Rashmika Mandanna: ಅವಾರ್ಡ್ ಫಂಕ್ಷನ್‌ನಲ್ಲಿ ಶಾರ್ಟ್ ಡ್ರೆಸ್‌ ಧರಿಸಿದ್ದ ರಶ್ಮಿಕಾ ಮಂದಣ್ಣ: ಉರ್ಫಿ-2 ಎಂದ ನೆಟ್ಟಿಗರು! - Vistara News

ಸಿನಿಮಾ

Rashmika Mandanna: ಅವಾರ್ಡ್ ಫಂಕ್ಷನ್‌ನಲ್ಲಿ ಶಾರ್ಟ್ ಡ್ರೆಸ್‌ ಧರಿಸಿದ್ದ ರಶ್ಮಿಕಾ ಮಂದಣ್ಣ: ಉರ್ಫಿ-2 ಎಂದ ನೆಟ್ಟಿಗರು!

ರಶ್ಮಿಕಾ ಮಂದಣ್ಣ (Rashmika Mandanna) ಅವರು ಜೀ ಸಿನಿಮಾ ಅವಾರ್ಡ್​ ಫಂಕ್ಷನ್​ಗೆ ತೆರಳಿದ್ದರು. ಅವರು ಕಪ್ಪುಡುಗೆಯಲ್ಲಿ ಸಖತ್ ಬೋಲ್ಡ್ ಲುಕ್​ನಲ್ಲಿ ಮಿಂಚಿದ್ದಾರೆ. ರಶ್ಮಿಕಾ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಅವರ ಉಡುಪನ್ನು ಉರ್ಫಿ ಜಾವೇದ್‌ಗೆ ಹೋಲಿಸಿದ್ದಾರೆ.

VISTARANEWS.COM


on

Rashmika Mandanna Black Short Dress, Call Her Urfi Javed 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ (Rashmika Mandanna) ದಕ್ಷಿಣ ಮತ್ತು ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು.’ನ್ಯಾಷನಲ್ ಕ್ರಶ್’ ಎಂದೂ ಕರೆಯಲ್ಪಡುವ ರಶ್ಮಿಕಾ ಆಗಾಗ ತಮ್ಮ ಸ್ಟೈಲಿಶ್‌ ಉಡುಪುಗಳಿಂದ ಸುದ್ದಿಯಾಗುತ್ತಲೇ ಇರುತ್ತಾರೆ. ರಶ್ಮಿಕಾ ಮಂದಣ್ಣ ಅವರು ಜೀ ಸಿನಿಮಾ ಅವಾರ್ಡ್​ ಫಂಕ್ಷನ್​ಗೆ ತೆರಳಿದ್ದರು. ಅವರು ಕಪ್ಪು ಉಡುಗೆಯಲ್ಲಿ ಸಖತ್ ಬೋಲ್ಡ್ ಲುಕ್​ನಲ್ಲಿ ಮಿಂಚಿದ್ದಾರೆ. ಇದೀಗ ನಟಿ ನೆಟಿಜನ್‌ಗಳಿಂದ ಟ್ರೋಲ್‌ಗೆ ಗುರಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಜೀ ಸಿನಿಮಾ ಅವಾರ್ಡ್​ ಫಂಕ್ಷನ್​ಗೆ ತೆರಳಿದ್ದರು. ಅವರು ಕಪ್ಪುಡುಗೆಯಲ್ಲಿ ಸಖತ್ ಬೋಲ್ಡ್ ಲುಕ್​ನಲ್ಲಿ ಮಿಂಚಿದ್ದಾರೆ. ರಶ್ಮಿಕಾ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಅವರ ಉಡುಪನ್ನು ಉರ್ಫಿ ಜಾವೇದ್‌ಗೆ ಹೋಲಿಸಿದ್ದಾರೆ. ಒಬ್ಬರು ಕಾಮೆಂಟ್‌ನಲ್ಲಿ, “ಉರ್ಫಿ 2” ಎಂದು ಬರೆದರೆ, ಮತ್ತೊಬ್ಬರು “ಅದು ಎಂದೆಂದಿಗೂ ಸಂಪೂರ್ಣವಾಗಿ ಭಯಾನಕ ಉಡುಗೆಯಾಗಿದೆʼʼಎಂದಿದ್ದಾರೆ. ‘ದೇಹ ಕಾಣುವ ರೀತಿಯಲ್ಲಿ ಏಕೆ ಬಟ್ಟೆ ಹಾಕಿ ಬರಬೇಕು’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Rashmika Mandanna: ನೆಲ ಒರೆಸುವ ಬಟ್ಟೆ ಹಾಗಿದೆ ಎಂದ ನೆಟ್ಟಿಗರು: ರಶ್ಮಿಕಾ ಧರಿಸಿದ ಟಾಪ್‌ ಬೆಲೆ ಎಷ್ಟು?

ಇದನ್ನೂ ಓದಿ: Rashmika Mandanna: 5 ಐಷಾರಾಮಿ ಅಪಾರ್ಟ್‌ಮೆಂಟ್‌ ಖರೀದಿಸಿದ್ದಾರಾ ರಶ್ಮಿಕಾ? ಟ್ವಿಟರ್‌ನಲ್ಲಿ ನಟಿ ಹೇಳಿದ್ದೇನು?

ರಶ್ಮಿಕಾ ಮಂದಣ್ಣ ʻವಾರಿಸುʼ ಸಿನಿಮಾ ಮೂಲಕ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ವಂಶಿ ಪೈಡಿಪಲ್ಲಿ ನಿರ್ದೇಶನದ ಈ ಚಿತ್ರದಲ್ಲಿ ದಳಪತಿ ವಿಜಯ್ ಎದುರು ಜೋಡಿಯಾಗಿದ್ದರು. ಸದ್ಯ ಪುಷ್ಪ-2ದಲ್ಲಿ ಬ್ಯುಸಿಯಾಗಿದ್ದಾರೆ. ಮುಂಬರುವ ಆಕ್ಷನ್ ಡ್ರಾಮಾ ಅನಿಮಲ್‌ನಲ್ಲಿ ಅವರು ಜನಪ್ರಿಯ ಸ್ಟಾರ್ ರಣಬೀರ್ ಕಪೂರ್ ಅವರೊಂದಿಗೆ ಪರದೆಯನ್ನು ಹಂಚಿಕೊಳ್ಳುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

Niveditha Gowda:  ಬಿಗ್‌ ಬಾಸ್‌ ಜೋಡಿ, ಕ್ಯೂಟ್‌ ಕಪಲ್‌ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ ವಿಚ್ಛೇದನ ಪಡೆದುಕೊಂಡಿದೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಲವ್ ಪ್ರೊಪೋಸಲ್ ಮಾಡಿ ಸುದ್ದಿಯಾಗಿದ್ದರು. ಚಂದನ್ ವರ್ತನೆಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇದೇ ವರ್ಷ ಮೇ 12 ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌.

VISTARANEWS.COM


on

Niveditha Gowda chandan shetty age differance
Koo

ನಿವೇದಿತಾ ಗೌಡ (Niveditha Gowda) ಹಾಗೂ ಚಂದನ್‌ ಶೆಟ್ಟಿ ಕ್ಯೂಟ್‌ ಕಪಲ್‌ ಎಂದೇ ಹೆಸರುವಾಸಿಯಾದವರು.

ಇದೀಗ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. 4 ವರ್ಷಗಳ ದಾಂಪತ್ಯ ಜೀವನಕ್ಕೆ ಫುಲ್‌ಸ್ಟಾಪ್‌ ಇಟ್ಟಿದ್ದಾರೆ.

ಚಂದನ್‌ ಶೆಟ್ಟಿ ಅವರಿಗೆ ಸದ್ಯ 34 ವರ್ಷ. ಹಾಸನದ ಶಾಂತಿಗ್ರಾಮದಲ್ಲಿ 1989ರ ಸೆಪ್ಟೆಂಬರ್‌ 17ರಂದು ಜನಿಸಿದ್ದರು.

ಇದನ್ನೂ ಓದಿ: Niveditha Gowda: ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ರಾ ನಿವೇದಿತಾ ಗೌಡ?

ನಿವೇದಿತಾ ಗೌಡ ಅವರಿಗೆ ಈಗ 26 ವರ್ಷ. 1998ರ ಮೇ 12ರಂದು ಜನಿಸಿದರು. ಇಬ್ಬರ ನಡುವೆ ಒಂಬತ್ತು ವರ್ಷಗಳ ನಡುವೆ ವಯಸ್ಸಿನ ಅಂತರವಿದೆ.

ನಿವೇದಿತಾ ಗೌಡಗೆ ಇರುವ ಅತಿಯಾದ ಸೋಷಿಯಲ್ ಮೀಡಿಯಾ ಕ್ರೇಜ್‌ನಿಂದಾಗಿಯೇ, ರೀಲ್ಸ್ ವ್ಯಾಮೋಹದಿಂದಾಗಿಯೇ ಡಿವೋರ್ಸ್ ಹಂತ ತಲುಪಿದೆ ಎಂಬ ವದಂತಿಗಳೂ ಹಬ್ಬಿವೆ. 

Continue Reading

ಸ್ಯಾಂಡಲ್ ವುಡ್

Niveditha Gowda: ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ರಾ ನಿವೇದಿತಾ ಗೌಡ?

Niveditha Gowda: ಬಿಗ್‌ ಬಾಸ್‌ ಜೋಡಿ, ಕ್ಯೂಟ್‌ ಕಪಲ್‌ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ ವಿಚ್ಛೇದನ ಪಡೆದುಕೊಂಡಿದೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಲವ್ ಪ್ರೊಪೋಸಲ್ ಮಾಡಿ ಸುದ್ದಿಯಾಗಿದ್ದರು. ಚಂದನ್ ವರ್ತನೆಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇದೇ ವರ್ಷ ಮೇ 12 ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌.

VISTARANEWS.COM


on

Niveditha Gowda Demand For Divorce Alimony
Koo

ಬೆಂಗಳೂರು: ಚಂದನ್‌ ಶೆಟ್ಟಿ (Niveditha Gowda) ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಇದೀಗ ಚಂದನ್ ಹಾಗೂ ನಿವೇದಿತಾ ಪರ ವಕೀಲರಾದ ಅನಿತಾ ಅವರು ನಿವೇದಿತಾ ಅವರು ಜೀವನಾಂಶಕ್ಕೆ ಬೇಡಿಕೆ ಇಟ್ಟಿಲ್ಲ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇಬ್ಬರದ್ದೂ ಸಹ ಪರಸ್ಪರ ಒಪ್ಪಿಗೆ ವಿಚ್ಛೇದನ ಆಗಿರುವ ಕಾರಣ, ನಿವೇದಿತಾ, ಜೀವನಾಂಶಕ್ಕೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ವಕೀಲೆ ಅನಿತಾ ಹೇಳಿರುವಂತೆ, ಇಬ್ಬರೂ ಸಹ ದುಡಿಯುತ್ತಿರುವವರು, ಹಾಗಾಗಿ ಇನ್ನೊಬ್ಬರ ಹಣದ ಅವಶ್ಯಕತೆ ಇಬ್ಬರಿಗೂ ಇಲ್ಲ ಎಂದಿದ್ದಾರೆ.

ಸಂಧಾನಕ್ಕೆ ಒಪ್ಪಲಿಲ್ಲ ಚಂದನ್​-ನಿವೇದಿತಾ!

ನ್ಯಾಯಾಲಯದ ಪ್ರಕ್ರಿಯೆ ವೇಳೆ ತಾವಿಬ್ಬರೂ ಮುಂದೆ ಜತೆಯಾಗಿ ಬಾಳುವುದಕ್ಕೆ ಸಾಧ್ಯವೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದರು ಚಂದನ್‌ ಹಾಗೂ ನಿವೇದಿತಾ. ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್​ ಮುಂದೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು. ಚಂದನ್ ಹಾಗೂ ನಿವೇದಿತಾ ಅವರಿಗೆ ಕೌಟುಂಬಿಕ ಕೋರ್ಟ್‌ನ ಮಿಡಿಯೇಷನ್​ ಸೆಂಟರ್​ನಲ್ಲಿ ಮಾತುಕತೆ ನಡೆಸಲಾಯಿತು. ವಿಚ್ಛೇದನ ಪ್ರಕ್ರಿಯೆ ಮೊದಲು ಈ ಸಂಧಾನ ನಡೆಯಲೇಬೇಕು. ಅಂತೆಯೇ ಸಂಧಾನಕಾರರು ಮಾತುಕತೆ ನಡೆಸಿದಾಗ ಅವರಿಬ್ಬರು ತಮ್ಮ ನಿರ್ಧಾರದಿಂದ ವಾಪಸ್ ಬರುವುದಿಲ್ಲ ಎಂದು ಹೇಳಿದ್ದರು ಎನ್ನಲಾಗಿದೆ.

ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇಧನಕ್ಕೆ ಒಪ್ಪಿಗೆ ಕೊಡುತ್ತಾರೆ.

ಇದನ್ನೂ ಓದಿ: Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ ಬಗ್ಗೆ ಅಸಲಿ ಸತ್ಯ ಬಯಲು ಮಾಡಿದ ವಕೀಲೆ!

ಆದರೆ ಚಂದನ್‌ ಹಾಗೂ ನಿವೇದಿತಾ ಕೇಸ್‌ನಲ್ಲಿ ಪರಸ್ಪರ ಒಪ್ಪಿಗೆ ಮೇಲೆ ವಿಚ್ಛೇದನಕ್ಕೆ ಸಲ್ಲಿಸಿದ್ದ ಕಾರಣ ಹಾಗೂ ಕಳೆದ ಆರು ತಿಂಗಳಿನಿಂದಲೂ ಪತಿ-ಪತ್ನಿ ರೀತಿ ಸಹಬಾಳ್ವೆ ನಡೆಸದ ಕಾರಣ ನ್ಯಾಯಾಲಯವು ಇವರಿಗೆ ವಿಚ್ಛೇದನ ನೀಡಿದೆ.

ವಕೀಲೆ ಅನಿತಾ ಹೇಳಿಕೆ ನೀಡಿದ್ದೇನು?

ಈ ಬಗ್ಗೆ ವಕೀಲರಾದ ಅನಿತಾ ಮಾತನಾಡಿ ʻʻಇವರಿಬ್ಬರ ಬಗ್ಗೆ ಮಾಧ್ಯಮದಲ್ಲಿ ತಪ್ಪಾಗಿ ತೋರಿಸಲಾಗುತ್ತಿದೆ. ಮೊದಲು ವಿಚ್ಛೇದನ ಅರ್ಜಿ ಸಲ್ಲಿಸಿದ ಬಳಿಕ ಆರು ತಿಂಗಳ ಸಮಯಾವಕಾಶ ಇರುತ್ತಿತ್ತು. ಈಗ ಹಾಗಿಲ್ಲ. ತಕ್ಷಣಕ್ಕೆ ವಿಚ್ಛೇದನ ಪಡೆಯಬಹುದು. ದೊಡ್ಡವರು ಸಂಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅದು ಆಗಿಲ್ಲ. ಮಗು ಹೊಂದಲು ನಿವೇದಿತಾ ಒಪ್ಪಿಲ್ಲ, ಇದಕ್ಕೆ ವಿಚ್ಛೇದನ ಪಡೆದರು ಎನ್ನುವುದು ಸುಳ್ಳು. ಇಬ್ಬರ ಆಲೋಚನೆ ಬೇರೆ ಇದೆ. ಒಬ್ಬರಿಗೊಬ್ಬರು ತೆಗೆದುಕೊಂಡ ನಿರ್ಧಾರವನ್ನು ಗೌರವಿಸುತ್ತಾರೆ. ಅವರ ಖಾಸಗಿತನಕ್ಕೆ ನಾವು ಗೌರವ ಕೊಡಬೇಕು. ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ನಿನ್ನೆಯೇ ಡಿವೋರ್ಸ್‌ ಆಗಿದೆ. ಅವರಿಬ್ಬರಲ್ಲಿ ಒಳ್ಳೆಯ ಮಾನವೀಯತೆ ಇದೆ. ತುಂಬ ಮೆಚ್ಯೂರ್‌ ಆಗಿದ್ದಾರೆʼʼ ಎಂದರು.

ʻಇಬ್ಬರೂ ಡಿಫೆಂಡ್‌ ಆಗುವ ಪರಿಸ್ಥಿಯಲ್ಲಿಯೂ ಅವರು ಇಲ್ಲ. ಯಾವುದೇ ಜೀವನಾಂಶ ಕೂಡ ಕೇಳಿಲ್ಲ. ಗಂಡ ಹೆಂಡತಿ ಮಧ್ಯೆ ಭಿನ್ನವಾದ ಸಂಬಂಧ ಇರುತ್ತದೆ. ಎಷ್ಟೋ ಜನ ಗಂಡ ಹೆಂಡತಿಯರು ಹೆದರಿಕೊಂಡು ಡಿವೋರ್ಸ್‌ ಹಂತಕ್ಕೆ ಬರುವುದಿಲ್ಲ. ಇನ್ನೂ ಕೆಲವರು ತುಂಬ ಜಗಳ ಮಾಡುತ್ತಾರೆ. ಆದರೆ ತುಂಬ ಒಬ್ಬರಿಗೊಬ್ಬರು ಪ್ರೀತಿಸುತ್ತಾರೆ. ಆದರೆ ಇವರ ಕೇಸ್‌ನಲ್ಲಿ ಬೇರೆಯಾಗಬೇಕು ಎಂದು ಅವರು ಆಗಲೇ ನಿರ್ಧಾರ ಮಾಡಿದ್ದರು. ಫ್ಯಾಮಿಲಿ ಜತೆ ಕೂಡ ಚರ್ಚಿಸಿದ್ದರು. ಇದೀಗ ಅಧಿಕೃತವಾಗಿ ಡಿವೋರ್ಸ್‌ ಪಡೆದಿದ್ದಾರೆʼʼ ಎಂದರು.

Continue Reading

ಸ್ಯಾಂಡಲ್ ವುಡ್

Nikhil Kumaraswamy: ಚಿತ್ರರಂಗದಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಅಷ್ಟೇ ಎಂದ ನಿಖಿಲ್ ಕುಮಾರಸ್ವಾಮಿ

Nikhil Kumaraswamy: ಜಾಗ್ವಾರ್’ ಸಿನಿಮಾ ಮೂಲಕ ನಿಖಿಲ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ನಿಖಿಲ್‌ ಕೆಲವು ದಿನಗಳ ಹಿಂದೆ ಹೊಸ ಸಿನಿಮಾಗೆ ಚಿತ್ರೀಕರಣ ತೊಡಗಿಸಿಕೊಂಡಿದ್ದರು. ಕಮಲ್ ಹಾಸನ್, ರಜನಿಕಾಂತ್, ಅಜಿತ್‌, ವಿಜಯ್‌ ಸೇರಿದಂತೆ ಅನೇಕ ಸೂಪರ್ ಸ್ಟಾರ್‌ಗಳ ಚಿತ್ರಗಳಿಗೆ ಬಂಡವಾಳ ಹಾಕಿರುವ ಲೈಕಾ ಸಂಸ್ಥೆ ನಿಖಿಲ್ ಕುಮಾರ್ (Nikhil Kumaraswamy) ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.

VISTARANEWS.COM


on

Nikhil Kumaraswamy will stay on Kannada Film industry
Koo

ಬೆಂಗಳೂರು: ಎಚ್‌ಡಿ ಕುಮಾರಸ್ವಾಮಿ ಗೆಲುವಿನ ಬಳಿಕ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟುವ ಜವಾಬ್ದಾರಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರ ಮೇಲೆ ಬಿದ್ದಿದೆ. ಈ ಸಂಬಂಧ ಇತ್ತೀಚೆಗೆ ಸಿನಿಮಾವನ್ನು ಸಂಪೂರ್ಣ ಬಂದ್ ಮಾಡಿದ್ದೇನೆ. ನಾನು‌ ಇನ್ಮುಂದೆ ಪಕ್ಷ ಕಟ್ಟುವ ಕಡೆ ಗಮನ ಕೊಡುತ್ತೇನೆ ಎಂದಿದ್ದರು ನಿಖಿಲ್‌. ಇದೀಗ ಮಾಧ್ಯಮದ ಮುಂದೆ ನಟನೆಯಿಂದ ಸಣ್ಣ ವಿರಾಮ ತೆಗೆದುಕೊಂಡಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

ನಿಖಿಲ್‌ ಕುಮಾರಸ್ವಾಮಿ ಮಾತನಾಡಿ ʻʻಈ ಹಿಂದೆ ನಾನು ಹೇಳಿಕೆ ನೀಡಿರುವ ಬಗ್ಗೆ ತಪ್ಪಾಗಿ ಅರ್ಥೈಸಿಕೊಂಡರು ಎನ್ನಿಸುತ್ತದೆ. ಈ ಬಗ್ಗೆ ನಾನು ಸ್ಪಷ್ಟನೆ ನೀಡಬೇಕು. ನಿಖಿಲ್‌ ಕುಮಾರಸ್ವಾಮಿ ಯಾರು ಎಂದು ಜನರಿಗೆ ಗೊತ್ತಾಗಿದ್ದು ನಟನಾಗಿ. ಬಹುಶಃ ರಾಜಕಾರಣ ಹಿನ್ನೆಲೆಯಿಂದ ಬಂದಿರುವ ನನಗೆ ಇವತ್ತು ಇಷ್ಟೊಂದು ಪ್ರೀತಿ, ವಿಶ್ವಾಸ ನೀಡಿದ್ದರು, ಕನ್ನಡ ಅಭಿಮಾನಿಗಳು. ಇದನ್ನು ಮರೆಯಲು ಸಾಧ್ಯವಿಲ್ಲ. ನಾನು ಕೆಲವೇ ಸಿನಿಮಾಗಳನ್ನು ಮಾಡಿದ್ದರೂ ಪ್ರೋತ್ಸಾಹ,ಪ್ರೀತಿ ಕೊಟ್ಟಿದ್ದಾರೆ. ಸದ್ಯದ ಮಟ್ಟಿಗೆ ರಾಜಕಾರಣದಲ್ಲಿ ಸಂಘಟನೆ ವಿಚಾರದಲ್ಲಿ ಜವಾಬ್ದಾರಿಗಳಿವೆ. ಹಾಗಾಗಿ ನಾನು ಚಿತ್ರರಂಗದಿಂದ ಸ್ವಲ್ಪ ವಿರಾಮ ತೆಗೆದುಕೊಳ್ಳುತ್ತಿದ್ದೇನೆʼʼ ಎಂದರು.

ಇದನ್ನೂ ಓದಿ: Nikhil Kumaraswamy: ಸಿನಿಮಾಗೆ ಗುಡ್‌ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ?

‘ಜಾಗ್ವಾರ್’ ಸಿನಿಮಾ ಮೂಲಕ ನಿಖಿಲ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ನಿಖಿಲ್‌ ಕೆಲವು ದಿನಗಳ ಹಿಂದೆ ಹೊಸ ಸಿನಿಮಾಗೆ ಚಿತ್ರೀಕರಣ ತೊಡಗಿಸಿಕೊಂಡಿದ್ದರು. ಕಮಲ್ ಹಾಸನ್, ರಜನಿಕಾಂತ್, ಅಜಿತ್‌, ವಿಜಯ್‌ ಸೇರಿದಂತೆ ಅನೇಕ ಸೂಪರ್ ಸ್ಟಾರ್‌ಗಳ ಚಿತ್ರಗಳಿಗೆ ಬಂಡವಾಳ ಹಾಕಿರುವ ಲೈಕಾ ಸಂಸ್ಥೆ ನಿಖಿಲ್ ಕುಮಾರ್ (Nikhil Kumaraswamy) ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಲೈಕಾ ಸಂಸ್ಥೆ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಇನ್ನು ಟೈಟಲ್ ಫಿಕ್ಸ್ ಆಗಬೇಕಿದೆ. ಚಿತ್ರವನ್ನು ಲಕ್ಷ್ಮಣ್ ನಿರ್ದೇಶನ ಮಾಡುತ್ತಿದ್ದು ಚಿತ್ರೀಕರಣದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಶುರುವಾಗಿತ್ತು. ಚಿತ್ರಕ್ಕೆ ಯುಕ್ತಿ ತರೇಜಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮೂಲಕ ಲೈಕಾ ಸಂಸ್ಥೆ ಮೊದಲ ಬಾರಿಗೆ ಕನ್ನಡ ಇಂಡಸ್ಟ್ರಿಯಲ್ಲಿ ಮೊದಲ ಸಿನಿಮಾ ನಿರ್ಮಾಣ ಮಾಡುತ್ತಿದೆ.

ತಮಿಳಿನಲ್ಲಿ ‘ಕತ್ತಿ’, ‘2.0’, ‘ದರ್ಬಾರ್’, ‘ಪೊನ್ನಿಯನ್ ಸೆಲ್ವನ್’ ಸೇರಿದಂತೆ ಹಲವು ಸಿನಿಮಾಗಳನ್ನು ಈ ಸಂಸ್ಥೆ ನಿರ್ಮಿಸಿದೆ. ಕೆಲವೇ ದಿನಗಳ ಹಿಂದೆಯಷ್ಟೆ ಖಾಸಗಿ ಹೋಟೆಲ್‌ನಲ್ಲಿ ಪ್ರೊಡಕ್ಷನ್ ನಂ. 28 ಸಿನಿಮಾ ಮುಹೂರ್ತ ನೆರವೇರಿತ್ತು. ಮಾಜಿ ಪ್ರಧಾನಿ ಎಚ್‌. ಡಿ ದೇವಗೌಡರು, ಮಾಜಿ ಸಿಎಂ ಎಚ್‌. ಡಿ ಕುಮಾರಸ್ವಾಮಿ ಈ ಸಮಾರಂಭದಲ್ಲಿ ಭಾಗಿಯಾಗಿ ತಂಡಕ್ಕೆ ಶುಭ ಕೋರಿದ್ದರು.

Continue Reading

ಸ್ಯಾಂಡಲ್ ವುಡ್

Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ ಬಗ್ಗೆ ಅಸಲಿ ಸತ್ಯ ಬಯಲು ಮಾಡಿದ ವಕೀಲೆ!

Niveditha Gowda: ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

VISTARANEWS.COM


on

Niveditha Gowda chandan divorce main reason told by advocate
Koo

ಬೆಂಗಳೂರು: ಚಂದನ್‌ ಹಾಗೂ ನಿವೇದಿತಾ (Niveditha Gowda) ಅವರು ಡಿವೋರ್ಸ್‌ ಪಡೆದ ಕಾರಣಗಳ ಬಗ್ಗೆ ಹಲವು ವದಂತಿಗಳು ಹಬ್ಬಿವೆ. ಈಗ ಚಂದನ್ ಹಾಗೂ ನಿವೇದಿತಾ ಪರ ವಕೀಲರಾದ ಅನಿತಾ ಅವರು ಇವರ ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ರಿವೀಲ್ ಮಾಡಿದ್ದಾರೆ. `ಒಂದು ವರ್ಷಗಳ ಹಿಂದೆಯೇ ಇವರು ವಿಚ್ಛೇದನಕ್ಕೆ ನಿರ್ಧರಿಸಿದ್ದರು’ ಎಂದು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ವಕೀಲರಾದ ಅನಿತಾ ಮಾತನಾಡಿ ʻʻಇವರಿಬ್ಬರ ಬಗ್ಗೆ ಮಾಧ್ಯಮದಲ್ಲಿ ತಪ್ಪಾಗಿ ತೋರಿಸಲಾಗುತ್ತಿದೆ. ಮೊದಲು ವಿಚ್ಛೇದನ ಅರ್ಜಿ ಸಲ್ಲಿಸಿದ ಬಳಿಕ ಆರು ತಿಂಗಳ ಸಮಯಾವಕಾಶ ಇರುತ್ತಿತ್ತು. ಈಗ ಹಾಗಿಲ್ಲ. ತಕ್ಷಣಕ್ಕೆ ವಿಚ್ಛೇದನ ಪಡೆಯಬಹುದು. ದೊಡ್ಡವರು ಸಂಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅದು ಆಗಿಲ್ಲ. ಮಗು ಹೊಂದಲು ನಿವೇದಿತಾ ಒಪ್ಪಿಲ್ಲ, ಇದಕ್ಕೆ ವಿಚ್ಛೇದನ ಪಡೆದರು ಎನ್ನುವುದು ಸುಳ್ಳು. ಇಬ್ಬರ ಆಲೋಚನೆ ಬೇರೆ ಇದೆ. ಒಬ್ಬರಿಗೊಬ್ಬರು ತೆಗೆದುಕೊಂಡ ನಿರ್ಧಾರವನ್ನು ಗೌರವಿಸುತ್ತಾರೆ. ಅವರ ಖಾಸಗಿತನಕ್ಕೆ ನಾವು ಗೌರವ ಕೊಡಬೇಕು. ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ನಿನ್ನೆಯೇ ಡಿವೋರ್ಸ್‌ ಆಗಿದೆ. ಅವರಿಬ್ಬರಲ್ಲಿ ಒಳ್ಳೆಯ ಮಾನವೀಯತೆ ಇದೆ. ತುಂಬ ಮೆಚ್ಯೂರ್‌ ಆಗಿದ್ದಾರೆʼʼ ಎಂದರು.

ʻʻಇಬ್ಬರೂ ಡಿಫೆಂಡ್‌ ಆಗುವ ಪರಿಸ್ಥಿಯಲ್ಲಿಯೂ ಅವರು ಇಲ್ಲ. ಯಾವುದೇ ಜೀವನಾಂಶ ಕೂಡ ಕೇಳಿಲ್ಲ. ಗಂಡ ಹೆಂಡತಿ ಮಧ್ಯೆ ಭಿನ್ನವಾದ ಸಂಬಂಧ ಇರುತ್ತದೆ. ಎಷ್ಟೋ ಜನ ಗಂಡ ಹೆಂಡತಿಯರು ಹೆದರಿಕೊಂಡು ಡಿವೋರ್ಸ್‌ ಹಂತಕ್ಕೆ ಬರುವುದಿಲ್ಲ. ಇನ್ನೂ ಕೆಲವರು ತುಂಬ ಜಗಳ ಮಾಡುತ್ತಾರೆ. ಆದರೆ ತುಂಬ ಒಬ್ಬರಿಗೊಬ್ಬರು ಪ್ರೀತಿಸುತ್ತಾರೆ. ಆದರೆ ಇವರ ಕೇಸ್‌ನಲ್ಲಿ ಬೇರೆಯಾಗಬೇಕು ಎಂದು ಅವರು ಆಗಲೇ ನಿರ್ಧಾರ ಮಾಡಿದ್ದರು. ಫ್ಯಾಮಿಲಿ ಜತೆ ಕೂಡ ಚರ್ಚಿಸಿದ್ದರು. ಇದೀಗ ಅಧಿಕೃತವಾಗಿ ಡಿವೋರ್ಸ್‌ ಪಡೆದಿದ್ದಾರೆʼʼ ಎಂದರು.

ಇದನ್ನೂ ಓದಿ: Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣ? ಯಾಕೆ ಈ ಗಾಸಿಪ್‌?

ನಿವೇದಿತಾ ಗೌಡ ಪೋಸ್ಟ್‌

ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಶೆಟ್ಟಿ ಬಳಿಕ ಮದುವೆಯಾಗಿದ್ದರು.

Continue Reading
Advertisement
Modi 3.0 Cabinet
ಪ್ರಮುಖ ಸುದ್ದಿ26 mins ago

Modi 3.0 Cabinet: ಮೋದಿ 3ನೇ ಅವಧಿಯಲ್ಲಿ ಯಾರಿಗೆಲ್ಲ ಮಂತ್ರಿ ಭಾಗ್ಯ? ರೇಸ್‌ನಲ್ಲಿ ಯಾರಿದ್ದಾರೆ? ಇಲ್ಲಿದೆ ಪಟ್ಟಿ

Eating Style
ಲೈಫ್‌ಸ್ಟೈಲ್27 mins ago

Eating Style: ಉಣ್ಣುವ ರೀತಿ ನಾವು ಎಂಥವರು ಎನ್ನುವುದನ್ನು ಬಯಲು ಮಾಡುತ್ತದೆ! ಅದು ಹೇಗೆ?

Narendra Modi
ದೇಶ56 mins ago

Narendra Modi: ಮೋದಿ ಪ್ರಮಾಣವಚನ; ಇಂದಿನ ಕಾರ್ಯಕ್ರಮ ಏನೇನು? ಹೇಗಿದೆ ಭದ್ರತೆ, ಸಿದ್ಧತೆ?

karnataka weather forecast
ಮಳೆ57 mins ago

Karnataka Weather : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಅಬ್ಬರ?

Narendra Modi
ದೇಶ1 hour ago

Narendra Modi: 3ನೇ ಬಾರಿ ಪ್ರಧಾನಿಯಾಗಿ ಇಂದು ಸಂಜೆ ಮೋದಿ ಪ್ರಮಾಣ; ಇಲ್ಲಿದೆ ಬಾಲ್ಯದಿಂದ ವಿಶ್ವಗುರುತನಕದ ಜೀವನ ಚಿತ್ರಣ

5:2 Diet
ಆರೋಗ್ಯ1 hour ago

5:2 Diet: ಏನಿದು 5:2 ಮಧ್ಯಂತರ ಉಪವಾಸ? ಇದರ ಪ್ರಯೋಜನಗಳೇನು?

IND vs PAK
ಕ್ರೀಡೆ2 hours ago

IND vs PAK: ಇಂದು ಇಂಡೋ-ಪಾಕ್​ ರೋಚಕ ಟಿ20 ಕದನ; ವಿಜಯ ಪತಾಕೆ ಹಾರಿಸಲಿ ಭಾರತ

Dina Bhavishya
ಭವಿಷ್ಯ2 hours ago

Dina Bhavishya : ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಇರಲಿ ಎಚ್ಚರಿಕೆ

NED vs RSA
T20 ವಿಶ್ವಕಪ್8 hours ago

NED vs RSA: ಹೋರಾಡಿ ಸೋತ ನೆದರ್ಲೆಂಡ್ಸ್​; ಹರಿಣ ಪಡೆಗೆ ಪ್ರಯಾಸದ ಗೆಲುವು

Karnataka police
ಕರ್ನಾಟಕ10 hours ago

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌