ಪಾಸ್‌ಪೋರ್ಟ್‌ ಪೊಲೀಸ್ ದೃಢೀಕರಣಕ್ಕಾಗಿ mPassport Police App ಲಾಂಚ್ - Vistara News

ತಂತ್ರಜ್ಞಾನ

ಪಾಸ್‌ಪೋರ್ಟ್‌ ಪೊಲೀಸ್ ದೃಢೀಕರಣಕ್ಕಾಗಿ mPassport Police App ಲಾಂಚ್

ಪಾಸ್‌ಪೋರ್ಟ್ ಪೊಲೀಸ್ ದೃಢೀಕರಣಕ್ಕೆ ಕನಿಷ್ಠ 15 ದಿನಗಳು ಬೇಕಾಗುತ್ತಿತ್ತು. ಈಗ ಕೇಂದ್ರ ಸರ್ಕಾರವು mPassport Police App ಲಾಂಚ್ ಮಾಡಿದ್ದು, ಇದರಿಂದ 10 ದಿನಗಳಷ್ಟು ಉಳಿತಾಯವಾಗಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಆ್ಯಪ್‌ ಲಾಂಚ್ ಮಾಡಿದೆ.

VISTARANEWS.COM


on

mPassport Police App launched and check details
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪಾಸ್‌ಪೋರ್ಟ್ ಪಡೆಯುವ ಪ್ರಕ್ರಿಯೆಗಳನ್ನು ಕೇಂದ್ರ ಸರ್ಕಾರವು ಈಗ ಮತ್ತಷ್ಟು ಸರಳಗೊಳಿಸಿದೆ. ಪಾಸ್‌ಪೋರ್ಟ್ ಪಡೆಯುವ ವ್ಯಕ್ತಿಯು ಪೊಲೀಸ್‌ ದೃಢೀಕರಣ ಮಾಡಿಸುವುದು ಅತ್ಯಗತ್ಯ. ಆದರೆ, ಈ ಪ್ರಕ್ರಿಯೆಯ ಕುರಿತು ಸಾಕಷ್ಟು ದೂರುಗಳಿದ್ದವು. ಈಗ ಕೇಂದ್ರ ಸರ್ಕಾರ ಪೊಲೀಸ್ ದೃಢೀಕರಣವನ್ನು ಡಿಜಿಟಿಲೈಸ್ ಮಾಡಿದೆ. ಇದಕ್ಕಾಗಿ ಭಾರತದ ವಿದೇಶಾಂಗ ಸಚಿವಾಲಯವು ಶುಕ್ರವಾರ mPassport Police App ಲಾಂಚ್ ಮಾಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ದೆಹಲಿ ಪೊಲೀಸ್ ವಿಶೇಷ ಶಾಖೆಯ ಸಿಬ್ಬಂದಿಗೆ 350 ಮೊಬೈಲ್ ಟ್ಯಾಬ್ಲೆಟ್‌ಗಳನ್ನು ಫೋರ್ಸ್ ರೈಸಿಂಗ್ ಡೇ ಸಂದರ್ಭದಲ್ಲಿ ಸಮರ್ಪಿಸಿದರು. ಈ ಸಾಧನಗಳು, ಪಾಸ್‌ಪೋರ್ಟ್‌ಗಾಗಿ, ಪೊಲೀಸ್ ಪರಿಶೀಲನೆ ಮತ್ತು ಸಲ್ಲಿಕೆ ವರದಿಯ ಸಂಪೂರ್ಣ ಪ್ರಕ್ರಿಯೆಯನ್ನು ಕಾಗದರಹಿತಗೊಳಿಸಲು ನೆರವು ನೀಡುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತಿಳಿಸಿದೆ.

ಆ್ಯಪ್ ಬಳಸಿಕೊಂಡು ಟ್ಯಾಬ್ಲೆಟ್ ಮೂಲಕ ಪೊಲೀಸ್ ಪರಿಶೀಲನೆಯನ್ನು ಕೈಗೊಳ್ಳುವುದರಿಂದ 15 ದಿನಗಳ ಪ್ರಕ್ರಿಯೆಯು ಈಗ 5 ದಿನಕ್ಕೆ ಇಳಿಕೆಯಾಗಲಿದೆ ಎಂದು ದಿಲ್ಲಿ ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿ ಅಭಿಷೇಕ್ ದುಬೇ ಹೇಳಿದ್ದಾರೆ.

ಇದನ್ನೂ ಓದಿ: Henley Passport Index | ಪಾಕಿಸ್ತಾನದ ಪಾಸ್‌ಪೋರ್ಟ್‌ಗೆ ಬೆಲೆಯೇ ಇಲ್ಲ! ಜಪಾನ್ ಪಾಸ್‌ಪೋರ್ಟ್ ಫುಲ್ ಸ್ಟ್ರಾಂಗ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಲ್ಲಿ ಪೊಲೀಸ್ ಸಿಬ್ಬಂದಿಗೆ 350 ಮೊಬೈಲ್ ಟ್ಯಾಬ್ಲೆಟ್‌ಗಳನ್ನು ಅರ್ಪಿಸಿದ್ದಾರೆ. ಈ ಟ್ಯಾಬ್ಲೆಟ್‌ಗಳೊಂದಿಗೆ, ಪಾಸ್‌ಪೋರ್ಟ್ ಅರ್ಜಿ ಪರಿಶೀಲನೆಯ ಸಂಪೂರ್ಣ ಪ್ರಕ್ರಿಯೆಯು ಡಿಜಿಟಲ್ ಮತ್ತು ಪೇಪರ್‌ಲೆಸ್ ಆಗಲಿದೆ ಮತ್ತು ಪರಿಶೀಲನಾ ಸಮಯವನ್ನು 5 ದಿನಗಳವರೆಗೆ ಕಡಿಮೆಗೊಳಿಸಲಾಗುತ್ತದೆ ಎಂದು ದಿಲ್ಲಿ ಪೊಲೀಸ್ ಗುರುವಾರ ಟ್ವೀಟ್ ಮಾಡಿತ್ತು. ಅದೇ ರೀತಿ, ಶುಕ್ರವಾರ ಈ ಹೊಸ ಆ್ಯಪ್‌ ಲಾಂಚ್ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

LinkedIn: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

VISTARANEWS.COM


on

LinkedIns Tips for Graduates in the Job Search
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ (LinkedIn) ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

2024ರಲ್ಲಿ ಕಂಪನಿಗಳು ಹೊಂದಿಕೊಳ್ಳುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರೆಸುತ್ತಿವೆ. ಹೆಚ್ಚು ಹೊಂದಿಕೊಳ್ಳುವ ಕೆಲಸದ ವ್ಯವಸ್ಥೆಗಳ ಕಡೆಗೆ ಗಮನ ಕೊಡುವ ಟ್ರೆಂಡ್ ಈಗ ನಡೆಯುತ್ತಿದೆ. ಆನ್-ಸೈಟ್ ಹುದ್ದೆಗಳು 15% ರಷ್ಟು ಕಡಿಮೆಯಾಗುತ್ತಿವೆ ಮತ್ತು ವರ್ಷದಿಂದ ವರ್ಷಕ್ಕೆ ಆರಂಭಿಕ ಹಂತದ ಹುದ್ದೆಗಳಿಗೆ 52% ರಷ್ಟು ಹೈಬ್ರಿಡ್ ಸ್ಥಾನಗಳು ಹೆಚ್ಚಾಗುತ್ತಿವೆ. ಈ ಬದಲಾವಣೆಯು ಹೊಸ ಪದವೀಧರರಿಗೆ ಆಯ್ಕೆ ಮಾಡಲು ಮತ್ತು ವೃತ್ತಿ ಜೀವನ ಮುಂದುವರಿಸಲು ವಿಸ್ತಾರವಾದ ಕೆಲಸದ ಅವಕಾಶಗಳನ್ನು ಒದಗಿಸುತ್ತದೆ.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

ಲಿಂಕ್ಡ್‌ಇನ್‌ನ ಕರಿಯರ್ ಸ್ಟಾರ್ಟರ್ 2024 ವರದಿಯ ಪ್ರಕಾರ, ಯುಟಿಲಿಟೀಸ್ ಕ್ಷೇತ್ರ ಬಹಳ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದ್ದು, ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿರುವ ಯುವ ವೃತ್ತಿಪರರು ಆಯ್ಕೆಗೆ ಪರಿಗಣಿಸಬಹುದಾಗಿದೆ. ತೈಲ, ಅನಿಲ ಮತ್ತು ಗಣಿಗಾರಿಕೆ, ರಿಯಲ್ ಎಸ್ಟೇಟ್, ಸಲಕರಣೆ ಬಾಡಿಗೆ ಸೇವೆಗಳು ಮತ್ತು ಗ್ರಾಹಕ ಸೇವಾ ಕ್ಷೇತ್ರಗಳು ಹೊಸ ಪದವೀಧರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಇನ್ನಿತರ ಉನ್ನತ ಉದ್ಯಮಗಳಾಗಿವೆ. ಜತೆಗೆ ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿಲ್ಲದವರು ಶಿಕ್ಷಣ, ಮಾಹಿತಿ ಹಾಗೂ ತಂತ್ರಜ್ಞಾನ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವವರಿಗೆ ಉನ್ನತ ಉದ್ಯೋಗ

ಲಿಂಕ್ಡ್‌ಇನ್‌ನ ಮಾಹಿತಿಯು ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವ ವೃತ್ತಿಪರರಿಗೆ ವಿವಿಧ ಶ್ರೇಣಿಯ ಉನ್ನತ ಉದ್ಯೋಗಗಳ ವಿವರಗಳನ್ನು ತಿಳಿಸುತ್ತದೆ. ಪದವೀಧರರು ಸಾಫ್ಟ್‌ವೇರ್ ಎಂಜಿನಿಯರ್, ಸಿಸ್ಟಮ್ ಎಂಜಿನಿಯರ್ ಮತ್ತು ಪ್ರೋಗ್ರಾಮಿಂಗ್ ಅನಾಲಿಸ್ಟ್ ನಂತಹ ಹುದ್ದೆಗಳಿಗೆ ಹುಡುಕಾಟ ನಡೆಸಬಹುದು. ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಡೇಟಾ ಅನಾಲಿಸ್ಟ್ ಹುದ್ದೆಗಳಿಗೆ ಹೆಚ್ಚಿನ ಸಂಖ್ಯೆಯ ಪದವೀಧರರನ್ನು ನೇಮಿಸಿಕೊಳ್ಳಲಾಗುತ್ತಿದೆ. ಪದವಿ ಇಲ್ಲದವರು ಕೂಡ ಸಾಫ್ಟ್‌ವೇರ್ ಎಂಜಿನಿಯರ್, ಸೆಕ್ರೆಟರಿ ಮತ್ತು ಡಿಸೈನ್ ಎಂಜಿನಿಯರ್‌ನಂತಹ ಹುದ್ದೆಗಳಲ್ಲಿ ಕೆಲಸ ಮಾಡಬಹುದು.

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು ವೇಗದ ಬೆಳವಣಿಗೆ ಹೊಂದುವ ಅವಕಾಶ ನೀಡುತ್ತವೆ. ಸಮುದಾಯ ಮತ್ತು ಸಾಮಾಜಿಕ ಸೇವೆಗಳು, ಕಾನೂನು, ಮಾರ್ಕೆಟಿಂಗ್, ಮಾಧ್ಯಮ ಮತ್ತು ಸಂವಹನದಂತಹ ಕ್ಷೇತ್ರಗಳಲ್ಲಿ ಪದವೀಧರರಿಗೆ ಸಾಕಷ್ಟು ಅವಕಾಶಗಳು ಲಭ್ಯವಿದೆ. ಪದವಿ ಇಲ್ಲದವರು ಶಿಕ್ಷಣ, ಮಾನವ ಸಂಪನ್ಮೂಲ, ಮಾರ್ಕೆಟಿಂಗ್ ಹಾಗೂ ಮಾಧ್ಯಮ ಮತ್ತು ಸಂವಹನದಾದ್ಯಂತ ಸಾಕಷ್ಟು ಉದ್ಯೋಗಾವಕಾಶಗಳನ್ನು ಪಡೆಯುತ್ತಾರೆ.

ಇದನ್ನೂ ಓದಿ: TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

ಈ ಕುರಿತು ಲಿಂಕ್ಡ್‌ಇನ್ ಕರಿಯರ್ ಎಕ್ಸ್‌ಪರ್ಟ್ ಆಂಡ್ ಇಂಡಿಯಾ ಸೀನಿಯರ್ ಮ್ಯಾನೇಜಿಂಗ್ ಎಡಿಟರ್ ನಿರಾಜಿತಾ ಬ್ಯಾನರ್ಜಿ ಮಾತನಾಡಿ, “ಉದ್ಯೋಗ ಮಾರುಕಟ್ಟೆ ಸ್ವಲ್ಪ ಬಿಗುವಾಗಿದ್ದಾಗ ಆರಂಭಿಕ ಹಂತದಲ್ಲಿ ಉದ್ಯೋಗ ದೊರೆಯುವುದು ಕಷ್ಟವಾಗುತ್ತದೆ. ಉದ್ಯಮದ ಟ್ರೆಂಡ್‌ಗಳು ಮತ್ತು ಬೇಡಿಕೆಯ ಉದ್ಯೋಗಗಳ ಕುರಿತು ಅಪ್‌ಡೇಟ್ ಆಗಿರುವುದರಿಂದ ಮತ್ತು ಆರಂಭದಲ್ಲಿಯೇ ಸಿಗುವ ಹುದ್ದೆಗಳಲ್ಲಿ ಮುನ್ನಡೆಯುವುದರಿಂದ ಮುಂದೆ ಆಯ್ಕೆಗಳು ದೊಡ್ಡದಾಗುತ್ತಾ ಹೋಗುತ್ತದೆ. ಇಂದು ಅನೇಕ ಕೌಶಲ್ಯಗಳನ್ನು ಬೇರೆ ಬೇರೆ ಕೈಗಾರಿಕೆಗಳಲ್ಲಿ ಬಳಸಬಹುದಾಗಿದೆ, ಮತ್ತು ಎಐ ಬಳಕೆ ಹೆಚ್ಚುತ್ತಿರುವುದರಿಂದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು ಟೆಕ್-ಸಂಬಂಧಿತ ಹುದ್ದೆಗಳು ಸೃಷ್ಟಿಯಾಗುತ್ತಿವೆ.

ಈ ನೇಮಕಾತಿ ಟ್ರೆಂಡ್‌ಗಳು ಇಂಧನ ವಲಯದಲ್ಲಿರುವಂತಹ ವಿಶಾಲವಾದ ಆರ್ಥಿಕ ಮಾದರಿಗಳನ್ನು ಪ್ರತಿಬಿಂಬಿಸುತ್ತವೆ. ವೈವಿಧ್ಯಮಯ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ವೃತ್ತಿಪರರನ್ನು ಕಂಪನಿಗಳು ಹುಡುಕಲು ತೊಡಗಿವೆ. ತಮ್ಮ ದಿಗಂತವನ್ನು ವಿಸ್ತರಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನುಮತ್ತು ವೃತ್ತಿಪರರ ಜತೆಗಿನ ನೆಟ್‌ವರ್ಕಿಂಗ್ ಅನ್ನು ಬಲಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಉದ್ಯೋಗ ಹುಡುಕಾಟವನ್ನು ಪ್ರಾರಂಭಿಸುವವರಿಗೆ ಲಿಂಕ್ಡ್‌ಇನ್‌ನ ಸಲಹೆಗಳು

ನೇಮಕಾತಿದಾರರ ಗಮನ ಸೆಳೆಯಲು, ಹೆಚ್ಚಿಸಲು ನಿಮ್ಮ ಲಿಂಕ್ಡ್‌ಇನ್ ಪ್ರೊಫೈಲ್‌ನಲ್ಲಿ ನಿಮ್ಮ ಕೌಶಲ್ಯಗಳನ್ನು ಗಮನ ಸೆಳೆಯುವಂತೆ ನಮೂದಿಸಿ. ಲಿಂಕ್ಡ್‌ಇನ್ ನೀವು ತಿಳಿಸಿದ ಕೌಶಲ್ಯಗಳ ಆಧಾರದ ಮೇಲೆ ನಿಮಗೆ ಈ ಮೊದಲು ತಿಳಿದಿರದ, ಆದರೆ ನಿಮಗೆ ಹೊಂದುವ ಉದ್ಯೋಗಾವಕಾಶಗಳನ್ನು ತಿಳಿಸುತ್ತದೆ.

ಲಿಂಕ್ಡ್‌ಇನ್‌ನ ಓಪನ್ ಟು ವರ್ಕ್ ಫೀಚರ್ ಮೂಲಕ ನೀವು ಹೊಸ ಉದ್ಯೋಗದಲ್ಲಿ ಆಸಕ್ತಿಯನ್ನು ಹೊಂದಿದ್ದೀರಿ ಎಂಬುದನ್ನು ತಿಳಿಸಿ. ಜತಗೆ ಈ ಕಾಲದ ಟ್ರೆಂಡ್ ಅಥವಾ ವಿಚಾರಗಳಿಗೆ ತಕ್ಕಂತೆ ನಿಮ್ಮ ಸ್ವಂತ ವಿಚಾರಗಳನ್ನು ಪೋಸ್ಟ್ ಮಾಡುವ ಮೂಲಕ ಮತ್ತು ಸಂಭಾವ್ಯ ಉದ್ಯೋಗದಾತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಅರ್ಥಪೂರ್ಣವಾಗಿ ಸಂವಹನ ನಡೆಸುವ ಮೂಲಕ ಗಮನ ಸೆಳೆಯಬಹುದಾಗಿದೆ. ನಿಮ್ಮ ಭವಿಷ್ಯದ ಉದ್ಯೋಗದಾತರು ನಿಮ್ಮಿಂದ ಕೇವಲ ಒಂದು ಕಾಮೆಂಟ್ ದೂರದಲ್ಲಿರಬಹುದು ಎಂಬುದು ನೆನಪಲ್ಲಿರಲಿ.

ಇದನ್ನೂ ಓದಿ: Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

ಔಟ್ ಆಫ್ ದಿ ಬಾಕ್ಸ್ ಯೋಚಿಸಿ. ಅಂದರೆ ವಿಭಿನ್ನವಾಗಿ ಯೋಚಿಸಿ. ಎಲ್ಲಾ ಕಡೆ ಎಐ ಆವರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಪ್ರೋಗ್ರಾಮಿಂಗ್ ಕೌಶಲ್ಯಗಳನ್ನು ಹೊಂದಿರುವವರನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಹೊರತಾದ ಬೇರೆ ಅಭಿವೃದ್ಧಿ ಹೊಂದುತ್ತಿರುವ ಕೈಗಾರಿಕೆಗಳು ನೇಮಕಮಾಡಿಕೊಳ್ಳುತ್ತಿವೆ. ನಿಮ್ಮ ಮುಂದಿನ ಕೆಲಸ ಅಥವಾ ಹುದ್ದೆಗಾಗಿ ನೀವು ಹುಡುಕಾಟ ನಡೆಸುತ್ತಿರುವಾಗ ಈ ರೀತಿಯ ವೃತ್ತಿ ಪರಿವರ್ತನೆಯ (ಕರಿಯರ್ ಟ್ರಾನ್ಸಿಷನ್) ಟ್ರೆಂಡ್‌ಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಿ. ಏಕೆಂದರೆ ಅದರಿಂದ ನಿಮ್ಮ ಮುಂದೆ ಅವಕಾಶಗಳ ಸಂಖ್ಯೆ ಹೆಚ್ಚುತ್ತದೆ. ನಿಮ್ಮ ಕೌಶಲ್ಯಗಳಿಗೆ ಸಂಬಂಧಿಸಿದ ಲಿಂಕ್ಡ್‌ಇನ್ ಗುಂಪುಗಳಲ್ಲಿ ತೊಡಗಿಸಿಕೊಳ್ಳಿ. ಇದು ನೆಟ್‌ವರ್ಕ್‌ ಸಾಧಿಸಲು ಉತ್ತಮ ಮಾರ್ಗವಾಗಿದೆ ಮತ್ತು ಲಭ್ಯವಿರುವ ವಿಶಾಲವಾದ ಅವಕಾಶಗಳ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಅನುವು ಮಾಡಿ ಕೊಡಲಿದೆ.

ಇದನ್ನೂ ಓದಿ: World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ಪದವೀಧರರು ತಮ್ಮ ಕೌಶಲ್ಯಗಳನ್ನು ಸುಧಾರಿಸಲು ಸಹಾಯ ಮಾಡಲು, ಲಿಂಕ್ಡ್‌ಇನ್ 30 ಜೂನ್ 2024ರವರೆಗೆ ಉಚಿತ ಲಿಂಕ್ಡ್‌ಇನ್ ಕಲಿಕಾ ಕೋರ್ಸ್‌ಗಳನ್ನು ಬಿಡುಗಡೆ ಮಾಡಿದೆ, ಆ ಕೋರ್ಸುಗಳು ಹೀಗಿವೆ.

● ಕಾಲೇಜು ಪದವೀಧರರಿಗೆ ಉದ್ಯೋಗ ಹುಡುಕಾಟ.
● ಇಂಟರ್ನ್‌ಶಿಪ್ ಅನ್ನು ಉದ್ಯೋಗವನ್ನಾಗಿ ಪರಿವರ್ತಿಸಿಕೊಳ್ಳುವುದು.
● ವೃತ್ತಿ ಆರಂಭಿಸುವವರಿಗೆ ಪ್ರೊಫೆಷನಲ್ ನೆಟ್‌ವರ್ಕಿಂಗ್.
● 30-ನಿಮಿಷದ ರೆಸ್ಯೂಮ್ ರಿಫ್ರೆಶ್.
● ಸಾಮಾನ್ಯ ಸಂದರ್ಶನ ಪ್ರಶ್ನೆಗಳಿಗೆ ಸಿದ್ಧರಾಗಿರುವುದು.
● ನಿಮ್ಮ ಕಾಂಪನ್ಸೇಷನ್ ಪ್ಯಾಕೇಜ್ ಮಾತುಕತೆ ನಡೆಸುವುದು.

Continue Reading

ಕರ್ನಾಟಕ

Toyota: ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024; ಟಿಟಿಟಿಐ ವಿದ್ಯಾರ್ಥಿಗಳ ಉತ್ತಮ ಸಾಧನೆ

Toyota: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ದಿಂದ ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ಆಯೋಜಿಸಿದ್ದ ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

VISTARANEWS.COM


on

Toyota Technical Training Institute students Excellent performance in India Skills Competition 2024
Koo

ರಾಮನಗರ: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ದಿಂದ ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ಆಯೋಜಿಸಿದ್ದ ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟೊಯೊಟಾ (Toyota) ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಸಂಯೋಜಿತ ಉತ್ಪಾದನೆ (ಎಡಿಟಿವ್ ಮ್ಯಾನುಫ್ಯಾಕ್ಚರಿಂಗ್ ) ವಿಭಾಗದ ವೈಯಕ್ತಿಕ ಪ್ರತಿಸ್ಪರ್ಧಿಯಾಗಿ ಪ್ರೇಮ್. ವಿ ಚಿನ್ನದ ಪದಕವನ್ನು ಗಳಿಸಿದ್ದಾರೆ. ಮ್ಯಾನುಫ್ಯಾಕ್ಚರಿಂಗ್ ಟೀಮ್ ಚಾಲೆಂಜ್‌ನಲ್ಲಿ ಮೋಹಿತ್ ಎಂ.ಯು, ಹರೀಶ್ ಆರ್, ಮತ್ತು ನೆಲ್ಸನ್ ವಿ ತಂಡ ಚಿನ್ನದ ಪದಕಗಳನ್ನು ಪಡೆದುಕೊಂಡಿದೆ.

ಮೆಕಾಟ್ರಾನಿಕ್ಸ್ ವಿಭಾಗದಲ್ಲಿ ದರ್ಶನ್ ಗೌಡ ಸಿ.ಎಸ್. ಮತ್ತು ಭಾನು ಪ್ರಸಾದ್ ಎಸ್.ಎಂ ತಂಡ ಚಿನ್ನದ ಪದಕ ಗಳಿಸಿದೆ. ಹೇಮಂತ್ ಕೆ.ವೈ ಮತ್ತು ಉದಯ್ ಕುಮಾರ್ ಬಿ ತಂಡ ಬೆಳ್ಳಿ ಪದಕ ಗಳಿಸಿದೆ. ಇದಲ್ಲದೆ, ರೋಹನ್ ಎ.ಎಸ್. ಬೆಳ್ಳಿ ಪದಕ ಮತ್ತು ಸುದೀಪ್ ಎಸ್.ಎಂ. ಅವರು ಕಾರ್ ಪೇಂಟಿಂಗ್‌ನಲ್ಲಿ ವೈಯಕ್ತಿಕ ಸ್ಪರ್ಧಿಯಾಗಿ ಮೆಡಲಿಯನ್ ಆಫ್ ಎಕ್ಸಲೆನ್ಸ್ ಪಡೆದಿದ್ದಾರೆ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ನಡೆದ ಸ್ಪರ್ಧೆಯ “ಆಫ್-ಸೈಟ್” ಭಾಗದ ನಾಲ್ಕು ವಿಭಾಗಗಳಲ್ಲಿ ಟಿಟಿಟಿಐ ಭಾಗವಹಿಸಿತ್ತು. ಮ್ಯಾನುಫ್ಯಾಕ್ಚರಿಂಗ್ ಟೀಮ್ ಚಾಲೆಂಜ್, ಮೆಕಾಟ್ರಾನಿಕ್ಸ್, ಕಾರ್ ಪೇಂಟಿಂಗ್ ಮತ್ತು ಎಡಿಟಿವ್ ಮ್ಯಾನುಫ್ಯಾಕ್ಚರಿಂಗ್ ಸೇರಿದಂತೆ ಹಲವು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಟಿಟಿಟಿಐನ ವಿದ್ಯಾರ್ಥಿಗಳು ಅದ್ಭುತ ಕೌಶಲ್ಯ ಮತ್ತು ಡೆಡಿಕೇಷನ್ ಅನ್ನು ಪ್ರದರ್ಶಿಸಿದ್ದಾರೆ.

ಈ ವೇಳೆ ಎನ್‌ಎಸ್‌ಡಿಸಿ ಯ ಮಾರ್ಕೆಟಿಂಗ್ ಮತ್ತು ಕಮ್ಯುನಿಕೇಷನ್ಸ್ ಜನರಲ್ ಮ್ಯಾನೇಜರ್ ಮೋನಿಕಾ ನಂದಾ ಮಾತನಾಡಿ, “ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಗಮನಾರ್ಹ ಸಾಧನೆ ಮಾಡಿದ ಟೊಯೋಟಾ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಟಿಟಿಟಿಐ) ನ ವಿದ್ಯಾರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರ ಅನುಕರಣೀಯ ಕೌಶಲ್ಯಗಳು ಮತ್ತು ಸಮರ್ಪಣೆ ಟಿಟಿಟಿಐನ ತರಬೇತಿ ಕಾರ್ಯಕ್ರಮಗಳ ಪರಿಣಾಮಕಾರಿತ್ವಕ್ಕೆ ಸಾಕ್ಷಿಯಾಗಿದೆ. ಈ ವಿಜೇತರು ತಮ್ಮ ಸಂಸ್ಥೆಗೆ ಗೌರವವನ್ನು ತರುವುದಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತೀಯ ಕೌಶಲ್ಯ ಅಭಿವೃದ್ಧಿಯ ಖ್ಯಾತಿಯನ್ನು ಹೆಚ್ಚಿಸುತ್ತಾರೆ. ವಿಶ್ವ ಕೌಶಲ್ಯ ಸ್ಪರ್ಧೆಗೆ ಆಯ್ಕೆಯಾದವರು ಈ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರಿಸುತ್ತಾರೆ. ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡುತ್ತಾರೆ ಎಂದು ನಮಗೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಣಕಾಸು ಮತ್ತು ಆಡಳಿತದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜಿ.ಶಂಕರ ಮಾತನಾಡಿ, “ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟಿಟಿಟಿಐ ವಿದ್ಯಾರ್ಥಿಗಳ ಗಮನಾರ್ಹ ಸಾಧನೆಗಳ ಬಗ್ಗೆ ನಾವು ಅಪಾರ ಹೆಮ್ಮೆ ಪಡುತ್ತೇವೆ. ಅವರ ಯಶಸ್ವಿ ಪ್ರಯಾಣ ನಮಗೆ ಹೆಚ್ಚು ಆನಂದವನ್ನು ನೀಡಿದೆ. ಕಠಿಣ ಪರಿಶ್ರಮದಿಂದಾಗಿ ಈ ಮೈಲಿಗಲ್ಲನ್ನು ವಿದ್ಯಾರ್ಥಿಗಳು ತಲುಪಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ಮನಿ ಗೈಡ್

Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್‌ಗಳ ಬಳಕೆದಾರರು ಹೆಚ್ಚಾಗಿದ್ದು, ಅಂತೆಯೇ ವಂಚಕರ ದಾಳಿಯೂ ಹೆಚ್ಚಾಗಿದೆ. ಇದು ಬಳಕೆದಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇಂತಹ ವಂಚನೆಗಳನ್ನು ತಡೆಗಟ್ಟಲು ಬಳಕೆಯ ಸುರಕ್ಷಿತ ವಿಧಾನಗಳನ್ನು ಬಳಸುವುದೊಂದೇ ದಾರಿ. ಅದಕ್ಕಾಗಿ ಇಲ್ಲಿದೆ ಕ್ರೆಡಿಟ್ ಕಾರ್ಡ್‌ (Credit Card Safety Tips) ಕೆಲವು ಟಿಪ್ಸ್. ಕ್ರೆಡಿಟ್ ಕಾರ್ಡ್ ವಂಚನೆಗಳಿಂದ ಪಾರಾಗಲು ಈ ಟಿಪ್ಸ್ ಬಳಸಿ.

VISTARANEWS.COM


on

By

Credit Card Safety Tips
Koo

ಪಾವತಿಗೆ (payment) ಕ್ರೆಡಿಟ್ ಕಾರ್ಡ್‌ಗಳ ಬಳಕೆ (Credit Card Safety Tips) ಇಂದು ಸಾಮಾನ್ಯವಾಗಿದೆ. ಇದರಿಂದ ಸಾಕಷ್ಟು ಪ್ರಯೋಜನಗಳು ಇದ್ದರೂ ಅಪಾಯವೂ (risk) ಅಷ್ಟೇ ಇದೆ. ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಗಳ ಜನಪ್ರಿಯತೆಯು ವಂಚನೆಯಲ್ಲಿ ( fraud) ಏರಿಕೆಗೂ ಕಾರಣವಾಗಿದೆ. ಹೀಗಾಗಿ ಎಲ್ಲ ಕಡೆ ಕ್ರೆಡಿಟ್ ಕಾರ್ಡ್ ಗಳನ್ನು ಬಳಸುವಾಗ ಎಚ್ಚರದಿಂದ ಇರುವುದೊಂದೇ ದಾರಿ.

ವಿಶ್ವದಾದ್ಯಂತ ಸಾವಿರಾರು ಮಂದಿ ಇಂದು ಕ್ರೆಡಿಟ್ ಕಾರ್ಡ್ ವಂಚಕರ ಪಾಲಿಗೆ ತುತ್ತಾಗಿದ್ದಾರೆ. ಇಂತಹ ವಂಚನೆಗಳನ್ನು ಮಾಡಲು ಪ್ರತಿದಿನ ವಂಚಕರು ಹೊಸಹೊಸ ತಂತ್ರಗಳನ್ನು ಬಳಸುತ್ತಿದ್ದಾರೆ. ಅನಧಿಕೃತ ವಹಿವಾಟು, ಮಾಹಿತಿ ಕಳ್ಳತನ, ಉಳಿತಾಯದ ಖಾತೆಯಿಂದ ಹಣ ಕಳವು ಸೇರಿದಂತೆ ವಂಚನೆಯ ಕೃತ್ಯಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಅರಿವು ಮತ್ತು ಜಾಗರೂಕತೆಯ ಅಗತ್ಯ. ಅದಕ್ಕಾಗಿ ಇಲ್ಲಿದೆ ಕೆಲವು ಸಲಹೆಗಳು.

1. ವಹಿವಾಟನ್ನು ಅಪೂರ್ಣಗೊಳಿಸಬೇಡಿ

ಕ್ರೆಡಿಟ್ ಕಾರ್ಡ್ ಬಳಸಿ ವಹಿವಾಟು ನಡೆಸುವಾಗ ಸ್ಥಳದಿಂದ ಹೊರಡುವ ಮೊದಲು ವಹಿವಾಟು ಪೂರ್ಣಗೊಂಡಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ. ಕ್ರೆಡಿಟ್ ಕಾರ್ಡ್‌ನ ಎರಡೂ ಬದಿಗಳ ಫೋಟೋಕಾಪಿಗಳನ್ನು ಯಾರಿಗೂ ನೀಡಬೇಡಿ. ಯಾರಾದರೂ ನಿಮ್ಮ ಕಾರ್ಡ್ ಮಾಹಿತಿಯನ್ನು ಹೊಂದಿದ್ದರೆ, ಅವರು ಆನ್‌ಲೈನ್ ವಹಿವಾಟುಗಳಿಗಾಗಿ ನಿಮ್ಮ ಕಾರ್ಡ್‌ನ ಹಿಂಭಾಗದಲ್ಲಿ ಮುದ್ರಿಸಲಾದ ಕಾರ್ಡ್ ಪರಿಶೀಲನೆ ಮೌಲ್ಯವನ್ನು (CVV) ಬಳಸಬಹುದು ಎಚ್ಚರ. ಇದಕ್ಕಾಗಿ ಪ್ರತಿ ವಹಿವಾಟಿಗೂ ಒಟಿಪಿ ಬಳಸಲು ಮೊದಲೇ ಸೆಟ್ಟಿಂಗ್ ಮಾಡಿಕೊಳ್ಳಿ.


2. ಖಾತೆಗಳನ್ನು ಪರಿಶೀಲಿಸುತ್ತಿರಿ

ಅನಧಿಕೃತ ಚಟುವಟಿಕೆ ಕಾರ್ಡ್ ಸ್ಟೇಟ್ ಮೆಂಟ್ ಮತ್ತು ವಹಿವಾಟುಗಳನ್ನು ಪರಿಶೀಲಿಸುವ ಮೂಲಕ ಖಾತೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿ. ಬ್ಯಾಂಕ್ ಅನುಮತಿಯೊಂದಿಗೆ ವಹಿವಾಟುಗಳಿಗಾಗಿ ನೈಜ-ಸಮಯದ ಅಧಿಸೂಚನೆಗಳನ್ನು ಸಕ್ರಿಯಗೊಳಿಸಿ. ಇದು ಅನುಮಾನಾಸ್ಪದ ಚಟುವಟಿಕೆಯನ್ನು ಗುರುತಿಸಲು ಮತ್ತು ತಕ್ಷಣವೇ ಬ್ಯಾಂಕ್‌ ಅನ್ನು ಸಂಪರ್ಕಿಸಲು ಸಹಾಯ ಮಾಡುತ್ತದೆ.

3. ಕ್ರೆಡಿಟ್ ಕಾರ್ಡ್ ಅನ್ನು ಸಕ್ರಿಯಗೊಳಿಸಿ

ಮೊದಲ ಬಾರಿಗೆ ಕ್ರೆಡಿಟ್ ಕಾರ್ಡ್ ಬಳಕೆದಾರರಾಗಿದ್ದರೆ ಅಥವಾ ಹೊಸ ಕ್ರೆಡಿಟ್ ಕಾರ್ಡ್ ಅನ್ನು ಸ್ವೀಕರಿಸಿದ್ದರೆ ಆರ್ ಬಿ ಐ ಕ್ರೆಡಿಟ್ ಕಾರ್ಡ್ ಅನ್ನು ಸ್ವೀಕರಿಸಿದ 30 ದಿನಗಳಲ್ಲಿ ಸಕ್ರಿಯಗೊಳಿಸುತ್ತದೆ. ಭದ್ರತಾ ದೃಷ್ಟಿಯಿಂದ ಕ್ರೆಡಿಟ್ ಕಾರ್ಡ್ ಸಕ್ರಿಯಗೊಳಿಸುವಿಕೆಯು ಪ್ರಾಮುಖ್ಯತೆ ಪಡೆದಿದೆ. ನಿರ್ದಿಷ್ಟ ಸಮಯದೊಳಗೆ ಕಾರ್ಡ್ ಅನ್ನು ಸಕ್ರಿಯಗೊಳಿಸಲು ಮರೆಯಬೇಡಿ.

4. CVV ಸಂಖ್ಯೆಯನ್ನು ಹಂಚಿಕೊಳ್ಳಬೇಡಿ

ಆನ್‌ಲೈನ್ ಪಾವತಿಗಳನ್ನು ಮಾಡುವಾಗ ಕಾರ್ಡ್‌ನ ಹಿಂಭಾಗದಲ್ಲಿ ಮುದ್ರಿಸಲಾದ ಕಾರ್ಡ್ ಪರಿಶೀಲನೆ ಮೌಲ್ಯ (CVV) ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಈ ಸಂಖ್ಯೆ ಯಾರಿಗಾದರೂ ಲಭ್ಯವಾದರೆ ಸುಲಭವಾಗಿ ಅವರು ನಿಮ್ಮ ಕಾರ್ಡ್ ಅನ್ನು ದುರ್ಬಳಕೆ ಮಾಡಬಹುದು.

5. ಕ್ಲಿಷ್ಟವಾದ ಪಾಸ್‌ವರ್ಡ್‌ ಬಳಸಿ

ಆನ್‌ಲೈನ್ ಶಾಪಿಂಗ್‌ನ ಹೆಚ್ಚುತ್ತಿರುವ ಜನಪ್ರಿಯತೆಯು ದೃಢವಾದ ಸೈಬರ್‌ ಸೆಕ್ಯುರಿಟಿ ಅಭ್ಯಾಸಗಳನ್ನು ಅನುಸರಿಸುವ ಅಗತ್ಯವನ್ನು ಉಂಟು ಮಾಡಿದೆ. ಕ್ರೆಡಿಟ್ ಕಾರ್ಡ್ ಅಥವಾ ಹಣಕಾಸು ಖಾತೆಗಳನ್ನು ದುರುಪಯೋಗದಿಂದ ರಕ್ಷಿಸಲು ಅಕ್ಷರಗಳು, ಸಂಖ್ಯೆಗಳು ಮತ್ತು ವಿಶೇಷ ಅಕ್ಷರಗಳ ಮಿಶ್ರಣವನ್ನು ಬಳಸಿಕೊಂಡು ಬಲವಾದ ಮತ್ತು ಅನನ್ಯವಾದ ಪಾಸ್‌ವರ್ಡ್‌ಗಳನ್ನು ರಚಿಸುವುದನ್ನು ಒಳ್ಳೆಯದು. ವಹಿವಾಟುಗಳಿಗೆ ಹೆಚ್ಚುವರಿ ಭದ್ರತೆಯಾಗಿ ಸಾಧ್ಯವಿರುವಲ್ಲೆಲ್ಲಾ ಎರಡು ಅಂಶಗಳ ದೃಢೀಕರಣವನ್ನು ಸಕ್ರಿಯಗೊಳಿಸಿ.

6. ವಂಚನೆಯ ಬಗ್ಗೆ ಜಾಗರೂಕರಾಗಿರಿ

ಇತ್ತೀಚಿನ ದಿನಗಳಲ್ಲಿ ಫಿಶಿಂಗ್ ಸ್ಕ್ಯಾಮ್‌ಗಳು ಮೋಸದ ಇ-ಮೇಲ್‌, ಸಂದೇಶ ಅಥವಾ ಫೋನ್ ಕರೆಗಳನ್ನು ಒಳಗೊಂಡಿರುತ್ತವೆ. ಅದು ಬ್ಯಾಂಕ್‌ ಅಥವಾ ಪ್ರಸಿದ್ಧ ಕಂಪೆನಿಗಳ ಕಾನೂನುಬದ್ಧ ಮೂಲಗಳನ್ನು ಬಳಸಿ ಎಐ ನಂತಹ ತಂತ್ರಜ್ಞಾನವನ್ನು ಬಳಸಿಕೊಂಡು ಮಾಡಲಾಗುತ್ತದೆ. ಈ ಬಗ್ಗೆ ಅನುಮಾನಿಸುವುದು ಕಷ್ಟ. ಹೀಗಾಗಿ ಯಾವುದೇ ಮಾಹಿತಿಯನ್ನು ಎಸ್ ಎಂಎಸ್ , ಇಮೇಲ್, ಕರೆಗೆ ನೀಡಬೇಡಿ. ಸಂದೇಹವಿದ್ದಲ್ಲಿ, ಸಂವಹನದ ದೃಢೀಕರಣವನ್ನು ಪರಿಶೀಲಿಸಲು ತಕ್ಷಣವೇ ನಿಮ್ಮ ಬ್ಯಾಂಕ್ ಅಥವಾ ಕಾರ್ಡ್ ವಿತರಕರನ್ನು ಸಂಪರ್ಕಿಸಿ.

ಇದನ್ನೂ ಓದಿ: Money Guide: ಬ್ಯಾಂಕ್‌ ಖಾತೆ, ಮ್ಯೂಚುವಲ್‌ ಫಂಡ್‌ ಹೊಂದಿದ್ದೀರಾ? ಹಾಗಾದರೆ ಮೊದಲು ಈ ಕೆಲಸ ಮಾಡಿ

7. ಸುರಕ್ಷಿತ ವೆಬ್‌ಸೈಟ್‌ಗಳಲ್ಲಿ ಮಾತ್ರ ಬಳಸಿ

ಆನ್‌ಲೈನ್ ಶಾಪಿಂಗ್ ಪ್ರಪಂಚವು ವಿಶಾಲವಾಗಿದೆ ಮತ್ತು ಕೆಲವೊಮ್ಮೆ ಅಪಾಯಕಾರಿಯಾಗಿದೆ. ಆನ್‌ಲೈನ್‌ನಲ್ಲಿ ಶಾಪಿಂಗ್ ಮಾಡುವಾಗ, ಕ್ರೆಡಿಟ್ ಕಾರ್ಡ್ ಅನ್ನು ಸುರಕ್ಷಿತ ಮತ್ತು ವಿಶ್ವಾಸಾರ್ಹ ವೆಬ್‌ಸೈಟ್‌ಗಳಲ್ಲಿ ಮಾತ್ರ ಬಳಸಿ. ವಹಿವಾಟು ನಡೆಸುವ ಮೊದಲು ಅಥವಾ ನಿಮ್ಮ ಕಾರ್ಡ್ ವಿವರಗಳನ್ನು ಹಂಚಿಕೊಳ್ಳುವ ಮೊದಲು ವೆಬ್‌ಸೈಟ್‌ನ ದೃಢೀಕರಣವನ್ನು ಪರಿಶೀಲಿಸಲು ಪ್ರತಿಷ್ಠಿತ ನಿವ್ವಳ ದೃಢೀಕರಣ ಏಜೆನ್ಸಿಯನ್ನು ಬಳಸಿಕೊಳ್ಳಿ.


8. ಸಾಧನಗಳನ್ನು ಸುರಕ್ಷಿತಗೊಳಿಸಿ

ಆನ್‌ಲೈನ್ ವಹಿವಾಟು ನಡೆಸಲು ಸ್ಮಾರ್ಟ್‌ಫೋನ್, ಟ್ಯಾಬ್ಲೆಟ್ ಅಥವಾ ಲ್ಯಾಪ್‌ಟಾಪ್ ಅನ್ನು ಬಳಸಿದರೆ ನಿಮ್ಮ ಸಾಧನಗಳು ಸುರಕ್ಷಿತವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಿ. ಸೈಬರ್ ಬೆದರಿಕೆಗಳಿಂದ ರಕ್ಷಿಸಲು ಸಾಧನದ ಆಂಟಿವೈರಸ್ ಸಾಫ್ಟ್‌ವೇರ್ ಅನ್ನು ನವೀಕರಿಸಿ. ಕಂಪ್ಯೂಟರ್‌ನ ಆಪರೇಟಿಂಗ್ ಸಿಸ್ಟಂ ಮತ್ತು ಅಪ್ಲಿಕೇಶನ್‌ಗಳನ್ನು ನಿಯಮಿತವಾಗಿ ಅಪ್‌ಡೇಟ್ ಮಾಡುವುದರಿಂದ ಭದ್ರತಾ ದೋಷಗಳನ್ನು ಸರಿಪಡಿಸಲು ಮತ್ತು ಸೈಬರ್ ದಾಳಿಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ, ಹಣಕಾಸಿನ ವಹಿವಾಟುಗಳಿಗಾಗಿ ಸಾರ್ವಜನಿಕ ವೈ-ಫೈ ನೆಟ್‌ವರ್ಕ್‌ಗಳನ್ನು ಬಳಸುವುದನ್ನು ತಪ್ಪಿಸಿ.

9. ಖರ್ಚಿನ ಮಿತಿ ನಿಗದಿಪಡಿಸಿ

ಹೆಚ್ಚಿನ ಕ್ರೆಡಿಟ್ ಕಾರ್ಡ್ ಕಂಪನಿ ಮತ್ತು ಬ್ಯಾಂಕ್‌ಗಳು ತಮ್ಮ ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ವಹಿವಾಟು ಮಿತಿಗಳನ್ನು ಮತ್ತು ಅಲರ್ಟ್ ಗಳನ್ನು ಹೊಂದಿಸಲು ಅವಕಾಶ ಮಾಡಿಕೊಡುತ್ತವೆ. ನಿರ್ದಿಷ್ಟಪಡಿಸಿದ ಮಿತಿಯನ್ನು ಮೀರಿದ ವಹಿವಾಟುಗಳು ಸೇರಿದಂತೆ ನಿಮ್ಮ ಕ್ರೆಡಿಟ್ ಕಾರ್ಡ್ ಬಳಸಿ ಮಾಡಿದ ಯಾವುದೇ ವಹಿವಾಟಿನ ಕುರಿತು ಅಲರ್ಟ್ ಗಳನ್ನು ಸೂಚಿಸುತ್ತವೆ. ಈ ಅಧಿಸೂಚನೆಗಳು ನಿಮ್ಮ ಕಾರ್ಡ್ ಚಟುವಟಿಕೆಯನ್ನು ಟ್ರ್ಯಾಕ್ ಮಾಡಲು ಸಹಾಯ ಮಾಡುತ್ತದೆ ಮತ್ತು ಅನುಮಾನಾಸ್ಪದ ವಹಿವಾಟಿನ ಸಂದರ್ಭದಲ್ಲಿ ತಕ್ಷಣದ ಕ್ರಮವನ್ನು ತೆಗೆದುಕೊಳ್ಳಲು ನೆರವಾಗುತ್ತದೆ. ಖರ್ಚು ಮಿತಿಗಳನ್ನು ಫಿಕ್ಸ್ ಮಾಡುವುದರಿಂದ ಜೇಬಿಗೂ ಅನುಕೂಲಕರ!

Continue Reading

ತಂತ್ರಜ್ಞಾನ

WhatsApp Update : ವಾಯ್ಸ್ ನೋಟ್ ಅವಧಿ ಹೆಚ್ಚಿಸಲಿದೆ ವಾಟ್ಸ್ಆ್ಯಪ್; ವಿಸ್ತರಣೆ ಅವಧಿ ಎಷ್ಟು ಗೊತ್ತೇ?

ವಾಟ್ಸ್ ಆಪ್ ನಲ್ಲಿ ಪ್ರಸ್ತುತ ಬಳಕೆದಾರರು ಕೇವಲ 30 ಸೆಕೆಂಡ್ ಉದ್ದದ ಧ್ವನಿ ಸಂದೇಶಗಳನ್ನು ಹಂಚಿಕೊಳ್ಳಲು ಮಾತ್ರ ಅನುಮತಿ ಇದೆ. ಆದರೆ ಇನ್ನು ಮುಂದೆ ಸುಮಾರು ಒಂದು ನಿಮಿಷಗಳ ಕಾಲದ ಧ್ವನಿ ಸಂದೇಶವನ್ನು (WhatsApp Update) ಕಳುಹಿಸಬಹುದಾಗಿದೆ.

VISTARANEWS.COM


on

By

WhatsApp Update
Koo

ಜಗತ್ತಿನಾದ್ಯಂತ ಕೋಟ್ಯಂತ ಬಳಕೆದಾರರನ್ನು (users) ಹೊಂದಿರುವ ತ್ವರಿತ ಸಂದೇಶ (messaging app) ಕಳುಹಿಸುವ ವೇದಿಕೆಯಾದ ವಾಟ್ಸ್​​ಆ್ಯಪ್ (WhatsApp Update) ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಸಾಕಷ್ಟು ಬದಲಾವಣೆಗಳನ್ನು ಮಾಡುತ್ತಿದೆ. ಇದೀಗ ಧ್ವನಿ ಸಂದೇಶಗಳ (voice message) ಕಾಲಾವಧಿಯನ್ನು ಹೆಚ್ಚಿಸಿ ಹೊಸ ಅಪ್ಡೇಟ್ ನೀಡಿದೆ.

ಪ್ರಸ್ತುತ ವಾಟ್ಸ್ ಆಪ್ ಆವೃತ್ತಿಯು ಬಳಕೆದಾರರಿಗೆ ಕೇವಲ 30 ಸೆಕೆಂಡ್​ಗಳಷ್ಟು ಅವಧಿಯ ಧ್ವನಿ ಸಂದೇಶಗಳನ್ನು ಹಂಚಿಕೊಳ್ಳಲು ಮಾತ್ರ ಅನುಮತಿ ನೀಡುತ್ತಿತ್ತು. ಆದರೆ ಇನ್ನು ಮುಂದೆ ಸುಮಾರು ಒಂದು ನಿಮಿಷಗಳ ಕಾಲದ ಧ್ವನಿ ಸಂದೇಶವನ್ನು ವಾಟ್ಸ್​​ಆ್ಯಪ್​ ಮೂಲಕ ಕಳುಹಿಸಬಹುದು.

ಈ ಕುರಿತು ವಾಬೀಟಾಇನ್ಫೋ ನೀಡಿರುವ ಮಾಹಿತಿ ಪ್ರಕಾರ ಒಂದು ನಿಮಿಷದವರೆಗೆ ಧ್ವನಿ ಸಂದೇಶಗಳನ್ನು ಕಳುಹಿಸುವ ವಿಧಾನವನ್ನು ಬೆಂಬಲಿಸಲು ವಾಟ್ಸ್ ಆಪ್ ನ ಕಾರ್ಯವಿಧಾನಗಳನ್ನು ಅಪ್‌ಗ್ರೇಡ್ ಮಾಡಲಾಗಿದೆ. ಇದು ಇದು ಹಿಂದಿನ ಧ್ವನಿ ಸಂದೇಶ ಕಳುಹಿಸುವ ಮಿತಿಗಿಂತ ದ್ವಿಗುಣವಾಗಿದೆ ಎಂದು ತಿಳಿಸಿದೆ.

ಇನ್ನು ಮುಂದೆ ಧ್ವನಿ ರೂಪದಲ್ಲಿ ಸಂದೇಶಗಳನ್ನು ಹಂಚಿಕೊಳ್ಳಲು ಬಯಸುವ ಬಳಕೆದಾರರಿಗೆ ವಿಸ್ತೃತ ಅವಧಿಯ ಸಂದೇಶ ಕಳುಹಿಸಲು ಇದು ಪ್ರಯೋಜನಕಾರಿಯಾಗಲಿದೆ. ಇದರಿಂದ ಬಳಕೆದಾರರು ಇನ್ನು ಮುಂದೆ ತಮ್ಮ ಆಡಿಯೋ ರೆಕಾರ್ಡಿಂಗ್‌ಗಳನ್ನು ಹಲವು ಭಾಗಗಗಳಾಗಿ ವಿಭಜಿಸಬೇಕಾಗಿಲ್ಲ. ದೀರ್ಘಾವಧಿಯಲ್ಲಿ ಇದು ಲಭ್ಯವಾಗುವುದರಿಂದ ಸಮಯವನ್ನು ಉಳಿಸಲು ಮತ್ತು ಸಂವಹನ ಪ್ರೊಸೆಸರ್ ಅನ್ನು ಹೆಚ್ಚು ಅನುಕೂಲಕರವಾಗಿಸಲು ಸಹಾಯ ಮಾಡುತ್ತದೆ.


ಆಂಡ್ರಾಯ್ಡ್ ಮತ್ತು ಐಒಎಸ್ ಗಾಗಿ ವಾಟ್ಸ್​​ಆ್ಯಪ್​ ಬೀಟಾ ಆವೃತ್ತಿಯಲ್ಲಿರುವ ಕೆಲವು ಬಳಕೆದಾರರು ಈಗ ಒಂದು ನಿಮಿಷದ ಧ್ವನಿ ಟಿಪ್ಪಣಿಯನ್ನು ತಮ್ಮ ವಾಟ್ಸ್​​ಆ್ಯಪ್​ನಲ್ಲಿ ಮಾಡಿಕೊಳ್ಳಬಹುದು. ಆದರೆ ಈ ವಾಯ್ಸ್​ ನೋಟ್​ ಆಲಿಸಲು ವಾಟ್ಸ್ ಆಪ್ ನ ಇತ್ತೀಚಿನ ಆವೃತ್ತಿಯನ್ನು ಮೊಬೈಲ್ ನಲ್ಲಿ ನವೀಕರಿಸಲೇ ಬೇಕಾಗುತ್ತದೆ.

ನವೀಕರಣ ಮಾಡುವುದು ಹೇಗೆ?

ವಾಟ್ಸ್​​ಆ್ಯಪ್​ ನಲ್ಲಿರುವ ವಾಯ್ಸ್​ ನೋಟ್​ಗಳನ್ನು ಅಪ್ಡೇಡ್ ಮಾಡಲು ಫೋನ್‌ನಲ್ಲಿ ವಾಟ್ಸ್ ಆಪ್ ಅನ್ನು ತೆರೆಯಿರಿ. ಕೆಳಗಿನ ಬಾರ್‌ ನಲ್ಲಿರುವ ‘ಅಪ್‌ಡೇಟ್‌ಗಳು’ ಟ್ಯಾಬ್‌ಗೆ ಹೋಗಿ ಅಲ್ಲಿ ಪೆನ್ಸಿಲ್‌ನಂತಹ ಐಕಾನ್ ಮೇಲೆ ಟ್ಯಾಪ್ ಮಾಡಿ. ಈಗ, ಪರದೆಯ ಕೆಳಗಿನ ಬಲಭಾಗದಲ್ಲಿರುವ ಮೈಕ್ರೊಫೋನ್ ಐಕಾನ್ ಮೇಲೆ ಟ್ಯಾಪ್ ಮಾಡಿ. ಬಳಿಕ ಒಂದು ನಿಮಿಷದ ಅವಧಿಯ ಧ್ವನಿ ಟಿಪ್ಪಣಿಯನ್ನು ರೆಕಾರ್ಡ್ ಮಾಡಲು ಸಾಧ್ಯವಾಗುತ್ತದೆ. ಅನಂತರ ಅದನ್ನು ಹಂಚಿಕೊಳ್ಳಬಹುದು.

ಪರೀಕ್ಷೆ ಹಂತದಲ್ಲಿದೆ

ಒಂದು ನಿಮಿಷದ ಅವಧಿಯ ಈ ಧ್ವನಿ ಸಂದೇಶಗಳಿಗೆ ಅಪ್‌ಡೇಟ್‌ ಮಾಡುವ ಸಾಮರ್ಥ್ಯವು ಪ್ರಸ್ತುತ ಕೆಲವು ಬಳಕೆದಾರರಿಗೆ ಮಾತ್ರ ಸೀಮಿತವಾಗಿದೆ. ಇದು ಮುಂದಿನ ದಿನಗಳಲ್ಲಿ ಎಲ್ಲರಿಗೂ ಲಭ್ಯವಾಗಲಿದೆ. ಆದರೆ ಅದು ಯಾವಾಗ ಎನ್ನುವ ಕುರಿತು ಇನ್ನೂ ಅಧಿಕೃತ ಮಾಹಿತಿ ಲಭ್ಯವಿಲ್ಲ.

ಇದನ್ನೂ ಓದಿ: WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

ಹಲವು ಅಪ್ಡೇಟ್ ಗಳು

ಕಳೆದ ಕೆಲವು ವಾರಗಳಿಂದ ವಾಟ್ಸ್ ಆಪ್ ನಿರಂತರವಾಗಿ ವಿವಿಧ ಪರೀಕ್ಷೆಗಳನ್ನು ನಡೆಸುತ್ತಿದೆ. ಎಐ ರಚಿತ ಫೋಟೋಗಳನ್ನು ಪ್ರೊಫೈಲ್ ಚಿತ್ರಗಳಾಗಿ ಹೊಂದಿಸುವ ಸಾಮರ್ಥ್ಯದಂತಹ ಹೊಸ ವೈಶಿಷ್ಟ್ಯಗಳನ್ನು ಸೇರಿಸುತ್ತಿದೆ. ಐಫೋನ್‌ಗಳಲ್ಲಿ ಪ್ರೊಫೈಲ್ ಚಿತ್ರಗಳ ಸ್ಕ್ರೀನ್‌ಶಾಟ್‌ಗಳನ್ನು ತೆಗೆದುಕೊಳ್ಳದಂತೆ ಬಳಕೆದಾರರನ್ನು ತಡೆಯಲು ಪ್ರಯತ್ನಿಸುತ್ತಿದೆ. ಕರೆ ಮಾಡುವವರನ್ನು ಹೆಸರಿಸಲು ಧ್ವನಿ ಕರೆಯನ್ನು ಮರುವಿನ್ಯಾಸಗೊಳಿಸಲಾಗುತ್ತಿದೆ ಎನ್ನಲಾಗಿದೆ.

Continue Reading
Advertisement
All We Imagine As Light actor rejected audition call by The Kerala Story
ಮಾಲಿವುಡ್5 mins ago

All We Imagine As Light: ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ರಿಜೆಕ್ಟ್‌ ಮಾಡಿದ್ರಂತೆ ಕಾನ್‌ ಪ್ರಶಸ್ತಿ ವಿಜೇತೆ!

IND vs PAK
ಕ್ರೀಡೆ6 mins ago

IND vs PAK: ಉಗ್ರರಿಂದ ‘ಒಂಟಿ ತೋಳ’ ದಾಳಿ ಬೆದರಿಕೆ; ಭಾರತ-ಪಾಕ್​ ಪಂದ್ಯಕ್ಕೆ ಭಾರೀ ಭದ್ರತಾ ವ್ಯವಸ್ಥೆ

Prajwal Revanna Case
ಪ್ರಮುಖ ಸುದ್ದಿ28 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಆಗಮನಕ್ಕೆ ಕೌಂಟ್‌ಡೌನ್‌, ವಿಮಾನ ಏರ್ತಾರಾ ಇಲ್ವಾ?

Viral Video
ಕ್ರೀಡೆ39 mins ago

Viral Video: ಜಡಿ ಮಳೆಗೆ ಒದ್ದೆಯಾಗುತ್ತಲೇ ಓಡೋಡಿ ಬಂದು ಕಾರು ಹತ್ತಿದ ರೋಹಿತ್​, ದ್ರಾವಿಡ್​

Lok Sabha Election
Lok Sabha Election 20241 hour ago

Lok Sabha Election: ಫಲೋಡಿ ಸಟ್ಟಾ ಬಜಾರ್ ಲೇಟೆಸ್ಟ್ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ಒಕ್ಕೂಟಕ್ಕೆ ಬರುವ ಸೀಟೆಷ್ಟು?

Ravichandran Birthday will give surprise To Fans
ಸ್ಯಾಂಡಲ್ ವುಡ್1 hour ago

Ravichandran Birthday: ಇಂದು ಕನಸುಗಾರನ ಜನುಮದಿನ: ಫ್ಯಾನ್ಸ್‌ಗೆ ಸರ್‌ಪ್ರೈಸ್‌ ಕೊಡ್ತಾರಾ ‘ಕ್ರೇಜಿ ಸ್ಟಾರ್’?

Norway Chess
ಕ್ರೀಡೆ1 hour ago

Norway Chess: ವಿಶ್ವ ನಂ.1 ಮ್ಯಾಗ್ನಸ್‌ ಕಾರ್ಲ್‌ಸನ್​ಗೆ ಸೋಲುಣಿಸಿದ ಪ್ರಜ್ಞಾನಂದ

Viral Video
ವೈರಲ್ ನ್ಯೂಸ್1 hour ago

Viral Video: ಬಾಯ್‌ಫ್ರೆಂಡನ್ನು ಹೆದರಿಸಲು ರೈಲ್ವೇ ಟ್ರ್ಯಾಕ್‌ಗೆ ಇಳಿದಳು.. ಆಮೇಲೆ ಆಗಿದ್ದೇ ಬೇರೆ! ಶಾಕಿಂಗ್‌ ವಿಡಿಯೋ ನೋಡಿ

Viral Video
ವೈರಲ್ ನ್ಯೂಸ್2 hours ago

Viral Video: ಮುಂಬೈನ ಚಕಾಚಕ್‌ ʻರಜನೀಕಾಂತ್‌ʼ ಶೈಲಿಯ ದೋಸೆ ಈಗ ವೈರಲ್!‌

Actor Rajinikanth response to political questions is unmissable
ಕಾಲಿವುಡ್2 hours ago

Actor Rajinikanth: ಈ ಬಾರಿಯೂ ಮೋದಿ ಗೆಲ್ಲಬಹುದಾ ಎಂಬ ಪ್ರಶ್ನೆಗೆ ರಜನಿಕಾಂತ್ ಕೊಟ್ಟ ಉತ್ತರ ಏನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌