China Spy Balloon: ಚೀನಾದ ಸ್ಪೈ ಬಲೂನ್‌ಅನ್ನು ಅಮೆರಿಕ ಹೊಡೆದುರುಳಿಸಿದ್ದು ಹೇಗೆ? ಇಲ್ಲಿದೆ ರೋಚಕ ವಿಡಿಯೊ - Vistara News

ವಿದೇಶ

China Spy Balloon: ಚೀನಾದ ಸ್ಪೈ ಬಲೂನ್‌ಅನ್ನು ಅಮೆರಿಕ ಹೊಡೆದುರುಳಿಸಿದ್ದು ಹೇಗೆ? ಇಲ್ಲಿದೆ ರೋಚಕ ವಿಡಿಯೊ

China Spy Balloon: ಕೆನಡಾ ಗಡಿಯಲ್ಲಿ ಹಾರಾಡುತ್ತಿದ್ದ ಚೀನಾದ ಸ್ಪೈ ಬಲೂನ್‌ಅನ್ನು ಅಮೆರಿಕವು ಹೊಡೆದುರುಳಿಸಿದ ವಿಡಿಯೊ ಈಗ ವೈರಲ್‌ ಆಗಿದೆ. ಅಮೆರಿಕ ವಾಯುಪಡೆಯ ಕಾರ್ಯಾಚರಣೆಯು ಮೈನವಿರೇಳಿಸುವಂತಿದೆ.

VISTARANEWS.COM


on

China Spy Balloon
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಅಮೆರಿಕ ಇರುವುದೇ ಹಾಗೆ. ತನ್ನ ದೇಶದ ತಂಟೆಗೆ ಬರುವ ಉಗ್ರರನ್ನು ಹೊಡೆದುರುಳಿಸುತ್ತದೆ. ದೇಶದ ಭದ್ರತೆ ವಿಷಯಕ್ಕೆ ಬಂದಾಗ ದಿಟ್ಟ ಕ್ರಮ ತೆಗೆದುಕೊಳ್ಳುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಇತ್ತೀಚೆಗೆ ಕೆನಡಾ ಗಡಿಗಳಲ್ಲಿ ಶಂಕಾಸ್ಪದವಾಗಿ ಹಾರಾಡುತ್ತಿದ್ದ, ಚೀನಾದ ಗೂಢಚಾರ ಬಲೂನ್‌ಗಳು (China Spy Balloon) ಎಂದೇ ಹೇಳಲಾಗುತ್ತಿದ್ದ ಬಲೂನ್‌ಗಳನ್ನು ಅಮೆರಿಕ ಹೊಡೆದುರುಳಿಸಿದೆ.

ಕಳೆದ ಒಂದು ವಾರದಲ್ಲಿ ಅಮೆರಿಕವು ಮೂರ್ನಾಲ್ಕು ಬಲೂನ್‌ಗಳನ್ನು ಹೊಡೆದುರುಳಿಸಿದೆ. ಅಮೆರಿಕ ವಾಯುಪಡೆಯ ಎರಡು ವಿಮಾನಗಳು ಬಲೂನಿನ ಸಮೀಪ ತೆರಳಿ, ಅವುಗಳಿಗೆ ಗುರಿ ಇಟ್ಟು, ಎಲ್ಲೂ ಕೂದಲೆಳೆಯಷ್ಟೂ ತಪ್ಪಾಗದ ಹಾಗೆ ಕಾರ್ಯಾಚರಣೆ ಕೈಗೊಂಡಿವ ವಿಡಿಯೊ ಈಗ ವೈರಲ್‌ ಆಗಿದೆ. ಇದು ಅಮೆರಿಕದ ವಾಯುಪಡೆಯ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿ ಎಂದೂ ಹೇಳಲಾಗುತ್ತಿದೆ.

ಇದನ್ನೂ ಓದಿ: Spy Balloon: ಕೆನಡಾದ ವಾಯು ಪ್ರದೇಶದಲ್ಲಿ ಬಲೂನ್, ಹೊಡೆದುರುಳಿಸಿದ ಅಮೆರಿಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

US sanction: ಇರಾನ್‌ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧ ಇನ್ನೂ ಮುಂದುವರೆಯಲಿದೆ. ಇದು ಭಾರತಕ್ಕೆ ಮುಂದೊಂದು ದಿನ ಭಾರೀ ಅಪಾಯವನ್ನು ತಂದೊಡ್ಡಬಹುದು ಎಂದು ಎಚ್ಚರಿಕೆ ನೀಡಿದೆ. ಕೆಲವು ದಿನಗಳ ಹಿಂದೆ ಇರಾನ್‌ ಜೊತೆ ವ್ಯಾಪಾರ ಸಂಬಂದ ಹೊಂದಿದ್ದ ಸಂಸ್ಥೆಗಳು, ವ್ಯಕ್ತಿಗಳ ಮೇಲೆ ಅಮೆರಿಕ ನಿರ್ಬಂಧ ಹೇಳಿರುವ ಬಗ್ಗೆ ನಿಮಗೆ ತಿಳಿದಿರಬಹುದು. ಹೀಗಾಗಿ ಇರಾನ್‌ ಜೊತೆಗೆ ಸಂಬಂಧ ಬೆಳೆಸಿ ನಿರ್ಬಂಧದ ರಿಸ್ಕ್‌ ಅನ್ನು ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಅಮೆರಿಕ ಹೇಳಿದೆ.

VISTARANEWS.COM


on

US Sanction
Koo

ವಾಷಿಂಗ್ಟನ್‌: ಇರಾನ್‌(Iran) ಜೊತೆಗೆ ಭಾರತ ಚಬಾಹರ್‌ ಬಂದರು(Chabahar port) ಒಪ್ಪಂದ ಮಾಡಿಕೊಂಡಿರುವ ಬೆನ್ನಲ್ಲೇ ಅಮೆರಿಕ ನಿರ್ಬಂಧ(US sanction) ಹೇರುವ ಎಚ್ಚರಿಕೆ ನೀಡಿದೆ. ಇರಾನ್‌ ಜೊತೆಗೆ ವ್ಯಾಪಾರ-ವಹಿವಾಟಿಗಳನ್ನು ಮುಂದುವರೆಸಿದರೆ ನಿರ್ಬಂಧ ವಿಧಿಸಲಾಗುತ್ತದೆ ಎಂದು ಅಮೆರಿಕ ಎಲ್ಲಾ ದೇಶಗಳಿಗೆ ಎಚ್ಚರಿಸಿದೆ. ಸ್ಟೇಟ್‌ ಡಿಪಾರ್ಟ್‌ಮೆಂಟ್‌ ಉಪ ವಕ್ತಾರ ವೇದಾಂತ್‌ ಪಟೇಲ್‌(State Department Deputy Spokesperson Vedant Patel) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಚಬಾಹರ್‌ ಬಂದರಿಗೆ ಸಂಬಂಧಿಸಿದಂತೆ ಭಾರತ-ಇರಾನ್‌ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಇರಾನ್‌ನೊಂದಿಗಿನ ದ್ವಿಪಕ್ಷೀಯ ಸಂಬಂಧಕ್ಕೆ ಸಂಬಂಧಿಸಿದಂತೆ ತನ್ನದೇ ಆದ ವಿದೇಶಾಂಗ ನೀತಿ ಅನುಸರಿಸಲು ಭಾರತ ಮುಕ್ತವಾಗಿದೆ. ಆದರೆ ಇರಾನ್‌ ಮೇಲೆ ಅಮೆರಿಕ ನಿರ್ಬಂಧ ಹೇರಿರುವುದನ್ನು ಭಾರತ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

ಇರಾನ್‌ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧ ಇನ್ನೂ ಮುಂದುವರೆಯಲಿದೆ. ಇದು ಭಾರತಕ್ಕೆ ಮುಂದೊಂದು ದಿನ ಭಾರೀ ಅಪಾಯವನ್ನು ತಂದೊಡ್ಡಬಹುದು ಎಂದು ಎಚ್ಚರಿಕೆ ನೀಡಿದೆ. ಕೆಲವು ದಿನಗಳ ಹಿಂದೆ ಇರಾನ್‌ ಜೊತೆ ವ್ಯಾಪಾರ ಸಂಬಂದ ಹೊಂದಿದ್ದ ಸಂಸ್ಥೆಗಳು, ವ್ಯಕ್ತಿಗಳ ಮೇಲೆ ಅಮೆರಿಕ ನಿರ್ಬಂಧ ಹೇಳಿರುವ ಬಗ್ಗೆ ನಿಮಗೆ ತಿಳಿದಿರಬಹುದು. ಹೀಗಾಗಿ ಇರಾನ್‌ ಜೊತೆಗೆ ಸಂಬಂಧ ಬೆಳೆಸಿ ನಿರ್ಬಂಧದ ರಿಸ್ಕ್‌ ಅನ್ನು ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಅಮೆರಿಕ ಹೇಳಿದೆ.

ಎರಡು ವಾರಗಳ ಹಿಂದೆ ಇರಾನಿಯನ್‌ ಸೇನೆ ಜೊತೆ ಅಕ್ರಮ ವ್ಯಾಪಾರ ವಹಿವಾಟು ಹೊಂದಿರುವ 12ಕ್ಕೂ ಅಧಿಕ ಕಂಪನಿಗಳು, ಹಡುಗುಗಳು ಮತ್ತು ಉದ್ಯಮಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿತ್ತು. ಇದರಲ್ಲಿ ಭಾರತ ಮೂರು ಕಂಪನಿಗಳು(Indian based firms) ಸೇರಿದ್ದವು. ರಷ್ಯಾ-ಉಕ್ರೇನ್‌ ಯುದ್ಧ ಸಂದರ್ಭದಲ್ಲಿ ಈ ಕಂಪನಿಗಳು, ಹಡಗುಗಳು ಮತ್ತು ವ್ಯಕ್ತಿಗಳು ಇರಾನ್‌ನ ಮಾನವ ರಹಿತ ವೈಮಾನಿಕ ವಾಹನ- ಡ್ರೋನ್‌(UAVs) ಗಳನ್ನು ರಷ್ಯಾಗೆ ಪೂರೈಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು ಎಂದು ಅಮೆರಿಕದ ಹೇಳಿತ್ತು.

ಇನ್ನು ಇರಾನ್‌ನ ಸಾಗರೋತ್ತರ ವ್ಯಾಪಾರ ವಹಿವಾಟು ನೋಡಿಕೊಳ್ಳುತ್ತಿರುವ ಕಂಪನಿಗಳಲ್ಲಿ ಸಹರಾ ಥಂಡರ್‌ ಪ್ರಮುಖವಾಗಿದೆ. ಈ ಕಂಪನಿಗೆ ಭಾರತೀಯ ಮೂಲದ ಮೂರು ಕಂಪನಿಗಳು ಸಹಾಯ ನೀಡುತ್ತಿವೆ. ಹೀಗಾಗಿ ಭಾರತೀಯ ಮೂಲದ ಜೆನ್‌ ಶಿಪ್ಪಿಂಗ್‌, ಪೋರ್ಟ್‌ ಇಂಡಿಯಾ ಪ್ರೈವೆಟ್‌ ಲಿಮಿಟೆಡ್‌ ಮತ್ತು ಸೀ ಆರ್ಟ್‌ ಶಿಪ್‌ ಮ್ಯಾನೇಜ್‌ಮೆಂಟ್‌(OPC) ಪ್ರೈವೆಟ್‌ ಲಿಮಿಟೆಡ್‌ಗೆ ಅಮೆರಿಕ ನಿರ್ಬಂಧ ವಿಧಿಸಿದೆ.

ಸಹಾರಾ ಥಂಡರ್‌ ಕಂಪನಿ ಇರಾನ್‌ ಸೇನೆಯ ಪರವಾಗಿ ಇರಾನಿಯನ್‌ ಸರಕುಗಳನ್ನು ಚೀನಾ, ರಷ್ಯಾ ಮತ್ತು ವೆನೆಜುವೆಲಾಗಳಿಗೆ ಸಾಗಾಟ ಮಾಡುತ್ತಿದೆ. ಇದೀಗ ಈ ಕಂಪನಿ ಯುಎಇ ಮೂಲದ ಸೇಫ್ ಸೀಸ್ ಶಿಪ್ ಮ್ಯಾನೇಜ್‌ಮೆಂಟ್ ಎಫ್‌ಜೆಇನ ಕುಕ್ ಐಲ್ಯಾಂಡ್ಸ್-ಫ್ಲ್ಯಾಗ್ಡ್ ನೌಕೆ CHEM (IMO 9240914) ಗಾಗಿ ಭಾರತ ಮೂಲದ ಝೆನ್ ಶಿಪ್ಪಿಂಗ್ ಮತ್ತು ಪೋರ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದೆ. ಭಾರತ ಮೂಲದ ಸೀ ಆರ್ಟ್ ಶಿಪ್ ಮ್ಯಾನೇಜ್‌ಮೆಂಟ್ (OPC) ಪ್ರೈವೇಟ್ ಲಿಮಿಟೆಡ್ ಮತ್ತು ಯುಎಇ ಮೂಲದ ಕಂಪನಿ ಟ್ರಾನ್ಸ್ ಗಲ್ಫ್ ಏಜೆನ್ಸಿ LLC ಸಹಾರಾ ಥಂಡರ್‌ಗೆ ಬೆಂಬಲವಾಗಿ ಹಡಗು ನಿರ್ವಹಣಾ ಸೇವೆಗಳನ್ನು ಒದಗಿಸಲು ಒಟ್ಟಾಗಿ ಕೆಲಸ ಮಾಡಿದೆ ಎಂದು ಅಮೆರಿಕ ಹೇಳಿದೆ.

ಇದನ್ನೂ ಓದಿ:Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

ರಷ್ಯಾ-ಉಕ್ರೇನ್‌ ಯುದ್ಧದ ಸಂದರ್ಭದಲ್ಲಿ ಇರಾನ್‌, ರಷ್ಯಾಗೆ ತನ್ನ ಬೆಂಬಲ ಸೂಚಿಸಿತ್ತು. ಅಲ್ಲದೇ ಇದೀಗ ಇಸ್ರೇಲ್‌ ಮೇಲೂ ದಾಳಿ ಮಾಡುವ ಮೂಲಕ ತನ್ನ ಉದ್ದಟತನ ಮೆರೆದಿದೆ. ಡ್ರೋನ್‌, ಯುದ್ಧ ಸಾಮಾಗ್ರಿಗಳು ಉಗ್ರರ ಕೈಗೆ ಸುಲಭವಾಗಿ ಸಿಗುವಂತೆ ಮಾಡುವ ಮೂಲಕ ವಿನಾಶಕಾರಿಯಾಗಿ ಇರಾನ್‌ ಬೆಳೆಯುತ್ತಿದೆ ಎಂದು ಅಮೆರಿಕ ಆತಂಕ ವ್ಯಕ್ತಪಡಿಸಿದೆ.

Continue Reading

ವಿದೇಶ

Israel-Hamas Conflict: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

Israel-Hamas Conflict: 2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ನಡೆಸಿದ ದಾಳಿಗೆ ತೀವ್ರ ಪ್ರಮಾಣದಲ್ಲಿ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್‌ ಸೈನಿಕರು ಇಂದಿಗೂ ಕದನ ವಿರಾಮ ಘೋಷಿಸಿಲ್ಲ. ಈ ಮಧ್ಯೆ ಗಾಜಾದಲ್ಲಿ ಕೆಲಸ ಮಾಡುತ್ತಿದ್ದ ವಿಶ್ವಸಂಸ್ಥೆಯ ಭಾರತೀಯ ಸಿಬ್ಬಂದಿಯೊಬ್ಬರು ರಫಾದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತ ಸಿಬ್ಬಂದಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ಇಲಾಖೆಯ (DSS) ಸದಸ್ಯರಾಗಿದ್ದರು. ಮೃತರ ಗುರುತು ಇನ್ನೂ ಬಹಿರಂಗಪಡಿಸಲಾಗಿಲ್ಲವಾದರೂ ಅವರು ಭಾರತದಿಂದ ಮೂಲದವರು ಮತ್ತು ಭಾರತೀಯ ಮಾಜಿ ಸೇನಾ ಸಿಬ್ಬಂದಿ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Israel-Hamas Conflict
Koo

ಗಾಜಾ: 2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ನಡೆಸಿದ ದಾಳಿಗೆ ತೀವ್ರ ಪ್ರಮಾಣದಲ್ಲಿ ಪ್ರತಿದಾಳಿ (Israel-Hamas Conflict) ನಡೆಸುತ್ತಿರುವ ಇಸ್ರೇಲ್‌ ಸೈನಿಕರು ಇಂದಿಗೂ ಕದನ ವಿರಾಮ ಘೋಷಿಸಿಲ್ಲ. ಹಮಾಸ್‌ ಉಗ್ರರ ಅಡಗು ತಾಣವಾಗಿರುವ ಗಾಜಾ ನಗರದ ಮೇಲೆ ಇಸ್ರೇಲ್‌ ಸತತವಾಗಿ ದಾಳಿ ನಡೆಸಿ, ಉಗ್ರರನ್ನು ಸದೆಬಡಿಯುತ್ತಿದೆ. ಈ ಮಧ್ಯೆ ಗಾಜಾದಲ್ಲಿ ಕೆಲಸ ಮಾಡುತ್ತಿದ್ದ ವಿಶ್ವಸಂಸ್ಥೆಯ ಭಾರತೀಯ ಸಿಬ್ಬಂದಿಯೊಬ್ಬರು ರಫಾದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮೃತ ಸಿಬ್ಬಂದಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ಇಲಾಖೆಯ (DSS) ಸದಸ್ಯರಾಗಿದ್ದರು. ಮೃತರ ಗುರುತು ಇನ್ನೂ ಬಹಿರಂಗಪಡಿಸಲಾಗಿಲ್ಲವಾದರೂ ಅವರು ಭಾರತದಿಂದ ಮೂಲದವರು ಮತ್ತು ಭಾರತೀಯ ಮಾಜಿ ಸೇನಾ ಸಿಬ್ಬಂದಿ ಎಂದು ಮೂಲಗಳು ತಿಳಿಸಿವೆ.

ʼʼಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದ ಬಳಿಕ ಗಾಜಾದಲ್ಲಿ ಮೊದಲ ಬಾರಿ ವಿಶ್ವಸಂಸ್ಥೆಯ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ರಫಾದ ಯುರೋಪಿಯನ್ ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದಾಗ ಅವರಿದ್ದ ವಾಹನ ಅಪಘಾತಕ್ಕೆ ಈಡಾಗಿ ಮೃತಪಟ್ಟಿದ್ದಾರೆ. ಅವರ ಜತೆಗಿದ್ದ ಮತ್ತೊಬ್ಬ ಡಿಎಸ್ಎಸ್ ಸಿಬ್ಬಂದಿ ಗಾಯಗೊಂಡಿದ್ದಾರೆʼʼ ಎಂದು ವರದಿಯೊಂದು ತಿಳಿಸಿದೆ.

ಸಂತಾಪ

ಘಟನೆಯ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ʼʼವಿಶ್ವಸಂಸ್ಥೆಯ ಸುರಕ್ಷತಾ ಮತ್ತು ಭದ್ರತಾ ಇಲಾಖೆಯ ಸಿಬ್ಬಂದಿಯೊಬ್ಬರು ಸೋಮವಾರ ಬೆಳಿಗ್ಗೆ ರಾಫಾದ ಯುರೋಪಿಯನ್ ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದಾಗ ಮೃತಪಟ್ಟಿದ್ದಾರೆ ಎನ್ನುವ ವಿಚಾರ ತಿಳಿದು ತೀವ್ರ ದುಃಖವಾಗಿದೆʼʼ ಎಂದು ಬರೆದುಕೊಂಡು ಆಘಾತ ವ್ಯಕ್ತಪಡಿಸಿದ್ದಾರೆ. ಜತೆಗೆ ವಿಶ್ವಸಂಸ್ಥೆಯ ಸಿಬ್ಬಂದಿಯ ಮೇಲಿನ ಎಲ್ಲ ದಾಳಿಗಳನ್ನು ಗುಟೆರೆಸ್ ಖಂಡಿಸಿದ್ದಾರೆ ಮತ್ತು ಸಂಪೂರ್ಣ ತನಿಖೆಗೆ ಕರೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಾಜಾದಲ್ಲಿನ ಸಂಘರ್ಷವು ನಾಗರಿಕರ ಮೇಲೆ ಮಾತ್ರವಲ್ಲದೆ ಮಾನವೀಯ ಕಾರ್ಯಕರ್ತರ ಮೇಲೂ ಭಾರಿ ಹಾನಿಯನ್ನುಂಟು ಮಾಡುತ್ತಿರುವುದು ಖಂಡನೀಯ. ಮಾನವೀಯ ಕದನ ವಿರಾಮಕ್ಕಾಗಿ ಮತ್ತು ಎಲ್ಲ ಒತ್ತೆಯಾಳುಗಳ ಬಿಡುಗಡೆಗಾಗಿ ಆಗ್ರಹಿಸುತ್ತಿದ್ದೇವೆ ಎಂದು ವಿಶ್ವಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

2023ರ ಅಕ್ಟೋಬರ್ 7ರಂದು ಆರಂಭವಾದ ಸಂಘರ್ಷದಲ್ಲಿ ಇದುವರೆಗೆ ಇಸ್ರೇಲ್‌ನಲ್ಲಿ 33 ಮಕ್ಕಳು ಸೇರಿದಂತೆ 1,200ಕ್ಕೂ ಹೆಚ್ಚು ಇಸ್ರೇಲಿಗಳು ಮತ್ತು ವಿದೇಶಿ ಪ್ರಜೆಗಳು ಸಾವನ್ನಪ್ಪಿದ್ದಾರೆ. ಜತೆಗೆ ಗಾಜಾದಲ್ಲಿ ಕನಿಷ್ಠ 35,091 ಪ್ಯಾಲೆಸ್ತೀನ್‌ ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 78,827 ಜನರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (Coordination of Humanitarian Affairs) ತಿಳಿಸಿದೆ. 2023ರ ಅಕ್ಟೋಬರ್ 7ರಂದು ಹಮಾಸ್ ಉಗ್ರರು ಇಸ್ರೇಲ್‌ಗೆ ನುಗ್ಗಿದಾಗ ಗಾಜಾದಲ್ಲಿ ಯುದ್ಧ ಪ್ರಾರಂಭವಾಗಿತ್ತು. ಹಮಾಸ್‌ ಉಗ್ರರು 1,200 ಜನರನ್ನು ಕೊಂದು 253 ಒತ್ತೆಯಾಳುಗಳನ್ನು ವಶಪಡಿಸಿಕೊಂಡಿದೆ ಎಂದು ಇಸ್ರೇಲ್‌ ಹೇಳಿದೆ.

ಇದನ್ನೂ ಓದಿ: Israel Palestine War: ಗಾಜಾದಲ್ಲಿ ರಕ್ತದೋಕುಳಿ; ಆಹಾರಕ್ಕಾಗಿ ಬಂದವರ ಮೇಲೆ ದಾಳಿ; ಕನಿಷ್ಠ 104 ಮಂದಿ ಸಾವು

ಅಪೌಷ್ಟಿಕತೆ

ಗಾಜಾ ಪಟ್ಟಿಯಾದ್ಯಂತ ಜನಸಂಖ್ಯೆಯ ಕಾಲು ಭಾಗದಷ್ಟು ಜನರು- ವಿನಾಶಕಾರಿ ಮಟ್ಟದ ಆಹಾರ ಅಭದ್ರತೆಯನ್ನು ಎದುರಿಸುತ್ತಿದ್ದಾರೆ ಮತ್ತು ಕ್ಷಾಮದ ಅಪಾಯದಲ್ಲಿದ್ದಾರೆ. ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆರು ಮಕ್ಕಳಲ್ಲಿ ಒಬ್ಬರು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಎಂದು ವಿಶ್ವಸಂಸ್ಥೆಯ ಹಿರಿಯ ನೆರವು ಅಧಿಕಾರಿಯೊಬ್ಬರು ಈ ಹಿಂದೆ ಎಚ್ಚರಿಸಿದ್ದರು.

Continue Reading

ದೇಶ

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Maldives: ಇದುವರೆಗೆ ಮಾಲ್ಡೀವ್ಸ್‌ನಲ್ಲಿದ್ದ ಭಾರತದ ಯೋಧರು ವಿಮಾನಗಳನ್ನು ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಯೋಧರು ಭಾರತಕ್ಕೆ ವಾಪಸಾಗಿದ್ದಾರೆ. ಭಾರತವು ಅವುಗಳನ್ನು ದೇಣಿಗೆ ನೀಡಿದ ಕಾರಣ ಯುದ್ಧವಿಮಾನಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆದರೆ, ಇವುಗಳನ್ನು ನಿಭಾಯಿಸುವ ಕೌಶಲವೂ ಮಾಲ್ಡೀವ್ಸ್‌ ವಾಯುಪಡೆ ಪೈಲಟ್‌ಗಳಿಗೆ ಇಲ್ಲ ಎಂಬುದು ಬಯಲಾಗಿದೆ.

VISTARANEWS.COM


on

Maldives
Koo

ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೆಲ ತಿಂಗಳ ಹಿಂದೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ (Maldives Tourism) ಭಾರಿ ಹೊಡೆತ ಬಿದ್ದಿದೆ. ಇಷ್ಟಾದರೂ, ಚೀನಾ ಯೋಜನೆ, ದುಡ್ಡಿನ ಮುಲಾಜಿನಿಂದಾಗಿ ಮಾಲ್ಡೀವ್ಸ್‌ನಲ್ಲಿರುವ ಭಾರತದ ಸೈನಿಕರನ್ನು ವಾಪಸ್‌ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ, “ಭಾರತವು ಮಾಲ್ಡೀವ್ಸ್‌ಗೆ ನೀಡಿರುವ ಮೂರು ಯುದ್ಧವಿಮಾನಗಳನ್ನು ನಿರ್ವಹಿಸುವ ಪೈಲಟ್‌ಗಳೇ ನಮ್ಮಲ್ಲಿಲ್ಲ” ಎಂಬುದಾಗಿ ಮಾಲ್ಡೀವ್ಸ್‌ ತಿಳಿಸಿದೆ. ಇದು ಮಾಲ್ಡೀವ್ಸ್‌ (Maldives) ಸೇನೆಯ ಅದಕ್ಷತೆಗೆ ನಿದರ್ಶನ ಎಂದು ಹೇಳಲಾಗುತ್ತಿದೆ.

ಮಾಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಘಸ್ಸನ್‌ ಮೌಮೂನ್‌, “ಭಾರತ ನೀಡಿದ ಮೂರು ವಿಮಾನಗಳನ್ನು ಹಾರಿಸುವ ಕೌಶಲವು ನಮ್ಮ ಪೈಲಟ್‌ಗಳಿಗೆ ಇಲ್ಲ. ಅಂತಹ ಪರವಾನಗಿ ಹೊಂದಿರುವ ಪೈಲಟ್‌ಗಳು ಮಾಲ್ಡೀವ್ಸ್‌ ಸೇನೆಯಲ್ಲಿ ಇಲ್ಲ” ಎಂದು ಹೇಳಿದ್ದಾರೆ. ಇದುವರೆಗೆ ಮಾಲ್ಡೀವ್ಸ್‌ನಲ್ಲಿದ್ದ ಭಾರತದ ಯೋಧರು ವಿಮಾನಗಳನ್ನು ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಯೋಧರು ಭಾರತಕ್ಕೆ ವಾಪಸಾಗಿದ್ದಾರೆ. ಭಾರತವು ಅವುಗಳನ್ನು ದೇಣಿಗೆ ನೀಡಿದ ಕಾರಣ ಯುದ್ಧವಿಮಾನಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆದರೆ, ಇವುಗಳನ್ನು ನಿಭಾಯಿಸುವ ಕೌಶಲವೂ ಮಾಲ್ಡೀವ್ಸ್‌ ವಾಯುಪಡೆ ಪೈಲಟ್‌ಗಳಿಗೆ ಇಲ್ಲ ಎಂಬುದು ಬಯಲಾಗಿದೆ.

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ. ಅಲ್ಲದೆ, ಭಾರತದ ಮನವೊಲಿಸಲು ಯತ್ನಿಸುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

ಇದನ್ನೂ ಓದಿ: Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Continue Reading

ಪ್ರಮುಖ ಸುದ್ದಿ

PM Narendra Modi: “ಪಾಕ್‌ ಬಳೆ ತೊಡದಿದ್ದರೆ ನಾವು ತೊಡಿಸುತ್ತೇವೆ….” ಪಿಎಂ ಮೋದಿ ಗುಡುಗು

ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಮಾಡಿದ ಟೀಕೆಗಳ ಬಗ್ಗೆ ತೀವ್ರ ವ್ಯಂಗ್ಯವಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಆರ್ಥಿಕ ಕುಸಿತದಿಂದ ತತ್ತರಿಸಿರುವ ಪಾಕಿಸ್ತಾನ ಬಳೆಗಳನ್ನು ಧರಿಸದಿದ್ದರೆ ಭಾರತವು ಅದನ್ನು ಕೊಡುತ್ತದೆ ಎಂದು ಲೇವಡಿ ಮಾಡಿದರು.

VISTARANEWS.COM


on

pm Narendra Modi
Koo

ಹೊಸದಿಲ್ಲಿ: “ಪಾಕಿಸ್ತಾನ (Pakistan) ಬಳೆ (Bangals) ತೊಡದಿದ್ದರೆ ಅದನ್ನು ತೊಡುವಂತೆ ನಾವು ಮಾಡುತ್ತೇವೆ” ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ. ಇತ್ತೀಚೆಗೆ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಫಾರೂಕ್‌ ಅಬ್ದುಲ್ಲಾ (Farooq Abdullah) ಹಾಗೂ ಕಾಂಗ್ರೆಸ್‌ ಮುಖಂಡ ಮಣಿಶಂಕರ ಅಯ್ಯರ್‌ (Mani Shankar Aiyar) ಆಡಿರುವ ಮಾತುಗಳಿಗೆ ಪ್ರತಿಯಾಗಿ ಅವರು ಹೀಗೆಂದಿದ್ದಾರೆ.

ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಮಾಡಿದ ಟೀಕೆಗಳ ಬಗ್ಗೆ ತೀವ್ರ ವ್ಯಂಗ್ಯವಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಆರ್ಥಿಕ ಕುಸಿತದಿಂದ ತತ್ತರಿಸಿರುವ ಪಾಕಿಸ್ತಾನ ಬಳೆಗಳನ್ನು ಧರಿಸದಿದ್ದರೆ ಭಾರತವು ಅದನ್ನು ಕೊಡುತ್ತದೆ ಎಂದು ಲೇವಡಿ ಮಾಡಿದರು.

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (POK) ಹಿಂಪಡೆಯುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ ಶಪಥಕ್ಕೆ ಪ್ರತಿಕ್ರಿಯಿದ್ದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, “ನೆರೆಯ ದೇಶವು ಬಳೆಗಳನ್ನು ಧರಿಸಿಲ್ಲ ಮತ್ತು ಭಾರತಕ್ಕೆ ಹಾನಿ ಮಾಡುವ ಪರಮಾಣು ಬಾಂಬ್‌ಗಳನ್ನು ಹೊಂದಿದೆ” ಎಂದು ಹೇಳಿದ್ದರು. ಮಣಿಶಂಕರ್ ಅಯ್ಯರ್ ಕೂಡ ಇತ್ತೀಚೆಗೆ ಒಂದು ಹೇಳಿಕೆ ನೀಡಿ, “ಭಾರತ ಸರ್ಕಾರ ಪಾಕಿಸ್ತಾನವನ್ನು ಗೌರವಿಸಬೇಕು. ಏಕೆಂದರೆ ಅದು ಪರಮಾಣು ಬಾಂಬ್‌ಗಳನ್ನು ಹೊಂದಿದೆ” ಎಂದಿದ್ದರು. ಈ ವೀಡಿಯೊ ಕಳೆದ ವಾರ ವೈರಲ್ ಆಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಪಾಕಿಸ್ತಾನ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ. “ಪಾಕಿಸ್ತಾನ ಬಳೆಗಳನ್ನು ಧರಿಸದಿದ್ದರೆ, ನಾವು ಅವುಗಳನ್ನು ಕೊಡಿಸುತ್ತೇವೆ. ಅವರ ಬಳಿ ಬಳೆಗಳಿಲ್ಲ, ಅವರ ಬಳಿ ವಿದ್ಯುತ್ ಇಲ್ಲ, ಈಗ ಅವರಿಗೆ ಬಳೆಗಳ ಕೊರತೆಯಿದೆ ಎಂದು ನಮಗೆ ತಿಳಿದಿದೆ” ಎಂದು ಬಿಹಾರದ ಮುಜಾಫರ್‌ಪುರದಲ್ಲಿ ಪ್ರಧಾನಿ ಮೋದಿ ಅಬ್ದುಲ್ಲಾ ಅಥವಾ ಅಯ್ಯರ್ ಹೆಸರನ್ನು ಉಲ್ಲೇಖಿಸದೆ ಹೇಳಿದರು.

ಅಯ್ಯರ್‌ ಮಾತಿಗೆ ಪ್ರತಿಕ್ರಿಯಿಸಿದ ಮೋದಿ, “ಕಾಂಗ್ರೆಸ್ ದೇಶದ ಜನರನ್ನು ಬೆದರಿಸಲು ಪ್ರಯತ್ನಿಸುತ್ತಿದೆ” ಎಂದು ಕಳೆದ ವಾರ ಹೇಳಿದ್ದರು. ಇಂತಹ ದುರ್ಬಲ ಧೋರಣೆ ಈ ಹಿಂದೆ ಗಡಿಯಾಚೆಗಿನ ಭಯೋತ್ಪಾದನೆಗೆ ಉತ್ತೇಜನ ನೀಡಿತ್ತು. ಭಾರತದ ವಿಚ್ಛೇದಿತ ನೆರೆಯ ದೇಶವು ತನ್ನ ಬಾಂಬ್‌ಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದೆ. ಆದರೆ ಅವುಗಳ ಕಳಪೆ ಗುಣಮಟ್ಟದ ಕಾರಣ ಯಾರೂ ಆಸಕ್ತಿ ವಹಿಸುತ್ತಿಲ್ಲ ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರ ₹ 2200 ಕೋಟಿ ಅಕ್ರಮ ಹಣವನ್ನು ವಶಪಡಿಸಿಕೊಂಡಿದೆ. ಆರ್‌ಜೆಡಿ ಮತ್ತು ಕಾಂಗ್ರೆಸ್ ಬಿಹಾರದ ಜನರ ಕಲ್ಯಾಣಕ್ಕಿಂತ ತಮ್ಮ ಮತ ಬ್ಯಾಂಕ್‌ಗೆ ಆದ್ಯತೆ ನೀಡುತ್ತವೆ. ಆರ್‌ಜೆಡಿ ರಾಜ್ಯಕ್ಕೆ ಜಂಗಲ್ ರಾಜ್ ತಂದಿದೆ ಎಂದು ಮೋದಿ ಆರೋಪಿಸಿದರು.

ಲಾಲು ಪ್ರಸಾದ್ ಯಾದವ್ ಅವರ “ಮುಸ್ಲಿಮರು ಮೀಸಲಾತಿ ಪಡೆಯಬೇಕು” ಎಂಬ ಹೇಳಿಕೆಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮತ್ತು ಆರ್‌ಜೆಡಿ ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರಿಗೆ ಸಂವಿಧಾನದಿಂದ ಒದಗಿಸಿದ ಮೀಸಲಾತಿಯನ್ನು ಕಿತ್ತುಕೊಳ್ಳಲಿವೆ ಎಂದು ಹೇಳಿದರು. ಕಾಂಗ್ರೆಸ್ ಮತ್ತು ಆರ್‌ಜೆಡಿ ನಾಯಕರು ತಮ್ಮ ಸ್ವಂತ ಮಕ್ಕಳನ್ನು ಅಭಿವೃದ್ಧಿಪಡಿಸುವಲ್ಲಿ ನಿರತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Nanrendra Modi: ನಾಳೆ ವಾರಾಣಸಿಯಲ್ಲಿ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ, ಇಂದು ವೈಭವದ ರೋಡ್‌ ಶೋ

Continue Reading
Advertisement
HD Revanna released from jail Revanna Go straight to HD Deve Gowda house
ಕ್ರೈಂ3 mins ago

HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

Viral video
ವೈರಲ್ ನ್ಯೂಸ್11 mins ago

Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

Vaishnavi Gowda
ಕಿರುತೆರೆ15 mins ago

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202421 mins ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

pm narendra modi nomination
ಪ್ರಮುಖ ಸುದ್ದಿ28 mins ago

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Viral Video
Latest36 mins ago

Viral Video: ಇಲ್ಲಿ ಸಿಗೋದು ಡಿಸೇಲ್ ಪರಾಠಾ!

Love Failure
ಬೆಂಗಳೂರು ಗ್ರಾಮಾಂತರ38 mins ago

Love Failure : ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

HD Revanna Bail I am not happy that Revanna has been released says HD Kumaraswamy
ರಾಜಕೀಯ58 mins ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

Bomb threat
ದೇಶ59 mins ago

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

T20 World Cup 2024
ಕ್ರಿಕೆಟ್1 hour ago

T20 World Cup 2024: ನೆದರ್ಲೆಂಡ್ಸ್‌ ಟಿ20 ವಿಶ್ವಕಪ್ ತಂಡದಲ್ಲಿ ಮೂವರು ಭಾರತೀಯ ಆಟಗಾರರಿಗೆ ಸ್ಥಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202421 mins ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ58 mins ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ9 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ19 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ19 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ19 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ20 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ20 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌