Yoga Day 2022 | ಯೋಗ ದಿನ ನಡೆದ ಕರ್ನಾಟಕದ 5 ಪಾರಂಪರಿಕ ತಾಣಗಳು - Vistara News

ಕರ್ನಾಟಕ

Yoga Day 2022 | ಯೋಗ ದಿನ ನಡೆದ ಕರ್ನಾಟಕದ 5 ಪಾರಂಪರಿಕ ತಾಣಗಳು

ಭಾರತ ಸ್ವತಂತ್ರವಾಗಿ 75ನೇ ವರ್ಷಾಚರಣೆ ನಿಮಿತ್ತ ದೇಶದ 75 ಪಾರಂಪರಿಕ ತಾಣಗಳಲ್ಲಿ Yoga Day 2022 ಆಯೋಜಿಸಲಾಗಿತ್ತು. ಇವುಗಳಲ್ಲಿ ಕರ್ನಾಟಕದ ಐದು ತಾಣಗಳನ್ನು ಆಯ್ಕೆ ಮಾಡಲಾಗಿತ್ತು.

VISTARANEWS.COM


on

modi mysuru yoga
ಮೈಸೂರಿನಲ್ಲಿ ಯೋಗ ದಿನದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಆಯುಷ್‌ ಸಚಿವ ಸರಬಾನಂದ ಸೋನೋವಾಲ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನದ (Yoga Day 2022) ನಿಮಿತ್ತ ದೇಶ ಹಾಗೂ ವಿದೇಶಗಳಲ್ಲೂ ಕಾರ್ಯಕ್ರಮಗಳು ಆಯೋಜನೆಯಾಗಿವೆ. ಇವುಗಳಲ್ಲಿ ಕೆಲವು ಸರ್ಕಾರದ ವತಿಯಿಂದ ನಡೆದರೆ ಬಹಳಷ್ಟು ಖಾಸಗಿ ಸಂಘ ಸಂಸ್ಥೆಗಳೂ ಆಯೋಜಿಸಿವೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ೭೫ನೇ ವರ್ಷಾಚರಣೆ ಸಲುವಾಗಿ ದೇಶದ ೭೫ ಪಾರಂಪರಿಕ ತಾಣಗಳನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿತ್ತು.

೮ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದ್ದ ಈ ೭೫ ಪಾರಂಪರಿಕ ತಾಣಗಳಲ್ಲಿ ಕರ್ನಾಟಕದ ಐದು ಸ್ಥಳಗಳು ಸೇರಿದ್ದವು. ಈ ಐದು ಸ್ಥಳಗಳಲ್ಲೂ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಉಪಸ್ಥಿತರಿದ್ದು ಯೋಗ ದಿನದಲ್ಲಿ ಭಾಗವಹಿಸಿದರು.

1. ಅರಮನೆ ನಗರಿ ಮೈಸೂರು

ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮವೇ ಯೋಗ ದಿನದ ಪ್ರಮುಖ ಕಾರ್ಯಕ್ರಮವಾಗಿರುತ್ತದೆ. ಅದರಂತೆ ಈ ವರ್ಷ ಅರಮನೆ ನಗರ ಮೈಸೂರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಮೈಸೂರು ಅರಮನೆ ಆವರಣದಲ್ಲೆ ನಡೆದ ಕಾರ್ಯಕ್ರಮದಲ್ಲಿ ಸುಮಾರು ೧೫ ಸಾವಿರ ಯೋಗ ಪ್ರಿಯರು ಪ್ರಧಾನಿಯವರ ಜತೆಗೆ ಸಾಮೂಹಿಕ ಯೋಗಾಸನ ನಡೆಸಿದರು. ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೊಟ್‌, ಕೇಂದ್ರ ಆಯುಷ್‌ ಸಚಿವ ಸರ್ವಾನಂದ ಸೋನೊವಾಲ್‌, ಮೈಸೂರು ರಾಜಮನೆತನದ ಪ್ರಮೋದಾ ದೇವಿ ಒಡೆಯರ್‌, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಉಪಸ್ಥಿತರಿದ್ದರು.

ಯೋಗದಿಂದ ಮನಸ್ಸು, ಬುದ್ಧಿ, ದೇಹ ಒಂದಾಗುತ್ತದೆ ಎನ್ನುವಂತೆಯೇ ಯೋಗದಿಂದ ವಿಶ್ವವೇ ಒಂದಾಗಬಹುದು. ಯೋಗವನ್ನು ಒಂದು ಕೆಲಸ, ಜೀವನದ ಒಂದು ಭಾಗ ಎಂದುಕೊಳ್ಳುವ ಬದಲಿಗೆ ಯೋಗವೇ ಜೀವನ ಮಾರ್ಗವಾಗಬೇಕು.

-ನರೇಂದ್ರ ಮೋದಿ, ಪ್ರಧಾನಿ

ಮೈಸೂರಿನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌

2. ವಿಜಯನಗರ ರಾಜಧಾನಿಯಲ್ಲಿ ಯೋಗ

ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳ ನೇತೃತ್ವದಲ್ಲಿ 8ನೇ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಐತಿಹಾಸಿಕ ಹಂಪಿಯಲ್ಲಿ ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌. ಐತಿಹಾಸಿಕ ಸ್ಮಾರಕ ಮಧ್ಯೆ ಯೋಗ ಕಾರ್ಯಕ್ರಮ ಜನಮನ ಸೆಳೆಯಿತು. ಯೋಗಕ್ಕೆ ಆಗಮಿಸಿದ್ದ ಸುಮಾರು ಐದು ಸಾವಿರ ಜನರಿಗೆ ಯೋಗ ಮಾಡಲು ಹಂಪಿಯ ಬಸವಣ್ಣ ಮಂಟಪದಿಂದ ಬಿಷ್ಟಪ್ಪಯ್ಯ ಗೋಪುರದವರೆಗೆ ವ್ಯವಸ್ಥೆ ಮಾಡಲಾಗಿತ್ತು. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ , ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಭಾಗವಹಿಸಿದ್ದರು.

ಪ್ರಾಣಾಯಾಮ, ಯೋಗಾಸನದಿಂದ ದೇಹ, ಮನಸ್ಸಿನ ಆರೋಗ್ಯ ವೃದ್ಧಿ ಸಾಧ್ಯ. ಜಗತ್ತಿನ ಬಹುತೇಕ ಭಾಗದಲ್ಲಿ ಇಂದು ಹಗಲು ಹೆಚ್ಚಾಗಿರುತ್ತದೆ, ಹೀಗಾಗಿ ಯೋಗ ದಿನಾಚರಣೆ ಇಂದೇ ಮಾಡಬೇಕು ಎಂದು ಘೋಷಣೆ ಮಾಡಿದ್ದಾರೆ. ಯೋಗವನ್ನು ನಿತ್ಯ ಜೀವನದ ಭಾಗವನ್ನಾಗಿ ಮಾಡಿಕೊಳ್ಳೋಣ. -ಪ್ರಲ್ಹಾದ ಜೋಶಿ, ಕೇಂದ್ರ ಸಚಿವ

ಹಂಪಿಯಲ್ಲಿ ಆಯೋಜಿಸಿರುವ ಯೋಗ ದಿನದ ಕಾರ್ಯಕ್ರಮ

3. ಪಟ್ಟದಕಲ್ಲಿನಲ್ಲಿ ಸಂಭ್ರಮ

ಬಾಗಲಕೋಟೆ ಜಿಲ್ಲೆ ಬಾದಾಮಿ ತಾ‌ಲಾಕಿನ ಐತಿಹಾಸಿಕ ಪಟ್ಟದಕಲ್ಲು ಗ್ರಾಮದಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಶ್ವ ಪಾರಂಪರಿಕ ತಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಡಿಸಿ ಪಿ. ಸುನಿಲ್ ಕುಮಾರ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.

ಭಾರತೀಯ ಯೋಗವನ್ನು ಪ್ರಧಾನಿ ಮೋದಿ ಇಡೀ ವಿಶ್ವಕ್ಕೆ ಪರಿಚಯಿಸಿದ್ದಾರೆ. ಇವತ್ತು ಇಡೀ ಜಗತ್ತಿನಲ್ಲಿ ಯೋಗ ದಿನಾಚರಣೆ ಸಂಭ್ರಮದಲ್ಲಿದೆ. ಯೋಗ ಕೇವಲ ಒಂದು ದಿನಕ್ಕೆ ಸೀಮಿತ ಆಗಬಾರದು. ಯೋಗ ನಮ್ಮ ಜೀವನದ ಅವಿಭಾಜ್ಯ ಅಂಗ ಆಗಬೇಕು.
– ರಾಜೀವ್‌ ಚಂದ್ರಶೇಖರ್‌

ಪಟ್ಟದಕಲ್ಲಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

4. ಹೊಯ್ಸಳ ರಾಜಧಾನಿಯಲ್ಲಿ ಯೋಗ

ಹಾಸನ ಜಿಲ್ಲೆಯ ಹಳೆಬೀಡಿನ ಹೋಯ್ಸಳೇಶ್ವರ ದೇವಾಲಯದ ಆವರಣದಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಬೇಲೂರು ಶಾಸಕ ಲಿಂಗೇಶ್, ಡಿಸಿ ಆರ್. ಗಿರೀಶ್, ಸ್ಥಳೀಯ ಮುಖಂಡರು, ಶಾಲಾ ಮಕ್ಕಳು, ಸ್ವಾಮೀಜಿಗಳು, ವಿವಿಧ ಯೋಗ ಶಿಕ್ಷಣ ಸಂಸ್ಥೆಯ ಯೋಗ ಪಟುಗಳು, ಜಿಲ್ಲಾಡಳಿತ ಮತ್ತು ಅಧಿಕಾರಿಗಳು ಭಾಗಿಯಾಗಿದ್ದರು.

ಯೋಗ ಎನ್ನುವುದು ತತ್ವಜ್ಞಾನ, ಪ್ರಜ್ಞೆ ಹಾಗೂ ವಿಜ್ಞಾನದ ಸಮ್ಮಿಲನ. ಭಾರತದ ಪ್ರಾಚೀನ ಸಭ್ಯತೆಯನ್ನು ಆಚರಿಸಲು ಇಂದು ಇಡೀ ವಿಶ್ವ ಒಂದಾಗಿರುವುದು ಯೋಗದ ಮಹತ್ವವನ್ನು ತೋರಿಸುತ್ತಿದೆ.
– ಶೋಭಾ ಕರಂದ್ಲಾಜೆ

ಹಳೇಬೀಡಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

5. ಗೋಲ್‌ಗುಂಬಜ್‌ನಲ್ಲಿ ಹಿಜಾಬ್‌ ಧರಿಸಿ ಯೋಗ

ವಿಶ್ವವಿಖ್ಯಾತ ಗೋಲ್‌ಗುಂಬಜ್‌ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅರಣ್ಯ ಮತ್ತು ಆಹಾರ, ನಾಗರಿಕ ಸರಬರಾಜು ಸಚಿವ ಉಮೇಶ ವಿ. ಕತ್ತಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಶಾಸಕ ದೇವಾನಂದ ಚವ್ಹಾಣ್, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಎಸ್.ಪಾಟೀಲ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ ಉಪಸ್ಥಿತರಿದ್ದರು.

ಯೋಗ ಮಾಡಲು ಇತರರಿಗೆ ಪ್ರೇರೇಪಿಸೋಣ. ಇಡೀ ಸಮಾಜವನ್ನು ಒಂದೇ ಸೂತ್ರದಡಿ ತರುವ ಪ್ರಯತ್ನದಡಿ ಯೋಗ ದಿನಾಚರಣೆಗೆ ವಿಶೇಷ ಆದ್ಯತೆ ನೀಡಿದ್ದು, ಹಲವು ಧರ್ಮಿಯರು ಹಲವು ಭಾಷಿಕರನ್ನು ಒಳಗೊಂಡ ಭಾರತ ದೇಶದಲ್ಲಿ ಎಲ್ಲರನ್ನು ಒಗ್ಗೂಡಿಸಲು ಯೋಗದಲ್ಲಿ ಮಾತ್ರ ಅಂತಹ ಶಕ್ತಿ ಇದೆ.
– ಭಗವಂತ ಖೂಬಾ, ಕೇಂದ್ರ ಸಚಿವ

ಗೋಳಗುಮ್ಮಟ ಬಳಿ ವಿದ್ಯಾರ್ಥಿನಿಯರು ಯೋಗಾಸನ ಮಾಡಿದರು

ಇದನ್ನೂ ಓದಿ | Yoga Day 2022 | ಯೋಗ ಸುಸ್ಥಿರ ಬದುಕಿಗೆ ದಾರಿ ಎಂದ ವಿಶ್ವಸಂಸ್ಥೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election 2024: ಬಾಗಲಕೋಟೆಯ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರ ಭರ್ಜರಿ ಮತಯಾಚನೆ ಮಾಡಲಾಯಿತು. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ಮುಖಂಡರು ಅಭ್ಯರ್ಥಿ ಪರ ಮತಯಾಚಿಸಿದರು.

VISTARANEWS.COM


on

Election campaign for Congress candidate Samyukta Patil in Prajadhwani convention at Bagalkot
Koo

ಬಾಗಲಕೋಟೆ: ಇಲ್ಲಿನ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರ ಭರ್ಜರಿ ಮತಯಾಚನೆ (Lok Sabha Election 2024) ಮಾಡಲಾಯಿತು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ಮುಖಂಡರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ, ಸಂಸತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಮತವೆಂಬ ಆಶೀರ್ವಾದ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

ಕಾಂಗ್ರೆಸ್‌ ಮುಖಂಡ ನಿಕೇತ್‌ ರಾಜ್‌ ಮೌರ್ಯ ಮಾತನಾಡಿ, ಕರ್ನಾಟಕ ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆ ಇಡೀ ದೇಶದ ಜನ ಚರ್ಚೆ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದ್ದು, 5 ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಜನರಿಗೆ ತಲುಪಿಸಿದೆ. ಆದರೆ ಗ್ಯಾರಂಟಿ ನೋಡಿ ಸಹಿಸಲು ಸಾಧ್ಯವಾಗದೇ ಬಿಜೆಪಿ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಗೆದ್ದೇ ಗೆಲ್ಲುತ್ತಾರೆ. ಸಂಸದರಾಗುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮಾತನಾಡಿದರು.

ಇದನ್ನೂ ಓದಿ: Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

ಸಮಾವೇಶದಲ್ಲಿ ಸಚಿವರಾದ ಕೆ.ಎನ್‌. ರಾಜಣ್ಣ, ಶಿವಾನಂದ ಪಾಟೀಲ್‌, ಶಾಸಕರಾದ ವಿಜಯಾನಂದ ಕಾಶಪ್ಪನವರ್‌, ಭೀಮಸೇನ್‌ ಚಿಮ್ಮನಕಟ್ಟಿ, ಎಚ್‌.ವೈ. ಮೇಟಿ, ಪ್ರದೀಪ್‌ ಈಶ್ವರ್‌, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಮೊಹಮ್ಮದ್‌ ನಲಪಾಡ್‌ ಹ್ಯಾರಿಸ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ನಂಜಯ್ಯನಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರಕ್ಷಿತಾ ಈಟಿ, ಆನಂದ ನ್ಯಾಮಗೌಡ, ಅಜಯ್‌ ಕುಮಾರ್‌ ಸರ್‌ ನಾಯಕ್‌, ಪಕ್ಷದ ಮುಖಂಡರಾದ ಬಿ.ಆರ್‌. ಯಾವಗಲ್‌, ಎಂ.ಪಿ. ನಾಡಗೌಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ದೇಶ

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Lok Sabha Election: ದೇಶದ ವಿಕಾಸ ಹಾಗೂ ಪ್ರಗತಿಯ ಚುನಾವಣೆ ಇದಾಗಿದೆ. ಜೋಶಿ ಅವರು 5ನೆಯ ಬಾರಿ ಸ್ಪರ್ದೆ ಮಾಡಿದ್ದಾರೆ. ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಅವರು ಗೆಲ್ಲಬೇಕು. ಆ ಮೂಲಕ ಮೋದಿಯವರ ಕೈ ಬಲಪಡಿಸಬೇಕು. ನಾನು ಕಾರ್ಯಕರ್ತನಾಗಿ ಕೆಲಸ ಮಾಡಿ ಸಿಎಂ ಆಗಿದ್ದೇನೆ. ಈಗಲೂ ಸಹ ನಾನು ಕಾರ್ಯಕರ್ತನಾಗಿಯೇ ಇದ್ದೇನೆ. ನೀವೆಲ್ಲ ಭಾಗ್ಯವಂತರು ಯಾಕೆಂದರೆ ಜೋಶಿ ಆದರ್ಶ ಸಂಸದರು. ಅವರು ಮೋದಿಯವರ ಹತ್ತಿರವೇ ಇರುವ ಸಂಸದರಾಗಿದ್ದಾರೆ ಎಂದು ನುಡಿದರು.

VISTARANEWS.COM


on

Lok Sabha Election
Koo

ಧಾರವಾಡ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಧಾರವಾಡ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್​ ಜೋಶಿ (pralhad joshi) ಪರ ಗುರುವಾರ ಮಹಾರಾಷ್ಟ್ರ ಸಿಎಂ ಹಾಗೂ ಶಿವಸೇನೆ (Eknath Shinde) ಮುಖ್ಯಸ್ಥ ಏಕನಾಥ ಶಿಂಧೆ ಅವರು ಪ್ರಚಾರ ಭಾಷಣೆ ಮಾಡಿದರು. ನಗರದ ಮೃತ್ಯುಂಜಯ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಮೋದಿ (Narendra Modi) ನೀಡುವ ಗ್ಯಾರಂಟಿ ಪಡೆಯಲು ಪ್ರಲ್ಹಾದ್ ಜೋಶಿಯನ್ನು ಗೆಲ್ಲಿಸಿ ಎಂದು ಕರೆಕೊಟ್ಟರು.

ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಸಿಎಂ ಶಿಂಧೆ ಅವರು, ಧಾರವಾಡದ ಜನತೆಯನ್ನು ಭೇಟಿ ಮಾಡಿದ್ದು ಖುಷಿ ತಂದಿದೆ ಎಂದು ಹೇಳಿದರು. ಛತ್ರಪತಿ ಶಿವಾಜಿ ಅವರಿಗೂ ಧಾರವಾಡಕ್ಕೂ ಸಂಬಂಧ ಇದೆ. ಪುಣೆ ಹಾಗೂ ಧಾರವಾಡ ಸಾಂಸ್ಕೃತಿಕ, ಶೈಕ್ಷಣಿಕ ಕೇಂದ್ರ ಎಂಬುದಾಗಿ ನುಡಿದರು.

ದೇಶದ ವಿಕಾಸ ಹಾಗೂ ಪ್ರಗತಿಯ ಚುನಾವಣೆ ಇದಾಗಿದೆ. ಜೋಶಿ ಅವರು 5ನೆಯ ಬಾರಿ ಸ್ಪರ್ದೆ ಮಾಡಿದ್ದಾರೆ. ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಅವರು ಗೆಲ್ಲಬೇಕು. ಆ ಮೂಲಕ ಮೋದಿಯವರ ಕೈ ಬಲಪಡಿಸಬೇಕು. ನಾನು ಕಾರ್ಯಕರ್ತನಾಗಿ ಕೆಲಸ ಮಾಡಿ ಸಿಎಂ ಆಗಿದ್ದೇನೆ. ಈಗಲೂ ಸಹ ನಾನು ಕಾರ್ಯಕರ್ತನಾಗಿಯೇ ಇದ್ದೇನೆ. ನೀವೆಲ್ಲ ಭಾಗ್ಯವಂತರು ಯಾಕೆಂದರೆ ಜೋಶಿ ಆದರ್ಶ ಸಂಸದರು. ಅವರು ಮೋದಿಯವರ ಹತ್ತಿರವೇ ಇರುವ ಸಂಸದರಾಗಿದ್ದಾರೆ ಎಂದು ನುಡಿದರು.

ಕಾಂಗ್ರೆಸ್ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಅವರು ಗೆಲ್ಲುವ ಮೊದಲು ಏನೇನೋ ಕೊಡ್ತೀನಿ ಅಂಥ ಹೇಳಿದ್ದರು. ಆದರೆ ಈಗ ನಮ್ಮಲ್ಲಿ ದುಡ್ಡಿಲ್ಲ ಅಂತಾರೆ. ಆದ್ರೆ ದೇಶದಲ್ಲಿ ಚಾಲ್ತಿ ಇರೋದು ಮೋದಿ ಗ್ಯಾರಂಟಿ ಎಂದು ಅವರು ಹೇಳಿದರು.

ಇದನ್ನೂ ಓದಿ: K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

ಜಾಗತಿಕ ಅರ್ಥ ವ್ಯವಸ್ಥೆಯಲ್ಲಿ ನಾವು 5ನೆಯ ಪಡೆಯಲು ಮೋದಿ ಕಾರಣ. ದೇಶದಲ್ಲಿ ಮೋದಿ ಅಭಿವೃದ್ಧಿ ಮಾಡಿದ್ದಾರೆ. ಒಂದೇ ಒಂದು ರಜೆ ಸಹ ಪಡೆಯದೆ ಕೆಲಸ ಮಾಡಿದ್ದಾರೆ. ಸ್ವಲ್ಪ ಚಳಿ ಆದರೆ ವಿದೇಶಕ್ಕೆ ತೆರಳುವವರು ಬೇರೆ ಪಾರ್ಟಿಯ ಯುವರಾಜ (ರಾಹುಲ್ ಗಾಂಧಿ) ಎಂದು ಶಿಂಧೆ ಹೇಳಿದರು.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ದ್ವಜ ಹಾರಿಸಿದ ಕೀರ್ತಿ ಜೋಶಿ ಅವರಿಗೆ ಇದೆ. ಪಾಕಿಸ್ತಾನದವರು ಮೊದಲು ನಮ್ಮ ದೇಶದಲ್ಲಿ ಬಾಂಬ್ ಹಾಕುತ್ತಿದ್ದರು. ಈಗ ಭಾರತ ಮೋದಿ ನೇತೃತ್ವದಲ್ಲಿ ಪಾಕ್ ನ ಒಳಗೆ ಹೊಕ್ಕು ಸದೆಬಡಿಯುತ್ತಿದೆ ಎಂದು ಹೇಳಿದರು.

ದ್ವಾರಕಾ ನಗರದಲ್ಲಿ ಸಮುದ್ರದ ಒಳಗೆ ಹೋಗಿ ಮೋದಿ ದೇಶದ ಒಳಿತಿಗೆ ಪ್ರಾರ್ಥನೆ ಮಾಡಿದ್ದಾರೆ. ಮೋದಿ ದೇಶದ ಕೆಲಸಕ್ಕಾಗಿ ಅವರು ಇದ್ದಾರೆ. ಕೋಟ್ಯಾನುಕೋಟಿ ರಾಮನ ಭಕ್ತರ ಸಂಕಲ್ಪ ಪೂರ್ಣ ಆಗಿದೆ. ಈಗ ಎಲ್ಲರೂ ಖುಷಿಯಿಂದ ಇದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮಾಡಿದ ಚಂದ್ರಯಾನ ಫೇಲ್ ಆಗಿವೆ. ಪದೇ ಪದೇ ತಪ್ಪುಗಳನ್ನು ಮಾಡಿದ್ದಾರೆ. ಆದಾಗ್ಯೂ ಇಂಡಿಯಾ ಬಣ ಮೋದಿಯನ್ನು ಸೋಲಿಸುವುದಕ್ಕೆ ನಿಂತಿದೆ, ಅದು ಅದು ಎಂದಿಗೂ ಆಗುವುದಿಲ್ಲ ಎಂದು ನುಡಿದರು.

Continue Reading

ಪ್ರಮುಖ ಸುದ್ದಿ

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

K. Annamalai: ವಿಜಯಪುರ ನಗರದ ಮೀನಾಕ್ಷಿ ಚೌಕನಲ್ಲಿ ಆಯೋಜಿಸಿದ್ದ ಯುವ ಸಮಾವೇಶದಲ್ಲಿ ಅಣ್ಣಾಮಲೈ ಅವರು ಮಾತನಾಡಿದ್ದರು. 7 ಬಾರಿ ಸತತಯಾಗಿ ಗೆಲ್ಲುವುದು ಸುಲಭವಲ್ಲ. 70 ವರ್ಷ ವಯಸ್ಸಿನ ರಮೇಶ ಜಿಗಜಿಣಗಿ ಅವರು ಗೆದ್ದೇ ಗೆಲ್ಲುತ್ತಾರೆ. ವಿಜಯಪುರ ಕ್ಷೇತ್ರದ ಜನರ ಪ್ರೀತಿ ಜಿಗಜಿಣಗಿಯವರ ಮೇಲಿದೆ ಎಂದು ಅಣ್ಣಾಮಲೈ ಹೇಳಿದರು. ಈ ವೇಳೆ ರಮೇಶ ಜಿಗಜಿಣಗಿ ಆನಂದಬಾಷ್ಪ ಸುರಿಸಿದರು.

VISTARANEWS.COM


on

K. Annamalai
Koo

ವಿಜಯಪುರ: ಲೋಕ ಸಭಾ ಕ್ಷೇತದ ವಿಜಯಪುರ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರ ಗುರುವಾರ ಮಾಜಿ ಐಎಎಸ್​ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (K. Annamalai) ಅವರು ಮತಯಾಚನೆ ಮಾಡಿದರು. ಈ ವೇಳೆ ಅಣ್ಣಾಮಲೈ ರಮೇಶ್​ ಅವರ ಸಾಧನೆಗಳನ್ನು ಹೊಗಳಿದರು. ತಮ್ಮನ್ನು ಹೊಗಳುತ್ತಿದ್ದಂತೆ ಭಾವುಕರಾದ ಜಿಗಜಿಣಗಿ ಅವರು ಕಣ್ಣೀರು ಹಾಕಿದ ಪ್ರಸಂಗವೂ ನಡೆಯಿತು.

ವಿಜಯಪುರ ನಗರದ ಮೀನಾಕ್ಷಿ ಚೌಕನಲ್ಲಿ ಆಯೋಜಿಸಿದ್ದ ಯುವ ಸಮಾವೇಶದಲ್ಲಿ ಅಣ್ಣಾಮಲೈ ಅವರು ಮಾತನಾಡಿದರು. 7 ಬಾರಿ ಸತತಯಾಗಿ ಗೆಲ್ಲುವುದು ಸುಲಭವಲ್ಲ. 70 ವರ್ಷ ವಯಸ್ಸಿನ ರಮೇಶ ಜಿಗಜಿಣಗಿ ಅವರು ಗೆದ್ದೇ ಗೆಲ್ಲುತ್ತಾರೆ. ವಿಜಯಪುರ ಕ್ಷೇತ್ರದ ಜನರ ಪ್ರೀತಿ ಜಿಗಜಿಣಗಿಯವರ ಮೇಲಿದೆ ಎಂದು ಅಣ್ಣಾಮಲೈ ಹೇಳಿದರು. ಈ ವೇಳೆ ರಮೇಶ ಜಿಗಜಿಣಗಿ ಆನಂದಬಾಷ್ಪ ಸುರಿಸಿದರು.

ನಾವು ದೊಡ್ಡ ಸಂಖ್ಯೆಯಲ್ಲಿ ‌ನಾವು ಸೇರಿದ್ದೇವೆ. ಯುವಕರ ಬದುಕು ದೇಶದಲ್ಲಿ ಹೇಗೆ ಇರಬೇಕೆಂದು ಹೇಳಲು ಸೇರಿದ್ದೇವೆ. 26 ನೇ ವಯಸ್ಸಿನಲ್ಲಿ ಜಿಗಜಿಣಗಿ ಸಚಿವರಾಗಿದ್ದರು. 2014 ಮೇ 30ರಂದು ‌ನಾವು ಹೊಸ ರಾಜಕೀಯ ಅಧ್ಯಾಯ ಬರೆದೆವು. ಮೋದಿ ಅವರು ಪ್ರಧಾನಮಂತ್ರಿ ಆಗಬೇಕೆಂದು ಬಯಸಿದೆವು. ಪಿಎಂ‌ ಜಾಗದಲ್ಲಿ ಮೋದಿ ಅವರನ್ನು ಕೂರಿಸಿದೆವು. ಆ ವೇಳೆ 11 ಕೋಟಿ‌ಜನರಿಗೆ ಶೌಚಾಲಯ ಇರಲಿಲ್ಲ, 42 ಕೋಟಿ ಜನರಿಗೆ ಬ್ಯಾಂಕ್ ಅಕೌಂಟ್ ಇರಲಿಲ್ಲ. ಆದರೆ ಮೋದಿ ಬಂದ ಬಳಿಕ ಎಲ್ಲವೂ ಸಿಕ್ಕಿದೆ ಎಂದು ಅಣ್ಣಾಮಲೈ ಅವರು ಹೇಳಿದರು.

ಇದನ್ನೂ ಓದಿ: Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

ಕಾಂಗ್ರೆಸ್ ನವರು ಪ್ರತಿ ಚುನಾವಣೆಯಲ್ಲೂ ಬಡತನ ನಿರ್ಮೂಲನೆ ಮಾಡುತ್ತೇವೆಂದು ಭಾಷಣ ಮಾಡಿಕೊಂಡು ಬಂದಿದ್ದಾರೆ. ಆದರೆ ಬಡತನ ನಿರ್ಮೂಲನೆ ಮಾಡಲಿಲ್ಲ. ಈಗಲೂ ಅದೇ ಮಾತನಾಡುತ್ತಿದ್ದಾರೆ. ವಾಜಪೇಯಿ‌ 13 ದಿನ, 13 ತಿಂಗಳು ಹಾಗೂ ಐದು ವರ್ಷ ಸರ್ಕಾರ ಮಾಡಿದ್ದರು. ಮೋದಿ ಅವರಿಗೆ 10 ವರ್ಷ ಅಧಿಕಾರ ಸಿಕ್ಕಿದೆ. ಕಾಂಗ್ರೆಸ್ ಈಗಲೂ ಅದೇ ಬಡತನದ ಕುರಿತು ಮಾತನಾಡುತ್ತಿದೆ ಎಂದು ಅಣ್ಣಾಮಲೈ ಅವರು ಲೇವಡಿ ಮಾಡಿದರು.

ಒಂದು ವೋಟ್ ನಿಂದ ಏನಾಗುತ್ತದೆ ಎಂದು ಉದಾಸೀನ ಮಾಡಬೇಡಿ. ರಾಜಕೀಯ ವ್ಯವಸ್ಥೆ ಬಗ್ಗೆ ನಿರ್ಧರಿಸಲು ಮೋದಿಗೆ ವೋಟ್ ಮಾಡಿ. ರಮೇಶ ಜಿಗಜಿಣಗಿ ಮತ್ತೇ ಸಂಸದರಾಗಬೇಕು ಎಂದು ಹೇಳಿದರು

197 ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. ಮೋದಿ ಇಂತ ವ್ಯವಸ್ಥೆ ಮಾಡಿದ್ದಾರೆ. ದೇಶ ಮೊದಲು ಎಂಬುದು ಮೋದಿ‌ಯವರ ಸಿದ್ಧಾಂತ. ತಮಿಳುನಾಡಿನಲ್ಲಿ ಒಂದು‌ ಪಕ್ಷವಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಬೆಂಬಲ ನೀಡಿದವರು ಅವರು. ತಮಗೆ ಬೇಕಾದ ಖಾತೆಗಳನ್ನು ಪಡೆದುಕೊಂಡರು. ತಮಿಳುನಾಡಿನಲ್ಲಿ ಏಳು ಕೇಂದ್ರ ಸಚಿವರಾಗಿದ್ದರು. 2 ಜಿ ಸ್ಪೆಕ್ಟ್ರಮ್ ಹಗರಣ ಮಾಡಿದರು ಎಂದು ಇಂಡಿಯಾ ಬ್ಲಾಕ್​ ಬಗ್ಗೆ ದೂರಿದರು.

ಜೂನ್ 4 ರ ಬಳಿಕ 70 ವರ್ಷದ ಮೇಲಿನವರಿಗೆ 5 ಲಕ್ಷ ರೂಪಾಯಿ ಆರೋಗ್ಯ ವಿಮೆ ಕೊಡೊದಾಗಿ ಮೋದಿ ಹೇಳಿದ್ದಾರೆ. ಮೋದಿ ಮನೆಯಿಲ್ಲದವರಿಗರ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದಾರೆ. 295 ಭರವಸೆಗಳಲ್ಲಿ ಎಲ್ಲ ಭರವಸೆ ಈಡೇರಿಸಿದ್ದೇವೆ ಎಂದು ಅವರು ಹೇಳಿದರು.

ಈ ಚುನಾವಣೆಯಲ್ಲಿ ಶೇಕಡಾ 51 ಮತ ಬಿಜೆಪಿಗೆ ಬೀಳಬೇಕು. ಮೇಡ್ ಇನ್ ಇಂಡಿಯಾದಲ್ಲಿ ಚಂದ್ರನ ದಕ್ಷಿಣ ಕಕ್ಷೆಯಲ್ಲಿ ಇಳಿದಿದ್ದೇವೆ. 14 ದೇಶಗಳಿಗೆ‌ ನಾನಾ ಸರಕು ರಪ್ತು ಮಾಡುತ್ತಿದ್ದೇವೆ. ಕೊರೊನಾ‌ ಕಾಲದಲ್ಲಿ ಅಮೆರಿಕಾಗೂ ಮುನ್ನ ಲಸಿಕೆ ಕಂಡು‌ ಹಿಡಿದೇವು. 10 ವರ್ಷ ಕಾಲ ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದೇವೆ ಎಂದು ಅಣ್ಣಾಮಲೈ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

AC Blast: ಜ್ಯುವೆಲ್ಲರಿಯಲ್ಲಿರುವ ಎಸಿ ವ್ಯವಸ್ಥೆಗೆ ಗ್ಯಾಸ್ ಮರುಪೂರಣ ಮಾಡಲು ಹೋದಾಗ ಘಟನೆ ಸಂಭವಿಸಿದೆ. ಈ ವೇಳೆ ಶಾರ್ಟ್​ ಸರ್ಕೀಟ್​ ಉಂಟಾಗಿದ್ದು ಏಕಾಏಕಿ ಬ್ಲಾಸ್ಟ್ ಎಸಿ ಬ್ಲಾಸ್ಟ್​ ಆಗಿ ಕಿಟಕಿ ಗಾಜುಗಳು ಎಲ್ಲೆಡೆ ಸಿಡಿದು ಬಿದ್ದಿವೆ. ಈ ಕೆಲಸಕ್ಕಾಗಿ ಬಂದಿದ್ದ ಮೂವರು ಕಾರ್ಮಿಕರಿಗೆ ಗಾಯವಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭಿರವಾಗಿ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

AC Blast
Koo

ಬಳ್ಳಾರಿ: ಶಾರ್ಟ್ ಸರ್ಕ್ಯೂಟ್​ನಿಂದಾಗಿ ಏರ್​ ಕಂಡೀಷನರ್​ ಯಂತ್ರ (AC Blast) ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡಿದೆ. ಬಳ್ಳಾರಿಯ ಕಲ್ಯಾಣ್ ಜುವೆಲರ್ಸ್ ನಲ್ಲಿ ಘಟನೆ ನಡೆದಿದೆ. ಬಳ್ಳಾರಿಯ ತೇರು ಬೀದಿಯ ರಸ್ತೆಯಲ್ಲಿ ಇರುವ ಕಲ್ಯಾಣ ಜ್ಯುವೆಲರ್ಸ್​ನಲ್ಲಿ ಶಾ್ಟ್​ ಸರ್ಕೀಟ್​ನಿಂದಾಗಿ ಎಸಿ ಸ್ಫೋಟಗೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜ್ಯುವೆಲ್ಲರಿಯಲ್ಲಿರುವ ಎಸಿ ವ್ಯವಸ್ಥೆಗೆ ಗ್ಯಾಸ್ ಮರುಪೂರಣ ಮಾಡಲು ಹೋದಾಗ ಘಟನೆ ಸಂಭವಿಸಿದೆ. ಈ ವೇಳೆ ಶಾರ್ಟ್​ ಸರ್ಕೀಟ್​ ಉಂಟಾಗಿದ್ದು ಏಕಾಏಕಿ ಬ್ಲಾಸ್ಟ್ ಎಸಿ ಬ್ಲಾಸ್ಟ್​ ಆಗಿ ಕಿಟಕಿ ಗಾಜುಗಳು ಎಲ್ಲೆಡೆ ಸಿಡಿದು ಬಿದ್ದಿವೆ. ಈ ಕೆಲಸಕ್ಕಾಗಿ ಬಂದಿದ್ದ ಮೂವರು ಕಾರ್ಮಿಕರಿಗೆ ಗಾಯವಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭಿರವಾಗಿ ಎಂದು ಮೂಲಗಳು ತಿಳಿಸಿವೆ.

ಗಾಯಗಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಎಸಿ ಬ್ಲಾಸ್ಟ್ ಆದ ಹಿನ್ನೆಲೆಯಲ್ಲಿ ಶಾಪ್ ನಲ್ಲಿ ದಟ್ಟ ಹೊಗೆ ಆವರಿಸಿತ್ತು.

ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

ಬೆಂಗಳೂರು: ಪೊಲೀಸ್ ಠಾಣಾ ಆವರಣದಲ್ಲೇ ಮಹಿಳೆಯೊಬ್ಬಳು ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ (Assault Case) ಮಾಡಿದ್ದಾಳೆ. ಸೈಟು ವಿಚಾರಕ್ಕೆ (Site Dispute) ಎರಡು ಗುಂಪುಗಳ ಮಧ್ಯೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಜ್ಞಾನಭಾರತಿ ಠಾಣೆಗೆ ಬಂದಿದ್ದರು. ಈ ವೇಳೆ ಎರಡು ಗುಂಪುಗಳ ಸದಸ್ಯರು ಮಾತಿಗೆ ಮಾತು ಬೆಳೆಸಿ ಕಿತ್ತಾಡಲು ಮುಂದಾಗಿದ್ದರು. ಹೀಗಾಗಿ ಮಧ್ಯಪ್ರವೇಶಿಸಿ ಗಲಾಟೆ ಮಾಡದಂತೆ ಎಚ್ಚರಿಸಲು ಹೋದ ಇನ್‌ಸ್ಪೆಕ್ಟರ್‌ಗೆ ಮಹಿಳೆಯೊಬ್ಬಳು ಕಪಾಳಕ್ಕೆ ಹೊಡೆದಿದ್ದಾಳೆ.

ಇದನ್ನೂ ಓದಿ: Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

ನಿನ್ನೆ ಬುಧವಾರ ಸಂಜೆ ಜ್ಞಾನಭಾರತಿ ಠಾಣೆ ಇನ್‌ಸ್ಪೆಕ್ಟರ್‌ ರವಿ ಅವರಿಗೆ ಫೌಜೀಯಾ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ಫೌಜೀಯಾ ಹಾಗೂ ಇನ್ನೊಂದು ಗುಂಪು ಸೈಟು ವಿಚಾರಕ್ಕೆ ಜ್ಞಾನಭಾರತಿ ಠಾಣೆ ಮೆಟ್ಟಿಲೇರಿದ್ದರು. ಈ ವೇಳೆ ಠಾಣೆ ಆವರಣದಲ್ಲಿ ಎರಡು ಗುಂಪುಗಳು ಏರು ಧ್ವನಿಯಲ್ಲಿ ಕೂಗಾಡುತ್ತಾ ಮಾತನಾಡುತ್ತಿದ್ದರು.

ಕರ್ತವ್ಯದಲ್ಲಿದ್ದ ಇನ್‌ಸ್ಪೆಕ್ಟರ್‌ ರವಿ ಎರಡು ಗುಂಪುಗಳಿಗೆ ಗಲಾಟೆ ಮಾಡದಂತೆ ವಾರ್ನಿಂಗ್‌ ಮಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಫೌಜೀಯ ಏಕಾಏಕಿ ಇನ್‌ಸ್ಪೆಕ್ಟರ್‌ ರವಿ ಅವರ ಕಪಾಳಕ್ಕೆ ಹೊಡೆದಿದ್ದಾಳೆ. ಮಾನವ ಹಕ್ಕುಗಳ ಸಂಘಟನೆಯಲ್ಲಿರುವ ಫೌಜೀಯಾ ಹಾಗೂ ಮತ್ತಿಬ್ಬರು ಮಹಿಳೆಯರ ಮೇಲೆ ಎಫ್‌ಐಆರ್ ದಾಖಲಾಗಿದೆ. ರಾತ್ರಿಯೇ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

Continue Reading
Advertisement
Election campaign for Congress candidate Samyukta Patil in Prajadhwani convention at Bagalkot
ರಾಜಕೀಯ2 mins ago

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election
ದೇಶ20 mins ago

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Amit Shah
ದೇಶ23 mins ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ44 mins ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ50 mins ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

AC Blast
ಪ್ರಮುಖ ಸುದ್ದಿ2 hours ago

AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

Tax Returns
ಪ್ರಮುಖ ಸುದ್ದಿ2 hours ago

Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

Dr Vinayaka Prasanna passed away
ಬಳ್ಳಾರಿ2 hours ago

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Sri Siddhivinayaka Swami SrimanMaharathotsava in Ripponpet
ಶಿವಮೊಗ್ಗ2 hours ago

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Minister Santosh Lad latest statement in Dharwad
ಕರ್ನಾಟಕ2 hours ago

Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ18 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌