Women's Day 2023 : ಮಹಿಳಾ ಉದ್ಯೋಗಿಗಳು 2023ರಲ್ಲಿ ತೆರಿಗೆಯಲ್ಲಿ ಹೇಗೆ ಹೆಚ್ಚು ಉಳಿತಾಯ ಮಾಡಬಹುದು? - Vistara News

ಪ್ರಮುಖ ಸುದ್ದಿ

Women’s Day 2023 : ಮಹಿಳಾ ಉದ್ಯೋಗಿಗಳು 2023ರಲ್ಲಿ ತೆರಿಗೆಯಲ್ಲಿ ಹೇಗೆ ಹೆಚ್ಚು ಉಳಿತಾಯ ಮಾಡಬಹುದು?

ಮಹಿಳಾ ಉದ್ಯೋಗಿಗಳು 2023ರಲ್ಲಿ ತೆರಿಗೆ ಉಳಿತಾಯ ಮಾಡಲು ಹಲವಾರು ಉತ್ತಮ ಆಯ್ಕೆಗಳು ಇವೆ. ಇವುಗಳನ್ನು ಬಳಸುವ (Women’s Day 2023) ಮೂಲಕ ಕುಟುಂಬದ ಆದಾಯ ಹೆಚ್ಚಿಸಬಹುದು.

VISTARANEWS.COM


on

Women's Day 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

International Women’s Day 2023 : ಭಾರತದಲ್ಲಿ ಎಲ್ಲ ವಲಯಗಳಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಅವರು ಪುರುಷರಿಗೆ ಕಮ್ಮಿ ಇಲ್ಲದಂತೆ ಸ್ಪರ್ಧಿಸುತ್ತಾರೆ. ಕೆಲವೊಮ್ಮೆ ಅವರಿಗಿಂತಲೂ ಹೆಚ್ಚು ಚೆನ್ನಾಗಿ ಕೆಲಸ ಮಾಡುತ್ತಾರೆ. ಮಹಿಳೆಯರು ಉದ್ಯೋಗಿಗಳಾದಂತೆ ಅವರ ಆದಾಯವೂ ಹೆಚ್ಚುತ್ತದೆ. ಆದ್ದರಿಂದ ಅವರು ಕೂಡ ತೆರಿಗೆ ಯೋಜನೆಯನ್ನು (tax planning) ಸಮರ್ಪಕವಾಗಿ ಮಾಡಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸುವುದು ಸೂಕ್ತ.

ತೆರಿಗೆ ತಜ್ಞರ ಪ್ರಕಾರ ಆದಾಯ ತೆರಿಗೆ ನಿಯಮಗಳು ಸಾಮಾನ್ಯವಾಗಿ ಲಿಂಗ ತಾರತಮ್ಯವನ್ನು ಮಾಡುವುದಿಲ್ಲ. 2012-13ಕ್ಕೆ ಮೊದಲು ಪುರುಷರು ಮತ್ತು ಮಹಿಳೆಯರಿಗೆ ಭಿನ್ನ ತೆರಿಗೆ ಶ್ರೇಣಿಗಳು ಇದ್ದವು. ಆದರೆ ಈಗ ಎಲ್ಲರಿಗೂ ಸಾಮಾನ್ಯ ತೆರಿಗೆ ಶ್ರೇಣಿಗಳಿವೆ. ಮಹಿಳೆಯರು ಯಾವಾಗಲೂ ಹಣ ಉಳಿತಾಯದ ಕೌಶಲದಲ್ಲಿ ಸಿದ್ಧಹಸ್ತರು. ಕೆಳಕಂಡ ತೆರಿಗೆ ಲಾಭಗಳನ್ನು ಅವರು ಪಡೆಯಬಹುದು.

ಗೃಹ ಸಾಲದ ಮರು ಪಾವತಿ

homeloan

ನೀವು ಜಂಟಿಯಾಗಿ ಗೃಹ ಸಾಲವನ್ನು ತೆಗೆದುಕೊಂಡಿದ್ದರೆ, ಮೂಲ ಮೊತ್ತ (principal) ಮತ್ತು ಬಡ್ಡಿಯ ಭಾಗಕ್ಕೆ (interest components) ತೆರಿಗೆ ಕಡಿತದ ಅನುಕೂಲ ಪಡೆಯಬಹುದು. ಆದಾಯ ತೆರಿಗೆ ಕಾಯಿದೆಯ ಸೆಕ್ಷನ್‌ 80 ಸಿ ಅಡಿಯಲ್ಲಿ ಮೂಲ ಮೊತ್ತದಲ್ಲಿ 1.5 ಲಕ್ಷ ರೂ. ತನಕ ಡಿಡಕ್ಷನ್‌ ಪಡೆಯಬಹುದು. ಸೆಕ್ಷನ್‌ 24 ಅಡಿಯಲ್ಲಿ ಬಡ್ಡಿ ದರ ಮರು ಪಾವತಿಯಲ್ಲಿ 2 ಲಕ್ಷ ರೂ. ತನಕ ಡಿಡಕ್ಷನ್‌ ಗಳಿಸಬಹುದು.

ಮೊದಲ ಸಲ ಮನೆ ಖರೀದಿಸುವುದಿದ್ದರೆ:

ನೀವು ಮೊದಲ ಸಲ ಮನೆ ಖರೀದಿಸುವುದಿದ್ದರೆ ಸೆಕ್ಷನ್‌ 80ಇಇ ಅಡಿಯಲ್ಲಿ 50,000 ರೂ, ಅಥವಾ ಸೆಕ್ಷನ್‌ 80 ಇಇಎ ಅಡಿಯಲ್ಲಿ 150000 ರೂ. ತನಕ ಹೆಚ್ಚುವರಿ ತೆರಿಗೆ ಅನುಕೂಲ ಪಡೆಯಬಹುದು.

ಸೆಕ್ಷನ್‌ 80 ಇಇ ಅಡಿಯಲ್ಲಿ ಮೊದಲ ಸಲ ಮನೆ ಖರೀದಿಸುವವರಿಗೆ ಹೆಚ್ಚುವರಿ 50,000 ರೂ. ತೆರಿಗೆ ಅನುಕೂಲ (tax benefit) ಪಡೆಯಬಹುದು. ಆದರೆ ಪ್ರಾಪರ್ಟಿಯು 50 ಲಕ್ಷ ರೂ. ಮೌಲ್ಯ ಮೀರುವಂತಿಲ್ಲ. ಜತೆಗೆ ಗೃಹ ಸಾಲ 35 ಲಕ್ಷ ರೂ. ದಾಟುವಂತಿಲ್ಲ.

ಉಳಿತಾಯ ಖಾತೆ:

psu bank

ಆದಾಯ ತೆರಿಗೆ ಕಾಯಿದೆಯ ಸೆಕ್ಷನ್‌ 80 ಟಿಟಿಎ ಅಡಿಯಲ್ಲಿ ಉಳಿತಾಯ ಖಾತೆಯಲ್ಲಿ ಗಳಿಸುವ ಬಡ್ಡಿಗೆ 10,000 ರೂ. ತನಕ ತೆರಿಗೆ ಡಿಡಕ್ಷನ್‌ ಸಿಗುತ್ತದೆ. ಹಲವು ಬ್ಯಾಂಕ್‌ಗಳು ಜೀರೊ ಬ್ಯಾಲೆನ್ಸ್‌ ಖಾತೆ ಸೌಲಭ್ಯ ಒದಗಿಸುತ್ತವೆ. ಹಿರಿಯ ಮಹಿಳಾ ನಾಗರಿಕರಿಗೆ ಸೆಕ್ಷನ್‌ 80 ಟಿಟಿಬಿ ಅಡಿಯಲ್ಲಿ 50,000 ರೂ. ತನಕ ಬಡ್ಡಿಗೆ ತೆರಿಗೆ ಉಳಿತಾಯದ ಲಾಭ ಸಿಗುತ್ತದೆ.

ಎಚ್‌ಆರ್‌ಎ (ಮನೆ ಬಾಡಿಗೆ ಭತ್ಯೆ):

ಎಚ್‌ಆರ್‌ಎ ವೇತನದ ಭಾಗವಾಗಿದ್ದು, ಬಾಡಿಗೆ ಮನೆಯಲ್ಲಿದ್ದರೆ ಅದಕ್ಕೆ ಸಂಬಂಧಿಸಿದ ತೆರಿಗೆ ಅನುಕೂಲದ ಸೌಲಭ್ಯ ಪಡೆಯಬಹುದು.

ಶಿಕ್ಷಣ ಸಾಲ: ಸೆಕ್ಷನ್‌ 80 ಇ ಅಡಿಯಲ್ಲಿ ಉನ್ನತ ಶಿಕ್ಷಣಕ್ಕೆ ಪಡೆದ ಸಾಲದಲ್ಲಿ ಬಡ್ಡಿಯ ಭಾಗಕ್ಕೆ ತೆರಿಗೆ ವಿನಾಯಿತಿ ಪಡೆಯಬಹುದು. ಸಂಗಾತಿ ಅಥವಾ ಮಕ್ಕಳ ಸಲುವಾಗಿ ಪಡೆದ ಶಿಕ್ಷಣ ಸಾಲಕ್ಕೂ ಲಭ್ಯ. ಗರಿಷ್ಠ 8 ವರ್ಷ ಕಾಲ ಈ ಸೌಲಭ್ಯ ಪಡೆಯಬಹುದು.

ಆರೋಗ್ಯ ವಿಮೆ: ಸೆಕ್ಷನ್‌ 80ಡಿ ಅಡಿಯಲ್ಲಿ ಮಹಿಳೆ ಆರೋಗ್ಯ ವಿಮೆಯ ಪ್ರೀಮಿಯಂನಲ್ಲಿ 25,000 ರೂ. ತನಕ ವೆಚ್ಚಕ್ಕೆ ತೆರಿಗೆ ಉಳಿತಾಯ ಕ್ಲೇಮ್‌ ಮಾಡಬಹುದು. ಪೋಷಕರು 60 ವರ್ಷ ವಯಸ್ಸಿಗಿಂತ ಕೆಳಗಿದ್ದರೆ ಪ್ರತ್ಯೇಕ 25,000 ರೂ. ಡಿಡಕ್ಷನ್‌ ಪಡೆಯಬಹುದು. ಪೋಷಕರು 60 ವರ್ಷಕ್ಕಿಂತ ಮೇಲಿದ್ದರೆ 50,000 ರೂ. ತೆರಿಗೆ ಅನುಕೂಲವನ್ನು ನಿಮ್ಮದಾಗಿಸಬಹುದು.

ಫುಡ್‌ ಕೂಪನ್‌ಗಳು: ಕಂಪನಿಗಳು ನೀಡುವ ಫುಡ್‌ ಕೂಪನ್‌ಗಳ ಮೂಲಕ ವರ್ಷಕ್ಕೆ 26,400 ರೂ. ತನಕ ತೆರಿಗೆಗೆ ಅರ್ಹ ಆದಾಯವನ್ನು ಇಳಿಸಬಹುದು. ಸುಕನ್ಯಾ ಸಮೃದ್ಧಿ ಯೋಜನೆ ಮೂಲಕ ಮಗಳ ಭವಿಷ್ಯಕ್ಕೆ ತೆರಿಗೆ ವಿನಾಯಿತಿಯ ಅನುಕೂಲ ಪಡೆಯಬಹುದು.

ತೆರಿಗೆ ಉಳಿಸುವ ಹೂಡಿಕೆಯ ಆಯ್ಕೆಗಳು:

tax rules

ಮಹಿಳಾ ಉದ್ಯೋಗಿಗಳಿಗೆ ತೆರಿಗೆ ಉಳಿತಾಯಕ್ಕೆ ಸಹಕರಿಸುವ ನಾನಾ ಹೂಡಿಕೆಯ ಯೋಜನೆಗಳು:

ಸಾರ್ವಜನಿಕ ಭವಿಷ್ಯನಿಧಿ (PPF)

ಈಕ್ವಿಟಿ ಲಿಂಕ್ಡ್‌ ಸೇವಿಂಗ್‌ ಸ್ಕೀಮ್‌ (ELSS)

ಎಂಪ್ಲಾಯೀಸ್‌ ಪ್ರಾವಿಡೆಂಟ್‌ ಫಂಡ್‌ (EPF)

ಟ್ಯಾಕ್ಸ್‌ ಸೇವಿಂಗ್‌ ಫಿಕ್ಸೆಡ್‌ ಡಿಪಾಸಿಟ್‌ (FDs)

ನ್ಯಾಶನಲ್‌ ಸೇವಿಂಗ್‌ ಸರ್ಟಿಫಿಕೇಟ್‌ (NSE)

ಸುಕನ್ಯಾ ಸಮೃದ್ಧಿ ಯೋಜನೆ (SSY)

ಯುನಿಟ್‌ ಲಿಂಕ್ಡ್‌ ಇನ್ಷೂರೆನ್ಸ್‌ ಪ್ಲಾನ್‌ (ULIP)

ನ್ಯಾಶನಲ್‌ ಪೆನ್ಷನ್‌ ಪ್ಲಾನ್‌ (NPS)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

ICC Ban : ಮ್ಯಾಚ್​ ಫಿಕಿ ವೆಸ್ಟ್ ಇಂಡೀಸ್​ ಆಟಗಾರನಿಗೆ ಐದು ವರ್ಷ ಬ್ಯಾನ್​

ICC Ban: ಐಸಿಸಿ ಜನರಲ್ ಮ್ಯಾನೇಜರ್ ಅಲೆಕ್ಸ್ ಮಾರ್ಷಲ್ ಸಾರ್ವಜನಿಕ ಹೇಳಿಕೆಯಲ್ಲಿ, ಡೆವೊನ್ ಹಲವಾರು ಭ್ರಷ್ಟಾಚಾರ ವಿರೋಧಿ ಅರಿವು ಮೂಡಿಸುವ ಅಧಿವೇಶನಗಳಲ್ಲಿ ಭಾಗವಹಿಸಿದ್ದರು. ಸಂಹಿತೆಗಳ ಅಡಿಯಲ್ಲಿ ಅವರ ಬಾಧ್ಯತೆಗಳ ಬಗ್ಗೆ ತಿಳಿದಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ವೆಸ್ಟ್ ಇಂಡೀಸ್ ಕ್ರಿಕೆಟಿಗ ಡೆವೊನ್ ಥಾಮಸ್ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC Ban) ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ಐದು ವರ್ಷಗಳ ನಿಷೇಧ ಹೇರಿದೆ. ಕೆಲವು ಪ್ರಮುಖ ಟಿ 20 ಫ್ರ್ಯಾಂಚೈಸ್ ಲೀಗ್​​ಗಳ ಭ್ರಷ್ಟಾಚಾರ ವಿರೋಧಿ ಸಂಹಿತೆಗಳ ಏಳು ಸಂಹಿತೆಗಳನ್ನು ಉಲ್ಲಂಘಿಸಲು 34 ವರ್ಷದ ಆಟಗಾರ ಒಪ್ಪಿಕೊಂಡ ನಂತರ ಮೇ 2 ರಂದು ಉನ್ನತ ಸಂಸ್ಥೆ ತನ್ನ ನಿರ್ಧಾರ ದೃಢಪಡಿಸಿದೆ.

ಐಸಿಸಿ ಜನರಲ್ ಮ್ಯಾನೇಜರ್ ಅಲೆಕ್ಸ್ ಮಾರ್ಷಲ್ ಸಾರ್ವಜನಿಕ ಹೇಳಿಕೆಯಲ್ಲಿ, ಡೆವೊನ್ ಹಲವಾರು ಭ್ರಷ್ಟಾಚಾರ ವಿರೋಧಿ ಅರಿವು ಮೂಡಿಸುವ ಅಧಿವೇಶನಗಳಲ್ಲಿ ಭಾಗವಹಿಸಿದ್ದರು. ಸಂಹಿತೆಗಳ ಅಡಿಯಲ್ಲಿ ಅವರ ಬಾಧ್ಯತೆಗಳ ಬಗ್ಗೆ ತಿಳಿದಿದ್ದರು. ಆದರೂ ಅವರು ತಪ್ಪು ಮಾಡಿದ್ದಾರೆ ಎಂದು ಹೇಳಿದ್ದಾರೆ. ಲಂಕಾ ಪ್ರೀಮಿಯರ್ ಲೀಗ್ (ಎಲ್​ಪಿಎಲ್), ಅಭಿ ಧಾಬಿ ಟಿ 10 ಮತ್ತು ಕ್ಯಾರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) ಎಂಬ ಮೂರು ವಿಭಿನ್ನ ಫ್ರ್ಯಾಂಚೈಸ್ ಲೀಗ್​​ಗಳ ಕ್ರಿಕೆಟಿಗ ತನ್ನ ಬಾಧ್ಯತೆಗಳನ್ನು ಪೂರೈಸಲು ವಿಫಲರಾಗಿದ್ದಾರೆ ಎಂದು ಮಾರ್ಷಲ್ ದೃಢಪಡಿಸಿದರು.

ಥಾಮಸ್ ಅವರನ್ನು ಎಲ್ಲಾ ರೀತಿಯ ಸ್ಪರ್ಧಾತ್ಮಕ ಕ್ರಿಕೆಟ್​​ನಿಂದ ಐದು ವರ್ಷಗಳ ನಿಷೇಧವನ್ನು ವಿಧಿಸಲಾಗಿದೆ ಎಂದು ಐಸಿಸಿ ಗುರುವಾರ ದೃಢಪಡಿಸಿದೆ. ಆಂಟಿಗುವಾ ಬ್ಯಾಟರ್​ 2009 ರಲ್ಲಿ ಬಾಸೆಟೆರೆಯಲ್ಲಿ ಬಾಂಗ್ಲಾದೇಶ ವಿರುದ್ಧದ ಟಿ 20 ಐ ಪಂದ್ಯದ ಮೂಲಕ ವೆಸ್ಟ್ ಇಂಡೀಸ್ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅವರು ಒಂದು ಟೆಸ್ಟ್, 21 ಏಕದಿನ ಮತ್ತು 12 ಟಿ 20 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ 34 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕೊನೆಯದ್ದು ಡಿಸೆಂಬರ್ 2022 ರಲ್ಲಿ ಅಡಿಲೇಡ್ ಓವಲ್​ನಲ್ಲಿ ನಡೆದಿತ್ತು.

ಇದನ್ನೂ ಓದಿ: India’s Jersey T20 World Cup: ಭಾರತ ತಂಡದ ಹೊಸ ಜೆರ್ಸಿ ಕಂಡು ಟ್ರೋಲ್​ ಮಾಡಿದ ನೆಟ್ಟಿಗರು

ಮೂರು ಫ್ರಾಂಚೈಸಿ ಲೀಗ್​ಗಳ ಮ್ಯಾಚ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿದ್ದಕ್ಕಾಗಿ ಕ್ರಿಕೆಟಿಗನನ್ನು ಐಸಿಸಿ ಈಗಾಗಲೇ ಮೇ 2023 ರಲ್ಲಿ ಅಮಾನತುಗೊಳಿಸಿತ್ತು. ಎಲ್ಪಿಎಲ್​​ನಲ್ಲಿ 2021 ರ ಆವೃತ್ತಿಯಲ್ಲಿ, ಥಾಮಸ್ ಗಂಭೀರ ಆರೋಪವನ್ನು ಎದುರಿಸಿದ್ದರು.

2021ರ ಅಬುಧಾಬಿ ಟಿ 10 ಲೀಗ್​ನಲ್ಲಿ ಪುಣೆ ಡೆವಿಲ್ಸ್​​ ತಂಡದಲ್ಲಿದ್ದಾಗ ಮಾಡಿದ ವಿಧಾನದ ವಿವರಗಳನ್ನು ವರದಿ ಮಾಡಲು ಅವರು ವಿಫಲರಾಗಿದ್ದಾರೆ.

Continue Reading

ದೇಶ

West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

West Bengal: ಮುರ್ಷಿದಾಬಾದ್‌ನಲ್ಲಿ ಧನಂಜಯ್‌ ಘೋಷ್‌ ಅವರು ಮತದಾನ ಮಾಡಲು ಹೋದಾಗ ಅವರನ್ನು ಬೂತ್‌ ಏಜೆಂಟ್‌ ಒಬ್ಬರು ತಡೆದಿದ್ದಾರೆ. ಇದೇ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದು ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಗೆ ಕಾರಣವಾಗಿದೆ. ಮುರ್ಷಿದಾಬಾದ್ ಸೇರಿ ಹಲವೆಡೆಯೂ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ. ಬಂಗಾಳದ ನಾಲ್ಕು ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

VISTARANEWS.COM


on

West Bengal
Koo

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಹಿಂಸಾಚಾರ, ಕೊಲೆ, ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡವೆ ಗಲಾಟೆ ಸಾಮಾನ್ಯ ಎಂಬಂತಾಗಿದೆ. ಇದಕ್ಕೆ ನಿದರ್ಶನ ಎಂಬಂತೆ, ಮೂರನೇ ಹಂತದ ಮತದಾನದ (Lok Sabha Election 2024) ವೇಳೆಯೂ ಪಶ್ಚಿಮ ಬಂಗಾಳದಲ್ಲಿ (West Bengal) ಹಿಂಸಾಚಾರ ನಡೆದಿದೆ. ಮುರ್ಷಿದಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ್‌ ಘೋಷ್‌ (Dhananjay Ghosh) ಅವರು ಮತ ಚಲಾಯಿಸಲು ಹೋದಾಗ ಗಲಾಟೆ ನಡೆದಿದೆ.

ಮುರ್ಷಿದಾಬಾದ್‌ನಲ್ಲಿ ಧನಂಜಯ್‌ ಘೋಷ್‌ ಅವರು ಮತದಾನ ಮಾಡಲು ಹೋದಾಗ ಅವರನ್ನು ಬೂತ್‌ ಏಜೆಂಟ್‌ ಒಬ್ಬರು ತಡೆದಿದ್ದಾರೆ. ಇದೇ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದು ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಗೆ ಕಾರಣವಾಗಿದೆ. “ನಾನೊಬ್ಬ‌ ಬಿಜೆಪಿ ಅಭ್ಯರ್ಥಿ. ನನಗೇ ಚುನಾವಣೆ ಏಜೆಂಟ್‌ ಒಬ್ಬ ಬಂದು ಬೆದರಿಕೆ ಹಾಕುತ್ತಾನೆ ಎಂದರೆ, ಸಾಮಾನ್ಯ ಜನರ ಗತಿ ಏನು? ಆತನ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಾಗುವುದು” ಎಂದು ಧನಂಜಯ್‌ ಘೋಷ್‌ ತಿಳಿಸಿದ್ದಾರೆ.

ಮುರ್ಷಿದಾಬಾದ್‌ ಲೋಕಸಭೆ ಕ್ಷೇತ್ರದ ರಾಬಿನಗರದಲ್ಲೂ ಗಲಾಟೆ ನಡೆದಿದೆ. ಕಾಂಗ್ರೆಸ್‌-ಎಡಪಕ್ಷದ ಜಂಟಿ ಅಭ್ಯರ್ಥೀ ಮೊಹಮ್ಮದ್‌ ಸಲೀಂ ಎಂಬುವರು ನಕಲಿ ಬೂತ್‌ ಏಜೆಂಟ್‌ ಒಬ್ಬನನ್ನು ಹಿಡಿದು ಹಾಕಿದ್ದಾನೆ ಎಂದಿದ್ದಾರೆ. ಇದಾದ ಬಳಿಕ, ಸಲೀಂ ವಿರುದ್ಧ ಗೋ ಬ್ಯಾಕ್‌ ಎಂಬ ಘೋಷಣೆ ಕೂಗಿದ್ದು, ನಂತರ ಗಲಾಟೆ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ 1 ಗಂಟೆ ಸುಮಾರಿಗೆ ಶೇ.49.27ರಷ್ಟು ಮತದಾನ ದಾಖಲಾಗಿದೆ. ಇನ್ನು, ಮಹಾರಾಷ್ಟ್ರದಲ್ಲಿ ಇದೇ ವೇಳೆಗೆ ಶೇ.31.55ರಷ್ಟು ಮತದಾನ ದಾಖಲಾಗಿದೆ. ಬಂಗಾಳದ 4 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಮುರ್ಷಿದಾಬಾದ್‌ ಸೇರಿ ನಾಲ್ಕರಲ್ಲೂ ಟಿಎಂಸಿಯೇ ಬಲಿಷ್ಠವಾಗಿದೆ.

ಮಂಗಳವಾರ ಬೆಳಗ್ಗೆ ಮತದಾನ ಆರಂಭವಾಗುತ್ತಲೇ ಹಕ್ಕು ಚಲಾಯಿಸಿದ ಮೋದಿ, ಎಲ್ಲರೂ ಮತ ಹಾಕುವಂತೆ ಕರೆ ನೀಡಿದರು. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ ಅವರು, ಈ ಮೂರನೇ ಹಂತದಲ್ಲಿ ಎಲ್ಲರೂ ಹಕ್ಕು ಚಲಾಯಿಸುವ ಮೂಲಕ ದಾಖಲೆ ಪ್ರಮಾಣದ ಮತದಾನಕ್ಕೆ ಕಾರಣವಾಗಬೇಕು ಎಂದು ಕರೆ ನೀಡಿದ್ದಾರೆ. ʼʼಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ” ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ರಾಜಕೀಯ ಹಿಂಸಾಚಾರ; ಸವದಿ ಆಪ್ತರೂ ಆದ ಕಾಂಗ್ರೆಸ್‌ ಮುಖಂಡನ ಹತ್ಯೆ

Continue Reading

ರಾಜಕೀಯ

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಂತಾ ನಿಮ್ಮ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡುತ್ತಾರೆ. ಇಷ್ಟೆಲ್ಲ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿಗೆ ಎಸ್‌ಐಟಿಯಿಂದ ನೋಟಿಸ್‌ ಕೊಡಲಾಯಿತೇ? 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸ್ಪೆಸಿಫಿಕ್ ಆಗಿ ಚಾರ್ಜ್‌ ಮಾಡುತ್ತಿರುವ ರಾಹುಲ್‌ ಗಾಂಧಿಯನ್ನು ಎಸ್‌ಐಟಿಯವರು ಕರೆಯಬೇಕಲ್ವಾ? ಈಗ ಪೋಕ್ಸೋ ಕೇಸ್ ಹಾಕಲು 16 ವರ್ಷದ ಸಂತ್ರಸ್ತೆಯನ್ನು ಎಸ್‌ಐಟಿಯವರು ಹುಡುಕುತ್ತಿದ್ದಾರೆ ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.

VISTARANEWS.COM


on

Prajwal Revanna Case Government work against Revanna HD Kumaraswamy gives details of the case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ (Hassan Pen Drive Case) ಅನ್ನು ನಾನು ವೀಕ್ಷಣೆ ಮಾಡಿಲ್ಲ. ಆ ಪೆನ್‌ಡ್ರೈವ್‌ಗಳಲ್ಲಿರುವ ಅಶ್ಲೀಲ ವಿಡಿಯೊಗಳನ್ನು ನಾನು ನೋಡಿಲ್ಲ. ಈ ವಿಷಯ ಗೊತ್ತಿದ್ದರೆ ನಾನು ಪ್ರಜ್ವಲ್‌ಗೆ ಎಂಪಿ ಟಿಕೆಟ್‌ ಕೊಡುತ್ತಿರಲಿಲ್ಲ. ಇದು ದೇವೇಗೌಡರ ಕುಟುಂಬ ಸರ್ವನಾಶ ಮಾಡಬೇಕೆಂದು ವ್ಯವಸ್ಥಿತ ಸಂಚಾಗಿದೆ. ಈ ಇಡೀ ಪ್ರಕರಣದಲ್ಲಿ ಸರ್ಕಾರ ವ್ಯವಸ್ಥಿತವಾಗಿ ಸಂಚು ರೂಪಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಪೆನ್‌ಡ್ರೈವ್‌ ವಿಷಯ ನನ್ನ ಮುಂದೆ ಬಂದಿದ್ದರೆ ನಾನು ಟಿಕೆಟ್‌ ಕೊಡುತ್ತಿರಲಿಲ್ಲ. ಪ್ರಜ್ವಲ್‌ ರೇವಣ್ಣನಿಗೆ ಟಿಕೆಟ್‌ ಕೊಡುವ ಪ್ರಶ್ನೆಯೇ ಉದ್ಭವ ಆಗುತ್ತಿರಲಿಲ್ಲ. ಆಗ ನಾನು ಟಿಕೆಟ್‌ ನಿರಾಕರಣೆ ಮಾಡಿದ್ದು, ಸ್ಥಳೀಯ ಕಾರ್ಯಕರ್ತರಿಗೆ ಪ್ರಜ್ವಲ್‌ ಸ್ಪಂದಿಸುತ್ತಿರಲಿಲ್ಲ ಎಂಬ ದೂರು ಬಂದಿತ್ತು. ಹಾಗಾಗಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಎಂದು ಹೇಳಿದ್ದೆ ಎಂಬುದಾಗಿ ಸ್ಪಷ್ಟನೆ ನೀಡಿದರು.

ಪೆನ್‌ಡ್ರೈವ್‌ಗಳು ಮಾರ್ಫಿಂಗ್ ಮಾಡಿರೋದಾ? ನಕಲಿಯೋ ನನಗೆ ಗೊತ್ತಿಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬವನ್ನು ಸರ್ವನಾಶ ಮಾಡಬೇಕೆಂಬ ವ್ಯವಸ್ಥಿತ ಸಂಚು ಇಲ್ಲಿ ನಡೆದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ಗುಡುಗಿದರು.

ನರೇಂದ್ರ ಮೋದಿ ಆಡಳಿತ ತೆಗೆದು ದೆಹಲಿ ಗದ್ದುಗೆ ಹಿಡಿಯಲು ಷಡ್ಯಂತ್ರ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಸಂಚಾಗಿದೆ. ಎಸ್‌ಐಟಿಯು ಕಾಂಗ್ರೆಸ್‌ ಪರವಾಗಿ ಕೆಲಸ ಮಾಡುತ್ತಿದೆ. ಈಗಲೂ ಹೇಳುತ್ತೇನೆ, ಇಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲೇಬೇಕು. ಇದೇ ನಮ್ಮ ಪಕ್ಷದ ನಿರ್ಧಾರವಾಗಿದೆ. ವಕೀಲ ದೇವರಾಜೇಗೌಡ ಏನೆಲ್ಲ ಹೇಳಿದರು. ಏನು ನಡೆಯುತ್ತಾ ಇದೆ ಇಲ್ಲಿ. ಆ ಬಗ್ಗೆ ತನಿಖೆ ಆಗಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಎಸ್‌ಐಟಿಗೆ ಎಚ್‌ಡಿಕೆ ವಾರ್ನಿಂಗ್‌

ಎಸ್‌ಐಟಿ ತನಿಖೆ ಹಾಗೂ ಕಾರ್ಯವೈಖರಿ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ವಾರ್ನಿಂಗ್ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಕಾಂಗ್ರೆಸ್ ನಡೆಗೆ ಎಚ್‌ಡಿಕೆ ಗರಂ ಆಗಿದ್ದಾರೆ. ಕಾಲ ಚಕ್ರ ಉರುಳುತ್ತದೆ, ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ವಾರ್ನ್‌ ಮಾಡಿದ್ದಾರೆ.

ಡಿಕೆಶಿಯನ್ನು ವಜಾ ಮಾಡಿ

ಮಹಾನುಭಾವ ಡಿ.ಕೆ.ಶಿವಕುಮಾರ್ ಹಿಸ್ಟರಿ ತೆಗೆದರೆ ಈ ರೀತಿ ಕೇಸಲ್ಲಿ ಎಕ್ಸ್‌ಪರ್ಟ್ ಎಂಬುದು ಗೊತ್ತಾಗುತ್ತದೆ. ಇಂತಹವರನ್ನು ಇಟ್ಕೊಂಡು ಎಸ್‌ಐಟಿ ಮೂಲಕ ಯಾವ ಪಾರದರ್ಶಕ ತನಿಖೆ ಆಗುತ್ತದೆ? ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ, ಸಂತ್ರಸ್ತೆಯರಿಗೂ ನ್ಯಾಯ ಕೊಡಬೇಕು, ಸತ್ಯ ಗೊತ್ತಾಗಬೇಕು. ಈ ಕೇಸ್‌ನಲ್ಲಿ ಡಿ.ಕೆ. ಶಿವಕುಮಾರ್‌ ಸಂಚು ಕಾಣುತ್ತಿದೆ. ಮೊದಲು ಅವರನ್ನು ಕ್ಯಾಬಿನೆಟ್‌ನಿಂದ ಸಸ್ಪೆಂಡ್ ಮಾಡಬೇಕು. ಈ ಪ್ರಕರಣದಲ್ಲಿ ಡಿಕೆಶಿ ಸಂಚು ಏನಿದೆ? ಆ ಬಗ್ಗೆ ತನಿಖೆ ಆಗಲೇಬೇಕು. ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲಿ ಎಂದು ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಅಲ್ಲದೆ, ಡಿಸಿಎಂ ಡಿಕೆಶಿ ಮುಖ ನೋಡಿದರೆ ಬಾಲ ಸುಟ್ಟ ಬೆಕ್ಕಿನಂತೆಯೇ ಆಗಿದೆ. ದೇವರಾಜೇಗೌಡ ಸ್ಫೋಟಕ ಸುದ್ದಿಗೋಷ್ಠಿ ನಂತರ ಅವರ ಮುಖ ನೋಡಿ ಎಂದು ವ್ಯಂಗ್ಯವಾಡಿದರು.

ಹೈಕೋರ್ಟ್ ಸಿಟ್ಟಿಂಗ್ ಜಡ್ಜ್ ತನಿಖೆಯಾಗಲಿ ಎಂದು ಬಿಜೆಪಿ ಮುಖಂಡ ವಿವೇಕ್ ರೆಡ್ಡಿ ಆಗ್ರಹಿಸಿದ್ದಾರೆ. ನ್ಯಾಯಯುತ ತನಿಖೆ ನಡೆಯಬೇಕಾದರೆ ನ್ಯಾಯಾಂಗ ತನಿಖೆಗೆ ಈ ಪ್ರಕರಣವನ್ನು ವಹಿಸಿ ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಬೆಳಗಾವಿ ಸಾಹುಕಾರ್ ರಮೇಶ್‌ ಜಾರಕಿಹೊಳಿ ಪ್ರಕರಣ ಏನಾಯಿತು ಈಗ ಎಂಬುದು ಗೊತ್ತಾ? ಮೂವತ್ತು, ನಲವತ್ತು ಕೋಟಿ ರೂಪಾಯಿ ಖರ್ಚು ಮಾಡಿ ಜಾರಕಿಹೊಳಿ ಅವರ ಹೆಸರನ್ನು ಹಾಳು ಮಾಡಿದರು. ಆ ಆಡಿಯೊ ಈಗಲೂ ಓಡಾಡುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಂತಾ ನಿಮ್ಮ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡುತ್ತಾರೆ. ಇಷ್ಟೆಲ್ಲ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿಗೆ ಎಸ್‌ಐಟಿಯಿಂದ ನೋಟಿಸ್‌ ಕೊಡಲಾಯಿತೇ? 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸ್ಪೆಸಿಫಿಕ್ ಆಗಿ ಚಾರ್ಜ್‌ ಮಾಡುತ್ತಿರುವ ರಾಹುಲ್‌ ಗಾಂಧಿಯನ್ನು ಎಸ್‌ಐಟಿಯವರು ಕರೆಯಬೇಕಲ್ವಾ? ಈಗ ಪೋಕ್ಸೋ ಕೇಸ್ ಹಾಕಲು 16 ವರ್ಷದ ಸಂತ್ರಸ್ತೆಯನ್ನು ಎಸ್‌ಐಟಿಯವರು ಹುಡುಕುತ್ತಿದ್ದಾರೆ. 2900 ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬುದಾಗಿ ಸಿಂಗಾಪುರದಲ್ಲೂ ಸುದ್ದಿ ಅಂತೆ ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಹಾಸನ ಡಿಸಿ ವಿರುದ್ಧ ಎಚ್‌ಡಿಕೆ ಗರಂ

ಇದೇ ವೇಳೆ ಶಿಶುಪಾಲ ಹಾಗೂ ಪಾಪದ ಕಥೆ ಹೇಳಿದ್ದ ಹಾಸನ ಡಿಸಿ ಎಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ. ಕೋಲಾರದಲ್ಲಿದ್ದಾಗ ಗಂಡ, ಹೆಂಡತಿ ಏನ್ ಮಾಡಿದ್ದೀರಾ ಅಂತಾ ಗೊತ್ತಿದೆ. ಯಾವುದೋ ಸಮಿತಿಯವರ ಮನವಿ ಪಡೆದು ವ್ಯಂಗ್ಯ ಮಾಡ್ತೀರಾ ಡಿಸಿ ಅವರೇ? ನಿಮ್ಮ ಯೋಗ್ಯತೆ ನನಗೆ ಚೆನ್ನಾಗಿ ಗೊತ್ತು ಕಿಡಿಕಾರಿದರು.

15 ದಿನಗಳಿಂದ ತಲೆಮರೆಸಿಕೊಂಡಿದ್ದಾನಲ್ಲ ಆ ಕಾರ್ತಿಕ್‌ಗೆ ಯಾವ ನೋಟಿಸ್ ಕೊಟ್ಟಿರಿ? ಬ್ಲೂ ಕಾರ್ನರ್ ನೋಟಿಸ್ ಕೊಟ್ಟಿದ್ದೀರಾ? ಲುಕ್‌ ಔಟ್‌ ನೋಟಿಸ್‌ ಕೊಟ್ಟಿರಾ? ಏನು ನಡೆಯುತ್ತಿದೆ ಇಲ್ಲಿ ಎಂದು ಕಿಡಿಕಾರಿದರು.

ಎಚ್.ಡಿ.ರೇವಣ್ಣ ಎಲ್ಲಿಗೂ ಓಡಿ ಹೋಗಿರಲಿಲ್ಲ. ದೇವರಿಗೆ ಕೈಮುಗಿದುಕೊಂಡು ಓಡಾಡಿಕೊಂಡಿದ್ದ. ಅಯ್ಯೋ ದೇವರೇ ಕಾಪಾಡಪ್ಪ ಅಂತಿದ್ದ. ಆದರೆ, ಬೇಕೆಂದೇ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಕಂಪ್ಲೇಂಟ್ ತೆಗೆದುಕೊಳ್ಳಲು ಸಂತ್ರಸ್ತೆಯರನ್ನು ಹುಡುಕುತ್ತಿದ್ದೇವೆ ಎಂದು ಎಸ್‌ಐಟಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಯಾರಿಗೆಲ್ಲ ಹೇಗೆ ಹೆದರಿಸಿ ಕಂಪ್ಲೇಂಟ್ ತೆಗೆದುಕೊಳ್ಳುವುದಕ್ಕೆ ಪ್ರಯತ್ನ ಮಾಡಲಾಗುತ್ತಿದೆ ಎಂಬ ವಿಷಯ ನಮಗೆ ಗೊತ್ತಾಗಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರೇವಣ್ಣ ಪಾತ್ರ ಎಷ್ಟಿದೆ?

ಯಾರೂ ನೇರವಾಗಿ ಎಚ್.ಡಿ.ರೇವಣ್ಣ ಮೇಲೆ ಕಂಪ್ಲೇಂಟ್‌ ಕೊಟ್ಟಿಲ್ಲ. ಕಿಡ್ನ್ಯಾಪ್ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಪಾತ್ರ ಎಷ್ಟಿದೆ ಗೊತ್ತಿದೆಯಾ? ಬೇಲ್ ವಿಚಾರಣೆ ವೇಳೆ ಆ ಹೆಣ್ಣು ಮಗಳ ಕುರಿತು ಎಸ್‌ಪಿಪಿಯ ಮಾತು ಏನು? ಕಿಡ್ನ್ಯಾಪ್ ಆಗಿದ್ದ ಹೆಣ್ಣು ಮಗಳು ಬದುಕಿದ್ದಾಳೆ, ಸತ್ತಿದ್ದಾಳಾ ಅಂದಿದ್ದರು. ಕೊನೆಗೆ ಮೈಸೂರಿನ ಕಾಳೇನಹಳ್ಳಿ ತೋಟದ ಮನೆಯಿಂದ ಕರೆತಂದಿದ್ದರು. ಆ ತೋಟದ ಮನೆಗೆ ಹೋಗಿ ಕರೆತಂದದ್ರಲ್ಲ, ಮಹಜರು ಮಾಡಿದ್ರಾ? ಒಂದೂವರೆ ದಿವಸ ಆದರೂ ಆ ಹೆಣ್ಣು ಮಗಳು ಹೇಳಿಕೆ ಕೊಟ್ಟಿಲ್ಲವಾ? 2 ದಿನವಾದರೂ ಆ ಹೆಣ್ಣು ಮಗಳನ್ನು ಜಡ್ಜ್ ಮುಂದೆ ಹಾಜರು ಪಡಿಸಿಲ್ಲ ಏಕೆ? ಒಬ್ಬ ಜವಾಬ್ದಾರಿಯುತ ಮಂತ್ರಿಯಾಗಿ ಕೆಲಸ ಮಾಡಿದವರು ರೇವಣ್ಣ. ನೀವು ಬರೆಸಿಕೊಂಡ ಹೇಳಿಕೆಗೆ ಎಚ್.ಡಿ.ರೇವಣ್ಣ ಸೈನ್‌ ಮಾಡಬೇಕಾ? ಇದೇನು ಡಿಸಿಎಂ ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಂ? ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಮಹಿಳಾ ಆಯೋಗ ಬರೆದಿದ್ದ ಪತ್ರದಲ್ಲಿ ಎಲ್ಲಿಯೂ ಪ್ರಜ್ವಲ್ ರೇವಣ್ಣ ಅವರ ಹೆಸರು ಇಲ್ಲ. ಪ್ರಜ್ವಲ್ ಆಗಲಿ, ರೇವಣ್ಣ ಹೆಸರಾಗಲಿ ಆಯೋಗದ ಪತ್ರದಲ್ಲಿ ಇರಲಿಲ್ಲ. ಆದರೆ, ಸಿಎಂ ತಮ್ಮ ಪತ್ರದಲ್ಲಿ ಪ್ರಜ್ವಲ್ ಹೆಸರನ್ನು ಉಲ್ಲೇಖಿಸುತ್ತಾರೆ. ಏಪ್ರಿಲ್ 28ಕ್ಕೆ ಪೆನ್‌ಡ್ರೈವ್ ಪ್ರಕರಣ ತನಿಖೆಗೆ SIT ರಚನೆ ಮಾಡಿದ್ದರು. ಏಪ್ರಿಲ್ 28ರಂದು ಬೆಂಗಳೂರಿನಲ್ಲಿ ಸಂತ್ರಸ್ತೆಯಿಂದ ಕಂಪ್ಲೇಂಟ್ ಬರೆಸಿದ್ದರು. ಗಣಕಯಂತ್ರದಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ದೂರು ಬರೆಸಿದರು. ಹೊಳೆನರಸೀಪುರದ ಪೊಲೀಸ್‌ ಠಾಣೆಗೆ ಬೆಂಗಳೂರಿನಿಂದ ಕಂಪ್ಲೇಂಟ್ ಬರೆಸಿ ನೀಡಿದರು. ರಾಜ್ಯದ ಗೌರವವನ್ನು ಉಳಿಸಲು SIT ಮಾಡಿದ್ರು ಅಂತ ಖುಷಿ ಇತ್ತು. ಆದರೆ, ಕೊನೆಗೆ ಮಾಡಿದ್ದೇನು? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ

ಪತ್ರದಲ್ಲಿ ಪ್ರಜ್ವಲ್‌, ರೇವಣ್ಣ ಹೆಸರೇ ಇಲ್ಲ

ಏಪ್ರಿಲ್ 25ರಂದು ಮಹಿಳಾ ಆಯೋಗದ ಅಧ್ಯಕ್ಷರಿಂದಲೇ ಸಿಎಂಗೆ ಪತ್ರ ಬರೆಯಲಾಗಿದೆ. ಪೆನ್‌ಡ್ರೈವ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಮನವಿ ಮಾಡಲಾಗಿತ್ತು. ಪ್ರಭಾವಿ ರಾಜಕಾರಣಿಗಳಿಂದ ಲೈಂಗಿಕ ದೌರ್ಜನ್ಯ ಅಂತಾ ಬರೆದಿದ್ದರು. ಮಹಿಳಾ ಆಯೋಗದ ಪತ್ರದಲ್ಲಿ ರಾಜಕಾರಣಿ ಯಾರೆಂದು ಹೇಳಿರಲಿಲ್ಲ. ಒಬ್ಬ ಅಲ್ಲ ಎಷ್ಟೋ ರಾಜಕಾರಣಿಗಳು ಎನ್ನುವ ಅರ್ಥದಲ್ಲಿತ್ತು ಆ ಪತ್ರ. ಆ ಬಳಿಕ ಏಪ್ರಿಲ್ 27ರಂದು ಮುಖ್ಯಮಂತ್ರಿಗಳಿಂದ ತನಿಖಾ ತಂಡ ರಚನೆ ಆಗುತ್ತದೆ. ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ ತನಿಖಾ ತಂಡ ರಚಿಸುತ್ತೇನೆ ಎಂಬುದಾಗಿ ಹೇಳಿದ್ದನ್ನು ಎಚ್.ಡಿ. ಕುಮಾರಸ್ವಾಮಿ ಪ್ರಸ್ತಾಪಿಸಿದರು.

Continue Reading

ಕ್ರೀಡೆ

Champions Trophy 2025: ಇವರಿಂದ ಒಪ್ಪಿಗೆ ಸಿಕ್ಕರೆ ಪಾಕಿಸ್ತಾನದಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಆಡಲು ಸಿದ್ಧ ಎಂದ ಬಿಸಿಸಿಐ ಉಪಾಧ್ಯಕ್ಷ

Champions Trophy 2025: ಚಾಂಪಿಯನ್ ಟ್ರೋಫಿಯ ಸಂದರ್ಭದಲ್ಲಿ, ಭಾರತ ಸರ್ಕಾರ ನಮಗೆ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ. ಭಾರತ ಸರ್ಕಾರ ನಮಗೆ ಅನುಮತಿ ನೀಡಿದಾಗ ಮಾತ್ರ ನಾವು ನಮ್ಮ ತಂಡವನ್ನು ಕಳುಹಿಸುತ್ತೇವೆ. ಹಾಗಾಗಿ ಭಾರತ ಸರ್ಕಾರದ ನಿರ್ಧಾರದ ಮೇಲೆ ತಂಡದ ಪ್ರಯಾಣದ ಭವಿಷ್ಯ ಅಡಗಿದೆ” ಎಂದು ಶುಕ್ಲಾ ಹೇಳಿದರು.

VISTARANEWS.COM


on

Champions Trophy 2025
Koo

ನವದೆಹಲಿ: ಪಾಕಿಸ್ತಾನ ಆತಿಥ್ಯದಲ್ಲಿ ಮುಂದಿನ ವರ್ಷ(2025) ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ(Champions Trophy 2025) ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮಾತ್ರ ಭಾರತ(India Travelling To Pakistan) ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್ಷ ರಾಜೀವ್ ಶುಕ್ಲಾ(Rajeev Shukla) ಹೇಳಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಮುಂದಿನ ವರ್ಷ ಫೆಬ್ರವರಿಯಿಂದ ಮಾರ್ಚ್ 2025 ರವರೆಗೆ ಪಾಕಿಸ್ತಾನದಲ್ಲಿ ನಡೆಯಲಿದೆ. ಪಂದ್ಯಾವಳಿಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂಬ ಮಾಧ್ಯಮ ವರದಿಗಳ ಚರ್ಚೆಯ ಮಧ್ಯೆ ರಾಜೀವ್ ಶುಕ್ಲಾ ಅವರ ಈ ಹೇಳಿಕೆಯಿಂದ ಭಾರತ ತಂಡ ಪಾಕ್​ಗೆ ಪ್ರಯಾಣ ಬೆಳೆಸಲಿದೆಯಾ ಎಂಬ ಭಾರೀ ಕುತೂಹಲ ಮೂಡುವಂತೆ ಮಾಡಿದೆ.

ಎಎನ್‌ಐ ಜತೆ ಮಾತನಾಡಿದ ಶುಕ್ಲಾ, “ಚಾಂಪಿಯನ್ ಟ್ರೋಫಿಯ ಸಂದರ್ಭದಲ್ಲಿ, ಭಾರತ ಸರ್ಕಾರ ನಮಗೆ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ. ಭಾರತ ಸರ್ಕಾರ ನಮಗೆ ಅನುಮತಿ ನೀಡಿದಾಗ ಮಾತ್ರ ನಾವು ನಮ್ಮ ತಂಡವನ್ನು ಕಳುಹಿಸುತ್ತೇವೆ. ಹಾಗಾಗಿ ಭಾರತ ಸರ್ಕಾರದ ನಿರ್ಧಾರದ ಮೇಲೆ ತಂಡದ ಪ್ರಯಾಣದ ಭವಿಷ್ಯ ಅಡಗಿದೆ” ಎಂದು ಶುಕ್ಲಾ ಹೇಳಿದರು.

ನವೆಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಜೂನ್-ಜುಲೈ 2008 ರಲ್ಲಿ ಏಷ್ಯಾ ಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿತ್ತು. ಭಾರತದಲ್ಲಿ ಡಿಸೆಂಬರ್ 2012 ರಿಂದ ಜನವರಿ 2013 ರವರೆಗಿನ ದ್ವಿಪಕ್ಷೀಯ ಸರಣಿಯು ಎರಡು ರಾಷ್ಟ್ರಗಳ ನಡುವಿನ ಅಂತಿಮ ದ್ವಿಪಕ್ಷೀಯ ಸರಣಿಯಾಗಿದೆ. ಇದಾದ ಬಳಿಕ ಉಭಯ ತಂಡಗಳು ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಆಡುತ್ತವೆ.

ಇದನ್ನೂ ಓದಿ Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

ಕಳೆದ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪಾಕ್​ಗೆ ಹೋಗಲು ಒಪ್ಪದ ಕಾರಣ ಹೈಬ್ರೀಡ್​ ಮಾದರಿಯಲ್ಲಿ ಪಾಕ್​ ಮತ್ತು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು. ಭಾರತ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ಪಾಕಿಸ್ತಾನದಲ್ಲಿ ನಡೆದಿದ್ದ ಪಂದ್ಯವಾವಳಿಗೆ ಬಿಸಿಸಿಐ ಅಧ್ಯಕ್ಷ ರೋಜನ್​ ಬಿನ್ನಿ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಹಾಜರಾಗಿದ್ದರು.

ಪಾಕಿಸ್ತಾನ ಕ್ರಿಕೆಟ್ ಮಂಡಳಿಯು(PCB) ಈಗಾಗಲೇ ಟೂರ್ನಿಯ ಪಂದ್ಯಾವಳಿಗೆ ಸ್ಥಳ ನಿಗದಿಪಡಿಸಿದೆ. ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯನ್ನು ಆಯ್ಕೆ ಮಾಡಿಕೊಂಡಿದೆ. ಇದೇ ವೇಳೆ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಭಾರತ ಈ ಬಾರಿ ಪಾಕ್​ನಲ್ಲಿ ಕ್ರಿಕೆಟ್ ಆಡಲಿದೆ ಎಂದು ಬಲವಾದ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜೀವ್ ಶುಕ್ಲಾ ಕೇಂದ್ರ ಸಮ್ಮತಿ ನೀಡಿದರೆ ಪಾಕ್​ಗೆ ಹೋಗಲು ಸಿದ್ಧ ಎಂದು ಹೇಳಿರುವುದು ಅಚ್ಚರಿ ತಂದಿದೆ. ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್​, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶ ಟೂರ್ನಿಗೆ ಅರ್ಹತೆ ಪಡೆದ ತಂಡಗಳಾಗಿವೆ.

Continue Reading
Advertisement
IPL 2024
ಕ್ರೀಡೆ5 mins ago

ICC Ban : ಮ್ಯಾಚ್​ ಫಿಕಿ ವೆಸ್ಟ್ ಇಂಡೀಸ್​ ಆಟಗಾರನಿಗೆ ಐದು ವರ್ಷ ಬ್ಯಾನ್​

lok sabha Election 2024
Lok Sabha Election 202410 mins ago

Lok Sabha Election 2024: ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ; ಮತದಾನಕ್ಕೆ ಬಂದು ಟ್ರೀಟ್‌ ಮಾಡಿದ ಡಾಕ್ಟರ್‌

West Bengal
ದೇಶ35 mins ago

West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ36 mins ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Champions Trophy 2025
ಕ್ರೀಡೆ37 mins ago

Champions Trophy 2025: ಇವರಿಂದ ಒಪ್ಪಿಗೆ ಸಿಕ್ಕರೆ ಪಾಕಿಸ್ತಾನದಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಆಡಲು ಸಿದ್ಧ ಎಂದ ಬಿಸಿಸಿಐ ಉಪಾಧ್ಯಕ್ಷ

Viral News
ವೈರಲ್ ನ್ಯೂಸ್41 mins ago

Viral News: ತಮ್ಮನ ಬದಲು ನೀಟ್‌ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?

Car Accident
ಕರ್ನಾಟಕ44 mins ago

Road Accident: ಮಂಜೇಶ್ವರದಲ್ಲಿ ಆಂಬ್ಯುಲೆನ್ಸ್-ಕಾರಿನ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

Viral Video
ವೈರಲ್ ನ್ಯೂಸ್51 mins ago

Viral Video: ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ಕಿಡಿಗೇಡಿಗಳ ವಿಕೃತಿ; ವಿಡಿಯೋ ವೈರಲ್‌

karnataka rains
ಮಳೆ1 hour ago

Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

India’s Jersey T20 World Cup
ಕ್ರೀಡೆ1 hour ago

India’s Jersey T20 World Cup: ಭಾರತ ತಂಡದ ಹೊಸ ಜೆರ್ಸಿ ಕಂಡು ಟ್ರೋಲ್​ ಮಾಡಿದ ನೆಟ್ಟಿಗರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ36 mins ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ22 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ22 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ23 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

ಟ್ರೆಂಡಿಂಗ್‌