Karnataka Election 2023: ಸಿಂಧೂರ ಇಡುವವರು ಕಾಂಗ್ರೆಸ್‌ಗೆ ಮತ ನೀಡಬಾರದು: ಸಿ.ಟಿ. ರವಿ - Vistara News

ಕರ್ನಾಟಕ

Karnataka Election 2023: ಸಿಂಧೂರ ಇಡುವವರು ಕಾಂಗ್ರೆಸ್‌ಗೆ ಮತ ನೀಡಬಾರದು: ಸಿ.ಟಿ. ರವಿ

Karnataka Election 2023: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನಡುವೆ ಆಗಾಗ ವಾಕ್ಸಮರಗಳು ನಡೆಯುತ್ತಲೇ ಇವೆ. ಈಗ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿರುವ ಸಿ.ಟಿ. ರವಿ, ಸಿಂಧೂರ ಇಡುವವರು ಕಾಂಗ್ರೆಸ್‌ಗೆ ಮತ ಹಾಕಬೇಡಿ ಎಂದು ಹೇಳಿಕೆ ನೀಡಿದ್ದಾರೆ.

VISTARANEWS.COM


on

many congress leaders fearing loss after siddaramaiah decision regarding kolar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಘೋಷಣೆಗೆ ಮೊದಲೇ ಕಾವು ಪಡೆದುಕೊಂಡಿದೆ. ರಾಜಕೀಯ ನಾಯಕರ ವಾಗ್ದಾಳಿಗಳು ಹೆಚ್ಚುತ್ತಲಿವೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಹಿಂದುತ್ವದ ಪ್ರಸ್ತಾಪವನ್ನು ಮಾಡಿದ್ದಾರೆ. “ಸಿಂಧೂರ ಇಡುವವರು ಕಾಂಗ್ರೆಸ್‌ಗೆ ಮತ ನೀಡಬಾರದು. ಒಬ್ಬ ಮಾಜಿ ಮುಖ್ಯಮಂತ್ರಿಗೆ ಸಿಂಧೂರವನ್ನು ಕಂಡರೇ ಆಗುವುದಿಲ್ಲ. ಅವರಿಗೆ ಸಿಂಧೂರ ಹಾಗೂ ಕೇಸರಿ ಪೇಟ ಅಂದ್ರೆ ಅಲರ್ಜಿ” ಎಂದು ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಿಪ್ಪಾಣಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿಂಧೂರ ಇಡುವ ನೀವು ಯಾವುದೇ ಕಾರಣಕ್ಕೂ ಸಹ ಕಾಂಗ್ರೆಸ್‌ ಪಕ್ಷಕ್ಕೆ ನಿಮ್ಮ ಮತವನ್ನು ನೀಡಬೇಡಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: Women’s Day 2023: ಎರಡು-ಮೂರು ದಿನ ಮುಟ್ಟಿನ ರಜೆ ಕೊಡುವುದು ಅಗತ್ಯ

ಹರಿದು ಬಿದ್ದ ಬೃಹತ್‌ ಮಾಲೆ

ವಿಜಯ ಸಂಕಲ್ಪ ಯಾತ್ರೆ ವೇಳೆ ಬಿಜೆಪಿ ನಾಯಕರಿಗೆ ಹಾಕಲು ಸಿದ್ಧಪಡಿಸಿದ್ದ ಬೃಹತ್‌ ಹೂವಿನ ಮಾಲೆ ಹರಿದು ಬಿದ್ದಿದೆ. ಕ್ರೇನ್ ಮೂಲಕ ಹಾಕಲು ತರುತ್ತಿದ್ದಾಗ ಹೀಗಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಗೋವಿಂದ ಕಾರಜೋಳ ಅವರಿಗೆ ಹಾಕಲು ಬೃಹತ್ ಮಾಲೆಯನ್ನು ತರಲಾಗಿತ್ತು. ವಿವಿಧ ಹೂವುಗಳಿಂದ ಬೃಹದಾಕಾರದ ಮಾಲೆಯನ್ನು ಸಿದ್ಧಪಡಿಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rain News: ಮುಧೋಳದಲ್ಲಿ ಸಿಡಿಲಿಗೆ ಬಾಲಕಿ ಬಲಿ; ಚನ್ನರಾಯಪಟ್ಟಣ, ಗುಂಡ್ಲುಪೇಟೆ ಸೇರಿ ವಿವಿಧೆಡೆ ವರುಣಾರ್ಭಟ

Rain News: ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಲ್ಲಾಪುರದಲ್ಲಿ ಅವಘಡ ನಡೆದಿದೆ. ಹೊಲದಿಂದ ಮನೆಗೆ ತೆರಳುತ್ತಿದ್ದ ವೇಳೆ ಸಿಡಿಲು ಬಡಿದು ಬಾಲಕಿ ಮೃತಪಟ್ಟಿದ್ದಾಳೆ.

VISTARANEWS.COM


on

ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ಭಾರಿ ಮಳೆಯಿಂದ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿತ್ತು.
Koo

ಬಾಗಲಕೋಟೆ: ಸಿಡಿಲಿನ ಹೊಡೆತಕ್ಕೆ ಯುವತಿ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಲ್ಲಾಪುರದಲ್ಲಿ ನಡೆದಿದೆ. ಮುಧೋಳ ಸುತ್ತಮುತ್ತ ಶುಕ್ರವಾರ ಗುಡುಗು-ಮಿಂಚು ಸಮೇತ ಭಾರಿ ಮಳೆ (Rain News) ಸುರಿದಿದ್ದು, ಹೊಲದಿಂದ ಮನೆಗೆ ತೆರಳುತ್ತಿದ್ದ ವೇಳೆ ಸಿಡಿಲು ಬಡಿದು ಯುವತಿ ಕೊನೆಯುಸಿರೆಳೆದಿದ್ದಾಳೆ.

ಮಲ್ಲಾಪುರ ಗ್ರಾಮದ ಭಾಗ್ಯಶ್ರೀ (16) ಸಿಡಿಲಿಗೆ ಬಲಿಯಾದ ಬಾಲಕಿ. ಹೊಲದಿಂದ ಮನೆಗೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದ್ದು, ಸ್ಥಳಕ್ಕೆ ಲೋಕಾಪುರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೋಕಾಪುರದ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

Rain News Bhagyashree

ಆಸ್ಪತ್ರೆಗೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಭೇಟಿ ನೀಡಿ, ಮೃತ ಭಾಗ್ಯಶ್ರೀ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಪರಿಹಾರ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | SubAir facility: ಸಬ್‌ ಏರ್‌ ಸಿಸ್ಟಮ್‌ ಹೇಗೆ ಕಾರ್ಯನಿರ್ವಹಿಸುತ್ತದೆ?; ಮಳೆ ನಿಂತು ಎಷ್ಟು ಗಂಟೆಯಲ್ಲಿ ಪಂದ್ಯ ಆರಂಭ?

ಶಹಾಪುರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನಾದ್ಯಂತ ಶುಕ್ರವಾರ ಗುಡುಗು, ಮಿಂಚು ಸಹಿತ ಭಾರಿ ಮಳೆ ಸುರಿಯಿತು. ವರುಣನ ಆಗಮನದಿಂದ ರೈತಾಪಿ ವರ್ಗದ ಜನರ ಮೊಗದಲ್ಲಿ‌ ಮಂದಹಾಸ ಮೂಡಿದೆ.

ಕೋಟೆನಾಡು ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯಿತು.

ಚನ್ನರಾಯಪಟ್ಟಣದಲ್ಲಿ ರಸ್ತೆಗಳು ಜಲಾವೃತ, ತಹಸೀಲ್ದಾರ್ ಕಚೇರಿಗೆ ನುಗ್ಗಿದ ನೀರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ಸೇರಿ ವಿವಿಧೆಡೆ ವರುಣ ಆರ್ಭಟಿಸಿದ್ದಾನೆ. ಭಾರಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಚನ್ನರಾಯಪಟ್ಟಣದಲ್ಲಿ ಸತತ ಒಂದು ಗಂಟೆ ಸುರಿದ ಮಳೆಯಿಂದ ರಸ್ತೆಗಳು ಜಲಾವೃತವಾಗಿದ್ದವು. ರಸ್ತೆಯಲ್ಲಿ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡಿದರು. ಈ ವೇಳೆ ಕೆಲ ಅಂಗಡಿ ಮಳಿಗೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.

ಇನ್ನು ಹೊಳೆನರಸೀಪುರ ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದೆ. ಬಿರುಗಾಳಿ ಸಹಿತ ಮಳೆಗೆ ತಹಸೀಲ್ದಾರ್ ಕಚೇರಿಗೆ ಮಳೆ ನೀರು ನುಗ್ಗಿದ್ದರಿಂದ ರೆಕಾರ್ಡ್ ರೂಂನಿಂದ ನೀರು ಹೊರ ಹಾಕಲು ಸಿಬ್ಬಂದಿ ಪರದಾಡಿದರು.

ಇದನ್ನೂ ಓದಿ | Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನಲ್ಲಿ ಭರ್ಜರಿ ಮಳೆಯಾಗಿದೆ. ಬಿಡುವು ನೀಡದೆ ಸುರಿದ ಮಳೆಯಿಂದ
ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿತ್ತು. ಇದರಿಂದ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ವಾಹನ ಸವಾರರ ಪರದಾಡಿದರು. ಮತ್ತೊಂದೆಡೆ ಮಳೆ ನೀರಿನಿಂದ ಕೃಷಿ ಜಮೀನುಗಳು ಆವೃತವಾಗಿವೆ. ಬೇಗೂರು, ಬೆಳಚಲವಾಡಿ, ತೆರಕಣಾಂಬಿ ಸುತ್ತಮುತ್ತ ಭರ್ಜರಿ ಮಳೆ ಸುರಿದಿದೆ.

Continue Reading

ದೇಶ

Reliance Jio: ಜಿಯೋ ಏರ್‌ಫೈಬರ್, ಜಿಯೋಫೈಬರ್, ಜಿಯೋ ಮೊಬಿಲಿಟಿ ಗ್ರಾಹಕರಿಗೆ ಫ್ಯಾನ್ ಕೋಡ್ ಒಟಿಟಿ ಸಬ್‌ಸ್ಕ್ರಿಪ್ಷನ್!

Reliance Jio: ಜಿಯೋದಿಂದ ದೇಶದಾದ್ಯಂತ ಇರುವ ಕ್ರೀಡಾ ಉತ್ಸಾಹಿಗಳಿಗೆ ಹೊಸ ಹಾಗೂ ರೋಮಾಂಚಕ ಡಿಜಿಟಲ್ ಅನುಭವವನ್ನು ಪರಿಚಯಿಸಲಾಗಿದ್ದು, ಜಿಯೋ ಏರ್‌ಫೈಬರ್, ಜಿಯೋಫೈಬರ್ ಹಾಗೂ ಜಿಯೋ ಮೊಬಿಲಿಟಿ ಪ್ರೀಪ್ರೇಯ್ಡ್ ಗ್ರಾಹಕರು ಇದೀಗ ‘ಫ್ಯಾನ್ ಕೋಡ್’ಎಂಬ ಪ್ರೀಮಿಯಂ ಕ್ರೀಡಾ ಒಟಿಟಿ ಅಪ್ಲಿಕೇಷನ್‌ಗೆ ಕಾಂಪ್ಲಿಮೆಂಟರಿ ಸಬ್‌ಸ್ಕ್ರಿಪ್ಷನ್ ಪಡೆಯಬಹುದಾಗಿದೆ. ಇದರಲ್ಲಿ ಫ್ಯಾನ್ ಕೋಡ್‌ನ ಎಕ್ಸ್‌ಕ್ಲೂಸಿವ್‌ ಫಾರ್ಮುಲಾ ಒನ್ ಪ್ರಸಾರದ ಕಂಟೆಂಟ್ ಸಂಪರ್ಕ ಸಹ ಪಡೆಯಬಹುದಾಗಿದ್ದು, ಜಿಯೋ ಏರ್‌ಫೈಬರ್, ಜಿಯೋಫೈಬರ್ ಮತ್ತು ಜಿಯೋ ಮೊಬಿಲಿಟಿಯ ಆಯ್ದ ಅರ್ಹ ಗ್ರಾಹಕರಿಗೆ ಮಾತ್ರ ಈ ಕಾಂಪ್ಲಿಮೆಂಟರಿ ಪ್ಲಾನ್ ಅನ್ವಯಿಸುತ್ತವೆ.

VISTARANEWS.COM


on

Fan Code OTT Subscription Now for Jio AirFiber JioFiber Jio Mobility Customers
Koo

ಮುಂಬೈ: ದೇಶದಾದ್ಯಂತ ಇರುವ ಕ್ರೀಡಾ ಉತ್ಸಾಹಿಗಳಿಗೆ ಜಿಯೋದಿಂದ ಹೊಸ ಹಾಗೂ ರೋಮಾಂಚಕ ಡಿಜಿಟಲ್ ಅನುಭವವನ್ನು ಪರಿಚಯಿಸಲಾಗಿದ್ದು, ಜಿಯೋ ಏರ್‌ಫೈಬರ್, ಜಿಯೋಫೈಬರ್ ಹಾಗೂ ಜಿಯೋ ಮೊಬಿಲಿಟಿ (Reliance Jio) ಪ್ರೀಪ್ರೇಯ್ಡ್ ಗ್ರಾಹಕರು ಇದೀಗ ‘ಫ್ಯಾನ್ ಕೋಡ್’ ಎಂಬ ಪ್ರೀಮಿಯಂ ಕ್ರೀಡಾ ಒಟಿಟಿ ಅಪ್ಲಿಕೇಷನ್‌ಗೆ ಕಾಂಪ್ಲಿಮೆಂಟರಿ ಸಬ್‌ಸ್ಕ್ರಿಪ್ಷನ್ ಪಡೆಯಬಹುದಾಗಿದೆ.

ಈ ಆಫರ್ ಮೂಲಕ ಜಿಯೋ ಗ್ರಾಹಕರು ರೋಮಾಂಚಕವಾದ ಮತ್ತು ಕ್ರೀಡೆಯಲ್ಲಿಯೇ ಅತ್ಯುತ್ತಮವಾದ ನೇರಪ್ರಸಾರದ ಅನುಭವವನ್ನು ಪಡೆಯಬಹುದು. ಇದರಲ್ಲಿ ಫ್ಯಾನ್ ಕೋಡ್‌ನ ಎಕ್ಸ್‌ಕ್ಲೂಸಿವ್‌ ಫಾರ್ಮುಲಾ ಒನ್ ಪ್ರಸಾರದ ಕಂಟೆಂಟ್ ಸಂಪರ್ಕ ಸಹ ಪಡೆಯಬಹುದಾಗಿದ್ದು, ಜಿಯೋ ಏರ್‌ಫೈಬರ್, ಜಿಯೋಫೈಬರ್ ಮತ್ತು ಜಿಯೋ ಮೊಬಿಲಿಟಿಯ ಆಯ್ದ ಅರ್ಹ ಗ್ರಾಹಕರಿಗೆ ಮಾತ್ರ ಈ ಕಾಂಪ್ಲಿಮೆಂಟರಿ ಪ್ಲಾನ್ ಅನ್ವಯಿಸುತ್ತವೆ.

ಜಿಯೋ ಏರ್‌ಫೈಬರ್ ಮತ್ತು ಜಿಯೋಫೈಬರ್ ಗ್ರಾಹಕರು 1199 ರೂಪಾಯಿ ಮತ್ತು ಮೇಲ್ಪಟ್ಟ ಪ್ಲಾನ್‌ಗೆ ಸಬ್‌ಸ್ಕ್ರಿಪ್ಷನ್ ಪಡೆದಾಗ ಕಾಂಪ್ಲಿಮೆಂಟರಿ ಆಗಿ ಫ್ಯಾನ್ ಕೋಡ್ ಪಡೆಯುವುದಕ್ಕೆ ಅರ್ಹರು. ಅದೇ ರೀತಿ ಜಿಯೋ ಮೊಬಿಲಿಟಿ ಪ್ರಿಪೇಯ್ಡ್ ಗ್ರಾಹಕರು ತಮ್ಮ ಈಗಿರುವ ರೂ. 398, ರೂ. 1198, ರೂ. 4498 ಪ್ಲಾನ್‌ಗಳ ಮೂಲಕ ಅಥವಾ ಹೊಚ್ಚ ಹೊಸದಾದ 3333 ರೂಪಾಯಿಯ ವಾರ್ಷಿಕ ಪ್ಲಾನ್ ಬಳಸುತ್ತಿದ್ದಲ್ಲಿ ಈ ಕಾಂಪ್ಲಿಮೆಂಟರಿ ಫ್ಯಾನ್ ಕೋಡ್ ಪಡೆಯಬಹುದು. ಯಾವುದೇ ಹೆಚ್ಚುವರಿಯಾದ ಶುಲ್ಕ ಇಲ್ಲದೆ ಈ ಕಾಂಪ್ಲಿಮೆಂಟರಿ ಯೋಜನೆ ಸೇರ್ಪಡೆ ಆಗುತ್ತದೆ. ಹೊಸ ಹಾಗೂ ಈಗಾಗಲೇ ಗ್ರಾಹಕರಾದವರಿಗೆ ಈ ಪ್ಲಾನ್ ದೊರೆಯುತ್ತದೆ.

ಇದನ್ನೂ ಓದಿ: Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

ಫ್ಯಾನ್ ಕೋಡ್ ಎಂಬುದು ಪ್ರಮುಖ ಕ್ರೀಡಾ ಸ್ಟ್ರೀಮಿಂಗ್ ಪ್ಲಾಟ್ ಫಾರ್ಮ್. ಇದು ಇಂಟರ್ ಆಕ್ಟಿವ್ ನೇರ ಪ್ರಸಾರವನ್ನು ತರುತ್ತದೆ. ಪ್ರೀಮಿಯರ್ ಕ್ರಿಕೆಟ್ ಪಂದ್ಯಾವಳಿಗಳು, ಮಹಿಳಾ ಕ್ರಿಕೆಟ್, ಫುಟ್‌ಬಾಲ್ ನೇರಪ್ರಸಾರ, ಬ್ಯಾಸ್ಕೆಟ್ ಬಾಲ್, ಬೇಸ್ ಬಾಲ್, ಕುಸ್ತಿ, ಬ್ಯಾಡ್ಮಿಂಟನ್ ಮತ್ತು ಇತರ ಪ್ರಮುಖ ಕ್ರೀಡಾ ಕಾರ್ಯಕ್ರಮಗಳು ಪ್ರಸಾರ ಆಗುತ್ತವೆ. ಫಾರ್ಮುಲಾ 1 ಉತ್ಸಾಹಿಗಳ ಮಧ್ಯೆ ಇದು ಬಹಳ ಖ್ಯಾತಿಯನ್ನು ಪಡೆದಿದೆ. 2024 ಮತ್ತು 2025ನೇ ಇಸವಿಗೆ ಫಾರ್ಮುಲಾ 1 ಭಾರತದ ಪ್ರಸಾರ ಹಕ್ಕುಗಳನ್ನು ತನ್ನದಾಗಿಸಿಕೊಂಡಿದೆ. ಬಳಕೆದಾರರು ನೈಜ ಸಮಯದ ಪಂದ್ಯದ ಮುಖ್ಯಾಂಶಗಳು, ಸಂಪೂರ್ಣ ಮ್ಯಾಚ್ ವಿಡಿಯೋಗಳು, ಭಾರತೀಯ ಕ್ರಿಕೆಟ್ ಪ್ರಮುಖಾಂಶಗಳು, ದತ್ತಾಂಶ, ಅಂಕಿ-ಅಂಶಗಳು, ಗಹನವಾದ ವಿಶ್ಲೇಷಣೆ, ಫ್ಯಾಂಟಸಿ ಸ್ಪೋರ್ಟ್ಸ್ ಒಳನೋಟಗಳು, ಮತ್ತು ವಿಶ್ವ ಮಟ್ಟದ ಕ್ರೀಡೆಗೆ ಸಂಬಂಧಿಸಿದ ಬ್ರೇಕಿಂಗ್ ಸುದ್ದಿ ಇವೆಲ್ಲವೂ ದೊರೆಯುತ್ತವೆ.

ಕಾಂಪ್ಲಿಮೆಂಟರಿ ಸಂಪರ್ಕದಿಂದ ಏನೇನು ದೊರೆಯಲಿದೆ?

ಪ್ರೀಮಿಯಂ ಫ್ಯಾನ್ ಕೋಡ್ ಕಂಟೆಂಟ್

ಫ್ಯಾನ್ ಕೋಡ್‌ನ ಎಕ್ಸ್‌ಕ್ಲೂಸಿವ್ ಆದ ಕ್ರೀಡಾ ಕಂಟೆಂಟ್‌ಗಳನ್ನು ಯಾವುದೇ ಅಡೆತಡೆಗಳಿಲ್ಲದೆ ಜಿಯೋಟಿವಿ+ ಅಥವಾ ಜಿಯೋಟಿವಿ ಅಪ್ಲಿಕೇಷನ್ ಮೂಲಕ ವೀಕ್ಷಣೆ ಮಾಡಬಹುದು.

ಇದನ್ನೂ ಓದಿ: Delhi Airport: ಹಾರುತ್ತಿದ್ದ ವಿಮಾನದಲ್ಲಿ ಅಗ್ನಿ ಅವಘಡ; ದೆಹಲಿ ಏರ್‌ಪೋರ್ಟ್‌ನಲ್ಲಿ ಎಮರ್ಜನ್ಸಿ ಘೋಷಣೆ!

ಎಫ್1 ಸಂಪರ್ಕ

2024 ಮತ್ತು 2025ನೇ ಋತುವಿಗೆ ಫಾರ್ಮುಲಾ 1 ಭಾರತದ ಪ್ರಸಾರ ಹಕ್ಕುಗಳನ್ನು ಫ್ಯಾನ್ ಕೋಡ್ ತನ್ನದಾಗಿಸಿಕೊಂಡಿದೆ. ಭಾರತೀಯ ಅಭಿಮಾನಿಗಳು ರೇಸ್‌ಗಳನ್ನು ಫ್ಯಾನ್ ಕೋಡ್ ಮೂಲಕ ಸ್ಮಾರ್ಟ್ ಟೀವಿಗಳು, ಮೊಬೈಲ್ ಫೋನ್ ಮತ್ತು ಟ್ಯಾಬ್ಲೆಟ್ ಗಳಲ್ಲಿ ವೀಕ್ಷಿಸಬಹುದು. ಇನ್ನು ಕವರೇಜ್‌ನಲ್ಲಿ ಅಭ್ಯಾಸ, ಅರ್ಹತಾ ಸೆಷನ್‌ಗಳು, ಸ್ಪ್ರಿಂಟ್ ರೇಸ್‌ಗಳು ಹಾಗೂ ಗ್ರಾಂಡ್ ಪ್ರಿಕ್ಸ್ ಒಳಗೊಂಡಿರುತ್ತದೆ.

ವಿಸ್ತೃತವಾದ ಕವರೇಜ್

ಪ್ರಮುಖ ಕ್ರೀಡಾ ಪಂದ್ಯಾವಳಿಗಳ ನೇರಪ್ರಸಾರ, ಆಳವಾದ ವಿಶ್ಲೇಷಣೆ ಮತ್ತು ರಿಯಲ್ ಟೈಮ್ ವಿಶ್ಲೇಷಣೆ ಇರುತ್ತದೆ.

ಸಮಗ್ರವಾದ ಸ್ಪೋರ್ಟ್ಸ್ ಲೈಬ್ರರಿ

ಪಂದ್ಯಾವಳಿಯ ಪ್ರಮುಖಾಂಶಗಳು, ಸಂಪೂರ್ಣವಾದ ಅಂಕಿ- ಅಂಶ, ಮತ್ತು ಕ್ರೀಡಾ ಒಳನೋಟಕ್ಕೆ ಸಂಪರ್ಕ ದೊರೆಯುತ್ತದೆ.

ತಾಜಾ ಸುದ್ದಿ ಬಗ್ಗೆ ಅಪ್‌ಡೇಟ್

ಭಾರತೀಯ ಕ್ರಿಕೆಟ್ ಮತ್ತು ಜಾಗತಿಕ ಕ್ರೀಡೆಗಳ ತಾಜಾ ಸುದ್ದಿ ಬಗ್ಗೆ ಅಪ್‌ಡೇಟ್ ದೊರೆಯುತ್ತದೆ.

ಹೊಸ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್

ಜಿಯೋದಿಂದ ಹೊಸದಾಗಿ 3333 ರೂ. ಪ್ಲಾನ್ ಇದ್ದು, ಇದರಲ್ಲಿ 2.5 ಜಿಬಿ/ದಿನಕ್ಕೆ ನೀಡುತ್ತಿದೆ, ಈ ಪ್ಲ್ಯಾನ್ ಜತೆಗೆ ಕಾಂಪ್ಲಿಮೆಂಟರಿ ಆಗಿ ಫ್ಯಾನ್‌ಕೋಡ್ ಚಂದಾದಾರಿಕೆ ದೊರೆಯುತ್ತದೆ.

ಇದನ್ನೂ ಓದಿ: SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

ಜಿಯೋ ಏರ್‌ಫೈಬರ್, ಜಿಯೋಫೈಬರ್ ಮತ್ತು ಮತ್ತು ಪ್ರಿಪೇಯ್ಡ್ ಮೊಬಿಲಿಟಿ ಪ್ಲಾನ್ ಬಳಕೆದಾರರು ಅರ್ಹ ಯೋಜನೆಗಳನ್ನು ಹೊಂದಿದ್ದಲ್ಲಿ ಈಗ ಕ್ರೀಡಾ ಜಗತ್ತಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಹುದು, ಅದರಲ್ಲೂ ವಿಶೇಷವಾಗಿ ಎಫ್ 1ಗೆ ಸಂಬಂಧಿಸಿದಂತೆ ಈ ಹಿಂದೆಂದಿಗಿಂತಲೂ ಹೆಚ್ಚು ತೊಡಗಿಸಿಕೊಳ್ಳಬಹುದು. ಈ ಕೊಡುಗೆಯು ಜಿಯೋ ಬಳಕೆದಾರರಿಗೆ ಹೆಚ್ಚಿನ ಗುಣಮಟ್ಟದ ಕ್ರೀಡಾ ಕಂಟೆಂಟ್‌ಗೆ ಸಂಪರ್ಕ ಹೊಂದಿದ್ದು, ಮನರಂಜನೆ, ಸುದ್ದಿ, ಆಧ್ಯಾತ್ಮಿಕ ಇತ್ಯಾದಿ ಕಂಟೆಂಟ್‌ಗಳು ಸಹ ಇದ್ದು, ಇತರ ಪ್ರಕಾರಗಳಲ್ಲಿ ಕಂಟೆಂಟ್‌ನ ವಿಶಾಲವಾದ ಲೈಬ್ರರಿಯನ್ನು ಹೊಂದಿದೆ ಎಂದು ಖಚಿತಪಡಿಸುತ್ತದೆ. ಇದರಿಂದಾಗಿ ಬಳಕೆದಾರರ ವೀಕ್ಷಣೆಯ ಅನುಭವವನ್ನು ಹೆಚ್ಚಿಸುತ್ತದೆ ಮತ್ತು ಅವರ ನೆಚ್ಚಿನ ಆನ್-ಡಿಮಾಂಡ್ ವಿಡಿಯೋಗಳೊಂದಿಗೆ ಯಾವಾಗಲೂ ಸಂಪರ್ಕದಲ್ಲಿ ಇರಿಸುತ್ತದೆ ಎಂದು ತಿಳಿಸಿದೆ.

Continue Reading

ವಿಜಯನಗರ

Vijayanagara News: ಗಂಡಬೊಮ್ಮನಹಳ್ಳಿಯ ಗೋಶಾಲೆಗೆ ಉಪ ವಿಭಾಗಾಧಿಕಾರಿ ಭೇಟಿ, ಪರಿಶೀಲನೆ

Vijayanagara News: ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಹೋಬಳಿಯ ಗಂಡಬೊಮ್ಮನಹಳ್ಳಿ ಗ್ರಾಮದಲ್ಲಿರುವ ಗೋಶಾಲೆಗೆ ವಿಜಯನಗರ ಉಪವಿಭಾಗಾಧಿಕಾರಿ ನೊಂಗ್ಡಾಯ್‌ ಮಹಮ್ಮದ್‌ ಅಲಿ ಅಕ್ರಂ ಷಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗೋಶಾಲೆಯಲ್ಲಿರುವ ಜಾನುವಾರುಗಳಿಗೆ ಮೇವಿನ ಕೊರತೆ ಮತ್ತು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಅವರು ಸೂಚಿಸಿದರು.

VISTARANEWS.COM


on

AC visited Gandabommanahalli Goshala and inspected
Koo

ಕೂಡ್ಲಿಗಿ: ತಾಲೂಕಿನ ಗುಡೆಕೋಟೆ ಹೋಬಳಿಯ ಗಂಡಬೊಮ್ಮನಹಳ್ಳಿ ಗ್ರಾಮದಲ್ಲಿರುವ ಗೋಶಾಲೆಗೆ ವಿಜಯನಗರ ಉಪವಿಭಾಗಾಧಿಕಾರಿ ನೊಂಗ್ಡಾಯ್‌ ಮಹಮ್ಮದ್‌ ಅಲಿ ಅಕ್ರಂ ಷಾ ಭೇಟಿ ನೀಡಿ, ಪರಿಶೀಲನೆ (Vijayanagara News) ನಡೆಸಿದರು.

ಇದನ್ನೂ ಓದಿ: Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

ಗಂಡಬೊಮ್ಮನಹಳ್ಳಿಯಲ್ಲಿ ಈಗಾಗಲೆ ಮೇವು ಬ್ಯಾಂಕ್‌ ಸ್ಥಾಪಿಸಲಾಗಿದ್ದು, ಜಾನುವಾರುಗಳಿಗೆ ಅಗತ್ಯವಿರುವ ಮೇವು ದಾಸ್ತಾನು ಮಾಡಲಾಗಿದೆ. ಗೋಶಾಲೆಯಲ್ಲಿ ಜಾನುವಾರುಗಳಿಗೆ ಅಗತ್ಯ ಮೇವು, ನೀರು, ನೆರಳಿನ ವ್ಯವಸ್ಥೆಯನ್ನು ಕೈಗೊಂಡಿರುವ ಕುರಿತು ಅವರು ಪರಿಶೀಲನೆ ನಡೆಸಿದರು.

ಗೋಶಾಲೆಯಲ್ಲಿರುವ ಜಾನುವಾರುಗಳಿಗೆ ಮೇವಿನ ಕೊರತೆ ಮತ್ತು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದ ಅವರು, ಗೋಶಾಲೆಗೆ ಅವಶ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಉಪವಿಭಾಗಾಧಿಕಾರಿ ನೊಂಗ್ಡಾಯ್‌ ಮಹಮ್ಮದ್‌ ಅಲಿ ಅಕ್ರಂ ಷಾ ತಿಳಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

ಈ ಸಂದರ್ಭದಲ್ಲಿ ತಹಸೀಲ್ದಾರ್ ರಾಜು ಪಿರಂಗಿ, ತಾಪಂ ಇಒ ವೈ. ರವಿಕುಮಾರ್, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಲೋಹಿತ್ ಕುಮಾರ್‌, ಉಪ ತಹಸೀಲ್ದಾರ್ ಕೊಟ್ರಮ್ಮ, ಕಂದಾಯ ನಿರೀಕ್ಷಕ ಚೌಡಪ್ಪ, ಸಿಬ್ಬಂದಿಗಳಾದ ಯಶ್ವಂತ್, ವೀರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Toyota: ಟೊಯೊಟಾ ಕೌಶಲ್ಯ ಕೋರ್ಸ್‌ಗೆ ಅರ್ಜಿ ಆಹ್ವಾನ; ಗ್ರಾಮೀಣ ಯುವಕರೇ ಈ ಅವಕಾಶ ಬಳಸಿಕೊಳ್ಳಿ

Toyota: ಗ್ರಾಮೀಣ ಯುವಕರನ್ನು ವಿಶ್ವದರ್ಜೆಯ ಸ್ಪರ್ಧಾತ್ಮಕ ತಂತ್ರಜ್ಞರನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ತನ್ನ ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮತ್ತು ಟೊಯೊಟಾ ಕೌಶಲ್ಯ ಕಾರ್ಯಕ್ರಮಗಳಿಗೆ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿದ್ದು, ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮೂರು ವರ್ಷಗಳ ವಸತಿ ಕೋರ್ಸ್ ಮೂಲಕ ಸಮಗ್ರ ತರಬೇತಿಯನ್ನು ನೀಡುತ್ತದೆ. ಇನ್ನು ಟೊಯೊಟಾ ಕೌಶಲ್ಯ ಕೋರ್ಸ್ ಉದ್ಯೋಗ ತರಬೇತಿಯೊಂದಿಗೆ ಉದ್ಯಮ ಸಮೃದ್ಧ ಪಠ್ಯಕ್ರಮದೊಂದಿಗೆ “ಕಲಿಯಿರಿ ಮತ್ತು ಸಂಪಾದಿಸಿ” ಪರಿಕಲ್ಪನೆಯಾಗಿದ್ದು, ಸಮಗ್ರ ಎರಡು ವರ್ಷಗಳ ವಸತಿ ಕೋರ್ಸ್ ಆಗಿದೆ.

VISTARANEWS.COM


on

Application Invited for TTTI and Toyota Skill Courses from Toyota Technical Training Institute
Koo

ಬೆಂಗಳೂರು: ಗ್ರಾಮೀಣ ಯುವಕರನ್ನು ವಿಶ್ವದರ್ಜೆಯ ಸ್ಪರ್ಧಾತ್ಮಕ ತಂತ್ರಜ್ಞರನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ವತಿಯಿಂದ ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮತ್ತು ಟೊಯೊಟಾ (Toyota) ಕೌಶಲ್ಯ ಕಾರ್ಯಕ್ರಮಗಳಿಗೆ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿದೆ.

ಕರ್ನಾಟಕದ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದಿರುವ ಶೈಕ್ಷಣಿಕ ಆಸಕ್ತಿಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿಯನ್ನು ನೀಡಲಾಗುತ್ತಿದ್ದು, ಇದರಿಂದ ಗ್ರಾಮೀಣ ವಿದ್ಯಾರ್ಥಿಗಳು ನುರಿತ ತಂತ್ರಜ್ಞರಾಗಿ ವೃತ್ತಿಜೀವನವನ್ನು ಮುಂದುವರಿಸಲು ಸಶಕ್ತರಾಗಲಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮೂರು ವರ್ಷಗಳ ವಸತಿ ಕೋರ್ಸ್ ಮೂಲಕ ಸಮಗ್ರ ತರಬೇತಿಯನ್ನು ನೀಡುತ್ತದೆ. ಇತ್ತೀಚೆಗೆ ಪರಿಚಯಿಸಲಾದ ಟೊಯೊಟಾ ಕೌಶಲ್ಯ ಕಾರ್ಯಕ್ರಮದ ಜತೆಗೆ ಕೌಶಲ್ಯ, ಜ್ಞಾನ ಮತ್ತು ನಡವಳಿಕೆ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದೆ, ಇದು ಉತ್ಪಾದನಾ ಉದ್ಯಮಕ್ಕೆ ನಿರ್ಣಾಯಕವಾದ ಕೌಶಲ್ಯಗಳೊಂದಿಗೆ ಯುವಕರನ್ನು ಸಜ್ಜುಗೊಳಿಸಲು ವಿನ್ಯಾಸಗೊಳಿಸಲಾದ ಸಮಗ್ರ ಎರಡು ವರ್ಷಗಳ ವಸತಿ ಕೋರ್ಸ್ ಆಗಿದೆ. ಆ ಮೂಲಕ ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸುತ್ತದೆ. ‘ಕಲಿಯಿರಿ ಮತ್ತು ಸಂಪಾದಿಸಿ’ ಮಾದರಿಯ ಮೂಲಕ ಭಾಗವಹಿಸುವವರು ಆನ್-ದಿ-ಜಾಬ್ ಟ್ರೈನಿಂಗ್ (ಒಜೆಟಿ) ಜತೆಗೆ ಸೈದ್ಧಾಂತಿಕ ಕಲಿಕೆಯಲ್ಲಿ ವಿದ್ಯಾರ್ಥಿಗಳು ತೊಡಗುತ್ತಾರೆ.

ಮಾಸ್ಟರ್ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿರುವ ಅನುಭವಿ ಮೇಲ್ವಿಚಾರಕರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುವವರು ಉದ್ಯಮದ ಮಾನದಂಡಗಳಿಗೆ ಅನುಗುಣವಾಗಿ ಉನ್ನತ ಶ್ರೇಣಿಯ ಬೋಧನೆಯಿಂದ ಪ್ರಯೋಜನ ಪಡೆಯುತ್ತಾರೆ. ಇದು ಉತ್ತಮ ಗುಣಮಟ್ಟದ ತರಬೇತಿಯನ್ನು ಪಡೆಯುವುದನ್ನು ಖಚಿತಪಡಿಸುತ್ತದೆ. ಕೈಗಾರಿಕಾ ಮಾನದಂಡಗಳಿಗೆ ಅನುಗುಣವಾಗಿ ಪರಿಣಿತಿಯನ್ನು ಬೆಳೆಸುತ್ತದೆ. ಹೆಚ್ಚುವರಿಯಾಗಿ ಈ ಕಾರ್ಯಕ್ರಮವು ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತದೆ. ತರಬೇತಿ ಪಡೆಯುವವರಿಗೆ ಸುಧಾರಿತ ಕೌಶಲ್ಯ ಮತ್ತು ಜ್ಞಾನ ಸಂಪಾದನೆಯೊಂದಿಗೆ ಕಠಿಣ ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಪಡೆಯಲಿದ್ದಾರೆ.

ಈ ಬಗ್ಗೆ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಣಕಾಸು ಮತ್ತು ಆಡಳಿತದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜಿ.ಶಂಕರ ಮಾತನಾಡಿ, “2024 ನೇ ಸಾಲಿಗೆ ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆಗೆ (ಟಿಟಿಟಿಐ) ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ನಮ್ಮ ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮತ್ತು ಟೊಯೊಟಾ ಕೌಶಲ್ಯ ಕಾರ್ಯಕ್ರಮದ ಮೂಲಕ ನಾವು ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯ ಮತ್ತು ಮನೋಭಾವವನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸುತ್ತೇವೆ. ವಿದ್ಯಾರ್ಥಿಗಳನ್ನು 360 ಡಿಗ್ರಿ ದೃಷ್ಟಿಕೋನದಿಂದ ಅಭಿವೃದ್ಧಿ ಪಡಿಸುತ್ತೇವೆ. ಇದರ ಪರಿಣಾಮವಾಗಿ ನಮ್ಮ ಪದವೀಧರರು ಭಾರತದಲ್ಲಿ ಮತ್ತು ಜಪಾನ್ ಮತ್ತು ಮಧ್ಯಪ್ರಾಚ್ಯ ದೇಶಗಳು ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. 2007 ರಲ್ಲಿ ಪ್ರಾರಂಭವಾದಾಗಿನಿಂದ ಟಿಟಿಟಿಐ 900ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಶಸ್ವಿಯಾಗಿ ಪದವಿ ಪಡೆದಿದ್ದಾರೆ.

ಇದನ್ನೂ ಓದಿ: Bhatkal News: ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

ಟಿಟಿಟಿಐ ಪದವೀಧರರು ರಾಷ್ಟ್ರೀಯ ಕೌಶಲ್ಯ ಸ್ಪರ್ಧೆ ಮತ್ತು ವಿಶ್ವ ಕೌಶಲ್ಯ ಸ್ಪರ್ಧೆಯಂತಹ ಪ್ರತಿಷ್ಠಿತ ಸ್ಪರ್ಧೆಗಳಲ್ಲಿ ಪ್ರಶಂಸನೀಯ ಸಾಧನೆಗಳನ್ನು ಮಾಡಿದ್ದಾರೆ. ಆ ಮೂಲಕ ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದಾರೆ ಎಂದು ನಾವು ಹೆಮ್ಮೆಪಡುತ್ತೇವೆ. “ಸ್ಕಿಲ್ ಇಂಡಿಯಾ” ಮಿಷನ್‌ಗೆ ಕೊಡುಗೆ ನೀಡಲು ನಾವು ಹೆಮ್ಮೆಪಡುತ್ತೇವೆ. ಮುಂದಿನ ಪೀಳಿಗೆಯ ನುರಿತ ವೃತ್ತಿಪರರನ್ನು ಟೊಯೊಟಾ ಕುಟುಂಬಕ್ಕೆ ಸ್ವಾಗತಿಸಲು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಟಿಟಿಟಿಐ ಇತ್ತೀಚೆಗೆ ತನ್ನ ದಾಖಲಾತಿ ಸಮಾರ್ಥ್ಯವನ್ನು 600 ರಿಂದ 1200 ಕ್ಕೆ ದ್ವಿಗುಣಗೊಳಿಸಿದೆ. ಇದರಲ್ಲಿ 600 ಮಹಿಳಾ ವಿದ್ಯಾರ್ಥಿಗಳು ಸೇರಿದ್ದಾರೆ. ಅದರ ವಿಸ್ತರಣೆಯ ಪ್ರಮುಖ ಅಂಶವಾಗಿ ಲಿಂಗ ವೈವಿಧ್ಯತೆಯನ್ನು (ಲಿಂಗ ಸಮಾನತೆ) ಹೆಚ್ಚಿಸುವತ್ತ ದೃಢವಾದ ಗಮನ ಹರಿಸಲಾಗಿದೆ.

ಕೌಶಲ್ಯವನ್ನು ಉತ್ತೇಜಿಸಲು, ಟಿಟಿಟಿಐ ಜಪಾನ್ ಇಂಡಿಯಾ ಇನ್ಸ್ಟಿಟ್ಯೂಟ್ ಫಾರ್ ಮ್ಯಾನುಫ್ಯಾಕ್ಚರಿಂಗ್ (ಜಿಐಎಂ) ಕೌಶಲ್ಯ ವರ್ಗಾವಣೆ ಉತ್ತೇಜನ ಕಾರ್ಯಕ್ರಮದ ಅಡಿಯಲ್ಲಿ ಸಂಸ್ಥೆಗಳಲ್ಲಿ ಒಂದಾಗಿದೆ. ಇದು ಜಪಾನೀಸ್ ಶೈಲಿಯ ಉತ್ಪಾದನಾ ಕೌಶಲ್ಯಗಳು ಮತ್ತು ಅಭ್ಯಾಸಗಳನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಆ ಮೂಲಕ ಭಾರತ ಸರ್ಕಾರದ ‘ಸ್ಕಿಲ್ ಇಂಡಿಯಾ’ ಮಿಷನ್‌ಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಟಿಟಿಟಿಐ ರೆಗ್ಯುಲರ್ ಕೋರ್ಸ್

ಈ ಕೋರ್ಸ್‌ ಕೌಶಲ್ಯ, ಜ್ಞಾನ ಮತ್ತು ನಡವಳಿಕೆ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದ ಸಮಗ್ರ ತರಬೇತಿ ವಿಧಾನವಾಗಿದೆ.

ಕೋರ್ಸ್‌ ಅವಧಿ: 3 ವರ್ಷಗಳು, ಕೋರ್ಸ್‌ಗೆ ಸೇರಲು ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಪಾಸ್‌ ಒಟ್ಟಾರೆ ಶೇ.50 ಅಂಕ, ಗಣಿತ ಮತ್ತು ವಿಜ್ಞಾನ ತಲಾ ಶೇ.45 ರಷ್ಟು ಅಂಕ ಪಡೆದಿರಬೇಕು. ವಯಸ್ಸಿನ ಅರ್ಹತೆ: 16-17 ವರ್ಷದವರಾಗಿರಬೇಕು. ಕೋರ್ಸ್‌ ಟ್ರೇಡ್ಸ್: ಆಟೋಮೋಟಿವ್ ವೆಲ್ಡ್, ಆಟೋಮೋಟಿವ್ ಪೇಂಟ್, ಆಟೋಮೋಟಿವ್ ಅಸೆಂಬ್ಲಿ, ಮೆಕಾಟ್ರಾನಿಕ್ಸ್ ಆಗಿವೆ.

ಈ ಮೂರು ವರ್ಷದ ಕೋರ್ಸ್‌ಗೆ ಸೇರುವವರಿಗೆ ನ್ಯಾಷನಲ್ ಅಪ್ರೆಂಟಿಸ್ ಸರ್ಟಿಫಿಕೇಟ್‌ ಸಿಗಲಿದೆ. ಟೊಯೋಟಾ, ಜಿಮ್ (ಜಪಾನ್-ಇಂಡಿಯಾ ಇನ್ಸ್ಟಿಟ್ಯೂಟ್ ಫಾರ್ ಮ್ಯಾನುಫ್ಯಾಕ್ಚರಿಂಗ್) ಎಎಸ್‌ಡಿಸಿ (ಆಟೋಮೋಟಿವ್ ಸ್ಕಿಲ್ ಡೆವಲಪ್ಮೆಂಟ್ ಕೌನ್ಸಿಲ್) ಪ್ರಮಾಣಪತ್ರ ದೊರೆಯಲಿದೆ.

ಟೊಯೊಟಾ ಕೌಶಲ್ಯ ಕೋರ್ಸ್

ಉದ್ಯೋಗ ತರಬೇತಿಯೊಂದಿಗೆ ಉದ್ಯಮ ಸಮೃದ್ಧ ಪಠ್ಯಕ್ರಮದೊಂದಿಗೆ “ಕಲಿಯಿರಿ ಮತ್ತು ಸಂಪಾದಿಸಿ” ಪರಿಕಲ್ಪನೆಯಾಗಿದೆ. ಕೋರ್ಸ್‌ನ ಅವಧಿ: 2 ವರ್ಷಗಳು, ಕೋರ್ಸ್‌ಗೆ ಸೇರಲು ವಿದ್ಯಾರ್ಹತೆ: ಎಸ್ಎಸ್ಎಲ್ ಸಿ ತೇರ್ಗಡೆಯಾಗಿರಬೇಕು. ವಯಸ್ಸಿನ ಅರ್ಹತೆ: 18 ರಿಂದ 24 ವರ್ಷದವರಾಗಿರಬೇಕು. ಇ-ಎನ್‌ಟಿಸಿ (ಐಟಿಐಗೆ ಸಮಾನವಾದ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ), ಟೊಯೊಟಾ, ಜಿಮ್ (ಜಪಾನ್-ಇಂಡಿಯಾ ಇನ್ಸ್ಟಿಟ್ಯೂಟ್ ಫಾರ್ ಮ್ಯಾನುಫ್ಯಾಕ್ಚರಿಂಗ್) ಪ್ರಮಾಣ ಪತ್ರ ದೊರೆಯಲಿದೆ.

ಇದನ್ನೂ ಓದಿ: Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

ಮೇ 26ರಂದು ಹುಬ್ಬಳ್ಳಿ, ತುಮಕೂರು, ಹಾಸನ ಹಾಗೂ ಮೇ 25 ರಂದು ಬಿಡದಿಯಲ್ಲಿ ಹಾಗೂ ಮೇ 24 ರಂದು ಶಿವಮೊಗ್ಗದಲ್ಲಿ ಪರೀಕ್ಷೆ ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಟೊಯೊಟಾ ಇಂಡಿಯಾ ಟಿಟಿಟಿಐ (toyotabharat.com), ಮೊಬೈಲ್: 8050673677, 9591999667, ಲ್ಯಾಂಡ್‌ಲೈನ್- 080 66292546 ಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ಒಳಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading
Advertisement
ಕರ್ನಾಟಕ5 mins ago

Rain News: ಮುಧೋಳದಲ್ಲಿ ಸಿಡಿಲಿಗೆ ಬಾಲಕಿ ಬಲಿ; ಚನ್ನರಾಯಪಟ್ಟಣ, ಗುಂಡ್ಲುಪೇಟೆ ಸೇರಿ ವಿವಿಧೆಡೆ ವರುಣಾರ್ಭಟ

dilip Kumar
ಪ್ರಮುಖ ಸುದ್ದಿ7 mins ago

Milind Kumar : ಆರ್​ಸಿಬಿಯ ಮಾಜಿ ಆಟಗಾರ ಕ್ರಿಕೆಟ್​ನಿಂದ ನಿವೃತ್ತಿ

Fan Code OTT Subscription Now for Jio AirFiber JioFiber Jio Mobility Customers
ದೇಶ22 mins ago

Reliance Jio: ಜಿಯೋ ಏರ್‌ಫೈಬರ್, ಜಿಯೋಫೈಬರ್, ಜಿಯೋ ಮೊಬಿಲಿಟಿ ಗ್ರಾಹಕರಿಗೆ ಫ್ಯಾನ್ ಕೋಡ್ ಒಟಿಟಿ ಸಬ್‌ಸ್ಕ್ರಿಪ್ಷನ್!

Gopi Hinduja
ವಿದೇಶ26 mins ago

Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

AC visited Gandabommanahalli Goshala and inspected
ವಿಜಯನಗರ1 hour ago

Vijayanagara News: ಗಂಡಬೊಮ್ಮನಹಳ್ಳಿಯ ಗೋಶಾಲೆಗೆ ಉಪ ವಿಭಾಗಾಧಿಕಾರಿ ಭೇಟಿ, ಪರಿಶೀಲನೆ

Application Invited for TTTI and Toyota Skill Courses from Toyota Technical Training Institute
ಕರ್ನಾಟಕ1 hour ago

Toyota: ಟೊಯೊಟಾ ಕೌಶಲ್ಯ ಕೋರ್ಸ್‌ಗೆ ಅರ್ಜಿ ಆಹ್ವಾನ; ಗ್ರಾಮೀಣ ಯುವಕರೇ ಈ ಅವಕಾಶ ಬಳಸಿಕೊಳ್ಳಿ

SSLC Exam 2024
ಕರ್ನಾಟಕ1 hour ago

SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

ಕ್ರಿಕೆಟ್1 hour ago

Gautam Gambhir : ಗೌತಮ್​ ಗಂಭೀರ್ ಟೀಮ್ ಇಂಡಿಯಾದ ಮುಂದಿನ ಕೋಚ್​​?

Retirement Plan
ಮನಿ ಗೈಡ್2 hours ago

Retirement Plan: ನಿವೃತ್ತಿ ನಂತರ ನೆಮ್ಮದಿ ಜೀವನ ನಡೆಸಬೇಕೆ? ಈ 5 ಯೋಜನೆಗಳನ್ನು ಮರೆಯಬೇಡಿ

Siddharth Kak
ದೇಶ2 hours ago

Siddharth Kak: ಡಿಡಿಯ ʼಸುರಭಿʼ ಕಾರ್ಯಕ್ರಮ ನೆನಪಿದೆಯಾ? ಪ್ರತಿ ವಾರ ಎಷ್ಟು ಲಕ್ಷ ಪೋಸ್ಟ್‌ ಕಾರ್ಡ್‌ ಬರುತ್ತಿತ್ತು ಗೊತ್ತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ16 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ17 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌