WPL 2023: ಕೌರ್ ಸಾರಥ್ಯದಲ್ಲಿ ತಂಡ ಉತ್ತಮ ಪ್ರದರ್ಶನ ತೋರಲಿದೆ; ​ನೀತಾ ಅಂಬಾನಿ ವಿಶ್ವಾಸ - Vistara News

ಕ್ರಿಕೆಟ್

WPL 2023: ಕೌರ್ ಸಾರಥ್ಯದಲ್ಲಿ ತಂಡ ಉತ್ತಮ ಪ್ರದರ್ಶನ ತೋರಲಿದೆ; ​ನೀತಾ ಅಂಬಾನಿ ವಿಶ್ವಾಸ

ನಮ್ಮ ತಂಡಕ್ಕೆ ಶ್ರೇಷ್ಠ ಕ್ರಿಕೆಟ್ ಆಡಲು ಹರ್ಮನ್​ಪ್ರೀತ್​ ಕೌರ್​ ಸ್ಫೂರ್ತಿ ತುಂಬಲಿದ್ದಾರೆ ಎಂದು ತಂಡದ ಮಾಲಕಿ ನೀತಾ ಅಂಬಾನಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

WPL 2023: Kaur-led team to perform well; Nita Ambani trust
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಬಹುನಿರೀಕ್ಷಿತ ವುಮೆನ್ಸ್​ ಪ್ರೀಮಿಯರ್ ಲೀಗ್(WPL 2023)​ ಕ್ರಿಕೆಟ್​ ಟೂರ್ನಿ ಆಡಲು ಎಲ್ಲ 5 ತಂಡಗಳೂ ಈಗಾಗಲೇ ಸಲಕ ಸಿದ್ಧತೆ ನಡೆಸಿವೆ. ಮಾರ್ಚ್ 4 ರಂದು ಈ ಚೊಚ್ಚಲ ಆವೃತ್ತಿಗೆ ಚಾಲನೆ ದೊರೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್(mumbai indians) ಮುಖಾಮುಖಿಯಾಗಲಿದೆ. ಇದೀಗ ಮುಂಬೈ ಇಂಡಿಯನ್ಸ್​ ತಂಡಕ್ಕೆ ನಾಯಕಿಯಾದ ಹರ್ಮನ್​ಪ್ರೀತ್​ ಕೌರ್(harmanpreet kaur)​ ಬಗ್ಗೆ ತಂಡದ ಮಾಲಕಿ ನೀತಾ ಎಂ. ಅಂಬಾನಿ(Nita Ambani) ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ನೀತಾ ಎಂ. ಅಂಬಾನಿ, ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ಮೊಟ್ಟಮೊದಲ ನಾಯಕಿಯಾಗಿ ಹರ್ಮನ್​ಪ್ರೀತ್​ ಕೌರ್ ಅವರು ನೇಮಕವಾಗಿರುವುದು ಸಂತಸ ತಂದಿದೆ. ಜತೆಗೆ ಅವರು ನಮ್ಮ ತಂಡದ ಭಾಗವಾಗಿರುವುದು ಮತ್ತಷ್ಟು ಖುಷಿ ನೀಡಿದೆ ಎಂದರು.

“ಭಾರತ ತಂಡದ ನಾಯಕಿಯಾಗಿರುವ ಕೌರ್​ ಭಾರತೀಯ ಮಹಿಳಾ ತಂಡಕ್ಕೆ ಕೆಲವು ಸ್ಮರಣೀಯ ಗೆಲುವುಗಳನ್ನು ತಂದುಕೊಟ್ಟಿದ್ದಾರೆ. ತರಬೇತುದಾರರಾದ ಚಾರ್ಲೋಟ್ ಮತ್ತು ಜೂಲನ್ ಬೆಂಬಲದೊಂದಿಗೆ ಅವರು, ಮುಂಬೈ ಇಂಡಿಯನ್ಸ್​ ಮಹಿಳಾ ತಂಡಕ್ಕೆ ಶ್ರೇಷ್ಠ ಕ್ರಿಕೆಟ್ ಆಡಲು ಸ್ಫೂರ್ತಿ ತುಂಬುವ ವಿಶ್ವಾಸವಿದೆ. ಅವರ ಸಾರಥ್ಯದಲ್ಲಿ ತಂಡ ಹೊಸ ಅಧ್ಯಾಯದ ಬರೆಯುವುದನ್ನು ನೋಡಲು ನಾವು ಕಾಯುತ್ತಿದ್ದೇವೆ. ನಮ್ಮ ಅಭಿಮಾನಿಗಳ ನೆಚ್ಚಿನ ಮುಂಬೈ ತಂಡವನ್ನು ನಿರ್ಭೀತಿ ಮತ್ತು ಮನರಂಜನೆಯ ಆಟದ ಮೂಲಕ ನಮ್ಮ ಹುಡುಗಿಯರೂ ಆಡುವುದನ್ನು ನೋಡಲು ನಾನು ಕಾತರಗೊಂಡಿದ್ದೇನೆ” ಎಂದು ನೀತಾ ಎಂ. ಅಂಬಾನಿ ಹೇಳಿದರು.

ಮುಖ್ಯ ಕೋಚ್ ಚಾರ್ಲೋಟ್ ಎಡ್ವರ್ಡ್ಸ್ ಎದುರಾಳಿಯಾಗಿ ಮತ್ತು ಮೆಂಟರ್ ಜೂಲನ್ ಗೋಸ್ವಾಮಿ ಜತೆಗೆ ಟೀಮ್​ ಇಂಡಿಯಾದಲ್ಲಿ ಜತೆಯಾಗಿ ಆಡಿದ ಅನುಭವವನ್ನು ಕೌರ್ ಹೊಂದಿದ್ದಾರೆ. ಆದ್ದರಿಂದ ಅವರಿಗೆ ತಂಡ ಸಂಯೋಜನೆಗೆ ಸಮಸ್ಯೆ ಉಂಟಾಗದು. ಒಟ್ಟಾರೆ ಅವರ ಸಾರಥ್ಯದಲ್ಲಿ ಮುಂಬೈ ಚೊಚ್ಚಲ ಚಾಂಪಿಯನ್​ ಪಟ್ಟ ಅಲಂಕರಿಸಲಿದೆಯಾ ಎಂದು ಕಾದು ನೋಡಬೇಕಿದೆ.

ಮುಂಬೈ ಇಂಡಿಯನ್ಸ್ ತರಬೇತಿ ಬಳಗದಲ್ಲಿ ಚಾರ್ಲೋಟ್ ಎಡ್ವರ್ಡ್ಸ್(ಮುಖ್ಯ ಕೋಚ್), ಜೂಲನ್ ಗೋಸ್ವಾಮಿ (ಮೆಂಟರ್, ಬೌಲಿಂಗ್ ಕೋಚ್), ದೇವಿಕಾ ಪಾಲ್ಶಿಕರ್ (ಬ್ಯಾಟಿಂಗ್ ಕೋಚ್), ಲೈಡಿಯಾ ಗ್ರೀನ್ವೇ (ಫೀಲ್ಡಿಂಗ್ ಕೋಚ್) ಇದ್ದಾರೆ. ತಂಡದಲ್ಲಿ ಹರ್ಮನ್​ಪ್ರೀತ್​ ಕೌರ್, ನಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಸ್ತಿಕಾ ಭಾಟಿಯಾ, ಹೀದರ್ ಗ್ರಹಾಂ, ಇಸಬೆಲ್ ವೊಂಗ್, ಅಮನ್ಜೋತ್ ಕೌರ್, ಧಾರಾ ಗುಜ್ಜರ್, ಶೇಕಾ ಇಶಾಕ್, ಹ್ಯಾಲಿ ಮ್ಯಾಥ್ಯೂಸ್, ಕ್ಲೋಯಿ ಟ್ರೈಯಾನ್, ಹುಮೈರಾ ಕಾಜಿ, ಪ್ರಿಯಾಂಕಾ ಬಾಲ, ಸೋನಂ ಯಾದವ್, ನೀಲಮ್ ಬಿಸ್ಟ್, ಜಿಂಟಿಮನಿ ಕಲಿಟಾ ಆಟಗಾರ್ತಿಯರಾಗಿದ್ದಾರೆ.

ಇದನ್ನೂ ಓದಿ WPL 2023: ಮುಂಬೈ ತಲುಪಿದ ಆರ್​ಸಿಬಿ ಆಟಗಾರ್ತಿಯರು

ಹರ್ಮನ್​ಪ್ರೀತ್​ ಕೌರ್​ ಸಾಧನೆ

ಇತ್ತೀಚೆಗಷ್ಟೇ 150 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ ಭಾರತದ ಮೊದಲ ಕ್ರಿಕೆಟರ್ ಎನಿಸಿದ್ದ ಹರ್ಮನ್​ಪ್ರೀತ್​ ಕೌರ್​, 20ನೇ ವಯಸ್ಸಿನಲ್ಲೇ ಕ್ರಿಕೆಟ್​ ಪದಾರ್ಪಣೆ ಮಾಡಿದ ಅವರು ಕಳೆದೊಂದು ದಶಕದಿಂದ ಎಲ್ಲ ಮಾದರಿಯ ಕ್ರಿಕೆಟ್ನಲ್ಲಿ ಭಾರತ ತಂಡಕ್ಕೆ ಆಧಾರಸ್ತಂಭವೆನಿಸಿದ್ದಾರೆ. ರಾಷ್ಟ್ರೀಯ ಮಹಿಳಾ ತಂಡದ ನಾಯಕಿಯಾಗಿರುವ ಅವರು, ಅರ್ಜುನ ಪ್ರಶಸ್ತಿ ಪುರಸ್ಕೃತೆಯೂ ಆಗಿದ್ದಾರೆ. ಮಹಿಳೆಯರ ಏಕ ದಿನ ವಿಶ್ವ ಕಪ್​ನಲ್ಲಿ ನಾಕೌಟ್ ಹಂತದ ಪಂದ್ಯದಲ್ಲಿ ಗರಿಷ್ಠ ವೈಯಕ್ತಿಕ ರನ್ (171*) ಸಿಡಿಸಿದ ದಾಖಲೆ ಜತೆಗೆ ನಾಯಕಿಯಾಗಿ ಉತ್ತಮ ಗೆಲುವಿನ ದಾಖಲೆಯನ್ನೂ ಅವರು ಹೊಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

Rashid Khan: ದಿ ಹಂಡ್ರೆಡ್​ ಕ್ರಿಕೆಟ್​ ಲೀಗ್​ನ ಪಂದ್ಯವೊಂದರಲ್ಲಿ ರಶೀದ್​ ಖಾನ್​ ಅವರು ಟೈಮಲ್‌ ಮಿಲ್ಸ್‌ ಎಸೆತವನ್ನು ಹೆಲಿಕಾಪ್ಟರ್ ಶಾಟ್ ಮೂಲಕ ಆಫ್​ ಸೈಡ್​ ಕಡೆಗೆ ಸಿಕ್ಸರ್​ ಬಾರಿಸಿ ಮಿಂಚಿದ್ದಾರೆ.

VISTARANEWS.COM


on

Rashid Khan
Koo

ಲಂಡನ್​: ಮಹೇಂದ್ರ ಸಿಂಗ್​ ಧೋನಿ(MS Dhoni) ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಿ ಹಲವು ವರ್ಷ ಕಳೆದಿದ್ದರೂ ಕೂಡ ಅವರು ಪರಿಚಯಿಸಿದ ‘ಹೆಲಿಕಾಪ್ಟರ್ ಶಾಟ್’(MS Dhoni Helicopter shot) ಮಾತ್ರ ಆಗಾಗ ಕ್ರಿಕೆಟ್​ನಲ್ಲಿ ಸದ್ದು ಮಾಡುತ್ತಿರುತ್ತದೆ. ಈ ಶಾಟ್​ ಹೊಡೆಯಲು ಅನೇಕರು ಪ್ರಯತ್ನಿಸಿದರೂ ಸಫಲರಾಗಿದ್ದು ಮಾತ್ರ ಕೆಲವರಷ್ಟೇ. ಇದೀಗ ಅಫಘಾನಿಸ್ತಾನ ತಂಡದ ಸ್ಪಿನ್​​ ಆಲ್​ರೌಂಡರ್​ ರಶೀದ್​ ಖಾನ್​(Rashid Khan) ಧೋನಿಯ ನೆಚ್ಚಿನ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್​ ಬಾರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ದಿ ಹಂಡ್ರೆಡ್​ ಕ್ರಿಕೆಟ್​ ಲೀಗ್​ನ ಪಂದ್ಯವೊಂದರಲ್ಲಿ ರಶೀದ್​ ಖಾನ್​ ಅವರು ಟೈಮಲ್‌ ಮಿಲ್ಸ್‌ ಎಸೆತವನ್ನು ಹೆಲಿಕಾಪ್ಟರ್ ಶಾಟ್ ಮೂಲಕ ಆಫ್​ ಸೈಡ್​ ಕಡೆಗೆ ಸಿಕ್ಸರ್​ ಬಾರಿಸಿ ಮಿಂಚಿದ್ದಾರೆ. ರಶೀದ್​ ಸಿಕ್ಸರ್​ ಬಾರಿಸುತ್ತಿದ್ದಂತೆ ಕಾಮೆಂಟ್ರಿ ಮಾಡುತ್ತಿದ್ದವರು ಓ ಸೊಗಸಾದ ಹೆಲಿಕಾಪ್ಟರ್ ಶಾಟ್ ಎಂದು ವರ್ಣಿಸಿದ್ದಾರೆ. ಈ ಹೊಡೆತ ಧೋನಿಯಂತೆ ಪರಿಪೂರ್ಣವಾಗಿರದಿದ್ದತರೂ ಕೂಡ ಕೊಂಚ ಸಾಮ್ಯತೆ ಕಂಡುಬಂತು. ರಶೀದ್​ ಖಾನ್​ ಐಪಿಎಲ್​ನಲ್ಲಿಯೂ ಇದೇ ರೀತಿ ಹಲವು ಬಾರಿ ಹೆಲಿಕಾಪ್ಟರ್ ಶಾಟ್ ಬಾರಿಸಿದ್ದರು.

ಕೆಲ ದಿನಗಳ ಹಿಂದಷ್ಟೇ ರಶೀದ್ ಖಾನ್ ಅವರು ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದರು. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ‘ದಿ ಹಂಡ್ರೆಡ್’ ಕ್ರಿಕೆಟ್​ ಲೀಗ್​ನಲ್ಲಿ 2 ವಿಕೆಟ್ ಕಬಳಿಸುವುದರೊಂದಿಗೆ ರಶೀದ್ ಖಾನ್ ಎಲ್ಲ ಮಾದರಿಯ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್(Rashid khan 600 wickets)​ ಪೂರ್ತಿಗೊಳಿಸಿದ ವಿಶ್ವದ ಮೊದಲ ಸ್ಪಿನ್ನರ್ ಹಾಗೂ 2ನೇ ಬೌಲರ್​​ ಎನಿಸಿಕೊಂಡಿದ್ದರು.

ಇದನ್ನೂ ಓದಿ Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ್ದ ವಿಶ್ವ ದಾಖಲೆಯನ್ನು ಮೊದಲ ನಿರ್ಮಿಸಿದ್ದು ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ಡ್ವೇನ್ ಬ್ರಾವೊ. ಇದೀಗ ರಶೀದ್​ ಖಾನ್​ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಅತೀ ವೇಗವಾಗಿ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್ ಕಬಳಿಸಿದ ದಾಖಲೆ ರಶೀದ್ ಹೆಸರಿಗೆ ದಾಖಲಾಗಿದೆ. ಬ್ರಾವೊ 545 ಟಿ20 ಪಂದ್ಯಗಳ ಮೂಲಕ ಈ ಸಾಧನೆ ಮಾಡಿದ್ದರೆ, ರಶೀದ್​ ಖಾನ್​ ಕೇವಲ 441 ಪಂದ್ಯಗಳನ್ನಾಡಿ ಈ ಮೈಲುಗಲ್ಲು ನಿರ್ಮಿಸಿದ್ದಾರೆ.

ರಶೀದ್ ಖಾನ್ 93 ಅಂತಾರಾಷ್ಟ್ರೀಯ ಟಿ 20 ಪಂದ್ಯಗಳಲ್ಲಿ 14.14 ಸರಾಸರಿ ಮತ್ತು 6.08 ಎಕಾನಮಿ ರೇಟ್​ನಲ್ಲಿ 152 ವಿಕೆಟ್​ಗಳನ್ನು ಪಡೆದಿದ್ದಾರೆ. ಐಪಿಎಲ್​​ನಲ್ಲಿ 121 ಪಂದ್ಯಗಳಲ್ಲಿ 21.82ರ ಸರಾಸರಿಯಲ್ಲಿ 149 ವಿಕೆಟ್ ಪಡೆದಿದ್ದಾರೆ. ರಶೀದ್ 2017 ರಿಂದ 2021 ರವರೆಗೆ ಸನ್ರೈಸರ್ಸ್ ಹೈದರಾಬಾದ್ (ಎಸ್​ಆರ್​ಎಚ್​) ಪರ ಆಡಿದ್ದರು. ನಂತರ ಗುಜರಾತ್​ ಟೈಟನ್ಸ್ ಸೇರಿಕೊಂಡಿದ್ದಾರೆ.

Continue Reading

ಕ್ರೀಡೆ

IND vs SL 2nd ODI: ಇಂದು ಭಾರತ-ಲಂಕಾ ದ್ವಿತೀಯ ಏಕದಿನ ಮುಖಾಮುಖಿ; ಪಂದ್ಯಕ್ಕೆ ಮಳೆ ಭೀತಿ

IND vs SL 2nd ODI: ಕೊಲಂಬೊದಲ್ಲಿ(Colombo weather report) ಶನಿವಾರ ಸಂಜೆಯ ವೇಳೆ ಭಾರೀ ಮಳೆಯಾಗಿತ್ತು. ಹೀಗಾಗಿ ಭಾನುವಾರವೂ ಶೇ. 89 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

VISTARANEWS.COM


on

IND vs SL 2nd ODI:
Koo

ಕೊಲಂಬೊ: ಅಪಾಯಕಾರಿ ಶ್ರೀಲಂಕಾ(Sri Lanka vs India) ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಗೆಲುವಿನಂಚಿನವರೆಗೂ ಬಂದು ಪಂದ್ಯವನ್ನು ಟೈ ಮಾಡಿಕೊಂಡು ಸೋಲಿನಿಂದ ಪಾರಾದ ಭಾರತ ತಂಡ ಇದೀಗ ಮತ್ತೊಂದು ಪಂದ್ಯವನ್ನಾಡಲು ಸಜ್ಜಾಗಿದೆ. ಇಂದು ನಡೆಯುವ ದ್ವಿತೀಯ ಏಕದಿನಲ್ಲಿIND vs SL 2nd ODI) ಕಣಕ್ಕಿಳಿಯಲಿದೆ. ಆದರೆ ಪಂದ್ಯಕ್ಕೆ ಮಳೆ ಭೀತಿಯೂ ಎದುರಾಗಿದೆ.

ಹವಾಮಾನ ವರದಿ


ಕೊಲಂಬೊದಲ್ಲಿ(Colombo weather report) ಶನಿವಾರ ಸಂಜೆಯ ವೇಳೆ ಭಾರೀ ಮಳೆಯಾಗಿತ್ತು. ಹೀಗಾಗಿ ಭಾನುವಾರವೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ. ಹಗಲು ರಾತ್ರಿಯ ಪಂದ್ಯವಾದ ಕಾರಣ ದ್ವಿತೀಯ ಇನಿಂಗ್ಸ್​ವೇಳೆ ಮಳೆಯಾಗುವ ಸಾಧ್ಯತೆ ಅಧಿಕ. ಶೇ. 89 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸ್ಪಿನ್​ ಟ್ರ್ಯಾಕ್​ನಲ್ಲಿ ಪರದಾಡಿದ ಭಾರತೀಯ ಬ್ಯಾಟರ್​ಗಳು ಈ ಪಂದ್ಯದಲ್ಲಿ ಮೈ ಚಳಿ ಬಿಟ್ಟು ಬ್ಯಾಟ್​ ಬೀಸಬೇಕಿದೆ. ನಾಯಕ ರೋಹಿತ್​ ಶರ್ಮ ಹೊರತುಪಡಿಸಿ ತಂಡದಲ್ಲಿರುವ ಉಳಿದ ಸ್ಟಾರ್​ ಆಟಗಾರರು ಕಳೆದ ಪಂದ್ಯದಲ್ಲಿ ಕ್ರಿಕೆಟ್ ಜೋಶ್​ ತೋರುವಲ್ಲಿ ವಿಫಲರಾಗಿದ್ದರು. ಶ್ರೀಲಂಕಾ ತಂಡದಲ್ಲಿ ಅನುಭವಿ ಆಟಗಾರರು ಇರದೇ ಇದ್ದರೂ ಕೂಡ ಯುವ ಆಟಗಾರರು ಯಾರು ಊಹಿಸದ ರೀತಿಯಲ್ಲಿ ಪ್ರದರ್ಶನ ತೋರುವ ಮೂಲಕ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಇವರ ಸವಾಲನ್ನು ಭಾರತ ಕಡೆಗಣಿಸಬಾರದು.

ಆರ್ ಪ್ರೇಮದಾಸ ಕ್ರೀಡಾಂಗಣದ ಪಿಚ್ ವರದಿ

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದುವರೆಗೆ 150 ಏಕದಿನ ಪಂದ್ಯಗಳು ನಡೆದಿವೆ. ಈ ಸ್ಥಳದಲ್ಲಿ ಮೊದಲು ಬ್ಯಾಟಿಂಗ್ ಮಾಡುವುದು ಹೆಚ್ಚು ಅನುಕೂಲಕರ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು 80 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ತಂಡಗಳು ಕೇವಲ 59 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್​ಗಳು ಪ್ರಭಾವ ಬೀರಿದ್ದರು. ಎರಡನೇ ಏಕದಿನ ಪಂದ್ಯದಲ್ಲಿ ಹೆಚ್ಚಿನದನ್ನು ನಿರೀಕ್ಷಿಸಲಾಗಿದೆ. ಪಂದ್ಯ ಮುಂದುವರಿದಂತೆ ಬ್ಯಾಟಿಂಗ್ ಕಠಿಣವಾಗುತ್ತದೆ. ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮಾಡಲು ಒಲವು ತೋರುತ್ತಾನೆ.

ಸಂಭಾವ್ಯ ತಂಡಗಳು


ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೀ), ಸದೀರ ಸಮರವಿಕ್ರಮ, ಚರಿತ್ ಅಸಲಂಕ (ನಾಯಕ), ಜನಿತ್ ಲಿಯಾನಗೆ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಅಕಿಲ ದನಂಜಯ, ಅಸಿತ ಫೆರ್ನಾಂಡೋ, ಮೊಹಮ್ಮದ್ ಶಿರಾಜ್.

ಇದನ್ನೂ ಓದಿ IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೀ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಂದ್ಯದ ವಿವರಗಳು

  • ಭಾರತ-ಶ್ರೀಲಂಕಾ 2ನೇ ಏಕದಿನ ಪಂದ್ಯ
  • ಸ್ಥಳ: ಆರ್ ಪ್ರೇಮದಾಸ ಕ್ರೀಡಾಂಗಣ, ಕೊಲಂಬೊ
  • ದಿನಾಂಕ ಮತ್ತು ಸಮಯ ಭಾನುವಾರ, ಆಗಸ್ಟ್ 4, ಮಧ್ಯಾಹ್ನ 2:30

ಮುಖಾಮುಖಿ ದಾಖಲೆಗಳು

  • ಪಂದ್ಯಗಳು- 169
  • ಶ್ರೀಲಂಕಾ ಗೆಲುವು- 57
  • ಭಾರತ ಗೆಲುವು- 99
  • ಸಮಬಲ 02
  • ಫಲಿತಾಂಶ ಇಲ್ಲ 11
  • ಮೊದಲ ಪಂದ್ಯ: ಜೂನ್ 16, 1979
  • ಇತ್ತೀಚಿನ ಪಂದ್ಯ- ಆಗಸ್ಟ್ 2, 2024

Continue Reading

ಪ್ರಮುಖ ಸುದ್ದಿ

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

Paris Olympics 2024: ಪುರುಷರ ತಂಡವು ಕ್ವಾರ್ಟರ್ ಫೈನಲ್​ನಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು ಎದುರಿಸಲಿದೆ. ಹೀಗಾಗಿ ಹಾಕಿಯಲ್ಲಿ ಭಾರತಕ್ಕೆ ಮತ್ತೊಂದು ಪ್ರಮುಖ ಪಂದ್ಯವಾಗಿದೆ. ಶೂಟಿಂಗ್​ನಲ್ಲಿ ವಿಜಯ್​ವೀರ್​ ಸಿಧು ಮತ್ತು ಅನೀಶ್ ಭನ್ವಾಲಾ ಅರ್ಹತಾ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಪುರುಷರ 25 ಮೀಟರ್ ರ್ಯಾಪಿಡ್​ ಫೈರ್ ಪಿಸ್ತೂಲ್​​ಗೆ ಅರ್ಹತೆ ಪಡೆಯಲು ಪ್ರಯತ್ನಿಸುತ್ತಾರೆ. ಮಹೇಶ್ವರಿ ಚೌಹಾಣ್ ಮತ್ತು ರೈಜಾ ಧಿಲ್ಲಾನ್ ಮಹಿಳಾ ಸ್ಕೀಟ್ ಅರ್ಹತಾ 2 ನೇ ದಿನಕ್ಕೆ ಮರಳಲಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ (Paris Olympics 2024) ಕ್ರೀಡಾಕೂಟದ 9ನೇ ದಿನದ ಸ್ಪರ್ಧೆಗಳು ಭಾನುವಾರ ನಡೆಯಲಿವೆ. ಟೋಕಿಯೊ ಕಂಚಿನ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ ಭಾರತದ ನಾಲ್ಕನೇ ಪದಕವನ್ನು ಗಳಿಸಲು ಆಗಸ್ಟ್ 4ರಂದು ಕ್ವಾರ್ಟರ್ ಫೈನಲ್​​ನಲ್ಲಿ ಚೀನಾದ ಲಿ ಕಿಯಾನ್ ಅವರನ್ನು ಎದುರಿಸಲಿದ್ದಾರೆ. ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ನಲ್ಲಿ ಸೆಮಿಫೈನಲ್ ನಲ್ಲಿ ವಿಕ್ಟರ್ ಅಕ್ಸೆಲ್ಸೆನ್ ಅವರನ್ನು ಎದುರಿಸುವ ಮೂಲಕ ಪದಕ ಗಳಿಸುವ ಗುರಿ ಹೊಂದಿದ್ದಾರೆ ಭಾರತದ ಯಾವುದೇ ಪುರುಷ ಶಟ್ಲರ್ ಇದುವರೆಗೆ ಫೈನಲ್ ತಲುಪಿಲ್ಲ ಎಂಬುದು ಇಲ್ಲಿ ಗಮನಾರ್ಹ.

ಪುರುಷರ ತಂಡವು ಕ್ವಾರ್ಟರ್ ಫೈನಲ್​ನಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು ಎದುರಿಸಲಿದೆ. ಹೀಗಾಗಿ ಹಾಕಿಯಲ್ಲಿ ಭಾರತಕ್ಕೆ ಮತ್ತೊಂದು ಪ್ರಮುಖ ಪಂದ್ಯವಾಗಿದೆ. ಶೂಟಿಂಗ್​ನಲ್ಲಿ ವಿಜಯ್​ವೀರ್​ ಸಿಧು ಮತ್ತು ಅನೀಶ್ ಭನ್ವಾಲಾ ಅರ್ಹತಾ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಪುರುಷರ 25 ಮೀಟರ್ ರ್ಯಾಪಿಡ್​ ಫೈರ್ ಪಿಸ್ತೂಲ್​​ಗೆ ಅರ್ಹತೆ ಪಡೆಯಲು ಪ್ರಯತ್ನಿಸುತ್ತಾರೆ. ಮಹೇಶ್ವರಿ ಚೌಹಾಣ್ ಮತ್ತು ರೈಜಾ ಧಿಲ್ಲಾನ್ ಮಹಿಳಾ ಸ್ಕೀಟ್ ಅರ್ಹತಾ 2 ನೇ ದಿನಕ್ಕೆ ಮರಳಲಿದ್ದಾರೆ.

ಅಥ್ಲೆಟಿಕ್ಸ್​​ನಲ್ಲಿ ಪಾರುಲ್ ಚೌಧರಿ ಮಹಿಳೆಯರ 3,000 ಮೀಟರ್ ಸ್ಟೀಪಲ್ಚೇಸ್ ರೌಂಡ್ 1 ರಲ್ಲಿ ಭಾಗವಹಿಸಿದರೆ, ಜೆಸ್ವಿನ್ ಆಲ್ಡ್ರಿನ್ ಪುರುಷರ ಲಾಂಗ್ ಜಂಪ್ ಅರ್ಹತೆಯಲ್ಲಿ ಸ್ಪರ್ಧಿಸಲಿದ್ದಾರೆ. ವಿಷ್ಣು ಸರವಣನ್ ಮತ್ತು ನೇತ್ರಾ ಕುಮನನ್ ತಮ್ಮ ತಮ್ಮ ಸೇಯ್ಲಿಂಗ್​ ಸ್ಪರ್ಧೆಗಳಲ್ಲಿ ಇನ್ನೂ ಎರಡು ರೇಸ್ ಗಳಿಗೆ ಮರಳಲಿದ್ದಾರೆ.

ಇದನ್ನೂ ಓದಿ: Wasim Jaffer : ಪಂಜಾಬ್ ತಂಡದ ಕೋಚ್​ ಆಗಿ ಮಾಜಿ ಬ್ಯಾಟರ್​ ವಾಸಿಮ್​ ಜಾಫರ್ ನೇಮಕ

ಆಗಸ್ಟ್ 4 ರಂದು ) ಭಾರತದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಶೂಟಿಂಗ್: 25 ಮೀಟರ್ ರ್ಯಾಪಿಡ್ ಫೈರ್ ಪಿಸ್ತೂಲ್ ಪುರುಷರ ಅರ್ಹತಾ ಹಂತ 1: ವಿಜಯ್​ವೀರ್​ ಸಿಧು ಮತ್ತು ಅನೀಶ್ ಭನ್ವಾಲಾ – ಮಧ್ಯಾಹ್ನ 12.30ಕ್ಕೆ

25 ಮೀಟರ್ ರ್ಯಾಪಿಡ್ ಫೈರ್ ಪಿಸ್ತೂಲ್ ಪುರುಷರ ಅರ್ಹತಾ ಹಂತ 2: ವಿಜಯ್​ವೀರ್​ ಸಿಧು ಮತ್ತು ಅನೀಶ್ ಭನ್ವಾಲಾ – ಸಂಜೆ 4.30ಕ್ಕೆ

ಮಹಿಳಾ ಸ್ಕೀಟ್ ಅರ್ಹತಾ (ದಿನ 2): ಮಹೇಶ್ವರಿ ಚೌಹಾಣ್ ಮತ್ತು ರೈಜಾ ಧಿಲ್ಲಾನ್ – ಮಧ್ಯಾಹ್ನ 1 ಗಂಟೆಗೆ

ಮಹಿಳಾ ಸ್ಕೀಟ್ ಫೈನಲ್ (ಅರ್ಹತೆ ಪಡೆದರೆ): ಮಹೇಶ್ವರಿ ಚೌಹಾಣ್ ಮತ್ತು ರೈಜಾ ಧಿಲ್ಲಾನ್ – ಸಂಜೆ 7 ಗಂಟೆಗೆ

ಗಾಲ್ಫ್: ಪುರುಷರ ವೈಯಕ್ತಿಕ ಸ್ಟ್ರೋಕ್ ಪ್ಲೇ (ರೌಂಡ್ 4): ಶುಭಂಕರ್ ಶರ್ಮಾ ಮತ್ತು ಗಗನ್ಜೀತ್ ಭುಲ್ಲರ್ – ಮಧ್ಯಾಹ್ನ 12.30ಕ್ಕೆ

ಹಾಕಿ: ಪುರುಷರ ಕ್ವಾರ್ಟರ್ ಫೈನಲ್: ಭಾರತ ವಿರುದ್ಧ ಗ್ರೇಟ್ ಬ್ರಿಟನ್ – ಮಧ್ಯಾಹ್ನ 1:30ಕ್ಕೆ

ಅಥ್ಲೆಟಿಕ್ಸ್

ಮಹಿಳೆಯರ 3000 ಮೀಟರ್ ಸ್ಟೀಪಲ್ ಚೇಸ್ ರೌಂಡ್ 1: ಪಾರುಲ್ ಚೌಧರಿ – ಮಧ್ಯಾಹ್ನ 1:35ಕ್ಕೆ

ಪುರುಷರ ಲಾಂಗ್ ಜಂಪ್ ಅರ್ಹತೆ: ಜೆಸ್ವಿನ್ ಆಲ್ಡ್ರಿನ್ – ಮಧ್ಯಾಹ್ನ 2:30ಕ್ಕೆ

ಬಾಕ್ಸಿಂಗ್: ಮಹಿಳೆಯರ 75 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್: ಚೀನಾ ಸ್ಪರ್ಧಿ ವಿರುದ್ಧ ಲೊವ್ಲಿನಾ ಬೊರ್ಗೊಹೈನ್ 3:02ಕ್ಕೆ

ಬ್ಯಾಡ್ಮಿಂಟನ್: ಪುರುಷರ ಸಿಂಗಲ್ಸ್ ಸೆಮಿಫೈನಲ್: ಲಕ್ಷ್ಯ ಸೇನ್ ವಿರುದ್ಧ ವಿಕ್ಟರ್ ಅಕ್ಸೆಲ್ಸನ್ (ಡೆನ್ಮಾರ್ಕ್) – ಮಧ್ಯಾಹ್ನ 3:30ಕ್ಕೆ

ಸೇಯ್ಲಿಂಗ್​: ಪುರುಷರ ಡಿಂಗಿ ರೇಸ್ 7 ಮತ್ತು 8: ವಿಷ್ಣು ಸರವಣನ್ – ಮಧ್ಯಾಹ್ನ 3:35ಕ್ಕೆ

ಮಹಿಳಾ ಡಿಂಗಿ ರೇಸ್ 7 ಮತ್ತು 8: ನೇತ್ರಾ ಕುಮನನ್ – ಸಂಜೆ 6:05.ಕ್ಕೆ

Continue Reading

ಕ್ರೀಡೆ

Wasim Jaffer : ಪಂಜಾಬ್ ತಂಡದ ಕೋಚ್​ ಆಗಿ ಮಾಜಿ ಬ್ಯಾಟರ್​ ವಾಸಿಮ್​ ಜಾಫರ್ ನೇಮಕ

Wasim Jaffer :

VISTARANEWS.COM


on

Wasim Jaffer
Koo

ಬೆಂಗಳೂರು : ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ (PCA) ಮುಂಬರುವ ದೇಶೀಯ ಋತುವಿನಲ್ಲಿ ಭಾರತದ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್ (Wasim Jaffer) ಅವರನ್ನು ಹಿರಿಯ ಪುರುಷರ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಶಾನ್ ಟೈಟ್ ಬದಲಿಗೆ ವಾಸಿಮ್ ಜಾಫರ್ ಅವರನ್ನು ಪಂಜಾಬ್ ರಾಜ್ಯ ತಂಡದ ಮುಖ್ಯ ಕೋಚ್ ಆಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಐಪಿಎಲ್ 2025 ರ ಋತುವಿನಲ್ಲಿ ವಾಸಿಮ್ ಜಾಫರ್ ಅವರು ಟ್ರೆವರ್ ಬೇಲಿಸ್ ಅವರಿಂದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಬಹುದು ಎಂಬ ವದಂತಿಗಳು ಇದ್ದವು. ಜಾಫರ್ 2019 ರಿಂದ 2021 ರವರೆಗೆ ತಂಡದ ಬ್ಯಾಟಿಂಗ್ ತರಬೇತುದಾರರಾಗಿ ಕೆಲಸ ಮಾಡಿದ್ದರು. ನಂತರ ಬ್ಯಾಟಿಂಗ್ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಐಪಿಎಲ್ 2024 ರ ಹರಾಜಿಗೆ ಮುಂಚಿತವಾಗಿ ಅವರು ತಮ್ಮ ಸ್ಥಾನದಿಂದ ಕೆಳಗಿಳಿದಿದ್ದರು.

ಜಾಫರ್​ ಉತ್ತರಾಖಂಡ ಮತ್ತು ಒಡಿಶಾ ರಾಜ್ಯ ಕ್ರಿಕೆಟ್ ತಂಡಗಳ ಮುಖ್ಯ ತರಬೇತುದಾರರಾಗಿಯೂ ಕೆಲಸ ಮಾಡಿದ್ದಾರೆ. ಜಾಫರ್ ಉತ್ತರಾಖಂಡದೊಂದಿಗಿನ ಅವಧಿಯಲ್ಲಿ ಆಟಗಾರರಿಂದ ಆಯ್ಕೆ ಪಕ್ಷಪಾತದ ಆರೋಪಗಳನ್ನು ಎದುರಿಸಿದ್ದರಉ. ಭಾರತದ ಮಾಜಿ ಆರಂಭಿಕ ಬ್ಯಾಟರ್​​ ಅಂತಿಮವಾಗಿ ಋತುವಿನ ಮಧ್ಯದಲ್ಲಿ ರಾಜೀನಾಮೆ ನೀಡಿದ್ದರುನಂತರ ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದರು.

ವಾಸಿಮ್ ಜಾಫರ್ ತಂಡವನ್ನು ಯಶಸ್ಸನ್ನು ಸಾಧಿಸಲು ಪ್ರೇರೇಪಿಸುತ್ತಾರೆ

ಪಿಸಿಎ ಅಧ್ಯಕ್ಷ ಅಮರ್ಜೀತ್ ಸಿಂಗ್ ಮೆಹ್ತಾ ಅವರು ವಾಸಿಮ್ ಜಾಫರ್ ಅವರನ್ನು ಪಂಜಾಬ್ ಪುರುಷರ ಹಿರಿಯ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಿರುವುದನ್ನು ದೃಢಪಡಿಸಿದ್ದಾರೆ. ಜಾಫರ್ ಅವರ ಅನುಭವ ಮತ್ತು ಪರಿಣತಿ ತಂಡವನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಅಮರ್ಜೀತ್ ಹೇಳಿದ್ದಾರೆ. ಅವರೊಂದಿಗೆ ಕೆಲಸ ಮಾಡುವ ಅವಕಾಶವನ್ನು ಕಳೆದುಕೊಳ್ಳಲು ಪಿಸಿಎ ಬಯಸುವುದಿಲ್ಲ ಎಂದು ಅವರು ಹೇಳಿದರು.

“ರಣಜಿ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಗೆಲ್ಲುವುದು ನಮ್ಮ ಮುಖ್ಯ ಗುರಿ. ಆದ್ದರಿಂದ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಲು ನಾವು ಸರ್ವಾನುಮತದಿಂದ ನಿರ್ಧರಿಸಿದ್ದೇವೆ. ಅವರ ಅನುಭವ ಮತ್ತು ಪರಿಣತಿಯೊಂದಿಗೆ, ಜಾಫರ್ ತಂಡವನ್ನು ಯಶಸ್ಸನ್ನು ಸಾಧಿಸಲು ಪ್ರೇರೇಪಿಸುತ್ತಾರೆ ಎಂದು ನಮಗೆ ವಿಶ್ವಾಸವಿದೆ. ಅವರು ದೇಶದ ಅತ್ಯುತ್ತಮ ದೀರ್ಘ ಸ್ವರೂಪದ ಆಟಗಾರರಲ್ಲಿ ಒಬ್ಬರು, ಮತ್ತು ಅವರನ್ನು ಮಂಡಳಿಯಲ್ಲಿ ಹೊಂದುವ ಅವಕಾಶವನ್ನು ಕಳೆದುಕೊಳ್ಳಲು ನಾವು ಬಯಸಲಿಲ್ಲ”ಎಂದು ಅಮರ್ಜೀತ್ ಸಿಂಗ್ ಮೆಹ್ತಾ ತಿಳಿಸಿದ್ದಾರೆ.

ಪಂಜಾಬ್ ಇತ್ತೀಚೆಗೆ ವೈಟ್-ಬಾಲ್ ಕ್ರಿಕೆಟ್​​ನಲ್ಲಿ ಉತ್ತಮ ಪ್ರದರ್ಶನ ನೀಡಿದೆ ಮತ್ತು ಈಗ ರೆಡ್-ಬಾಲ್ ಕ್ರಿಕೆಟ್​ನಲ್ಲಿ ಸ್ಥಿರತೆಯನ್ನು ಸಾಧಿಸುವತ್ತ ಗಮನ ಹರಿಸಲು ಬಯಸಿದೆ ಎಂದು ಪಿಸಿಎ ಅಧ್ಯಕ್ಷರು ಒತ್ತಿ ಹೇಳಿದರು.

ಕಳೆದ ಋತುವಿನಲ್ಲಿ ಪಂಜಾಬ್ ತಂಡವು ವಿಜಯ್ ಹಜಾರೆ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಆ ತಂಡದ ಸಾಲ್ವಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳಿದ್ದು, ನಾಯಕ ಮನ್ದೀಪ್ ಸಿಂಗ್ ತ್ರಿಪುರಾ ಸೇರಲಿದ್ದಾರೆ. ಸಾಳ್ವಿ ಪ್ರಸ್ತುತ ಭಾರತ ಮಹಿಳಾ ಕ್ರಿಕೆಟ್ ತಂಡದ ಬೌಲಿಂಗ್ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

2022-23ರ ಋತುವಿನಲ್ಲಿ ಪಂಜಾಬ್ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ತಲುಪಿತು. ಆದರೆ ಸೌರಾಷ್ಟ್ರ ವಿರುದ್ಧ ಸೋತಿತ್ತು. ಇತ್ತೀಚಿನ ಆವೃತ್ತಿಯಲ್ಲಿ ನಾಕೌಟ್​ಗೆ ಅರ್ಹತೆ ಪಡೆಯಲು ವಿಫಲವಾಯಿತು.

ಇದನ್ನೂ ಓದಿ: Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

ರಣಜಿ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ವಾಸಿಂ ಜಾಫರ್. ಅವರು ತಮ್ಮ ವೃತ್ತಿಜೀವನದಲ್ಲಿ ಪಂದ್ಯಾವಳಿಯಲ್ಲಿ 238 ಇನ್ನಿಂಗ್ಸ್ ಗಳಲ್ಲಿ 12,038 ರನ್ ಗಳಿಸಿದ್ದಾರೆ. ಮಾಜಿ ಬಲಗೈ ಬ್ಯಾಟರ್​ 2008-09 ಮತ್ತು 2009-10ರಲ್ಲಿ ಮುಂಬೈ ರಾಜ್ಯ ತಂಡವನ್ನು ಎರಡು ರಣಜಿ ಪ್ರಶಸ್ತಿಗಳಿಗೆ ಮುನ್ನಡೆಸಿದ್ದರು. ಅವರು ೨೦೧೦ ರ ಆರಂಭದಲ್ಲಿ ದುಲೀಪ್ ಟ್ರೋಫಿ ವಿಜಯಕ್ಕೆ ಪಶ್ಚಿಮ ವಲಯವನ್ನು ಮುನ್ನಡೆಸಿದರು.

Continue Reading
Advertisement
Rashid Khan
ಕ್ರಿಕೆಟ್4 mins ago

Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

Adivi Sesh Goodachari Turns 6 unveils six stunning looks
ಟಾಲಿವುಡ್27 mins ago

Adivi Sesh: ʻಗೂಢಚಾರಿʼಗೆ ಆರು ವರ್ಷದ ಸಂಭ್ರಮ; ನಟ ಅಡಿವಿ ಶೇಷ್ ಹೇಳಿದ್ದೇನು?

Yadagiri News
ಯಾದಗಿರಿ35 mins ago

Yadagiri News: ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪ; ಯಾದಗಿರಿ ಡಿಎಚ್ಒ ಅಮಾನತು

IND vs SL 2nd ODI:
ಕ್ರೀಡೆ40 mins ago

IND vs SL 2nd ODI: ಇಂದು ಭಾರತ-ಲಂಕಾ ದ್ವಿತೀಯ ಏಕದಿನ ಮುಖಾಮುಖಿ; ಪಂದ್ಯಕ್ಕೆ ಮಳೆ ಭೀತಿ

BSF Chief
ದೇಶ54 mins ago

BSF Chief: ಬಿಎಸ್‌ಎಫ್‌ ನೂತನ ಮುಖ್ಯಸ್ಥರಾಗಿ ದಲ್ಜಿತ್‌ ಸಿಂಗ್‌ ಚೌಧರಿ ನೇಮಕ

Amitabh Bachchan-Sridevi Movies
Latest58 mins ago

Amitabh Bachchan-Sridevi Movies: ಅಮಿತಾಭ್ ಬಚ್ಚನ್ – ಶ್ರೀದೇವಿ ಜೊತೆಯಾಗಿ ನಟಿಸಿದ 5 ಸೂಪರ್ ಹಿಟ್ ಚಿತ್ರಗಳಿವು

Health Tips
ಆರೋಗ್ಯ58 mins ago

Health Tips: ಏನ್ ನಿಂಗೆ ಕೊಬ್ಬಾ ಅನ್ನಬೇಡಿ ಕೊಬ್ಬೂ ಇರಬೇಕು!

Robbery Case
ಕ್ರೈಂ1 hour ago

Robbery Case: ಬೆಂಗಳೂರಿನಲ್ಲಿ ಮಿತಿ ಮೀರಿದ ಕಳ್ಳರ ಹಾವಳಿ; ಆನ್‌ಲೈನ್‌ ಡೆಲಿವರಿ ಬಾಯ್‌ಗಳೇ ಇವರ ಟಾರ್ಗೆಟ್‌: Video ಇಲ್ಲಿದೆ

Paris Olympics
ಕ್ರೀಡೆ1 hour ago

Paris Olympics: ಗ್ರೇಟ್​ ಬ್ರಿಟನ್ ಮಣಿಸಿ ಸೆಮಿಫೈನಲ್​ ಪ್ರವೇಶಿಸಲಿ ಭಾರತ ಹಾಕಿ ತಂಡ

Duniya Vijay Bheema Official Trailer Out
ಸ್ಯಾಂಡಲ್ ವುಡ್1 hour ago

Duniya Vijay: ವಿಜಯ್ ನಟಿಸಿ, ನಿರ್ದೇಶಿಸಿರುವ ‘ಭೀಮ ಚಿತ್ರದ  ಟ್ರೈಲರ್‌ ಔಟ್‌; ಕ್ರೇಜ್‌ ಹೆಚ್ಚಿಸಿದ ʻಸಲಗʼ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ21 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌