BICFF 2023: ಫೆಬ್ರವರಿ 22ರಿಂದ 26ವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಮಕ್ಕಳ ಚಲನ ಚಿತ್ರೋತ್ಸವ - Vistara News

ಸಿನಿಮಾ

BICFF 2023: ಫೆಬ್ರವರಿ 22ರಿಂದ 26ವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಮಕ್ಕಳ ಚಲನ ಚಿತ್ರೋತ್ಸವ

ಫೆಬ್ರವರಿ 22ರಿಂದ 26ವರೆಗೆ ಐದು ದಿನಗಳ ಕಾಲ (BICFF 2023) ‘ಬೆಂಗಳೂರು ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ ನಡೆಯಲಿದೆ. ಆಯ್ದ ಮಕ್ಕಳ ಸಿನಿಮಾಗಳಿಗೆ 12 ಬೇರೆ ಬೇರೆ ವಿಭಾಗದಲ್ಲಿ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗುತ್ತಿದೆ.

VISTARANEWS.COM


on

Bangalore International Children's Film Festival from February 22nd to 26th
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಕ್ಕಳ ಚಿತ್ರಕ್ಕೆ ವೇದಿಕೆ ಕಲ್ಪಿಸಿ ಕೊಡುವ ಉದ್ದೇಶದಿಂದ ‘ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್’ ‘ಬೆಂಗಳೂರು ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ವನ್ನು (BICFF 2023) ಈ ವರ್ಷದಿಂದ ಆರಂಭಿಸಿದೆ. ಮೊದಲ ಚಲನಚಿತ್ರೋತ್ಸವವನ್ನು ‘ಅಪ್ಪು ಮಕ್ಕಳ ಚಿತ್ರೋತ್ಸವ’ ಎಂಬ ಟ್ಯಾಗ್ ಲೈನ್ ನಡಿ ಪುನೀತ್ ರಾಜ್‌ಕುಮಾರ್‌ ಅವರಿಗೆ ಅರ್ಪಣೆ ಮಾಡಲಾಗುತ್ತಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಹಾಗೂ ಸಚಿವ ವಿ. ಸೋಮಣ್ಣ ‘ಬೆಂಗಳೂರು ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ಕ್ಕೆ ಚಾಲನೆ ನೀಡುವ ಮೂಲಕ ಶುಭ ಹಾರೈಸಿದ್ದಾರೆ.

ಸಚಿವ ವಿ. ಸೋಮಣ್ಣ ಮಾತನಾಡಿ ʻʻಉಲ್ಲಾಸ್ ಒಂದು ಅದ್ಭುತವಾದ ಕಾರ್ಯವನ್ನು ಕೈಗೊಂಡು ನಮ್ಮೆಲ್ಲರ ಮೆಚ್ಚಿನ ಪುನೀತ್ ಅವರ ಹೆಸರಲ್ಲಿ ಅಪ್ಪು ಮಕ್ಕಳ ಚಲನಚಿತ್ರೋತ್ಸವ ಎನ್ನುವ ದೊಡ್ಡ ಸಂದೇಶವನ್ನು ಕೊಡುತ್ತಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸರ್ಕಾರ ಹಾಗೂ ಸರ್ಕಾರೇತರ ವ್ಯವಸ್ಥೆಗಳಲ್ಲಿ ಈ ರೀತಿಯ ಕೆಲಸಗಳನ್ನು ಮಾಡಬೇಕು ಎಂಬ ಚಿಂತನೆಗೆ ನಮ್ಮ ಜತೆಯಲ್ಲೇ ಇರುವ ಪುನೀತ್ ರಾಜ್‌ಕುಮಾರ್‌ ನಮ್ಮೆಲ್ಲರಿಗೂ ಪ್ರೇರಣೆʼʼ ಎಂದು ಮಕ್ಕಳ ಚಲನಚಿತ್ರೋತ್ಸವಕ್ಕೆ ಶುಭ ಹಾರೈಸಿದರು.

‘ಬೆಂಗಳೂರು ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ ಆಯೋಜಕ ಉಲ್ಲಾಸ್ ಮಾತನಾಡಿ ʻʻನಾನು ‘ನಿರ್ಮಲ’ ಎಂಬ ಮಕ್ಕಳ ಸಿನಿಮಾ ಮಾಡಿದ್ದೆ. ಆ ಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಹೊರತು ಪಡಿಸಿ ಯಾವ ಫಿಲಂ ಫೆಸ್ಟ್ ನಲ್ಲಿಯೂ ಪ್ರದರ್ಶನಗೊಳ್ಳಲು ಅವಕಾಶ ಸಿಗಲಿಲ್ಲ. ಆದ್ದರಿಂದ ಮಕ್ಕಳ ಚಿತ್ರಕ್ಕೆ ವೇದಿಕೆ ಕಲ್ಪಿಸಿಕೊಡಬೇಕು ಉದ್ದೇಶದಿಂದ ಈ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಾಗುತ್ತಿದೆ. ಪುಣೆ, ಕಲ್ಕತ್ತ, ಕೇರಳದಲ್ಲಿ ಮಕ್ಕಳ ಚಲನಚಿತ್ರೋತ್ಸವ ನಡೆಯುತ್ತೆ. ಇದೀಗ ಬೆಂಗಳೂರಿನಲ್ಲಿ ಈ ವರ್ಷದಿಂದ ಆರಂಭವಾಗಿದೆ. ಇನ್ನು ಮುಂದೆಯೂ ಇದು ಅಪ್ಪು ಸರ್ ಹೆಸರಲ್ಲಿಯೇ ಪ್ರತಿ ವರ್ಷ ಮುಂದುವರೆದುಕೊಂಡು ಹೋಗುತ್ತದೆʼʼ ಎಂದು ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: BIFFES 2023: ಮಾರ್ಚ್‌ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಎಂದ ಸಚಿವ ಆರ್‌. ಅಶೋಕ್‌

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಮಾತನಾಡಿ ʻʻಉಲ್ಲಾಸ್ ಆಫ್ ಸಿನಿಮಾಸ್ ವತಿಯಿಂದ ಪ್ರತಿವರ್ಷ ನಾಟಕಗಳನ್ನು ಮಾಡಲಾಗುತ್ತಿತ್ತು. ಈ ಬಾರಿ ಮಕ್ಕಳ ಚಲನಚಿತ್ರೋತ್ಸವ ಮಾಡೋಣ ಎಂದು ಉಲ್ಲಾಸ್ ಪ್ರಸ್ತಾಪ ಮಾಡಿದರು. ಮಕ್ಕಳ ಚಿತ್ರಕ್ಕೆ ವೇದಿಕೆಗಳೇ ಇಲ್ಲ. ಆದ್ದರಿಂದ ಪ್ರತ್ಯೇಕವಾಗಿ ವೇದಿಕೆ ಕಲ್ಪಿಸಿಕೊಡುವ ಉದ್ದೇಶದಿಂದ ಇದನ್ನು ಆರಂಭಿಸಲಾಗುತ್ತಿದೆ. ಸಾಕಷ್ಟು ಉತ್ತಮ ಮಕ್ಕಳ ಚಿತ್ರಗಳಿವೆ ಅವುಗಳಿಗೆಲ್ಲ ಈ ಚಲನಚಿತ್ರೋತ್ಸವ ಒಂದೊಳ್ಳೆ ವೇದಿಕೆಯಾಗಲಿ. ಮತ್ತಷ್ಟು ಮಕ್ಕಳ ಚಿತ್ರಗಳಿಗೆ ಉತ್ತೇಜನ ಸಿಗಲಿʼʼ ಎಂದರು.

ಇದನ್ನೂ ಓದಿ: Rishab Shetty | ರಿಷಬ್‌ ಶೆಟ್ಟಿ ನಿರ್ಮಾಣದ ʻಶಿವಮ್ಮʼ ಚಿತ್ರಕ್ಕೆ ಬೂಸಾನ್‌ ಚಲನಚಿತ್ರೋತ್ಸವ ಪ್ರಶಸ್ತಿ

12 ಬೇರೆ ಬೇರೆ ವಿಭಾಗದಲ್ಲಿ ಪ್ರಶಸ್ತಿ

ಫೆಬ್ರವರಿ 22ರಿಂದ 26ವರೆಗೆ ಐದು ದಿನಗಳ ಕಾಲ ‘ಬೆಂಗಳೂರು ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ ನಡೆಯಲಿದೆ. ಆಯ್ದ ಮಕ್ಕಳ ಸಿನಿಮಾಗಳಿಗೆ 12 ಬೇರೆ ಬೇರೆ ವಿಭಾಗದಲ್ಲಿ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗುತ್ತಿದೆ. ಐದು ದಿನಗಳ ಕಾಲ ನಡೆಯುವ ಚಲನಚಿತ್ರೋತ್ಸವದಲ್ಲಿ ಕನ್ನಡ, ಫ್ರೆಂಚ್, ಕೊರಿಯನ್, ಜಪಾನೀಸ್, ಸ್ಪ್ಯಾನೀಶ್ ಸೇರಿದಂತೆ ಹಲವು ಭಾಷೆಯ ಸಿನಿಮಾಗಳು ಪ್ರದರ್ಶನಗೊಳ್ಳಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Rohit Sharma: ಬಾಲಿವುಡ್ ಮತ್ತು ಕ್ರಿಕೆಟ್ ಭಾರತದಲ್ಲಿ ಮನರಂಜನೆಯ ಪ್ರಮುಖ ಮೂಲಗಳು. ಎರಡೂ ಕಡೆ ಭರ್ಜರಿ ಮನರಂಜನೆ ಸಿಗುತತದೆ. ಕಾಲ್ಪನಿಕ ಹಾಗೂ ನೈಜ ಪ್ರಪಂಚಲದಲ್ಲಿ ಇದು ಹೆಚ್ಚು ಹತ್ತಿರ ಹಾಗೂ ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಪಡುವಂಥ ಸಂಗತಿ. ಹೀಗಾಗಿ ಕ್ರಿಕೆಟ್​ ಕುರಿತು ಹಲವಾರು ಸಿನಿಮಾಗಳು ಬಂದಿವೆ. ಅದೇ ರೀತಿ ಇದೀಗ ಹೊಸ ಸಿನಿಮಾವೊಂದು ಸೆಟ್ಟೇರಿದ್ದು ಅದರಲ್ಲಿ ಕೆಲವು ಕ್ರಿಕೆಟಿಗರ ಉಪಸ್ಥಿತಿಯನ್ನು ನಿರೀಕ್ಷೆ ಮಾಡಲಾಗಿದೆ.

VISTARANEWS.COM


on

Rohit Sharma
Koo

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕ್ರಿಕೆಟ್​ ಸಾಧನೆ ಜತೆಗೆ ವಿಭಿನ್ನ ಮನೋಭಾವದ ಮೂಲಕ ಜನಪ್ರಿಯ. ಜನಪ್ರಿಯ ಕ್ರಿಕೆಟಿಗನಾಗಿರುವ ಅವರು ಹಲವಾರು ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಈ ಎಲ್ಲ ಕಂಪನಿಗಳ ಜಾಹೀರಾತುಗಳಿಗಾಗಿ ನಟಿಸುತ್ತಿದ್ದಾಎ. ಇದೀಗ ಅವರು ಬಾಲಿವುಡ್​ ಕಡೆಗೂ ಎಂಟ್ರಿ ಪಡೆದಿದ್ದಾರೆ ಎಂಬುದಾಗಿ ವರದಿಯಾಗಿದೆ. ಅವರು ಕ್ರೀಡೆಯನ್ನು ಆಧಾರಿಸಿ ಮಾಡಿರು ಸಿನಿಮಾ “ಮಿಸ್ಟರ್ & ಮಿಸೆಸ್ ಮಹಿ” ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಗೆ ಮುಂಚಿತವಾಗಿ ಚಲನಚಿತ್ರವನ್ನು ಪ್ರಚಾರ ಮಾಡುವ ಸಲುವಾಗಿ ಈ ಚಿತ್ರವು ಕ್ರೀಡೆಯ ಅತ್ಯಂತ ಪ್ರಸಿದ್ಧ ವ್ಯಕ್ತಿಗಳಲ್ಲಿ ಒಬ್ಬರನ್ನು ಒಳಗೊಂಡ ಮೂಲಕ ವಿಶಿಷ್ಟ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲಿ ರೋಹಿತ್ ಹೆಸರು ಕಾಣಿಸುತ್ತಿದೆ.

ಬಾಲಿವುಡ್ ಮತ್ತು ಕ್ರಿಕೆಟ್ ಭಾರತದಲ್ಲಿ ಮನರಂಜನೆಯ ಪ್ರಮುಖ ಮೂಲಗಳು. ಎರಡೂ ಕಡೆ ಭರ್ಜರಿ ಮನರಂಜನೆ ಸಿಗುತತದೆ. ಕಾಲ್ಪನಿಕ ಹಾಗೂ ನೈಜ ಪ್ರಪಂಚಲದಲ್ಲಿ ಇದು ಹೆಚ್ಚು ಹತ್ತಿರ ಹಾಗೂ ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಪಡುವಂಥ ಸಂಗತಿ. ಹೀಗಾಗಿ ಕ್ರಿಕೆಟ್​ ಕುರಿತು ಹಲವಾರು ಸಿನಿಮಾಗಳು ಬಂದಿವೆ. ಅದೇ ರೀತಿ ಇದೀಗ ಹೊಸ ಸಿನಿಮಾವೊಂದು ಸೆಟ್ಟೇರಿದ್ದು ಅದರಲ್ಲಿ ಕೆಲವು ಕ್ರಿಕೆಟಿಗರ ಉಪಸ್ಥಿತಿಯನ್ನು ನಿರೀಕ್ಷೆ ಮಾಡಲಾಗಿದೆ.

‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ ಎಂಬ ಸಿನಿಮಾ ಬಾಲಿವುಡ್ ಮತ್ತೊಂದು ಕ್ರಿಕೆಟ್ ಆಧಾರಿತ ಡ್ರಾಮಾ ಸಿನಿಮಾಗಿದೆ. ಇದು ಈ ವಾರದ ಕೊನೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು ಭಾರಿ ನಿರೀಕ್ಷೆ ಮುಟ್ಟಿಸಿದೆ. ಪ್ರತಿಭಾವಂತ ನಟ ರಾಜ್ ಕುಮಾರ್ ರಾವ್ ಮತ್ತು ಜಾನ್ವಿ ಕಪೂರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಕಾಲ್ಪನಿಕ ಚಿತ್ರವು ಕ್ರಿಕೆಟ್ ಬಗ್ಗೆ ಉತ್ಸಾಹ ಹೊಂದಿರುವ ದಂಪತಿ ಜೀವನದ ಕುರಿತಾಗಿದೆ.

ಇದನ್ನೂ ಓದಿ: Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

ಈ ಚಲನಚಿತ್ರವು ಅವರ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಹಲವಾರು ಏರಿಳಿತಗಳನ್ನು ಬಿಂಬಿಸುತ್ತದೆ. ಮಹಿಳಾ ಕ್ರೀಡಾಪಟುಗಳು ಎದುರಿಸುತ್ತಿರುವ ಸವಾಲುಗಳು ಮತ್ತು ಖ್ಯಾತಿಯನ್ನು ಇದು ಬೊಟ್ಟು ಮಾಡಿದೆ. ಇದಲ್ಲದೆ, ಕ್ರಿಕೆಟ್ ಕಥಾಹಂದರದ ಅವಿಭಾಜ್ಯ ಅಂಗವಾಗಿರುವುದರಿಂದ, ಚಿತ್ರದ ಆಕರ್ಷಣೆ ಮತ್ತು ವಾಸ್ತವಿಕತೆಯನ್ನು ಹೆಚ್ಚಿಸಲು ರೋಹಿತ್ ಶರ್ಮಾ ಅವರಂತಹ ಕ್ರಿಕೆಟ್ ಸೂಪಸ್ಟಾರ್​ಗಳನ್ನು ಚಿತ್ರ ತಂಡ ಸೇರಿಸಿಕೊಂಡಿದ್ದಾರೆ. ಅವರಲ್ಲಿ ರೋಹಿತ್ ಕೂಡ ಒಬ್ಬರು.

ಚಿತ್ರ ಬಿಡುಗಡೆಗೆ ಕೆಲವು ದಿನಗಳ ಮೊದಲು, ‘ಅಗರ್ ತುಮ್ ಹೋ’ ಎಂಬ ಹಾಡನ್ನು ಯೂಟ್ಯೂಟ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಕೂಡ ಇದ್ದರು. ರಾಜ್​ಕುಮಾರ್​ ಮತ್ತು ಜಾನ್ವಿ ರೋಹಿತ್ ಅವರ ಶತಕವನ್ನು ಊಟದ ಮೇಜಿನ ಬಳಿ ಸಂಭ್ರಮಿಸುತ್ತಿರುವುದು ಹಾಡಿನಲ್ಲಿ ಕಂಡುಬಂದಿದೆ. ಕ್ರಿಕೆಟ್ ಪ್ರೇಮಿಗಳಾಗಿ ತಮ್ಮ ಉತ್ಸಾಹ ತೋರುವುದು ಕಾಣಿಸುತ್ತಿದೆ.

ಈ ಹಾಡಿನಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ಉಪಸ್ಥಿತಿಯು ಕ್ರಿಕೆಟ್ ಅಭಿಮಾನಿಗಳನ್ನು ಚಲನಚಿತ್ರದ ಕಡೆಗೆ ಸೆಳೆಯುವ ಸಾಧ್ಯತೆಯಿದೆ. ಮೇ 31 ರ ಬಿಡುಗಡೆಗೆ ಮುಂಚಿತವಾಗಿ ಅದರ ನಿರೀಕ್ಷೆಯನ್ನು ಹೆಚ್ಚಿಸುತ್ತದೆ. ವಿಶೇಷವೆಂದರೆ, ಚಿತ್ರದ ಪ್ರಮುಖ ನಟಿ ಜಾನ್ವಿ ಕಪೂರ್ ಕೂಡ ಈ ತಿಂಗಳ ಆರಂಭದಲ್ಲಿ ಚಿತ್ರದ ಪ್ರಚಾರಕ್ಕಾಗಿ ಐಪಿಎಲ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Actor Darshan: ದರ್ಶನ್ ಸ್ವಂತ ಹಣ ಖರ್ಚು ಮಾಡಿ ಗ್ರಾನೈಟ್ ಕಳಿಸಿದ್ದರು. ಆದರೆ ಕೆಲಸ ನಡೆಯುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ತಡೆದಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಇದೀಗ ದರ್ಶನ್‌ ಅವರ ಸ್ನೇಹಿತ ನಾಗರಾಜ್‌ ಅವರು ಈ ಬಗ್ಗೆ ವಿಡಿಯೊ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

VISTARANEWS.COM


on

Actor Darshan fans against forest officials Construction of Arjuna tomb
Koo

ಬೆಂಗಳೂರು: ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಮೃತಪಟ್ಟಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ ಎಂದು ಮಳೆಗಾಲ ಶುರುವಾಗುವ ಮುನ್ನ ಅರ್ಜುನನ ಸಮಾಧಿ ನಿರ್ಮಾಣಕ್ಕೆ ದರ್ಶನ್‌ (Actor Darshan) ಕರೆ ಕೊಟ್ಟಿದ್ದರು. ದರ್ಶನ್ ಸ್ವಂತ ಹಣ ಖರ್ಚು ಮಾಡಿ ಗ್ರಾನೈಟ್ ಕಳಿಸಿದ್ದರು. ಆದರೆ ಕೆಲಸ ನಡೆಯುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ತಡೆದಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಇದೀಗ ದರ್ಶನ್‌ ಅವರ ಸ್ನೇಹಿತ ನಾಗರಾಜ್‌ ಅವರು ಈ ಬಗ್ಗೆ ವಿಡಿಯೊ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ನಾಗಾರಾಜ್‌ ವಿಡಿಯೊ ಮಾಡಿ ʻʻನಾನು ನಾಗಾರಾಜ್‌. ದರ್ಶನ್‌ ಅವರ ಸ್ನೇಹಿತ. ದರ್ಶನ್‌ ಪರ ಮಾತನಾಡಲು ಬಂದಿರುವೆ. ದರ್ಶನ್‌ ಅವರು ಹೇಳದೇ ಕೇಳದೇ ಅರ್ಜುನ್‌ ಸಮಾಧಿ ಮಾಡಲು ಹುಡುಗರನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ದರ್ಶನ್‌ ಅವರು ಸಮಾಧಿ ಬಗ್ಗೆ ಟ್ವೀಟ್‌ ಮಾಡಿದ್ದರು. ಅದಾದ ಮೇಲೆ ಸರಕಾರ ಈ ಬಗ್ಗೆ ಯಾವುದೇ ಗಮನ ಹರಿಸಿರಲಿಲ್ಲ. ಇದಾದ ಬಳಿಕ ಅರ್ಜುನ ಮಾವುತ ವಿನು ಅವರು ತಂಡ ಅರಣ್ಯ ಅಧಿಕಾರಿಗಳಿಗೆ ಅರ್ಜುನ ಸಮಾಧಿ ಮಾಡಬೇಕು ಎಂದು ರಿಕ್ವೆಸ್ಟ್‌ ಮಾಡುತ್ತಾರೆ. ಅವಕಾಶ ಕೊಡಿ ಎಂದು ಲೆಟರ್‌ ಕೊಟ್ಟಿದ್ದಾರೆ. ಆಗ ಅನುಮತಿ ಕೂಡ ಕೊಟ್ಟಿದ್ದರು. ಹೀಗಾಗಿ ಅನುಮತಿ ಸಿಕ್ಕಿದ ಬಳಿಕ ದರ್ಶನ್‌ ಅವರು ನನ್ನ ಬಳಿ ಹಣವನ್ನು ಕೊಟ್ಟು ಕಲ್ಲುಗಳನ್ನು ವ್ಯವಸ್ಥೆ ಮಾಡು ಅಂದಾಗ ಕಲ್ಲುಗಳನ್ನು ತಂದೆವು. ನಮ್ಮ ಹುಡುಗರು ಮತ್ತು ವಿನು ತಂಡ ಫಾರೆಸ್ಟ್‌ ಒಳಗಡೆ ಸಮಾಧಿ ಕಟ್ಟಲು ಒಟ್ಟಿಗೆ ಹೋಗುತ್ತಾರೆ. ಸ್ಮಾರಕ ಮಾಡಬೇಕು ಎಂದು ಕೆಲಸ ಶುರು ಮಾಡಿದಾಗ, ಅರಣ್ಯ ಅಧಿಕಾರಿಗಳು ಮಾಡಬೇಡಿ ಎಂದು ತಡೆದಿದ್ದಾರೆ. ದರ್ಶನ್ ಸ್ವಂತ ಹಣ ಖರ್ಚು ಮಾಡಿ ಗ್ರಾನೈಟ್ ಕಳಿಸಿದ್ದರು. ಆದರೆ ಕೆಲಸ ನಡೆಯುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ತಡೆದಿದ್ರು. ಹಣವನ್ನೂ ಹಿಂದಿರುಗಿಸೋದಾಗಿ ಹೇಳಿದ್ರು. ಆದರೆ ಇದುವರೆಗೂ ನಮ್ಮ ಖಾತೆಗೆ ಹಣ ಬಂದಿಲ್ಲʼʼ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಸದ್ಯ ದರ್ಶನ್ ಹಾಗೂ ಅರಣ್ಯಾಧಿಕಾರಿಗಳ ಗುದ್ದಾಟ ಮುಂದುವರಿದಿದೆ. “ಮೊದಲು ಅನುಮತಿ ಕೊಟ್ಟು ಬಳಿಕ ನಾವೇ ಮಾಡ್ತೀವಿ ಎನ್ನುತ್ತಿದ್ದಾರೆ.” ಎಂದು ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

Continue Reading

ಕ್ರೀಡೆ

Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

Shreyanka Patil: ಆರ್​ಸಿಬಿ(RCB) ತಂಡದ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್(Shreyanka Patil)​ ಅವರು ಗೌರಿ(Gowri) ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್(Samarjit Lankesh) ಜತೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Shreyanka Patil
Koo

ಬೆಂಗಳೂರು: ಟೀಮ್​ ಇಂಡಿಯಾದ ಹಾಗೂ ಆರ್​ಸಿಬಿ(RCB) ತಂಡದ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್(Shreyanka Patil)​ ಅವರು ಗೌರಿ(Gowri) ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್(Samarjit Lankesh) ಜತೆ ಮಸ್ತ್​ ಸ್ಟೆಪ್ಸ್(shreyanka patil dance)​ ಹಾಕಿದ ವಿಡಿಯೊವೊಂದು ವೈರಲ್​ ಆಗಿದೆ.

ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದ ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಶ್ರೇಯಾಂಕಾ ಪಾಟೀಲ್ ಕೂಡ ಭಾಗಿಯಾಗಿದ್ದರು. ಇದೇ ವೇಳೆ ಅವರು ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕಾ ಪಾಟೀಲ್ ಹುಕ್ ಸ್ಟೆಪ್ ಹಾಕಿ ಮಿಂಚಿದರು. ಶ್ರೇಯಾಂಕಾ ಮತ್ತು ಸಮರ್ಜಿತ್ ಡ್ಯಾನ್ಸ್‌ಗೆ ವಿದ್ಯಾರ್ಥಿಗಳು ಕೂಡಾ ಫಿದಾ ಆಗಿದ್ದರು.

ಈ ನೃತ್ಯದ ವಿಡಿಯೊವನ್ನು ಸಮರ್ಜಿತ್ ಲಂಕೇಶ್ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಧನ್ಯವಾದ ಕೂಡ ತಿಳಿಸಿದ್ದಾರೆ. “ನಮ್ಮ ಚಿತ್ರದ ಟೀಸರ್ ಬಿಡುಗಡೆಗೆ ತುಂಬಾ ಶಕ್ತಿ ತಂದಿದ್ದಕ್ಕಾಗಿ. ಮೈದಾನದಲ್ಲಿ ಮತ್ತು ಹೊರಗೆ ಅದ್ಭುತವಾದ ಪ್ರದರ್ಶನ ತೋರಿದ್ದಕ್ಕೆ ಈ ನರ್ತಕಿಯನ್ನು ಮರೆಯಬಾರದು… ನಮ್ಮ RCB ರಾಣಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿರುವ ಚಿತ್ರ ಇದಾಗಿದೆ. ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.


ʻʻನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಿದ್ದಾರೆ. ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದು, ಬಿ ಎ ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಕೆ ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆದಿದ್ದಾರೆ.

21 ವರ್ಷದ ಶ್ರೇಯಾಂಕಾ ಪಾಟೀಲ್ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಆರ್‌ಸಿಬಿ ಮಹಿಳಾ ತಂಡಕ್ಕೆ ಆಯ್ಕೆಯಾದರು. ಇಲ್ಲಿ ತೋರಿದ ಪ್ರದರ್ಶನದಿಂದ ಅವರು ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿಯೂ ಆಡುವಂತೆ ಮಾಡಿತ್ತು. ಹಂತ ಹಂತವಾಗಿ ಬೆಳೆದ ಇವರು 2023ರಲ್ಲಿ 21 ವಷದೊಳಗಿನ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅವಕಾಶ ಪಡೆದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಡಿಸೆಂಬರ್ 6ರಂದು ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆಡುವ ಮೂಲಕ ಭಾರತ ಹಿರಿಯರ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

Continue Reading

ಬಾಲಿವುಡ್

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

Kendall Jenner: ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

VISTARANEWS.COM


on

Kendall Jenner American model flaunted
Koo

ಅಮೆರಿಕದ ಪ್ರಖ್ಯಾತ ಮೀಡಿಯಾ ಪರ್ಸನಾಲಿಟಿ ಕ್ರಿಸ್‌ ಜೆನ್ನರ್‌ ಪುತ್ರಿ ಕೆಂಡಲ್‌ ಜೆನ್ನರ್‌ (Kendall Jenner) ತಿಂಗಳಲ್ಲಿ ಎರಡನೇ ಬಾರಿಗೆ ಟಾಪ್‌ಲೆಸ್‌ಆಗಿ ಫೋಟೋಗೆ ಪೋಸ್‌ ನೀಡಿದ್ದಾರೆ.

ಸಂಪೂರ್ಣ ಒದ್ದೆಯಾಗಿ ಮಾದಕ ಪೋಸ್‌ ನೀಡಿದ್ದಾರೆ ಕೆಂಡಲ್‌ ಜೆನ್ನರ್‌. ಫ್ಯಾಷನ್ ಐಕಾನ್‌ ಎಂದೂ ಕರೆಯಲ್ಪಡುವ ಇವರು ಲಕ್ಷಾಂತರ ಫಾಲೋವರ್ಸ್‌ ಹೊಂದಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಹಸರು ಬಣ್ಣದ ಈಜು ಉಡುಗೆಯಲ್ಲಿ ಹಾಟ್‌ ಅವತಾರದಲ್ಲಿ ಕಂಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

Continue Reading
Advertisement
Rain News
ಕರ್ನಾಟಕ18 mins ago

Rain News: ಚಿತ್ತಾಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ; ಹೊತ್ತಿ ಉರಿದ ತೆಂಗಿನ ಮರ

Jos Butler
ಪ್ರಮುಖ ಸುದ್ದಿ18 mins ago

Jos Butler: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಇಂಗ್ಲೆಂಡ್​ ತಂಡದ ನಾಯಕ ಬಟ್ಲರ್​

Wagah Border
ದೇಶ37 mins ago

Wagah Border: ಕಾಂಗ್ರೆಸ್‌ ಗೆದ್ದರೆ ಭಾರತ-ಪಾಕ್ ಗಡಿ ಓಪನ್‌ ಎಂದ ಪಂಜಾಬ್‌ ಮಾಜಿ ಸಿಎಂ ಚನ್ನಿ; Video ವೈರಲ್

Virat kohli
ಪ್ರಮುಖ ಸುದ್ದಿ46 mins ago

Virat kohli : ಬ್ರೇಕ್​ ತೆಗೆದುಕೊಂಡ ಕೊಹ್ಲಿ, ಅಭ್ಯಾಸ ಪಂದ್ಯಕ್ಕೆ ಅನುಮಾನ

FSSAI Warning
ಆರೋಗ್ಯ1 hour ago

FSSAI Warning: ಎದೆಹಾಲು ಮಾರಾಟ ಮಾಡುವಂತಿಲ್ಲ: ಎಫ್‌ಎಸ್‌ಎಸ್‌ಎಐ ಖಡಕ್ ಎಚ್ಚರಿಕೆ

fraud case
ಕರ್ನಾಟಕ1 hour ago

Fraud Case: ಷೇರು ಮಾರ್ಕೆಟ್‌ನಲ್ಲಿ ಹಣ ಡಬಲ್ ಮಾಡೋದಾಗಿ 30 ಕೋಟಿ ರೂ. ವಂಚಿಸಿ ದಂಪತಿ ಪರಾರಿ!

Constables
ದೇಶ2 hours ago

Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Rohit Sharma
ಕ್ರೀಡೆ2 hours ago

Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Karnataka Rain
ಮಳೆ2 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

MS Dhoni
ಕ್ರೀಡೆ2 hours ago

M S Dhoni: ಫ್ರಾನ್ಸ್ ಮೂಲದ ಕಾರು ಕಂಪನಿಯ ಬ್ರಾಂಡ್​ ಅಂಬಾಸಿಡರ್ ಆಗಿ ನೇಮಕಗೊಂಡ ಲೆಜೆಂಡ್​ ಧೋನಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌