ಹೊಸ ಇನಿಂಗ್ಸ್​ ಆರಂಭಿಸಿದ ಆರ್​ಸಿಬಿ ಸ್ಪಿನ್ನರ್​ ವಾನಿಂದು ಹಸರಂಗ, ಐಪಿಎಲ್​ಗೆ ಬರುವುದು ತಡ? - Vistara News

ಕ್ರಿಕೆಟ್

ಹೊಸ ಇನಿಂಗ್ಸ್​ ಆರಂಭಿಸಿದ ಆರ್​ಸಿಬಿ ಸ್ಪಿನ್ನರ್​ ವಾನಿಂದು ಹಸರಂಗ, ಐಪಿಎಲ್​ಗೆ ಬರುವುದು ತಡ?

ನ್ಯೂಜಿಲ್ಯಾಂಡ್​ ಪ್ರವಾಸ ಹೊರಡುವ ಮೊದಲು ವಾನಿಂದು ಹಸರಂಗ ಗೆಳತೆ ವಿಂದ್ಯಾರನ್ನು ವಿವಾಹವಾಗಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾರ್ಚ್​ ತಿಂಗಳಾಂತ್ಯಕ್ಕೆ ಐಪಿಎಲ್​ 16ನೇ ಆವೃತ್ತಿ (IPL) ಆರಂಭಗೊಳ್ಳಲಿದೆ. ಎಲ್ಲ ಫ್ರಾಂಚೈಸಿಗಳು ತಮ್ಮ ತಮ್ಮ ಕ್ಯಾಂಪ್​ ಆರಂಭ ಮಾಡಲು ಸಜ್ಜಾಗುತ್ತಿವೆ. ಏತನ್ಯಧ್ಯೆ, ಆರ್​ಸಿಬಿ ತಂಡದ ಆಲ್​ರೌಂಡರ್​ ಹಾಗೂ ಶ್ರೀಲಂಕಾದ ಆಟಗಾರ ವಾನಿಂದು ಹಸರಂಗ ವಿವಾಹವಾಗಿದ್ದಾರೆ. ಪತ್ನಿ ವಿಂದ್ಯಾ ಅವರೊಂದಿಗಿನ ಚಿತ್ರವನ್ನು ವಾನಿಂದು ಹಸರಂಗ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ವಾನಿಂದು ಹಸರಂಗ ಹಾಗೂ ವಿಂದ್ಯಾ ಜೋಡಿಯ ಗೆಳೆಯ ಧನುಷ್ಕ ಸೇನಾಧೀರಾ ಜೋಡಿಗೆ ಶುಭ ಕೋರಿ ಸೋಶಿಯಲ್​ ಮೀಡಿಯಾ ಪೋಸ್ಟ್​ ಹಾಕಿದ್ದಾರೆ. ಶ್ರೀಲಂಕಾ ತಂಡ ಎರಡು ಪಂದ್ಯಗಳ ಟೆಸ್ಟ್​ ಸರಣಿಗಾಗಿ ನ್ಯೂಜಿಲ್ಯಾಂಡ್​​​ಗೆ ತೆರಳಿದೆ. ಆದರೆ, ಮದುವೆ ಕಾರಣಕ್ಕೆ ವಾನಿಂದು ಶ್ರೀಲಂಕಾದಲ್ಲಿ ಉಳಿದುಕೊಂಡಿದ್ದಾರೆ. ಏಕ ದಿನ ಸರಣಿಯಗೆ ಮೊದಲು ವಾನಿಂದು ನ್ಯೂಜಿಲ್ಯಾಂಡ್​ಗೆ ತೆರಳಲಿದ್ದಾರೆ.

ಇದನ್ನೂ ಓದಿ : WPL 2023 : ಆರ್​ಸಿಬಿ ಮಣಿಸಿದ ನಡುವೆಯೇ ಗುಜರಾತ್​ ಜಯಂಟ್ಸ್​ ತಂಡಕ್ಕೆ ಆಘಾತ, ನಾಯಕಿ ಟೂರ್ನಿಯಿಂದ ಔಟ್​​

ವಾನಿಂದು ಹಸರಂಗ ಪಾಕಿಸ್ತಾನ ಕ್ರಿಕೆಟ್​ ಲೀಗ್​ನಲ್ಲಿ ಆಡುವುದಕ್ಕೆ ಮುಂದಾಗಿದ್ದರು. ಆದರೆ, ಶ್ರೀಲಂಕಾ ಕ್ರಿಕೆಟ್​ ತಂಡ ಅವರಿಗೆ ನಿರಾಕ್ಸೇಪಣಾ ಪತ್ರ ಕೊಟ್ಟಿರಲಿಲ್ಲ. ಹೀಗಾಗಿ ಅಲ್ಲಿ ಆಡುವ ಅವಕಾಶ ಕಳೆದುಕೊಂಡಿದ್ದರು. ಇದೀಗ ಅವರು ನ್ಯೂಜಿಲ್ಯಾಂಡ್​ಗೆ ಪ್ರವಾಸ ಮಾಡಬೇಕಾಗಿದೆ. ಅದು ಮುಗಿದ ಬಳಿಕ ಐಪಿಎಲ್​ಗಾಗಿ ಭಾರತಕ್ಕೆ ಬರಲಿದ್ದಾರೆ. ಆದರೆ ಮಾರ್ಚ್​ 8ರ ತನಕ ನ್ಯೂಜಿಲ್ಯಾಂಡ್​ ಪ್ರವಾಸ ಮುಂದುವರಿಯಲಿರುವ ಕಾರಣ ಅವರು ಆರ್​ಸಿಬಿ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

IPL 2024 : ಭಾರೀ ಭದ್ರತಾ ಲೋಪ; ಎಸ್​ಆರ್​​ಎಚ್​ ವಿದೇಶಿ ಆಟಗಾರನ ಮೇಲೆ ಮುಗಿಬಿದ್ದ ಸಾರ್ವಜನಿಕರು!

IPL 2024: ಕ್ರಿಕೆಟಿಗರನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿರುತ್ತಾರೆ. ಈ ಮೂಲಕ ಆಟಗಾರರನ್ನು ಅಭಿಮಾನಿಗಳಿಂದ ಸುರಕ್ಷಿತವಾಗಿರಿಸುತ್ತಾರೆ. ಆದಾಗ್ಯೂ, ಹೆನ್ರಿಕ್ ಕ್ಲಾಸೆನ್ ಮತ್ತು ಉನಾದ್ಕಟ್ ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಎದುರಿಸಲು ಹೆಣಗಾಡಿದರು. ಅಲ್ಲದೆ ಸುತ್ತಲೂ ಯಾವುದೇ ಭದ್ರತಾ ಸಿಬ್ಬಂದಿ ಕಾಣಿಸಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ. ಎಸ್ಆರ್​ಎಚ್​​ ತಾರೆಯರು ಅಭಿಮಾನಿಗಳಿಂದ ದೂರವಿರಲು ತಮ್ಮ ಗರಿಷ್ಠ ಪ್ರಯತ್ನವನ್ನು ಮಾಡುತ್ತಿರುವುದನ್ನು ಕಾಣಬಹುದು.

VISTARANEWS.COM


on

IPL 2024
Koo

ಹೈದರಾಬಾದ್​: ಭಾರತದಲ್ಲಿ ಕ್ರಿಕೆಟಿಗರ ಕ್ರೇಜ್ ದೊಡ್ಡ ಮಟ್ಟಿಗಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟ್ ತಾರೆಗಳನ್ನು ಭೇಟಿಯಾಗಲು ಹಾಗೂ ಮಾತನಾಡಿಸಲು ಪ್ರಯತ್ನಿಸುತ್ತಾರೆ. ಅದಕ್ಕಾಗಿ ಯಾವುದೇ ಅಪಾಯಗಳನ್ನು ತಂದೊಡ್ಡುತ್ತಾರೆ. ಇದು ಕೆಲವೊಂದು ಬಾರಿ ಅನಾಹುತಗಳಿಗೂ ಕಾರಣವಾಗುತ್ತವೆ. ಅಂತೆಯೇ ಇತ್ತೀಚೆಗೆ, ಸನ್​ರೈಸರ್ಸ್​ ಹೈದರಾಬಾದ್ ತಂಡದ ಹೆನ್ರಿಚ್​ ಕ್ಲಾಸೆನ್ ಇಂಥದ್ದೇ ಸಮಸ್ಯೆಗೆ ಒಳಗಾದರು. ಶಾಪಿಂಗ್ ಮಾಲ್​ವೊಂದರಲ್ಲಿ ಉಂಟಾದ ಭದ್ರತಾ ಲೋಪದಿಂದಾಗಿ ಅಭಿಮಾನಿಗಳ ಮಧ್ಯೆ ಸಿಕ್ಕಿಹಾಕಿಕೊಂಡು ಮಾನಸಿಕ ಹಾಗೂ ದೈಹಿಕ ಹಿಂಸೆ ಎದುರಿಸಿದರು.

ಹೆನ್ರಿಕ್ ಕ್ಲಾಸೆನ್ ಮತ್ತು ಅವರ ಎಸ್ಆರ್​ಎಚ್​​ ತಂಡದ ಸಹ ಆಟಗಾರ ಜಯದೇವ್ ಉನಾದ್ಕಟ್ ಕೂಡ ಜನ ಸಾಗರದ ನಡುವೆ ಸಿಲುಕಿ ಹಾಕಿಕೊಂಡರು. ಅವರಿಬ್ಬರು ಪ್ರಚಾರ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಅಲ್ಲಿಗೆ ಹೋಗಿದ್ದರು.

ಸಾಮಾನ್ಯವಾಗಿ, ಕ್ರಿಕೆಟಿಗರನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿರುತ್ತಾರೆ. ಈ ಮೂಲಕ ಆಟಗಾರರನ್ನು ಅಭಿಮಾನಿಗಳಿಂದ ಸುರಕ್ಷಿತವಾಗಿರಿಸುತ್ತಾರೆ. ಆದಾಗ್ಯೂ, ಹೆನ್ರಿಕ್ ಕ್ಲಾಸೆನ್ ಮತ್ತು ಉನಾದ್ಕಟ್ ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಎದುರಿಸಲು ಹೆಣಗಾಡಿದರು. ಅಲ್ಲದೆ ಸುತ್ತಲೂ ಯಾವುದೇ ಭದ್ರತಾ ಸಿಬ್ಬಂದಿ ಕಾಣಿಸಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ. ಎಸ್ಆರ್​ಎಚ್​​ ತಾರೆಯರು ಅಭಿಮಾನಿಗಳಿಂದ ದೂರವಿರಲು ತಮ್ಮ ಗರಿಷ್ಠ ಪ್ರಯತ್ನವನ್ನು ಮಾಡುತ್ತಿರುವುದನ್ನು ಕಾಣಬಹುದು.

ಕೋಪಗೊಂಡಿದ್ದ ಕ್ಲಾಸೆನ್​

ಉನಾದ್ಕಟ್ ಶಾಂತವಾಗಿ ಕಾಣುತ್ತಿದ್ದರೂ, ಹೆನ್ರಿಚ್​​ ಕ್ಲಾಸೆನ್ ಖಂಡಿತವಾಗಿಯೂ ನಿರಾಶೆಗೊಂಡಿದ್ದರು. ಅವರ ಕ್ರಿಯೆಗಳು ಅವರ ಭಾವನೆಗಳನ್ನು ಸ್ಪಷ್ಟಪಡಿಸಿದವು. ದಕ್ಷಿಣ ಆಫ್ರಿಕಾದ ತಾರೆ ಕೈ ಸನ್ನೆಯಿಂದ ಅಭಿಮಾನಿಗಳನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿದ್ದರು. ಆದರೆ ಅದರಿಂದ ಲಾಭವಾಗಿರಲಿಲ್ಲ . ಅಭಿಮಾನಿಗಳು ಕ್ಲಾಸೆನ್ ಹೆಸರನ್ನು ನಿರಂತರವಾಗಿ ಕೂಗುತ್ತಿದ್ದರು. ಕ್ರಿಕೆಟ್ ತಾರೆಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ತಮ್ಮಿಂದ ಸಾಧ್ಯವಾದ ಎಲ್ಲವನ್ನೂ ಅವರು ಮಾಡುತ್ತಿದ್ದರು.

ಇದನ್ನೂ ಓದಿ: Champions Trophy : ಭಾರತ ಕ್ರಿಕೆಟ್​ ತಂಡಕ್ಕೆ ಬೆದರಿಕೆ ಒಡ್ಡಿದ ಪಾಕಿಸ್ತಾನದ ಮಾಜಿ ಆಟಗಾರ

ಅಭಿಮಾನಿಗಳ ಗುಂಪಿನ ನಡುವಿನಿಂದ ಹಾದುಹೋಗುವಾಗ ಇಬ್ಬರೂ ಕ್ರಿಕೆಟಿಗರನ್ನು ನಿರಂತರವಾಗಿ ತಳ್ಳಲಾಯಿತು. ಮೈ ಮೇಲೆ ಕೈ ಹಾಕಲಾಯಿತು. ಕೊನೆಗೂ ಅವರು ಭಾರಿ ಜನಸಮೂಹದಿಂದ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು.

ಹೆನ್ರಿಚ್​ ಕ್ಲಾಸೆನ್ ಮತ್ತು ಜಯದೇವ್ ಉನಾದ್ಕಟ್ ಇಬ್ಬರೂ ಗುರುವಾರ (ಮೇ 2) ಹೈದರಾಬಾದ್​ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಎಸ್ಆರ್​​ಎಚ್​ ವಿರುದ್ಧ ಮುಖಾಮುಖಿಯಾದಾಗ ಆಡಿದ್ದರು. ಎಸ್ಆರ್​ಎಚ್​​ ಈ ಪಂದ್ಯವನ್ನು ಒಂದು ರನ್ನಿಂದ ಗೆದ್ದು ಪ್ಲೇಆಫ್ ಸ್ಥಾನಕ್ಕಾಗಿ ಪೈಪೋಟಿಯಲ್ಲಿ ಉಳಿಯಿತು. ಆ ಪಂದ್ಯದಲ್ಲಿ ಕ್ಲಾಸೆನ್ ಕೇವಲ 19 ಎಸೆತಗಳಲ್ಲಿ ಅಜೇಯ 42 ರನ್ ಗಳಿಸುವ ಮೂಲಕ ಎಸ್ಆರ್ಹೆಚ್ ಪರ ನಿರ್ಣಾಯಕ ಇನ್ನಿಂಗ್ಸ್ ಆಡಿದ್ದರು. ಮತ್ತೊಂದೆಡೆ, ಉನಾದ್ಕಟ್ ಎರಡು ಓವರ್​ಗಳನ್ನು ಎಸೆದರೂ ಯಾವುದೇ ವಿಕೆಟ್ ಪಡೆದಿರಲಿಲ್ಲ.

Continue Reading

ಪ್ರಮುಖ ಸುದ್ದಿ

Champions Trophy : ಭಾರತ ಕ್ರಿಕೆಟ್​ ತಂಡಕ್ಕೆ ಬೆದರಿಕೆ ಒಡ್ಡಿದ ಪಾಕಿಸ್ತಾನದ ಮಾಜಿ ಆಟಗಾರ

Champions Trophy :ಭಾರತ ತಂಡ ಪ್ರಯಾಣ ಮಾಡದ ಹಿನ್ನೆಲೆಯಲ್ಲಿ ಪಂದ್ಯದ ತಾಣ ಬದಲಾಯಿಸುವ ಬಗ್ಗೆ ಅಥವಾ ಹೈಬ್ರಿಡ್ ಮಾದರಿ ಪರಿಗಣಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಅರ್ಹತಾ ಸುತ್ತಿನ ಪಂದ್ಯಗಳನ್ನು ಪ್ರತ್ಯೇಕವಾಗಿ ಒಂದು ನಗರದಲ್ಲಿ ನಿಗದಿಪಡಿಸುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ಪ್ರಸ್ತಾಪಿಸಿದೆ ಎಂದು ಹೇಳಲಾಗಿದೆ.

VISTARANEWS.COM


on

Champions Trophy
Koo

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ (Champions Trophy) ಟ್ರೋಫಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದರೆ ಭಾರತವು ಐಸಿಸಿಗೆ ತಾರ್ಕಿಕ ಉತ್ತರ ನೀಡಬೇಕಾಗುತ್ತದೆ. ಅಲ್ಲದೆ, ಐಸಿಸಿ ಪಂದ್ಯಾವಳಿಯಲ್ಲಿ ಭಾಗವಹಿಸದಿರುವ ನಿರ್ಧಾರವು ಭಾರತ ಕ್ರಿಕೆಟ್​ ತಂಡಕ್ಕೆ (Indian Cricket Team) ಹಿನ್ನಡೆಯನ್ನುಂಟು ಮಾಡುತ್ತದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ರಶೀದ್ ಲತೀಫ್ (Rashid Latif) ಹೇಳಿದ್ದಾರೆ. ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಭಾಗವಹಿಸುವುದಿಲ್ಲ ಎಂದು ಮೂಲಗಳು ಹೇಳಿರುವ ಹಿನ್ನೆಲೆಯಲ್ಲಿ ಲತೀಫ್​ ಭಾರತ ತಂಡವನ್ನು ಬ್ಲ್ಯಾಕ್​ಮೇಲ್ ಮಾಡಲು ಮುಂದಾಗಿದೆ.

ಭಾರತ ತಂಡ ಪ್ರಯಾಣ ಮಾಡದ ಹಿನ್ನೆಲೆಯಲ್ಲಿ ಪಂದ್ಯದ ತಾಣ ಬದಲಾಯಿಸುವ ಬಗ್ಗೆ ಅಥವಾ ಹೈಬ್ರಿಡ್ ಮಾದರಿ ಪರಿಗಣಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಅರ್ಹತಾ ಸುತ್ತಿನ ಪಂದ್ಯಗಳನ್ನು ಪ್ರತ್ಯೇಕವಾಗಿ ಒಂದು ನಗರದಲ್ಲಿ ನಿಗದಿಪಡಿಸುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ಪ್ರಸ್ತಾಪಿಸಿದೆ ಎಂದು ಹೇಳಲಾಗಿದೆ. ಇವೆಲ್ಲದರಿಂದ ದಿಕ್ಕೆಟ್ಟಿರುವ ಪಾಕಿಸ್ತಾನದ ಆಟಗಾರ ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ.

“ನೀವು ದ್ವಿಪಕ್ಷೀಯ ಸರಣಿಯನ್ನು ನಿರಾಕರಿಸಬಹುದು. ಆದರೆ ಐಸಿಸಿ ಟೂರ್ನಿಗಳನ್ನು ನಿರಾಕರಿಸುವುದು ಕಷ್ಟ. ಐಸಿಸಿ ತನ್ನ ಯೋಜನೆಯನ್ನು ರೂಪಿಸಿದಾಗ ತಂಡಗಳಿಗೆ ತಾವು ಎಲ್ಲಿ ಆಡಬೇಕೆಂದು ತಿಳಿದಿರುತ್ತದೆ. ಉದಾಹರಣೆಗೆ ವಿಶ್ವಕಪ್ ಆಡಲು ಭಾರತಕ್ಕೆ ಹೋಗಬೇಕು ಎಂದು ಪಾಕಿಸ್ತಾನಕ್ಕೆ ತಿಳಿದಿತ್ತು ಮತ್ತು ಅದಕ್ಕೆ ಅನುಗುಣವಾಗಿ ಒಪ್ಪಂದಗಳಿಗೆ ಸಹಿ ಹಾಕಿತ್ತು ಎಂದು ರಶೀದ್ ಲತೀಫ್ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

ಐಸಿಸಿ ಟೂರ್ನಿಗಳನ್ನು ನಿರಾಕರಿಸುವುದು ಸ್ವಲ್ಪ ಕಷ್ಟದ ವಿಷಯ. 1996 ರ ವಿಶ್ವಕಪ್​​ನಲ್ಲಿ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ಶ್ರೀಲಂಕಾಕ್ಕೆ ಹೋಗಲು ನಿರಾಕರಿಸಿದವು. ಇಡೀ ಗುಂಪು ಹಂತ ಬದಲಾಯಿತು ಮತ್ತು ಶ್ರೀಲಂಕಾ ಚಾಂಪಿಯನ್ ಆಯಿತು. ಇದು ಬಹಳ ದೊಡ್ಡ ತಪ್ಪು. ಭಾರತ ಅಥವಾ ಪಾಕಿಸ್ತಾನ ಜತೆಯಾಗಿ ಹೋಗದಿರುವುದು ತಪ್ಪು. ಸರ್ಕಾರದ ಮಟ್ಟದಲ್ಲಿ ಯಾವುದೇ ಸಂದರ್ಭಗಳು ಸಂಭವಿಸಿದರೆ ಬರದಿರುವುದಕ್ಕೆ ಕಾರಣ ನೀಡಬೇಕಾಗುತ್ತದೆ. ಪಾಕಿಸ್ತಾನದ ಪರಿಸ್ಥಿತಿಗಳು ಸರಿಯಾಗಿಲ್ಲ ಇತ್ಯಾದಿಗಳನ್ನು ಉಲ್ಲೇಖಿಸಿ ನೀವು ದ್ವಿಪಕ್ಷೀಯ ಸರಣಿಯನ್ನು ನಿರಾಕರಿಸಬಹುದು/ ನನ್ನ ಅಭಿಪ್ರಾಯದಲ್ಲಿ, ಐಸಿಸಿ ಪಂದ್ಯಾವಳಿಯನ್ನು ನಿರಾಕರಿಸುವುದು ಹಿನ್ನಡೆಯನ್ನುಂಟು ಮಾಡುತ್ತದೆ,” ಎಂದು ಮಾಜಿ ವಿಕೆಟ್ ಕೀಪರ್ ಬ್ಯಾಟರ್​ ಹೇಳಿದ್ದಾರೆ

ಲಭ್ಯವಿರುವ ಮಾಹಿತಿಯ ಪ್ರಕಾರ, ಪಿಸಿಬಿ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್ ಅನ್ನು ಚಾಂಪಿಯನ್ಸ್​ ಟ್ರೋಫಿಯ ಸ್ಥಳಗಳಾಗಿ ಆಯ್ಕೆ ಮಾಡಿದೆ. ಲಾಹೋರ್ ಅಂತಿಮ ಪಂದ್ಯಕ್ಕೆ ಆತಿಥ್ಯ ವಹಿಸುತ್ತದೆ.

Continue Reading

ಕ್ರಿಕೆಟ್

IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

IPL 2024: ವಾಂಖೆಡೆಯಲ್ಲಿ 12 ವರ್ಷಗಳ ನಂತರ ಕೋಲ್ಕತಾ ನೈಟ್ ರೈಡರ್ಸ್ ಆತಿಥೇಯ ತಂಡದ ವಿರುದ್ಧ 24 ರನ್​ಗಳ ಭರ್ಜರಿ ಗೆಲುವು ದಾಖಲಿಸಿದ ನಂತರ, ಇರ್ಫಾನ್ ಪಠಾಣ್ ಹಾರ್ದಿಕ್ ಪಾಂಡ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಾಂಡ್ಯ ಅವರನ್ನು ಟೀಕಿಸುವ ವೀಡಿಯೊ ವೈರಲ್ ಆಗುವ ಮೊದಲು, ಭಾರತದ ಮಾಜಿ ಆಲ್ರೌಂಡರ್​ ಎಕ್ಸ್​ನಲ್ಲಿ ಸರಣಿ ಟ್ವೀಟ್​ಗಳನ್ನು ಮಾಡಿದ್ದರು.

VISTARANEWS.COM


on

Hardik Pandya
Koo

ನವದೆಹಲಿ: ಐಪಿಎಲ್​ ಪಂದ್ಯದಲ್ಲಿ (IPL 2024) ಕೆಕೆಆರ್ ವಿರುದ್ಧ 24 ರನ್​ಗಳ ಸೋಲಿನ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರ ಕಳಪೆ ನಾಯಕತ್ವಕ್ಕಾಗಿ ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ 12 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ತವರಿನಲ್ಲಿ ಮೊದಲ ಗೆಲುವನ್ನು ಪಡೆಯಲು ಹೆಚ್ಚು ದೃಢನಿಶ್ಚಯದಿಂದ ಆಡಿದ ತಂಡದಂತೆ ಕಾಣುತ್ತಿತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಉತ್ತಮ ಆರಂಭ ಪಡೆದ ನಂತರ ಲಾಭ ಪಡೆಯಲು ಸಾಧ್ಯವಾಗದ ಕಾರಣ ಮುಂಬೈ ಸೋಲಿಗೆ ಹೆಚ್ಚಿನ ದೂಷಣೆ ಹಾರ್ದಿಕ್ ಪಾಂಡ್ಯ ಅವರತ್ತ ತಿರುಗಿದೆ.

ವಾಂಖೆಡೆಯಲ್ಲಿ ಕೆಕೆಆರ್ ಮೊದಲು ಬ್ಯಾಟಿಂಗ್ ಮಾಡಿದಾಗ, ಹಾರ್ದಿಕ್ ಪಾಂಡ್ಯ ಮತ್ತು ಇತರ ಎಂಐ ಬೌಲರ್​ಗಳು ಪವರ್​​ಪ್ಲೇನಲ್ಲಿ ಕೆಕೆಆರ್ ತಂಡ ರನ್ ಹರಿವನ್ನು ನಿಯಂತ್ರಿಸಲು ಅದ್ಭುತವಾಗಿ ಕೆಲಸ ಮಾಡಿದರು. ಮೊದಲ ಓವರ್​ನ 4 ನೇ ಎಸೆತದಲ್ಲಿ ಫಿಲ್ ಸಾಲ್ಟ್ ಅವರನ್ನು ಕೇವಲ 5 ರನ್​​ಗಳಿಗೆ ಔಟ್ ಮಾಡುವ ಮೂಲಕ ತುಸಾರಾ ಉತ್ತಮ ಅರಂಭ ತಂದರು. ತಮ್ಮ ಮುಂದಿನ ಓವರ್ನಲ್ಲಿ, ತುಸಾರ 3 ನೇ ಕ್ರಮಾಂಕದ ಬ್ಯಾಟ್ಸ್ಮನ್ ಆಂಗ್ರಿಶ್ ರಘುವಂಶಿ ಅವರ ವಿಕೆಟ್ ಅನ್ನು 13 ರನ್​ಗಳಿಗೆ ಪಡೆದರು, 4 ಎಸೆತಗಳ ನಂತರ, ಅವರು ಶ್ರೇಯಸ್ ಅಯ್ಯರ್ ಅವರನ್ನು 4 ಎಸೆತಗಳಲ್ಲಿ 6 ರನ್​ಗಳಿಗೆ ಔಟ್ ಮಾಡಿದರು.

ಹಾರ್ದಿಕ್ ಪಾಂಡ್ಯ 8 ಎಸೆತಗಳಲ್ಲಿ 8 ರನ್ ಗಳಿಸಿದ್ದ ಸುನಿಲ್ ನರೈನ್ ಅವರನ್ನು ಕ್ಲೀನ್ ಬೌಲ್ ಮಾಡಿದರೆ, ಅನುಭವಿ ಪಿಯೂಷ್ ಚಾವ್ಲಾ 9 ರನ್ ಗಳಿಸಿ ಡೇಂಜರ್ ಮ್ಯಾನ್ ರಿಂಕು ಸಿಂಗ್ ಅವರನ್ನು ಔಟ್​​ ಮಾಡಿದರು. 7ನೇ ಓವರ್​​ನ ಮೊದಲ ಎಸೆತದ ವೇಳೆಗೆ ಕೋಲ್ಕತಾ 5 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿತ್ತು. ಆದರೆ ಆ ಬಳಿಕ ಅನನುಭವಿ ನಮನ್ ಧೀರ್ ಅವರನ್ನು ಬೌಲಿಂಗ್​ಗೆ ಕರೆತರುವ ಪಾಂಡ್ಯ ಅವರ ನಿರ್ಧಾರ ಕೈಕೊಟ್ಟಿತು. ವೆಂಕಟೇಶ್ ಅಯ್ಯರ್ ಮತ್ತು ಮನೀಶ್ ಪಾಂಡೆ ಅವರಿಗೆ 83 ರನ್​ಗಳ ಜೊತೆಯಾಟವನ್ನು ನೀಡಿತು.

57/5 ಸ್ಕೋರ್ ಮಾಡಿದ್ದ ನೈಟ್ ರೈಡರ್ಸ್ ಅಂತಿಮವಾಗಿ 169 ರನ್ ಗಳಿಸಿತು. ನಂತರ ಗುರಿ ಬೆನ್ನಟ್ಟಲು ವಿಫಲವಾದ ಮುಂಬೈ 18.5 ಓವರ್​ಗಳಲ್ಲಿ 145 ರನ್​ಗಳಿಗೆ ಆಲೌಟ್ ಆಯಿತು.

ನಿರಾಶೆ ವ್ಯಕ್ತಪಡಿಸಿದ ಇರ್ಫಾನ್ ಪಠಾಣ್

ವಾಂಖೆಡೆಯಲ್ಲಿ 12 ವರ್ಷಗಳ ನಂತರ ಕೋಲ್ಕತಾ ನೈಟ್ ರೈಡರ್ಸ್ ಆತಿಥೇಯ ತಂಡದ ವಿರುದ್ಧ 24 ರನ್​ಗಳ ಭರ್ಜರಿ ಗೆಲುವು ದಾಖಲಿಸಿದ ನಂತರ, ಇರ್ಫಾನ್ ಪಠಾಣ್ ಹಾರ್ದಿಕ್ ಪಾಂಡ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಾಂಡ್ಯ ಅವರನ್ನು ಟೀಕಿಸುವ ವೀಡಿಯೊ ವೈರಲ್ ಆಗುವ ಮೊದಲು, ಭಾರತದ ಮಾಜಿ ಆಲ್ರೌಂಡರ್​ ಎಕ್ಸ್​ನಲ್ಲಿ ಸರಣಿ ಟ್ವೀಟ್​ಗಳನ್ನು ಮಾಡಿದ್ದರು. ಮುಂಬೈ ಇಂಡಿಯನ್ಸ್ ನಾಯಕನ ಪೆದ್ದ ನಡೆಗಳನ್ನು ಪ್ರಶ್ನಿಸಿದ್ದರು.

ಇರ್ಫಾನ್ ಪಠಾಣ್ ಅವರು ಮುಂಬೈನ ಪ್ರಯಾಣವು ಕೊನೆಗೊಂಡಿದೆ. ಅವರು ಹೊರಗಡೆ ಎಷ್ಟು ಪ್ರಬಲವಾಗಿ ಕಾಣುತ್ತಿದ್ದರೂ ತಂಡವನ್ನು ಉತ್ತಮವಾಗಿ ನಿರ್ವಹಿಸಿಲ್ಲ ಎಂದು ಹೇಳುವ ಮೂಲಕ ವೀಡಿಯೊವನ್ನು ಪ್ರಾರಂಭಿಸಿದರು. ಹಾರ್ದಿಕ್ ಪಾಂಡ್ಯ ವಿರುದ್ಧದ ಪ್ರಶ್ನೆಗಳು ಮತ್ತು ಟೀಕೆಗಳು ಸರಿಯಾಗಿವೆ ಎಂದು ಹೇಳಿದರು.

“ಮುಂಬೈ ಇಂಡಿಯನ್ಸ್​ ಕಥೆ ಇಲ್ಲಿಗೆ ಕೊನೆಗೊಳ್ಳುತ್ತದೆ. ಈ ತಂಡವು ಕಾಗದದ ಮೇಲೆ ತುಂಬಾ ಉತ್ತಮವಾಗಿತ್ತು, ಆದರೆ ಅದನ್ನು ನಿರ್ವಹಿಸಲಾಗಲಿಲ್ಲ. ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆ ಎದ್ದ ಪ್ರಶ್ನೆಗಳು ಸಂಪೂರ್ಣವಾಗಿ ಸರಿಯಾಗಿವೆ. ನೀವು ಕೆಕೆಆರ್ ಅನ್ನು 57/5 ಕ್ಕೆ ಸೀಮಿತಗೊಳಿಸಿದಾಗ, ನೀವು ನಮನ್ ಧಿರ್​ಗೆ ಸತತ ಮೂರು ಓವರ್​ಗಳನ್ನು ನೀಡಿದ ತಪ್ಪು ಮಾಡಿದ್ದೀರಿ. ನೀವು ನಿಮ್ಮ ಮುಖ್ಯ ಬೌಲರ್​ಗಳನ್ನು ಇಳಿಸಬೇಕಾಗಿತ್ತು. ಆರನೇ ಬೌಲರ್​ಗೆ ಮೂರು ಓವರ್​​ ನೀಡಿದ್ದೀರಿ” ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.

ತಂಡದ ಮರು ರಚನೆಗೆ ಸಲಹೆ

ಮುಂಬೈ ಇಂಡಿಯನ್ಸ್ ತಂಡದ ಮ್ಯಾನೇಜ್ಮೆಂಟ್​​ ಇರ್ಫಾನ್ ಪಠಾಣ್ ನೀಡಿದ ಅತ್ಯುತ್ತಮ ಸಲಹೆಯೆಂದರೆ, ಹಾರ್ದಿಕ್ ಪಾಂಡ್ಯ ತಮ್ಮ ನಾಯಕ ಎಂದು ಆಟಗಾರರನ್ನು ಒಪ್ಪಿಕೊಳ್ಳುವಂತೆ ಮಾಡುವುದು. 2007 ರ ಐಸಿಸಿ ಟಿ 20 ವಿಶ್ವಕಪ್ ಫೈನಲ್​​ನ ಮ್ಯಾನ್ ಆಫ್ ದಿ ಮ್ಯಾಚ್ ವಿನ್ನರ್ ಮುಂಬೈ ಇಂಡಿಯನ್ಸ್ ತಂಡವನ್ನು ಒಟ್ಟಾಗಿ ಕರೆಯೊಯ್ಯುತ್ತಿಲ್ಲ. ಇದು ಅವರು ಮುಂದೆ ಸುಧಾರಿಸಬೇಕಾದ ವಿಷಯವಾಗಿದೆ ಎಂದು ಹೇಳಿದ್ದಾರೆ.

“ನಾಯಕತ್ವವು ಆಟದಲ್ಲಿ ದೊಡ್ಡ ಪರಿಣಾಮ ಬೀರುತ್ತದೆ. ಮುಂಬೈ ಇಂಡಿಯನ್ಸ್ ಸಂಘಟಿತ ತಂಡದಂತೆ ಕಾಣುತ್ತಿಲ್ಲ, ಮ್ಯಾನೇಜ್ಮೆಂಟ್ ಇದನ್ನು ಪರಿಗಣಿಸಬೇಕಾಗಿದೆ. ಆಟಗಾರರು ನಾಯಕನನ್ನು ಗೌರವಿಸಬೇಕು ಮತ್ತು ಸ್ವೀಕರಿಸಬೇಕು. ನಾವು ಅದನ್ನು ಮೈದಾನದಲ್ಲಿ ನೋಡಲಿಲ್ಲ” ಎಂದು ಪಠಾಣ್ ಮುಕ್ತಾಯಗೊಳಿಸಿದರು.

Continue Reading

ಕ್ರೀಡೆ

Virat Kohli: ಗುಜರಾತ್​ ವಿರುದ್ಧ 6 ರನ್ ಬಾರಿಸಿದರೆ ವಿಶೇಷ ದಾಖಲೆ ಬರೆಯಲಿದ್ದಾರೆ ಕಿಂಗ್​ ಕೊಹ್ಲಿ

Virat Kohli: ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ವಿಂಡೀಸ್​ನ ಮಾಜಿ ಆಟಗಾರ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 14562 ರನ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಶೊಯೆಬ್ ಮಲಿಕ್ (13360) ದ್ವಿತೀಯ, ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್(12900) ತೃತೀಯ ಸ್ಥಾನದಲ್ಲಿದ್ದಾರೆ. ಕೊಹ್ಲಿ 12494* ರನ್​ಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಇಂದು(ಶನಿವಾರ) ನಡೆಯುವ ಗುಜರಾತ್​ ಟೈಟಾನ್ಸ್(Gujarat Titans)​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ(Royal Challengers Bengaluru) ಆಟಗಾರ ವಿರಾಟ್​ ಕೊಹ್ಲಿ(Virat Kohli) ಕೇವಲ 6 ರನ್​ ಗಳಿಸಿದರೆ ಟಿ20 ಕ್ರಿಕೆಟ್​ನಲ್ಲಿ ವಿಶೇಷ ಮೈಲುಗಲ್ಲೊಂದನ್ನು ನಿರ್ಮಿಸಲಿದ್ದಾರೆ. 6 ರನ್​ ಗಳಿಸುತ್ತಿದ್ದಂತೆ ಟಿ20 ಕ್ರಿಕೆಟ್​ನಲ್ಲಿ 12500 ರನ್​ ಪೂರೈಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 369 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 133.94 ಸ್ಟ್ರೈಕ್​ ರೇಟ್​ನಲ್ಲಿ 12494 ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 95 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿರುವ ಕೊಹ್ಲಿ ಸದ್ಯ ಆಡಿದ 10 ಇನಿಂಗ್ಸ್​ಗಳಿಂದ ಭರ್ತಿ 500 ರನ್​ ಬಾರಿಸಿದ್ದಾರೆ. ಆರೆಂಜ್​ ಕ್ಯಾಪ್​ ರೇಸ್​ನಲ್ಲಿ ಸದ್ಯ ದ್ವಿತೀಯ ಸ್ಥಾನಿಯಾಗಿದ್ದಾರೆ. ಇಂದಿನ ಪಂದ್ಯದಲ್ಲಿ 10 ರನ್​ ಗಳಿಸಿದರೆ ಚೆನ್ನೈ ತಂಡದ ನಾಯಕ ಋತುರಾಜ್​ ಗಾಯಕ್ವಾಡ್(509)​ ದಾಖಲೆ ಮುರಿಯಲಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ವಿಂಡೀಸ್​ನ ಮಾಜಿ ಆಟಗಾರ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 14562 ರನ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಶೊಯೆಬ್ ಮಲಿಕ್ (13360) ದ್ವಿತೀಯ, ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್(12900) ತೃತೀಯ ಸ್ಥಾನದಲ್ಲಿದ್ದಾರೆ. ಕೊಹ್ಲಿ 12494* ರನ್​ಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ.

ವಿರಾಟ್​ ಕೊಹ್ಲಿ ಚಿನ್ನಸ್ವಾಮಿ ಮೈದಾನದಲ್ಲಿ ಇದುವರೆಗೆ 2924 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅವರ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಬ್ಯಾಟರ್​ಗಳಿಗೆ ಇದು ಸ್ವರ್ಗ. ಪಂದ್ಯದಲ್ಲಿ ದೊಡ್ಡ ಮೊತ್ತ ಹರಿದು ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ IPL 2024 : ಮುಂಬೈ ಬ್ಯಾಟರ್​​ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಮಾಲೀಕರಿಗೆ ಸಲಹೆ ನೀಡಿದ ಮಾಜಿ ಕ್ರಿಕೆಟಿಗ

ಇನ್ನೂ ಇದೆ ಪ್ಲೇ ಆಫ್​ ಅವಕಾಶ


ಸದ್ಯ ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನಿಯಾಗಿದ್ದರೂ ಕೂಡ ಆರ್​ಸಿಬಿಯ(Royal Challengers Bengaluru) ಪ್ಲೇ ಆಫ್​ ಬಾಗಿಲು ಇನ್ನೂ ಮುಚ್ಚಿಲ್ಲ. ಇನ್ನೂ ಕೂಡ ಆರ್​ಸಿಬಿಯ ಪ್ಲೇ ಆಫ್​ ಆಸೆ ಜೀವಂತವಾಗಿಯೇ ಇದೆ.

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ಮತ್ತು ಪವಾಡವೊಂದು ನಡೆದರೆ ಆರ್​ಸಿಬಿಗೆ ಪ್ಲೇ ಆಫ್​ ಟಿಕೆಟ್​ ಸಿಗಲಿದೆ. ಈಗಾಗಲೇ 10 ಪಂದ್ಯ ಆಡಿದ್ದು, 3 ಪಂದ್ಯ ಗೆದ್ದು, 7 ಪಂದ್ಯದಲ್ಲಿ ಸೋಲು ಕಂಡಿದೆ. 6 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 4 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಜತೆಗೆ ತನಗಿಂತ ಮೇಲಿರುವ ತಂಡಗಳು ಸತತ ಸೋಲು ಕಂಡರೆ ಕನಿಷ್ಠ 4ನೇ ಸ್ಥಾನಿಯಾಗಿ ಪ್ಲೇ ಆಫ್ ಗೇರುವ ಸಣ್ಣ ಅವಕಾಶವೊಂದಿದೆ.

ಉಳಿದಿರುವ 4 ಪಂದ್ಯಗಳ ಪೈಕಿ 2 ಪಂದ್ಯಗಳನ್ನು ಆರ್​ಸಿಬಿ ತವರಿನಲ್ಲಿ ಆಡಲಿದೆ. ಒಂದು ಪಂದ್ಯ ಹಾಲಿ ಚಾಂಪಿಯನ್​ ಚೆನ್ನೈ ವಿರುದ್ಧ. ಇದು ಆರ್​ಸಿಬಿಗೆ ಕೊನೆಯ ಲೀಗ್​ ಪಂದ್ಯವಾಗಿರಲಿದೆ. ಮೇ 18ರಂದು ಈ ಪಂದ್ಯ ನಡೆಯಲಿದೆ. ಒಂದೊಮ್ಮೆ ಇಂದು ನಡೆಯುವ ಪಂದ್ಯ. ಇಂದು ಆರ್​ಸಿಬಿ ಸೋತರೆ, ಅಥವಾ ಪಂದ್ಯ ಮಳೆಯಿಂದ ರದ್ದಾದರೆ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

Continue Reading
Advertisement
Ballari DC Prashanth kumar Mishra pressmeet about MLC election
ಬಳ್ಳಾರಿ3 mins ago

MLC Election: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ; ಮೇ 9ಕ್ಕೆ ಅಧಿಸೂಚನೆ ಪ್ರಕಟ

HD Revanna
ಕರ್ನಾಟಕ14 mins ago

HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

IPL 2024
Latest26 mins ago

IPL 2024 : ಭಾರೀ ಭದ್ರತಾ ಲೋಪ; ಎಸ್​ಆರ್​​ಎಚ್​ ವಿದೇಶಿ ಆಟಗಾರನ ಮೇಲೆ ಮುಗಿಬಿದ್ದ ಸಾರ್ವಜನಿಕರು!

Ballari DC Prashanth kumar Mishra pressmeet about lok sabha election
ಬಳ್ಳಾರಿ28 mins ago

Lok Sabha Election 2024: ಪಾರದರ್ಶಕ ಚುನಾವಣೆಗೆ ಬಳ್ಳಾರಿ ಜಿಲ್ಲಾಡಳಿತ ಸಜ್ಜು

Shivamogga BJP
ಶಿವಮೊಗ್ಗ39 mins ago

Lok Sabha Election 2024: ಶಿವಮೊಗ್ಗದಲ್ಲಿ ಪ್ರಚಾರದ ವೇಳೆ ಕಿರಿಕ್; ಬಿಜೆಪಿ ವಾಹನ ಹಿಮ್ಮೆಟ್ಟಿಸಿದ ಈಶ್ವರಪ್ಪ ಅಭಿಮಾನಿಗಳು

HD Revanna
ಕರ್ನಾಟಕ1 hour ago

HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Terrorist Attack
ಪ್ರಮುಖ ಸುದ್ದಿ1 hour ago

Terrorist Attack : ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ: ನಾಲ್ವರು ವಾಯುಪಡೆ ಸಿಬ್ಬಂದಿಗೆ ಗಾಯ

HD Revanna
ಕರ್ನಾಟಕ1 hour ago

HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Drown in River
ಕರ್ನಾಟಕ2 hours ago

Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

Champions Trophy
ಪ್ರಮುಖ ಸುದ್ದಿ2 hours ago

Champions Trophy : ಭಾರತ ಕ್ರಿಕೆಟ್​ ತಂಡಕ್ಕೆ ಬೆದರಿಕೆ ಒಡ್ಡಿದ ಪಾಕಿಸ್ತಾನದ ಮಾಜಿ ಆಟಗಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ16 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌