Karnataka Election 2023: ಹಾಸನದಲ್ಲಿ ಪತ್ನಿ ಭವಾನಿ ಜತೆ ರೇವಣ್ಣ ಕ್ಷೇತ್ರ ಸಂಚಾರ; ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ತಂತ್ರ - Vistara News

ಕರ್ನಾಟಕ

Karnataka Election 2023: ಹಾಸನದಲ್ಲಿ ಪತ್ನಿ ಭವಾನಿ ಜತೆ ರೇವಣ್ಣ ಕ್ಷೇತ್ರ ಸಂಚಾರ; ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ತಂತ್ರ

Karnataka Election 2023: ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹಾಸನ ವಿಧಾನಸಭಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಎಚ್.ಡಿ. ರೇವಣ್ಣ ಅವರು ಪತ್ನಿ ಭವಾನಿ ಜತೆ ಪ್ರಚಾರ ಆರಂಭಿಸಿದ್ದಾರೆ. ಜತೆಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಕ್ಕೂ ಮುಂದಾಗಿದ್ದಾರೆ.

VISTARANEWS.COM


on

revanna with wife bhavani in hassan election campaign and jds workers opinion poll strategy karnataka election 2023 updates
ದೊಡ್ಡಪುರದಲ್ಲಿ ಭವಾನಿ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಅವರಿಗೆ ಹೂವಿನ ಮಳೆ ಸುರಿಸಿ ಸ್ವಾಗತ ಕೋರಲಾಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಹಾಸನ ವಿಧಾನಸಭಾ (Karnataka Election 2023) ಜೆಡಿಎಸ್‌ ಟಿಕೆಟ್‌ ಅನ್ನು ಪಡೆಯಲೇಬೇಕು ಎಂದು ಪಣತೊಟ್ಟಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ಮೂರು ದಿನಗಳ ಕಾಲ ಕ್ಷೇತ್ರ ಸಂಚಾರಕ್ಕೆ ಮುಂದಾಗಿದ್ದು, ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹವನ್ನು ಆರಂಭಿಸಿದ್ದಾರೆ. ದೊಡ್ಡಪುರ ಗ್ರಾಮದಿಂದ ಪ್ರಚಾರ ಕಾರ್ಯವನ್ನು ಆರಂಭಿಸಿದ್ದು, ಇಲ್ಲಿ ಸಂಗ್ರಹವಾಗುವ ಅಭಿಮತವನ್ನು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಂದಿಡಲು ಮುಂದಾಗಿದ್ದಾರೆ. ಈ ಬಗ್ಗೆ ಮಾಜಿ ಶಾಸಕ ಬಿ.ವಿ.ಕರೀಗೌಡ ಪ್ರತಿಕ್ರಿಯೆ ನೀಡಿದ್ದು, ಶಾಸಕ ಪ್ರೀತಂಗೌಡ ಪಂಥಾಹ್ವಾನವನ್ನು ಸ್ವೀಕರಿಸಲೇಬೇಕು. ಭವಾನಿ ಇಲ್ಲವೇ ರೇವಣ್ಣ ಅವರೇ ಹಾಸನ ಕ್ಷೇತ್ರಕ್ಕೆ ಅಭ್ಯರ್ಥಿಯಾಗಬೇಕು ಎಂದು ಹೇಳಿದ್ದಾರೆ.

revanna with wife bhavani in hassan election campaign and jds workers opinion poll strategy karnataka election 2023 updates
ಪ್ರಚಾರಕ್ಕೆ ಆಗಮಿಸಿದ ಎಚ್.ಡಿ. ರೇವಣ್ಣ

ದೊಡ್ಡಪುರದ ಮಲ್ಲೇಶ್ಚರ ದೇವಾಲಯದಲ್ಲಿ ಎಚ್‌.ಡಿ. ರೇವಣ್ಣ ಅವರು ಪತ್ನಿ ಭವಾನಿ ರೇವಣ್ಣ ಅವರೊಂದಿಗೆ ಪೂಜೆ ಸಲ್ಲಿಸಿ ಕಾರ್ಯಕರ್ತರ ಸಭೆ ನಡೆಸಿದರು. ಅಲ್ಲದೆ, ಮೂರು ದಿನಗಳ ಕಾಲ ಭವಾನಿ ಜತೆಗೆ ಹಾಸನ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದು, ಒಟ್ಟು 12 ಗ್ರಾಮ ಪಂಚಾಯಿತಿಗಳಲ್ಲಿ ಸುತ್ತಾಡಲಿದ್ದಾರೆ. ಈಗಾಗಲೇ ಈ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಸ್ವರೂಪ್ ಈ ಎಲ್ಲ ಗ್ರಾಮಗಳಲ್ಲಿ ಒಂದು ಸುತ್ತಿನ ಪ್ರಚಾರವನ್ನು ನಡೆಸಿದ್ದಾರೆ. ಆದರೆ, ಸ್ವರೂಪ್‌ಗೆ ಪರ್ಯಾಯವಾಗಿ ತಾವು ಅಥವಾ ಭವಾನಿಯೇ ಕಣಕ್ಕಿಳಿಯಬೇಕು ಎಂದು ಹಠ ತೊಟ್ಟಿರುವ ರೇವಣ್ಣ ಈಗ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಹಾಸನ ಕ್ಷೇತ್ರದ ದೊಡ್ಡಪುರದಲ್ಲಿ ರೇವಣ್ಣ ಮತ್ರು ಭವಾನಿಗೆ ಭರ್ಜರಿ ಸ್ವಾಗತ ದೊರೆತಿದೆ. ಕಾರ್ಯಕರ್ತರು ಹೂಮಳೆ ಸುರಿಸಿ ಸ್ವಾಗತ ಕೋರಿದರು. ಪ್ರಜ್ವಲ್‌ ರೇವಣ್ಣ ಜತೆಗಿದ್ದರು.

revanna with wife bhavani in hassan election campaign and jds workers opinion poll strategy karnataka election 2023 updates
ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ಭವಾನಿ ರೇವಣ್ಣ

ರೈತರು, ಸ್ತ್ರೀಶಕ್ತಿ ಸಂಘದವರು ಸಾಲ ಕಟ್ಟಬೇಡಿ, ಮನ್ನಾ ಮಾಡಿಸುತ್ತೇವೆ- ರೇವಣ್ಣ

ನಾವು ಮಾಡಿದ ಅಭಿವೃದ್ಧಿಯನ್ನು ಪ್ರಚಾರ ಮಾಡಿಲ್ಲ. ನಾನು ಐವತ್ತು ಫುಡ್ ಕೋರ್ಟ್ ಮಾಡಿದ್ದೆ. ನಮಗೆ ಬೇಕಾಗಿರುವುದು ಬಡವರ ಬದುಕು. ದೇವೇಗೌಡರ ಶಕ್ತಿ ಏನು ಎಂಬುದನ್ನು ತಿಳಿದುಕೊಳ್ಳಬೇಕು. ಕೋವಿಡ್ ಸಮಯದಲ್ಲಿ ಸಾಲ ಮಾಡಿದವರ ಪಟ್ಟಿ ಮಾಡಿಸುತ್ತೇನೆ. ಸ್ತ್ರೀ ಶಕ್ತಿ ಸಾಲವನ್ನೂ ಸಹ ಯಾರೂ ಕಟ್ಟಲು ಹೋಗಬೇಡಿ, ಆರಾಮವಾಗಿ ಇನ್ನೂ ಮೂರು ತಿಂಗಳು ಸುಮ್ಮನೆ ಇರಿ. ಎಚ್.ಡಿ. ಕುಮಾರಸ್ವಾಮಿ ಸರ್ಕಾರ ಬಂದರೆ ಆ ಎಲ್ಲ ಸಾಲವನ್ನೂ ಮನ್ನಾ ಮಾಡಿಸುತ್ತೇನೆ ಎಂದು ಎಚ್.ಡಿ. ರೇವಣ್ಣ ಹೇಳಿದರು.

ಇದನ್ನೂ ಓದಿ: Sindhuri Vs Roopa : ಸಿಂಧೂರಿಗೆ ಬಿಗ್‌ ರಿಲೀಫ್‌, ಮಾನಹಾನಿಕರ ಹೇಳಿಕೆ ನೀಡದಂತೆ ರೂಪಾಗೆ ಕೋರ್ಟ್‌ ಆದೇಶ

ಭವಾನಿ ಅವರು ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. ಇಡೀ ರಾಜ್ಯದಲ್ಲಿ ಹಾಸನ ಜಿಲ್ಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ಅದು ಯಾರ ಕಾಲದಲ್ಲಿ ಎಂಬುದನ್ನು ಜನ ಮರೆತಿಲ್ಲ. ಪಕ್ಷ ಏನು ತೀರ್ಮಾನ ಕೊಡುತ್ತದೆಯೋ ಅದಕ್ಕೆ ನಾವೆಲ್ಲ ಬದ್ಧರಾಗಿರಬೇಕಾಗುತ್ತದೆ. ರೇವಣ್ಣ ಅವರೇ ಬನ್ನಿ ನೀವು, ಐವತ್ತು ಸಾವಿರ ಓಟು ಕಮ್ಮಿ ಆದ್ರೆ ರಾಜೀನಾಮೆ ಕೊಡ್ತೀನಿ ಅಂತ ಕರೆಯುತ್ತಿದ್ದಾರೆ. ನನಗೆ ನಮ್ಮ‌ ಜನ ಉಳಿಯಬೇಕು, ಈ ಜಿಲ್ಲೆ ಉಳಿಯಬೇಕು ಅಷ್ಟೇ ಎಂದು ಹೇಳಿದರು.

ನನಗೆ ಕುಟುಂಬ ರಾಜಕಾರಣ ಏನು ಇಲ್ಲ. ಕುಟುಂಬ ರಾಜಕಾರಣದ ಬಗ್ಗೆ ಎರಡೂ ರಾಷ್ಟ್ರೀಯ ಪಕ್ಷಗಳು ಒಂದು ನಿರ್ಣಯ ಮಾಡಲಿ. ಕುಟುಂಬದಿಂದ ಒಬ್ಬರೇ ನಿಲ್ಲಲಿ ಎಂಬ ತೀರ್ಮಾನವನ್ನು ತೆಗೆದುಕೊಳ್ಳಲಿ. ಆಗ ನಾನು ನಮ್ಮ ಮನೆಯಲ್ಲಿ ಎಲ್ಲರ ರಾಜೀನಾಮೆಯನ್ನೂ ಕೊಡಿಸುತ್ತೇನೆ. ನನಗೆ ನಮ್ಮ‌ ಪಕ್ಷ ಉಳಿಯಬೇಕು, ಹಾಸನ ಜಿಲ್ಲೆಯಲ್ಲಿ ಏಳಕ್ಕೆ ಏಳು ನಮ್ಮ ಪಕ್ಷ ಗೆಲ್ಲಬೇಕು. ನಮಗೆ ಕುಮಾರಣ್ಣ ಮುಖ್ಯಮಂತ್ರಿ ಆಗಬೇಕು. ದೇವೇಗೌಡರ ಕಣ್ಮುಂದೆ ಒಬ್ಬ ರೈತರ ಮಗ ಸಿಎಂ ಆಗಬೇಕು. ಆ ಕಾರಣಕ್ಕಾಗಿಯೇ ನಾನು ಹಳ್ಳಿಹಳ್ಳಿಗೆ ಹೋಗುತ್ತೇನೆ. ನಾವೆಲ್ಲ ದೇವೇಗೌಡರಿಂದ ಈ ಮಟ್ಟಕ್ಕೆ ಬಂದಿರೋದು. ಇದನ್ನು ಚಾಲೆಂಜ್ ಆಗಿ ತಗೋಬೇಕು. ನನಗೇನು ಹಾಸನದಿಂದ ಎಂಎಲ್‌ಎ ಆಗಬೇಕು ಅಂತ ಇಲ್ಲ. ನಾನು, ಭವಾನಿ ಎಂಎಲ್‌ಎ‌ ಆಗಬೇಕು ಎಂದೂ ಇಲ್ಲ. ಇಡೀ ರಾಜ್ಯದಲ್ಲಿ ಹಾಸನ ಜಿಲ್ಲೆಯನ್ನು ನಂಬರ್ ಒನ್ ಮಾಡಬೇಕು ಎಂಬುದಷ್ಟೇ ನನ್ನ ಗುರಿ ಎಂದು ರೇವಣ್ಣ ಹೇಳಿದರು.

ಶಾಸಕ ಪ್ರೀತಂ ಯುವಕರಿಗೆ ತೊಂದರೆ ಕೊಡ್ತಿದ್ದಾರೆ: ಪ್ರಜ್ವಲ್‌ ರೇವಣ್ಣ

ಜೆಡಿಎಸ್ ಪಕ್ಷದ ಚುನಾವಣೆ ಪ್ರಚಾರಕ್ಕೆ ಈಗ ಚಾಲನೆ ಸಿಕ್ಕಿದೆ. ಇದು ಇನ್ನೂ ಬೇಗ ಆಗಬೇಕಿತ್ತು. ಆದರೆ ಈಗಲೂ ಕಾಲ ಮಿಂಚಿಲ್ಲ. ಈ ನಿರ್ಧಾರ ಬಹಳಷ್ಟು ಮುಖಂಡರು, ಯುವಕರು, ತಾಯಂದಿರಿಗೆ ಶಕ್ತಿ ಕೊಡುತ್ತದೆ. ಶಾಸಕ ಪ್ರೀತಂ ಗೌಡ ಅಭಿವೃದ್ಧಿ ಮೂಲಕ ಮತ ಕೇಳುತ್ತಿಲ್ಲ. ಅವರು ಯಾವುದೇ ಕಡೆ ಹೋದರು ಯುವಕರನ್ನು ಹೊಡೆದಾಡಿಸಿ ಕೇಸ್ ಮಾಡಿಸುತ್ತಾರೆ. ಬಳಿಕ ಕೇಸ್‌ನಿಂದ ವಾಪಸ್ ತೆಗುಸುವುದಾಗಿ ಹೇಳಿ ಪಕ್ಷ ಸೇರಿಸಿಕೊಳ್ಳುತ್ತಾರೆ. ಆದರೆ, ಯುವಕರೇ ಧೈರ್ಯವಾಗಿರಿ‌, ಇನ್ನೆರಡು ತಿಂಗಳು ಕಾಯಿರಿ. ಜೆಡಿಎಸ್ ಪಕ್ಷದ ಬಾವುಟವನ್ನು ಹಾಸನ ತಾಲೂಕಿನಲ್ಲಿ ಹಾರಿಸಿಯೇ ಹಾರಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Amit Shah: ಮೋದಿ, ಯಡಿಯೂರಪ್ಪ ಮೇಲೆ ಭರವಸೆ ಇಟ್ಟು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ ಎಂದ ಅಮಿತ್‌ ಶಾ; ಬಿಎಸ್‌ವೈ ಅನಿವಾರ್ಯವಾದರಾ?

ಯುವಕರಿಗೆ ತೊಂದರೆ ಕೊಡುತ್ತಿರುವ ಶಾಸಕರು ಎರಡು ದಿನದಲ್ಲಿ 120 ಜನರ ಮೇಲೆ 107 ಕೇಸ್ ದಾಖಲಿಸಿದ್ದಾರೆ. ನಮ್ಮ ನಾಯಕರನ್ನು ಗಡಿಪಾರು ಮಾಡಲು ಕೇಸ್ ದಾಖಲಿಸುತ್ತಿದ್ದಾರೆ. ನೋವು ತಿಂದರು ನಮ್ಮ ಕಾರ್ಯಕರ್ತರು ಗಟ್ಟಿಯಾಗಿದ್ದಾರೆ. ಈ ಪಕ್ಷವನ್ನು ಗೆಲ್ಲಿಸಲು ಛಲ ತೊಟ್ಟಿದ್ದಾರೆ. ನಮ್ಮ ಪಕ್ಷದಲ್ಲಿ ಇರುವವರು ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ದುಡ್ಡು ಕೊಡ್ತಾರೆ ಅಂತ ಬರೋದಿಲ್ಲ, ಲೇಔಟ್ ಮಾಡ್ತಾರೆ ಅಂಥ ಫಿಕ್ಸ್ ಆಗೋದಿಲ್ಲ ಎಂದು ಹೇಳಿದರು.

ರೇವಣ್ಣ ಅಂದರಿಕಿ ಮಂಚಿವಾಡು

ಹಾಸನ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಆರು ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ಈ ಭಾರಿ ಚುನಾವಣೆಯಲ್ಲಿ ಏಳಕ್ಕೆ ಏಳನ್ನೂ ಗೆಲ್ಲಬೇಕು. ಅದಕ್ಕಾಗಿ ಇಂದಿನಿಂದ ಜೆಡಿಎಸ್ ಪ್ರಚಾರ ಆರಂಭಿಸಿದ್ದೇವೆ. ರೇವಣ್ಣ ಅವರು ಅಂದರಿಕಿ ಮಂಚಿವಾಡು (ಎಲ್ಲರಿಗೂ ಒಳ್ಳೆಯವರು) ಎಂದು ಭವಾನಿ ರೇವಣ್ಣ ಹೇಳಿದರು.

ಹೊಳೆನರಸೀಪುರದಿಂದ ರೇವಣ್ಣ ಬೆಂಗಳೂರಿಗೆ ಹೊರಟರೆ ಏನು ಕೆಲಸ ಮಾಡಿಸಿಕೊಂಡು ಬರಲು ಹೊರಟಿದ್ದಾರೆ. ಆ ಕಡೆಯಿಂದ ಬಂದರೆ ಕೆಲಸ ಮಾಡಿಸಿಕೊಂಡು ಬರುತ್ತಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ. 2023ರಲ್ಲಿ ಸ್ವತಂತ್ರವಾಗಿ ನಮ್ಮ‌ ಪಕ್ಷ ಅಧಿಕಾರ ಬರಬೇಕು. ಕುಮಾರಣ್ಣ ಅವರು ಸಿಎಂ ಆಗಬೇಕು ಎಂದರೆ ನಾವೆಲ್ಲ ಶಕ್ತಿ ಕೊಡಬೇಕು. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಿಲ್ಲದ ಸಂದರ್ಭದಲ್ಲಿ ನಮ್ಮ ಮನೆಗೆ ಬಂದು ಸಮಸ್ಯೆ ಹೇಳಿಕೊಂಡಿದ್ದಾರೆ. ಅವರೆಲ್ಲರಿಗೂ ಸ್ಪಂದಿಸಿದ್ದೇವೆ. ಈ ಬಾರಿ ಜೆಡಿಎಸ್‌ ಅನ್ನು ಗೆಲ್ಲಿಸೋಣ ಎಂದು ಕರೆ ನೀಡಿದರು.

ಇದನ್ನೂ ಓದಿ: 7th Pay commission : ಮಾ. 1ರಿಂದ ಸರ್ಕಾರಿ ನೌಕರರ ಪ್ರತಿಭಟನೆ, ಮಾತುಕತೆ ಸಂದೇಶ ರವಾನಿಸಿದ ಸಿಎಂ ಬೊಮ್ಮಾಯಿ

ಹಾಸನಕ್ಕೆ ರೇವಣ್ಣ‌ ಇಲ್ಲವೇ ಭವಾನಿ ಅಭ್ಯರ್ಥಿ ಆಗಬೇಕು: ಕರೀಗೌಡ

ಹಾಸನ ಜಿಲ್ಲೆಯಲ್ಲಿ ರೇವಣ್ಣ‌, ಭವಾನಿ ರೇವಣ್ಣ ಸ್ಪರ್ಧೆ ಮಾಡಲೇಬೇಕು ಎಂದು ಇರಲಿಲ್ಲ. ಆದರೆ, ಇಲ್ಲಿನ ಶಾಸಕ ಪ್ರೀತಂಗೌಡ ಪಂಥಾಹ್ವಾನ ನೀಡಿದಾಗ ಬರಲೇಬೇಕಲ್ಲವೇ? ಯಕಶ್ಚಿತ್ ಒಬ್ಬ ಎಂಎಲ್‌ಎ ಸವಾಲು ಹಾಕುತ್ತಾನೆ. ಐವತ್ತು ಸಾವಿರ ಓಟಿನಿಂದ ಗೆಲ್ಲುತ್ತೇನೆ ಎಂದು ಹೇಳುವುದೆಂದರೆ ಏನ್ ತಮೇಷನಾ ಎಂದು ಪ್ರಶ್ನೆ ಮಾಡಿದ ಮಾಜಿ ಶಾಸಕ ಬಿ.ವಿ.ಕರೀಗೌಡ, ಹೀಗಾಗಿ ರೇವಣ್ಣ‌ ಇಲ್ಲವೇ ಭವಾನಿ ರೇವಣ್ಣ ಅವರೇ ಅಭ್ಯರ್ಥಿ ಆಗಬೇಕು. ಈ ಪಂಥಾಹ್ವಾನವನ್ನು ಸ್ವೀಕರಿಸಿ ಚುನಾವಣೆಗೆ ನಿಲ್ಲಬೇಕು. ಮೀನಮೇಷ ಎಣಿಸದೆ ಭವಾನಿ ಅವರೇ ಅಭ್ಯರ್ಥಿಯಾಗಬೇಕು ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

RCB vs CSK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

VISTARANEWS.COM


on

RCB vs CSK
Koo

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ(Royal Challengers Bengaluru) ನಾಳೆ (ಮೇ​ 18) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧ ಕಣಕ್ಕಿಳಿಯಲಿದೆ. ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಿಲಾಗಿದ್ದು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಇಲ್ಲಿ ಪಾರ್ಕಿಂಗ್​ ನಿಷೇಧ


ನಗರದ ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್​ ನಿಷೇಧ ಮಾಡಲಾಗಿದೆ.

ಎಲ್ಲಿ ಪಾರ್ಕಿಂಗ್​ ಮಾಡಬಹುದು?


ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಮೆಟ್ರೋ ಸೇವೆ

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

Continue Reading

ಕ್ರೈಂ

Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

Prajwal Revanna Case: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ವಿಡಿಯೊ ವೈರಲ್‌ ಮಾಡಿದವರ ಕುರಿತು ಸಾಕ್ಷ್ಯ ಬಿಡುಗಡೆ ಮಾಡುತ್ತೇನೆ ಎನ್ನುತ್ತಿದ್ದ ವಕೀಲ ದೇವರಾಜೇಗೌಡ ಅವರನ್ನು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನ ಮಾಡಲಾಗಿತ್ತು. ಈ ಸಂಬಂಧ ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಜೆಎಂಎಫ್‌ಸಿ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಹೀಗಾಗಿ ಗುರುವಾರವೂ ಒಂದು ದಿನ ಅವಧಿ ವಿಸ್ತರಣೆ ಮಾಡಿ ಕೋರ್ಟ್‌ ಆದೇಶಿಸಿತ್ತು. ಅಲ್ಲದೆ, ಶುಕ್ರವಾರ (ಮೇ 17) ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸೂಚಿಸಿತ್ತು. ಇಂದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

VISTARANEWS.COM


on

Prajwal Revanna Case Lawyer Devarajegowda sent to judicial custody End of police custody
Koo

ಹಾಸನ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ (physical Abuse) ಕೇಸ್‌ ಆರೋಪಿ ವಕೀಲ ದೇವರಾಜೇಗೌಡ (Devarajegowda) ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಗುರುವಾರವೂ ಒಂದು ದಿನ ಕಸ್ಟಡಿಗೆ ಪಡೆದುಕೊಂಡಿದ್ದರು. ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಂಗ ಬಂಧನವಿರಿಸಿ ಆದೇಶಿಸಲಾಗಿದೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಸಾಕ್ಷಿ ಬಿಡುಗಡೆ ಮುಂದಾಗಿದ್ದ ದೇವರಾಜೇಗೌಡ ಅವರೀಗ ಇದಕ್ಕೆ ಸಂಬಂಧಪಟ್ಟಂತೆ ಬೇರೆ ಕೇಸ್‌ನಲ್ಲಿ ಲಾಕ್‌ ಆದಂತೆ ಆಗಿದೆ.

ಒಟ್ಟು ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದೇವರಾಜೇಗೌಡ ಅವರು ಈಗ ಮತ್ತೆ ನ್ಯಾಯಾಂಗ ಬಂಧನಕ್ಕೊಳಪಟ್ಟಿದ್ದಾರೆ. ದೇವರಾಜೇಗೌಡ ಪರ ವಕೀಲರು ಇಂದು ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ವಿಡಿಯೊ ವೈರಲ್‌ (video viral) ಮಾಡಿದವರ ಕುರಿತು ಸಾಕ್ಷ್ಯ ಬಿಡುಗಡೆ ಮಾಡುತ್ತೇನೆ ಎನ್ನುತ್ತಿದ್ದ ವಕೀಲ ದೇವರಾಜೇಗೌಡ ಅವರನ್ನು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನ ಮಾಡಲಾಗಿತ್ತು. ಈ ಸಂಬಂಧ ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಜೆಎಂಎಫ್‌ಸಿ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಹೀಗಾಗಿ ಗುರುವಾರವೂ ಒಂದು ದಿನ ಅವಧಿ ವಿಸ್ತರಣೆ ಮಾಡಿ ಕೋರ್ಟ್‌ ಆದೇಶಿಸಿತ್ತು. ಅಲ್ಲದೆ, ಶುಕ್ರವಾರ (ಮೇ 17) ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸೂಚಿಸಿತ್ತು. ಇಂದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದರು. ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆಯನ್ನು ಕೈಗೊಂಡಿದ್ದರು.

ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ದೇವರಾಜೇಗೌಡ

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: HD Revanna: ಬಸವನಗುಡಿ ನಿವಾಸದಿಂದ ದೂರವೇ ಉಳಿದ ಎಚ್‌ ಡಿ ರೇವಣ್ಣ; ಜ್ಯೋತಿಷಿಗಳ ಕಟ್ಟೆಚ್ಚರ?

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಮಹಿಳೆಯೊಬ್ಬರು ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ದೇವರಾಜೇಗೌಡ ವಿರುದ್ಧ ಕೇಳಿ ಬಂದಿದೆ.

Continue Reading

ಬೆಂಗಳೂರು

Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

Road Accident : ಬೆಂಗಳೂರು-ಮೈಸೂರಲ್ಲಿ ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಯುವಕನೊರ್ವ ಬೈಕ್‌ ಅಪಘಾತದಲ್ಲಿ ಮೃತಪಟ್ಟರೆ, ಮೈಸೂರಲ್ಲಿ ಎರಡು ಅಪಘಾತದಲ್ಲಿ ಇಬ್ಬರು ಜೀವ ಕಳೆದುಕೊಂಡಿದ್ದಾರೆ.

VISTARANEWS.COM


on

By

road Accident in Bengaluru mysore
Koo

ಮೈಸೂರು/ಬೆಂಗಳೂರು: ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಅಪಘಾತ (Road Accident) ನಡೆದಿದ್ದು, ಇಬ್ಬರು ಮೃತಪಟ್ಟರೆ, ಬೆಂಗಳೂರಲ್ಲಿ ಬರ್ತ್‌ ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಯುವಕ ಸ್ವಯಂ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಬೈಕ್‌ಗಳ ನಡುವೆ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿಯಲ್ಲಿ ಅಪಘಾತ ನಡೆದಿದೆ.

ಹುಣಸೂರು ತಾಲೂಕಿನ ಮರೂರುಕಾವಲ್ ಗ್ರಾಮದ ನಿವಾಸಿ ಸಾಗರ್ (35) ಮೃತ ದುರ್ದೈವಿ. ಹಿಂಬದಿ ಕುಳಿತಿದ್ದ ಅರಸು ಕಲ್ಲಹಳ್ಳಿ ಗ್ರಾಮದ ಹರೀಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಹರೀಶ್‌ನನ್ನು ಹುಣಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮತ್ತೊಂದು ವಾಹನದ ಸವಾರ ಕೆಸ್ತೂರು ಕೊಪ್ಪಲು ಗ್ರಾಮದ ನಿವಾಸಿ ಕೆಂಡಗಣ್ಣ ಅವರು ತೀವ್ರ ಗಾಯವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಕಾರು-ಸ್ಕೂಟರ್‌ ಅಪಘಾತ; ಮಹಿಳೆ ಸಾವು

ಕಾರು- ಸ್ಕೂಟರ್ ನಡುವೆ ಭೀಕ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಹೆಬ್ಬಾಳು ಬಡಾವಣೆ ನಿವಾಸಿ ರಾಧಾ (34) ಮೃತ ದುರ್ದೈವಿ.

ಸ್ಥಳಕ್ಕೆ ವಿವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Student Death : ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ; ಕಾಲೇಜು ಕಿರುಕುಳಕ್ಕೆ ಬೇಸತ್ತಳೇ?

ಹೆಲ್ಮೆಟ್‌ರಹಿತ ಸವಾರಿಗೆ ಯುವಕ ಬಲಿ

ಬೆಂಗಳೂರಿನ ನಾಗವಾರ ಕಡೆಯಿಂದ ಮೂಡಲಪಾಳ್ಯ ಕಡೆಗೆ ಬೈಕ್‌ನಲ್ಲಿ ಬರುವಾಗ ಯುವಕನೊರ್ವ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ವರುಣ್‌ ಮೃತ ದುರ್ದೈವಿ.

ಮೂಲತಃ ಕೋಲಾರದ ವರುಣ್ ಬೆಂಗಳೂರು ಪೀಣ್ಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ಏಷಿಯನ್ ಪೈಂಟ್ಸ್‌ನಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ರಾತ್ರಿ ಸ್ನೇಹಿತನ ಬರ್ತ್ ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ವರುಣ್ ಬಳಿಕ ಹಾಸ್ಟೆಲ್‌ಗೆ ತೆರಳಿ ಸ್ನೇಹಿತರ ಭೇಟಿಯಾಗಿ ಬರುತ್ತಿದ್ದ. ಈ ವೇಳೆ ಮಾಳಗಾಳ ಬಳಿ ಸೆಲ್ಫ್‌ ಆ್ಯಕ್ಸಿಡೆಂಟ್‌ ಆಗಿದೆ. ಹೆಲ್ಮೆಟ್ ಧರಿಸದೇ ಇದ್ದಿದ್ದರಿಂದ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವರುಣ್‌ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ತಂದೆ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದಾರೆ. ವರುಣ್‌ ತಮ್ಮ ಇನ್ನೂ ವಿದ್ಯಾಭ್ಯಾಸ ಮಾಡುತ್ತಿದ್ದು, ಇಡೀ ಕುಟುಂಬಕ್ಕೆ ವರುಣ್‌ ಆಧಾರವಾಗಿದ್ದ. ತಾಯಿಯ ಆಸ್ಪತ್ರೆ ಖರ್ಚಿಗೂ ಈತನೇ ಆಧಾರವಾಗಿದ್ದ. ವರುಣ್‌ ಸಾವು ಇಡೀ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

CM Siddaramaiah: ರಾಜ್ಯ ಸರ್ಕಾರದ ವಿರುದ್ಧ ಈಗಾಗಲೇ ಮುಗಿ ಬೀಳುತ್ತಿರುವ ಬಿಜೆಪಿಗರು ಕಾನೂನು ಸುವ್ಯವಸ್ಥೆ ಬಗ್ಗೆಯೂ ಟೀಕೆ ಮಾಡುತ್ತಿದ್ದಾರೆ. ಇನ್ನು ಒಂದು ವರ್ಷ ಸರ್ಕಾರ ಏನೆಲ್ಲ ವೈಫಲ್ಯಗಳನ್ನು ಮಾಡಿದೆ ಎಂಬ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು, ಇದು ಸರ್ಕಾರದ ಸಾಧನೆ ಎಂದು ನೆಗೆಟಿವ್‌ ರೋಲ್‌ನಲ್ಲಿ ಬಿಂಬಿಸಲು ಮುಂದಾಗಿದೆ. ಬಿಜೆಪಿಯ “ಫೆಲ್ಯೂರ್ ಸರ್ಕಾರ” ಅಸ್ತ್ರಕ್ಕೆ ಪ್ರತಿಯಾಗಿ ಸಾಧನಾ ಸಮಾವೇಶ ಮಾಡಿ ಚೆಕ್‌ಮೇಟ್‌ ಕೊಡಲು ಕಾಂಗ್ರೆಸ್ ಪ್ಲ್ಯಾನ್‌ ಮಾಡಿಕೊಂಡಿದೆ.

VISTARANEWS.COM


on

1 year of CM Siddaramaiah government BJP prepares chargesheet and Congress gears up for counter
Koo

ಬೆಂಗಳೂರು: ದೇಶಾದ್ಯಂತ ಲೋಕಸಭಾ ಚುನಾವಣೆ (Lok Sabha Election 2024) ಕಾವು ಜೋರಾಗಿಯೇ ಇದೆ. ಈ ನಡುವೆ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ (Karnataka Congress Government) ಒಂದು ವರ್ಷ ಪೂರ್ಣವಾಗುತ್ತಿದೆ. ಮೇ 20ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್ ರೆಡಿ ಮಾಡಲು ಸಿದ್ಧತೆ ನಡೆಸಿದೆ. ಇದಕ್ಕೆ ಕೌಂಟರ್‌ ಕೊಡಲು ಸಿಎಂ ಮತ್ತವರ ಮಂತ್ರಿ ಮಂಡಲದ ಸದಸ್ಯರು ಪ್ಲ್ಯಾನ್‌ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಈಗಾಗಲೇ ಮುಗಿ ಬೀಳುತ್ತಿರುವ ಬಿಜೆಪಿಗರು ಕಾನೂನು ಸುವ್ಯವಸ್ಥೆ ಬಗ್ಗೆಯೂ ಟೀಕೆ ಮಾಡುತ್ತಿದ್ದಾರೆ. ಇನ್ನು ಒಂದು ವರ್ಷ ಸರ್ಕಾರ ಏನೆಲ್ಲ ವೈಫಲ್ಯಗಳನ್ನು ಮಾಡಿದೆ ಎಂಬ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು, ಇದು ಸರ್ಕಾರದ ಸಾಧನೆ ಎಂದು ನೆಗೆಟಿವ್‌ ರೋಲ್‌ನಲ್ಲಿ ಬಿಂಬಿಸಲು ಮುಂದಾಗಿದೆ.

ರಾಜ್ಯದಲ್ಲಿ ಎಂದೂ ಕಂಡರಿಯದ ಭೀಕರ ಬರಗಾಲ ಬಂದಿದೆ. ಆದರೆ, ಬರ ನಿರ್ವಹಣೆಯಲ್ಲಿ ವಿಫಲವಾಗಿದೆ. ರೈತರಿಗೆ ಪರಿಹಾರವನ್ನು ನೀಡಿಲ್ಲ. ರೈತರ ಬದುಕು ದುಸ್ತರವಾಗಿದೆ. ಕೇಂದ್ರ ಸರ್ಕಾರ ನೀಡಿದ ಬರ ಪರಿಹಾರದ ಹಣವೂ ರೈತರಿಗೆ ತಲುಪುತ್ತಿಲ್ಲ. ಅದನ್ನು ಬ್ಯಾಂಕ್‌ಗಳು ಸಾಲಕ್ಕೆ ಬಳಸಿಕೊಳ್ಳುತ್ತಿವೆ. ಇನ್ನು ಸರ್ಕಾರವು ಒಂದು ವರ್ಷದಲ್ಲಿ ಹೊಸ ಕಾಮಗಾರಿಗಳಿಗೆ ಗುದ್ದಲಿ ಪೂಜೆಯನ್ನೂ ಮಾಡಿಲ್ಲ.

ಇಷ್ಟಲ್ಲದೆ ಶಾಸಕರ ಪರಿಸ್ಥಿತಿ ಇನ್ನೂ ಕಷ್ಟಕರವಾಗಿದೆ. ಶಾಸಕರಿಗೆ ಅನುದಾನ ಕೊಡಲು ಹಣವಿಲ್ಲ. ರಾಜ್ಯದಲ್ಲಿ ಸರಣಿ ಕೊಲೆ, ಅತ್ಯಾಚಾರಗಳಾದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ಅನುದಾನ ಕೊಡುತ್ತೇವೆ, ಕೊಡುತ್ತೇವೆ ಎಂದೇ ದಿನ ದೂಡುತ್ತಿದೆ ಎಂದು ಸ್ವಪಕ್ಷೀಯ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದನ್ನು ಜನರ ಮುಂದಿಡಲು ಬಿಜೆಪಿ ಮುಂದಾಗಿದೆ.

ಬುಕ್‌ ರಿಲೀಸ್‌ಗೆ ಬಿಜೆಪಿ ಸಿದ್ಧತೆ

ರಾಜ್ಯ ಸರ್ಕಾರದ ಮೇಲೆ ಮಾಡಲಾಗುವ ಎಲ್ಲ ಆರೋಪಗಳ ಪಟ್ಟಿಯನ್ನು ಒಂದು ಪುಸ್ತಕ ರೂಪದಲ್ಲಿ ತರಲು ಬಿಜೆಪಿ ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇದನ್ನು ದೊಡ್ಡ ಮಟ್ಟದಲ್ಲಿ ಅಭಿಯಾನವನ್ನಾಗಿ ಕೈಗೊಳ್ಳಲು ಚಿಂತಿಸಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಸರ್ಕಾರದ ವಿರುದ್ಧ ಇದೇ ಇವರಿಗೆ ಪ್ರಮುಖ ಅಸ್ತ್ರವಾಗಿರಲಿದೆ.

ಕೌಂಟರ್‌ ಕೊಡಲು ಸಿದ್ದು ಪ್ಲ್ಯಾನ್‌ ಏನು?

ಇತ್ತ ಒಂದು ವರ್ಷ ಪೂರೈಸಿರುವ ಸಿದ್ದರಾಮಯ್ಯ ಸರ್ಕಾರದಿಂದ ಸಾಧನಾ ಸಮಾವೇಶ ಮಾಡಲು ಪ್ಲ್ಯಾನ್‌ ಮಾಡಲಾಗಿದೆ. ಈಗ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಫಲಿತಾಂಶದವರೆಗೂ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಜೂನ್ ಎರಡನೇ ವಾರದಲ್ಲಿ ಸಾಧನಾ ಸಮಾವೇಶ ಮಾಡಲು ಸಿದ್ಧತೆಗಳು ನಡೆದಿವೆ ಎನ್ನಲಾಗಿದೆ.

ಇದನ್ನೂ ಓದಿ: DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕರ್ನಾಟಕದಲ್ಲಿ ಅಧಿಕ ಸ್ಥಾನ ಬಂದರೆ ಎರಡನ್ನೂ ಒಟ್ಟಿಗೆ ಸೇರಿ ಸಮಾವೇಶ ಮಾಡುವಂತೆ ಸಿಎಂ ಆಪ್ತರು ಸಲಹೆ ನೀಡಿದ್ದಾರೆನ್ನಲಾಗಿದೆ. ಈ ಸಮಾವೇಶ ಮಾಡುವ ಮೂಲಕ ಗ್ಯಾರಂಟಿ ಸರ್ಕಾರದ ಯಶಸ್ವಿ ನಾಗಾಲೋಟ ಮುಂದುವರಿಯುತ್ತದೆ ಎಂಬ ಸಂದೇಶವನ್ನು ರವಾನೆ ಮಾಡಲು ಚಿಂತನೆ ನಡೆಸಲಾಗಿದೆ. ಒಟ್ಟಾರೆಯಾಗಿ ಬಿಜೆಪಿಯ “ಫೆಲ್ಯೂರ್ ಸರ್ಕಾರ” ಅಸ್ತ್ರಕ್ಕೆ ಪ್ರತಿಯಾಗಿ ಸಾಧನಾ ಸಮಾವೇಶ ಮಾಡಿ ಚೆಕ್‌ಮೇಟ್‌ ಕೊಡಲು ಕಾಂಗ್ರೆಸ್ ಪ್ಲ್ಯಾನ್‌ ಮಾಡಿಕೊಂಡಿದೆ.

Continue Reading
Advertisement
RCB vs CSK
ಕ್ರೀಡೆ21 mins ago

RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

Amith Shah lok sabha election 2024
ಪ್ರಮುಖ ಸುದ್ದಿ39 mins ago

Lok Sabha Election 2024: 272 ಸೀಟು ಗೆಲ್ಲದೇ ಹೋದರೆ ಬಿಜೆಪಿಯ ಪ್ಲ್ಯಾನ್ ಬಿ ಏನು? ಅಮಿತ್ ಶಾ ಉತ್ತರ ಹೀಗಿದೆ

PM Narendra Modi
ದೇಶ45 mins ago

PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Raveena tandon Saree fashion magic in Jayanthi Ballal designer
ಫ್ಯಾಷನ್45 mins ago

Raveena tandon Saree fashion: ಜಯಂತಿ ಬಲ್ಲಾಳ್‌ ಡಿಸೈನರ್‌ ಸೀರೆಯಲ್ಲಿ ನಟಿ ರವೀನಾ ಟಂಡನ್‌ ಜಾದೂ!

Prajwal Revanna Case Lawyer Devarajegowda sent to judicial custody End of police custody
ಕ್ರೈಂ2 hours ago

Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

RCB vs CSK
ಕ್ರೀಡೆ2 hours ago

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

Kannada New Movie The judgement Trailer Out Kannada
ಸ್ಯಾಂಡಲ್ ವುಡ್2 hours ago

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Crime News
ದೇಶ2 hours ago

ಶಾಲೆ ಸಮೀಪದ ಚರಂಡಿಯಲ್ಲಿ 4 ವರ್ಷದ ಮಗುವಿನ ಮೃತದೇಹ ಪತ್ತೆ; ಭುಗಿಲೆದ್ದ ಹಿಂಸಾಚಾರ

Bal Jeevan Bima
ಮನಿ ಗೈಡ್2 hours ago

Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

road Accident in Bengaluru mysore
ಬೆಂಗಳೂರು2 hours ago

Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ9 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌