Navavidha Bhakti : ಮುಕ್ತಿ ನೀಡುವ ಭಕ್ತಿ - Vistara News

ಧಾರ್ಮಿಕ

Navavidha Bhakti : ಮುಕ್ತಿ ನೀಡುವ ಭಕ್ತಿ

ಭಕ್ತಿಯ ಸ್ವರೂಪವನ್ನು ಒಂಬತ್ತು ರೀತಿಯಲ್ಲಿ ವಿಂಗಡಿಸಲಾಗಿದೆ. ಈ ಸ್ವರೂಪಗಳನ್ನು ಪರಿಚಯಿಸುವ ʻನವವಿಧ ಭಕ್ತಿʼ (Navavidha Bhakti) ಲೇಖನ ಮಾಲೆಯನ್ನು ಇಂದಿನಿಂದ ಆರಂಭಿಸಲಾಗುತ್ತಿದೆ. ಇದು ಪ್ರತಿ ಗುರುವಾರ ಪ್ರಕಟವಾಗಲಿದೆ.

VISTARANEWS.COM


on

navavidha bhakti morning spiritual thoughts in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
prerane
morning spiritual thoughts in kannada

ಡಾ. ಸಿ. ಆರ್. ರಾಮಸ್ವಾಮಿ
ಅತ್ಯಮೂಲ್ಯವಾದ ಮಾನವಜನ್ಮವನ್ನು ಪಡೆದಮೇಲೆ ಅದನ್ನು ಸಾರ್ಥಕ ಪಡಿಸಿಕೊಳ್ಳಬೇಕಲ್ಲವೇ? ಅದರ ಸಾರ್ಥಕ್ಯವು ಭಗವಂತನ ಸಾಕ್ಷಾತ್ಕಾರ-ಮೋಕ್ಷಪ್ರಾಪ್ತಿಯಿಂದಲೇ. ಮೋಕ್ಷವೆಂದರೆ ಜನನ-ಮರಣ ಸಂಸರಣದಿಂದ ಮುಕ್ತನಾಗಿ ಭಗವಂತನನ್ನು ಸೇರುವುದು. ಇದನ್ನು ಸಾಧಿಸಲು ಪ್ರಧಾನವಾಗಿ ಮೂರುಮಾರ್ಗಗಳನ್ನು ಜ್ಞಾನಿಗಳು ತಿಳಿಸಿರುತ್ತಾರೆ; ಜ್ಞಾನ-ಕರ್ಮ -ಭಕ್ತಿಮಾರ್ಗಗಳು. ಇವುಗಳಲ್ಲಿ ಜ್ಞಾನ-ಕರ್ಮಮಾರ್ಗಗಳಿಗಿಂತಲೂ ಭಕ್ತಿಮಾರ್ಗವನ್ನು ಕೊಂಡಾಡಲು ವಿಶೇಷವಾದ ಕಾರಣಗಳುಂಟು.

ಭಕ್ತಿಮಾರ್ಗದ ವೈಶಿಷ್ಟ್ಯ

ಭಕ್ತಿಯಲ್ಲಿ ವೈಶಿಷ್ಟ್ಯವೇನೆಂದರೆ ಇದಕ್ಕೆ ವಯಸ್ಸು, ವಿದ್ಯೆ-ರೂಪ-ಪೌರುಷ-ಆಚರಣೆ- ಸಂಪತ್ತು -ಜಾತಿ ಇವು ಯಾವುದೂ ಅಗತ್ಯಯೋಗ್ಯತೆಯೆಂದು ಎಣಿಸಿಕೊಳ್ಳುವುದಿಲ್ಲ. ಅದಕ್ಕೆ ಅನೇಕ ಉದಾಹರಣೆಗಳನ್ನು ಗಮನಿಸಬಹುದು. ಧ್ರುವ ವಯಸ್ಸಿನಲ್ಲಿ ಸಣ್ಣವ. ಆದರೂ ಪರಮಭಕ್ತನಾಗಿದ್ದ. ಪ್ರಹ್ಲಾದನೂ ಹಾಗೆಯೇ. ವಯಸ್ಸು ಅಳತೆಗೋಲಾ ಗುವುದಿಲ್ಲ. ರೂಪಕ್ಕೆ ಕುಬ್ಜೆಯು ಉದಾಹರಣೆ. ಕೃಷ್ಣನು ಮಥುರೆಗೆ ಬಂದಾಗ ದಾರಿಯಲ್ಲಿ ಕುಬ್ಜೆ(ದೇಹ ಸೊಟ್ಟಕ್ಕೆ ಬಗ್ಗಿರುವವಳು)ಯನ್ನು ನೋಡುತ್ತಾನೆ. ರೂಪ ಇಲ್ಲದಿದ್ದರೂಕೂಡ ಎಂತಹ ಭಕ್ತೆಯಾಗಿದ್ದಳು! ಹಾಗೆಯೇ, ಗೋಪಿಕೆಯರಿಗೆ ಯಾವ ಪಾಠವೂ ಆಗಿರಲಿಲ್ಲ, ಗೃಹಿಣಿಯರುಗಳಷ್ಟೇ. ಆದರೆ ಭಕ್ತಿಯಲ್ಲಿ ಅಳವಾಗಿ ಮುಳುಗಿದ್ದವರು.

ನಾರದಭಕ್ತಿಸೂತ್ರದಲ್ಲಿ ಭಕ್ತನಾಗಲು ವಿದ್ಯಾವಂತರಾಗಬೇಕಿಲ್ಲವೆನ್ನುವುದಕ್ಕೆ ಉತ್ತಮಉದಾಹರಣೆಯಾಗಿ ಗೋಪಿಕೆಯರನ್ನೇ ಸ್ಮರಿಸಿಕೊಳ್ಳುತ್ತಾರೆ. ಇನ್ನು ಜಾತಿಯ ವಿಷಯ ತೆಗೆದುಕೊಂಡರೆ ದಾಸೀಪುತ್ರನಾದ ವಿದುರನನ್ನು ಉದಾಹರಣೆಯಾಗಿ ಕೊಡುತ್ತಾರೆ. ಶೂದ್ರನಾಗಿದ್ದರೂ ಕೂಡ ಪರಮಭಕ್ತ. ಮಹಾಭಾರತದಲ್ಲಿ ವಿದುರನ ಸ್ಥಾನವೇ ವಿಶೇಷವಾದದ್ದು. ವಿದುರನನ್ನು ‘ಮಹಾತ್ಮವಿದುರ’ನೆಂದೇ ಕರೆಯುವುದು. ಕೃಷ್ಣನನ್ನು ಪೂರ್ಣವಾಗಿ ಅವತಾರಪುರುಷ ಎಂದು ತಿಳಿದುಕೊಂಡ ಕೆಲವೇ ಮಂದಿಯಲ್ಲಿ ಅವನೂ ಒಬ್ಬ. ಪರಮಭಾಗವತನಾಗಿದ್ದ.

ಪಶು-ಪ್ರಾಣಿಗಳಿಗೂ ಭಕ್ತಿ

ಭಕ್ತಿಮಾರ್ಗವು ಮನುಷ್ಯರಿಗೆ ಮಾತ್ರವೇ ಅಲ್ಲ, ಪ್ರಾಣಿಗಳು ಕೂಡ ಭಕ್ತಿಯ ಮೂಲಕ ಉದ್ಧಾರವಾದ ಕಥೆಗಳುಂಟು. ಉದಾಹರಣೆಗೆ ಗಜೇಂದ್ರ. ಅವನು ಎಂತಹ ಭಕ್ತನಾಗಿದ್ದನೆಂದರೆ `ಆದಿಮೂಲಾ’ ಎಂದು ಕರೆದಕೂಡಲೇ ಸಾಕ್ಷಾತ್ ಮಹಾವಿಷ್ಣುವೇ ವೈಕುಂಠದಿಂದ ಇಳಿದು ಬರಬೇಕೆಂದು ತೀರ್ಮಾನಮಾಡಿ ತಕ್ಷಣವೇ ಗರುಡಾರೂಢನಾಗುತ್ತಾನೆ. ಗರುಡನಿಗೆ “ಬೇಗಹೋಗು” ಎಂದು ಆಜ್ಞೆಮಾಡುತ್ತಾನಂತೆ ಭಗವಂತ! ಪೂಜ್ಯರಂಗಪ್ರಿಯಸ್ವಾಮಿಗಳು ತಮಾಷೆಯಾಗಿ ಹೇಳುತ್ತಿದ್ದರು: ‘ವೇಗದಲ್ಲಿ ಗರುಡನನ್ನು ಮೀರಿಸುವವರು ಯಾರೂ ಇಲ್ಲ, ಅಂತಹವನನ್ನೂ ಇನ್ನೂವೇಗವಾಗಿ ಹೋಗುವಂತೆ ಹೇಳಿದರೆ ಅದೆಷ್ಟು ಅವಮಾನ ಅವನಿಗೆ!” ಭಗವಂತನೇ ಅಷ್ಟು ತ್ವರೆಮಾಡಿಸಬೇಕಾದರೆ ಗಜೇಂದ್ರ ಎಂತಹ ಉನ್ನತಭಕ್ತನಾಗಿರಬೇಕು? ಗಜೇಂದ್ರ ಪ್ರಾಣಿಯಲ್ಲವೇ?

ಗರುಡ-ಪಕ್ಷಿರಾಜ, ಅವನೂ ಪರಮಭಕ್ತ, ಪರಮಭಾಗವತನೇ ಹನುಮಂತನಂತೆ. ಭಗವತ್ಭಕ್ತನಾದ ಜಟಾಯುವೂ ಪಕ್ಷಿಯೇ. ಭಕ್ತಿಯ ವೈಶಿಷ್ಟ್ಯವನ್ನು ಪುರಾಣಗಳು ಇನ್ನೂಅನೇಕ ಉದಾಹರಣೆಗಳ ಮೂಲಕ ವಿವರಿಸುತ್ತವೆ.

ಭಕ್ತಿಯು ಸುಲಭೋಪಾಯ

ಮತ್ತೊಂದು ವೈಶಿಷ್ಟ್ಯವುಂಟು. ಕರ್ಮ-ಜ್ಞಾನಮಾರ್ಗಗಳಿಗೆ ಹೋಲಿಸಿದರೆ ಇದು ಸುಲಭೋಪಾಯ. ಜ್ಞಾನಯೋಗದಲ್ಲಿ ಸಾಮಾನ್ಯರ ಹಿಡಿತಕ್ಕೆ ಸಿಗದ ನಿರ್ಗುಣ-ನಿರಾಕಾರವಸ್ತು ಒಂದನ್ನು ಉಪಾಸನೆಮಾಡುವುದು ಎಷ್ಟು ಕಷ್ಟಕರ. ಆದರೆ ಭಕ್ತಿಮಾರ್ಗದಲ್ಲಿ ಒಂದು ಆಕಾರ-ಅವಲಂಬನವಿರುತ್ತದೆ; ಕೇವಲ ಅವಲಂಬನವಲ್ಲ-ಶಭಾವಲಂಬನವಿರುತ್ತದೆ. ಅವಲಂಬನವೆಂದರೆ ಭಗವಂತನ ರೂಪ. ಚಿತ್ರರೂಪದಲ್ಲೋ-ವಿಗ್ರಹ ರೂಪದಲ್ಲೋ ಪೂಜಿಸಿದಾಗ ಮನಸ್ಸಿಗೆ ಒಂದುರೀತಿಯ ಆಕರ್ಷಣೆಯುಂಟಾಗುತ್ತದೆ. ಆಕಾರವಿದ್ದಲ್ಲಿ ಮನಸ್ಸು ತಾನಾಗಿಯೇ ಲಯವಾಗುವುದಕ್ಕೆ ಅವಕಾಶವಿದೆ. ರಾಮನಮೂರ್ತಿ- ಕೃಷ್ಣನಮೂರ್ತಿ-ಶಿವನಮೂರ್ತಿ -ಕಾರ್ತಿಕೇಯನ ಮೂರ್ತಿ ಎಲ್ಲವೂ ಸುಂದರಮೂರ್ತಿಗಳು. ಅವನ್ನು ನೋಡುತ್ತ-ನೋಡುತ್ತ ಮನಸ್ಸು ತಾನಾಗಿಯೇ ಲಯವಾಗುತ್ತದೆ. ಆದ್ದರಿಂದ ಭಕ್ತಿಮಾರ್ಗವು ಅತ್ಯಂತ ಸುಲಭವಾದದ್ದು.

ಇಂತಹ ಭಕ್ತಿಯ ಬಗೆಗಿನ ಕೆಲವಂಶಗಳನ್ನು ನೋಡೋಣ;

ಭಕ್ತಿ ಎಂದರೇನು?

ಭಕ್ತಿ ಎಂದರೆ ಪ್ರೇಮಸ್ವರೂಪವಾದದ್ದು. ಲೋಕದಲ್ಲಿ ಒಬ್ಬ ವ್ಯಕ್ತಿಯಬಗ್ಗೆ ಉತ್ಕಟವಾದ ಪ್ರೀತಿಯುಂಟಾದಾಗ ಅದನ್ನು ಪ್ರೇಮ ಎನ್ನುತ್ತೇವೆ. ಅದು ಪರಸ್ಪರವಾಗಿ ಇರುವಂತಹುದ್ದು. ಮುಂದೆ ಕಾಮವಾಗುತ್ತದೆ. ಆ ಪ್ರೀತಿ-ಪ್ರೇಮ ಭಾವವನ್ನು ಭಗವಂತನಲ್ಲಿಟ್ಟರೆ ಅದಕ್ಕೆ ಭಕ್ತಿಯೆಂದು ಹೆಸರು. ನಾರದಭಕ್ತಿಸೂತ್ರದಲ್ಲಿ ಭಕ್ತಿಯನ್ನು ಪರಮಪ್ರೇಮಸ್ವರೂಪ ಎಂಬುದಾಗಿ ಹೇಳಿದ್ದಾರೆ. ಭಗವತ್ಭಾವದಲ್ಲೇ ಸಂಪೂರ್ಣವಾಗಿ ಮುಳುಗಿರುವುದು.

ಲೌಕಿಕವಾದ ಪ್ರೀತಿ-ಪ್ರೇಮಗಳು ಪರಸ್ಪರವಿರುವ ಹಾಗೆಯೇ, ಭಗವಂತನಲ್ಲಿ ಪ್ರೀತಿಯಿಡುವವರಲ್ಲಿ ಭಗವಂತನೂಕೂಡ ಪ್ರೀತಿಯನ್ನು ತೋರಿಸುತ್ತಾನೆ. ಭಗವದ್ಗೀತೆಯಲ್ಲಿ ಭಕ್ತನಿಗಿರಬೇಕಾದ ಗುಣಗಳನ್ನು ಒಂದೊಂದಾಗಿ ಹೇಳಿ ಇಂತಹವನು ನನಗೆ ಅತ್ಯಂತ ಪ್ರಿಯನಾದವನು, ಪ್ರೀತಿಗೆಪಾತ್ರನಾದವನು “ಮದ್ಭಕ್ತಃ ಸ ಮೇ ಪ್ರಿಯ:” ಎಂಬುದನ್ನೇ ಪಲ್ಲವಿಯಾಗಿ ಶ್ರೀಕೃಷ್ಣನು ಹೇಳುತ್ತಾನೆ. ಇದು ಭಕ್ತ-ಭಗವಂತರ ಪರಸ್ಪರಪ್ರೀತಿಯೇ.

ಭಕ್ತಿಯ ಲಕ್ಷಣವನ್ನು ಉದಾಹರಣೆಗಳ ಮೂಲಕ ಹೀಗೆ ವರ್ಣಿಸುತ್ತಾರೆ ಶ್ರೀ ಶಂಕರಭಗವತ್ಪಾದರು:

ಅಂಕೋಲಂ ನಿಜಬೀಜಸಂತತಿರಯಸ್ಕಾಂತೋಪಲಂ ಸೂಚಿಕಾ
ಸಾಧ್ವೀ ನೈಜವಿಭುಂ ಲತಾಕ್ಷಿತಿರುಹಂ ಸಿಂಧುಃ ಸರಿದ್ವಲ್ಲಭಮ್….

ಅಂಕೋಲ ಬೀಜವು ಅದೇ ಮರವನ್ನು, ಸೂಜಿಯು ಅಯಸ್ಕಾಂತವನ್ನೂ, ಪತಿವ್ರತಾಸ್ತ್ರೀ ತನ್ನವಲ್ಲಭನನ್ನೂ, ಬಳ್ಳಿಯು ಮರವನ್ನೂ, ನದಿಯು ಸಾಗರವನ್ನು ಆಶ್ರಯಿಸುವಂತೆಯೇ ಮನಸ್ಸು ಪಶುಪತಿಯ ಪಾದಾರವಿಂದಗಳಲ್ಲಿ ನೆಲೆನಿಲ್ಲುವುದೇ ಭಕ್ತಿಯೆಂದು ಆಚಾರ್ಯರು ತಿಳಿಸುತ್ತಾರೆ. ಇದರ ಸ್ವಾರಸ್ಯವೆಂದರೆ ಉತ್ತರೋತ್ತರ ಅಂಟು (ಪ್ರೀತಿ) ವೃದ್ಧಿಯಾಗುತ್ತಾ ಕೊನೆಯಲ್ಲಿ ನದಿಯು ಸಾಗರದಲ್ಲಿ ವಿಲೀನವಾಗುವುದನ್ನು ಎತ್ತಿ ತೋರಿಸಿರುವರು.

ಭಕ್ತಿ ಎಂಬ ಪದವೇ ಸೇರ್ವೆಯನ್ನೂ ವಿಭಕ್ತಿಯೆಂಬುದು ಬೇರ್ಪಡುವಿಕೆಯನ್ನೂ ತಿಳಿಸುತ್ತದೆ ಎಂದೂ ಭಕ್ತಿಯು ಜೀವ-ದೇವರ ಸೇರ್ವೆಯನ್ನು ಸೂಚಿಸುತ್ತದೆ ಎಂಬುದಾಗಿಯೂ ಯೋಗಿವರೇಣ್ಯರಾದ ಶ್ರೀರಂಗಮಹಾಗುರುಗಳು ವಿವರಿಸುತ್ತಿದ್ದರು.

ಭಕ್ತಿಗೆ/ಆಕರ್ಷಣೆಗೆ ದ್ವಾರಗಳು

ಒಬ್ಬ ವ್ಯಕ್ತಿಯಲ್ಲಿ ಅನೇಕ ಕಾರಣಗಳಿಂದ ಅನೇಕ ವಿಷಯಗಳ ಮೂಲಕ ಪ್ರೀತಿಯು ಉಂಟಾಗಬಹುದು. ವ್ಯಕ್ತಿಯ ರೂಪವೇ ಒಂದು ರೀತಿಯ ಆಕರ್ಷಣೆ ಉಂಟುಮಾಡಬಹುದು. ಆಗ ತಾನಾಗಿಯೇ ಮನಸ್ಸು ಲಯವಾಗಲು ಪ್ರಾರಂಭವಾಗುತ್ತದೆ. ವ್ಯಕ್ತಿಗಳಲ್ಲಿ ಲೌಕಿಕವಾದ ಈ ಭಾವವು ನಮ್ಮ ಪ್ರಕೃತಿಯನ್ನು-ಇಂದ್ರಿಯಗಳನ್ನು ಕೆರಳಿಸುತ್ತದೆ. ಆದರೆ ಭಗವಂತನಲ್ಲಿನ ಪ್ರೀತಿ-ಆಕರ್ಷಣೆಗಳು ಇಂದ್ರಿಯಗಳನ್ನು ಕೆರಳಿಸುವುದಿಲ್ಲ; ಲಯವನ್ನು-ಏಕಾಗ್ರತೆಯನ್ನು ಮೂಡಿಸುತ್ತದೆ.

ಭಗವಂತನ ರೂಪವನ್ನೇ ಧ್ಯಾನಿಸಿ ಆಕರ್ಷಿತರಾಗುವುದು ಒಂದು ವಿಧಾನವಾದರೆ, ಅವನ ಅನೇಕ ಗುಣಗಳಲ್ಲಿ ಯಾವುದಾದರೂ ಒಂದಾಗಲಿ, ಅನೇಕವಾಗಲಿ ನಮಗೆ ಇಷ್ಟವಾಗಬಹುದು. ರಾಮನ ವೀರ್ಯ-ಶೌರ್ಯ-ಪರಾಕ್ರಮ ಯಾವುದಾದರೊಂದು ಪ್ರೀತಿಯನ್ನುಂಟುಮಾಡಬಹುದು. ಅವನ ನಗುಮುಖ, ಪ್ರೀತಿಯಿಂದ ಮಾತನಾಡುತ್ತಿದ್ದ ಸನ್ನಿವೇಶದ ವಿವರಗಳು ನಮ್ಮ ಮನಸ್ಸನ್ನು ಸೆಳೆಯಬಹುದು.

ಇದರಿಂದ ಭಕ್ತಿ-ಅನುರಕ್ತಿ ಉಂಟಾಗುತ್ತದೆ. ಇದಲ್ಲದೇ ಪುರಾಣಗಳಲ್ಲಿ ಬೇರೆ ಬೇರೆ ದೇವತೆಗಳ ಪರಾಕ್ರಮ, ಮಹಿಮೆ ಮುಂತಾದವುಗಳ ಬಗ್ಗೆ ವಿವರಣೆಗಳನ್ನೋದಿ ಅವರಲ್ಲಿ ಆಕರ್ಷಣೆ ಉಂಟಾಗಬಹುದು. ನಾವು ಮೋಕ್ಷಕಾಮಿಗಳಾಗಿದ್ದರೆ ನಮಗೂ ಮೋಕ್ಷಬೇಕೆನ್ನಿಸುತ್ತದೆ. ಮೋಕ್ಷಾರ್ಥಿಯಾಗಿ ನಾವು ಅವರನ್ನು ಪೂಜೆ ಮಾಡಿದಾಗ ನಮಗೂ ಆ ದೇವತೆಗೂ ಒಂದು ಸಂಬಂಧ-ಪ್ರೀತಿ ಉಂಟಾಗುತ್ತದೆ. ಕೆಲವು ಪ್ರಕೃತಿಗಳಿಗೆ ಕೆಲವು ದೇವತೆಗಳು ತುಂಬಾ ಇಷ್ಟವಾಗುತ್ತಾರೆ. ಆಗ ಆ ದೇವತೆಯನ್ನು ಅವಲಂಬಿಸಿ ಭಕ್ತಿಯಲ್ಲಿ ಮುಂದೆ ಸಾಗಬಹುದು.(ಮುಂದುವರಿಯುವುದು)

ಲೇಖಕರ ಪರಿಚಯ : ಡಾ. ರಾಮಸ್ವಾಮಿಯವರು ಪರಮಾಣು ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನಂತರ ಸುಮಾರು 30 ವರ್ಷಗಳ ಕಾಲ ಭೌತಶಾಸ್ತ್ರದ ಸ್ನಾತಕೋತ್ತರ ಹಾಗೂ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುತ್ತಾ ಬಂದಿದ್ದಾರೆ. ಭೌತಶಾಸ್ತ್ರದಂತೆಯೇ, ಅವರಿಗೆ ಭಾರತೀಯ ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಶಾಸ್ತ್ರದಲ್ಲಿಯೂ ಆಸಕ್ತಿ. ಮಹಾಯೋಗಿಗಳಾದ ಶ್ರೀ ಶ್ರೀರಂಗಮಹಾಗುರುಗಳ ಮಾರ್ಗದರ್ಶನದಲ್ಲಿ ಆಧ್ಯಾತ್ಮಮಾರ್ಗದಲ್ಲಿ ತೊಡಗಿಕೊಂಡಿದ್ದಾರೆ. ಶ್ರೀ ಶ್ರೀರಂಗಪ್ರಿಯಸ್ವಾಮಿಯವರು ಅವರ ಗುರುಗಳಾದ ಶ್ರೀ ಶ್ರೀ ರಂಗಮಹಾ ಗುರುಗಳೊಂದಿಗೆ ನಡೆಸಿದ ಸಂಭಾಷಣೆಯ ಆಂಗ್ಲ ತರ್ಜಮೆಯ ಲೇಖನಗಳು, ‘ಆರ್ಯಸಂಕೃತಿ’ ಕನ್ನಡ ಮಾಸಿಕದಲ್ಲಿ ಕಳೆದ 12 ವರ್ಷಗಳಿಂದಲೂ ಪ್ರಕಟವಾಗಿವೆ. ಅಷ್ಟಾಂಗ ಯೋಗ ವಿಜ್ಞಾನಮಂದಿರದಿಂದ ಕನ್ನಡದಲ್ಲಿ ಹೊರಹೊಮ್ಮಿದ ‘ಶ್ರೀರಂಗ ವಚನಾಮೃತ’ ಎಂಬ ಪುಸ್ತಕಗಳು ‘Nectarine Nuggets of Shriranga Mahaguru’ ಎಂಬ ಹೆಸರಿನಲ್ಲಿ ಪುಸ್ತಕ ರೂಪವಾಗಿ ಪ್ರಕಾಶಗೊಂಡಿವೆ. ಇವಲ್ಲದೆ, ಅಷ್ಟಾಂಗ ಯೋಗ ವಿಜ್ಞಾನಮಂದಿರ ಪ್ರಕಾಶ ಪಡಿಸಿರುವ ಅನೇಕ ಕನ್ನಡ ಹಾಗೂ ಆಂಗ್ಲ ಪುಸ್ತಕ- ಲೇಖನಗಳ ಸಂಪಾದಕರಾಗಿದ್ದಾರೆ. ಶ್ರೀಮಂದಿರದ ಯೌಟ್ಯೂಬ್ ಚಾನಲ್‌ನಲ್ಲಿ ಹಾಗೂ ವಿಸ್ತಾರ ಓಂ ಕಾರ ಚಾನಲ್ ನಲ್ಲಿ ಇವರ ಪ್ರವಚನವು ಪ್ರಸಾರವಾಗುತ್ತಿದೆ. ಪ್ರಸ್ತುತ ಅಷ್ಟಾಂಗ ಯೋಗ ವಿಜ್ಞಾನಮಂದಿರದ ಬೆಂಗಳೂರು ಶಾಖೆಯ ಕಾರ್ಯದರ್ಶಿಯಾಗಿದ್ದಾರೆ.

ಇದನ್ನೂ ಓದಿ: Prerane : ಪ್ರಾಮಾಣಿಕತೆಯೇ ಅಧ್ಯಾತ್ಮದ ಮೂಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading
Advertisement
5 Day Work in Banks
ವಾಣಿಜ್ಯ8 mins ago

5 Days Work in Banks: ಬ್ಯಾಂಕ್‌ಗಳು ವಾರದಲ್ಲಿ ಐದೇ ದಿನ ಓಪನ್‌ ಇರಲಿವೆ; ಪರ್ಯಾಯ ವ್ಯವಸ್ಥೆಗೆ ಸಜ್ಜಾಗಿ

Theft Case In Bengaluru
ಬೆಂಗಳೂರು19 mins ago

Theft Case : ತಂದೆ ಬೈದಿದ್ದಕ್ಕೆ ಮನೆ ಬಿಟ್ಟು ಆಟೋ ಹತ್ತಿದ ಯುವಕ; 100 ಗ್ರಾಂ ಚಿನ್ನ ಕಸಿದು ಚಾಲಕ ಎಸ್ಕೇಪ್

Salman Khan
ಸಿನಿಮಾ42 mins ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; ಐದನೇ ಆರೋಪಿಯ ಬಂಧನ

Dharamsala Stadium
ಕ್ರೀಡೆ46 mins ago

Dharamsala Stadium: ಧರ್ಮಶಾಲಾದಲ್ಲಿ ಅನಾವರಣಗೊಂಡ ದೇಶದ ಮೊದಲ ಹೈಬ್ರಿಡ್‌ ಕ್ರಿಕೆಟ್ ಪಿಚ್​ನ ವಿಶೇಷತೆ ಏನು?

Gold rate today
ಚಿನ್ನದ ದರ47 mins ago

Gold Rate Today: ಚಿನ್ನದ ಬೆಲೆ ಗ್ರಾಂಗೆ ₹33 ಏರಿಕೆ; 24 ಕ್ಯಾರಟ್‌ ಬಂಗಾರದ ದರ ಇಂದು ₹7,238

Narendra Modi
ದೇಶ54 mins ago

Narendra Modi: “ನಾನು ಇಸ್ಲಾಂ ವಿರೋಧಿ ಅಲ್ಲ, ಆದರೆ ಮುಸ್ಲಿಮರು…”; ಕಾಂಗ್ರೆಸ್‌ ಆರೋಪದ ಬಗ್ಗೆ ಮೋದಿ ಹೇಳಿದ್ದೇನು?

Job Alert
ಉದ್ಯೋಗ1 hour ago

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

LIQUID NITROGEN
ಬೆಂಗಳೂರು1 hour ago

Liquid Nitrogen : ಕಾಟನ್ ಕ್ಯಾಂಡಿ ಬಳಿಕ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ

IPL 2024
ಕ್ರೀಡೆ2 hours ago

IPL 2024: ಬಸ್‌ ಕಂಡಕ್ಟರ್‌ಗಳಿಗೆ ವಿಶೇಷ ಉಡುಗೊರೆ ನೀಡಿದ ಚೆನ್ನೈ ಸೂಪರ್​ ಕಿಂಗ್ಸ್

prajwal ravanna case dk shivakumar poster
ಪ್ರಮುಖ ಸುದ್ದಿ2 hours ago

Prajwal Revanna Case: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ ವಾರ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ18 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ18 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ19 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌