Sevalal Jayanthi: ಸಂತ ಸೇವಾಲಾಲ್‌ ಮಹಾಮಠ ಪ್ರತಿಷ್ಠಾನಕ್ಕೆ ₹10 ಕೋಟಿ ಅನುದಾನ: ಸಿಎಂ ಬೊಮ್ಮಾಯಿ - Vistara News

ಕರ್ನಾಟಕ

Sevalal Jayanthi: ಸಂತ ಸೇವಾಲಾಲ್‌ ಮಹಾಮಠ ಪ್ರತಿಷ್ಠಾನಕ್ಕೆ ₹10 ಕೋಟಿ ಅನುದಾನ: ಸಿಎಂ ಬೊಮ್ಮಾಯಿ

Sevalal Jayanthi: ದಾವಣಗೆರೆ ಜಿಲ್ಲೆಯ ಸೂರಗೊಂಡನಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ್ ಅವರ 284ನೇ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮತ್ತಿತರರು ಭಾಗವಹಿಸಿದ್ದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಬಂಜಾರ ಸಮಾಜ ವೈಶಿಷ್ಟ್ಯಪೂರ್ಣ ಸಮಾಜವಾಗಿದ್ದು, ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವ್ಯಾಪಿಸಿದೆ. ಸಂತ ಸೇವಾಲಾಲ್‌ರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿದ್ದು, ಶ್ರೀ ಸಂತ ಸೇವಾಲಾಲ್‌ ಮಹಾಮಠ ಪ್ರತಿಷ್ಠಾನಕ್ಕೆ (Sevalal Jayanthi) 10 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರೀ ಸಂತ ಸೇವಾಲಾಲ್ ಅವರ 284ನೇ ಜಯಂತಿ ಉದ್ಘಾಟಿಸಿ ಮಾತನಾಡಿದರು.

ವಿಶೇಷ ವಸತಿ ಶಾಲೆ

ಸುರಗೊಂಡನಗೊಪ್ಪ ಇಡೀ ದೇಶಕ್ಕೆ ತಿಳಿಯಬೇಕು, ಸಮಗ್ರವಾಗಿ ಅಭಿವೃದ್ಧಿಯಾಗಬೇಕು. ಅದಕ್ಕಾಗಿ ಹಕ್ಕುಪತ್ರಗಳನ್ನು ನೀಡಿರುವ ಗ್ರಾಮಗಳಲ್ಲಿ ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಅಡಿಯಲ್ಲಿ ಲಿಡ್ಕರ್ ಮಾದರಿ ಕಾರ್ಯಕ್ರಮವನ್ನು ರೂಪಿಸಲಾಗುವುದು. ಈ ಸಮಾಜದ ಮಕ್ಕಳು ಶಿಕ್ಷಣವನ್ನು ಪಡೆಯಲು ಸರ್ಕಾರ ಸಂಪೂರ್ಣ ಬೆಂಬಲ ನೀಡುತ್ತದೆ. ಈ ಸಮುದಾಯದ ವಸತಿ ಹೆಚ್ಚಿರುವಲ್ಲಿ ವಿಶೇಷ ವಸತಿ ಶಾಲೆಗಳನ್ನು ನಿರ್ಮಿಸಲಾಗುವುದು. ಕೊಪ್ಪಳದ ಬಹದ್ದೂರ್ ಬಂಡೆಯಲ್ಲಿ ಹೆರಿಟೇಜ್ ವಿಲೇಜ್, ಬೀದರ್ ಜಿಲ್ಲೆಯಲ್ಲಿ ಕೌಶಲ್ಯ ತರಬೇತಿ ನೀಡುವ ಕಾರ್ಯಕ್ರಮವನ್ನು ತಾಂಡಾ ಅಭಿವೃದ್ಧಿ ನಿಗಮದಿಂದ ವಿಶೇಷ ಅನುದಾನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆಯಿತ್ತರು.

ಇದನ್ನೂ ಓದಿ | Siddaramaiah: ಕರ್ನಾಟಕ ರಾಜಕಾರಣದಲ್ಲಿ ನಾನು ಎಂದೆಂದಿಗೂ ಪ್ರಸ್ತುತನಾಗಿಯೇ ಇರುತ್ತೇನೆ: ಸಿದ್ದರಾಮಯ್ಯ

ವೈಶಿಷ್ಟ್ಯಪೂರ್ಣ ಬಂಜಾರ ಸಮಾಜ

ಶ್ರೀ ಸಂತ ಸೇವಾಲಾಲರು ನ್ಯಾಮತಿಯಲ್ಲಿ ಹುಟ್ಟಿ, ಸಮಾಜವನ್ನು ಜಾಗೃತಗೊಳಿಸಿ, ತಮ್ಮ ಸಿದ್ಧಾಂತಗಳನ್ನು ಜನರಿಗೆ ಮುಟ್ಟಿಸಿ ಬದುಕುವ ದಾರಿಯನ್ನು ತೋರಿಸಿದ್ದಾರೆ. ಸತ್ಯವನ್ನು ನುಡಿಯಿರಿ, ಪ್ರಾಣಿ ಹಿಂಸೆ ಮಾಡದಿರಿ, ದಯೆಯೇ ಧರ್ಮ, ದುಡಿಮೆಯಿಂದ ಬದುಕು ಎಂಬ ಮಂತ್ರಗಳಿಂದ ಈ ಸಮಾಜವನ್ನು ಉದ್ಧಾರ ಮಾಡುವ ಕೆಲಸ ಮಾಡಿದ್ದಾರೆ. ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ. ಬಂಜಾರ ಸಮಾಜ ವೈಶಿಷ್ಟ್ಯಪೂರ್ಣ ಸಮಾಜವಾಗಿದ್ದು, ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವ್ಯಾಪಿಸಿದೆ ಎಂದರು.

ಧಾರವಾಡದಲ್ಲಿ ಕರ್ನಾಟಕ ಕಾಲೇಜಿನಲ್ಲಿ ವ್ಯಾಸಂಗ ಪಡೆಯಲು 200 ಎಸ್‌ಸಿ ಮಕ್ಕಳ ಆಯ್ಕೆಯಲ್ಲಿ 98 ಜನ ಬಂಜಾರ ಸಮುದಾಯಕ್ಕೆ ಸೇರಿದವರಾಗಿದ್ದಾರೆ. 14 ಜನ ನ್ಯಾಯಾಧೀಶರ ನೇಮಕಾತಿಯಲ್ಲಿ 6 ಜನ ಈ ಸಮುದಾಯದವರಾಗಿದ್ದಾರೆ. ಎಲ್ಲ ರಂಗದಲ್ಲಿ ಅಭಿವೃದ್ಧಿಹೊಂದುವ ಬಂಜಾರ ಸಮುದಾಯಕ್ಕೆ ಸಮಾನ ಅವಕಾಶಗಳು ದೊರೆಯಬೇಕಿದೆ. ನಮ್ಮ ಸರ್ಕಾರ ಕಳೆದ ಹಲವು ದಶಕಗಳ ಬೇಡಿಕೆಯಾಗಿದ್ದ ಎಸ್‌ಸಿ ಮೀಸಲಾತಿಯನ್ನು ಶೇ.15 ರಿಂದ ಶೇ.17 ಮತ್ತು ಎಸ್‌ಟಿಗೆ ಶೇ.3 ರಿಂದ ಶೇ.17ಕ್ಕೆ ಹೆಚ್ಚಿಸಿದೆ. ಇದರಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ದೊಡ್ಡ ಪ್ರಮಾಣದ ಅವಕಾಶಗಳು ದೊರೆಯಲಿವೆ ಎಂದು ತಿಳಿಸಿದರು.

ಮಾರ್ಚ್‌ನಲ್ಲಿ 52 ಸಾವಿರ ಜನರಿಗೆ ಹಕ್ಕುಪತ್ರ

ತಾಂಡಾ ಅಭಿವೃದ್ಧಿ ನಿಗಮದಿಂದ 960 ಕೋಟಿ ರೂ.ಗಳನ್ನು ನಿಮಗಕ್ಕೆ ನೀಡಿದ್ದು, ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ. ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ 52 ಸಾವಿರ ಜನರಿಗೆ ಹಕ್ಕುಪತ್ರವನ್ನು ಇತ್ತೀಚೆಗೆ ಪ್ರಧಾನಿಗಳಿಂದ ಕೊಡಿಸಲಾಗಿದೆ. ಮಾರ್ಚ್ ತಿಂಗಳಲ್ಲಿ ಹೊನ್ನಾಳಿ ತಾಲೂಕಿನ ನ್ಯಾಮತಿ ಬಳಿ ಗೊಲ್ಲರಹಟ್ಟಿ, ಕುರುಬರಹಟ್ಟಿ, ಲಂಬಾಣಿ ತಾಂಡಾಗಳಿಗೆ ಇನ್ನೂ 52 ಸಾವಿರ ಜನರಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: Kalburgi Politics: ಅಪ್ಪನ ಸೋಲಿಸಿದ್ದೆವು, ಮಗನನ್ನೂ ಸೋಲಿಸುವೆ: ಪ್ರಿಯಾಂಕ್‌ ಖರ್ಗೆ ವಿರುದ್ಧ ತೊಡೆ ತಟ್ಟಿದ ಬಾಬುರಾವ್‌ ಚಿಂಚನಸೂರು

ಸರ್ಕಾರದ ಬೆಂಬಲ

ಶಿಕ್ಷಣ, ಉದ್ಯೋಗ, ಸೂರು, ಕುಲ ಕಸುಬಿಗೆ ಆರ್ಥಿಕ ಬೆಂಬವನ್ನು ಕಾಯಕ ಯೋಜನೆಯಡಿ ನೀಡಲಾಗುವುದು. ಬದಲಾವಣೆಯ ಕಾಲದಲ್ಲಿ ಜಾಗೃತರಾಗಿ ಭವಿಷ್ಯದ ಬಗ್ಗೆ ಚಿಂತನೆ ಮಾಡಬೇಕು. ಯುವಕರು ಸ್ವಾವಲಂಬಿಗಳಾಗಿ ಉನ್ನತ ಮಟ್ಟಕ್ಕೆ ಬೆಳೆಯಬೇಕು ಎಂದರು.

ಸಚಿವ ಪ್ರಭು ಚವ್ಹಾಣ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಶಾಸಕ ಪಿ.ರಾಜೀವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

PM Narendra Modi Live: ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ನಿನ್ನೆ ವಾಸ್ತವ್ಯ ಹೂಡಿದ್ದರು. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇಂದು ಯಾವ ವಿಷಯವನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

VISTARANEWS.COM


on

PM Narendra modi in Bagalakote for Election Campaign and here is Live telecast
Koo

ಬಾಗಲಕೋಟೆ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಭಾನುವಾರ (ಏಪ್ರಿಲ್‌ 28) ಕರ್ನಾಟಕದ (Karnataka) ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರವೂ (ಏಪ್ರಿಲ್‌ 29) ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ನರೇಂದ್ರ ಮೋದಿ ಅವರು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಮೋದಿ ಭಾಷಣಕ್ಕಾಗಿ 90/100 ಅಡಿ ಮುಖ್ಯ ವೇದಿಕೆ ಪೆಂಡಾಲು ಹಾಕಲಾಗಿದೆ. 60/40 ಅಡಿಯ ಮುಖ್ಯ ವೇದಿಕೆಯಲ್ಲಿ, 32 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬಿಸಿಲು ಹೆಚ್ಚಾದ ಕಾರಣ ವೇದಿಕೆ ಹವಾನಿಯಂತ್ರಿತವಾಗಿ ಇರಲಿದೆ. ಇನ್ನು ಸಾರ್ವಜನಿಕರಿಗೆ 400 ಅಡಿ ಅಗಲ, 600 ಅಡಿ ಉದ್ದದ ಬೃಹತ್ ಪೆಂಡಾಲ್ ವೇದಿಕೆ ನಿರ್ಮಿಸಲಾಗಿದೆ. ಜರ್ಮನ್ ಮಾದರಿಯಲ್ಲಿ ವೇದಿಕೆ ನಿರ್ಮಿಸಲಾಗಿದೆ.

ಬಾಗಲಕೋಟೆಯಲ್ಲಿ ಮೋದಿ ಸಮಾವೇಶದ ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್‌ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ್‌ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚನೆ ಮಾಡಲಿದ್ದಾರೆ. ಒಟ್ಟು 70 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗೆ 1,100ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಮೂವರು ಎಸ್‌ಪಿ, ನಾಲ್ವರು ಎಎಸ್‌ಪಿ, 12 ಡಿಎಸ್‌ಪಿ, 32 ಸಿಪಿಐ, 88 ಪಿಎಸ್‌ಐ, 1,049 ಪೊಲೀಸ್‌ ಪೇದೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ವೇದಿಕೆ ಬಲಭಾಗ ಮೂರು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ: PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

ಪ್ರಧಾನಿ ನರೇಂದ್ರ ಮೋದಿ ಅವರ ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ನಿನ್ನೆ ವಾಸ್ತವ್ಯ ಹೂಡಿದ್ದರು. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

Continue Reading

ಕರ್ನಾಟಕ

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Srinivasa Prasada Passes Away: ನಾಳೆ ಸಿಲ್ಕ್ ಫ್ಯಾಕ್ಟರಿ ಬಳಿ ಅಂಬೇಡ್ಕರ್ ಎಜುಕೇಶಲ್ ಅಂಡ್ ಕಲ್ಚರಲ್ ಟ್ರಸ್ಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಹಾಗಾಗಿ ಬೌದ್ಧ ಧರ್ಮದ ಪ್ರಕಾರ ಅಂತಿಮ ವಿಧಿ ವಿಧಾನ ನಡೆಯಲಿವೆ ಎಂದು ಶ್ರೀನಿವಾಸ್ ಪ್ರಸಾದ್ ಮಗಳು ಪ್ರತಿಮಾ ಪ್ರಸಾದ್‌ ಹೇಳಿದ್ದಾರೆ.

VISTARANEWS.COM


on

srinivasa prasad sutturu sri
ಸುತ್ತೂರು ಶ್ರೀಗಳಿಂದ ಶ್ರೀನಿವಾಸ ಪ್ರಸಾದ್‌ ಅಂತಿಮ ದರ್ಶನ
Koo

ಮೈಸೂರು: ಬಿಜೆಪಿಯ ಹಿರಿಯ (BJP leader) ನಾಯಕ, ದಲಿತ ಮುಖಂಡ, ಚಾಮರಾಜನಗರ ಸಂಸದ (Chamarajanagar MP) ಶ್ರೀನಿವಾಸ ಪ್ರಸಾದ್‌ ಅವರ ಪಾರ್ಥಿವ ಶರೀರದ (Srinivasa Prasada Passes Away) ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 1.00 ಗಂಟೆಯಿಂದ ಅಶೋಕಪುರಂನಲ್ಲಿರುವ ಎಂಟಿಎಂ ಶಾಲೆಯಲ್ಲಿ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಗಣ್ಯರು ಪ್ರಸಾದ್‌ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾಳೆ ಅಂತ್ಯಕ್ರಿಯೆ

ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್‌ ಮನೆಗೆ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ತರಲಾಗಿದ್ದು, ಅಲ್ಲಿಂದ ಎಂಟಿಎಂ ಶಾಲೆಗೆ ತರಲಾಗುತ್ತಿದೆ. 1 ಗಂಟೆ ತನಕ ಮನೆಯಲ್ಲಿ ಶ್ರೀನಿವಾಸ ಪ್ರಸಾದ್ ದರ್ಶನಕ್ಕೆ ಅವಕಾಶ. 1 ಗಂಟೆಯ ನಂತರ ಅಶೋಕ ಪುರಂ ನ ಎಂ.ಟಿ.ಎಂ ಶಾಲೆಯಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ. ನಾಳೆ ಅಶೋಕಪುರಂನಲ್ಲಿ ಮೆರವಣಿಗೆ ನಡೆಯಲಿದೆ. ಸಿಲ್ಕ್ ಫ್ಯಾಕ್ಟರಿ ಬಳಿ ಅಂಬೇಡ್ಕರ್ ಎಜುಕೇಶಲ್ ಅಂಡ್ ಕಲ್ಚರಲ್ ಟ್ರಸ್ಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಹಾಗಾಗಿ ಬೌದ್ಧ ಧರ್ಮದ ಪ್ರಕಾರ ಅಂತಿಮ ವಿಧಿ ವಿಧಾನ ನಡೆಯಲಿವೆ ಎಂದು ಶ್ರೀನಿವಾಸ್ ಪ್ರಸಾದ್ ಮಗಳು ಪ್ರತಿಮಾ ಪ್ರಸಾದ್‌ ಹೇಳಿದ್ದಾರೆ.

ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀನಿವಾಸ ಪ್ರಸಾದ್‌, ಮೊನ್ನೆ ತುಸು ಚೇತರಿಕೆ ಅನುಭವಿಸಿದ್ದರು. ಆಗಮಿಸಿದ ಎಲ್ಲರ ಜೊತೆ ಚೆನ್ನಾಗಿಯೇ ಮಾತನಾಡಿದ್ದ ಅವರಿಗೆ ನಿನ್ನೆಯಿಂದ ಮಾತನಾಡಲು ಸಾಧ್ಯ ಆಗಿರಲಿಲ್ಲ. ಈ ವೇಳೆ ಬರೆದು ಸೂಚಿಸಲು ಕುಟುಂಬಸ್ಥರು ಪೆನ್ನು ಪೇಪರ್ ಕೊಟ್ಟಿದ್ದರು. ಆಗ ಪೇಪರ್‌ನಲ್ಲಿ ʼcoffeeʼ ಅಂತ ಬರೆದಿದ್ದ ಸಂಸದ ಶ್ರೀನಿವಾಸ್ ಪ್ರಸಾದ್, ಕಾಫಿ ತರಿಸಿಕೊಂಡು ಎರಡು ಗುಟುಕು ಕಾಫಿ ಕುಡಿದಿದ್ದರು ಎಂದು ತಿಳಿದುಬಂದಿದೆ.

ದಮನಿತರ ದನಿ: ಸಿಎಂ ಸಿದ್ದರಾಮಯ್ಯ

“ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸ ಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಪರ ದನಿ: ಡಿಕೆ ಶಿವಕುಮಾರ್‌

“ಶೋಷಿತರ ಪರ ಗಟ್ಟಿ ದನಿಯಾಗಿದ್ದ, ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆ ಸುದ್ದಿ ಕೇಳಿ ನೋವಾಗಿದೆ. ಇವರ ನಿಧನದಿಂದ ಮೌಲ್ಯಧಾರಿತ ರಾಜಕಾರಣದ ಕೊಂಡಿ ಮರೆಯಾದಂತಾಗಿದೆ. ಶ್ರೀನಿವಾಸ್ ಪ್ರಸಾದ್ ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಸಚಿವರಾಗಿದ್ದಾಗ ಕರ್ನಾಟಕ ರಾಜ್ಯದ ಬೇಡಿಕೆಗಳಿಗೆ ದನಿಯಾಗಿದ್ದರು. ಕಿರಿಯ ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು, ಮಾದರಿಯಾಗಿದ್ದರು. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಶೋಷಿತರ ಪರ ದನಿ ಎತ್ತುತ್ತಿದ್ದರು. ವಿಧಾನಸಭೆ ಹಾಗೂ ಸಂಸತ್ ಪ್ರತಿನಿಧಿಸಿದ್ದರು. ಕೆಲ ಕಾಲ ಇವರು ಹಾಗೂ ನಾನು ಸಂಪುಟ ಸಹೋದ್ಯೋಗಿಗಳಾಗಿದ್ದೆವು. ಈ ವೇಳೆ ಅವರ ರಾಜಕೀಯ ಜಾಣ್ಮೆಯನ್ನು ಹತ್ತಿರದಿಂದ ಕಂಡಿದ್ದೇನೆ. ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ, ಅಭಿಮಾನಿಗಳಿಗೆ ಭಗವಂತನು ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ರಾಷ್ಟ್ರದ ಗಮನ ಸೆಳೆದ ನಾಯಕ: ಬಿಎಸ್‌ವೈ

“15 ದಿನಗಳ ಹಿಂದಷ್ಟೆ ಅವರನ್ನು ನಾನು ಭೇಟಿ ಮಾಡಿದ್ದೆ. ರಾಜ್ಯಾದ್ಯಂತ ಪ್ರವಾಕ್ಕೆ ಬರಬೇಕು ಎಂದು ಹೇಳಿದ್ದೆ. ಅವರೊಂದಿಗೆ ಮಾತುಕತೆಯನ್ನೂ ಸಹ ನಡೆಸಿದ್ದೆ. ಅಷ್ಟರೊಳಗೆ ಅವರು ಅಕಾಲಿಕವಾಗಿ ಸಾವನ್ನಪ್ಪಿರೋದು ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ. ಅವರ ಕುಟುಂಬದವರಿಗೆ ನೋವು ಸಹಿಸುವ ಶಕ್ತಿ ನೀಡಲಿ. ಶ್ರೀನಿವಾಸ್ ಪ್ರಸಾದ್ ಕೇವಲ ದಲಿತ ನಾಯಕ ಅಲ್ಲ ಅವರು ರಾಷ್ಟ್ರದ ಗಮನ ಸೆಳೆದ ನಾಯಕ. ಪ್ರತಿ ವಿಚಾರದ ಬಗ್ಗೆಯೂ ಬಹಳ ಆಳವಾದ ಜ್ಞಾನ ಹೊಂದಿದ್ದರು” ಎಂದು ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ನೆನೆದಿದ್ದಾರೆ.

ಅಪರೂಪದ ಜನನಾಯಕ: ಎಚ್‌ಡಿಕೆ

“ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ. ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್ ಅವರು; 27 ವರ್ಷಗಳ ಸುದೀರ್ಘ ಸಂಸತ್ ಸದಸ್ಯರಾಗಿ 7 ಪ್ರಧಾನಿಗಳನ್ನು ಕಂಡಿದ್ದರು. ಅವರು ಅಪರೂಪದಲ್ಲಿ ಅಪರೂಪದ ಜನನಾಯಕರಾಗಿದ್ದರು. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬದ್ಧತೆಗೆ ಸಾಕ್ಷಿ: ವಿಜಯೇಂದ್ರ

“ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ವಿ. ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು. ಪ್ರಸ್ತುತ ಕಾಲಮಾನದಲ್ಲಿ ಮಾನ್ಯ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ಮಾನ್ಯ ಶ್ರೀನಿವಾಸ್ ಪ್ರಸಾದ್ ಅವರು ರಾಜ್ಯದ ಹಿತ ಕಾಯುವಲ್ಲಿ ಯಶಸ್ವಿ ಆಗಿದ್ದಾರೆ. ವಿಶೇಷವಾಗಿ ದಲಿತ ಸಮುದಾಯದಿಂದ ಬಂದು ದಲಿತರ ದನಿಯಾಗಿ ಕೆಲಸ ಮಾಡಿದ್ದಾರೆ. ಕಂದಾಯ ಸಚಿವ ಆಗಿಯೂ ಸಾಕಷ್ಟು ಕೆಲಸ ಮಾಡಿದ್ದರು. ನನಗೆ ಬಹಳಷ್ಟು ನೋವಾಗಿದೆ. ಅವರ ಕುಟುಂಬ ವರ್ಗಕ್ಕೆ ನಷ್ಟ ಭರಿಸುವ ಶಕ್ತಿ ದೊರೆಯಲಿ” ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಸಾಹಿತಿ ದೇವನೂರು ಮಹಾದೇವ, ಶಾಸಕ ಜಿಟಿ ದೇವೇಗೌಡ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮುಂತಾದವರು ಮೃತರ ನಿವಾಸಕ್ಕೆ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ಸೂಚಿಸಿದ್ದಾರೆ. “ಶ್ರೀನಿವಾಸ ಪ್ರಸಾದ್ ಶೋಷಿತ ವರ್ಗದ ಧ್ವನಿಯಾಗಿ ಶಕ್ತಿ ತುಂಬಿದ್ದರು. ಮಂತ್ರಿಯಾಗಿ ಅನೇಕ ಒಳ್ಳೆಯ ಕಾರ್ಯಕ್ರಮ ಕೊಟ್ಟವರು” ಎಂದು ಜಿಟಿ ದೇವೇಗೌಡ ನುಡಿದರು.

ಇದನ್ನೂ ಓದಿ: Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Continue Reading

ಪ್ರಮುಖ ಸುದ್ದಿ

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

Hasan Pen Drive Case: ಅಶ್ಲೀಲ ವಿಡಿಯೋ ‌ಪೆನ್‌ಡ್ರೈವ್ ಸೋಶಿಯಲ್‌ ಮೀಡಿಯಾ ಮೂಲಕ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಯಲು ಅಗತ್ಯ ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ. ಕೆಲ ಪೆನ್‌ ಡ್ರೈವ್‌ಗಳನ್ನು ಹೊಳೆನರಸೀಪುರ ಪೊಲೀಸರು ವಶಕ್ಕೆ ‌ಪಡೆದಿದ್ದಾರೆ. ಪೆನ್‌ಡ್ರೈವ್‌ಗಳನ್ನು ಎಸ್‌ಐಟಿ‌ ತಂಡಕ್ಕೆ‌ ಹೊಳೆನರಸೀಪುರ ಪೊಲೀಸರು ಹಸ್ತಾಂತರ ಮಾಡಲಿದ್ದಾರೆ.

VISTARANEWS.COM


on

hd revanna prajwal revanna
Koo

ಹಾಸನ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS leader) ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ (Hasan Pen Drive Case) ಇನ್ನೊಬ್ಬ ಆರೋಪಿಯಾಗಿ ಎಫ್‌ಐಆರ್‌ನಲ್ಲಿ ದಾಖಲಾಗಿರುವ ಜೆಡಿಎಸ್‌ ಮುಖಂಡ ಹೆಚ್. ಡಿ ರೇವಣ್ಣ (HD Revanna) ಅವರು ಇಂದು ಹೈಕೋರ್ಟ್ (High Court) ಮೊರೆ ಹೋಗುವ ಸಾಧ್ಯತೆ ಇದೆ. ಹಗರಣದಲ್ಲಿ ದಾಖಲಾಗಿರುವ ಎಫ್‌ಐಆರ್ ಕೂಡ ನೂತನವಾಗಿ ರಚನೆಯಾಗಿರುವ ಎಸ್‌ಐಟಿಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ.

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಕೆ ಸಿಂಗ್‌ ನೇತೃತ್ವದಲ್ಲಿ ನಿನ್ನೆ ಎಸ್‌ಐಟಿ ರಚನೆಯ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಅದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಎಸ್‌ಐಟಿಗೆ ಎಫ್‌ಐಆರ್ ವರ್ಗಾವಣೆ ಸಾಧ್ಯತೆ ಇದೆ. ಹೆಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರ ಮೇಲೂ ಎಫ್‌ಐಆರ್ ದಾಖಲಿಸಲಾಗಿದೆ.

ಮನೆಕೆಲಸದಾಕೆಯೇ ನೀಡಿರುವ ದೂರು ಇದಾಗಿದೆ. ಸಂಸದ ಪ್ರಜ್ವಲ್‌ ರೇವಣ್ಣ ಅವರು ದೇಶ ತೊರೆದು ಜರ್ಮನಿಗೆ ಹೋಗಿದ್ದಾರೆ ಎನ್ನಲಾಗಿದೆ. ಹೆಚ್. ಡಿ ರೇವಣ್ಣ ಇಂದು ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ಲೈಂಗಿಕ ಕಿರುಕುಳ ಪ್ರಕರಣ ಗಂಭೀರ ಸ್ವರೂಪದ್ದಾದ್ದರಿಂದ, ಎಫ್‌ಐಆರ್‌ಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಜೊತೆಗೆ ಸಂಭಾವ್ಯ ಬಂಧನ ತಪ್ಪಿಸಲು ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಅಶ್ಲೀಲ ವಿಡಿಯೋ ‌ಪೆನ್‌ಡ್ರೈವ್ ಸೋಶಿಯಲ್‌ ಮೀಡಿಯಾ ಮೂಲಕ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಯಲು ಅಗತ್ಯ ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ. ಕೆಲ ಪೆನ್‌ ಡ್ರೈವ್‌ಗಳನ್ನು ಹೊಳೆನರಸೀಪುರ ಪೊಲೀಸರು ವಶಕ್ಕೆ ‌ಪಡೆದಿದ್ದಾರೆ. ಪೆನ್‌ಡ್ರೈವ್‌ಗಳನ್ನು ಎಸ್‌ಐಟಿ‌ ತಂಡಕ್ಕೆ‌ ಹೊಳೆನರಸೀಪುರ ಪೊಲೀಸರು ಹಸ್ತಾಂತರ ಮಾಡಲಿದ್ದಾರೆ.

ಇನ್ನು ಎಫ್‌ಎಸ್‌ಎಲ್‌ ಪರಿಶೀಲನೆಗೆ ವಿಡಿಯೋ ರೆಕಾರ್ಡ್ ಮಾಡಿರುವ ಮಾಸ್ಟರ್ ಡಿವೈಸ್ ಬೇಕಿರುವ ಹಿನ್ನೆಲೆಯಲ್ಲಿ, ಪ್ರಜ್ವಲ್ ರೇವಣ್ಣ ಅವರ ಫೋನ್‌ ವಶಕ್ಕೆ ಪಡೆಯಬೇಕಿದೆ. ಈ ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಇದಕ್ಕಾಗಿ ಪ್ರಜ್ವಲ್ ರೇವಣ್ಣ ಅವರ ಫೋನ್ ಅನ್ನು ಎಸ್ಐಟಿ ತಂಡ ವಶಕ್ಕೆ ಪಡೆಯಲಿದೆ. ಆದರೆ ಈಗಾಗಲೆ ಪ್ರಜ್ವಲ್ ರೇವಣ್ಣ ನಾಟ್‌ ರೀಚಬಲ್‌ ಆಗಿದ್ದು, ತಮ್ಮ ಮೊಬೈಲ್ ಬದಲಾವಣೆ ಮಾಡಿದ್ದಾರೆ ಎಂಬ ಶಂಕೆ ಇದೆ. ಹೀಗಾಗಿ ವಿಡಿಯೋ ರೆಕಾರ್ಡ್ ಆದ‌‌ ಸಂದರ್ಭದ ಫೋನ್‌ ಐಎಂಇಐ ನಂಬರ್ ಕೂಡ ಎಸ್‌ಐಟಿ ಟ್ರ್ಯಾಕ್ ಮಾಡಲಿದೆ.

ಮಹಿಳೆಯಿಂದ ಲೈಂಗಿಕ ದೌರ್ಜನ್ಯ ದೂರು

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಮಹಿಯೊಬ್ಬರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ತಂದೆ-ಮಗ ಇಬ್ಬರ ಮೇಲೂ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ.

ದೂರಿನಲ್ಲಿ ಏನಿದೆ?

47 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ದೂರುದಾರೆಗೆ ಭವಾನಿ ರೇವಣ್ಣ ಸೋದರತ್ತೆ ಮಗಳು. ಎಚ್‌.ಡಿ. ರೇವಣ್ಣ ಶಾಸಕರಾಗಿದ್ದಾಗ ನಾಗಲಾಪುರ ಹಾಲಿನ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ ಬಿಸಿಎಂ ಹಾಸ್ಟೆಲ್‌ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. 2015ರಲ್ಲಿ ರೇವಣ್ಣ ಅವರ ಮನೆಯಲ್ಲೇ ಕೆಲಸಕ್ಕೆ ಸೇರಿಸಿಕೊಂಡಿದ್ದರು. ಒಟ್ಟು 6 ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಸೇರಿಕೊಂಡ ನಾಲ್ಕು ತಿಂಗಳಿಗೆ ಕೊಠಡಿಗೆ ಬರುವಂತೆ ರೇವಣ್ಣ ಆಹ್ವಾನಿಸಿದ್ದರು.

ಇನ್ನು ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಿದ್ದಾಗ ಎಚ್.ಡಿ. ರೇವಣ್ಣ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸ್ಟೋರ್ ರೂಮ್‌ನಲ್ಲಿ ಹಣ್ಣು ಕೊಡೋ ನೆಪದಲ್ಲಿ ಕೈ ಹಿಡಿದು ಎಳೆದಾಡಿದ್ದರು. ಅದೇ ರೀತಿ ಅಡುಗೆ ಮನೆಯಲ್ಲಿ ಇದ್ದಾಗ ಪ್ರಜ್ವಲ್ ರೇವಣ್ಣ ಹಿಂಬದಿಯಿಂದ ಬಂದು ಮೈ‌ಮುಟ್ಟಿ ಹೊಟ್ಟೆ ಜಿಗುಟುತ್ತಿದ್ದರು. ಜೊತೆಗೆ ಎಣ್ಣೆ ಹಚ್ಚಲು ಪದೇ ಪದೇ ಕರೆದು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮನೆಯಲ್ಲಿದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಮಗಳ ಜೊತೆ ಅಸಭ್ಯವಾಗಿ ಮಾತನಾಡುತ್ತಿದ್ದರು. ಇದಕ್ಕೆ ಮಗಳು ಹೆದರಿಕೊಂಡು ನಂಬರ್ ಬ್ಲಾಕ್ ಕೂಡ ಮಾಡಿದ್ದಳು. ಇದರಿಂದ‌ ಮನೆ ಕೆಲಸ ಬಿಟ್ಟು ಹೊರಗಡೆ ಬಂದಿದ್ದಾಗಿ ದೂರಿನಲ್ಲಿ ತಿಳಿಸಿದ್ದಾಳೆ.

ಈಗ ಕೆಲ ವಿಡಿಯೊಗಳು ವೈರಲ್ ಆಗುತ್ತಿದ್ದು, ನನ್ನ ಗಂಡ ಶೀಲ ಶಂಕಿಸುತ್ತಿದ್ದಾನೆ. ಇದರಿಂದ ಮನನೊಂದು ದೂರು ನೀಡುತ್ತಿರೋದಾಗಿ 47 ವರ್ಷದ ಮಹಿಳೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಮಹಿಳೆ ದೂರಿನನ್ವಯ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಇಬ್ಬರ ಮೇಲೂ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Continue Reading

ಕರ್ನಾಟಕ

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Narendra Modi: ನರೇಂದ್ರ ಮೋದಿ ಅವರು ಸೋಮವಾರ ಬಾಗಲಕೋಟೆಯಲ್ಲಿ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಹಾಗೆಯೇ, ಭದ್ರತಾ ವ್ಯವಸ್ಥೆಯನ್ನೂ ಕೈಗೊಳ್ಳಲಾಗಿದೆ.

VISTARANEWS.COM


on

PM Narendra Modi
Koo

ಬಾಗಲಕೋಟೆ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಭಾನುವಾರ (ಏಪ್ರಿಲ್‌ 28) ಕರ್ನಾಟಕದ (Karnataka) ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರವೂ (ಏಪ್ರಿಲ್‌ 29) ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ನರೇಂದ್ರ ಮೋದಿ ಅವರು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಮೋದಿ ಭಾಷಣಕ್ಕಾಗಿ 90/100 ಅಡಿ ಮುಖ್ಯ ವೇದಿಕೆ ಪೆಂಡಾಲು ಹಾಕಲಾಗಿದೆ. 60/40 ಅಡಿಯ ಮುಖ್ಯ ವೇದಿಕೆಯಲ್ಲಿ, 32 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬಿಸಿಲು ಹೆಚ್ಚಾದ ಕಾರಣ ವೇದಿಕೆ ಹವಾನಿಯಂತ್ರಿತವಾಗಿ ಇರಲಿದೆ. ಇನ್ನು ಸಾರ್ವಜನಿಕರಿಗೆ 400 ಅಡಿ ಅಗಲ, 600 ಅಡಿ ಉದ್ದದ ಬೃಹತ್ ಪೆಂಡಾಲ್ ವೇದಿಕೆ ನಿರ್ಮಿಸಲಾಗಿದೆ. ಜರ್ಮನ್ ಮಾದರಿಯಲ್ಲಿ ವೇದಿಕೆ ನಿರ್ಮಿಸಲಾಗಿದೆ.

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್‌ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ್‌ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚನೆ ಮಾಡಲಿದ್ದಾರೆ. ಒಟ್ಟು 70ರ ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗೆ 1,100ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಮೂವರು ಎಸ್‌ಪಿ, ನಾಲ್ವರು ಎಎಸ್‌ಪಿ, 12 ಡಿಎಸ್‌ಪಿ, 32 ಸಿಪಿಐ, 88 ಪಿಎಸ್‌ಐ, 1,049 ಪೊಲೀಸ್‌ ಪೇದೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ವೇದಿಕೆ ಬಲಭಾಗ ಮೂರು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಮೋದಿ ಅವರ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ಉಳಿದುಕೊಂಡಿದ್ದಾರೆ. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Continue Reading
Advertisement
dheeren rajkumar announces a new film change his name
ಸ್ಯಾಂಡಲ್ ವುಡ್3 mins ago

Dheeren Rajkumar: ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದ ರಾಜ್‌ಕುಮಾರ್ ಮೊಮ್ಮಗ!

MS Dhoni
Latest12 mins ago

MS Dhoni : ಐಪಿಎಲ್​ನಲ್ಲಿ 150 ಪಂದ್ಯಗಳನ್ನು ಗೆದ್ದ ಹೆಗ್ಗಳಿಕೆಗೆ ಪಾತ್ರರಾದ ಧೋನಿ; ಅವರ ಬಳಿಕ ಯಾರಿದ್ದಾರೆ?

Mahesh Babu shares sweet moments with sister Manjula and Prabhas aunt
South Cinema19 mins ago

Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

Kavya Maran
Latest36 mins ago

Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

ವೈರಲ್ ನ್ಯೂಸ್37 mins ago

Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

viral video tn rao
ಪ್ರಮುಖ ಸುದ್ದಿ41 mins ago

Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

Ramana Avatara trailer out
ಸಿನಿಮಾ42 mins ago

Ramana Avatara Trailer: ರಿಷಿ ಅಭಿನಯದ ʻರಾಮನ ಅವತಾರʼ ಟ್ರೈಲರ್‌ ರಿಲೀಸ್

PM Narendra modi in Bagalakote for Election Campaign and here is Live telecast
Lok Sabha Election 202443 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Amith Shah
Latest58 mins ago

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Mahanati Show complaint against Gagana Contestant and Ramesh
ಕಿರುತೆರೆ1 hour ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote for Election Campaign and here is Live telecast
Lok Sabha Election 202443 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202420 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202422 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202424 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಟ್ರೆಂಡಿಂಗ್‌