Bengaluru-Mysuru Expressway: ಕಾಂಗ್ರೆಸ್‌ ನಿಯೋಗ ಹೆದ್ದಾರಿ ವೀಕ್ಷಿಸುತ್ತಿದ್ದಾಗ ಮೋದಿಗೆ ಜೈಕಾರ ಹಾಕಿದ ಬೈಕ್‌ ಸವಾರ! - Vistara News

ಕರ್ನಾಟಕ

Bengaluru-Mysuru Expressway: ಕಾಂಗ್ರೆಸ್‌ ನಿಯೋಗ ಹೆದ್ದಾರಿ ವೀಕ್ಷಿಸುತ್ತಿದ್ದಾಗ ಮೋದಿಗೆ ಜೈಕಾರ ಹಾಕಿದ ಬೈಕ್‌ ಸವಾರ!

Bengaluru-Mysuru Expressway: ಮಾಜಿ ಸಚಿವ ಎಚ್‌.ಸಿ. ಮಹದೇವಪ್ಪ ಹಾಗೂ ಸ್ಥಳೀಯ ಕೈ ನಾಯಕರು, ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ವೀಕ್ಷಿಸುತ್ತಿದ್ದಾಗ ಘಟನೆ ನಡೆದಿದೆ.

VISTARANEWS.COM


on

Biker shouts at PM Modi as Congress leaders watch highway
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಬೆಂಗಳೂರು-ಮೈಸೂರು (Bengaluru-Mysuru Expressway) ಹೆದ್ದಾರಿ ಕ್ರೆಡಿಟ್ ವಾರ್ ನಡೆಯುತ್ತಿರುವ ನಡುವೆ ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ನೇತೃತ್ವದ ಕಾಂಗ್ರೆಸ್ ನಿಯೋಗ, ಶುಕ್ರವಾರ ದಶಪಥ ಹೆದ್ದಾರಿ ವೀಕ್ಷಣೆ ನಡೆಸಿತು. ಈ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಪ್ರಯಾಣಿಕರು ಹಾಗೂ ಬೈಕ್‌ ಸವಾರರು, ಮೋದಿ ಮೋದಿ ಎಂದು ಕೂಗಿರುವುದು ಕಂಡುಬಂದಿದೆ.

ಮಾಜಿ ಸಚಿವ ಮಹದೇವಪ್ಪ ಹಾಗೂ ಸ್ಥಳೀಯ ಕೈ ನಾಯಕರು, ಸಿದ್ದಲಿಂಗಪುರ ಬಳಿ ಮುಖ್ಯ ರಸ್ತೆ ಹಾಗೂ ಸರ್ವಿಸ್ ರಸ್ತೆ ಕಾಮಗಾರಿಯನ್ನು ವೀಕ್ಷಿಸಿ ಗುಣಮಟ್ಟ ಪರೀಕ್ಷೆ ಮಾಡಿದರು. ಈ ಸಂದರ್ಭದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಪ್ರಯಾಣಿಕರು ಮೋದಿಗೆ ಜೈಕಾರ ಹಾಕಿದ್ದಾರೆ. ಬೈಕ್ ನಿಲ್ಲಿಸಿ ಸವಾರನೊಬ್ಬ, ಭಾರತ್ ಮಾತಾಕಿ‌ ಜೈ ಎಂದು ಹೇಳಿ, ನಂತರ `ಮೋದಿ ಮೋದಿ’ ಎಂದು ಘೋಷಣೆ ಕೂಗಿದ್ದಾನೆ. ಇದರಿಂದ ಕಾಂಗ್ರೆಸ್ ನಾಯಕರು ತಬ್ಬಿಬ್ಬಾದರು. ಕೆಲ ಕೈ ನಾಯಕರು ತಕ್ಷಣ ಬೈಕ್ ಸವಾರನ ಬಳಿ ತೆರಳಲು ಮುಂದಾದಾಗ ಸ್ಥಳದಿಂದ ಬೈಕ್ ಸವಾರ ನಿರ್ಗಮಿಸಿದ್ದಾನೆ.

ಇದನ್ನೂ ಓದಿ | Sumalatha Ambareesh PC: ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನನ್ನ ಬೆಂಬಲ: ಅಧಿಕೃತವಾಗಿ ಘೋಷಣೆ ಮಾಡಿದ ಸುಮಲತಾ ಅಂಬರೀಶ್‌

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮನ್ವಯದೊಂದಿಗೆ ಕೆಲಸ ಮಾಡಬೇಕಿರುವುದು ಸಂವಿಧಾನದ ಆಶಯ. ಕೇಂದ್ರ ಸರ್ಕಾರ ಇತ್ತೀಚೆಗೆ ರಾಜ್ಯದ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತಿದೆ. ಇದು ಸಂವಿಧಾನಕ್ಕೆ ಶ್ರೇಯಸ್ಸು ತರುವುದಿಲ್ಲ. ಕಾಂಗ್ರೆಸ್ 60 ವರ್ಷಗಳಿಂದ ಗ್ರಾಮೀಣ ರಸ್ತೆಗಳು ಸೇರಿ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸಿದೆ ಎಂದು ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಹೇಳಿದ್ದಾರೆ.

ನಾಗನಹಳ್ಳಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದರು. ನಾನು ಲೋಕೋಪಯೋಗಿ ಸಚಿವನಾಗಿದ್ದೆ. ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮಗಳ ನಡುವೆ ಸಂಪರ್ಕ ರಸ್ತೆ ಮಾಡಲು ತೀರ್ಮಾನಿಸಿದ್ದೆವು ಎಂದು ಹೇಳಿದರು.

ಬೆಂಗಳೂರುರು-ಮೈಸೂರು ರಸ್ತೆ 2013ರವರೆಗೆ ರಾಜ್ಯ ಹೆದ್ದಾರಿ-75 ಆಗಿತ್ತು. ವಾಹನ ದಟ್ಟಣೆ, ಪ್ಯಾಸೆಂಜರ್ ಕಾರ್ ಯೂನಿಟ್ (ಪಿಸಿಯು) ಹೆಚ್ಚಾಯಿತು.‌ ಮೈಸೂರು- ಬೆಂಗಳೂರು ನಡುವಿನ ಪ್ರಯಾಣ ಅವಧಿ 5-6 ಗಂಟೆ ಆಗುತ್ತಿತ್ತು. ನಾವು ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ 4480 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಇತ್ತು. ಮಾರ್ಗದರ್ಶಿ ಸೂತ್ರದಡಿ ಪ್ರಸ್ತಾವನೆ ಸಲ್ಲಿಸಿದಾಗ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಮಾಡುವುದು ವಾಡಿಕೆಯಾಗಿದೆ ಎಂದರು.

2014ರಲ್ಲಿ ನಾನು ಹೆದ್ದಾರಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆಗ ಮನಮೋಹನ್ ಸಿಂಗ್ ಪ್ರಧಾನಿ, ಆಸ್ಕರ್ ಫರ್ನಾಂಡೀಸ್ ಸಾರಿಗೆ ಸಚಿವರಾಗಿದ್ದರು. ಖಾಸಗಿ, ಸರ್ಕಾರ ತಜ್ಞರನ್ನು ಬಳಸಿಕೊಂಡು ಡಿಪಿಆರ್ ಸಲ್ಲಿಸಿದೆ. 2014ರ ಮಾರ್ಚ್ 4ರಂದು ಗೆಜೆಟ್ ನೋಟಿಫಿಕೇಷನ್ ಮಾಡಲಾಯಿತು. 1882 ಕಿ.ಮೀ. ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲು ಆದೇಶ ಮಾಡಲಾಯಿತು. ಆಗ ಅಡಗೂರು ಎಚ್.ವಿಶ್ವನಾಥ್ ಸಂಸದರಾಗಿದ್ದರು. ನವದೆಹಲಿಯಲ್ಲಿ ಎಲ್ಲ ಪಕ್ಷದ ಸಂಸದರನ್ನೂ ಒಗ್ಗೂಡಿಸಿ ಸಭೆ ಮಾಡಿದ್ದೆ. ರಾಜ್ಯದ ಇತಿಹಾಸದಲ್ಲೇ ಅದು ಪ್ರಥಮ ಪ್ರಯತ್ನವಾಗಿತ್ತು. ಈಗ ಬೊಗಳೆ ಬಿಡುತ್ತಿರುವ ಯಾರೂ ಇರಲಿಲ್ಲ ಎಂದು ಹೇಳಿದರು.

ಅಭಿವೃದ್ಧಿ ಯಾರದ್ದೋ ಸ್ವತ್ತಲ್ಲ, ಸಾಂವಿಧಾನಿಕ ಜವಾಬ್ದಾರಿ.

ಅಭಿವೃದ್ಧಿ ಯಾರದ್ದೋ ಸ್ವತ್ತಲ್ಲ, ಸಾಂವಿಧಾನಿಕ ಜವಾಬ್ದಾರಿಯಾಗಿದೆ. ಸಾರ್ವಜನಿಕರ ತೆರಿಗೆ ಹಣದಲ್ಲಿ ರಸ್ತೆ ಮಾಡಿದ್ದಾರೆ. ಬೆಂಗಳುರು-ಮೈಸೂರು ದಶಪಥ ಹೆದ್ದಾರಿ ಸಿದ್ದರಾಮಯ್ಯ, ಡಾ.ಮಹದೇವಪ್ಪ ಕನಸು. ಅದಕ್ಕೆ ಆಸ್ಕರ್ ಫರ್ನಾಂಡೀಸ್ ಮತ್ತು ಕೇಂದ್ರ ಸರ್ಕಾರ ನೆರವು ನೀಡಿತು. ಈಗ ಬಿಜೆಪಿಯ ಸಿ.ಟಿ.ರವಿ, ಪ್ರತಾಪ್ ಸಿಂಹ, ಪ್ರಲ್ಹಾದ್ ಜೋಶಿ ಏನೇನೋ ಮಾತನಾಡುತ್ತಾರೆ‌. ಕೆಲಸ ಮಾಡದೆ ಇರುವವರು ಯೋಜನೆ ನಮ್ಮದು ಎಂದು ಹೇಳಿಕೊಂಡು ಓಡಾಡುತ್ತಾರೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ | ಡಿ.ಕೆ. ಶಿವಕುಮಾರ್‌ಗೆ ಯಾಕೆ ಅಧಿಕಾರ ನೀಡಬೇಕು? ಇನ್ನೊಂದು ಹತ್ತು ಲುಲು ಮಾಲ್‌ ಕಟ್ಟೋದಕ್ಕ?: ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ

2021ರ ಸೆ.15ರಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಕೂಡ ಸಿದ್ದರಾಮಯ್ಯ ಅವಧಿಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ. 118 ಕಿ.ಮೀ.ನಲ್ಲಿ 22 ಕಿ.ಮೀ. ಹೆದ್ದಾರಿ ಇನ್ನೂ ಕಾಮಗಾರಿ ಆಗಿಲ್ಲ. ಕಾಮಗಾರಿ ಮುಗಿದ ಮೇಲೆ ಪ್ರಧಾನಿ ಉದ್ಘಾಟನೆ ಮಾಡಬೇಕಿತ್ತು. ಪೂಜಾರಿ ಫಿಶ್ ಲ್ಯಾಂಡ್‌ ಹೋಟೆಲ್‌ಗೆ ನೇರವಾಗಿ ಅಂಡರ್‌ಪಾಸ್ ಕೊಟ್ಟಿದ್ದಾರೆ. ನಾಗನಹಳ್ಳಿಯ ಜನ ಗಲಾಟೆ ಮಾಡಿದ ಮೇಲೆ ಅಂಡರ್ ಪಾಸ್ ಕೊಟ್ಟರು ಎಂದು ಸಂಸದ ಪ್ರತಾಪ್‌ ಸಿಂಹ ವಿರುದ್ಧ ಕಿಡಿಕಾರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Yettinahole Project: ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ; ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ- ಡಿಸಿಎಂ

Yettinahole Project: ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ ಮಾಡಲಾಗುವುದು. ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

By

Yettinahole project lift work to be inaugurated on September 6 Gowri festival
Koo

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ (Yettinahole Project) ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ ಎಂದು ತಿಳಿಸಿದರು.

ಈ ಯೋಜನೆಗಳ ವಿಚಾರವಾಗಿ ಅನೇಕ ಟೀಕೆಗಳು ಬರುತ್ತಿದ್ದವು. ಟೀಕೆಗಳು ಬರಲಿ. ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ. ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್‌ಗಳು ನೀರನ್ನು ಎತ್ತುತ್ತಿವೆ. ಈ ತಿಂಗಳ 6 ರಂದು ಉದ್ಘಾಟನೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದು ತಿಳಿಸಿದರು.

ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ

ಈ ಯೋಜನೆಯ ಫಲಾನುಭವಿ ಜಿಲ್ಲೆಯ ಜನರು ನೀರನ್ನು ಎತ್ತುವ ದೃಶ್ಯ ಕಣ್ತುಂಬಿಕೊಳ್ಳಬಹುದು. ಅಲ್ಲಿ ಜಾಗ ಕಿರಿದಾಗಿದ್ದರು, ಪೊಲೀಸರಿಗೆ ಹೇಳಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಾಗುವುದು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ ನೀಡುವಂತೆ ನನ್ನ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಪವಿತ್ರವಾದ ಕಾರ್ಯಕ್ಕೆ ಬಂದು ಶುಭ ಗಳಿಗೆಗೆ ಸಾಕ್ಷಿಯಾಗಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

ಸಿಎಂ ನಿವಾಸದಲ್ಲಿ ಭೋಜನ ಕೂಟ

ಸಿಎಂ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಯಾವ ವಿಚಾರ ಚರ್ಚೆಯಾಯಿತು ಎಂದು ಕೇಳಿದಾಗ, “ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿವೆ. ಈಗ ಆ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕೂತಿದ್ದಾರೆ. ಗಾಂಧೀಜಿ ಅವರು ಹಾಕಿಕೊಟ್ಟಿರುವ ಮಾರ್ಗದರ್ಶನ ವಿಶ್ವವೇ ಗಮನಿಸಿದೆ. ಇದನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಯಿತು. ಮುಂದಿನ ಒಂದುವಾರದಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವರದಿ ನೀಡುವಂತೆ ಸಚಿವರಿಗೆ ತಿಳಿಸಲಾಗಿದೆ. ಪಕ್ಷದ ವತಿಯಿಂದಲೂ ಕಾರ್ಯಕ್ರಮ ಮಾಡಲಾಗುತ್ತಿದ್ದು, ಆ ಬಗ್ಗೆ ಪಕ್ಷದ ಕಚೇರಿಯಲ್ಲಿ ಚರ್ಚೆ ಮಾಡಿದ್ದೆವು ಎಂದು ತಿಳಿಸಿದರು.

ಕೋವಿಡ್‌ ಸಮಯದಲ್ಲ ಅಕ್ರಮ

ಕೋವಿಡ್ ಸಮಯದಲ್ಲಿನ ಅಕ್ರಮದ ಬಗ್ಗೆ ನ್ಯಾ.ಕುನ್ಹಾ ಅವರ ಸಮಿತಿ ವರದಿ ಸಲ್ಲಿಕೆ ಹಾಗೂ ಮಾಜಿ ಸಚಿವ ಸುಧಾಕರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುನ್ಹಾ ಅವರ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ಸುಧಾಕರ್ ಅವರ ಹೇಳಿಕೆಯ ಬಗ್ಗೆಯೂ ಮಾಹಿತಿ ಇಲ್ಲ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ. ಈ ವಿಚಾರವಾಗಿ ಸರ್ಕಾರದ ವಕ್ತಾರರು ಪ್ರತಿಕ್ರಿಯೆ ನೀಡುತ್ತಾರೆ ಎಂದು ತಿಳಿಸಿದರು.

ರಾಜಭವನದಲ್ಲಿ ವಿರೋಧ ಪಕ್ಷಗಳ ನಾಯಕರ ವಿರುದ್ಧ ಯಾವುದೇ ಅರ್ಜಿ ಇಲ್ಲ ಎಂದು ರಾಜ್ಯಪಾಲರು ಹೇಳಿದ್ದು, ಹಾಗಾದರೆ ಫೈಲ್‌ಗಳು ಏನಾದವು ಎಂದು ಕೇಳಿದಾಗ, “ನಮಗೂ ಅದೇ ಯಕ್ಷಪ್ರಶ್ನೆಯಾಗಿದೆ. ನಾಳೆ ಈ ವಿಚಾರವಾಗಿ ಮಾಹಿತಿ ಪಡೆಯುತ್ತೇವೆ. ನಾವು ನಮಗೆ ಬಂದಿರುವ ಮಾಹಿತಿಗಳ ಮೇರೆಗೆ ನಮ್ಮ ಮನವಿ ಸಲ್ಲಿಸಿದ್ದೇವೆ ಎಂದರು. ಕಾಂಗ್ರೆಸ್ ನಾಯಕರ ವಿರುದ್ಧದ ಎರಡು ಅರ್ಜಿಗಳು ಮಾತ್ರ ರಾಜ್ಯಪಾಲರ ಬಳಿ ಉಳಿದುಕೊಂಡಿವೆಯಂತೆ ಎಂದು ಕೇಳಿದಾಗ, ಆ ಬಗ್ಗೆ ನಮಗೆ ಮಾಹಿತಿ ಇಲ್ಲ. ನಮ್ಮ ವಿರುದ್ಧ ಕೆಲವರು ಅರ್ಜಿ ಕೊಡುತ್ತಿರುತ್ತಾರೆ. ಮತ್ತೆ ಕೆಲವರು ನನ್ನ ವಿರುದ್ಧ ದೂರು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ದೂರು ನೀಡಲಿ ಎಂದು ತಿಳಿಸಿದರು.

ಕಾಲೇಜು ದಿನಗಳಲ್ಲಿ ಬಳಸಿದ್ದ ಬೈಕ್‌ ಮರುವಿನ್ಯಾಸ:

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ದಿ ಬೈಕ್ ಅನ್ನು ಮರುವಿನ್ಯಾಸಗೊಳಿಸಿ ಅವರಿಗೆ ನೀಡಿದರು. ಈ ಬಗ್ಗೆ ಮಾತನಾಡಿದ ಶಿವಕುಮಾರ್ ಅವರು, “ನಾನು ಕಾಲೇಜು ದಿನಗಳಲ್ಲಿ ಈ ಬೈಕ್ ಓಡಿಸುತ್ತಿದ್ದೆ. ಕನಕಪುರದ ನಿವಾಸದಲ್ಲಿತ್ತು. ನಮ್ಮ ಸ್ನೇಹಿತರು ಈಗ ಅದಕ್ಕೆ ಹೊಸ ರೂಪ ಕೊಟ್ಟು ತಂದಿದ್ದಾರೆ” ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Rain News : ಪಕ್ಕದ ವಿಜಯವಾಡದಲ್ಲಿ ಮಳೆಯು ಅಬ್ಬರಿಸುತ್ತಿದೆ. ಕಲಬುರಗಿ, ಯಾದಗಿರಿಯಲ್ಲೂ ಮಳೆಯಾಗುತ್ತಿದ್ದು ಅವಾಂತರವೇ ಸೃಷ್ಟಿಯಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡು, ಮನೆಯೊಳಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.

VISTARANEWS.COM


on

By

Rain News
Koo

ಕೋಲಾರ: ಆಂಧ್ರಪ್ರದೇಶದ ವಿಜಯವಾಡದಲ್ಲಿ (Rain News) ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ವ್ಯಾಪಕ ಮಳೆಯಿಂದ ರಸ್ತೆಗಳಲ್ಲಿ ರಭಸವಾಗಿ ನೀರು ತುಂಬಿ ಹರಿಯುತ್ತಿದ್ದು, ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ. ಕೂಡಲೇ ಸ್ಥಳದಲ್ಲಿದ್ದವರು ಹಗ್ಗ ಕೊಟ್ಟು ಯುವಕನನ್ನು ಬಚವ್‌ ಮಾಡಿದ್ದಾರೆ.

ಕೆಲ ಗಂಟೆಗಳ ಕಾಲ ದ್ವಿಚಕ್ರ ವಾಹನಗಳು ರಸ್ತೆಗೆ ಬರದಂತೆ, ಜನರು ರಸ್ತೆಗಿಳಿಯದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ನಗರದ ಎಲ್ಲಾ ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಓಡಿಸದಂತೆ ಪೊಲೀಸರು ಆದೇಶಿಸಿದ್ದು, ರಾಷ್ಟ್ರೀಯ ಹೆದ್ದಾರಿಗಳಿಂದ ಸರ್ವಿಸ್ ರಸ್ತೆಗಳಲ್ಲಿ ವಾಹನಗಳು ಓಡಾಡುತ್ತಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಮೊಣಕಾಲಿನಷ್ಟು ನೀರು ನಿಂತು ಅವಾಂತರವೇ ಸೃಷ್ಟಿಯಾಗಿದೆ.

ನಗರ ಪ್ರವೇಶಿಸುವ ಎಲ್ಲ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಪೂರ್ವಾನುಮತಿ ಇಲ್ಲದೆ ನಗರದೊಳಗೆ ಬೆಂಗಾವಲು ವಾಹನಗಳನ್ನು ಬಿಡದಂತೆ ಸೂಚನೆ ನೀಡಲಾಗಿದೆ. ಮೊಘಲ್ ರಾಜ್ ಪುರಂನಲ್ಲಿ ಬಂಡೆಗಳು ಮುರಿದು ಬಿದ್ದಿವೆ. ಪ್ರಮುಖ ಬೀದಿಗಳಲ್ಲಿ ಅಗ್ನಿಶಾಮಕ ವಾಹನಗಳ ಮೂಲಕ ನೀರು ತೆಗೆಯುವ ಪ್ರಯತ್ನ ಮಾಡುತ್ತಿದೆ. ಹಳೇ ಪೇಟೆಯಲ್ಲಿನ ಹೊರಹರಿವಿನ ಚರಂಡಿ ತುಂಬಿ ಹರಿಯುತ್ತಿರುವುದರಿಂದ ಮನೆಗಳಿಗೆ ನೀರು ನುಗ್ಗಿದೆ. ನಿಡಮನೂರಿನಿಂದ ಟ್ಯಾಂಕ್ಸಾಳದವರೆಗಿನ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಮುಳುಗಡೆಯಾಗಿದೆ.

ಇದನ್ನೂ ಓದಿ: Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

ಕಲಬುರಗಿಯಲ್ಲಿ ಮಳೆ ಅಬ್ಬರಕ್ಕೆ ಜನರು ಕಂಗಾಲು

ಇತ್ತ ಕಲಬುರಗಿಯಲ್ಲಿ ರಾತ್ರಿಯಿಡಿ ಸುರಿದ ಧಾರಾಕರ ಮಳೆಗೆ ಸೇಡಂ ತಾಲೂಕಿನ ಹೊಸಳ್ಳಿ ಗ್ರಾಮ ಸಂಪರ್ಕ ಕಡಿತಗೊಂಡಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಹಲವು ಭಾಗದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಪಿಡಿಎ ಕಾಲೇಜು ಬಳಿ ಇರುವ 10ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿತ್ತು.

ಚಿಂಚೊಳ್ಳಿ ತಾಲೂಕಿನಾದ್ಯಂತವು ವರ್ಷಧಾರೆಯಿಂದಾಗಿ ಚಂದ್ರಂಪಳ್ಳಿ ಜಲಾಶಯ ತುಂಬಿ ಹರಿಯುತ್ತಿದೆ. ಚಂದ್ರಂಪಳ್ಳಿ ಜಲಾಶಯದಿಂದ ನೀರು ಬಿಡುಗಡೆಯಿಂದಾಗಿ ಮಿರಿಯಾಣ ಹಾಗೂ ತೆಲಂಗಾಣದ ತಾಂಡೂರು ರಸ್ತೆ ಜಲಾವೃತಗೊಂಡು, ಸಂಪರ್ಕ ಕಡಿತಗೊಂಡಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾವ್ ಗ್ರಾಮಕ್ಕೆ ಜಲದಿಗ್ಬಂಧನ ಹಾಕಲಾಗಿದೆ.

ಮಳೆಯ ಆರ್ಭಟಕ್ಕೆ ಹಲವು ಹಳ್ಳಕೊಳ್ಳಗಳು ಭರ್ತಿಯಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ‌ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಇರುವ ಚಿಕ್ಕನಿಂಗದಳ್ಳಿ ಗ್ರಾಮದ ಕೆರೆಭರ್ತಿಯಾಗಿದೆ. ಕುಂಚಾವರಂ ವನ್ಯಜೀವಿ ಧಾಮದ ಕೆರೆ ತುಂಬಿ ಹರಿಯುತ್ತಿದೆ. ಇನ್ನು ತುಂಬಿ ಹರಿಯುತ್ತಿರುವ ಕಾಗಿಣ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿ ಪ್ರಮಾಣ ಹೆಚ್ಚುತ್ತಿದೆ. ತುಂಬಿ ಹರಿಯುತ್ತಿರುವ ನದಿ ದಡದಲ್ಲೆ ಚಾಲಕರು ಲಾರಿ ತೊಳೆಯುತ್ತಿರುವ ದೃಶ್ಯ ಕಂಡು ಬಂತು. ಮುಂಜಾಗ್ರತಾ ಕ್ರಮವಾಗಿ ಸೇತುವೆ ಬಳಿ ಪೋಲಿಸ್ ಭದ್ರತೆ ವಹಿಸಲಾಗಿದೆ.

ಕಲಬುರಗಿ ಸುರಿಯುತ್ತಿರುವ ಭಾರಿ ಮಳೆಗೆ ಬೋಗಾವತಿ ನದಿ ತುಂಬಿ ಹರಿದಿದೆ. ಪರಿಣಾಮ ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿ, ಗಂಗನಪಳ್ಳಿ ಗ್ರಾಮದ ಸೇತುವೆ ಜಲಾವೃತವಾಗಿದೆ. ಸೇತುವೆ ಜಲಾವೃತ ಪರಿಣಾಮ ಪೋಲಕಪಳ್ಳಿ, ಗಂಗನಪಳ್ಳಿ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ ಬೋಗಾವತಿ ನದಿ ನೀರಿನ ಅರ್ಭಟಕ್ಕೆ ಗಂಗನಪಳ್ಳಿ ಗ್ರಾಮದ ಗಂಗಾ ಮಾತೆ ದೇವಿಯ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಚಿಂಚೋಳಿ ತಾಲ್ಲೂಕಿನ ತಾಜಲಾಪೂರ, ಗಾರಂಪಳ್ಳಿ, ಗರಗಪಳ್ಳಿ, ಇರಕಪಳ್ಳಿ ಸೇತುವೆಗಳು ಜಲಾವೃತ. ವಿವಿಧ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

ಯಾದಗಿರಿಯಲ್ಲಿ ಮನೆಯೊಳಗೆ ನುಗ್ಗಿದ ನೀರು

ಯಾದಗಿರಿ ಜಿಲ್ಲೆಯಲ್ಲಿ ನಿನ್ನೆ ಶನಿವಾರ ರಾತ್ರಿಯಿಂದ ಸುರಿದ ವರುಣನ ಅಬ್ಬರಕ್ಕೆ ಮನೆಯೊಳಗೆ ನೀರು ನುಗ್ಗಿದೆ. ನೀರು ಹೊರಹಾಕಲು ದೋರನಹಳ್ಳಿ ಗ್ರಾಮದ ಜನರು ಸಂಕಷ್ಟ ಎದುರಿಸಿದರು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಮಾಪಮ್ಮಳ ಮನೆಯಲ್ಲಿ ನವಜಾತ ಶಿಶುವೊಂದಿಗೆ ಬಾಣಂತಿ ಪರದಾಡಿದರು. ಅದೆ ರೀತಿ ಪಗಲಾಪುರನ ತಾತ್ಕಾಲಿಕ ಸೇತುವೆ ಜಲಾವೃತವಾಗಿದೆ. ಸೇತುವೆ ಹಾಳಾದ ಹಿನ್ನಲೆ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು. ಮಳೆ ಅಬ್ಬರದಿಂದ ತಾತ್ಕಾಲಿಕ ಪಗಲಾಪುರ ಸೇತುವೆಯೂ ಜಲಾವೃತ ಸಂಪರ್ಕ ಕಡಿತಗೊಂಡಿದೆ. ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆ ಅಬ್ಬರಕ್ಕೆ ವಂಕಸಂಬ್ರದ ರಸ್ತೆ ಜಲಾವೃತಗೊಂಡಿದೆ. ವಂಕಸಂಬ್ರದಿಂದ ತೋರಣತಿಪ್ಪಗೆ ಸಂಪರ್ಕದ ರಸ್ತೆಯಲ್ಲಿ ಉಕ್ಕಿ ಹರಿಯುವ ನೀರಿನಲ್ಲೇ ಜನರು ಓಡಾಡುವಂತಾಗಿದೆ. ಮತ್ತೊಂದೆಡೆ ಮನೆ ಗೋಡೆಗಳು ಕುಸಿದ ಬಿದ್ದಿದೆ. ನಿರಂತರ ಮಳೆಯಿಂದ ಬೊರಬಂಡಾ ಗ್ರಾಮದ ಎರಡು ಮನೆಗೋಡೆಗಳು ಕುಸಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

Road Accident : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸವಾರ ಮೃತಪಟ್ಟರೆ, ಶಿವಮೊಗ್ಗದಲ್ಲಿ ವೃದ್ಧೆಯೊಬ್ಬರು ವಿದ್ಯುತ್‌ ಪ್ರವಹಿಸಿ ಸ್ಥಳದಲ್ಲೇ ಜೀವ ಬಿಟ್ಟಿದ್ದಾರೆ.

VISTARANEWS.COM


on

By

Bike rider in deadly accident Elderly woman dies of electric shock
Koo

ಬೆಂಗಳೂರು: ಬೆಂಗಳೂರಿನಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ (Road Accident) ಬೈಕ್‌ ಸವಾರ ಸ್ಪಾಟ್‌ ಡೆತ್‌ ಆಗಿದ್ದಾನೆ. ಬೆಂಗಳೂರಿನ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ನಲ್ಲೂರು ಹಳ್ಳಿ ಮುಖ್ಯರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂರು ದಿನದ ಹಿಂದೆ ನಡೆದ ಅಪಘಾತ ತಡವಾಗಿ ಬೆಳಕಿಗೆ ಬಂದಿದೆ.

ನಲ್ಲೂರು ಹಳ್ಳಿಯ ನಿವಾಸಿಯಾಗಿದ್ದ 19 ವರ್ಷದ ಯುವಕ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಸ್ಕೂಟರ್‌ನಲ್ಲಿ ವೇಗವಾಗಿ ಬರುತ್ತಿದ್ದ ಯುವಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಗುದ್ದಿದ್ದಾನೆ. ಬಳಿಕ ಕಂಟ್ರೊಲ್ ಕಳೆದುಕೊಂಡ ಸವಾರ ವಾಟರ್ ಟ್ಯಾಂಕರ್ ಚಕ್ರಕ್ಕೆ ಸಿಲುಕಿದ್ದಾನೆ.

ಟ್ಯಾಂಕರ್ ಚಕ್ರ ಹರಿದು ಗಂಭೀರ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಸ್ಥಳೀಯರು ಸೇರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾನೆ. ಘಟನೆ ಸಂಬಂಧ ವೈಟ್ ಫೀಲ್ಡ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

ವಿದ್ಯುತ್‌ ಪ್ರವಹಿಸಿ ವೃದ್ಧೆ ಸಾವು

ಶಿವಮೊಗ್ಗ : ವಿದ್ಯುತ್ ತಗುಲಿ ವೃದ್ಧೆ ದಾರುಣವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನಪೇಟೆಯ ಮಲ್ಲಾಪುರದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ದೈವಿ. ಭಾನುವಾರ ಬೆಳಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಒದ್ದಾಡಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ರಿಪ್ಪನಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Bike rider in deadly accident Elderly woman dies of electric shock
Bike rider in deadly accident Elderly woman dies of electric shock

ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಲಾರಿ!

ದಾವಣಗೆರೆಯ ಕುರ್ಕಿ ಗ್ರಾಮದ ಮನೆಯೊಂದರ ಒಳಗೆಯೇ ಲಾರಿ ನುಗ್ಗಿದೆ. ಮಧ್ಯರಾತ್ರಿ 12 ಗಂಟೆಗೆ ಬೀರೂರು ಸಮ್ಮಸಗಿ ರಸ್ತೆಯಲ್ಲಿ ಚಲಿಸುತ್ತಿದ್ದ ಗೂಡ್ ಶೆಡ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದೆ. ಹಾಲುವರ್ತಿ ರಾಮಣ್ಣ ಹಾಗು ಜಯಪ್ಪನ ಕುಟುಂಬ ಸದಸ್ಯರು ಮನೆಯಲ್ಲಿದ್ದ ವೇಳೆ ಲಾರಿ ನುಗ್ಗಿದೆ. ಮನೆಯ ಚಾವಣಿಗೆ ತಾಗಿ ಹಠಾತ್‌ ಲಾರಿ ನಿಂತಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಂಬಾಗಿಲಿಗೆ ಲಾರಿ ಮುಖ ಮಾಡಿ ನಿಂತಿದ್ದರಿಂದ ಮನೆಯಿಂದ ಹೊರಬರಲಾಗದೇ‌ ಒಳಗಿದ್ದವರು ಪರದಾಡಿದರು. ಗ್ರಾಮಸ್ಥರ ನೆರವಿನಿಂದ ಏಣಿ ಮೂಲಕ ಹೊರಬಂದರು. ಲಾರಿ ‌ನುಗ್ಗಿದ ರಭಸಕ್ಕೆ ಮನೆ ಮುಂದೆ ಲೈಟ್ ಕಂಬಗಳು ಜಖಂಗೊಂಡಿದೆ. ರಾಜ್ಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ನಡೆಸಿದ್ದಾರೆ ಎಂದು ಗ್ರಾಮಸ್ಥರು ಪ್ರತಿಭಟ‌ನೆ ನಡೆಸಿದರು. ಸ್ಥಳಕ್ಕೆ ಹದಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಪರಿಚಿತ ವಾಹನ ಡಿಕ್ಕಿ ಸವಾರ ಸಾವು

ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈರಣ್ಣ (35) ಮೃತ ದುರ್ದೈವಿ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಮಿಡಿಗೇಶಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಂಡ್ಯ

Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Mandya News : ಯುವಕರ ಹುಡುಕಾಟಕ್ಕೆ ವಿದ್ಯಾರ್ಥಿನಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂದು ಗಾಳಿ ಸುದ್ದಿ ಹಬ್ಬಿಸಿದ್ದರು. ಇದರಿಂದ ಊರಿನಲ್ಲಿ ತನ್ನ ಮಾರ್ಯಾದೆ ಹೋಯ್ತು ಅಂತ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

VISTARANEWS.COM


on

By

Girl commits suicide after being fed up with rumours of love
Koo

ಮಂಡ್ಯ: ನಾಲ್ವರು ಯುವಕರಿಂದ ಪ್ರೀತಿ, ಪ್ರೇಮದ ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಮಂಡ್ಯದ (Mandya News) ಹನಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಇಂಪನಾ (14) ಆತ್ಮಹತ್ಯೆ ಮಾಡಿಕೊಂಡವಳು.

ಗಗನ್, ಸಂಜಯ್ ,ಮಹೇಂದ್ರ ಹಾಗೂ ಲೋಹಿತ್ ಎಂಬ ಯುವಕರಿಂದ ಕಿರುಕುಳದ ಆರೋಪ ಕೇಳಿ ಬಂದಿದೆ. ಹನಕೆರೆ ಗ್ರಾಮದ ಗಗನ್ ಮತ್ತು ಸ್ನೇಹಿತರು ಸೇರಿ ಇಂಪನಾ- ಮಹೇಂದ್ರ ಎಂಬಾತನನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಗಾಳಿ ಸುದ್ದಿ ಹಬ್ಬಿಸಿದ್ದರು.

ಅಲ್ಲದೆ ಆಕೆ ಮಾತಾಡುವುದನ್ನು ರೆಕಾರ್ಡ್ ಮಾಡಿಕೊಂಡು ವೈರಲ್ ಮಾಡಿದ್ದರು. ಇದರಿಂದ ಬೇಸತ್ತ ಇಂಪನಾ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದೇ ಗ್ರಾಮದ ಖಾಸಗಿ ಶಾಲೆಯಲ್ಲಿ ಇಂಪನಾ 9ನೇ ತರಗತಿ ಓದುತ್ತಿದ್ದಳು.

Girl commits suicide after being fed up with rumours of love
Girl commits suicide after being fed up with rumours of love

ಒಬ್ಬಳೇ ಮಗಳನ್ನು ಕಳೆದುಕೊಂಡು ಇಂಪನಾ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ. ಗಗನ್ ಸೇರಿ ನಾಲ್ವರು ತನ್ನ ಮಗಳಿಗೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ನಾಲ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

ಶಿವಮೊಗ್ಗದಲ್ಲಿ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ನರ್ತಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ಎನ್.ಟಿ. ತಿಮ್ಮಪ್ಪ (52) ಆತ್ಮಹತ್ಯೆಗೆ ಶರಣಾದ ರೈತ. ತನ್ನ ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ‌ ಶರಣಾಗಿದ್ದಾರೆ. ಸುಮಾರು 6 ಲಕ್ಷ 50 ಸಾವಿರ ಸಾಲ ಪಡೆದಿದ್ದರು. ಬ್ಯಾಂಕ್ ಸೇರಿದಂತೆ ವಿವಿಧ ಸಂಘ ಸಂಸ್ಥೆ ಸಾಲ ಮಾಡಿದ್ದರು. ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Yettinahole project lift work to be inaugurated on September 6 Gowri festival
ಬೆಂಗಳೂರು37 mins ago

Yettinahole Project: ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ; ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ- ಡಿಸಿಎಂ

Rain News
ಮಳೆ53 mins ago

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Bike rider in deadly accident Elderly woman dies of electric shock
ಬೆಂಗಳೂರು1 hour ago

Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

Girl commits suicide after being fed up with rumours of love
ಮಂಡ್ಯ2 hours ago

Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Do you know when Darshan got royalty in Central Jail
ಸಿನಿಮಾ3 hours ago

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor Darshan shifted back to Bengaluru from Ballari
ಬಳ್ಳಾರಿ3 hours ago

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

police Firing
ಕಲಬುರಗಿ4 hours ago

Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

karnataka weather Forecast
ಮಳೆ10 hours ago

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

Rishab Shetty And NTR
ಸಿನಿಮಾ18 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 day ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌