ಮಂಗಳೂರು ಬಜ್ಪೆ ಏರ್‌ಪೋರ್ಟ್‌ಗೆ ಬಿಎಂಟಿಸಿ ಮಾದರಿ ಬಸ್‌ ಸೌಕರ್ಯ - Vistara News

ದಕ್ಷಿಣ ಕನ್ನಡ

ಮಂಗಳೂರು ಬಜ್ಪೆ ಏರ್‌ಪೋರ್ಟ್‌ಗೆ ಬಿಎಂಟಿಸಿ ಮಾದರಿ ಬಸ್‌ ಸೌಕರ್ಯ

ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರು ಮಾದರಿಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾರಿಗೆ ಬಸ್‌ ಸೌಕರ್ಯ ಕಲ್ಪಿಸಲಾಗಿತ್ತಿದೆ.

VISTARANEWS.COM


on

ಬಿಎಂಟಿಸಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಮಂಗಳೂರು ನಗರ ಹಾಗೂ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಡುವೆ ಸಾರಿಗೆ ಬಸ್‌ ಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಎಂಟಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸಿದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಮಂಗಳೂರಿನಲ್ಲಿ ಬಸ್ ಸೌಕರ್ಯ‌ಕ್ಕೆ ಕ್ರಮ ಕೈಗೊಳ್ಳಲು ಸಾರಿಗೆ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ.

ಕೋವಿಡ್‌ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳ ಕಾರ್ಯಾಚರಣೆ ಕಡಿಮೆ ಇರುವುದರಿಂದ, ಮಂಗಳೂರಿನಿಂದ ಅಲ್ಲಿನ ವಿಮಾನ ನಿಲ್ದಾಣಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬಿಎಂಟಿಸಿಯಿಂದ ಮೂರು ಬಸ್‌ಗಳನ್ನು ಹಸ್ತಾಂತರಿಸಲು ಹಾಗೂ ಕೆಎಸ್‌ಆರ್‌ಟಿಸಿ ವತಿಯಿಂದ ಸೇವೆ ನಿರ್ವಹಿಸಲು ಕ್ರಮ ಕೈಗೊಳ್ಳಲು ಸಚಿವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಹೀಗಾಗಿ ಮುಂದಿನ ಮಂಡಳಿಗಳ ಸಭೆಯಲ್ಲಿ ಈ ಪ್ರಸ್ತಾವನೆ ಮಂಡಿಸಿ ಅನುಮತಿ ಪಡೆಯಲು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪ ಪತ್ರ ಬರೆದಿದ್ದಾರೆ.

ಇದನ್ನೂ ಓದಿ | ವಿಸ್ತಾರ Fact Check | ಕಾರಿನ ಗಾಜು ಒರೆಸಿದ ಹುಡುಗ FASTagನಿಂದ ಹಣ ಲಪಟಾಯಿಸಿದನೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದಕ್ಷಿಣ ಕನ್ನಡ

Panjurli Daiva: ಶರತ್‌ ಶೆಟ್ಟಿ ಕೊಲೆ ಆರೋಪಿ ಶರಣಾಗತಿ; ಎಳೆತಂದು ನಿಲ್ಲಿಸಿತೇ ಪಂಜುರ್ಲಿ ದೈವ?

ಪಂಜುರ್ಲಿ ದೈವ (Panjurli Daiva) , “ಆರೋಪಿಯನ್ನು ಪಾತಾಳದಲ್ಲಿದ್ದರೂ ಹುಡುಕಿ ಮುಂದೆ ನಿಲ್ಲಿಸುತ್ತೇನೆ” ಎಂದು ಅಭಯ ನೀಡಿತ್ತು. ಒಂದು ವರ್ಷಕ್ಕೂ ಅಧಿಕ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಕೋರ್ಟ್‌ಗೆ ಶರಣಾಗಿರುವುದರ ಹಿಂದೆ ಪಂಜುರ್ಲಿ ದೈವದ ಮಹಿಮೆ ಇದೆ ಎಂದು ಸ್ಥಳೀಯರು ನಂಬಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ ಹಲವರ ಬಂಧನ ನಡೆದಿದೆ.

VISTARANEWS.COM


on

panjurli daiva sharat shetty murder
ಎಡಚಿತ್ರದಲ್ಲಿ ಕೊಲೆಯಾದ ಶರತ್‌ ಶೆಟ್ಟಿ, ಬಲಚಿತ್ರದಲ್ಲಿ ಆರೋಪಿ ಯೋಗೀಶ್‌ ಆಚಾರ್ಯ.
Koo

ಉಡುಪಿ: ತುಳುನಾಡಿನ (Tulunadu) ಆರಾಧ್ಯ ದೈವವಾದ ಪಂಜುರ್ಲಿ ದೈವದ (Panjurli Daiva) ಕಾರಣಿಕ ಎಂದೇ ವ್ಯಾಖ್ಯಾನಿಸಲಾಗುತ್ತಿರುವ ಘಟನೆಯೊಂದು ಉಡುಪಿ (Udupi news) ಜಿಲ್ಲೆಯಲ್ಲಿ ನಡೆದಿದೆ. ಪಾಂಗಾಳದಲ್ಲಿ ನಡೆದಿದ್ದ ಶರತ್‌ ಶೆಟ್ಟಿ (Sharat Shetty murder) ಎಂಬಾತನ ಕೊಲೆಯ ಪ್ರಮುಖ ಆರೋಪಿಯೊಬ್ಬ ಶರಣಾಗತನಾಗಿದ್ದಾನೆ. ಇದಕ್ಕೂ ಮುನ್ನ ಕೊಲೆಯಾದಾತನ ಕುಟುಂಬಿಕರು ಪಂಜುರ್ಲಿ ದೈವ ಮೊರೆ ಹೋಗಿದ್ದರು.

2023ರ ಫೆಬ್ರವರಿ 5ರಂದು ಉಡುಪಿಯ ಪಾಂಗಾಳ ಎಂಬಲ್ಲಿ ಬಬ್ಬು ಸ್ವಾಮಿ ದೈವಸ್ಥಾನದ ನೇಮದಲ್ಲಿ ಭಾಗವಹಿಸಿದ್ದ ಶರತ್ ಶೆಟ್ಟಿ (42) ಅವರು ದುಷ್ಕರ್ಮಿಗಳಿಗೆ ಬಲಿಯಾಗಿದ್ದರು. ಮಾತುಕತೆಗೆ ಎಂದು ಕರೆದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಪತ್ತೆಯಾಗಿರಲಿಲ್ಲ.

ಬಳಿಕ ಕುಟುಂಬಸ್ಥರು ಮಾರ್ಚ್ 24, 2023ರಂದು ಪಾಂಗಾಳದ ಮನೆಯಲ್ಲಿ ವರ್ತೆ ಪಂಜುರ್ಲಿಗೆ ನೇಮೋತ್ಸವವನ್ನು ಆಯೋಜಿಸಿ, ದೈವದ ಮೊರೆ ಹೋಗಿದ್ದರು. ಈ ಸಂದರ್ಭದಲ್ಲಿ ಪಂಜುರ್ಲಿ ದೈವ (Panjurli Daiva) , “ಆರೋಪಿಯನ್ನು ಪಾತಾಳದಲ್ಲಿದ್ದರೂ ಹುಡುಕಿ ಮುಂದೆ ನಿಲ್ಲಿಸುತ್ತೇನೆ” ಎಂದು ಅಭಯ ನೀಡಿತ್ತು.

ಅಚ್ಚರಿ ಎಂಬಂತೆ, ಮೇ.23ರಂದು ಪ್ರಕರಣ ಎ1 ಆರೋಪಿ ಯೋಗೀಶ್ ಆಚಾರ್ಯ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಒಂದು ವರ್ಷ ಮೂರು ತಿಂಗಳು ತಲೆಮರೆಸಿಕೊಂಡಿದ್ದ ಈತ ಉಡುಪಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿದ್ದಾನೆ. ಯೋಗೀಶ್ ಆಚಾರ್ಯನನ್ನು ಮೇ 30ರ ವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.

ಒಂದು ವರ್ಷಕ್ಕೂ ಅಧಿಕ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಕೋರ್ಟ್‌ಗೆ ಶರಣಾಗಿರುವುದರ ಹಿಂದೆ ಪಂಜುರ್ಲಿ ದೈವದ ಮಹಿಮೆ ಇದೆ ಎಂದು ಸ್ಥಳೀಯರು ನಂಬಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ ಹಲವರ ಬಂಧನ ನಡೆದಿದೆ.

ತುಳುನಾಡಿನ ಪಂಜುರ್ಲಿ ದೈವದ ಬಗ್ಗೆ ರಿಷಭ್‌ ಶೆಟ್ಟಿ ನಟನೆಯ ʼಕಾಂತಾರʼ ಚಿತ್ರದ ಬಳಿಕ ಹೊರಗಡೆಯೂ ಹೆಚ್ಚು ಅರಿವು ಮೂಡಿತ್ತು. ದಕ್ಷಿಣ ಕನ್ನಡ ಹಾಗೂ ಉಡುಪಿಯ ಕರಾವಳಿಯಲ್ಲಿ ನ್ಯಾಯನಿರ್ಣಯಗಳಿಗೆ ದೈವದ ಕೋಲದಲ್ಲಿ ಪ್ರಶ್ನೆ ಹಾಕುವುದು ಹಾಗೂ ದೈವದಿಂದ ʼಅಭಯʼ ಪಡೆಯುವುದು ಸಾಮಾನ್ಯವಾಗಿ ಕಂಡುಬರುತ್ತದೆ.

ಇದನ್ನೂ ಓದಿ: Glenn Maxwell: ಕಾಂತಾರದ ‘ಪಂಜುರ್ಲಿ’ ಬಲದಿಂದ ಮ್ಯಾಕ್ಸ್‌ವೆಲ್‌ 201 ರನ್ ಚಚ್ಚಿದರೇ?

Continue Reading

ಕ್ರೈಂ

Love Jihad: ನಾಪತ್ತೆಯಾದ ಹಿಂದೂ ಯುವತಿ ಮುಸ್ಲಿಂ ಯುವಕನ ಮದುವೆಯಾಗಿ ಪತ್ತೆ; ಮುಸ್ಲಿಂ ಲೀಗ್‌ ನಾಯಕನ ಕುಮ್ಮಕ್ಕು?

Love Jihad: ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದ ಯುವತಿ ನೇಹಾ, ಮುಸ್ಲಿಂ ಯುವಕ ಮಿರ್ಶಾದ್ ಎಂಬಾತನ ಜೊತೆ ತೆರಳಿದ್ದಳು. ಸದ್ಯ ಪೊಲೀಸರ ಮುಂದೆ ಪ್ರತ್ಯಕ್ಷಳಾಗಿರುವ ಈಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಸ್ವಇಚ್ಛೆಯಿಂದ ಯುವಕನ ಜೊತೆ ತೆರಳಿದ್ದೇನೆ ಎಂದು ಆಕೆ ಹೇಳಿದ್ದಾಳೆ.

VISTARANEWS.COM


on

love jihad kasaragod 2
Koo

ಮಂಗಳೂರು: ಕರ್ನಾಟಕ ಗಡಿನಾಡು ಕಾಸರಗೋಡಿನಲ್ಲಿ (Kasaragod) ಮತ್ತೆ ಲವ್ ಜಿಹಾದ್ (Love Jihad) ಸದ್ದು ಮಾಡುತ್ತಿದೆ. ಮಂಗಳೂರು ಗಡಿ ಪ್ರದೇಶವಾದ ಕಾಸರಗೋಡಿನಲ್ಲಿ ಹಿಂದೂ ಯುವತಿಯನ್ನು (Hindu woman) ಮುಸ್ಲಿಂ ಯುವಕ (Muslim man) ಸದ್ದಿಲ್ಲದೆ ಮದುವೆ (Marriage) ಆಗಿದ್ದು, ಮುಸ್ಲಿಂ ಲೀಗ್ (Muslim league) ನಾಯಕನೊಬ್ಬ ಈ ಪ್ರಕರಣದಲ್ಲಿ ಬೆಂಬಲ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಕಾಸರಗೋಡಿನ ಬದಿಯಡ್ಕದಲ್ಲಿ ʼಲವ್‌ ಜಿಹಾದ್ʼ (love jihad) ಎನ್ನಲಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿಹಿಂಪ (Vishwa Hindu Parishad) ಸೇರಿ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿವೆ. ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದು, ತಮಗೆ ಮದುವೆಯಾಗಿದೆ ಎಂದು ತಿಳಿಸಿದ್ದಾಳೆ.

ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದ ಯುವತಿ ನೇಹಾ, ಮುಸ್ಲಿಂ ಯುವಕ ಮಿರ್ಶಾದ್ ಎಂಬಾತನ ಜೊತೆ ತೆರಳಿದ್ದಳು. ಸದ್ಯ ಪೊಲೀಸರ ಮುಂದೆ ಪ್ರತ್ಯಕ್ಷಳಾಗಿರುವ ಈಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಸ್ವಇಚ್ಛೆಯಿಂದ ಯುವಕನ ಜೊತೆ ತೆರಳಿದ್ದೇನೆ ಎಂದು ಆಕೆ ಹೇಳಿದ್ದಾಳೆ.

love jihad kasaragod 2

ಆದರೆ ಈ ʼಲವ್ ಜಿಹಾದ್ʼ ಹಿಂದೆ ಕೇರಳದ ಮುಸ್ಲಿಂ ಲೀಗ್ ನೇತಾರನ ಷಡ್ಯಂತ್ರವಿದೆ; ಮುಸ್ಲಿಂ ಲೀಗ್ ನೇತಾರನೊಬ್ಬ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾನೆ. ಆ ನೆಪದಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂಚು ರೂಪಿಸಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

ನೇಹಾಳ ತಂದೆಯ ದೂರಿನಂತೆ ಬದಿಯಡ್ಕ ಪೊಲೀಸರು ನಾಪತ್ತೆ ಕೇಸು ದಾಖಲಿಸಿದ್ದರು. ದೂರಿನಲ್ಲಿ, ಪೋಷಕರು ಯುವತಿಯ ಅಪಹರಣದ ಅನುಮಾನ ವ್ಯಕ್ತಪಡಿಸಿದ್ದರು. ಮೇ.23ರಂದು ಮನೆಯಿಂದ ಹೊರಟ ನೇಹಾ ದಿಢೀರ್ ನಾಪತ್ತೆಯಾಗಿದ್ದಳು. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಇಬ್ಬರ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿದೆ. ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿದ್ದ ನೇಹಾ ಮತ್ತು ಮಿರ್ಶಾದ್, ಮದುವೆಯಾಗಿ ಮೇ.27ರಂದು ಬದಿಯಡ್ಕ ಠಾಣೆಗೆ ಹಾಜರಾಗಿದ್ದರು.

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಲವ್ ಜಿಹಾದ್ ಸಕ್ರಿಯವಾಗಿದೆ. ಆರ್ಥಿಕವಾಗಿ ಹಿಂದುಳಿದ ಹಿಂದೂ ಯುವತಿಯರನ್ನು ಆಡಂಬರದ ಬದುಕಿನ ಆಮಿಷ ತೋರಿಸಿ ಲವ್ ಜಿಹಾದ್‌ನ ಜಾಲಕ್ಕೆ ಸಿಲುಕಿಸಲಾಗುತ್ತಿದೆ. ಹಿಂದೂ ಯುವತಿಯರ ಲವ್ ಜಿಹಾದ್, ಮತಾಂತರಕ್ಕೆ ಮುಸ್ಲಿಂ ಲೀಗ್ ಕುಮ್ಮಕ್ಕು ನೀಡುತ್ತಿದೆ. ಲವ್ ಜಿಹಾದ್‌ಗೆ ಬದಿಯಡ್ಕ ಪೊಲೀಸರು ಸಹ ಸಾಥ್ ನೀಡುತ್ತಿದ್ದಾರೆ ಎಂದು ವಿಎಹಿಂಪ, ಭಜರಂಗದಳ ಹಾಗೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ‌Love Jihad: ಲವ್‌ ಜಿಹಾದ್‌ಗೆ ಮತ್ತೊಂದು ಬಲಿ? ಹೋಟೆಲ್ ರೂಮ್ ನಲ್ಲಿ ಹಿಂದೂ ಯುವತಿ ಶವ ಪತ್ತೆ; ಮುಸ್ಲಿಂ ಯುವಕ ಎಸ್ಕೇಪ್‌

Continue Reading

ಮಳೆ

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Karnataka weather Forecast : ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯೊಂದಿಗೆ (Rain News) ಗುಡುಗು, ಮಿಂಚು ಇರಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 29 ರಂದು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಮಧ್ಯಮ ಮಳೆಯಾದರೆ, ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಕೆಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ.

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೋಲಾರ, ರಾಮನಗರ, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಒಣಹವೆ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

ಇನ್ನೇನೂ ಸಮ್ಮರ್‌ ಸೀಸನ್‌ (Summer dress fashion) ಮುಗಿಯುವ ಹಂತದಲ್ಲಿದೆ. ಆಗಲೇ ವೆವಿ ಡ್ರೆಸ್‌ಗಳು ಎಂಟ್ರಿ ನೀಡಿವೆ. ಹೌದು. ನೋಡಿದಾಕ್ಷಣ ಮನೋಲ್ಲಾಸ ತುಂಬುವಂತಹ ಉತ್ಸಾಹ ಮೂಡಿಸುವ ಡಿಫರೆಂಟ್‌ ಲುಕ್‌ ನೀಡುವ ನಾನಾ ಶೇಡ್‌ನ ವೆವಿ ಡ್ರೆಸ್‌ಗಳು ಫ್ಯಾಷನ್‌ ಲೋಕಕ್ಕೆ ಕಾಲಿಟ್ಟಿವೆ.

Summer Dress Fashion

ಏನಿದು ವೆವಿ ಡ್ರೆಸ್‌?

ಅರರೆ, ಏನಿದು ವೆವಿ ಡ್ರೆಸ್‌ ಎಂದು ಯೋಚಿಸುತ್ತಿದ್ದೀರಾ! ಹೆಸರೇ ಹೇಳುವಂತೆ, ಇವು ಬೀಚ್‌ನಲ್ಲಿ ಸಮುದ್ರದ ಅಲೆಗಳನ್ನು ಬಿಂಬಿಸುವಂತಹ ಪ್ರಿಂಟ್ಸ್ ಇರುವಂತಹ ಸಮ್ಮರ್‌ ಡ್ರೆಸ್‌ಗಳಿವು. ನೋಡಲು ಬೀಚ್‌ ಲುಕ್‌ ಪ್ಲಸ್‌ ಹಾಲಿ ಡೇ ಪಾರ್ಟಿ ಲುಕ್‌ ನೀಡುವಂತಹ ಉಡುಗೆಗಳಿವು. ಅಷ್ಟೇಕೆ! ಲಂಚ್‌-ಬ್ರಂಚ್‌ ಪಾರ್ಟಿಗಳಲ್ಲೂ ಕಾಣಬಹುದಾದ ಹೈ ಫ್ಯಾಷನ್‌ ಉಡುಪುಗಳಿವು. ಇವುಗಳ ಪ್ರಿಂಟ್ಸ್ ಅಲೆಗಳಂತೆ ಇರುವುದರಿಂದ ಇವನ್ನು ವೆವಿ ಡ್ರೆಸ್‌ಗಳೆಂದು ಕರೆಯಲಾಗುತ್ತದೆ. ನಾನಾ ಹೈ ಫ್ಯಾಷನ್‌ ಬ್ರಾಂಡ್‌ಗಳಲ್ಲಿ ಇವು ಬಿಡುಗಡೆಗೊಂಡಿವೆ. ಸೆಲೆಬ್ರೆಟಿಗಳು ಮಾತ್ರವಲ್ಲ, ಸ್ಟೈಲಿಶ್‌ ಹುಡುಗಿಯರನ್ನು ಸವಾರಿ ಮಾಡತೊಡಗಿವೆ ಎಂದು ವಿವರಿಸುತ್ತಾರೆ ಸ್ಟೈಲಿಸ್ಟ್‌ಗಳು.

Summer Dress Fashion

ಶಾರ್ವರಿ ವೆವಿ ಡ್ರೆಸ್‌

ಬಾಲಿವುಡ್‌ನಲ್ಲಿ ಇನ್ನೂ ಅತಿ ಹೆಚ್ಚಾಗಿ ಕಂಡು ಬರದ ಉಡುಪುಗಳಲ್ಲಿ ಈ ವೆವಿ ಡ್ರೆಸ್‌ ಕೂಡ ಸೇರಿದೆ. ಯಾಕೆಂದರೇ, ಈ ಉಡುಪು ಈ ಜನರೇಷನ್‌ ನಟಿಯರ ಲಿಸ್ಟ್ನಲ್ಲಿದೆ. ಇದಕ್ಕೆ ಪೂರಕ ಎಂಬಂತೆ, ಬಾಲಿವುಡ್‌ ನಟಿ ಶಾರ್ವರಿ ಸಮುದ್ರದ ಅಲೆಗಳನ್ನು ನೆನಪಿಸುವ ಪಿಸ್ತಾ ಮಿಂಟ್‌ ಗ್ರೀನ್‌ ಶೇಡ್ ಮಿಕ್ಸ್ ಇರುವಂತಹ ವೆವಿ ಡ್ರೆಸ್‌ನಲ್ಲಿ ಕಾಣಿಸಿಕೊಂಡು ಫ್ಯಾಷನ್‌ ಲೋಕದಲ್ಲಿ ಟ್ರೆಂಡ್‌ ಸೆಟ್‌ ಮಾಡಿದ್ದಾರೆ. ಸದ್ಯ, ಇತರೇ ಯಾವುದೇ ನಟಿಯರು ಪ್ರಯೋಗಿಸದ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡಿರುವ ಹೆಗ್ಗಳಿಕೆ ಇವರದು. ವೆವಿ ಡ್ರೆಸ್‌ನಂತಹ ಸಮ್ಮರ್‌ ಡ್ರೆಸ್‌ ಇದೆಯಾ! ಒಮ್ಮೆ ನಾವು ಕೂಡ ಧರಿಸೋಣಾ! ಎಂಬ ಟೀನೇಜ್‌ ಹುಡುಗಿಯರ ಫ್ಯಾಷನ್‌ ಚಾಯ್ಸ್‌ಗೆ ಹೊಸ ಶೇಡ್‌ಗಳು ಆಕರ್ಷಿಸುತ್ತಿವೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕಿ ಜಿಯಾ. ಅವರ ಪ್ರಕಾರ, ವೆವಿ ಡ್ರೆಸ್‌ಗಳು ಯಂಗ್‌ ಲುಕ್‌ ನೀಡುತ್ತವಂತೆ. ಹಾಗಾಗಿ ಆನ್‌ಲೈನ್‌ನಲ್ಲಿ ಇದೀಗ ಇವುಗಳ ಖರೀದಿ ಹೆಚ್ಚಾಗಿದೆ ಎನ್ನುತ್ತಾರೆ.

Summer Dress Fashion

ವೆವಿ ಡ್ರೆಸ್‌ಗಳ ಟ್ರೆಂಡ್‌

ಸಾಗರ ಹಾಗೂ ಸಮುದ್ರ ಅಲೆಗಳ ನ್ಯಾಚುರಲ್‌ ಶೇಡ್ಸ್, ಪೀಚ್‌ ಹಾಗೂ ಕೇಸರಿ ಶೇಡ್‌ಗಳ ನೈಜವೆನಿಸದ ಪ್ರಿಂಟ್ಸ್‌ನ ವೆವಿ ಡ್ರೆಸ್‌ಗಳು, ಅಸ್ಸೆಮ್ಮಿಟ್ರಿಕಲ್‌ ವೆವಿ ಡ್ರೆಸ್‌ಗಳು ಅದರಲ್ಲೂ, ವೈಟ್‌ & ಸೀ ಬ್ಲ್ಯೂ , ರಾಯಲ್‌ ಬ್ಲ್ಯೂ ವೆವಿ ಡ್ರೆಸ್‌ಗಳು ಅತಿ ಹೆಚ್ಚಾಗಿ ಬೇಡಿಕೆ ಪಡೆದುಕೊಂಡಿವೆ.

  • ಸಮ್ಮರ್‌ ಪಾರ್ಟಿಗೆ ಹಾಗೂ ಔಟಿಂಗ್‌ಗೆ ಮ್ಯಾಚ್‌ ಆಗುತ್ತವೆ.
  • ಹೆಚ್ಚು ಆಕ್ಸೆಸರೀಸ್‌ ಧರಿಸುವ ಅಗತ್ಯವಿಲ್ಲ.
  • ಮಿನಿಮಲ್‌ ಮೇಕಪ್‌ ಆಕರ್ಷಕವಾಗಿ ಕಾಣಿಸುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Namaz On Road: ಹಿಂದೂ ಧರ್ಮೀಯರು ಕೂಡ ವೈಯಕ್ತಿಕ ಪೂಜೆ, ನಿತ್ಯಪೂಜೆಯಂಥ ಆಚರಣೆಗಳನ್ನು ಮನೆಯೊಳಗೆ, ದೇವರ ಕೋಣೆಯಲ್ಲಿ ಮಾಡಿಕೊಳ್ಳುತ್ತಾರೆ. ಎಂದೂ ಇತರರಿಗೆ ತೊಂದರೆ ಮಾಡುವಂತೆ ನೆರವೇರಿಸುವುದಿಲ್ಲ. ಇನ್ನು ಮುಸ್ಲಿಂ ಸಮುದಾಯದ ಉರೂಸ್‌ನಂಥ ಸಾರ್ವಜನಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಎಲ್ಲರೂ ಸೇರುವಂತಹ ವಿಶಾಲ ಮೈದಾನಗಳಲ್ಲಿ ನಡೆಸುವ ಅವಕಾಶವಿದ್ದೇ ಇದೆ. ಇದಕ್ಕೆ ಯಾರೂ ಅಡ್ಡಿಪಡಿಸಿಲ್ಲ. ಮಸೀದಿಗಳಲ್ಲಿ ಪ್ರತಿದಿನ ಐದು ಬಾರಿ ನಡೆಸುವ ಆಜಾನ್‌ ಅನ್ನು ಕೂಡ ಧ್ವನಿವರ್ಧಕದಲ್ಲಿ ಪ್ರಸಾರ ಮಾಡುವುದನ್ನು ಕೂಡ ಬಹುತೇಕ ಹಿಂದೂಗಳು ಯಾವುದೇ ರೀತಿಯಲ್ಲಿ ಆಕ್ಷೇಪಿಸಿಲ್ಲ. ಹೀಗಿರುವಾಗ ನಡುರಸ್ತೆಯಲ್ಲಿ ನಮಾಜ್ ಮಾಡಿ ಶಾಂತಿ ಕದಡುವುದು ಎಷ್ಟು ಸರಿ?

VISTARANEWS.COM


on

namaz on road
Koo

ಮಂಗಳೂರು ನಗರದ ರಸ್ತೆಯಲ್ಲಿ ನಮಾಜ್ (Namaz On Road) ಮಾಡಿದ ವಿಚಾರಕ್ಕೆ ಬಿಜೆಪಿ ನಾಯಕರು ಹಾಗೂ ಹಿಂದು ಸಂಘಟನೆಗಳು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ನಮಾಜ್ ಮಾಡಿದವರ ವಿರುದ್ಧ ಕದ್ರಿ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ ಕಲಂ 341, 283, 143 ಜೊತೆಗೆ 149ರಡಿ ಸುಮೋಟೊ ಪ್ರಕರಣ ದಾಖಲಾಗಿದೆ. ಮೇ 24ರಂದು ನಗರದ ಕಂಕನಾಡಿಯ ಮಸೀದಿ ಎದುರು ಯುವಕರ ತಂಡ ನಮಾಜ್‌ ಮಾಡಿತ್ತು. ಸಾರ್ವಜನಿಕ ಸ್ಥಳದಲ್ಲಿ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗಿತ್ತು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ಘಟನೆ ಬಗ್ಗೆ ಹಿಂದು ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಕಿಡಿಕಾರಿದ್ದರು. ಇಂತಹ ಘಟನೆ ಮರುಕಳಿಸಿದರೆ ಅದೇ ವೇಳೆಯಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದಾಗಿ ವಿಶ್ವ ಹಿಂದೂ ಪರಿಷದ್‌ ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಸಕ್ರಿಯತೆ ಮೆಚ್ಚಬೇಕಾದ ಸಂಗತಿ.

ಕೆಲವರು ಇದನ್ನು ಸಾರ್ವಜನಿಕ ತಾಣಗಳಲ್ಲಿ ನಡೆಯುವ ಹಿಂದೂ ಧಾರ್ಮಿಕ ಆಚರಣೆಗಳ ಜೊತೆಗೆ ಹೋಲಿಸುತ್ತಿದ್ದಾರೆ. ನಮಾಜ್‌ ಸಂಪೂರ್ಣ ವೈಯಕ್ತಿಕ ಸಂಗತಿ ಹಾಗೂ ಅದೊಂದು ವೈಯಕ್ತಿಕ ಧಾರ್ಮಿಕ ಆಚರಣೆ. ಅದೇನೂ ಸಾರ್ವಜನಿಕ ಪ್ರಾರ್ಥನೆಯಾಗಲೀ, ಸಾರ್ವಜನಿಕ ಸತ್ಯನಾರಾಯಣ ಪೂಜೆಯಂತಹ ಕಾರ್ಯಕ್ರಮವಾಗಲೀ, ಮೊಸರು ಕುಡಿಕೆಯಂಥ ಮನರಂಜನಾ ಕಾರ್ಯಕ್ರಮವಾಗಲೀ ಅಲ್ಲ. ಆದ್ದರಿಂದ ಅದನ್ನು ಹಿಂದೂ ಧಾರ್ಮಿಕ ಆಚರಣೆಗಳ ಜೊತೆಗೆ ಹೋಲಿಸಲು ಸಾಧ್ಯವಿಲ್ಲ. ಯಾವುದೇ ಹಿಂದೂ ಹಬ್ಬಕ್ಕೆ ಸಂಬಂಧಿಸಿದ ಆಚರಣೆಯನ್ನೇ ಮಾಡುವುದಿದ್ದರೂ ರಸ್ತೆಯನ್ನು ಬಂದ್‌ ಮಾಡಿ ಯಾರೂ ಮಾಡುವುದಿಲ್ಲ. ಸಾರ್ವಜನಿಕ ಮೈದಾನ ಅಥವಾ ವೈಯಕ್ತಿಕ ಖಾಲಿ ಜಾಗಗಳಲ್ಲಿ, ರಸ್ತೆಯಲ್ಲಿ ಯಾವುದೇ ಅಡೆತಡೆಯಾಗದಂತೆ ಆಚರಿಸುತ್ತಾರೆ. ರಾಮನವಮಿಯಲ್ಲಿ ನಡೆಯುವ ಪಾನಕ ಪನಿವಾರ ವಿತರಣೆ ಕೂಡ ರಸ್ತೆಯಲ್ಲಿ ಹೋಗಿ ಬರುವವರ ದಣಿವನ್ನು ತಣಿಸುವಂತೆ ಆಪ್ಯಾಯಮಾನವಾಗಿರುತ್ತದೆಯೇ ಹೊರತು, ಕಿರಿಕಿರಿ ಮಾಡುವಂತೆ ಇರುವುದಿಲ್ಲ. ಆದ್ದರಿಂದ ಇದನ್ನು ಹಿಂದೂ ಆಚರಣೆಗಳ ಜೊತೆಗೆ ಹೋಲಿಸುವುದು ಕುತರ್ಕ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

ಹಿಂದೂ ಧರ್ಮೀಯರು ಕೂಡ ವೈಯಕ್ತಿಕ ಪೂಜೆ, ನಿತ್ಯಪೂಜೆಯಂಥ ಆಚರಣೆಗಳನ್ನು ಮನೆಯೊಳಗೆ, ದೇವರ ಕೋಣೆಯಲ್ಲಿ ಮಾಡಿಕೊಳ್ಳುತ್ತಾರೆ. ಎಂದೂ ಇತರರಿಗೆ ತೊಂದರೆ ಮಾಡುವಂತೆ ನೆರವೇರಿಸುವುದಿಲ್ಲ. ಇನ್ನು ಮುಸ್ಲಿಂ ಸಮುದಾಯದ ಉರೂಸ್‌ನಂಥ ಸಾರ್ವಜನಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಎಲ್ಲರೂ ಸೇರುವಂತಹ ವಿಶಾಲ ಮೈದಾನಗಳಲ್ಲಿ ನಡೆಸುವ ಅವಕಾಶವಿದ್ದೇ ಇದೆ. ಇದಕ್ಕೆ ಯಾರೂ ಅಡ್ಡಿಪಡಿಸಿಲ್ಲ. ಮಸೀದಿಗಳಲ್ಲಿ ಪ್ರತಿದಿನ ಐದು ಬಾರಿ ನಡೆಸುವ ಆಜಾನ್‌ ಅನ್ನು ಕೂಡ ಧ್ವನಿವರ್ಧಕದಲ್ಲಿ ಪ್ರಸಾರ ಮಾಡುವುದನ್ನು ಕೂಡ ಬಹುತೇಕ ಹಿಂದೂಗಳು ಯಾವುದೇ ರೀತಿಯಲ್ಲಿ ಆಕ್ಷೇಪಿಸಿಲ್ಲ. ಆದರೆ ಯಾವಾಗ ರಸ್ತೆಯಲ್ಲಿ ನಮಾಜ್‌ ಎಂಬುದು ಹೊಸದಾಗಿ ಆರಂಭವಾಯಿತೋ ಆಗ ಸ್ಥಳೀಯರು ಆತಂಕಕ್ಕೆ ಒಳಗಾಗುವುದು ಸಹಜ. ಇದೊಂದು ನಿತ್ಯದ ಪರಿಪಾಠವೇ ಆಗಿಬಿಟ್ಟರೆ, ಆಗ ನಿತ್ಯವೂ ದಾರಿಹೋಕರು ಕಿರಿಕಿರಿ ಅನುಭವಿಸಬೇಕಾಗುತ್ತದೆ. ಪ್ರತಿದಿನ ನಿರ್ದಿಷ್ಟ ಹೊತ್ತಿಗೆ ಇಂತಿಂಥ ರಸ್ತೆಯಲ್ಲಿ ಹೋಗಬಾರದು ಎಂಬ ಅಘೋಷಿತ ಕರ್ಫ್ಯೂ ಸೃಷ್ಟಿಯಾಗಿಬಿಡುತ್ತದೆ.

ಒಂದು ಸಮಾಜದಲ್ಲಿ ಅಸಹನೆ ಬೇರೂರಲು ಆರಂಭವಾಗುವುದು ಇಂಥ ಸಣ್ಣ, ಆದರೆ ಮೊಳಕೆಯಲ್ಲೇ ನಾವು ಹತ್ತಿಕ್ಕಬೇಕಾದ ಸಂಗತಿಗಳಿಂದಲೇ. ರಸ್ತೆಯಲ್ಲಿ ನಮಾಜ ಮಾಡುವುದನ್ನು ಸಾಂಪ್ರದಾಯಿಕ ಮುಸ್ಲಿಮರು ಕೂಡ ಸಮರ್ಥಿಸುವುದಿಲ್ಲ. ಮಸೀದಿಯ ಒಳಗೆ ಅಥವಾ ಮನೆಯ ಒಳಗೆ ನಡೆಯಬೇಕಾದ ಒಂದು ಖಾಸಗಿ ಧಾರ್ಮಿಕ ಸಂಗತಿಯನ್ನು ಸಾರ್ವಜನಿಕ ಮಾಡಿದರೆ ಅದರ ಘನತೆ ಕಳೆದುಹೋಗುತ್ತದೆ. ಅದಕ್ಕಿರಬಹುದಾದ ಪವಿತ್ರ ಆವರಣವೂ ನಾಶವಾಗುತ್ತದೆ. ನಮಾಜ್‌ ಎಂಬುದು ಮುಸ್ಲಿಮರಿಗೆ ಹೇಗೋ ಹಾಗೆಯೇ ಹಿಂದೂಗಳು ಕೂಡ ಗೌರವಿಸಬೇಕಾದ ಸಂಗತಿ. ಆ ಗೌರವ ಇರುವುದರಿಂದಲೇ, ರಸ್ತೆಯಲ್ಲಿ ಮಾಡುವ ಮೂಲಕ ಅದರ ಘನತೆಯನ್ನು ನಾಶ ಮಾಡದಿರಿ ಎಂಬ ಸಂದೇಶವನ್ನು ಹಿಂದೂ ಸಮಾಜದ ಹಲವರು ನೀಡುತ್ತಿದ್ದಾರೆ ಎಂದು ತಿಳಿಯಬೇಕು. ಈ ಮಾತನ್ನು ಮುಸ್ಲಿಂ ಸಮುದಾಯ ಒಪ್ಪಿ ಗೌರವಿಸಿದರೆ ಸಮಾಜದ ಸಾಮರಸ್ಯ ಕದಡದು.

Continue Reading
Advertisement
panjurli daiva sharat shetty murder
ದಕ್ಷಿಣ ಕನ್ನಡ56 seconds ago

Panjurli Daiva: ಶರತ್‌ ಶೆಟ್ಟಿ ಕೊಲೆ ಆರೋಪಿ ಶರಣಾಗತಿ; ಎಳೆತಂದು ನಿಲ್ಲಿಸಿತೇ ಪಂಜುರ್ಲಿ ದೈವ?

Money Guide
ಮನಿ-ಗೈಡ್3 mins ago

Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

Prajwal Revanna Case
ಕರ್ನಾಟಕ5 mins ago

Prajwal Revanna Case: ಬೆಂಗಳೂರಿಗೆ ಪ್ರಜ್ವಲ್‌ ರೇವಣ್ಣ ಟಿಕೆಟ್ ಬುಕ್; ನಾಳೆ ಮಧ್ಯಾಹ್ನ ಜರ್ಮನಿಯಿಂದ ಪ್ರಯಾಣ

Gold Rate Today
ಚಿನ್ನದ ದರ34 mins ago

Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

World Digestive Health Day
ಆರೋಗ್ಯ35 mins ago

World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ರಾಹುಲ್‌ ಗಾಂಧಿ rahul gandhi ippb account 2
ಪ್ರಮುಖ ಸುದ್ದಿ43 mins ago

ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

All Eyes on Rafah
ವಿದೇಶ51 mins ago

All Eyes on Rafah: ಪ್ಯಾಲೆಸ್ತೀನ್‌ಗೆ ಬೆಂಬಲಿಸಿ ರೋಹಿತ್‌ ಪತ್ನಿ ಪೋಸ್ಟ್‌; ಫುಲ್‌ ಟ್ರೋಲ್‌- ಏನಿದು ʼಆಲ್‌ ಐಸ್‌ ಆನ್‌ ರಫಾʼ?

Sujay Hegde Manasare actor Engagement with Prerana
ಕಿರುತೆರೆ55 mins ago

Sujay Hegde: ನಿಶ್ಚಿತಾರ್ಥ ಮಾಡಿಕೊಂಡ ‘ಮನಸಾರೆ’ ಧಾರಾವಾಹಿಯ ನಟ ಸುಜಯ್ ಹೆಗಡೆ

Viral News
ವೈರಲ್ ನ್ಯೂಸ್1 hour ago

Viral News: ರೈಲಿನಲ್ಲಿ ಅಶ್ಲೀಲವಾಗಿ ಮೈ ಕುಣಿಸಿದ ಮಹಿಳೆ; ರೀಲ್ಸ್ ಮಾಡುವವರ ಕಾಟವಿಲ್ಲದ ಪ್ರಯಾಣ ಅಸಾಧ್ಯ ಎಂದ ನೆಟ್ಟಿಗರು

Rahul Gandhi
ದೇಶ1 hour ago

Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ18 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌