Travel Tips: ಹಿಮದೂರುಗಳಲ್ಲಿ ಬದುಕಿನಲ್ಲೊಮ್ಮೆ ಮಾಡಲೇಬೇಕಾದ ಸಾಹಸ ಕ್ರೀಡೆಗಳಿವು! - Vistara News

ಪ್ರವಾಸ

Travel Tips: ಹಿಮದೂರುಗಳಲ್ಲಿ ಬದುಕಿನಲ್ಲೊಮ್ಮೆ ಮಾಡಲೇಬೇಕಾದ ಸಾಹಸ ಕ್ರೀಡೆಗಳಿವು!

ಬೇಸಗೆಯಲ್ಲೂ ಒಂದಷ್ಟು ದಿನ ಚಳಿಗಾಲದ ಸುಖವನ್ನು ಅನುಭವಿಸಬೇಕೆಂದರೆ ನೀವು ಅಂಥ ಜಾಗಗಳನ್ನು ಹುಡುಕಿ ಹೋಗಬೇಕು. ವಿಶೇಷ ಎಂದರೆ, ಸಾಹಸೀ ಪ್ರವೃತ್ತಿಯ ಮಂದಿಗೆ ಇಂಥ ಹಿಮಾಚ್ಛಾದಿತ ಜಾಗಗಳಲ್ಲಿ ಮಜವಾಗಿ ಕಳೆಯಲು ಬೇಕಾದಷ್ಟು ಹಿಮದಾಟಗಳು, ಸಾಹಸಕ್ರೀಡೆಗಳೂ ಲಭ್ಯವಿವೆ. ಜೀವನದಲ್ಲೊಮ್ಮೆ ಹಿಮದೂರಿಗೆ ಹೋದಾಗ ಮಾಡಲೇಬೇಕಾದ ಹಿಮಸಾಹಸ ಕ್ರೀಡೆಗಳು ಇಲ್ಲಿವೆ.

VISTARANEWS.COM


on

skiing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಮಗೆಲ್ಲ ಚಳಿಗಾಲ ಮುಗಿದು ಇನ್ನೇನು ರಣರಣ ಬಿಸಿಲು ಶುರುವಾಗಲು ತಡವೇನೂ ಇಲ್ಲ. ಹಾಗೆಂದ ಮಾತ್ರಕ್ಕೆ ಚಳಿಯೂರುಗಳಿಲ್ಲಿನ್ನೂ ಚಳಿ ಕಡಿಮೆಯಾಗಿದೆ ಅಂದುಕೊಂಡಿರಾ? ಖಂಡಿತ ಇಲ್ಲ. ಹಿಮ ಸುರಿವ ಊರುಗಳಲ್ಲಿನ್ನೂ ಸುರಿದ ಹಿಮ ಕರಗಿಲ್ಲ. ಇನ್ನೂ ಎತ್ತರದ ಪ್ರದೇಶಗಳಿಗೆ ಹೋದಂತೆ ಸುರಿವ ಹಿಮವೂ ಸಿಗಬಹುದು. ಬೇಸಗೆಯಲ್ಲೂ ಒಂದಷ್ಟು ದಿನ ಚಳಿಗಾಲದ ಸುಖವನ್ನು ಅನುಭವಿಸಬೇಕೆಂದರೆ ನೀವು ಅಂಥ ಜಾಗಗಳನ್ನು ಹುಡುಕಿ ಹೋಗಬೇಕು. ವಿಶೇಷ ಎಂದರೆ, ಸಾಹಸೀ ಪ್ರವೃತ್ತಿಯ ಮಂದಿಗೆ ಇಂಥ ಹಿಮಾಚ್ಛಾದಿತ ಜಾಗಗಳಲ್ಲಿ ಮಜವಾಗಿ ಕಳೆಯಲು ಬೇಕಾದಷ್ಟು ಹಿಮದಾಟಗಳು, ಸಾಹಸಕ್ರೀಡೆಗಳೂ ಲಭ್ಯವಿವೆ. ಜೀವನದಲ್ಲೊಮ್ಮೆ ಹಿಮದೂರಿಗೆ ಹೋದಾಗ ಮಾಡಲೇಬೇಕಾದ ಹಿಮಸಾಹಸ ಕ್ರೀಡೆಗಳು ಇಲ್ಲಿವೆ.

೧. ಸ್ಕೀಯಿಂಗ್‌: ಭಾರತದ ಔಲಿ, ಗುಲ್ಮಾರ್ಗ್‌, ಮನಾಲಿ, ಪೆಹೆಲ್ಗಾಂ, ಶಿಮ್ಲಾದಂತಹ ಜಾಗಗಳಲ್ಲಿ ಸ್ಕೀಯಿಂಗ್‌ ಮಾಡಬಹುದು. ಹಿಮದಲ್ಲಿ ಜಾರುವ ಕ್ರೀಡೆಯಾದ ಇದಕ್ಕೆ ಕೊಂಚ ತರಬೇತಿಯ ಅಗತ್ಯವಿರುತ್ತದೆ. ಔಲಿ, ಗುಲ್ಮಾರ್ಗ್‌ನಂತಹ ಜಾಗಗಳಲ್ಲಿ ಇವುಗಳಿಗೆ ಸರಿಯಾದ ತರಬೇತಿ ನೀಡಬಲ್ಲ ಕೋರ್ಸುಗಳೂ, ತರಬೇತಿ ಗೈಡುಗಳೂ ಇದ್ದಾರೆ. ಕೇವಲ ಮಜಾಕ್ಕಾಗಿ ಮಾಡುವುದಾರೆ ಕೇವಲ ಒಂದರ್ಧ ಗಂಟೆ ಕಲಿತು, ಸಾಮಾಗ್ರಿಗಳನ್ನು ಬಾಡಿಗೆಗೆ ಪಡೆದು ಟ್ರೈ ನೋಡುವ ಅವಕಾಶವೂ ಇದೆ. ಆದರೆ, ವೃತ್ತಿಪರವಾಗಿ, ತಾಸುಗಟ್ಟಲೆ ಹಿಮದಲ್ಲಿ ಜಾರಲು ಸಾಕಷ್ಟು ಅಭ್ಯಾಸವೂ ತರಬೇತಿಯೂ ಅಗತ್ಯವಿದೆ.

ice trekking

೨. ಚಾರಣ: ಹಿಮದಲ್ಲಿ ಚಾರಣ ಸಾಮಾನ್ಯ ಚಾರಣಕ್ಕಿಂತ ಭಿನ್ನ. ನೋಡಲು ಹೂವಿನ ಹಾಸಿಗೆಯಂತೆ ಕಂಡರೂ ಹಿಮಪರ್ವತಗಳಲ್ಲಿ ಚಾರಣ ಕಷ್ಟ. ಜಾರುವ ಹಿಮದಲ್ಲಿ ಜಾರದಂತೆ ಬ್ಯಾಲೆನ್ಸ್‌ ಮಾಡಿಕೊಂಡು ಕ್ಲಿಷ್ಟಕರ ಮಾರ್ಗಗಳಲ್ಲಿ ಏರುತ್ತಾ ಸಾಗುವುದು, ಥರಗುಟ್ಟುವ ಚಳಿಯಲ್ಲಿ ಟೆಂಟ್‌ಗಳಲ್ಲಿ ರಾತ್ರಿ ಕಳೆಯುವುದು ಸಾಮಾನ್ಯ ವಿಷಯವೇನಲ್ಲ. ಆದರೆ, ಚಾರಣವನ್ನು ಇಷ್ಟಪಡುವ ಮಂದಿ ಹಿಮದಲ್ಲಿನ ಚಾರಣದ ಅನುಭವ ಪಡೆಯದಿದ್ದರೆ ಬದುಕಿನ್ಲ್ಲಿ ಒಂದು ಒಳ್ಳೆಯ ಅನುಭವ ಮಿಸ್‌ ಮಾಡಿದಂತೆ. ಕ್ವಾರಿ ಪಾಸ್‌, ಕೇದಾರಕಂಠ ಚಾರಣ, ಖಾಲಿಯಾ ಟಾಪ್‌ ಚಾರಣ, ಬ್ರಹ್ಮತಾಲ್‌ ಚಾರಣ ಸೇರಿದಂತೆ ಹಲವಾರು ಹಿಮ ಚಾರಣಗಳನ್ನು ಮಾಡಬಹುದು. ಇದರಲ್ಲಿ ಅನುಭವ ಇರುವ ಮಂದಿಗೆ ಇನ್ನೂ ಕ್ಲಿಷ್ಟಕರ ಹಿಮಚಾರಣಗಳಾದ ಚಾದರ್‌ ಫ್ರೋಜನ್‌ ಲೇಕ್‌ ಚಾರಣ, ನಂದಾದೇವಿ ಚಾರಣ, ಝಂಸ್ಕಾರ್‌ ಚಾರಣ ಮತ್ತಿತರ ಹಲವು ಚಾರಣಗಳನ್ನು ಮಾಡಬಹುದು.

ice skating

೩. ಐಸ್‌ ಸ್ಕೇಟಿಂಗ್‌: ಸ್ಕೇಟಿಂಗ್‌ ರಿಂಕ್‌ಗಳಲ್ಲಿ ನೆಲದ ಮೇಲೆ ಟ್ರ್ಯಾಕ್‌ಗಳಲ್ಲಿ ಮಕ್ಕಳಿಂದ ಹಿಡಿದು ದೊಡ್ಡ್ವರವರೆಗೆ ಸ್ಕೇಟಿಂಗ್‌ ಮಾಡುವುದನ್ನು ನೀವು ನೋಡಿರಬಹದು. ಆದರೆ ಗಟ್ಟಿಯಾದ ಹಿಮದ ನೆಲದ ಮೇಲೆ ಸ್ಕೇಟಿಂಗ್‌ ಮಾಡಿದ್ದೀರಾ? ಇಲ್ಲವೆಂದಾದಲ್ಲಿ ಅದನ್ನೂ ಮಾಡಲು ಇಂಥ ಜಾಗಗಳಲ್ಲಿ ಆಸ್ಪದವಿದೆ.

ice sledging

೪. ಐಸ್‌ ಸ್ಲೆಡ್ಜಿಂಗ್‌: ಸ್ಲೆಡ್ಜಿಂಗ್‌ ಯಾರೂ ಕೂಡಾ ಮಾಡಬಹುದಾದ ಅತ್ಯಂತ ಮಜಾ ಕೊಡುವ ಉಲ್ಲಾಸ ತುಂಬುವ, ನಮ್ಮನ್ನು ಮತ್ತೆ ಬಾಲ್ಯಕಾಲಕ್ಕೆ ಕರೆದೊಯ್ಯುವ ಎಲ್ಲ ಶಕ್ತಿಯನ್ನೂ ಹೊಂದಿದೆ. ಹಿಮದೂರುಗಳಲ್ಲಿ ಜಾರುವ ಮಣೆಗಳಂತಹ ಮರದ ಬೋರ್ಡುಗಳಲ್ಲಿ ಕೂತು ಳಿಜಾರಿನಲ್ಲಿ ಜಾರುತ್ತಾ ಸಾಗುವುದು ಯಾರಿಗೆ ತಾನೇ ಖುಷಿಕೊಡಲಿಕ್ಕಿಲ್ಲ ಹೇಳಿ. ಇದಕ್ಕಾಗಿ, ಔಲಿ, ಗುಲ್ಮಾರ್ಗ್‌ನಂತಹ ಜಾಗಗಳಲ್ಲಿ ಸ್ಲೆಡ್ಜಿಂಗ್‌ ಅವಕಾಶವಿದ್ದು, ಅಲ್ಲಿ ಬಾಡಿಗೆಗೆ ಪಡೆದು ತರಬೇತುದಾರರ ಜೊತೆ ಜಾರುತ್ತಾ ಹಿಮಕಣಿವೆಗಳನ್ನೂ, ಹಿಮಪರ್ವತಗಳನ್ನೂ ಕಣ್ತುಂಬಬಹುದು.

snow boarding

೫. ಸ್ನೋಬೋರ್ಡಿಂಗ್‌: ಸ್ನೋಬೋರ್ಡಿಂಗ್‌ ಇತ್ತೀಚೆಗೆ ಭಾರತದಲ್ಲಿ ಜನಪ್ರಿಯವಾಗುತ್ತಿರುವ ಹಿಮದ ಸಾಹಸಕ್ರೀಡೆ. ಇದರಲ್ಲಿ ಫೈರ್‌ನ ಗ್ಲಾಸ್‌ಬೋರ್ಡನ್ನು ಕಾಲಿಗೆ ಸಿಕ್ಕಿಸಿ, ವಿಶೇಷವಾದ ಶೂಗಳ ಸಹಾಯದಿಂದ ಹಿಮದ ಇಳಿಜಾರಿನಲ್ಲಿ ಜಾರುತ್ತಾ ಸಾಗುವುದು. ಇಲ್ಲಿ ಸ್ಕೀಯಿಂಗ್‌ನ ಬೇಕಾಗುವ ಹಾಗೆ ವಿಶೇಷ ಇಳಿಜಾರೇ ಇರಬೇಕಾಗಿಲ್ಲ. ಎಂತಹ ಇಳಿಜಾರಿನಲ್ಲೂ ಜಾರಿಕೊಂಡು ಸಾಗಬಹುದು. ಇದು ನೋಡಲು ಸರಳ ಸುಲಭವಾಗಿ ಕಂಡರೂ ಕೊಂಚ ತರಬೇತಿ ಹಾಗೂ ಅಭ್ಯಾಸ ಇದಕ್ಕೆ ಬೇಕಾಗುತ್ತದೆ. ಒಮ್ಮೆ ಕಲಿತರೆ ಬಹಳ ಮಜಾ ಪಡೆಯಬಹುದಾದ ಕ್ರೀಡೆಯಿದು.

ಇದನ್ನೂ ಓದಿ: Travel Tips | ನೀವು ಅಲೆಮಾರಿಗಳೇ? ಹೊಸ ಬಗೆಯ ಪ್ರವಾಸಕ್ಕೆ 5 ಅಣಿಮುತ್ತುಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

VISTARANEWS.COM


on

Wonderla Bengaluru
Koo

ಬೆಂಗಳೂರು: ಈ ಬೇಸಿಗೆಯ ಮಜವನ್ನು ಇನ್ನಷ್ಟು ಹೆಚ್ಚಿಸಲು ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ಲಾ (Wonderla Bengaluru) ಬೆಂಗಳೂರು ಪಾರ್ಕ್‌ನಲ್ಲಿ ‘ಸಮ್ಮರ್‌ಲಾ ಫಿಯೆಸ್ಟಾ’ (Summer Fiesta 2024) ನಡೆಸುತ್ತಿದ್ದು, ಮೇ 31 ರವರೆಗೂ ಇರಲಿದೆ. ಸಮ್ಮರ್‌ಲಾ ಫಿಯೆಸ್ಟಾದಲ್ಲಿ ಸಾಕಷ್ಟು ಆಫರ್‌ಗಳು ನಿಮ್ಮನ್ನು ಕೈ ಬೀಸಿ ಕರೆಯುತ್ತಿದ್ದು, ಅನೇಕ ಮೋಜಿನ ರೈಡ್‌, ವಾಟರ್‌ ಗೇಮ್‌ಗಳು, ಫುಡ್‌-ಫೆಸ್ಟಿವಲ್‌, ಡಿಜೆ ಮ್ಯೂಸಿಕ್‌ ಸೇರಿದಂತೆ ಅನೇಕ ವಿಶೇಷತೆಗಳು ಈ ಸಮ್ಮರ್‌ಲಾದಲ್ಲಿ ಇರಲಿವೆ. ಇದಲ್ಲದೆ, ಡೊಳ್ಳು ಕುಣಿತ, ಚಿಂಗಾರಿ ಮೇಳಗಳಂತಹ ವಿಶೇಷ ಸಾಂಸ್ಕೃತಿಕ ಪ್ರದರ್ಶನ ಹಾಗೂ ಮೆರವಣಿಗೆ ಇರಲಿವೆ. ವಾರಾಂತ್ಯದಲ್ಲಿ ನಿಮ್ಮನ್ನು ಇನ್ನಷ್ಟು ಉತ್ಸಾಹಿಗಳನ್ನಾಗಿ ಮಾಡಲು ಡಿಜೆ ಮ್ಯೂಸಿಕ್‌ ಸಹ ಆಯೋಜಿಸಲಾಗುತ್ತಿದೆ.

ಇನ್ನು ಭಾನುವಾರದಂದು ವಂಡರ್‌ಲಾ ರೆಸಾರ್ಟ್‌ನಲ್ಲಿ ಬೇಸಿಗೆಯ ಬ್ರಂಚ್‌ ಸಹ ಇರಲಿದೆ. ಈ ಎಲ್ಲಾ ಮನರಂಜನೆಗಳ ಮೇಲೂ ಸಾಕಷ್ಟು ರಿಯಾಯಿತಿ ಹಾಗೂ ಆಫರ್‌ಗಳು ಇದ್ದು, ಆಸಕ್ತರು ಭಾಗಿಯಾಗಿ ಈ ಬೇಸಿಗೆ ರಜೆಯನ್ನು ಇನ್ನಷ್ಟು ಸಂತಸದಿಂದ ಕಳೆಯಬಹುದು. ಈ ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಲ್ಲಿ ಲಭ್ಯವಿರಲಿದೆ. ಪಾರ್ಕ್‌ನಲ್ಲಿ ಈಗ ಲಭ್ಯವಿರುವ ಹೊಸ ವಿಶೇಷ ಪಾನೀಯ ಕೌಂಟರ್‌ಗಳೊಂದಿಗೆ ಈ ಬೇಸಿಗೆಯ ಶಾಖವನ್ನು ತಣಿಸಲು ತಾಜಾ ಹಣ್ಣಿನ ಜ್ಯೂಸ್‌ಗಳು, ಋತುವಿನ ಅತ್ಯುತ್ತಮ ಆಮ್ರಾಸ್‌, ತಂಪಾದ ಮಜ್ಜಿಗೆ ಮತ್ತು ಬೇಸಿಗೆಯ ಪಾನೀಯಗಳು ಲಭ್ಯವಿರಲಿದೆ.

ಇದನ್ನೂ ಓದಿ | E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

ಆಫರ್‌ಗಳ ವಿವರ ಇಲ್ಲಿದೆ

  • ವಂಡರ್‌ಲಾಗೆ ಭೇಟಿ ನೀಡಲು ಬಯಸುವವರಿಗೆ Early Bird ಹೆಸರಿನಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ. ಈ ಕೊಡುಗೆ(Offer) ಪಡೆಯಲು ಮೂರು ದಿನಗಳ ಮುಂಚಿತವಾಗಿ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬುಕ್‌ ಮಾಡಿಕೊಳ್ಳಬೇಕು.
  • ಜನ್ಮದಿನದ ಆಫರ್‌, ವಿಶೇಷವಾಗಿ ಮೇ ತಿಂಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವವರಿಗೆ 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಉಚಿತವಾಗಿ ಸಿಗಲಿದೆ.
  • ಇನ್ನು, ವಿದ್ಯಾರ್ಥಿಗಳಿಗಾಗಿ ಹಾಲ್ ಟಿಕೆಟ್ ಆಫರ್ ಸಹ ಚಾಲ್ತಿಯಲ್ಲಿದೆ. 2023-2024ರ ಶೈಕ್ಷಣಿಕ ವರ್ಷದ 10ನೇ, 11ನೇ ಮತ್ತು 12ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಮೂಲ ಪರೀಕ್ಷೆಯ ಹಾಲ್ ಟಿಕೆಟ್‌ಗಳನ್ನು ಪ್ರಸ್ತುತಪಡಿಸಿ ಪಾರ್ಕ್ ಪ್ರವೇಶ ಟಿಕೆಟ್‌ಗಳ ಮೇಲೆ ಶೇ. 35ರಷ್ಟು ರಿಯಾಯಿತಿಯನ್ನು ಪಡೆಯಬಹುದು.
  • ವಂಡರ್‌ಲಾ ಕಾಲೇಜು ವಿದ್ಯಾರ್ಥಿಗಳಿಗೆ (16-24 ವರ್ಷ ವಯಸ್ಸಿನವರು) ತಮ್ಮ ಕಾಲೇಜು ಐಡಿ ಕಾರ್ಡ್‌ಗಳನ್ನು ಪ್ರಸ್ತುತಪಡಿಸಿದರೆ ಶೇ. 25ರಷ್ಟು ರಿಯಾಯಿತಿ ಪಡೆಯಲಿದ್ದಾರೆ, ಜೊತೆಗೆ, ವಿದ್ಯಾರ್ಥಿಗಳು ಆಹಾರ ಆಯ್ಕೆಗಳನ್ನು ಒಳಗೊಂಡಿರುವ ಕಾಂಬೊ ಪ್ಯಾಕೇಜ್‌ಗಳನ್ನು ಸಹ ಪಡೆಯಬಹುದು. ಆರಂಭಿಕ ಅರ್ಲಿ ಬರ್ಡ್‌ ಕೊಡುಗೆಯನ್ನು ಹೊರತುಪಡಿಸಿ, ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಗೆ ಮಾನ್ಯವಾಗಿರುತ್ತವೆ. ಅತಿಥಿಗಳು ತಮ್ಮ ವಂಡರ್ಲಾ ಸಮ್ಮರ್ಲಾ ಫಿಯೆಸ್ಟಾ ಭಾಗವಾಗಿ ಮೇ 31 ರವರೆಗೆ ಪ್ರತಿ ಶನಿವಾರ ನಡೆಯುವ ವಂಡರ್ಲಾ ವಿಶೇಷ ಪೂಲ್ ಪಾರ್ಟಿಗಳೊಂದಿಗೆ ಭಾಗವಹಿಸಬಹುದು.

ಈ ಕುರಿತು ಮಾತನಾಡಿದ ವಂಡರ್‌ಲಾ ಹಾಲಿಡೇಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ. ಚಿಟ್ಟಿಲಪ್ಪಿಳ್ಳಿ, ಬೇಸಿಗೆ ರಜೆಯನ್ನು ಇನ್ನಷ್ಟು ಉತ್ಸಾಹ ಭರಿತವನ್ನಾಗಿದಲು ವಂಡರ್‌ಲಾ “ಸಮ್ಮರ್ಲಾ ಫಿಯೆಸ್ಟಾ’ ಆಯೋಜಿಸಿದೆ. ಈ ಸಮ್ಮರ್ಲಾದಲ್ಲಿ ಇಡೀ ಕುಟುಂಬಗಳು, ಕಾಲೇಜು ಸ್ನೇಹಿತರು, ಮಕ್ಕಳು ಎಲ್ಲರೂ ತಮ್ಮ ಪ್ರೀತಿಪಾತ್ರರೊಂದಿಗೆ ಆಗಮಿಸಿ, ಆನಂದಿಸಬಹುದು.

ಸಮ್ಮರ್‌ಲಾ ಭಾಗವಾಗಿ ಫುಡ್‌ಫೆಸ್ಟಿವಲ್‌, ಸಾಂಸ್ಕೃತಿಕ ಮೆರವಣಿಗೆ, ಡಿಜೆ ಮ್ಯೂಸಿಕ್‌ ಸೇರಿದಂತೆ ಇನ್ನೂ ಅನೇಕ ಮನರಂಜನೆಗಳು ಇರಲಿವೆ. ಈ ಎಲ್ಲಾ ಮನರಂಜನೆಯೊಂದಿಗೆ ನಿಮ್ಮ ಸವಿನೆನಪನ್ನು ಅಚ್ಚಳಿಯದಂತೆ ಮಾಡುವುದೇ ನಮ್ಮ ವಂಡರ್‌ಲಾದ ಪ್ರಮುಖ ಉದ್ದೇಶ ಎಂದು ಹೇಳಿದರು.

ವಂಡರ್‌ಲಾ ಆನ್‌ಲೈನ್ ಪೋರ್ಟಲ್ ಮೂಲಕ ಅಥವಾ ನೇರವಾಗಿ ಪಾರ್ಕ್ ಕೌಂಟರ್‌ಗಳಲ್ಲಿ ಟಿಕೆಟ್‌ಗಳನ್ನು ಮುಂಗಡವಾಗಿ ಬುಕ್ ಮಾಡುವ ಮೂಲಕ ಸಮ್ಮರ್ಲಾವನ್ನು ಆನಂದಿಸಿ.

ಇದನ್ನೂ ಓದಿ | Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

ಹೆಚ್ಚಿನ ಮಾಹಿತಿ ಮತ್ತು ಬುಕಿಂಗ್‌ಗಳಿಗಾಗಿ, www.wonderla.com ಗೆ ಭೇಟಿ ನೀಡಿ ಅಥವಾ +91 80372 30333, +91 80350 73966 ಅನ್ನು ಸಂಪರ್ಕಿಸಿ.

Continue Reading

ಪ್ರವಾಸ

Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

Summer Tour: ಕಾಶ್ಮೀರಕ್ಕೆ ಭೇಟಿ ನೀಡಲು ಈಗ ಸೂಕ್ತ ಸಮಯ. ಹಿಮದಿಂದ ಆವೃತವಾದ ಸುಂದರ ಭೂದೃಶ್ಯಗಳನ್ನು ಈಗ ಇಲ್ಲಿ ಕಣ್ತುಂಬಿಕೊಳ್ಳಬಹುದು. ಇದಕ್ಕಾಗಿ ಐಆರ್ ಟಿಸಿ ಯು ‘ಕಾಶ್ಮೀರ್ ಹೆವೆನ್ ಆನ್ ಅರ್ಥ್ ಎಕ್ಸ್ ಮುಂಬೈ’ ಪ್ಯಾಕೇಜ್ ಘೋಷಿಸಿದೆ. ಆಸಕ್ತರು ಇದರ ಪ್ರಯೋಜನವನ್ನು ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Summer Tour
Koo

ಧರೆಯ ಮೇಲಿನ ಸ್ವರ್ಗ ಎಂದೇ ಕರೆಯಲ್ಪಡುವ ಕಾಶ್ಮೀರಕ್ಕೆ (kashmir) ಪ್ರವಾಸ (tour) ಹೊರಡಲು ಈಗ ಸೂಕ್ತ ಸಮಯ. ಬೇಸಿಗೆಯ ಬಿಸಿಲಿನಿಂದ (Summer Tour) ಕಂಗೆಟ್ಟ ಜನರು ತಂಪಾದ ಪ್ರದೇಶದಲ್ಲಿ ಹೋಗಿ ಕೆಲ ಕಾಲ ಇದ್ದು ಬರಬೇಕು ಎಂದು ಬಯಸಿದರೆ ಐಆರ್ ಟಿಸಿ (IRTC) ವತಿಯಿಂದ ಟೂರ್ ಪ್ಯಾಕೇಜ್ ಘೋಷಣೆಯಾಗಿದೆ. ಆಸಕ್ತರು ಬ್ಯಾಗ್ ಪ್ಯಾಕ್ ,ಮಾಡಿ ಹೊರಡಲು ಸಿದ್ಧತೆ ನಡೆಸಬಹುದು.

ಇತ್ತೀಚೆಗೆ ಕಾಶ್ಮೀರದಲ್ಲಿ ಸಂಭವಿಸಿದ ಹಿಮಪಾತವು ಕಣಿವೆ ಪ್ರದೇಶಕ್ಕೆ ಸಂಪೂರ್ಣವಾಗಿ ಬಿಳಿ ಬಣ್ಣ ಎರಕ ಹೊಯ್ದಂತೆ ಮಾಡಿದೆ. ಇದು ಪ್ರವಾಸೋದ್ಯಮ ಕ್ಷೇತ್ರದ ಉತ್ಸಾಹವನ್ನು ಪುನರುಜ್ಜೀವನಗೊಳಿಸಿದೆ. ಈಗಾಗಲೇ ಅನೇಕ ಪ್ರವಾಸಿಗರು ಕಾಶ್ಮೀರಕ್ಕೆ ಹೊರಡುವ ಯೋಜನೆ ಹಾಕಿಕೊಳ್ಳುತ್ತಿದ್ದಾರೆ. ಮೋಡಿ ಮಾಡುವ ಭೂದೃಶ್ಯಗಳನ್ನು ಕಣ್ತುಂಬಿ ಕೊಳ್ಳಲು ಪ್ರವಾಸಿಗರ ಆಗಮನಕ್ಕೆ ಕಾಶ್ಮೀರವೂ ಕಾಯುವಂತಿದೆ.

ಪ್ರವಾಸಿಗರ ಉತ್ಸಾಹವನ್ನು ಹೆಚ್ಚಿಸಲು ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC)ವು ‘ಕಾಶ್ಮೀರ್ ಹೆವೆನ್ ಆನ್ ಅರ್ಥ್ ಎಕ್ಸ್ ಮುಂಬೈ’ ಎಂಬ ಹೊಸ ಪ್ರವಾಸ ಪ್ಯಾಕೇಜ್ ಅನ್ನು ಹೊರತಂದಿದೆ.


ಇದನ್ನೂ ಓದಿ: Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

ಈ ಪ್ಯಾಕೇಜ್ ಕಾಶ್ಮೀರದ ರಮಣೀಯ ಸೌಂದರ್ಯವನ್ನು ಅನ್ವೇಷಿಸಲು ಬಯಸುವವರಿಗೆ ಹೇಳಿ ಮಾಡಲ್ಪಟ್ಟಿದೆ. ಐದು ರಾತ್ರಿ ಮತ್ತು ಆರು- ದಿನಗಳ ಸಮಗ್ರ ಪ್ಯಾಕೇಜ್ ನಲ್ಲಿ ಶ್ರೀನಗರ, ದೂದ್ ಪೆಟ್ರಿ, ಗುಲ್ಮಾರ್ಗ್, ಪಹಲ್ಗಾಮ್ ಮೊದಲಾದ ಪ್ರಸಿದ್ಧ ಸ್ಥಳಗಳನ್ನು ಒಳಗೊಂಡಿದೆ. ಈ ಪ್ಯಾಕೇಜ್ ನಲ್ಲಿ ವಿಮಾನ ಟಿಕೆಟ್‌ಗಳು, ಹೊಟೇಲ್ ವಸತಿ, ಊಟ ಮತ್ತು ಪ್ರಯಾಣ ವಿಮೆಯನ್ನು ಒಳಗೊಂಡಿದೆ. ಪ್ರಯಾಣಿಕರ ಸಂಖ್ಯೆ ಮತ್ತು ಅವರೊಂದಿಗೆ ಬರುವ ಮಕ್ಕಳ ವಯಸ್ಸನ್ನು ಪರಿಗಣಿಸಿ ವಿಭಿನ್ನ ಪ್ರಯಾಣದ ಅನುಭವಕ್ಕೆ ಸರಿಹೊಂದಿಸಲು ಬೆಲೆಗಳನ್ನು ನಿಗದಿಪಡಿಸಲಾಗಿದೆ.


ಪ್ರವಾಸದ ದಿನ

ಮೇ ತಿಂಗಳಲ್ಲಿ 11, 15, 18, 25 ಜೂನ್ ತಿಂಗಳಲ್ಲಿ 1, 9, 15, 23, 26ರಂದು ಪ್ರವಾಸ ಹೊರಡುವ ಯೋಜನೆ ರೂಪಿಸಿಕೊಳ್ಳಬಹುದು. ಹೊಟೇಲ್ ವಾಸ್ತವ್ಯ ನಾಲ್ಕು ರಾತ್ರಿ ಶ್ರೀನಗರದಲ್ಲಿ ಮತ್ತು ಒಂದು ರಾತ್ರಿ ಪಹಲ್ಗಾಮ್ ನಲ್ಲಿ.

ದರ ಇಂತಿದೆ

ಒಬ್ಬರಿಗೆ 63,400 ರೂ., ಇಬ್ಬರಿಗೆ ಪ್ಯಾಕೇಜ್ ನಡಿಯಲ್ಲಿ ತಲಾ 54,100, ಮೂವರಿಗೆ ತಲಾ 50,700, 5 ರಿಂದ 11 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ 48,400 ರೂ. ನಿಗದಿಪಡಿಸಲಾಗಿದೆ.

ಪ್ರವಾಸಿ ತಾಣಗಳು

ಟೂರ್ ಪ್ಯಾಕೇಜ್ ನಲ್ಲಿ ಶ್ರೀನಗರ, ದೂದ್ ಪೆಟ್ರಿ, ಗುಲ್ಮಾರ್ಗ್, ಪಹಲ್ಗಾಮ್ ಸುಪ್ರಸಿದ್ದ ತಾಣಗಳಿಗೆ ಭೇಟಿ ನೀಡಲಾಗುತ್ತದೆ. ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ಪಹಲ್ಗಾಮ್ , ಬೇತಾಬ್ ವಾಲಿ, ಅರು ವಾಲಿ ಮತ್ತು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮೊದಲ ದಿನ ಭೇಟಿ ನೀಡಲಾಗುತ್ತದೆ. ಎರಡನೇ ದಿನ ದಾಲ್ ಸರೋವರದ ದಡದಲ್ಲಿರುವ ಹಾಜ್ರತ್ ಬಾಲ್ ಶ್ರೀನಿ ಗೆ ಭೇಟಿ ನೀಡಲಾಗುತ್ತದೆ. ಮೂರನೇ ದಿನ ಅವಂತೀಪುರ್, ಮೊಘಲ್ ಗಾರ್ಡನ್, ಶಂಕರಾಚಾರ್ಯ ಟೆಂಪಲ್, ಶಿಖರ ರೈಡ್ ಅನ್ನು ಒಳಗೊಂಡಿರುತ್ತದೆ. ನಾಲ್ಕನೇ ದಿನ ದೂದ್ ಪೆಟ್ರಿಯಲ್ಲಿ , ಐದನೇ ದಿನ ಗುಲ್ಮಾರ್ಗ್ ನಲ್ಲಿ ಕಳೆಯಲಾಗುತ್ತದೆ. ಆರನೇ ದಿನ ವಿಮಾನದಲ್ಲಿ ಮುಂಬಯಿ ತಲುಪುವುದರೊಂದಿಗೆ ಪ್ರವಾಸ ಕೊನೆಗೊಳ್ಳುತ್ತದೆ.

Continue Reading

ಪ್ರವಾಸ

Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

Jammu Tour: ಸೆಕೆಯ ತಾಪದಿಂದ ಒಂದೊಂದು ದಿನಕಳೆಯುವುದು ಕಷ್ಟ ಎನ್ನುವವರು ಜುಮ್ಮುವಿನ ಈ ಸ್ಥಳಗಳಿಗೆ ತಪ್ಪದೇ ಭೇಟಿ ನೀಡಿ. ಇಲ್ಲಿನ ವಿಸ್ತಾರವಾದ ಕಾಡುಗಳು, ಪುರಾತನ ದೇವಾಲಯಗಳು ಹಿಮದಿಂದ ಆವೃತವಾದ ಪರ್ವತ ಶಿಖರಗಳು ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಈ ಪ್ರವಾಸಿ ತಾಣಗಳ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Jammu Tour
Koo

ಬೆಂಗಳೂರು: ಎತ್ತರದ ಹಿಮಾಲಯದ ತಪ್ಪಲಿನಲ್ಲಿರುವ ಜಮ್ಮು ತುಂಬಾ ಚಳಿಯಿಂದ ಕೂಡಿದ ಪ್ರದೇಶವಾಗಿದೆ. ಹಾಗಾಗಿ ಬೇಸಿಗೆಯಲ್ಲಿ ಬಿಸಿಲಿನ ಬೇಗೆಯಿಂದ ಬೆಂದು ಹೋದವರು ಎಸಿಯಲ್ಲಿ ಕುಳಿತು ಕಾಲ ಕಳೆಯುವ ಬದಲು ಈ ಸ್ಥಳಕ್ಕೆ ಪ್ರಯಾಣ ಬೆಳೆಸಬಹುದು. ಇಲ್ಲಿನ ವಿಸ್ತಾರವಾದ ಕಾಡುಗಳು, ಪುರಾತನ ದೇವಾಲಯಗಳು ಹಿಮದಿಂದ ಆವೃತವಾದ ಪರ್ವತ ಶಿಖರಗಳು ನಿಮ್ಮನ್ನು ಮೋಡಿ ಮಾಡುವುದಂತು ಸತ್ಯ. ಹಾಗಾಗಿ ಜಮ್ಮುವಿಗೆ ಪ್ರಯಾಣ (Jammu Tour) ಬೆಳೆಸುವವರು ಈ ಸ್ಥಳಗಳಿಗೆ ಭೇಟಿ ನೀಡಿ ಮತ್ತು ಈ ವಿಚಾರಗಳನ್ನು ತಿಳಿದುಕೊಂಡಿರಿ.

ಆಧ್ಯಾತ್ಮಿಕ ಸಾರ

ಅನೇಕ ಧರ್ಮಗುರುಗಳ ತವರೂರಾದ ಜಮ್ಮು ತನ್ನ ಸಂಸ್ಕೃತಿಯನ್ನು ಪ್ರದರ್ಶಿಸುವಂತಹ ಇಸ್ಲಾಮಿಕ್ ದರ್ಗಾಗಳು ಮತ್ತು ಸಿಖ್ ಗುರುದ್ವಾರಗಳ ಜೊತೆಗೆ ಪ್ರಸಿದ್ಧ ಹಿಂದೂ ದೇವಾಲಯಗಳನ್ನು ಹೊಂದಿದೆ. ಇಲ್ಲಿನ ರಘುನಾಥ ದೇವಾಲಯದ ಸಂಕೀರ್ಣವು ಉತ್ತರ ಭಾರತದ ಅತಿದೊಡ್ಡ ದೇವಾಲಯದ ಸಂಕೀರ್ಣಗಳಲ್ಲಿ ಒಂದಾಗಿದೆ. ಇದು ಎತ್ತರದ ಗೋಪುರಗಳನ್ನು ಹೊಂದಿದೆ. ಅಲ್ಲದೇ ಇಲ್ಲಿನ ಬಾವೆ ವಾಲಿ ಮಾತಾ ದೇವಸ್ಥಾನ ಮತ್ತು ಪೀರ್ ಬಾಬಾ ದೇವಾಲಯ ಭಕ್ತರನ್ನು ಆಕರ್ಷಿಸುತ್ತದೆ.

Vaishno Devi Yatra Jammu

ದೈವಿಕ ವೈಷ್ಣೋದೇವಿ ಯಾತ್ರೆ

ತ್ರಿಕೂಟ ಬೆಟ್ಟ ಗಳಲ್ಲಿರುವ ಮಾತಾ ವೈಷ್ಣೋದೇವಿಯ ಪವಿತ್ರ ಗುಹೆಯ ದೇಗುಲಕ್ಕೆ ಚಾರಣ ಮಾಡುವುದು ಭಾರತದ ಅತ್ಯಂತ ಪೂಜ್ಯ ತೀರ್ಥಯಾತ್ರೆಗಳಲ್ಲಿ ಒಂದು ಎನ್ನಬಹುದು. ಇಲ್ಲಿಗೆ ಪ್ರತಿವರ್ಷ ಲಕ್ಷಾಂತರ ಜನರು ಬಂದು ತಮ್ಮ ದೀರ್ಘ ಪ್ರಯಾಣದ ಮೂಲಕ ಭಕ್ತಿಯನ್ನ ಸಾರುತ್ತಾರೆ. ತೀರ್ಥಯಾತ್ರೆಯ ಸಮಯದಲ್ಲಿ ಈ ಸ್ಥಳದಲ್ಲಿ ಯಾವುದೇ ಸಮಸ್ಯೆಯಾಗುವುದನ್ನು ತಡೆಯಲು ಅಧಿಕಾರಿಗಳನ್ನು ನೀಮಿಸಲಾಗುತ್ತದೆ. ಅವರು ಭದ್ರತಾ ಕ್ರಮಗಳನ್ನು ನೋಡಿಕೊಳ್ಳುತ್ತಾರೆ.

Jammu navaratri

ಸಂಸ್ಕೃತಿ ಮತ್ತು ಹಬ್ಬಗಳು

9 ದಿನಗಳ ನವರಾತ್ರಿ ಉತ್ಸವವನ್ನು ಜಮ್ಮುವಿನಾದ್ಯಂತ ವಿವಿಧ ದೇವಾಲಯಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಸಮಯದಲ್ಲಿ ಮೇಳಗಳನ್ನು ನಡೆಸಲಾಗುತ್ತದೆ. ಸ್ಥಳೀಯ ನೃತ್ಯಗಳು, ಸಂಗೀತ ಮತ್ತು ಕರಕುಶಲ ವಸ್ತುಗಳ ಪ್ರದರ್ಶನೆ ಪ್ರವಾಸಿಗರನ್ನು ಆಕರ್ಷಿಸುತ್ತದೆ. ನವೆಂಬರ್ ನಲ್ಲಿ ಕಲಾಕೇಂದ್ರವು ವಾರ್ಷಿಕ ಜಮ್ಮು ಉತ್ಸವವನ್ನು ಆಯೋಜಿಸುತ್ತದೆ.

Kesar Fenni

ಫ್ಯೂಷನ್ ಆಹಾರ

ಜಮ್ಮುವಿನ ಪಾಕಪದ್ಧತಿಯು ಪಂಜಾಬ್, ಕಾಶ್ಮೀರ ಮತ್ತು ದಕ್ಷಿಣ ಭಾರತ ಸೇರಿದಂತೆ ದೇಶದ ವಿವಿಧ ಭಾಗಗಳ ರುಚಿಗಳನ್ನು ಹೊಂದಿರುತ್ತದೆ. ನೀವು ಇಲ್ಲಿಗೆ ಭೇಟಿ ನೀಡಿದರೆ ರಾಜ್ಮಾ-ಅಕ್ಕಿ, ಚೋಲೆ-ಪುರಿಮತ್ತು ಕುಲ್ಚಾದಂತಹ ವಿಶೇಷ ತಿಂಡಿಗಳ ರುಚಿ ಸವಿಯುವುದನ್ನು ಮರೆಯಬೇಡಿ. ಇದಲ್ಲದೇ ಫಿರ್ನಿ(ಅಕ್ಕಿ ಕಡುಬು), ಗುಡ್ ಪಾಪ್ಡಿ ಮತ್ತು ಕಳಾರಿಯಂತಹ ಭಕ್ಷ್ಯಗಳನ್ನು ಕೇಸರ್ ಗುಲ್ಶನ್‌ನ ಪ್ರಸಿದ್ಧ ಕೇಸರಿ ಚಹಾ ಅಥವಾ ಕಾಶ್ಮೀರಿ ಕಹ್ವಾದೊಂದಿಗೆ ಸವಿಯಿರಿ.

ಪ್ರಕೃತಿಯ ಅದ್ಭುತ

ಜಮ್ಮುವಿನ ಸಮೀಪದಲ್ಲಿರುವ ಪಟ್ನಿಟಾಪ್ ಗಿರಿಧಾಮವು ಬೇಸಿಗೆಯಲ್ಲಿ ಅಥವಾ ಚಳಿಗಾಲದಲ್ಲಿ ಪ್ರವಾಸಿಗರಿಗೆ ಕಾಲ ಕಳೆಯಲು ಉತ್ತಮ ಸ್ಥಳವಾಗಿದೆ. ಇಲ್ಲಿ ಪ್ಯಾರಾಗ್ಲೈಡಿಂಗ್ ಮತ್ತು ಸ್ಕೀಯಿಂಗ್ ನಂತಹ ಚಟುವಟಿಕೆಗಳನ್ನು ನೀಡಲಾಗುತ್ತದೆ. ಇಲ್ಲಿನ ಸನ್ಸಾರ್ ಮತ್ತು ಮನ್ಸಾರ್ ಸರೋವರದಲ್ಲಿ ನೀವು ಕ್ಯಾಂಪಿಂಗ್ ಮತ್ತು ಬೋಟಿಂಗ್ ಮಾಡಬಹುದು.

Badamwari Garden in Srinagar, Jammu and Kashmir

ಐತಿಹಾಸಿಕ ತಾಣಗಳು

ತಾವಿ ನದಿಯ ಮೇಲಿರುವ ಬಹು ಕೋಟೆಯು ಜಮ್ಮುವಿನ ವಿಶೇಷವಾದ ಐತಿಹಾಸಿಕ ತಾಣವಾಗಿದೆ. ಇಲ್ಲಿ ಹಲವಾರು ಹಿಂದೂ ದೇವಾಲಯಗಳಿವೆ. ಜೊತೆಗೆ ಸ್ಮಾರಕ, ಆಹಾರ ಪದಾರ್ಥಗಳವರೆಗೆ ಎಲ್ಲವನ್ನೂ ಮಾರಾಟ ಮಾಡುವಂತಹ ಅಂಗಡಿಗಳನ್ನ ಹೊಂದಿದೆ. ಇಲ್ಲಿ ಪಾಳು ಬಿದ್ದಿರುವ ಸಿಮ್ಥಾನ್ ಶಿಖರವನ್ನು ಏರಿದರೆ ಜಲಚರಗಳು ಮತ್ತು ಕಲ್ಲಿನ ಕಟ್ಟಡಗಳನ್ನು ನೋಡಬಹುದು.

Jammu

ಟ್ರಾವೆಲ್ ಪಾಯಿಂಟರ್ಸ್

ಜಮ್ಮುವಿಗೆ ಪ್ರಯಾಣಿಸಲು ಬಯಸುವವರು ದೆಹಲಿ , ಶ್ರೀನಗರ, ಮುಂಬೈ ಮತ್ತು ಅಮೃತಸರದಂತಹ ಪ್ರಮುಖ ನಗರಗಳಿಂದ ನೇರ ವಿಮಾನಗಳ ವ್ಯವಸ್ಥೆಯಿದೆ. ಹಾಗೇ ರಾಷ್ಟ್ರೀಯ ಹೆದ್ದಾರಿಗಳ ಮೂಲಕ ಪ್ರವಾಣಿಸುವವರಿಗೆ ಖಾಸಗಿ ಮತ್ತು ರಾಜ್ಯ ಸಾರಿಗೆ ಬಸ್ಸುಗಳ ವ್ಯವಸ್ಥೆ ಇದ್ದು, ಇವು ಹಿಮಾಚಲ ಪ್ರದೇಶದ ಹತ್ತಿರದ ಪ್ರವಾಸಿ ತಾಣಗಳಲ್ಲಿ ಕಾರ್ಯ ನಿರ್ವಹಿಸುತ್ತದೆ.

ಇದನ್ನೂ ಓದಿ: Travel Time: ಸಮುದ್ರದಲ್ಲೇ ಜೀವನ; ಹೊಸ ಬಗೆಯ ಅಲೆಮಾರಿ ಪ್ರವಾಸಿ ದಂಪತಿ ಇವರು!

ಜಮ್ಮುವಿಗೆ ಪ್ರಯಾಣಿಸುವವರು ನೆನಪಿಡಬೇಕಾದ ವಿಷಯಗಳು

ನೀವು ಜಮ್ಮುವಿಗೆ ಪ್ರಯಾಣ ಬೆಳೆಸುವಾಗ ನಿಮ್ಮ ಐಡಿ ಕಾರ್ಡ್ ಗಳನ್ನು ತೆಗೆದುಕೊಂಡು ಹೋಗಿ. ಹಾಗೇ ರಾತ್ರಿಯ ಸಮಯದಲ್ಲಿ ಪ್ರಯಾಣಿಸುವವರು ನಿರ್ಜನ ಪ್ರದೇಶದಲ್ಲಿ ಮತ್ತು ಮಂದ ಬೆಳಕಿರುವ ಕಾಲುದಾರಿಗಳಲ್ಲಿ ಸಾಗುವಾಗ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ. ಸಾಧಾರಣ ಉಡುಪುಗಳನ್ನು ಧರಿಸಿ. ಇಲ್ಲಿನ ಪವಿತ್ರ ಸ್ಥಳಗಳಿಗೆ ಪ್ರವೇಶಿಸುವಾಗ ನಿಮ್ಮ ಪಾದರಕ್ಷೆಗಳನ್ನು ಹೊರಗೆ ಬಿಚ್ಚಿಡಿ. ಹಾಗೇ ಯಾವುದೇ ಸ್ಥಳೀಯ ಅಥವಾ ಅಧಿಕೃತ /ಮಿಲಿಟರಿ ಸಂಸ್ಥೆಗಳ ಫೋಟೊಗಳನ್ನು ಕ್ಲಿಕ್ಕಿಸುವ ಮುನ್ನ ಅನುಮತಿ ಪಡೆಯಿರಿ.

Continue Reading

ಪ್ರವಾಸ

E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

E-Pass Mandatory: ಬೇಸಿಗೆಯಲ್ಲಿ ಬೆಟ್ಟ ಗುಡ್ಡಗಳಿರುವ ತಂಪಾದ ಪ್ರದೇಶದಲ್ಲಿ ಸುತ್ತಾಡಬೇಕು ಎನ್ನುವ ಆಸೆಯಿಂದ ಊಟಿ, ಕೊಡೈಕೆನಾಲ್‌ ಗೆ ಪ್ರವಾಸ ಹೊರಡುವ ಯೋಜನೆ ಇದ್ದರೆ ಕೂಡಲೇ ಇ ಪಾಸ್ ಪಡೆಯಿರಿ.

VISTARANEWS.COM


on

By

E-Pass Mandatory
Koo

ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟು ಎಲ್ಲಾದರೂ ತಂಪಾದ ಪ್ರದೇಶಗಳಲ್ಲಿ ಸುತ್ತಾಡಬೇಕು ಎನ್ನುವ ಆಸೆಯಿಂದ ಊಟಿ ಮತ್ತು ಕೊಡೈಕೆನಾಲ್‌ ಗೆ ಪ್ರವಾಸ ಹೊರಡಲು ಯೋಜನೆ ಹಾಕಿಕೊಂಡಿದ್ದೀರಾ. ಹಾಗಿದ್ದರೆ ಒಂದು ಮಹತ್ವದ ಸುದ್ದಿ ಇದೆ. ಈ ಬಾರಿ ಊಟಿ (Ooty) ಮತ್ತು ಕೊಡೈಕೆನಾಲ್‌ ಗೆ ( Kodaikanal) ಪ್ರವಾಸ (tour) ಹೋಗುವವರಿಗೆ ಇ-ಪಾಸ್ (E-Pass Mandatory) ಕಡ್ಡಾಯವಾಗಿದೆ.

ಬೇಸಗೆ ರಜೆ (summer vacation) ಹಿನ್ನೆಲೆಯಲ್ಲಿ ಊಟಿ ಮತ್ತು ಕೊಡೈಕೆನಾಲ್ ಪ್ರವಾಸಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಬರುತ್ತಿರುವುದರಿಂದ ಪ್ರಸ್ತುತ ಇರುವ ವಿವಿಧ ವಾಹನಗಳು ಮತ್ತು ಬೇಸಿಗೆಯ ತಿಂಗಳುಗಳಲ್ಲಿ ಈ ಗಿರಿಧಾಮಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಗೆ ಸಂಬಂಧಿಸಿದಂತೆ ಡೇಟಾವನ್ನು ಸಂಗ್ರಹಿಸಲು ಜಿಲ್ಲಾಡಳಿತಗಳಿಗೆ ಅನುಕೂಲವಾಗುವಂತೆ ಇ-ಪಾಸ್ ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!

ಇ-ಪಾಸ್ ಕಡ್ಡಾಯ

ಮೇ 7ರಿಂದ ಜೂನ್ 30ರವರೆಗೆ ಊಟಿ ಮತ್ತು ಕೊಡೈಕೆನಾಲ್‌ಗೆ ಭೇಟಿ ನೀಡುವ ಪ್ರವಾಸಿಗರು ಕಡ್ಡಾಯವಾಗಿ ಇ-ಪಾಸ್ ಪಡೆಯಬೇಕು ಎಂದು ನ್ಯಾಯಮೂರ್ತಿಗಳಾದ ಎನ್. ಸತೀಶ್ ಕುಮಾರ್ ಮತ್ತು ಡಿ. ಭರತ್ ಚಕ್ರವರ್ತಿ ಅವರನ್ನೊಳಗೊಂಡ ವಿಶೇಷ ವಿಭಾಗೀಯ ಪೀಠ ಆದೇಶ ನೀಡಿದೆ.


ವಿಶೇಷ ವಿಭಾಗೀಯ ಪೀಠವು ನೀಲಗಿರಿ ಮತ್ತು ದಿಂಡುಗಲ್ ಕಲೆಕ್ಟರೇಟ್‌ಗಳಿಂದ ಇ-ಪಾಸ್‌ಗಳ ವಿತರಣೆಗೆ ಯಾವುದೇ ಮಿತಿಯಿಲ್ಲ ಎಂದು ಹೇಳಿದೆ. ಈ ಪಾಸ್‌ಗಳನ್ನು ಪಡೆದುಕೊಳ್ಳುವುದರಿಂದ ಸ್ಥಳೀಯ ನಿವಾಸಿಗಳಿಗೆ ವಿನಾಯಿತಿ ನೀಡಲಾಗಿದೆ.

ಹಲವು ವ್ಯವಸ್ಥೆ

ಇ- ಪಾಸ್ ವ್ಯವಸ್ಥೆಯನ್ನು ವ್ಯಾಪಕವಾಗಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಇದರ ಜೊತೆಗೆ ಇಬ್ಬರು ಕಲೆಕ್ಟರ್‌ಗಳು, ಮಾಹಿತಿ ತಂತ್ರಜ್ಞಾನ ಇಲಾಖೆಯ ಬೆಂಬಲದೊಂದಿಗೆ, ಇ-ಪಾಸ್ ವ್ಯವಸ್ಥೆಯಲ್ಲಿ ಪಾವತಿ ಗೇಟ್‌ವೇ ಅನ್ನು ಸಂಯೋಜಿಸುವ ಬಗ್ಗೆ ಅನ್ವೇಷಿಸಲು ಪ್ರಸ್ತಾಪಿಸಲಾಗಿದೆ. ಇದು ಅರ್ಜಿದಾರರಿಗೆ ಆನ್‌ಲೈನ್‌ನಲ್ಲಿ ಟೋಲ್ ಶುಲ್ಕವನ್ನು ಪಾವತಿಸಲು, ಚೆಕ್‌ಪೋಸ್ಟ್‌ಗಳ ಬಳಿ ದಟ್ಟಣೆಯನ್ನು ಕಡಿಮೆ ಮಾಡಲು, ಇಂಧನವನ್ನು ಉಳಿಸಲು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ತಡೆಯಲು ಅನುವು ಮಾಡಿಕೊಡುತ್ತದೆ.


ಯಾಕೆ ಈ ಕ್ರಮ?

ಪ್ರವಾಸಿಗರ ಸಂಖ್ಯೆಗೆ ಕಡಿವಾಣ ಹಾಕುವ ಹೈಕೋರ್ಟ್‌ನ ಚಿಂತನೆಗೆ ಪ್ರತಿಕ್ರಿಯೆಯಾಗಿ ನೀಲಗಿರಿ ಮತ್ತು ದಿಂಡುಗಲ್ ಜಿಲ್ಲಾಧಿಕಾರಿಗಳು ವಾಹನ ಸಂಚಾರವನ್ನು ನಿರ್ಬಂಧಿಸಲು ಈ ಹಿಂದೆ ಪ್ರಸ್ತಾಪಿಸಲಾಗಿತ್ತು. ರಜೆ ಸೀಸನ್‌ಗಳಲ್ಲಿ ಊಟಿ ಮತ್ತು ಕೊಡೈಕೆನಾಲ್‌ ಗೆ ಬರುವ ವಾಹನಗಳ ಸಂಖ್ಯೆ ದಿನಕ್ಕೆ 2,000 ರಿಂದ 20,000ಕ್ಕೆ ಏರುತ್ತದೆ. ಇದು ವಾಹನ ದಟ್ಟಣೆ ಮತ್ತು ಪರಿಸರ ಹಾನಿಗೆ ಕಾರಣವಾಗುತ್ತದೆ.


ಈ ವಿಷಯವನ್ನು ಅಂಗೀಕರಿಸಿದ ನ್ಯಾಯಮೂರ್ತಿಗಳ ವಿಶೇಷ ವಿಭಾಗೀಯ ಪೀಠವು ಈ ವಿಷಯದ ಬಗ್ಗೆ ಚರ್ಚೆ ನಡೆಸಿದೆ. ಘಾಟ್ ರಸ್ತೆಗಳ ಮೇಲಿನ ಒತ್ತಡ ಮತ್ತು ಬೇಸಿಗೆಯಲ್ಲಿ ಅತಿಯಾದ ಪ್ರವಾಸಿ ಚಟುವಟಿಕೆಯಿಂದ ಉಂಟಾಗುವ ಪರಿಸರ ನಾಶವನ್ನು ವಕೀಲರು ಎತ್ತಿ ತೋರಿಸಿದರು.

ಈ ಕುರಿತು ಮಾತನಾಡಿರುವ ನೀಲಗಿರಿ ಜಿಲ್ಲಾಧಿಕಾರಿ ಎಂ. ಅರುಣಾ, ಕೇರಳ ಮತ್ತು ಕರ್ನಾಟಕ ಗಡಿಯಲ್ಲಿರುವ ಊಟಿ ಮತ್ತು ಕೊಡೈಕೆನಾಲ್‌ ಗೆ ಒಂಬತ್ತು ಗಡಿ ಚೆಕ್ ಪೋಸ್ಟ್‌ ಗಳಿವೆ. ರಜೆಯ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ವಾಹನ ದಟ್ಟಣೆಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತದೆ. ಹೀಗಾಗಿ ವಾಹನಗಳ ಎಣಿಕೆಯು ಅಗತ್ಯ. ಕೇವಲ ಪ್ರವಾಸಿ ವಾಹನಗಳಲ್ಲದೇ ಸರಕುಗಳ ಸಾಗಣೆಯ ವಾಹನಗಳನ್ನೂ ಇದು ಒಳಗೊಂಡಿರುತ್ತದೆ ಎಂದು ಹೇಳಿದರು.

Continue Reading
Advertisement
Rain News
ಕರ್ನಾಟಕ2 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ3 hours ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ3 hours ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Rohith Vemula
ದೇಶ3 hours ago

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Rinku Singh
ಪ್ರಮುಖ ಸುದ್ದಿ3 hours ago

Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

honour killing
ವಿಜಯಪುರ3 hours ago

Honor Killing: ಮರ್ಯಾದೆಗಾಗಿ ಗರ್ಭಿಣಿಯನ್ನು ಸುಟ್ಟು ಕೊಂದ ಇಬ್ಬರಿಗೆ ಗಲ್ಲು ಶಿಕ್ಷೆ, 6 ಮಂದಿಗೆ ಜೀವಾವಧಿ‌ ಶಿಕ್ಷೆ

Pakistan
ವಿದೇಶ3 hours ago

ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

T20 World Cup
ಪ್ರಮುಖ ಸುದ್ದಿ3 hours ago

T20 World Cup : ಉನ್ಮುಕ್ತ್​ ಚಾಂದ್​ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್​ ತಂಡದಲ್ಲಿ ಇಲ್ಲ ಚಾನ್ಸ್​!

Health Tips Kannada
ಆರೋಗ್ಯ4 hours ago

Health Tips Kannada : ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು?

Meeting with representatives of various political parties about MLC election in Hosapete
ವಿಜಯನಗರ4 hours ago

Vijayanagara News: ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ; ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ10 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ21 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌