Viral Video: ಕಿಚಡಿಗೆ ಒಗ್ಗರಣೆ ಹಾಕುವುದು ಹೇಗೆಂದು ಬಿಲ್​ ಗೇಟ್ಸ್​​​ಗೆ ಕಲಿಸಿಕೊಟ್ಟ ಕೇಂದ್ರ ಸಚಿವೆ ಸ್ಮೃತಿ ಇರಾನಿ! - Vistara News

ವೈರಲ್ ನ್ಯೂಸ್

Viral Video: ಕಿಚಡಿಗೆ ಒಗ್ಗರಣೆ ಹಾಕುವುದು ಹೇಗೆಂದು ಬಿಲ್​ ಗೇಟ್ಸ್​​​ಗೆ ಕಲಿಸಿಕೊಟ್ಟ ಕೇಂದ್ರ ಸಚಿವೆ ಸ್ಮೃತಿ ಇರಾನಿ!

ಈ ವಿಡಿಯೊವನ್ನು ನೆಟ್ಟಿಗರು ಇಷ್ಟಪಟ್ಟಿದ್ದಾರೆ. ಕೆಲವರು ಜೋಕ್ ಮಾಡಿದ್ದಾರೆ. ಈ ಕಿಚಡಿಯನ್ನು ಈಗ ಮೈಕ್ರೋಸಾಫ್ಟ್​ ಕಿಚಡಿ ಎಂದು ಕರೆಯೋಣವೇ ಎಂದು ಕೆಲವರು ತಮಾಷೆ ಮಾಡಿದ್ದಾರೆ.

VISTARANEWS.COM


on

Smriti Irani teaches Bill Gates how to make tadka Video Viral
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಕ್ರೋಸಾಫ್ಟ್​ ಸಹ ಸಂಸ್ಥಾಪಕ ಬಿಲ್​ ಗೇಟ್ಸ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಅವರು ಕಿಚಡಿಗೆ ಒಗ್ಗರಣೆ ಹಾಕುವುದು ಹೇಗೆಂದು ಕಲಿಸಿಕೊಟ್ಟಿದ್ದಾರೆ. ಜಗತ್ತಿನ ಶ್ರೀಮಂತರಲ್ಲಿ ಒಬ್ಬರಾದ ಬಿಲ್​ ಗೇಟ್ಸ್ (Bill Gates)​ ಭಾರತ ಪ್ರವಾಸದಲ್ಲಿದ್ದಾರೆ. ಶುಕ್ರವಾರ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನೂ ಭೇಟಿಯಾಗಿದ್ದಾರೆ. ಆರೋಗ್ಯ, ಹವಾಮಾನ ಕ್ಷೇತ್ರಗಳಲ್ಲಿ ಭಾರತ ಅತಿ ವೇಗವಾಗಿ ಬೆಳವಣಿಗೆಯಾಗುತ್ತಿರುವುದನ್ನು ಅವರು ಶ್ಲಾಘಿಸಿದ್ದಾರೆ. ಅದರಲ್ಲೂ ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಅತ್ಯಂತ ಸುರಕ್ಷಿತವಾದ ಕೊರೊನಾ ಲಸಿಕೆಗಳನ್ನು ತಂದಿದ್ದನ್ನೂ ಅವರು ಹೊಗಳಿದ್ದಾರೆ.

ಈ ಮಧ್ಯೆ ಅವರು ಸಚಿವೆ ಸ್ಮೃತಿ ಇರಾನಿಯವರ ಜತೆ ಕಿಚಡಿ ಮಾಡಿದ ವಿಡಿಯೊ ವೈರಲ್ ಆಗಿದೆ. ವಿಡಿಯೊ ಶೇರ್ ಮಾಡಿಕೊಂಡಿದ್ದು ಸ್ಮೃತಿ ಇರಾನಿಯವರೇ. ಅದಾಗಲೇ ಸಿದ್ಧವಾಗಿರುವ ಕಿಚಡಿಗೆ ಒಗ್ಗರಣೆ ಮಾಡುವುದು ಹೇಗೆ ಎಂದು ಸ್ಮೃತಿ ಇರಾನಿಯವರು, ಬಿಲ್​ಗೇಟ್ಸ್​​ಗೆ ಹೇಳಿಕೊಟ್ಟಿದ್ದನ್ನು ಅದರಲ್ಲಿ ನೋಡಬಹುದು. ಸ್ಮೃತಿ ಇರಾನಿಯವರು ಹೇಳಿದಂತೆ, ಬಿಲ್​ಗೇಟ್ಸ್​ ಅವರೇ ಒಗ್ಗರಣೆ ಹಾಕಿದ್ದಾರೆ. ಬಳಿಕ, ಕಿಚಡಿಗೆ ಆ ಒಗ್ಗರಣೆಯನ್ನು ಸ್ಮೃತಿ ಇರಾನಿ ಸೇರಿಸಿದ್ದಾರೆ.

ಈ ವಿಡಿಯೊವನ್ನು ನೆಟ್ಟಿಗರು ಇಷ್ಟಪಟ್ಟಿದ್ದಾರೆ. ಕೆಲವರು ಜೋಕ್ ಮಾಡಿದ್ದಾರೆ. ‘ಕಿಚಡಿಗೆ ಸರಿಯಾದ ಒಗ್ಗರಣೆ ಬೀಳುವುದು ತುಂಬ ಮುಖ್ಯ ಎಂದು ಒಬ್ಬರು ಹೇಳಿದ್ದಾರೆ. ಹಾಗೇ, ಇನ್ನೊಬ್ಬರು ಕಮೆಂಟ್ ಮಾಡಿ ‘ಈ ಕಿಚಡಿಯನ್ನು ಈಗ ಮೈಕ್ರೋಸಾಫ್ಟ್​ ಕಿಚಡಿ ಎಂದು ಕರೆಯೋಣವೇ’ ಎಂದು ತಮಾಷೆ ಮಾಡಿದ್ದಾರೆ. ವಿಡಿಯೊ ಈಗಾಗಲೇ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.

ಸ್ಮೃತಿ ಇರಾನಿ ಮತ್ತು ಬಿಲ್​ ಗೇಟ್ಸ್​ ಅವರು ಕಿಚಡಿಗೆ ಒಗ್ಗರಣೆ ಹಾಕಿರುವ ವಿಡಿಯೊ:

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವೈರಲ್ ನ್ಯೂಸ್

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

Boat Capsizes: ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್ ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪ್ರವಾಹಕ್ಕೆ ತುತ್ತಾಗಿ ಒಂದೇ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗುತ್ತಿತ್ತು. ಈ ವೇಳೆ ಒಂದು ದೋಣಿ ಮುಗುಚಿದೆ ಎನ್ನಲಾಗಿದೆ. ಜನರನ್ನು ಹೊತ್ತು ಸಾಗುತ್ತಿದ್ದ ದೋಣಿ ಜಲಾವೃತಗೊಂಡಿದ್ದ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಮಗುಚಿ ಬೀಳುತ್ತಿರುವ ಭಯಾನಕ ದೃಶ್ಯವನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Boat Capsize
Koo

ಬ್ರೆಜಿಲ್‌: ಭೀಕರ ಪ್ರವಾಹದ ರಭಸಕ್ಕೆ ದೋಣಿಯೊಂದು ಮಗುಚಿರುವ ಘಟನೆ (Boat Capsizes) ಬ್ರೆಜಿಲ್‌(Brazil)ನಲ್ಲಿ ನಡೆದಿದೆ. ಭಾರೀ ಮಳೆಯಿಂದ ಪ್ರವಾಹ ಸ್ಥಿತಿ(Flood situation) ಎದುರಿಸುತ್ತಿರುವ ಬ್ರೆಜಿಲ್‌ನಲ್ಲಿ ನೂರಾರು ಜನರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ಜಲಾವೃತಗೊಂಡಿದ್ದ ಸೇತುವೆಯಿಂದ ಕೆಳಗೆ ಬಿದ್ದಿದೆ. ಪರಿಣಾಮವಾಗಿ ಮಳೆಯಿಂದಾಗಿ ಸಾವನ್ನಪ್ಪಿರುವವರ ಸಂಖ್ಯೆ 56ಕ್ಕೆ ಏರಿಕೆಯಾಗಿದ್ದು, 74 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು 67 ಮಂದಿ ಕಣ್ಮರೆಯಾಗಿದ್ದಾರೆ ಬ್ರೆಜಿಲ್‌ ಅಧಿಕಾರಿಗಳು ಹೇಳಿದ್ದಾರೆ. ಇನ್ನು ಈ ಭೀಕರ ದುರ್ಘಟನೆ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗುತ್ತಿದೆ.

ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್ ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪ್ರವಾಹಕ್ಕೆ ತುತ್ತಾಗಿ ಒಂದೇ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗುತ್ತಿತ್ತು. ಈ ವೇಳೆ ಒಂದು ದೋಣಿ ಮುಗುಚಿದೆ ಎನ್ನಲಾಗಿದೆ. ಜನರನ್ನು ಹೊತ್ತು ಸಾಗುತ್ತಿದ್ದ ದೋಣಿ ಜಲಾವೃತಗೊಂಡಿದ್ದ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಮಗುಚಿ ಬೀಳುತ್ತಿರುವ ಭಯಾನಕ ದೃಶ್ಯವನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಬ್ರೆಜಿಲ್‌ನಲ್ಲಿ ಕಳೆದ ಅನೇಕ ದಿನಗಳಿಂದ ಎಡೆಬಿಡದೇ ಮಳೆಯಾಗುತ್ತಿದ್ದು, ಭೂಕುಸಿತ, ಪ್ರವಾಹಕ್ಕೆ ಸಿಲುಕಿ ಜನ ತತ್ತರಿಸಿದ್ದಾರೆ.

ಇನ್ನು ನಾಲ್ಕು ತಿಂಗಳ ಹಿಂದೆ ಇಂತಹದ್ದೇ ಒಂದು ದುರಂತ ನಡೆದಿತ್ತು. ಗುಜರಾತ್‌ನ ವಡೋದಾರದ ಹರಿಣಿ ಸರೋವರದಲ್ಲಿ ಬೋಟ್ ಮಗುಚಿ 13 ಶಾಲಾ ಮಕ್ಕಳು ಹಾಗೂ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ನಡೆದಿತ್ತು.

ಇದನ್ನೂ ಓದಿ:Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಕಳೆದ ವಾರ ಕಾರವಾರದಲ್ಲೂ ಅರಬ್ಬೀ ಸಮುದ್ರದಲ್ಲಿ ಭಾರಿ ಗಾಳಿ ಮಳೆಯಿಂದಾಗಿ ಒಂದು ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗಿತ್ತು. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹಾದೇವ ಖಾರ್ವಿ ಎಂಬವರ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಡೆಯಾಗಿತ್ತು. ಬೆಳಿಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬೀ ಸಮದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ. ಸ್ಥಳದಲ್ಲಿದ್ದ ಇನ್ನೊಂದು ಬೋಟ್‌ನವರಿಂದ ಮೀನುಗಾರರ ರಕ್ಷಣೆ ಮಾಡಲಾಗಿದೆ. ಬೋಟ್ ದುರ್ಘಟನೆಯಿಂದ ಮಾಲೀಕರಿಗೆ ಲಕ್ಷಾಂತರ ರೂಪಾಯಿ ಹಾನಿಯಾಗಿತ್ತು.

Continue Reading

ವೈರಲ್ ನ್ಯೂಸ್

Viral News: ಕಾಳಿಂಗ ಸರ್ಪವನ್ನು ಈ ಕುಟುಂಬ ಹೇಗೆ ಪೂಜಿಸುತ್ತಿದೆ ನೋಡಿ!

Viral News: ಸಾಮಾನ್ಯವಾಗಿ ನಗರ ಪಂಚಮಿ ದಿನ ಎಲ್ಲರೂ ನಾಗ ದೇವರನ್ನು ಪೂಜಿಸುತ್ತಾರೆ. ಕೆಲವರು ನಿಜವಾದ ನಾಗನಿಗೆ ಹಾಲೆರೆದು ಪೂಜೆ ಸಲ್ಲಿಸುತ್ತಾರೆ. ಆದರೆ ಇಲ್ಲೊಂದು ಕುಟುಂಬ ಅತ್ಯಂತ ವಿಷಪೂರಿತ ಕಾಳಿಂಗ ಸರ್ಪಕ್ಕೆ ಪೂಜೆ ಸಲ್ಲಿಸಿ ಧೈರ್ಯ ತೋರಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

VISTARANEWS.COM


on

By

Viral News
Koo

ದೂರದಿಂದಲೇ ಹಾವನ್ನು (cobra) ನೋಡಿದರೂ ಸಾಕು ಕೆಲವರಂತೂ ಎದ್ದು ಬಿದ್ದು ಓಡುತ್ತಾರೆ. ಇನ್ನು ಕೆಲವರು ಸ್ವಲ್ಪ ಧೈರ್ಯವಂತರಾದರೆ ಯಾವ ಹಾವು ಎಂದು ಸ್ವಲ್ಪ ಹತ್ತಿರ ಹೋಗಿ ಪರಿಶೀಲಿಸುತ್ತಾರೆ. ಆದರೆ ಅದನ್ನು ಮುಟ್ಟುವ ಧೈರ್ಯ ಮಾತ್ರ ಯಾರಿಗೂ ಇರುವುದಿಲ್ಲ. ಅದಕ್ಕಾಗಿ ಉರಗ ತಜ್ಞರು ಅಥವಾ ಹಾವು ಹಿಡಿಯುವುದರಲ್ಲಿ ಪರಿಣಿತರಾಗಿರುವವರೇ ಬರಬೇಕು. ಆದರೆ ಇಲ್ಲೊಂದು ಕುಟುಂಬ ಮಾತ್ರ ನಿಜವಾದ ಕಾಳಿಂಗ ಹಾವನ್ನು (balck cobra) ಪೂಜಿಸಿ ಸಾಮಾಜಿಕ ಜಾಲತಾಣದಲ್ಲಿ (Viral News) ಎಲ್ಲರ ಗಮನ ಸೆಳೆದಿದ್ದಾರೆ.

ಸಾಮಾನ್ಯವಾಗಿ ನಗರ ಪಂಚಮಿ ದಿನ ಎಲ್ಲರೂ ನಾಗ ದೇವರನ್ನು ಪೂಜಿಸುತ್ತಾರೆ. ಕೆಲವರು ನಿಜವಾದ ನಾಗನಿಗೆ ಹಾಲೆರೆದು ಪೂಜೆ ಸಲ್ಲಿಸುತ್ತಾರೆ. ಆದರೆ ಇಲ್ಲೊಂದು ಕುಟುಂಬ ಕಪ್ಪು ನಾಗರಹಾವು ಅತ್ಯಂತ ವಿಷಪೂರಿತ ಕಾಳಿಂಗ ಸರ್ಪಕ್ಕೆ ಪೂಜೆ ಸಲ್ಲಿಸಿ ಧೈರ್ಯ ತೋರಿದ್ದಾರೆ. ವಿವಿಧ ಧಾರ್ಮಿಕ ವಿಧಿ ವಿಧಾನದ ವೇಳೆ ಹಾವಿನ ಮೇಲೆ ಹಾಲು ಸುರಿಯುತ್ತಿದ್ದಾಗ ವ್ಯಕ್ತಿಯನ್ನು ಕಚ್ಚಲು ಹಾವು ಪ್ರಯತ್ನಿಸಿದೆ. ಆದರೆ ಆಶ್ಚರ್ಯವೆಂದರೆ ಇದು ಆ ವ್ಯಕ್ತಿಯನ್ನು ಕೊಂಚವೂ ವಿಚಲಿತಗೊಳಿಸಲಿಲ್ಲ. ಬದಲಿಗೆ ನೆರೆದಿದ್ದವರನ್ನೆಲ್ಲ ನಗುವಂತೆ ಮಾಡಿದೆ.

ಎದುರಿನ ತಟ್ಟೆಯಲ್ಲಿ ಕಾಳಿಂಗ ಹಾವು ಇದ್ದರೂ ಕೊಂಚವೂ ವಿಚಲಿತರಾಗದ ಕುಟುಂಬವು ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅರ್ಚಕರು ಸೂಚಿಸಿದಂತೆ ಮನೆ ಮಂದಿಯೆಲ್ಲ ಸೇರಿ ಹಾವಿನ ಎದುರು ಕುಳಿತು ಪೂಜೆ ಸಲ್ಲಿಸಿದರು. ಈ ದೃಶ್ಯಗಳು ಕೆಮರಾದಲ್ಲಿ ಸೆರೆಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿರುವ ಈ ವಿಡಿಯೋ ಅನೇಕ ನೆಟ್ಟಿಗರನ್ನು ಬೆರಗುಗೊಳ್ಳುವಂತೆ ಮಾಡಿದೆ. ಹಾವಿನ ಬಗ್ಗೆ ಅಸಡ್ಡೆಯ ವರ್ತನೆಗೆ ಕೆಲವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಆದರೆ ವಿಡಿಯೋ ನೋಡಿದ ವೀಕ್ಷಕರು ಅಪಾಯದ ನಡುವೆಯೂ ಕುಟುಂಬಕ್ಕೆ ಯಾವುದೇ ಭಯವಾಗದೇ ಇರುವುದು ಆಶ್ಚರ್ಯ ಮೂಡಿಸಿದೆ.

ಇನ್ ಸ್ಟಾ ಗ್ರಾಮ್ ನಲ್ಲಿ ಓಂಕಾರ್ ಸನಾತನಿ ಎಂಬಾತ ಹಂಚಿ ಕೊಂಡಿರುವ ಈ ವಿಡಿಯೋವನ್ನು ಲಕ್ಷಾಂತರ ಮಂದಿ ನೋಡಿದ್ದಾರೆ. ಈ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯನ್ನು ಉಂಟು ಮಾಡಿದೆ.

4 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿರುವ ಈ ವಿಡಿಯೋ ಗೆ “ಐಸಿ ಪೂಜಾ ಕರ್ನೆ ವಾಲೆ ಕೋ 21 ಟೋಪೋನ್ ಕಿ ಸಲಾಮಿ” ಎಂದು ಶೀರ್ಷಿಕೆ ನೀಡಲಾಗಿದೆ.


ಹಿಂದೂ ಧರ್ಮದಲ್ಲಿ ಹಾವುಗಳನ್ನು ಪೂಜಿಸುವುದರಿಂದ ಹಾವು ಕಡಿತ, ಅನಾರೋಗ್ಯ ಮತ್ತು ಕೆಟ್ಟ ಶಕ್ತಿಗಳಂತಹ ಅಪಾಯಗಳಿಂದ ರಕ್ಷಣೆ ಸಿಗುತ್ತದೆ ಎಂದು ಭಾವಿಸಲಾಗುತ್ತದೆ. ಸಮೃದ್ಧಿ, ಸಂತಾನ ಭಾಗ್ಯಕ್ಕಾಗಿ ಜನರು ಹಾವುಗಳನ್ನು ಪೂಜಿಸುತ್ತಾರೆ.

ಇದನ್ನೂ ಓದಿ: Vicky Pedia: ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ: ಫ್ಯಾನ್ಸ್‌ ಫಿದಾ!

ಭಾರತದಾದ್ಯಂತ ವಿವಿಧ ಹಬ್ಬಗಳು ಮತ್ತು ಸಮಾರಂಭಗಳು ನಾಗ ದೇವರನ್ನು ಪೂಜಿಸಲಾಗುತ್ತದೆ. ನಾಗ ಪಂಚಮಿಯು ಹಾವಿನ ಪೂಜೆಗೆ ಮೀಸಲಾದ ಹಬ್ಬವಾಗಿದೆ. ನಾಗ ಪಂಚಮಿಯ ಸಮಯದಲ್ಲಿ ಆರಾಧಕರು ಹಾವಿನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ, ಹಾಲು, ಹೂವುಗಳು, ಹಣ್ಣುಗಳು ಮತ್ತು ಇತರ ಉಡುಗೊರೆಗಳನ್ನು ನಾಗನಿಗೆ ಭಕ್ತಿ ಭಾವದಿಂದ ಅರ್ಪಿಸಲಾಗುತ್ತದೆ.

Continue Reading

ವೈರಲ್ ನ್ಯೂಸ್

Vicky Pedia: ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ: ಫ್ಯಾನ್ಸ್‌ ಫಿದಾ!

Vicky Pedia: ʻಆ ದಿನಗಳುʼ ಸಿನಿಮಾದ ಸಿಹಿ ಗಾಳಿ ಸಿಹಿ ಗಾಳಿ ಸಹಿ ಹಾಕಿದೆ ಮನಸಿನಲ್ಲಿ ಹಾಡಿನ ಟ್ಯೂನ್‌ ಬಳಸಿಕೊಂಡು ವಿಡಿಯೊವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಇದೀಗ ತಂಡದ ಕ್ರಿಯೇಟಿವಿಟಿ ಲೆವಲ್‌ಗೆ ನೋಡುಗರು ಫಿದಾ ಆಗಿದ್ದಾರೆ. ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ಕಂಟೆಂಟ್ ಕ್ರಿಯೇಟರ್. ವಿಡಿಯೊದಲ್ಲಿ ವಿಕ್ಕಿಪೀಡಿಯಾ ವಿಕ್ಕಿ ಪಿಂಕ್‌ ವಿಗ್‌ ಧರಿಸಿ ಈ ರೀತಿಯ ಕ್ರಿಯೇಟಿವ್‌ ರೀಲ್ಸ್‌ ಹಂಚಿಕೊಳ್ಳುತ್ತಲೇ ಇರುತ್ತಾರೆ.

VISTARANEWS.COM


on

Vicky Pedia New reels about heat in Karnataka
Koo

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ.  ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು ವಿಕಾಸ್ ವಿಕ್ಕಿಪಿಡಿಯ (Vicky Pedia) ತಂಡ ಹೊಸ ರೀಲ್ಸ್‌ವೊಂದು ಶೇರ್‌ ಮಾಡಿಕೊಂಡಿದೆ. ʻಆ ದಿನಗಳುʼ ಸಿನಿಮಾದ ಸಿಹಿ ಗಾಳಿ ಸಿಹಿ ಗಾಳಿ ಸಹಿ ಹಾಕಿದೆ ಮನಸಿನಲ್ಲಿ ಹಾಡಿನ ಟ್ಯೂನ್‌ ಬಳಸಿಕೊಂಡು ವಿಡಿಯೊವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಇದೀಗ ತಂಡದ ಕ್ರಿಯೇಟಿವಿಟಿ ಲೆವಲ್‌ಗೆ ನೋಡುಗರು ಫಿದಾ ಆಗಿದ್ದಾರೆ.

“ಬಿಸಿ ಗಾಳಿ ಬಿಸಿ ಗಾಳಿ ಸಹಿ ಹಾಕಿದೆ ಬಿಸಿಲಿನಲಿ..
BURN ಆಯ್ತು
Sweat ಆಯ್ತು
ಕೈ ಕಾಲು HEATನಲಿ
ಸೂರ್ಯ ಬಂದರೆ ಸಾಕು ದಿನವೂ ಬೆವರಲೇ ಬೇಕು
ನೀರು ಖಾಲಿ ಆಗೈತೆ..ತುಂಬಸೋಣ ಬಾ..ʼʼಎಂದು ರೀಲ್ಸ್‌ ಶೇರ್‌ ಮಾಡಿಕೊಂಡಿದ್ದಾರೆ. ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ʻʻಅಷ್ಟು ಬಿಸಿಲು ಇದ್ರೂ ಶಾಲು ಬೇಕಾʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ʻʻಹಂಸಲೇಖ ಅವ್ರು ಹಿಂಗ್ ಬರ್ಯಲ್ಲ ಗುರುʼʼ ಎಂದು ಕಮೆಂಟ್‌ ಮಾಡಿದ್ದಾರೆ.

ತಮ್ಮ ವಿಭಿನ್ನ ಕಾಮಿಡಿ ವಿಡಿಯೊಗಳಿಂದ ವಿಡಿಯೊ ಕ್ರಿಯೇಟರ್ ವಿಕಾಸ್ ( ವಿಕ್ಕಿ ಪೀಡಿಯಾ) (Vicky Pedia) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚಿನ ʻನಾನು ನಂದಿನಿʼ ಹಾಡಿಗೆ ರೀಲ್ಸ್‌ ಮಾಡಿ ಸಖತ್‌ ಫೇಮಸ್‌ ಆಗಿದ್ದರು. ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ಕಂಟೆಂಟ್ ಕ್ರಿಯೇಟರ್. ವಿಡಿಯೊದಲ್ಲಿ ವಿಕ್ಕಿಪೀಡಿಯಾ ವಿಕ್ಕಿ ಪಿಂಕ್‌ ವಿಗ್‌ ಧರಿಸಿ ಈ ರೀತಿಯ ಕ್ರಿಯೇಟಿವ್‌ ರೀಲ್ಸ್‌ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇದನ್ನೂ ಓದಿ: Vicky Pedia: ಕರ್ನಾಟಕದಲ್ಲಿ ಬರಗಾಲ: ʻಓ ನಲ್ಲ ನೀರಿಲ್ಲʼ ಎಂದ ವಿಕಾಸ್ ವಿಕ್ಕಿಪಿಡಿಯ!

ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ಕಂಟೆಂಟ್ ಕ್ರಿಯೇಟರ್. ಭಾಷಣ ಟ್ರಾನ್ಸ್‌ಲೇಟ್‌ ವಿಡಿಯೊ ಅಣಕ ಮಾಡಿ ಇವರು ಸಾಕಷ್ಟು ಫೇಮಸ್ ಆಗಿದ್ದರು. ಚುನಾವಣಾ ಸಮಯದಲ್ಲಿ ರಾಷ್ಟ್ರಮಟ್ಟದ ನಾಯಕರ ಹಿಂದಿ ಭಾಷೆಯ ಭಾಷಣವನ್ನು ಸಖತ್‌ ಆಗಿ ಕಾಮಿಡಿಯಾಗಿ ಅಣುಕಿಸಿದ್ದರು.

ಮೇ 8 ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಮೇ 8 ರಿಂದ ಮೇ 10ರವರೆಗೆ ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇದೆ. ಇನ್ನು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೇ 9ರಿಂದ ಮುಂದಿನ ಎರಡು ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ವರದಿಯಾಗಿದೆ.

Continue Reading

ವೈರಲ್ ನ್ಯೂಸ್

Viral News: ಅಣ್ಣನ ಕತ್ತು ಸೀಳಿದ ತಂಗಿ; ಮೊಬೈಲ್‌ಗಾಗಿ ನಡೀತು ಘೋರ ಕೃತ್ಯ

Viral News:14ವರ್ಷದ ಬಾಲಕಿ ಆಗಾಗ ಮೊಬೈಲ್‌ನಲ್ಲಿ ಯಾರೋ ಹುಡುಗನ ಜೊತೆ ಮಾತನಾಡುತ್ತಿದ್ದಳು. ಇದನ್ನು ಗಮನಿಸಿದ ಆಕೆಯ ಅಣ್ಣ(18) ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಈ ವೇಳೆ ಇಬ್ಬರು ನಡುವೆ ಜಗಳ ಆಗಿತ್ತು. ಇನ್ನು ಮುಂದೆ ಮೊಬೈಲ್‌ ಬಳಸದಂತೆ ಅಣ್ಣ ಖಡಕ್‌ ಆಗಿ ವಾರ್ನ್‌ ಮಾಡಿ ಮೊಬೈಲ್‌ ಕಿತ್ತುಕೊಂಡಿದ್ದ. ಇದರಿಂದ ಕೋಪಗೊಂಡಿದ್ದ ಬಾಲಕಿ ತಾಯಿ ಮನೆಯಲ್ಲಿಲ್ಲದ ವೇಳೆ ಕೊಡಲಿಯಿಂದ ಮಲಗಿದ್ದ ಅಣ್ಣನ ಕುತ್ತಿಗೆಗೆ ಬೀಸಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

VISTARANEWS.COM


on

Viral News
Koo

ಛತೀಸ್‌ಗಡ: ಈಗಿನ ಮಕ್ಕಳು ಎಷ್ಟು ಮೊಬೈಲ್‌(Mobile)ಗೆ ಅಡಿಕ್ಟ್‌ ಆಗಿರುತ್ತಾರೆ ಎಂದರೆ ಕೆಲವೊಮ್ಮೆ ದೊಡ್ಡ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಡುತ್ತದೆ. ಮೊಬೈಲ್‌ ಮೋಹಕ್ಕೆ ಬಿದ್ದು ತಮಗೂ ಅಪಾಯ ಮಾಡಿಕೊಳ್ಳುವುದು ಮಾತ್ರವಲ್ಲದೇ ಜೊತೆಗಿರುವವರನ್ನೂ ಅಪಾಯಕ್ಕೊಡ್ಡುತ್ತಾರೆ. ಇದೀಗ ಅಂತಹದ್ದೇ ಒಂದು ಘಟನೆ(Viral News) ಛತ್ತೀಸ್‌ಗಡ(Chhattisgarh)ದಲ್ಲಿ ನಡೆದಿದ್ದು, ಮೊಬೈಲ್‌ ಬಳಕೆಗೆ ಅಡ್ಡಿಯಾಗಿದ್ದನೆಂದು ಸ್ವತಃ ಅಣ್ಣನನ್ನೇ ತಂಗಿಯೊಬ್ಬಳು ಹೊಡೆದು ಕೊಂದಿದ್ದಾಳೆ.

ಏನಿದು ಘಟನೆ?

ಖೈರಗಢ-ಚುಯಿಖಾದನ್-ಗಂಡೈ ಜಿಲ್ಲೆಯ ಅಮ್ಲಿಧಿಕಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 14ವರ್ಷದ ಬಾಲಕಿ ಆಗಾಗ ಮೊಬೈಲ್‌ನಲ್ಲಿ ಯಾರೋ ಹುಡುಗನ ಜೊತೆ ಮಾತನಾಡುತ್ತಿದ್ದಳು. ಇದನ್ನು ಗಮನಿಸಿದ ಆಕೆಯ ಅಣ್ಣ(18) ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಈ ವೇಳೆ ಇಬ್ಬರು ನಡುವೆ ಜಗಳ ಆಗಿತ್ತು. ಇನ್ನು ಮುಂದೆ ಮೊಬೈಲ್‌ ಬಳಸದಂತೆ ಅಣ್ಣ ಖಡಕ್‌ ಆಗಿ ವಾರ್ನ್‌ ಮಾಡಿ ಮೊಬೈಲ್‌ ಕಿತ್ತುಕೊಂಡಿದ್ದ. ಇದರಿಂದ ಕೋಪಗೊಂಡಿದ್ದ ಬಾಲಕಿ ತಾಯಿ ಮನೆಯಲ್ಲಿಲ್ಲದ ವೇಳೆ ಕೊಡಲಿಯಿಂದ ಮಲಗಿದ್ದ ಅಣ್ಣನ ಕುತ್ತಿಗೆಗೆ ಬೀಸಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಘಟನೆ ಬಳಿಕ ಸ್ನಾನ ಮಾಡಿದ ಬಾಲಕಿ ತನ್ನ ಬಟ್ಟೆ ಮೇಲಿದ್ದ ರಕ್ತದ ಕಲೆಯನ್ನು ಸ್ವಚ್ಛ ಮಾಡಿದ್ದಳು. ಇದಾದ ಬಳಿಕ ತನ್ನ ಅಣ್ಣನನ್ನು ಯಾರೋ ಕೊಲೆ ಮಾಡಿದ್ದಾರೆಂದು ಬಾಲಕಿ ನೆರೆಮನೆಯವರಿಗೆ ತಿಳಿಸಿದ್ದಾಳೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಲಕಿಯನ್ನು ವಿಚಾರಣೆ ನಡೆಸಿದಾಗ ತಾನೇ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಆಕೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕೆಲವು ದಿನಗಳ ಹಿಂದೆ ಬಾಲಕಿಯ ಹೆತ್ತವರು ಆಕೆಯ ಬಳಿ ಇದ್ದ ಮೊಬೈಲ್ ಫೋನ್ ಕಿತ್ತುಕೊಂಡಿದ್ದರು. ವಾಪಸ್ ಕೊಡೋದಿಲ್ಲ ಎಂದು ಕಟ್ಟುನಿಟ್ಟಾಗಿ ಹೇಳಿದ್ದರು. ಏಕೆಂದರೆ, 13 ವರ್ಷದ ಬಾಲಕಿ ಇಡೀ ದಿನ ಮೊಬೈಲ್ ಫೋನ್‌ನಲ್ಲೇ ಮುಳುಗಿರುತ್ತಿದ್ದಳು. ಸ್ನೇಹಿತರ ಜೊತೆ ಚಾಟ್ ಮಾಡೋದು, ಆನ್‌ಲೈನ್ ಸ್ನೇಹಿತರ ಜೊತೆ ಮಾತುಕತೆ ನಡೆಸೋದು, ಸೋಷಿಯಲ್ ಮೀಡಿಯಾಗಳಲ್ಲಿ ರೀಲ್ಸ್‌ ನೋಡೋದು.. ಹೀಗೆ ಇಡೀ ದಿನ ಮೊಬೈಲ್‌ನಲ್ಲೇ ಮುಳುಗಿರುತ್ತಿದ್ದ ಬಾಲಕಿ, ಓದುತ್ತಲೇ ಇರಲಿಲ್ಲ. ಇನ್ನು ಕುಟುಂಬಸ್ಥರ ಜೊತೆಗೂ ಆಕೆ ಬೆರೆಯುತ್ತಿರಲಿಲ್ಲ.

ಇದನ್ನೂ ಓದಿ:Viral Video: ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದೇ ಬಿಟ್ಟ ಜನ; ಶಾಕಿಂಗ್‌ ವಿಡಿಯೋ ವೈರಲ್‌

ಈ ಎಲ್ಲಾ ಕಾರಣಗಳಿಂದಾಗಿ ಮಗಳಿಂದ ಮೊಬೈಲ್ ಕಸಿದುಕೊಂಡಿದ್ದ ಪೋಷಕರಿಗೆ ತಮ್ಮ ಮಗಳು ತಮ್ಮ ವಿರುದ್ದವೇ ಸಂಚು ಮಾಡಬಹುದು, ತಮ್ಮ ಕೊಲೆಗೆ ಯತ್ನಿಸಬಹುದು ಎಂಬ ಸಂಗತಿ ಗೊತ್ತಾಗಿದ್ದೇ ತಡ, ಶಾಕ್‌ಗೆ ಒಳಗಾಗಿದ್ದಾರೆ. ಕೇವಲ ಮೊಬೈಲ್ ಫೋನ್ ಕೊಡಲಿಲ್ಲ ಅನ್ನೋ ಕಾರಣಕ್ಕೆ ಹೆತ್ತವರ ಹತ್ಯೆಗೆ ಪುಟಾಣಿ ಬಾಲಕಿ ಸಂಚು ರೂಪಿಸಿದ ವಿಚಾರ ಅಭಯಂ ಹೆಲ್ಪ್‌ಲೈನ್ ಸಿಬ್ಬಂದಿಯನ್ನೂ ದಂಗು ಬಡಿಸಿದೆ!

Continue Reading
Advertisement
Paris Olympics
ಕ್ರೀಡೆ10 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

Prajwal Revanna Case
ಕರ್ನಾಟಕ12 mins ago

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Boat Capsize
ವೈರಲ್ ನ್ಯೂಸ್30 mins ago

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

T20 World Cup 2024
ಕ್ರೀಡೆ39 mins ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

Megha Dhade bigg boss marathi winner crptic post about rahul gandhi
ಸಿನಿಮಾ46 mins ago

Megha Dhade: ನಮ್ಮ ದೇಶ ಬಿಟ್ಟು ನರಕಕ್ಕೆ ಹೋಗಿ ಎಂದು ರಾಹುಲ್‌ ಗಾಂಧಿ ವಿರದ್ಧ ʻಬಿಗ್‌ ಬಾಸ್‌ʼ ವಿಜೇತೆ ಆಕ್ರೋಶ!

Prajwal Revanna Case
ಕರ್ನಾಟಕ1 hour ago

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Sunil Narine
ಕ್ರೀಡೆ1 hour ago

Sunil Narine: ಅತ್ಯಧಿಕ ಸಿಕ್ಸರ್​ ಸಾಧಕರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸುನೀಲ್​ ನರೈನ್

Ranjani Raghavan Starrer Sathyam Kannada Movie Gets UA Certificate
ಸ್ಯಾಂಡಲ್ ವುಡ್1 hour ago

Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

Terrorist Attack
ದೇಶ1 hour ago

Terrorist attack: ʼಮಗನ ಬರ್ತ್‌ ಡೇ ಪಾರ್ಟಿಗೆ ಪ್ಲ್ಯಾನ್‌ ಮಾಡಿದ್ದ, ಆದರೆ ಈಗ…ʼ ಕಣ್ಣೀರಿಟ್ಟ ಹುತಾತ್ಮ ಯೋಧನ ಕುಟುಂಬ

Samantha Ruth Prabhu Fake Viral Nude Pic
ಟಾಲಿವುಡ್2 hours ago

Samantha Ruth Prabhu: ಬೆತ್ತಲೆ ಫೋಟೊ ಅಪ್​ಲೋಡ್ ಮಾಡಿದ್ರಾ ಸಮಂತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ5 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ14 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ16 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ16 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌