Cow As National Animal: ಗೋಹತ್ಯೆ ನಿಷೇಧಿಸಿ, ರಾಷ್ಟ್ರೀಯ ಸಂರಕ್ಷಿತ ಪ್ರಾಣಿ ಎಂದು ಘೋಷಿಸಿ:‌ ಅಲಹಾಬಾದ್‌ ಹೈಕೋರ್ಟ್ ನ್ಯಾ. ಶಮೀಮ್‌ ಅಹ್ಮದ್‌ ಸಲಹೆ - Vistara News

ದೇಶ

Cow As National Animal: ಗೋಹತ್ಯೆ ನಿಷೇಧಿಸಿ, ರಾಷ್ಟ್ರೀಯ ಸಂರಕ್ಷಿತ ಪ್ರಾಣಿ ಎಂದು ಘೋಷಿಸಿ:‌ ಅಲಹಾಬಾದ್‌ ಹೈಕೋರ್ಟ್ ನ್ಯಾ. ಶಮೀಮ್‌ ಅಹ್ಮದ್‌ ಸಲಹೆ

Cow As National Animal: ಗೋವುಗಳನ್ನು ಹಿಂದು ಧರ್ಮದಲ್ಲಿ ಆರಾಧಿಸಲಾಗುತ್ತದೆ. ಹಾಗಾಗಿ, ಅವರ ಭಾವನೆಗಳಿಗೆ ಧಕ್ಕೆ ತರಬಾರದು. ಹಾಲು ಕೊಡುವ ಗೋವುಗಳ ಹತ್ಯೆ ನಿಷೇಧಿಸಬೇಕು ಎಂಬುದಾಗಿಯೂ ಕೇಂದ್ರ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ.

VISTARANEWS.COM


on

Rakshit Shetty Richard Anthony Produce By Hombale
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ದೇಶದಲ್ಲಿ ಗೋಹತ್ಯೆ ನಿಷೇಧ ಹಾಗೂ ಗೋವನ್ನು ರಾಷ್ಟ್ರೀಯ ಸಂರಕ್ಷಿತ ಪ್ರಾಣಿ (Cow As National Animal) ಎಂಬುದಾಗಿ ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ಅಲಹಾಬಾದ್‌ ಹೈಕೋರ್ಟ್‌ ಸೂಚಿಸಿದೆ. ಗೋಹತ್ಯೆ ಹಾಗೂ ಸಾಗಣೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ವಿರುದ್ಧ ದಾಖಲಾದ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸಬೇಕು ಎಂದು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಶಮೀಮ್‌ ಅಹ್ಮದ್‌, ಅರ್ಜಿ ರದ್ದುಗೊಳಿಸಿದರು. ಹಾಗೆಯೇ, ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದರು.

“ನಾವು ಜಾತ್ಯತೀತ ರಾಷ್ಟ್ರದಲ್ಲಿ ಬದುಕುತ್ತಿದ್ದೇವೆ. ಹಾಗಾಗಿ, ಎಲ್ಲರೂ ಎಲ್ಲ ಧರ್ಮಗಳನ್ನು ಗೌರವಿಸಬೇಕು. ಹಿಂದು ಧರ್ಮದಲ್ಲಿ ಗೋವುಗಳಿಗೆ ಗೌರವಾನ್ವಿತ ಸ್ಥಾನವಿದೆ. ವೇದಗಳ ಕಾಲದಿಂದಲೂ ಗೋವುಗಳಿಗೆ ಪವಿತ್ರ ಸ್ಥಾನ ನೀಡಲಾಗಿದೆ. ಹಾಲು, ಮೊಸಲು, ಬೆಣ್ಣೆ, ತುಪ್ಪ ಸೇರಿ ಗೋವಿನ ಹಲವು ಉತ್ಪನ್ನಗಳು ಆರ್ಥಿಕತೆಯೊಂದಿಗೆ ಬೆಸೆದುಕೊಂಡಿದೆ” ಎಂದರು.

ಬ್ರಹ್ಮನ ಪುರೋಹಿತರು ಹಾಗೂ ಗೋವುಗಳನ್ನು ಏಕಕಾಲಕ್ಕೆ ಸೃಷ್ಟಿಸಿದ ಎಂದು ಉಲ್ಲೇಖವಿದೆ. ಶಿವನು ಎತ್ತುಗಳನ್ನು ತನ್ನ ವಾಹನವನ್ನಾಗಿ ಮಾಡಿಕೊಂಡ ಎಂಬ ನಂಬಿಕೆಯೂ ಇದೆ. ಹಾಗಾಗಿ, ಹಾಲು ಕೊಡುವ ಹಸುಗಳ ಹತ್ಯೆಯನ್ನು ನಿಷೇಧಿಸಬೇಕು. ಗೋವನ್ನು ರಾಷ್ಟ್ರೀಯ ಸಂರಕ್ಷಿತ ಪ್ರಾಣಿ ಎಂತಲೂ ಘೋಷಿಸಬೇಕು” ಎಂದು ಹೇಳಿದರು. ಗೋವನ್ನು ರಾಷ್ಟ್ರೀಯ ಪ್ರಾಣಿ ಎಂಬುದಾಗಿ ಘೋಷಿಸಬೇಕು ಎಂದು ಹಲವು ವರ್ಷಗಳಿಂದಲೂ ಹಿಂದು ಸಂಘಟನೆಗಳು ಆಗ್ರಹಿಸುತ್ತಲೇ ಇವೆ.

ಇದನ್ನೂ ಓದಿ: ರಾಜ ಮಾರ್ಗ ಅಂಕಣ : ಪುಣ್ಯಕೋಟಿ ಎಂಬ ಗೋವು, ಹುಲಿ ಮತ್ತು ಮುಗ್ಧತೆ! ಆ ಹಸಿದ ಹೆಬ್ಬುಲಿ ಬೆಟ್ಟದಿಂದ ಹಾರಿ ಸತ್ತಿದ್ದು ಸರೀನಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

ರಾಜಸ್ಥಾನದ ಜೈಪುರದಲ್ಲಿ ಮಹಿಳೆಯೊಬ್ಬರು ತಮ್ಮ 22 ವರ್ಷದ ಮಗಳನ್ನೇ ಕೊಂದಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಓದುವುದು ಬಿಟ್ಟು, ಮೂರು ಹೊತ್ತೂ ಮೊಬೈಲ್‌ನಲ್ಲಿಯೇ ಮುಳುಗಿರುತ್ತಿದ್ದ ಮಗಳ ಗೀಳನ್ನು ಸಹಿಸದೆ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರಾಡ್‌ನಿಂದ ಬಿದ್ದ ಪೆಟ್ಟಿನಿಂದಾಗಿ ಯುವತಿಯು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

VISTARANEWS.COM


on

Mobile
Koo

ಜೈಪುರ: ಮಕ್ಕಳಿಂದ ಹಿಡಿದು ಹಿರಿಯರವರೆಗೆ, ಅಕ್ಷರಸ್ಥರಿಂದ ಹಿಡಿದು, ಅನಕ್ಷರಸ್ಥರವರೆಗೆ ಬಹುತೇಕ ಮಂದಿ ದಿನದ ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲಿಯೇ (Mobile Addiction) ಕಳೆಯುತ್ತಾರೆ. ಅದರಲ್ಲೂ, ಶಾಲೆ-ಕಾಲೇಜುಗಳಿಗೆ ತೆರಳುವ ಮಕ್ಕಳು ಮೂರು ಹೊತ್ತೂ ಮೊಬೈಲ್‌ನಲ್ಲಿಯೇ ಮುಳುಗಿರುವುದನ್ನು ಕಂಡು ಪೋಷಕರು ಅಸಮಾಧಾನ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಇಷ್ಟಾದರೂ ಮಕ್ಕಳು ಮೊಬೈಲ್‌ನಲ್ಲೇ ತಲ್ಲೀನರಾಗಿರುತ್ತಾರೆ. ಹೀಗೆ, ರಾಜಸ್ಥಾನದಲ್ಲಿ (Rajasthan) ಮೂರು ಹೊತ್ತೂ ಮೊಬೈಲ್‌ ಹಿಡಿದುಕೊಂಡೇ ಕೂತಿರುತ್ತಿದ್ದನ್ನು ಸಹಿಸದ ಮಹಿಳೆಯೊಬ್ಬರು ತಮ್ಮ 22 ವರ್ಷದ ಮಗಳನ್ನೇ ಕೊಂದು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ರಾಜಸ್ಥಾನದ ಜೈಪುರದಲ್ಲಿ ಸೀತಾ ದೇವಿ ಎಂಬ ಮಹಿಳೆಯು ತಮ್ಮ ಮಗಳನ್ನೇ ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ನಿಕಿತಾ (22) ಮೃತ ಯುವತಿ. ನಿಕಿತಾ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಳು. ಪರೀಕ್ಷೆಗೆ ಓದು, ಮೊಬೈಲ್‌ ನೋಡುವುದು ಬಿಡು. ಮೂರು ಹೊತ್ತೂ ಮೊಬೈಲ್‌ ಹಿಡಿದರೆ ಪರೀಕ್ಷೆಯಲ್ಲಿ ಹೇಗೆ ತೇರ್ಗಡೆಯಾಗ್ತೀಯಾ ಎಂಬುದಾಗಿ ಸೀತಾ ದೇವಿ ಗದರಿದ್ದಾರೆ. ಇದರಿಂದ ಕುಪಿತಗೊಂಡ ನಿಕಿತಾ, ತಾಯಿಗೆ ಎದುರು ಉತ್ತರ ಕೊಟ್ಟಿದ್ದಾಳೆ. ಆಗ ಇಬ್ಬರ ಮಧ್ಯೆ ಜಗಳ ನಡೆದಿದೆ ಎನ್ನಲಾಗಿದೆ.

Mobile

ರಾಡ್‌ನಿಂದ ಹೊಡೆದಾಡಿಕೊಂಡರು

ಮೂರು ಹೊತ್ತೂ ಮೊಬೈಲ್‌ ನೋಡಬೇಡ ಎಂದಿದ್ದಕ್ಕೆ ನಿಕಿತಾ ರೇಗಿದ್ದಾಳೆ. ಇದರಿಂದ ಸೀತಾ ದೇವಿ ಅವರಿಗೆ ಸಿಟ್ಟು ಬಂದಿದೆ. ಪಕ್ಕದಲ್ಲಿದ್ದ ರಾಡ್‌ ತೆಗೆದುಕೊಂಡು ಮಗಳಿಗೆ ಹೊಡೆದಿದ್ದಾರೆ. ತಾಯಿ ಎಂಬುದನ್ನೂ ಲೆಕ್ಕಿಸದ ಮಗಳು ಕೂಡ ರಾಡ್‌ನಿಂದ ತಾಯಿ ಮೇಲೆ ಹಲ್ಲೆ ನಡೆಸಿದ್ದಾಳೆ. ಇಬ್ಬರೂ ರಾಡ್‌ಗಳಿಂದ ಬಡಿದಾಡಿಕೊಂಡಿದ್ದಾರೆ. ಜೈಪುರದ ಮುಂಡಿಯಾರಮ್ಸಾರ್‌ ಎಂಬ ಗ್ರಾಮದಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಇಬ್ಬರೂ ಗಾಯಗೊಂಡ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ ನಿಕಿತಾ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ. ಸೀತಾ ದೇವಿ ವಿರುದ್ಧ ಕೊಲೆ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಧುನಿಕ ಕಾಲಘಟ್ಟದಲ್ಲಿ ಮೊಬೈಲ್‌ ಎಲ್ಲರಿಗೂ ಅವಿಭಾಜ್ಯ ಅಂಗವೇ ಆಗಿದೆ. ಅದರಲ್ಲೂ, ವಿದ್ಯಾರ್ಥಿಗಳಿಗೆ ಮೊಬೈಲ್‌ ಅಚ್ಚುಮೆಚ್ಚಾಗಿದೆ. ಹಾಗೆಯೇ, ಇದು ಶಿಕ್ಷಣಕ್ಕೂ ಅನುಕೂಲ ಕಲ್ಪಿಸಿದೆ. ಆದರೆ, ಮಕ್ಕಳು ಯಾವಾಗಲೂ ಮೊಬೈಲ್‌ ಬಳಸುತ್ತಿದ್ದರೆ, ಅದು ಗೀಳಾಗಿ ಬದಲಾಗಿದ್ದರೆ, ಪೋಷಕರು ಅದರ ಕುರಿತು ಮಕ್ಕಳೊಂದಿಗೆ ಸಮಾಧಾನದಿಂದ ಜಾಗೃತಿ ಮೂಡಿಸಬೇಕು. ಅತಿಯಾಗಿ ಮೊಬೈಲ್‌ ಬಳಸುವುದರಿಂದ ಶಿಕ್ಷಣದ ಮೇಲೆ ಬೀರುವ ಪರಿಣಾಮದ ಮೇಲೆ ತಿಳಿಹೇಳಬೇಕು. ಸಮಾಧಾನದಿಂದ ತಿಳಿಹೇಳದೆ, ಬೈಯುವುದು, ಹೊಡೆಯುವುದು ಮಾಡಿದರೆ ಹಿಂಸೆ, ದುಃಖಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಜೈಪುರದ ಪ್ರಕರಣವೇ ಸಾಕ್ಷಿಯಾಗಿದೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

ಎಲ್ಲಿಯವರೆಗೆ ದುರ್ಬಲರು ನ್ಯಾಯ ಪಡೆಯದೆ, ಸಬಲರು ನ್ಯಾಯಾಂಗದ ಎಲ್ಲ ಲಾಭವನ್ನೂ ಪಡೆಯುತ್ತಾರೋ ಅಲ್ಲಿಯವರೆಗೂ ನ್ಯಾಯಾಂಗಕ್ಕೂ ಪೊಲೀಸ್‌ ವ್ಯವಸ್ಥೆಗೂ ಅಂಟಿದ ಸಬಲ ಪಕ್ಷಪಾತಿ ಎಂಬ ಕಳಂಕ ತಪ್ಪುವುದಿಲ್ಲ. ಅಪರಾಧದ ಗಂಭೀರತೆ ಪರಿಗಣಿಸಿ ಶೀಘ್ರ ಶಿಕ್ಷೆ, ತ್ವರಿತ ನ್ಯಾಯದಾನ ಸಾಧ್ಯವಾಗಬೇಕು.

VISTARANEWS.COM


on

Porsche
Koo

ಪುಣೆಯಲ್ಲಿ ಒಬ್ಬಾತ ಅಪ್ರಾಪ್ತ ವಯಸ್ಕ ಸ್ಪೋರ್ಟ್ಸ್‌ ಕಾರು ಅತಿ ವೇಗದಲ್ಲಿ ಯದ್ವಾತದ್ವಾ ಓಡಿಸಿ ಇಬ್ಬರ ಸಾವಿನ ಕಾರಣನಾಗಿದ್ದಾನೆ. ವಿಶೇಷ ಎಂದರೆ, ಇವನಿಗೆ ಬಂಧನವಾದ 15 ಗಂಟೆಯೊಳಗೇ ಜಾಮೀನು ದೊರೆತಿದೆ. 17 ವರ್ಷದ ಈತ ಶನಿವಾರ ಪುಣೆಯಲ್ಲಿ ಚಲಾಯಿಸುತ್ತಿದ್ದ ಪೋರ್ಷೆ ಕಾರು ಕೋರೆಗಾಂವ್ ಪಾರ್ಕ್‌ ಸಮೀಪ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪುರುಷ ಮತ್ತು ಮಹಿಳೆ ಮೃತಪಟ್ಟಿದ್ದರು. ಇವರಿಬ್ಬರೂ ಐಟಿ ಎಂಜಿನಿಯರ್ ಗಳಾಗಿದ್ದರು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು. ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಆತನಿಗೆ ಜಾಮೀನು ನೀಡಿದ್ದಲ್ಲದೆ, ಕೆಲವು ಸರಳ ಶಿಕ್ಷೆಗಳನ್ನು ಆತನಿಗೆ ವಿಧಿಸಿದೆ. ಯೆರವಾಡಾದ ಸಂಚಾರ ಪೊಲೀಸರೊಂದಿಗೆ 15 ದಿನಗಳ ಕಾಲ ಕೆಲಸ ಮಾಡಬೇಕು, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಬೇಕು, ಕುಡಿತದ ಅಭ್ಯಾಸಕ್ಕೆ ಚಿಕಿತ್ಸೆ ಪಡೆಯಬೇಕು ಮತ್ತು ಮನೋವೈದ್ಯಕೀಯ ಮೌಲ್ಯಮಾಪನ ಹಾಗೂ ಚಿಕಿತ್ಸೆಗೆ ಒಳಗಾಗಬೇಕು ಎಂಬುದು ಷರತ್ತು. ಈತ ಪುಣೆಯ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿಯ ಮಗ ಹಾಗೂ ಪ್ರಭಾವಿ. ಪಬ್‌ನಲ್ಲಿ ಪಾರ್ಟಿ ಮಾಡಿ ಪಾನಮತ್ತನಾಗಿ ಹಿಂದಿರುಗುತ್ತಿದ್ದ. ಸಮಾಧಾನದ ವಿಷಯ ಎಂದರೆ ಪುಣೆ ಪೊಲೀಸರು ಜಾಮೀನು ಆದೇಶದ ವಿರುದ್ಧ ಮೇಲಿನ ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಈ ಪ್ರಕರಣದ ಬಗ್ಗೆ ಜನಾಕ್ರೋಶ ಭುಗಿಲೆದ್ದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಬಾಲಕನ ತಂದೆ ಮತ್ತು ಆತನಿಗೆ ಮದ್ಯ ಪೂರೈಸಿದ ಬಾರ್ ಮಾಲೀಕನನ್ನು ಬಂಧಿಸಿದ್ದಾರೆ. ಇವರು ಕೂಡ ಬೇಗನೆ ಜಾಮೀನಿನ ಮೇಲೆ ಬಿಡುಗಡೆಯಾದರೆ ಆಶ್ಚರ್ಯವಿಲ್ಲ.

ಇದು ನಮ್ಮ ಕಾನೂನು ಹಾಗೂ ನ್ಯಾಯಾಂಗ ವ್ಯವಸ್ಥೆಯ ಛಿದ್ರಗಳು ಎಲ್ಲಿವೆ ಎಂಬುದನ್ನು ಬೆಟ್ಟು ಮಾಡಿ ತೋರಿಸುವಂತಿದೆ. ಕರ್ನಾಟಕದಲ್ಲಿಯೂ ಹೀಗೇ ಆಗಿದೆ; ಲೈಂಗಿಕ ದೌರ್ಜನ್ಯ ಹಾಗೂ ಕಿಡ್‌ನ್ಯಾಪ್‌ ಪ್ರಕರಣದಲ್ಲಿ ಬಂಧಿತರಾದ ಮಾಜಿ ಸಚಿವರು ಆರು ದಿನಗಳಲ್ಲಿ ಜಾಮೀನು ಪಡೆಯುತ್ತಾರೆ. ವಿಶೇಷ ತನಿಖಾ ದಳದ ವಕೀಲರು ಎಷ್ಟು ಪ್ರಯತ್ನಿಸಿದರೂ ಜಾಮೀನು ತಪ್ಪಿಸಲು ಆಗುವುದಿಲ್ಲ. ಪ್ರಕರಣದ ಪ್ರಮುಖ ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಆತನನ್ನು ಕರೆದು ತರುವಲ್ಲಿ ಇಲ್ಲಿನ ಕಾನೂನು ಹಾಗೂ ನ್ಯಾಯಾಂಗ ವ್ಯವಸ್ಥೆಗಳು ಸದ್ಯಕ್ಕೆ ಅಸಹಾಯಕವಾಗಿವೆ. ಇದು ಈ ಪ್ರಕರಣದ ಒಂದು ಮುಖ.

ಪ್ರಭಾವಿಗಳು ಏನು ಮಾಡಿದರೂ ಕಾನೂನಿನ ಕೈಗಳಿಂದ ತಪ್ಪಿಸಿಕೊಳ್ಳುತ್ತಾರೆ ಎಂಬ ಪರಿಸ್ಥಿತಿ ಸೃಷ್ಟಿಯಾಗಿರುವಂತಿದೆ. ನಗರಗಳಲ್ಲಿ ಇತ್ತೀಚೆಗೆ ನಡೆಯುವ ಅಪರಾಧ ಸ್ವರೂಪಗಳನ್ನು ನೋಡುವುದಾದರೆ, ಕುಬೇರರು ಬಡವರ ಮೇಲೆ ಕೈ ಮಾಡುವುದು, ಹಲ್ಲೆ ನಡೆಸಿಯೂ ಪಾರಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ. ಯಮಕನಮರಡಿಯಲ್ಲಿ ಇತ್ತೀಚೆಗೆ ನಡೆದ ಒಂದು ಅಪರಾಧ ನೋಡಿದರೆ, ಸಾಲ ಪಾವತಿ ಮಾಡಲಿಲ್ಲ ಎಂದು ರೈತನ ಪತ್ನಿ- ಮಗನನ್ನು ಒಬ್ಬಾಕೆ ಗೃಹಬಂಧನದಲ್ಲಿಟ್ಟಿದ್ದಾಳೆ. ಇದರಿಂದ ನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಿಗ ಮಹಿಳೆಯ ಮೇಲೆ ಪೊಲೀಸ್‌ ಕ್ರಮ ಕೈಗೊಂಡಂತಿಲ್ಲ. ಶ್ರೀಮಂತರು ಸಾಕಿದ ನಾಯಿಗಳು ಬೀದಿಯಲ್ಲಿ ಬಡವರ ಮಕ್ಕಳನ್ನು ಕಚ್ಚಿ ತಿನ್ನುತ್ತಿವೆ. ನಿರ್ಲಕ್ಷ್ಯದಿಂದ ಮಕ್ಕಳ ಜೀವಕ್ಕೆ ಎರವಾದವರಿಗೂ ಶಿಕ್ಷೆಯಾದ ಹಾಗಿಲ್ಲ.

ಇನ್ನು ಟ್ರಾಫಿಕ್‌ ಅಪರಾಧಗಳ ಕತೆಯೂ ಇದೇ ಮಾದರಿಯಲ್ಲಿದೆ. ಹಿಟ್‌ ಆಂಡ್‌ ರನ್‌ಗಳು ಹೆಚ್ಚುತ್ತಿವೆ. ದೊಡ್ಡ ವಾಹನಗಳನ್ನು ಯದ್ವಾತದ್ವಾ ಓಡಿಸಿ, ದ್ವಿಚಕ್ರ ವಾಹನ ಸವಾರರ ಜೀವ ತೆಗೆಯುವವರ ಸಂಖ್ಯೆ ಹೆಚ್ಚಿದೆ. ರೋಡ್‌ ರೇಜ್‌ ಪ್ರಕರಣಗಳಲ್ಲಿ ಸಬಲರು ದುರ್ಬಲರ ಮೇಲೆ ವಿನಾಕಾರಣ ಹಲ್ಲೆ ಮಾಡುತ್ತಿದ್ದಾರೆ. ಇವರ್ಯಾರಿಗೂ ಶೀಘ್ರವಾಗಿ ಶಿಕ್ಷೆಯಾಗುತ್ತಿಲ್ಲ. ಸುಲಭವಾಗಿ ಜಾಮೀನೂ ದೊರೆಯುತ್ತಿದೆ. ದುರ್ಬಲ ಸೆಕ್ಷನ್‌ಗಳು, ದುರ್ಬಲ ಸಾಕ್ಷಿಗಳು, ವಿಲಂಬಿತ ನ್ಯಾಯಾಂಗ ಪ್ರಕ್ರಿಯೆ ಇವುಗಳಿಂದಾಗಿ ಸಂತ್ರಸ್ತರು ಮತ್ತಷ್ಟು ಸಂತ್ರಸ್ತರೇ ಆಗುತ್ತಿದ್ದಾರೆ. ನ್ಯಾಯದಾನ ವಿಳಂಬವಾದಷ್ಟೂ ಸಾಕ್ಷಿಗಳು, ಕಕ್ಷಿದಾರರು ಕೇಸ್‌ನಲ್ಲಿ ಆಸಕ್ತಿ ಕಳೆದುಕೊಳ್ಳುತ್ತಾರೆ. ಕೆಲವು ದಾಖಲೆ ಪತ್ರಗಳು ನಾಶವಾಗಬಹುದು, ಸಾಕ್ಷಿಗಳು ಇಲ್ಲವಾಗಬಹುದು. ಕಾಲದ ಹೊಡೆತಕ್ಕೆ ಸಿಲುಕಿ, ಪ್ರತಿ ತಿಂಗಳೂ ಕೋರ್ಟಿಗೆ ಅಲೆದು ಹೈರಾಣಾಗುವ ಪರಿಸ್ಥಿತಿಯಿಂದ ರೋಸಿಹೋಗಿ ರಾಜಿ ಮಾಡಿಕೊಂಡ ಎಷ್ಟೋ ಪ್ರಕರಣಗಳು ಇವೆ. ಇದು ನ್ಯಾಯ ಬೇಡವೆಂದಲ್ಲ, ಶಿಕ್ಷೆಗಿಂತಲೂ ನಿಷ್ಕರುಣಿಯಾಗಿರುವ ಕಟಕಟೆಯ ಸಹವಾಸ ಬೇಡವೆಂದು.

ಎಲ್ಲಿಯವರೆಗೆ ದುರ್ಬಲರು ನ್ಯಾಯ ಪಡೆಯದೆ, ಸಬಲರು ನ್ಯಾಯಾಂಗದ ಎಲ್ಲ ಲಾಭವನ್ನೂ ಪಡೆಯುತ್ತಾರೋ ಅಲ್ಲಿಯವರೆಗೂ ನ್ಯಾಯಾಂಗಕ್ಕೂ ಪೊಲೀಸ್‌ ವ್ಯವಸ್ಥೆಗೂ ಅಂಟಿದ ಸಬಲ ಪಕ್ಷಪಾತಿ ಎಂಬ ಕಳಂಕ ತಪ್ಪುವುದಿಲ್ಲ. ಅಪರಾಧದ ಗಂಭೀರತೆ ಪರಿಗಣಿಸಿ ಶೀಘ್ರ ಶಿಕ್ಷೆ, ತ್ವರಿತ ನ್ಯಾಯದಾನ ಸಾಧ್ಯವಾಗಬೇಕು.

ಇದನ್ನೂ ಓದಿ: Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

Continue Reading

ದೇಶ

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

Robert Vadra: ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾದ್ರಾ ಅವರು ಅಮೇಥಿ ಅಥವಾ ರಾಯ್‌ಬರೇಲಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಅವರೀಗ ರಾಜಕೀಯ ಪ್ರವೇಶಿಸುವ ಕುರಿತು ಸ್ಪಷ್ಟನೆ ನೀಡಿದ್ದಾರೆ. “ನಾನು ರಾಜಕೀಯಕ್ಕೆ ಬರುವುದಾದರೆ, ನನ್ನ ಹೆಸರು ಬಳಸಿಕೊಂಡು ಬರುತ್ತೇನೆ. ಗಾಂಧಿ ಕುಟುಂಬದ ಹೆಸರಿನಲ್ಲಿ ರಾಜಕೀಯ ಮಾಡಲ್ಲ” ಎಂದಿದ್ದಾರೆ.

VISTARANEWS.COM


on

Robert Vadra
Koo

ನವದೆಹಲಿ: ದೇಶದ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆಯು (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಈಗಾಗಲೇ ಐದು ಹಂತದ ಮತದಾನ ಮುಕ್ತಾಯಗೊಂಡಿದ್ದು, ಇನ್ನೂ ಎರಡು ಹಂತದ ಮತದಾನ ಬಾಕಿ ಇದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಮಧ್ಯೆಯೇ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ (Priyanka Vadra) ಅವರ ಪತಿ ರಾಬರ್ಟ್‌ ವಾದ್ರಾ (Robert Vadra) ಅವರು ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, “ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ (Gandhi Family) ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ” ಎಂದಿದ್ದಾರೆ.

ಎಎನ್‌ಐ ಜತೆ ಮಾತನಾಡುವಾಗ, ನೀವು ರಾಜಕೀಯ ಪ್ರವೇಶಿಸಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. “ನಾನು ದೇಶದ ಸೇವೆ ಮಾಡುತ್ತಿದ್ದೇನೆ. ನಾನು ರಾಜಕೀಯ ಪ್ರವೇಶಿಸುವುದಿದ್ದರೆ, ನನ್ನ ಸಮಾಜ ಸೇವೆ, ನನ್ನ ಕೆಲಸ ಹಾಗೂ ನನ್ನ ಹೆಸರು ಬಳಸಿ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿಕೊಂಡು ನಾನು ರಾಜಕೀಯ ಪ್ರವೇಶಿಸುವುದಿಲ್ಲ. ಹೀಗೆ ಹೇಳಿದ ಮಾತ್ರಕ್ಕೆ ನಾನು ಗಾಂಧಿ ಕುಟುಂಬದ ಸದಸ್ಯ ಅಲ್ಲ ಎಂಬ ಅರ್ಥವಲ್ಲ. ಆದರೆ, ನನ್ನ ಹೆಸರು ಬಳಸಿಯೇ ನಾನು ರಾಜಕೀಯ ಪ್ರವೇಶಿಸುತ್ತೇನೆ” ಎಂದು ಹೇಳಿದರು.

“ರಾಜಕೀಯದಲ್ಲಿ ಬದಲಾವಣೆಯಾಗಬೇಕಿದೆ. ನಾನು ರೈತರು, ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹೌದು, ಸೋನಿಯಾ ಗಾಂಧಿ ಸೇರಿ ಗಾಂಧಿ ಕುಟುಂಬದ ಹೆಸರು ಬಳಸಿದರೆ, ಅವರಿಂದ ಸಲಹೆ ಪಡೆದರೆ ನನಗೆ ಅನುಕೂಲವಾಗಬಹುದು. ಆದರೆ, ನನ್ನ ಕೆಲಸದಿಂದ ನಾನು ರಾಜಕೀಯಕ್ಕೆ ಬರಲು ಇಷ್ಟಪಡುತ್ತೇನೆ. ಹಾಗಂತ, ರಾಜಕೀಯ ಪ್ರವೇಶಿಸಲು ನಾನು ಸಮಾಜ ಸೇವೆ ಮಾಡುತ್ತಿಲ್ಲ. ಸೇವೆಯು ನನಗೆ ಖುಷಿ ಕೊಡುವ ವಿಚಾರವಾಗಿದೆ” ಎಂದು ಸಂದರ್ಶನದ ವೇಳೆ ಹೇಳಿದರು.

ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಕೂಡ ರಾಬರ್ಟ್‌ ವಾದ್ರಾ ವಾಗ್ದಾಳಿ ನಡೆಸಿದರು. “ಕಳೆದ 10 ವರ್ಷಗಳಿಂದ ದೇಶದ ರಾಜಕೀಯ ವ್ಯವಸ್ಥೆಯನ್ನು ಜನ ನೋಡಿದ್ದಾರೆ. ಅಭಿವೃದ್ಧಿ ಹೊರತುಪಡಿಸಿ, ಧರ್ಮದ ಆಧಾರದ ಮೇಲೆ ರಾಜಕೀಯ ನಡೆಯುತ್ತಿದೆ. ನಾನು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಬಿಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಇ.ಡಿ ದಾಳಿ ನಡೆಯುತ್ತದೆ. ಆದರೆ, ಇದೆಲ್ಲದರ ಮಧ್ಯೆ ನಾನು ಸೇವೆ ಮುಂದುವರಿಸಿದ್ದೇನೆ. ನಾನು ರಾಜಕೀಯಕ್ಕೆ ಬಂದ ತಕ್ಷಣ ಎಲ್ಲವೂ ಬದಲಾಗಲಿದೆ ಎಂದು ಹೇಳುವುದಿಲ್ಲ. ಸೇವೆಗಾಗಿ ನಾನು ರಾಜಕೀಯ ಪ್ರವೇಶಿಸಲು ಬಯಸುತ್ತೇನೆ” ಎಂದು ಹೇಳಿದರು. ರಾಬರ್ಟ್‌ ವಾದ್ರಾ ಅವರು ಅಮೇಥಿ ಅಥವಾ ರಾಯ್‌ಬರೇಲಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Continue Reading

ದೇಶ

Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Narendra Modi: ವಾರಾಣಸಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಬೇಕು. ಇದಕ್ಕಾಗಿ ಮಹಿಳೆಯರು ಕೈಜೋಡಿಸಬೇಕು. ಮತದಾನ ನಡೆಯುವ ದಿನ ಸುಮಾರು 20-25 ಮಹಿಳೆಯರು ಒಗ್ಗೂಡಿ ಮತಗಟ್ಟೆಗಳ ಬಳಿ ತೆರಳಿ. ಡ್ರಮ್‌ ಹಾಗೂ ತಟ್ಟೆಗಳನ್ನು ಬಾರಿಸಿ, ಹಾಡು ಹಾಡಿ ಎಂಬುದಾಗಿ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಜೂನ್‌ 1ರಂದು ವಾರಾಣಸಿಯಲ್ಲಿ ಮತದಾನ ನಡೆಯಲಿದೆ.

VISTARANEWS.COM


on

Narendra Modi
Koo

ವಾರಾಣಸಿ: ಲೋಕಸಭೆ ಚುನಾವಣೆಯ (Lok Sabha Election 2024) 5 ಹಂತದ ಮತದಾನ ಮುಕ್ತಾಯವಾಗಿದೆ. ಇದರೊಂದಿಗೆ ದೇಶಾದ್ಯಂತ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯವಾದಂತಾಗಿದೆ. ಇನ್ನೂ ಎರಡು ಹಂತದ ಮತದಾನ ಬಾಕಿ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿ ಎಲ್ಲ ಪಕ್ಷಗಳ ಪ್ರಮುಖ ನಾಯಕರು, ಅಭ್ಯರ್ಥಿಗಳು ಪ್ರಚಾರ ಕೈಗೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ, ಮತದಾನ ಪ್ರಮಾಣ ಹೆಚ್ಚಿಸಲು ಮಹಿಳೆಯರಿಗೆ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. “ಡ್ರಮ್‌ ಹಾಗೂ ತಟ್ಟೆಗಳನ್ನು ಬಾರಿಸುವ ಮೂಲಕ ಮತದಾನ ಹೆಚ್ಚಿಸಿ” ಎಂದು ವಾರಾಣಸಿ (Varanasi) ಮಹಿಳೆಯರಿಗೆ ಮೋದಿ ಸಲಹೆ ನೀಡಿದ್ದಾರೆ.

“ವಾರಾಣಸಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಬೇಕು. ಇದಕ್ಕಾಗಿ ಮಹಿಳೆಯರು ಕೈಜೋಡಿಸಬೇಕು. ಮತದಾನ ನಡೆಯುವ ದಿನ ಸುಮಾರು 20-25 ಮಹಿಳೆಯರು ಒಗ್ಗೂಡಿ ಮತಗಟ್ಟೆಗಳ ಬಳಿ ತೆರಳಿ. ಡ್ರಮ್‌ ಹಾಗೂ ತಟ್ಟೆಗಳನ್ನು ಬಾರಿಸಿ, ಹಾಡು ಹಾಡಿ. ಬೆಳಗ್ಗೆ 10 ಗಂಟೆಯೊಳಗೆ ಮತಗಟ್ಟೆಯ ಬಳಿ ಹೀಗೆ ಮಾಡಿದರೆ ಖಂಡಿತವಾಗಿಯೂ ಹೆಚ್ಚಿನ ಪ್ರಮಾಣದ ಮತದಾನ ದಾಖಲಾಗುತ್ತದೆ. ಪ್ರತಿಯೊಂದು ಮತಗಟ್ಟೆಗಳಲ್ಲೂ ಹೆಣ್ಣುಮಕ್ಕಳು ಹೀಗೆ ಮಾಡುವ ಮೂಲಕ ಮತದಾನದ ಜಾಗೃತಿ ಮೂಡಿಸಬೇಕು” ಎಂದು ವಾರಾಣಸಿಯಲ್ಲಿ ಮಹಿಳೆಯರಿಗೆ ಮೋದಿ ಕರೆ ನೀಡಿದ್ದಾರೆ.

ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ

ವಾರಾಣಸಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ನರೇಂದ್ರ ಮೋದಿ ಅವರು ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದರು. “ಇಂಡಿಯಾ ಒಕ್ಕೂಟವು ಎಂದಿಗೂ ಮಹಿಳಾ ವಿರೋಧಿ ಮನಸ್ಥಿತಿ ಹೊಂದಿದೆ. ಅವರು ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ವಿರೋಧಿಸಿದರು. ಇಂಡಿಯಾ ಒಕ್ಕೂಟದ ಯಾವುದೇ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೇ ಹೆಚ್ಚು ತೊಂದರೆಯಾಗುತ್ತದೆ. ಹೆಣ್ಣುಮಕ್ಕಳಿಗೆ ತೊಂದರೆಯಾದರೆ, ಹುಡುಗರು ಎಂದ ಮೇಲೆ ತಪ್ಪು ಮಾಡುತ್ತಾರೆ ಎಂದು ಹೇಳುತ್ತಾರೆ. ಆದರೆ, ಯೋಗಿ ಆದಿತ್ಯನಾಥ್‌ ಅವರು ಸಿಎಂ ಆದ ಮೇಲೆ ತಪ್ಪು ಮಾಡುವ ಹುಡುಗರಿಗೆ ತಕ್ಕ ಪಾಠ ಕಲಿಸಿದ್ದಾರೆ. ಇದರಿಂದ ನಮ್ಮ ಸಹೋದರ-ಸಹೋದರಿಯರು ಸುರಕ್ಷಿತವಾಗಿದ್ದಾರೆ” ಎಂದರು.

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಇದನ್ನೂ ಓದಿ: Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Continue Reading
Advertisement
Mobile
ದೇಶ2 hours ago

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

Rameshwaram Cafe Blast
ಕರ್ನಾಟಕ2 hours ago

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

LPL 2024
ಪ್ರಮುಖ ಸುದ್ದಿ3 hours ago

LPL 2024 : ಐಪಿಎಲ್ ಎಫೆಕ್ಟ್​, ಸಿಕ್ಕಾಪಟ್ಟೆ ದುಡ್ಡು ಬಾಚಿದ ಮಹೀಶ್ ಪತಿರಾನಾ

Porsche
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

Hajj pilgrimage
ಬೆಂಗಳೂರು3 hours ago

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

IPL 2024
ಕ್ರೀಡೆ3 hours ago

IPL 2024 : ಕೆಕೆಆರ್​ 4ನೇ ಬಾರಿ ಐಪಿಎಲ್​​ನ​ ಫೈನಲ್​ಗೆ, ಎಸ್ಆರ್​ಎಚ್​ಗೆ ಇನ್ನೊಂದು ಅವಕಾಶ

Robert Vadra
ದೇಶ4 hours ago

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

IPL 2024
ಕ್ರೀಡೆ4 hours ago

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Talking Digital Safety for Teens programme by Meta in Bengaluru
ಕರ್ನಾಟಕ4 hours ago

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ4 hours ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು13 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು15 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌