಯಾದರು. ಪ್ರದರ್ಶನವನ್ನು ಮುಂದುವರಿಸುವ ಮೊದಲು ಅವರು ಒಂದು ಕ್ಷಣ ಸ್ತಬ್ಧವಾಗಿ ನಿಂತು ಬಿಟ್ಟರು. ತನ್ನ ಕೈಯನ್ನು ಎದೆಯ ಮೇಲೆ ಇಟ್ಟುಕೊಂಡು ಸುತ್ತಲೂ ನೋಡಿದರು. ಸ್ವಲ್ಪ ಸಮಯದ ನಂತರ, ಸುನಿಧಿ ವೇದಿಕೆಯಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ʻʻಬಾಟಲಿಗಳನ್ನು ಎಸೆದರೆ ಏನಾಗುತ್ತದೆ? ಹಾಗೆ ಮಾಡುವುದರಿಂದ ಪ್ರದರ್ಶನವು ನಿಲ್ಲುತ್ತದೆ. ನಿಮಗೆ ಹಾಗೆ ಆಗಬೇಕೆ?ಎಂದು ಪ್ರಶ್ನೆ ಇಟ್ಟಿದ್ದಾರೆ. ನೆರೆದ ಪ್ರೇಕ್ಷಕರು “ಇಲ್ಲ” ಎಂದು ಕೂಗಿದ್ದಾರೆ. ಈ ಸಂದರ್ಭವನ್ನು ಅತ್ಯಂತ ನಾಜೂಕಾಗಿ ಹ್ಯಾಂಡಲ್‌ ಮಾಡಿದ್ದಾರೆ ಸುನಿಧಿ.

ವಿಡಿಯೊಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ನಾಚಿಕೆಯಿಲ್ಲದವರು ! ಸುನಿಧಿ ಗ್ರೇಟ್‌” ಎಂದು ಬರೆದಿದ್ದಾರೆ. ಒಬ್ಬ ವ್ಯಕ್ತಿ, “ಇದು ತುಂಬಾ ಅಸಹ್ಯಕರ ನಡವಳಿಕೆ. ಸುನಿಧಿ ಗೌರವಕ್ಕೆ ಅರ್ಹಳು.” ಎಂದು ಕಮೆಂಟ್‌ ಮಾಡಿದ್ದಾರೆ. ʻʻಕಾರ್ಯಕ್ರಮವನ್ನು ಸುಲಭವಾಗಿ ಅವರು ಬಿಟ್ಟು ಹೋಗಬಹುದಿತ್ತು. ಆದರೆ ಸುನಿಧಿ ಹಾಗೇ ಮಾಡಿಲ್ಲ. ಅವಳು ಯಾವತ್ತು ಕ್ವೀನ್‌ʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಸುನಿಧಿ ಕೂಡ ತಮ್ಮ ಇನ್‌ಸ್ಟಾದಲ್ಲಿ ಈವೆಂಟ್‌ನ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಆದರೆ, ಘಟನೆಯ ಬಗ್ಗೆ ಏನು ಬರೆದುಕೊಂಡಿಲ್ಲ.

ಇದನ್ನೂ ಓದಿ: Ram Charan: ರಾಮ್‌ಚರಣ್‌ ಅಭಿನಯದ ʻಗೇಮ್ ಚೇಂಜರ್ʼ ಮೊದಲ ಸಾಂಗ್‌ ಔಟ್‌!

ಸುನಿಧಿ ಅವರು `ಮೇರಿ ಆವಾಜ್‌ ಸುನೋ’ ರಿಯಾಲಿಟಿ ಶೋನಲ್ಲಿ ಗೆದ್ದಿದ್ದರು. ಗೌತಮಿ ಮುಖರ್ಜಿ ಬಳಿ ಸುನಿಧಿ ಸಂಗೀತ ಅಭ್ಯಾಸ ಮಾಡಿದ್ದರು. ಬಾಬ್ಬಿ ಖಾನ್‌ ಅವರನ್ನು ಸುನಿಧಿ ಮದುವೆಯಾಗಿದ್ದರು. 2003ರಲ್ಲಿ ಇಬ್ಬರೂ ದೂರವಾದರು. 2012ರಲ್ಲಿ ಹೀತೇಶ್‌ ಸೋನಿಕ್‌ ಎಂಬುವರನ್ನು ಸುನಿಧಿ ಮದುವೆಯಾದರು. ಸುನಿಧಿಗೆ ಓರ್ವ ಪುತ್ರನಿದ್ದಾನೆ.

Continue Reading
Advertisement
Karnataka Weather Forecast
ಮಳೆ16 seconds ago

Karnataka Weather :ಮಳೆಯ ಕಣ್ಣಾ ಮುಚ್ಚಾಲೆ ಆಟ; ವರುಣ ದೇವನ ತಲೆ ಮೇಲೆ ಹೊತ್ತು ತಿರುಗಿದ ಗ್ರಾ.ಪಂ ಪಿಡಿಒ

Prajwal Revanna Case HD Revanna may be shifted to Parappana Agrahara SIT custody is doubtful
ಕ್ರೈಂ5 mins ago

Prajwal Revanna Case: ಪರಪ್ಪನ ಅಗ್ರಹಾರಕ್ಕೆ ಎಚ್‌.ಡಿ. ರೇವಣ್ಣ ಶಿಫ್ಟ್‌? SIT ಕಸ್ಟಡಿಗೆ ಕೊಡುವುದು ಡೌಟ್!

Narendra Modi
ದೇಶ5 mins ago

Narendra Modi: ಅಯೋಧ್ಯೆಯಲ್ಲಿಂದು ಪ್ರಧಾನಿ ಮೋದಿ ರೋಡ್‌ಶೋ; ರಾಮಲಲ್ಲಾನಿಗೆ ವಿಶೇಷ ಪೂಜೆ

Police Officer
ದೇಶ13 mins ago

Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

Covishield Vaccine
ದೇಶ34 mins ago

Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

ICC Women's T20 World Cup
ಕ್ರೀಡೆ52 mins ago

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

Pakistan
ವಿದೇಶ1 hour ago

Pakistan: ಪಾಕಿಸ್ತಾನಕ್ಕೂ ಕಾಲಿಟ್ಟ ಯೋಗ; ಅಧಿಕೃತವಾಗಿ ತರಗತಿ ಆರಂಭ

Prajwal Revanna Case HD Revanna arrest is correct says R Ashok
ರಾಜಕೀಯ2 hours ago

Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

Vicky Pedia New reels about heat in Karnataka
ವೈರಲ್ ನ್ಯೂಸ್2 hours ago

Vicky Pedia: ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ: ಫ್ಯಾನ್ಸ್‌ ಫಿದಾ!

Lok Sabha Election 2024
Lok Sabha Election 20242 hours ago

Lok Sabha Election 2024: ಬಿಜೆಪಿಯ ʼಮೊಟ್ಟೆʼ ವಿಡಿಯೊ ವಿರುದ್ಧ ಕಾಂಗ್ರೆಸ್‌ ಕೆಂಡಾಮಂಡಲ; ಅಂತಹದ್ದೇನಿದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌