Lagaan Movie | ಲಗಾನ್‌ಗೆ 21 ವರ್ಷ, ಮತ್ತೆ ಸೇರಿದ ಆಮೀರ್ ಟೀಮ್ - Vistara News

ಪ್ರಮುಖ ಸುದ್ದಿ

Lagaan Movie | ಲಗಾನ್‌ಗೆ 21 ವರ್ಷ, ಮತ್ತೆ ಸೇರಿದ ಆಮೀರ್ ಟೀಮ್

Lagaan Movie ಬಂದು ಇದೀಗ 21 ವರ್ಷ. ಲಗಾನ್‌ ಚಿತ್ರ ತಂಡ ಮತ್ತೆಒಂದಾಗಿ ಸೇರಿ ಚಿತ್ರೀಕರಣದ ನೆನಪುಗಳನ್ನು, ಖುಷಿಯನ್ನು ಹಂಚಿಕೊಂಡಿದೆ.

VISTARANEWS.COM


on

Lagaan Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಾಲಿವುಡ್‌ ಸ್ಟಾರ್‌ ಆಮೀರ್‌ ಖಾನ್‌ ಅವರ ʼಲಗಾನ್‌ʼ ಸಿನಿಮಾ (Lagaan Movie) ಬಿಡುಗಡೆಯಾಗಿ 21 ವರ್ಷಗಳು ಕಳೆದಿವೆ. ಆಮೀರ್‌ ಖಾನ್‌ ವೃತ್ತಿ ಬದುಕನ್ನೇ ಬದಲಿಸಿದ ಅಪರೂಪದ ಚಿತ್ರ ಲಗಾನ್‌.

2001ರ ಜೂನ್‌ 15ರಂದು ಅಶುತೋಷ್‌ ಗೋವಾರಿಕರ್‌ ನಿರ್ದೇಶನದ ಈ ಚಿತ್ರ ತೆರೆಗೆ ಬಂದಿತ್ತು. ರಾಷ್ಟ್ರ ಮಟ್ಟದಲ್ಲಿ ಅತ್ಯಂತ ಕೀರ್ತಿಗೆ ಪಾತ್ರವಾದ ಲಗಾನ್‌ ಸಿನಿಮಾ ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗೂ ಶಾರ್ಟ್‌ಲಿಸ್ಟ್‌ ಮೂಲಕ ಸೆಲೆಕ್ಟ್‌ ಆಗಿತ್ತು. ಈ ಸಿನಿಮಾದಲ್ಲಿ ಆಮೀರ್‌ ಖಾನ್‌ ಜತೆ ಗ್ರೇಸಿ ಸಿಂಗ್ ಮತ್ತು ವಿದೇಶಿ ನಟಿ ರಾಚೆಲ್ ಸಹ ಅಭಿನಯಿಸಿದ್ದಾರೆ.

ಆಮೀರ್‌ ಮತ್ತು ತಂಡದ ಇತರರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಚಿತ್ರದ ನೆನಪುಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಇದರ ಯಶಸ್ಸಿಗೆ ತಮ್ಮ ಮಾಜಿ ಪತ್ನಿ ರೀನಾ ದತ್ ಸಹ ಕಾರಣ ಎಂದು ಕೂಡ ಆಮೀರ್‌ ಬರೆದುಕೊಂಡಿದ್ದಾರೆ. ಈ ಪೋಸ್ಟ್ ನೋಡಿ ಹಲವರು ಬಾಲಿವುಡ್ ಸ್ಟಾರ್ಸ್ ಕಂಗ್ರಾಟ್ಸ್ ಹೇಳುತ್ತಿದ್ದಾರೆ.

ಬ್ರಿಟಿಷ್‌ ದಬ್ಬಾಳಿಕೆಯ ವಿರುದ್ಧ ಸ್ಥಳೀಯ ಗ್ರಾಮಸ್ಥರು ಸೆಟೆದು ನಿಲ್ಲುವ ಕಥಾ ಹಂದರವನ್ನು ಲಗಾನ್‌ ಹೊಂದಿದೆ. ಕ್ರಿಕೆಟ್‌ ಆಟ ಇಲ್ಲಿ ಕೇಂದ್ರ ಸ್ಥಾನದಲ್ಲಿದೆ. ಲಗಾನ್‌ ಮೇಕಿಂಗ್‌ಅನ್ನು ʼಮ್ಯಾಡ್ನೆಸ್‌ ಇನ್‌ ದ ಡೆಸರ್ಟ್‌ʼ (Madness In The Desert)-The story of making “Lagaan ಎಂಬ ಎರಡೂವರೆ ಗಂಟೆಗಳ ಸಾಕ್ಷ್ಯ ಚಿತ್ರದಲ್ಲಿ ವಿವರಿಸಲಾಗಿದೆ. ಅದರಲ್ಲಿ ಲಗಾನ್‌ ಸಿನಿಮಾದ ಚಿತ್ರೀಕರಣ ಕುರಿತು ಸಾಕಷ್ಟು ಮಾಹಿತಿ ನೀಡಿದೆ.

ಇದನ್ನೂ ಓದಿ | Made In China Film | ಕನ್ನಡದ ಮೊದಲ ವರ್ಚುವಲ್‌ ಕತೆಯ ಸಿನಿಮಾ ಜೂನ್‌ 17ಕ್ಕೆ ತೆರೆಗೆ

10,000 ಜನರೊಂದಿಗೆ ಲಗಾನ್‌ ಕ್ಲೈಮ್ಯಾಕ್ಸ್‌ ಚಿತ್ರೀಕರಣ

ಹಳ್ಳಿಗರು ಮತ್ತು ಬ್ರಿಟಿಷರ ನಡುವಿನ ಮ್ಯಾಚ್‌ನಲ್ಲಿ ಸಾಕಷ್ಟು ಜನ ಸಮೂಹದ ದೃಶ್ಯ ತೆಗೆಯಬೇಕಿತ್ತು. ಆ ಸಂದರ್ಭದಲ್ಲಿ ಚಿತ್ರತಂಡ ಅಲ್ಲಿಯೇ ನೆರೆದಿರುವ ಹಳ್ಳಿಗರನ್ನು ಕರೆಯಿಸಿ ಚಿತ್ರೀಕರಣ ಮಾಡಿತ್ತು. ಅವರಿಗೆ ಕಾಸ್ಟ್ಯೂಮ್‌ ಮತ್ತು ಆಹಾರದ ವ್ಯವಸ್ಥೆ ನೀಡುವುದು ಸವಾಲಾಗಿತ್ತು. ಶೂಟಿಂಗ್‌ ವೇಳೆ ಎಲ್ಲರನ್ನೂ ಹುರಿದುಂಬಿಸಲು ʼಆತಿ ಕ್ಯಾ ಖಂಡಾಲಾʼ ಹಾಡನ್ನು ಹಾಡಿ, ಪ್ರೇರೇಪಿಸಿ ಜನರನ್ನು ಆಮೀರ್‌ ಹುರಿದುಂಬಿಸುತ್ತಿದ್ದರು. ನಿರ್ದೇಶಕರು ಇದಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಸೆರೆ ಹಿಡಿದಿದ್ದಾರೆ. ಅದನ್ನು ಚಿತ್ರದಲ್ಲಿಯೂ ಕೂಡ ಬಳಸಿಕೊಂಡಿರುವುದು ಇನ್ನೂ ವಿಶೇಷ.

ಡೈರೆಕ್ಟರ್‌ಗೆ ಒಂದು ತಿಂಗಳು ಬೆಡ್‌ ರೆಸ್ಟ್‌

ಶೂಟಿಂಗ್‌ ಮದ್ಯೆ ಅಶುತೋಷ್ ಅವರಿಗೆ ಬೆನ್ನುನೋವು ಉಂಟಾಗಿತ್ತು. ಅದು ಅವರನ್ನು ಪೂರ್ಣ ತಿಂಗಳು ಬೆಡ್ ರೆಸ್ಟ್‌ನಲ್ಲಿ ಇರಿಸಿತ್ತು. ನಿಗದಿತ ಸಮಯಕ್ಕೂ ಹೆಚ್ಚು ದಿನ ಶೂಟಿಂಗ್‌ ಆಗಿರುದ್ದರಿಂದ ಬಜೆಟ್‌ಗೂ ಮೀರಿ ಚಿತ್ರೀಕರಣ ವೆಚ್ಚ ಆಗಿತ್ತು. ಈ ಸಂದರ್ಭದಲ್ಲಿ ನಿರ್ದೇಶಕರು ಮಲಗಿಕೊಂಡೇ ಮಾನಿಟರ್‌ ಮೂಲಕ ಚಿತ್ರವನ್ನು ನೋಡಿ ಚಿತ್ರೀಕರಣ ಮುಂದುವರೆಸಿದರು.

ಹಿಂದಿಯಲ್ಲಿ ರಾಚೆಲ್‌ ಶೆಲ್ಲಿ ಮತ್ತು ಪಾಲ್‌ ಬ್ಲ್ಯಾಕ್‌ಥಾರ್ನರ್‌ ಪ್ರಯತ್ನ

ಎಲಿಜಬೆತ್ ಪಾತ್ರದಲ್ಲಿ ನಟಿಸಿದ ಬ್ರಿಟಿಷ್ ನಟರಾದ ರಾಚೆಲ್ ಶೆಲ್ಲಿ ಮತ್ತು ಕ್ಯಾಪ್ಟನ್ ರಸೆಲ್ ಪಾತ್ರದಲ್ಲಿ ನಟಿಸಿದ ಪಾಲ್ ಬ್ಲ್ಯಾಕ್‌ಥಾರ್ನ್ ಅವರು ತಮ್ಮ ಹೆಚ್ಚಿನ ಸಂಭಾಷಣೆಗಳನ್ನು ಹಿಂದಿಯಲ್ಲಿ ಹೊಂದಿದ್ದರು. ಆದರೆ ಅವರಿಗೆ ಹಿಂದಿ ಭಾಷೆಯ ಪದ ಸವಾಲ್‌ ಆಗಿತ್ತು. ಅವರಿಗೆ ಬಾಷೆಯಲ್ಲಿ ಹಿಡಿತ ಬರಲು ಚಿತ್ರತಂಡ ಲಂಡನ್‌ನಲ್ಲಿ ಹಿಂದಿ ಟ್ಯೂಟರ್‌ ನೇಮಿಸಿದ್ದರು. ತಿಂಗಳುಗಳ ಕಾಲ ಹಿಂದಿ ಕಲಿತಿದ್ದರು. ತಮ್ಮ ಪಾತ್ರದ ಡೈಲಾಗ್‌ಗಳಿಗಿಂತಲೂ ಹೆಚ್ಚು ಹಿಂದಿಯನ್ನು ಕಲಿತಿರುವುದಾಗಿ ನಟಿ ಹೇಳಿಕೊಂಡಿದ್ದರು.

ಸಹಾಯಕ ನಿರ್ದೇಶಕರಿಂದಲೂ ನಟನೆ

ನಿರ್ದೇಶಕ ಅಶುತೋಷ್ ಗೋವಾರಿಕರ್ ಅವರು ತಂಡದ ಕ್ಯಾಪ್ಟನ್ ಆಗಿದ್ದರು. ಇವರ ಜತೆ ಸಹಾಯಕ ನಿರ್ದೇಶಕರಾಗಿ ರೀಮಾ ಕಾಗ್ತಿ, ಕಿರಣ್ ರಾವ್ ಮತ್ತು ಅಪೂರ್ವ ಲಖಿಯಾ ಕೊಡುಗೆ ನೀಡಿದ್ದಾರೆ. ಇದರಲ್ಲಿನ ಮೂವರು ಸಹಾಯಕ ನಿರ್ದೇಶಕರು ಈ ಚಿತ್ರದ ನಂತರ ತಮ್ಮ ವೃತ್ತಿಜೀವನದಲ್ಲಿ ಹೆಸರಾಂತ ನಿರ್ದೇಶಕರಾದರು.

ರೀಮಾ ಕಾಗ್ತಿ ʼತಲಾಶ್ʼ, ʼಗೋಲ್ಡ್ʼ ಮತ್ತು ʼಹನಿಮೂನ್ ಟ್ರಾವೆಲ್ಸ್ ಪ್ರೈವೇಟ್ ಲಿಮಿಟೆಡ್‌ʼನಂತಹ ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಹಾಲಿವುಡ್ ಅನುಭವದ ಕಾರಣದಿಂದ ಅಪೂರ್ವ ಲಖಿಯಾ, ಶೂಟೌಟ್ ಅಟ್ ಲೋಖಂಡ್‌ವಾಲಾ, ಮಿಷನ್ ಇಸ್ತಾಂಬುಲ್ ಮತ್ತು ಇತ್ತೀಚಿನ ವೆಬ್ ಸೀರೀಸ್ ಕ್ರಾಕ್‌ಡೌನ್‌ಗಳನ್ನು ನಿರ್ದೇಶಿಸಿದರು. ಕಿರಣ್ ರಾವ್ ಅವರು 2011ರ ‌ʼಧೋಬಿ ಘಾಟ್ʼ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ | ಪಾರ್ಕ್ ಹೋಟೆಲ್‌ನಲ್ಲಿ ಡ್ರಗ್ಸ್‌ ಪಾರ್ಟಿ, ಬಾಲಿವುಡ್‌ ನಟ ಸಿದ್ಧಾಂತ್‌ ಕಪೂರ್‌ ವಶಕ್ಕೆ

ಭುಜ್‌ನ ಅಪಾರ್ಟ್‌ಮೆಂಟ್‌ನಲ್ಲಿ ಚಿತ್ರತಂಡ ವಸತಿ

ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿ ಭುಜ್‌ನಲ್ಲಿ ನೆಲೆಸಬೇಕಾಗಿತ್ತು. ಆದರೆ ಇಡೀ ಸಿಟಿಯಲ್ಲಿ ಮೂರೇ ಹೋಟೆಲ್‌ ಇದ್ದ ಕಾರಣ ರೂಮ್‌ ಸಿಕ್ಕಿರಲಿಲ್ಲ. ಆದ್ದರಿಂದ, ನಿರ್ಮಾಣ ತಂಡವು ಇಡೀ ಅಪಾರ್ಟ್‌ಮೆಂಟನ್ನೇ ಬಾಡಿಗೆಗೆ ಪಡೆದುಕೊಂಡಿತು. ತಂಡದ ಸೌಕರ್ಯಕ್ಕಾಗಿ ಏರ್ ಕಂಡಿಷನರ್ ಮತ್ತು ಗೀಸರ್‌ಗಳನ್ನು ನೀಡಿ ವ್ಯವಸ್ಥೆ ಕಲ್ಪಿಸಿತ್ತು. ತಂಡ ಆರು ತಿಂಗಳ ಕಾಲ ಅಲ್ಲಿಯೇ ನೆಲೆಸಿ ಚಿತ್ರೀಕರಣ ಪೂರ್ಣ ಮಾಡಿತು.

ಸೆಟ್‌ನಲ್ಲಿ ಕಟ್ಟುನಿಟ್ಟಾದ ಶಿಸ್ತು

ಚಿತ್ರ ಶೂಟ್‌ ನಡೆಯಬೇಕಾದರೆ ಬೆಳಗ್ಗೆ 5 ಗಂಟೆಗೆ ತಮ್ಮ ಅಪಾರ್ಟ್‌ಮೆಂಟ್‌ನಿಂದ ಬಸ್‌ನಲ್ಲಿ ತಂಡ ತೆರಳಬೇಕಾಗಿತ್ತು. ನಿರ್ಮಾಪಕರು ಕೂಡ ಕಟ್ಟುನಿಟ್ಟಾಗಿದ್ದರೆಂದು ಈ ಬಗ್ಗೆ ಸ್ವತಃ ಅಮೀರ್‌ ಖಾನ್‌ ಹೇಳಿಕೊಂಡಿದ್ದಾರೆ. ಒಮ್ಮೆ ಅಮೀರ್‌ ಖಾನ್‌ ಸೆಟ್‌ಗೆ ತಡವಾಗಿ ಬಂದಿದಕ್ಕೆ ಸಿಬ್ಬಂದಿ ಮುಂದೆ ತಪ್ಪಿತಸ್ಥನಾಗಿ ಕಾಣುವಂತೆ ಅನ್ನಿಸಿತ್ತು ಎಂದು ಹೇಳಿಕೊಂಡಿದ್ದರು.

ಇದೀಗ ಲಗಾನ್‌ ಟೀಮ್‌ ಮತ್ತೆ ಭೇಟಿ ಆಗಿದೆ. ರೀಮಾ ಕುರಿತಾಗಿ ಸಂತಸವನ್ನು ಪೋಸ್ಟ್‌ ಮೂಲಕ ಶೇರ್‌ ಮಾಡಿಕೊಂಡಿದ್ದಾರೆ ಅಮೀರ್. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಮೀರ್‌ ಖಾನ್‌ ‘ಸಾಮಾನ್ಯವಾಗಿ ರೀನಾ ಸಿನಿಮಾಗಳಿಂದ ದೂರವೇ ಇರುತ್ತಾರೆ. ಅವರಿಗೆ ಚಿತ್ರರಂಗದಲ್ಲಿ ಅಷ್ಟೇನೂ ಆಸಕ್ತಿ ಇರಲಿಲ್ಲ. ಸಿನಿಮಾ ಬಗ್ಗೆ ಏನೂ ಗೊತ್ತಿರಲಿಲ್ಲ. ಆದರೂ, ಕೊಟ್ಟಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದರು. ಈ ಗೆಲುವಿನ ಪಾಲಲ್ಲಿ ಅವರದ್ದೂ ಪಾಲು ಇದೆʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ | Brahmastra trailer ಔಟ್‌, ಕೊನೆಗಾದರೂ ಬಾಲಿವುಡ್‌ನಿಂದ ಒಂದು ಪ್ಯಾನ್‌ ಇಂಡಿಯಾ ಚಿತ್ರ ಬರಲಿದೆಯಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for April 30 2024
Koo

ಚಂದ್ರನು ಮಂಗಳವಾರ ಬೆಳಗ್ಗೆ 11.29ಕ್ಕೆ ಕುಂಭ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ ಹಾಗೂ ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರಿಗೆ ಉತ್ಸಾಹ ತುಂಬಿದ ವಾತಾವರಣ ಸಿಗಲಿದೆ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿರಲಿದೆ. ಸಿಂಹ ರಾಶಿಯವರು ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ. ಮಾತಿನಲ್ಲಿ ಆದಷ್ಟು ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಷಷ್ಠಿ 07:04 ವಾರ: ಮಂಗಳವಾರ
ನಕ್ಷತ್ರ: ಉತ್ತರಾಷಾಡ 28:08 ಯೋಗ: ಸಾಧ್ಯ 22:22
ಕರಣ: ವಣಿಜ 07:04 ಅಮೃತಕಾಲ: ರಾತ್ರಿ 09:54 ರಿಂದ 11:28

ಸೂರ್ಯೋದಯ : 05:59   ಸೂರ್ಯಾಸ್ತ : 06:34

ರಾಹುಕಾಲ : ಸಂಜೆ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ
12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರವನ್ನು ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಬಗ್ಗೆ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ ನಿಮ್ಮದಾಗಲಿದೆ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಹೆಚ್ಚಿದೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ. ಮಾತಿನಲ್ಲಿ ಆದಷ್ಟು ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಹಾಗೂ ನಿಮ್ಮ ಕೆಲಸಗಳಿಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ ಇದಾಗಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸದೃಢರಾಗುವಿರಿ. ಕೌಟುಂಬಿಕವಾಗಿ ಶುಭ ಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಹೆಚ್ಚಿದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಹೆಚ್ಚಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಹಳೆಯ ಸ್ನೇಹಿತರು ಭೇಟಿಯಾಗಲಿದ್ದು, ಅವರೊಂದಿಗೆ ಆತ್ಮೀಯ ಮಾತುಕತೆ ನಡೆಸಲಿದ್ದೀರಿ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ, ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಪಡೆಯುವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ಉಂಟಾಗಲಿದೆ. ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನೂ ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ವಿದೇಶ

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Pakistan Inflation: ಹಣದುಬ್ಬರದಿಂದ ಪಾಕಿಸ್ತಾಣವು ತತ್ತರಿಸಿ ಹೋಗಿದೆ. ಒಂದೆಡೆ, ಪಾಕಿಸ್ತಾನಕ್ಕೆ ಬೇರೆ ದೇಶಗಳಿಂದ, ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ಹಣಕಾಸು ನೆರವು ಸಿಗುತ್ತಿಲ್ಲ. ಇನ್ನೊಂದೆಡೆ, ಹಣದುಬ್ಬರ ನಿಯಂತ್ರಣ ಮಾಡಲು ಆಗುತ್ತಿಲ್ಲ. ಹಾಗಾಗಿ, ಪಾಕಿಸ್ತಾನದ ನಾಗರಿಕರು ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಪಾವತಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಹಣದುಬ್ಬರ ಏರಿಕೆಯು ಅವರ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ.

VISTARANEWS.COM


on

Pakistan Inflation
Koo

ಇಸ್ಲಾಮಾಬಾದ್:‌ ಉಗ್ರರ ಪೋಷಣೆ, ಅವರಿಗೆ ಹಣಕಾಸು ನೆರವು, ಅಸಮರ್ಥ ನಾಯಕತ್ವ, ಕೊರೊನಾ ಬಿಕ್ಕಟ್ಟು ಸೇರಿ ಹಲವು ಕಾರಣಗಳಿಂದ ಪಾಕಿಸ್ತಾನವು (Pakistan) ದಿವಾಳಿಯಾಗಿದೆ. ಇದೇ ಕಾರಣಕ್ಕಾಗಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ಎದುರು ಹಣಕ್ಕಾಗಿ ಭಿಕ್ಷಾ ಪಾತ್ರೆ ಹಿಡಿದು ನಿಂತಿದೆ. ಇನ್ನು, ಹಣದುಬ್ಬರದ ಏರಿಕೆಯಿಂದಾಗಿ (Pakistan Inflation) ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆಯು ದಿನೇದಿನೆ ಜಾಸ್ತಿಯಾಗುತ್ತಿದ್ದು, ಜನ ಹೈರಾಣಾಗುತ್ತಿದ್ದಾರೆ. ಹೌದು, ಒಂದು ಲೀಟರ್‌ ಪೆಟ್ರೋಲ್‌ಗೆ 290 ರೂ. (ಪಾಕಿಸ್ತಾನದ ರೂಪಾಯಿ) ಆದರೆ, ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಕೊಡಬೇಕಾಗಿದೆ. ಇದರಿಂದಾಗಿ ಪಾಕಿಸ್ತಾನದ ನಾಗರಿಕರು ತತ್ತರಿಸಿ ಹೋಗಿದ್ದಾರೆ.

“ಪಾಕಿಸ್ತಾನದ ಸರ್ಕಾರವು ಸಾಮಾನ್ಯ ಜನರ ಅಗತ್ಯಗಳನ್ನು ಪೂರೈಸುವಲ್ಲಿ ವಿಫಲವಾಗಿದೆ. ಇದರಿಂದಾಗಿಯೇ ದಿನೇದಿನೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಈಗ ಗೋಧಿ ಕಟಾವು ಮಾಡುವ ಸೀಸನ್.‌ ಹೀಗಿದ್ದರೂ, ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಕೊಡಬೇಕಾಗಿದೆ. ಇನ್ನು, ಒಂದು ರೊಟ್ಟಿಗೆ 25 ರೂ. ನೀಡಬೇಕಾಗಿದೆ. ಇದರಿಂದಾಗಿ ಸಾಮಾನ್ಯ ಜನ ಮೂರು ಹೊತ್ತು ಊಟ ಮಾಡಲು ಕೂಡ ತೊಂದರೆಯಾಗುತ್ತಿದೆ. ಇದಕ್ಕೂ ಮೊದಲು ಒಂದು ಕೆ.ಜಿ ಹಿಟ್ಟಿಗೆ 230 ರೂ. ಇತ್ತು” ಎಂದು ಕರಾಚಿಯಲ್ಲಿ ದಿನಸಿ ಅಂಗಡಿ ಇಟ್ಟಿರುವ ಅಬ್ದುಲ್‌ ಹಮೀದ್‌ ಎಂಬುವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪ್ರಾಥಮಿಕ ಶಾಲೆ ಶಿಕ್ಷಕರಾಗಿರುವ ಅಬ್ದುಲ್‌ ಜಬ್ಬರ್‌ ಅವರು ಕೂಡ ಸಂಕಷ್ಟದ ಕುರಿತು ಮಾಹಿತಿ ನೀಡಿದ್ದಾರೆ. “ದಿನಕ್ಕೆ 16 ಗಂಟೆ ಲೋಡ್‌ ಶೆಡ್ಡಿಂಗ್‌ ಇರುತ್ತದೆ. ಆದರೂ, ಮಾಸಾಂತ್ಯಕ್ಕೆ ಹೆಚ್ಚಿನ ವಿದ್ಯುತ್‌ ಬಿಲ್‌ ಪಾವತಿಸಬೇಕು. ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಆದರೆ, ನಿತ್ಯ 500 ರೂ. ದುಡಿಯುವವರ ಪಾಡೇನು? ಅಡುಗೆ ಅನಿಲದ ಸಿಲಿಂಡರ್‌ ಬೆಲೆಯೂ ಗಗನಕ್ಕೇರಿದೆ. ಇದರಿಂದ ಜನರ ಜೀವನ ದುಸ್ಥರವಾಗಿದೆ” ಎಂದು ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಹೀಗಿದೆ

ಒಂದು ಲೀಟರ್‌ ಹಾಲಿಗೆ 212 ರೂ., ಕೆ.ಜಿ ಅಕ್ಕಿಗೆ 330 ರೂ., ಒಂದು ಕೆ.ಜಿ ಸೇಬಿಗೆ 300 ರೂ., ಒಂದು ಕೆ.ಜಿ ಟೊಮ್ಯಾಟೊಗೆ 125 ರೂ., ಒಂದು ಕೆ.ಜಿ ಈರುಳ್ಳಿ 125 ರೂ., ಒಂದು ಲೀಟರ್‌ ಪೆಟ್ರೋಲ್‌ಗೆ 290 ರೂ. ಇದೆ. ದಿನೇದಿನೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇರುವುದು ಪಾಕಿಸ್ತಾನದ ನಾಗರಿಕರನ್ನು ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ನಂತರದ ದುಸ್ಥಿತಿ ಹೀಗೆಯೇ ಮುಂದುವರಿದಿರುವುದು ಅವರನ್ನು ಆತಂಕಕ್ಕೆ ದೂಡಿದೆ.

ಐಎಂಎಫ್‌ ಹಣವೂ ಸಿಗುತ್ತಿಲ್ಲ

ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯಲು ಹೆಣಗಾಡುತ್ತಿದೆ. ಈಗಾಗಲೇ ಐಎಂಎಫ್‌ 1.10 ಶತಕೋಟಿ ಡಾಲರ್‌ ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಆದರೆ, ಮುಂದಿನ ಮೂರು ವರ್ಷಗಳವರೆಗೆ 6 ಶತಕೋಟಿ ಡಾಲರ್‌ ಸಾಲ ನೀಡಿ ಎಂಬುದಾಗಿ ಪಾಕಿಸ್ತಾನ ಮನವಿ ಮಾಡುತ್ತಿದೆ. ಆದರೆ, ಪಾಕ್‌ನಲ್ಲಿ ದಿನೇದಿನೆ ಹಣದುಬ್ಬರದ ಏರಿಕೆಯಾಗುತ್ತಿರುವ ಕಾರಣ ಸಾಲ ನೀಡಲು ಐಎಂಎಫ್‌ ಹಿಂದೇಟು ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

Continue Reading

ದೇಶ

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

Justin Trudeau: ಕೆನಡಾದಲ್ಲಿ ಭಾನುವಾರ ನಡೆದ ಸಿಖ್‌ ಸಮುದಾಯದ ಕಾರ್ಯಕ್ರಮದಲ್ಲಿ ಪ್ರಧಾನಿ ಜಸ್ಟಿನ್‌ ಟ್ರುಡೋ ಮಾತನಾಡುವಾಗ ಖಲಿಸ್ತಾನ ಪರವಾಗಿ ಘೋಷಣೆ ಕೂಗಲಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಭಾರತ ಸರ್ಕಾರವು ಕೆನಡಾ ಡೆಪ್ಯುಟಿ ಹೈ ಕಮಿಷನರ್‌ಗೆ ಸಮನ್ಸ್‌ ನೀಡಿದೆ.

VISTARANEWS.COM


on

Justin Trudeau
Koo

ಒಟ್ಟಾವ: ಕೆನಡಾದ ಟೊರೊಂಟೊದಲ್ಲಿ ಭಾನುವಾರ (ಏಪ್ರಿಲ್‌ 28) ಸಿಖ್​ ಸಮುದಾಯದವರು ಆಯೋಜಿಸಿದ್ದ ಖಾಲ್ಸಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಅವರು ಭಾಷಣ ಮಾಡುವ ವೇಳೆ ಖಲಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆ (Pro Khalistan Slogan) ಕೂಗಿರುವುದಕ್ಕೆ ಭಾರತ (India Canada Row) ಅಸಮಾಧಾನ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದ ಡೆಪ್ಯುಟಿ ಹೈ ಕಮಿಷನರ್‌ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಮನ್ಸ್‌ ಜಾರಿ ಮಾಡಿದೆ.

“ಜಸ್ಟಿನ್‌ ಟ್ರುಡೋ ಅವರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ ಕೂಗಿರುವುದು ಆತಂಕಕಾರಿಯಾಗಿದೆ. ಇದರ ಕುರಿತು ಭಾರತ ಕಳವಳ ವ್ಯಕ್ತಪಡಿಸುತ್ತದೆ. ಪ್ರಧಾನಿ ಕಾರ್ಯಕ್ರಮದಲ್ಲಿಯೇ ಇಂತಹ ಅಪಸವ್ಯಗಳು ನಡೆದಿರುವುದು ನಿಜಕ್ಕೂ ಗಂಭೀರ ಪ್ರಕರಣವಾಗಿದೆ. ಇಂತಹ ಪ್ರಕರಣಗಳಿಂದ ಕೆನಡಾದ ರಾಜಕೀಯ ವ್ಯವಸ್ಥೆಯಲ್ಲಿ ಪ್ರತ್ಯೇಕವಾದ, ತೀವ್ರವಾದ ಹಾಗೂ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ” ಎಂದು ಸಮನ್ಸ್‌ನಲ್ಲಿ ಭಾರತ ಅಸಮಾಧಾನ ವ್ಯಕ್ತಪಡಿಸಿದೆ.

“ಖಲಿಸ್ತಾನ ಪರ ಘೋಷಣೆಗಳನ್ನು ಕೂಗುವುದು ಭಾರತ ಹಾಗೂ ಕೆನಡಾ ಸಂಬಂಧದ ಮೇಲೆ ಪರಿಣಾಮ ಬೀರುವ ಜತೆಗೆ ಕೆನಡಾದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ. ಕೆನಡಾದಲ್ಲಿ ಹಿಂಸಾತ್ಮಕ ವಾತಾವರಣ ನಿರ್ಮಿಸಲು ಪ್ರೋತ್ಸಾಹ ಕೊಟ್ಟಂತಾಗುತ್ತದೆ” ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ. ಇದಕ್ಕೂ ಮೊದಲು, ಜಸ್ಟಿನ್‌ ಟ್ರುಡೋ ಅವರು ಜಿ-20 ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಬಂದಾಗ, “ಕೆನಡಾದಲ್ಲಿ ಖಲಿಸ್ತಾನಿಗಳನ್ನು ನಿಗ್ರಹಿಸಿ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದರು. ಇದರಿಂದಾಗಿ ಕೆನಡಾ ಮುನಿಸಿಕೊಂಡಿದ್ದು, ಎರಡೂ ದೇಶಗಳ ಮಧ್ಯೆ ಬಿಕ್ಕಟ್ಟು ಸೃಷ್ಟಿಯಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಜಸ್ಟಿನ್‌ ಟ್ರುಡೋ, ಕೆನಡಾ ದೇಶಾದ್ಯಂತ ಸಿಖ್ ಪರಂಪರೆಯ ಸುಮಾರು 800,000 ಕೆನಡಿಯನ್ನರಿಗೆ, ನಿಮ್ಮ ಹಕ್ಕುಗಳು ಮತ್ತು ನಿಮ್ಮ ಸ್ವಾತಂತ್ರ್ಯಗಳನ್ನು ರಕ್ಷಿಸಲು ನಾವು ಯಾವಾಗಲೂ ಇರುತ್ತೇವೆ. ದ್ವೇಷ ಮತ್ತು ತಾರತಮ್ಯದ ವಿರುದ್ಧ ನಿಮ್ಮ ಸಮುದಾಯವನ್ನು ನಾವು ಯಾವಾಗಲೂ ರಕ್ಷಿಸುತ್ತೇವೆ ಎಂದು ಟ್ರುಡೊ ಹೇಳಿದರು. ಸಮುದಾಯ ಕೇಂದ್ರಗಳು ಮತ್ತು ಗುರುದ್ವಾರಗಳಂತಹ ಪೂಜಾ ಸ್ಥಳಗಳಿಗೆ ಹೆಚ್ಚಿನ ಭದ್ರತೆಯನ್ನು ನೀಡಲಾಗುತ್ತದೆ. ಭದ್ರತೆ ಮತ್ತು ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ ಎಂದು ಕೆನಡಾದ ಪ್ರಧಾನಿ ಉಲ್ಲೇಖಿಸಿದರು.

ನಿಮ್ಮ ಧರ್ಮವನ್ನು ಮುಕ್ತವಾಗಿ ಮತ್ತು ಬೆದರಿಕೆಯಿಲ್ಲದೆ ಆಚರಿಸುವ ನಿಮ್ಮ ಹಕ್ಕು ಕೆನಡಾದಲ್ಲಿ ಖಾತ್ರಿಯಿದೆ. ನಿಮ್ಮ ಮೂಲಭೂತ ಹಕ್ಕುಗಳನ್ನು ನಾವು ರಕ್ಷಿಸುತ್ತೇವೆ. ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ಹ್ಯಾಪಿ ಬೈಸಾಖಿ! ವಹೇಗುರು ಜಿ ಕಾ ಖಾಲ್ಸಾ ವಹೇಗುರು ಜಿ ಕಿ ಫತೇಹ್” ಎಂದು ಟ್ರುಡೋ ಹೇಳಿದ್ದಾರೆ.

ಇದನ್ನೂ ಓದಿ: Student Death: ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

Continue Reading

ಕ್ರೀಡೆ

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

KKR vs DC: ಚೇಸಿಂಗ್​ ವೇಳೆ ಫಿಲ್​ ಸಾಲ್ಟ್​ 17 ರನ್​ ಗಳಿಸಿದ್ದ ವೇಳೆ ಖಲೀಲ್​ ಅಹ್ಮದ್​ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲಿ ಲಿಜಾಡ್ ವಿಲಿಯಮ್ಸ್ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದರು. ಇದರ ಸಂಪೂರ್ಣ ಲಾಭವೆತ್ತಿದ ಸಾಲ್ಟ್​ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ವಿಲಿಯಮ್ಸ್ ಕಳಪೆ ಫೀಲ್ಡಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಸರಿಯಾಗಿ ದಂಡಿಸಿಕೊಂಡರು.

VISTARANEWS.COM


on

KKR vs DC
Koo

ಕೋಲ್ಕತ್ತಾ: ಫಿಲ್​ ಸಾಲ್ಟ್​(68) ಅವರ ಅರ್ಧಶತಕ ಮತ್ತು ವರುಣ್​ ಚಕ್ರವರ್ತಿಯ( 16 ರನ್​ಗೆ 3 ವಿಕೆಟ್) ಸ್ಪಿನ್​ ಮೋಡಿಗೆ ಬೆದರಿದ ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ತಂಡ ಕೋಲ್ಕತ್ತಾ ನೈಟ್​ ರೈಡರ್ಸ್(KKR vs DC)​ ವಿರುದ್ಧ 7 ವಿಕೆಟ್​ ಅಂತರದ ಸೋಲಿಗೆ ತುತ್ತಾಗಿದೆ. ಸೋಲಿನಿಂದ ಪಂತ್​ ಪಡೆಯ ಪ್ಲೇ ಆಫ್​ ಪಯಣ ಕೂಡ ದುರ್ಗಮಗೊಂಡಿದೆ. ಇನ್ನುಳಿದ 3 ಪಂದ್ಯಗಳನ್ನು ಕೂಡ ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಡೆಲ್ಲಿ ಪ್ಲೇ ಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ.

ಐತಿಹಾಸಿಕ ಕ್ರಿಕೆಟ್​ ಸ್ಟೇಡಿಯಂ ಈಡನ್​ ಗಾರ್ಡನ್ಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಡೆಲ್ಲಿ​ ನಾಟಕೀಯ ಕುಸಿತ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 153 ರನ್​ ಬಾರಿಸಿತು. ಸಾಧಾರಣ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) 16.3​ ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 157 ರನ್​ ಬಾರಿಸಿ ಗೆಲುವಿನ ನಗೆ ಬೀರಿತು. ಇದು ಕೆಕೆಆರ್​ಗೆ 9ನೇ ಪಂದ್ಯದಲ್ಲಿ ಒಲಿದ 6ನೇ ಗೆಲುವಾಗಿದೆ. ಸದ್ಯ 12 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ.

ಜೀವದಾನ ಪಡೆದು ಅರ್ಧಶತಕ ಬಾರಿಸಿದ ಸಾಲ್ಟ್​


ಚೇಸಿಂಗ್​ ವೇಳೆ ಫಿಲ್​ ಸಾಲ್ಟ್​ 17 ರನ್​ ಗಳಿಸಿದ್ದ ವೇಳೆ ಖಲೀಲ್​ ಅಹ್ಮದ್​ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲಿ ಲಿಜಾಡ್ ವಿಲಿಯಮ್ಸ್ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದರು. ಇದರ ಸಂಪೂರ್ಣ ಲಾಭವೆತ್ತಿದ ಸಾಲ್ಟ್​ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ವಿಲಿಯಮ್ಸ್ ಕಳಪೆ ಫೀಲ್ಡಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಸರಿಯಾಗಿ ದಂಡಿಸಿಕೊಂಡರು. ಮೂರು ಓವರ್​ಗೆ 38 ರನ್​ ಹೊಡೆಸಿಕೊಂಡರು.

ಬಿರುಸಿನ ಬ್ಯಾಟಿಂಗ್​ ಮೂಲಕ ರನ್​ ಕಲೆಹಾಕುವ ಸುನೀಲ್​ ನರೈನ್​ ಈ ಪಂದ್ಯದಲ್ಲಿ ವಿಫಲರಾದರು. 10 ಎಸೆತಗಳಿಂದ 15 ರನ್​ಗೆ ಸೀಮಿತರಾಗಿ ಅಕ್ಷರ್​ ಪಟೇಲ್​ಗೆ ವಿಕೆಟ್​ ಒಪ್ಪಿಸಿದರು. ಬ್ಯಾಟಿಂಗ್​ ಭಡ್ತಿ ಪಡೆದು ಬಂದ ರಿಂಕು ಸಿಂಗ್​ 11 ಎಸೆತಗಳಿಂದ 11 ರನ್​ ಗಳಿಸಿ ನಿರಾಸೆ ಮೂಡಿಸಿದರು. ಈ ವಿಕೆಟ್​ ಪತನಗೊಂಡು 4 ರನ್​ ಆಗುವಷ್ಟರಲ್ಲಿ ಫಿಲ್​ ಸಾಲ್ಟ್​​ ವಿಕೆಟ್​ ಕೂಡ ಬಿತ್ತು. ಸಾಲ್ಟ್​ 33 ಎಸೆತಗಳಿಂದ 68 ರನ್​ ಚಚ್ಚಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 5 ಸೊಗಸಾದ ಸಿಕ್ಸರ್​ ಮತ್ತು 7 ಬೌಂಡರಿ ಸಿಡಿಯಿತು.

ಅಂತಿಮವಾಗಿ ನಾಯಕ ಶ್ರೇಯಸ್​ ಅಯ್ಯರ್(33*)​ ಮತ್ತು ವೆಂಕಟೇಶ್​ ಅಯ್ಯರ್​(26*) ರನ್​ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಜೋಡಿ ನಾಲ್ಕನೇ ವಿಕೆಟ್​ಗೆ ಮುರಿಯದ 57 ರನ್​ಗಳ ಜತೆಯಾಟ ಕೂಡ ನಡೆಸಿತು. ಇದೇ ವೇಳೆ ಶ್ರೇಯಸ್ ಅಯ್ಯರ್​ ಐಪಿಎಲ್​ನಲ್ಲಿ 3 ಸಾವಿರ ರನ್​ ಪೂರ್ತಿಗೊಳಿಸಿದ ಮೈಲಿಗಲ್ಲು ನೆಟ್ಟರು. ಡೆಲ್ಲಿ ಪರ ಅಕ್ಷರ್​ ಪಟೇಲ್​ 2 ವಿಕೆಟ್​ ಪಡೆದರು.

ಇದನ್ನೂ ಓದಿ LSG vs MI: ಲಕ್ನೋ ಸವಾಲಿಗೆ ಮುಂಬೈ ಸಜ್ಜು; ಸೋತರೆ ಪಾಂಡ್ಯ ಪಡೆಯ ಪ್ಲೇ ಆಫ್​ ಹಾದಿ ಕಠಿಣ

ಮಾನ ಉಳಿಸಿದ ಕುಲ್​ದೀಪ್​


ಮೊದಲು ಬ್ಯಾಟಿಂಗ್​ ನಡೆಸಿದ ಡೆಲ್ಲಿ ತಂಡ ನಾಟಕೀಯ ಕುಸಿತ ಕಂಡು ಇನ್ನೇನು 100ರ ಒಳಗಡೆ ಗಂಟು-ಮೂಟೆ ಕಟ್ಟುತ್ತದೆ ಎನ್ನುವಷ್ಟರಲ್ಲಿ 9ನೇ ಕ್ರಮಾಂಕದಲ್ಲಿ ಆಡಲಿಳಿದ ಕುಲ್​ದೀಪ್​ ಯಾದವ್​ ಕೆಕೆಆರ್​ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿ ನಿಂತು ಅಜೇಯ 35 ರನ್​ ಬಾರಿಸಿದರು. ತಂಡದ ಒರ ಇವರದ್ದೇ ಗರಿಷ್ಠ ಮೊತ್ತದ ಗಳಿಕೆ. ಕುಲ್​ದೀಪ್​ ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಿಂದ ಡೆಲ್ಲಿ 150ರ ಗಡಿ ದಾಟಿ ಮಾನ ಉಳಿಸಿಕೊಂಡಿತು.

ಪೃಥ್ವಿ ಶಾ ಎಂದಿನಂತೆ ಒಂದೆಡರು ಬೌಂಡರಿಗೆ ಸೀಮಿತರಾಗಿ 13 ರನ್​ಗೆ ವಿಕೆಟ್​ ಒಪ್ಪಿಸಿದರು. ಇದರ ಬೆನ್ನಲೇ ಅಪಾಯಕಾರಿ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್(12), ಶಾಯ್​ ಹೋಪ್​(6), ಅಭಿಷೇಕ್​ ಪೋರೆಲ್​(18), ಅಕ್ಷರ್​ ಪಟೇಲ್​(15) ಮತ್ತು ಟ್ರಿಸ್ಟಾನ್ ಸ್ಟಬ್ಸ್(4) ರನ್​ ಗಳಿಸಿ ಪೆವಿಲಿಯನ್​ ಪರೇಡ್ ನಡೆಸಿದರು. ನಾಯಕ ಪಂತ್​ 2 ಬೌಂಡರಿ ಮತ್ತು 1 ಸಿಕ್ಸರ್​ ಸಿಡಿಸಿ 27 ರನ್​ ಬಾರಿಸಿದರು.

ಕೆಕೆಆರ್​ ಪರ ಸ್ಪಿನ್ನರ್ ವರುಣ್ ಚಕ್ರವರ್ತಿ ತಮ್ಮ ಸ್ಪಿನ್​ ಜಾದು ಮೂಲಕ ಕೇವಲ 16 ರನ್​ಗೆ 3 ವಿಕೆಟ್​ ಕಿತ್ತು ಡೆಲ್ಲಿಗೆ ಆಘಾತವಿಕ್ಕಿದರು. ಉಳಿದಂತೆ ಹರ್ಷಿತ್​ ರಾಣಾ ಮತ್ತು ವೈಭವ್ ಅರೋರಾ ತಲಾ 2 ವಿಕೆಟ್​ ಉರುಳಿಸಿದರು. ಸುನೀಲ್​ ನರೈನ್​ ಮತ್ತು ಸ್ಟಾರ್ಕ್​ ತಲಾ 1 ವಿಕೆಟ್​ ಪಡೆದರು.

Continue Reading
Advertisement
dina bhavishya read your daily horoscope predictions for April 30 2024
ಭವಿಷ್ಯ26 mins ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

Pakistan Inflation
ವಿದೇಶ5 hours ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ5 hours ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sadhguru Jaggi Vasudev
ಬೆಂಗಳೂರು6 hours ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ6 hours ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ6 hours ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ6 hours ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ7 hours ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ7 hours ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ7 hours ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ26 mins ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202416 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202418 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌