ಛತ್ತೀಸ್‌ಗಢದಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ 11 ವರ್ಷದ ಬಾಲಕನ ರಕ್ಷಣೆ, 110 ಗಂಟೆಗಳ ಯಶಸ್ವಿ ಕಾರ್ಯಾಚರಣೆ - Vistara News

ಪ್ರಮುಖ ಸುದ್ದಿ

ಛತ್ತೀಸ್‌ಗಢದಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ 11 ವರ್ಷದ ಬಾಲಕನ ರಕ್ಷಣೆ, 110 ಗಂಟೆಗಳ ಯಶಸ್ವಿ ಕಾರ್ಯಾಚರಣೆ

ಛತ್ತೀಸ್‌ಗಢದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 11 ವರ್ಷದ ಬಾಲಕನನ್ನು ವಿಪತ್ತು ನಿರ್ವಹಣೆ ಪಡೆಯ ಸಿಬ್ಬಂದಿ ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ. 110 ಗಂಟೆಗಳ ಕಾರ್ಯಾಚರಣೆ ಯಶಸ್ವಿಯಾಗಿದೆ.

VISTARANEWS.COM


on

rahul sahu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯ್ಪುರ: ಛತ್ತೀಸ್‌ಗಢದಲ್ಲಿ ಬೋರ್‌ವೆಲ್‌ನೊಳಕ್ಕೆ ಆಕಸ್ಮಿಕವಾಗಿ ಬಿದ್ದಿದ್ದ 11 ವರ್ಷದ ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ಎತ್ತಲಾಗಿದೆ. 110 ಗಂಟೆಗಳ ಯಶಸ್ವಿ ಕಾರ್ಯಾಚರಣೆಯಲ್ಲಿ ಬಾಲಕನನ್ನು ರಕ್ಷಿಸಲಾಯಿತು ಎಂದು ಸಿಎಂ ಭೂಪೇಶ್‌ ಬಘೇಲ್‌ ತಿಳಿಸಿದ್ದಾರೆ.

ಛತ್ತೀಸ್‌ಗಢದ ಪಿಹ್ರಿಡ್‌ ಗ್ರಾಮದಲ್ಲಿ 11 ವರ್ಷದ ಬಾಲಕ ರಾಹುಲ್ ಸಾಹು ಆಟವಾಡುತ್ತಿದ್ದಾಗ ಕೊಳವೆ ಬಾವಿಗೆ ಶುಕ್ರವಾರ ಬಿದ್ದಿದ್ದ. ರಕ್ಷಣಾ ತಂಡದ ಸಾಹಸ, ಸ್ಥಳೀಯರ ಪ್ರಾರ್ಥನೆಯಿಂದ ರಾಹುಲ್‌ ಸಾಹು‌ ಸುರಕ್ಷಿತವಾಗಿ ಪಾರಾಗಿದ್ದಾನೆ ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಯ 500ಕ್ಕೂ ಹೆಚ್ಚು ಸಿಬ್ಬಂದಿ ಈ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದರು. ಬಾಲಕ ಕೊಳವೆ ಬಾವಿಗೆ ಬಿದ್ದ ಪರಿಣಾಮ ಬಳಲಿದ್ದು, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಬೋರ್‌ವೆಲ್‌ ಪಕ್ಕ 70 ಅಡಿ ಆಳದ ಗುಂಡಿ ತೆಗೆದ ಬಳಿಕ 15 ಅಡಿ ಸುರಂಗ ಕೊರೆದು ಬಾಲಕನನ್ನು ರಕ್ಷಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

Prajwal Revanna Case: ಪ್ರಜ್ವಲ್‌ ರೇವಣ್ಣ ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು. ಈಗ ತಮ್ಮ ಹೆಸರನ್ನು ಬಳಕೆ ಮಾಡದಂತೆ ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

VISTARANEWS.COM


on

Prajwal Revanna Case Who leaked the pen drive Devaraje Gowda gives evidence to SIT
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಅಪರಹಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದರಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ ಇಂದು ಕೂಡ ಜಾಮೀನು ದೊರೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇನ್ನೂ ನಾಲ್ಕು ದಿನ ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವುದು ಅನಿವಾರ್ಯವಾಗಲಿದೆ.

ಭಾನುವಾರ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆ ವೇಳೆ ರೇವಣ್ಣ ಅವರನ್ನು ನ್ಯಾಯಾಧೀಶರು ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ ನೀಡಿದ್ದರು. ಹೀಗಾಗಿ ತನಿಖಾ ಭಾಗವಾಗಿ ನಾಲ್ಕು ದಿನಗಳ ಕಾಲ ರೇವಣ್ಣ ಎಸ್‌ಐಟಿ ವಶದಲ್ಲಿ ಇರಲಿದ್ದಾರೆ.

ಇಂದು ರೇವಣ್ಣ ಪರ ವಕೀಲರು ಬೇಲ್ ಅರ್ಜಿ ಸಲ್ಲಿಸಿದರೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಕಸ್ಟಡಿಯಲ್ಲಿರುವ ಅವರಿಗೆ ಹಿನ್ನೆಲೆ ಜಾಮೀನು ಕೊಟ್ಟರೆ ತನಿಖೆಗೆ ಹಿನ್ನಡೆಯಾಗಬಹುದು ಎಂದು ಎಸ್‌ಐಟಿ ವಾದ ಮಂಡಿಸಲಿದೆ. ಇದೇ ಕಾರಣಕ್ಕೆ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕಸ್ಟಡಿ ಅವಧಿ ನಂತರವೇ ಜಾಮೀನು ಭಾಗ್ಯ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.

ಒತ್ತಡದಲ್ಲಿರುವ ರೇವಣ್ಣ

ಇನ್ನು ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಸುಸ್ತಾಗಿರುವಂತೆ ಅವರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಎಸ್ಐಟಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸಲಿಲ್ಲ. ಇಂದು ಬೆಳಗ್ಗೆ ಮತ್ತೆ ಪ್ರಕರಣದ ಬಗ್ಗೆ ಪ್ರಶ್ನಿಸಲಿದ್ದಾರೆ.

ರೇವಣ್ಣ ಬಂಧನವಾಗಿ 24 ಗಂಟೆ ಕಳೆದರೂ ಅವರನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಆಗಮಿಸಿಲ್ಲ. ಯಾವಾಗಲೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೇವಣ್ಣ ಸದ್ಯ ಒಬ್ಬಂಟಿಯಾಗಿದ್ದಾರೆ. ಶನಿವಾರ ಬಂಧನವಾದಾಗಿನಿಂದ ಸರಿಯಾಗಿ ನಿದ್ದೆ ಮಾಡದೇ ತಲೆ ಕೆಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು

ಇಂದು (ಮೇ 6) ಸ್ಥಳ ಮಹಜರಿಗೆ ರೇವಣ್ಣ ಅವರನ್ನು ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ ಸಂತ್ರಸ್ತೆಯನ್ನು ಅಕ್ರಮವಾಗಿ ಕೂಡಿಟ್ಟಿ ಸ್ಥಳ ತೋಟದ ಮನೆಯಲ್ಲಿಯೂ ಮಹಜರು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿರುವ ಎಸ್‌ಐಟಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ರೇವಣ್ಣ ಜತೆ ಚರ್ಚೆ ನಡೆಸಿದ ವಕೀಲರು

ಎಚ್‌.ಡಿ. ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವ ಕಾರಣ ಅವರನ್ನು ವಕೀಲ ಮೂರ್ತಿ ಡಿ ನಾಯಕ್ ಭೇಟಿ ಮಾಡಿ ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಪ್ರಕರಣ ಸಂಬಂಧ ವಕೀಲರ ಜತೆ ರೇವಣ್ಣ ಚರ್ಚೆ ನಡೆಸಿದ್ದಾರೆ. ಜಾಮೀನು ಸಲ್ಲಿಕೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ.

Continue Reading

ಶಿಕ್ಷಣ

CISCE Results 2024: ಸಿಐಎಸ್‌ಸಿಇಯ 10 & 12ನೇ ತರಗತಿಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

CISCE Results 2024: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ 10ನೇ ತರಗತಿಯ ಐಸಿಎಸ್ಇ ಮತ್ತು 12ನೇ ತರಗತಿ ಐಎಸ್‌ಸಿ ಫಲಿತಾಂಶವನ್ನು ಪ್ರಕಟಿಸಿದೆ. ಪ್ರಕಟಿಸಿದೆ. ಈ ಸಿಐಎಸ್‌ಸಿ 10 ಮತ್ತು 12ನೇ ತರಗತಿ ಫಲಿತಾಂಶಗಳನ್ನು ಸಿಐಎಸ್‌ಸಿ ಅಧಿಕೃತ ವೆಬ್‌ಸೈಟ್‌ನಲ್ಲಿ cisce.org. ಮತ್ತು results.cisce.org.ನಲ್ಲಿ ವೀಕ್ಷಿಸಬಹುದು.

VISTARANEWS.COM


on

ICSE Results 202
Koo

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) 10ನೇ ತರಗತಿಯ ಐಸಿಎಸ್ಇ (ICSE) ಮತ್ತು 12ನೇ ತರಗತಿ ಐಎಸ್‌ಸಿ (ISC) ಫಲಿತಾಂಶವನ್ನು ಇಂದು (ಮೇ 6) ಬೆಳಿಗ್ಗೆ ಪ್ರಕಟಿಸಿದೆ. ಈ ಸಿಐಎಸ್‌ಸಿ 10 ಮತ್ತು 12ನೇ ತರಗತಿ ಫಲಿತಾಂಶಗಳನ್ನು ಸಿಐಎಸ್‌ಸಿ ಅಧಿಕೃತ ವೆಬ್‌ಸೈಟ್‌ನಲ್ಲಿ cisce.org. ಮತ್ತು results.cisce.org.ನಲ್ಲಿ ವೀಕ್ಷಿಸಬಹುದು.

ಈ ವರ್ಷ ಸುಮಾರು 2.5 ವಿದ್ಯಾರ್ಥಿಗಳು ಸಿಐಎಸ್‌ಸಿಇಯ 10 ಮತ್ತು 12ನೇ ತರಗತಿಯ ಪರೀಕ್ಷೆ ಬರೆದಿದ್ದರು. 10ನೇ ತರಗತಿ ಪರೀಕ್ಷೆ 2024ರ ಫೆಬ್ರವರಿ 21ರಂದು ಆರಂಭವಾಗಿ ಮಾರ್ಚ್‌ 28ರಂದು ಮುಕ್ತಾಯವಾಗಿತ್ತು. ಇನ್ನು 12ನೇ ತರಗತಿ ಪರೀಕ್ಷೆ 2024ರ ಫೆಬ್ರವರಿ 12ರಂದು ಆರಂಭವಾಗಿ ಏಪ್ರಿಲ್‌ 4ರಂದು ಮುಗಿದಿತ್ತು. ಪ್ರಶ್ನೆ ಪತ್ರಿಕೆಯನ್ನು ಓದಲು ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ ನೀಡಲಾಗಿತ್ತು.

ಫಲಿತಾಂಶ ವೀಕ್ಷಿಸುವ ವಿಧಾನ

  • ಸಿಐಎಸ್‌ಸಿಇಯ ಅದಿಕೃತ ವೆಬ್‌ಸೈಟ್‌ results.cisce.org.ಗೆ ಭೇಟಿ ನೀಡಿ.
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದ ಮೇಲ್ಭಾಗದಲ್ಲಿ ಕಾಣಿಸುವ Course ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ICSE ಅಥವಾ ISC ಪೈಕಿ ಒಂದನ್ನು ಆರಿಸಿ.
  • ಕೋರ್ಸ್‌ ಕೋಡ್‌, ಅಭ್ಯರ್ಥಿಯ ಯುಐಡಿ (UID), ಇಂಡಕ್ಸ್‌ ನಂಬರ್‌ ಮತ್ತು ಕ್ಯಾಪ್ಚಾವನ್ನು ನಮೂದಿಸಿ.
  • Show Results ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿ ಮತ್ತು ಪ್ರಿಂಟ್‌ ಔಟ್‌ ತೆಗೆದಿಡಿ.

ಸಿಐಎಸ್‌ಸಿಇ ಈ ಬಾರಿ ಹೊಸ ಸೌಲಭ್ಯವನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ತಮ್ಮ ಐಸಿಎಸ್ಇ ಮತ್ತು ಐಎಸ್‌ಸಿ ಫಲಿತಾಂಶಗಳ ಮರು ಪರಿಶೀಲನೆ ಮತ್ತು ಮರು ಮೌಲ್ಯಮಾಪನವನ್ನು ಕೋರಲು ಅನುವು ಮಾಡಿಕೊಟ್ಟಿದೆ. ಮರುಪರಿಶೀಲನೆಗೆ ಪ್ರತಿ ಪತ್ರಿಕೆಗೆ 1,000 ರೂ. ಮರು ಮೌಲ್ಯಮಾಪನಕ್ಕೆ 1,500 ರೂ. ಶುಲ್ಕ ನಿಗದಿ ಪಡಿಸಲಾಗಿದೆ. ಫಲಿತಾಂಶ ಘೋಷಣೆಯ ನಂತರ ಈ ಆಯ್ಕೆಯು ಪರಿಷತ್ತಿನ ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದೆ. ಇದಲ್ಲದೆ ಐಸಿಎಸ್ಇ ಮತ್ತು ಐಎಸ್‌ಸಿ ಕಂಪಾರ್ಟ್‌ಮೆಂಟ್‌ ಪರೀಕ್ಷೆಗಳನ್ನು ನಿಲ್ಲಿಸಲು ಸಿಐಎಸ್‌ಇ ನಿರ್ಧರಿಸಿದೆ. ಬದಲಾಗಿ ವಿದ್ಯಾರ್ಥಿಗಳಿಗೆ ಎರಡು ವಿಷಯಗಳಲ್ಲಿ ಸುಧಾರಣಾ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಅವಕಾಶ ನೀಡಿದೆ.

ಫಲಿತಾಂಶದ ವಿವರ

10ನೇ ತರಗತಿ

  • ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ: 2,43,617
  • ತೇರ್ಗಡೆಯಾದವರು: 2,42,328
  • ಪಾಸ್‌ ಆದ ಶೇಕಡಾವಾರು: 99.47%

12ನೇ ತರಗತಿ

  • ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ: 99,901
  • ತೇರ್ಗಡೆಯಾದವರು: 98,088
  • ಪಾಸ್‌ ಆದ ಶೇಕಡಾವಾರು: 98.19%

ಕೆಸೆಟ್‌- 2023ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಕೆಸೆಟ್‌ ಪರೀಕ್ಷೆ- 2023ರ ತಾತ್ಕಾಲಿಕ ಸ್ಕೋರ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ʼಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ – ಕೆಸೆಟ್‌ʼ (KSET – Karnataka State Eligibility Test) ಇದರ 2023ನೇ ಸಾಲಿನ ಪರೀಕ್ಷೆಯನ್ನು ಕಳೆದ ಜನವರಿ ತಿಂಗಳಲ್ಲಿ ನಡೆಸಲಾಗಿತ್ತು. ಪರೀಕ್ಷೆಗೆ ಬರೆದವರು ಈಗ ತಮ್ಮ ತಾತ್ಕಾಲಿಕ ಸ್ಕೋರ್‌ ಪಟ್ಟಿಯನ್ನು ಚೆಕ್‌ ಮಾಡಿಕೊಳ್ಳಬಹುದು.

ಪ್ರಸ್ತುತ ಕೆಇಎ ಬಿಡುಗಡೆ ಮಾಡಿರುವ ಕೆಸೆಟ್‌ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ವಿವರವಾದ ಮಾಹಿತಿಗಳೊಂದಿಗೆ ಸಲ್ಲಿಸಲು ಮೇ 10, 2024 ರವರೆಗೆ ಅವಕಾಶ ನೀಡಿದೆ. ಆಕ್ಷೇಪಣೆಯನ್ನು ಇಮೇಲ್‌ ವಿಳಾಸ -keakset2023@gmail.com ಗೆ ಕಳುಹಿಸಬಹುದು.

ಇದನ್ನೂ ಓದಿ: Best Courses After SSLC: ವಿಜ್ಞಾನ, ವಾಣಿಜ್ಯ, ಕಲೆ; ಎಸ್ ಎಸ್ ಎಲ್ ಸಿ ನಂತರ ಮುಂದೇನು?

Continue Reading

ದೇಶ

Bomb Threat: ದೆಹಲಿ ಬಳಿಕ ಇದೀಗ ಅಹಮದಾಬಾದ್​ನ ಶಾಲೆಗಳಿಗೂ ಬಾಂಬ್​ ಬೆದರಿಕೆ

Bomb Threat: ಗುಜರಾತ್‌ನ ಅಹಮದಾಬಾದ್‌ನ ಹಲವು ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಇ ಮೇಲ್‌ ಬೆದರಿಕೆ ಬಂದಿದೆ. ಹೀಗಾಗಿ ಪೊಲೀಸರು ತ್ವರಿತ ತಪಾಸಣೆಗೆ ಮುಂದಾಗಿದ್ದಾರೆ. ಶಾಲೆಗಳ ಆವರಣದಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎನ್ನಲಾಗಿದೆ. ಅದಾಗ್ಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕೆಲವು ದಿನಗಳ ಹಿಂದೆ ದೆಹಲಿ- ಎನ್‌ಸಿಆರ್ (Delhi NCR) ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ (Schools) ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ (Bomb Threat) ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಗುಜರಾತ್‌ನಲ್ಲಿ ಈ ಘಟನೆ ನಡೆದಿರುವುದು ಆತಂಕ ಹೆಚ್ಚಿಸಿದೆ.

VISTARANEWS.COM


on

Bomb Threat
Koo

ಗಾಂಧಿನಗರ: ಕೆಲವು ದಿನಗಳ ಹಿಂದೆ ದೆಹಲಿ- ಎನ್‌ಸಿಆರ್ (Delhi NCR) ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ (Schools) ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ (Bomb Threat) ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಗುಜರಾತ್‌ನ ಅಹಮದಾಬಾದ್‌ನ ಹಲವು ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಇ ಮೇಲ್‌ ಬೆದರಿಕೆ ಬಂದಿದೆ. ಹೀಗಾಗಿ ಪೊಲೀಸರು ತ್ವರಿತ ತಪಾಸಣೆಗೆ ಮುಂದಾಗಿದ್ದಾರೆ. ಶಾಲೆಗಳ ಆವರಣದಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎನ್ನಲಾಗಿದೆ. ಅದಾಗ್ಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಕಳೆದ ವಾರ ದೆಹಲಿ-ಎನ್‌ಸಿಆರ್‌ನ ಶಾಲೆಗೆ ಬಂದ ಬಾಂಬ್ ಬೆದರಿಕೆಯ ಇ ಮೇಲ್‌ನ ಮೂಲವಾದ ರಷ್ಯಾದ ಡೊಮೇನ್ mail.ruನಿಂದಲೇ ಈ ಬೆದರಿಕೆಯನ್ನೂ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಪೊಲೀಸ್ ಮತ್ತು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (Bomb Detection and Disposal Squad) ತಂಡಗಳು ಶಾಲೆಗಳಲ್ಲಿ ವ್ಯಾಪಕ ಶೋಧ ನಡೆಸಿವೆ. ಸದ್ಯ ಈ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ.

ದೆಹಲಿ ಶಾಲೆಗಳಿಗೆ ಬೆದರಿಕೆ

ಮೇ 1ರಂದು ದೆಹಲಿ- ಎನ್‌ಸಿಆರ್ ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿತ್ತು. ಬಾಂಬ್ ಬೆದರಿಕೆ ಇ ಮೇಲ್ ಸ್ವೀಕರಿಸಿದ ಶಾಲೆಗಳೆಂದರೆ – ಚಾಣಕ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಸ್ಕೃತಿ ಶಾಲೆ, ಪೂರ್ವ ದೆಹಲಿಯ ಮಯೂರ್ ವಿಹಾರ್, ದ್ವಾರಕಾ ಜಿಲ್ಲೆಯ ಡಿಪಿಎಸ್ ಶಾಲೆ, ದಕ್ಷಿಣದ ಬಸಂತ್ ಕುಂಜ್ ಪ್ರದೇಶದಲ್ಲಿರುವ ಡಿಎವಿ ಶಾಲೆ, ಅಮಿಟಿ ಸ್ಕೂಲ್, ಸಾಕೇತ್, ನವದೆಹಲಿಯ ಸಂಸ್ಕೃತಿ ಶಾಲೆ ಮುಂತಾದವು. ಸಂಸ್ಕೃತಿಯು ದೆಹಲಿಯ ಅತ್ಯಂತ ಉನ್ನತ ಮಟ್ಟದ ಶಾಲೆಗಳಲ್ಲಿ ಒಂದು.

ಇದನ್ನೂ ಓದಿ: Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

ಬಾಂಬ್‌ ದಾಳಿ ಕುರಿತ ಬೆದರಿಕೆ ಇ ಮೇಲ್‌ಗಳು ರವಾನೆಯಾಗುತ್ತಲೇ ಪೊಲೀಸರು ಎಚ್ಚೆತ್ತುಕೊಂಡರು. ಕೂಲಂಕಷ ತನಿಖೆ, ಪರಿಶೀಲನೆ ನಡೆಸಿದ ಪೊಲೀಸರು, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ಪೋಷಕರು, ಶಾಲೆಗಳ ಆಡಳಿತ ಮಂಡಳಿಯು ನಿಟ್ಟುಸಿರು ಬಿಡುವಂತೆ ಮಾಡಿದ್ದರು.

ಚೆಂಡೆಂದು ಭಾವಿಸಿ ಬಾಂಬ್‌ ಜತೆ ಮಕ್ಕಳ ಆಟ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಒಂದು ದಿನ ಇರುವಾಗಲೇ ಪಶ್ಚಿಮ ಬಂಗಾಳದಲ್ಲಿ ಬಾಂಬ್‌ ಸ್ಫೋಟಗೊಂಡಿದೆ. ಹೂಗ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಗುವೊಂದು ಮೃತಪಟ್ಟಿದ್ದು, ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಪಾಂಡುವಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಚ್ಚಾ ಬಾಂಬ್‌ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎನ್ನಲಾಗಿದೆ. ಇನ್ನು ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡಿದೆ. ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಇನ್ನು ಈ ಕಚ್ಚಾ ಬಾಂಬ್‌ ಎಲ್ಲಿಂದ ಬಂತು? ಯಾರು ಎಸೆದರು ಎಂಬುದು ತನಿಖೆಯಲ್ಲಿ ತಿಳಿಯಬೇಕಾಗಿದೆ.

Continue Reading

ಕ್ರೈಂ

Prajwal Revanna Case: ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

Prajwal Revanna Case: ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

VISTARANEWS.COM


on

Prajwal Revanna Case HD Revanna asks NO to sign voluntary statement in kidnapping case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅಪಹರಣ ಕೇಸ್‌ನಲ್ಲಿ ಬಂಧಿತರಾಗಿರುವ ಎಚ್‌.ಡಿ. ರೇವಣ್ಣ ಅವರ ವಿಚಾರಣೆ ತೀವ್ರಗತಿಯಲ್ಲಿ ಸಾಗಿದೆ. ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಅಪರಹಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದರಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ ಇಂದು ಕೂಡ ಜಾಮೀನು ದೊರೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇನ್ನೂ ನಾಲ್ಕು ದಿನ ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವುದು ಅನಿವಾರ್ಯವಾಗಲಿದೆ.

ಭಾನುವಾರ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆ ವೇಳೆ ರೇವಣ್ಣ ಅವರನ್ನು ನ್ಯಾಯಾಧೀಶರು ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ ನೀಡಿದ್ದರು. ಹೀಗಾಗಿ ತನಿಖಾ ಭಾಗವಾಗಿ ನಾಲ್ಕು ದಿನಗಳ ಕಾಲ ರೇವಣ್ಣ ಎಸ್‌ಐಟಿ ವಶದಲ್ಲಿ ಇರಲಿದ್ದಾರೆ.

ಇಂದು ರೇವಣ್ಣ ಪರ ವಕೀಲರು ಬೇಲ್ ಅರ್ಜಿ ಸಲ್ಲಿಸಿದರೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಕಸ್ಟಡಿಯಲ್ಲಿರುವ ಅವರಿಗೆ ಹಿನ್ನೆಲೆ ಜಾಮೀನು ಕೊಟ್ಟರೆ ತನಿಖೆಗೆ ಹಿನ್ನಡೆಯಾಗಬಹುದು ಎಂದು ಎಸ್‌ಐಟಿ ವಾದ ಮಂಡಿಸಲಿದೆ. ಇದೇ ಕಾರಣಕ್ಕೆ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕಸ್ಟಡಿ ಅವಧಿ ನಂತರವೇ ಜಾಮೀನು ಭಾಗ್ಯ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.

ಒತ್ತಡದಲ್ಲಿರುವ ರೇವಣ್ಣ

ಇನ್ನು ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಸುಸ್ತಾಗಿರುವಂತೆ ಅವರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಎಸ್ಐಟಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸಲಿಲ್ಲ. ಇಂದು ಬೆಳಗ್ಗೆ ಮತ್ತೆ ಪ್ರಕರಣದ ಬಗ್ಗೆ ಪ್ರಶ್ನಿಸಲಿದ್ದಾರೆ.

ರೇವಣ್ಣ ಬಂಧನವಾಗಿ 24 ಗಂಟೆ ಕಳೆದರೂ ಅವರನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಆಗಮಿಸಿಲ್ಲ. ಯಾವಾಗಲೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೇವಣ್ಣ ಸದ್ಯ ಒಬ್ಬಂಟಿಯಾಗಿದ್ದಾರೆ. ಶನಿವಾರ ಬಂಧನವಾದಾಗಿನಿಂದ ಸರಿಯಾಗಿ ನಿದ್ದೆ ಮಾಡದೇ ತಲೆ ಕೆಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು

ಇಂದು (ಮೇ 6) ಸ್ಥಳ ಮಹಜರಿಗೆ ರೇವಣ್ಣ ಅವರನ್ನು ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ ಸಂತ್ರಸ್ತೆಯನ್ನು ಅಕ್ರಮವಾಗಿ ಕೂಡಿಟ್ಟಿ ಸ್ಥಳ ತೋಟದ ಮನೆಯಲ್ಲಿಯೂ ಮಹಜರು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿರುವ ಎಸ್‌ಐಟಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ರೇವಣ್ಣ ಜತೆ ಚರ್ಚೆ ನಡೆಸಿದ ವಕೀಲರು

ಎಚ್‌.ಡಿ. ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವ ಕಾರಣ ಅವರನ್ನು ವಕೀಲ ಮೂರ್ತಿ ಡಿ ನಾಯಕ್ ಭೇಟಿ ಮಾಡಿ ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಪ್ರಕರಣ ಸಂಬಂಧ ವಕೀಲರ ಜತೆ ರೇವಣ್ಣ ಚರ್ಚೆ ನಡೆಸಿದ್ದಾರೆ. ಜಾಮೀನು ಸಲ್ಲಿಕೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ.

Continue Reading
Advertisement
Prajwal Revanna Case Who leaked the pen drive Devaraje Gowda gives evidence to SIT
ಕ್ರೈಂ34 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ICSE Results 202
ಶಿಕ್ಷಣ36 mins ago

CISCE Results 2024: ಸಿಐಎಸ್‌ಸಿಇಯ 10 & 12ನೇ ತರಗತಿಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

MS Dhoni
ಕ್ರಿಕೆಟ್38 mins ago

MS Dhoni: ಧೋನಿಯ ಕ್ಲೀನ್​ ಬೌಲ್ಡ್​ ಕಂಡು ಬೇಸರಗೊಂಡ ಅಭಿಮಾನಿಗಳು; ವಿಡಿಯೊ ವೈರಲ್​

Viral News
ವೈರಲ್ ನ್ಯೂಸ್54 mins ago

Viral News: ಅವಳಿ-ತ್ರಿವಳಿ ಅಲ್ಲ.. ಏಕಕಾಲದಲ್ಲಿ ಐದು ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ

Kanyakumari Tour
ಪ್ರವಾಸ54 mins ago

Kanyakumari Tour: ತುಂಬಾ ದುಬಾರಿ ಏನಿಲ್ಲ, ನೀವೂ ಮಾಡಬಹುದು ಕನ್ಯಾಕುಮಾರಿ ಪ್ರವಾಸ

Cauvery Theatre bengaluru another single screen close
ಸಿನಿಮಾ1 hour ago

Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Bomb Threat
ದೇಶ1 hour ago

Bomb Threat: ದೆಹಲಿ ಬಳಿಕ ಇದೀಗ ಅಹಮದಾಬಾದ್​ನ ಶಾಲೆಗಳಿಗೂ ಬಾಂಬ್​ ಬೆದರಿಕೆ

Lok Sabha Elections-2024
Lok Sabha Election 20241 hour ago

Lok Sabha Election 2024: ಘಟಾನುಘಟಿಗಳ ಸ್ಪರ್ಧೆ; ಮೇ 7ರ ಮೂರನೇ ಹಂತದ ಪೈಪೋಟಿಯ ಚಿತ್ರಣ ಇಲ್ಲಿದೆ

ICC Women’s T20 World Cup 2024
ಕ್ರೀಡೆ1 hour ago

ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

Road Accident
ಕ್ರೈಂ1 hour ago

Road Accident : ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಮಂದಿಗೆ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ18 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ20 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ20 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌