Viral News : 75 ವರ್ಷದ ವೃದ್ಧನ ಕಿಡ್ನಿಯಿಂದ 300 ಕಲ್ಲುಗಳನ್ನು ತೆಗೆದ ವೈದ್ಯರು! - Vistara News

ವೈರಲ್ ನ್ಯೂಸ್

Viral News : 75 ವರ್ಷದ ವೃದ್ಧನ ಕಿಡ್ನಿಯಿಂದ 300 ಕಲ್ಲುಗಳನ್ನು ತೆಗೆದ ವೈದ್ಯರು!

ಹೈದರಾಬಾದ್‌ನಲ್ಲಿ 75 ವರ್ಷದ ವ್ಯಕ್ತಿಯೊಬ್ಬರ ಕಿಡ್ನಿಯೊಳಗೆ ಬರೋಬ್ಬರಿ 300 ಕಲ್ಲುಗಳಿದ್ದು, ವೈದ್ಯರು ಅದನ್ನು ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈ ಸುದ್ದಿ ವೈರಲ್‌ (Viral News) ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಕಿಡ್ನಿಯಲ್ಲಿ ಕಲ್ಲಾಗುವುದು ಈಗಿನ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿಬಿಟ್ಟಿದೆ. ಆದರೆ ಹೈದರಾಬಾದ್‌ನ ಈ ವ್ಯಕ್ತಿಯ ಕಿಡ್ನಿಯಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 300 ಕಲ್ಲುಗಳಾಗಿದ್ದವು. ಅವೆಲ್ಲವನ್ನೂ ವೈದ್ಯರು ಯಶಸ್ವಿಯಾಗಿ ಹೊರತೆಗೆದಿದ್ದು, ಆ ಸುದ್ದಿ ಭಾರೀ ವೈರಲ್‌ (Viral News) ಆಗಿದೆ.

ಇದನ್ನೂ ಓದಿ: Viral Video : ಅರ್ಜುನ್‌ ಜತೆ ಫೋಟೋಗೆ ಪೋಸ್‌ ಕೊಡಲು ಅನುಮತಿ ಕೇಳಿದ ಉರ್ಫಿ; ವೈರಲ್‌ ಆಯ್ತು ವಿಡಿಯೊ
ಕರೀಂನಗರ ಜಿಲ್ಲೆಯ ನಿವಾಸಿಯಾಗಿರುವ ರಾಮ್‌ ರೆಡ್ಡಿ(75) ಹೆಸರಿನ ರೈತನಿಗೆ ಇತ್ತೀಚಿನ ಕೆಲ ತಿಂಗಳುಗಳಲ್ಲಿ ಸೊಂಟ ಮತ್ತು ಕಿಡ್ನಿ ಭಾಗದಲ್ಲಿ ನೋವು ಹೆಚ್ಚಾಗಿತ್ತು. ಆ ಹಿನ್ನೆಲೆ ಅವರು ಸ್ಥಳೀಯ ವೈದ್ಯರಿಗೆ ತೋರಿಸಿದಾಗ ಹೈದರಾಬಾದ್‌ನಲ್ಲಿರುವ ಏಷಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ನೆಫ್ರಾಲಜಿ & ಉರೊಲಜಿ (ಮೂತ್ರಶಾಸ್ತ್ರ) ಆಸ್ಪತ್ರೆಯಲ್ಲಿ ತೋರಿಸಲು ಸೂಚಿಸಲಾಗಿದೆ.

ವೈದ್ಯರ ಸಲಹೆ ಮೇರೆಗೆ ರಾಮ್‌ ರೆಡ್ಡಿ ಅವರು ಎಐಎನ್‌ಯು ಆಸ್ಪತ್ರೆಯಲ್ಲಿ ತೋರಿಸಿದಾಗ ಅವರ ಕಿಡ್ನಿಯಲ್ಲಿ ಬರೋಬ್ಬರಿ 7 ಸೆಂ.ಮೀ.ನಷ್ಟು ದೊಡ್ಡ ಕಲ್ಲು ಇರುವುದ ಪತ್ತೆಯಾಗಿದೆ. ಡಾ.ತೈಫ್‌ ಬೆಂಡಿಗೆರಿ ಅವರು ಹೇಳುವ ಪ್ರಕಾರ ಮನುಷ್ಯರ ಕಿಡ್ನಿಯಲ್ಲಿ ಸಾಮಾನ್ಯವಾಗಿ 7ಮಿ.ಮೀ.ನಿಂದ 15ಮಿ.ಮೀ. ಗಾತ್ರದ ಕಲ್ಲಿರುತ್ತದೆ. ಆದರೆ ರಾಮ್‌ ರೆಡ್ಡಿ ಅವರ ಕಿಡ್ನಿಯಲ್ಲಿ ಅತ್ಯಂತ ದೊಡ್ಡ ಕಲ್ಲಿರುವುದರಿಂದ ಶಸ್ತ್ರಚಿಕಿತ್ಸೆ ಮಾಡುವುದು ಕೂಡ ಒಂದು ಸವಾಲಾಗಿತ್ತು.

ಇದನ್ನೂ ಓದಿ: Lalu Prasad Yadav: ಕಿಡ್ನಿ ಕಸಿ ಬಳಿಕ ಭಾರತಕ್ಕೆ ಬಂದ ಲಾಲು ಪ್ರಸಾದ್‌, ತಂದೆಗೆ ಕಿಡ್ನಿ ಕೊಟ್ಟ ಮಗಳಿಂದ ಭಾವುಕ ಟ್ವೀಟ್‌
ಆ ದೊಡ್ಡ ಕಲ್ಲು ಒಟ್ಟು 300 ಚಿಕ್ಕ ಚಿಕ್ಕ ಕಲ್ಲುಗಳಿಂದ ಕೂಡಿತ್ತು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ರಾಮ್‌ ರೆಡ್ಡಿ ಅವರಿಗೆ ವಯೋ ಸಹಜ ಕಾಯಿಲೆಗಳೂ ಇದ್ದಿದ್ದರಿಂದಾಗಿ ಅತ್ಯಂತ ಸೂಕ್ಷ್ಮವಾಗಿ ಶಸ್ತ್ರಚಿಕಿತ್ಸೆ ಮಾಡಬೇಕಾದ ಪರಿಸ್ಥಿತಿ ಇತ್ತು. ಡಾ. ಮಲ್ಲಿಕಾರ್ಜುನ್‌ ಅವರ ತಂಡವು ಅಡ್ವಾನ್ಸಡ್‌ ಲೇಸರ್‌ ತಂತ್ರಜ್ಞಾನ ಬಳಸಿಕೊಂಡು ಶಸ್ತ್ರಚಿಕಿತ್ಸೆ ಮಾಡಿದ್ದು, ಅಷ್ಟೂ ಕಲ್ಲುಗಳನ್ನು ಯಶಸ್ವಿಯಾಗಿ ಹೊರತೆಗೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಿದೇಶ

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

ಆಹಾರದ ಕೊರತೆಯಿಂದ ಗಾಜಾ ಪಟ್ಟಿಯಲ್ಲಿ ಮಕ್ಕಳು ರಸ್ತೆಯಲ್ಲಿ ಸಿಕ್ಕಿದ್ದನ್ನೆಲ್ಲ ತಿನ್ನುತ್ತಿದ್ದಾರೆ ಎಂದು ಒಮಾನಿ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದು ಇದಕ್ಕೆ ಸಾಕ್ಷಿಯನ್ನು ನೀಡಿದ್ದಾರೆ. ಇದರ ವಿಡಿಯೋ ಭಾರೀ ವೈರಲ್ (Viral News) ಆಗಿದೆ.

VISTARANEWS.COM


on

By

Viral News
Koo

ಗಾಜಾ ಪಟ್ಟಿಯಲ್ಲಿ (Gaza strip) ಆಹಾರದ ಕೊರತೆಯಿಂದ ತೀವ್ರ ಹಸಿವಿನಿಂದ ಬಳಲುತ್ತಿರುವ ಮಕ್ಕಳು ರಸ್ತೆಯಲ್ಲಿ ಸಿಕ್ಕಿದ್ದನ್ನೆಲ್ಲ ತಿನ್ನುತ್ತಿದ್ದಾರೆ ಎಂದು ಪ್ಯಾಲೆಸ್ಟೀನಿಯಾದವರಿಗೆ (Palestinians) ಚಿಕಿತ್ಸೆ ನೀಡಲು ಗಾಜಾದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಸ್ವಯಂಸೇವಕರಾಗಿ ಕೆಲಸ ಮಾಡುವ ಒಮಾನಿ (omani) ವೈದ್ಯ ಖಲೀದ್ ಅಲ್-ಶಮೌಸಿ (Khaled Al-Shamousi) ಅವರು ಸಾಮಾಜಿಕ ಜಾಲತಾಣವಾದ (Viral News) ಎಕ್ಸ್ ನಲ್ಲಿ (x) ಹೇಳಿಕೊಂಡಿದ್ದಾರೆ.

ಎಕ್ಸ್ ಪ್ಲಾಟ್‌ಫಾರ್ಮ್‌ನಲ್ಲಿನ ಅವರ ಖಾತೆಯಲ್ಲಿ ಡಾ. ಖಲೀದ್ ಅಲ್-ಶಮೌಸಿ ಅವರು, ಒಂದು ಮಗು ಲೋಹದ ತುಂಡನ್ನು ನುಂಗಿತ್ತು. ಅದು ಅನ್ನನಾಳದಲ್ಲಿ ಸಿಲುಕಿಕೊಂಡಿತ್ತು ಎಂದು ವಿವರಿಸಿದ್ದಾರೆ.

ಅವರು ಪರೀಕ್ಷಿಸಿದ ಚಿಕ್ಕ ಹುಡುಗಿಯ ಎದೆಯ ಎಕ್ಸ್-ರೇ ಅನ್ನು ತೋರಿಸಿರುವ ಅವರು ಗಾಜಾದ ಮಕ್ಕಳು ತೀವ್ರ ಹಸಿವಿನಿಂದ ನಾಣ್ಯಗಳು, ಬೆಣಚುಕಲ್ಲುಗಳು ಮತ್ತು ಸಣ್ಣ ಬ್ಯಾಟರಿಗಳನ್ನು ತಿನ್ನುತ್ತಿದ್ದಾರೆ. ಅವುಗಳಲ್ಲಿ ಒಬ್ಬಾಕೆ 8 ವರ್ಷದ ಬಾಲಕಿ. ಅವಳು ಲೋಹದ ತುಂಡನ್ನು ನುಂಗಿದಳು ಮತ್ತು ಅದು ಅವಳ ಅನ್ನನಾಳದಲ್ಲಿ ಸಿಲುಕಿಕೊಂಡಿತು ಎಂದು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸಾ ಕೊಠಡಿಯೊಳಗೆ ಅವರು ಮಗುವಿನ ಮೇಲೆ ಸೂಕ್ಷ್ಮವಾದ ಆಪರೇಷನ್ ಮಾಡುತ್ತಿರುವ ವಿಡಿಯೋ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದಾರೆ. ಲೋಹದ ತುಂಡನ್ನು ತೆಗೆದುಹಾಕಿದ ಬಳಿಕ ವೈದ್ಯಕೀಯ ಸಿಬ್ಬಂದಿಯ ಚಪ್ಪಾಳೆಗಳನ್ನು ಕೇಳಿದಾಗ ಶಮೌಸಿ ತನ್ನ ಬಾಯಿಯ ಮೂಲಕ ಮಗುವಿನ ಕರುಳಿನಿಂದ ಸಣ್ಣ ಬ್ಯಾಟರಿಯನ್ನು ತೆಗೆದುಹಾಕುತ್ತಿರುವಂತೆ ಕಾಣಿಸಿಕೊಂಡರು.

ಬಳಿಕ ಈ ಕುರಿತು ಎಕ್ಸ್ ನಲ್ಲಿ ಹೇಳಿರುವ ಅವರು, ತೀವ್ರವಾದ ಹಸಿವು,ಆಹಾರ ಪದಾರ್ಥಗಳ ಸರಬರಾಜುಗಳ ಕೊರತೆ ಮತ್ತು ಸುತ್ತಮುತ್ತಲಿನ ದೇಶಗಳ ನಿರ್ಲಕ್ಷ್ಯದಿಂದಾಗಿ ಮಕ್ಕಳು ಬ್ಯಾಟರಿಗಳನ್ನು ಮಿಠಾಯಿಗಳೆಂದು ಭಾವಿಸಿ ನುಂಗಿದರು. ಇಲ್ಲಿ ನಾವು ಗಾಜಾದಲ್ಲಿ ಮಗು ನುಂಗಿದ ಬ್ಯಾಟರಿಯನ್ನು ಹೊರತೆಗೆದಿದ್ದೇವೆ ಎಂದು ಹೇಳಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಅಲ್ಲಿ ಅನೇಕರು ಈ ಗೊಂದಲದ ದೃಶ್ಯಗಳ ಬಗ್ಗೆ ತಮ್ಮ ಕೋಪ ಮತ್ತು ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ.

ಆಹಾರ ಪೂರೈಕೆ ಇಲ್ಲ

ಕಳೆದ ವಾರದಿಂದ ದಕ್ಷಿಣ ಗಾಜಾದ ಎರಡು ಪ್ರಮುಖ ಪ್ರದೇಶಗಳಿಗೆ ಯಾವುದೇ ಆಹಾರ ಪೂರೈಕೆಯಾಗಿಲ್ಲ. ಗಾಜಾದಲ್ಲಿ ಸುಮಾರು 1.1 ಮಿಲಿಯನ್ ಪ್ಯಾಲೆಸ್ಟೀನಿಯಾದವರು ಹಸಿವಿನಿಂದ ಕಂಗೆಟ್ಟಿದ್ದಾರೆ. ಹಸಿವಿನ ದುರಂತದ ಮಟ್ಟವನ್ನು ಇಲ್ಲಿನ ಜನರು ಎದುರಿಸುತ್ತಿದ್ದಾರೆ ಮತ್ತು ಯುಎನ್ ಪ್ರಕಾರ ಉತ್ತರದಲ್ಲಿ “ಪೂರ್ಣ ಕ್ಷಾಮ” ಉಂಟಾಗಿದೆ ಎನ್ನಲಾಗಿದೆ.

ದಕ್ಷಿಣ ಮತ್ತು ಉತ್ತರ ಗಾಜಾದಲ್ಲಿ ಇಸ್ರೇಲಿ ಮಿಲಿಟರಿ ಕಾರ್ಯಾಚರಣೆಗಳನ್ನು ಹೆಚ್ಚಿಸುವ ಮೂಲಕ ಇತ್ತೀಚಿನ ದಿನಗಳಲ್ಲಿ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಪ್ಯಾಲೆಸ್ಟೀನಿಯಾದವರು ಸ್ಥಳಾಂತರಗೊಂಡಿದ್ದಾರೆ. ಕಳೆದ ವಾರದಲ್ಲಿ ಸುಮಾರು 4,50,000 ಪ್ಯಾಲೆಸ್ಟೀನಿಯನ್ನರನ್ನು ಗಾಜಾದ ದಕ್ಷಿಣದಲ್ಲಿರುವ ರಫಾದಿಂದ ಹೊರಹಾಕಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ಇದನ್ನೂ ಓದಿ: Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

ಇಸ್ರೇಲ್ ನಗರಕ್ಕೆ ತಳ್ಳುವ ಮೊದಲು ರಫಾದಲ್ಲಿ ಸುಮಾರು 1.3 ಮಿಲಿಯನ್ ಜನರು ಆಶ್ರಯ ಪಡೆದಿದ್ದರು. ಇದು ಕೊನೆಯ ಹಮಾಸ್ ಭದ್ರಕೋಟೆ ಎಂದು ಇಸ್ರೇಲ್ ಹೇಳುತ್ತದೆ.

ಗಾಜಾದಲ್ಲಿ ಏಳು ತಿಂಗಳ ಇಸ್ರೇಲಿ ಬಾಂಬ್ ದಾಳಿ ಮತ್ತು ನೆಲದ ಕಾರ್ಯಾಚರಣೆಗಳು 35,000 ಕ್ಕೂ ಹೆಚ್ಚು ಜನರನ್ನು ಕೊಂದಿವೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: 25 ವರ್ಷಗಳ ಹಿಂದೆ ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ಹುಟ್ಟಿಕೊಂಡಿದ್ದು ಹೇಗೆ ಗೊತ್ತೇ?

25 ವರ್ಷಗಳ ಹಿಂದೆ ಬಿಬಿಸಿ ನ್ಯೂಸ್ ಥೀಮ್ ನ ಟ್ಯೂನ್ ಸಂಯೋಜನೆ ಗೊಂಡಿದ್ದು ಹೇಗೆ ಎನ್ನುವ ಕಥೆಯನ್ನು ಬ್ರಿಟಿಷ್ ಮ್ಯೂಸಿಕ್ ಸಂಯೋಜಕ ಮತ್ತು ಸಂಗೀತ ನಿರ್ಮಾಪಕ ಡೇವಿಡ್ ಲೋವ್ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಹೇಳಿರುವುದು ಈಗ ಭಾರೀ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಬ್ರಿಟಿಷ್ ಮ್ಯೂಸಿಕ್ ಸಂಯೋಜಕ (British music composer) ಮತ್ತು ಸಂಗೀತ ನಿರ್ಮಾಪಕ (music producer) ಡೇವಿಡ್ ಲೋವ್ (David Lowe ) ಅವರು 25 ವರ್ಷಗಳ ಹಿಂದೆ ಬಿಬಿಸಿ (BBC) ನ್ಯೂಸ್ ಥೀಮ್ (News theme) ಟ್ಯೂನ್ (tune) ಅನ್ನು ಹೇಗೆ ಸಂಯೋಜಿಸಿದರು ಎಂಬುದರ ಕುರಿತು ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ (social media) ಎಕ್ಸ್ ನಲ್ಲಿ (x) ಹೇಳಿಕೊಂಡಿದ್ದು, ಇದು ಭಾರಿ ವೈರಲ್ (Viral Video) ಆಗಿದೆ.

ರಾಗವನ್ನು ನಿರ್ಮಿಸುವ ಹಂತ-ಹಂತದ ಪ್ರಕ್ರಿಯೆಯನ್ನು ಈ ವಿಡಿಯೋದಲ್ಲಿ ಅವರು ಹೇಳಿಕೊಂಡಿದ್ದು, 25 ವರ್ಷಗಳ ಹಿಂದೆ ನಾನು ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ಅನ್ನು ಸಂಯೋಜಿಸಿದ್ದೇನೆ. ಇದು ಪ್ರತಿದಿನ ಪ್ರಪಂಚದಾದ್ಯಂತ ಪ್ರಸಾರವಾಗುತ್ತಿದೆ. ಸಮಯದ ನಿಖರವಾದ ಬೀಪ್‌ಗಳಿಂದ ಪ್ರಬಲ ಬಾಸ್ ಮತ್ತು ಮುಖ್ಯಾಂಶಗಳಿಗಾಗಿ ನಾಟಕೀಯ ಡ್ರಮ್‌ಗಳವರೆಗೆ… ನಾನು ಇದನ್ನು ಹೀಗೆ ಮಾಡಿದ್ದೇನೆ ಎಂದು ವಿವರಿಸಿದ್ದಾರೆ.

ಬೀಪ್ ಧ್ವನಿಯೊಂದಿಗೆ ಪ್ರಾರಂಭವಾಯಿತು. ಗಡಿಯಾರವು ಸೆಕೆಂಡಿಗೆ ಒಂದು ಬೀಟ್ ಅನ್ನು ಟಿಕ್ ಮಾಡುತ್ತದೆ. ಅನಂತರ ಶಕ್ತಿ ಮತ್ತು ಘನತೆ ಮತ್ತು ಆಳದ ಅರ್ಥವನ್ನು ನೀಡಲು ಅದಕ್ಕೆ ಬಾಸ್ ಲೈನ್ ಅನ್ನು ಸೇರಿಸಿದೆ. ಧ್ವನಿಯನ್ನು ಹೆಚ್ಚಿಸಲು ಬಾಸ್ ಡ್ರಮ್ಸ್ ಮತ್ತು ಕಿಕ್ ಅನ್ನು ಜೊತೆಗೂಡಿಸಿದೆ ಎಂದವರು ವಿವರಿಸಿದ್ದಾರೆ.

ನಾವು ಮುಖ್ಯಾಂಶಗಳಿಗೆ ದೊಡ್ಡ ಧ್ವನಿಯನ್ನು ಬಯಸಿದ್ದೇವೆ. ಅದಕ್ಕಾಗಿ ಈ ದೊಡ್ಡ ಡ್ರಮ್‌ನೊಂದಿಗೆ ಬಂದಿದ್ದೇವೆ ಎಂದ ಅವರು, ಆ ಸಾಂಪ್ರದಾಯಿಕ ಬಿಬಿಸಿ ನ್ಯೂಸ್ ಥೀಮ್ ಅನ್ನು ರಚಿಸಲು ಸ್ವರಮೇಳಗಳು, ಹೆಚ್ಚಿನ ಸ್ಟ್ರಿಂಗ್ ಮತ್ತು ಫೇಡ್ ಅನ್ನು ಸೇರಿಸಲಾಗಿದೆ ಎಂದು ಲೋವ್‌ ತಿಳಿಸಿದರು.

ವೈರಲ್ ಆಗಿದ್ದು ಯಾವಾಗ?

ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಟಿಕ್‌ಟಾಕ್ ಸೃಷ್ಟಿಕರ್ತ ರಾಚೆಲ್ ಲಿಯರಿ ಅವರು ಸಾಮಾಜಿಕ ಮಾಧ್ಯಮದಾದ್ಯಂತ ಲಕ್ಷಾಂತರ ಬಾರಿ ವೀಕ್ಷಿಸಲ್ಪಟ್ಟ ವಿಡಿಯೋದಲ್ಲಿ ಸಂಗೀತದೊಂದಿಗೆ ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ವೈರಲ್ ಆಯಿತು.

ಡೇವಿಡ್ ಲೋವ್ ಅವರು 25 ವರ್ಷಗಳ ಹಿಂದೆ ಬಿಬಿಸಿ ಥೀಮ್ ಟ್ಯೂನ್ ಅನ್ನು ಹೇಗೆ ಸಂಯೋಜಿಸಿದ್ದಾರೆ ಎಂಬುದರ ವಿವರಣೆಯನ್ನು ಒಳಗೊಂಡಿರುವ ವಿಡಿಯೋವನ್ನು ಮೇ 10 ರಂದು ಹಂಚಿಕೊಂಡಿದ್ದಾರೆ. ಅಂದಿನಿಂದ ಇದು 7.5 ಲಕ್ಷ ವೀಕ್ಷಣೆಗಳನ್ನು ಗಳಿಸಿದೆ ಮತ್ತು ಇನ್ನೂ ಎಣಿಕೆಯಲ್ಲಿದೆ. ಪೋಸ್ಟ್ 5,600 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು ಹಲವಾರು ಕಾಮೆಂಟ್‌ಗಳನ್ನು ಸ್ವೀಕರಿಸಿದೆ.


ಪ್ರತಿಕ್ರಿಯೆಗಳು ಹೇಗಿವೆ?

ಇದು ತುಂಬಾ ಅದ್ಭುತವಾಗಿದೆ. ನನಗೆ, ಕನಿಷ್ಠ ಮೇಲಿನ ಪದರವು ಕೊನೆಯಲ್ಲಿ ಸ್ವರಮೇಳವನ್ನು ಬದಲಾಯಿಸುವುದರಿಂದ ಪಿಪ್‌ಗಳು ಟಿಪ್ಪಣಿಯನ್ನು ಬದಲಾಯಿಸುವಂತೆ ತೋರುತ್ತಿದೆ ಎಂದೊಬ್ಬರು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಲೋವ್, ಅದನ್ನು ಗುರುತಿಸಿದ್ದಕ್ಕಾಗಿ ತಾನು ಸಂತೋಷಪಡುತ್ತೇನೆ. ಪಿಪ್ ಒಂದೇ ಟಿಪ್ಪಣಿಯಲ್ಲಿ ಸ್ಥಿರವಾಗಿರುತ್ತದೆ ಮತ್ತು ಸ್ವರಮೇಳಗಳು ಅದರ ಸುತ್ತಲೂ ಬದಲಾಗುತ್ತವೆ. ಒಂದೇ ಸ್ಥಿರ ದಿಕ್ಕಿನ ಭಾವನೆಯನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

ಇದಕ್ಕೆ ಸ್ವಲ್ಪವೂ ವಯಸ್ಸಾಗಿಲ್ಲ ಎಂಬ ಅಂಶದಿಂದ ಅದರ ಶಕ್ತಿಯನ್ನು ತೋರಿಸುತ್ತದೆ. ಇನ್ನೂ ತಾಜಾವಾಗಿ ಧ್ವನಿಸುತ್ತದೆ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದು, ಅದ್ಭುತ! ಯಾವುದೇ ಸುದ್ದಿ ಕಾರ್ಯಕ್ರಮಕ್ಕೆ ಇದುವರೆಗಿನ ಅತ್ಯುತ್ತಮ ಥೀಮ್ ಟ್ಯೂನ್ ಎಂದು ಹೇಳಿದ್ದಾರೆ.

ನಾನು ಯಾವಾಗಲೂ ನಿಮ್ಮ ಕೆಲಸವನ್ನು ಆನಂದಿಸಿದೆ. ಡೇವಿಡ್, ಇದು ತುಂಬಾ ಚೆನ್ನಾಗಿದೆ. ಆಲ್ ದಿ ಬೆಸ್ಟ್ ಎಂದು ಇನ್ನೊಬ್ಬರು ಕಾಮೆಂಟ್‌ನಲ್ಲಿ ಸೇರಿಸಿದ್ದಾರೆ.

Continue Reading

ಬೆಂಗಳೂರು

Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

Silicon City Hospital: ಲಕ್ಷದಲ್ಲಿ ಇಬ್ಬರಲ್ಲಿ ಕಾಣಿಸಿಕೊಳ್ಳುವ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಗೆ ಸಿಲಿಕಾನ್‌ ಸಿಟಿ ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ, ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ. ಬಾಲಕಿ ಉಳಿಸಲು ಆಗಲ್ಲ ಎಂದು ಕೈಚೆಲ್ಲಿದ್ದ ದೊಡ್ಡ ಆಸ್ಪತ್ರೆಗಳಿಗೂ ಅಚ್ಚರಿ ಮೂಡಿಸುವುದರೊಂದಿಗೆ ಮೆಚ್ಚುಗೆಯನ್ನು ಪಡೆದಿದ್ದಾರೆ.

VISTARANEWS.COM


on

By

Silicon City Hospital doctors successful surgery on girl suffering from Arterio Venus malpermation
Koo

ಬೆಂಗಳೂರು: ಮೆದುಳಿನ ರಕ್ತನಾಳ ಒಡೆದು ರಕ್ತ ಸೋರುವ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯ ಪ್ರಾಣವನ್ನು ಸಿಲಿಕಾನ್‌ ಸಿಟಿ ಆಸ್ಪತ್ರೆ ವೈದ್ಯರು (Silicon City Hospital) ಉಳಿಸಿದ್ದಾರೆ. ಒಂದು ಲಕ್ಷದಲ್ಲಿ ಇಬ್ಬರಿಗೆ ಮಾತ್ರ ಬರುವ ಈ ಅಪರೂಪದ ಕಾಯಿಲೆಯು ಬಾಲಕಿಗೆ ಕೊನೆ ಹಂತದಲ್ಲಿತ್ತು. ಇದನ್ನೇ ಸವಾಲಾಗಿ ಸ್ವೀಕರಿಸಿದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಬಾಲಕಿ ಜೀವ ಉಳಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನೆರನಹಳ್ಳಿ ಗ್ರಾಮದ ನೆರನಹಳ್ಳಿಯ ಬಾಬು ಮತ್ತು ಲಾವಣ್ಯ ದಂಪತಿ ಮಗಳು ಸ್ನೇಹಾ ಅಪಾಯದಿಂದ ಪಾರಾದವಳು . ಕಳೆದ ಮೇ 3ರಂದು ಚೆನ್ನಾಗಿದ್ದ ಸ್ನೇಹಾ ಇದ್ದಕ್ಕಿದ್ದಂತೆ ವಾಂತಿ ಮಾಡಿಕೊಂಡು ಒದ್ದಾಡಿದ್ದಳು. ಮಗಳ ಪರಿಸ್ಥಿತಿ ಕಂಡು ಭಯಗೊಂಡ ಪೋಷಕರು ಮುಳಬಾಗಿಲಿನ ಖಾಸಗಿ‌ ಆಸ್ಪತ್ರೆಗೆ ತೋರಿಸಿದ್ದರು. ಆದರೆ ಅಲ್ಲಿನ ವೈದ್ಯರು ನಿಮ್ಮ ಮಗಳಿಗೆ ನರರೋಗಕ್ಕೆ ಸಂಬಂಧಿಸಿದ ಕಾಯಿಲೆ ಇದೆ ಎಂದಿದ್ದರು.

ತಡ ಮಾಡದೆ ಅಲ್ಲಿಂದ ಬೆಂಗಳೂರಿಗೆ ಮಗಳು ಸ್ನೇಹಾಳನ್ನು ಕರೆತಂದು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ವೇಳೆ ತಲೆ ಮೆದುಳಿನ ರಕ್ತನಾಳ ಒಡೆದು ರಕ್ತ ಸೋರುವ ಈ ಕಾಯಿಲೆ ಇದೆ ಎಂದು ಗೊತ್ತಾಗಿತ್ತು. ಸ್ನೇಹಾಳಿಗೆ ಬಂದ ಈ ಕಾಯಿಲೆ ಅದಾಗಲೇ ಯಾರಿಗೂ ತಿಳಿಯದಂತೆ ಕೊನೆ ಹಂತ ತಲುಪಿತ್ತು. ಹೀಗಾಗಿ ನಿಮ್ಹಾನ್ಸ್‌ ವೈದ್ಯರು ನಿಮ್ಮ ಮಗಳನ್ನು ಬದುಕಿಸುವುದು ಕಷ್ಟ ವಾಪಸ್‌ ಕರೆದುಕೊಂಡು ಹೋಗಿ ಎಂದು ಕೈ ಚೆಲ್ಲಿದ್ದರು.

ಇದರಿಂದ ಮತ್ತಷ್ಟು ಗಾಬರಿಗೊಂಡ ಬಾಬು, ಲಾವಣ್ಯ ದಂಪತಿಗೆ ಆ್ಯಂಬುಲೆನ್ಸ್ ಚಾಲಕ ಸಮಾಧಾನಪಡಿಸಿದ್ದಾರೆ. ಬಳಿಕ ಹೊಸಕೋಟೆಯಲ್ಲಿರುವ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಹೋಗುವಂತೆ ಹೇಳಿದ್ದಾರೆ. ನುರಿತ ವೈದ್ಯರು ಇರುವ ನಿಮ್ಹಾನ್ಸ್‌ ಆಸ್ಪತ್ರೆಯಲ್ಲೆ ಮಗುವನ್ನು ಬದುಕಿಸುವುದು ಕಷ್ಟ ಎಂದಿರುವಾಗ ಬೇರೊಂದು ಆಸ್ಪತ್ರೆಗೆ ಹೋಗಿ ಏನು ಪ್ರಯೋಜನ ಎಂದು ಸ್ನೇಹಿತರು, ಸಂಬಂಧಿಕರು ಹೇಳಿದ್ದಾರೆ. ಆದರೆ ಮಗಳು ಉಳಿಯುತ್ತಾಳೆ ಎಂದಾಗ ಬಾಬು, ಲಾವಣ್ಯ ದಂಪತಿ ಕ್ಷಣವೂ ಯೋಚಿಸದೇ ಸಿಲಿಕಾನ್‌ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

Silicon City Hospital doctors

ಇದನ್ನೂ ಓದಿ: Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆ ವೈದ್ಯರಾದ ಡಾ.ಸುಪ್ರಿತ್ ಮತ್ತು ಡಾ.ಮನೋಹರ್‌ರವರ ನರರೋಗ ತಜ್ಞರ ತಂಡ, ಅಚ್ಚರಿ ಪಡುವ ರೀತಿ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿ ಮಗುವಿನ ಜೀವ ಉಳಿಸಿದ್ದಾರೆ.

Silicon City Hospital doctors

ವೈದ್ಯ ಲೋಕದಲ್ಲಿ ಅಚ್ಚರಿ ಎನಿಸುವ ಅನೇಕ‌ ಕಾಯಿಲೆಗಳಿವೆ. ಒಂದು ಕಡೆ ವೈದ್ಯರಿಗೆ ಕೆಲವು‌‌ ಕಾಯಿಲೆ ಸವಾಲಾದರೆ, ಕೆಲವು ಕಾಯಿಲೆಯ ಸಕ್ಸಸ್ ರೇಟ್ ವೈದ್ಯರನ್ನು ಮತ್ತಷ್ಟು ಒಳ್ಳೆಯ ಕೆಲಸ ಮಾಡಲು ಪ್ರೇರೇಪಿಸುತ್ತದೆ. ಹೊಸಕೋಟೆ ಸಿಲಿಕಾನ್ ಸಿಟಿ ವೈದ್ಯರ ಸೇವೆಯೇ ಸಾಕ್ಷಿಯಾಗಿದೆ.

ಲಕ್ಷದಲ್ಲಿ ಇಬ್ಬರಿಗೆ ಕಾಣಿಸಿಕೊಳ್ಳುವ “ಅರ್ಟೆರಿಯೊ ವೀನಸ್ ಮಾಲ್ಪರ್ಮೇಷನ್- Alterio Venous Malformation (ಮೆದುಳು ನರಗಳಲ್ಲಿ ಗುಳ್ಳೆಗಳಾಗಿ‌ ಒಡೆದು ಹೋಗಿ ರಕ್ತ ಸೋರುವ ಕಾಯಿಲೆ) ಎಂಬ ಕಾಯಿಲೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಡು ಬಡವರಾದ ಅಂಗವಿಕಲರಾದ ಬಾಬು ಲಾವಣ್ಯ ದಂಪತಿ‌ ಇನ್ನೇನು ನಮ್ಮ ಒಬ್ಬಳೆ ಮಗಳು ನಮ್ಮಿಂದ ದೂರ ಆಗುತ್ತೆ ಎಂಬ ಆತಂಕವನ್ನು ಸಿಲಿಕಾನ್ ಸಿಟಿ ಆಸ್ಪತ್ರೆ ವೈದ್ಯರು ದೂರ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

KL Rahul: ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಇದರ ಬೆನ್ನಲ್ಲೇ ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

KL Rahul
Koo

ಲಕ್ನೋ: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ 10 ವಿಕೆಟ್​ಗಳ ಹೀನಾಯ ಸೋಲು ಕಂಡ ಬೇಸರದಲ್ಲಿ ಸಿಟ್ಟಿಗೆದ್ದ ಫ್ರಾಂಚೈಸಿ ಮಾಲಿಕ ಸಂಜೀವ್ ಗೋಯೆಂಕಾ(Sanjiv Goenka) ಮೈದಾನದಲ್ಲೇ ನಾಯಕ ಕೆ.ಎಲ್​ ರಾಹುಲ್(KL Rahul)​ ಜತೆ ಜಗಳವಾಡಿದ್ದರು. ಈ ಘಟನೆ ಬಳಿಕ ಅನೇಕ ಮಾಜಿ ಆಟಗಾರರು ಗೋಯೆಂಕಾ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಗೆ ಸಂಬಂಧಿಸಿ ರಾಹುಲ್​ ಲಕ್ನೋ ತಂಡ ತೊರೆಯಲಿದ್ದಾರೆ, ಆರ್​ಸಿಬಿ ಸೇರಲಿದ್ದಾರೆ, ತಂಡದ ಆಟಗಾರರೊಂದಿಗೆ ಪ್ರಯಾಣಿಸದೆ ಪ್ರತ್ಯೇಕವಾಗಿ ಪ್ರಯಾಣಿಸಿದ್ದಾರೆ ಹೀಗೆ ಹಲವು ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಈ ಎಲ್ಲ ಊಹಾಪೋಹಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ.

ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಈ ಮೂಲಕ ನಮ್ಮ ಮಧ್ಯೆ ಯಾವುದೇ ಮುನಿಸು ಇಲ್ಲ ಎನ್ನುವ ಸಂದೇಶ ನೀಡಿದಂತಿದೆ. ಸದ್ಯ ವೈರಲ್​ ಆಗುತ್ತಿರುವ ಫೋಟೊದಲ್ಲಿ ರಾಹುಲ್​ ಅವರನ್ನು ಗೋಯೆಂಕಾ ತಬ್ಬಿಕೊಂಡಿರಿವಂತೆ ಕಾಣುತ್ತಿದೆ. ರಾಹುಲ್​ ಕೂಡ ನಗುಮುಗದಿಂದಲೇ ಕಾಣಿಸಿಕೊಂಡಿದ್ದಾರೆ. ಆದರೆ, ಗೋಯೆಂಕಾ ಅವರ ಮುಖ ಮಾತ್ರ ಸ್ಪಷ್ಟವಾಗಿ ಗೋಚರಿಸಿಲ್ಲ. ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ರಾಹುಲ್​ ಮತ್ತು ಗೋಯೆಂಕಾ ನಡುವಿನ ಮುನಿಸು ಶಮನವಾದಂತೆ ಕಾಣುತ್ತಿದೆ.

ಕಳೆದ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮಾತ್ರವಲ್ಲದೆ, ಬೌಲಿಂಗ್​ನಲ್ಲಿಯೂ ಲಕ್ನೋ ಅತ್ಯಂತ ಕಳಪೆ ಪ್ರದರ್ಶನ ತೋರಿತ್ತು. ಕನಿಷ್ಠ 1 ವಿಕೆಟ್​ ಕೂಡ ಕೀಳಲಾಗದ ಘೋರ ವೈಫಲ್ಯ ಕಂಡಿತ್ತು. ಈ ಹೀನಾಯ ಸೋಲಿನಿಂದ ಸಿಟ್ಟಿಗೆದ್ದ ಸಂಜೀವ್ ಗೋಯೆಂಕಾ ನಾಯಕ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವಂತೆ ಕಂಡುಬಂದಿತ್ತು. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾಗಿದ್ದರೂ, ಈ ದೃಶ್ಯ ನೋಡುವಾಗ ಇದು ಅಸಮಾಧಾನದ ನುಡಿ ಎಂದು ತಿಳಿದು ಬಂದಿತ್ತು.

ಗೋಯೆಂಕಾ ಮಾತಿಗೆ ರಾಹುಲ್ ಪ್ರತಿಕ್ರಿಯೆ ನೀಡಲು ಮುಂದಾದರೂ ಕೂಡ ಇದನ್ನು ಗೋಯೆಂಕಾ ಒಪ್ಪಿಕೊಳ್ಳದೆ ಏನೋ ಬೈಯುತ್ತಿರುವಂತೆ ದೃಶ್ಯದಲ್ಲಿ ಕಂಡುಬಂದಿತ್ತು. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುಗಿತ್ತು. ಈ ಘಟನೆಯಿಂದ ರಾಹುಲ್​ ನೊಂದಿದ್ದಾರೆ ಎನ್ನಲಾಗಿತ್ತು. ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದ ಹೆಡ್ ಮತ್ತು ಅಭಿಷೇಕ್​​ ಸ್ಟೇಡಿಯಂನ ಮೂಲೆ ಮೂಲೆಗೂ ಚೆಂಡನ್ನು ಬಾರಿಸಿದ್ದರು.

ಇದನ್ನೂ ಓದಿ IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ತಂಡ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಪ್ಲೇ ಆಫ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಲಕ್ನೋಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಡೆಲ್ಲಿ ವಿರುದ್ಧ ಗೆದ್ದರೆ ಮಾತ್ರ ಸಾಲದು ಅಂತಿಮ ಪಂದ್ಯದಲ್ಲಿ ಮುಂಬೈ ವಿರುದ್ಧವೂ ಗೆಲುವು ಅತ್ಯಗತ್ಯ.

Continue Reading
Advertisement
Prajwal Revanna Case
ಕರ್ನಾಟಕ7 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

copper mine lift collapse
ಪ್ರಮುಖ ಸುದ್ದಿ33 mins ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ39 mins ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ2 hours ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ2 hours ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ3 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

SSLC Result
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Kangana Ranaut
ಪ್ರಮುಖ ಸುದ್ದಿ8 hours ago

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

heavy wind and rain damaged tree and electricity poles In Jholada Gudde village
ಶಿವಮೊಗ್ಗ8 hours ago

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

ಪ್ರಮುಖ ಸುದ್ದಿ8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ7 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ13 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202415 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202418 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ19 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು20 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌