ʼಬೈ ಬೈ ಸರ್‌ʼ-ಮೂರೇ ಶಬ್ದದ ರಾಜೀನಾಮೆ ಪತ್ರ ನಮಗೆಲ್ಲ ಮಾದರಿಯೆಂದ ನೆಟ್ಟಿಗರು - Vistara News

ವೈರಲ್ ನ್ಯೂಸ್

ʼಬೈ ಬೈ ಸರ್‌ʼ-ಮೂರೇ ಶಬ್ದದ ರಾಜೀನಾಮೆ ಪತ್ರ ನಮಗೆಲ್ಲ ಮಾದರಿಯೆಂದ ನೆಟ್ಟಿಗರು

Resignation Letter: ರಾಜೀನಾಮೆ ಪತ್ರ ಬರೆಯಲು ಅದರದ್ದೇ ಆದ ಮಾದರಿ, ಸ್ವರೂಪವಿದೆ. ಆದರೆ ಈ ಉದ್ಯೋಗಿ ಬರೆದ ರೀತಿಯನ್ನು ನೆಟ್ಟಿಗರು ತುಂಬ ಇಷ್ಟಪಟ್ಟಿದ್ದಾರೆ.

VISTARANEWS.COM


on

Resignation Letter
ವೈರಲ್‌ ಆಗುತ್ತಿರುವ ರಾಜೀನಾಮೆ ಪತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಒಂದು ಕಂಪನಿಯಲ್ಲಿ ಕೆಲಸ ಮಾಡುತ್ತಿರುತ್ತೀರಿ. ಆ ಕೆಲಸ ಬೋರ್‌ ಆಗಿದೆ ಅಥವಾ ಉತ್ತಮ ವೇತನ, ಹುದ್ದೆಗಾಗಿ ಮತ್ತೊಂದು ಸಂಸ್ಥೆಗೆ ಸೇರಬೇಕು ಎಂದಾದಾಗ ಈಗಿರುವ ಕಂಪನಿಯ ಮೇಲಧಿಕಾರಿ, ಮುಖ್ಯಸ್ಥನಿಗೆ ರಾಜೀನಾಮೆ ಪತ್ರ (Resignation Letter)ಸಲ್ಲಿಸಬೇಕು. ಅದನ್ನವರು ಅನುಮೋದಿಸಬೇಕು ಎಂಬುದು ಎಲ್ಲ ಕಡೆ ಜಾರಿಯಲ್ಲಿರುವ ನಿಯಮ. ಈ ರಾಜೀನಾಮೆ ಪತ್ರ ಬರೆಯಲೂ ಅದರದ್ದೇ ಆದ ಒಂದು ಪದ್ಧತಿಯಿದೆ, ಮಾದರಿಯಿದೆ. ಆದರೆ ಯಾವುದೋ ಕಂಪನಿಯ ಉದ್ಯೋಗಿಯೊಬ್ಬ ಅತ್ಯಂತ ಚಿಕ್ಕದಾಗಿ ಮತ್ತು ನೋಡಿದರೇ ನಗು ಬರುವಂಥ ರೀತಿಯಲ್ಲಿ ರಾಜೀನಾಮೆ ಪತ್ರ ಬರೆದಿದ್ದಾರೆ. ಇದರ ಫೋಟೋವನ್ನು ಕಾವೇರಿ ಎಂಬುವರು ತಮ್ಮ ಟ್ವಿಟರ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಇವರು ಮೊದಲಿಗೆ ʼಡಿಯರ್‌ ಸರ್‌ʼ ಎಂದು ಬರೆದಿದ್ದಾರೆ. ಅದರ ಕೆಳಗೆ ದೊಡ್ಡದಾಗಿ RESIGNATION LETTER ಎಂದು ಕ್ಯಾಪಿಟಲ್‌ ಅಕ್ಷರಗಳಲ್ಲಿ ನಮೂದಿಸಿ, ನಂತರ ʼಬೈ ಬೈ ಸರ್‌ʼ ಎಂದು ಬರೆದು ಕೊನೆಯಲ್ಲಿ ತನ್ನ ಸಹಿ ಹಾಕಿದ್ದಾರೆ. ಅತ್ಯಂತ ಚಿಕ್ಕದಾದ ರಾಜೀನಾಮೆ ಪತ್ರವನ್ನು ನೋಡಿದ ಅನೇಕರು ಇದು ನಿಜಕ್ಕೂ ಮಾದರಿ ರೆಸಿಗ್ನೇಶನ್‌ ಲೆಟರ್‌ ಎಂದು ಹೇಳಿದ್ದಾರೆ. ʼನಾವು ನಮ್ಮ ಕಂಪನಿಗೆ ರಾಜೀನಾಮೆ ಕೊಡುವಾಗ ಹೀಗೇ ಮೂರು ಅಕ್ಷರದಲ್ಲೇ ಬರೆಯುತ್ತೇವೆʼ ಎಂದು ಹೇಳಿಕೊಂಡಿದ್ದಾರೆ. ನೀವೂ ನೋಡಿ, ವರ್ಕೌಟ್‌ ಆಗಬಹುದು !

‌ ಇದನ್ನೂ ಓದಿ: ಉದ್ಯೋಗಿಯೊಬ್ಬ ರಜೆ ಕೇಳಿ ಬಾಸ್‌ಗೆ ಕಳಿಸಿದ ಇ-ಮೇಲ್‌ ವೈರಲ್‌; ಪ್ರಾಮಾಣಿಕತೆ ಮೆಚ್ಚುವಂಥದ್ದು !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Hasin Jahan: ‘ನಾಯಿಗಳ ದಂಡು’… ಎಂದು ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ವಿಚ್ಛೇದಿತ ಪತ್ನಿ?; ವಿಡಿಯೊ ವೈರಲ್​

Hasin Jahan: ಶಮಿ ವಿರುದ್ಧ ಹಸೀನ್ ಜಹಾನ್ ಈ ರೀತಿ ಮಾಡುತ್ತಿರುವುದು ಇದೇ ಮೊದಲೇನಲ್ಲ. ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಉತ್ತಮ ಪ್ರದರ್ಶನ ತೋರಿದಾಗ ಎಮ್ಮೆ ನೀರು ಕುಡಿಯುತ್ತಿರುವ ಚಿತ್ರಗಳನ್ನು ಪೋಸ್ಟ್​ ಮಾಡುವ ಮೂಲಕ ವಿಲಕ್ಷಣದ ಹೇಳಿಕೆ ನೀಡಿದ್ದರು.

VISTARANEWS.COM


on

Hasin Jahan: Divorced wife who scolded Shami unnecessarily as 'pack of dogs'; The video is viral
Koo

ಕೋಲ್ಕತ್ತಾ: ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ(Mohammed Shami) ಅವರ ವಿರುದ್ಧ ಸದಾ ಒಂದಿಲ್ಲೊಂದು ಕಾರಣಗಳಿಂದ ಟೀಕಿಸುತ್ತಿರುವ ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್(Hasin Jahan) ಈ ಬಾರಿ ನಾಯಿಗೆ ಹೋಲಿಕೆ ಮಾಡಿ ಪರೋಕ್ಷವಾಗಿ ಹೀಯಾಳಿಸಿದ್ದಾರೆ.

ಹೌದು, ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಣ್ಣು ಮಿಟುಕಿಸುವ ಒಂದು ನಿಮಿಷದ ವಿಡಿಯೊ ಹಂಚಿಕೊಂಡಿರುವ ಹಸೀನ್ ಜಹಾನ್, ನಾಯಿಗಳ ದಂಡು ಹೆಣ್ಣು ಮಕ್ಕಳ ಹಿಂದಿನಿಂದ ಮಾತ್ರ ಬೊಗಳುತ್ತದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ಎಂದ ಅನುಮಾನ ಮೂಡಿದೆ.

ಶಮಿ ವಿರುದ್ಧ ಹಸೀನ್ ಜಹಾನ್ ಈ ರೀತಿ ಮಾಡುತ್ತಿರುವುದು ಇದೇ ಮೊದಲೇನಲ್ಲ. ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಉತ್ತಮ ಪ್ರದರ್ಶನ ತೋರಿದಾಗ ಎಮ್ಮೆ ನೀರು ಕುಡಿಯುತ್ತಿರುವ ಚಿತ್ರಗಳನ್ನು ಪೋಸ್ಟ್​ ಮಾಡುವ ಮೂಲಕ ವಿಲಕ್ಷಣದ ಹೇಳಿಕೆ ನೀಡಿದ್ದರು.

ಕೆಲವು ತಿಂಗಳ ಹಿಂದೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ರೋಹಿತ್​ ಶರ್ಮ ಅವರು ತಮ್ಮ ಪುಟ್ಟ ಮಗಳು ಸಮೈರಾ ತೊಡೆ ಮೇಲೆ ಹಾಯಾಗಿ ಮಲಗಿರುವ ಫೋಟೊ ಹಂಚಿಕೊಂಡಿದ್ದ ಹಸೀನ್ ಜಹಾನ್, ಹೆಚ್ಚಿನ ತಂದೆಯಂದಿರು ತಮ್ಮ ಪುಟ್ಟ ಮಗಳನ್ನು ದೇವರಂತೆ ಕಂಡು ಅವರಿಂದ ಶಾಂತಿ ಕಂಡುಕೊಳ್ಳುತ್ತಾರೆ. ಮತ್ತು ಕೆಲವು ತಂದೆಯರು ವೇಶ್ಯೆಯರ ಮಡಿಲಲ್ಲಿ!. ಅಲ್ಲಾಹು ಯಾವುದೇ ಮಗಳಿಗೆ ಇಂತಹ ಗುಣವಿಲ್ಲದ ತಂದೆಯನ್ನು ಎಂದಿಗೂ ನೀಡದಿರಲಿ. ಆಮೀನ್. ನನ್ನ ಪುಟ್ಟ ಮಗಳಿಗೆ ತಾಳ್ಮೆಯನ್ನು ನೀಡುವಂತೆ ನಾನು ಅಲ್ಲಾಹುವಿನನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್​ ಮಾಡಿ ಶಮಿಯನ್ನು ಅನಗತ್ಯವಾಗಿ ಕೆಣಕ್ಕಿದ್ದರು.

16 ಆಗಸ್ಟ್ 2018 ರಂದು, ಹಸಿನ್ ಜಹಾನ್(Hasin Jahan) ಮೊಹಮ್ಮದ್ ಶಮಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಹಲ್ಲೆ, ಅತ್ಯಾಚಾರ, ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರದ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗನ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಗಳ ಖರ್ಚಿಗೆ ಹಾಗೂ ತನಗೆ ಯಾವುದೇ ರೀತಿಯ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಹಸಿನ್ ಜಹಾನ್ ದೂರಿನಲ್ಲಿ ಅಪಾದಿಸಿದ್ದರು.

ಜೀವನಾಂಶ ನೀಡುತ್ತಿರುವ ಶಮಿ

2018 ರಲ್ಲಿ ಹಸಿನ್ ಜಹಾನ್ ಅವರು ಮಾಸಿಕ 10 ಲಕ್ಷ ರೂ ಜೀವನಾಂಶವನ್ನು ಕೋರಿ ಶಮ್ಮಿ ವಿರುದ್ಧ ಕಾನೂನು ಮೊಕದ್ದಮೆ ಹೂಡಿದ್ದರು. ವೈಯಕ್ತಿಕ ವೆಚ್ಚಕ್ಕಾಗಿ 7 ಲಕ್ಷ ರೂ., ತಮ್ಮ ಮಗಳ ನಿರ್ವಹಣೆಗಾಗಿ 3 ಲಕ್ಷ ರೂ. ಕೇಳಿದ್ದರು. ಇದರ ವಿಚಾರಣೆ ನಡೆಸಿದ ಕೋಲ್ಕೊತಾ ನ್ಯಾಯಾಲಯ ಇದೇ ವರ್ಷದ ಜನವರಿಯಲ್ಲಿ ತೀರ್ಪು ಪ್ರಕಟಿಸಿ, ಶಮಿ ಅವರು ಪತ್ಯೇಕವಾಗಿ ವಾಸಿಸುತ್ತಿರುವ ಪತ್ನಿ ಜಹಾನ್​ಗೆ ತಿಂಗಳಿಗೆ 50 ಸಾವಿರ ರೂ. ನೀಡುವಂತೆ ಸೂಚಿಸಿತ್ತು. ಕೋರ್ಟ್​ ಸೂಚನೆಯಂತೆ ಶಮಿ ಅವರು ಈ ಮೊತ್ತವನ್ನು ನೀಡಿತ್ತಲೇ ಬರುತ್ತಿದ್ದಾರೆ.

Continue Reading

ಮಳೆ

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Karnataka Rain : ಸಮುದ್ರಕ್ಕೆ ಇಳಿಯದಂತೆ ಕಡಲತೀರದಲ್ಲಿ ರೆಡ್ ಫ್ಲ್ಯಾಗ್ ಅಳವಡಿಸಿದರೂ ಹುಚ್ಚಾಟ ತೋರಿದ ಪ್ರವಾಸಿಗರಿಗೆ ಲೈಫ್‌ಗಾರ್ಡ್‌ಗಳು ಬಿಸಿ ಮುಟ್ಟಿಸಿದ್ದಾರೆ. ಅಪಾಯವನ್ನು ಲೆಕ್ಕಿಸದೇ ಈಜುತ್ತಿದ್ದವರನ್ನು ದಡಕ್ಕೆ ಎಳೆದು ತಂದು ಥಳಿಸಿದ್ದಾರೆ.

VISTARANEWS.COM


on

By

Karnataka weather Forecast
Koo

ಕಾರವಾರ: ಭಾರಿ ಮಳೆ (Karnataka Rain) ನಡುವೆ ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರನ್ನು ದರದರನೇ ಎಳೆದುತಂದು ಲೈಫ್‌ಗಾರ್ಡ್‌ ಸಿಬ್ಬಂದಿ ಥಳಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಘಟನೆ ನಡೆದಿದೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಅಬ್ಬರ ಒಂದೆಡೆ ಸಮುದ್ರತೀರದಲ್ಲಿ ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ. ಅಪಾಯದ ಎಚ್ಚರಿಕೆಯನ್ನು ನಿರ್ಲಕ್ಷಿಸಿದ ಕೆಲ ಪ್ರವಾಸಿಗರು ಸಮುದ್ರಕ್ಕಿಳಿದು, ಈಜುತ್ತಿದ್ದರು. ಅಪಾಯಕಾರಿ ರೀತಿಯಲ್ಲಿ ಅಲೆಗಳು ಅಪ್ಪಳಿಸುತ್ತಿದ್ದರೂ ಲೆಕ್ಕಿಸದೇ ಮೋಜು ಮಸ್ತಿ ಮಾಡುತ್ತಿದ್ದರು.

ಹೀಗಾಗಿ ನೀರಲ್ಲಿ ಈಜಲು ತೆರಳಿದ್ದ ಪ್ರವಾಸಿಗರಿಗೆ ಥಳಿಸಿ ಲೈಫ್‌ಗಾರ್ಡ್‌ಗಳು ದಡಕ್ಕೆ ಕರೆತಂದಿದ್ದಾರೆ. ಬಳಿಕ ಸೂಚನೆಯನ್ನು ನಿರ್ಲಕ್ಷ್ಯಿಸಿ ನೀರಿಗಿಳಿದಿದ್ದಕ್ಕೆ ಹೊಡೆದು ಬುದ್ಧಿ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜತೆಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿಯೇ ನೀರಿಗಿಳಿಯದಂತೆ ಕಡಲತೀರದಲ್ಲಿ ರೆಡ್ ಫ್ಲ್ಯಾಗ್ ಅಳವಡಿಸಿದರೂ ಹುಚ್ಚಾಟ ತೋರಿದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಲಾಗಿದೆ.

ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ ಅಧೋಗತಿ

ಚಿಕ್ಕಮಗಳೂರಿನಲ್ಲಿ ರಣಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರಕ್ಕೆ ಚಾರ್ಮಾಡಿ, ಕೊಟ್ಟಿಗೆಹಾರದಲ್ಲಿ ಕೇವಲ 7 ದಿನಕ್ಕೆ 96 ಇಂಚು ಪ್ರಮಾಣದ ಮಳೆ ದಾಖಲಾಗಿದೆ. ಇತ್ತ ನಿರಂತರ ಮಳೆಯಿಂದಾಗಿ ಚಾರ್ಮಾಡಿ ಹೆದ್ದಾರಿ ಸಂಚಾರ ಅಧೋಗತಿ ತಲುಪಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ವಾಹನ ಚಲಾಯಿಸಲು ಚಾಲಕರು ಪರದಾಡುತ್ತಿದ್ದಾರೆ. ಮಂಜು ಮಿಶ್ರಿತ ಮಳೆಯಿಂದಾಗಿ ಸಂಚಾರಕ್ಕೆ ಅಡೆತಡೆಯಾಗಿದ್ದು ಜತೆಗೆ ಗುಡ್ಡ ಕುಸಿತದ ಆತಂಕವು ಹೆಚ್ಚಿದೆ. ಕಳೆದ ಭಾನುವಾರ ರಾತ್ರಿ ಚಾರ್ಮಾಡಿಯ ಆಲೆಖಾನ್ ಬಳಿ ಗುಡ್ಡ ಕುಸಿದಿತ್ತು.

ಇದನ್ನೂ ಓದಿ: Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ಮನೆಗಳಿಗೆ ನುಗ್ಗುತ್ತಿರುವ ನೀರು, ಕೆರೆಯಂತಾದ ಜಮೀನು

ಉತ್ತರಕನ್ನಡ ಜಿಲ್ಲೆಯಲ್ಲಿ ನಿಲ್ಲದ ಮಳೆ ಅಬ್ಬರಕ್ಕೆ ಹಲವೆಡೆ ಮನೆಗಳಿಗೆ ನೀರು ನುಗ್ಗುತ್ತಿದೆ. ಅಂಕೋಲಾ ತಾಲ್ಲೂಕಿನ ಅವರ್ಸಾದಲ್ಲಿ ಹೆದ್ದಾರಿ ಪಕ್ಕದ ಜಮೀನು ಕೆರೆಯಂತಾಗಿತ್ತು. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗುಡ್ಡ ಕುಸಿಯುವ ಭೀತಿಯಲ್ಲಿ ಜನರು ಕಾಲಕಳೆಯುತ್ತಿದ್ದಾರೆ. ಕಾರವಾರ, ಅಂಕೋಲಾ ಭಾಗದಲ್ಲಿ ಸಮುದ್ರಕ್ಕೆ ನೀರು ಹರಿದುಹೋಗದೇ ಹಲವೆಡೆ ಅವಾಂತರವೇ ಸೃಷ್ಟಿಯಾಗಿದೆ.

ಇನ್ನೂ ಉತ್ತರಕನ್ನಡದಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ. ಸೂಪಾ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಿದೆ. ಜೋಯಿಡಾದ ಗಣೇಶಗುಡಿಯಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೂಪಾ ಜಲಾಶಯದ ಗರಿಷ್ಠ 564 ಮೀ ಸಾಮರ್ಥ್ಯ ಇದ್ದು, ಸದ್ಯ ಜಲಾಶಯದಲ್ಲಿ 532.32 ಮೀ ನೀರು ಸಂಗ್ರಹವಾಗಿದೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಗುಂಡಬಾಳ ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ತೀರ ಪ್ರದೇಶದ ತೋಟ, ಮನೆಗಳಿಗೆ ನೀರು ನುಗ್ಗಿದೆ. ನೆರೆಯಿಂದಾಗಿ ಗ್ರಾಮದ ಜನರು ಸಂತ್ರಸ್ತರಾಗುವ ಆತಂಕ ಎದುರಾಗಿದೆ. ಮಲೆನಾಡಿನಲ್ಲಿ ಹೆಚ್ಚು ಮಳೆಯಾದ ಕಾರಣ ಗುಂಡಬಾಳ ನದಿ ನೀರಿನಮಟ್ಟ ಏರಿಕೆ ಆಗಿದೆ. ನದಿ ಪಾತ್ರದ ನಿವಾಸಿಗಳನ್ನು ಎತ್ತರದ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸ್ಥಳೀಯಾಡಳಿತದಿಂದ ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶ, ಗದ್ದೆ ಸಾಲುಗಳಿಗೆ ಭಾರೀ ಪ್ರಮಾಣದ ನೀರು ಹರಿದುಹೋಗುತ್ತಿದೆ. ಜನವಸತಿ ಪ್ರದೇಶಗಳತ್ತ ನೀರು ನುಗ್ಗಿ, ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದೆ. ಸಗ್ರಿ, ಗುಂಡಿಬೈಲು, ಚಕ್ರತೀರ್ಥ ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಜತೆಗೆ ಬೈಲಕೆರೆ, ಕಲ್ಸಂಕ ಮಠದಬೆಟ್ಟು ಜಲಾವೃತಗೊಂಡಿದೆ. ಬೈಲಕೆರೆ ಸಮೀಪ ಮನೆಗಳಿಗೆ ನೀರು ನುಗ್ಗಿ ನೆರೆ ಸೃಷ್ಟಿಯಾಗಿತ್ತು. ಹೀಗಾಗಿ ಗುಂಡಿಬೈಲು ಸಮೀಪ ಐದಾರು ಕುಟುಂಬಗಳ ಸದಸ್ಯರನ್ನು ಅಗ್ನಿಶಾಮಕ ದಳದಿಂದ ರಕ್ಷಣೆ ಮಾಡಲಾಗಿದೆ. ಒಂದು ಮನೆಯ ಮೂವರನ್ನು ರಕ್ಷಣೆ ಮಾಡಿ, ಪಾಡಿಗಾರು ಸಮೀಪ ನಾಲ್ಕು ಮನೆಗಳ ಜನರನ್ನು ಎತ್ತರ ಪ್ರದೇಶಕ್ಕೆ ಶಿಫ್ಟ್ ಮಾಡಿದ್ದಾರೆ. ಉಡುಪಿ ಅಂಬಾಗಿಲು ಕಲ್ಸಂಕ ರಸ್ತೆಯಲ್ಲಿ ಸಂಪೂರ್ಣ ನೆರೆಯಾಗಿದೆ. ಉಡುಪಿ ನಗರಕ್ಕೆ ಸಂಪರ್ಕ ಕಲ್ಪಿಸುವ ಬಹುಮುಖ್ಯ ರಸ್ತೆಯಲ್ಲಿ ನೀರು ನಿಂತಿದ್ದು, ನಗರದ ಗುಂಡಿಬೈಲು ವಾಹನ ಸಂಚಾರ ದುಸ್ತರ ಪರಿಸ್ಥಿತಿಯಲ್ಲಿ ಇದೆ.

ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ಸಮಸ್ಯೆಯಾಗಿದೆ. ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ದಿನವು ಇಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಅಂಡರ್ ಪಾಸ್ ಕಾಮಗಾರಿ ವೇಳೆ ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಸರ್ವಿಸ್ ರಸ್ತೆ ಬ್ಲಾಕ್ ಆಗಿದೆ ಎಂದು ಸ್ಥಳೀಯರು ಕಿಡಿಕಾರಿದರು. ಸ್ಥಳೀಯರ ದೂರಿನ ಹಿನ್ನೆಲೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪರಿಸ್ಥಿತಿ ಅವಲೋಕಿಸಿದರು. ತಕ್ಷಣ ಈ ಸಮಸ್ಯೆಗೆ ತುರ್ತು ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು. ಸರ್ವಿಸ್ ರಸ್ತೆ ಪಕ್ಕದಲ್ಲಿರುವ ಚರಂಡಿ ವ್ಯವಸ್ಥೆ, ಸರಿ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಸಂಸರಿಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಾಥ್‌ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Vicky Pedia: ಸಂಜನಾ..ಸಂಜನಾ …`I Love You’ ಸಂಜನಾ; ಬಾಲಕನ ಹಾಡಿಗೆ ಹೊಸ ಟಚ್ ಕೊಟ್ಟ ವಿಕಾಸ್ ವಿಕ್ಕಿಪಿಡಿಯ! 

Vicky Pedia: ತಮ್ಮ ವಿಭಿನ್ನ ಕಾಮಿಡಿ ವಿಡಿಯೊಗಳಿಂದ ವಿಡಿಯೊ ಕ್ರಿಯೇಟರ್ ವಿಕಾಸ್ ( ವಿಕ್ಕಿ ಪೀಡಿಯಾ) (Vicky Pedia) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚಿನ ʻನಾನು ನಂದಿನಿʼ ಹಾಡಿಗೆ ರೀಲ್ಸ್‌ ಮಾಡಿ ಸಖತ್‌ ಫೇಮಸ್‌ ಆಗಿದ್ದರು. ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ಕಂಟೆಂಟ್ ಕ್ರಿಯೇಟರ್. ವಿಡಿಯೊದಲ್ಲಿ ವಿಕ್ಕಿಪೀಡಿಯಾ ವಿಕ್ಕಿ ಪಿಂಕ್‌ ವಿಗ್‌ ಧರಿಸಿ ಈ ರೀತಿಯ ಕ್ರಿಯೇಟಿವ್‌ ರೀಲ್ಸ್‌ ಹಂಚಿಕೊಳ್ಳುತ್ತಲೇ ಇರುತ್ತಾರೆ.

VISTARANEWS.COM


on

Vicky Pedia I love you sanjana song trend
Koo

ಬೆಂಗಳೂರು: ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ಕಂಟೆಂಟ್ ಕ್ರಿಯೇಟರ್. ʻನಾನು ನಂದಿನಿʼ ಹಾಡಿನ ಮೂಲಕ ಸಖತ್‌ ಸೆನ್ಷೇಷನ್‌ ಕ್ರಿಯೇಟ್‌ ಮಾಡಿದವರು ಇವರು. ಸದಾ ಒಂದಲ್ಲ ಒಂದು ಕ್ರಿಯೇಟಿವ್‌ ವಿಡಿಯೊ ಹಂಚಿಕೊಳ್ಳುವ ವಿಕ್ಕಿ ತಂಡ, ಮತ್ತೊಂದು ಹಾಡು ಸಖತ್‌ ಟ್ರೆಂಡ್‌ ಆಗಿದೆ. ಅದುವೆ `I Love you ಸಂಜನಾʼ ಸಾಂಗ್‌.

ಅಸಲಿಗೆ ಈ ಹಾಡನ್ನು ಒಬ್ಬ ಪುಟ್ಟ ಹುಡುಗ ಹಾಡಿ ವಿಡಿಯೊ ಪೋಸ್ಟ್‌ ಮಾಡಿದ್ದ. ಈ ಹಾಡನ್ನು ಹಾಡಿದ ಬಾಲಕನ ಹೆಸರು ರಂಜಿತ್. ಕಲಾರತಿ ಮಹಾದೇವ ಎಂಬುವರ ಇನ್‌ಸ್ಟಾದಲ್ಲಿ ಒರಿಜನಲ್‌ ವಿಡಿಯೊ ಪೋಸ್ಟ್‌ ಆಗಿದೆ. ಈ ಹಾಡಿಗೆ ಸಖತ್‌ ಆಗಿ ಮ್ಯೂಸಿಕ್‌ ಕಂಪೋಸ್‌ ಮಾಡಿ, ರೀಲ್ಸ್‌ ಶೇರ್‌ ಮಾಡಿದ್ದಾರೆ ವಿಕ್ಕಿಪೀಡಿಯಾ ಟೀಂ. ಇನ್ನು ಈ ಹಾಡು ಭರ್ಜರಿ ವೈರಲ್‌ ಆಗುತ್ತಿದ್ದು, ಅನೇಕರು ಹುಕ್‌ಸ್ಟೆಪ್ಸ್‌ ಹಾಕುತ್ತಿದ್ದಾರೆ. ಮಕ್ಕಳು,ದೊಡ್ಡವರು ಸೇರದಂತೆ ಅನೇಕರು ಈ ಹಾಡಿಗೆ ಹೆಜ್ಜೆ ಹಾಕಿ ಶೇರ್‌ ಮಾಡುತ್ತಿದ್ದಾರೆ. ಜತೆಗೆ ಅವರಲ್ಲಿಯೇ ಪರಿಚಯವಿರುವ ಸಂಜನಾ ಹೆಸರುಗಳಿಗೆ ಟ್ಯಾಗ್‌ ಕೂಡ ಮಾಡುತ್ತಿದ್ದಾರೆ. ಈಗಾಗಲೇ ಭಾರಿ ವೀಕ್ಷಣೆ ಕಂಡಿದೆ ಈ ಹಾಡು.

ಏನಿದು ಹಾಡು?

ನಿಮ್ಮ ಅಮ್ಮನ ಕೈಯಲ್ಲಿ ತಲೆ ಬಾಚಿಸಿಕೊಂಡು
ನಿಮ್ಮ ಅಪ್ಪನ ಕೈಯಲ್ಲಿ ಶೂ ಹಾಕಿಸಿಕೊಂಡು
ನೀನೆ ನಡ್ಕೋಂಡ್‌ ಬರ್ತೀರ
ಅದೇ ಕಣೇ ಟ್ರೆಂಡ್‌
ಸಂಜನಾ..i love you ಸಂಜನಾ

ಇದನ್ನೂ ಓದಿ: Vicky Pedia: ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ: ಫ್ಯಾನ್ಸ್‌ ಫಿದಾ!

ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ಕಂಟೆಂಟ್ ಕ್ರಿಯೇಟರ್. ಭಾಷಣ ಟ್ರಾನ್ಸ್‌ಲೇಟ್‌ ವಿಡಿಯೊ ಅಣಕ ಮಾಡಿ ಇವರು ಸಾಕಷ್ಟು ಫೇಮಸ್ ಆಗಿದ್ದರು. ಚುನಾವಣಾ ಸಮಯದಲ್ಲಿ ರಾಷ್ಟ್ರಮಟ್ಟದ ನಾಯಕರ ಹಿಂದಿ ಭಾಷೆಯ ಭಾಷಣವನ್ನು ಸಖತ್‌ ಆಗಿ ಕಾಮಿಡಿಯಾಗಿ ಅಣುಕಿಸಿದ್ದರು.

ತಮ್ಮ ವಿಭಿನ್ನ ಕಾಮಿಡಿ ವಿಡಿಯೊಗಳಿಂದ ವಿಡಿಯೊ ಕ್ರಿಯೇಟರ್ ವಿಕಾಸ್ ( ವಿಕ್ಕಿ ಪೀಡಿಯಾ) (Vicky Pedia) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚಿನ ʻನಾನು ನಂದಿನಿʼ ಹಾಡಿಗೆ ರೀಲ್ಸ್‌ ಮಾಡಿ ಸಖತ್‌ ಫೇಮಸ್‌ ಆಗಿದ್ದರು. ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ಕಂಟೆಂಟ್ ಕ್ರಿಯೇಟರ್. ವಿಡಿಯೊದಲ್ಲಿ ವಿಕ್ಕಿಪೀಡಿಯಾ ವಿಕ್ಕಿ ಪಿಂಕ್‌ ವಿಗ್‌ ಧರಿಸಿ ಈ ರೀತಿಯ ಕ್ರಿಯೇಟಿವ್‌ ರೀಲ್ಸ್‌ ಹಂಚಿಕೊಳ್ಳುತ್ತಲೇ ಇರುತ್ತಾರೆ.

Continue Reading

Latest

Viral Video: ಸ್ವಾಗತಿಸಲು ಖುಷಿಯಿಂದ ಕಾಯುತ್ತಿದ್ದ ಕಪ್ಪು ವರ್ಣದ ಮಹಿಳೆಗೆ ಜೋ ಬೈಡನ್ ಅವಮಾನ; ನಾಚಿಕೆಯಾಗಬೇಕು ಅಮೆರಿಕಕ್ಕೆ!

Viral Video: ವಿಸ್ಕಾನ್ಸಿನ್‍ನ ಮ್ಯಾಡಿಸನ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಯುಎಸ್ ಅಧ್ಯಕ್ಷ ಜೋ ಬೈಡನ್ ಜನರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಆ ವೇಳೆ ಅಲ್ಲಿ ಇವರಿಗಾಗಿ ಕಾತುರದಿಂದ ಕಾಯುತ್ತಿದ್ದ ಕಪ್ಪು ವರ್ಣದ ಅಮೆರಿಕನ್ ಮಹಿಳೆಯನ್ನು ಅವರು ನಿರ್ಲಕ್ಷ್ಯ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ವಿರುದ್ಧದ ಚರ್ಚೆಯ ನಂತರ ರಿಪಬ್ಲಿಕನ್ನರು ಈ ವಿಡಿಯೊವನ್ನು ಬಳಸಿಕೊಂಡು ಇದೀಗ ಜೋ ಬೈಡನ್ ವಿರುದ್ಧ ವಾಗ್ದಾಳಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ವಿಡಿಯೊ ನೋಡಿದರೆ ಆ ಯುವತಿಯ ಕುರಿತು ಕನಿಕರ ಬರುತ್ತದೆ.

VISTARANEWS.COM


on

Viral Video
Koo

ಕೆಲವೊಂದು ದೇಶಗಳಲ್ಲಿ ಕಪ್ಪು ವರ್ಣದ ಜನರನ್ನು ಕಡೆಗಣಿಸುತ್ತಾರೆ. ಈ ಬಗ್ಗೆ ಅನೇಕರು ಹೋರಾಟ ನಡೆಸಿದರೂ ಕೂಡ ಕಪ್ಪು ಮತ್ತು ಬಿಳಿ ಮನುಷ್ಯರ ನಡುವಿನ ತಾರತಮ್ಯ ನಿಂತಿಲ್ಲ. ಅದರಲ್ಲೂ ಎಲ್ಲರಿಗೂ ಮಾದರಿಯಾಗಬೇಕಾಗಿದ್ದ ದೇಶದ ದೊಡ್ಡ ದೊಡ್ಡ ವ್ಯಕ್ತಿಗಳೇ ಇಂತಹ ತಾರತಮ್ಯ ಮಾಡುತ್ತಿರುವುದು ನಿಜವಾಗಲೂ ಬೇಸರದ ವಿಚಾರವೇ ಸರಿ. ಅಮೆರಿಕದಲ್ಲಂತೂ ಇಂತಹ ಘಟನೆಗಳು ಹೆಚ್ಚು ನಡೆಯುತ್ತಿರುತ್ತದೆ. ಇದೀಗ ಯುಎಸ್ ಅಧ್ಯಕ್ಷ ಜೋ ಬೈಡನ್ ಕಪ್ಪು ವರ್ಣದ ಅಮೆರಿಕನ್ ಮಹಿಳೆಯನ್ನು ನಿರ್ಲಕ್ಷಿಸಿದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್(Viral Video) ಆಗಿದೆ. ಇದು ಚರ್ಚೆಗೆ ಕಾರಣವಾಗಿದೆ.

ವಿಸ್ಕಾನ್ಸಿನ್‍ನ ಮ್ಯಾಡಿಸನ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಯುಎಸ್ ಅಧ್ಯಕ್ಷ ಜೋ ಬೈಡನ್ ಜನರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಆ ವೇಳೆ ಅಲ್ಲಿ ಇವರಿಗಾಗಿ ಕಾತುರದಿಂದ ಕಾಯುತ್ತಿದ್ದ ಕಪ್ಪು ವರ್ಣದ ಅಮೆರಿಕನ್ ಮಹಿಳೆಯನ್ನು ಅವರು ನಿರ್ಲಕ್ಷ್ಯ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ವಿರುದ್ಧದ ಚರ್ಚೆಯ ನಂತರ ರಿಪಬ್ಲಿಕನ್ನರು ಈ ವಿಡಿಯೊವನ್ನು ಬಳಸಿಕೊಂಡು ಇದೀಗ ಜೋ ಬೈಡನ್ ವಿರುದ್ಧ ವಾಗ್ದಾಳಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ವಿಡಿಯೊದಲ್ಲಿ, ಕಪ್ಪು ಅಮೆರಿಕನ್ ಯುವತಿ ಕೈಯಲ್ಲಿ ಬೈಡನ್‌-ಹ್ಯಾರಿಸ್ ಬೋರ್ಡ್‌ ಹಿಡಿದು ಬೈಡನ್ ಅವರನ್ನು ಸ್ವಾಗತಿಸಲು ಆ ಮಹಿಳೆ ಕಾಯುತ್ತಿದ್ದಳು. ಆದರೆ ಯುಎಸ್ ಅಧ್ಯಕ್ಷ ಬೈಡನ್ ಮಹಿಳೆಯನ್ನು ಕಡೆಗಣಿಸಿದ್ದಾರೆ. ಆಕೆಯ ಮೊದಲು ನಿಂತಿದ್ದ ಬಿಳಿ ವರ್ಣದ ಮಹಿಳೆಯರನ್ನು ಹಗ್ ಮಾಡಿದ ಅವರು ಆಕೆಯನ್ನು ಬಿಟ್ಟು ಆಕೆಯ ನಂತರ ನಿಂತ ಬಿಳಿ ವರ್ಣದ ಮತ್ತೊಬ್ಬ ಮಹಿಳೆಯನ್ನು ಹಗ್ ಮಾಡಿದ್ದಾರೆ. ಆಕೆಯನ್ನು ಕಣ್ಣೆತ್ತಿ ನೋಡದ ಅಧ್ಯಕ್ಷರನ್ನು ಕಂಡು ಆಕೆ ಬೇಸರಗೊಂಡಿದ್ದು ಆಕೆಯ ಮುಖದಲ್ಲಿ ಎದ್ದು ಕಾಣುತ್ತಿತ್ತು. ಈ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಕೆ ಅಧ್ಯಕ್ಷರನ್ನು ನೋಡಿದಾಗ ತುಂಬಾ ಖುಷಿಯಾಗಿದ್ದರು ಆದರೆ ಅವಳನ್ನು ಗುರುತಿಸದಿದ್ದಾಗ ನಿರಾಶೆಗೊಂಡರು ಎಂದು ಅದರಲ್ಲಿ ಬರೆಯಲಾಗಿದೆ. ಅಲ್ಲದೇ “ತನ್ನ “ಹೀರೋ ತನ್ನ ಬಣ್ಣದ ಜನರನ್ನು ಇಷ್ಟಪಡುವುದಿಲ್ಲ ಎಂದು ಅವಳು ಅರಿತುಕೊಂಡ ಕ್ಷಣ” ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಎಕ್ಸ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಬೈಡನ್ ಪ್ರಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗಿದೆ. ಯಾಕೆಂದರೆ ಬೈಡನ್ ಅವರನ್ನು ಶ್ವೇತಭವನಕ್ಕೆ ಕರೆದೊಯ್ದ ಕಪ್ಪು ವರ್ಣದ ಮತದಾರ ಬೆಂಬಲ ಕಳೆದುಕೊಳ್ಳುತ್ತಿದ್ದಾರೆ ಎಂದು ಹಲವಾರು ಸಮೀಕ್ಷೆಗಳು ತೋರಿಸಿವೆ. ಅಲ್ಲದೇ ಕೆಲವು ಕಪ್ಪು ಮತದಾರರು, ವಿಶೇಷವಾಗಿ ಯುವಕರ ಆರ್ಥಿಕತೆ ಮತ್ತು ಮತದಾರರ ಹಕ್ಕುಗಳ ಆದ್ಯತೆಗಳನ್ನು ನಿಭಾಯಿಸುವಲ್ಲಿ ಬೈಡನ್ ವಿಫಲರಾಗಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಐಷಾರಾಮಿ ಹೋಟೆಲ್‌ನಲ್ಲಿ ವಾಸ, ಫ್ಲೈಟ್‌ನಲ್ಲಿ ಓಡಾಟ; ಶ್ರೀಮಂತ ಕಳ್ಳನೀಗ ಪೊಲೀಸರ ಬಲೆಗೆ!

“ಟ್ರಂಪ್ ಇದನ್ನು ಪ್ರಚಾರದ ಜಾಹೀರಾತಾಗಿ ನಡೆಸಬೇಕು” ಎಂದು ಕೆಲವರು ಹೇಳಿದ್ದಾರೆ. ಈಗಾಗಲೇ ಜೂನ್‌ನಲ್ಲಿ ಡೆಟ್ರಾಯಿಟ್‍ನ 180 ಚರ್ಚ್‍ನಲ್ಲಿ ಸುಮಾರು 200 ಜನರನ್ನುದ್ದೇಶಿಸಿ ಮಾತನಾಡಿದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಧ್ಯಕ್ಷ ಜೋ ಬೈಡನ್ ಅವರ ಪಾತ್ರವನ್ನು ಟೀಕಿಸುವ ಮೂಲಕ ಕಪ್ಪು ಮತದಾರರನ್ನು ಆಕರ್ಷಿಸಿದರು ಎನ್ನಲಾಗಿದೆ. ಹಾಗಾಗಿ ಅಮೆರಿಕದಲ್ಲಿ ಹೆಚ್ಚಿನ ಬೆಂಬಲ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿದೆ ಎನ್ನಲಾಗಿದೆ.

Continue Reading
Advertisement
France Election
ಪ್ರಮುಖ ಸುದ್ದಿ1 min ago

France Election: ಫ್ರಾನ್ಸ್ ಚುನಾವಣೆ: ಎಡ ಪಕ್ಷಗಳ ಒಕ್ಕೂಟದ ಮೇಲುಗೈ; ಅತಂತ್ರ ಫಲಿತಾಂಶ

Chennai Police commissioner
ಪ್ರಮುಖ ಸುದ್ದಿ4 mins ago

Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

Rohit Sharma
ಕ್ರೀಡೆ5 mins ago

Rohit Sharma: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡ ರೋಹಿತ್​

Karnataka Rain Effect
ಮಳೆ6 mins ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Kalki 2898 AD box office thrashes 'PK' record
ಟಾಲಿವುಡ್13 mins ago

Kalki 2898 AD: ‘ಪಿಕೆ’, ʻಗದರ್‌ʼ ಸಿನಿಮಾಗಳ ದಾಖಲೆ ಮುರಿದ ʻಕಲ್ಕಿ 2898 ಎಡಿʼ!

Cm Siddaramaiah in Janatha Darshan
ಪ್ರಮುಖ ಸುದ್ದಿ22 mins ago

CM Siddaramaiah: ಆಗಸ್ಟ್‌ನಲ್ಲಿ ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ

Indecent behaviour
ಕರ್ನಾಟಕ26 mins ago

Indecent Behaviour: ಕಾಲೇಜು ಯುವತಿಯವರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್‌ ಆಗಿದ್ದವ ಪೊಲೀಸ್‌ ವಶಕ್ಕೆ

Hasin Jahan: Divorced wife who scolded Shami unnecessarily as 'pack of dogs'; The video is viral
ಕ್ರೀಡೆ33 mins ago

Hasin Jahan: ‘ನಾಯಿಗಳ ದಂಡು’… ಎಂದು ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ವಿಚ್ಛೇದಿತ ಪತ್ನಿ?; ವಿಡಿಯೊ ವೈರಲ್​

Kamala Harris
ವಿದೇಶ34 mins ago

Kamala Harris: ಅಮೆರಿಕ ಚುನಾವಣೆ; ಟ್ರಂಪ್‌ಗೆ ಪೈಪೋಟಿ ನೀಡಲು ಬೈಡನ್‌ಗಿಂತ ಕಮಲಾ ಹ್ಯಾರಿಸ್‌ ಸಮರ್ಥ ಎನ್ನುತ್ತವೆ ಸಮೀಕ್ಷೆ!

ತುಮಕೂರು1 hour ago

Koratagere News: ವೀರಶೈವ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain Effect
ಮಳೆ6 mins ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ3 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ19 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ22 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ23 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

ಟ್ರೆಂಡಿಂಗ್‌