Suicide case: ಪೊಲೀಸರಿಂದ ಬುದ್ಧಿ ಹೇಳಿಸಿದ ಪತ್ನಿ, ಜನನಿಬಿಡ ಪ್ರದೇಶದಲ್ಲಿ ವ್ಯಕ್ತಿ ಆತ್ಮಹತ್ಯೆ - Vistara News

ಬೆಂಗಳೂರು

Suicide case: ಪೊಲೀಸರಿಂದ ಬುದ್ಧಿ ಹೇಳಿಸಿದ ಪತ್ನಿ, ಜನನಿಬಿಡ ಪ್ರದೇಶದಲ್ಲಿ ವ್ಯಕ್ತಿ ಆತ್ಮಹತ್ಯೆ

ಕುಡಿದು ಬಂದು ಕಿರಿಕಿರಿ ಮಾಡುತ್ತಿದ್ದವನಿಗೆ ಪತ್ನಿ ಪೊಲೀಸರಿಂದ ಬುದ್ಧಿ ಹೇಳಿಸಿದ್ದಕ್ಕೆ ನೊಂದ ವ್ಯಕ್ತಿ ಜನನಿಬಿಡ ಪ್ರದೇಶದಲ್ಲಿ ನೇಣು ಹಾಕಿಕೊಂಡಿದ್ದಾನೆ.

VISTARANEWS.COM


on

suicide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜನ ಓಡಾಡುವ ಪ್ರದೇಶದಲ್ಲೇ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಪರೆಡ್ಡಿ ಪಾಳ್ಯ ಸರ್ಕಲ್ ಬಳಿ ನಡೆದಿದೆ.‌

ನಲವತ್ತು ವರ್ಷದ ಮಾದೇವ ಮೃತ ವ್ಯಕ್ತಿ. ಚೆನ್ನಪಟ್ಟಣ ಮೂಲದ ಮಾದೇವನಿಗೆ ಮೂರು ಮದುವೆಯಾಗಿತ್ತು. ಕೊನೆಯ ಪತ್ನಿ ಯಶೋದಮ್ಮನ ಜೊತೆ ವಾಸವಾಗಿದ್ದ ಮಾದೇವ ಕೆಲಸವಿಲ್ಲದೆ ಕುಡಿತದ ಚಟಕ್ಕೆ ಬಿದ್ದಿದ್ದ. ಪ್ರತಿ ದಿನ ಕುಡಿದು ಬಂದು ಪತ್ನಿ ಜೊತೆ ಜಗಳವಾಡುತ್ತಿದ್ದ. ಪತಿಯ ಕಿರಿಕಿರಿ ತಾಳಲಾಗದೆ ಪತ್ನಿ ಯಶೋದಮ್ಮ ಪೊಲೀಸರಿಗೆ ಹಲವು ಬಾರಿ ವಿಚಾರ ತಿಳಿಸಿ ಬುದ್ಧಿ ಹೇಳಿಸಿದ್ದಳು. ಒಂದೆರಡು ಬಾರಿ ಇದೇ ರೀತಿ ಕಿರಿಕ್ ಮಾಡಿಕೊಂಡು ಜೈಲಿಗೂ ಹೋಗಿ ಬಂದಿದ್ದ.

ಭಾನುವಾರ ಬೆಳಗಿನ ಜಾವ ಮಾದೇವ ದುಡ್ಡಿಲ್ಲ ಎಂದಾಗ ಪತ್ನಿ ತಾನು ದುಡಿದಿಟ್ಟಿದ್ದ ನೂರೈವತ್ತು ರೂಪಾಯಿ ನೀಡಿದ್ದರು. ಅದೇ ದುಡ್ಡಲ್ಲಿ ಮದ್ಯಪಾನ ಮಾಡಿ ಮತ್ತೆ ಪತ್ನಿ ಜೊತೆ ಜಗಳವಾಡಿದ್ದ. ಹೀಗಾಗಿ ಭಾನುವಾರ ಕೂಡ ಯಶೋದಮ್ಮ ಪೊಲೀಸರಿಗೆ ಕರೆ ಮಾಡಿ ಮನೆ ಬಳಿ ಕರೆಸಿಕೊಂಡಿದ್ದರು. ಪೊಲೀಸರು ಮತ್ತೆ ಮಾದೇವನಿಗೆ ಬುದ್ಧಿ ಹೇಳಿದ್ದರು. ಮಾದೇವ ಮದ್ಯದ ನಶೆಯಲ್ಲಿ ಪಾಪರೆಡ್ಡಿ ಪಾಳ್ಯ ಸರ್ಕಲ್ ಬಳಿ ಬಂದು ತನ್ನ ಪಂಚೆಯಿಂದ ಸರ್ಕಲ್‌ನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Suicide Case: ಬೆಂಗಳೂರಿನಲ್ಲಿ 10 ಅಂತಸ್ತಿನ ಅಪಾರ್ಟ್‌ಮೆಂಟ್‌ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

Karnataka Weather Forecast : ಮಳೆಗೆ (Rain News) ಹೊನ್ನಾವರದಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದ್ದು, ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸಕ್ಕೆ ಮುಂದಾದ ಘಟನೆಯೂ ನಡೆದಿದೆ. ಭಾನುವಾರವೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ
Koo

ಉತ್ತರಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಭಾರಿ ಮಳೆಗೆ (Karnataka weather Forecast) ಶರಾವತಿ ನದಿ ಉಕ್ಕಿ ಹರಿದು ಹೊನ್ನಾವರ ಹಲವೆಡೆ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ. ತಾಲೂಕಿನ ಸರಳಗಿ, ಮಾವಿನಹೊಳೆ, ಅಳ್ಳಂಕಿ ಸೇರಿ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದೆ. ನೆರೆ ಆತಂಕದ ಸುಮಾರು 169ಕ್ಕೂ ಅಧಿಕ‌ ಮಂದಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದೆ. ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಸಾಧ್ಯತೆ ಇದ್ದು, ನದಿ ಪಾತ್ರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಚೌಡಯ್ಯನ ಐಕ್ಯ ಮಂಟಪ ಮುಳುಗಡೆ

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚೌಡಯ್ಯಧಾನಪುರದ ನಿಜಶರಣ ಅಂಬಿಗರ ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಇತ್ತ ಮಲೆನಾಡಿನ ಶಿವಮೊಗ್ಗದಲ್ಲೂ ಮಳೆ ಅಬ್ಬರ ಮುಂದುವರಿದಿದೆ. ಮಳೆಯ ಅಬ್ಬರಕ್ಕೆ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಲಿಂಗನಮಕ್ಕಿ ಜಲಾಶಯದಿಂದ 11 ಕ್ರಸ್ಟ್ ಗೇಟ್ ಮೂಲಕ 42,705 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸ

ಗದಗ ಜಿಲ್ಲೆಯಲ್ಲಿ ತುಂಗಭದ್ರಾ ನದಿಯು ಉಕ್ಕಿ ಹರಿಯುತ್ತಿದೆ. ಮುಂಡರಗಿ ತಾಲೂಕಿನ ಸಿಂಗಟಾಲೂರು ಬ್ಯಾರೇಜ್ ಭರ್ತಿಯಾಗಿದ್ದು, ಕೆಲವರು ಜೀವ ಭಯವಿಲ್ಲದೆ ಮೀನು ಹಿಡಿಯುವ ದುಸ್ಸಾಹಸಕ್ಕೆ ಇಳಿದಿದ್ದರು. ನದಿ ತಟಗಳಿಗೆ ಗದಗ ಜಿಲ್ಲಾಡಳಿತ ಹೋಗದಂತೆ ಸೂಚನೆ ನೀಡಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಮೀನುಗಾರರು ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ನಾಳೆ ಕರಾವಳಿಗೆ ಭಾರಿ ಮಳೆ ಎಚ್ಚರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ನೈರುತ್ಯ ದುರ್ಬಲ

ನೈರುತ್ಯ ಮಾನ್ಸೂನ್ ಕರಾವಳಿಯ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಆಗುಂಬೆಯಲ್ಲಿ 18, ಕ್ಯಾಸಲ್ ರಾಕ್ 12 ಸೆಂ.ಮೀ ಮಳೆಯಾಗಿದೆ.

ಸಿದ್ದಾಪುರ 11, ಲೋಂಡಾ 10, ಕಾರ್ಕಳ, ಕೋಟ, ಕಾರವಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಗೇರ್ಸೊಪ್ಪ, ಹೊನ್ನಾವರ, ಉತ್ತರ ಕನ್ನಡ, ಕೊಲ್ಲೂರು, ಗೋಕರ್ಣ, ಶೃಂಗೇರಿ ಎಚ್‌ಎಂಎಸ್ 8 ಸೆಂ.ಮೀ ಮಳೆಯಾಗಿದೆ. ಮೂಲ್ಕಿ , ಶಿರಾಲಿ ಪಿಟಿಒ , ಸಿದ್ದಾಪುರ, ಮಂಕಿ, ಕುಂದಾಪುರ , ಕದ್ರಾ, ಲಿಂಗನಮಕ್ಕಿ ಎಚ್‌ಎಂಎಸ್ , ಕಮ್ಮರಡಿ,ಚಿಕ್ಕಮಗಳೂರು, ಭಾಗಮಂಡಲ, ಜಯಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

2nd PUC Exam Result 2024: ದ್ವಿತೀಯ ಪಿಯುಸಿ ಪರೀಕ್ಷೆ-1, 2, 3ರಲ್ಲಿ ಒಟ್ಟಾರೆ ಶೇ. 84.87 ವಿದ್ಯಾರ್ಥಿಗಳು ಪಾಸ್; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

2nd PUC Exam Result 2024: ದ್ವಿತೀಯ ಪಿಯುಸಿ ಪರೀಕ್ಷೆ-1, 2 ಮತ್ತು 3ಗಳ ಕ್ರೋಡೀಕೃತ ಫಲಿತಾಂಶದ ಅಂಕಿ-ಅಂಶಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದೆ. ದ್ವಿತೀಯ ಪಿಯುಸಿ ಅಂತಿಮ ಫಲಿತಾಂಶವನ್ನು ವಿದ್ಯಾರ್ಥಿಗಳು hups://kseeb.karnataka.gov.in/ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

VISTARANEWS.COM


on

2nd PUC Exam Result 2024
Koo

ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1, 2 ಮತ್ತು 3ಗಳ ಕ್ರೋಡೀಕೃತ ಫಲಿತಾಂಶದ ಅಂಕಿ-ಅಂಶಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದ್ದು, ಮೂರೂ ಪರೀಕ್ಷೆಗಳಲ್ಲೂ ಒಟ್ಟಾರೆ ಶೇ. 84.87 ವಿದ್ಯಾರ್ಥಿಗಳು (2nd PUC Exam Result 2024) ಉತ್ತೀರ್ಣರಾಗಿದ್ದಾರೆ.

ಪರೀಕ್ಷೆಗೆ ಒಟ್ಟು 7,20,593 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಈ ಪೈಕಿ 7,04,920 ಮಂದಿ ಹಾಜರಾಗಿದ್ದರು. ಇವರಲ್ಲಿ 5,98,283 ವಿದ್ಯಾರ್ಥಿಗಳು ಪಾಸ್‌ ಆಗಿದ್ದು, ಶೇ. 84.87 ಫಲಿತಾಂಶ ಬಂದಿದೆ. ದ್ವಿತೀಯ ಪಿಯುಸಿ ಅಂತಿಮ ಫಲಿತಾಂಶವನ್ನು ವಿದ್ಯಾರ್ಥಿಗಳು hups://kseeb.karnataka.gov.in/ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

ದ್ವಿತೀಯ ಪಿಯುಸಿ ಕ್ರೋಡೀಕೃತ ಫಲಿತಾಂಶದ ಅಂಕಿ-ಅಂಶ

  • ಪರೀಕ್ಷೆಗೆ ನೋಂದಣಿಯಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ : 7,20,593
  • ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ: 7,04,920
  • ಎಲ್ಲಾ ವಿಷಯಗಳಿಗೆ ಗೈರುಹಾಜರಾದ ವಿದ್ಯಾರ್ಥಿಗಳ ಸಂಖ್ಯೆ : 15,673
  • ತೇರ್ಗಡೆಯಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ : 5,98,283
  • ಶೇಕಡವಾರು ಉತ್ತೀರ್ಣ : ಶೇ. 84.87

ವಿದ್ಯಾರ್ಥಿವಾರು ಒಟ್ಟಾರೆ ಫಲಿತಾಂಶ

ವಿದ್ಯಾರ್ಥಿಗಳ ವಿಧನೋಂದಣಿಯಾದವರುಹಾಜರಾದವರುತೇರ್ಗಡೆಯಾದವರುಶೇ. ಉತ್ತೀರ್ಣ
ಹೊಸಬರು6,38,6766,24,4215,61,82489.98
ಪುನರಾವರ್ತಿತ58,50258,00323,30540.18
ಖಾಸಗಿ 23,41522,49613,15458.47
ಒಟ್ಟು7,20,5937,04,9205,98,28384.87

ಸಂಯೋಜನೆವಾರು ಫಲಿತಾಂಶ

ಸಂಯೋಜನೆನೋಂದಣಿಯಾದವರುಉತ್ತೀರ್ಣರಾದವರುಉತ್ತೀರ್ಣರಾದವರುಶೇ.ಉತ್ತೀರ್ಣ
ಕಲಾ2,09,1151,99,4981,46,16973.27
ವಾಣಿಜ್ಯ2,27,7362,23,5101,88,15384.18
ವಿಜ್ಞಾನ2,83,7422,81,9122,63,96193.63
ಒಟ್ಟು7,20,5937,04,9205,98,28384.87

ಲಿಂಗವಾರು ಫಲಿತಾಂಶ

ಪರೀಕ್ಷೆಗೆ 3,35,212 ಬಾಲಕರು ಹಾಜರಾಗಿದ್ದು, ಈ ಪೈಕಿ 2,71,360 ಮಂದಿ ಅಂದರೆ ಶೇ. 80.95 ಉತ್ತೀರ್ಣರಾಗಿದ್ದಾರೆ. ಇನ್ನು 3,69,708 ಬಾಲಕಿಯರು ಹಾಜರಾಗಿದ್ದು, ಈ ಪೈಕಿ 3,26,923 ಮಂದಿ ಅಂದರೆ ಶೇ. 88.43 ಬಾಲಕಿಯರು ಉತ್ತೀರ್ಣರಾಗಿದ್ದಾರೆ.

ಜಿಲ್ಲೆಗಳ ಶೇ. ಫಲಿತಾಂಶ(ಹೊಸಬರು ಮಾತ್ರ)

ಜಿಲ್ಲಾವಾರು ಫಲಿತಾಂಶ ನೋಡುವುದಾದರೆ ದಕ್ಷಿಣ ಕನ್ನಡ ಜಿಲ್ಲೆ ಶೇ.98.59 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನದಲ್ಲಿ ಉಡುಪಿ (ಶೇ.98.45), ಮೂರನೇ ಸ್ಥಾನದಲ್ಲಿ ಉತ್ತರ ಕನ್ನಡ ಜಿಲ್ಲೆ (ಶೇ.94.64) ಪಡೆದಿದ್ದು, ಕೊನೆಯ ಸ್ಥಾನದಲ್ಲಿ ರಾಯಚೂರು ಜಿಲ್ಲೆ (ಶೇ.78.12) ಇದೆ.

ಜಿಲ್ಲೆವಾರು ಫಲಿತಾಂಶ

  1. ದಕ್ಷಿಣ ಕನ್ನಡ- 98.59
  2. ಉಡುಪಿ- 98.45
  3. ಉತ್ತರ ಕನ್ನಡ- 94.64
  4. ಕೊಡಗು-93.76
  5. ಬೆಂಗಳೂರು ದಕ್ಷಿಣ- 93.13
  6. ವಿಜಯಪುರ- 92.95
  7. ಬೆಂಗಳೂರು ಉತ್ತರ- 92.25
  8. ಶಿವಮೊಗ್ಗ- 91.9
  9. ಬಾಗಲಕೋಟೆ- 91.08
  10. ಚಿಕ್ಕಮಗಳೂರು- 90.64
  11. ಬೆಂಗಳೂರು ಗ್ರಾಮಾಂತರ- 89.79
  12. ಚಿಕ್ಕೋಡಿ- 89.72
  13. ಚಾಮರಾಜನಗರ- 88.8
  14. ಹಾಸನ-88.6
  15. ಕೋಲಾರ- 88.04
  16. ಮೈಸೂರು- 88.04
  17. ಧಾರವಾಡ- 86.97
  18. ಚಿಕ್ಕಬಳ್ಳಾಪುರ- 85.75
  19. ರಾಮನಗರ- 84.75
  20. ಮಂಡ್ಯ-84.5
  21. ಕೊಪ್ಪಳ- 84.41
  22. ದಾವಣಗೆರೆ- 84.09
  23. ತುಮಕೂರು-83.48
  24. ಹಾವೇರಿ- 82.86
  25. ಬಳ್ಳಾರಿ- 82.86
  26. ಬೆಳಗಾವಿ -82.81
  27. ಬೀದರ್- 82.47
  28. ಗದಗ-79.46
  29. ಯಾದಗಿರಿ-78.71
  30. ಕಲಬುರಗಿ- 78.36
  31. ಚಿತ್ರದುರ್ಗ- 78.29
  32. ರಾಯಚೂರು- 78.12
    ಒಟ್ಟಾರೆ ರಾಜ್ಯ 89.98

    ಇದನ್ನೂ ಓದಿ | Job Alert: ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ ಪಾಸಾದವರು ಅಪ್ಲೈ ಮಾಡಿ

    Continue Reading

    ಬೆಂಗಳೂರು

    KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

    KCET 2024 :ರಾಷ್ಟ್ರೀಯ ವೈದ್ಯಕೀಯ ಆಯೋಗವು (NMC) ತನ್ನ ಮೊದಲ ಸುತ್ತಿನ ನೀಟ್‌ (NEET) ಕೌನ್ಸೆಲಿಂಗ್ ಪ್ರಾರಂಭಿಸಿದ ನಂತರವೇ ಕೆ-ಸಿಇಟಿ ಸೀಟು ಹಂಚಿಕೆ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕೆಇಎ (KEA) ಸ್ಪಷ್ಟಪಡಿಸಿದೆ.

    VISTARANEWS.COM


    on

    By

    KCET 2024
    ಸಾಂದರ್ಭಿಕ ಚಿತ್ರ
    Koo

    ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಎಲ್ಲ ಕೋರ್ಸ್‌ಗಳ ಪ್ರವೇಶಕ್ಕೆ ಈ ಬಾರಿ ಏಕಕಾಲದಲ್ಲೇ ಸೀಟು ಹಂಚಿಕೆ ಪ್ರಕ್ರಿಯೆ (KCET 2024) ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

    ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ನೀಟ್ ಪರೀಕ್ಷೆಯ ಫಲಿತಾಂಶದ ಪಟ್ಟಿಯನ್ನು ಕೆಇಎಗೆ ಹಸ್ತಾಂತರಿಸಿದ ನಂತರ ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ಇತರ ವೈದ್ಯಕೀಯ ಕೋರ್ಸುಗಳ ಆದ್ಯತೆಗಳನ್ನು ದಾಖಲಿಸಲು ಅವಕಾಶ ನೀಡಲಾಗುವುದು ಕೆಇಎ ತಿಳಿಸಿದೆ.

    ಇತ್ತೀಚೆಗೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆದ್ಯತೆಗಳನ್ನು ದಾಖಲಿಸಲು ಎಂಜಿನಿಯರಿಂಗ್, ಪಶುವೈದ್ಯಕೀಯ ಇತ್ಯಾದಿ ಕೋರ್ಸ್ ಗಳಿಗೆ ಅವಕಾಶ ನೀಡಲಾಗಿತ್ತು. ಎನ್‌ಎಂಸಿ ತನ್ನ ಮೊದಲ ಸುತ್ತಿನ ನೀಟ್‌ ಕೌನ್ಸೆಲಿಂಗ್ ಪ್ರಾರಂಭಿಸಿದ ನಂತರ ಕೆಸಿಇಟಿ ಸೀಟು ಹಂಚಿಕೆ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕೆಇಎ ತಿಳಿಸಿದೆ.

    ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಇಎ ಮಂಡಳಿ ಸಭೆಯಲ್ಲಿ ಆಗಸ್ಟ್ ಎರಡನೇ ವಾರದಲ್ಲಿ ಸಿಇಟಿ ಕೌನ್ಸೆಲಿಂಗ್ ನಡೆಸಲು ನಿರ್ಧರಿಸಲಾಗಿದೆ.

    ಇನ್ನು ಎನ್‌ಎಂಸಿ ವೈದ್ಯಕೀಯ ಕೋರ್ಸ್‌ಗಳಿಗೆ ಆಗಸ್ಟ್‌ 14ರಿಂದ ಕೌನ್ಸೆಲಿಂಗ್‌ ಪ್ರಾರಂಭಿಸುವುದಾಗಿ ಹೇಳಿದೆ. ಹೀಗಾಗಿ ಎನ್‌ಎಂಸಿ ತನ್ನ ಮೊದಲ ಸುತ್ತಿನ ನೀಟ್‌ ಕೌನ್ಸೆಲಿಂಗ್ ಪ್ರಾರಂಭಿಸಿದ ಮೂರು ದಿನಗಳ ನಂತರ ಎಲ್ಲಾ ಕೋರ್ಸ್‌ಗಳಿಗೆ ಕೌನ್ಸೆಲಿಂಗ್ ಪುನರಾರಂಭಿಸುತ್ತೇವೆ ಎಂದು ಕೆಇಎ ಕಾರ್ಯನಿರ್ವಾಹಕ ಪ್ರಸನ್ನ ತಿಳಿಸಿದ್ದಾರೆ. ವೈದ್ಯಕೀಯೇತರ ಕೋರ್ಸ್‌ಗಳಿಗೆ ಆಯ್ಕೆ ಪ್ರವೇಶವನ್ನು ಪ್ರಾರಂಭಿಸಿದ್ದೇವೆ ಮತ್ತು ಹಂಚಿಕೆ ಮಾತ್ರ ಬಾಕಿ ಉಳಿದಿದೆ.

    ದ್ವಿತೀಯ ಪಿಯುಸಿ ಮೂರನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಈ ಹಂತದಲ್ಲಿ ಸೀಟು ಹಂಚಿಕೆಗೆ ಪರಿಗಣಿಸುವುದು ಕಷ್ಟಸಾಧ್ಯ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಕುರಿತು ಸರ್ಕಾರ ನೀಡುವ ಸೂಚನೆ ಪ್ರಕಾರ ಅವರಿಗೂ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: Wild Animals : ರಸ್ತೆಗೆ ಅಡ್ಡಲಾಗಿ ಮಲಗಿಕೊಂಡ ಚಿರತೆ; ಕಾಡಿನಿಂದ ಹಸು ಜತೆಗೆ ಓಡೋಡಿ ಬಂದ ಜಿಂಕೆ

    ಯುಜಿಸಿಇಟಿ ಆಪ್ಷನ್ ಎಂಟ್ರಿಗೆ ಆ.4 ಕೊನೆ ದಿನ

    ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ತಮ್ಮ ಆಸಕ್ತಿಯನುಸಾರ ಆಪ್ಷನ್ (ಇಚ್ಛೆ) ದಾಖಲು ಮಾಡುವುದು ಆಗಸ್ಟ್ 4ರಂದು ಕೊನೆಯಾಗಲಿದೆ. ಕಾಲೇಜು ಮತ್ತು ಕೋರ್ಸ್ ಆಯ್ಕೆಗೆ ಇನ್ನೂ ಒಂದು ದಿನ ಸಮಯ ಇದ್ದು, ಎಚ್ಚರಿಕೆಯಿಂದ ಇಚ್ಛೆ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

    ಎಂಜಿನಿಯರಿಂಗ್, ಯೋಗ- ನ್ಯಾಚುರೋಪಥಿ, ಪಶು ವೈದ್ಯ, ಕೃಷಿ ವಿಜ್ಞಾನ, ನರ್ಸಿಂಗ್, ಬಿ-ಫಾರ್ಮಾ ಫಾರ್ಮಾ-ಡಿ ಕೋರ್ಸ್ ಗಳ ಪ್ರವೇಶಕ್ಕೆ ಇಚ್ಛೆ ದಾಖಲಿಸಲು ಕೆಇಎ ಅವಕಾಶ ನೀಡಿತ್ತು. ಮುಂದಿನ ಹಂತದಲ್ಲಿ ಅಣಕು ಸೀಟು ಹಂಚಿಕೆ ಮಾಡಲಾಗುತ್ತದೆ.

    ಆ.3ರಿಂದ ಪಿಜಿ ದಂತ ವೈದ್ಯಕೀಯ 2ನೇ ಸುತ್ತಿನ ಸೀಟು ಹಂಚಿಕೆ

    ಬೆಂಗಳೂರು: ಸ್ನಾತಕೋತ್ತರ ದಂತ ವೈದ್ಯಕೀಯ (ಪಿಜಿಇಟಿ- ಎಂಡಿಎಸ್-24) ಕೋರ್ಸ್‌ ನ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆಗಸ್ಟ್ 3ರಿಂದ ಆರಂಭವಾಗಿದೆ. ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಛಾಯ್ಸ್-2 ಆಯ್ಕೆ ಮಾಡಿ, ಶುಲ್ಕ ಪಾವತಿಸಿರುವವರು; ಛಾಯ್ಸ್-3 ಅನ್ನು ಆಯ್ಕೆ ಮಾಡಿರುವವರು ಹಾಗೂ ಯಾವುದೇ ಸೀಟು ಹಂಚಿಕೆಯಾಗದೇ ಇರುವವರು ಆ.3ರಿಂದ ಕೆಇಎ ಕಚೇರಿಯಲ್ಲಿ ತಮ್ಮ ಎಲ್ಲ ಮೂಲ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ದಾಖಲೆ ಸಲ್ಲಿಸದಿದ್ದರೆ ಅಂತಹವರಿಗೆ ಸೀಟು ಹಂಚಿಕೆ ಮಾಡಲಾಗುವುದಿಲ್ಲ.

    ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆ.3ರಂದು ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುತ್ತದೆ. ಆ.4ರಿಂದ 6ರವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಸಮಯ ನೀಡಲಾಗುತ್ತದೆ. ಆ.7ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆ.8ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಲು ಹಾಗೂ ಕಾಲೇಜಿಗೆ ವರದಿ ಮಾಡಿಕೊಳ್ಳಲು ಆ.13 ಕೊನೆ ದಿನ ಎಂದು ಅವರು ವಿವರಿಸಿದ್ದಾರೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಕರ್ನಾಟಕ

    Pralhad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್‌‌ನಿಂದ ರಾಜಕೀಯ; ಪ್ರಲ್ಹಾದ್‌ ಜೋಶಿ

    Pralhad Joshi: ಕೇರಳ ಸರ್ಕಾರಕ್ಕೆ ಜುಲೈ 23 ರಂದೇ ಮುನ್ನೆಚ್ಚರಿಕೆ, ಅಗತ್ಯ ಮಾಹಿತಿಯನ್ನು ಕೇಂದ್ರ ಸರ್ಕಾರ ನೀಡಿದೆ. ಹಾಗಿದ್ದರೂ ಸ್ಥಳೀಯ ಸರ್ಕಾರ ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಿದೆ. ಕೇರಳ ಸರ್ಕಾರದ ಆಡಳಿತ ವ್ಯವಸ್ಥೆ ಸರಿಯಿಲ್ಲ. ಅದನ್ನು ಕೇಂದ್ರದ ಮೇಲೆ ಹೊರಿಸುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

    VISTARANEWS.COM


    on

    Union Minister Pralhad Joshi latest statement in Bengaluru
    Koo

    ಬೆಂಗಳೂರು: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಎನ್‌ಡಿಎ ಮೈತ್ರಿಕೂಟ ನಡೆಸುತ್ತಿರುವ ಪಾದಯಾತ್ರೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.

    ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಮತ್ತು ಜಾನ್ ಬ್ರಿಟಾಸ್ ಅವರು ಕೇರಳದ ವಯನಾಡ್ ದುರಂತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಜೋಶಿ ಆಕ್ಷೇಪಿಸಿದರು.

    ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    ಕೇರಳ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅವಘಡಕ್ಕೂ ಮೊದಲೇ ಮುನ್ನೆಚ್ಚರಿಕೆ ನೀಡಿದೆ ಎಂದು ಸ್ಪಷ್ಟಪಡಿಸಿದರು. ನಾವು ನಿಜಕ್ಕೂ ಮೊದಲೇ ಎಚ್ಚರಿಕೆ ನೀಡಿದ್ದೇವೆ ಎಂದು ಕೇಂದ್ರ ಗೃಹ ಸಚಿವರು ಸ್ಪಷ್ಟಪಡಿಸಿದ ನಂತರವೂ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದು, ಇದು ರಾಜಕೀಯ ಕಾರಣಕ್ಕಲ್ಲದೆ ಮತ್ತೇನು ಅಲ್ಲ ಎಂದು ಸಚಿವ ಪ್ರಲ್ಹಾದ್‌ ಜೋಶಿ ಹರಿಹಾಯ್ದರು.

    ಜುಲೈ 23 ರಂದೇ ಕೇರಳ ಸರ್ಕಾರಕ್ಕೆ ಮುನ್ನೆಚ್ಚರಿಕೆ, ಅಗತ್ಯ ಮಾಹಿತಿಯನ್ನು ಕೇಂದ್ರ ಸರ್ಕಾರ ನೀಡಿದೆ. ಹಾಗಿದ್ದರೂ ಸ್ಥಳೀಯ ಸರ್ಕಾರ ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಿದೆ. ಕೇರಳ ಸರ್ಕಾರದ ಆಡಳಿತ ವ್ಯವಸ್ಥೆ ಸರಿಯಿಲ್ಲ. ಅದನ್ನು ಕೇಂದ್ರದ ಮೇಲೆ ಹೊರಿಸುವುದು ಸರಿಯಲ್ಲ ಎಂದು ಜೋಶಿ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದರು.

    ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಆ.4ರಂದು ʼರಣಧುರಂಧರʼ ಗ್ರಂಥ ಲೋಕಾರ್ಪಣೆ

    ವಯನಾಡ್ ದುರಂತದ ಕುರಿತು ಕಾಂಗ್ರೆಸ್ ಆರೋಪ ಮಾಡಿದರೆ ಅದು ರಾಜಕೀಯವಲ್ಲ, ನಾವು ಸ್ಪಷ್ಟನೆ ನೀಡಿದರೆ ರಾಜಕೀಯ ಮಾಡಿದ ಹಾಗೆ ಆಗುತ್ತದೆಯೇ? ಎಂದು ಸಚಿವರು ಪ್ರಶ್ನಿಸಿದರು.

    Continue Reading
    Advertisement
    Deepika Kumari
    ಪ್ರಮುಖ ಸುದ್ದಿ5 mins ago

    Deepika Kumari : ಪದಕದ ಭರವಸೆ ಮೂಡಿಸಿ ಬರಿಗೈಯಲ್ಲಿ ವಾಪಸಾದ ಆರ್ಚರ್​ ದೀಪಿಕಾ ಕುಮಾರಿ

    Chandigarh Court
    ದೇಶ44 mins ago

    ಕೋರ್ಟ್‌ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್‌ ಅಧಿಕಾರಿ; ಕೃತ್ಯಕ್ಕೆ ಕಾರಣವೇನು?

    karnataka weather forecast
    ಮಳೆ1 hour ago

    Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

    2nd PUC Exam Result 2024
    ಕರ್ನಾಟಕ1 hour ago

    2nd PUC Exam Result 2024: ದ್ವಿತೀಯ ಪಿಯುಸಿ ಪರೀಕ್ಷೆ-1, 2, 3ರಲ್ಲಿ ಒಟ್ಟಾರೆ ಶೇ. 84.87 ವಿದ್ಯಾರ್ಥಿಗಳು ಪಾಸ್; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

    Moon
    ದೇಶ2 hours ago

    Moon: ಭೂಮಿಯಿಂದ ದೂರ ಹೊರಟ ಚಂದ್ರ, ಶೀಘ್ರದಲ್ಲೇ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

    ಪ್ರಮುಖ ಸುದ್ದಿ2 hours ago

    Mohammed Shami : ಭಾರತ ತಂಡ ಬಿಟ್ಟು ಬೇರೆ ತಂಡಕ್ಕೆ ಮರಳಲು ಮೊಹಮ್ಮದ್ ಶಮಿ ನಿರ್ಧಾರ

    MS Dhoni
    ಪ್ರಮುಖ ಸುದ್ದಿ2 hours ago

    MS Dhoni : ವಿರಾಟ್ ಕೊಹ್ಲಿ ಜತೆಗಿನದ ಸಂಬಂಧವನ್ನು ವಿವರಿಸಿದ ಕೂಲ್ ಕ್ಯಾಪ್ಟನ್​ ಮಹೇಂದ್ರ ಸಿಂಗ್ ಧೋನಿ

    KCET 2024
    ಬೆಂಗಳೂರು3 hours ago

    KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

    Shiradi ghat landslide
    ಕರ್ನಾಟಕ3 hours ago

    Shiradi ghat landslide: ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಸಿಎಂ‌ ಶಾಕ್; 90 ಡಿಗ್ರಿ ನೇರವಾಗಿ ಗುಡ್ಡ ಸೀಳಿದ್ದಕ್ಕೆ ಅಧಿಕಾರಿಗೆ ತರಾಟೆ

    Paris Olympics 2024
    ಪ್ರಮುಖ ಸುದ್ದಿ3 hours ago

    Paris Olympics 2024 : ಪುರುಷ ಸ್ಪರ್ಧಿಯಿಂದ ಏಟು ತಿಂದ ಇಟಲಿಯ ಮಹಿಳಾ ಬಾಕ್ಸರ್​ಗೆ 41 ಲಕ್ಷ ಬಹುಮಾನ ಘೋಷಿಸಿದ ಬಾಕ್ಸಿಂಗ್​ ಸಂಸ್ಥೆ

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka rain
    ಮಳೆ7 hours ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ2 days ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ2 days ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ2 days ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    karnataka Rain
    ಮಳೆ4 days ago

    Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

    Karnataka Rain
    ಮಳೆ4 days ago

    Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

    Bharachukki falls
    ಚಾಮರಾಜನಗರ4 days ago

    Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

    karnataka Rain
    ಮಳೆ5 days ago

    Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

    Elephant combing Makna elephant captured near Bannerghatta
    ಬೆಂಗಳೂರು ಗ್ರಾಮಾಂತರ5 days ago

    Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

    karnataka rain
    ಮಳೆ5 days ago

    Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

    ಟ್ರೆಂಡಿಂಗ್‌