Dhruva Sarja: ಮತ್ತೆ ಚಂದನವನಕ್ಕೆ ಎಂಟ್ರಿ ಕೊಡ್ತಾರಾ ನಟಿ ಶಿಲ್ಪಾ ಶೆಟ್ಟಿ? - Vistara News

ಸಿನಿಮಾ

Dhruva Sarja: ಮತ್ತೆ ಚಂದನವನಕ್ಕೆ ಎಂಟ್ರಿ ಕೊಡ್ತಾರಾ ನಟಿ ಶಿಲ್ಪಾ ಶೆಟ್ಟಿ?

ಧ್ರುವ ಸರ್ಜಾ (Dhruva Sarja) ಮತ್ತು ಪ್ರೇಮ್ ಕಾಂಬಿನೇಷನ್ ಈ ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ ವಿಶೇಷ ಪಾತ್ರವನ್ನು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಶಿಲ್ಪಾ ಶೆಟ್ಟಿ ಜತೆ ಮಾತುಕತೆ ಕೂಡ ಆಡಿದ್ದಾರಂತೆ ಪ್ರೇಮ್‌. 20 ವರ್ಷಗಳ ಬಳಿಕ ರವಿಚಂದ್ರನ್​ಗೆ ಪುನಃ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಇದೆ.

VISTARANEWS.COM


on

shilpa shetty Again entry to sandalwood
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಸಿನಿಮಾ ಟೀಸರ್‌ ಬಿಡುಗಡೆ ಬೆನ್ನಲ್ಲೆ ಕೆ.ಡಿ ಸಿನಿಮಾ ಬಗ್ಗೆ ಮತ್ತೆ ಸುದ್ದಿಯಾಗುತ್ತಿದೆ. ಇದೀಗ ಬಾಲಿವುಡ್​ ಬೆಡಗಿ, ಕನ್ನಡತಿ ಶಿಲ್ಪಾ ಶೆಟ್ಟಿಯವರ ಹೆಸರು ಕೇಳಿಬರುತ್ತಿದೆ. 1998ರಲ್ಲಿ ಮೊದಲ ಬಾರಿಗೆ ಕನ್ನಡ ಸಿನಿಮಾ ರಂಗಕ್ಕೆ ಬಂದರು. ಆನಂತರ ಮತ್ತೆ ರವಿಚಂದ್ರನ್‌ ಜತೆ ʻಒಂದಾಗೋಣ ಬಾʼ ಚಿತ್ರದಲ್ಲಿ ನಟಿಸಿದರು. 2005ರಲ್ಲಿ ಉಪೇಂದ್ರ ಜತೆ ಆಟೋ ಶಂಕರ್ ಚಿತ್ರದಲ್ಲಿ ನಟಿಸಿದರು. ಇದೀಗ ಕ್ರೇಜಿ ಸ್ಟಾರ್‌ ರವಿಚಂದ್ರನ್‌ ಜತೆ ಶಿಲ್ಪಾ ಶೆಟ್ಟಿ ನಾಯಕಿಯಾಗಿ ಮತ್ತೊಮ್ಮೆ ಬರಲಿದ್ದಾರೆ ಎನ್ನಲಾಗುತ್ತಿದೆ.

ಧ್ರುವ ಸರ್ಜಾ ಮತ್ತು ಪ್ರೇಮ್ ಕಾಂಬಿನೇಷನ್ ಈ ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ ವಿಶೇಷ ಪಾತ್ರವನ್ನು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಶಿಲ್ಪಾ ಶೆಟ್ಟಿ ಜತೆ ಮಾತುಕತೆ ಕೂಡ ಆಡಿದ್ದಾರಂತೆ ಪ್ರೇಮ್‌. 20 ವರ್ಷಗಳ ಬಳಿಕ ರವಿಚಂದ್ರನ್​ಗೆ ಪುನಃ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಇದೆ.

ಇದನ್ನೂ ಓದಿ: Dhruva Sarja: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ʻಮಾರ್ಟಿನ್‌ʼ ಟೀಸರ್‌ ಔಟ್‌

Dhruva Sarja

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

V Cinemas: ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ವಿತರಕ ಮಾರ್ಸ್ ಸುರೇಶ್ , ʻʻಅಜಿತ್ ಅವರು ರಾಮಮೂರ್ತಿ ನಗರದಲ್ಲಿ ಸುಸಜ್ಜಿತ ಚಿತ್ರಮಂದಿರವನ್ನು‌ ನಿರ್ಮಿಸಿದ್ದಾರೆ. ಈ ಚಿತ್ರಮಂದಿರ ನೋಡಿಕೊಳ್ಳುವ ಉಸ್ತುವಾರಿಯನ್ನು ನನಗೆ ನೀಡಿದ್ದಾರೆ. ನೂರರ ಆಸುಪಾಸಿ‌ನ ಆಸನದ ವ್ಯವಸ್ಥೆಯುಳ್ಳ ನಾಲ್ಕು ಆಡಿಗಳು ಇಲ್ಲಿದೆ. ಈಗಿನ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯಾವುದೇ ಮೂಲೆಯಲ್ಲಿ ಕುಳಿತುಕೊಂಡು ನೋಡಿದರೂ, ಪರದೆಯಲ್ಲಿ ಸಿನಿಮಾ ಚೆನ್ನಾಗಿ ಕಾಣಬೇಕು ಆ ರೀತಿ ಆಸನದ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

V Cinemas multiplex inauguration by dolly dhanjay Ramesh arvind
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ (V Cinemas) ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ ಖುಷಿಯ ವಿಚಾರ. ಹೌದು. ಇತ್ತೀಚಿಗೆ ಹೊಯ್ಸಳ ನಗರ, ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ “ವಿ ಸಿನಿಮಾಸ್” ಎಂಬ ನಾಲ್ಕು ಆಡಿಗಳ ಸುಸಜ್ಜಿತ ಮಲ್ಟಿಪ್ಲೆಕ್ಸ್ ಆರಂಭವಾಯಿತು.‌ ರಮೇಶ್ ಅರವಿಂದ್ ಚಿತ್ರಮಂದಿರವನ್ನು ಉದ್ಘಾಟಿಸಿ ಮೊದಲ ಶೋ ಗೆ ಟಿಕೇಟ್ ಪಡೆದರು. ಡಾಲಿ ಧನಂಜಯ ಪ್ರೊಜೆಕ್ಟರ್ ಚಾಲನೆ ಮಾಡಿದರು. ಹಿರಿಯ ವಿತರಕ ಮಾರ್ಸ್ ಸುರೇಶ್, ಮಾಲೀಕರಾದ ಅಜಿತ್ ಜಗದೀಶ್ ಹಾಗೂ ತಂತ್ರಜ್ಞ ಮ್ಯಾಥ್ಯೂ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ವಿತರಕ ಮಾರ್ಸ್ ಸುರೇಶ್ , ʻʻಅಜಿತ್ ಅವರು ರಾಮಮೂರ್ತಿ ನಗರದಲ್ಲಿ ಸುಸಜ್ಜಿತ ಚಿತ್ರಮಂದಿರವನ್ನು‌ ನಿರ್ಮಿಸಿದ್ದಾರೆ. ಈ ಚಿತ್ರಮಂದಿರ ನೋಡಿಕೊಳ್ಳುವ ಉಸ್ತುವಾರಿಯನ್ನು ನನಗೆ ನೀಡಿದ್ದಾರೆ. ನೂರರ ಆಸುಪಾಸಿ‌ನ ಆಸನದ ವ್ಯವಸ್ಥೆಯುಳ್ಳ ನಾಲ್ಕು ಆಡಿಗಳು ಇಲ್ಲಿದೆ. ಈಗಿನ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯಾವುದೇ ಮೂಲೆಯಲ್ಲಿ ಕುಳಿತುಕೊಂಡು ನೋಡಿದರೂ, ಪರದೆಯಲ್ಲಿ ಸಿನಿಮಾ ಚೆನ್ನಾಗಿ ಕಾಣಬೇಕು ಆ ರೀತಿ ಆಸನದ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್ ದರ ಕೂಡ ಬೇರೆ ಮಲ್ಟಿಪ್ಲೆಕ್ಸ್ ಗಳಿಗಿಂತ ತುಂಬಾ ಕಡಿಮೆ ಇರುತ್ತದೆ. ಮೊದಲ ಪ್ರಾಧಾನ್ಯತೆ ಕನ್ನಡ ಚಿತ್ರಗಳಿಗಿರುತ್ತದೆ. ಇಂದು ಮೊದಲ ಚಿತ್ರವಾಗಿ ಡಾಲಿ ಧನಂಜಯ ಅಭಿನಯದ “ಕೋಟಿ” ಚಿತ್ರ ಪ್ರದರ್ಶನವಾಗಿದೆʼʼ ಎಂದರು.

ಇದನ್ನೂ ಓದಿ: Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

ಇದನ್ನೂ ಓದಿ: Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

ಏನೇ ಆಧುನಿಕ ತಂತ್ರಜ್ಞಾನ ಬಂದರೂ ಥಿಯೇಟರ್ ನಲ್ಲಿ ಸಾವಿರಾರು ಜನರ ಮಧ್ಯೆ ಕುಳಿತು ಸಿನಿಮಾ ನೋಡುವ ಅನುಭವವೇ ಬೇರೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರ ನೋಡಿ. ಚಿತ್ರಮಂದಿರ ಪ್ರಾರಂಭ ಮಾಡಿರುವ ಮಾಲೀಕರಿಗೆ ಹಾಗೂ ಮಾರ್ಸ್ ಸುರೇಶ್ ಅವರಿಗೆ ಅಭಿನಂದನೆಗಳು ಎಂದರು ರಮೇಶ್ ಅರವಿಂದ್.

ಚಿತ್ರಮಂದಿರಲ್ಲಿ ಸಿನಿಮಾ ನೋಡುವ ಖುಷಿ ಮನೆಯಲ್ಲಿ ನೋಡಿದರೆ ಬರುವುದಿಲ್ಲ.. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರವನ್ನು ನೋಡಿ ಆನಂದಿಸಿದಾಗ, ನಮ್ಮಂತಹ ನಟರಿಗೆ ಆಗುವ ಸಂತೋಷ ಅಷ್ಟಿಷ್ಟಲ್ಲ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರಗಳನ್ನು ನೋಡಿ ಎಂದು ತಿಳಿಸಿದ ಡಾಲಿ ಧನಂಜಯ, “ವಿ ಸಿನಿಮಾಸ್” ಗೆ ಶುಭ ಹಾರೈಸಿದರು.

Continue Reading

ಸ್ಯಾಂಡಲ್ ವುಡ್

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Chandan Shetty: ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ.

VISTARANEWS.COM


on

Chandan Shetty Students Party Video Song Vidyarthi Vidyarthiniyare Movie
Koo

ಬೆಂಗಳೂರು: ಅರುಣ್ ಅಮುಕ್ತ ನಿರ್ದೇಶನದ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೊ ಸಾಂಗ್ ಬಿಡುಗಡೆಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ (Vidyarthi Vidyarthiniyare Movie) ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ (Chandan Shetty) ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ.

ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ.

ವಿಜೇತ್ ಕೃಷ್ಣ, ಚಂದನ್ ಶೆಟ್ಟಿ ಮತ್ತು ಚೇತನ್ ಕುಮಾರ್ ದಶಕದ ಹಿಂದೆ ರೂಂ ಮೇಟ್ ಗಳಾಗಿದ್ದರಂತೆ. ಈ ಹಿಂದೆ ವಿಜೇತ್ ಮತ್ತು ಚಂದನ್ ಶೆಟ್ಟಿ ಸಮಾಗಮದಲ್ಲಿ ಒಂದೇ ಒಂದು ಪೆಗ್ಗಿಗೆ ಎಂಬ ಹಾಡು ಬಂದಿತ್ತು. ಅದು ಸೂಪರ್ ಹಿಟ್ ಆಗಿತ್ತು. ಈ ಹಾಡೂ ಅದೇ ರೀತಿ ಹಿಟ್ಟಾಗಲೆಂಬ ಆಶಯವನ್ನ ಚಂದನ್ ಶೆಟ್ಟಿ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ: Chandan Shetty: 3ನೇ ವ್ಯಕ್ತಿ ಜತೆ ನಿವೇದಿತಾ ಸಂಬಂಧದ ಕುರಿತು ಚಂದನ್‌ ಹೇಳಿದ್ದೇನು?

ಇನ್ನುಳಿದಂತೆ ಸಾಹಿತ್ಯ ಬರೆದಿರುವ ಚೇತನ್ ಕುಮಾರ್ ಅವರಿಗೆ ವಿಜೇತ್ ಕೃಷ್ಣ ಅವರ ಸಂಗೀತ ಅಂದ್ರೆ ಇಷ್ಟವಂತೆ. ಆ ಪ್ರೀತಿಯಿಂದಲೇ ಈ ಹಾಡು ಬರೆದಿದ್ದೇನೆಂದಿರುವ ಚೇತನ್, ಇದೂ ಜನಮನ ಗೆಲ್ಲಲೆಂದು ಹಾರೈಸಿದ್ದಾರೆ. ಈ ವೇದಿಕೆಯಲ್ಲಿ ಸದರಿ ಹಾಡಿನಲ್ಲಿ ನಟಿಸಿರುವ ಮನೋಜ್ ವಿವಾನ್, ಮನಸ್ವಿ, ಭಾವನಾ ಅಪ್ಪು, ಅಮರ್ ಕೂಡಾ ಹಾಜರಿದ್ದರು.

ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ.

ಚಂದನ್ ಶೆಟ್ಟಿ , ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಸಿನಿಮಾ

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Actor Darshan: ದರ್ಶನ್‌ ಬಗ್ಗೆ ಅವರ ಮೊದಲ ಗುರು ಅಡ್ಡಂಡ ಕಾರ್ಯಪ್ಪ ಅವರು ದರ್ಶನ್‌ ಕುರಿತಾಗಿ ಬೇಸರ ಹೊರ ಹಾಕಿದ್ದಾರೆ. ಸಂಸ್ಕಾರ ಮತ್ತು ಶಿಕ್ಷಣ ಮುಖ್ಯ. ಅದು ದರ್ಶನ್‌ ಬಳಿ ಎರಡೂ ಇಲ್ಲ. ಇನ್ನೊಂದು ಅವನಿಗೆ ಸಿಕ್ಕ ಲೋಫರ್ ಫ್ರೆಂಡ್ಸ್. ಬದುಕು ಮತ್ತು ಸಿನಿಮಾ ಬೇರೆ ಬೇರೆ. ಆದರೆ ದರ್ಶನ್‌ ಹೇಗೆ ತಿಳಿದುಕೊಂಡಿದ್ದ ಎಂದರೆ, ಸಿನಿಮಾದಲ್ಲಿ ಏನೂ ರೌಡಿಸಂ ಇರುತ್ತೋ ಅದನ್ನ ನೋಡಿ ಬದುಕು ಹಾಗೇ ಅಂದುಕೊಂಡಿದ್ದಾನೆ ಎಂದರು.

VISTARANEWS.COM


on

Actor Darshan teacher Addanda Cariappa sad on arrested darshan
Koo

ಬೆಂಗಳೂರು: ನಟ ದರ್ಶನ್‌ (Actor Darshan) ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರ ಬಗ್ಗೆ ಮೈಸೂರಿನ ರಂಗಾಯಣದ ಅಡ್ಡಂಡ ಕಾರ್ಯಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದರ್ಶನ್‌ ಬಗ್ಗೆ ಅವರ ಮೊದಲ ಗುರು ಅಡ್ಡಂಡ ಕಾರ್ಯಪ್ಪ ಅವರು ದರ್ಶನ್‌ ಕುರಿತಾಗಿ ಬೇಸರ ಹೊರ ಹಾಕಿದ್ದಾರೆ. ʻʻದರ್ಶನ್‌ಗೆ ಶನಿಯಾಗಿ ಬಂದಿದ್ದು ಪವಿತ್ರಾ ಗೌಡ. ರೇಣುಕಾಸ್ವಾಮಿ ಪತ್ನಿ ಅನಾಥವಾಗಿದ್ದಾಳೆʼʼಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮವೊಂದರಲ್ಲಿ ಅಡ್ಡಂಡ ಕಾರ್ಯಪ್ಪ ಮಾತನಾಡಿ ʻʻದರ್ಶನ್‌ ಮೆಜಿಸ್ಟಿಕ್‌ ಸಿನಿಮಾ ಹಿಟ್‌ ಆದ ಬಳಿಕ ನನ್ನ ಹತ್ರ ಬಂದಿದ್ದ. ನನ್ನ ಮನೆಗೆ ಬಂದು ನನ್ನ ಕಾಲಿಗೆ ಬಿದ್ದು ನಿಮ್ಮ ಆಶೀರ್ವಾದ ಎಂದ. ಅಲ್ಲಿಂದ ಅವನು ಬೆಳೆಯುತ್ತ ಹೋದ. ಹಲವು ವಿಡಿಯೊಗಳಲ್ಲಿ ಅವನ ಬಾಡಿ ಲಾಂಗ್ವೇಜ್‌ ನೋಡಿದ್ದೆ. ಅಕ್ಕನ್‌…ಅಮ್ಮನ್‌.. ಈ ರೀತಿ ಹೊಲಸು ಮಾತುಗಳು. ಅದನ್ನು ನೋಡಿ ನನಗೆ ಊಹಿಸಲು ಆಗಿಲ್ಲ. ಇವನ ನಡವಳಿಕೆ ಬರಬರುತ್ತ ತುಂಬ ಚೇಂಜ್‌ ಆಯ್ತು. ಎಜುಕೇಶನ್‌ ಕೊರತೆ ಅವನಿಗೆ ಇದೆʼʼಎಂದರು.

ಬದುಕು ಮತ್ತು ಸಿನಿಮಾ ಬೇರೆ ಬೇರೆ

ʻʻಬದುಕು ಮತ್ತು ಸಿನಿಮಾ ಬೇರೆ ಬೇರೆ. ಆದರೆ ದರ್ಶನ್‌ ಹೇಗೆ ತಿಳಿದುಕೊಂಡಿದ್ದ ಎಂದರೆ, ಸಿನಿಮಾದಲ್ಲಿ ಏನೂ ರೌಡಿಸಂ ಇರುತ್ತೋ ಅದನ್ನ ನೋಡಿ ಬದುಕು ಹಾಗೇ ಅಂದುಕೊಂಡಿದ್ದಾನೆ. ದರ್ಶನ್‌ಗೆ ಒಂದು ಪಾಠ ಇದು. ಅವನ ಜೀವನ ಇಲ್ಲಿಗೆ ಮುಗಿದಿಲ್ಲ. ರೇಣುಕಾಸ್ವಾಮಿ ಏನೋ ಸತ್ತ. ಆದರೆ ಅವನ ಹೆಂಡತಿ ಕಥೆ ಏನು? ದರ್ಶನ್‌ ಅಭಿಮಾನಿಗಳಿಗೆ ನಾನು ಹೇಳುವುದು ಇಷ್ಟೇ. ನಿಮಗೆ ದರ್ಶನ್‌ ಎಷ್ಟು ಮುಖ್ಯವೋ. ಅದೇ ರೀತಿ ರೇಣುಕಾ ಸ್ವಾಮಿ ಹೆಂಡತಿ ಕೂಡ ಅಷ್ಟೇ ಮುಖ್ಯ. ರೇಣುಕಾಸ್ವಾಮಿ ತಪ್ಪು ಮಾಡಿದ್ದಾರೆ. ಆತನ ಹೆಂಡತಿಗೆ ಸಾಂತ್ವನ ಹೇಳಿʼʼಎಂದರು.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

ಸಂಸ್ಕಾರ ಮತ್ತು ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ!

ʻʻಸಂಸ್ಕಾರ ಮತ್ತು ಶಿಕ್ಷಣ ಮುಖ್ಯ. ಅದು ದರ್ಶನ್‌ ಬಳಿ ಎರಡೂ ಇಲ್ಲ. ಇನ್ನೊಂದು ಅವನಿಗೆ ಸಿಕ್ಕ ಲೋಫರ್ ಫ್ರೆಂಡ್ಸ್. ಸುದೀಪ್‌ಗೆ ಹಾಗೆ ಫ್ರೆಂಡ್ಸ್ ಮಾಡಿಕೊಳ್ಳೋಕೆ ಆಗಲ್ಲ. ಯಾಕಂದ್ರೆ, ಸುದೀಪ್ ವಿದ್ಯಾವಂತ. ಸಹವಾಸ ದೋಷ, ಹೆಂಡ, ಮೊದಲ ಹೆಂಡತಿಗೆ ಚಿತ್ರಹಿಂಸೆ ಕೊಟ್ಟಿದ್ದು, ಹಾಗೇ ಮೀಡಿಯಾದವರು ಅವನನ್ನ 2 ವರ್ಷ ಬ್ಯಾನ್ ಮಾಡಿದರು. ರಾಜ್‌ಕುಮಾರ್ ಅವರ ವಿನೀತತೆಯನ್ನ ನೋಡಿ ದರ್ಶನ್ ಕಲಿತುಕೊಳ್ಳಲಿಲ್ಲ’’ ಎಂದು ಅಡ್ಡಂಡ ಕಾರ್ಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಮಾಹಿತಿ ಕಲೆ

ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ದರ್ಶನ್ ವಿರುದ್ಧ ಮಾತನಾಡಿದವರಿಗೆ ಇದೇ ಶೆಡ್ ನಲ್ಲಿ ಕರೆತಂದು ʻಡಿ ಗ್ಯಾಂಗ್ʼ ಹೊಡೆಯುತ್ತಿದ್ದರು ಎನ್ನಲಾಗಿದೆ. ಬಡ್ಡಿ ದುಡ್ಡು ಕಟ್ಟದ, ಲೋನ್ ಪಾವತಿ ಮಾಡದವರಿಗೆ ಕೂಡ ಇದೇ ಶೆಡ್‌ನಲ್ಲಿ ʻಡಿ ಗ್ಯಾಂಗ್ʼ ನರಕ ತೋರಿಸುತ್ತಿತ್ತು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲೆ ಮತ್ತಷ್ಟು ಕೇಸ್‌ಗಳು ರಿವೀಲ್‌ ಆಗಬಹುದು ಎನ್ನಲಾಗಿದೆ. ಪೊಲೀಸರು ವಶಪಡಿಸಿಕೊಂಡ ಸಿಸಿ ಕ್ಯಾಮರೆ ದೃಶ್ಯಗಳ ಪರಿಶೀಲನೆ ಆಗುತ್ತಿದೆ. ಆರೋಪಿ ವಿನಯ್ ಸೇರಿದಂತೆ ಇತರೆ ಆರೋಪಿಗಳನ್ನು ಮತಷ್ಟು ತೀವ್ರವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಮಾದರಿಯಲ್ಲಿಯೇ ಹಲವು ಜನರಿಗೆ ಗ್ಯಾಂಗ್‌ ಚಿತ್ರಹಿಂಸೆ ನೀಡಿತ್ತಾ ಎಂಬುದುರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಪೊಲೀಸರು.

Continue Reading

ಸ್ಯಾಂಡಲ್ ವುಡ್

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

Actor Darshan: ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Actor Darshan case pavithra Gowda manager Arrest
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಮತ್ತೊಬ್ಬ ಆರೋಪಿ ಪೊಲೀಸರ ವಶವಾಗಿದ್ದಾನೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ 16ಜನ (Actor Darshan) ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ ಕೇಸ್ ನಲ್ಲಿ ಮತ್ತೊಬ್ಬ ವ್ಯಕ್ತಿಯನ್ನ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯಲ್ಲಿ ದೇವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ನಡೆದ ದಿನ ಅಂದರೆ ರೇಣುಕಾಸ್ವಾಮಿ ಕೊಲೆಯಾದ ಶೆಡ್‌ಗೆ ಪವಿತ್ರಾ ಜತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವರಾಜ್‌ನನ್ನು ಪೊಲೀಸರು ವಶ ಪಡೆದುಕೊಂಡಿದ್ದಾರೆ.

ಪವಿತ್ರಾ ಗೌಡ ಮನೆಯಲ್ಲಿ ಇಂದು ಪೊಲೀಸರು ಮಹಜರು ನಡೆಸಲಿದ್ದಾರೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ನಂತರ ಪವಿತ್ರಾಗೌಡ ನೇರವಾಗಿ ತಮ್ಮ ಮನೆಗೆ ಹೋಗಿದ್ದರು. ರೇಣುಕಾ ಸ್ವಾಮಿ ಮೇಲೆ ಮೊದಲು ಹಲ್ಲೆ ನಡೆಸಿದ್ದೇ ಪವಿತ್ರಾ ಗೌಡ ಎನ್ನಲಾಗಿದೆ. ಪವಿತ್ರಾಗೌಡ ನೋಡುತ್ತಿದ್ದಂತೆ ರೇಣುಕಾಸ್ವಾಮಿ ಪವಿತ್ರಾ ಕಾಲಿಗೆ ಬಿದ್ದು ತಪ್ಪಾಯ್ತು ಅಂತ ಕ್ಷಮೆ ಕೇಳಿದ್ದನಂತೆ. ಸದ್ಯ ಪವಿತ್ರಾ ಮನೆಯಲ್ಲಿ ಪೊಲೀಸರು ಆ ದಿನ ಪವಿತ್ರಾ ಧರಿಸಿದ್ದ ಬಟ್ಟೆ ಹಾಗೂ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದ ಚಪ್ಪಲಿಯನ್ನ ಸೀಜ್ ಮಾಡಲಿದ್ದಾರೆ. ಪ್ರಕರಣದಲ್ಲಿ ಪವಿತ್ರಾ ಚಪ್ಪಲಿ ಕೂಡ ಮಹತ್ವದ ಸಾಕ್ಷ್ಯವಾಗಲಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಬಂಧಿಸಿದ ಎಸಿಪಿ ಚಂದನ್ ಕುಮಾರ್‌ ಕೆಲಸಕ್ಕೆ ಸೆಲ್ಯೂಟ್‌ ಎಂದ ಗ್ರಾಮಸ್ಥರು!

ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ವೆಪನ್ ಗಳು, 30 ಲಕ್ಷ ರೂ. ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿಯಾಗಿವೆ. ಈಗಾಗಲೇ ಆರೋಪಿಗಳನ್ನು ವಿಚಾರಣೆ ಮಾಡಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

Continue Reading
Advertisement
Shootout Case
ಪ್ರಮುಖ ಸುದ್ದಿ2 mins ago

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

kusina mane
ರಾಮನಗರ3 mins ago

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Job Alert
ಉದ್ಯೋಗ31 mins ago

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

murder case in Bengaluru rural
ಬೆಂಗಳೂರು ಗ್ರಾಮಾಂತರ31 mins ago

Murder case : ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

V Cinemas multiplex inauguration by dolly dhanjay Ramesh arvind
ಸ್ಯಾಂಡಲ್ ವುಡ್31 mins ago

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

Petrol Diesel Price
ರಾಜಕೀಯ45 mins ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Team India Coach
ಕ್ರೀಡೆ58 mins ago

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

murder Case
ಬೆಂಗಳೂರು ಗ್ರಾಮಾಂತರ1 hour ago

Murder Case : ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು; ಮಗನ ಶವ ಕಂಡು ತಂದೆ ಕಣ್ಣೀರು

R Ashok
ಕರ್ನಾಟಕ1 hour ago

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

Viral News
ವೈರಲ್ ನ್ಯೂಸ್1 hour ago

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ2 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌