ಮದ್ರಾಸ್‌ ಐಐಟಿಯಿಂದ ನಾಲ್ಕು ವರ್ಷಗಳ ಆನ್‌ಲೈನ್‌ ಬಿಎಸ್‌ ಪದವಿ ಶುರು - Vistara News

ಶಿಕ್ಷಣ

ಮದ್ರಾಸ್‌ ಐಐಟಿಯಿಂದ ನಾಲ್ಕು ವರ್ಷಗಳ ಆನ್‌ಲೈನ್‌ ಬಿಎಸ್‌ ಪದವಿ ಶುರು

ಮದ್ರಾಸ್‌ ಐಐಟಿಯು ಆನ್‌ಲೈನ್‌ನಲ್ಲಿ ಎಲೆಕ್ಟ್ರಾನಿಕ್ಸ್‌ ಸಿಸ್ಟಮ್‌ಗೆ ಸಂಬಂಧಿಸಿದ ನಾಲ್ಕು ವರ್ಷಗಳ ಬಿಎಸ್‌ ಪದವಿಯನ್ನು ಆರಂಭಿಸಿದ್ದು, ದ್ವಿತೀಯ ಪಿಯುಸಿ ಓದಿದವರು ಈ ಪದವಿ ಪಡೆಯಬಹುದಾಗಿದೆ.

VISTARANEWS.COM


on

IIT-Madras launches four-year online BS degree programme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಮದ್ರಾಸ್‌ ಐಐಟಿಯು ಆನ್‌ಲೈನ್‌ನಲ್ಲಿ ಮತ್ತೊಂದು ನಾಲ್ಕು ವರ್ಷಗಳ ಪದವಿಯನ್ನು ಪರಿಚಯಿಸಿದೆ. ಎಲೆಕ್ಟ್ರಾನಿಕ್ಸ್‌ ಸಿಸ್ಟಮ್‌ನಲ್ಲಿ ಬಿಎಸ್‌ ಪದವಿಯನ್ನು ನೀಡಲಾಗುತ್ತಿದ್ದು, ಇದನ್ನು ದ್ವಿತೀಯ ಪಿಯುಸಿ ಓದಿರುವ ಯಾರು ಬೇಕಾದರೂ ಪಡೆದುಕೊಳ್ಳಬಹುದಾಗಿದೆ.

ಎಲೆಕ್ಟ್ರಾನಿಕ್ಸ್‌ ಕ್ಷೇತ್ರದಲ್ಲಿ ಕೌಶಲ ಹೊಂದಿರುವ ಪದವೀಧರರ ಕೊರತೆ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಮದ್ರಾಸ್‌ ಐಐಟಿಯ ಈ ಕ್ರಮ ಮಹತ್ವ ಪಡೆದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಈ ಪದವಿ ನೀಡುವ ಶೈಕ್ಷಣಿಕ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿದ್ದಾರೆ. ಮದ್ರಾಸ್‌ ಐಐಟಿಯ ಪದವಿ ನೀಡುವ ಈ ಕಾರ್ಯಕ್ರಮ ಐತಿಹಾಸಿಕವಾದದು ಎಂದು ಅವರು ಬಣ್ಣಿಸಿದ್ದಾರೆ.

ಪದವಿಗೆ ಅರ್ಹತೆ ಏನು?

ಈ ಪದವಿಯನ್ನು ಎಲೆಕ್ಟ್ರಾನಿಕ್‌ ಸಿಸ್ಟಮ್‌ನಲ್ಲಿ ಆಸಕ್ತಿ ಹೊಂದಿದ ಯಾರು ಬೇಕಾದರೂ ಪಡೆದುಕೊಳ್ಳಬಹುದು. ಇದು ಆನ್‌ಲೈನ್‌ ಪದವಿಯಾಗಿರುವುದರಿಂದ ವಯಸ್ಸಿನ ನಿರ್ಬಂಧಗಳಿಲ್ಲ. ಆದರೆ ವಿದ್ಯಾರ್ಥಿಯು ದ್ವಿತೀಯ ಪಿಯುಸಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರವನ್ನು ಓದಿರಬೇಕು.

ನಾಲ್ಕು ವಾರಗಳ ಅರ್ಹತಾ ಪ್ರಕ್ರಿಯೆಯ ಮೂಲಕ (qualifier process) ಅರ್ಹ ವಿದ್ಯಾರ್ಥಿಗಳನ್ನು ಈ ಪದವಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಅರ್ಹತಾ ಪರೀಕ್ಷೆ ಕೂಡ ನಡೆಯುತ್ತದೆ ಎಂದು ಮದ್ರಾಸ್‌ ಐಐಟಿಯ ನಿರ್ದೇಶಕ ವಿ. ಕಾಮಕೋಟಿ ತಿಳಿಸಿದ್ದಾರೆ. ಮೊಬೈಲ್‌ ಫೋನ್‌, ಇ-ವಾಹನಗಳ ಬಳಕೆ ಹೆಚ್ಚಿರುವುದರಿಂದ ಎಲೆಕ್ಟ್ರಾನಿಕ್‌ ಕ್ಷೇತ್ರದಲ್ಲಿ ನಿಪುಣತೆ ಹೊಂದಿದವರಿಗೆ ಬಹಳ ಬೇಡಿಕೆ ಇದೆ. ಹೀಗಾಗಿ ಈ ಕೋರ್ಸ್‌ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರವಲ್ಲದೆ, ಈಗಾಗಲೇ ವೃತ್ತಿಯಲ್ಲಿರುವವರು ಕೂಡ ತಮ್ಮ ಕೌಶಲವನ್ನು ಹೆಚ್ಚಿಸಿಕೊಳ್ಳಲು ಈ ಪದವಿಯನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಯನ್ನು ಮದ್ರಾಸ್‌ ವಿವಿಯ ವೆಬ್‌ಸೈಟ್‌ನಿಂದ ಪಡೆದುಕೊಳ್ಳಲು ಇಲ್ಲಿ ಕ್ಲಿಕ್‌ ಮಾಡಿ.

ಈ ಪದವಿಯ ಕಾರ್ಯಕ್ರಮದಲ್ಲಿ ಥಿಯರಿ ಮತ್ತು ಲ್ಯಾಬರೋಟರಿ ಕೋರ್ಸ್‌ಗಳಿರಲಿವೆ. ಮದ್ರಾಸ್‌ ಐಐಟಿಯ ಮತ್ತು ಉದ್ಯಮದ ಸಂಪನ್ಮೂಲ ವ್ಯಕ್ತಿಗಳು ಈ ವಿಷಯದ ಕುರಿತು ಪಾಠ ಮಾಡಲಿದ್ದಾರೆ. ವಿದ್ಯಾರ್ಥಿಗಳಿಗೆ ಬೋಧನೆಯ ರೆಕಾರ್ಡ್‌ ಆಗಿರುವ ವಿಡಿಯೋವನ್ನು ಒದಗಿಸಲಾಗುತ್ತದೆ.

ಅಭ್ಯಾಸ ಸಾಮಗ್ರಿಗಳನ್ನು ಒದಗಿಸುವುದರ ಜತೆಗೆ ವಿದ್ಯಾರ್ಥಿಗಳಿಗೆ ತಮ್ಮ ಗೊಂದಲವನ್ನು ಬಗೆಹರಿಸಿಕೊಳ್ಳಲು ಆನ್‌ಲೈನ್‌ ವೇದಿಕೆಯನ್ನು ಕಲ್ಪಿಸಲಾಗುತ್ತದೆ. ಲ್ಯಾಬರೋಟರಿ ಕೋರ್ಸ್‌ಗೆ ವಿದ್ಯಾರ್ಥಿಗಳು ಮದ್ರಾಸ್‌ ಐಐಟಿಗೆ ಹಾಜರಾಗುವುದು ಅವಶ್ಯವಾಗಿದ್ದು, ಪ್ರತಿ ಸೆಮಿಸ್ಟರ್‌ನಲ್ಲಿ ಎರಡು ವಾರಗಳ ಕಾಲ ಅವರು ಲ್ಯಾಬರೋಟರಿ ಕ್ಲಾಸ್‌ಗೆ ಹಾಜರಾಗಿರಬೇಕಿರುತ್ತದೆ ಎಂದು ಐಐಟಿಯು ತಿಳಿಸಿದೆ.

ಇದನ್ನೂ ಓದಿ : Australia -India : ಭಾರತೀಯ ಕಾಲೇಜುಗಳ ಪದವಿಗಳಿಗೆ ಆಸ್ಟ್ರೇಲಿಯಾ ಮಾನ್ಯತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಡಗು

NSS Camp : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ 7 ದಿನಗಳ ಎನ್‌ಎಸ್‌ಎಸ್‌ ಶಿಬಿರಕ್ಕೆ ತೆರೆ

NSS Camp : ಏಳು ದಿನಗಳ ಎನ್‌ಎಸ್‌ಎಸ್‌ ಶಿಬಿರಕ್ಕೆ ತೆರೆಬಿದ್ದಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮನೋಭಾವವನ್ನು ಹುಟ್ಟು ಹಾಕುವ ಎನ್‌ಎಸ್‌ಎಸ್‌ ಶಿಬಿರಗಳು ನಡೆಯುತ್ತಲೇ ಇರಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ. ಪ್ರೊ. ಬಿ.ರಾಘವ ಅಭಿಪ್ರಾಯಪಟ್ಟರು.

VISTARANEWS.COM


on

By

NSS Camp
Koo

ಕೊಡಗು: ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ (NSS Camp) ಸಮಾರೋಪ ಸಮಾರಂಭ ಮಡಿಕೇರಿ ಹೊರವಲಯದ ಗಾಳಿಬೀಡು ಜವಾಹರ್ ನವೋದಯ ಶಾಲೆಯಲ್ಲಿ ಅರ್ಥಪೂರ್ಣವಾಗಿ ನಡೆಯಿತು.

ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಏಳು ದಿನಗಳು ರಾಷ್ಟ್ರೀಯ ಸೇವಾಯ ಯೋಜನೆಯ ಕಾರ್ಯಕ್ರಮಗಳು ನಡೆದಿದ್ದು, 2024ನೇ ಸಾಲಿನ ಶಿಬಿರಕ್ಕೆ ತೆರೆಬಿದ್ದಿದೆ. ರಾಷ್ಟ್ರೀಯ ಸೇವಾ ಯೋಜನೆಯ ಎಲ್ಲಾ ಸ್ವಯಂ ಸೇವಕ ವಿದ್ಯಾರ್ಥಿಗಳು ಶ್ರದ್ಧೆಯಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲು ಇದೊಂದು ಉತ್ತಮ ವೇದಿಕೆಯಾಗಿತ್ತು.

ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಓ.ಎಂ. ಪಂಕಜಾಕ್ಷನ್, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮಾತ್ರವಲ್ಲದೆ, ಜೀವನದ ಸಾರವನ್ನು ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿ ಎಲ್ಲರೂ ಒಂದೇ, ನಾನು ನೀನು ಎನ್ನುವ ಭೇದ-ಭಾವಕ್ಕೆ ಅವಕಾಶವಿಲ್ಲ. ಪರಸ್ಪರ ಸಹಕಾರಿ ಮನೋಭಾವ ರೂಪಿಸಿಕೊಳ್ಳಲು ಬಹಳ ಮುಖ್ಯವಾದ ಶಿಬಿರ ಎಂದು ಸ್ವಯಂಸೇವಕರಿಗೆ ತಿಳಿ ಹೇಳಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ. ಪ್ರೊ. ಬಿ.ರಾಘವ ಮಾತಾನಾಡಿ, ನಮ್ಮ ಕಾಲೇಜಿನಿಂದ ಪ್ರತಿ ವರ್ಷವೂ ವಿಶೇಷ ವಾರ್ಷಿಕ ಶಿಬಿರ ನಡೆಯುತ್ತದೆ. ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ, ಹೊಂದಾಣಿಕೆಯ ಜೀವನ ಹಾಗು ಸರಳ ಜೀವನದ ಮಹತ್ವವನ್ನು ತಿಳಿಸುತ್ತದೆ. ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಕಳೆಯುವ ದಿನಗಳು ಬಹಳ ಮುಖ್ಯವಾದದ್ದು. ನನಗಲ್ಲ ನಿನಗೆ ಎನ್ನುವ ಧ್ಯೇಯದೊಡನೆ ಸರ್ವರನ್ನೂ ಸಮಾನವಾಗಿ ಕಾಣುವ ಮನೋಭಾವವನ್ನು ಹುಟ್ಟು ಹಾಕುವ ಇಂತಹ ಶಿಬಿರಗಳು ನಡೆಯುತ್ತಲೇ ಇರಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ವಿಚಾರಗಳ ಜತೆಗೆ ಇಂತಹ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸಲು ಮನಸ್ಸು ಮಾಡಬೇಕು ಎಂದು ನುಡಿದರು.

ಇದನ್ನೂ ಓದಿ: Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ಧನಾತ್ಮಕ ಮಾನಸಿಕ ದೃಢತೆಗೆ ಸರಿಸಾಟಿ ಬೇರೆಯಿಲ್ಲ

ಗಾಳಿಬೀಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಿರಣ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ನಮ್ಮ ಗ್ರಾಮದಲ್ಲಿ ಹೀಗೊಂದು ಶಿಬಿರ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಚಾರ. ರಾಷ್ಟ್ರೀಯ ಸೇವಾ ಯೋಜನೆಯ ವಿಚಾರಧಾರೆಗಳು ಪ್ರತಿಯೊಬ್ಬ ಮನುಷ್ಯನಿಗೂ ಬಹಳ ಅಗತ್ಯ. ವಿದ್ಯಾರ್ಥಿ ದೆಸೆಯಲ್ಲೇ ಎನ್.ಎಸ್.ಎಸ್ ವಿಚಾರಗಳು ಮನದಲ್ಲಿ ಬೇರೂರಿದರೆ, ಆ ಧನಾತ್ಮಕ ಮಾನಸಿಕ ದೃಢತೆಗೆ ಸರಿಸಾಟಿ ಬೇರೆಯಿಲ್ಲ ಎಂದರು.

ಕಾರ್ಯಕ್ರಮದಲ್ಲಿ‌ ಜವಾಹರ್ ನವೋದಯ ವಿದ್ಯಾಲಯದ ಉಪ ಪ್ರಾಂಶುಪಾಲೆ ಶೋಭಾಮಣಿ, ಯೋಜನಾಧಿಕಾರಿಗಳಾದ ಡಾ. ಗಾಯತ್ರಿ, ಡಾ. ಮಹದೇವಯ್ಯ ಸೇರಿ ಶಿಬಿರಾಧಿಕಾರಿಗಳಾದ ಅಲೋಕ್ ಬಿಜೈ, ಖುರ್ಷಿದಾ ಭಾನು ಭಾಗಿಯಾಗಿದ್ದರು. ಜತೆಗೆ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಹಿಂದಿ ಉಪನ್ಯಾಸಕ ತಳವಾರ್, ಸ್ಥಳೀಯರಾದ ಕೋಚನ ಡಿಶಾಂತ್, ರಾಷ್ಟ್ರೀಯ ಸೇವಾ ಯೋಜನೆಯ ನಾಯಕರು ಹಾಗೂ ಸ್ವಯಂ ಸೇವಕರು ಸೇರಿದಂತೆ ಹಲವರು‌ ಉಪಸ್ಥಿತರಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

NEET 2024: ನೀಟ್‌ ಅಕ್ರಮ; 1,500 ವಿದ್ಯಾರ್ಥಿಗಳ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಸಮಿತಿ ರಚಿಸಿದ ಕೇಂದ್ರ!

NEET 2024: ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಜೂನ್‌ 4ರಂದು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿತ್ತು. ಇದಾದ ಬಳಿಕ ಅಕ್ರಮದ ಆರೋಪ ಕೇಳಿಬಂದಿತ್ತು.

VISTARANEWS.COM


on

NEET 2024
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET 2024) ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದರ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು (Central Government) ಗ್ರೇಸ್‌ ಮಾರ್ಕ್ಸ್‌ (NEET Grace Marks) ಪಡೆದ 1,500 ವಿದ್ಯಾರ್ಥಿಗಳ ಫಲಿತಾಂಶವನ್ನು ಮರು ಮೌಲ್ಯಮಾಪನ ಮಾಡಲು ಸಮಿತಿಯೊಂದನ್ನು ರಚಿಸಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶನಿವಾರ ಮಾಹಿತಿ ನೀಡಿದೆ.

“ನೀಟ್‌ ಬರೆದ ಅಭ್ಯರ್ಥಿಗಳಿಗೆ ರ‍್ಯಾಂಕ್‌ ನೀಡುವ ಮಾನದಂಡಕ್ಕೆ ಗ್ರೇಸ್‌ ಮಾರ್ಕ್ಸ್‌ ನೀಡಿರುವುದರಿಂದ ಯಾವುದೇ ಪರಿಣಾಮ ಉಂಟಾಗಿಲ್ಲ. ಆದರೂ, ಗ್ರೇಸ್‌ ಮಾರ್ಕ್ಸ್‌ ಪಡೆದವರ ಉತ್ತರ ಪತ್ರಿಕೆಗಳನ್ನು ಮತ್ತೆ ಮೌಲ್ಯಮಾಪನ ಮಾಡಲಾಗುತ್ತದೆ. ಕೇಂದ್ರ ಶಿಕ್ಷಣ ಸಚಿವಾಲಯವು ಈ ಕುರಿತು ಸಮಿತಿಯೊಂದನ್ನು ರಚಿಸಿದೆ. ಮರು ಮೌಲ್ಯಮಾಪನದಿಂದ ವಿದ್ಯಾರ್ಥಿಗಳು ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ಯಾವುದೇ ಪರಿಣಾಮ ಉಂಟಾಗುವುದಿಲ್ಲ” ಎಂಬುದಾಗಿ ಎನ್‌ಟಿಎ ಮಹಾ ನಿರ್ದೇಶಕ ಸುಬೋಧ್‌ ಸಿಂಗ್‌ ಮಾಹಿತಿ ನೀಡಿದ್ದಾರೆ. ಹಾಗೆಯೇ, ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ, ಪ್ರಶ್ನೆಪತ್ರಿಕೆಗಳ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ಪ್ರಕರಣ?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ನೀಟ್‌ ಅಕ್ರಮದ ಕುರಿತು ತನಿಖೆಗೆ ಆಗ್ರಹಿಸಿದ್ದರು.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: NEET UG 2024: ನೀಟ್‌ನಲ್ಲಿ ಹೆಚ್ಚು ಅಂಕ ಗಳಿಸಲು ಏನು ಮಾಡಬೇಕು? ಈ ಟಾಪರ್‌ ಹೇಳೋದು ಕೇಳಿ

Continue Reading

ಕರ್ನಾಟಕ

NEET UG 2024: ಯುಜಿ ನೀಟ್: ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಅವಕಾಶ

NEET UG 2024: ನೀಟ್ ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಆಧಾರದ ಮೇಲೆ ಅಭ್ಯರ್ಥಿಯ ಹೆಸರು, ರ‍್ಯಾಂಕ್, ಅಂಕ, ಅರ್ಹತೆಗಳ ಮಾಹಿತಿ ಪಡೆಯಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

VISTARANEWS.COM


on

UG Neet 2024
Koo

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳಿಗೆ ಪ್ರವೇಶ ಬಯಸಿ ಈಗಾಗಲೇ 2024ರ ಯುಜಿ ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡು, ಆನ್ ಲೈನ್ ಅರ್ಜಿ ಸಲ್ಲಿಸಿರುವವರು ಈಗ ಯುಜಿ-ನೀಟ್‌ನಲ್ಲಿ (NEET UG 2024) ಅರ್ಹತೆ ಪಡೆದಿದ್ದಲ್ಲಿ, ಅಂಥವರು ತಮ್ಮ ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಜಾಲತಾಣದಲ್ಲಿ ಪೋರ್ಟಲ್ ತೆರೆಯಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ತಿಳಿಸಿದೆ.

ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದು, ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಆಧಾರದ ಮೇಲೆ ಅಭ್ಯರ್ಥಿಯ ಹೆಸರು, ರ‍್ಯಾಂಕ್, ಅಂಕ, ಅರ್ಹತೆಗಳ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಈಗ ಯುಜಿ ನೀಟ್‌ನಲ್ಲಿ ಅರ್ಹತೆ ಪಡೆದುಕೊಂಡಿದ್ದು, ಈವರೆಗೂ ಯುಜಿ-ಸಿಇಟಿಗೆ ನೋಂದಣಿ ಮಾಡಿಕೊಳ್ಳದೆ ಇರುವವರಿಗೂ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಅವಕಾಶ ನೀಡಲಾಗುವುದು. ಅಭ್ಯರ್ಥಿಗಳು ದಾಖಲಿಸುವ ವಿವರಗಳನ್ನು ವೆಬ್-ಸರ್ವೀಸ್ ಮೂಲಕ ಆನ್‌ಲೈನ್ ಮೂಲಕವೇ ಪರಿಶೀಲಿಸಲಾಗುವುದು. ಹೀಗಾಗಿ ಭೌತಿಕ ಪರಿಶೀಲನೆ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

ರಾಜ್ಯದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಾಧಿಕಾರದಲ್ಲಿ ನೋಂದಣಿ ಮಾಡಿ, ಅರ್ಜಿ ಸಲ್ಲಿಸಿ, ಆನ್‌ಲೈನ್ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ನಮೂದಿಸುವ ಆಪ್ಶನ್ಸ್ (Options)ಪರಿಗಣಿಸಿ, ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು. ಎಂಜಿನಿಯರಿಂಗ್ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳಿಗೆ ಏಕಕಾಲದಲ್ಲೇ ಆಪ್ಶನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಮತ್ತು ಜತೆಯಲ್ಲೇ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ವಿವರಿಸಿದರು.

ಸಂಬಂಧ ವಿವಿಧ ಇಲಾಖೆಗಳು ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರಗಳನ್ನು ಕೆಇಎಗೆ ನೀಡಿದ ಬಳಿಕ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ | Job Alert: ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

Job News

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

Continue Reading

ಶಿಕ್ಷಣ

RTE Admission 2024: ನಾಳೆಯಿಂದ ಆರ್‌ಟಿಇ ಅಡಿ ದಾಖಲಾತಿ ಪ್ರಕ್ರಿಯೆ ಪ್ರಾರಂಭ

RTE Admission 2024 : ಜೂನ್‌ 8ರಿಂದ 2024-25ನೇ ಸಾಲಿಗೆ ಆರ್‌ಟಿಇ ಅಡಿ ಶಾಲೆಗಳಲ್ಲಿ ದಾಖಲಾತಿ ಪ್ರಾರಂಭವಾಗಲಿದೆ. ಈ ಸಂಬಂಧ ಶಿಕ್ಷಣ ಇಲಾಖೆಯು ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

VISTARANEWS.COM


on

By

RTE Admissions 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಶೈಕ್ಷಣಿಕ ಚಟುವಟಿಕೆಗಳು ಶುರುವಾಗಿದ್ದು, ದಾಖಲಾತಿ ಪ್ರಕ್ರಿಯೆಯು ಆರಂಭಗೊಂಡಿದೆ. ಈಗ ಆರ್‌ಟಿಇ ಅಡಿ ಶಾಲಾ ದಾಖಲಾತಿ (RTE Admission 2024) ಜೂನ್‌ 8ರಿಂದ ಪ್ರಾರಂಭವಾಗಲಿದ್ದು, ಜೂ.19ರಂದು ಕೊನೆ ದಿನವಾಗಿದೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈಗಾಗಲೇ ಆರ್‌ಟಿಇ ಪ್ರವೇಶಕ್ಕೆ ಅರ್ಜಿಗಳ ಸಲ್ಲಿಕೆಯಾಗಿದ್ದು, ಡೇಟಾ ಪರಿಶೀಲನೆ ಮಾಡಲಾಗಿದೆ. ಲಾಟರಿ ಪ್ರಕ್ರಿಯೆಯಲ್ಲಿ ಅರ್ಹರ ಪಟ್ಟಿ ಬಿಡುಗಡೆಯಾಗಿದ್ದು, ಜೂ.7ರಂದು ಆನ್‌ಲೈನ್‌ ಮೂಲಕ ಆರ್‌ಟಿಇ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಯಲಿದೆ.

ಮೊದಲ ಸುತ್ತಿನಲ್ಲಿ ಸೀಟು ಪಡೆದವರು ಶಾಲೆಗಳಲ್ಲಿ ಜೂನ್‌ 8ರಿಂದ 19ರವರೆಗೆ ದಾಖಲಾತಿ ಮಾಡಿಕೊಳ್ಳಬೇಕಿದೆ. ಶಾಲೆಗಳಲ್ಲಿ ದಾಖಲಾದ ಮೊದಲ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಲಾಗುತ್ತದೆ. ಜೂನ್‌ 20ವರೆಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರು ಮಾಹಿತಿಯನ್ನು ಅಪ್‌ಲೋಡ್‌ ಮಾಡಬೇಕಿದೆ.

ಮೊದಲ ಸುತ್ತಿನ ಸೀಟು ಹಂಚಿಕೆ ನಂತರ ಜೂನ್‌ 25ರಂದು ಎರನಡೇ ಸುತ್ತಿನ ಸೀಟು ಹಂಚಿಕೆಯನ್ನು ನಡೆಸಲಾಗುತ್ತದೆ. ಎರಡನೇ ಸುತ್ತಿನಲ್ಲಿ ಸೀಟು ಪಡೆದವರು ಶಾಲೆಗಳಲ್ಲಿ ಜೂನ್‌ 26 ರಿಂದ ಜುಲೈ 2ರ ವರೆಗೆ ದಾಖಲಾತಿ ಮಾಡಿಕೊಳ್ಳಬೇಕಿದೆ. ಶಾಲೆಗಳಲ್ಲಿ ದಾಖಲಾದ ಎರಡನೇ ಸುತ್ತಿನ ಮಕ್ಕಳ ವಿವರಗಳನ್ನು ಆಯಾ ಶಾಲಾ ಮುಖ್ಯಸ್ಥರು ಜುಲೈ 3ರಂದು ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಬೇಕಿದೆ.

ಆರ್‌ಟಿಇ ಅಡಿ ಮೊದಲ ಸುತ್ತಿನ ಆನ್‌ಲೈನ್‌ ಲಾಟರಿ ಪ್ರಕ್ರಿಯೆಯನ್ನು ಈ ಮೊದಲು ಜೂ 5ಕ್ಕೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಲಾಟರಿ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು. ಅದರಂತೆ ಜೂ. 7ರಂದು ಶುಕ್ರವಾರ ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆಯು ನಡೆಯಲಿದೆ.

RTE Admissions 2024

ಮೊದಲ ಸುತ್ತಿನಲ್ಲಿ 6,090 ಮಕ್ಕಳು ಅರ್ಹ

2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ ಅರ್ಹ 15,895 ಅರ್ಜಿಗಳನ್ನು ಮೊದಲ ಸುತ್ತಿನ ಲಾಟರಿಗೆ ಪರಿಗಣಿಸಲಾಗಿದೆ. ಜೂ.7ರಂದು ಮೊದಲನೇ ಸುತ್ತಿನ ಲಾಟರಿಯನ್ನು ಆನ್‌ಲೈನ್ ಮೂಲಕ ನಡೆಸಲಾಗಿದೆ.

ಇಂದು ನಡೆದ ಈ ಮೊದಲನೇ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ 6,090 ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮೂಲಕ ಸೀಟು ಹಂಚಿಕೆ ಮಾಹಿತಿಯನ್ನು ನೀಡಲಾಗಿದೆ. ಎಲ್ಲಾ ಪೋಷಕರು ಜೂ.8 ರಿಂದ 19 ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ಸೀಟು ಹಂಚಿಕೆ ಪತ್ರದೊಂದಿಗೆ ಭೇಟಿ ನೀಡಿ ದಾಖಲಾತಿ ಮಾಡಲು ಶಿಕ್ಷಣ ಇಲಾಖೆ ತಿಳಿಸಿದೆ. ಸೀಟು ಹಂಚಿಕೆ ವಿವರ ಇಲಾಖಾ ವೆಬ್‌ಸೈಟ್ ನಲ್ಲಿ ಲಭ್ಯವಿರಲಿದೆ.

ಇದನ್ನೂ ಓದಿ: Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ವಸತಿ ಶಾಲೆಗಳಿಗೂ ಆರ್‌ಟಿಇ ಅನ್ವಯ

ಕರ್ನಾಟಕ ಹೈಕೋರ್ಟ್ ಕಳೆದ ವಾರ ವಸತಿ ಶಾಲೆಗಳಿಗೂ ಆರ್‌ಟಿಐ ಕಾಯಿದೆಯ ಅಂಶಗಳು ಅನ್ವಯವಾಗುತ್ತವೆ ಎಂದು ಆದೇಶ ನೀಡಿತ್ತು. ಇದರಿಂದಾಗಿ ಇನ್ನು ಮುಂದೆ ವಸತಿ ಶಾಲೆಗಳು ಆರ್‌ಟಿಇ ಅನ್ವಯವಾಗುವುದಿಲ್ಲವೆಂದು ಹೇಳುವಂತಿಲ್ಲ. ಅಲ್ಲದೇ ಕೋರ್ಟ್ ತನ್ನ ಆದೇಶದಲ್ಲಿ ಆರ್‌ಟಿಇ ಕಾಯಿದೆ ನಿಯಮ 18ರ ಪ್ರಕಾರ ಮತ್ತು ಕರ್ನಾಟಕ ಆರ್‌ಟಿಇ ಕಾಯಿದೆ ನಿಯಮ 11ರಂತೆ, ನಮೂನೆ-1ರಂತೆ ಸರಕಾರ ಹೊರತುಪಡಿಸಿ ಇತರೆ ಎಲ್ಲಾ ಶಾಲೆಗಳು ಸಕ್ಷಮ ಪ್ರಾಧಿಕಾರದಲ್ಲಿಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಲೇಬೇಕು ಎಂದು ಹೇಳಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Youth Congress National General Secretary Raksha Ramaiah latest statement
ಚಿಕ್ಕಬಳ್ಳಾಪುರ1 min ago

Raksha Ramaiah: ಚಿಕ್ಕಬಳ್ಳಾಪುರದಲ್ಲಿ ನಾನಾ ಕಾರಣಗಳಿಂದ ಮತಗಳನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಿಲ್ಲ: ರಕ್ಷಾ ರಾಮಯ್ಯ

Narendra Modi
ದೇಶ22 mins ago

ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಮೋದಿ ‘ಭಕ್ತ’!

IND vs PAK
ಕ್ರೀಡೆ1 hour ago

IND vs PAK: ಬಾಬರ್‌ ಪಡೆಯನ್ನು ಬೆಂಡೆತ್ತಲಿ ರೋಹಿತ್​ ಸಾರಥ್ಯದ ಟೀಮ್​ ಇಂಡಿಯಾ

Valmiki Corporation Scam
ವೈರಲ್ ನ್ಯೂಸ್1 hour ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಹಣ ಹಿಂತಿರುಗಿಸಲು ತೆಲಂಗಾಣ ಸಿಎಂಗೆ ಪತ್ರ ಬರೆದ ಕನ್ನಡಿಗರು

Mamata Banerjee
ದೇಶ1 hour ago

Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

NSS Camp
ಕೊಡಗು1 hour ago

NSS Camp : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ 7 ದಿನಗಳ ಎನ್‌ಎಸ್‌ಎಸ್‌ ಶಿಬಿರಕ್ಕೆ ತೆರೆ

sonia gandhi
ದೇಶ2 hours ago

Sonia Gandhi: ಮತ್ತೆ ಸೋನಿಯಾ ಗಾಂಧಿಗೆ ಮಣೆ; ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆ!

IND vs PAK
ಕ್ರೀಡೆ2 hours ago

IND vs PAK: ಪಾಕ್​ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಲು ಕೊಹ್ಲಿ ಸಜ್ಜು; ಯಾವುದು ಈ ದಾಖಲೆ?

Karnataka weather Forecast
ಮಳೆ3 hours ago

Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ಬೆಂಗಳೂರು3 hours ago

Wheelchair Cricket Tournament: ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ರವಿಶಂಕರ್ ಗುರೂಜಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌