ಏನೂ ಮಜಾ ಅನಿಸ್ತಿಲ್ಲ ಸರ್‌, ಕೆಲಸ ಬಿಡ್ತೀನಿ! ಹೀಗೂ ಒಬ್ಬ ರಿಸೈನ್‌ ಲೆಟರ್‌ ಬರ್ದಿದ್ದಾನೆ ನೋಡಿ! - Vistara News

ಉದ್ಯೋಗ

ಏನೂ ಮಜಾ ಅನಿಸ್ತಿಲ್ಲ ಸರ್‌, ಕೆಲಸ ಬಿಡ್ತೀನಿ! ಹೀಗೂ ಒಬ್ಬ ರಿಸೈನ್‌ ಲೆಟರ್‌ ಬರ್ದಿದ್ದಾನೆ ನೋಡಿ!

ರಾಜೀನಾಮೆ ಪತ್ರವನ್ನು ಹೇಗೆ ಬೇಕಾದರೂ ಬರೆಯಬಹುದು ಎನ್ನುವ ಹೊಸ ಟ್ರೆಂಡ್‌ ಶುರುವಾಗಿದೆ. ಮೊನ್ನೆ ಯಾರೋ ʻಬಾಯ್‌ ಬಾಯ್‌ ಸರ್‌ʼ ಅಂತಷ್ಟೇ ಹೇಳಿ ಹೊರಟರಂತೆ. ಇನೊಬ್ಬರು ಆಫೀಸಲ್ಲಿ ಏನೂ ಮಜಾ ಅನಿಸ್ತಿಲ್ಲ ಅಂತ ಬರೆದಿಟ್ಟು ಹೋಗಿದ್ದಾರಂತೆ!

VISTARANEWS.COM


on

Resign letter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಮೊದಲೆಲ್ಲ ಒಂದು ಕಂಪನಿಯಿಂದ ಕೆಲಸ ಬಿಡುವುದಕ್ಕಿಂತಲೂ ರಾಜೀನಾಮೆ ಪತ್ರ ಬರೆಯುವುದೇ ದೊಡ್ಡ ಸವಾಲಾಗಿತ್ತು. ಕೆಲವರು ತಮ್ಮ ಸುದೀರ್ಘ ರಾಜೀನಾಮೆ ಪತ್ರದಲ್ಲಿ ಕಂಪನಿಗಾಗಿ ತಾವು ಮಾಡಿದ ತ್ಯಾಗ, ಅನುಭವಿಸಿದ ನೋವುಗಳನ್ನೆಲ್ಲ ದಾಖಲಿಸಿದರೆ, ಇನ್ನು ಕೆಲವರು ಕಚೇರಿಯಲ್ಲಿ ಏನೇನು ಕಲಿತೆ, ಕಂಪನಿ ತನ್ನನ್ನು ಹೇಗೆಲ್ಲ ಉದ್ಧಾರ ಮಾಡಿತು ಎಂದೆಲ್ಲ ಬರೆಯುತ್ತಿದ್ದರು. ಕೊನೆಗೆ ಮಾಲೀಕರನ್ನು ಆಕಾಶಕ್ಕೇರಿಸಿ ಪತ್ರ ಮುಗಿಸುತ್ತಿದ್ದರು. ಇದಕ್ಕೆ ಕೆಲವು ದಿನ ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದರು.
ಆದರೆ, ಇತ್ತೀಚೆಗೆ ರಾಜೀನಾಮೆ ನೀಡುವುದು ಮತ್ತು ಪತ್ರ ಬರೆಯುವುದು ಸಿಕ್ಕಾಪಟ್ಟೆ ಸಲೀಸಾಗಿ ಬಿಟ್ಟಿದೆ. ಮೊನ್ನೆ ಯಾರೋ ʻಬಾಯ್‌ ಬಾಯ್‌ ಸರ್‌ʼ ಅಂತಷ್ಟೇ ರಿಸೈನ್‌ ಲೆಟರ್‌ ಬರೆದಿದ್ದಂತೆ. ಇನ್ನು ಕೆಲವು ಕಂಪನಿಗಳ ಈ-ಮೇಲ್‌ನಲ್ಲಿ ರೆಸಿಗ್ನೇಷನ್‌ ಕೀ ಅಂತಾನೇ ಇರುತ್ತದಂತೆ. ಅದನ್ನು ಒತ್ತಿ ಓಕೆ ಅಂತ ಕೊಟ್ಟರೆ ರಿಸೈನ್‌ ಲೆಟರ್‌ ಫೈಲ್‌ ಆಗುತ್ತದಂತೆ!

ಈ ವಿಷಯ ಯಾಕೆ ಚರ್ಚೆಗೆ ಬಂತು ಎಂದರೆ ರಾಮ್‌ ಪ್ರಸಾದ್‌ ಗೋಯೆಂಕಾ (ಆರ್‌ಪಿಜಿ) ಗ್ರೂಪ್‌ನ ಅಧ್ಯಕ್ಷರಾಗಿರುವ ಹರ್ಷ ಗೋಯೆಂಕಾ ಅವರು ತಮಗೆ ಬಂದಿರುವ ಒಂದು ರಾಜೀನಾಮೆ ಪತ್ರವನ್ನು ಲಿಂಕ್ಡ್‌ಇನ್‌ನಲ್ಲಿ ಹಂಚಿಕೊಂಡಿರುವುದರಿಂದ. ʻʻಈ ರಾಜೀನಾಮೆ ಪತ್ರ ತುಂಬಾ ಸಣ್ಣದಾಗಿದೆ. ಅದರೆ, ತುಂಬ ಗಾಢವಾಗಿದೆ. ಇದು ನಾವೆಲ್ಲರೂ ಸೇರಿ ಪರಿಹರಿಸಬೇಕಾದ ಗಂಭೀರ ಸಮಸ್ಯೆʼʼ ಎಂದು ಬರೆದು ಪತ್ರವನ್ನು ಪೋಸ್ಟ್‌ ಮಾಡಿದ್ದಾರೆ. ರಾಜೇಶ್‌ ಎಂಬವರು ಹರ್ಷ ಅವರನ್ನೇ ಉಲ್ಲೇಖಿಸಿ ಇದೇ ವರ್ಷದ ಜೂನ್‌ನಲ್ಲಿ ಬರೆದ ಪತ್ರ ಇದಾಗಿದೆ. ಇದರಲ್ಲಿ ಬರೆದಿರುವುದು ಇಷ್ಟೇ ʻ ಆತ್ಮೀಯ ಹರ್ಷ, ನಾನು ರಾಜೀನಾಮೆ ನೀಡುತ್ತಿದ್ದೇನೆ. ಮಜಾ ನಹೀ ಆ ರಹಾ(ಏನೂ ಮಜಾ ಬರ್ತಾ ಇಲ್ಲ)ʼ. ಹಿಂಗ್ಲಿಷ್‌ನಲ್ಲಿ ಬರೆದಿರುವ ಪತ್ರದ ಕೊನೆಗೆ ʻನಿಮ್ಮ ವಿಶ್ವಾಸಿ, ರಾಜೇಶ್‌ʼ ಎಂದು ಬರೆಯಲಾಗಿದೆ.

ಹರ್ಷ ಗೋಯೆಂಕಾ

ಈ ಪತ್ರ ವೈರಲ್‌ ಆಗುತ್ತಿದ್ದಂತೆಯೇ ಜನರು ತಲೆಗೊಂದರಂತೆ ಮಾತನಾಡಲು, ಕಮೆಂಟ್‌ ಮಾಡಲು ಶುರು ಮಾಡಿದ್ದಾರೆ. ಕೆಲವರು ಈ ಪತ್ರದ ಔಪಚಾರಿಕತೆಯನ್ನು ಪ್ರಶ್ನೆ ಮಾಡಿದ್ದರೆ, ಇನ್ನು ಕೆಲವರು ತಮಾಷೆಯಾಗಿ, ಕೆಲವರು ಸಹಜವಾಗಿ ಸ್ವೀಕರಿಸಿದ್ದಾರೆ.

ʻʻಇದು ಹೆಚ್ಚು ಕಡಿಮೆ ಎಲ್ಲ ಉದ್ಯೋಗಿಗಳ ಭಾವನೆಯೇ ಆಗಿದೆ. ಎಲ್ಲರೂ ಹೇಳಲ್ಲ, ಇವರು ಹೇಳಿದ್ದಾರೆ. ಇದೊಂದು ವಾಸ್ತವಿಕ ರಾಜೀನಾಮೆ ಪತ್ರʼ ಎಂದು ಒಬ್ಬರು ಹೇಳಿದ್ದಾರೆ. ʻʻಮಜಾ ಬರ್ತಾ ಇಲ್ಲ ಎನ್ನುವುದು ಒಟ್ಟಾರೆ ಪತ್ರದ ಸಾರ. ಇದರ ಮೂಲ ಕಾರಣವನ್ನು ಪತ್ತೆ ಹಚ್ಚಬೇಕುʼ ಎನ್ನುವುದು ಇನ್ನೊಬ್ಬರ ಒಕ್ಕಣೆ! ಒಟ್ಟಾರೆಯಾಗಿ ರಾಜೇಶ್‌ ಅನ್ನುವ ವ್ಯಕ್ತಿಗೆ ಕಚೇರಿಯಲ್ಲಿ ಕೆಲಸ ಮಾಡಲು ಅಷ್ಟೇನೂ ಆಸಕ್ತಿ ಬರುತ್ತಿಲ್ಲ ಎನ್ನುವುದು ಸಾರ ಅನಿಸುತ್ತದೆ.

ಟ್ರೆಂಡ್‌ ಆಗಿದೆ ಈ ತರದ ಪತ್ರ
ಕಾರ್ಪೊರೇಟ್‌ ಕಂಪನಿಗಳಲ್ಲಿ ರಾಜೀನಾಮೆ ಪತ್ರ ನೀಡುವ ವಿಚಾರದಲ್ಲಿ ಔಪಚಾರಿಕತೆ ಎನ್ನುವುದು ಮರೆಯಾಗುತ್ತಿದೆ. ಅದರ ಜತೆಗೆ ಉದ್ಯೋಗಿಗಳು ಕೂಡಾ ತಾವು ರಾಜೀನಾಮೆ ನೀಡುವುದನ್ನು ನಿರ್ಭಯವಾಗಿ ಹೇಳಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಉದ್ಯೋಗಿಯೊಬ್ಬರು ʻನಂಗೆ ನಾಳೆ ಬೇರೆ ಕಂಪನಿಯ ಸಂದರ್ಶನಕ್ಕೆ ಹೋಗಬೇಕಾಗಿದೆ. ಹಾಗಾಗಿ ರಜೆ ಬೇಕುʼ ಎಂದು ರಜಾ ಅರ್ಜಿ ಹಾಕಿದ್ದು ಸುದ್ದಿ ಆಗಿತ್ತು. ಈ ಮಟ್ಟದ ನೇರವಂತಿಕೆ ಈಗ ಬೆಳೆಯುತ್ತಿದೆ. ನಿಜವೆಂದರೆ, ಕಂಪನಿಗಳು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವಾಗಲೇ ಅಷ್ಟೇ ಸರಳ ತಂತ್ರಗಳನ್ನು ಬಳಸುತ್ತವೆ. ʻಯೂ ಆರ್‌ ಫೈರ್‌ಡ್‌ʼ ಅಂತ ಅತ್ಯಂತ ಸರಳವಾಗಿ ನಾಳೆಯಿಂದ ಬರಬೇಡ ಎಂದು ಸೂಚಿಸುತ್ತವೆ. ಐಟಿ ಕಂಪನಿಗಳಲ್ಲಿ ಪಿಂಕ್‌ ಸ್ಲಿಪ್‌ ಎನ್ನುವುದು ಕೂಡಾ ಅಷ್ಟೇ ನಾಜೂಕಿನ ತಂತ್ರ. ಜಗತ್ತು ವಿಶಾಲವಾಗಿದೆ ಎನ್ನುವ ಧೋರಣೆ, ಆಗಾಗ ಕೆಲಸ ಬದಲಾಯಿಸುವ ಮಾಡುವ ಪ್ರವೃತ್ತಿಯಿಂದ ಇನ್ನು ಮುಂದೆ ರಾಜೀನಾಮೆ ಪತ್ರದಲ್ಲಿ ಇನ್ನಷ್ಟು ಕ್ರಾಂತಿಕಾರಿ ಬದಲಾವಣೆ ಆದರೆ ಆಶ್ಚರ್ಯಪಡಬೇಕಾಗಿಲ್ಲ!

ಇದನ್ನೂ ಓದಿ| ʼಬೈ ಬೈ ಸರ್‌ʼ-ಮೂರೇ ಶಬ್ದದ ರಾಜೀನಾಮೆ ಪತ್ರ ನಮಗೆಲ್ಲ ಮಾದರಿಯೆಂದ ನೆಟ್ಟಿಗರು
ಇದನ್ನೂ ಓದಿ | ಉದ್ಯೋಗಿಯೊಬ್ಬ ರಜೆ ಕೇಳಿ ಬಾಸ್‌ಗೆ ಕಳಿಸಿದ ಇ-ಮೇಲ್‌ ವೈರಲ್‌; ಪ್ರಾಮಾಣಿಕತೆ ಮೆಚ್ಚುವಂಥದ್ದು !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2,700 ಅಪ್ರೆಂಟಿಸ್ ಶಿಪ್ ಹುದ್ದೆ; ಆಯ್ಕೆಯಾಗಲು ಏನು ಮಾಡಬೇಕು? ವಿಸ್ತೃತ ಮಾಹಿತಿ

Job Alert: ಪಂಜಾಬ್ ನ್ಯಾಷನಲ್ ಬ್ಯಾಂಕ್ 2,700 ಅಪ್ರೆಂಟಿಸ್ ಶಿಪ್ ಹುದ್ದೆಗಳನ್ನು ಕರೆಯಲಾಗಿದ್ದು ಆಸಕ್ತರು ಜುಲೈ 14ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕದ ಅಭ್ಯರ್ಥಿಗಳಿಗೆ 32 ಸ್ಥಾನಗಳನ್ನು ಮೀಸಲಿಡಲಾಗಿದೆ. ಅರ್ಜಿ ಸಲ್ಲಿಕೆ ಹೇಗೆ ಮತ್ತು ಪರೀಕ್ಷೆ ಯಾವ ರೀತಿಯಲ್ಲಿ ಇರುತ್ತದೆ ಎಂಬ ಮುಂತಾದ ಪ್ರಶ್ನೆಗೆ ಇಲ್ಲಿದೆ ಬ್ಯಾಂಕಿಂಗ್ ಪರಿಣತರೇ ನೀಡಿರುವ ಸಂಪೂರ್ಣ ಮಾಹಿತಿ.

VISTARANEWS.COM


on

Koo

-ಆರ್ ಕೆ ಬಾಲಚಂದ್ರ, ಬ್ಯಾಂಕಿಂಗ್ ಹಾಗೂ ಸಾಪ್ಟ್ ಸ್ಕಿಲ್ ತರಬೇತುದಾರರು ಮತ್ತು ವೃತ್ತಿ ಮಾರ್ಗದರ್ಶಕರು. ಬೆಂಗಳೂರು
ಅಪ್ರೆಂಟಿಸ್‌ಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು (Job Alert) ಆಹ್ವಾನಿಸಲಾಗಿದೆ. ಏಪ್ರಿಲ್ 12, 1895ರಲ್ಲಿ ಸ್ಥಾಪನೆಯಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ 103,144 ಕ್ಕೂ ಹೆಚ್ಚು ಉದ್ಯೋಗಿಗಳ ಬಲವಿದ್ದು. ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಡಿಸೆಂಬರ್ 2023 ರ ಅಂತ್ಯದ ವೇಳೆಗೆ ದೇಶಾದ್ಯಂತ ಒಟ್ಟು 52,331 ಶಾಖೆಯ ವಿತರಣಾ ಜಾಲ‌ಗಳನ್ನು ಹೊಂದಿದ್ದು. 10,108 ಕ್ಕೂ ಮಿಕ್ಕಿ ದೇಶೀಯ ಶಾಖೆಗಳು, 2 ಅಂತಾರಾಷ್ಟ್ರೀಯ ಶಾಖೆಗಳು, 12,455 ಎಟಿಎಮ್‌ಗಳು ಹಾಗೂ 29,768 ವ್ಯಾಪಾರ ಕರೊಸ್ಪಾಂಡೆಂಟ್ ಗಳನ್ನು ಹೊಂದಿವೆ. ಬ್ಯಾಂಕಿನ ಸುದೀರ್ಘ ಇತಿಹಾಸದಲ್ಲಿ ಪಂಜಾಬ್ ನ್ಯಾಶನಲ್ ಬ್ಯಾಂಕ್ ನೊಂದಿಗೆ 9 ಬ್ಯಾಂಕುಗಳನ್ನು ವಿಲೀನಗೊಳಿಸಲಾಗಿದೆ. ₹ 22,90,742 ಕೋಟಿ ರೂ.ಗಿಂತ ಹೆಚ್ಚಿನ ಒಟ್ಟು ವ್ಯವಹಾರದೊಂದಿಗೆ ಅಗ್ರಗಣ್ಯ ಬ್ಯಾಂಕ್ ಎಂದು ಗುರುತಿಸಲ್ಪಟ್ಟಿದೆ. ಭವಿಷ್ಯದ ಬ್ಯಾಂಕ್ ಉದ್ಯೋಗಿಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಹಲವು ಬ್ಯಾಂಕ್‌ಗಳು ಅಪ್ರೆಂಟಿಸ್ ಶಿಪ್ ತರಬೇತಿ ನೀಡುತ್ತಿವೆ. ತರಬೇತಿ ಎನ್ನುವುದು ಕಾಯಂ ಹುದ್ದೆ ಅಲ್ಲದಿದ್ದರೂ, ಕೌಶಲ ಕಲಿಕೆಗೆ ಮತ್ತು ಭವಿಷ್ಯದಲ್ಲಿ ಬ್ಯಾಂಕ್ ಉದ್ಯೋಗಿಯಾಗಲು ಪೂರಕವಾಗುವ ನಿಟ್ಟಿನಲ್ಲಿ ಅಭ್ಯರ್ಥಿಗಳು ಸಿದ್ದರಾಗಲು ಇದು ನೆರವಾಗುತ್ತದೆ. ಇದೇ ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಿಗೆ ಅಪ್ರೆಂಟಿಸ್ ಷಿಪ್ ನೀಡಲು ಪಿ ಎನ್ ಬಿ ಬ್ಯಾಂಕ್ ಮುಂದಾಗಿದ್ದು,ಕರ್ನಾಟಕ ಸೇರಿದಂತೆ ದೇಶಾದ್ಯಂತ ಒಟ್ಟು 2,700 ಅಭ್ಯರ್ಥಿಗಳಿಗೆ ಉದ್ಯೋಗ ತರಬೇತಿ ನೀಡಲು ನಿರ್ಧರಿಸಲಾಗಿದೆ. ಕೇಂದ್ರ ಉನ್ನತ ಶಿಕ್ಷಣ ಸಚಿವಾಲಯದ ಸಹಭಾಗಿತ್ವದಲ್ಲಿ ಬ್ಯಾಂಕ್ ಈ ಅಪ್ರೆಂಟಿಸ್‌ ಷಿಪ್ ನೀಡುತ್ತಿದೆ. 1961ರ ಅಪ್ರೆಂಟಿಸ್‌ ಷಿಪ್ ಆಕ್ಟ್ ಪ್ರಕಾರವೇ ಈ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 2024-25ನೇ ಸಾಲಿನಲ್ಲಿ ದೇಶಾದ್ಯಂತ ಒಟ್ಟು 2,700 ಅಭ್ಯರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ 32 ಸ್ಥಾನಗಳನ್ನು ಮೀಸಲಿಡಲಾಗಿದೆ. ಆಸಕ್ತರು ಜುಲೈ 14 ರೊಳಗೆ ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬಹುದು. ಆನ್‌ಲೈನ್ ಪರೀಕ್ಷೆ ಮೂಲಕ ಕರ್ನಾಟಕ ಸೇರಿದಂತೆ ದೇಶದಾದ್ಯಂತವಿರುವ ಶಾಖೆಗಳಲ್ಲಿ ಈ ತರಬೇತಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಮತ್ತು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಅರ್ಹತೆಗಳೇನು?

ಕಲೆ, ವಿಜ್ಞಾನ, ವಾಣಿಜ್ಯ ಸೇರಿದಂತೆ ಯಾವುದೇ ವಿಷಯಗಳಲ್ಲಿ ಪದವಿ ಪಡೆದಿದ್ದರೂ ಅರ್ಜಿ ಸಲ್ಲಿಸುವ ಅವಕಾಶವಿದೆ. ಆದರೆ, ಅಭ್ಯರ್ಥಿಗಳು ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ 2024ರ ಜೂನ್ 30ರೊಳಗೆ ಅಭ್ಯರ್ಥಿಗಳು ನಿಗದಿಪಡಿಸಿದ ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರವನ್ನು ಹೊಂದಿರಬೇಕು.

job girl

ವಯೋಮಿತಿ ಏಷ್ಟು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 30.06.2024 ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷದವರಾಗಿರಬೇಕು. 1996 ರ ಜುಲೈ 1 ಮತ್ತು 2004 ರ ಜೂನ್ 30 ರ ನಡುವೆ ಜನಿಸಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಮೀಸಲಾತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ನಿಯಮಾನು ಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕವೆಷ್ಟು?

ಎಲ್ಲಾ ವರ್ಗದ ಅಭ್ಯರ್ಥಿಗಳು ಶುಲ್ಕದ ಮೇಲೆ ಶೇ. 18 ರಷ್ಟು ಜಿಎಸ್‌ಟಿ ಪಾವತಿಸಬೇಕು. ಈ ಉದ್ಯೋಗ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 800 ರೂ.( Rs.800/-+GST@18% = Rs.944/-)ಎಸ್‌ಸಿ/ಎಸ್‌ಟಿ, ಮಹಿಳಾ ಅಭ್ಯರ್ಥಿಗಳು ಹಾಗೂ ಆರ್ಥಿಕ ದುರ್ಬಲ ವರ್ಗದ ಅಭ್ಯರ್ಥಿಗಳು 600 ರೂ. ಶುಲ್ಕ(ರೂ. 600/-+GST @18%= ರೂ.708/-) ಹಾಗೂ ವಿಶೇಷ ಚೇತನ ಅಭ್ಯರ್ಥಿಗಳು 400 ರೂ. ಶುಲ್ಕ (ರೂ.400/-+GST@18%= ರೂ.472/-) ಶುಲ್ಕ ಪಾವತಿಸಬೇಕು.

ನೆನಪಿಡಿ

ದೇಶಾದ್ಯಂತ 2700 ಅಭ್ಯರ್ಥಿಗಳಿಗೆ ಅವಕಾಶ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 17.
ಪದವೀಧರರಿಗೆ ಅವಕಾಶ
ಕರ್ನಾಟಕಕ್ಕೆ ಮೀಸಲಿಟ್ಟ ಸ್ಥಾನಗಳು: 32
ಪರೀಕ್ಷಾ ದಿನಾಂಕ ಜುಲೈ 28

ವಿವರಗಳಿಗೆ: www.pnbindia.in
https://www.pnbindia.in/Recruitments.aspx. or http://bfsissc.com

ಆಯ್ಕೆ ಹೇಗೆ?

ಆನ್‌ಲೈನ್ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ.

ಪರೀಕ್ಷೆಯ ವಿಷಯಗಳೇನು?

ಕ್ರ.ಸಂಪರೀಕ್ಷೆಯ ಹೆಸರುಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಒಟ್ಟು ಸಮಯಪರೀಕ್ಷಾ ಮಾಧ್ಯಮ
1ಸಾಮಾನ್ಯ/ಹಣಕಾಸು ಅರಿವು2525      60 ನಿಮಿಷಗಳು        ಇಂಗ್ಲೀಷ್ / ಹಿಂದಿ  
2ಸಾಮಾನ್ಯ ಇಂಗ್ಲೀಷ್2525
3ಕ್ವಾಂಟಿಟೇಟಿವ್ & ರೀಸನಿಂಗ್ ಅಪ್ಟಿಟ್ಯೂಡ್2525
4ಕಂಪ್ಯೂಟರ್ ಜ್ಞಾನ2525
 ಒಟ್ಟು100100 

ನೆನಪಿಡಿ

ಅಭ್ಯರ್ಥಿಗಳು ಬ್ಯಾಂಕ್ ನಿರ್ಧರಿಸಿದಂತೆ ಒಟ್ಟಾರೆಯಾಗಿ ಕನಿಷ್ಠ ಶೇಕಡಾವಾರು ಅಂಕವನ್ನು ಗಳಿಸುವ ಅಗತ್ಯವಿದೆ. ಬ್ಯಾಂಕ್ SC/ST/OBC/PwBD ಅಭ್ಯರ್ಥಿಗಳಿಗೆ ಸಾಮಾನ್ಯ ಅಭ್ಯರ್ಥಿಗಳು ಒಟ್ಟಾರೆ ಗಳಿಸುವ ಅಂಕಗಳಿಗಿಂತ 5% ವಿನಾಯತಿ ನೀಡಿದೆ. ಪ್ರತಿ ವಿಷಯಕ್ಕೆ ಕನಿಷ್ಠ ಅರ್ಹತಾ ಅಂಕಗಳನ್ನು ನಿಗದಿಪಡಿಸಿಲ್ಲ.ಹಾಗೂ ಪರೀಕ್ಷೆ ಒಂದು ಗಂಟೆಯ ಅವಧಿಯದಾಗಿದ್ದು ಗರಿಷ್ಠ 100 ಅಂಕಗಳು ಹಾಗೂ ಪರೀಕ್ಷೆ ಹಿಂದಿ ಅಥವಾ ಇಂಗ್ಲೀಷ್ ಭಾಷೆಯಲ್ಲಿ ಇರುತ್ತದೆ.

ಒಂದಿಷ್ಟು ಗಮನಿಸಿ

● ಸ್ವಂತ ಖರ್ಚಿನಲ್ಲಿಯೇ ಅಭ್ಯರ್ಥಿಗಳು ನೇಮಕ ಪ್ರಕ್ರಿಯೆಗಳಿಗೆ ಹಾಜರಾಗಬೇಕು.
● ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳಿಕ ವೈದ್ಯಕೀಯ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯ.
● ಅಂತಿಮವಾಗಿ ದಾಖಲಾತಿ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.
● ಅಭ್ಯರ್ಥಿಗಳು ಸ್ಥಳೀಯ ಭಾಷೆಗಳಲ್ಲಿ ಹಿಡಿತ ಹೊಂದಿರಬೇಕು.
● 10 ಅಥವಾ ದ್ವಿತೀಯ ಪಿಯುಸಿ ಅಥವಾ ಪದವಿಯಲ್ಲಿ ಅಭ್ಯರ್ಥಿಗಳು ಸ್ಥಳೀಯ ಭಾಷೆಯನ್ನು ಒಂದು ವಿಷಯವನ್ನಾಗಿ ಅಧ್ಯಯನ ಮಾಡಿರಬೇಕು.
ಅಪ್ರೆಂಟಿಸ್‌ಷಿಪ್ ಒಂದು ಉದ್ಯೋಗ ತರಬೇತಿಯೇ ಹೊರತು ಬ್ಯಾಂಕ್‌ನಿಂದ ನಡೆಯುವ ನೇಮಕಾತಿ ಆಗಿರುವುದಿಲ್ಲ.
● ಅಪ್ರೆಂಟಿಸ್‌ಶಿಪ್ ಆಯ್ಕೆ ಪ್ರಕ್ರಿಯೆ ಮುಗಿಯುವ ತನಕ ಅಭ್ಯರ್ಥಿಗಳು ತಮ್ಮ ಬಾವಚಿತ್ರವನ್ನು ಬದಲಾಯಿಸಿ ಕೊಳ್ಳದಂತೆ ಸೂಚಿಸಲಾಗಿದೆ. ಆನ್‌ಲೈನ್ ಪರೀಕ್ಷೆಯ ಸಮಯದಲ್ಲಿ ಅದೇ ಬಾವಚಿತ್ರವನ್ನು ತೋರಿಸಲು ವಿಫಲವಾದರೆ ಅನರ್ಹತೆಗೆ ಕಾರಣವಾಗಬಹುದು. ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅವನು/ಅವಳು ಮಾಡಿದ ಸಹಿಯನ್ನು ಮುಂದೆಯೂ ಖಚಿತ ಪಡಿಸಿ ಕೊಳ್ಳಬೇಕು.ಅಂದರೆ ಅವನ/ಅವಳ ಕರೆ ಪತ್ರ, ಹಾಜರಾತಿ ಪತ್ರ ಇತ್ಯಾದಿಗಳಲ್ಲಿ ಮತ್ತು ಭವಿಷ್ಯದಲ್ಲಿ ಬ್ಯಾಂಕಿನೊಂದಿಗಿನ ಎಲ್ಲಾ ಪತ್ರ ವ್ಯವಹಾರಗಳಲ್ಲಿ ಸಹಿ ಒಂದೇ ಆಗಿರಬೇಕು ಮತ್ತು ಯಾವುದೇ ರೀತಿಯ ವ್ಯತ್ಯಾಸ ಇರಬಾರದು.

ಅರ್ಜಿ ಸಲ್ಲಿಸುವುದು ಹೇಗೆ?

ಎಲ್ಲಾ ಅರ್ಹ ಅರ್ಜಿದಾರರು ಅಪ್ರೆಂಟಿಸ್‌ಶಿಪ್ ಪ್ರವೇಶಕ್ಕಾಗಿ ನೋಂದಾಯಿಸಿಕೊಳ್ಳಲು ಎರಡು ವೆಬ್ ಸೈಟ್ ನ ವಿಳಾಸ ನೀಡಲಾಗಿದೆ. www.bfsissc.comನ “ವೃತ್ತಿ ಅವಕಾಶಗಳು” ವಿಭಾಗಕ್ಕೆ ಭೇಟಿ ನೀಡುವ ಮೂಲಕ ಪರೀಕ್ಷೆ ಎಂದು ಹೇಳಲಾದ ಲಿಂಕ್ ಮೇಲೆ ಕ್ಲಿಕ್ಕಿಸಿ ಅನ್ವಯವಾಗುವ ಪರೀಕ್ಷಾ ಶುಲ್ಕದ ಪಾವತಿ ಮಾಡಬೇಕು. ಅದರ ನಂತರ ಅರ್ಜಿದಾರನು ನೋಂದಾಯಿಸಿಕೊಳ್ಳಬೇಕು ಮತ್ತು ಅವನ /ಅವಳ ಪ್ರೊಫೈಲ್ ಅನ್ನು ಅಪ್ಲೋಡ್ ಮಾಡಬೇಕು. ಮೊದಲ ಬಾರಿಗೆ ನೊಂದಾಯಿಸುವವರು ಎರಡು ವಿಭಿನ್ನ ಸರ್ಕಾರಿ ಅಪ್ರೆಂಟಿಸ್‌ಶಿಪ್ ಪೋರ್ಟಲ್‌ಗಳಲ್ಲಿ ಪ್ರತ್ಯೇಕವಾಗಿ ನೊಂದಾಯಿಸಿಕೊಳ್ಳಬೇಕು.

  • NAPS ಅಪ್ರೆಂಟಿಸ್‌ಶಿಪ್ ಪೋರ್ಟಲ್ www.apprenticeshipindia.gov.in (ಅಪ್ರೆಂಟಿಸ್‌ಗಳ ಲಾಗಿನ್/ ಮತ್ತು ನೋಂದಣಿ ವಿಭಾಗ) ಮತ್ತು
  • NATS ಪೋರ್ಟಲ್ www.nats.education.gov.in (ವಿದ್ಯಾರ್ಥಿ ನೋಂದಣಿ/ಲಾಗಿನ್ ವಿಭಾಗ – 1ನೇ ಏಪ್ರಿಲ್ 2020 ರಂದು ಅಥವಾ ನಂತರ ಪದವಿಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಅನ್ವಯಿಸುತ್ತದೆ).

ಎಲ್ಲಾ ಅರ್ಜಿದಾರರು, ಆಯಾ ಅಪ್ರೆಂಟಿಸ್‌ಶಿಪ್ ಪೋರ್ಟಲ್‌ಗಳಲ್ಲಿ NAPS ಮತ್ತು/ಅಥವಾ NATS ಯಶಸ್ವಿಯಾಗಿ ನೋಂದಾಯಿಸಿದ ನಂತರ, ನಿಮ್ಮ NAPS ಅಪ್ರೆಂಟಿಸ್‌ ಶಿಪ್ಗಾಗಿ BFSISSC ಯಿಂದ ಕೋಡ್ ಸಂಖ್ಯೆ ಮತ್ತು/ಅಥವಾ NATS ದಾಖಲಾತಿ ಸಂಖ್ಯೆ ಇಮೇಲ್ ಮೂಲಕ ಬರುತ್ತದೆ. ಒಬ್ಬ ಅಭ್ಯರ್ಥಿ ಒಂದು ವಲಯಕ್ಕೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ. ಈಗಾಗಲೇ ಅಪ್ರೆಂಟಿಸ್‌ಷಿಪ್ ಪಡೆದಿರುವವರು ಮತ್ತು ಪಡೆಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಮಾತ್ರವಲ್ಲ, ಈಗಾಗಲೇ ಉದ್ಯೋಗಕ್ಕೆ ಸೇರಿ ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಸೇವಾನುಭವವುಳ್ಳ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Job Interview: ಉದ್ಯೋಗ ಸಂದರ್ಶನವನ್ನು ಹೇಗೆ ಎದುರಿಸಬೇಕು? ಈ ಟಿಪ್ಸ್‌ ಫಾಲೋ ಮಾಡಿ

ಪೋರ್ಟಲ್‌ನಲ್ಲಿ ನೋಂದಾಯಿಸುವ ಮೊದಲು ಈ ಕೆಳಗಿನ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ:

1.ಆಧಾರ್ ಕಾರ್ಡ್
2.ವೈಯಕ್ತಿಕ ಇಮೇಲ್ ಐಡಿ (ಖಾತೆಯನ್ನು ಸಕ್ರಿಯಗೊಳಿಸಲು ಮತ್ತು ಲಾಗಿನ್ ಮಾಡಲು ಅಗತ್ಯವಿದೆ)
3.ಮೊಬೈಲ್ ಸಂಖ್ಯೆ
4.ಪಾಸ್‌ಪೋರ್ಟ್ ಸೈಜಿನ ಬಾವಚಿತ್ರ ಜೆಪಿಇಜಿ ಫಾರ್ಮೆಟ್ ನಲ್ಲಿದ್ದು, ಗಾತ್ರ: 1 MB ಗಿಂತ ಕಡಿಮೆಯಿರಬೇಕು.
5.ಪದವಿ/ತಾತ್ಕಾಲಿಕ ಪ್ರಮಾಣಪತ್ರ, ಪಿಡಿಎಪ್ ಫಾರ್ಮೆಟ್ ನಲ್ಲಿದ್ದು, 1 MB ಕ್ಕಿಂತ ಕಡಿಮೆಯಿರಬೇಕು.

ಪರೀಕ್ಷೆಯ ದಿನಾಂಕ ಯಾವುದು?

ಆನ್ ಲೈನ್ ನಲ್ಲಿ ಪರೀಕ್ಷೆ ಜುಲೈ 28, 2024 ರಂದು. (ಬದಲಾಗಬಹುದು,ವೆಬ್ ಸೈಟ್ ಗಮನಿಸುತ್ತೀರಿ)

  • ಪರೀಕ್ಷಾ ಶುಲ್ಕವನ್ನು ಪಾವತಿಸಿದ ಎಲ್ಲಾ ಅರ್ಜಿದಾರರಿಗೆ ಪರೀಕ್ಷೆಯ ದಿನಾಂಕ ಮತ್ತು ಸಮಯದೊಂದಿಗೆ BFSI SSC ಯಿಂದ ಸೂಚನೆಯನ್ನು ನೀಡಲಾಗುತ್ತದೆ.
  • ಎಲ್ಲಾ ಅರ್ಜಿದಾರರು ತಮ್ಮ ಸ್ವಂತದ ಕ್ಯಾಮರಾ ಸಕ್ರಿಯಗೊಳಿಸಿದ ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಅಥವಾ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ ಫೋನ್ ಬಳಸಿಕೊಂಡು ನೀಡಿದ ದಿನಾಂಕ ಮತ್ತು ಸಮಯದಲ್ಲಿ ಆನ್‌ಲೈನ್ ಪರೀಕ್ಷೆಗೆ ಹಾಜರಾಗಬೇಕು.
  • ಎಲ್ಲಾ ಅರ್ಜಿದಾರರು ಅರ್ಜಿ ಸಲ್ಲಿಸುವ ಸಂದರ್ಬದಲ್ಲಿ ಅಪ್‌ಲೋಡ್ ಮಾಡಿದ ಅದೇ ID ಪುರಾವೆಯನ್ನು ನೀಡಬೇಕು.

ವಲಯವಾರು ಹುದ್ದೆಗಳೆಷ್ಟು?

ಕರ್ನಾಟಕದಲ್ಲಿ ಬೆಂಗಳೂರು ಹಾಗೂ ಹುಬ್ಬಳ್ಳಿ ವಲಯಗಳಲ್ಲಿ ಹುದ್ದೆಗಳ ಇರುವುದರಿಂದ ಅಭ್ಯರ್ಥಿಗಳು ಅವರಿಗೆ ಅನುಕೂಲವಾಗುವ ವಲಯವನ್ನು ಆಯ್ಕೆ ಮಾಡಿಕೊಳ್ಳಬಹುದು.

State/UTCircleTotal Seats*SCSTOBCEWSUR
KarnatakaBANGALORE2232629
HUBLI1020215
Sub Total32528314

ಭಾಷಾವಾರು ನೇಮಕಾತಿ

ರಾಜ್ಯದ ಪಾಲಿನ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯ ಭಾಷೆಯಲ್ಲಿ ಓದುವುದು, ಬರೆಯುವದು, ಮಾತನಾಡುವುದು ಮತ್ತು ಅರ್ಥಮಾಡಿಕೊಳ್ಳುವುದರಲ್ಲಿ ಪ್ರವೀಣ ರಾಗಿರಬೇಕು.

ಶಾರೀರಿಕ/ ವೈದ್ಯಕೀಯ ಫಿಟ್ನೆಸ್

ಅಪ್ರೆಂಟಿಸ್‌ಗಳ ಅಂತಿಮ ಆಯ್ಕೆಯು ಅವನು/ಅವಳು ವೈದ್ಯಕೀಯವಾಗಿ ಫಿಟ್‌ ಎಂದು ಘೋಷಿಸಲ್ಪಡುವುದಕ್ಕೆ ಒಳಪಟ್ಟಿರುತ್ತದೆ.

ತರಬೇತಿಯ ಅವಧಿ ಮತ್ತು ಸ್ಟೈಪೆಂಡ್

ತರಬೇತಿಯ ಒಟ್ಟು ಅವಧಿಯು ಒಪ್ಪಂದದ ದಿನಾಂಕದಿಂದ ಒಂದು ವರ್ಷವಾಗಿರುತ್ತದೆ. ಒಂದು ವರ್ಷದ ತರಬೇತಿಯು 2 ವಾರಗಳ ಮೂಲಭೂತ ತರಬೇತಿ ಮತ್ತು 50 ವಾರಗಳ ಉದ್ಯೋಗ ತರಬೇತಿಯನ್ನು ಒಳಗೊಂಡಿರುತ್ತದೆ. ಒಂದು ವರ್ಷ ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ತಿಂಗಳಿಗೆ ಗ್ರಾಮೀಣ/ಅರೆ-ನಗರ (ರೂರಲ್/ಸೆಮಿಅರ್ಬನ್) ಪ್ರದೇಶದ ಅಭ್ಯರ್ಥಿಗಳಿಗೆ ₹10,000 ರೂ, ನಗರ(ಅರ್ಬನ್) ಪ್ರದೇಶದ ಅಭ್ಯರ್ಥಿಗಳಿಗೆ ₹12,000 ರೂ. ಹಾಗೂ ಮೆಟ್ರೊ ನಗರದ ಅಭ್ಯರ್ಥಿಗಳಿಗೆ ₹15,000 ರೂ. ತಿಂಗಳ ಸ್ಟೈಪೆಂಡ್ ನೀಡಲಾಗುತ್ತದೆ. ಇದರ ಹೊರತಾಗಿ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.

ಇದನ್ನೂ ಓದಿ: Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

ಅಪ್ರೆಂಟಿಸ್‌ಶಿಪ್‌ ಅನುಕೂಲಗಳು

ಅಪ್ರೆಂಟಿಸ್‌ಗಳಾಗಿ ನೇಮಕ ಗೊಂಡರೆ ಅದು ಬ್ಯಾಂಕ್‌ನಲ್ಲಿ ಉದ್ಯೋಗ ನೀಡಿದೆ ಎಂದರ್ಥವಲ್ಲ. ಇದೊಂದು ತರಬೇತಿಯಾಗಿದ್ದು, ಭವಿಷ್ಯದಲ್ಲಿ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ಸಹಾಯವಾಗುತ್ತದೆ. ಬ್ಯಾಂಕಿಂಗ್ ನೇಮಕಾತಿಯ ನೀತಿ ನಿಯಮಗಳನ್ನು ಕಾಲಕಾಲಕ್ಕೆ ಮಾಡಿದ ತಿದ್ದುಪಡಿಯಂತೆ, ಜೂನಿಯರ್ ಅಸೋಸಿಯೇಟ್‌ಗಳ ನೇಮಕಾತಿಯಲ್ಲಿ ಅಪ್ರೆಂಟಿಸ್‌ಗಳಿಗೆ ಹೆಚ್ಚಿನ ಮಾನ್ಯತೆ ಅಥವಾ ಆದ್ಯತೆ (weightage) ನೀಡಲಾಗುತ್ತದೆ.
ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಮತ್ತು ತರಬೇತಿ ಅವಧಿಯಲ್ಲಿ ಸಂಪೂರ್ಣವಾಗಿ ತೃಪ್ತಿದಾಯಕ ನಡವಳಿಕೆಗೆ ಒಳಪಟ್ಟಿರುವ ಅಪ್ರೆಂಟಿಸ್‌ಗಳಿಗೆ ಜೂನಿಯರ್ ಅಸೋಸಿಯೇಟ್‌ಗಳ ನೇಮಕಾತಿಯಲ್ಲಿ ಕೆಲವೊಂದು ನಿಯಮ ಸಡಿಲಿಕೆ ಮಾಡಲಾಗಿರುತ್ತದೆ.

Continue Reading

ಉದ್ಯೋಗ

Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ ಕಂಪನಿ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.ಒಟ್ಟು 31 ಹುದ್ದೆ ಖಾಲಿ ಇದೆ. ಎಂಜಿನಿಯರ್‌ ಮತ್ತು ಆಫೀಸರ್‌ ಹುದ್ದೆ ಇದಾಗಿದ್ದು, ಪದವಿ, ಸಿಎ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್ 16. ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಪದವಿ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಇಲ್ಲಿದೆ. ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ ಕಂಪನಿ ಲಿಮಿಟೆಡ್‌ (Indian Highway Management Company Limited) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (IHMCL Recruitment 2024). ಒಟ್ಟು 31 ಹುದ್ದೆ ಖಾಲಿ ಇದೆ. ಎಂಜಿನಿಯರ್‌ ಮತ್ತು ಆಫೀಸರ್‌ ಹುದ್ದೆ ಇದಾಗಿದ್ದು, ಪದವಿ, ಸಿಎ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಂಜಿನಿಯರ್‌ – 30 ಮತ್ತು ಆಫೀಸರ್‌ – 1 ಹುದ್ದೆ ಖಾಲಿ ಇದೆ. ಎಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಐಟಿ / ಸಿಎಸ್ / ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ಸ್ / ಎಲೆಕ್ಟ್ರಿಕಲ್ / ಇನ್‌ಸ್ಟ್ರುಮೆಂಟೇಶನ್ / ಡಾಟಾ ಸೈನ್ಸ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ಇನ್ನು ಸಿಎ, ಸಿಎಂಎ ವಿದ್ಯಾರ್ಹತೆ ಹೊಂದಿದವರು ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಎಂಜಿನಿಯರಿಂಗ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ. ಗರಿಷ್ಠ ವಯಸ್ಸು 30 ವರ್ಷ. ಆಫೀಸರ್‌ ಹುದ್ದೆಗೂ ಗರಿಷ್ಠ ವಯೋಮಿತಿ 30 ವರ್ಷ. ಮೀಸಲಾತಿಗೆ ಅನುಗುಣವಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಗೇಟ್‌ (GATE) ಅಂಕ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಮಾಸಿಕ ವೇತನ

ಆಯ್ಕೆಯಾದವರಿಗೆ 40,000 ರೂ. – 1,40,000 ರೂ. ಮಾಸಿಕ ವೇತನ ದೊರೆಯಲಿದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.

IHMCL Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://recruitment.ihmcl.co.in/panel/login.php)
  • ಅಗತ್ಯ ಮಾಹಿತಿ, ಇಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಹೆಸರು, ವಿಳಾಸ, ಶೈಕ್ಷಣಿಕ ಮಾಹಿಸಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: ihmcl.co.inಕ್ಕೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Continue Reading

Latest

Job Interview: ಉದ್ಯೋಗ ಸಂದರ್ಶನವನ್ನು ಹೇಗೆ ಎದುರಿಸಬೇಕು? ಈ ಟಿಪ್ಸ್‌ ಫಾಲೋ ಮಾಡಿ

ಕಾಲೇಜು ಮುಗಿಸಿ ಉದ್ಯೋಗಕ್ಕಾಗಿ ಹೊರಡುವಾಗ ಸಂದರ್ಶನದ (Job Interview) ತಯಾರಿ ನಡೆಸಿಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಸಂದರ್ಶನಕ್ಕೆ ಹೊರಡುವಾಗ ಕೆಲವೊಂದು ವಿಷಯಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಅವುಗಳಲ್ಲಿ ಮುಖ್ಯವಾಗಿ ಸಂಶೋಧನೆ, ಉಡುಗೆ, ದಾಖಲೆಗಳು, ದೇಹ ಭಾಷೆ, ಸಂವಹನ ಸೇರಿದಂತೆ ಇನ್ನೂ ಹಲವು ಪ್ರಮುಖ ವಿಷಯಗಳಿವೆ. ಅವುಗಳ ಕುರಿತು ಯುವ ಜನರಿಗೆ ಉಪಯುಕ್ತ ಮಾಹಿತಿ ಮಾಹಿತಿ ಇಲ್ಲಿದೆ.

VISTARANEWS.COM


on

By

Job Interview
Koo

ಯಾವುದೇ ಉದ್ಯೋಗವೂ ಸಂದರ್ಶನವಿಲ್ಲದೆ (Job Interview) ಪೂರ್ಣವಾಗುವುದಿಲ್ಲ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಈಗ ಉದ್ಯೋಗ (job) ಪಡೆಯಲು ಕೇವಲ ಅಂಕಗಳಿದ್ದರೆ ಸಾಲದು ಕೌಶಲ, ನಡವಳಿಕೆಯೂ ಮುಖ್ಯವಾಗಿರುತ್ತದೆ. ಕಾಲೇಜು (college) ಮುಗಿಸಿ ಉದ್ಯೋಗಕ್ಕಾಗಿ ಸಂದರ್ಶನದ ತಯಾರಿ ನಡೆಸಿಕೊಳ್ಳುತ್ತಿರುವ ಫ್ರೆಶರ್‌ಗಳಿಗೆ ಸಹಾಯವಾಗಬಲ್ಲ ಸಲಹೆಗಳು ಇಲ್ಲಿವೆ.

ಸಂದರ್ಶನಕ್ಕೆ ಹೊರಡುವಾಗ ಕೆಲವೊಂದು ವಿಷಯಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಅವುಗಳಲ್ಲಿ ಮುಖ್ಯವಾಗಿ ಸಂಶೋಧನೆ, ಉಡುಗೆ, ದಾಖಲೆಗಳು, ದೇಹ ಭಾಷೆ, ಸಂವಹನ ಸೇರಿದಂತೆ ಇನ್ನು ಹಲವು ಪ್ರಮುಖ ವಿಷಯಗಳಿವೆ.

ಕಂಪನಿಯ ಹಿನ್ನೆಲೆ ಸ್ಟಡಿ ಮಾಡಿ

ಸಂದರ್ಶನಕ್ಕೆ ಹೊರಡುವಾಗ ಕಂಪನಿ ಮತ್ತು ಉದ್ಯೋಗ ಪ್ರೊಫೈಲ್ ಬಗ್ಗೆ ತಿಳಿದುಕೊಳ್ಳಿ. ಇದು ಕಂಪನಿಯ ಬಗ್ಗೆ ಸಾಕಷ್ಟು ಮಾಹಿತಿಯನ್ನು ಒದಗಿಸಿ ಸಂದರ್ಶನವನ್ನು ಸುಲಭಗೊಳಿಸುತ್ತದೆ. ಸಂದರ್ಶನದ ತಯಾರಿಯ ಪ್ರಮುಖ ಆದ್ಯತೆಯಾಗಿ ಸಂಶೋಧನೆಯನ್ನು ಪಟ್ಟಿ ಮಾಡುವುದು ಬಹಳ ಮುಖ್ಯ. ಪ್ರತಿ ಕಂಪೆನಿಯು ತನ್ನ ಪ್ರೊಫೈಲ್‌ಗಳಲ್ಲಿ ವಿಮರ್ಶೆ ವಿಭಾಗವನ್ನು ಹೊಂದಿರುತ್ತದೆ. ಕಂಪನಿಯ ಮಾಜಿ, ಪ್ರಸ್ತುತ ಉದ್ಯೋಗಿಗಳ ಬಗ್ಗೆ ಕೇಳಬಹುದು. ಅವರ ಅನುಭವ, ಕೆಲಸದ ಸಂಸ್ಕೃತಿ ಬಗ್ಗೆ ಪ್ರಶ್ನೆಗಳನ್ನು ಕೇಳಬಹುದು.


ಕೌಶಲವನ್ನು ಬೆಳೆಸಿಕೊಳ್ಳಿ

ಫ್ರೆಶರ್‌ಗಳಿಗೆ ಮತ್ತೊಂದು ಪ್ರಮುಖ ಸಂದರ್ಶನ ಸಲಹೆಯೆಂದರೆ ಉದ್ಯೋಗ ವಿವರಣೆಯನ್ನು ಸಂಪೂರ್ಣವಾಗಿ ಓದುವುದು. ಯಾಕೆಂದರೆ ಇದು ನೇಮಕಾತಿದಾರರು ಹುಡುಕುತ್ತಿರುವ ಪ್ರಮುಖ ಕೌಶಲಗಳನ್ನು ಗುರುತಿಸಲು ಅದಕ್ಕೆ ತಕ್ಕುದಾಗಿ ಹೊಂದಿಕೊಳ್ಳಲು ನಿಮಗೆ ಸಹಾಯವಾಗುವುದು. ಕೌಶಲದ ಕೊರತೆ ಇದ್ದರೆ ಸಂದರ್ಶನ ಕಷ್ಟವಾಗಬಹುದು.

ಉಡುಗೆ ಬಗ್ಗೆ ಗಮನವಿರಲಿ

ಫ್ರೆಶರ್‌ಗಳಿಗೆ ಸಂದರ್ಶನದ ತಯಾರಿಗಾಗಿ ಮತ್ತೊಂದು ಪ್ರಮುಖ ಅಂಶವೆಂದರೆ ಉಡುಪು. ಉಡುಪು ನಮ್ಮ ಆಲೋಚನೆಗಳನ್ನು ತೋರಿಸುತ್ತದೆ. ಯಾವುದೇ ಕೆಲಸಕ್ಕಾಗಿ ಸಂದರ್ಶನದಲ್ಲಿ ಅನಿಸಿಕೆ ವ್ಯಕ್ತಪಡಿಸಲು ಅವಕಾಶ ನೀಡಲಾಗುತ್ತದೆ. ಇದು ಸಂದರ್ಶಕರ ಮೇಲೆ ನಮ್ಮ ಪ್ರಭಾವವನ್ನು ಬೀರಲು ಕಾರಣವಾಗುತ್ತದೆ.

ಸಂದರ್ಶನಕ್ಕೆ ಹೋಗುವಾಗ ಸ್ವಚ್ಛ ಮತ್ತು ಚೆನ್ನಾಗಿ ಇಸ್ತ್ರಿ ಮಾಡಿರುವ ದಿರಿಸು ಧರಿಸಿ. ಪಾಲಿಶ್ ಮಾಡಿದ ಶೂಗಳು ಮತ್ತು ಕ್ಲೀನ್ ಸಾಕ್ಸ್, ಕೂದಲು, ಉಗುರುಗಳು ಚೆನ್ನಾಗಿದೆ ಎಂದು ಖಚಿತಪಡಿಸಿಕೊಳ್ಳಿ.ಋತುಮಾನಕ್ಕೆ ಸೂಕ್ತವಾದ ಆರಾಮದಾಯಕ ಉಡುಗೆಗಳನ್ನು ಆಯ್ಕೆ ಮಾಡಿ.

ನಿಮ್ಮನ್ನು ನೀವು ತಿಳಿದುಕೊಳ್ಳಿ

ಇನ್ನೊಬ್ಬರಿಗೆ ನಮ್ಮ ಸಾಮರ್ಥ್ಯವನ್ನು ತಿಳಿಸಬೇಕಾದರೆ ನಮ್ಮ ಬಗ್ಗೆ ನಾವು ಮೊದಲು ತಿಳಿದುಕೊಳ್ಳಬೇಕು. ಇದು ಫ್ರೆಶರ್‌ಗಳಿಗೆ ಅತೀ ಪ್ರಮುಖ ಸಲಹೆ. ಕಂಪೆನಿಯಲ್ಲಿ ನಿಮ್ಮನ್ನು ನೀವು ಹೇಗೆ ತೋರ್ಪಡಿಸುತ್ತಿರಿ ಎನ್ನುವುದು ಮುಖ್ಯವಾಗಿರುತ್ತದೆ. ಉದ್ಯೋಗ ಸಂದರ್ಶನದ ಪ್ರಮುಖ ಉದ್ದೇಶವು ನಿಮ್ಮನ್ನು ಪ್ರತಿನಿಧಿಸುವುದು ಮುಖ್ಯವಾಗುತ್ತದೆ.

ದಾಖಲೆಗಳ ಹೆಚ್ಚುವರಿ ಸೆಟ್ ಇರಲಿ

ಸಂದರ್ಶನದ ದಿನ ಸಂದರ್ಶಕರು ಮತ್ತು ಎಚ್‌ಆರ್ ಕ್ರಮವಾಗಿ ರೆಸ್ಯೂಮ್‌ನ ಹಾರ್ಡ್ ಪ್ರತಿಯನ್ನು ಕೇಳಬಹುದು. ಆದ್ದರಿಂದ ಯಾವಾಗಲೂ ರೆಸ್ಯೂಮ್‌ನ 2- 3 ಪ್ರತಿಗಳನ್ನು ಕೈಯಲ್ಲಿರಲಿ. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಕಳುಹಿಸಿದ ರೆಸ್ಯೂಮ್‌ನಲ್ಲಿ ಯಾವುದೇ ದೋಷ ಕಂಡುಬಂದರೆ, ಬಳಿಕ ಅಪ್‌ಡೇಟ್ ಮಾಡಿದ್ದರೆ ಅದನ್ನು ಸಂದರ್ಶಕರ ಗಮನಕ್ಕೆ ತನ್ನಿ. ಇದಕ್ಕಾಗಿ ಹೆಚ್ಚುವರಿ ದಾಖಲೆಗಳ ಸೆಟ್‌ ಜೊತೆ ಇರಲಿ. ರೆಸ್ಯೂಮ್‌ನಲ್ಲಿನ ದೋಷ, ಪರಿಷ್ಕರಣೆ ಕುರಿತು ನೇಮಕಾತಿದಾರರಿಗೆ ತಿಳಿಸುವುದು ನಿಮ್ಮ ಸಮಗ್ರತೆಯ ಬಗ್ಗೆ ಮಾತ್ರವಲ್ಲದೆ ಕೆಲಸದ ಪಾತ್ರದ ಬಗ್ಗೆ ನಿಮ್ಮ ಗಂಭೀರತೆಯ ಬಗ್ಗೆಯೂ ಅವರಿಗೆ ತಿಳಿಸಿದಂತಾಗುತ್ತದೆ.

ಇದನ್ನೂ ಓದಿ: UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?


ಪ್ರಶ್ನೆ ಕೇಳಿ, ಉತ್ತರಿಸಲು ಸಿದ್ಧರಾಗಿರಿ

ಸಾಮಾನ್ಯವಾಗಿ ಅಭ್ಯರ್ಥಿಯ ದಕ್ಷತೆಯನ್ನು ಪರೀಕ್ಷಿಸಲು ಉದ್ಯೋಗಕ್ಕಾಗಿ ಮೂರು ಸುತ್ತಿನ ಸಂದರ್ಶನಗಳು, ಲಿಖಿತ, ತಾಂತ್ರಿಕ ಮತ್ತು ಮಾನವ ಸಂಪನ್ಮೂಲ ಸಂದರ್ಶನಗಳು ಇರುತ್ತವೆ. ಮೊದಲ ಎರಡು ಸುತ್ತುಗಳು ಕೆಲಸವನ್ನು ಪೂರ್ಣಗೊಳಿಸಲು ಸಹಾಯ ಮಾಡುವ ತಾಂತ್ರಿಕ ಜ್ಞಾನವನ್ನು ಪರೀಕ್ಷಿಸುತ್ತದೆ. ಕೊನೆಯ ಸುತ್ತು ಕೌಶಲಗಳನ್ನು ಪರೀಕ್ಷಿಸುತ್ತದೆ.

ಈ ಸಂದರ್ಭದಲ್ಲಿ ಅನುಮಾನಗಳಿದ್ದಾಗ ಪ್ರಶ್ನೆ ಕೇಳಲು ಹಿಂಜರಿಯಬೇಡಿ. ಇದು ಆಯ್ಕೆಗೆ ನಿಮ್ಮನ್ನು ನೀವು ಹೇಗೆ ಸಿದ್ಧಪಡಿಸಿಕೊಳ್ಳುತ್ತೀರಿ ಎಂಬುದನ್ನು ತಿಳಿಸುತ್ತದೆ. ಅದೇ ರೀತಿ ಅವರು ಕೇಳುವ ಪ್ರಶ್ನೆಗಳಿಗೆ ಸ್ಪಷ್ಟವಾಗಿ ಉತ್ತರಿಸಿ. ಇದು ನಿಮ್ಮ ಆತ್ಮವಿಶ್ವಾಸವನ್ನು ತೋರ್ಪಡಿಸುತ್ತದೆ.

Continue Reading

ಉದ್ಯೋಗ

Job Alert: ಧಾರವಾಡ ಕೃಷಿ ವಿಜ್ಞಾನ ವಿವಿಯಲ್ಲಿ 6 ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಒಟ್ಟು 6 ಪ್ರಾಜೆಕ್ಟ್​ ಅಸಿಸ್ಟೆಂಟ್, ಸೀನಿಯರ್​ ರಿಸರ್ಚ್​ ಫೆಲೋ (SRF) ಹುದ್ದೆಗಳಿಗೆ (Job Alert) ಅರ್ಜಿ ಆಹ್ವಾನಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಮತ್ತು ಕೌಶಲ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಧಾರವಾಡದ ಕೃಷಿ ನಗರ ಚೇಂಬರ್ ಆಫ್ ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್ (HQ) ನಲ್ಲಿ ಜುಲೈ 10ರಂದು ಸಂದರ್ಶನ ನಡೆಸಲಾಗುತ್ತದೆ.

VISTARANEWS.COM


on

By

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ (Job Alert) ಆಕಾಂಕ್ಷಿಗಳಿಗೆ ಒಂದು ಗುಡ್ ನ್ಯೂಸ್. ಧಾರವಾಡದ (Dharwad) ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯ (University of Agriculture Sciences) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬೆಳಗಾವಿ (belagavi), ಧಾರವಾಡ, ಹಾವೇರಿಯಲ್ಲಿ (haveri) ಕೆಲಸ ಮಾಡಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು.

ಹುದ್ದೆಯ ವಿವರ ಹೀಗಿದೆ:

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಒಟ್ಟು 6 ಪ್ರಾಜೆಕ್ಟ್​ ಅಸಿಸ್ಟೆಂಟ್, ಸೀನಿಯರ್​ ರಿಸರ್ಚ್​ ಫೆಲೋ (SRF) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಸೀನಿಯರ್ ರಿಸರ್ಚ್ ಫೆಲೋ(SRF)-3, ಪ್ರಾಜೆಕ್ಟ್ ಅಸಿಸ್ಟೆಂಟ್​- ಹೈಡ್ರಾಲಜಿ (ಫೀಲ್ಡ್​)-1, ಪ್ರಾಜೆಕ್ಟ್​ ಅಸಿಸ್ಟೆಂಟ್ (RS & GIS)- 2 ಹುದ್ದೆಗಳಿವೆ.

ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳಿಗೆ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಪೋಸ್ಟಿಂಗ್ ಮಾಡಲಾಗುತ್ತದೆ. ಸೀನಿಯರ್ ರಿಸರ್ಚ್ ಫೆಲೋ (SRF) ಅಭ್ಯರ್ಥಿಗಳಿಗೆ ಮಾಸಿಕ 31,000 ರೂ., ಪ್ರಾಜೆಕ್ಟ್ ಅಸಿಸ್ಟೆಂಟ್​- ಹೈಡ್ರಾಲಜಿ (ಫೀಲ್ಡ್​) ಅಭ್ಯರ್ಥಿಗಳಿಗೆ ಮಾಸಿಕ 29,000 ರೂ., ಪ್ರಾಜೆಕ್ಟ್​ ಅಸಿಸ್ಟೆಂಟ್ (RS & GIS)ಗಳಿಗೆ ಮಾಸಿಕ 21,000- 25,000 ರೂ. ವೇತನ ನೀಡಲಾಗುತ್ತದೆ.

ಶೈಕ್ಷಣಿಕ, ವಯೋಮಿತಿ ಅರ್ಹತೆ ಏನು?

ಸೀನಿಯರ್ ರಿಸರ್ಚ್ ಫೆಲೋ(SRF) ಗೆ ಅರ್ಜಿ ಸಲ್ಲಿರುವ ಅಭ್ಯರ್ಥಿಗಳು ಎಂ.ಎಸ್ಸಿ, ಪಿಎಚ್​.ಡಿ ಪದವಿ ಪೂರ್ಣಗೊಳಿಸಿರಬೇಕು. ಪ್ರಾಜೆಕ್ಟ್ ಅಸಿಸ್ಟೆಂಟ್​- ಹೈಡ್ರಾಲಜಿ (ಫೀಲ್ಡ್​) ವಿಭಾಗಕ್ಕೆ ಅರ್ಜಿ ಸಲ್ಲಿಸುವವರು ಬಿ.ಎಸ್ಸಿ, ಬಿ.ಟೆಕ್​ ಹಾಗೂ ಪ್ರಾಜೆಕ್ಟ್​ ಅಸಿಸ್ಟೆಂಟ್ (RS & GIS) ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿ, ಬಿ.ಎಸ್ಸಿ, ಬಿಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

ಆಯ್ಕೆ ಪ್ರಕ್ರಿಯೆ ಹೀಗಿರುತ್ತದೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಮತ್ತು ಸಂದರ್ಶನದ ಬಳಿಕ ಅರ್ಹರಾದವರನ್ನು ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆ ಮತ್ತು ಕೌಶಲ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಧಾರವಾಡದ ಕೃಷಿ ನಗರ ಚೇಂಬರ್ ಆಫ್ ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್ (HQ) ನಲ್ಲಿ ಜುಲೈ 10ರಂದು ಸಂದರ್ಶನ ನಡೆಸಲಾಗುತ್ತದೆ.

Continue Reading
Advertisement
Kerala govt
ದೇಶ13 mins ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Teach for India
ಬೆಂಗಳೂರು18 mins ago

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Bridge Collapse
ದೇಶ19 mins ago

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Shivamogga News Give top priority to cleanliness says Raju Hiriyawali
ಶಿವಮೊಗ್ಗ24 mins ago

Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

Stampede Tips and Tricks
ದೇಶ28 mins ago

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

ಕರ್ನಾಟಕ28 mins ago

MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

Deadly Attack
ದೇಶ48 mins ago

Deadly Attack: ಹಾಡಹಗಲೇ ಶಿವಸೇನೆ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೋ ಇದೆ

Viral Video
Latest51 mins ago

Viral Video: ಮೆಟ್ರೋದಲ್ಲಿ ಕೋತಿ ಚೇಷ್ಟೆಗೆ ಕೊನೆಯೇ ಇಲ್ಲ! ಈ ಮಂಗ್ಯಾನ ಡ್ಯಾನ್ಸ್‌ ನೋಡಿ!

Anganwadi workers should make good use of mobile phones says MLA Channareddy Patil Thunnur
ಯಾದಗಿರಿ1 hour ago

Yadgiri News: ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಉಪಯುಕ್ತ : ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು

congratulation ceremony for Dr. Jinadatta Hadagali on 7th July in Dharwad
ಧಾರವಾಡ1 hour ago

Dharwad News: ಧಾರವಾಡದಲ್ಲಿ ಜು.7ರಂದು ಡಾ. ಜಿನದತ್ತ ಅ. ಹಡಗಲಿಗೆ ಅಭಿನಂದನಾ ಸಮಾರಂಭ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ4 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ5 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ7 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ8 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು9 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು10 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ14 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌