IND VS AUS: 10 ವರ್ಷಗಳಲ್ಲಿ ಮೂರನೇ ಸೋಲು ಕಂಡ ಭಾರತ - Vistara News

ಕ್ರಿಕೆಟ್

IND VS AUS: 10 ವರ್ಷಗಳಲ್ಲಿ ಮೂರನೇ ಸೋಲು ಕಂಡ ಭಾರತ

ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್​ ಅಂತರದಿಂದ ಸೋಲು ಕಂಡಿದೆ.

VISTARANEWS.COM


on

IND VS AUS: India suffer third defeat in 10 years
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದೋರ್​: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಭಾರತ 9 ವಿಕೆಟ್​ ಅಂತರದ ಸೋಲು ಕಾಣುವ ಜತೆಗೆ ಕೆಟ್ಟ ದಾಖಲೆಯೊಂದನ್ನು ಬರೆದಿದೆ. ಕಳೆದ 10 ವರ್ಷಗಳಲ್ಲಿ ತವರಿನಲ್ಲಿ ನಡೆದ ಟೆಸ್ಟ್​ ಪಂದ್ಯದಲ್ಲಿ ಭಾರತಕ್ಕೆ ಎದುರಾದ ಮೂರನೇ ಸೋಲು ಇದಾಗಿದೆ.

ಇಂದೋರ್​ನ ಹೋಳ್ಕರ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ಮೊದಲ ಇನಿಂಗ್ಸ್​ನಲ್ಲಿ 109ರನ್​ ಗಳಿಗೆ ಆಲೌಟ್​ ಆಯಿತು. ಗುರಿ ಬೆನ್ನಟ್ಟಿದ ಆಸೀಸ್​ 197 ರನ್​ಗೆ ಸರ್ವಪತನ ಕಂಡರೂ 88 ರನ್​ಗಳ ಮುನ್ನಡೆ ಸಾಧಿಸಿತು.

88 ರನ್​ಗಳ ಇನಿಂಗ್ಸ್​ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಭಾರತ ನಥನ್‌ ಲಿಯಾನ್‌ ಅವರ ಮಾರಕ ಸ್ಪಿನ್‌ ಸುಳಿಯಲ್ಲಿ ಒದ್ದಾಡಿ ಕೇವಲ 163 ರನ್ನಿಗೆ ಆಟ ಮುಗಿಸಿತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ 76 ರನ್‌ ಗೆಲುವಿನ ಗುರಿ ಪಡೆದ ಆಸ್ಟ್ರೇಲಿಯಾ ಮೂರನೇ ದಿನದಾಟದಲ್ಲಿ ಕೇವಲ ಒಂದು ವಿಕೆಟ್​ ನಷ್ಟಕ್ಕೆ 78 ರನ್​ ಬಾರಿಸಿ ಗೆಲುವು ದಾಖಲಿಸಿತು.

ಇದನ್ನೂ ಓದಿ IND VS AUS: ಮೂರನೇ ಟೆಸ್ಟ್; 9 ವಿಕೆಟ್ ಅಂತರದಿಂದ ಗೆಲುವು ಸಾಧಿಸಿದ ಆಸೀಸ್​​

ಭಾರತ ಈ ಸೋಲಿನೊಂದಿಗೆ ಕಳೆದ 10 ವರ್ಷಗಳಲ್ಲಿ ತವರಿನಲ್ಲಿ ನಡೆದ ಟೆಸ್ಟ್​ ಪಂದ್ಯಗಳಲ್ಲಿ ಮೂರನೇ ಸೋಲು ಕಂಡ ಅವಮಾನಕ್ಕೆ ಸಿಲುಕಿತು. ಇದಕ್ಕೂ ಮುನ್ನ ಭಾರತ 2021ರ ಫೆಬ್ರವರಿಯಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 227 ರನ್ನುಗಳ ಸೋಲು ಕಂಡಿತ್ತು. 2017ರಲ್ಲಿ ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 333 ರನ್ನುಗಳ ಭಾರಿ ಅಂತರದಿಂದ ಸೋಲು ಕಂಡಿತ್ತು. ಇದೀಗ ಮೂರನೇ ಸೋಲು ಆಸೀಸ್​ ವಿರುದ್ಧವೇ ದಾಖಲಾಗಿದೆ. ಒಟ್ಟಾರೆ 10 ವರ್ಷಗಳಲ್ಲಿ ಭಾರತ ತವರಿನಲ್ಲಿ ಸೋತ ಸಂಖ್ಯೆ ಮೂರಕ್ಕೇರಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Yashasvi Jaiswal : ಚೆನ್ನೈ ಏರ್​ಪೋರ್ಟ್​​ನಲ್ಲಿ ಗೆಳತಿಯೊಂದಿಗೆ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್​; ಇಲ್ಲಿದೆ ವಿಡಿಯೊ

Yashasvi Jaiswal : ಜೈಸ್ವಾಲ್​ ಗೆಳತಿ ಮ್ಯಾಡಿ ಹ್ಯಾಮಿಲ್ಟನ್ ಆಗಾಗೆ ಐಪಿಎಲ್ ಪಂದ್ಯಗಳ ಸ್ಟ್ಯಾಂಡ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತರೆ. ಜೈಸ್ವಾಲ್ ಮತ್ತು ಅವರ ತಂಡವನ್ನು ಹುರಿದುಂಬಿಸುತ್ತಿದ್ದಾರೆ. ಅವರು ಅವರನ್ನು ಬೆಂಬಲಿಸುತ್ತಿರುವುದು ಇದೇ ಮೊದಲಲ್ಲ, ಅವರು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಸಮಯದಲ್ಲಿಯೂ ಹಾಜರಿದ್ದರು.

VISTARANEWS.COM


on

Yashasvi Jaiswal
Koo

ಬೆಂಗಳೂರು: ಐಪಿಎಲ್​ ಪ್ರಶಸ್ತಿ ಗೆಲ್ಲುವ ರಾಜಸ್ಥಾನ್ ರಾಯಲ್ಸ್ ತಂಡದ ಆಸೆ ಕಮರಿ ಹೋದ ಬಳಿಕ ಆ ತಂಡದ ಆಟಗಾರರು ತಮ್ಮ ತಮ್ಮ ನೆಲೆಗಳಿಗೆ ಹೋರಟು ಹೋಗಿದ್ದಾರೆ. ಅದರಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಮತ್ತು ಸಂಜು ಸ್ಯಾಮ್ಸನ್​ ಟೀಮ್​ ಇಂಡಿಯಾಕ್ಕೆ ಟಿ20 ವಿಶ್ವ ಕಪ್​ಗಾಗಿ ಆಯ್ಕೆಯಾಗಿದ್ದಾರೆ. ಚೆನ್ನೈನಲ್ಲಿ ನಡೆದ ಪ್ಲೇಆಫ್​ 2ನೇ ಪಂದ್ಯದಲ್ಲಿ ಪಂದ್ಯದಲ್ಲಿ ಆರ್​ಆರ್ ತಂಡ ಸೋತ ಬಳಿಕ ಆಟಗಾರರು ಚೆನ್ನೈ ವಿಮಾನ ನಿಲ್ದಾಣದ ಮೂಲಕ ತಮ್ಮ ಊರುಗಳಿಗೆ ತೆರಳಿದ್ದರು. ಅಂತೆಯೇ ಯಶಸ್ವಿ ಜೈಸ್ವಾಲ್​ ಕೂಡ ಅದೇ ನಿಲ್ದಾಣದ ಮೂಲಕ ಹೋಗಿದ್ದರು. ಈ ವೇಳೆ ಅವರ ಜತೆ ಗೆಳತಿಯೂ ಜತೆಗಿದ್ದರು. ಅವರಿಬ್ಬರು ಜತೆಯಾಗಿ ಹೋಗುವ ವಿಡಿಯೊ ವೈರಲ್ ಆಗಿದೆ.

ಜೈಸ್ವಾಲ್​ ಗೆಳತಿ ಮ್ಯಾಡಿ ಹ್ಯಾಮಿಲ್ಟನ್ ಆಗಾಗೆ ಐಪಿಎಲ್ ಪಂದ್ಯಗಳ ಸ್ಟ್ಯಾಂಡ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತರೆ. ಜೈಸ್ವಾಲ್ ಮತ್ತು ಅವರ ತಂಡವನ್ನು ಹುರಿದುಂಬಿಸುತ್ತಿದ್ದಾರೆ. ಅವರು ಅವರನ್ನು ಬೆಂಬಲಿಸುತ್ತಿರುವುದು ಇದೇ ಮೊದಲಲ್ಲ, ಅವರು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಸಮಯದಲ್ಲಿಯೂ ಹಾಜರಿದ್ದರು. ಹ್ಯಾಮಿಲ್ಟನ್ ಅವರೊಂದಿಗಿನ ಸಂಬಂಧದ ಬಗ್ಗೆ ವದಂತಿಗಳನ್ನು ಜೈಸ್ವಾಲ್ ಇನ್ನೂ ಸಾರ್ವಜನಿಕವಾಗಿ ಹೇಳಿಕೊಳ್ಳದೇ ಹೋದರೂ ಸಾಮಾಜಿಕ ಮಾಧ್ಯಮಗಳು ಹಲವಾರು ಊಹಾಪೋಹಗಳನ್ನು ಸೃಷ್ಟಿಸುತ್ತಿವೆ.

ಇದನ್ನೂ ಓದಿ: Jos Butler: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಇಂಗ್ಲೆಂಡ್​ ತಂಡದ ನಾಯಕ ಬಟ್ಲರ್​

ಕ್ರಿಕೆಟ್​ ಪ್ರೇಕ್ಷಕರು ಹ್ಯಾಮಿಲ್ಟನ್ ಅವರ ಸೌಂದರ್ಯದ ಬಗ್ಗೆಯೂ ಮೆಚ್ಚುಗೆಯ ಮಾತನಾಡಿದ್ದಾರೆ. ಯುವ ಕ್ರಿಕೆಟಿಗನೊಂದಿಗಿನ ಅವರ ಸಂಪರ್ಕವನ್ನು ಚರ್ಚಿಸುತ್ತಿದ್ದಾರೆ. ಈ ಜೋಡಿ ಮೂರು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳು ಕೇಳಿ ಬಂದಿವೆ. 22ರ ಹರೆಯದ ಜೈಸ್ವಾಲ್ 15 ಇನ್ನಿಂಗ್ಸ್​ಗಳಲ್ಲಿ ಒಂದು ಶತಕ ಮತ್ತು ಒಂದು ಅರ್ಧಶತಕ ಸೇರಿದಂತೆ 155.91ರ ಸ್ಟ್ರೈಕ್ ರೇಟ್​ನೊಂದಿಗೆ 435 ರನ್ ಗಳಿಸಿದ್ದಾರೆ.

ಜೂನ್ 1 ರಿಂದ ಪ್ರಾರಂಭವಾಗುವ ಮುಂಬರುವ ಟಿ 20 ವಿಶ್ವಕಪ್ 2024 ಗಾಗಿ ಜೈಸ್ವಾಲ್ ಶೀಘ್ರದಲ್ಲೇ ಯುಎಸ್ಎಗೆ ತೆರಳಲಿದ್ದಾರೆ. ಉದ್ಘಾಟನಾ ಪಂದ್ಯದಲ್ಲಿ ಭಾರತ ತಂಡ ಐರ್ಲೆಂಡ್ ವಿರುದ್ಧ ಸೆಣಸಲಿದೆ.

ಕೊಹ್ಲಿಯ ಸಾಧನೆ ಸರಿಗಟ್ಟಿದ ಯಶಸ್ವಿ ಜೈಸ್ವಾಲ್​

ರಾಂಚಿ: ಇಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಗೆಲುವು ಸಾಧಿಸಿದೆ. ಇದರೊಂದಿಗೆ ಸರಣಿ ಭಾರತದ ಕೈವಶವಾಗಿದೆ. 192 ರನ್​​ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತಕ್ಕೆ ಯಶಸ್ವಿ ಜೈಸ್ವಾಲ್ (Yashasvi Jaiswal) ಆರಂಭಿಕರಾಗಿ ಕಣಕ್ಕೆ ಇಳಿದು 44 ರನ್ ಗಳಿಸಿದರು. ರೋಹಿತ್ ಶರ್ಮಾ ಜತೆ ಶಾಂತವಾಗಿ ಆಡಿದ ಅವರು ಆರಂಭಿಕ ವಿಕೆಟ್​ಗೆ 84 ರನ್​ ಬಾರಿಸಿದರು.

ಗೆಲುವಿನಲ್ಲಿ ರೋಹಿತ್ ಶರ್ಮಾ ಅವರ 55 ರನ್​, ಶುಭ್ಮನ್ ಗಿಲ್ ಅವರ ಅಜೇಯ 52 ಮತ್ತು ಧ್ರುವ್ ಜುರೆಲ್ ಅವರ ಉಪಯುಕ್ತ 35 ರನ್​ಗಳಿವೆ. ಇವೆಲ್ಲದರ ನಡುವೆ ಯಶಸ್ವಿ ಜೈಸ್ವಾಲ್​ ಭಾರತ ಪರ ವಿಶೇಷ ಸಾಧನೆ ಮಾಡಿದ್ದಾರೆ. ಈ ಹಾದಿಯಲ್ಲಿ ಅವರು ಮಾಜಿ ನಾಯಕ ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ್ದಾರೆ.

ಜೈಸ್ವಾಲ್​ ನಾಲ್ಕು 50+ ಸ್ಕೋರ್ ಮತ್ತು ಎರಡು ದ್ವಿಶತಕಗಳೊಂದಿಗೆ, ಜೈಸ್ವಾಲ್ ಪ್ರಸ್ತುತ ಸರಣಿಯಲ್ಲಿ 93.57 ಸರಾಸರಿಯಲ್ಲಿ 655 ರನ್ ಗಳಿಸಿದ್ದಾರೆ. 2016/17ರಲ್ಲಿ ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಂಡಿದ್ದಾಗ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ಜೈಸ್ವಾಲ್​ ಸರಣಿಯಲ್ಲಿ ಇನ್ನೂ ಒಂದು ಪಂದ್ಯವನ್ನು ಹೊಂದಿದ್ದಾರೆ. ಅಂದರೆ ಅವರು ವಿರಾಟ್ ಕೊಹ್ಲಿಯನ್ನು ಮೀರಿಸುತ್ತಾರೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ದ್ವಿಪಕ್ಷೀಯ ಸರಣಿಯಲ್ಲಿ ನಿರ್ವಿವಾದ

Continue Reading

ಪ್ರಮುಖ ಸುದ್ದಿ

Jos Butler: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಇಂಗ್ಲೆಂಡ್​ ತಂಡದ ನಾಯಕ ಬಟ್ಲರ್​

VISTARANEWS.COM


on

Jos Butler
Koo

ಬೆಂಗಳೂರು: ಬಲಗೈ ಬ್ಯಾಟರ್​ ಜೋಸ್ ಬಟ್ಲರ್ ಆಧುನಿಕ ಪೀಳಿಗೆಯ ಅತ್ಯುತ್ತಮ ವೈಟ್-ಬಾಲ್ ಬ್ಯಾಟರ್​ಗಳಲ್ಲಿ ಒಬ್ಬರು. ಅವರು ಜೂನ್ 2 ರಿಂದ ಪ್ರಾರಂಭವಾಗಲಿರುವ ಟಿ 20 ವಿಶ್ವಕಪ್ 2024 ರಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಅವರ ನಾಯಕತ್ವದಲ್ಲಿ ತಂಡ ವಿಶ್ವ ಕಪ್​ ಟ್ರೋಫಿಯನ್ನು ಉಳಿಸಿಕೊಳ್ಳುವುದಕ್ಕೆ ಯತ್ನಿಸಲಿದೆ. ಹಿಂದಿನ ಬಾರಿ ಬೆನ್​ಸ್ಟೋಕ್ಸ್ ನೇತೃತ್ವದಲ್ಲಿ ಇಂಗ್ಲೆಂಡ್​ ತಂಡ ಹಿಂದಿನ ಆವೃತ್ತಿಯಲ್ಲಿ ಕಪ್​ ಗೆದ್ದಿತ್ತು. ಅವರೀಗ ಟಿ20ಐನಲ್ಲಿ 3000 ರನ್ ಗಡಿ ದಾಟಿದ ಇಂಗ್ಲೆಂಡ್​ನ ಮೊದಲ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಬಟ್ಲರ್ ಪಾತ್ರರಾಗಿದ್ದಾರೆ.

ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ 2 ನೇ ಟಿ 20 ಪಂದ್ಯದಲ್ಲಿ ಜೋಸ್ ಬಟ್ಲರ್ ಕೇವಲ 51 ಎಸೆತಗಳಲ್ಲಿ 84 ರನ್ ಗಳಿಸಿ ಪಾಕಿಸ್ತಾನ ವಿರುದ್ಧದ ಇಂಗ್ಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಬಟ್ಲರ್ ಈಗ ಟಿ 20 ಪಂದ್ಯಗಳಲ್ಲಿ ಒಂಬತ್ತನೇ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದಾರೆ. 106 ಇನ್ನಿಂಗ್ಸ್​ಗಳಲ್ಲಿ 35.42 ಸರಾಸರಿ ಮತ್ತು 145.10 ಸ್ಟ್ರೈಕ್ ರೇಟ್​ಪ್ರಕಾರ 3011 ರನ್ ಗಳಿಸಿದ್ದಾರೆ.

ಬಟ್ಲರ್ ಟಿ 20 ಪಂದ್ಯಗಳಲ್ಲಿ ತಮ್ಮ ಹೆಸರಿನಲ್ಲಿ ಒಂದು ಶತಕದ ದಾಖಲೆಯನ್ನೂ ಹೊಂದಿದ್ದಾರೆ. ಈ ಬಾರಿ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರನಾಗಲಿದ್ದಾರೆ. ಅವರ ಬ್ಯಾಟಿಂಗ್ ಪ್ರದರ್ಶನ ಉತ್ತಮವಾಗಿರುವ ಕಾರಣ ಅವಕಾಶ ಹೆಚ್ಚಿದೆ.

ಇದನ್ನೂ ಓದಿ: Virat kohli : ಬ್ರೇಕ್​ ತೆಗೆದುಕೊಂಡ ಕೊಹ್ಲಿ, ಅಭ್ಯಾಸ ಪಂದ್ಯಕ್ಕೆ ಅನುಮಾನ

ಐಪಿಎಲ್ಗೂ ಮುನ್ನ ಬಟ್ಲರ್ ಐಪಿಎಲ್ 2024ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದರು. ಅಲ್ಲಿ ಅವರು ಎರಡು ಶತಕಗಳನ್ನು ಬಾರಿಸಿದ್ದರು. ಲೀಡ್ಸ್​​ನಲ್ಲಿ ನಡೆದ ಮೊದಲ ಪಂದ್ಯ ರದ್ದಾದ ನಂತರ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟಿ 20 ಐ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸರಣಿಯ ಮೂರನೇ ಪಂದ್ಯ ಕಾರ್ಡಿಫ್​​ನಲ್ಲಿ ನಡೆಯಲಿದ್ದು, ಉಳಿದ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ನಾಯಕ ತನ್ನ ಬ್ಯಾಟಿಂಗ್ ಪ್ರದರ್ಶನ ಹೇಗೆ ನೀಡುತ್ತಾರೆ ಎಂದು ಕಾದು ನೋಡಬೇಕಷ್ಟೆ.

ಐಪಿಎಲ್​ ನಡುವೆಯೇ ಹೆಸರು ಬದಲಾಯಿಸಿಕೊಂಡ ಜೋಸ್ ಬಟ್ಲರ್​

ಮುಂಬಯಿ: ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಸಾಕಷ್ಟು ಸಂದರ್ಭದಲ್ಲಿ ತಪ್ಪು ಹೆಸರನ್ನು ಕರೆದ ಬಳಿಕ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳುವುದಕ್ಕೆ ನಿರ್ಧರಿಸಿಕೊಂಡರು. ಇಂಗ್ಲೆಂಡ್ ಪರ 57 ಟೆಸ್ಟ್, 181 ಏಕದಿನ ಹಾಗೂ 114 ಟಿ20 ಪಂದ್ಯಗಳನ್ನು ಆಡಿದ್ದಾರೆ ಜೋಸ್ ಬಟ್ಲರ್​. ಜೂನ್​ನಲ್ಲಿ ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ವಿಕೆಟ್ ಕೀಪರ್ ಬ್ಯಾಟರ್​ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಅವರೀಗ ಏಕಾಏಕಿ ಹೆಸರನ್ನು ಬದಲಿಸಿಕೊಂಡಿದ್ದಾರೆ.

ನಾನು ಇಂಗ್ಲೆಂಡ್ ತಂಡದ ವೈಟ್ ಬಾಲ್ ನಾಯಕ. ಇಲ್ಲಿಯವರೆಗೆ ನನ್ನನ್ನು ತಪ್ಪು ಹೆಸರಿನೊಂದಿಗೆ ಕರೆಯಲಾಗುತ್ತಿತ್ತು . ನನ್ನ ಹುಟ್ಟುಹಬ್ಬದ ಕಾರ್ಡ್ ನಲ್ಲಿ ಬೀದಿಯಲ್ಲಿರುವ ಜನರಿಂದ ಹಿಡಿದು ನನ್ನ ತಾಯಿಯವರೆಗೆ. ಪ್ರಿಯ ಜೋಶ್ ಎಂದು ಕರೆಯಬೇಕು. ಇಂಗ್ಲೆಂಡ್ ಪರ 13 ವರ್ಷಗಳ ಕಾಲ ಆಡಿದ ನಂತರ ಮತ್ತು ಎರಡು ವಿಶ್ವಕಪ್ ಪಂದ್ಯಗಳನ್ನು ಗೆದ್ದ ನಂತರ, ನಾನು ಸಮಸ್ಯೆಯನ್ನು ಪರಿಹರಿಸಲು ನಿರ್ಧರಿಸಿದ್ದೇನೆ. ನಾನು ಅಧಿಕೃತವಾಗಿ ಜೋಶ್ ಬಟ್ಲರ್​ ಎಂದು ಹೇಳಿಕೊಂಡಿದ್ದಾರೆ.

Continue Reading

ಪ್ರಮುಖ ಸುದ್ದಿ

Virat kohli : ಬ್ರೇಕ್​ ತೆಗೆದುಕೊಂಡ ಕೊಹ್ಲಿ, ಅಭ್ಯಾಸ ಪಂದ್ಯಕ್ಕೆ ಅನುಮಾನ

Virat kohli : ಆರ್​ಸಿಬಿ ಬ್ಯಾಟ್ಸ್ಮನ್ ಕೊಹ್ಲಿ ಐಪಿಎಲ್ 2024ರಲ್ಲಿ ಒಂದು ಶತಕ ಮತ್ತು 5 ಅರ್ಧಶತಕಗಳೊಂದಿಗೆ 741 ರನ್​ ಬಾರಿಸಿದ್ದರು ಅವರು ಪ್ರಸ್ತುತ ಆರೆಂಜ್ ಕ್ಯಾಪ್ ಹೊಂದಿದ್ದಾರೆ. ಐಪಿಎಲ್​ನಲ್ಲಿ ಒಟ್ಟು 15 ಪಂದ್ಯವಾಡಿರುವ ಅವರು ಟಿ20 ಮೋಡ್​ನಲ್ಲಿದ್ದಾರೆ. ಹೀಗಾಗಿ ಅಭ್ಯಾಸ ಪಂದ್ಯ ತಪ್ಪಿಸಲು ಉದ್ದೇಶಿಸಿದ್ದಾರೆ.

VISTARANEWS.COM


on

Virat kohli
Koo

ಬೆಂಗಳೂರು: ವೆಸ್ಟ್​​ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 1 ರಿಂದ ಪ್ರಾರಂಭವಾಗುವ ಟಿ 20 ವಿಶ್ವಕಪ್ 2024 ಕ್ಕೆ (T20 World Cupl 2024) ಮುಂಚಿತವಾಗಿ ಭಾರತ ತಂಡಕ್ಕೆ ಏಕೈಕ ಅಭ್ಯಾಸ ಪಂದ್ಯ ದೊರಕಿದೆ. ಆದರೆ ಆ ಹಣಾಹಣಿಯಿಂದ ವಿರಾಟ್​ ಕೊಹ್ಲಿ(Virat kohli) ಹೊರಕ್ಕೆ ಉಳಿಯುವ ಸಾಧ್ಯತೆಗಳಿವೆ. ಐಪಿಎಲ್ ಮುಗಿದ ಬಳಿಕ ಅವರು ಸಣ್ಣ ವಿರಾಮ ತೆಗೆದುಕೊಂಡಿದ್ದಾರೆ. ಅವರು ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಹೀಗಾಗಿ ಅಭ್ಯಾಸ ಪಂದ್ಯದಿಂದ ದೂರ ಉಳಿಯುವ ಸಾಧ್ಯತೆಗಳಿವೆ. ಕೊಹ್ಲಿ ಜೊತೆಗೆ, ಸಂಜು ಸ್ಯಾಮ್ಸನ್ ಕೂಡ ನಿಗದಿತ ಸಮಯದಲ್ಲಿ ಹೊರಡುವುದಿಲ್ಲ ಎಂದು ಹೇಳಲಾಗಿದೆ. ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕೂಡ ತಂಡ ಸೇರಿಲ್ಲ. ನಾನಾ ಗಾಸಿಪ್​ಗಳ ನಡುವೆ ಅವರೂ ಪ್ರವಾಸಕ್ಕೆ ಹೋಗಿದ್ದಾರೆ ಎಂಬ ಮಾಹಿತಿ ಇದೆ. ಭಾರತ ತಂಡದ ಮೊದಲ ಬ್ಯಾಚ್ ಆಟಗಾರರು ಶನಿವಾರ ತೆರಳಿದರೆ, ಎರಡನೇ ಬ್ಯಾಚ್ ಸೋಮವಾರ ಹೊರಡಲಿದೆ ಈ ಆಟಗಾರರು ಅಲ್ಲಿ ಆಡಲಿದ್ದಾರೆ.

ಆರ್​ಸಿಬಿ ಬ್ಯಾಟ್ಸ್ಮನ್ ಕೊಹ್ಲಿ ಐಪಿಎಲ್ 2024ರಲ್ಲಿ ಒಂದು ಶತಕ ಮತ್ತು 5 ಅರ್ಧಶತಕಗಳೊಂದಿಗೆ 741 ರನ್​ ಬಾರಿಸಿದ್ದರು ಅವರು ಪ್ರಸ್ತುತ ಆರೆಂಜ್ ಕ್ಯಾಪ್ ಹೊಂದಿದ್ದಾರೆ. ಐಪಿಎಲ್​ನಲ್ಲಿ ಒಟ್ಟು 15 ಪಂದ್ಯವಾಡಿರುವ ಅವರು ಟಿ20 ಮೋಡ್​ನಲ್ಲಿದ್ದಾರೆ. ಹೀಗಾಗಿ ಅಭ್ಯಾಸ ಪಂದ್ಯ ತಪ್ಪಿಸಲು ಉದ್ದೇಶಿಸಿದ್ದಾರೆ. ಇನ್ನು ದುಬೈಗೆ ವೈಯಕ್ತಿಕ ಕೆಲಸಕ್ಕಾಗಿ ತೆರಳಿರುವ ಸಂಜು ಸ್ಯಾಮ್ಸನ್ ಸ್ವಲ್ಪ ದಿನ ಬಿಟ್ಟು ಹೊರಡು ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಾಹಿತಿ ನೀಡಿದ್ದಾರೆ.

“ಕೊಹ್ಲಿ ಅವರು ತಡವಾಗಿ ತಂಡವನ್ನು ಸೇರಲಿದ್ದಾರೆ ಎಂದು ನಮಗೆ ಮೊದಲೇ ತಿಳಿಸಿದ್ದರು/ ಅದಕ್ಕಾಗಿಯೇ ಬಿಸಿಸಿಐ ಅವರ ವೀಸಾ ಅವಧಿಯನ್ನು ನಂತರದ ದಿನಾಂಕಕ್ಕೆ ಮುಂದೂಡಿದೆ. ಅವರು ಮೇ 30ರ ಮುಂಜಾನೆ ನ್ಯೂಯಾರ್ಕ್ ಗೆ ಹಾರುವ ನಿರೀಕ್ಷೆಯಿದೆ. ಅವರ ಮನವಿಯನ್ನು ಬಿಸಿಸಿಐ ಒಪ್ಪಿಕೊಂಡಿದೆ, “ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಯಕ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ಶಿವಂ ದುಬೆ, ಕುಲದೀಪ್ ಯಾದವ್, ಶುಭ್ಮನ್ ಗಿಲ್, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ ಮತ್ತು ಸಹಾಯಕ ಸಿಬ್ಬಂದಿ ಶನಿವಾರ ರಾತ್ರಿ ಮುಂಬೈನಿಂದ ಹೊರಟರು. ಭಾರತವು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಐಪಿಎಲ್ 2024 ಅನ್ನು ಪ್ರಾರಂಭಿಸಲಿದ್ದು, ನಂತರ ಜೂನ್ 9 ರಂದು ಪಾಕಿಸ್ತಾನವನ್ನು ಎದುರಿಸಲಿದೆ.

ಇದನ್ನೂ ಓದಿ: Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Continue Reading

ಕ್ರೀಡೆ

Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Rohit Sharma: ಬಾಲಿವುಡ್ ಮತ್ತು ಕ್ರಿಕೆಟ್ ಭಾರತದಲ್ಲಿ ಮನರಂಜನೆಯ ಪ್ರಮುಖ ಮೂಲಗಳು. ಎರಡೂ ಕಡೆ ಭರ್ಜರಿ ಮನರಂಜನೆ ಸಿಗುತತದೆ. ಕಾಲ್ಪನಿಕ ಹಾಗೂ ನೈಜ ಪ್ರಪಂಚಲದಲ್ಲಿ ಇದು ಹೆಚ್ಚು ಹತ್ತಿರ ಹಾಗೂ ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಪಡುವಂಥ ಸಂಗತಿ. ಹೀಗಾಗಿ ಕ್ರಿಕೆಟ್​ ಕುರಿತು ಹಲವಾರು ಸಿನಿಮಾಗಳು ಬಂದಿವೆ. ಅದೇ ರೀತಿ ಇದೀಗ ಹೊಸ ಸಿನಿಮಾವೊಂದು ಸೆಟ್ಟೇರಿದ್ದು ಅದರಲ್ಲಿ ಕೆಲವು ಕ್ರಿಕೆಟಿಗರ ಉಪಸ್ಥಿತಿಯನ್ನು ನಿರೀಕ್ಷೆ ಮಾಡಲಾಗಿದೆ.

VISTARANEWS.COM


on

Rohit Sharma
Koo

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕ್ರಿಕೆಟ್​ ಸಾಧನೆ ಜತೆಗೆ ವಿಭಿನ್ನ ಮನೋಭಾವದ ಮೂಲಕ ಜನಪ್ರಿಯ. ಜನಪ್ರಿಯ ಕ್ರಿಕೆಟಿಗನಾಗಿರುವ ಅವರು ಹಲವಾರು ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಈ ಎಲ್ಲ ಕಂಪನಿಗಳ ಜಾಹೀರಾತುಗಳಿಗಾಗಿ ನಟಿಸುತ್ತಿದ್ದಾಎ. ಇದೀಗ ಅವರು ಬಾಲಿವುಡ್​ ಕಡೆಗೂ ಎಂಟ್ರಿ ಪಡೆದಿದ್ದಾರೆ ಎಂಬುದಾಗಿ ವರದಿಯಾಗಿದೆ. ಅವರು ಕ್ರೀಡೆಯನ್ನು ಆಧಾರಿಸಿ ಮಾಡಿರು ಸಿನಿಮಾ “ಮಿಸ್ಟರ್ & ಮಿಸೆಸ್ ಮಹಿ” ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಗೆ ಮುಂಚಿತವಾಗಿ ಚಲನಚಿತ್ರವನ್ನು ಪ್ರಚಾರ ಮಾಡುವ ಸಲುವಾಗಿ ಈ ಚಿತ್ರವು ಕ್ರೀಡೆಯ ಅತ್ಯಂತ ಪ್ರಸಿದ್ಧ ವ್ಯಕ್ತಿಗಳಲ್ಲಿ ಒಬ್ಬರನ್ನು ಒಳಗೊಂಡ ಮೂಲಕ ವಿಶಿಷ್ಟ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲಿ ರೋಹಿತ್ ಹೆಸರು ಕಾಣಿಸುತ್ತಿದೆ.

ಬಾಲಿವುಡ್ ಮತ್ತು ಕ್ರಿಕೆಟ್ ಭಾರತದಲ್ಲಿ ಮನರಂಜನೆಯ ಪ್ರಮುಖ ಮೂಲಗಳು. ಎರಡೂ ಕಡೆ ಭರ್ಜರಿ ಮನರಂಜನೆ ಸಿಗುತತದೆ. ಕಾಲ್ಪನಿಕ ಹಾಗೂ ನೈಜ ಪ್ರಪಂಚಲದಲ್ಲಿ ಇದು ಹೆಚ್ಚು ಹತ್ತಿರ ಹಾಗೂ ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಪಡುವಂಥ ಸಂಗತಿ. ಹೀಗಾಗಿ ಕ್ರಿಕೆಟ್​ ಕುರಿತು ಹಲವಾರು ಸಿನಿಮಾಗಳು ಬಂದಿವೆ. ಅದೇ ರೀತಿ ಇದೀಗ ಹೊಸ ಸಿನಿಮಾವೊಂದು ಸೆಟ್ಟೇರಿದ್ದು ಅದರಲ್ಲಿ ಕೆಲವು ಕ್ರಿಕೆಟಿಗರ ಉಪಸ್ಥಿತಿಯನ್ನು ನಿರೀಕ್ಷೆ ಮಾಡಲಾಗಿದೆ.

‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ ಎಂಬ ಸಿನಿಮಾ ಬಾಲಿವುಡ್ ಮತ್ತೊಂದು ಕ್ರಿಕೆಟ್ ಆಧಾರಿತ ಡ್ರಾಮಾ ಸಿನಿಮಾಗಿದೆ. ಇದು ಈ ವಾರದ ಕೊನೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು ಭಾರಿ ನಿರೀಕ್ಷೆ ಮುಟ್ಟಿಸಿದೆ. ಪ್ರತಿಭಾವಂತ ನಟ ರಾಜ್ ಕುಮಾರ್ ರಾವ್ ಮತ್ತು ಜಾನ್ವಿ ಕಪೂರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಕಾಲ್ಪನಿಕ ಚಿತ್ರವು ಕ್ರಿಕೆಟ್ ಬಗ್ಗೆ ಉತ್ಸಾಹ ಹೊಂದಿರುವ ದಂಪತಿ ಜೀವನದ ಕುರಿತಾಗಿದೆ.

ಇದನ್ನೂ ಓದಿ: Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

ಈ ಚಲನಚಿತ್ರವು ಅವರ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಹಲವಾರು ಏರಿಳಿತಗಳನ್ನು ಬಿಂಬಿಸುತ್ತದೆ. ಮಹಿಳಾ ಕ್ರೀಡಾಪಟುಗಳು ಎದುರಿಸುತ್ತಿರುವ ಸವಾಲುಗಳು ಮತ್ತು ಖ್ಯಾತಿಯನ್ನು ಇದು ಬೊಟ್ಟು ಮಾಡಿದೆ. ಇದಲ್ಲದೆ, ಕ್ರಿಕೆಟ್ ಕಥಾಹಂದರದ ಅವಿಭಾಜ್ಯ ಅಂಗವಾಗಿರುವುದರಿಂದ, ಚಿತ್ರದ ಆಕರ್ಷಣೆ ಮತ್ತು ವಾಸ್ತವಿಕತೆಯನ್ನು ಹೆಚ್ಚಿಸಲು ರೋಹಿತ್ ಶರ್ಮಾ ಅವರಂತಹ ಕ್ರಿಕೆಟ್ ಸೂಪಸ್ಟಾರ್​ಗಳನ್ನು ಚಿತ್ರ ತಂಡ ಸೇರಿಸಿಕೊಂಡಿದ್ದಾರೆ. ಅವರಲ್ಲಿ ರೋಹಿತ್ ಕೂಡ ಒಬ್ಬರು.

ಚಿತ್ರ ಬಿಡುಗಡೆಗೆ ಕೆಲವು ದಿನಗಳ ಮೊದಲು, ‘ಅಗರ್ ತುಮ್ ಹೋ’ ಎಂಬ ಹಾಡನ್ನು ಯೂಟ್ಯೂಟ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಕೂಡ ಇದ್ದರು. ರಾಜ್​ಕುಮಾರ್​ ಮತ್ತು ಜಾನ್ವಿ ರೋಹಿತ್ ಅವರ ಶತಕವನ್ನು ಊಟದ ಮೇಜಿನ ಬಳಿ ಸಂಭ್ರಮಿಸುತ್ತಿರುವುದು ಹಾಡಿನಲ್ಲಿ ಕಂಡುಬಂದಿದೆ. ಕ್ರಿಕೆಟ್ ಪ್ರೇಮಿಗಳಾಗಿ ತಮ್ಮ ಉತ್ಸಾಹ ತೋರುವುದು ಕಾಣಿಸುತ್ತಿದೆ.

ಈ ಹಾಡಿನಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ಉಪಸ್ಥಿತಿಯು ಕ್ರಿಕೆಟ್ ಅಭಿಮಾನಿಗಳನ್ನು ಚಲನಚಿತ್ರದ ಕಡೆಗೆ ಸೆಳೆಯುವ ಸಾಧ್ಯತೆಯಿದೆ. ಮೇ 31 ರ ಬಿಡುಗಡೆಗೆ ಮುಂಚಿತವಾಗಿ ಅದರ ನಿರೀಕ್ಷೆಯನ್ನು ಹೆಚ್ಚಿಸುತ್ತದೆ. ವಿಶೇಷವೆಂದರೆ, ಚಿತ್ರದ ಪ್ರಮುಖ ನಟಿ ಜಾನ್ವಿ ಕಪೂರ್ ಕೂಡ ಈ ತಿಂಗಳ ಆರಂಭದಲ್ಲಿ ಚಿತ್ರದ ಪ್ರಚಾರಕ್ಕಾಗಿ ಐಪಿಎಲ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

Continue Reading
Advertisement
Shivamogga News
ಕರ್ನಾಟಕ20 mins ago

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

turbulence
ಪ್ರಮುಖ ಸುದ್ದಿ35 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ಮತ್ತೊಂದು ವಿಮಾನ; 12 ಮಂದಿಗೆ ಗಂಭೀರ ಗಾಯ

FIR Filed
ದೇಶ36 mins ago

FIR Filed: ದೇಗುಲದಲ್ಲಿ ಸ್ತ್ರೀಯರು ಬಟ್ಟೆ ಬದಲಿಸೋ ಜಾಗದಲ್ಲಿ ಸಿಸಿಟಿವಿ ಇಟ್ಟ ಅರ್ಚಕ; ಕೀಚಕ ಕೃತ್ಯಕ್ಕೆ ಬಿತ್ತು ಕೇಸ್!

Yashasvi Jaiswal
ಪ್ರಮುಖ ಸುದ್ದಿ40 mins ago

Yashasvi Jaiswal : ಚೆನ್ನೈ ಏರ್​ಪೋರ್ಟ್​​ನಲ್ಲಿ ಗೆಳತಿಯೊಂದಿಗೆ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ1 hour ago

Rain News: ಚಿತ್ತಾಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ; ಹೊತ್ತಿ ಉರಿದ ತೆಂಗಿನ ಮರ

Jos Butler
ಪ್ರಮುಖ ಸುದ್ದಿ1 hour ago

Jos Butler: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಇಂಗ್ಲೆಂಡ್​ ತಂಡದ ನಾಯಕ ಬಟ್ಲರ್​

Wagah Border
ದೇಶ1 hour ago

Wagah Border: ಕಾಂಗ್ರೆಸ್‌ ಗೆದ್ದರೆ ಭಾರತ-ಪಾಕ್ ಗಡಿ ಓಪನ್‌ ಎಂದ ಪಂಜಾಬ್‌ ಮಾಜಿ ಸಿಎಂ ಚನ್ನಿ; Video ವೈರಲ್

Virat kohli
ಪ್ರಮುಖ ಸುದ್ದಿ2 hours ago

Virat kohli : ಬ್ರೇಕ್​ ತೆಗೆದುಕೊಂಡ ಕೊಹ್ಲಿ, ಅಭ್ಯಾಸ ಪಂದ್ಯಕ್ಕೆ ಅನುಮಾನ

FSSAI Warning
ಆರೋಗ್ಯ2 hours ago

FSSAI Warning: ಎದೆಹಾಲು ಮಾರಾಟ ಮಾಡುವಂತಿಲ್ಲ: ಎಫ್‌ಎಸ್‌ಎಸ್‌ಎಐ ಖಡಕ್ ಎಚ್ಚರಿಕೆ

fraud case
ಕರ್ನಾಟಕ2 hours ago

Fraud Case: ಷೇರು ಮಾರ್ಕೆಟ್‌ನಲ್ಲಿ ಹಣ ಡಬಲ್ ಮಾಡೋದಾಗಿ 30 ಕೋಟಿ ರೂ. ವಂಚಿಸಿ ದಂಪತಿ ಪರಾರಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌