the 6ixty: ಹೊಸ ಮಾದರಿಯ ಕ್ರಿಕೆಟ್‌ ಲೀಗ್‌ ಜಾರಿಗೆ ತಂದ ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ - Vistara News

ಕ್ರಿಕೆಟ್

the 6ixty: ಹೊಸ ಮಾದರಿಯ ಕ್ರಿಕೆಟ್‌ ಲೀಗ್‌ ಜಾರಿಗೆ ತಂದ ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ

ಕೆರಿಬಿಯನ್‌ ಕ್ರಿಕೆಟ್‌ ಲೀಗ್‌ನ ಆಯೋಜಕರು ಹೊಸ ಮಾದರಿಯ the 6ixty ಎಂಬ ಹೊಸ ಮಾದರಿಯ ಕ್ರಿಕೆಟ್‌ ಪಂದ್ಯವನ್ನು ಪರಿಚಯಿಸಲು ಮುಂದಾಗಿದೆ

VISTARANEWS.COM


on

the 6ixty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜಾಗತಿಕ ಕ್ರಿಕೆಟ್‌ ಕ್ಷೇತ್ರದಲ್ಲೀಗ ಬದಲಾವಣೆ ಪರ್ವ. ಇನ್ನಷ್ಟು ದೇಶಗಳನ್ನು ಕ್ರಿಕೆಟ್‌ ಕಡೆಗೆ ಸೆಳೆಯುವ ಹಾಗೂ ಆಟವನ್ನು ಕ್ಷಿಪ್ರವಾಗಿ ಮುಗಿಸಿ ಫಲಿತಾಂಶ ಪ್ರಕಟಿಸಬಲ್ಲ ಹಲವಾರು ಮಾದರಿಗಳನ್ನು ಜಾರಿಗೆ ತರಲಾಗುತ್ತಿದೆ. ಅಂತೆಯೇ ಕೆರಿಬಿಯನ್‌ ಕ್ರಿಕೆಟ್‌ ಲೀಗ್‌ನ ಆಯೋಜಕರು the 6ixty ಎಂಬ ಹೊಸ ಮಾದರಿಯ ಕ್ರಿಕೆಟ್‌ ಆಟವನ್ನು ಪರಿಚಯಿಸಲು ಮುಂದಾಗಿದೆ. ಬುಧವಾರ ಈ ಟೂರ್ನಿಯನ್ನು ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಸಂಸ್ಥೆ ಬುಧವಾರ ಜಾರಿಗೆ ತಂದಿದೆ.

ದಶಕಗಳ ಹಿಂದೆ ಟೆಸ್ಟ್‌ ಕ್ರಿಕೆಟ್‌ಗೆ ಹೆಚ್ಚು ಮಾನ್ಯತೆ ಇತ್ತು. ಐದು ದಿನಗಳ ಕಾಲ ನಡೆಯುವ ಈ ಪಂದ್ಯ ವರ್ಷಗಳು ಕಳೆದಂತೆ ಜನಪ್ರಿಯತೆ ಕಳೆದುಕೊಂಡಿತು. ಬಳಿಕ ಸೀಮಿತ ಓವರ್‌ಗಳ ಏಕದಿನ ಕ್ರಿಕೆಟ್‌ ಜಾರಿಗೆ ಬಂತು. ದಿನವೀಡಿ ನಡೆಯುವ ಈ ಮಾದರಿಯ ಬಗ್ಗೆಯೂ ಜನರು ಆಸಕ್ತಿ ಕಳೆದುಕೊಳ್ಳಲು ಆರಂಭಿಸಿದರು. ಜತೆಗೆ ಜಾಗತಿಕ ಮಟ್ಟದ ಕ್ರೀಡಾ ಸ್ಪರ್ಧೆಗಳಿಗೆ ಪ್ರವೇಶ ಪಡೆಯಲು ಈ ಮಾದರಿ ವಿಫಲಗೊಂಡಿತು. ಈ ಹಿನ್ನೆಲೆಯಲ್ಲಿ ಕ್ರಿಕೆಟ್‌ ಮಂಡಳಿಗಳು ಟಿ೨೦ ಕ್ರಿಕೆಟ್‌ ಮಾದರಿಯನ್ನು ಪರಿಚಯಿಸಿದವು. ಅದು ಹೆಚ್ಚು ಪ್ರಖ್ಯಾತಿ ಪಡೆಯುವ ಜತೆಗೆ ಒಂದೊಂದೆ ಕ್ರಿಕೆಟ್‌ ಲೀಗ್‌ಗಳು ಪರಿಚಯಗೊಂಡವು. ೩ರಿಂದ ೪ ಗಂಟೆಗಳ ಕಾಲ ನಡೆಯುವ ಈ ಮಾದರಿಯೂ ಬೋರ್‌ ಆಗಲು ತೊಡಗುತ್ತಿದ್ದಂತೆ ಅನ್ವೇಷಣೆಗೆ ತೊಡಗಿದ ಕ್ರಿಕೆಟ್‌ ಪಂಡಿತರು ಇನ್ನೂ ಕ್ಷಿಪ್ರವಾಗಿ ಮುಗಿಯುವ ಕ್ರಿಕೆಟ್‌ ಮಾದರಿಗಳನ್ನು ಪರಿಚಯಿಸಿದರು. ಈ ಹಿನ್ನೆಲೆಯಲ್ಲಿ ಆರಂಭಗೊಂಡಿದ್ದು, ೧೦೦ ಎಸೆತಗಳನ್ನು ಹೊಂದಿರುವ “ದಿ ಹಂಡ್ರಡ್‌’ ಕ್ರಿಕೆಟ್‌ ಮಾದರಿಯ ಶುರುವಾಯಿತು. ಆ ಬಳಿಕ ಜಾರಿಗೆ ಬಂದಿದ್ದು ಟಿ೧೦. ಅದರ ಮುಂದುವರಿದ ಭಾಗವೇ ೬ixty ಕ್ರಿಕೆಟ್‌ ಲೀಗ್‌. ಆದರೆ, ಕೆಲವೊಂದು ನಿಯಮಗಳ ಬದಲಾವಣೆ ಹೊಂದಿದೆ.

೬೦ ಎಸೆಗಳ ಪಂದ್ಯ

೬ixty ಕ್ರಿಕೆಟ್‌ ಲೀಗ್‌ ಕೇವಲ ೧೦ ಓವರ್‌ಗಳ ಪಂದ್ಯ. ಇದು ಸ್ವಲ್ಪ ಮಟ್ಟಿಗೆ ದಿ ಹಂಡ್ರಡ್‌ ರೀತಿಯಲ್ಲೇ ಇದ್ದರೂ ನಿಯಮಗಳಲ್ಲಿ ಕೆಲವೊಂದು ಬದಲಾವಣೆಗಳಿವೆ. ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ (ಸಿಪಿಎಲ್‌)ನ ತಂಡಗಳೇ ಈ ಟೂರ್ನಿಯಲ್ಲೂ ಕಣಕ್ಕೆ ಇಳಿಯಲಿದೆ. ಪ್ರತಿ ತಂಡದಲ್ಲಿ ೧೦ ಆಟಗಾರರು ಇದ್ದರೂ, ಆರು ವಿಕೆಟ್‌ಗಳು ಉರುಳಿದ ತಕ್ಷಣ ಆ ತಂಡ ಆಲ್‌ಔಟ್‌ ಎಂದು ಪರಿಗಣಿಸಲಾಗುತ್ತದೆ.

ಈ ಟೂರ್ನಿಯ ಪವರ್‌ ಪ್ಲೇ ನಿಯಮವೂ ಭಿನ್ನವಾಗಿದೆ. ಅರಂಭಿಕ ಎರಡು ಓವರ್‌ಗಳ ಪವರ್‌ಪ್ಲೇ ಅವಧಿಯಲ್ಲಿ ಬ್ಯಾಟಿಂಗ್‌ ಮಾಡುವ ತಂಡ ಸತತ ಎರಡು ಸಿಕ್ಸರ್‌ಗಳು ಬಾರಿಸಿದರೆ ಮೂರನೇ ಪವರ್‌ಪ್ಲೇ ಅನ್‌ಲಾಕ್‌ ಆಗುತ್ತದೆ. ಈ ಪವರ್‌ ಪ್ಲೇ ಅವಕಾಶವನ್ನು ೩ರಿಂದ ೯ನೇ ಓವರ್‌ನ ನಡುವೆ ಯಾವಾಗ ಬೇಕಾದರೂ ಬಳಸಿಕೊಳ್ಳಬಹುದು.

ಸದ್ಯ ಚಾಲ್ತಿಯಲ್ಲಿರುವ ಕ್ರಿಕೆಟ್‌ ನಿಯಮದಂತೆ ಪ್ರತಿ ಓವರ್‌ ಮುಕ್ತಾಯದ ಬಳಿಕ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ತುದಿ ಬದಲಾಗುವುದಿಲ್ಲ. ಬೌಲಿಂಗ್‌ ಮಾಡುವ ತಂಡಗಳು ಸತತವಾಗಿ ಐದು ಓವರ್‌ಗಳನ್ನು ಒಂದೇ ತುದಿಯಿಂದ ಮಾಡಬೇಕು. ಉಳಿದ ಐದು ಓವರ್‌ಗಳನ್ನು ಮತ್ತೊಂದು ಬದಿಯಿಂದ ಮಾಡಬೇಕಾಗಿದೆ. ಅದೇ ರೀತಿ ಒಬ್ಬ ಬೌಲರ್‌ ಗರಿಷ್ಠ ಎರಡು ಓವರ್‌ಗಳನ್ನು ಮಾತ್ರ ಮಾಡಬಹುದಾಗಿದೆ.

ಒಬ್ಬ ಫೀಲ್ಡರ್‌ ಕಟ್‌

ಒಂದು ಇನಿಂಗ್ಸ್‌ ಗರಿಷ್ಠ ೪೫ ನಿಮಿಷಗಳ ಒಳಗೆ ಮುಕ್ತಾಯಗೊಳ್ಳಬೇಕು. ಅಷ್ಟು ಸಮಯದೊಳಗೆ ಬೌಲಿಂಗ್‌ ಮಾಡಿ ಮುಗಿಸದಿದ್ದರೆ ಒಬ್ಬ ಫೀಲ್ಡರ್‌ನ ಸೇವೆಯನ್ನು ಕಡಿತಗೊಳಿಸಲಾಗುತ್ತದೆ. ಉಳಿದಿರುವ ಎಸೆತಗಳಿಗೆ ೧೦ ಆಟಗಾರರಿಗೆ ಮಾತ್ರ ಕಣದಲ್ಲಿ ಉಳಿಯಲು ಅವಕಾಶವಿದೆ.

ಎಂದು ಆರಂಭ?: ಸದ್ಯದ ಮಾಹಿತಿ ಪ್ರಕಾರ ಉದ್ಘಾಟನಾ ಆವೃತ್ತಿಯ the 6ixty ಟೂರ್ನಿಯು ಆಗಸ್ಟ್‌ ೨೪ರಿಂದ ೨೮ರವರೆಗೆ ನಡೆಯಲಿದೆ. ಆರು ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ನ ತಂಡಗಳು ಹಾಗೂ ೩ ಮಹಿಳೆಯರ ಕೆರಿಬಿಯನ್‌ ಲೀಗ್‌ನ ತಂಡಗಳು ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ.

ಇದನ್ನೂ ಓದಿ| ಕ್ರಿಕೆಟ್‌ ಕ್ಷೇತ್ರದಲ್ಲಿ BCCI ಮೀರಿಸುವುದು ಯಾರಿಂದಲೂ ಸಾಧ್ಯವಿಲ್ಲ ಎಂದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Hanuma Vihari: 2 ತಿಂಗಳ ಬಳಿಕ ನಿರಾಕ್ಷೇಪಣಾ ಪತ್ರ ಪಡೆದ ಹನುಮ ವಿಹಾರಿ

Hanuma Vihari: ಎರಡು ತಿಂಗಳಿಂದ ನಾನು ಎನ್‌ಒಸಿ ಕೇಳುತ್ತಿದ್ದೆ. ಎಸಿಎಗೆ ನಾಲ್ಕು ಬಾರಿ ಮೇಲ್ ಮಾಡಿದ್ದೇನೆ. ಆದರೂ ನೀಡಿರಲಿಲ್ಲ. ಈಗ ರಾಜ್ಯದಲ್ಲಿ ರಾಜಕೀಯ ಚಿತ್ರಣ ಬದಲಾಗಿದೆ. ಹೀಗಾಗಿ, ತಕ್ಷಣ ಎನ್‌ಒಸಿ ನೀಡಿದ್ದಾರೆ’ ಎಂದು ವಿಹಾರಿ ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ

VISTARANEWS.COM


on

Hanuma Vihari
Koo

ಆಂಧ್ರ ಪ್ರದೇಶ: ಟೀಮ್​ ಇಂಡಿಯಾದ ಟೆಸ್ಟ್‌ ಸ್ಪೆಷಲಿಸ್ಟ್‌ ಹನುಮ ವಿಹಾರಿ(Hanuma Vihari) ಕೊನೆಗೂ 2 ತಿಂಗಳ ಬಳಿಕ ಆಂಧ್ರ ಕ್ರಿಕೆಟ್‌ ಸಂಸ್ಥೆಯಿಂದ(Andhra Cricket Association) ನಿರಾಕ್ಷೇಪಣಾ ಪತ್ರವನ್ನು (NOC ) ಪಡೆದಿದ್ದಾರೆ. ಈ ವಿಚಾರವನ್ನು ವಿಹಾರಿ ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.

2023-24ರ ಸಾಲಿನ ರಣಜಿ ಟ್ರೋಫಿ ಟೂರ್ನಿ ಸಂದರ್ಭದಲ್ಲಿ ನಾಯಕತ್ವದಿಂದ ಕೆಳಗಿಳಿಸಿದ ವಿಚಾರವಾಗಿ ವಿಹಾರಿ ಎಸಿಎ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ತನ್ನನ್ನು ನಿರ್ದಾಕ್ಷಿಣ್ಯವಾಗಿ ನಾಯಕತ್ವದಿಂದ ಕೆಳಗಿಳಿಸಿ ಅವಮಾನಿಸಿದೆ. ಮುಂದೆಂದೂ ನಾನು ಆಂಧ್ರ ತಂಡಕ್ಕೆ ಆಡುವುದಿಲ್ಲ ಎಂದು ಹೇಳಿದ್ದರು. ಈ ಸಂಬಂಧ ವಿಹಾರಿ ಅವರಿಗೆ ಎಸಿಎ ನೋಟಿಸ್ ನೀಡಿತ್ತು.‌

ಅವಮಾನಿಸಿದ ಕ್ರಿಕೆಟ್​ ಬೋರ್ಡ್​ ತೊರೆದು ಬೇರೆ ರಾಜ್ಯದ ಪರ ಆಡಲು ನಿರಾಕ್ಷೇಪಣಾ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಪತ್ರವನ್ನು ನೀಡಲು ಎಸಿಎ ತಡ ಮಾಡಿತ್ತು. ಇದೀಗ ಕೊನೆಗೂ 2 ತಿಂಗಳ ಬಳಿಕ ವಿಹಾರಿಗೆ ನಿರಾಕ್ಷೇಪಣಾ ಪತ್ರ ನೀಡಿದೆ(Vihari receives NOC from ACA). ಹೀಗಾಗಿ ಮುಂದಿನ ಆವೃತ್ತಿಯಲ್ಲಿ ವಿಹಾರಿ ಬೇರೆ ರಾಜ್ಯದ ಪರ ಕ್ರಿಕೆಟ್​ ಆಡಬಹುದಾಗಿದೆ.

‘ಎರಡು ತಿಂಗಳಿಂದ ನಾನು ಎನ್‌ಒಸಿ ಕೇಳುತ್ತಿದ್ದೆ. ಎಸಿಎಗೆ ನಾಲ್ಕು ಬಾರಿ ಮೇಲ್ ಮಾಡಿದ್ದೇನೆ. ಆದರೂ ನೀಡಿರಲಿಲ್ಲ. ಈಗ ರಾಜ್ಯದಲ್ಲಿ ರಾಜಕೀಯ ಚಿತ್ರಣ ಬದಲಾಗಿದೆ. ಹೀಗಾಗಿ, ತಕ್ಷಣ ಎನ್‌ಒಸಿ ನೀಡಿದ್ದಾರೆ’ ಎಂದು ವಿಹಾರಿ ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಿಹಾರಿ ಅವರು 2024-25ರ ಋತುವಿನಲ್ಲಿ ಬಿಸಿಸಿಐಗೆ ಸಂಯೋಜಿತವಾಗಿರುವ ಯಾವುದೇ ತಂಡವನ್ನು ಪ್ರತಿನಿಧಿಸಲು ಆಂಧ್ರ ಕ್ರಿಕೆಟ್ ಸಂಸ್ಥೆಯಿಂದ ಯಾವುದೇ ಅಡೆ ತಡೆಗಳಿಲ್ಲ ಎಂದು ಎಸಿಎ ಕಾರ್ಯದರ್ಶಿ ಗೋಪಿನಾಥ್‌ ರೆಡ್ಡಿ ಎನ್‌ಒಸಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ Hanuma Vihari: ಹನುಮ ವಿಹಾರಿಗೆ ಶೋಕಾಸ್‌ ನೋಟಿಸ್‌ ನೀಡಿದ ಎಸಿಎ

ಹನುಮ ವಿಹಾರಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡಿ, ಬಂಗಾಳ ವಿರುದ್ಧದ ಮೊದಲ ಪಂದ್ಯದಲ್ಲಿ ನಾನು ತಂಡದ ನಾಯಕನಾಗಿದ್ದೆ. ಆಟದ ಸಮಯದಲ್ಲಿ ನಾನು 17 ನೇ ಆಟಗಾರನ ಮೇಲೆ ಕೂಗಾಡಿದ್ದೆ. ಅವನು ತನ್ನ ತಂದೆಗೆ (ರಾಜಕಾರಣಿಯಾಗಿದ್ದ) ದೂರು ನೀಡಿದ್ದ, ಪ್ರತಿಯಾಗಿ ಅವರ ತಂದೆ ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಸೋಸಿಯೇಷನ್​ಗೆ ಕೇಳಿದರು. ಬಂಗಾಳ ವಿರುದ್ದದ ಪಂದ್ಯದಲ್ಲಿ ನಾವು ಗೆದ್ದರೂ, ನನ್ನ ಯಾವುದೇ ತಪ್ಪು ಇಲ್ಲದ ಹೊರತಾಗಿಯೂ ರಾಜೀನಾಮೆ ಕೊಡಲು ನನ್ನಲ್ಲಿ ಅಸೋಸಿಯೇಶನ್​ ಕೇಳಿಕೊಂಡಿತು. ನಾನು ವೈಯಕ್ತಿಕವಾಗಿ ಆ ಆಟಗಾರನಿಗೆ ಏನೂ ಹೇಳಿರಲಿಲ್ಲ. ಆದರೆ ಕಳೆದ ಏಳು ವರ್ಷಗಳಲ್ಲಿ ಐದು ಬಾರಿ ತಂಡವನ್ನು ನಾಕೌಟ್​ಗೆ ತಲುಪಿಸಿದ, ತಂಡಕ್ಕೆ ಎಲ್ಲವನ್ನೂ ಕೊಟ್ಟ ಆಟಗಾರನಿಗಿಂತ ಆ ಆಟಗಾರನೇ ಮಂಡಳಿಗೆ ಪ್ರಿಯವಾದ. ನಾನು ಮುಜುಗರ ಅನುಭವಿಸಿದೆ. ಇನ್ನೆಂದೂ ನಾನು ಆಂಧ್ರಪ್ರದೇಶದ ಪರ ಆಡಲಾರೆ ಎಂದು ಹೇಳಿದ್ದರು. ಇದೇ ವಿಚಾರವಾಗಿ ವಿಹಾರಿ ವಿರುದ್ಧ ಎಸಿಎ ನೋಟಿಸ್‌ ಜಾರಿ ಮಾಡಿತ್ತು.

ವಿಹಾರಿ ಮಾಡಿದ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಎಸಿಎ, ವಿಹಾರಿ ನಾಯಕತ್ವದ ನಿರ್ಗಮನವು ವೃತ್ತಿಪರ ಪರಿಗಣನೆಯ ಪರಿಣಾಮವಾಗಿದೆಯೇ ಹೊರತು ರಾಜಕೀಯ ಹಸ್ತಕ್ಷೇಪವಲ್ಲ, ವಿಹಾರಿ ಆಟಗಾರರನ್ನು ಬೆದರಿಸಿ ಸಹಿ ಮಾಡಿಸಿದ್ದಾರೆ ಎಂದು ಆಂಧ್ರ ಕ್ರಿಕೆಟ್ ಸಂಸ್ಥೆ ಆರೋಪ ಮಾಡಿತ್ತು. 

Continue Reading

ಕ್ರಿಕೆಟ್

Election Results 2024: ಪಶ್ಚಿಮ ಬಂಗಾಳದಲ್ಲಿ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್​ಗೂ ಜಯಭೇರಿ

Election Results 2024: ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ಟಿಎಂಸಿ ಅಭ್ಯರ್ಥಿ ಕೀರ್ತಿ ಆಜಾದ್ 7,20,667 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್ 5,82,686 ಮತಗಳನ್ನು ಪಡೆದರು. ಈ ಮೂಲಕ 1,37,981 ಮತಗಳ ಅಂತರದಿಂದ ಆಜಾದ್​ ಗೆಲುವು ಸಾಧಿಸಿದರು.

VISTARANEWS.COM


on

Election Results 2024
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ(West Bengal) ಯೂಸುಫ್ ಪಠಾಣ್ ಮಾತ್ರವಲ್ಲದೆ ಮತ್ತೋರ್ವ ಭಾರತದ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್(Kirti Azad) ಕೂಡ ಟಿಎಂಸಿ(TMC) ಪರ ಗೆಲುವು ಕಂಡಿದ್ದಾರೆ. ಬರ್ಧಮಾನ್-ದುರ್ಗಾಪುರ ಕ್ಷೇತ್ರದಲ್ಲಿ ಕಣಕ್ಕಿಳಿದ್ದ ಅವರು ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್(Dilip Ghosh) ಅವರನ್ನು ಸೋಲಿಸುವಲ್ಲಿ(Election Results 2024) ಯಶಸ್ವಿಯಾಗಿದ್ದಾರೆ.

ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ಟಿಎಂಸಿ ಅಭ್ಯರ್ಥಿ ಕೀರ್ತಿ ಆಜಾದ್ 7,20,667 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್ 5,82,686 ಮತಗಳನ್ನು ಪಡೆದರು. ಈ ಮೂಲಕ 1,37,981 ಮತಗಳ ಅಂತರದಿಂದ ಆಜಾದ್​ ಗೆಲುವು ಸಾಧಿಸಿದರು. ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಈ ಹಿಂದೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷವನ್ನು ಪ್ರತಿನಿಧಿಸಿದ್ದರು. ನವೆಂಬರ್ 2021ರಲ್ಲಿ ಟಿಎಂಸಿ ಪಕ್ಷವನ್ನು ಸೇರಿದರು. ಇದೀಗ ಲೋಕ ಸಮರ ಗೆದ್ದು ಬೀಗಿದ್ದಾರೆ.

85 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ ಪಠಾಣ್


ಯೂಸುಫ್ ಪಠಾಣ್(Yusuf Pathan) ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದಾರೆ. ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದರು. ಈ ಮೂಲಕ ಯೂಸುಫ್ ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದರು.

ಇದನ್ನೂ ಓದಿ AP Election Results 2024: ಆಂಧ್ರದಲ್ಲಿ ಮತ್ತೊಮ್ಮೆ ಟಿಡಿಪಿ ಮ್ಯಾಜಿಕ್‌; ಆಡಳಿತ ವಿರೋಧಿ ಅಲೆಗೆ ಕೊಚ್ಚಿಹೋದ ಜಗನ್ ಮೋಹನ್ ರೆಡ್ಡಿ

ಗೆಲುವಿನ ಬಳಿಕ ಮಾತನಾಡಿದ ಯೂಸುಫ್, ನನಗೆ ಸಂತೋಷವಾಗಿದೆ, ಇದು ನನ್ನ ಬೆಂಬಲಿಗರ ಮತ್ತು ಕಾರ್ಯಕರ್ತರ ಗೆಲುವು. ಇದಕ್ಕಾಗಿ ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಜತೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ನಾನು ಮೊದಲು ಕ್ರೀಡಾ ಅಕಾಡೆಮಿ ಮಾಡುತ್ತೇನೆ, ಇದರಿಂದ ಯುವ ಪ್ರತಿಭೆಗಳು ವೃತ್ತಿಜೀವನ ಕಟ್ಟಿಕೊಳ್ಳಬಹುದು. ಕೈಗಾರಿಕೆಗಳಿಗೂ ಕೆಲಸ ಕೊಡಿಸುತ್ತೇನೆ. ನಾನು ಇಲ್ಲಿಯೇ ವಾಸಿಸುತ್ತೇನೆ ಮತ್ತು ನನ್ನ ಕ್ಷೇತ್ರದ ಜನರ ಸೇವೆಗಾಗಿ ಸದಾ ಸಿದ್ಧನಿರುತ್ತೇನೆ” ಎಂದು ಪಠಾಣ್​ ಹೇಳಿದರು.

400 ಸೀಟ್‌ ಗಳಿಸುವ ಎನ್‌ಡಿಎ ಕನಸು ನುಚ್ಚು ನೂರಾದದ್ದು ಹೇಗೆ?


ಉತ್ತರ ಪ್ರದೇಶದ ಜಾತಿ ಸಮೀಕರಣ

ಬಿಜೆಪಿ ಈ ಬಾರಿ ಉತ್ತರ ಪ್ರದೇಶದಲ್ಲಿ ಭಾರಿ ಹೊಡೆತ ತಿಂದಿದೆ. ಕಳೆದ ಸಲಕ್ಕಿಂತ 30ಕ್ಕೂ ಅಧಿಕ ಸ್ಥಾನಗಳನ್ನು ಕಳೆದುಕೊಂಡಿದೆ. ಇದಕ್ಕೆ ಈ ರಾಜ್ಯದ ಜಾತಿ ರಾಜಕೀಯವನ್ನು ಬಿಜೆಪಿ ಕಡೆಗಣಿಸಿದ್ದೇ ಕಾರಣ ಎನ್ನಲಾಗುತ್ತಿದೆ. ರಾಮ ಮಂದಿರದ ಅಲೆ ಏರಿ ಬಂದ ಬಿಜೆಪಿ, ಹಿಂದುತ್ವದ ಮೂಲಕ ಗೆಲ್ಲಬಹುದು ಎಂದುಕೊಂಡಿತು. ಆದರೆ ಇಲ್ಲಿ ಹಿಂದುತ್ವ ರಾಜಕಾರಣಕ್ಕಿಂತಲೂ ಜಾತಿ ರಾಜಕಾರಣದ ಸಮೀಕರಣವೇ ಹೆಚ್ಚು ಕೆಲಸ ಮಾಡಿದೆ. ಈ ಸಲ ದಲಿತ ಮತಗಳು ಸಾಮೂಹಿಕವಾಗಿ ಎಸ್‌ಪಿ ಸೇರಿದಂತೆ ಇಂಡಿಯಾ ಬ್ಲಾಕ್‌ನತ್ತ ತಿರುಗಿದೆ ಎನ್ನಲಾಗುತ್ತಿದೆ. ಹಾಗೆಯೇ ಮುಸ್ಲಿಂ ಮತಗಳೂ ಸಾಂಪ್ರದಾಯಿಕವಾಗಿ ಎಸ್‌ಪಿ ಹಾಗೂ ಬಿಎಸ್‌ಪಿಯ ಪಾಲಾದವು. ಇದು ಬಿಜೆಪಿಗೆ ನಷ್ಟ ಉಂಟುಮಾಡಿದೆ.

Continue Reading

ಕ್ರೀಡೆ

India vs Ireland: ರೋಹಿತ್​ ಜತೆ ಇನಿಂಗ್ಸ್​ ಆರಂಭಿಸುವುದು ಯಾರು? ರೇಸ್​ನಲ್ಲಿ ಕೊಹ್ಲಿ, ಜೈಸ್ವಾಲ್​!

India vs Ireland: ಮೂಲಗಳ ಪ್ರಕಾರ, ರೋಹಿತ್​ ಶರ್ಮ ಜತೆ ಯಶಸ್ವಿ ಜೈಸ್ವಾಲ್(Yashasvi Jaiswal)​ ಅವರೇ ಇನಿಂಗ್ಸ್​ ಆರಂಭಿಸುವ ಸಾಧ್ಯತೆ ಅಧಿಕವಾಗಿದೆ. ವಿರಾಟ್​ ಕೊಹ್ಲಿ(Virat Kohli) ಐಪಿಎಲ್​ ಟೂರ್ನಿಯಲ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಗಳಲ್ಲಿ ಆರಂಭಿಕನಾಗಿ ಆಡುವುದು ಅನುಮಾನ

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಭಾರತ ತಂಡ ಟಿ20 ವಿಶ್ವಕಪ್​ನಲ್ಲಿ(T20 World Cup 2024) ಬುಧವಾರ ಐರ್ಲೆಂಡ್(India vs Ireland) ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆದರೆ, ಈ ಪಂದ್ಯದಲ್ಲಿ ನಾಯಕ ರೋಹಿತ್​ ಶರ್ಮ(Rohit Sharma) ಜತೆ ಯಾರು ಇನಿಂಗ್ಸ್​ ಆರಂಭಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಮೂಡಿದೆ. ಕೋಚ್ ರಾಹುಲ್ ದ್ರಾವಿಡ್(Rahul Dravid) ಕೂಡ ನಮ್ಮ ತಂತ್ರದ ಬಗ್ಗೆ ನಾವು ಹೆಚ್ಚು ಹೇಳಲು ಬಯಸುವುದಿಲ್ಲ ಎಂದಿದ್ದಾರೆ. ಹೀಗಾಗಿ ಈ ಪ್ರಶ್ನೆಗೆ ಉತ್ತರ ನಾಳಿನ ಪಂದ್ಯದ ವೇಳೆಯೇ ಸಿಗಬೇಕಿದೆ.

ಮೂಲಗಳ ಪ್ರಕಾರ, ರೋಹಿತ್​ ಶರ್ಮ ಜತೆ ಯಶಸ್ವಿ ಜೈಸ್ವಾಲ್(Yashasvi Jaiswal)​ ಅವರೇ ಇನಿಂಗ್ಸ್​ ಆರಂಭಿಸುವ ಸಾಧ್ಯತೆ ಅಧಿಕವಾಗಿದೆ. ವಿರಾಟ್​ ಕೊಹ್ಲಿ(Virat Kohli) ಐಪಿಎಲ್​ ಟೂರ್ನಿಯಲ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಗಳಲ್ಲಿ ಆರಂಭಿಕನಾಗಿ ಆಡುವುದು ಅನುಮಾನ. ಎಂದಿನಿಂತೆ ದ್ವಿತೀಯ ಕ್ರಮಾಂಕದಲ್ಲಿಯೇ ಆಡಲಿದ್ದಾರೆ ಎನ್ನಲಾಗಿದೆ. ಜೈಸ್ವಾಲ್​ ಆರಂಭಿ ಆಟಗಾರನಾಗಿದ್ದು ಜತೆಗೆ ಎಡಗೈ ಬ್ಯಾಟರ್​ ಆಗಿದ್ದಾರೆ. ಹೀಗಾಗಿ ಬಲ ಮತ್ತು ಎಡಗೈ ಬ್ಯಾಟರ್​ ಕಾಂಬಿನೇಶನ್​ ಉತ್ತಮವಾಗಿರುವ ಕಾರಣದಿಂದ ರೋಹಿತ್​-ಜೈಸ್ವಾಲ್​ ಆರಂಭಿಕನಾಗಿ ಆಡಬಹುದು.

ವಿರಾಟ್​ ಕೊಹ್ಲಿ ಅವರು ಆರಂಭಿಕನಾಗಿ ಕಣಕ್ಕಿಳಿದರೆ, ಒಂದೊಮ್ಮೆ ರೋಹಿತ್​ ಮತ್ತು ಕೊಹ್ಲಿ ಬೇಗನೇ ವಿಕೆಟ್​ ಕಳೆದುಕೊಂಡರೆ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಸರೆಯಾಗಬಲ್ಲ ಅನುಭವಿ ಆಟಗಾರನಿಲ್ಲ. ಹೀಗಾಗಿ ವಿರಾಟ್​ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸದರೆ ಉತ್ತಮ ಎನ್ನಲಡ್ಡಿಯಿಲ್ಲ. ಕಳೆದ ಬಾರಿಯ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಆರಂಭಿಕ ಆಟಗಾರರೆಲ್ಲ ಸತತವಾಗಿ ವಿಕೆಟ್​ ಕಳೆದುಕೊಂಡಾಗ ತಂಡಕ್ಕೆ ಆಸರೆಯಾಗಿದ್ದು ವಿರಾಟ್​ ಕೊಹ್ಲಿ. ಏಕಾಂಗಿಯಾಗಿ ಹೋರಾಟ ನಡೆಸಿ ಸೋಲುವ ಪಂದ್ಯವನ್ನು ಗೆಲ್ಲಿಸಿ ಕೊಟ್ಟಿದ್ದರು.

ಇದನ್ನೂ ಓದಿ India vs Ireland: ಭಾರತ-ಐರ್ಲೆಂಡ್​ ಟಿ20 ದಾಖಲೆ, ಪಿಚ್​ ರಿಪೋರ್ಟ್​ ಹೇಗಿದೆ?

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್​ ಯಾದವ್​, ರಿಷಭ್​ ಪಂತ್​, ಹಾರ್ದಿಕ್​ ಪಾಂಡ್ಯ ಅವರಂತ ಬ್ಯಾಟರ್​ಗಳಿದ್ದರೂ ಕೂಡ ಇವರ ಪ್ರದರ್ಶನದ ಮೇಲೆ ಹೆಚ್ಚಿನ ನಂಬಿಕೆ ಇಡುವಂತಿಲ್ಲ. ಬಡಬಡನೆ ಒಂದೆರಡು ಸಿಕ್ಸರ್​ ಮತ್ತು ಬೌಂಡರಿ ಬಾರಿಸಿದರೂ ತಂಡಕ್ಕೆ ಆಸರೆಯಾಗಬಲ್ಲ ಸಾಮರ್ಥ್ಯ ಇವರಿಗಿಲ್ಲ.

ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಕೂಡ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡುತ್ತಿದ್ದಾರೆ. ಇದಕ್ಕೆ ಸೋಮವಾರ ನಡೆದಿದ್ದ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವಣ ಪಂದ್ಯವೇ ಉತ್ತಮ ನಿದರ್ಶನ. ಈ ಪಂದ್ಯದಲ್ಲಿ ದಾಖಲೆಯ 127 ಎಸೆತಗಳು ಡಾಟ್​ ದಾಖಲಾಗಿತ್ತು. ಅಲ್ಲದೆ ಬೌನ್ಸರ್​ ಎಸೆತಗಳನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಸಾಧ್ಯವಾಗದೆ ಬ್ಯಾಟರ್​ಗಳು ಚೆಂಡಿನೇಟು ತಿಂದಿದ್ದರು. ಎಷ್ಟೇ ಟ್ರಿಕ್ಕಿ ಪಿಚ್​ನಲ್ಲಿಯೂ ಕೊಹ್ಲಿ ನಿಂತು ಆಡುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಹೀಗಾಗಿ ಅವರು ಮಧ್ಯಮ ಕ್ರಮಾಂಕದಲ್ಲೇ ಆಡಿದರೆ ಸೂಕ್ತ ಎನ್ನಬಹುದು.

Continue Reading

ಕ್ರೀಡೆ

Election Results 2024: 5 ಬಾರಿಯ ಸಂಸದನ ವಿರುದ್ಧ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಯೂಸುಫ್ ಪಠಾಣ್

Election Results 2024: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಸಚಿವರ ಮಾತಿಗೆ ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ ಅಧೀರ್ ರಂಜನ್ ಚೌಧರಿ ಅವರನ್ನು ಸದನದಿಂದ ಸಸ್ಪೆಂಡ್ ಮಾಡಲಾಗಿತ್ತು.

VISTARANEWS.COM


on

Election Results 2024
Koo

ಕೋಲ್ಕತ್ತಾ: ಭಾರತ ಕ್ರಿಕೆಟ್​ ತಂಡದ ಮಾಜಿ ಕ್ರಿಕೆಟಿಗ, ವಿಶ್ವಕಪ್​ ತಂಡದ ಸದಸ್ಯ ಯೂಸುಫ್ ಪಠಾಣ್(Yusuf Pathan) ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದಾರೆ.

ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದರು. ಈ ಮೂಲಕ ಯೂಸುಫ್ ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದರು.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಸಚಿವರ ಮಾತಿಗೆ ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ ಅಧೀರ್ ರಂಜನ್ ಚೌಧರಿ ಅವರನ್ನು ಸದನದಿಂದ ಸಸ್ಪೆಂಡ್ ಮಾಡಲಾಗಿತ್ತು. ಕಾಂಗ್ರೆಸ್ ಸಂಸದೀಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸಸ್ಪೆಂಡ್ ಮಾಡುವ ನಿರ್ಣಯವನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಮಂಡಿಸಿದ್ದರು.

ಇದನ್ನೂ ಓದಿ Election Results 2024: ಎಕ್ಸಿಟ್‌ ಪೋಲ್‌ಗಳಿಗೆ ತೀವ್ರ ಮುಖಭಂಗ; ನಂಬಿದ ಹೂಡಿಕೆದಾರರಿಗೆ 40 ಲಕ್ಷ ಕೋಟಿ ರೂ. ನಷ್ಟ!

ಮೂಲತಃ ಗುಜರಾತ್‌ನವರಾದ ಯೂಸುಫ್ ಪಠಾಣ್ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಪರ ಹಲವು ವರ್ಷಗಳ ಕಾಲ ಆಡಿದ್ದರು. ಅಲ್ಲದೆ ತಂಡದ ಪ್ರಧಾನ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಬಂಗಾಳದಾದ್ಯಂತ ಯೂಸುಫ್​ಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇದೇ ಕಾರಣದಿಂದ ಅವರಿಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ಟಿಕೆಟ್​ ನೀಡಿತ್ತು. ಇದೀಗ ಮೊದಲ ಪ್ರಯತ್ನದಲ್ಲೇ ಅವರು ಗೆದ್ದು ಬೀಗಿದ್ದಾರೆ.

ವಿಶ್ವಕಪ್‌ ಹೀರೋ


ಪಠಾಣ್‌ ಸೋದರರಲ್ಲಿ ಹಿರಿಯರಾದ ಯೂಸುಫ್ ಪಠಾಣ್‌ ಹೊಡಿಬಡಿ ಆಟಕ್ಕೆ ಖ್ಯಾತರಾಗಿದ್ದರು. 2007ರ ಚೊಚ್ಚಲ ಟಿ20 ವಿಶ್ವಕಪ್‌, 2011ರ ವಿಶ್ವಕಪ್‌, ಕೆಕೆಆರ್‌ನ ಐಪಿಎಲ್‌ ಗೆಲುವಿನ ವೇಳೆ ತಂಡದ ಸ್ಟಾರ್‌ ಆಟಗಾರನಾಗಿ ಮಿಂಚಿದ್ದು ಯೂಸುಫ್ ಹೆಗ್ಗಳಿಕೆ. 2021ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

ಪಠಾಣ್‌ ಸೋದರರಲ್ಲಿ ಹಿರಿಯರಾದ ಯೂಸುಫ್ ಪಠಾಣ್‌ ಹೊಡಿಬಡಿ ಆಟಕ್ಕೆ ಖ್ಯಾತರಾಗಿದ್ದರು. 2007ರ ಚೊಚ್ಚಲ ಟಿ20 ವಿಶ್ವಕಪ್‌, 2011ರ ವಿಶ್ವಕಪ್‌, ಕೆಕೆಆರ್‌ನ ಐಪಿಎಲ್‌ ಗೆಲುವಿನ ವೇಳೆ ತಂಡದ ಸ್ಟಾರ್‌ ಆಟಗಾರನಾಗಿ ಮಿಂಚಿದ್ದು ಯೂಸುಫ್ ಹೆಗ್ಗಳಿಕೆ. 2021ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಯೂಸುಫ್ ಪಠಾಣ್‌ 57 ಏಕದಿನ ಪಂದ್ಯಗಳಿಂದ 810 ರನ್‌ ಹೊಡೆದಿದ್ದಾರೆ. 2 ಶತಕ, 3 ಅರ್ಧ ಶತಕ ಇದರಲ್ಲಿ ಒಳಗೊಂಡಿದೆ. 22 ಟಿ20 ಪಂದ್ಯಗಳಿಂದ 236 ರನ್‌ ಬಾರಿಸಿದ್ದಾರೆ. 2012ರಲ್ಲಿ ಭಾರತವನ್ನು ಕೊನೆಯ ಸಲ ಪ್ರತಿನಿಧಿಸಿದ್ದರು.

Continue Reading
Advertisement
Uttarkashi Trekking Tragedy
ಪ್ರಮುಖ ಸುದ್ದಿ10 mins ago

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

Election Results 2024
Lok Sabha Election 202421 mins ago

Election Results 2024: ಎನ್‌ಡಿಎಗೆ ಬೆಂಬಲ ನೀಡುವುದಾಗಿ ಘೋಷಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು; ಬಿಜೆಪಿಗೆ ಬಿಗ್‌ ರಿಲೀಫ್‌

Election Results 2024
ಪ್ರಮುಖ ಸುದ್ದಿ37 mins ago

Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

prajwal revanna case
ಪ್ರಮುಖ ಸುದ್ದಿ49 mins ago

‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

Odisha Assembly election 2024
ದೇಶ55 mins ago

Odisha Assembly Result 2024: ಬಿಜೆಡಿಗೆ ಆಘಾತಕಾರಿ ಸೋಲು; ಒಡಿಶಾ ಸಿಎಂ ರಾಜೀನಾಮೆ

Election results 2024
Lok Sabha Election 20241 hour ago

Election Results 2024: ಮೋದಿ ಪಟ್ಟಾಭಿಷೇಕಕ್ಕೆ ಮೂಹೂರ್ತ ಫಿಕ್ಸ್‌: ಜೂ. 8ರಂದು ಪ್ರಧಾನಿಯಾಗಿ ಪ್ರಮಾಣ ವಚನ?

Lakshmi Hebbalkar
ಪ್ರಮುಖ ಸುದ್ದಿ1 hour ago

Lakshmi Hebbalkar : ಉಡುಪಿ ಜಿಲ್ಲಾ ಕಾಂಗ್ರೆಸ್​​ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ‘ಗೋ ಬ್ಯಾಕ್​’ ಬಿಸಿ

Pradeep Eshwar
ಪ್ರಮುಖ ಸುದ್ದಿ1 hour ago

Pradeep Eshwar: ಕೈ ಅಭ್ಯರ್ಥಿ ಸೋಲಲು ಪ್ರದೀಪ್ ಈಶ್ವರ್ ಕಾರಣ; ಸ್ವಪಕ್ಷದ ಶಾಸಕನ ವಿರುದ್ಧವೇ ತಿರುಗಿ ಬಿದ್ದ ಕಾಂಗ್ರೆಸ್ ಕಾರ್ಯಕರ್ತರು!

Stock Market
ದೇಶ2 hours ago

Stock Market: ಮೋದಿ ಪ್ರಧಾನಿ ಆಗುವುದು ಖಾತರಿ ಆಗುತ್ತಿದ್ದಂತೆ ಮತ್ತೆ ಪುಟಿದೆದ್ದ ಷೇರು ಮಾರುಕಟ್ಟೆ!

Gold Rate Today
ಚಿನ್ನದ ದರ2 hours ago

Gold Rate Today: ಮತ್ತೆ ಇಳಿದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌