ಕಾಶ್ಮೀರಿ ಪಂಡಿತರ ಕಗ್ಗೊಲೆ ಮತ್ತು ದನಸಾಗಣೆಗಾರರ ಮೇಲಿನ ಹಲ್ಲೆ ಹೋಲಿಸಿದ ನಟಿ ಸಾಯಿ ಪಲ್ಲವಿ - Vistara News

ಪ್ರಮುಖ ಸುದ್ದಿ

ಕಾಶ್ಮೀರಿ ಪಂಡಿತರ ಕಗ್ಗೊಲೆ ಮತ್ತು ದನಸಾಗಣೆಗಾರರ ಮೇಲಿನ ಹಲ್ಲೆ ಹೋಲಿಸಿದ ನಟಿ ಸಾಯಿ ಪಲ್ಲವಿ

ಕಾಶ್ಮೀರಿ ಪಂಡಿತರ ಹತ್ಯೆ ಹಾಗೂ ದನಗಳ್ಳರ ಹತ್ಯೆಯನ್ನು ಹೋಲಿಸಿ ನಟಿ ಸಾಯಿ ಪಲ್ಲವಿ ಆಡಿರುವ ಮಾತು ಈಗ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

sai pallavi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಕ್ಷಿಣ ಭಾರತದ ಡ್ಯಾನ್ಸಿಂಗ್‌ ಕ್ವೀನ್‌ ಸಾಯಿ ಪಲ್ಲವಿ ಅವರ ಒಂದು ಮಾತು ಈಗ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿದೆ. ಹಿಂದೊಮ್ಮೆ ಚರ್ಮದ ಬಣ್ಣದಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಕಾರಣದಿಂದ ಫೇರ್‌ನೆಸ್‌ ಕ್ರೀಮ್‌ ಜಾಹೀರಾತಿನಲ್ಲಿ ತಾನು ನಟಿಸುವುದಿಲ್ಲ ಎಂದು ಹೇಳಿದ ಸಾಯಿ ಪಲ್ಲವಿ ಎಲ್ಲರ ಗೌರವ ಗಳಿಸಿದ್ದರು. ಈಗ ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಮತ್ತು ದನ ಸಾಗಿಸುವವರ ಮೇಲೆ ನಡೆದ ಹಲ್ಲೆಯನ್ನು ಸಮೀಕರಿಸುವ ಮಾತುಗಳನ್ನಾಡಿ ಸೋಶಿಯಲ್‌ ತಾಣಗಳಲ್ಲಿ ಟ್ರೋಲಿಂಗ್‌ಗೆ ತುತ್ತಾಗಿದ್ದಾರೆ.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ʼನಿಮ್ಮ ರಾಜಕೀಯ ಸಿದ್ಧಾಂತ ಏನು?ʼ ಎಂದು ಕೇಳಿದಾಗ ಸಾಯಿ ಪಲ್ಲವಿ ಹೇಳಿದ್ದು ಹೀಗೆ: ʼʼನಾನು ಸೈದ್ಧಾಂತಿಕವಾಗಿ ತಟಸ್ಥೆ. ಹಾಗೇ ಬೆಳೆದಿದ್ದೇನೆ. ಎಡ ಸಿದ್ಧಾಂತ ಹಾಗೂ ಬಲ ಸಿದ್ಧಾಂತಗಳ ಬಗ್ಗೆ ಮಾತಾಡುವುದು ಕೇಳಿದ್ದೇನೆ. ಆದರೆ ಅವುಗಳಲ್ಲಿ ಯಾವುದು ಸರಿ ಎಂಬುದು ನನಗೆ ಗೊತ್ತಿಲ್ಲ. ಈ ಹಿಂದೆ ಬಂದ ಕಾಶ್ಮೀರಿ ಫೈಲ್ಸ್‌ ಸಿನಿಮಾ, ಕಾಶ್ಮೀರಿ ಪಂಡಿತರ ಹತ್ಯೆಗಳ ಬಗ್ಗೆ ತೋರಿಸಿತು. ನಾವು ಅದನ್ನು ಮತೀಯವಾಗಿ ನೋಡುವುದಾದರೆ, ಇತ್ತೀಚೆಗೆ, ದನ ಸಾಗಿಸುತ್ತಿದ್ದ ಒಬ್ಬ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ, ಅವನಿಂದ ʼಜೈ ಶ್ರೀ ರಾಂʼ ಎಂದು ಹೇಳಿಸಲಾಯಿತು. ಹಾಗಿದ್ದರೆ ಈ ಹತ್ಯೆಗೂ ಕಾಶ್ಮೀರದಲ್ಲಿ ನಡೆದ ಘಟನೆಗಳಿಗೂ ವ್ಯತ್ಯಾಸ ಏನಿದೆ?ʼʼ

ಮುಂದುವರಿದು ಆಕೆ ಹೇಳಿದ್ದು ಹೀಗೆ: ʼʼನನ್ನ ಕುಟುಂಬ ನನಗೆ ಕಲಿಸಿದ್ದು ಶೋಷಣೆಗೆ ಒಳಗಾದವರ ಪರ ನಿಲ್ಲಲು. ಅವರು ಯಾರೇ ಆಗಿರಲಿ ಅದು ಮುಖ್ಯವಲ್ಲ. ನೀವು ಒಳ್ಳೆಯ ಮನುಷ್ಯ ಜೀವಿ ಆಗಿರಬೇಕು. ಹಾಗಿದ್ದರೆ ನೀವು ಬೇರೊಬ್ಬರನ್ನು ಹರ್ಟ್‌ ಮಾಡುವುದಿಲ್ಲ. ನೀವು ನನಗಿಂತ ಪ್ರಬಲರಾಗಿದ್ದು, ನನ್ನ ಮೇಲೆ ಬಲಪ್ರಯೋಗ ಮಾಡುತ್ತಾ ಇದ್ದೀರಾದರೆ, ಅದು ದೌರ್ಜನ್ಯ. ದೊಡ್ಡ ಸಂಖ್ಯೆಯ ಜನತೆ ಕಡಿಮೆ ಸಂಖ್ಯೆಯವರ ಮೇಲೆ ಹಲ್ಲೆ ನಡೆಸಿದರೆ ಅದು ದೌರ್ಜನ್ಯ. ಅದನ್ನು ತಡೆಯಬೇಕು.ʼʼ

ಸಾಯಿ ಪಲ್ಲವಿಯ ಈ ಹೇಳಿಕೆಯ ಬಗ್ಗೆ ಟ್ವಿಟ್ಟರಿಗರು ಎರಡೂ ಕಡೆಯಿಂದಲೂ ಪ್ರತಿಕ್ರಿಯಿಸಿದ್ದಾರೆ. ಕೆಲವರು ಮೆಚ್ಚಿದ್ದರೆ, ಇನ್ನಷ್ಟು ಮಂದಿ ಕಟುವಾಗಿ ಟೀಕಿಸಿದ್ದಾರೆ.

ʼʼಕಾಶ್ಮೀರಿ ಪಂಡಿತರ ಹತ್ಯೆ ಹಾಗೂ ದನಗಳ್ಳರ ಮೇಲಿನ ಹಲ್ಲೆ ಎರಡೂ ಒಂದೇ ಅಲ್ಲ. ಅವೆರಡನ್ನೂ ಹೋಲಿಸುವುದೇ ತಪ್ಪುʼʼ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ʼʼಸೂಕ್ತ ಸಮಯದಲ್ಲಿ ಸಾಯಿ ಪಲ್ಲವಿ ಈ ಹೇಳಿಕೆ ನೀಡಿದ್ದಾರೆ. ಫೇರ್‌ನೆಸ್‌ ಕ್ರೀಮ್‌ ನಿರಾಕರಿಸಿದ ನಟಿಯ ಹೇಳಿಕೆ ಫೇರ್‌ ಆಗಿದೆʼʼ ಎಂದು ಇನ್ನು ಹಲವರು ಕೊಂಡಾಡಿದ್ದಾರೆ.

ʼʼಈ ಹೇಳಿಕೆಯ ಮೂಲಕ ಸಾಯಿ ಪಲ್ಲವಿ ದನಗಳ್ಳರನ್ನು ಸಮರ್ಥಿಸುತ್ತಿದ್ದಾರೆʼʼ ಎಂದು ಕೆಲವರು ಟ್ರೋಲ್‌ ಮಾಡಿದ್ದಾರೆ. ʼʼಇಂಥ ಹೇಳಿಕೆ ನೀಡಿ ಜನಪ್ರಿಯತೆ ಕಳೆದುಕೊಳ್ಳಲು ಒಬ್ಬ ತಾರೆಗೆ ಸಾಕಷ್ಟು ಧೈರ್ಯ ಬೇಕುʼʼ ಎಂದು ಇನ್ನು ಕೆಲವರು ಬೆನ್ನು ತಟ್ಟಿದ್ದಾರೆ. ಟ್ವಿಟರ್‌ನಲ್ಲಿ ಸಾಯಿ ಪಲ್ಲವಿ ಅವರ ಹೇಳಿಕೆ ಟ್ರೆಂಡಿಂಗ್‌ ಆಗುತ್ತಿದೆ.

ಸಾಯಿ ಪಲ್ಲವಿ ಅವರ ʼವಿರಾಟ ಪರ್ವಂʼ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ತೆಲುಗಿನಲ್ಲಿ ರಾಣಾ ದಗ್ಗುಬಾಟಿ ಅವರ ಜತೆ ಸಾಯಿ ಪಲ್ಲವಿ ನಟಿಸಿರುವ ಈ ಚಿತ್ರದ ಪ್ರಿ ರಿಲೀಸ್‌ ಇವೆಂಟ್‌ಗಳು ನಾನಾ ಕಡೆ ನಡೆಯುತ್ತಿದ್ದು, ಅದರಲ್ಲಿ ಸಾಯಿ ಪಲ್ಲವಿ ಪಾಲ್ಗೊಳ್ಳುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಮೆಕ್ಕಾದಲ್ಲಿ ಬುರ್ಖಾಧಾರಿ ಮಹಿಳೆಯ ಡ್ಯಾನ್ಸ್! ಮುಸ್ಲಿಂ ಸಮುದಾಯದ ಆಕ್ರೋಶ

Viral Video ಮುಸ್ಲಿಂರ ಪವಿತ್ರ ಸ್ಥಳವಾದ ಮೆಕ್ಕಾದಲ್ಲಿರುವ ಕಾಬಾದ ಮುಂದೆ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ನೃತ್ಯ ಮಾಡಿದ ಘಟನೆ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಈ ಘಟನೆಗೆ ಮುಸ್ಲಿಂ ಸಮುದಾಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral Video
Koo

ದೆಹಲಿ: ಎಲ್ಲಾ ಧರ್ಮದವರಿಗೂ ಅವರವರ ಧರ್ಮವನ್ನು ಆಚರಿಸುವ ಸ್ಥಳ ತುಂಬಾ ಪವಿತ್ರವಾಗಿರುತ್ತದೆ. ಮುಸ್ಲಿಂ ಧರ್ಮದವರಿಗೆ ಮೆಕ್ಕಾ (Mecca) ಒಂದು ಪವಿತ್ರ ಸ್ಥಳವಾಗಿದೆ. ಪ್ರತಿವರ್ಷ ಸಾವಿರಾರು ಮಂದಿ ಮುಸ್ಲಿಂರು ಎಷ್ಟೇ ಕಠಿಣ ಪರಿಸ್ಥಿತಿಯಲ್ಲೂ ಈ ಸ್ಥಳಕ್ಕೆ ಯಾತ್ರೆಗೆ ಹೋಗುತ್ತಾರೆ. ಮೆಕ್ಕಾವೆಂದರೆ ಮುಸ್ಲಿಂರಿಗೆ ತುಂಬಾನೇ ಗೌರವ. ಇಂತಹ ಪವಿತ್ರ ಸ್ಥಳದಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಮೈಮರೆತು ನೃತ್ಯ (Dance) ಮಾಡಿದ ವಿಡಿಯೊವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video) ಆಗಿದ್ದು, ಈ ಘಟನೆಗೆ ಮುಸ್ಲಿಂ ಸಮುದಾಯದವರು ಸಿಕ್ಕಾಪಟ್ಟೆ ಗರಂ ಆಗಿದ್ದಾರೆ..

ಮೆಕ್ಕಾದಲ್ಲಿರುವ ಕಾಬಾದ ಮುಂದೆ ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯೊಬ್ಬಳು ನೃತ್ಯ ಮಾಡಿದ್ದಾಳೆ. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಮುಸ್ಲಿಂ ಸಮೂಹದವರು ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ಮಹಿಳೆಯ ನೃತ್ಯಕ್ಕೆ ಸಿಟ್ಟಾದ ಮುಸ್ಲಿಂ ಸಮುದಾಯ!

ಹಜ್ 2024ರ ಸೀಸನ್ ಪ್ರಾರಂಭವಾಗಿದೆ. ಈ ಸಮಯದಲ್ಲಿ ಪ್ರಪಂಚದಾದ್ಯಂತ ಮುಸ್ಲಿಂರು ಸೌದಿ ಅರೇಬಿಯಾದ ಮೆಕ್ಕಾ ಮತ್ತು ಮದೀನಾಕ್ಕೆ ಕಡ್ಡಾಯವಾಗಿ ಭೇಟಿ ನೀಡಬೇಕೆಂದು ಪ್ರವಾದಿ ಮುಹಮ್ಮದ್ ಅವರು ತಿಳಿಸಿದ್ದರು. ಹಾಗಾಗಿ ಮುಸ್ಲಿಂರು ಇಲ್ಲಿಗೆ ಭೇಟಿ ನೀಡುತ್ತಾರೆ. ಈ ವೇಳೆ ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯೊಬ್ಬಳು ಎಲ್ಲಾ ಯಾತ್ರಿಕರ ಮುಂದೆ ನೃತ್ಯ ಮಾಡಿದ್ದಾಳೆ. ಈ ಸ್ಥಳದಲ್ಲಿ ಭಕ್ತಿ ಭಾವದಲ್ಲಿರಬೇಕಾದ ಮಹಿಳೆ  ಈ ರೀತಿ ಮೈಮರೆತು ಡ್ಯಾನ್ಸ್ ಮಾಡಿದ್ದಕ್ಕೆ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಮಹಿಳೆಯ ಈ ಕೃತ್ಯಕ್ಕೆ ತಕ್ಕ ಶಿಕ್ಷೆಯಾಗಬೇಕೆಂದು ಒತ್ತಾಯಿಸುತ್ತಿದ್ದಾರೆ. ಈ ವಿಡಿಯೋದಲ್ಲಿರುವ ಮಹಿಳೆ ಬುರ್ಖಾ ಧರಿಸಿದ ಕಾರಣ ಆಕೆ ಯಾರು ಎಂಬುದು ತಿಳಿದುಬಂದಿಲ್ಲ.

ಯೊರುಬಾ ಬುಡಕಟ್ಟಿನ ಮಹಿಳೆ!

ಈ ವಿಡಿಯೊ ಬಗ್ಗೆ ಸೋಷಿಯಲ್ ಮೀಡಿಯಾದ ಬಳಕೆದಾರರು ಕಾಮೆಂಟ್ ಮಾಡಿದ್ದು, ಅದರಲ್ಲಿ ಒಬ್ಬರು ಮಹಿಳೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಹಿಳೆ ನೈರುತ್ಯ ನೈಜೀರಿಯಾದ ಯೊರುಬಾ ಬುಡಕಟ್ಟಿನವರು, ನೃತ್ಯವು ಅವರ ಸಂಸ್ಕೃತಿಯಲ್ಲಿ ಬಹಳ ಮುಖ್ಯವಾದುದು. ಹಾಗಾಗಿ ಆಕೆ ಹಾಗೇ ಮಾಡಿರಬಹುದು ಎಂದು ತಿಳಿಸಿದ್ದಾರೆ. ಹಾಗೇ ಮತ್ತೊಬ್ಬ ಬಳಕೆದಾರರು, ಹಜ್ 2024ರ ಸೀಸನ್ ಸಮೀಪಿಸುತ್ತಿರುವಾಗ ಕೆಲವು ದೃಶ್ಯಗಳು ಈ ತಿಂಗಳ ಪವಿತ್ರತೆಯನ್ನು ಉಲ್ಲಂಘಿಸಲು ಪ್ರಾರಂಭಿಸಿದ್ದಾವೆ ಮತ್ತು ಇದು ಲಕ್ಷಾಂತರ ಮುಸ್ಲಿಂರ ಭಾವನೆಗಳಿಗೆ ನೋವುಂಟುಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

2024ರ ಹಜ್ ಗೆ ಮುಂಚಿತವಾಗಿ ಸುಮಾರು 13 ಮಿಲಿಯನ್ ಮುಸ್ಲಿಂರು ಸೌದಿ ಅರೇಬಿಯಾಕ್ಕೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೇ ಇನ್ನೂ ಅನೇಕ ಮಂದಿ ಮುಸ್ಲಿಂ ಯಾತ್ರಿಕರು ಪವಿತ್ರ ಆಚರಣೆಗಾಗಿ ಇಲ್ಲಿಗೆ ಆಗಮಿಸುವ ನಿರೀಕ್ಷೆಗಳಿವೆ ಎನ್ನಲಾಗಿದೆ. ಹಾಗಾಗಿ ಅಧಿಕಾರಿಗಳು ನಿಷೇಧಿಸಿರುವ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಯಾತ್ರಿಕರಿಗೆ ಸೌದಿ ಸರ್ಕಾರ ಒತ್ತಾಯಿಸಿದೆ. ನಿಯಮ ಉಲ್ಲಂಘಿಸಿದವರಿಗೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ:Viral Video: ಹೋಟೆಲ್‌ನೊಳಗೆ ಪಿಜ್ಜಾ ತಿನ್ನುತ್ತಿರುವಾಗಲೇ ಮಹಿಳೆಯ ಸರ ಅಪಹರಣ!

ಈ ಬಗ್ಗೆ ಹಜ್ ಸಚಿವರು ಮಾತನಾಡಿ, “ಹಜ್ ಕೇವಲ ಪೂಜೆಗಾಗಿಯೇ ಹೊರತು ರಾಜಕೀಯ ಫೋಷಣೆಗಳಿಗಾಗಿ ಅಲ್ಲ. ಪ್ಯಾಲೆಸ್ಟೀನಿಯಾದವರಿಗೆ, ವಿಶೇಷವಾಗಿ ಗಾಜಾದಲ್ಲಿರುವ ನಮ್ಮ ಸಹೋದರರಿಗೆ ದುವಾ ಮಾಡುವುದನ್ನು ನಿಷೇಧಿಸಲಾಗಿಲ್ಲ. ಇದು ಸಂಪೂರ್ಣವಾಗಿ ಸುಳ್ಳು. ಯಾವುದೇ ದೇಶದ ರಾಜಕೀಯ ಫೋಷಣೆಗಳನ್ನು ಕೂಗುವುದನ್ನು ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.

Continue Reading

ಕ್ರೀಡೆ

IND vs PAK : ಸೂಪರ್ ಫ್ಯಾನ್​​; ಟೀಮ್​ ಇಂಡಿಯಾ ಜೆರ್ಸಿ ಧರಿಸಿ ಭಾರತವನ್ನು ಬೆಂಬಲಿಸಿದ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾದೆಳ್ಳಾ

IND vs PAK :

VISTARANEWS.COM


on

IND vs PAK
Koo

ಬೆಂಗಳೂರು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಳಾ ಅವರು ಕ್ರಿಕೆಟ್ ಅಭಿಮಾನಿ. ಕ್ರಿಕೆಟ್​ ಪಂದ್ಯಗಳನ್ನು ತಪ್ಪದೇ ವೀಕ್ಷಿಸುತ್ತಾರೆ. ಅದರಲ್ಲೂ ಭಾರತದ ಪಂದ್ಯವಿದ್ದರೆ ಅವರಿಗೆ ಹಬ್ಬ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ ಪುರುಷರ ಟಿ 20 ವಿಶ್ವಕಪ್ 2024 ರ ಪಂದ್ಯಕ್ಕೆ ಹಾಜರಾದ ದೊಡ್ಡ ಹೆಸರುಗಳಲ್ಲಿ ಅವರು ಇದ್ದರೂ. ಮೈಕ್ರೋಸಾಫ್ಟ್ ಸಿಇಒ ಭಾರತೀಯ ಕ್ರಿಕೆಟ್ ತಂಡದ ಜೆರ್ಸಿ ಧರಿಸಿ ಉದ್ಯಮಿ ಗೌರವ್ ಜೈನ್ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ . ಈ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

“ಸೂಪರ್ ಅಭಿಮಾನಿ @satyanadella #PakvsInd #t20USA ತಂಡದೊಂದಿಗೆ ಟೀಮ್ ಇಂಡಿಯಾವನ್ನು ಹುರಿದುಂಬಿಸಲು ಉತ್ಸುಕನಾಗಿದ್ದೇನೆ” ಎಂದು ಜೈನ್ ಪೋಸ್ಟ್​​ನ ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಈ ಚಿತ್ರವನ್ನು ಹೊಸದಾಗಿ ನಿರ್ಮಿಸಲಾದ ಕ್ರೀಡಾಂಗಣದ ಸ್ಟ್ಯಾಂಡ್​ಗಳ ಮೇಲಿನಿಂದ ತೆಗೆದುಕೊಳ್ಳಲಾಗಿದೆ.

ಭಾನುವಾರ ರಾತ್ರಿ ಪೋಸ್ಟ್​​ ಹಂಚಿಕೊಂಡಾಗಿನಿಂದ, (ಹಿಂದೆ ಟ್ವಿಟರ್) ನಲ್ಲಿ 2.7 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. “ಸಿಲಿಕಾನ್ ವ್ಯಾಲಿಯ ಅರ್ಧದಷ್ಟು ಭಾಗವು ಒಟ್ಟುಗೂಡಿದೆ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಮಹಾಕಾವ್ಯ !!” ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು “ಇದು ಅಮೆರಿಕದಲ್ಲಿರುವ ಭಾರತೀಯರಿಗೆ ಸೂಪರ್​ಬೌಲ್​ ಎಂದು ಹೇಳಿದ್ದಾರೆ. “ಅವರು ಜೆರ್ಸಿಯನ್ನು ನಿರೀಕ್ಷಿಸಿರಲಿಲ್ಲ” ಎಂದು ಎಕ್ಸ್ ಬಳಕೆದಾರರೊಬ್ಬರು ಹೇಳಿದರು.

ಟೂರ್ನಿಯ ಕೇಂದ್ರ ಬಿಂದು ಈ ಪಂದ್ಯ

ಕ್ರೀಡಾ ಜಗತ್ತಿನಲ್ಲಿ ಅತ್ಯಂತ ತೀವ್ರವಾದ ಭಾರತ-ಪಾಕಿಸ್ತಾನ ಕ್ರಿಕೆಟ್ ಪೈಪೋಟಿಯು ಪ್ರೇಕ್ಷಕರನ್ನು ಆಕರ್ಷಿಸುವಲ್ಲಿ ಎಂದಿಗೂ ವಿಫಲವಾಗುವುದಿಲ್ಲ. ಈ ಪಂದ್ಯವು ಇದಕ್ಕೆ ಹೊರತಾಗಿರಲಿಲ್ಲ, ಪ್ರಪಂಚದಾದ್ಯಂತದ ವೀಕ್ಷಕರನ್ನು ಸೆಳೆಯಿತು ಮತ್ತು ಕ್ರಿಕೆಟ್​​ನ ಉತ್ಸಾಹವನ್ನು ಪ್ರದರ್ಶಿಸಿತು. ಟಿ20 ವಿಶ್ವಕಪ್ ಟೂರ್ನಿಯಲ್ಲಿ 120 ರನ್​ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ಸೋತಿದೆ. ಆರಂಭದಲ್ಲಿ ಪಾಕಿಸ್ತಾನ ಉತ್ತಮವಾಗಿ ಆಡಿತು. ಕ್ರಮೇಣ ವಿಕೆಟ್​ಗಳನ್ನು ಕಳೆದುಕೊಂಡು ಆರು ರನ್​ಗಳಿಂದ ಸೋತಿತ. ಭಾರತದ ಪರ ಜಸ್ಪ್ರೀತ್ ಬುಮ್ರಾ 3 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ 2 ವಿಕೆಟ್ ಪಡೆದರು.

ಇದನ್ನೂ ಓದಿ :IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

ಭಾರತ-ಅಮೆರಿಕನ್ ಸಿಇಒ ಕ್ರಿಕೆಟ್ ಮೇಲಿನ ತಮ್ಮ ಪ್ರೀತಿಯ ಬಗ್ಗೆ ಆಗಾಗ ಹೇಳುತ್ತಿರುತ್ತಾರೆ. ಕ್ರೀಡೆಯು ಅವರಿಗೆ ಟೀಮ್​ ವರ್ಕ್​ ಮತ್ತು ನಾಯಕತ್ವ ಕಲಿಸಿದೆ. ಅದು ಕಾರ್ಪೊರೇಟ್ ಪ್ರಪಂಚ ಎದುರಿಸುವ ಅಚ್ಚರಿಗಳಿಂದ ಮೇಲಕ್ಕೇರಲು ಸಹಾಯ ಮಾಡಿತು ಎಂದು ಹೇಳಿದ್ದಾರೆ. “ಕ್ರಿಕೆಟ್ ನನಗೆ ತಂಡಗಳಲ್ಲಿ ಕೆಲಸ ಮಾಡುವ ಕುರಿತು ಮತ್ತು ವೃತ್ತಿಜೀವನದುದ್ದಕ್ಕೂ ನಾಯಕತ್ವದ ಬಗ್ಗೆ ನನಗೆ ಹೆಚ್ಚು ಕಲಿಸಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಮೈಕ್ರೋಸಾಫ್ಟ್ ಸಿಇಒ ಆಗಿ ನೇಮಕವಾದಾಗ ಹೇಳಿದ್ದರು.

Continue Reading

ಕ್ರೀಡೆ

IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

IND vs PAK:

VISTARANEWS.COM


on

IND VS PAK
Koo

ನ್ಯೂಯಾರ್ಕ್: : ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024ರ (T20 World Cup) ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು(IND vs PAK) ಮಣಿಸಿದೆ. ಇದರೊಂದಿಗೆ ಟಿ20 ವಿಶ್ವ ಕಪ್​ ಟೂರ್ನಿಯಲ್ಲಿ ತನ್ನ ಪ್ರಾಬಲ್ಯವನ್ನು 8-1ರ ಮುನ್ನಡೆಗೆ ಕೊಂಡೊಯ್ದಿದೆ. ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್​​ ಇಳಿಯುವುದರೊಂದಿಗೆ ಆಟ ಪ್ರಾರಂಭವಾಯಿತು. ಮೊದಲ ಇನ್ನಿಂಗ್ಸ್ ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ಕೇವಲ 119 ರನ್ ಗಳಿಸಲಷ್ಟೇ ಶಕ್ತವಾಯಿತು. ಆದಾಗ್ಯೂ, ಮೆನ್ ಇನ್ ಬ್ಲೂ (Men In Blue) ತಂಡವು ಬೌಲಿಂಗ್​ ಸಾಮರ್ಥ್ಯವನ್ನು ಬಂಡವಾಳ ಮಾಡಿಕೊಂಡಿತು. ಒಂದು ಹಂತದಲ್ಲಿ ಕೈ ಜಾರುತ್ತಿರುವಂತೆ ಕಂಡುಬಂದರೂ ಭಾರತವು ಚೇತರಿಕೆಯ ನಂತರ ಅದನ್ನು ಮರಳಿ ತರುವಲ್ಲಿ ಯಶಸ್ವಿಯಾಯಿತು.

ಪಂದ್ಯದ ನಂತರ, ದೆಹಲಿ ಪೊಲೀಸರ ಅಧಿಕೃತ ಎಕ್ಸ್ ಹ್ಯಾಂಡಲ್ ತಮಾಷೆಯೊಂದನ್ನು ಮಾಡಿತು. ಪೊಲೀಸರ ಬಳಗ ಸಾಮಾಜಿಕ ಮಾಧ್ಯಮದ ಮೂಲಕ ನ್ಯೂಯಾರ್ಕ್​​ ಸಿಟಿ ಪೊಲೀಸರಿಗೆ ಸಂದೇಶವೊಂದನ್ನು ಟ್ಯಾಗ್ ಮಾಡಿತು “ಹೇ, @NYPDnews, ನಾವು ಎರಡು ದೊಡ್ಡ ಶಬ್ದಗಳನ್ನು ಕೇಳಿದ್ದೇವೆ. ಒಂದು “ಇಂಡಿಯಾ ಎ.. ಭಾರತ!” ಇನ್ನೊಂದು ಬಹುಶಃ ಮುರಿದ ಟಿವಿಗಳಾಗಿದ್ದರಬಹುದು. ದಯವಿಟ್ಟು ದೃಢೀಕರಿಸುವಿರಾ?” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಪಂದ್ಯ ನಡೆದ ನ್ಯೂಯಾರ್ಕ್​ ಸಿಟಿಯ ನಸ್ಸೌ ಸ್ಟೇಡಿಯಮ್​ನಲ್ಲಿ ಸುಮಾರು 125 ಡೆಸಿಬಲ್​ನಷ್ಟು ಸದ್ದು ಭಾರತೀಯ ಕ್ರಿಕೆಟ್​ ಪ್ರೇಮಿಗಳಿಂದ ಕೇಳಿ ಬಂದಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ಸೋತ ಕಾರಣ ಯಥಾವತ್ ಅಲ್ಲಿನ ಪ್ರೇಕ್ಷಕರು ಟಿವಿ ಒಡೆದು ಹಾಕಿರಬಹುದು ಎಂದು ಡೆಲ್ಲಿ ಪೊಲೀಸರು ತಮಾಷೆ ಮಾಡಿದ್ದಾರೆ.

ಭಾರತಕ್ಕೆ ಸತತ ಎರಡನೇ ವಿಜಯ

ರೋಹಿತ್ ಶರ್ಮಾ 13 ಹಾಗೂ ವಿರಾಟ್ ಕೊಹ್ಲಿ 4 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ 20 ರನ್ ಗಳಿಸಿ ನಿರ್ಗಮಿಸಿದರೆ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಕ್ರಮವಾಗಿ ಕೇವಲ 7 ಮತ್ತು 3 ರನ್ ಸೇರಿಸಿದರು.

ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಗಳಿಸುವ ಮೂಲಕ ಭಾರತ ಇನ್ನಿಂಗ್ಸ್ ಅನ್ನು ಸ್ಥಿರಗೊಳಿಸಲು ಸಹಾಯ ಮಾಡಿದರು. ಅವರ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ ಒಟ್ಟು 119 ರನ್ ಗಳಿಸಲು ಸಹಾಯ ಮಾಡಿತು. ಪಾಕಿಸ್ತಾನದ ಪರ ನಸೀಮ್ ಶಾ ಹಾಗೂ ಹ್ಯಾರಿಸ್ ರವೂಫ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಭಾರತದ ಪರ ಮೊಹಮ್ಮದ್ ಅಮೀರ್ 2 ವಿಕೆಟ್ ಕಿತ್ತರೆ, ಶಾಹೀನ್ ಅಫ್ರಿದಿ 1 ವಿಕೆಟ್ ಪಡೆದರು.

ಇದನ್ನೂ ಓದಿ: T20 World Cup : ಪಾಕಿಸ್ತಾನಕ್ಕೆ ಸಂಕಷ್ಟ ತಂದಿಟ್ಟ ಭಾರತ; ಸೂಪರ್ 8 ಹಂತ ಪ್ರವೇಶವೂ ಕಷ್ಟ!

ಗುರಿ ಬೆನ್ನಟ್ಟಿದ ಪಾಕಿಸ್ತಾನ ಪರ ಆರಂಭಿಕ ಆಟಗಾರರಾದ ಬಾಬರ್ ಅಜಮ್ 13 ಮತ್ತು ಮೊಹಮ್ಮದ್ ರಿಜ್ವಾನ್ 31 ರನ್ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಉಸ್ಮಾನ್ ಖಾನ್, ಫಖರ್ ಜಮಾನ್ ಮತ್ತು ಇಮಾದ್ ವಾಸಿಮ್ ಕ್ರಮವಾಗಿ 13, 13 ಮತ್ತು 15 ರನ್ ಗಳಿಸಿದರು.

ಪಂದ್ಯದ ಒಂದು ಹಂತದಲ್ಲಿ, ಪಾಕಿಸ್ತಾನವು ಪ್ರತಿ ಎಸೆತಕ್ಕೆ ಒಂದು ರನ್ ಗಳಿಸಬೇಕಾಗಿತ್ತು. ಆದರೆ ನಂತರದಲ್ಲಿ ಭಾರತವು ಪಂದ್ಯದಲ್ಲಿಹಿಡಿದ ಸಾಧಿಸಿತು. ಭಾರತದ ಪರ ಜಸ್ಪ್ರೀತ್ ಬುಮ್ರಾ 3, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ಅರ್ಷ್ದೀಪ್ ಸಿಂಗ್ ತಲಾ 1 ವಿಕೆಟ್ ಪಡೆದರು.

Continue Reading

ಪ್ರಮುಖ ಸುದ್ದಿ

Stock Market News: ಮೋದಿ ಪ್ರಮಾಣ ವಚನದ ಬಳಿಕ ಷೇರು ಮಾರುಕಟ್ಟೆ ಜಿಗಿತ; ಸೆನ್ಸೆಕ್ಸ್‌ ಹೊಸ ದಾಖಲೆ

ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದು ಸಂಭವಿಸಿದೆ. ಎನ್‌ಎಸ್‌ಇ ನಿಫ್ಟಿ 50 ತಾಜಾ ಗರಿಷ್ಠ 23,411.90 ಕ್ಕೆ ಏರಿತು ಮತ್ತು ಸೆನ್ಸೆಕ್ಸ್ ಜೀವಿತಾವಧಿಯ ದಾಖಲೆ 77,079.04 ಕ್ಕೆ ಏರಿತು.

VISTARANEWS.COM


on

Narendra Modi And stock market news
Koo

ಮುಂಬಯಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಐತಿಹಾಸಿಕ ಮೂರನೇ ಅವಧಿಗೆ ಪ್ರಮಾಣ ವಚನ (Oath taking) ಸ್ವೀಕರಿಸಿದ ನಂತರ ಬೆಂಚ್‌ಮಾರ್ಕ್ ಷೇರು ಮಾರುಕಟ್ಟೆ (Stock Market News) ಸೂಚ್ಯಂಕಗಳು ಸೋಮವಾರ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿದವು. ಸೆನ್ಸೆಕ್ಸ್ (Sensex) ಮೊದಲ ಬಾರಿಗೆ ದಾಖಲೆ 77,000 ಗಡಿಯನ್ನು ಮೀರಿದೆ. ನಿಫ್ಟಿ 50 (Nifty 50) ಸಹ ಹೊಸ ಶಿಖರವನ್ನು ತಲುಪಿತು.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ನೇತೃತ್ವದಲ್ಲಿ ಷೇರುಗಳ ಬೆಲೆಗಳು ಇಂದು ಮುಂಜಾನೆಯಿಂದ ಮುನ್ನುಗ್ಗಿ ಸೂಚ್ಯಂಕಗಳು ಹೊಸ ಗರಿಷ್ಠ ಮಟ್ಟವನ್ನು ತಲುಪಿದವು. ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದು ಸಂಭವಿಸಿದೆ. ಎನ್‌ಎಸ್‌ಇ ನಿಫ್ಟಿ 50 ತಾಜಾ ಗರಿಷ್ಠ 23,411.90 ಕ್ಕೆ ಏರಿತು ಮತ್ತು ಸೆನ್ಸೆಕ್ಸ್ ಜೀವಿತಾವಧಿಯ ದಾಖಲೆ 77,079.04 ಕ್ಕೆ ಏರಿತು.

ನಿಫ್ಟಿಯಲ್ಲಿ ಅದಾನಿ ಪೋರ್ಟ್ಸ್, ಪವರ್ ಗ್ರಿಡ್ ಕಾರ್ಪ್, ಬಜಾಜ್ ಆಟೋ, ಕೋಲ್ ಇಂಡಿಯಾ ಮತ್ತು ಶ್ರೀರಾಮ್ ಫೈನಾನ್ಸ್ ಪ್ರಮುಖ ಲಾಭ ಗಳಿಸಿದವು. ನಿಫ್ಟಿಯಲ್ಲಿ ಟೆಕ್ ಮಹೀಂದ್ರಾ, ಇನ್ಫೋಸಿಸ್, ಡಾ ರೆಡ್ಡೀಸ್ ಲ್ಯಾಬ್ಸ್, ಎಲ್‌ಟಿಐಮಿಂಡ್‌ಟ್ರೀ ಮತ್ತು ಹಿಂಡಾಲ್ಕೊ ಅತಿ ಹೆಚ್ಚು ನಷ್ಟ ಅನುಭವಿಸಿದವು.

ಐಟಿ ಮತ್ತು ಲೋಹವನ್ನು ಹೊರತುಪಡಿಸಿ ಎಲ್ಲಾ ವಲಯದ ಸೂಚ್ಯಂಕಗಳು ಏರಿಕೆಯ ಬೆಲೆಗಳಲ್ಲಿ ವಹಿವಾಟಾಗುತ್ತಿವೆ. ಶುಕ್ರವಾರದಂದು (ಜೂನ್ 7), 30-ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 1,720.8 ಪಾಯಿಂಟ್‌ಗಳು ಅಥವಾ 2.29 ಶೇಕಡಾ ಜಿಗಿದು 76,795.31 ರ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದವು.

ಯುರೋಪಿಯನ್ ಪಾರ್ಲಿಮೆಂಟ್ ಚುನಾವಣೆಗಳ ನಂತರ ಕೌಂಟಿಯಲ್ಲಿ ಕ್ಷಿಪ್ರ ಚುನಾವಣೆಯನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಕರೆದಿದ್ದರಿಂದ ಯುರೋ ತುಸು ದುರ್ಬಲವಾಗಿದೆ. ಚೀನಾ, ಹಾಂಗ್ ಕಾಂಗ್, ತೈವಾನ್ ಮತ್ತು ಆಸ್ಟ್ರೇಲಿಯಾದ ಮಾರುಕಟ್ಟೆಗಳು ಸೋಮವಾರ ಮುಚ್ಚಲ್ಪಟ್ಟಿವೆ. US ಉದ್ಯೋಗಗಳ ವರದಿಯು ಫೆಡರಲ್ ರಿಸರ್ವ್ ಬಡ್ಡಿದರ ಕಡಿತದ ಬಗ್ಗೆ ಮರುಚಿಂತನೆಗೆ ಮುಂದಾದ ನಂತರ ಮಾರುಕಟ್ಟೆಯಲ್ಲಿ ಇಳಿಕೆ ಉಂಟಾಗಿದೆ. ಹೂಡಿಕೆದಾರರು ಪ್ರಮುಖ ಉದ್ಯಮ ವರದಿಗಳು ಮತ್ತು ಫೆಡ್‌ನ ದರ ನಿರ್ಧಾರವನ್ನು ಎದುರು ನೋಡುವುದರಿಂದ, ಒಂದು ವಾರದಿಂದ ತೈಲ ದರ ಕುಸಿಯುತ್ತಾ ಹೋಗಿ ಇಂದು ಸ್ಥಿರವಾಗಿದೆ.

ಇಂದು ನರೇಂದ್ರ ಮೋದಿ ಹೊಸ ಸಂಪುಟದ ಮೊದಲ ಸಭೆ

ಹೊಸದಿಲ್ಲಿ: ಇಂದು ಸಂಜೆ 5 ಗಂಟೆಗೆ ನರೇಂದ್ರ ಮೋದಿ (PM Narendra Modi) ಅವರ ಮೂರನೇ ಅವಧಿಯ ಸರ್ಕಾರದ (Modi 3.0) ಮೊದಲ ಸಂಪುಟ ಸಭೆ (Cabinet meeting) ನಡೆಯಲಿದೆ. ಪ್ರಧಾನಿಯವರ ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಸಭೆ ಆಯೋಜನೆಗೊಂಡಿದೆ.

ನಿನ್ನೆ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಪ್ರಧಾನಿಯಾಗಿ ಮೋದಿ ಇನ್ನಿತರ 72 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಕರ್ನಾಟಕದ ಐವರೂ ಸೇರಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರೊಂದಿಗೆ ಇಂದು ಮೋದಿ ಸಭೆ ನಡೆಸಲಿದ್ದಾರೆ.

ಮೋದಿ 3.0 ಸರ್ಕಾರದ ಮೊದಲ ಸಂಪುಟ ಸಭೆ ಇದಾಗಿದೆ. ಇದೇ ಸಂದರ್ಭದಲ್ಲಿ ನೂತನ ಸಚಿವರಿಗೆ ಔತಣಕೂಟವನ್ನೂ ಮೋದಿ ಏರ್ಪಡಿಸಿದ್ದಾರೆ. ಇದೇ ಸಭೆಯಲ್ಲಿ ಖಾತೆ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಮಿತ್ರ ಪಕ್ಷಗಳು ನಿರ್ದಿಷ್ಟ ಖಾತೆಗೆ ಡಿಮ್ಯಾಂಡ್ ಮಾಡಿವೆ.

ಬಿಹಾರದ ನಿತೀಶ್‌ ಕುಮಾರ್‌ ಅವರು ಜೆಡಿಯುಗೆ ಕೃಷಿ ಖಾತೆ ನೀಡುವಂತೆ ಡಿಮ್ಯಾಂಡ್‌ ಮಾಡಿದ್ದಾರೆ. ಆದರೆ ಕರ್ನಾಟಕದ ಎಚ್‌.ಡಿ ಕುಮಾರಸ್ವಾಮಿ ಅವರೂ ಕೃಷಿ ಖಾತೆ ನೀಡಿದರೆ ನಿರ್ವಹಿಸಲು ತಾನು ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ. ತೆಲುಗು ದೇಶಂನ ಚಂದ್ರಬಾಬು ನಾಯ್ಡು ಅವರೂ ಮಹತ್ವದ ಖಾತೆಗಳನ್ನು ಕೇಳಿದ್ದಾರೆ.

ಆದರೆ ಈಗ ಪ್ರಮಾಣ ವಚನ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ನೋಡಿದರೆ, ಕ್ಯಾಬಿನೆಟ್‌ ದರ್ಜೆಯ 11 ಸ್ಥಾನಗಳನ್ನು ಬಿಜೆಪಿ ತನ್ನ ಜೊತೆಗೇ ಇಟ್ಟುಕೊಂಡಿದೆ. ಟಿಡಿಪಿಗೆ 2, ಜೆಡಿಯುಗೆ 2, ಜೆಡಿಎಸ್‌, ಶಿವಸೇನೆ, ಎಲ್‌ಜೆಪಿ, ಆರ್‌ಎಲ್‌ಡಿ ಮುಂತಾದ ಪಕ್ಷಗಳಿಗೆ ತಲಾ ಒಂದೊಂದು ಸ್ಥಾನಗಳನ್ನು ನೀಡಿದೆ. ಈಗ ಯಾವ ಖಾತೆ ಯಾರಿಗೆ ಎಂಬ ನಿರ್ಣಯ ಇನ್ನು ಆಗಬೇಕಿದೆ. ಮಿತ್ರಪಕ್ಷಗಳು ಮಹತ್ವದ ಖಾತೆಗಾಗಿ ಪಟ್ಟು ಹಿಡಿಯುತ್ತವೆಯೇ ಅಥವಾ ಕೊಟ್ಟದ್ದಕ್ಕೆ ತೃಪ್ತವಾಗುತ್ತವೆಯೇ ಎಂದು ನೋಡಬೇಕಿದೆ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ಸೆಲೆಬ್ರಿಟಿಗಳಿಂದ ಅಭಿನಂದನೆಗಳ ಮಹಾಪೂರ !

Continue Reading
Advertisement
Viral Video
ವೈರಲ್ ನ್ಯೂಸ್7 mins ago

Viral Video: ಮೆಕ್ಕಾದಲ್ಲಿ ಬುರ್ಖಾಧಾರಿ ಮಹಿಳೆಯ ಡ್ಯಾನ್ಸ್! ಮುಸ್ಲಿಂ ಸಮುದಾಯದ ಆಕ್ರೋಶ

gold rate today bipasha
ಚಿನ್ನದ ದರ13 mins ago

Gold Rate Today: ರಾಜಧಾನಿಯಲ್ಲಿ ಏರಿಳಿಯದ ಬಂಗಾರದ ಬೆಲೆ; ಇಂದಿನ ದರಗಳು ಹೀಗಿವೆ

IND vs PAK
ಕ್ರೀಡೆ24 mins ago

IND vs PAK : ಸೂಪರ್ ಫ್ಯಾನ್​​; ಟೀಮ್​ ಇಂಡಿಯಾ ಜೆರ್ಸಿ ಧರಿಸಿ ಭಾರತವನ್ನು ಬೆಂಬಲಿಸಿದ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾದೆಳ್ಳಾ

karnataka Rain
ಬೆಳಗಾವಿ24 mins ago

Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

Nandamuri Balakrishna BB4 new film announced
ಟಾಲಿವುಡ್37 mins ago

Nandamuri Balakrishna: ಇಂದು ತೆಲುಗು ಸೂಪರ್‌ಸ್ಟಾರ್ ಬಾಲಯ್ಯ ಬರ್ತ್‌ಡೇ; ಹೊಸ ಸಿನಿಮಾ ಅನೌನ್ಸ್‌!

IND VS PAK
ಕ್ರೀಡೆ46 mins ago

IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

HSRP Number Plate
ಬೆಂಗಳೂರು50 mins ago

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಡೆಡ್‌ಲೈನ್‌! ಇನ್ನೂ ಎರಡೇ ದಿನ ಬಾಕಿ

Narendra Modi And stock market news
ಪ್ರಮುಖ ಸುದ್ದಿ53 mins ago

Stock Market News: ಮೋದಿ ಪ್ರಮಾಣ ವಚನದ ಬಳಿಕ ಷೇರು ಮಾರುಕಟ್ಟೆ ಜಿಗಿತ; ಸೆನ್ಸೆಕ್ಸ್‌ ಹೊಸ ದಾಖಲೆ

Anirudh Jatkar again rise on voice jote joteyali serial issue
ಸ್ಯಾಂಡಲ್ ವುಡ್1 hour ago

Anirudh Jatkar: ʻಜೊತೆ ಜೊತೆಯಲಿ’ ಧಾರಾವಾಹಿಯ ವಿವಾದದ ಬಗ್ಗೆ ಬೇಸರ ಹೊರ ಹಾಕಿದ ಅನಿರುದ್ಧ್!

NEET UG
ಪ್ರೇಮಿಗಳ ದಿನಾಚರಣೆ1 hour ago

NEET UG : ನೀಟ್-ಯುಜಿ ಫಲಿತಾಂಶ ಹಿಂಪಡೆಯಲು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌