Maha politics: ಅಸ್ವಾಭಾವಿಕ ಮೈತ್ರಿ ಸರಕಾರಕ್ಕೆ ಉಳಿಗಾಲವಿಲ್ಲ, ಕರ್ನಾಟಕದ ಬಳಿಕ ಈಗ ಮಹಾರಾಷ್ಟ್ರ ಮಾದರಿ! - Vistara News

ದೇಶ

Maha politics: ಅಸ್ವಾಭಾವಿಕ ಮೈತ್ರಿ ಸರಕಾರಕ್ಕೆ ಉಳಿಗಾಲವಿಲ್ಲ, ಕರ್ನಾಟಕದ ಬಳಿಕ ಈಗ ಮಹಾರಾಷ್ಟ್ರ ಮಾದರಿ!

ರಾಜಕೀಯದಲ್ಲಿ ಅಸ್ವಾಭಾವಿಕ, ಅನೈಸರ್ಗಿಕ ಸಂಬಂಧಗಳು ಹುಟ್ಟುವುದು ಸಹಜ. ಆದರೆ, ಅದನ್ನು ದೀರ್ಘ ಕಾಲ ಕಾಪಾಡಿಕೊಳ್ಳುವುದು ಅಪಾಯಕಾರಿ. ಅದು ಒಂದು ಪಕ್ಷದ ಅಸ್ತಿತ್ವವನ್ನೇ ನಾಶ ಮಾಡಿಬಿಡುತ್ತದೆ. ಶಿವಸೇನೆಗೆ ಅಂಥದೊಂದು ಅಪಾಯವಿತ್ತು. ಆದರೆ, ಉದ್ಧವ್‌ ಠಾಕ್ರೆಗೆ ಅದು ಅರ್ಥವಾಗಲಿಲ್ಲ. ಅಸ್ವಾಭಾವಿಕ ಸಂಬಂಧಕ್ಕೆ ಡೈವೋರ್ಸ್‌ ಕೊಡುವುದನ್ನು ಮರೆತು ಸಂಬಂಧದ ಸಂಭ್ರಮದಲ್ಲೇ ಅವರು ಮುಳುಗಿಹೋದರು.

VISTARANEWS.COM


on

Maharastra political crisis: Shinde-Thackrey faction dispute transferred to Supreme Court extended bench
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಅದು ಐದು ವರ್ಷ ಉಳಿಯಬೇಕಾದ ಸರಕಾರ ಆಗಿರಲೇ ಇಲ್ಲ. ಇವತ್ತಲ್ಲ ನಾಳೆ, ಒಂದಲ್ಲ ಒಂದು ಕಾರಣಕ್ಕೆ ಅದು ಉರುಳಿ ಹೋಗಲೇಬೇಕಿತ್ತು. ಆದರೆ, ಅದನ್ನು ಜನನಿಬಿಡ ಪ್ರದೇಶದಲ್ಲಿರುವ ದೊಡ್ಡ ಕಟ್ಟಡವೊಂದನ್ನು ಅತ್ಯಂತ ಜತನದಿಂದ ಉರುಳಿಸುತ್ತಾರಲ್ಲ. ಆ ರೀತಿ ಯಾರಿಗೂ ಗೊತ್ತಾಗದಂತೆ ನೆಲಸಮ ಮಾಡಲು ಹಲವು ಅವಕಾಶಗಳಿದ್ದವು. ಆದರೆ, ಇಲ್ಲಿ ಬುಲ್ಡೋಜರ್‌ ತಂದು ಗುದ್ದಿಸಿ ಪುಡಿ ಮಾಡಲಾಗಿದೆ. ಕೆಲವರಿಗೆ ಗಾಯಗಳೂ ಆಗಿವೆ!

jds analysis

ರಾಜಕಾರಣದಲ್ಲಿ ಕೆಲವೊಮ್ಮೆ ಅಧಿಕಾರಕ್ಕಾಗಿ ಅಸಹಜ, ಅಸ್ವಾಭಾವಿಕ ಮೈತ್ರಿಗಳು ಅತ್ಯಂತ ಸಹಜ. ಆದರೆ, ಈಗೀಗ ಜೀವನಪೂರ್ತಿ ಜತೆಯಾಗಿ ಬಾಳುತ್ತೇವೆ ಎಂದು ಪ್ರತಿಜ್ಞೆ ಮಾಡಿ ಮದುವೆಯಾದ ಸಂಬಂಧಗಳೇ ಉಳಿಯುವುದಿಲ್ಲ. ಹಾಗಿರುವಾಗ ಅವಸರಕ್ಕೆ ಸೃಷ್ಟಿಯಾದ ರಾಜಕೀಯ ಸಂಬಂಧಗಳಿಗೆ ದೀರ್ಘ ಕಾಲ ಜೋತು ಬೀಳುವ ಅನಿವಾರ್ಯತೆ ಇರುವುದಿಲ್ಲ. ಹಾಗೆ ಜೋತು ಬೀಳುವುದು ಕೂಡಾ ಅಪಾಯಕಾರಿಯೆ.

ಮಹಾರಾಷ್ಟ್ರದಲ್ಲಿ ಆಗಿದ್ದು ಅದೇ

2019ರ ಅಕ್ಟೋಬರ್‌ 21ರಂದು ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಾಗ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮತ್ತು ಶಿವಸೇನೆ ನಿಚ್ಚಳ ಬಹುಮತವನ್ನೇ ಪಡೆದಿತ್ತು. 152 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 106 ಸ್ಥಾನಗಳಲ್ಲಿ ಗೆದ್ದಿದ್ದರೆ, 121 ಸ್ಥಾನಗಳಲ್ಲಿ ಕಣಕ್ಕಿಳಿದಿದ್ದ ಶಿವಸೇನೆ 56 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಅತ್ಯಂತ ಸಹಜವಾಗಿ ಬಿಜೆಪಿ ಮುಂದಾಳುತ್ವದಲ್ಲಿ ಸರಕಾರ ರಚನೆಗೆ ಬೇಕಾದ ಶಕ್ತಿ (ಮ್ಯಾಜಿಕ್‌ ನಂ. 145) ಜಮೆಯಾಗಿತ್ತು. ಆದರೆ, ಅಧಿಕಾರ ಹಂಚಿಕೆಯ ವಿಚಾರದಲ್ಲಿ ಹುಟ್ಟಿದ ಜಗಳದಿಂದಾಗಿ ಸರಕಾರವೇ ರಚನೆಯಾಗದೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಒಂದು ತಿಂಗಳ ರಾಷ್ಟ್ರಪತಿ ಆಡಳಿತದ ಬಳಿಕವೂ ಬಿಕ್ಕಟ್ಟು ಬಗೆಹರಿಯದೆ ಇದ್ದಾಗ ಅದಕ್ಕೊಂದು ಜರ್ಕ್‌ ಕೊಟ್ಟಿದ್ದು ದೇವೇಂದ್ರ ಫಡ್ನವಿಸ್‌. ಮಾಜಿ ಮುಖ್ಯಮಂತ್ರಿ ಫಡ್ನವಿಸ್‌ ಅವರು ಎನ್‌ಸಿಪಿಯನ್ನು ಒಡೆದು ಅಜಿತ್‌ ಪವಾರ್‌ ಅವರ ಟೀಮ್‌ನ ಬೆಂಬಲ ಪಡೆದು ನವೆಂಬರ್‌ 23ರಂದು ರಾತ್ರೋರಾತ್ರಿ ಸರಕಾರವನ್ನು ರಚಿಸಿದರು. ರಾಜ್ಯಪಾಲರ ಸಹಾಯ ಹಸ್ತ, ಕೇಂದ್ರ ಸರಕಾರದ ಕೃಪಾಕಟಾಕ್ಷದ ನೆರವಿನಿಂದ ಮಹಾರಾಷ್ಟ್ರದಲ್ಲಿ ಸರಕಾರ ರಚನೆಯಾಯಿತು. ಅಲ್ಲಿಯವರೆಗೆ ನಿದ್ದೆಯಲ್ಲಿದ್ದ ಎ‌ನ್‌ಸಿಪಿ ಬೆಚ್ಚಿ ಬಿದ್ದಿತು. ಬಂಧುವೇ ಆಗಿರುವ ಅಜಿತ್‌ ಪವಾರ್‌ ಮೋಸ ಮಾಡಿದರು ಎಂದು ಶರದ್‌ ಪವಾರ್‌ ಅಲವತ್ತುಕೊಂಡರು. ನಿಜವೆಂದರೆ, ಅಜಿತ್‌ ಮೋಸ ಮಾಡಿದ್ದು ತಮಗಲ್ಲ ಬಿಜೆಪಿಗೆ ಎಂದು ಗೊತ್ತಾಗಿದ್ದು ನವೆಂಬರ್‌ 26ರಂದು! ಸರಕಾರ ರಚನೆಗೆ ಬೆಂಬಲ ನೀಡುವುದಾಗಿ ಬಿಜೆಪಿಗೆ ಎಂದು ಯೊಂದಿಗೆ ಸೇರಿಕೊಂಡ ಅಜಿತ್‌ ಪವಾರ್‌ ಉಪಮುಖ್ಯಮಂತ್ರಿಯೇ ಆದರು. ತನ್ನ ಮೇಲಿದ್ದ 20,000 ಕೋಟಿ ರೂ.ಗಳ ಹಗರಣದಲ್ಲಿ ರಾತ್ರೋ ರಾತ್ರಿ ಕ್ಲೀನ್‌ ಚಿಟ್‌ ಪಡೆದು ಪರಿಶುದ್ಧರಾದರು. ಮೂರೇ ದಿನದ ಅಂತರದಲ್ಲಿ ನಡೆದ ವಿಶ್ವಾಸ ಮತ ಯಾಚನೆಯಲ್ಲಿ ದೇವೇಂದ್ರ ಫಡ್ನವಿಸ್‌ಗೆ ಕೈ ಕೊಟ್ಟು ಮರಳಿ ಎನ್‌ಸಿಪಿ ಸೇರಿಕೊಂಡರು. ಫಡ್ನವಿಸ್‌ ಸರಕಾರ ಉರುಳಿತು.

ದೇವೇಂದ್ರ ಫಡ್ನವಿಸ್‌

1984ರಲ್ಲಿ ಜತೆಯಾದ ಬಳಿಕ  ಬಿಜೆಪಿ- ಶಿವಸೇನೆ ಹಲವು ಬಾರಿ ಜತೆಗೂಡಿ ಸರಕಾರ ರಚಿಸಿದರೂ ಬಿಜೆಪಿ ಹಿರಿಯಣ್ಣನಾಗಿ  ಅಧಿಕಾರ ನಡೆಸಿದ್ದು 2014ರಲ್ಲಿ. ಅದಾದ ಬಳಿಕ ಶಿವಸೇನೆಗೆ ಬಿಜೆಪಿಯ ಮುಂದೆ ತಾನು ಮಂಕಾಗಬಹುದೆಂಬ ಆತಂಕ ಸೃಷ್ಟಿಯಾಗಲು ಶುರುವಾಗಿತ್ತು. ಅದೇ ಕಾರಣಕ್ಕೆ 2019ರ ಚುನಾವಣೆಯಲ್ಲಿ ಗೆದ್ದರೂ ಅಧಿಕಾರ ಹಂಚಿಕೆಯೇ ಕಗ್ಗಂಟಾಯಿತು.

ಹುಟ್ಟಿಕೊಂಡಿತು ಹೊಸ ಮೈತ್ರಿ!

ತನ್ನನ್ನು ಕಡೆಗಣಿಸುತ್ತಿರುವ ಬಿಜೆಪಿಗೆ ಪಾಠ ಕಲಿಸಲೇಬೇಕೆಂಬ ಹಠದಲ್ಲಿ ಶಿವಸೇನೆ ಯಾರೂ ನಂಬಲು ಸಾಧ್ಯವೇ ಇಲ್ಲದ ಮೈತ್ರಿಯೊಂದಕ್ಕೆ ಮುಂದಾಯಿತು. ತಾನು ಬದುಕಿನುದ್ದಕ್ಕೂ ಪ್ರತಿ ಹೆಜ್ಜೆಯಲ್ಲೂ ವಿರೋಧಿಸಿಕೊಂಡು ಬಂದಿದ್ದ, ಸಾಕಷ್ಟು ದಬ್ಬಾಳಿಕೆ, ದೌರ್ಜನ್ಯಗಳಿಗೆ ಕಾರಣವೂ ಆಗಿದ್ದ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಜತೆಗೆ ಮೈತ್ರಿ ಮಾಡಿಕೊಳ್ಳುವ ಅಚ್ಚರಿಯ ಹೆಜ್ಜೆ ಇಟ್ಟಿತು. ನಿಜವೆಂದರೆ, ಇಂಥಹುದೊಂದು ಪ್ರಸ್ತಾಪವನ್ನು ತಂದಿಟ್ಟಿದ್ದು ಶರದ್‌ ಪವಾರ್‌. ಇಂಥಹುದೊಂದು ಮೈತ್ರಿ ಸಾಧ್ಯವೆಂದು ಕಾಂಗ್ರೆಸ್‌ನ್ನು ಮನವೊಲಿಸಿ ಶಿವಸೇನೆಯ ಮುಂದೆ ಉಡುಗೊರೆಯ ತಟ್ಟೆ ಇಟ್ಟರು. ಹಲವು ವರ್ಷಗಳಿಂದ ಅಧಿಕಾರವಿಲ್ಲದೆ ಕಂಗಾಲಾಗಿದ್ದ ಕಾಂಗ್ರೆಸ್‌ ಮತ್ತು ಎನ್‌ಸಿಪಿಗೂ ಇಂಥಹುದೊಂದು ಅವಕಾಶ ಬೇಕಿತ್ತು. ಶಿವಸೇನೆ ಒಪ್ಪಿದ್ದು ಅದಕ್ಕೆ ಖುಷಿಯಾಯಿತು. ರಾಜಕಾರಣದಲ್ಲಿ ಹೀಗೂ ಆಗಬಹುದೇ ಎಂಬ ಸೋಜಿಗ ದೇಶಕ್ಕೂ ಆಯಿತು. ನಿಜವೆಂದರೆ  ಉದ್ಧವ್‌ ಠಾಕ್ರೆ ನೇತೃತ್ವದಲ್ಲಿ ಶಿವಸೇನೆಯು ಬಿಜೆಪಿಗಿಂತಲೂ ಚೆನ್ನಾಗಿ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜತೆಗೇ ಬೆರೆತುಕೊಂಡಿತು! ಈ ಮೈತ್ರಿ ಹೇಗಿತ್ತೆಂದರೆ ಮುಂದಿನ ಚುನಾವಣೆಗಳಲ್ಲಿ ಈ ಮೂರೂ ಪಕ್ಷಗಳು ಜತೆಗೂಡಿಯೇ ಸ್ಪರ್ಧೆ ಮಾಡಿಬಿಡಬಹುದೇ ಎಂಬಷ್ಟು ಆತ್ಮೀಯತೆ ಬೆಳೆದಿತ್ತು.

ಉದ್ಧವ್‌ ಠಾಕ್ರೆಗೆ ಶರದ್‌ ಪವಾರ್‌ ಬೆಂಬಲ

 ಆದರೆ ತಳಮಟ್ಟದಲ್ಲಿ ಹಾಗಿರಲಿಲ್ಲ!
ಮೈತ್ರಿ ಸರಕಾರ ಎನ್ನುವುದು ರಾಜಕಾರಣಿಗಳು ತಮ್ಮ ಅಧಿಕಾರಕ್ಕಾಗಿ ಮಾಡಿಕೊಳ್ಳುವ ತಾತ್ಕಾಲಿಕ ವ್ಯವಸ್ಥೆ. ಆದರೆ, ತಳಮಟ್ಟದಲ್ಲಿ ಈ ಬಂಧ ಬೆಸೆಯುವುದು ಅಷ್ಟು ಸುಲಭವಲ್ಲ. ಈ ನಡುವೆ, ಕೆಲವೊಂದು ಸ್ಥಳೀಯ ಚುನಾವಣೆಗಳನ್ನು ಕಾಂಗ್ರೆಸ್‌-ಎನ್‌ಸಿಪಿ- ಶಿವಸೇನೆ ಜತೆಗೂಡಿ ಎದುರಿಸಿದವರಾದರೂ ಹೀಗೇ ಅದರೆ ಮುಂದೊಂದು ದಿನ ಶಿವಸೇನೆಯ ಅಸ್ತಿತ್ವವೇ ನಾಶವಾಗಬಹುದು ಎಂಬ ಆತಂಕ ಕಾರ್ಯಕರ್ತರಲ್ಲಿ ಹುಟ್ಟಿಕೊಂಡಿತ್ತು. ಅದನ್ನು ಚೆನ್ನಾಗಿ ಗ್ರಹಿಸಿದ್ದು ಉದ್ಧವ್‌ ಠಾಕ್ರೆ ಅಲ್ಲ, ಏಕನಾಥ್‌ ಶಿಂಧೆ!

ಶಿವಸೇನೆ ತನ್ನ ಸಹಜ, ಸ್ವಾಭಾವಿಕ ಸ್ನೇಹಿತ, ಬಾಳ್‌ ಠಾಕ್ರೆ ಅವರ ಹಿಂದುತ್ವ ಸಿದ್ಧಾಂತಕ್ಕೆ ಬದ್ಧವಾದ ಬಿಜೆಪಿಯನ್ನು ಬಿಟ್ಟು ಕಡುವೈರಿಗಳಾದ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಜತೆ ಅನೈತಿಕ ಮೈತ್ರಿ ಮಾಡಿಕೊಂಡ ಅಧಿಕಾರ ರಾಜಕಾರಣ ಆಂತರಿಕವಾಗಿ ಶಿವಸೈನಿಕರನ್ನು ಘಾಸಿಗೊಳಿಸಿತ್ತು. ಹೀಗಾಗಿ ಶಿವಸೇನೆ ಈ ಮೈತ್ರಿಯನ್ನು ಆದಷ್ಟು ಬೇಗ ಕಡಿದುಕೊಳ್ಳಬೇಕು ಎನ್ನುವ ಒತ್ತಡ ಒಳಗೊಳಗೆ ಹೆಚ್ಚಿತ್ತು. ಆದರೆ, ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತ ಬಾಳ್‌ ಠಾಕ್ರೆ ಅವರಿಗೆ ಇದ್ಯಾವುದೂ ಕೇಳಿಸಲೇ ಇಲ್ಲ. ಜೀವನದಲ್ಲಿ ಮೊದಲ ಬಾರಿ ಸಿಕ್ಕಿದ ಅಧಿಕಾರದ ರುಚಿಯೋ, ಅಧಿಕಾರದಲ್ಲಿ ಕಳೆದುಹೋದ ಪರಿಯೋ ಅಂತೂ ಶಾಸಕರ ಒಳ ಕುದಿಯೂ ಅವರಿಗೆ ಅರ್ಥವಾಗಲಿಲ್ಲ. ಆದರೆ, ಬಾಳ್ ಠಾಕ್ರೆ ಕಾಲದಿಂದಲೂ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಜನದನಿಗೆ ಕಿವಿಗೊಟ್ಟಿದ್ದ ಶಿಂಧೆಗೆ ನೆಲದ ನಾಡಿಯ ಅರಿವಿತ್ತು. ಹಾಗಾಗಿಯೇ ಅವರು ಶಿವಸೇನೆಯ ಮೂಲವಾದ ಹಿಂದುತ್ವದ ಅಸ್ಮಿತೆಯನ್ನು ಆಧಾರವಾಗಿಟ್ಟು ಒಳಗೊಳಗೆ ಬಲೆ ನೇಯ್ದರು!

ಈ ಕೆಲಸ ಉದ್ಧವ್‌ ಠಾಕ್ರೆಯೇ ಮಾಡಬೇಕಿತ್ತು!
ನಿಜವೆಂದರೆ ರಾಜಕಾರಣದಲ್ಲಿ ಅಸ್ವಾಭಾವಿಕವಾದ ಮೈತ್ರಿಗಳು, ರಾಜಕೀಯ ಅನಿವಾರ್ಯತೆಗಾಗಿ ಹುಟ್ಟಿಕೊಂಡ ವಿರೋಧಿ ಸಿದ್ಧಾಂತಗಳ ಕೂಟ ಹೆಚ್ಚು ಕಾಲ ಬಾಳುವುದು ಕೆಲವು ಪಕ್ಷಗಳಿಗೆ ಅಪಾಯಕಾರಿಯೇ. ಅದರಲ್ಲೂ ಶಿವಸೇನೆಯಂಥ ಹಿಂದುತ್ವವೇ ಜೀವಾಳವಾಗಿರುವ ಪಕ್ಷಗಳು ದೀರ್ಘ ಕಾಲ ಪರಮ ವಿರೋಧಿ ಧೋರಣೆಯ ಕಾಂಗ್ರೆಸ್‌ ಮತ್ತು ಎನ್‌ಸಿಪಿಗಳ ಜತೆ ಮೈತ್ರಿ ಮಾಡಿಕೊಳ್ಳುವುದು ಸೇನೆಯ ಅಸ್ತಿತ್ವಕ್ಕೇ ಅಪಾಯಕಾರಿ. ಇದಕ್ಕೆ ಕಾರಣಗಳು ಹಲವು.

ಒಂದೊಮ್ಮೆ ಮಹಾ ವಿಕಾಸ ಅಘಾಡಿ ಸರಕಾರ ಐದು ವರ್ಷ ಪೂರ್ಣಗೊಳಿಸಿದರೆ ಮುಂದಿನ ಚುನಾವಣೆಯನ್ನು ಶಿವಸೇನೆ ಹೇಗೆ ಎದುರಿಸುತ್ತದೆ ಎನ್ನುವುದು ದೊಡ್ಡ ಪ್ರಶ್ನೆ. ಮೈತ್ರಿಯನ್ನು ಮುಂದುವರಿಸಿದರೆ ಈ ಮೂರೂ ಪಕ್ಷಗಳು ಹೇಗೆ ಸೀಟು ಹಂಚಿಕೆ ಮಾಡಿಕೊಳ್ಳುತ್ತವೆ? ಶಿವಸೇನೆ ಕಳೆದ ಬಾರಿ ಸ್ಪರ್ಧಿಸಿದ್ದ 121 ಕ್ಷೇತ್ರಗಳಲ್ಲಿ ಪ್ರತಿಯೊಂದರಲ್ಲೂ ಕಾಂಗ್ರೆಸ್‌, ಎನ್‌ಸಿಪಿ ಸಮಾನ ಶತ್ರು. ಹಾಗಿರುವಾಗ ಮುಂದಿನ ಚುನಾವಣೆಯಲ್ಲಿ ಅದು ಕಾಂಗ್ರೆಸ್‌ ಪರವೋ, ಎನ್‌ಸಿಪಿ ಪರವೋ ಹೇಗೆ ಮತ ಯಾಚನೆ ಮಾಡುತ್ತದೆ. ಅದಕ್ಕಿಂತಲೂ ಹೆಚ್ಚಾಗಿ ಕತ್ತಿ, ದೊಣ್ಣೆ ಹಿಡಿದು ಬಡಿದಾಡುವ ಶಿವಸೇನೆ ಕಾರ್ಯಕರ್ತರು ತಮ್ಮ ಕ್ಷೇತ್ರದಲ್ಲಿ ಶಿವಸೇನೆ ಸ್ಪರ್ಧಿಸದೆ ಇದ್ದರೆ ಕಾಂಗ್ರೆಸ್‌, ಇಲ್ಲವೇ ಎನ್‌ಸಿಪಿಗೆ ಹೇಗೆ ಮತ ಹಾಕುತ್ತಾರೆ? ಆಗ ಅವರು ಸಹಜವಾಗಿಯೇ ಹಿಂದುತ್ವದ ಪ್ರಬಲ ಆರಾಧಕ ಬಿಜೆಪಿಯತ್ತ ಸಾಗುವುದು ನಿಶ್ಚಿತ. ಹೀಗಾಗಿ ಶಿವಸೇನೆಗೆ ತನ್ನ ಕೇಡರ್‌ ಬೇಸನ್ನು ಉಳಿಸಿಕೊಳ್ಳಲು ಎನ್‌ಸಿಪಿ, ಕಾಂಗ್ರೆಸ್‌ ಜತೆಗಿನ ಮೈತ್ರಿ ಮುರಿದುಕೊಳ್ಳುವುದು ಅನಿವಾರ್ಯವೇ ಆಗಿರುತ್ತದೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅರಿವಿತ್ತು!

ಕರ್ನಾಟಕದಲ್ಲಿ 2018ರಲ್ಲಿ ಚುನಾವಣೆ ಜೋಶ್‌ನಲ್ಲಿ ಕಾಂಗ್ರೆಸ್‌ ಅವಸರಕ್ಕೆ ಬಿದ್ದು ಅಧಿಕಾರಕ್ಕಾಗಿ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಿತ್ತು.  ಆ ಕ್ಷಣಕ್ಕೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಅದರ ಪ್ಲ್ಯಾನ್‌ ರಾಷ್ಟ್ರ ಮಟ್ಟದಲ್ಲೂ ಪ್ರಶಂಸೆಗೆ ಒಳಗಾಗಿತ್ತು. ಆದರೆ, ಇದರಿಂದ ಪಕ್ಷದ ಮೇಲೆ ದೀರ್ಘಕಾಲೀನವಾಗಿ ಆಗಬಹುದಾದ ಪರಿಣಾಮಗಳ ಬಗ್ಗೆ ಸಿದ್ಧರಾಮಯ್ಯರಂಥ ನಾಯಕರಿಗೆ ಸ್ಪಷ್ಟವಾದ ಅರಿವು ಇತ್ತು. ಹೀಗಾಗಿ ಅಧಿಕಾರದಲ್ಲಿ ಜತೆಯಾಗಿದ್ದರೂ ಕಾರಣ ಸಿಕ್ಕಿದಾಗಲೆಲ್ಲ ತಾವು ಬೇರೆ ಬೇರೆ ಎನ್ನುವುದನ್ನು ನಿರೂಪಿಸುತ್ತಲೇ ಹೋದರು. ಕೊನೆಗೆ ಸರಕಾರದ ಪತನಕ್ಕೂ ನಾನಾ ಕಾರಣಗಳು ಜತೆಗೂಡಿದವು. ಅಂತಿಮವಾಗಿ ಸರಕಾರ ಉರುಳಿದ್ದು ನಿಜಾರ್ಥದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಎರಡಕ್ಕೂ ಲಾಭದಾಯಕ ಬೆಳವಣಿಗೆಯೇ.

ಎಚ್‌.ಡಿ. ಕುಮಾರಸ್ವಾಮಿ ಅವರು ಜೀನಾಮೆ ನೀಡಿ ನಿರ್ಗಮಿಸುತ್ತಿರುವ ಕ್ಷಣ

ಯಾಕೆಂದರೆ, ಪರಸ್ಪರ ಎದುರಾಳಿಗಳಾಗೇ ನಿಂತು ಹೋರಾಡಿ ಅಸ್ತಿತ್ವ ಉಳಿಸಿಕೊಳ್ಳಬೇಕಾದ ಪಕ್ಷಗಳು ದೀರ್ಘ ಕಾಲ ಅಧಿಕಾರಕ್ಕಾಗಿ ರಾಜಿ ಮಾಡಿಕೊಂಡರೆ ಕೇಡರ್‌ ಬೇಸ್‌ ಕರಗಿ ಅಸ್ತಿತ್ವಕ್ಕೇ ಹೊಡೆತ ಬೀಳುತ್ತದೆ ಎಂಬುದು ರಾಜಕೀಯ ಸತ್ಯ.

ಒಂದೊಮ್ಮೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ಗಳು ಕೊನೆಯವರೆಗೂ ಆಡಳಿತ ನಡೆಸಿದರೂ ಮುಂದಿನ ಚುನಾವಣೆಯನ್ನು ಜತೆಯಾಗಿ ಎದುರಿಸುವುದಂತೂ ಸಾಧ್ಯವೇ ಇರಲಿಲ್ಲ. ಯಾಕೆಂದರೆ, ಹಳೆ ಮೈಸೂರು ಭಾಗದಲ್ಲಿ ಪರಸ್ಪರ ಜಿದ್ದಾಜಿದ್ದಿಗೆ ಇಳಿಯವುದು ಅವೆರಡೇ ಪಕ್ಷಗಳು. ಅವರೇ ಮೈತ್ರಿ ಮಾಡಿಕೊಳ್ಳುವುದಂತೂ ಸಾಧ್ಯವೇ ಇಲ್ಲ.  ಹಾಗೆ ಮಾಡಿಕೊಂಡರೆ  ಇಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿಗೆ ಕೆಂಪು ಹಾಸಿಗೆ ಹಾಸಿದಂತೆಯೇ.  ಹಾಗಂತ, ಕೊನೆಯ ಕ್ಷಣದಲ್ಲಿ ಮೈತ್ರಿ ಮುರಿದುಕೊಳ್ಳುವ ನಾಟಕ ಮಾಡಿದರೂ ಅದು ಜನರಿಗೆ ಅಧಿಕಾರ ದಾಹ ಅಂತ ತಕ್ಷಣಕ್ಕೆ ಅನಿಸಿಬಿಡುತ್ತದೆ.

ಚುನಾವಣೆಗೆ ಇನ್ನೂ ಎರಡುವರೆ ವರ್ಷ ಇರುವಾಗಲೇ ಮೈತ್ರಿ ಸರಕಾರ ಪತನಗೊಂಡು ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಿದ್ದು ಎರಡುವರೆ ವರ್ಷ ಅಧಿಕಾರ ಅನುಭವಿಸಿದ್ದೂಆಯಿತು, ಉಳಿದ ಅವಧಿ ಪಕ್ಷ ಕಟ್ಟಲು ಸಿಕ್ಕಿದ್ದೂ ಆಯಿತು! ಇದು ನಿಜವಾದ ರಾಜಕಾರಣ.

ಮಹಾರಾಷ್ಟ್ರದಲ್ಲೂ ಹೀಗೇ ಆಗಬೇಕಿತ್ತು!

ನಿಜವೆಂದರೆ, ಉದ್ಧವ್‌ ಠಾಕ್ರೆ ಅವರಿಗೆ ಕರ್ನಾಟಕವೇ ಮಾದರಿ ಆಗಬೇಕಿತ್ತು. ಅಧಿಕಾರದ ಒಂದು ಹಂತದಲ್ಲಿ ಮಹಾ ವಿಕಾಸ ಅಘಾಡಿ ಸರಕಾರದಿಂದ ಹೊರಬಂದು ಸಹಜ ಮಿತ್ರನಾಗಿರುವ ಬಿಜೆಪಿ ಜತೆಗೆ ಸೇರಿಕೊಳ್ಳುವ ಅವಕಾಶವನ್ನು ಬಳಸಿಕೊಳ್ಳಬಹುದಿತ್ತು. ಅಥವಾ ಬಂಡಾಯದ ಸಣ್ಣ ಸೂಚನೆ ಸಿಕ್ಕಾಗ ತಾನೇ ಅದನ್ನು ಸಮಾಧಾನಪಡಿಸಿ, ಅಘಾಡಿ ಮೈತ್ರಿಕೂಟದಿಂದ ಹೊರಬರುವ ಭರವಸೆ ನೀಡಬಹುದಿತ್ತು. ಆದರೆ, ಉದ್ಧವ್‌ ಠಾಕ್ರೆ ಅವರು ಶಿವಸೈನಿಕರಿಗಿಂತಲೂ ಕಾಂಗ್ರೆಸ್‌ ಮತ್ತು ಎನ್‌ಸಿಪಿಯನ್ನೇ ನಂಬಿಕೊಂಡಂತೆ ವರ್ತಿಸಿದರು. ತಮಗೆ ಅಧಿಕಾರ ನೀಡಿದ ಪಕ್ಷಗಳಿಗೆ ಮೋಸ ಮಾಡಬಾರದು ಎಂಬ ಧ್ವನಿ ಅವರ ಮಾತುಗಳಲ್ಲಿ ಹೊಮ್ಮುತ್ತಿತ್ತು. ಹೀಗಾಗಿ ಶಿವಸೇನಾ ಶಾಸಕರಿಗೇ ಅವರ ಮೇಲೆ ಭರವಸೆ ಕುಸಿಯಿತು. ಅಂತಿಮವಾಗಿ ಈಗ ಉದ್ಧವ್‌ ಠಾಕ್ರೆ ಅವರೇ ಏಕಾಂಗಿಯಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಸಶಕ್ತ ನಾಯಕನೊಬ್ಬ ಅಸಹಾಯಕನಾಗಿ, ದೈನೇಸಿಯಂತೆ ಕೈ ಮುಗಿಯುವ ಸ್ಥಿತಿ ಸೃಷ್ಟಿಯಾಯಿತು.

ಉದ್ಧವ್‌ ಠಾಕ್ರೆ ಕೊನೆಯ ಹಂತದಲ್ಲಾದರೂ ತನ್ನ ಪಕ್ಷದೊಳಗೆ ಹುಟ್ಟಿಕೊಂಡಿರುವ ಬಂಡಾಯದ ಸಾಚಾತನವನ್ನು ಅರ್ಥ ಮಾಡಿಕೊಂಡು ವ್ಯವಹರಿಸಿದ್ದರೆ ಇವತ್ತು ಅಧಿಕಾರವಿಲ್ಲದಿದ್ದರೂ ಶಿವಸೇನೆಯ ಪ್ರಧಾನ ಸೇನಾನಿಯಾಗಿ, ಸಾರಥಿಯಾಗಿ ನಿಂತು ರಥ ಓಡಿಸಬಹುದಿತ್ತು. ಎಲ್ಲ ಶಿವಸೈನಿಕರು ಅವರ ಬೆನ್ನ ಹಿಂದೆ ನಿಲ್ಲುತ್ತಿದ್ದರು. ಆದರೆ, ಈಗ ಅರಮನೆ ಇದೆ, ರಥವಿದೆ, ಸೈನಿಕರೇ ಇಲ್ಲದ ಸ್ಥಿತಿ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Jammu Kashmir: ಕಾಶ್ಮೀರದ 2 ಕಡೆ ಉಗ್ರರ ದಾಳಿ; ಮಾಜಿ ಸರ್ಪಂಚ್‌ ಬಲಿ, ರಾಜಸ್ಥಾನದ ದಂಪತಿಗೆ ಗಾಯ

Jammu Kashmir: ಉಗ್ರರ ದಾಳಿಯ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಶೋಪಿಯಾನ್‌ ಜಿಲ್ಲೆಯ ಹುರ್ಪುರ ಗ್ರಾಮದಲ್ಲಿ ಉಗ್ರರ ದಾಳಿಯಲ್ಲಿ ಮಾಜಿ ಸರ್ಪಂಚ್‌ ಐಜಾಜ್‌ ಅಹ್ಮದ್‌ ಶೇಖ್‌ ಎಂಬುವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Jammu Kashmir
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಲೋಕಸಭೆ ಚುನಾವಣೆಯ (Lok Sabha Election) 5ನೇ ಹಂತದ ಮತದಾನಕ್ಕೆ ಎರಡು ದಿನಗಳು ಬಾಕಿ ಇರುವಾಗಲೇ ಉಗ್ರರ ದಾಳಿ ನಡೆದಿದೆ. ಒಂದೇ ದಿನ ಎರಡು ಕಡೆ ಉಗ್ರರು ನಾಗರಿಕರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಶೋಪಿಯಾನ್‌ (Shopian) ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮಾಜಿ ಸರ್ಪಂಚ್‌ ಒಬ್ಬರು ಹತರಾದರೆ, ಅನಂತನಾಗ್‌ ಜಿಲ್ಲೆಯಲ್ಲಿ ರಾಜಸ್ಥಾನದ ದಂಪತಿಯು ಗಾಯಗೊಂಡಿದ್ದಾರೆ.

ಉಗ್ರರ ದಾಳಿಯ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಶೋಪಿಯಾನ್‌ ಜಿಲ್ಲೆಯ ಹುರ್ಪುರ ಗ್ರಾಮದಲ್ಲಿ ಉಗ್ರರ ದಾಳಿಯಲ್ಲಿ ಮಾಜಿ ಸರ್ಪಂಚ್‌ ಐಜಾಜ್‌ ಅಹ್ಮದ್‌ ಶೇಖ್‌ ಎಂಬುವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಅನಂತನಾಗ್‌ನಲ್ಲಿಯೂ ಉಗ್ರರ ದಾಳಿ ನಡೆದಿದ್ದು, ರಾಜಸ್ಥಾನದ ಪತಿ-ಪತ್ನಿ ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಮೂಲ ನಿವಾಸಿಗಳು ಅಲ್ಲ ಎಂಬುದನ್ನು ಗುರುತಿಸಿ ಉಗ್ರರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಟೂರಿಸ್ಟ್‌ ಕ್ಯಾಂಪ್‌ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಪರ್ಹಾ ಹಾಗೂ ಅವರ ಪತಿ ತಬ್ರೇಜ್‌ ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ಕಡೆ ದಾಳಿ ಮಾಡಿದವರು ಯಾವ ಸಂಘಟನೆಗೆ ಸೇರಿದವರು ಎಂಬ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಉಗ್ರರು ದಾಳಿ ನಡೆಸಿದ ಕಾರಣ ಭದ್ರತಾ ಸಿಬ್ಬಂದಿಯು ಎರಡೂ ಜಿಲ್ಲೆಗಳಲ್ಲಿ ಉಗ್ರರು ನಡೆಸಿದ ದಾಳಿಯ ಪ್ರದೇಶಗಳ ಸುತ್ತ ಸುತ್ತುವರಿದಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗಳು ಜಾಸ್ತಿಯಾಗಿವೆ. ಕಳೆದ ಏಪ್ರಿಲ್‌ನಲ್ಲಿ ಶೋಪಿಯಾನ್‌ ಜಿಲ್ಲೆಯಲ್ಲಿ ಸ್ಥಳೀಯನಲ್ಲದ ಟೂರಿಸ್ಟ್‌ ಗೈಡ್‌ ಒಬ್ಬನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ಶ್ರೀನಗರದಲ್ಲಿ ಇಬ್ಬರು ವಲಸೆ ಕಾರ್ಮಿಕರನ್ನು ಉಗ್ರರು ಹತ್ಯೆ ಮಾಡಿದ್ದರು.

ಇದನ್ನೂ ಓದಿ: Terrorists Killed: ಸೇನೆಯ ಭರ್ಜರಿ ಬೇಟೆ; ಎಲೆಕ್ಷನ್‌ ಹಾಳುಗೆಡವಲು ಗಡಿ ನುಸುಳುತ್ತಿದ್ದ ನಾಲ್ವರು ಉಗ್ರರ ಹತ್ಯೆ

Continue Reading

ದೇಶ

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

Narendra Modi: ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಗಿದಿದೆ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಸೇರಿ ಎಲ್ಲ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ವಿಶ್ವಾಸದ ಮಾತುಗಳನ್ನಾಡಿದ್ದಾರೆ.

“ನಮ್ಮ ಗುರಿ ತುಂಬ ದೊಡ್ಡದಿದೆ. ಇಷ್ಟೊಂದು ದೊಡ್ಡ ದೇಶದಲ್ಲಿ ಜನರ ಯಾರಿಗೆ ಮತ ಹಾಕಬೇಕು ಎಂಬುದನ್ನು ಸುಲಭವಾಗಿ ತೀರ್ಮಾನಿಸುತ್ತಾರೆ. ಜನರಿಗೆ ಇರುವ ಅನುಭವವು ಅವರು ಸುಲಭವಾಗಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ದೇಶದ ಜನರಿಗೆ ಎಲ್ಲವೂ ಗೊತ್ತಿದೆ. ಯಾವುದೇ ಪಕ್ಷ, ವ್ಯಕ್ತಿ ಇರಲಿ, ಜನರು ಯಾರನ್ನು ಗೆಲ್ಲಿಸಬೇಕು ಎಂಬುದನ್ನು ನಿರ್ಧರಿಸುತ್ತಾರೆ. ಹಾಗಾಗಿಯೇ, ನಾವು ಮುಂದಿನ ದಿನಗಳಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಂಡಿದ್ದೇವೆ. ದೇಶದ ಆಡಳಿತ, ಅಭಿವೃದ್ಧಿಯ ನೀಲನಕ್ಷೆ ನಮ್ಮ ಬಳಿ ಇದೆ” ಎಂದು ಮೋದಿ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

“ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ. ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಏನೆಲ್ಲ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಕಾರ್ಯಸೂಚಿಯನ್ನು ಹಾಕಿಕೊಂಡು ಬನ್ನಿ ಎಂಬುದಾಗಿ ನಮ್ಮ ಸಚಿವರಿಗೆ ಸೂಚಿಸಿದ್ದೇನೆ” ಎಂದು ಮೋದಿ ತಿಳಿಸಿದರು.

“ನಮ್ಮ ಮುಂದಿನ ಆಡಳಿತವು ಒಂದು ಪ್ರದೇಶ, ಕೆಲವು ಭಾಗಗಳಿಗೆ ಸೀಮಿತವಾಗಿರುವುದಿಲ್ಲ. ದೊಡ್ಡ ಗುರಿಯನ್ನು ಕ್ಷಿಪ್ರವಾಗಿ ಸಾಧಿಸುವ ಛಲವನ್ನು ನಾವು ಹೊಂದಿದ್ದೇವೆ. ಗುರಿ ದೊಡ್ಡದಾಗಿ ಇಟ್ಟುಕೊಂಡು, ಅದರ ವೇಗಕ್ಕೆ ತಕ್ಕಂತೆ ಮುನ್ನಡೆಯುವುದು ನಮ್ಮ ಉದ್ದೇಶವಾಗಿದೆ. ಗುರಿ, ಉದ್ದೇಶ ಹಾಗೂ ವೇಗದ ಜತೆ ಸಾಗುವುದು ಕೂಡ ಒಂದು ಕೌಶಲವಾಗಿದೆ. ಆ ದಿಸೆಯಲ್ಲಿ ನಾವು ಮಹತ್ವದ ಸಂಗತಿಗಳನ್ನು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ” ಎಂದು ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Continue Reading

ಪ್ರಮುಖ ಸುದ್ದಿ

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

ಸ್ವಾತಂತ್ರ್ಯ ಹೋರಾಟದ ವೇಳೆ ದೇಶಕ್ಕಾಗಿ ಎಲ್ಲರೂ ತ್ಯಾಗ ಮಾಡಿದರು. ಜವಾಹರ ಲಾಲ್‌ ನೆಹರು ಸೇರಿ ಹಲವು ನಾಯಕರು 13-14 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಗುಂಡು ತಗುಲಿ, ಅವರು ಇನ್ನೇನು ಪ್ರಾಣ ಬಿಡಬೇಕು ಎನ್ನುವ ಮೊದಲು, ಅವರು ಹೇ ರಾಮ್‌ ಎಂದು ಹೇಳಿದ್ದರು ಎಂಬುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಆ ಮೂಲಕ ಕಾಂಗ್ರೆಸ್‌ ಪಕ್ಷವು ಹಿಂದು ವಿರೋಧಿ ಎನ್ನುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

Priyanka Vadra
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಧರ್ಮ, ಜಾತಿ, ರಾಮಮಂದಿರ, ಮೀಸಲಾತಿ ಸೇರಿ ಹತ್ತಾರು ವಿಷಯಗಳು ಮುನ್ನೆಲೆಗೆ ಬಂದಿವೆ. ಅದರಲ್ಲೂ, ಕಾಂಗ್ರೆಸ್‌ ಹಿಂದು ವಿರೋಧಿ ಎಂಬುದಾಗಿ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ (Priyanka Vadra) ತಿರುಗೇಟು ನೀಡಿದ್ದಾರೆ. “ಮಹಾತ್ಮ ಗಾಂಧೀಜಿ (Mahatma Gandhi) ಅವರು ಕೊನೆಯುಸಿರೆಳೆಯುವ ಮೊದಲೂ ಹೇ ರಾಮ್‌ ಎಂದಿದ್ದರು. ಕಾಂಗ್ರೆಸ್‌ ಹೇಗೆ ಹಿಂದು ವಿರೋಧಿಯಾಗುತ್ತದೆ? ಹಾಗೆಯೇ, ಹಿಂದು ಧರ್ಮದ ಆಶಯಗಳಂತೆ ಸ್ವಾತಂತ್ರ್ಯ ಹೋರಾಟ ಮಾಡಲಾಗಿದೆ” ಎಂದಿದ್ದಾರೆ.

ಇಂಡಿಯಾ ಟುಡೇಗೆ ಸಂದರ್ಶನ ನೀಡಿದ ವೇಳೆ ಅವರು ಈ ರೀತಿಯ ಪ್ರಸ್ತಾಪ ಮಾಡಿದ್ದಾರೆ. “ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್‌ ಹಿಂದು ವಿರೋಧಿ ಎಂಬಂತೆ ಬ್ರ್ಯಾಂಡ್‌ ಮಾಡಲಾಗುತ್ತಿದೆ. ಅಷ್ಟಕ್ಕೂ ನಮ್ಮ ಪಕ್ಷದ ದೊಡ್ಡ ನಾಯಕ ಯಾರು? ಮಹಾತ್ಮ ಗಾಂಧೀಜಿ ಅವರು ನಮ್ಮ ಪಕ್ಷದ ಧುರೀಣರು. ಸತ್ಯ ಹಾಗೂ ಅಹಿಂಸೆಯ ಆಧಾರದ ಮೇಲೆ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯಿತು. ಸತ್ಯಮೇವ ಜಯತೆ ಎಂಬ ತತ್ವದಂತೆ ಹೋರಾಟ ಮಾಡಲಾಯಿತು. ಹಿಂದು ಧರ್ಮದ ಬೋಧನೆ, ಆಶಯಗಳಂತೆ ಹೋರಾಟ ಮಾಡಲಾಯಿತು” ಎಂದು ಹೇಳಿದರು.

“ಸ್ವಾತಂತ್ರ್ಯ ಹೋರಾಟದ ವೇಳೆ ದೇಶಕ್ಕಾಗಿ ಎಲ್ಲರೂ ತ್ಯಾಗ ಮಾಡಿದರು. ಜವಾಹರ ಲಾಲ್‌ ನೆಹರು ಸೇರಿ ಹಲವು ನಾಯಕರು 13-14 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಗುಂಡು ತಗುಲಿ, ಅವರು ಇನ್ನೇನು ಪ್ರಾಣ ಬಿಡಬೇಕು ಎನ್ನುವ ಮೊದಲು, ಅವರು ಹೇ ರಾಮ್‌ ಎಂದು ಹೇಳಿದ್ದರು. ಇಷ್ಟೆಲ್ಲ ಇರುವಾಗ ಕಾಂಗ್ರೆಸ್‌ ಹೇಗೆ ಹಿಂದು ವಿರೋಧಿಯಾಗುತ್ತದೆ? ಖಂಡಿತವಾಗಿಯೂ ನಾವು ಹಿಂದು ವಿರೋಧಿಗಳು ಅಲ್ಲ. ರಾಹುಲ್‌ ಗಾಂಧಿ ಅವರು ಬೇರೆಯವರಿಗಿಂತ ಹಿಂದುತ್ವವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ” ಎಂದು ಸಂದರ್ಶನದ ವೇಳೆ ಪ್ರಿಯಾಂಕಾ ವಾದ್ರಾ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ತೆರಳದಿರುವ ಕುರಿತು ಬಿಜೆಪಿ ಆರೋಪಗಳ ಬಗೆಗಿನ ಪ್ರಶ್ನೆಗೂ ಪ್ರಿಯಾಂಕಾ ವಾದ್ರಾ ಉತ್ತರಿಸಿದರು. “ಬಿಜೆಪಿಯು ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನ ಪಡೆಯಿತು. ಇದಾದ ಬಳಿಕ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳಲಾಯಿತು. ಹಾಗಾಗಿ, ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಹೋಗದಿರುವುದು ತಪ್ಪು ನಿರ್ಧಾರ ಎಂಬುದಾಗಿ ಹೇಳಲು ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. “ದೇಶದಲ್ಲಿ ಧರ್ಮ ಸೇರಿ ಹಲವು ಸೂಕ್ಷ್ಮ ವಿಚಾರಗಳನ್ನು ಬಿಜೆಪಿ, ನರೇಂದ್ರ ಮೋದಿ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ, ಧರ್ಮರಹಿತವಾಗಿ ಎಲ್ಲರಿಗೂ ಯೋಜನೆಗಳನ್ನು ಕಲ್ಪಿಸುವುದು ಕಾಂಗ್ರೆಸ್‌ ಗ್ಯಾರಂಟಿಯಾಗಿದೆ” ಎಂದರು.

ಇದನ್ನೂ ಓದಿ: Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Continue Reading

ದೇಶ

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Kangana Ranaut: ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಇದರ ಬೆನ್ನಲ್ಲೇ ಅವರು, ಚುನಾವಣೆಯಲ್ಲಿ ಗೆದ್ದರೆ ನಟನೆ ಬಿಡುವುದಾಗಿ ಘೋಷಿಸಿದ್ದಾರೆ.

VISTARANEWS.COM


on

Kangana Ranaut
Koo

ನವದೆಹಲಿ: ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಅವರು ರಾಜಕೀಯಕ್ಕೆ ಧುಮುಕಿದ್ದು, ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಜೂನ್‌ 1ರಂದು ಮಂಡಿ ಕ್ಷೇತ್ರದಲ್ಲಿ ಮತದಾನ (Lok Sabha Election 2024) ನಡೆಯುವ ಕಾರಣ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಕಂಗನಾ ರಣಾವತ್‌ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ನಟನೆಯನ್ನು ಬಿಟ್ಟುಬಿಡುತ್ತೇನೆ” ಎಂಬುದಾಗಿ ಹೇಳಿದ್ದಾರೆ.

ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಕಂಗನಾ ರಣಾವತ್‌ ಅವರು ಈ ಘೋಷಣೆ ಮಾಡಿದ್ದಾರೆ. “ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಪಂಗಾ, ಮಣಿಕರ್ಣಿಕಾ: ದಿ ಕ್ವೀನ್‌ ಆಫ್‌ ಜಾನ್ಸಿ, ಜಡ್ಜ್‌ಮೆಂಟಲ್‌ ಹೈ ಕ್ಯಾ, ತನು ವೆಡ್ಸ್‌ ಮನು ರಿಟರ್ನ್ಸ್‌ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇವರು ಅಭಿನಯದ ತಲೈವಿ ಸಿನಿಮಾಗೆ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿತ್ತು.

91 ಕೋಟಿ ರೂ. ಆಸ್ತಿಗೆ ಒಡತಿ

ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಕಂಗನಾ ರಣಾವತ್‌ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇವರು ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಇದನ್ನೂ ಓದಿ: Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

Continue Reading
Advertisement
Karnataka Police
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

Jammu Kashmir
ದೇಶ1 hour ago

Jammu Kashmir: ಕಾಶ್ಮೀರದ 2 ಕಡೆ ಉಗ್ರರ ದಾಳಿ; ಮಾಜಿ ಸರ್ಪಂಚ್‌ ಬಲಿ, ರಾಜಸ್ಥಾನದ ದಂಪತಿಗೆ ಗಾಯ

RCB vs CSK
ಕ್ರೀಡೆ2 hours ago

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

Anjali Murder Case
ಕರ್ನಾಟಕ2 hours ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಹು-ಧಾ ಐಪಿಎಸ್ ಅಧಿಕಾರಿಯ ತಲೆದಂಡ

Narendra Modi
ದೇಶ2 hours ago

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

RCB vs CSK
ಕರ್ನಾಟಕ3 hours ago

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

Bank of Bhagyalakshmi movie poster released
ಸಿನಿಮಾ3 hours ago

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Priyanka Vadra
ಪ್ರಮುಖ ಸುದ್ದಿ3 hours ago

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Kangana Ranaut
ದೇಶ4 hours ago

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

RCB vs CSK
ಕ್ರೀಡೆ4 hours ago

RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌