ಪಾರ್ಕ್ ಹೋಟೆಲ್‌ನಲ್ಲಿ ಡ್ರಗ್ಸ್‌ ಪಾರ್ಟಿ, ಬಾಲಿವುಡ್‌ ನಟ ಸಿದ್ಧಾಂತ್‌ ಕಪೂರ್‌ ವಶಕ್ಕೆ - Vistara News

ಕರ್ನಾಟಕ

ಪಾರ್ಕ್ ಹೋಟೆಲ್‌ನಲ್ಲಿ ಡ್ರಗ್ಸ್‌ ಪಾರ್ಟಿ, ಬಾಲಿವುಡ್‌ ನಟ ಸಿದ್ಧಾಂತ್‌ ಕಪೂರ್‌ ವಶಕ್ಕೆ

ಬೆಂಗಳೂರಿನ ಹಲಸೂರಿನಲ್ಲಿರುವ ದಿ ಪಾರ್ಕ್‌ ಹೋಟೆಲ್‌ಗೆ ಭಾನುವಾರ ರಾತ್ರಿ ದಾಳಿ ನಡೆಸಿದ ಪೊಲೀಸರು ಬಾಲಿವುಡ್‌ ನಟ ಸಿದ್ಧಾಂತ್‌ ಕಪೂರ್‌ ಮತ್ತು ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

VISTARANEWS.COM


on

siddhant kapoor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಹಲಸೂರಿನಲ್ಲಿರುವ “ದಿ ಪಾರ್ಕ್‌ʼ ಹೋಟೆಲ್‌ಗೆ ಪೊಲೀಸರು ಭಾನುವಾರ ರಾತ್ರಿ ದಾಳಿ ನಡೆಸಿದ್ದಾರೆ. ಬಾಲಿವುಡ್‌ನ ಖ್ಯಾತ ನಟ ಶಕ್ತಿ ಕಪೂರ್‌ ಪುತ್ರ ಸಿದ್ಧಾಂತ್ ಕಪೂರ್ ಪಾರ್ಟಿಯಲ್ಲಿ ಭಾಗವಹಿಸಿ ಡ್ರಗ್ಸ್‌ ಸೇವಿಸಿರುವುದು ಖಚಿತಪಟ್ಟಿದ್ದು ವಶಕ್ಕೆ ಪಡೆಯಲಾಗಿದೆ.

ಇವರಲ್ಲದೆ 50ಕ್ಕೂ ಹೆಚ್ಚು ಯವಕ ಮತ್ತು ಯುವತಿಯರನ್ನು ವಶಕ್ಕೆ ಪಡೆದು ಮೆಡಿಕಲ್ ಪರೀಕ್ಷೆಗೆ ಒಳಪಡಿಸಲಾಗಿದೆ. ಮೆಡಿಕಲ್ ಟೆಸ್ಟ್ ನಲ್ಲಿ ಪಾರ್ಟಿಯಲ್ಲಿ ಭಾಗಿಯಾಗಿದ್ದ ಯುವಕರೆಲ್ಲರೂ ಡ್ರಗ್ ಸೇವಿಸಿರೋದು ಧೃಡಪಟ್ಟಿದೆ. ಸಿದ್ಧಾಂತ್‌ ಕಪೂರ್‌ ರಕ್ತ ಪರೀಕ್ಷೆ ನಡೆಸಿದಾಗ ಪಾಸಿಟಿವ್‌ ರಿಪೋರ್ಟ್‌ ದೊರೆತಿದ್ದು ಡ್ರಗ್ಸ್‌ ಸೇವಿಸಿರುವುದು ದೃಢಪಟ್ಟಿದೆ ಎಂದು ಡಿಸಿಪಿ ಭೀಮಾಶಂಕರ ಗುಳೇದ್‌ ತಿಳಿಸಿದ್ದಾರೆ.

ಈ ಫೈವ್‌ ಸ್ಟಾರ್ ಹೋಟೆಲ್‌ನಲ್ಲಿ ಡ್ರಗ್ಸ್‌ ಪಾರ್ಟಿಯನ್ನು ನಡೆಸಲಾಗುತ್ತಿತ್ತು. ಪಾರ್ಟಿಗೆ ಡಿಜೆಯ ಜತೆ ಬಾಲಿವುಡ್‌ನ ಈ ಖ್ಯಾತ ಕಲಾವಿದ ಬಂದಿದ್ದ. ರಾತ್ರಿಯೇ ಹಲಸೂರು ಪೊಲೀಸ್ ಠಾಣೆಯಲ್ಲಿ ನಟನ ವಿಚಾರಣೆ ನಡೆದಿದೆ.

ಮುಂಬೈ ಮೂಲದ ಡಿಜೆಯಿಂದ ಪಾರ್ಟಿಗೆ ಡ್ರಗ್ಸ್‌ ಪೂರೈಕೆಯಾಗಿದೆ. ಪ್ರಭಾವಿಗಳ ಮಕ್ಕಳು ಸಹ ಪಾರ್ಟಿಯಲ್ಲಿ ಇದ್ದರು ಎನ್ನುವ ಮಾಹಿತಿ ಇದೆ. ಪೊಲೀಸರು ದಾಳಿ ಮಾಡ್ತಾರೆ ಅನ್ನೋ ಮಾಹಿತಿ ಸಿಗ್ತಿದ್ದಂತೆ ಹೊಟೇಲ್‌ನಿಂದ ಹಲವಾರು ಮಂದಿ ಪರಾರಿಯಾಗಿದ್ದಾರೆ.

“THE PARK” 5 ಸ್ಟಾರ್ ಹೋಟೆಲ್ ಆಗಿದ್ದು, ಹಲಸೂರು ಬಳಿಯ GT ಮಾಲ್ ಮುಂಭಾಗದಲ್ಲಿದೆ. ರಾತ್ರಿ 12 ಗಂಟೆಯ ಸುಮಾರಿಗೆ 30ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದರು. ಹಲಸೂರು ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಮೂರರಿಂದ ನಾಲ್ಕು ಘಂಟೆಗಳ ಕಾಲ ದಾಳಿ ನಡೆಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

T20 World Cup Final: ವಿಮಾನ ನಿಲ್ದಾಣದಲ್ಲೂ ಸಿದ್ದರಾಮಯ್ಯಗೆ ವಿಶ್ವಕಪ್‌ ಕ್ರಿಕೆಟ್‌ ಧ್ಯಾನ!

T20 World Cup Final: ವೈರಲ್‌ ಆಗಿರುವ ವಿಡಿಯೋದಲ್ಲಿ, ಟ್ಯಾಬ್‌ ಒಂದರಲ್ಲಿ ಸಿದ್ದರಾಮಯ್ಯ ಅವರು ಟಿ20 ವಿಶ್ವಕಪ್‌ನ ಭಾರತ- ದಕ್ಷಿಣ ಆಫ್ರಿಕ ನಡುವಿನ ಫೈನಲ್‌ ಪಂದ್ಯಾಟವನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ. ವಿಶೇಷ ವಿಮಾನ ಲ್ಯಾಂಡ್‌ ಆಗಿದ್ದರೂ, ವಿಮಾನದ ಮೆಟ್ಟಿಲು ಏರುವ ಮುನ್ನ ಅವರು ನಿಂತುಕೊಂಡೇ ಪಂದ್ಯ ವೀಕ್ಷಿಸಿದರು.

VISTARANEWS.COM


on

cm siddaramaiah T20 World Cup Final
Koo

ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಮರಳುವ ತರಾತುರಿಯ ನಡುವೆಯೂ ಕೆಲವು ಕ್ಷಣ ಬಿಡುವು ಮಾಡಿಕೊಂಡು ವಿಮಾನ ನಿಲ್ದಾಣದಲ್ಲಿ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯಾಟವನ್ನು (T20 World Cup Final) ವೀಕ್ಷಿಸಿದರು.

ವೈರಲ್‌ ಆಗಿರುವ ವಿಡಿಯೋದಲ್ಲಿ, ಟ್ಯಾಬ್‌ ಒಂದರಲ್ಲಿ ಸಿದ್ದರಾಮಯ್ಯ ಅವರು ಟಿ20 ವಿಶ್ವಕಪ್‌ನ ಭಾರತ- ದಕ್ಷಿಣ ಆಫ್ರಿಕ ನಡುವಿನ ಫೈನಲ್‌ ಪಂದ್ಯಾಟವನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ. ವಿಶೇಷ ವಿಮಾನ ಲ್ಯಾಂಡ್‌ ಆಗಿದ್ದರೂ, ವಿಮಾನದ ಮೆಟ್ಟಿಲು ಏರುವ ಮುನ್ನ ಅವರು ನಿಂತುಕೊಂಡೇ ಪಂದ್ಯ ವೀಕ್ಷಿಸಿದರು.

ಬಾರ್ಬಡೋಸ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ ಪಂದ್ಯಾವಳಿಯ ಫೈನಲ್‌ ಪಂದ್ಯದಲ್ಲಿ ಭಾರತ (India Team) ಹಾಗೂ ದಕ್ಷಿಣ ಆಫ್ರಿಕ (South Africa) ತಂಡಗಳು ಮುಖಾಮುಖಯಾಗಿವೆ. ಭಾರತ ಟೀಮ್‌ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದು, ದಕ್ಷಿಣ ಆಫ್ರಿಕಕ್ಕೆ ಪಂದ್ಯ ಗೆಲ್ಲಲು 177 ರನ್‌ಗಳ ಟಾರ್ಗೆಟ್‌ ನೀಡಿದೆ. ಈ ನಡುವೆ ಭಾರತ 7 ವಿಕೆಟ್‌ಗಳು ಕಳೆದುಕೊಂಡಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಇದರಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರು (Drinking Water) ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು (Mekedatu project) ಅಣೆಕಟ್ಟು ಯೋಜನೆ ಪ್ರಮುಖವಾಗಿದ್ದು, 9000 ಕೋಟಿ ರೂ.ಗಳ ಡಿಪಿಆರ್‌ಗೆ ಕೇಂದ್ರ ಜಲ ಆಯೋಗದಿಂದ (Central water commission) ಅನುಮೋದನೆ ಬಾಕಿ ಇದೆ. ಈ ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಡಾ ಜಿ ಪರಮೇಶ್ವರ, ಎಚ್ ಸಿ ಮಹದೇವಪ್ಪ ಅವರನ್ನು ಒಳಗೊಂಡ ಕರ್ನಾಟಕ ಸರಕಾರದ ನಿಯೋಗವು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ರಾತ್ರಿ ಭೇಟಿ ಮಾಡಿ ಕರ್ನಾಟಕದಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Continue Reading

ಪ್ರಮುಖ ಸುದ್ದಿ

Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ.

VISTARANEWS.COM


on

CM Siddaramaiah pm narendra modi
ಫೈಲ್‌ ಚಿತ್ರ
Koo

ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಇದರಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರು (Drinking Water) ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು (Mekedatu project) ಅಣೆಕಟ್ಟು ಯೋಜನೆ ಪ್ರಮುಖವಾಗಿದ್ದು, 9000 ಕೋಟಿ ರೂ.ಗಳ ಡಿಪಿಆರ್‌ಗೆ ಕೇಂದ್ರ ಜಲ ಆಯೋಗದಿಂದ (Central water commission) ಅನುಮೋದನೆ ಬಾಕಿ ಇದೆ. ಈ ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳು

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ 44.65 ಕಿಮೀ ಗಲನ್ನು 15611 ಕೋಟಿಗಳ ವೆಚ್ಚದ ಡಿಪಿಆರ್‌ ಅನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ.

73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್‌ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ.

15ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್‌ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 3000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು ಕೇಂದ್ರ ಸರ್ಕಾರವು ತನ್ನ 2024-25 ರ ಬಜೆಟ್ ನಲ್ಲಿ ಅನುರೂಪದ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ ಧನಸಹಾಯ ನೀಡಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಮುಖ್ಯಮಂತ್ರಿಗಳು ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ. 15ನೇ ಹಣಕಾಸು ಆಯೋಗವು 2020-21ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಕಲಿಲ್ಲವಾದ್ದರಿಂದ ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಕೋರಿದ್ದಾರೆ.

ಇದನ್ನೂ ಓದಿ: Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Continue Reading

ಪ್ರಮುಖ ಸುದ್ದಿ

IPS officers promoted: ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ, ಪ್ರಣಬ್ ಮೊಹಂತಿಗೆ ಮುಂಬಡ್ತಿ

IPS officers promoted: ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರು ಎಡಿಜಿಪಿಯಿಂದ ಡಿಜಿಪಿಯಾಗಿ ಮುಂಬಡ್ತಿ ಪಡೆದಿದ್ದಾರೆ. ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಹೆಚ್ಚುವರಿ ಹುದ್ದೆ ನೀಡಲಾಗಿದೆ.

VISTARANEWS.COM


on

IPS officers promoted
Koo

ಬೆಂಗಳೂರು: ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಡಿಜಿಯಾಗಿ ಹೆಚ್ಚುವರಿ ಹುದ್ದೆ (IPS officers promoted) ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರು ಎಡಿಜಿಪಿಯಿಂದ ಡಿಜಿಪಿಯಾಗಿ ಮುಂಬಡ್ತಿ ಪಡೆದಿದ್ದು, ಕಂಪ್ಯೂಟರ್ ವಿಂಗ್ ಡಿಜಿಪಿಯಾಗಿ ಮುಂದುವರಿಯಲಿದ್ದಾರೆ. ಇನ್ನು ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಹೆಚ್ಚುವರಿ ಹುದ್ದೆ ನೀಡಲಾಗಿದೆ. ನಾಳೆ ಡಿಜಿಪಿ ಕಮಲ್ ಪಂತ್ ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ಹೆಚ್ಚುವರಿ ಹುದ್ದೆ ನೀಡಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಮಹಾನಿರ್ದೇಶಕರಾದ (ಡಿಜಿ) ಮಾಲಿನಿ ಕೃಷ್ಣಮೂರ್ತಿ ಅವರನ್ನು ಡಿಜಿಪಿ ಮತ್ತು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿ, ಹೋಮ್ ಗಾರ್ಡ್ಸ್ ಕಮಾಂಡೆಂಟ್ ಜನರಲ್, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಡಿಜಿ, ನಾಗರಿಕ ರಕ್ಷಣೆ ನಿರ್ದೇಶಕರಾಗಿ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ.

ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರು ಪೊಲೀಸ್ ಮಹಾನಿರ್ದೇಶಕರ ದರ್ಜೆಗೆ (ಡಿಜಿಪಿ) ಬಡ್ತಿ ಪಡೆದಿದ್ದು, ಅವರು ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯಗಳ ಉನ್ನತೀಕರಿಸಿದ ಡಿಜಿಪಿ ಹುದ್ದೆಯ ಸಮಕಾಲೀನ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ | Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್‌ ಬಾಲೆ ಮಾಯಾ ನೀಲಕಂಠನ್‌, ಯಾರೀಕೆ?

Continue Reading

ಕರ್ನಾಟಕ

Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!

Kannada New Movie: ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

VISTARANEWS.COM


on

Back Benchers film in the Censor
Koo

ಬೆಂಗಳೂರು: ಭಿನ್ನ ಕಂಟೆಂಟಿನ ಮುನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿರುವ ಚಿತ್ರ `ಬ್ಯಾಕ್ ಬೆಂಚರ್ಸ್’ ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ (Kannada New Movie) ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

ಇದು ರಾಜಶೇಖರ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ. ನಿರ್ಮಾಪಕರಾಗಿ, ನಿರ್ದೇಶಕರಾಗಿ ಪ್ರೇಕ್ಷಕರ ನಾಡಿಮಿಡಿತವನ್ನು ಅರಿತಿರುವವರು ರಾಜಶೇಖರ್. ಅನುಭವವನ್ನೆಲ್ಲ ಒಟ್ಟುಗೂಡಿಸಿಕೊಂಡು, ಹೊಸಬರ ತಂಡವನ್ನಿಟ್ಟುಕೊಂಡು ರಾಜಶೇಖರ್ ಈ ಚಿತ್ರವನ್ನು ರೂಪಿಸಿದ್ದಾರೆ.

ಸಾಮಾನ್ಯವಾಗಿ ಹೊಸಬರನ್ನು ಹಾಕಿಕೊಂಡು ಸಿನಿಮಾ ಮಾಡಲು ಬಹುತೇಕರು ಹಿಂದೇಟು ಹಾಕುತ್ತಾರೆ. ರಾಜಶೇಖರ್ ಅವರು ಸಂಪೂರ್ಣವಾಗಿ ಹೊಸಬರ ತಂಡದೊಂದಿಗೆ ಈ ಚಿತ್ರವನ್ನು ತಯಾರಿಸಿದ್ದಾರೆಂದರೆ ಅಚ್ಚರಿ ಮೂಡದಿರುವುದಿಲ್ಲ. ಹೊಸಬರೇ ಸೇರಿರುವುದರಿಂದ ಇಲ್ಲಿ ಹೊಸತನದ ಛಾಯೆಯಿದೆ. ಅದರ ಘಮವೀಗ ಟೀಸರ್ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿದೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಇದರ ಭಾಗವಾಗಿರುವ ಯುವ ಪಡೆ ಭಿನ್ನ ಶೈಲಿಯಲ್ಲಿಯೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಂತೂ ಈಗ “ಬ್ಯಾಕ್ ಬೆಂಚರ್ಸ್” ಹವಾ ವ್ಯಾಪಿಸಿಕೊಂಡಿದೆ. ಇದು ನಾಯಕ ನಾಯಕಿಯರಾಗಿರುವವರು, ಇತರೇ ಪಾತ್ರಗಳನ್ನು ನಿರ್ವಹಿಸಿದವರು ಸೇರಿದಂತೆ ಒಂದಿಡೀ ತಂಡ ಹೊಸ ಶೈಲಿಯಲ್ಲಿ ಪ್ರೇಕ್ಷಕರನ್ನು ತಲುಪಿಕೊಳ್ಳುತ್ತಿದೆ.

ನಿರ್ದೇಶಕ ರಾಜಶೇಖರ್ ಸ್ಕ್ರಿಫ್ಟ್ ವರ್ಕ್ ಸೇರಿದಂತೆ ಎಲ್ಲದರಲ್ಲಿಯೂ ಈ ಹುಡುಗ-ಹುಡುಗಿಯರನ್ನು ಸೇರಿಸಿಕೊಂಡಿದ್ದಾರೆ. ಅದರ ಫಲವಾಗಿಯೇ ಈ ಕಾಲೇಜು ಸ್ಟೋರಿ ತಾಜಾ ಅನುಭೂತಿಯೊಂದಿಗೆ ಸೆಳೆದುಕೊಂಡಿದೆ.

ಪಿಪಿ ಪ್ರೊಡಕ್ಷನ್ಸ್ ಅಡಿಯಲ್ಲಿ ಖುದ್ದು ರಾಜಶೇಖರ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಎಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಈ ಚಿತ್ರಕ್ಕಿದೆ. ಇದೀಗ ಸೆನ್ಸಾರ್ ಅಂಗಳ ತಲುಪಿರುವ “ಬ್ಯಾಕ್ ಬೆಂಚರ್ಸ್” ಮತ್ತಷ್ಟು ವೇಗದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Continue Reading
Advertisement
T20 World Cup
ಪ್ರಮುಖ ಸುದ್ದಿ9 mins ago

T20 World Cup : ಘರ್ಜಿಸಿದ ಕಿಂಗ್ ಕೊಹ್ಲಿ, 176 ರನ್ ಬಾರಿಸಿದ ಭಾರತ, ಇದು ವಿಶ್ವ ಕಪ್​ ಫೈನಲ್​ನಲ್ಲಿ ಗರಿಷ್ಠ ಸ್ಕೋರ್​

cm siddaramaiah T20 World Cup Final
ಪ್ರಮುಖ ಸುದ್ದಿ14 mins ago

T20 World Cup Final: ವಿಮಾನ ನಿಲ್ದಾಣದಲ್ಲೂ ಸಿದ್ದರಾಮಯ್ಯಗೆ ವಿಶ್ವಕಪ್‌ ಕ್ರಿಕೆಟ್‌ ಧ್ಯಾನ!

Hardik Pandya
ಪ್ರಮುಖ ಸುದ್ದಿ46 mins ago

Hardik Pandya : ಕಪಿಲ್​ ದೇವ್​ ರೀತಿ ಮೀಸೆ ಬಿಟ್ಟುಕೊಂಡು ಫೈನಲ್ ಪಂದ್ಯ ಆಡಲು ಬಂದ ಹಾರ್ದಿಕ್ ಪಾಂಡ್ಯ

CM Siddaramaiah pm narendra modi
ಪ್ರಮುಖ ಸುದ್ದಿ47 mins ago

Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Indira Gandhi's Emergency
ದೇಶ52 mins ago

Lalu Prasad Yadav: “ಇಂದಿರಾ ಗಾಂಧಿ ನಮ್ಮನ್ನು ಜೈಲಿಗಟ್ಟಿದರು, ಆದರೆ…” ಎಮರ್ಜೆನ್ಸಿ ಬಗ್ಗೆ ಲಾಲೂ ಹೇಳಿದ್ದೇನು?

IPS officers promoted
ಪ್ರಮುಖ ಸುದ್ದಿ1 hour ago

IPS officers promoted: ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ, ಪ್ರಣಬ್ ಮೊಹಂತಿಗೆ ಮುಂಬಡ್ತಿ

maya neelakantan
ವಿದೇಶ2 hours ago

Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್‌ ಬಾಲೆ ಮಾಯಾ ನೀಲಕಂಠನ್‌, ಯಾರೀಕೆ?

Back Benchers film in the Censor
ಕರ್ನಾಟಕ2 hours ago

Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!

Producer who gifted an expensive car to the director of Radhika Kumaraswamy starrer Ajagrata
ಕರ್ನಾಟಕ2 hours ago

Kannada New Movie: ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಸಿನಿಮಾ ಡೈರೆಕ್ಟರ್‌ಗೆ ನಿರ್ಮಾಪಕರಿಂದ ದುಬಾರಿ ಕಾರ್‌ ಗಿಫ್ಟ್‌!

T20 World Cup final
ಕ್ರಿಕೆಟ್2 hours ago

T20 World Cup Final : ಟಾಸ್​ ಗೆದ್ದವರು ಮ್ಯಾಚ್​ ಗೆಲ್ತಾರೆ; ವಿಶ್ವ ಕಪ್​ ಫೈನಲ್ ಪಂದ್ಯದ ಇತಿಹಾಸ ಹೀಗಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ5 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ11 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌