Flower Politics : ಕಾಂಗ್ರೆಸ್‌ ನಾಯಕರ ಕಿವಿಗೆ ಹೂವಿಟ್ಟು ಕಳುಹಿಸಿದ್ದು ಯಾರು? ಇದರ ಹಿಂದಿನ ಕಾಣದ ಕೈ ಯಾವುದು? - Vistara News

ಕರ್ನಾಟಕ

Flower Politics : ಕಾಂಗ್ರೆಸ್‌ ನಾಯಕರ ಕಿವಿಗೆ ಹೂವಿಟ್ಟು ಕಳುಹಿಸಿದ್ದು ಯಾರು? ಇದರ ಹಿಂದಿನ ಕಾಣದ ಕೈ ಯಾವುದು?

ಕಾಂಗ್ರೆಸ್‌ ನಾಯಕರು ಬಜೆಟ್‌ಗೆ ಕಿವಿ ಮೇಲೆ ಹೂವಿಟ್ಟುಕೊಂಡು (Flower Politics) ಬಂದಿದ್ದರ ಹಿಂದಿನ ಐಡಿಯಾ ಯಾರದ್ದು? ಎಲ್ಲರನ್ನೂ ಮನವೊಲಿಸಿ ಕಳುಹಿಸಿದ್ದು ಯಾರು?

VISTARANEWS.COM


on

kivi mele hoovu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶುಕ್ರವಾರ (ಫೆ. ೧೭) ಬಜೆಟ್‌ ಅಧಿವೇಶನಕ್ಕೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಆದಿಯಾಗಿ ಕಾಂಗ್ರೆಸ್‌ ನಾಯಕರೆಲ್ಲ ಕಿವಿ ಮೇಲೆ ಹೂವಿಟ್ಟುಕೊಂಡು (Flower Politics) ಬಂದಿದ್ದರು. ಇದು ಬಜೆಟ್‌ನಷ್ಟೇ ಗಮನ ಸೆಳೆದಿತ್ತು. ಸರ್ವ ಕಾಂಗ್ರೆಸ್‌ ಶಾಸಕರು ಈ ರೀತಿ ಮಧ್ಯಾಹ್ನದವರೆಗೆ ಹೂವು ಇಟ್ಟುಕೊಂಡು ಕಾಲ ಕಳೆಯಲು ಕಾರಣವಾಗಿದ್ದು ಯಾರು ಎನ್ನುವ ಪ್ರಶ್ನೆ ಈಗ ಚರ್ಚೆಯಲ್ಲಿದೆ.

ಸಾಮಾನ್ಯವಾಗಿ ಸಿದ್ದರಾಮಯ್ಯ ಅವರಂಥ ನಾಯಕರು ಇಂಥ ವಿಡಂಬನಾತ್ಮಕ ಗಿಮಿಕ್‌ಗಳಿಗೆ ಒತ್ತು ಕೊಡುವುದಿಲ್ಲ. ಎಲ್ಲವನ್ನೂ ನಾನು ವಿಧಾನಸಭೆಯಲ್ಲಿ ಮಾತಿನ ಮೂಲಕವೇ ಎದುರಿಸುವ ಛಾತಿ ಅವರದು. ಡಿ.ಕೆ. ಶಿವಕುಮಾರ್‌ ಕೂಡಾ ಈಗೀಗ ಸ್ವಲ್ಪ ಉದ್ವಿಗ್ನ ಮನಸ್ಥಿತಿಯಲ್ಲೇ ಇರುತ್ತಾರೆ. ಇಂಥ ನಾಯಕರು ಕಿವಿ ಮೇಲೆ ಹೂವಿಟ್ಟುಕೊಂಡು ಮುಗ್ಧ ಮಕ್ಕಳಂತೆ ಕುಳಿತುಕೊಳ್ಳಲು ಏನು ಕಾರಣ?

ಒಂದು ವೇಳೆ ಸ್ವತಃ ಡಿ.ಕೆ. ಶಿವಕುಮಾರ್‌ ಅವರಿಗೇ ಇಂಥಹುದೊಂದು ಐಡಿಯಾ ಬಂದು ʻಹೀಗ್ಮಾಡೋಣವಾʼ ಎಂಬ ಸಲಹೆ ಮುಂದಿಟ್ಟಿದ್ದರೂ ಸಿದ್ದರಾಮಯ್ಯ ಅಥವಾ ಅವರ ಬೆಂಬಲಿಗರೆಂದು ಗುರುತಿಸಿಕೊಂಡಿರುವ ಕೆಲವು ಶಾಸಕರಾದರೂ ವಿರೋಧಿಸುತ್ತಿದ್ದರು. ಸಿದ್ದರಾಮಯ್ಯ ಅವರು ನೇರವಾಗಿ ಇಂಥ ಐಡಿಯಾ ಕೊಡುವವರಲ್ಲ.

ಇದನ್ನೇ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ಹೇಳಿದ್ದರು. ʻʻಸಿದ್ದರಾಮಯ್ಯ ಅಂಥ ರಾಜಕಾರಣಿ ಆ ರೀತಿ ನಡೆದುಕೊಳ್ಳಬಾರದಿತ್ತು. ಸಿದ್ದರಾಮಯ್ಯ ಅವರು ಬೇರೆ ಪಕ್ಷದಲ್ಲಿ ಇದ್ದರೂ ನನಗೆ ಅಭಿಮಾನ ಗೌರವವಿದೆ, ಆದ್ರೆ ಸಿದ್ದರಾಮಯ್ಯ ಅವರನ್ನು ಈ ಮಟ್ಟಕ್ಕೆ ಅವರ ನಾಯಕರು ಇಳಿಸಿದ್ದಾರೆ. ಸಿದ್ದರಾಮಯ್ಯ ಅಂತ ನಾಯಕ ಆ ರೀತಿ ಕಿವಿ ಮೇಲೆ ಹೂ ಇಟ್ಟುಕೊಂಡು ಬಂದಿದ್ದು ನಗು ಜತೆಗೆ ಅವರ ಮೇಲೆ ಕನಿಕರ ಬಂತು. ಅದಕ್ಕೆ ನಾನು ಹೇಳಿದೆ ನಿಮ್ಮ ಮಾತು ಕೇಳಿ ಜನ ನಿಮಗೆ ಹೂವು ಕೊಟ್ಟು ಕಳಿಸಿದ್ದಾರೆಂದು ಹೇಳಿದೆʼʼ ಎಂದಿದ್ದರು ಬೊಮ್ಮಾಯಿ. ಅಂದರೆ ಸಿದ್ದರಾಮಯ್ಯ ಅವರಿಗೂ ಯಾರೋ ಕಿವಿ ಮೇಲೆ ಹೂವಿಟ್ಟು ಕಳುಹಿಸಿದ್ದಾರೆ ಎಂದು ಗೇಲಿ ಮಾಡಿದ್ದರು.

ಹಾಗಿದ್ದರೆ ಈ ಐಡಿಯಾ ಯಾರದ್ದು? ಕೇವಲ ೫೦-೧೦೦ ರೂ.ಯ ಚೆಂಡು ಹೂವಿನ ಮೂಲಕ ಸರ್ಕಾರವನ್ನು ಇಷ್ಟೊಂದು ಗೇಲಿ ಮಾಡಬಹುದು, ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಗಿಮಿಕ್‌ಗೆ ಇವರನ್ನೆಲ್ಲ ಒಪ್ಪಿಸಿದ್ದು ಯಾರು ಎನ್ನುವ ಪ್ರಶ್ನೆಗೆ ಡಾಲರ್‌ ಮೌಲ್ಯವೇ ಇದೆ.

ಒಂದು ಮೂಲದ ಪ್ರಕಾರ, ಈ ಐಡಿಯಾ ಹುಟ್ಟಿದ್ದು ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ತಲೆಯಲ್ಲಿ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿಯಾಗಿರುವ ಅವರು ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲೇ ಇದ್ದಾರೆ. ಬಜೆಟ್‌ ಆರಂಭವಾದ ದಿನದಿಂದಲೇ ದಿನಕ್ಕೊಂದು ರಣತಂತ್ರ, ವಿಚಾರ ಎತ್ತುತ್ತಾ ಬಿಜೆಪಿ ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸುತ್ತಿದ್ದಾರೆ.

ಕಿವಿ ಮೇಲೆ ಹೂವು ಪೋಸ್ಟರ್‌

ಬೆಳಗ್ಗೆ ಒಂಬತ್ತು ಗಂಟೆಗೇ ಒಂದು ಪತ್ರಿಕಾಗೋಷ್ಠಿ ನಡೆಸಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಇಂದು ಹೊಸ ವಿವಾದದ ಬೀಜ ಬಿತ್ತಿ, ಇಡೀ ದಿನ ಅದರ ಬಗ್ಗೆಯೇ ಚರ್ಚೆಯಾಗುವಂತೆ ನೋಡಿಕೊಳ್ಳುವುದು ಅವರ ಈಗಿನ ಸ್ಟ್ರಾಟಜಿ. ಹೀಗೆ ಮಾಡುವುದರಿಂದ ಬಿಜೆಪಿ ನಾಯಕರು ಇದಕ್ಕೆ ಸ್ಪಷ್ಟನೆ ಕೊಡುವಲ್ಲೇ ಸುಸ್ತು ಹೊಡೆಯುತ್ತಾರೆ, ಕಾಂಗ್ರೆಸ್‌ ನಾಯಕರು ಕೂಡಾ ಯಾವುದೇ ಭೇದವಿಲ್ಲದೆ ಒಂದೇ ವಿಚಾರದ ಬಗ್ಗೆ ಮಾತನಾಡುತ್ತಾರೆ. ಹೀಗೆ ದಿನಕ್ಕೊಂದು ವಿಷಯವನ್ನು ಎತ್ತಿಕೊಳ್ಳುವುದು ಅವರ ಪ್ಲ್ಯಾನಿಂಗ್.‌ ಇದುವರೆಗೆ ಅದು ಸಕ್ಸಸ್‌ ಆಗಿದೆ.

ಅದರಂತೆಯೇ ಬಜೆಟ್‌ ಎನ್ನುವುದು ಜನರ ಕಿವಿಗೆ ಹೂವಿಡುವ ಕಾರ್ಯಕ್ರಮ ಎಂದು ಯಾವುದೇ ಸದ್ದುಗದ್ದಲವಿಲ್ಲದೆ ಬಿಂಬಿಸುವ ಪ್ಲ್ಯಾನ್‌ ಅವರದಾಗಿತ್ತು. ಆದರೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರಂಥ ನಾಯಕರನ್ನು ಇದಕ್ಕೆ ಒಪ್ಪಿಸಿದ್ದೇ ದೊಡ್ಡ ಸಂಗತಿ!

ಇನ್ನು ಕಾಂಗ್ರೆಸ್‌ನ ಐಟಿ ಸೆಲ್‌ ಈಗ ತುಂಬ ಸಕ್ರಿಯವಾಗಿದೆ. ಶುಕ್ರವಾರ ಬಜೆಟ್‌ ಅಧಿವೇಶನಕ್ಕೆ ಮೊದಲೇ ಅದು ಕಿವಿಗೆ ಹೂವಿಡುವ ಹಲವು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿತ್ತು. ಅದನ್ನು ಸ್ವತಃ ರಣದೀಪ್‌ ಸುರ್ಜೇವಾಲ ಹಂಚಿಕೊಂಡಿದ್ದರು. ಆ ಬಳಿಕ ಇದನ್ನು ಸದನದಲ್ಲೂ ರೆಪ್ಲಿಕೇಟ್‌ ಮಾಡಬಹುದು ಎಂಬ ಉಪಾಯ ಹೊಳೆದಿರುವ ಸಾಧ್ಯತೆಯೂ ಇದೆ.

ನಿಜವೆಂದರೆ, ಈ ರೀತಿ ಕಿವಿಗೆ ಹೂವಿಟ್ಟುಕೊಂಡ ಚಿತ್ರಗಳನ್ನು ಸಿದ್ದರಾಮಯ್ಯ ಅವರೇನೂ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿಲ್ಲ. ಡಿ.ಕೆ. ಶಿವಕುಮಾರ್‌ ಅವರ ಪತ್ರಿಕಾಗೋಷ್ಠಿಯ ಒಂದು ವಿಡಿಯೊದಲ್ಲಿ ಮಾತ್ರ ಹೂವು ಕಾಣಿಸುತ್ತದೆ.

ಏನೇ ಇದ್ದರು ಕಾಂಗ್ರೆಸ್‌ ನಾಯಕರಿಗೆ ಸಾಮೂಹಿಕವಾಗಿ ಕಿವಿಗೆ ಹೂವಿಡುವಂತೆ ಮಾಡಿದ, ಆ ಮೂಲಕ ದೊಡ್ಡ ಪ್ರಚಾರ ಪಡೆದುಕೊಂಡವರ ಜಾಣ್ಮೆಯನ್ನು ಮೆಚ್ಚಲೇಬೇಕು! ಇದೀಗ ಅದು ಬೀದಿ ಅಭಿಯಾನವೂ ಆಗಿದ್ದು ಮುಂದೇನಾಗುತ್ತದೆ ನೋಡಬೇಕು.

ಇದನ್ನೂ ಓದಿ : Flower politics : ಬೀದಿಗೂ ಬಂತು ಕಿವಿ ಮೇಲೆ ಹೂವು ಅಭಿಯಾನ; ಬಿಜೆಪಿ ಪೋಸ್ಟರ್‌ಗಳ ಮೇಲೆ ಕಾಂಗ್ರೆಸ್‌ ವ್ಯಂಗ್ಯದ ಚಿತ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rain News : ಪ್ರಯಾಣಿಕರೇ ಗಮನಿಸಿ; ಗುಡ್ಡ ಕುಸಿತದ ಭೀತಿ, ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್​​

Rain News : ಮಡಿಕೇರಿ ಮಂಗಳೂರು ರಸ್ತೆಯ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಗುಡ್ಡ ಜಾರಿ ರಸ್ತೆಗೆ ಬರುವ ಸಾಧ್ಯತೆಗಳಿವೆ. ಹೀಗಾಗಿ ಜುಲೈ 18ರಿಂದ 22ರವರೆಗೆ ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ 275 ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

Rain News;
Koo

ಮಡಿಕೇರಿ: ಕೊಡುಗು ಸೇರಿದಂತೆ ರಾಜ್ಯದ ಎಲ್ಲೆಡೆ ಸತತ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ (Rain News). ಹೀಗಾಗಿ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸುತ್ತಿವೆ. ಗುಡ್ಡದ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳ ಆತಂಕ ಇದರಿಂದಾಗಿ ಹೆಚ್ಚಾಗಿದೆ. ಇದೇ ವೇಳೆ ಕರ್ನಾಟಕದ ಪ್ರಮುಖ ಘಾಟಿಗಳಲ್ಲಿ ಹಾದು ಹೋಗಿರುವ ರಸ್ತೆ ಇಕ್ಕೆಲಗಳಲ್ಲಿ ಮಣ್ಣು ಕುಸಿತ ಉಂಟಾಗುತ್ತಿರುವ ಕಾರಣ ಮಡಿಕೇರಿ ಮೂಲಕ ಮಂಗಳೂರಿಗೆ ಸಂಪರ್ಕ ಕಲ್ಪಿಸುವ 275 ಬಂದ್ ಮಾಡಲಾಗಿದೆ.

ಜಿಲ್ಲಾಧಿಕಾರಿ ಹೊರಡಿಸಿದ ಆದೇಶ ಪ್ರತಿ ಈ ಕೆಳಗೆ ಇದೆ

ಮಡಿಕೇರಿ ಮಂಗಳೂರು ರಸ್ತೆಯ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಗುಡ್ಡ ಜಾರಿ ರಸ್ತೆಗೆ ಬರುವ ಸಾಧ್ಯತೆಗಳಿವೆ. ಹೀಗಾಗಿ ಜುಲೈ 18ರಿಂದ 22ರವರೆಗೆ ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ 275 ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಗುರುವಾರದಿಂದ 5 ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆವರೆಗೆ ಅಧಿಕಾರಿಗಳು ರಸ್ತೆ ಪ್ರಯಾಣಕ್ಕೆ ನಿರ್ಬಂಧ ಹೇರಿದ್ದಾರೆ ಕರ್ತವ್ಯ ನಿರತ ಅಧಿಕಾರಿಗಳ ವಾಹನ ಹೊರತುಪಡಿಸಿ ಉಳಿದ ವಾಹನ ಸಂಚಾರ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಡ್ಡ ಕುಸಿಯು ಭೀತಿ ಹುಟ್ಟಿಸಿರುವ ಗುಡ್ಡದ ಮಣ್ಣು ತೆರವು ಕಾರ್ಯ ಆರಂಭ ಮಾಡಲಾಗಿದೆ. ಅದೇ ರೀತಿ ಮಡಿಕೇರಿ ಬಳಿ ಬ್ಯಾರಿಕೇಡ್ ಹಾಕಿ ವಾಹನಗಳು ಮುಂದಕ್ಕೆ ಸಾಗದಂತೆ ಅಧಿಕಾರಿಗಳು ತಡೆಯುತ್ತಿದ್ದಾರೆ ಅದೇ ರೀತಿ ದಕ್ಷಿಣ ಕನ್ನಡದ ಮಾಣಿ ಬಳಿಯಲ್ಲೇ ವಾಹನಗಳಿಗೆ ತಡೆದು ಚಾರ್ಮಾಡಿ ಮಾರ್ಗವಾಗಿ ಹೋಗುವಂತೆ ಸೂಚನೆ ನೀಡಲಾಗುತ್ತಿದೆ. ರಸ್ತೆ ಬಂದ್ ಮಾಡುವ ನಿರ್ಧಾರ ತೆಗೆದುಕೊಂಡಿರು ಕಾರಣ ವಾಹನ ಸವಾರರು ಪರದಾಡುವಂತಾಗಿದೆ, ಮಂಗಳೂರು ಕಡೆ ಹೋಗುವ ವಾಹನ ಸವಾರರ‌ ಪರದಾಡುವಂತಾಗಿದೆ.

ಹಾಸನದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ; ಬೆಳಗಾವಿಯಲ್ಲಿ ರಸ್ತೆಗೆ ಉರುಳಿದ ಬೃಹತ್‌ ಬಂಡೆಗಲ್ಲು

ಹಾಸನ: ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳ ಬಳಿ ಘಟನೆ (Karnataka Rain) ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಮಣ್ಣು ಕುಸಿದಿದೆ. ಪರಿಣಾಮ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವುಗೊಳಿಸಿದರು.

ಹಾಸನದ ಸಕಲೇಶಪುರ ತಾಲೂಕಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ಮಠಸಾಗರದ ಬಳಿ ನೀರು ನಿಂತು ಕೃಷ್ಣಾಪುರ ಸಂಪರ್ಕ ಕಡಿತಗೊಂಡಿದೆ. ಹಳ್ಳ ಉಕ್ಕಿ ಹರಿದ ಪರಿಣಾಮ ಕಾಫಿ, ಅಡಿಕೆ ತೋಟಗಳು ಜಲಾವೃತಗೊಂಡಿದೆ. ರಸ್ತೆ ಸಂಪರ್ಕ ಕಡಿತ‌ ಹಿನ್ನೆಲೆಯಲ್ಲಿ‌ ರೋಗಿಗಳನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗದೆ ಪರದಾಟ ಅನುಭವಿಸಿದರು.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿತ

ಭಾರಿ ಮಳೆಗೆ ಶಿರಾಡಿಘಾಟ್‌ನ ಮತ್ತೊಂದು ಕಡೆ ಗುಡ್ಡ ಕುಸಿದಿದೆ. ಹಾಸನದ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಘಟನೆ ನಡೆದಿದೆ. ಒಂದು ನೂರಾರು ಮೀಟರ್ ಎತ್ತರದಿಂದ ಕೆಳಗೆ ಗುಡ್ಡ ಕುಸಿದಿದೆ. ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಪಾರಾಗಿದ್ದಾರೆ. ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ದೌಡಾಯಿಸಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿದೆ.

ಗುಡ್ಡ ಕುಸಿತದಿಂದ ಸುಮಾರು 10 ಕಿಮಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಕ್, ಲಾರಿ ಟ್ಯಾಕರ್ ಓಡಾಟಕ್ಕೆ ತಾತ್ಕಾಲಿಕ ತಡೆಹಿಡಿಯಲಾಗಿದೆ. ಅತ್ತ ಚಾರ್ಮಾಡಿ ಘಾಟ್‌ನಲ್ಲೂ ಪ್ರಯಾಣ ದುಸ್ಥರ ಹಿನ್ನೆಲೆಯಲ್ಲಿ ಹಾಸನದಲ್ಲಿಯೇ ವಾಹನ ನಿಲ್ಲಿಸಲು ಸೂಚನೆ ನೀಡಲಾಗಿದೆ. ಸದ್ಯ ಸಕಲೇಶಪುರದವರೆಗೆ ತೆರಳಲು ಸಾರಿಗೆ ಬಸ್‌ಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಂಗಳೂರು ಕಡೆಗೆ ಹೋಗುವ ಬಸ್‌ಗಳಿಗೂ ಹಾಸನ ತಾಲೂಕಿನ ಕಂದಲಿ ಬಳಿ ತಡೆಹಿಡಯಲಾಗಿದೆ.

Continue Reading

ಪ್ರಮುಖ ಸುದ್ದಿ

Bangalore News : ಬೆಂಗಳೂರಲ್ಲಿ ಆಘಾತಕಾರಿ ಘಟನೆ; ಗಾಂಜಾ ನಶೆಯಲ್ಲಿ ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ಬಾಲಕಿಯರನ್ನು ಬೆದರಿಸಿದ ಪುಂಡರು

Crime News : ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಅವರ ಮೇಲೆ ದರ್ಪ ತೋರಿದ್ದಾರೆ. ಪ್ರಶ್ನೆ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದರು. ತಕ್ಷಣ ಪೊಲೀಸ್​ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೊಯ್ಸಳ ವಾಹನ ಬರುವಷ್ಟರಲ್ಲಿ ಕಾರಿನಲ್ಲಿದ್ದವು ಪರಾರಿಯಾಗಿದ್ದಾರೆ. ಗಾಂಜಾ ನಶೆ ಹಾಗು ಕುಡಿತದ ಅಮಲಿನಲ್ಲಿ ಕೃತ್ಯ ಎಸಗಿರುವ ಸಾಧ್ಯತೆ ಎಂದು ಸ್ಥಳೀಯರ ಶಂಕಿಸಿದ್ದಾರೆ. ಎಚ್​​ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

VISTARANEWS.COM


on

Crime News
Koo

ಬೆಂಗಳೂರು: ಕಾರಿನಲ್ಲಿ ಬಂದ ಮದ್ಯ ಹಾಗೂ ಗಾಂಜಾ ಮತ್ತಿನಲ್ಲಿ ಬಂದ ಪುಂಡರ ಗುಂಪೊಂದು, ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕಿಯರಿಗೆ ಕಿರುಕುಳ ನೀಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ (Bangalore News). ಇನ್ನೋವಾ ಕಾರಿನಲ್ಲಿ ಬಂದಿದ್ದ ಪುಂಡರು ಕೃತ್ಯ ಎಸಗಿದ್ದು ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀರ ಮೇಲೂ ದಾಳಿ ಮಾಡಿದ್ದಾರೆ. ಬೆಂಗಳೂರಿನ ಎಚ್​ಎಎಲ್ ಬಳಿಯಿರುವ ಇರುವ ಖಾಸಗಿ ಶಾಲೆಯ ಮಕ್ಕಳ ಜೊತೆ ಅಸಭ್ಯ ವರ್ತನೆ ತೋರಲಾಗಿದೆ.

ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರನ್ನು ಫುಟ್​ಪಾತ್ ಮೇಲೆ ಹತ್ತಿಸಿದ್ದರು. ಬಳಿಕ ಮಕ್ಕಳಿಗೆ ಹೆದರಿಸಲು ಯತ್ನಿಸಿದ್ದ. ಈ ವೇಳೆ ಕಾರಿನಲ್ಲಿದ್ದ ಒಬ್ಬ ನಶೆಯಲ್ಲಿ ತೂರಾಡಿ ಕೆಳಗೆ ಬಿದ್ದಿದ್ದಾನೆ. ಅಲ್ಲದೆ ಮಕ್ಕಳ ಮುಂದೆಯೇ ಅಸಭ್ಯ ವರ್ತನೆ ತೋರಿದ್ದಾನೆ. ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಅವರ ಮೇಲೆ ದರ್ಪ ತೋರಿದ್ದಾರೆ. ಪ್ರಶ್ನೆ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದರು. ತಕ್ಷಣ ಪೊಲೀಸ್​ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೊಯ್ಸಳ ವಾಹನ ಬರುವಷ್ಟರಲ್ಲಿ ಕಾರಿನಲ್ಲಿದ್ದವು ಪರಾರಿಯಾಗಿದ್ದಾರೆ. ಗಾಂಜಾ ನಶೆ ಹಾಗು ಕುಡಿತದ ಅಮಲಿನಲ್ಲಿ ಕೃತ್ಯ ಎಸಗಿರುವ ಸಾಧ್ಯತೆ ಎಂದು ಸ್ಥಳೀಯರ ಶಂಕಿಸಿದ್ದಾರೆ. ಎಚ್​​ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

ಎಕ್ಸಾಂನಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ಸೂಸೈಡ್‌

ಪರೀಕ್ಷೆಯಲ್ಲಿ ‌ಫೇಲ್ (Failed in Exam) ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ (Self Harming) ಶರಣಾಗಿದ್ದಾಳೆ. ಹುಬ್ಬಳ್ಳಿಯ ಉಣಕಲ್‌ ಕೆರೆಗೆ ಹಾರಿ ಮೃತಪಟ್ಟಿದ್ದಾಳೆ. ಸವಿತಾ ನರಗುಂದ (22) ಆತ್ಮಹತ್ಯೆ ಮಾಡಿಕೊಂಡವಳು.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೂವಿನಶಿಗ್ಲಿ ಗ್ರಾಮದ ಸವಿತಾ ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ಬಿಎಸ್‌ಸಿ 5ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದಳು. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೆರೆಯಿಂದ ಶವವನ್ನು ಹೊರೆತೆಗೆದು ಕಿಮ್ಸ್‌ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

GT World Mall :ಪಂಚೆ ಧರಿಸಿ ಬಂದ ರೈತರೊಬ್ಬರಿಗೆ ಮಾಲ್​ ಒಳಗೆ ಬಿಡದೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಜಿಟಿ ವರ್ಲ್ಡ್‌ ಮಾಲ್‌ ವಿವಾದದ ಕೇಂದ್ರ ಬಿಂದುವಾಗಿತ್ತು. ಮಾಲ್​ ಒಂದು ವಾರ ಕಾಲ ಮುಚ್ಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರು ಸದನದಲ್ಲಿ ಗುಡುಗಿದ್ದರು. ಅಂತೆಯೇ ಸಂಜೆ ವೇಳೆಗೆ ಮಾಲೀಕರೇ ಅದಕ್ಕೆ ಸಮ್ಮತಿಸಿದ್ದಾರೆ.

VISTARANEWS.COM


on

GT World Mall
Koo

ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ವರ್ಲ್ಡ್​ ಮಾಲ್​ (GT World Mall) ಏಳು ದಿನಗಳ ಕಾಲ ಬಂದ್​ ಆಗಲಿದೆ. ಮಾಲ್​ನ ಮಾಲೀಕರ ಪುತ್ರ ಪ್ರಶಾಂತ್ ಅವರು ಸುದ್ದಿಗೋಷ್ಠಿ ನಡೆಸಿ ಆಗಿರುವ ಘಟನೆಗೆ ಕ್ಷಮೆ ಕೋರಿದರಲ್ಲದೆ, ನಗರಾಭಿವೃದ್ಧಿ ಸಚಿವರ ಸೂಚನೆ ಪ್ರಕಾರ ಏಳು ದಿನಗಳ ಕಾಲ ಬಂದ್ ಮಾಡುವುದಾಗಿ ಹೇಳಿದ್ದಾರೆ.

ಪಂಚೆ ಧರಿಸಿ ಬಂದ ರೈತರೊಬ್ಬರಿಗೆ ಮಾಲ್​ ಒಳಗೆ ಬಿಡದೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಜಿಟಿ ವರ್ಲ್ಡ್‌ ಮಾಲ್‌ ವಿವಾದದ ಕೇಂದ್ರ ಬಿಂದುವಾಗಿತ್ತು. ಮಾಲ್​ ಒಂದು ವಾರ ಕಾಲ ಮುಚ್ಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರು ಸದನದಲ್ಲಿ ಗುಡುಗಿದ್ದರು. ಅಂತೆಯೇ ಸಂಜೆ ವೇಳೆಗೆ ಮಾಲೀಕರೆ ಅದಕ್ಕೆ ಸಮ್ಮತಿಸಿದ್ದಾರೆ.

ನಮ್ಮ ಮಾಲ್ ನಡೆಯಬಾರದಂಥ ಘಟನೆ ನಡೆದಿದೆ. ಹೊಸ ಸಿಬ್ಬಂದಿಯಿಂದ ಪ್ರಮಾದವಾಗಿದೆ. ಮಾಲ್​ನ ಮಾಲೀಕನಾಗಿ ನಾನು ಈ ಘಟನೆಗೆ ಕ್ಷಮೆ ಕೇಳುತ್ತಿದ್ದೇನೆ. ತಪ್ಪು ಮಾಡಿದ ಸಿಬ್ಬಂದಿಯನ್ನ ಕೆಲಸದಿಂದ ತೆಗೆದಿದ್ದೇವೆ. ಈ ರೀತಿಯ ಅಪಮಾನ ನಡೆಯಬಾರದಿತ್ತು. ನಮ್ಮ ತಂದೆಯವರೂ ಮಾತಾಡಿ ಕ್ಷಮೆ ಕೇಳಿದ್ದಾರೆ ಎಂದು ಪ್ರಶಾಂತ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಮಗೆ ಬಿಬಿಎಂಪಿ ಕಡೆಯಿಂದ ನೋಟಿಸ್ ಜಾರಿಯಾಗಿದೆ. ನಡೆದಿರುವ ಘಟನೆ ಬಗ್ಗೆ ಮಾಹಿತಿ ಕೊಡಿ ಅಂತಾ ನೋಟಿಸ್ ಕೊಟ್ಟಿದ್ದಾರೆ. ಒಂದು ವರ್ಷದ 1. 70 ಕೋಟಿ ತೆರಿಗೆ ಬಾಕಿ ಇದೆ. ಆದರೆ, ಪಾಲಿಕೆ ಘಟನೆ ಬಗ್ಗೆ ಮಾಹಿತಿ ಕೊಡಿ ಅಂತಾ ನೋಟಿಸ್ ಕೊಟ್ಟಿದೆ. ಇದೀಗ ನಾವು ಸ್ವಯಂಪ್ರೇರಿತವಾಗಿ ಕ್ಲೋಸ್ ಮಾಡುತ್ತಿದ್ದೇವೆ ಎಂದು ಪ್ರಶಾಂತ್ ಹೇಳಿದ್ದಾರೆ.

ಮುಂದಿನ ಸೂಚನೆ ಬರೋ ತನಕ ಮಾಲ್ ಬಂದ್ ಮಾಡ್ತೀವೆ. ಬಿಬಿಎಂಪಿಗೆ ಘಟನೆ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ. ಫಕೀರಪ್ಪ ಅವರನ್ನು ವೈಯಕ್ತಿಕವಾಗಿ ಕರೆದು ಕ್ಷಮೆ ಕೇಳಿದ್ದೇವೆ. ಈ ಬಗ್ಗೆ ವಿಮರ್ಶೆ ನಡೆಸಲು ನಮಗೆ 2-3 ದಿನ ಕಾಲಾವಕಾಶ ಬೇಕಾಗಿದೆ. ಇನ್ನಷ್ಟು ವಿವರಣೆ ನೀಡಲು 2ರಿಂದ 3 ದಿನ ಸಮಯ ಬೇಕಾಗುತ್ತದೆ ಎಂದು ಪ್ರಶಾಂತ್ ಹೇಳಿದರು.

ಗೇಟ್ ಬಾಗಿಲು ಬಂದ್​

ಜಿಟಿ ಮಾಲ್ ಅನ್ನು ಅಧಿಕಾರಿಗಳು ಬಂದ್ ಮಾಡುವ ಮೊದಲೇ ಅಲ್ಲಿನ ಸಿಬ್ಬಂದಿಗಳೇ ಬಂದ್ ಮಾಡಿಸಿದ್ದಾರೆ. ಮಳಿಗೆಗಳ ಬಳಿಗೆ ತೆರಳಿದ ಮಾಲ್​ ಸಿಬ್ಬಂದಿ ಅಂಗಡಿ ಬಂದ್ ಮಾಡುವಂತೆ ಕೋರಿದ್ದಾರೆ. ಅದೇ ರೀತಿ ಒಳಗಿರುವ ಪಿವಿಆರ್​ ಸಿನಿಮಾ ಮಂದಿಗಳನ್ನು ಒಂದೊಂದಾಗಿ ಬಂದ್ ಮಾಡಿಸಲಾಗಿದೆ. ಸಿನಿಮಾ ಚಾಲನೆಯಲ್ಲಿರುವ ಸ್ಕ್ರಿನ್ ಬಿಟ್ಟು ಉಳಿದೆಲ್ಲ ಸ್ಕ್ರೀನ್​ಗಳನ್ನು ಬಂದ್ ಮಾಡಿಸಲಾಗಿದೆ. ಜತೆಗೆ ಒಳಗಿರುವ ಎಲ್ಲ ಗ್ರಾಹಕರನ್ನು ಹೊರಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ: Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

ಕಂದಾಯ ವಿಭಾಗ ಆಸ್ತಿತೆರಿಗೆ ಬಾಕಿ ಉಳಿಸಿಕೊಂಡ ಬಗ್ಗೆ ನೋಟಿಸ್ ಕೊಟ್ಟಿದೆ. ಆರೋಗ್ಯ ಇಲಾಖೆ ಕಡೆಯಿಂದಲೂ ನೋಟಿಸ್ ಜಾರಿಯಾಗಿದೆ ಎಂಬುದಾಗಿ ಪ್ರಶಾಂತ್ ಮಾಹಿತಿ ನೀಡಿರು.

ಕಲಾಪದಲ್ಲಿ ಬಂದ್​ಗೆ ಸೂಚನೆ

ಗುರುವಾರ ಆರಂಭವಾದ ಮೂರನೇ ದಿನದ ವಿಧಾನಸಭೆ ಕಲಾಪ ಆರಂಭದಲ್ಲೇ ಈ ವಿಷಯ ಪ್ರಸ್ತಾಪವಾಯಿತು. ಹಲವರು ಸದಸ್ಯರು ರೈತರಿಗೆ ಅವಮಾನ ಆದ ವಿಷಯವನ್ನು ಪ್ರಸ್ತಾಪಿಸಿದರು. ವಿಸ್ತಾರ ನ್ಯೂಸ್‌ ನಿನ್ನೆ ಇಡೀ ದಿನ ಈ ಘಟನೆಯನ್ನು ಪ್ರಸಾರ ಮಾಡಿದ್ದಲ್ಲದೆ, ರೈತರನ್ನು ಮರಳಿ ಜಿಟಿ ಮಾಲ್‌ಗೆ ಕರೆದೊಯ್ದು ಪ್ರವೇಶ ಕೊಡಿಸಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಕನ್ನಡ ಹಾಗೂ ರೈತಪರ ಸಂಘಟನೆಗಳು ಈ ವಿಚಾರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಕೈಜೋಡಿಸಿದ್ದವು. ನಂತರ ಸಚಿವ ಸಂತೋಷ್‌ ಲಾಡ್‌ (Santosh Lad) ಕೂಡ ಕೂಡ ಈ ವಿಚಾರದಲ್ಲಿ ಮಾಲ್‌ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇದೆ. 7 ದಿನಗಳ ವರೆಗೆ ಬಂದ್‌ ಮಾಡಿಸಬಹುದು. ಆದರೆ ಎಚ್ಚರಿಕೆ ನೀಡಿ ಮೂರು ದಿನಗಳ ಕಾಲ ಮಾಲ್ ಬಂದ್ ಮಾಡಿಸಲಾಗುವುದು ಎಂದು ತಿಳಿಸಿದರು.

Continue Reading

ಪ್ರಮುಖ ಸುದ್ದಿ

Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

Karnataka Job Reservation : ಮೀಸಲಾತಿ ಕುರಿತು ಸರ್ಕಾರ ತನ್ನ ಪ್ರಕಟಣೆ ಹೊರಡಿಸಿದೆ. ಬಳಿಕ ಅದಕ್ಕೆ ತಡೆದಿದೆ. ಕರ್ನಾಟಕದಿಂದ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ವಲಯದಿಂದ ಉದ್ಯೋಗ ಮೀಸಲಿಡಬೇಕು ಎಂಬುದರ ಕುರಿತು ಸಿಎಂ ತಮ್ಮ ನಿಲುವು ಪ್ರಕಟಿಸಬೇಕು. ನಿಮ್ಮ ಸರ್ಕಾರದ ಮೇಲೆ ಹಗರಣ ಸುತ್ತಿಕೊಂಡಿದೆ. ಅದಕ್ಕಾಗಿ ಈ ವಿಷಯವನ್ನು ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದಿರು

VISTARANEWS.COM


on

CT Ravi
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ನೀಡುವ ವಿಚಾರವನ್ನು (Karnataka Job Reservation) ಮುನ್ನೆಲೆಗೆ ತಂದಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ವಿಧಾನಸೌಧದ ಪಡಸಾಲೆಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರದ ಮೇಲೆ ಹಗರಣಗಳು ಸುತ್ತಿಕೊಂಡಿವೆ. ಅವುಗಳನ್ನು ವಿಷಯಾಂತರ ಮಾಡುವುದಕ್ಕೆ ಮೀಸಲಾತಿ ವಿಚಾರವನ್ನು ಎತ್ತಿದ್ದಾರೆ ಎಂದು ಹೇಳಿದ್ದಾರೆ.

ಮೀಸಲಾತಿ ಕುರಿತು ಸರ್ಕಾರ ತನ್ನ ಪ್ರಕಟಣೆ ಹೊರಡಿಸಿದೆ. ಬಳಿಕ ಅದಕ್ಕೆ ತಡೆದಿದೆ. ಕರ್ನಾಟಕದಿಂದ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ವಲಯದಿಂದ ಉದ್ಯೋಗ ಮೀಸಲಿಡಬೇಕು ಎಂಬುದರ ಕುರಿತು ಸಿಎಂ ತಮ್ಮ ನಿಲುವು ಪ್ರಕಟಿಸಬೇಕು. ನಿಮ್ಮ ಸರ್ಕಾರದ ಮೇಲೆ ಹಗರಣ ಸುತ್ತಿಕೊಂಡಿದೆ. ಅದಕ್ಕಾಗಿ ಈ ವಿಷಯವನ್ನು ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದಿರು

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಹಣ ವರ್ಗಾವಣೆ ಮಾಡಿ ವಂಚನೆ ಮಾಡಿರೋದು ಸಿಎಂ ಗಮನಕ್ಕೂ ಬಂದಿದೆ. ಇದರಿಂದಾ ನಿಮ್ಮ ಸರ್ಕಾರದ ಘನತೆಗೆ ಚ್ಯುತಿ ತಂದಿದೆ. ಹೀಗಾಗಿ ಜನರನ್ನು ಭಾವನಾತ್ಮಕವಾಗಿ ಬದಲಾಯಿಸಲು ಮೀಸಲಾತಿ ವಿಚಾರವನ್ನು ಎತ್ತಲಾಗಿದೆ ಎಂದು ಸಿಟಿ ರವಿ ಆರೋಪಿಸಿದರು.

ಇದನ್ನೂ ಓದಿ: Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

ಉದ್ದಿಮೆಯಲ್ಲಿ ಎಷ್ಟು ಉದ್ಯೋಗ ಇದೆ. ಕನ್ನಡಿಗರಿಗೆ ಎಷ್ಟು, ಹೊರಗಿನವರಿಗೆ ಎಷ್ಟು ಅಂತ‌ಮಾಹಿತಿ ಪಡೆಯಬೇಕಿತ್ತು. ಯಾವ ಉದ್ಯೋಗಕ್ಕೆ ಕೌಶಲದ ಅವಶ್ಯಕತೆ ಇದೆ ಅಂತ ಮಾಹಿತಿ ಪಡೆಯಬೇಕಿತ್ತು. ಹಾಗಾದರೆ ಮಾತ್ರ ಅದು ಸರ್ಕಾರದ ಬದ್ಧತೆಯಾಗಲಿದೆ.

ಮೀಸಲಾತಿ ವಿಷಯದ ಕುರಿತು ಚರ್ಚಿಸಲು ಎಷ್ಟು ಸಭೆ ನಡೆಸಲಾಗಿದೆ. ಈ ವಿಷಯದಲ್ಲಿ ಮುಖ್ಯಮಂತ್ರಿಗೆ ಬದ್ಧತೆ ಇದೆಯೇ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಬದಲಾಗಿದ್ದಾರೆ. ಈ ಹಗರಣಗಳೇ ಅದಕ್ಕೆ ಸ್ಪಷ್ಟ ಉದಾಹರಣೆ. ಚಾಮುಂಡೇಶ್ವರಿ ಉಪಚುನಾವಣೆ ಬಂದಾಗ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇತ್ತು. ಆಗ ನಾನು ಹೋರಾಟಗಾರರು ಸೋಲಬಾರದು ಎಂದು ಹೇಳಿದ್ದೆ. ಅಹಿಂದ ನಾಯಕರು ಗೆಲ್ಲಬೇಕು ಎಂದಿದ್ದೆ ಎಂದು ಸಿಟಿ ರವಿ ಹೇಳಿದ್ದಾರೆ.

ನಿಗಮದ ಹಣ, ಎಸ್​ಸಿಪಿ ಮತ್ತು ಟಿಎಸ್​​ಪಿ ಹಣ ದುರ್ಬಳಕೆಗೆ ನಿಮ್ಮ ಸರ್ಕಾರವೇ ಹೊಣೆಯಾಗಿದೆ. ಅದರ ಲೂಟಿಯಲ್ಲಿ ಸಿಎಂ ಸಚಿವ ಸಂಪುಟ ಸಹೋದ್ಯೋಗಿ ಭಾಗಿಯಾಗಿದ್ದಾರೆ. ಹಿಂದಿನ ನಾಯಕ ಸಿದ್ದರಾಮಯ್ಯ ಇಂಥದ್ದನ್ನು ಸಹಿಸುತ್ತಿರಲಿಲ್ಲ. ಇದು ಕೇವಲ‌ ಆಷಾಢ ಭೂತಿತನ ಅಷ್ಟೆ ಎಂದು ಸಿಟಿ ರವಿ ಹೇಳಿದ್ದಾರೆ.

ಎಸ್​ಸಿಪಿ- ಟಿಎಸ್​​ಪಿ ಹಣ ದುರ್ಬಳಕೆ ಆಗಿದೆ. ಆ ಹಣ ಅವರಿಗೆ ಮಾತ್ರ ಬಳಕೆ‌ ಆಗಬೇಕು. ಸರ್ಕಾರದ ಗ್ಯಾರಂಟಿ ಉದ್ದೇಶಕ್ಕೆ ಅಲ್ಲ. ಹೀಗಾಗಿ ಹಣ ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ವಾಲ್ಮೀಕಿ ನಿಗಮ, ಮುಡಾ, ಪರಿಶಿಷ್ಟರ ಹಣದ ಬಳಕೆಯ ಹೊಣೆಯನ್ನು ಸಿಎಂ ಹೊರಬೇಕು ಎಂದು ಸಿಟಿ ರವಿ ನುಡಿದಿದ್ದಾರೆ.

ಅರ್ಕಾವತಿ ರೀಡು ಹಗರಣ ಸಿಎಂ ಮೇಲೆ ಬಂದಿತ್ತು. ರಿಯಲ್ ಎಸ್ಟೇಟ್ ಉದ್ಯಮಗಳಿಂದ ಕೋಟ್ಯಂತ ರೂಪಾಯಿ ಪಡೆದಿರೋ ಆರೋಪ ಬಂದಿತ್ತು. ವಿಚಾರಣೆಗೆ ಕೆಂಪಣ್ಣ ಆಯೋಗ ರಚನೆ ಮಾಡಿದ್ದೀರಿ. ಬಳಿಕ ದೇಸಾಯಿ ಆಯೋಗ ರಚನೆ ಮಾಡಿದ್ದೀರಿ. ಸದನದಲ್ಲಿ ಮೊದಲು ಕೆಂಪಣ್ಣ ಆಯೋಗದ ವರದಿ ತಂದು ಬಳಿಕ ಅನ್ನು ಮುಚ್ಚಿಟ್ರಿ. ಬಳಿಕ ಸಾಯಿ ಆಯೋಗ ಸಿದ್ದಪಡಿಸಿದ್ದೀರಿ. ಬಳಿಕ ತಪ್ಪನ್ನು ಮುಚ್ಚಿಟ್ಟಿರಿ ಎಂದು ರವಿ ಅವರು ಆರೋಪಿಸಿದರು.

ಲೋಕಾಯುಕ್ತ ಪವರ್ ಕಡಿಮೆ ಮಾಡಿ, ಎಸಿಬಿ ರಚನೆ ಮಾಡಿದವರು ಸಿಎಂ ಸಿದ್ದರಾಮಯ್ಯ. ಎರಡೂ ಇಲಾಖೆ ದುರ್ಬಳಕೆ ಮಾಡಿಕೊಂಡವರು ನೀವೇ. ತಕ್ಷಣವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಸಿಟಿ ರವಿ ಆಗ್ರಹಿಸಿದರು.

Continue Reading
Advertisement
Israel Palestine War
ವಿದೇಶ38 seconds ago

Israel Palestine War: 50 ಕಿ.ಮೀ ದೂರದಿಂದಲೇ ಪ್ಯಾಲೆಸ್ತಿನ್‌ ಕಮಾಂಡರ್‌ನನ್ನು ಕೊಂದ ಇಸ್ರೇಲ್‌! ವಿಡಿಯೊ ನೋಡಿ

Viral Video
ವೈರಲ್ ನ್ಯೂಸ್6 mins ago

Viral Video: ಮೂರು ಅಡಿಯ ಕುಳ್ಳನಿಗೆ ಏಳಡಿ ಎತ್ತರದ ಗರ್ಲ್ ಫ್ರೆಂಡ್! ಇವರ ಪ್ರಣಯದ ವಿಡಿಯೊ ನೋಡಿ!

Rain News;
ಪ್ರಮುಖ ಸುದ್ದಿ22 mins ago

Rain News : ಪ್ರಯಾಣಿಕರೇ ಗಮನಿಸಿ; ಗುಡ್ಡ ಕುಸಿತದ ಭೀತಿ, ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್​​

Sexual Assault case
ಕ್ರೈಂ35 mins ago

Sexual Assualt Case: ಅಶ್ಲೀಲ ವಿಡಿಯೊ ವೀಕ್ಷಿಸಿ ಉದ್ರೇಕಗೊಂಡ ಮೂವರು ಶಾಲಾ ಬಾಲಕರಿಂದ ಬಾಲಕಿಯ ಅತ್ಯಾಚಾರ, ಕೊಲೆ

International Cricket Council
ಕ್ರಿಕೆಟ್50 mins ago

International Cricket Council : ಟಿ20 ವಿಶ್ವಕಪ್ ಆಯೋಜನೆಯಲ್ಲಿ ಐಸಿಸಿಗೆ 167 ಕೋಟಿ ರೂಪಾಯಿ ನಷ್ಟ

Team India Srilanka Tour
ಪ್ರಮುಖ ಸುದ್ದಿ59 mins ago

Team India Srilanka Tour : ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್​ಗೆ ಟಿ20 ನಾಯಕತ್ವ

Viral Video
Latest1 hour ago

Viral Video: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

Train Accident
ದೇಶ1 hour ago

Train Derail: ಹಳಿ ತಪ್ಪಿದ ರೈಲು; ಅಪಘಾತದ ಹಿಂದೆ ಇದ್ಯಾ ವಿಧ್ವಂಸಕ ಕೃತ್ಯ?

Crime News
ಪ್ರಮುಖ ಸುದ್ದಿ2 hours ago

Bangalore News : ಬೆಂಗಳೂರಲ್ಲಿ ಆಘಾತಕಾರಿ ಘಟನೆ; ಗಾಂಜಾ ನಶೆಯಲ್ಲಿ ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ಬಾಲಕಿಯರನ್ನು ಬೆದರಿಸಿದ ಪುಂಡರು

Lady Police Officer
Latest2 hours ago

Lady Police Officer: ಗೂಂಡಾಗಿರಿ ಮಾಡಿದರೆ ಹುಷಾರ್‌! ಪುಂಡರಿಗೆ ಲೇಡಿ ಪೊಲೀಸ್ ವಾರ್ನಿಂಗ್‌; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌