ಉದ್ಯೋಗಿಯೊಬ್ಬ ರಜೆ ಕೇಳಿ ಬಾಸ್‌ಗೆ ಕಳಿಸಿದ ಇ-ಮೇಲ್‌ ವೈರಲ್‌; ಪ್ರಾಮಾಣಿಕತೆ ಮೆಚ್ಚುವಂಥದ್ದು ! - Vistara News

ವೈರಲ್ ನ್ಯೂಸ್

ಉದ್ಯೋಗಿಯೊಬ್ಬ ರಜೆ ಕೇಳಿ ಬಾಸ್‌ಗೆ ಕಳಿಸಿದ ಇ-ಮೇಲ್‌ ವೈರಲ್‌; ಪ್ರಾಮಾಣಿಕತೆ ಮೆಚ್ಚುವಂಥದ್ದು !

Viral News: ಕೆಲವೊಂದು ಸನ್ನಿವೇಶದಲ್ಲಿ ರಜೆ ಕೇಳುವಾಗ ಸುಳ್ಳು ಹೇಳುವುದು ಅನಿವಾರ್ಯ ಇರುತ್ತದೆ. ಆದರೆ ಈ ಉದ್ಯೋಗಿ ಅಂಥ ಸಂದರ್ಭದಲ್ಲೂ ಸತ್ಯವನ್ನೇ ಹೇಳಿದ್ದಾರೆ.

VISTARANEWS.COM


on

E Mail for Leave
ಸಾಂಕೇತಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಖಾಸಗಿ ಕಂಪನಿಯಿರಲಿ, ಸರ್ಕಾರಿ ಕಚೇರಿಯೇ ಇರಲಿ ಉದ್ಯೋಗಿಗಳಿಗೆ ರಜೆ ಬೇಕೆಂದರೆ ಬಾಸ್‌ ಬಳಿ ಮನವಿ ಮಾಡಬೇಕು. ರಜಾ ಅರ್ಜಿಯನ್ನೂ ಸಲ್ಲಿಸಬೇಕು. ಕೆಲವು ಕಂಪನಿಗಳಲ್ಲಿ ರಜೆ ಕೇಳುವವರು ಕಡ್ಡಾಯವಾಗಿ ಕಾರಣವನ್ನೂ ತಿಳಿಸಬೇಕು ಎಂದು ನಿಯಮ ಮಾಡಿಡಲಾಗುತ್ತದೆ. ʼಮದುವೆಗೆ ಹೋಗಬೇಕು, ಆರೋಗ್ಯ ಸರಿಯಿಲ್ಲ, ಊರಿಗೆ ಹೋಗಬೇಕು, ಮನೆಯಲ್ಲಿ ಪೂಜೆಯಿದೆ..ʼ ಇತ್ಯಾದಿ ಕಾರಣಕ್ಕೆ ರಜಾ ತೆಗೆದುಕೊಳ್ಳುತ್ತಿದ್ದರೆ ಅದನ್ನು ಉಲ್ಲೇಖಿಸಿಬಿಡಬಹುದು. ಆದರೆ ಕೆಲವು ಸನ್ನಿವೇಶಗಳಲ್ಲಿ ಸುಳ್ಳು ಕಾರಣವನ್ನೇ ಕೊಡಬೇಕಾಗುತ್ತದೆ.

ಉದಾಹರಣೆಗೆ, ಒಂದು ಕಂಪನಿಯಲ್ಲಿ ಕೆಲಸ ಮಾಡುತ್ತಿರುವಾಗ, ಇನ್ನೊಂದು ಕಂಪನಿಗೆ ಇಂಟರ್‌ವ್ಯೂಗೆ ಹೋಗಲು ರಜಾ ಕೇಳಬೇಕೆಂದರೆ, ಬಾಸ್‌ಗೆ ಅದೇ ಕಾರಣ ಹೇಳಲು ಸಾಧ್ಯವಿದೆಯೇ?-ಬಹುಶಃ ನಮ್ಮಲ್ಲಿ ಅನೇಕರಿಗೆ ಆಗೋದಿಲ್ಲ. ʼಅಯ್ಯೋ..ಇನ್ನೊಂದು ಕಂಪನಿಗೆ ಇಂಟರ್‌ವ್ಯೂಗೆ ಹೋಗುತ್ತೇನೆಂದು ಈ ಕಂಪನಿಯ ಬಾಸ್‌ಗೆ ಹೇಳಿದರೆ ಏನಾಗಬಹುದು?-ಇಲ್ಲಿಯೂ ಕೆಲಸದಿಂದ ತೆಗೆದು, ಅಲ್ಲೂ ಸಿಗದೆ ಇದ್ದರೆ ಏನು ಮಾಡುವುದು?ʼ ಎಂದೇ ಭಾವಿಸುತ್ತೇವೆ. ಹಾಗಾಗಿ ಮತ್ತೊಂದು ಸಂಸ್ಥೆಯಿಂದ ಆಫರ್‌ ಲೆಟರ್‌ ಸಿಗುವವರೆಗೂ ಗುಟ್ಟಾಗಿಯೇ ಇಡುತ್ತೇವೆ. ಆದರೆ ನಮ್ಮಂತೆ ಎಲ್ಲರೂ ಇರುತ್ತಾರಾ? ಖಂಡಿತ ಇಲ್ಲ. ಇಲ್ಲೊಬ್ಬ ಉದ್ಯೋಗಿ ತನ್ನ ಮೇಲಧಿಕಾರಿಗೆ ರಜಾ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಕಾರಣವನ್ನು ಅತ್ಯಂತ ಸ್ಪಷ್ಟವಾಗಿ ಮತ್ತು ಪ್ರಾಮಾಣಿಕವಾಗಿ ನಮೂದಿಸಿದ್ದಾರೆ. ʼಡಿಯರ್‌ ಸರ್‌, ಗುಡ್‌ ಮಾರ್ನಿಂಗ್‌. ನನಗೆ ಇಂದು ಬೇರೊಂದು ಕಂಪನಿಯಲ್ಲಿ ಇಂಟರ್‌ವ್ಯೂದಲ್ಲಿ ಪಾಲ್ಗೊಳ್ಳಬೇಕಾಗಿದೆ. ಹಾಗಾಗಿ ಕೆಲಸಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ರಜೆ ಕೊಡಿʼ ಎಂದು ಇ-ಮೇಲ್‌ನಲ್ಲಿ ಬರೆದಿದ್ದಾರೆ. ಉದ್ಯೋಗಿ ಮಾಡಿದ ಇ-ಮೇಲ್‌ನ ಫೋಟೋ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: Viral News: 6 ಮಂದಿ ಕಾಮುಕರಿಗೆ ಒಬ್ಬಳೇ ಹುಡುಗಿ ಹೆಂಗೆ ಹೊಡೀತಾಳೆ ನೋಡಿ! ಹೆಣ್ಮಕ್ಕಳೇ ಸ್ಟ್ರಾಂಗು ಗುರು!

ಸಾಹಿಲ್‌ ಎಂಬುವರು ಈ ಫೋಟೋ ಶೇರ್‌ ಮಾಡಿಕೊಂಡಿದ್ದು, ʼನನ್ನ ಜ್ಯೂನಿಯರ್ಸ್‌ ಎಷ್ಟು ಒಳ್ಳೆಯವರು ಎಂದರೆ, ಅವರು ಇನ್ನೊಂದು ಕಂಪನಿಗೆ ಸಂದರ್ಶನಕ್ಕೆ ಹೋಗುವುದಾಗಿ ಸತ್ಯವನ್ನೇ ಹೇಳಿ ರಜೆ ತೆಗೆದುಕೊಳ್ಳುತ್ತಾರೆʼ ಎಂದು ಕ್ಯಾಪ್ಷನ್‌ ಬರೆದಿದ್ದಾರೆ. ಅದನ್ನು ನೋಡಿದ ನೆಟ್ಟಿಗರು ಉದ್ಯೋಗಿಯನ್ನು ತುಂಬ ಹೊಗಳಿದ್ದಾರೆ. ʼಇಂಥವರು ನಿಜಕ್ಕೂ ನಂಬಿಕಸ್ಥರುʼ, ʼಈತ ಅತ್ಯಂತ ಪ್ರಾಮಾಣಿಕʼ ಎಂಬಿತ್ಯಾದಿ ಹೊಗಳಿಕೆಯ ಕಮೆಂಟ್‌ಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: 35 ಸಾವಿರ ಅಡಿ ಎತ್ತರದಲ್ಲಿ ನಡೆಯಬಹುದಾಗಿದ್ದ ವಿಮಾನಗಳ ಡಿಕ್ಕಿಯನ್ನು ಪೈಲಟ್‌ ತಪ್ಪಿಸಿದ್ದು ಹೇಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

Viral Video: ಚಲಿಸುತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಅಲ್ಲೇ ಇದ್ದ ಮಹಿಳಾ ಪೊಲೀಸ್‌ ಸಿಬ್ಬಂದಿ ಆತನನ್ನು ರಕ್ಷಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

VISTARANEWS.COM


on

Koo

ಉತ್ತರಾಖಂಡ: ಕೆಲವೊಮ್ಮೆ ಅದೃಷ್ಟ ನೆಟ್ಟಗಿದ್ದರೆ ಸಾವಿಗೂ ಸವಾಲೆಸೆದು ಬರಬಹುದು ಎಂಬ ಮಾತಿದೆ. ಇನ್ನು ಕೆಲವೊಮ್ಮೆ ಸಾವಿನ ಬಾಯಿಗೆ ಇನ್ನೇನು ತುತ್ತಾಗುತ್ತಿದ್ದೇವೆ ಅನ್ನೋವಾಗಲೇ ಯಾರಾದರೂ ಆಪದ್ಬಾಂಧವರಂತೆ ಬಂದು ಕಾಪಾಡಿ ಬಿಡುತ್ತಾರೆ. ಅಂತಹದ್ದೇ ಒಂದು ಘಟನೆ(Viral Video) ಉತ್ತರಾಖಂಡ(Uttarakhanda)ದಲ್ಲಿ ನಡೆದಿದೆ. ಚಲಿಸುತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಅಲ್ಲೇ ಇದ್ದ ಮಹಿಳಾ ಪೊಲೀಸ್‌ ಸಿಬ್ಬಂದಿ ಆತನನ್ನು ರಕ್ಷಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌ ಆಗಿದ್ದು, ಸಿಬ್ಬಂದಿಯ ಶಕ್ತಿ ಸಾಮರ್ಥ್ಯ ಹಾಗೂ ಕರ್ತವ್ಯ ಪ್ರಜ್ಞೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಏನಿದು ಘಟನೆ?

ಉತ್ತರಾಖಂಡದ ಲಸ್ಕರ್‌ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೋಲ್ಕತ್ತಾ-ಜಮ್ಮು ಟವಿ ಎಕ್ಸ್‌ಪ್ರೆಸ್‌ ರೈಲಿಗೆ ಹತ್ತಲು ಹೋಗಿದ್ದ ವ್ಯಕ್ತಿ ಫ್ಲ್ಯಾಟ್‌ಫಾರ್ಮ್‌ ಮತ್ತು ರೈಲಿನ ನಡುವಿನ ಸಂದಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ಜಿಆರ್‌ಪಿ ಕಾನ್‌ಸ್ಟೇಬಲ್‌ ಉಮಾ, ಆಪದ್ಬಾಂಧವಳಂತೆ ಬಂದು ಆತನನ್ನು ರಕ್ಷಿಸಿದ್ದಾರೆ. ಇನ್ನು ಈ ಘಟನೆ ಏ.24ರಂದು ನಡೆದಿದ್ದು, ಆಹಾರ ಮತ್ತು ಜ್ಯೂಸ್‌ ತೆಗೆದು ಕೊಳ್ಳಲೆಂದು ಆ ವ್ಯಕ್ತಿ ರೈಲಿನಿಂದ ಇಳಿದಿದ್ದ. ತಕ್ಷಣ ಹೊರಡುತ್ತಿದ್ದನ್ನು ಗಮನಿಸಿದ ಆ ಓಡಿ ಹೋಗಿ ಹತ್ತಿದ್ದಾನೆ ಎನ್ನಲಾಗಿದೆ. ಕೈನಲ್ಲಿ ಆಹಾರ ಪೊಟ್ಟಣಗಳು ಇದ್ದ ಕಾರಣ ಆತನಿಗೆ ಸುಲಭವಾಗಿ ಹತ್ತಲು ಸಾಧ್ಯವಾಗಿಲ್ಲ. ಹೀಗಾಗಿ ಆಯ ತಪ್ಪಿ ಕೆಳಗೆ ಬಿದ್ದಿದ್ದಾನೆ.

5 ಗಂಟೆ ರೈಲು ವಿಳಂಬ

ಇನ್ನು ಘಟನೆ ಬಳಿಕ ಕೋಲ್ಕತ್ತಾ-ಜಮ್ಮು ಟವಿ ಎಕ್ಸ್‌ಪ್ರೆಸ್‌ ರೈಲು ಐದು ಗಂಟೆ ತಡವಾಗಿ ಲಕ್ಷರ್‌ ರೈಲು ನಿಲ್ದಾಣಕ್ಕೆ ತಲುಪಿದೆ. ಆ ವ್ಯಕ್ತಿ ಕೆಳಗೆ ಬೀಳುತ್ತಿದ್ದನ್ನು ಗಮನಿಸಿದ ಸಹ ಪ್ರಯಾಣಿಕರು ತಕ್ಷಣ ರೈಲಿನ ಚೈನ್‌ ಎಳೆದು ರೈಲನ್ನು ನಿಲ್ಲಿಸಿದ್ದರು. ಜನರಲ್ಲಾ ರೈಲಿನಿಂದ ಕೆಳಗಿಳಿದು ಆ ವ್ಯಕ್ತಿಯ ರಕ್ಷಣೆಗೆ ಮುಂದಾಗಿದ್ದರು. ಇನ್ನು ಆತನಿಗೆ ಯಾವುದೇ ಗಂಭೀರವಾದ ಗಾಯಗಳಾಗಿಲ್ಲ, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಲ್ಲಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.

ಪುಣೆಯಲ್ಲೂ ನಡೆದಿತ್ತು ಇಂತಹದ್ದೇ ಘಟನೆ

ಅದು ಪುಣೆಯ ಸಿವಿಲ್ ಕೋರ್ಟ್ ಎಲಿವೇಟೆಡ್ ನಿಲ್ದಾಣದ ಪ್ಲಾಟ್‌ಫಾರ್ಮ್‌ ಸಂಖ್ಯೆ 2. ಗಂಟೆ ಅಪರಾಹ್ನ 2.22ರ ಸುಮಾರು. ರೈಲ್ವೆ ನಿಲ್ದಾಣದಲ್ಲಿ ಓಡಾಡುತ್ತಿದ್ದ ಸುಮಾರು 2ರಿಂದ 3 ವರ್ಷದ ಬಾಲಕ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಹಳಿಗಳ ಮೇಲೆ ಬಿದ್ದು ಬಿಟ್ಟ. ತಾಯಿ ತನ್ನ ಮಗುವನ್ನು ರಕ್ಷಿಸಲು ಹಳಿಗಳ ಮೇಲೆ ಹಾರಿದರು. ಇನ್ನೇನು ರೈಲು ಬರುವ ಹೊತ್ತು. ಎಲ್ಲರೂ ದಂಗಾಗಿ, ಉಸಿರು ಬಿಗಿ ಹಿಡಿದು ನೋಡುತ್ತಿದ್ದರು. ಯಾರಿಗೆ ಏನು ಮಾಡಬೇಕೆಂದು ತೋಚದ ಕ್ಷಣವದು.

ಇದನ್ನೂ ಓದಿ:Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

ಆಗಲೇ ಆಪತ್ಬಾಂಧವನ ರೂಪದಲ್ಲಿ ನೆರವಿಗೆ ಧಾವಿಸಿದವರು ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿ ವಿಕಾಸ್ ಬಂಗಾರ್. ತಮ್ಮ ಸಮಯೋಚಿತ ಕರ್ತವ್ಯ ಪ್ರಜ್ಞೆಯಿಂದ ನಡೆಯಬಹುದಾದ ಅತಿ ದೊಡ್ಡ ಅವಘಢವನ್ನು ತಪ್ಪಿಸಿ ಅಕ್ಷರಶಃ ಹೀರೋ ಎನಿಸಿಕೊಂಡರು. ಕೂಡಲೇ ಅವರು ತುರ್ತು ರೈಲು ನಿಲುಗಡೆ (Emergency stop plunger-ESP) ಬಟನ್‌ ಒತ್ತಿದರು. ಧಾವಿಸಿ ಬರುತ್ತಿದ್ದ ರೈಲು ನಿಲ್ದಾಣದಿಂದ ಕೇವಲ 30 ಮೀಟರ್ ದೂರದಲ್ಲಿ ಎರಡೂ ಬದಿಗಳಲ್ಲಿ ನಿಂತು ಬಿಟ್ಟಿತು. ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟು ಅಮ್ಮ-ಮಗುವಿನ ರಕ್ಷಣೆಗೆ ಧಾವಿಸಿದರು. ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

Continue Reading

ಪ್ರಮುಖ ಸುದ್ದಿ

Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

Viral Video: ಹಿಂದೂಗಳ ವಿರುದ್ಧ ಕಾಂಗ್ರೆಸ್‌ ಪಕ್ಷ ಪೂರ್ವಗ್ರಹ ಪೀಡಿತ ಮನೋಭಾವ ಹೊಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಆರೋಪ ಮಾಡಿರುವ ಬೆನ್ನಲ್ಲೇ, 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹಿಂದೂ ಮತಗಳ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ತುಮ್ಮಲ ನಾಗೇಶ್ವರರಾವ್ ಹೇಳಿಕೆ ನೀಡಿರುವ ವಿಡಿಯೋ ಹೊರಬಿದ್ದಿದೆ.

VISTARANEWS.COM


on

viral video tn rao
Koo

ಹೈದರಾಬಾದ್:‌ ತಮ್ಮ ಪಕ್ಷದ ಚುನಾವಣಾ ಗೆಲುವಿಗೆ ಹಿಂದೂಗಳ ಮತಗಳು ಅಗತ್ಯವಿಲ್ಲ ಎಂದು ತೆಲಂಗಾಣ ಕಾಂಗ್ರೆಸ್ (Telangana Congress) ನಾಯಕ ಟಿಎನ್ ರಾವ್ ಭಾಷಣದಲ್ಲಿ ಹೇಳಿದ್ದಾರೆ. ಅವರ ಈ ಮಾತಿನ ವಿಡಿಯೋ ವೈರಲ್ (viral video) ಆಗಿದೆ.

ಹಿಂದೂಗಳ ವಿರುದ್ಧ ಕಾಂಗ್ರೆಸ್‌ ಪಕ್ಷ ಪೂರ್ವಗ್ರಹ ಪೀಡಿತ ಮನೋಭಾವ ಹೊಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಆರೋಪ ಮಾಡಿರುವ ಬೆನ್ನಲ್ಲೇ, 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹಿಂದೂ ಮತಗಳ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ತುಮ್ಮಲ ನಾಗೇಶ್ವರರಾವ್ ಹೇಳಿಕೆ ನೀಡಿರುವ ವಿಡಿಯೋ ಹೊರಬಿದ್ದಿದೆ.

ತಮ್ಮ ಮತ ಬ್ಯಾಂಕ್‌ಗಾಗಿ ಕಾಂಗ್ರೆಸ್ ಪಕ್ಷವು ಭಾರತದ ಹಿಂದೂಗಳ ವಿರುದ್ಧ ಪಕ್ಷಪಾತ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಹಿಂದೂಗಳ ಆಸ್ತಿಯನ್ನು ಮುಸ್ಲಿಮರಿಗೆ ಹಂಚಿಕೆ ಮಾಡುವುದು ಕಾಂಗ್ರೆಸ್‌ನ ಆದ್ಯತೆಯಾಗಿದೆ ಎಂದ ಆರೋಪಿಸಿದ್ದರು. ಇದಾಗಿ ಕೆಲವೇ ದಿನಗಳಲ್ಲಿ, ತೆಲಂಗಾಣ ಕಾಂಗ್ರೆಸ್ ನಾಯಕ ತುಮ್ಮಲ ನಾಗೇಶ್ವರ ರಾವ್ ಅವರು ಹೀಗೆಂದಿದ್ದಾರೆ. ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ರಾವ್, 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹಿಂದೂ ಮತಗಳ ಅಗತ್ಯವಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ನ ಸಿದ್ಧಾಂತಕ್ಕೆ ಪ್ರಧಾನಿ ಹೋಲಿಸಿ ಟೀಕಿಸಿದ್ದರು. ದೇಶದ ಸಂಪನ್ಮೂಲಗಳು ಮೊದಲು ಬಡವರಿಗೆ ಸಲ್ಲಬೇಕು ಎಂಬ ತತ್ವವನ್ನು ಒತ್ತಿ ಹೇಳಿದರು. ರಾಜಕೀಯ ಲಾಭಕ್ಕಾಗಿ ನಿರ್ದಿಷ್ಟವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಕೆಲವು ಧಾರ್ಮಿಕ ಗುಂಪುಗಳಿಗೆ ಕಾಂಗ್ರೆಸ್ ಒಲವು ತೋರುತ್ತಿದೆ ಎಂದು ಮೋದಿ ಆರೋಪಿಸಿದ್ದರು. ಕಾಂಗ್ರೆಸ್ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ ಧೋರಣೆಯ ಪ್ರಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ್ದರು.

ಇದನ್ನೂ ಓದಿ: PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Continue Reading

ವೈರಲ್ ನ್ಯೂಸ್

Viral Video: ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು; ವಿಡಿಯೋ ವೈರಲ್‌

Viral video:ತಮಿಳುನಾಡಿನ ಚೆನ್ನೈನಲ್ಲಿ ನಡೆದಿದ್ದು,ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್‌ ಮೇಲೆ ಬಿದ್ದಿದೆ.

VISTARANEWS.COM


on

Koo

ಚೆನ್ನೈ: ಈಗಿನ ಕಾಲದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳಿದ್ದ ಅವರನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದ್ದರೂ ಅಪಾಯ ಕಟ್ಟಿಟ್ಟ ಬುತ್ತಿ. ಇಂತಹದ್ದೇ ಒಂದು ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದ್ದು,(Viral video) ಅಪಾರ್ಟ್‌ಮೆಂಟ್‌(Apartment)ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು(Toddler) ವಿಂಡೋ ಪೋರ್ಚ್‌(Window Porch) ಮೇಲೆ ಬಿದ್ದಿದೆ. ಅದೃಷ್ಟವಶಾತ್‌ ಸ್ಥಳೀಯರ ಸಹಾಯದಿಂದ ಮಗು ದೊಡ್ಡ ಅನಾಹುತವೊಂದು ತಪ್ಪಿದೆ. ತಾಯಿಯ ಮಡಿಲಿನಲ್ಲಿ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಿಟಕಿಯಿಂದ ಪ್ಲಾಸ್ಟಿಕ್‌ ಶೀಟ್‌ ಕವರ್‌ ಮಾಡಲಾಗಿದ್ದ ವಿಂಡೋ ಪೋರ್ಚ್‌ ಮೇಲೆ ಬಿದ್ದಿದೆ.

ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಮಗುವಿನ ರಕ್ಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿಂಡೋ ಪೋರ್ಚ್‌ ಮೇಲೆ ಬಿದ್ದಿ ಮಗುವಿನ ರಕ್ಷಣೆಗೆ ದೌಡಾಯಿಸಿದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳು ಮತ್ತೊಂದು ಕಿಟಕಿಯಿಂದ ಹೊರಬಂದು ಮಗುವನ್ನು ರಕ್ಷಿಸಿಲು ಹರಸಾಹನ ಪಟ್ಟರು. ನಾಲ್ಕೈದು ಜನ ಕಿಟಕಿಯ ಹೊರ ಭಾಗದಲ್ಲಿರುವ ಸಣ್ಣ ಜಾಗದಲ್ಲಿ ನಿಂತು ಮಗುವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ರಕ್ಷಿಸಿದ್ದಾರೆ. ಇನ್ನು ಕೆಳಗೆ ಅನೇಕ ಜನ ದೊಡ್ಡ ಬಟ್ಟೆಯೊಂದು ಹಿಡಿದು ಮಗುವಿನ ರಕ್ಷಣೆಗೆ ಸಹಾಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಶಂಸೆ ವ್ಯಕ್ತಪಡಿಸಿರುವ ನೆಟ್ಟಿಗರು, ಅಚಾನಕ್ಕಾಗಿ ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದಿದ್ದ 7 ತಿಂಗಳಿನ ಮಗುವನ್ನು ಬಹಳ ಜಾಣ್ಮೆಯಿಂದ ರಕ್ಷಿಸಿದ್ದಾರೆ. ಅವರ ಕಾರ್ಯಕ್ಕೆ ಸಲಾಂ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ:Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಕೆಲವು ದಿನಗಳ ಹಿಂದೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿದ್ದ ಕೊಳವೆ ಬಾವಿಗೆ ಸಾತ್ವಿಕ್‌ ಮುಜಗೊಂಡ ಎಂಬ ಎರಡು ವರ್ಷದ ಬಾಲಕ ಬಿದ್ದಿದ್ದ. ಸುಮಾರು 20 ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿತ್ತು. ಸಂಜೆ 5.30ರ ಸುಮಾರಿಗೆ ಮಗು ಕೊಳವೆಬಾವಿಗೆ ಬಿದ್ದಿದ್ದು, ಇದಾದ ಅರ್ಧ ಗಂಟೆಯಲ್ಲಿಯೇ ಕಾರ್ಯಾಚರಣೆ ಆರಂಭಿಸಿದ್ದು ಸಿಬ್ಬಂದಿಯು ಸತತ ಪ್ರಯತ್ನ ಮಾಡಿತು. ರಾತ್ರಿಯೇ ಎರಡು ಹಿಟಾಚಿ, ಮೂರು ಜೆಸಿಬಿ ಯಂತ್ರಗಳ ಮೂಲಕ ಕೊಳವೆಬಾವಿಯ ಸುತ್ತ 15 ಅಡಿ ಅಗೆಯಲಾಯಿತು. ಕೆಲವೇ ಗಂಟೆಗಳಲ್ಲಿ ಇಷ್ಟೊಂದು ಪ್ರಗತಿ ಕಂಡಿದ್ದು, ರಂಧ್ರ ಕೊರೆದು ಮಗುವಿನ ರಕ್ಷಣೆ ಮಾಡಲು ಸಾಧ್ಯವಾಯಿತು.

Continue Reading

ವೈರಲ್ ನ್ಯೂಸ್

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

Crime News: ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದ ಕೊರಗಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ಈ ಕೃತ್ಯ ಎಸಗಿದ್ದಳು. ನಾಯಿ ಮರಿ 5 ದಿನಗಳ ಹಿಂದೆ ನಾಪತ್ತೆಯಾಗಿತ್ತು. ಬಾಲಕಿ ಮತ್ತು ಶ್ವಾನದ ಮಧ್ಯೆ ಮೂರು ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತು ಎಂದು ಮನೆಯವರು ತಿಳಿಸಿದ್ದಾರೆ. ಶ್ವಾನಮರಿ ನಾಪತ್ತೆಯಾದಾಗಿನಿಂದ ಆಕೆ ಖಿನ್ನತೆಗೆ ಜಾರಿದ್ದಳು ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Crime News
Koo

ಚಂಡಿಗಢ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಎಂಬ ಕಾರಣಕ್ಕೆ, ಅಪ್ಪ-ಅಮ್ಮ ಬೈದರು, ಮೊಬೈಲ್​ ನೋಡಬೇಡ ಎಂದು ಹೇಳಿದರು ಎಂಬಿತ್ಯಾದಿ ಕ್ಷುಲ್ಲಕ ಕಾರಣಕ್ಕೆ ಮಕ್ಕಳು / ಹದಿಹರೆಯದವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ಕೇಳಿದ್ದೇವೆ. ಇದೂ ಕೂಡ ಅಂತಹದ್ದೇ ಮಾದರಿಯ ಘಟನೆ. ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದುದೇ ಆಕೆಯ ಆತ್ಮಹತ್ಯೆಗೆ ಕಾರಣ ಎಂದು ಮೂಲಗಳು ತಿಳಿಸಿವೆ. ಶನಿವಾರ (ಏಪ್ರಿಲ್‌ 27) ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಳು (Crime News).

ʼʼಕೆಲವು ದಿನಗಳ ಹಿಂದೆ ನಾಪತ್ತೆಯಾದ ನೆಚ್ಚಿನ ಶ್ವಾನ ಇನ್ನೂ ಪತ್ತೆಯಾಗದ ಕೊರಗಿನಿಂದ 12 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲವು ದಿನಗಳಿಂದ ಆಕೆ ಈ ವಿಚಾರದಲ್ಲಿ ಕೊರಗುತ್ತಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆʼʼ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ವಿವರ

ʼʼಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಬಾಲಕಿಯ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತುʼʼ ಎಂದು ಮನೆಯವರು ತಿಳಿಸಿದ್ದಾರೆ. ʼʼಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲʼʼ ಎಂದು ಅವರು ವಿವರಿಸಿದ್ದಾರೆ. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ 6ನೇ ತರಗತಿಯ ವಿದ್ಯಾರ್ಥಿನಿಯ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಶನಿವಾರ ಸಂಜೆ ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್‌ ನಿರ್ಧಾರ ಕೈಗೊಂಡಿದ್ದಾಳೆ. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾಳೆ. ಕೊನೆಯ ದಿನಗಳಲ್ಲಿ ಮಗಳ ದಿನಗಳನ್ನು ನೆನೆದು ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ʼʼಮೂರು ತಿಂಗಳಿಂದ ಆಕೆ ಮತ್ತು ಶ್ವಾನದ ಮಧ್ಯೆ ಅತ್ಯುತ್ತಮ ಬಾಂಧವ್ಯ ರೂಪುಗೊಂಡಿತ್ತು. ನಾಯಿ ಮರಿ ನಾಪತ್ತೆಯಾದಾಗಿನಿಂದ ಆಕೆ 5 ದಿನಗಳಿಂದ ಆಹಾರ ಸೇವಿಸುವುದನ್ನೇ ನಿಲ್ಲಿಸಿ ಬಿಟ್ಟಿದ್ದಳು. ನಿನ್ನೆ ನಾನು ತರಕಾರಿ ಖರೀದಿಗಾಗಿ ಹೊರ ಹೋಗಿದ್ದೆ. ಈ ವೇಳೆ ನಮ್ಮ ನೆರೆಯವರು ಕರೆ ಮಾಡಿ ಕೂಡಲೇ ಆಗಮಿಸುವಂತೆ ಹೇಳಿದ್ದರು. ಕೂಡಲೇ ಮನೆಗೆ ಧಾವಿಸಿ ಬಂದಿದ್ದೆ. ಈ ವೇಳೆ ಆಕೆ ಮೃತಪಟ್ಟಿದ್ದಳುʼʼ ಎಂದು ಬಾಲಕಿ ತಾಯಿ ನೋವಿನಿಂದ ಹೇಳಿದ್ದಾರೆ.

ಇದನ್ನೂ ಓದಿ: ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ

ವರ್ಷಗಳ ಹಿಂದೆ ಮಹಾರಾಷ್ಟ್ರದ ಭಯಂದರ್ ಎಂಬಲ್ಲಿ 13 ವರ್ಷದ ಬಾಲಕನೊಬ್ಬ ಅತ್ಯಂತ ಕ್ಷುಲ್ಲಕ ಮತ್ತು ವಿಚಿತ್ರ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದ. ‘ತನ್ನ ತಲೆಕೂದಲನ್ನು ಅತ್ಯಂತ ಚಿಕ್ಕದಾಗಿ ಕತ್ತರಿಸಿಬಿಟ್ಟರು’ ಎಂಬ ಕಾರಣಕ್ಕೆ ಅಪಾರ್ಟ್​ಮೆಂಟ್​​ನ 16ನೇ ಮಹಡಿಯಲ್ಲಿರುವ ತಮ್ಮ ಮನೆಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ.

Continue Reading
Advertisement
PM Narendra modi in Bagalakote and talk about DeepFake Video
Lok Sabha Election 202416 mins ago

PM Narendra Modi: ಡೀಪ್‌ ಫೇಕ್‌ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು? ವಿಡಿಯೊ ಕಂಡರೆ ನೀವೇನು ಮಾಡಬೇಕು?

Virat kohli
ಪ್ರಮುಖ ಸುದ್ದಿ16 mins ago

Virat kohli : ಕಾಮೆಂಟ್ರಿ ಬಾಕ್ಸ್​​ನಲ್ಲಿ ಕುಳಿತ ವಿಮರ್ಶೆ ಮಾಡುವುದು ಸುಲಭ; ಕೊಹ್ಲಿ ತಿರುಗೇಟು ಕೊಟ್ಟಿದ್ದು ಯಾರಿಗೆ?

kanhaiya kumar
ದೇಶ19 mins ago

Lok Sabha Election 2024: ಎಲೆಕ್ಷನ್‌ ಹೊತ್ತಲ್ಲೇ ಕಾಂಗ್ರೆಸ್‌ಗೆ ಬಿಗ್‌ ಶಾಕ್! ಕನ್ಹಯ್ಯ ಕುಮಾರ್‌ಗೆ ಸ್ವಪಕ್ಷದಲ್ಲೇ ವಿರೋಧ

Hasan Pen Drive case Prajwal Revanna expelled from JDS
ರಾಜಕೀಯ29 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಉಚ್ಚಾಟನೆ? ಎಚ್‌.ಡಿ. ದೇವೇಗೌಡರ ನಿರ್ಧಾರ ಏನು?

Ballari Lok Sabha Constituency Congress Candidate E Tukaram Election Campaign in Daroji
ಬಳ್ಳಾರಿ45 mins ago

Lok Sabha Election 2024: ದರೋಜಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಬಿರುಸಿನ ಪ್ರಚಾರ

Lok Sabha Election
ಪ್ರಮುಖ ಸುದ್ದಿ52 mins ago

Lok Sabha Election: ಇಂದೋರ್​ ಕಾಂಗ್ರೆಸ್​ ಅಭ್ಯರ್ಥಿ ಕಣದಿಂದ ಹಿಂದಕ್ಕೆ; ಚುನಾವಣೆಗೆ ಮೊದಲೇ ಬಿಜೆಪಿಗೆ ಮತ್ತೊಂದು ಸೀಟು!

PM Narendra modi in Bagalakote and Attack on Congress
Lok Sabha Election 202458 mins ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

Family Drama Trailer Out
ಸಿನಿಮಾ1 hour ago

Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

gold rate today rakul
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆಯಲ್ಲಿ ₹330 ಇಳಿಕೆ; ಇಂದಿನ ಬಂಗಾರ- ಬೆಳ್ಳಿ ದರಗಳು ಇಲ್ಲಿವೆ

Narenda Modi Sonia gandhi
ದೇಶ1 hour ago

Narendra Modi: ರಾಜಕೀಯ ದ್ವೇಷ ಮರೆತು ಸೋನಿಯಾ, ರಾಹುಲ್‌ಗೆ ಸಹಾಯ; ಹೀಗ್ಯಾಕಂದ್ರು ಪ್ರಧಾನಿ ಮೋದಿ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202458 mins ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202421 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202424 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌