IPL 2023: ಹಾಲಿ ಚಾಂಪಿಯನ್​ ಗುಜರಾತ್​ ತಂಡಕ್ಕೆ ಹಿನ್ನಡೆ; ಸ್ಟಾರ್​ ಆಟಗಾರ ಟೂರ್ನಿಯಿಂದ ಔಟ್​ - Vistara News

ಕ್ರಿಕೆಟ್

IPL 2023: ಹಾಲಿ ಚಾಂಪಿಯನ್​ ಗುಜರಾತ್​ ತಂಡಕ್ಕೆ ಹಿನ್ನಡೆ; ಸ್ಟಾರ್​ ಆಟಗಾರ ಟೂರ್ನಿಯಿಂದ ಔಟ್​

ಐರ್ಲೆಂಡ್ ತಂಡದ ಘಾತಕ ವೇಗಿ​​ ​ ಜೋಶುವಾ ಲಿಟಲ್ ಗಾಯದ ಸಮಸ್ಯೆಯಿಂದ ಈ ಬಾರಿಯ ಐಪಿಎಲ್​ ಟೂರ್ನಿ ಆಡುವುದು ಅನುಮಾನ ಎನ್ನಲಾಗಿದೆ.

VISTARANEWS.COM


on

IPL 2023: Defeat for defending champions Gujarat; The star player is out of the tournament
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: 16ನೇ ಆವೃತ್ತಿಯ ಐಪಿಎಲ್(IPL 2023)​ ಟೂರ್ನಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಟೂರ್ನಿಯ ವೇಳಾಪಟ್ಟಿಯೂ ಪ್ರಕಟಗೊಂಡಿದೆ. ಆದರೆ ಹಾಲಿ ಚಾಂಪಿಯನ್​ ಗುಜರಾತ್‌ ಟೈಟಾನ್ಸ್‌(gujarat titans)​ ತಂಡಕ್ಕೆ ಭಾರಿ ಆಘಾತವೊಂದು ಎದುರಾಗಿದೆ.

ಕಳೆದ ಮಿನಿ ಹರಾಜಿನಲ್ಲಿ 4.4 ಕೋಟಿ ರೂ.ಗೆ ಗುಜರಾತ್‌ ಟೈಟಾನ್ಸ್‌​​​​​​ ಪಾಲಾಗಿರುವ ಐರ್ಲೆಂಡ್ ತಂಡದ ಘಾತಕ ವೇಗಿ​​ ​ ಜೋಶುವಾ ಲಿಟಲ್​​ ಗಾಯಕ್ಕೀಡಾಗಿದ್ದು ಈ ಬಾರಿ ಐಪಿಎಲ್​ ಆಡುವುದು ಅನುಮಾನ ಎಂಬ ಮಾಹಿತಿ ಲಭ್ಯವಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವ ಕಪ್​ ಟೂರ್ನಿಯಲ್ಲಿ ಈ ಐರಿಷ್ ವೇಗಿ ನ್ಯೂಜಿಲ್ಯಾಂಡ್​ ವಿರುದ್ಧ ಹ್ಯಾಟ್ರಿಕ್​ ವಿಕೆಟ್​ ಕಿತ್ತು ಮಿಂಚಿದ್ದರು. ಇದೇ ಪ್ರದರ್ಶನ ಕಂಡು ಟೈಟಾನ್ಸ್‌ ಈ ಆಟಗಾರರನ್ನು ದುಬಾರಿ ಬೆಲೆಗೆ ಖರೀದಿಸಿತ್ತು. ಆದರೆ ಇದೀಗ ಅವರು ಆಡುವುದೇ ಅನುಮಾನ ಎನ್ನಲಾಗಿದೆ.

ಇದನ್ನೂ ಓದಿ IPL 2023: ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೆ ಡೇವಿಡ್​ ವಾರ್ನರ್​ ನಾಯಕ

23 ವರ್ಷದ ಎಡಗೈ ವೇಗಿ ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಸದ್ಯ ಐರ್ಲೆಂಡ್​ ಕ್ರಿಕೆಟ್​ ಮಂಡಳಿಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ತಿಂಗಳು ಬಾಂಗ್ಲಾದೇಶ ವಿರುದ್ಧ ನಡೆಯಲಿರುವ 3 ಪಂದ್ಯಗಳ ಏಕ ದಿನ ಸರಣಿಗೂ ಅನುಮಾನ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟಾರೆ ಕಪ್​ ತನ್ನ ಬಳಿಯೇ ಉಳಿಸಿಕೊಳ್ಳಬೇಕೆನ್ನುವ ಯೋಜನೆಯಲ್ಲಿದ್ದ ಟೈಟಾನ್ಸ್​ ತಂಡಕ್ಕೆ ಜೋಶುವಾ ಲಿಟಲ್ ಅವರ ಗಾಯ ಚಿಂತೆಗೀಡು ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Pakistan Cricket: ಟಿ20 ವಿಶ್ವಕಪ್(ICC T20 World Cup 2024)​ ಟೂರ್ನಿಗೆ ಪಾಕಿಸ್ತಾನ(Pakistan Cricket) ಇದುವರೆಗೂ ತನ್ನ ತಂಡ ಪ್ರಕಟಿಸದಿದ್ದರೂ ಕೂಡ ವಿಶ್ವಕಪ್​ ಗೆದ್ದರೆ ತಂಡದ ಸದಸ್ಯರಿಗೆ ತಲಾ 83 ಲಕ್ಷ ರೂ. ಬಹುಮಾನ ನೀಡುವುದಾಗಿ ಪಿಸಿಬಿ(PCB) ಮುಖ್ಯಸ್ಥ ಮೊಹ್ಸೀನ್‌ ನಖ್ವಿ(Mohsin Naqvi) ಘೋಷಣೆ ಮಾಡಿದ್ದಾರೆ.

VISTARANEWS.COM


on

pakistan team
Koo

ಕರಾಚಿ: ಬಹುನಿರೀಕ್ಷಿತ ಟಿ20 ವಿಶ್ವಕಪ್(ICC T20 World Cup 2024)​ ಟೂರ್ನಿಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಟೂರ್ನಿಗಾಗಿ ಬಹುತೇಕ ತಂಡಗಳು ಕಠಿಣ ತಯಾರಿ ನಡೆಸುತ್ತಿವೆ. ಜತೆಗೆ 15 ಸದಸ್ಯರ ಬಲಿಷ್ಠ ಸಂಭಾವ್ಯ ತಂಡಗಳನ್ನು ಕೂಡ ಪ್ರಕಟಿಸಿವೆ. ಆದರೆ ಪಾಕಿಸ್ತಾನ(Pakistan Cricket) ಇದುವರೆಗೂ ತನ್ನ ತಂಡ ಪ್ರಕಟಿಸದಿದ್ದರೂ ಕೂಡ ವಿಶ್ವಕಪ್​ ಗೆದ್ದರೆ ತಂಡದ ಸದಸ್ಯರಿಗೆ ತಲಾ 83 ಲಕ್ಷ ರೂ. ಬಹುಮಾನ ನೀಡುವುದಾಗಿ ಪಿಸಿಬಿ(PCB) ಮುಖ್ಯಸ್ಥ ಮೊಹ್ಸೀನ್‌ ನಖ್ವಿ(Mohsin Naqvi) ಘೋಷಣೆ ಮಾಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಅಧಕಾರಿಗಳೊಂದಿಗೆ 2 ಗಂಟೆಗಳ ಕಾಲ ಸಭೆ ನಡೆಸಿದ ನಖ್ವಿ, ಈ ಬಹುಮಾನ ಮೊತ್ತವನ್ನು ಘೋಷಣೆ ಮಾಡಿದೆ. ಈ ಘೋಷಣೆಯನ್ನು ಕಂಡು ಅನೇಕ ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ. ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಹೈರಾಣವಾಗಿರುವ ಮಧ್ಯೆ ಇದೆಲ್ಲ ಬೇಕಿತ್ತಾ ಎಂದು ಕಾಲೆಳೆದಿದ್ದಾರೆ. ಪಾಕಿಸ್ತಾನ ತಂಡ ಐರ್ಲೆಂಡ್‌ ಮತ್ತು ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿ ಆಡಿದ ಬಳಿಕ ತನ್ನ ವಿಶ್ವಕಪ್​ ತಂಡವನ್ನು ಪ್ರಕಟಿಸಲಿದೆ.

“ಎದುರಾಳಿ ಯಾರೇ ಆಗಿರಲಿ ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ಒಂದು ತಂಡವಾಗಿ ಆಟವಾಡಿ” ಎಂದು ನಖ್ವಿ ಪಾಕಿಸ್ತಾನ ತಂಡದ ಆಟಗಾರರನ್ನು ಹುರಿದುಂಬಿಸಿದ್ದಾರೆ. ಇವರ ನೇತೃತ್ವದಲ್ಲೇ ಇತ್ತೀಚೆಗೆ ಪಾಕಿಸ್ತಾನ ಆಟಗಾರರಿಗೆ ಫಿಟ್​ನೆಸ್​ ಕಾಯ್ದುಕೊಳ್ಳುವ ಸಲುವಾಗಿ ಸೈನ್ಯದಲ್ಲಿ ಕಠಿಣ ತರಬೇತಿ ನೀಡಲಾಗಿತ್ತು.

ಭಾರತದ ಮಾಜಿ ಮುಖ್ಯ ಕೋಚ್, 2011ರಲ್ಲಿ ಏಕದಿನ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್(Gary Kirsten) ಮಾರ್ಗದರ್ಶನದಲ್ಲಿ ಪಾಕಿಸ್ತಾನ ಈ ಬಾರಿ ಟಿ20 ವಿಶ್ವಕಪ್​ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್​ 9ರಂದು ನಡೆಯಲಿದೆ.

ಇದನ್ನೂ ಓದಿ Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

ನ್ಯೂಯಾರ್ಕ್‌ನಲ್ಲಿ ಪಂದ್ಯ

ಇತ್ತಂಡಗಳ ನಡುವಣ ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಅಣಿಯಾಗಲಿದೆ. ಈ ಪಂದ್ಯಕ್ಕಾಗಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ ಪಂದ್ಯವನ್ನು ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ನಡೆಸಲಾಗುತ್ತಿದೆ. ಅಲ್ಲದೆ ಭಾರತದ ಬಹುತೇಕ ಲೀಗ್​ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯಲಿದೆ.

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading

ಕ್ರಿಕೆಟ್

Viral News: ಕ್ರಿಕೆಟ್‌ ಆಡುವಾಗ ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು; ವಿಡಿಯೊ ಇದೆ

Viral News: ಪುಣೆಯಲ್ಲಿ ಕ್ರಿಕೆಟ್​ ಅಭ್ಯಾಸ ಆಡುತ್ತಿದ್ದ ವೇಳೆ ಚೆಂಡು ತನ್ನ ಖಾಸಗಿ(Ball hit boy’s private part) ಭಾಗಕ್ಕೆ ಬಡಿದು 11 ವರ್ಷದ(11-year-old ) ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಈ ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ(viral news).

VISTARANEWS.COM


on

viral news
Koo

ಪುಣೆ: ಸ್ನೇಹಿತರೊಂದಿಗೆ ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದ ವೇಳೆ ಚೆಂಡು ತನ್ನ ಖಾಸಗಿ(Ball hit boy’s private part) ಭಾಗಕ್ಕೆ ಬಡಿದು 11 ವರ್ಷದ(11-year-old ) ಬಾಲಕ ಮೃತಪಟ್ಟಿರುವ ದಾರುಣ ಘಟನೆಯೊಂದು ಪುಣೆಯಲ್ಲಿ ನಡೆದಿದೆ. ಈ ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ(viral news). ಮೃತಪಟ್ಟ ಬಾಲಕನನ್ನು ಶೌರ್ಯ(Shaurya ) ಎಂದು ಗುರಿತಿಸಲಾಗಿದೆ.

ಬೌಲಿಂಗ್ ಮಾಡುತ್ತಿದ್ದಾಗ ಬ್ಯಾಟ್ಸ್‌ಮನ್ ಹೊಡೆದ ಚೆಂಡು ನೇರವಾಗಿ ಶೌರ್ಯನ ಖಾಸಗಿ ಭಾಗಕ್ಕೆ ಬಡಿದಿದೆ. ನೋವಿನಿಂದ ನರಳಿದ ಆತ ತಕ್ಷಣ ನೆಲದ ಮೇಲೆ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನ ಸ್ನೇಹಿತರು ಆರೈಕೆ ಮಾಡಿದರೂ ಕೂಡ ಯಾವುದೇ ಸ್ಪಂದನೆ ನೀಡದ ಕಾರಣ ಶೌರ್ಯನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ಆತ ಈ ಮೊದಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಚೆಂಡಿನ ಬಲವಾದ ಹೊಡೆತಕ್ಕೆ ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೆಲ ತಿಂಗಳ ಹಿಂದಷ್ಟೇ ಕ್ರಿಕೆಟ್ ಪಂದ್ಯದ ವೇಳೆ ತಲೆಗೆ ಚೆಂಡು ಬಡಿದು 52 ವರ್ಷದ ಕ್ರಿಕೆಟಿಗ ಮೃತಪಟ್ಟ ಘಟನೆ ಮುಂಬೈನಲ್ಲಿ ನಡೆದಿತ್ತು. ಒಂದೇ ಮೈದಾನದಲ್ಲಿ ಎರಡು ಪಂದ್ಯಗಳು ನಡೆಯುತ್ತಿದ್ದ ವೇಳೆ ಮತ್ತೊಂದು ಪಂದ್ಯದ ಕ್ರಿಕೆಟ್ ಚೆಂಡು ತಲೆಗೆ ಬಡಿದು ಕ್ರಿಕೆಟಿಗ ಮೃತಪಟ್ಟಿದ್ದ. ಉದ್ಯಮಿ ಜಯೇಶ್ ಚುನ್ನಿಲಾಲ್ ಸಾವ್ಲಾ ಮೃತಪಟ್ಟ ಕ್ರಿಕೆಟಿಗ.

ಮಾಟುಂಗಾದ ದಾಡ್ಕರ್ ಮೈದಾನದಲ್ಲಿ ನಡೆಯುತ್ತಿದ್ದ ಕಚ್ಚಿ ವೀಸಾ ಓಸ್ವಾಲ್ ವಿಕಾಸ್ ಹಿರಿಯರ ಲೆಜೆಂಡ್ ಕಪ್ ಟಿ20 ಪಂದ್ಯಾವಳಿಯಲ್ಲಿ ಈ ಘಟನೆ ನಡೆದಿತ್ತು. ಸ್ಥಳಾವಕಾಶದ ಕೊರತೆ ಮತ್ತು ಸಮಯದ ಅಭಾವದಿಂದಾಗಿ ಒಂದೇ ಮೈದಾನದಲ್ಲಿ ಎರಡು ಪಂದ್ಯಗಳನ್ನು ಏಕಕಾಲದಲ್ಲಿ ಆಯೋಜಿಸಲಾಗಿತ್ತು. ಪಕ್ಕದ ಪಿಚ್‌ ನಿಂದ ಬಂದ ಚೆಂಡು ವ್ಯಕ್ತಿಯ ತಲೆಗೆ ಬಡಿದಿದಿತ್ತು. ಮೃತ ವ್ಯಕ್ತಿ ಪಕ್ಕದ ಪಿಚ್​ನಲ್ಲಿ ಆಡುತ್ತಿದ್ದ ಬ್ಯಾಟರ್​ನ ಕಡೆಗೆ ಬೆನ್ನು ಹಾಕಿ ಫೀಲ್ಡಿಂಗ್ ಮಾಡುತ್ತಿದ್ದರು, ಆದ್ದರಿಂದ ಚೆಂಡು ಅವರ ಕಡೆಗೆ ಬರುವುದನ್ನು ನೋಡಲು ಸಾಧ್ಯವಾಗಿರಲಿಲ್ಲ. ನೇರವಾಗಿ ಬಂದ ಚೆಂಡು ಸಾವ್ಲಾ ತಲೆಗೆ ಬಡಿದಿತ್ತು.

ಇದನ್ನೂ ಓದಿ Gadag News: ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

ಹೃದಯಾಘಾತದಿಂದ ಮೈದಾನದಲ್ಲೇ ಮೃತಪಟ್ಟ ಇಂಜಿನಿಯರ್


ಕ್ರಿಕೆಟ್ ಆಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾಫ್ಟ್ ವೇರ್ ಇಂಜಿನಿಯರ್ ಮೈದಾನದಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆ ಕಳೆದ ಡಿಸೆಂಬರ್​ನಲ್ಲಿ ನೋಯ್ಡಾದಲ್ಲಿ ಸಂಭವಿಸಿತ್ತು. ವಿಕಾಸ್ ಅವರು ಸ್ಟ್ರೈಕ್​ನಲ್ಲಿದ್ದ ಸಹ ಬ್ಯಾಟರ್​ ಜತೆ ಮಾತುಕತೆ ನಡೆಸಿ ಹಿಂದಿರುಗುವ ವೇಳೆ ಹಠಾತ್​ ಆಗಿ ಪಿಚ್​ನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದರು.

Continue Reading

ಕ್ರಿಕೆಟ್

MS Dhoni: ಧೋನಿಯ ಕ್ಲೀನ್​ ಬೌಲ್ಡ್​ ಕಂಡು ಬೇಸರಗೊಂಡ ಅಭಿಮಾನಿಗಳು; ವಿಡಿಯೊ ವೈರಲ್​

MS Dhoni: ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಧೋನಿಯ ನಿರ್ಧಾರಕ್ಕೆ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಟೀಕೆ ವ್ಯಕ್ತಪಡಿಸಿದ್ದಾರೆ. ಧೋನಿ 9 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಕ್ಕಿಂತ ಚೆನ್ನೈ ಅವರ ಬದಲಿಗೆ ಮತ್ತೊಬ್ಬ ವೇಗಿಯನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

VISTARANEWS.COM


on

MS Dhoni
Koo

ಧರ್ಮಶಾಲಾ: ಹಿಮಾಲಯದ ತಪ್ಪಲಿನ ರಮಣೀಯ ತಾಣವಾದ ಧರ್ಮಶಾಲಾದಲ್ಲಿ ಭಾನುವಾರ ನಡೆದ ಪಂಜಾಬ್​ ಕಿಂಗ್ಸ್(Punjab Kings)​ ವಿರುದ್ಧದ ಐಪಿಎಲ್(IPL 2024)​ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ 28 ರನ್​ಗಳ ಗೆಲುವು ಸಾಧಿಸಿತು. ಆದರೆ, ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್​ ಧೋನಿ(MS Dhoni) ಮೊದಲ ಎಸೆತದಲ್ಲೇ ಕ್ಲೀನ್​ ಬೌಲ್ಡ್​ ಆಗಿ ಗೋಲ್ಡನ್​ ಡಕ್​(Dhoni golden duck) ಸಂಕಟಕ್ಕೆ ಸಿಲುಕಿದರು. ಇದನ್ನು ಕಂಡು ಅವರ ಅಭಿಮಾನಿಗಳು ಭಾರೀ ನಿರಾಸೆಗೊಂಡರು. ಇದರ ವಿಡಿಯೊ ವೈರಲ್​ ಆಗಿದೆ.

ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ. ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನೋಡಲು ಅಭಿಮಾನಿಗಳು ಕಾಯುತ್ತಿದ್ದರು. ಆದರೆ ಶೂನ್ಯಕ್ಕೆ ಔಟ್​ ಆಗುವ ಮೂಲಕ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಧೋನಿ ಔಟಾಗುತ್ತಿದ್ದಂತೆ ಅವರ ಅಭಿಮಾನಿಗಳು ಬೇಸರದಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತರ. ಈ ವಿಡಿಯೊ ವೈರಲ್​ ಆಗುತ್ತಿದೆ.

ಚೆನ್ನೈ ಬ್ಯಾಟಿಂಗ್​ ಇನಿಂಗ್ಸ್​ನ 19ನೇ ಓವರ್​ನಲ್ಲಿ ಧೋನಿ ಅವರು ಹರ್ಷಲ್​ ಪಟೇಲ್​ ಎಸೆದ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಆದರೆ ಕೀಪಿಂಗ್​ನಲ್ಲಿ ಧೋನಿ ಒಂದು ಸೊಗಸಾದ ಕ್ಯಾಚ್​ ಹಿಡಿದು ಮಿಂಚಿದರು. ಜಿತೇಶ್​ ಶರ್ಮ ಅವರ ಕ್ಯಾಚ್​ ಇದಾಗಿತ್ತು.

ಇದನ್ನೂ ಓದಿ IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

ಹರ್ಭಜನ್​ ಟೀಕೆ


ಈ ಪಂದ್ಯದಲ್ಲಿ ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಧೋನಿಯ ನಿರ್ಧಾರಕ್ಕೆ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಟೀಕೆ ವ್ಯಕ್ತಪಡಿಸಿದ್ದಾರೆ. ಧೋನಿ 9 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಕ್ಕಿಂತ ಚೆನ್ನೈ ಅವರ ಬದಲಿಗೆ ಮತ್ತೊಬ್ಬ ವೇಗಿಯನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯಲ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಿತು. ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌, ಸತತವಾಗಿ ವಿಕೆಟ್‌ ಕಳೆದುಕೊಂಡು ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್‌ ಕಳೆದುಕೊಂಡು 139 ರನ್‌ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

Continue Reading

ಕ್ರೀಡೆ

ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

ICC Women’s T20 World Cup 2024: ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗೆ(ICC Women’s T20 World Cup 2024) ಶ್ರೀಲಂಕಾ(Sri Lanka Women’s T20) ಎರಡನೇ ಕ್ವಾಲಿಫೈಯರ್ ತಂಡವಾಗಿ ಅರ್ಹತೆ ಪಡೆದಿದೆ. ಎರಡನೇ ಸೆಮಿಫೈನಲ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ 15 ರನ್​ ಅಂತರದಿಂದ ಗೆಲುವು ಸಾಧಿಸಿ ಅರ್ಹತೆ ಪಡೆದುಕೊಂಡಿತು.

VISTARANEWS.COM


on

ICC Women’s T20 World Cup 2024
Koo

ದುಬೈ: ಅಕ್ಟೋಬರ್ 3 ರಿಂದ 20 ರವರೆಗೆ ಬಾಂಗ್ಲಾದೇಶದಲ್ಲಿ ನಡೆಯಲಿರುವ ಈ ವರ್ಷದ ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗೆ(ICC Women’s T20 World Cup 2024) ಶ್ರೀಲಂಕಾ(Sri Lanka Women’s T20) ಎರಡನೇ ಕ್ವಾಲಿಫೈಯರ್ ತಂಡವಾಗಿ ಅರ್ಹತೆ ಪಡೆದಿದೆ. ಸ್ಕಾಟ್ಲೆಂಡ್‌ ಮೊದಲ ಕ್ವಾಲಿಫೈಯರ್ ತಂಡವಾಗಿದೆ. ಆತಿಥೇಯ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಜತೆ ಶ್ರೀಲಂಕಾ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಎರಡನೇ ಸೆಮಿಫೈನಲ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ಕಣಕ್ಕಿಳಿದ್ದ ಲಂಕಾ ತಂಡ ಗೆಲುವು ಸಾಧಿಸುವ ಮೂಲಕ ಪ್ರಧಾನ ಸುತ್ತಿಗೆ ಅರ್ಹತೆ ಪಡೆದುಕೊಂಡಿತು. ಮೊದಲು ಬ್ಯಾಟಿಂಗ್​ ನಡೆಸಿದ ಲಂಕಾ 6 ವಿಕೆಟ್​ಗೆ 149 ರನ್​ ಬಾರಿಸಿತು. ಈ ಮೊತ್ತವನ್ನು ದಿಟ್ಟವಾಗಿ ಒಂದು ಹಂತದ ವರೆಗೆ ಬೆನ್ನಟ್ಟಿಕೊಂಡು ಹೋದ ಯುಎಇ 7 ವಿಕೆಟ್​ಗೆ 134 ರನ್​ ಗಳಿಸಿ 15 ರನ್​ ಅಂತರದಿಂದ ಸೋಲೊಪ್ಪಿಕೊಂಡಿತು.

ಈಗಾಗಲೇ ಟೂರ್ನಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ. ಭಾನುವಾರ ಐಸಿಸಿ ಈ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಟೂರ್ನಮೆಂಟ್‌ನಲ್ಲಿ ಪ್ರತಿ ತಂಡವು ನಾಲ್ಕು ಗುಂಪು ಪಂದ್ಯಗಳನ್ನು ಆಡುತ್ತದೆ, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿದೆ. ಸೆಮಿಫೈನಲ್​ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿದೆ. ಫೈನಲ್​ ಪಂದ್ಯ ಅಕ್ಟೋಬರ್​ 20 ರಂದು ಢಾಕಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳನ್ನು ಆಡಲಾಗುತ್ತದೆ. 19 ದಿನ ಪಂದ್ಯಾವಳಿ ಸಾಗಲಿದೆ. ಢಾಕಾ ಮತ್ತು ಸಿಲ್ಹೆಟ್‌ನಲ್ಲಿ ಪಂದ್ಯಗಳು ನಡೆಯಲಿವೆ. ಲೀಗ್​ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನವಿಲ್ಲ. ಕೇಲವ ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮಾತ್ರ ಮೀಸಲು ದಿನ ನಿಗದಿಯಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್​ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿದೆ. ಮತ್ತೊಂದು ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ. ಈ ಪಂದ್ಯ ಅಕ್ಟೋಬರ್​ 3 ರಂದು ನಡೆಯಲಿದೆ. ಎಲ್ಲಾ ಗುಂಪು ಪಂದ್ಯಗಳು ಸಿಲ್ಹೆಟ್‌ನಲ್ಲಿ ನಡೆಯಲಿದೆ. ಭಾರತವು ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.

Continue Reading
Advertisement
pakistan team
ಕ್ರೀಡೆ10 seconds ago

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Gold Rate Today
ಕರ್ನಾಟಕ5 mins ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Puttakkana makkalu sahana dead
ಕಿರುತೆರೆ12 mins ago

Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

Rekha Jhunjhunwala
ವಾಣಿಜ್ಯ14 mins ago

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

viral news
ಕ್ರಿಕೆಟ್29 mins ago

Viral News: ಕ್ರಿಕೆಟ್‌ ಆಡುವಾಗ ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು; ವಿಡಿಯೊ ಇದೆ

Sunita Williams
ವಿದೇಶ45 mins ago

Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Namma Metro
ಬೆಂಗಳೂರು59 mins ago

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

Prajwal Revanna Case Who leaked the pen drive Devaraje Gowda gives evidence to SIT
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ICSE Results 202
ಶಿಕ್ಷಣ2 hours ago

CISCE Results 2024: ಸಿಐಎಸ್‌ಸಿಇಯ 10 & 12ನೇ ತರಗತಿಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

MS Dhoni
ಕ್ರಿಕೆಟ್2 hours ago

MS Dhoni: ಧೋನಿಯ ಕ್ಲೀನ್​ ಬೌಲ್ಡ್​ ಕಂಡು ಬೇಸರಗೊಂಡ ಅಭಿಮಾನಿಗಳು; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ10 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ19 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ21 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ21 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌