Viral News : ಐಎಎಸ್ ಅಧಿಕಾರಿಯ ಈ ಪೋಸ್ಟ್ ನೋಡಿ ತಮ್ಮ ಬಾಲ್ಯ ನೆನಪಿಸಿಕೊಂಡ ನೆಟ್ಟಿಗರು - Vistara News

ವೈರಲ್ ನ್ಯೂಸ್

Viral News : ಐಎಎಸ್ ಅಧಿಕಾರಿಯ ಈ ಪೋಸ್ಟ್ ನೋಡಿ ತಮ್ಮ ಬಾಲ್ಯ ನೆನಪಿಸಿಕೊಂಡ ನೆಟ್ಟಿಗರು

ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಹಳೆಯ ಪೈಸೆ ನಾಣ್ಯಗಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral News) ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕಾಲ ಆಗಿಂದಾಗ ಬದಲಾಗುತ್ತಾ ಇರುತ್ತದೆ. ಅದೇ ರೀತಿ ಹಣದ ಮೌಲ್ಯ ಕೂಡ. ಹಿಂದೆ ಒಂದು ರೂಪಾಯಿ ಇದ್ದರೆ ಒಂದು ದಿನದ ಖರ್ಚಿಗೆ ಆಗುತ್ತಿತ್ತು. ಆದರೆ ಇಂದು ಅದೇ ಒಂದು ರೂಪಾಯಿಯ ಮೌಲ್ಯ ತೀರಾ ಕಡಿಮೆ. ದುಡ್ಡಿಗೆ ಹೆಚ್ಚಿನ ಮೌಲ್ಯವಿದ್ದ ಆ ಕಾಲದ ನೆನಪನ್ನು ಮರಳಿಸುವ ಪೋಸ್ಟ್ ಒಂದನ್ನು ಐಎಎಸ್ ಅಧಿಕಾರಿಯೊಬ್ಬರು ಮಾಡಿದ್ದು, ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral News) ಆಗಿದೆ.

ಇದನ್ನೂ ಓದಿ: Viral video: ಹತ್ತಾರು ಪಂಜು ಕಟ್ಟಿಕೊಂಡು ಬಂದ ಪಂಜುರ್ಲಿ: ಯಕ್ಷಗಾನದ ವೇಷ ವೈರಲ್
2009ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಅವನೀಶ್ ಶರಣ್ ಅವರು ಈ ಕುರಿತು ಒಂದು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಹಳೆಯ ನಾಣ್ಯಗಳಿರುವ ಫೋಟೋವನ್ನು ಹಂಚಿಕೊಳ್ಳಲಾಗಿದೆ. 2 ಪೈಸೆ, 3 ಪೈಸೆ, 5 ಪೈಸೆ, 10 ಪೈಸೆ, 20 ಪೈಸೆ ಮತ್ತು 50 ಪೈಸೆಯ ನಾಣ್ಯಗಳಿರುವ ಫೋಟೋ ಅದಾಗಿದೆ. ಅದನ್ನು ಹಂಚಿಕೊಂಡಿರುವ ಅಧಿಕಾರಿಯು, “ಇವುಗಳಲ್ಲಿ ಯಾವುದನ್ನು ಬಳಸಿ ಏನನ್ನಾದರೂ ಖರೀದಿಸಿದ್ದೀರಾ?” ಎಂದು ಕೇಳಿದ್ದಾರೆ.


ಅವನೀಶ್ ಅವರ ಈ ಪೋಸ್ಟ್ ನೋಡುತ್ತಿದ್ದಂತೆಯೇ ಅನೇಕರು ತಮ್ಮ ಬಾಲ್ಯಕ್ಕೆ ತೆರಳಿದ್ದಾರೆ. ಬಾಲ್ಯದಲ್ಲಿ 10, 20 ಪೈಸೆ ಕೊಟ್ಟು ಹೊಟ್ಟೆ ತುಂಬ ತಿನಿಸು ತಿನ್ನುತ್ತಿದ್ದದ್ದು, ಸಿನಿಮಾ ನೋಡುತ್ತಿದ್ದ ಅನುಭವಗಳನ್ನು ಹಂಚಿಕೊಳ್ಳಲಾರಂಭಿಸಿದ್ದಾರೆ. ಕೆಲವರು ಈ ಎಲ್ಲ ನಾಣ್ಯಗಳನ್ನೂ ಬಳಕೆ ಮಾಡಿರುವ ಅನುಭವ ಇರುವುದಾಗಿಯೂ ಹೇಳಿಕೊಂಡಿದ್ದಾರೆ. ಅವನೀಶ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣದ ತುಂಬೆಲ್ಲ ಹರಿದಾಡಿದ್ದು, ವೈರಲ್ ಆಗಿದೆ.

ಇದನ್ನೂ ಓದಿ: Viral Video: ಮಾಡಬಾರದ ಜಾಗದಲ್ಲಿ ಯೋಗ ಮಾಡಿದ ಯುವತಿ; ಬಿದ್ದಿದ್ದು 5 ಅಡಿ ಕೆಳಗೆ, ತಲುಪಿದ್ದು 30 ಅಡಿ ಆಳವನ್ನು!
ಭಾರತೀಯ ರಿಸರ್ವ್ ಬ್ಯಾಂಕ್ 25 ಪೈಸೆ ಮತ್ತು ಅದರೊಳಗಿನ ಮೌಲ್ಯದ ಎಲ್ಲ ನಾಣ್ಯಗಳನ್ನು 2011ರಲ್ಲಿ ಅಮಾನ್ಯ ಮಾಡಿತು. ಈಗ 50 ಪೈಸೆಯ ನಾಣ್ಯ ಚಾಲ್ತಿಯಲ್ಲಿದೆ. ಭಾರತದ ಅತ್ಯಂತ ಕಡಿಮೆ ಮೌಲ್ಯದ್ದಾಗಿರುವ ಈ ನಾಣ್ಯ ಕಾಣಸಿಗುವುದು ತೀರಾ ಅಪರೂಪ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Moon: ಭೂಮಿಯಿಂದ ದೂರ ಹೊರಟ ಚಂದ್ರ, ಶೀಘ್ರದಲ್ಲೇ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

Moon: ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ.

VISTARANEWS.COM


on

Moon
Koo

ನವದೆಹಲಿ: ಚಂದಿರನಿಗೂ ಮಾನವನಿಗೂ ಎಲ್ಲಿಲ್ಲದ ನಂಟು. ಚಂದಿರನನ್ನು ತೋರಿಸಿ ಅಮ್ಮ ಕೈತುತ್ತು ತಿನಿಸಿದ, ಚಂದ್ರನ ಬೆಳಕಿನಲ್ಲಿ ರಾತ್ರಿ ರೈತ ಜಮೀನಿನಲ್ಲಿ ಕೆಲಸ ಮಾಡಿದ, ಚಂದಿರನ ಬೆಳದಿಂಗಳಲ್ಲಿ ಊರೆಲ್ಲ ಸುತ್ತಾಡಿದ ನೆನಪುಗಳು ಕಾಡುತ್ತವೆ. ಇನ್ನು ದೇಶದ ಕವಿಗಳೂ ಅಷ್ಟೇ, ಚಂದಿರನ ಬಗ್ಗೆ ಬಗೆಬಗೆಯ ಕವಿತೆಗಳನ್ನು ಬರೆಯುವ ಮೂಲಕ ನಮಗೆ ಚಂದಿರ ಏಕೆ ಮುಖ್ಯ ಎಂಬುದನ್ನು ಸಾರಿದ್ದಾರೆ. ಚಂದಮಾಮ ಎಂದೂ ಕೂಡ ವರ್ಣಿಸಿದ್ದಾರೆ. ಇಂತಹ ಚಂದಮಾಮ ಈಗ ಭೂಮಿಯಿಂದ ದೂರವಾಗುತ್ತಿದ್ದಾನೆ. ಅಷ್ಟೇ ಅಲ್ಲ, ಶೀಘ್ರದಲ್ಲೇ ನಮಗೆ ದಿನದಲ್ಲಿ 24 ಗಂಟೆ ಬದಲು 25 ಗಂಟೆ ಇರಲಿವೆ ಎಂದು ಅಧ್ಯಯನವೊಂದು ಭೀಕರ ಮಾಹಿತಿಯನ್ನು ಬಿಚ್ಚಿಟ್ಟಿದೆ.

ಹೌದು, ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ. ಈ ಅಧ್ಯಯನ ವರದಿ ಈಗ ಜಗತ್ತಿನಾದ್ಯಂತ ಸುದ್ದಿಯಾಗಿದೆ.

ದಿನಕ್ಕೆ 25 ಗಂಟೆ ಹೇಗೆ?

ಪ್ರತಿ ವರ್ಷ ಚಂದ್ರನು ಭೂಮಿಯಿಂದ 3.8 ಸೆಂಟಿಮೀಟರ್‌ ದೂರವಾಗುತ್ತಿದ್ದಾನೆ. ಇದರಿಂದಾಗಿ ಭೂಮಿಯ ಒಂದು ದಿನದ ಅವಧಿಯು ಹೆಚ್ಚಾಗುತ್ತದೆ. ಅಂದರೆ, ಈಗ ದಿನಕ್ಕೆ 24 ಗಂಟೆ ಇದ್ದರೆ, ಮುಂಬರುವ ವರ್ಷಗಳಲ್ಲಿ ದಿನಕ್ಕೆ 25 ಗಂಟೆ ಇರಲಿವೆ. ಕಾಲಕಾಲಕ್ಕೆ ಭೂಮಿಯ ಮೇಲಿನ ಒಂದು ದಿನದಲ್ಲಿರುವ ಗಂಟೆಗಳ ಸಂಖ್ಯೆ ಹೆಚ್ಚಾಗುತ್ತದೆ. ಇದು ಸಹಜ ಪ್ರಕ್ರಿಯೆಯಾಗಿದೆ ಎಂಬುದಾಗಿ ವಿಜ್ಞಾನಿಗಳು ತಿಳಿಸಿದ್ದಾರೆ.

ಮುಂದಿನ 200 ದಶಲಕ್ಷ ವರ್ಷಗಳ ಬಳಿಕ ದಿನದಲ್ಲಿ 25 ಗಂಟೆ ಇರಲಿವೆ ಎಂದು ವಿಜ್ಞಾನಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಸುಮಾರು 1.4 ಶತಕೋಟಿ ವರ್ಷಗಳ ಹಿಂದೆ, ಭೂಮಿಯ ಅವಧಿಯು ದಿನಕ್ಕೆ ಕೇವಲ 18 ಗಂಟೆಯಾಗಿತ್ತು. ಕಾಲಕಾಲಕ್ಕೆ ಅದು ಹೆಚ್ಚಾಗುತ್ತ 24 ಗಂಟೆಗೆ ಏರಿಕೆಯಾಗಿದೆ. “ಭೂಮಿಯಿಂದ ಸೂರ್ಯನು ದೂರವಾಗುತ್ತ ಹೋದರೆ, ಭೂಮಿಯ ಮೇಲಿನ ಒಂದು ದಿನದ ಅವಧಿಯು ವಿಸ್ತರಣೆಯಾಗುತ್ತದೆ” ಎಂದು ವಿವಿ ಪ್ರೊಫೆಸರ್‌ ಸ್ಟೀಫನ್‌ ಮೇಯರ್ಸ್‌ ಹೇಳಿದ್ದಾರೆ.

ಇದನ್ನೂ ಓದಿ: DMK leader Controversy: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ: ಡಿಎಂಕೆ ನಾಯಕನ ವಿಡಿಯೋ ಫುಲ್‌ ವೈರಲ್‌

Continue Reading

ದೇಶ

Wayanad Landslide: ವಯನಾಡು ಭೂಕುಸಿತಕ್ಕೆ ಗೋಹತ್ಯೆಯೇ ಕಾರಣ ಎಂದ ಬಿಜೆಪಿ ನಾಯಕ; ಅವರ ವಿವರಣೆ ಹೀಗಿದೆ!

Wayanad Landslide: ಕೇರಳದ ವಯನಾಡು ಭೂಕುಸಿತಕ್ಕೆ ಅಕ್ರಮವಾಗಿ ರೆಸಾರ್ಟ್‌ಗಳನ್ನು ನಿರ್ಮಿಸಿರುವುದು, ಸೂಕ್ಷ್ಮ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುವುದು, ಅರಣ್ಯ ನಾಶಪಡಿಸುವುದು ಸೇರಿ ಹಲವು ಕಾರಣಗಳನ್ನು ನೀಡಲಾಗುತ್ತಿದೆ. ಆದರೆ, ಬಿಜೆಪಿ ನಾಯಕ ಜ್ಞಾನದೇವ್‌ ಅಹುಜಾ ಅವರು ಭೂಕುಸಿತಕ್ಕೆ ಬೇರೆಯದ್ದೇ ಕಾರಣ ನೀಡಿದ್ದಾರೆ. ಮುಂದೆ ಓದಿ…

VISTARANEWS.COM


on

Wayanad Landslide
Koo

ತಿರುವನಂತಪುರಂ/ಜೈಪುರ: ಕೇರಳದ ವಯನಾಡು ಈಗ ಅಕ್ಷರಶಃ ಮಸಣದಂತಾಗಿದೆ. ಭಾರಿ ಮಳೆ, ಭೀಕರ ಭೂಕುಸಿತದಿಂದಾಗಿ (Wayanad Landslide) 350ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇನ್ನೂ 300 ಜನ ನಾಪತ್ತೆಯಾಗಿದ್ದಾರೆ. ಎಲ್ಲೆಂದರಲ್ಲಿ ಶವಗಳು ಸಿಗುತ್ತಿವೆ. ಸಾವಿರಾರು ಎಕರೆ ಕೃಷಿ ಭೂಮಿ ಹಾಳಾಗಿದೆ. ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಈಗಲೂ ಹಗಲು-ರಾತ್ರಿ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು, ಭೂಕುಸಿತಕ್ಕೆ ಅರಣ್ಯ ನಾಶ, ರೆಸಾರ್ಟ್‌ಗಳ ನಿರ್ಮಾಣ ಸೇರಿ ಹಲವು ಕಾರಣಗಳನ್ನು ಗುರುತಿಸಲಾಗುತ್ತಿದೆ. ಇದರ ಬೆನ್ನಲ್ಲೇ, “ಕೇರಳದಲ್ಲಿ ಭೂಕುಸಿತ ಉಂಟಾಗಲು ಗೋವುಗಳ ಹತ್ಯೆಯೇ ಕಾರಣ” ಎಂಬುದಾಗಿ ಬಿಜೆಪಿ ನಾಯಕ ಜ್ಞಾನದೇವ್‌ ಅಹುಜಾ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ರಾಜಸ್ಥಾನದ ಬಿಜೆಪಿ ನಾಯಕ, ಮಾಜಿ ಶಾಸಕ ಜ್ಞಾನದೇವ್‌ ಅಹುಜಾ ಹೇಳಿಕೆ ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ. “ವಯನಾಡಿನಲ್ಲಿ ಭೂಕಂಪ ಸಂಭವಿಸಿರುವುದು ಗೋಹತ್ಯೆಯ ಪರಿಣಾಮವಾಗಿದೆ. ಕೇರಳದಲ್ಲಿ ಗೋಹತ್ಯೆಯನ್ನು ನಿಲ್ಲಿಸದಿದ್ದದರೆ ಇಂತಹ ಹಲವು ದುರಂತಗಳು ಸಂಭವಿಸುತ್ತಲೇ ಇರುತ್ತವೆ. 2018ರಿಂದಲೂ ನಾನು ಇದನ್ನು ಗಮನಿಸುತ್ತಿದ್ದೇನೆ. ಎಲ್ಲೆಲ್ಲಿ ಗೋವುಗಳ ಹತ್ಯೆಯು ಜಾಸ್ತಿಯಾಗಿರುತ್ತದೆಯೋ, ಅಲ್ಲೆಲ್ಲ ಭೂಕುಸಿತ ಸಂಭವಿಸುತ್ತಿರುತ್ತವೆ. ಕೇರಳದ ವಯನಾಡು ಇದಕ್ಕೆ ನಿದರ್ಶನ” ಎಂದು ಮಾಧ್ಯಮವೊಂದರ ಜತೆ ಮಾತನಾಡುವಾಗ ಅಹುಜಾ ಹೇಳಿದ್ದಾರೆ. ಆದರೆ, ಗೋವುಗಳ ಹತ್ಯೆಗೂ, ಭೂಕುಸಿತಕ್ಕೂ ಹೇಗೆ ನಂಟಿದೆ ಎಂಬುದನ್ನು ಅವರು ವಿವರಿಸಿಲ್ಲ.

ಸಹಾಯಹಸ್ತ ಚಾಚಿದ ಕರ್ನಾಟಕ

ವಯನಾಡು ಭೂಕುಸಿತದಿಂದ ಸಾವಿರಾರು ಜನ ನಿರಾಶ್ರಿತರಾಗಿದ್ದು, ಅವರ ನೆರವಿಗೆ ಕರ್ನಾಟಕ ಸರ್ಕಾರ ಧಾವಿಸಿದೆ. “ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು. ಭೂಕುಸಿತದಿಂದ ಸಂಕಷ್ಟದಲ್ಲಿರುವ ಕನ್ನಡಿಗರ ನೆರವಿಗೆ ಧಾವಿಸಲು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗಿತ್ತು. ಗಡಿ ಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿತ್ತು. ಹೆಚ್.ಡಿ ಕೋಟೆಯಲ್ಲಿ ಗಾಯಾಳುಗಳನ್ನು ಕರೆತಂದು ಅಗತ್ಯ ಚಿಕಿತ್ಸೆ ಕೊಡಿಸಲು ಬಸ್‌ಗಳನ್ನು ಏರ್ಪಡಿಸಲಾಗಿತ್ತು. ಅಗತ್ಯ ಸಲಕರಣೆಗಳನ್ನು ಹೊತ್ತ ಬೆಂಗಳೂರಿನ ಎನ್.ಡಿ.ಆರ್.ಎಫ್ ಹಾಗೂ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಸೇನಾಪಡೆಯ ತಂಡಗಳು ವಯನಾಡು ತಲುಪಿದ್ದವು.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತ: ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

Continue Reading

ದೇಶ

Wayanad Landslide: ವಯನಾಡು ಭೂಕುಸಿತ: ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

Wayanad Landslide: ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ 340ಕ್ಕೂ ಹೆಚ್ಚು ಮಂದಿಯ ಪ್ರಾಣವನ್ನು ಕಸಿದುಕೊಂಡಿದ್ದು, ನೂರಾರು ಮಂದಿ ಕಾಣೆಯಾಗಿದ್ದಾರೆ. ಈ ಮಧ್ಯೆ ದಟ್ಟ ಅರಣ್ಯದೊಳಗೆ ಆಹಾರವಿಲ್ಲದೆ ಜೀವ ಕೈಯಲ್ಲಿ ಹಿಡಿದು ಕುಳಿತಿದ್ದ ಬುಡಕಟ್ಟು ಕುಟುಂಬವೊಂದನ್ನು ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಕಾಪಾಡಿದೆ. ಮಗುವನ್ನು ಅಧಿಕಾರಿಗಳು ಎತ್ತಿಕೊಂಡು ಬರುತ್ತಿರುವ ಫೊಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ (Wayanad Landslide) 340ಕ್ಕೂ ಹೆಚ್ಚು ಮಂದಿಯ ಪ್ರಾಣವನ್ನು ಕಸಿದುಕೊಂಡಿದ್ದು, ನೂರಾರು ಮಂದಿ ಕಾಣೆಯಾಗಿದ್ದಾರೆ (Wayanad Landslide). ನಾಪತ್ತೆಯಾದವರ ರಕ್ಷಣೆಗಾಗಿ ಸೇನೆ, ಅರಣ್ಯ ಇಲಾಖೆ ಸಿಬ್ಬಂದಿ, ಎನ್‌ಡಿಆರ್‌ಎಫ್‌ ಪಡೆ, ಸ್ಥಳೀಯರು, ವಿವಿಧ ಸಂಘ ಸಂಸ್ಥೆಗಳು ಕಾರ್ಯಾಚರಣೆ ನಡೆಸುತ್ತಿವೆ. ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಲಾಗುತ್ತದೆ. ಈ ಮಧ್ಯೆ ದಟ್ಟ ಅರಣ್ಯದೊಳಗೆ ಆಹಾರವಿಲ್ಲದೆ ಜೀವ ಕೈಯಲ್ಲಿ ಹಿಡಿದು ಕುಳಿತಿದ್ದ ಬುಡಕಟ್ಟು ಕುಟುಂಬವೊಂದನ್ನು ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಕಾಪಾಡಿದೆ. ಮಗುವನ್ನು ಅಧಿಕಾರಿಗಳು ಎತ್ತಿಕೊಂಡು ಬರುತ್ತಿರುವ ಫೊಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral News).

ಮೆಪ್ಪಾಡಿಯ ಸೂಜಿಪ್ಪಾರ ಜಲಪಾತವಿರುವ ಎರಾಕುಂಡ್‌ ಅರಣ್ಯ ಪ್ರದೇಶದಲ್ಲಿದ್ದ ಕೃಷ್ಣನ್‌, ಅವರ ಪತ್ನಿ ಶಾಂತಾ ಮತ್ತು ನಾಲ್ಕು ಮಕ್ಕಳನ್ನು ಒಳಗೊಂಡ ಕುಟುಂಬವನ್ನು ನಾಲ್ವರು ಅರಣ್ಯಾಧಿಗಳ ಗುಂಪು ಸತತ ಎಂಟು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ. 10 ಹಗ್ಗಗಳನ್ನು ಸೇರಿಸಿ ಕಟ್ಟಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಕಲ್ಪೆಟ್ಟ ರೇಂಜ್‌ ಫಾರೆಸ್ಟ್‌ ಆಫೀಸರ್‌ ಕೆ.ಆಶೀಫ್‌, ಮುಂಡಕೈ ಸೆಕ್ಷನ್‌ ಫಾರೆಸ್ಟ್‌ ಆಫೀಸರ್‌ ಜಯಚಂದ್ರನ್‌, ಕಲ್ಪೆಟ್ಟ ರೇಂಜ್‌ ಬೀಟ್‌ ಫಾರೆಸ್ಟ್‌ ಆಫೀಸರ್‌ ಕೆ.ಅನಿಲ್‌ ಕುಮಾರ್‌ ಮತ್ತು ಕಲ್ಪೆಟ್ಟ ಆರ್‌.ಆರ್‌.ಡಿ. ಅನೂಪ್‌ ತೋಮಸ್‌ ಅವರನ್ನೊಳಗೊಂಡ ಗುಂಪು ಅತ್ಯಂತ ಸಾಹಸಿಕವಾಗಿ ಈ ಆದಿವಾಸಿ ಕುಟುಂಬನ್ನು ಕಾಪಾಡಿದೆ.

ಕಾಡಿನಲ್ಲಿ ಗುಡಿಸಲೊಂದರಲ್ಲಿ ಜೀವಿಸುತ್ತಿದ್ದ ಈ ಕುಟುಂಬ ಆಹಾರವಿಲ್ಲದೆ ಕಾಡಿನಲ್ಲಿ ಅಲೆದಾಡುತ್ತಿದ್ದಾಗ ಅರಣ್ಯಾಧಿಕಾರಿಗಳ ಕಣ್ಣಿಗೆ ಬಿದ್ದಿದೆ. ಬಳಿಕ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ಯಲು ಮುಂದಾಗಿದ್ದಾರೆ. ಮೊದ ಮೊದಲು ಅವರು ಬರಲು ನಿರಾಕರಿಸಿದರು. ಬಳಿಕ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಸಿದ ಬಳಿಕ ನಮ್ಮೊಂದಿಗೆ ಬರಲು ಒಪ್ಪಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪೈಕಿ ಚಿಕ್ಕ ಚಿಕ್ಕ ಮಕ್ಕಳಿಗೆ ಬಟ್ಟೆ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರು. ನಮ್ಮ ಬಟ್ಟೆಯನ್ನು ಅವರಿಗೆ ತೊಡಿಸಿ ಎದೆಗವುಚಿಕೊಂಡು ಅವರನ್ನು ಹೊರ ಕರೆ ತಂದೆವು ಎಂದು ಅವರು ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳ ಈ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ರಾತ್ರಿ ಇಡಿ ಕಾವಲು ನಿಂರ ಕಾಡಾನೆ

ಇನ್ನು ದುರಂತದಿಂದ ಪಾರಾಗಿ ಸದ್ಯ ಮೇಪ್ಪಾಡಿ ಜಿಎಚ್‌ಎಸ್‌ಎಸ್‌ನಲ್ಲಿರುವ ಚುರಲ್​​ಮಲದ ಸುಜಾತಾ ಅವರದ್ದು ಇನ್ನೊಂದು ರೋಚಕ ಅನುಭವ. ಮಂಗಳವಾರ ದುರಂತದಿಂದ ಪಾರಾಗಿ ಓಡಿ ಬಂದಿದ್ದ ತಮಗೆ ಕಾಡಾನೆಯೊಂದು ಕಾವಲಾಗಿ ನಿಂತಿರುವ ಅಪರೂಪದ ಕ್ಷಣವನ್ನು ಅವರು ಹಂಚಿಕೊಂಡಿದ್ದಾರೆ. ಮಂಗಳವಾರ ಮುಂಜಾನೆ ಭೂಕುಸಿತದಿಂದ ಸುಜಾತಾ ಅವರ ಮನೆ ನೆಲಸಮವಾಗಿತ್ತು. ಈ ವೇಳೆ ಅವರು ಮತ್ತು ಕುಟುಂಬದ ನಾಲ್ವರು ಸಿಕ್ಕಿ ಬಿದ್ದಿದ್ದರು. ಕೂಡಲೇ ಅವರ ಮಗ ಗಿಗೀಶ್ ಪ್ರತಿಯೊಬ್ಬರನ್ನೂ ಹೊರಗೆ ಕರೆ ತಂದಿದ್ದರು.

ಸುತ್ತಲೂ ನೀರು ಆವರಸಿತ್ತು. ಹೇಗೋ ಈಜುತ್ತಾ ಬೆಟ್ಟದ ಬಳಿ ಬಂದಿದ್ದರು. ಎಲ್ಲರ ಕೈಕಾಲುಗಳಿಗೆ ಗಾಯವಾಗಿತ್ತು. ಅಲ್ಲಿಗೆ ಬಂದಾಗ ದೊಡ್ಡ ಕಾಡಾನೆಯೊಂದು ಎದುರಾಗಿತ್ತು. ʼʼನಾವು ಒಂದು ದೊಡ್ಡ ದುರಂತದಿಂದ ತಪ್ಪಿಸಿಕೊಂಡು ಬಂದಿದ್ದೀವಿ. ನೀನು ನಮಗೇನೂ ಮಾಡಬೇಡಪ್ಪ ಎಂದು ನಾನು ಆನೆಯ ಮುಂದೆ ನಿಂತು ಕಣ್ಣೀರು ಹಾಕಿದೆ. ಆಣೆಗೂ ಕರಣೆ ಉಕ್ಕಿತ್ತು. ಬಳಿಕ ಬೆಳಗಾಗುವವರೆಗೆ ನಾವು ಆನೆಯ ಕಾಲ ಹತ್ತಿರವೇ ಸಮಯ ಕಳೆದೆವು. ಬೆಳಗ್ಗೆ ಎಲ್ಲಿಂದಲೂ ಬಂದವರು ನಮ್ಮನ್ನು ಕರೆದುಕೊಂಡು ಈ ಕಾಳಜಿ ಕೇಂದ್ರಕ್ಕೆ ತಲುಪಿಸಿದರುʼʼ ಎಂದು ಸುಜಾತಾ ವಿವರಿಸಿದ್ದಾರೆ.

ಇದನ್ನೂ ಓದಿ: Wayanad Landslide: ಭೂಕುಸಿತದ ಹಾಟ್‌ಸ್ಪಾಟ್‌ಗಳಲ್ಲಿ ಕಾಮಗಾರಿಗೆ ಅನುಮತಿ ನೀಡಿದ್ದೇಕೆ? ಹಸಿರು ನ್ಯಾಯ ಮಂಡಳಿ ಪ್ರಶ್ನೆ

Continue Reading

Latest

Viral Video: ಮೈಗೆ ಟವೆಲ್ ಸುತ್ತಿಕೊಂಡು ಬೀದಿ ತುಂಬಾ ಓಡಾಡಿದ ಯುವತಿ; ನೋಡಿದ ಜನ ಸುಸ್ತು!

Viral Video: ಮಿಂತ್ರಾ ಫ್ಯಾಷನ್ ಸೂಪರ್ ಸ್ಟಾರ್ ವಿಜೇತೆ ಮತ್ತು ಇನ್ಸ್ಟಾಗ್ರಾಂನಲ್ಲಿ 37,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ತನುಮಿತಾ ಘೋಷ್ ಇತ್ತೀಚೆಗೆ ಮುಂಬೈನ ಜನರು ಓಡಾಡುತ್ತಿದ್ದ ಬೀದಿಗಳಲ್ಲಿ ದೇಹಕ್ಕೆ ಟವೆಲ್ ಸುತ್ತಿಕೊಂಡು ಪ್ರದರ್ಶನ ನೀಡಿದವರು. ಈ ವೈರಲ್ ಆಗಿರುವ ವಿಡಿಯೊದಲ್ಲಿ, ತನುಮಿತಾ ಟವೆಲ್ ಸುತ್ತಿಕೊಂಡು ಯಾವುದೇ ಮುಜುಗರವಿಲ್ಲದೇ ನಡೆದಿದ್ದು ಕಂಡು ಬಂದಿದೆ. ಇದನ್ನು ನೋಡಿದವರಿಗೆ ಆಕೆ ಬಾತ್‍ರೂಂನಿಂದ ಹೊರಬಂದಂತೆ ಕಾಣಿಸುತ್ತದೆ. ಆದರೆ ಅಸಲಿ ಕತೆ ಬೇರೆಯೇ ಇದೆ!

VISTARANEWS.COM


on

Viral Video
Koo


ಮುಂಬೈ : ಯುವಕ ಯುವತಿಯರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ವಿವಿಧ ರೀತಿಯ ರೀಲ್ಸ್ ಗಳನ್ನು ಮಾಡಲು ಹೋಗಿ ಕೋಲಾಹಲವನ್ನು ಸೃಷ್ಟಿಸುತ್ತಿದ್ದಾರೆ. ಸಾಮಾನ್ಯವಾಗಿ ಯುವತಿಯರು ಸ್ನಾನ ಮಾಡಿ ಬಾತ್‍ರೂಂನಿಂದ ಹೊರಗೆ ಬರುವಾಗ ದೇಹಕ್ಕೆ ಟವೆಲ್ ಸುತ್ತಿಕೊಂಡು ಮನೆಯೊಳಗೆ ಓಡಾಡುವುದನ್ನು ನಾವು ನೋಡಿರುತ್ತೇವೆ. ಆದರೆ ಇಲ್ಲೊಬ್ಬ ಯುವತಿ ತನ್ನ ದೇಹವನ್ನು ಟವೆಲ್‍ನಿಂದ ಸುತ್ತಿಕೊಂಡು ರಸ್ತೆಗೆ ಬಂದಿದ್ದಾಳೆ. ಇವಳನ್ನು ನೋಡಿ ದಾರಿಹೋಕರು ದಿಗ್ಭ್ರಮೆಗೊಂಡಿದ್ದಾರೆ. ಈ ವಿಡಿಯೊ ಸೊಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದ್ದು, ವ್ಯಾಪಕ ಚರ್ಚೆ ಮತ್ತು ಟೀಕೆಗೆ ಕಾರಣವಾಗಿದೆ.

ಮಿಂತ್ರಾ ಫ್ಯಾಷನ್ ಸೂಪರ್ ಸ್ಟಾರ್ ವಿಜೇತೆ ಮತ್ತು ಇನ್ಸ್ಟಾಗ್ರಾಂನಲ್ಲಿ 37,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ತನುಮಿತಾ ಘೋಷ್ ಇತ್ತೀಚೆಗೆ ಮುಂಬೈನ ಜನರು ಓಡಾಡುತ್ತಿದ್ದ ಬೀದಿಗಳಲ್ಲಿ ದೇಹಕ್ಕೆ ಟವೆಲ್ ಸುತ್ತಿಕೊಂಡು ಪ್ರದರ್ಶನ ನೀಡಿದವರು. ಈ ವೈರಲ್ ಆಗಿರುವ ವಿಡಿಯೊದಲ್ಲಿ, ತನುಮಿತಾ ಟವೆಲ್ ಸುತ್ತಿಕೊಂಡು ಯಾವುದೇ ಮುಜುಗರವಿಲ್ಲದೇ ನಡೆಯುತ್ತಿದ್ದಾರೆ. ಇದನ್ನು ನೋಡಿದವರಿಗೆ ಆಕೆ ಬಾತ್‍ರೂಂನಿಂದ ಹೊರಬಂದಂತೆ ಕಾಣಿಸುತ್ತದೆ. ವಿಡಿಯೊದಲ್ಲಿ ‘ತೌಬಾ-ತೌಬಾ’ ಹಾಡು ಹಿನ್ನೆಲೆಯಲ್ಲಿ ಪ್ಲೇ ಆಗುತ್ತಿದೆ. ಈ ವಿಡಿಯೊ ಶೀರ್ಷಿಕೆಯಲ್ಲಿ, ಮುಂಬೈನ ಪ್ರೇಕ್ಷಕರು ತನ್ನ ನೋಟವನ್ನು ನೋಡಿ ‘ತೌಬಾ-ತೌಬಾ’ ಎಂದು ಉದ್ಗರಿಸುತ್ತಿದ್ದಾರೆ ಎಂದು ಅವರು ಹಾಸ್ಯಮಯವಾಗಿ ಬರೆದಿದ್ದಾರೆ.

ಈ ಅಸಾಮಾನ್ಯ ಉಡುಗೆಯ ಜೊತೆಗೆ ಕಿವಿಯೋಲೆಗಳನ್ನು ಧರಿಸಿದ್ದರು ಮತ್ತು ಸ್ಟೈಲಿಶ್ ಸ್ಪೋರ್ಟ್ಸ್ ಶೂಗಳನ್ನು ಧರಿಸಿದ್ದರು. ಅವರು ಈ ವೇಷದಲ್ಲಿ ಬಸ್ ನಿಲ್ದಾಣದಿಂದ ಅಂಗಡಿಯ ಕಡೆಗೆ ಹೋಗುತ್ತಿದ್ದಾಗ, ಅಲ್ಲಿದ್ದ ದಾರಿಹೋಕರು ಇವರನ್ನು ದಿಟ್ಟಿಸಿ ನೋಡುತ್ತಿದ್ದಾರೆ. ಈ ವಿಡಿಯೊದ ಕೊನೆಯಲ್ಲಿ ತನುಮಿತಾ ತನ್ನ ಕೂದಲಿಗೆ ಹಾಗೂ ದೇಹಕ್ಕೆ ಸುತ್ತಿದ್ದ ಟವೆಲ್ ಅನ್ನು ತೆಗೆದಿದ್ದಾರೆ. ಆದರೆ ಅದರೊಳಗೆ ಅವರು ಬಟ್ಟೆ ಧರಿಸಿದರು. ಈ ವಿಡಿಯೊ ಪ್ರೇಕ್ಷಕರಿಗೆ ಹಾಗೂ ದಾರಿಹೋಕರಿಗೆ ಆಶ್ಚರ್ಯ ಮತ್ತು ಕುತೂಹಲವನ್ನುಂಟು ಮಾಡಿದಂತು ನಿಜ.

ಈ ವಿಡಿಯೊ ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿದ್ದು, 10 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳು ಮತ್ತು ಸಾವಿರಾರು ಲೈಕ್‍ಗಳು ಮತ್ತು ಶೇರ್ ಗಳನ್ನು ಗಳಿಸಿದೆ. ಇದಕ್ಕೆ ಹಲವಾರು ಕಾಮೆಂಟ್‍ಗಳು ಸಹ ಬಂದಿವೆ, ಹೆಚ್ಚಿನವರು ಅವರ ಈ ಕಾರ್ಯದ ಉದ್ದೇಶ ಮತ್ತು ಪರಿಣಾಮವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಪ್ಯಾರಿಸ್‌ಗೆ ಹೋದರೂ ಅಂಬಾನಿ ಸೊಸೆ ಕರಿಮಣಿ ಮರೆಯಲಿಲ್ಲ! ಸೋಷಿಯಲ್‌ ಮೀಡಿಯಾದಲ್ಲೀಗ ಇದೇ ಚರ್ಚೆ!

ಆದರೆ ತನುಮಿತಾ ಅವರು ಇದನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಮತ್ತು ಸೋನಾಕ್ಷಿ ಸಿನ್ಹಾ, ಶಲೀನಾ ನಥಾನಿ, ಮನೀಶ್ ಮಲ್ಹೋತ್ರಾ ಮತ್ತು ಡಿನೋ ಮೋರಿಯಾ ಅವರಂತಹ ಸೆಲೆಬ್ರಿಟಿಗಳಂತೆ ತಾನು ಮನರಂಜನೆಗಾಗಿ ಮಾಡಿರುವುದಾಗಿ ತಿಳಿಸಿದ್ದಾರೆ.ಅವರ ವಿವರಣೆಯ ಹೊರತಾಗಿಯೂ, ಕೆಲವು ಬಳಕೆದಾರರು ನಿರಾಶೆಯನ್ನು ವ್ಯಕ್ತಪಡಿಸುತ್ತಲೇ ಇದ್ದರು, ಇದು ಸಂಪ್ರದಾಯಸ್ಥ ಕುಟುಂಬದವರಿಗೆ ಮುಜುಗರವನ್ನುಂಟು ಮಾಡುವಂತಿದೆ ಎಂದು ಹೇಳಿದ್ದಾರೆ.

Continue Reading
Advertisement
PSI Parshuram Death Case
ಕರ್ನಾಟಕ13 seconds ago

PSI Parshuram Death Case: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

Deepika Kumari
ಪ್ರಮುಖ ಸುದ್ದಿ8 mins ago

Deepika Kumari : ಪದಕದ ಭರವಸೆ ಮೂಡಿಸಿ ಬರಿಗೈಯಲ್ಲಿ ವಾಪಸಾದ ಆರ್ಚರ್​ ದೀಪಿಕಾ ಕುಮಾರಿ

Chandigarh Court
ದೇಶ47 mins ago

ಕೋರ್ಟ್‌ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್‌ ಅಧಿಕಾರಿ; ಕೃತ್ಯಕ್ಕೆ ಕಾರಣವೇನು?

karnataka weather forecast
ಮಳೆ1 hour ago

Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

2nd PUC Exam Result 2024
ಕರ್ನಾಟಕ1 hour ago

2nd PUC Exam Result 2024: ದ್ವಿತೀಯ ಪಿಯುಸಿ ಪರೀಕ್ಷೆ-1, 2, 3ರಲ್ಲಿ ಒಟ್ಟಾರೆ ಶೇ. 84.87 ವಿದ್ಯಾರ್ಥಿಗಳು ಪಾಸ್; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

Moon
ದೇಶ2 hours ago

Moon: ಭೂಮಿಯಿಂದ ದೂರ ಹೊರಟ ಚಂದ್ರ, ಶೀಘ್ರದಲ್ಲೇ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

ಪ್ರಮುಖ ಸುದ್ದಿ2 hours ago

Mohammed Shami : ಭಾರತ ತಂಡ ಬಿಟ್ಟು ಬೇರೆ ತಂಡಕ್ಕೆ ಮರಳಲು ಮೊಹಮ್ಮದ್ ಶಮಿ ನಿರ್ಧಾರ

MS Dhoni
ಪ್ರಮುಖ ಸುದ್ದಿ2 hours ago

MS Dhoni : ವಿರಾಟ್ ಕೊಹ್ಲಿ ಜತೆಗಿನದ ಸಂಬಂಧವನ್ನು ವಿವರಿಸಿದ ಕೂಲ್ ಕ್ಯಾಪ್ಟನ್​ ಮಹೇಂದ್ರ ಸಿಂಗ್ ಧೋನಿ

KCET 2024
ಬೆಂಗಳೂರು3 hours ago

KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

Shiradi ghat landslide
ಕರ್ನಾಟಕ3 hours ago

Shiradi ghat landslide: ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಸಿಎಂ‌ ಶಾಕ್; 90 ಡಿಗ್ರಿ ನೇರವಾಗಿ ಗುಡ್ಡ ಸೀಳಿದ್ದಕ್ಕೆ ಅಧಿಕಾರಿಗೆ ತರಾಟೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ7 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌