ಯಾದಗಿರಿಯಲ್ಲಿ ಪತ್ನಿಯ ಸಂಬಂಧಿಕರಿಗೆ ಬೆಂಕಿ ಹಚ್ಚಿದ ಪ್ರಕರಣ, ಮತ್ತಿಬ್ಬರ ಮರಣ - Vistara News

ಯಾದಗಿರಿ

ಯಾದಗಿರಿಯಲ್ಲಿ ಪತ್ನಿಯ ಸಂಬಂಧಿಕರಿಗೆ ಬೆಂಕಿ ಹಚ್ಚಿದ ಪ್ರಕರಣ, ಮತ್ತಿಬ್ಬರ ಮರಣ

ತನ್ನ ಪತ್ನಿಯ ಸಂಬಂಧಿಕರನ್ನು ಮನೆಗೆ ಕರೆಸಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬುಧವಾರ ಇಬ್ಬರು ಮೃತಪಟ್ಟಿದ್ದರು. ಈಗ ಮತ್ತಿಬ್ಬರು ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

sharanappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ತನ್ನ ಹಾಗೂ ಪತ್ನಿಯ ನಡುವಿನ ಜಗಳವನ್ನು ಬಗೆಹರಿಸಲು ಸಂಬಂಧಿಕರನ್ನು ಮನೆಗೆ ಕರೆಸಿ ನಾಲ್ವರಿಗೆ ಬೆಂಕಿ ಹಚ್ಚಿರುವ ದುರಂತ ಘಟನೆಯಲ್ಲಿ ಈಗ ಮತ್ತಿಬ್ಬರು ಮೃತಪಟ್ಟಿದ್ದಾರೆ. ಇದರಿಂದ ಘಟನೆಯಲ್ಲಿ ಗಾಯಗೊಂಡಿದ್ದ ನಾಲ್ವರೂ ಮೃತಪಟ್ಟಂತಾಗಿದೆ.

ಪತಿ ಹಾಗೂ ಪತ್ನಿ ನಡುವಿನ ಜಗಳವನ್ನು ಸರಿಪಡಿಸಿ ಸಂಸಾರವನ್ನು ಒಂದುಮಾಡಬೇಕೆಂದು ಸಂಬಂಧಿಕರು ಬಂದಿದ್ದರು. ಮನೆಗೆ ಬಂದ ಸಂಬಂಧಿಕರ ಜತೆ ಕೆಲಹೊತ್ತು ಮಾತನಾಡಿದ ಶರಣಪ್ಪ, ಇದ್ದಕ್ಕಿದ್ದಂತೆ ನಾಲ್ವರನ್ನೂ ಮನೆಯಲ್ಲಿ ಕೂಡಿ ಹಾಕಿದ. 5 ಲೀಟರ್‌ ಪೆಟ್ರೋಲ್ ಸುರಿದು ನಾಲ್ವರಿಗೆ ಬೆಂಕಿ ಹಚ್ಚಿದ್ದ.

ಈ ದುರಂತದಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದರು. ಉಳಿದ ಮೂವರನ್ನು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಕೂಡಲೇ ಆಸ್ಪತ್ರಗೆ ದಾಖಲಿಸಿದ್ದರು. ಈ ವೇಳೆಗಾಗಲೆ ನಾಗೇಶ್‌ ಚೆನ್ನಪ್ಪ(35) ಎಂಬುವರು ಮೃತಪಟ್ಟಿದ್ದರು. ನಂತರ ಬುಧವಾರ ರಾತ್ರಿ ಸಿದ್ದರಾಮಪ್ಪ ಹಾಗೂ ಗುರುವಾರ(ಜೂನ್‌ 30) ಬೆಳಗ್ಗೆ ಮುತ್ತಪ್ಪ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ಈ ದುರಂತ ಘಟನೆ ನಡೆದಿದ್ದು, ಆರೋಪಿ ಶರಣಪ್ಪನನ್ನ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಜಗಳ ಬಿಡಿಸಿ ಎಂದು ಕರೆದು ನಾಲ್ವರಿಗೆ ಬೆಂಕಿ ಇಟ್ಟ: ಇಬ್ಬರ ಸಾವು, ಮತ್ತಿಬ್ಬರು ಗಂಭೀರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

Karnataka Rain: ಯಾದಗಿರಿ ಹಾಗೂ ವಿಜಯನಗರದಲ್ಲಿ ಸಿಡಿಲ ಹೊಡೆತಕ್ಕೆ ಇಬ್ಬರು ಕುರಿಗಾಹಿ ಮೃತಪಟ್ಟರೆ, ಜತೆಗಿದ್ದ ಹತ್ತಾರು ಕುರಿಗಳು ದಾರುಣವಾಗಿ ಪ್ರಾಣ ಕಳೆದುಕೊಂಡಿವೆ. ತಡರಾತ್ರಿ ಸುರಿದ ಭಾರಿ ಮಳೆಯು (Heavy Rain) ಅವಾಂತರವನ್ನೇ ಸೃಷ್ಟಿಸಿದೆ. ಮಳೆಯಿಲ್ಲದೆ ಕಂಗಲಾಗಿದ್ದ ಜನತೆಗೆ ಮಳೆಯಿಂದಲೇ ಭೀತಿ ಪಡುವಂತಾಗಿದೆ.

VISTARANEWS.COM


on

By

Karnataka Rain
Koo

ಯಾದಗಿರಿ: ಗುಡುಗು ಸಹಿತ ಬಿರುಗಾಳಿ ಮಳೆಗೆ (Heavy Rain) ಸಾವು-ನೋವು ಸಂಭವಿಸಿದೆ. ಯಾದಗಿರಿಯಲ್ಲಿ ಸುರಿದ ಭಾರಿ ಮಳೆಗೆ (Karnataka Rain) ಜನರು ಬೆಚ್ಚಿ ಬಿದ್ದಿದ್ದಾರೆ. ಯಾದಗಿರಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಿಡಿಲಿಗೆ ಕುರಿಗಾಹಿ ಸೇರಿ 20ಕ್ಕೂ ಹೆಚ್ಚು ಕುರಿಗಳು ಪ್ರಾಣ ಕಳೆದುಕೊಂಡಿವೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಹೊರಭಾಗದಲ್ಲಿ ಸಿಡಿಲು ಬಡಿದು ಕುರಿಗಾಹಿ ಮೃತಪಟ್ಟಿದ್ದಾರೆ. ಭಾನುವಾರ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿತ್ತು. ಈ ವೇಳೆ ಸಿಡಿಲು ಬಡಿದು ಕುರಿಗಾಹಿ ಬುಯೆಪ್ಪ (22) ಎಂಬುವವರು ಮೃತಪಟ್ಟಿದ್ದಾರೆ. ಕುರಿಗಾಹಿ ಜತೆಗೆ ಸ್ಥಳದಲ್ಲೇ 7 ಕುರಿಗಳು ಮೃತಪಟ್ಟಿವೆ. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಐಕೂರು ಗ್ರಾಮದಲ್ಲೂ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ಸಿಡಿಲು ಬಡಿದು ಐಕೂರು ಗ್ರಾಮದಲ್ಲಿ 10 ಕುರಿಗಳು ಸಾವನ್ನಪ್ಪಿವೆ. ಐಕೂರು ಗ್ರಾಮದ ರಾಯಪ್ಪ ಎಂಬ ಕುರಿಗಾಹಿಗೆ ಸೇರಿದ ಕುರಿಗಳನ್ನು ಜಮೀನಿನಲ್ಲಿರುವ ಕುರಿ ಹಟ್ಟಿಯಲ್ಲಿ ಬಿಡಲಾಗಿತ್ತು. ನಿನ್ನೆ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ವೇಳೆ ಸಿಡಿಲು ಬಡಿದಿದೆ. ಪರಿಣಾಮ ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Murder Case: ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ವಿಜಯನಗರದಲ್ಲೂ ಸಿಡಿಲಿಗೆ ರೈತ ಸಾವು

ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಚೌಡಪ್ಪ( 33) ಮೃತ ದುರ್ದೈವಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅಡವಿ ಮಲ್ಲಾಪುರದಲ್ಲಿ ಘಟನೆ ನಡೆದಿದೆ. ಮೇವಿನ ಬಣವೆಗೆ ಹೋದಿಗೆ ಹಾಕುತ್ತಿದ್ದಾಗ ಸಿಡಿಲು ಬಡಿದು ಚೌಡಪ್ಪ ಮೃತಪಟ್ಟಿದ್ದಾರೆ. ಹರಪನಹಳ್ಳಿ ತಾಲೂಕಾಡಳಿತ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಪಿಡಬ್ಲೂಡಿ ಕಚೇರಿಗೆ ನುಗ್ಗಿದ ನೀರು

ಯಾದಗಿರಿ ಜಿಲ್ಲೆಯಲ್ಲಿ ನಸುಕಿನ ಜಾವ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಪಿಡಬ್ಲೂಡಿ ಕಚೇರಿ ಆವರಣ ಹಾಗೂ ಮನೆಗೆ ಮಳೆ ನೀರು ನುಗ್ಗಿದೆ. ಯಾದಗಿರಿ ನಗರದ ಸುಭಾಷ್ ವೃತ್ತದ ಸಮೀಪದಲ್ಲಿರುವ ಪಿಡಬ್ಲೂಡಿ ಕಚೇರಿ ಹಾಗೂ ಮನೆಯೊಳಗೆ ನೀರು ನುಗ್ಗಿದ ಕಾರಣಕ್ಕೆ ಪರದಾಡಬೇಕಾಯಿತು. ಸೋಮವಾರ ಬೆಳಗಿನಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಬಿಸಿಲಿಗೆ ತತ್ತರಿಸಿದ ಜನರಿಗೆ ವರುಣ ತಂಪೆರೆದಿದ್ದಾನೆ.

ರಾಯಚೂರಿನಲ್ಲಿ ರಾತ್ರಿ ಇಡೀ ಮಳೆ ಅಬ್ಬರ

ರಾಯಚೂರಿನಲ್ಲಿ ರಾತ್ರಿ ಇಡೀ ಗುಡುಗು ಸಹಿತ ಭಾರೀ ಮಳೆಯಾಗಿದೆ. ನಗರದಲ್ಲಿ ಈ ಬೇಸಿಗೆಯಲ್ಲೇ ಮೊದಲ ಬಾರಿಗೆ ವರುಣ ದರ್ಶನ ಕೊಟ್ಟಿದ್ದಾನೆ. ಬಿಸಿಲಿನ ಸೆಕೆಯಿಂದ ಕಂಗೆಟ್ಟ ಜನರಿಗೆ ಸುಮಾರು 5 ಗಂಟೆಗಳ ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ಇಡೀ ರಾಯಚೂರು ನಗರದಾದ್ಯಂತ ವಿದ್ಯುತ್ ವ್ಯತ್ಯಯವಾಗಿತ್ತು.

ಚಿಕ್ಕಮಗಳೂರಲ್ಲಿ ಮಳೆಯಲ್ಲಿ ರಸ್ತೆ ಕಾಣದೆ ಅಪಘಾತ

ಮಳೆಯಲ್ಲಿ ರಸ್ತೆ ಕಾಣದೆ ಟಿಟಿ ವಾಹನವೊಂದು ವಿದ್ಯುತ್ ಕಂಬಕ್ಕೆ ಗುದ್ದಿದೆ. ಟಿಟಿ ವಾಹನ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿತ್ತು. ಭಾರಿ ಮಳೆ ಹಿನ್ನೆಲೆಯಲ್ಲಿ ವಿದ್ಯುತ್‌ ಸಂಪರ್ಕ ಸ್ಥಗಿತಗೊಂಡಿತ್ತು. ಇದರಿಂದಾಗಿ ಅದೃಷ್ಟವಶಾತ್ ವಾಹನದಲ್ಲಿದ್ದ 9ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿದ್ದರು. ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕುಂಚೆ ಬೈಲು ಗ್ರಾಮದ ಬಳಿ ಘಟನೆ ನಡೆದಿದೆ. ಪ್ರಯಾಣಿಕರು ಟಿಟಿ ವಾಹನದಲ್ಲಿ ಹಾಸನದಿಂದ ಶೃಂಗೇರಿ ಕಡೆಗೆ ತೆರಳುತ್ತಿದ್ದರು.

ವಿಜಯನಗರದಲ್ಲಿ ಮಳೆಗೆ ಕ್ಷಣಾರ್ಧದಲ್ಲೇ ಕೊಚ್ಚಿ ಹೋಯ್ತು ಫಸಲು

ಬಿರುಗಾಳಿ ಸಹಿತ ಭಾರಿ ಮಳೆಗೆ ನೂರಾರು ಎಕರೆ ಬಾಳೆ ಬೆಳೆ ಧರೆಗೆ ಉರುಳಿವೆ. ವಿಜಯನಗರದ ಹೊಸೂರು, ಇಪ್ಪಿತೇರಿ, ನರಸಾಪುರ, ಮಾಗಾಣಿಗಳು, ಕಮಲಾಪುರ ಗ್ರಾಮ ಸೇರಿ ಹತ್ತಾರು ಗ್ರಾಮದ ರೈತ ಬದುಕು ಅಯೋಮಯವಾಗಿದೆ. ಮಕ್ಕಳಂತೆ ಜೋಪಾನ ಮಾಡಿದ್ದ ಬಾಳೆ ಬೆಳೆ ಮೇಲೆ ಪ್ರಕೃತಿಯ ಮುನಿಸಿಗೆ ಸಂಪೂರ್ಣ ನಾಶವಾಗಿದೆ.

ಕಳೆದ ಒಂದು ವಾರದಲ್ಲಿ ಎರಡು ಬಾರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಳೆ ಬೆಳೆ ನೆಲಕಚ್ಚಿದೆ. ಎಕರೆ ಹೊಲದಲ್ಲಿ ಬಾಳೆ ಬೆಳೆಯೋದಕ್ಕೆ ರೈತರು ಲಕ್ಷದವರೆಗೆ ಖರ್ಚು ಮಾಡಿದ್ದರು. ಇನ್ನೇನು ಒಂದು ತಿಂಗಳಲ್ಲಿ ಬಾಳೆ ಮಾರಾಟಕ್ಕೆ ರೆಡಿ ಮಾಡಿಕೊಂಡಿದ್ದ ರೈತರಿಗೆ ಮಳೆಯು ಆಘಾತವನ್ನುಂಟು ಮಾಡಿದೆ. ಮಳೆಯು ನಮ್ಮ ಬದುಕನ್ನು ಕಸಿದುಕೊಂಡಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಅಂತ ಬಾಳೆ ಬೆಳೆಗಾರರು ಅಳಲು ತೊಡಿಕೊಂಡಿದ್ದಾರೆ.

ಈ ಬಾರಿ ಮಳೆಯಿಲ್ಲದೇ ತುಂಗಭದ್ರಾ ಜಲಾನಯದ ಪ್ರದೇಶದ ರೈತರು ಕಂಗಾಲಾಗಿದ್ದಾರೆ. ವಿಜಯನಗರ ಕಾಲದ ಕಾಲುವೆಗಳನ್ನು ನಂಬಿ ತಿಂಗಳಿಗೊಮ್ಮೆ ಬಂದ ನೀರಲ್ಲೇ ಬದುಕು, ಬವಣೆ ನಡೆಯುತ್ತಿದ್ದೇವೆ. 2 ಟಿಎಂಸಿ ನೀರಲ್ಲಿ ಆಗೊಮ್ಮೆ, ಈಗೊಮ್ಮೆ ಬಂದ ನೀರಲ್ಲೇ ಬಾಳೆ ಬೆಳೆದಿದ್ದರು. ಇನ್ನೂ 15 ದಿನ ಮುಗಿದಿದ್ದರೆ ಬಾಳೆ ಗೊಣೆಗಳು ಕೈಗೆ ಬರುತ್ತಿದ್ದವು. ಕೈಗೆ ಬಂದ ಬಾಳೆ ಈಗ ನೆಲಕ್ಕೆ ಬಿದ್ದಿದೆ. ಮಳೆರಾಯ ಬಡವರ ಬದುಕನ್ನು ಮೂರಾಬಟ್ಟೆ ಮಾಡಿದ್ದಾನೆ ಎಂದು ಕಿಡಿಕಾರಿದರು.

ಕೊಡಗು, ಕೊಪ್ಪಳದಲ್ಲೂ ಮಳೆಯ ಸಿಂಚನ

ಕಳೆದ ಮೂರು ತಿಂಗಳಿಂದ‌ ಬಿಸಿಲಿನ ತಾಪಕ್ಕೆ ಕೊಪ್ಪಳದ ಜನತೆ ಹೈರಾಣಾಗಿದ್ದರು. ಭಾನುವಾರ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ವಾತಾವರಣ ತಂಪಾಗಿದೆ. ಕಳೆದ ಎರಡು ದಿನಗಳಿಂದ‌ ಸುರಿಯುತ್ತಿರುವ ಮಳೆಗೆ ಜನರು ಸಂತಸಗೊಂಡಿದ್ದಾರೆ. ಇತ್ತ ಕೊಡಗು‌ ಜಿಲ್ಲೆಯ ವಿವಿಧೆಡೆ ಮಳೆಯ ಸಿಂಚನವಾಗಿದೆ. ಹಲವು‌ ದಿನಗಳಿಂದ ಮಳೆಗಾಗಿ‌ ಕಾದಿದ್ದ ಜನರಿಗೆ ಸೋಮವಾರ ಮುಂಜಾನೆಯಿಂದಲೆ ತುಂತುರು ಮಳೆಯಾಗಿದೆ. ಮಳೆಯಿಂದ ಕೊಡಗಿನ‌ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.

ರಾಯಚೂರಲ್ಲಿ ಭತ್ತದ ರಾಶಿಗೆ ನುಗ್ಗಿದ ನೀರು

ಇನ್ನೂ ರಾಯಚೂರಿನಲ್ಲಿ ವರುಣನ ಆರ್ಭಟಕ್ಕೆ ರೈತರು ಸಂಕಷ್ಟಕ್ಕೆ ಸಿಲುಕಿದರು. ಎರಡು ಗಂಟೆಗಳ ಕಾಲ ಸುರಿದ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆಗೆ ನಗರದ ರಸ್ತೆಗಳು ಹಳ್ಳದಂತಾದರೆ, ನಗರದ ಎಪಿಎಂಸಿಗೆ ನೀರು ನುಗ್ಗಿತ್ತು. ತೆಲಂಗಾಣದ ಮಕ್ತಲ್‌ನಿಂದ ಸಾಕಷ್ಟು ರೈತರು ಭತ್ತ ತಂದು ರಾಶಿ ಮಾಡಿದರು.ಆದರೆ ಮಳೆ ಸುರಿದ ಕಾರಣ ಭತ್ತದ ರಾಶಿ ನೀರುಪಾಲಾಗಿತ್ತು. ಎಪಿಎಂಸಿ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ರೈತರು ಅಸಮಾಧಾನ ಹೊರಹಾಕಿದ್ದರು.

ಇತ್ತ ರಾಯಚೂರು ನಗರದ ವಾರ್ಡ್‌ನ 34ರಲ್ಲಿ ಸುಮಾರು 25ಕ್ಕೂ ಹೆಚ್ಚು ಮನೆಗಳು ಮತ್ತು ದೇವಸ್ಥಾನವು ಜಲಾವೃತಗೊಂಡಿತ್ತು. ಚಿಕ್ಕ ಕಾಲುವೆ ಬ್ಲಾಕ್ ಆಗಿದ್ದರಿಂದ ಈ ಆವಾಂತರಗಳು ಸೃಷ್ಟಿಯಾಗಿತ್ತು. ಮಳೆ ನೀರು ನುಗ್ಗಿದ್ದರಿಂದ ರಾತ್ರಿಯಿಡೀ ಜನರು ಜಾಗರಣೆ ಮಾಡುವಂತಾಯಿತು. ಬೆಳಗ್ಗೆಯಿಂದ ಮಳೆ ನೀರು ಹೊರ ಹಾಕಲು ಜನರು ಹರಸಾಹಸ ಪಟ್ಟರು. ನಗರಸಭೆ ಮತ್ತು ಜನ ಪ್ರತಿನಿಧಿಗಳ ವಿರುದ್ಧ ವಾರ್ಡ್‌ನ ಜನರು ಆಕ್ರೋಶ ಹೊರಹಾಕಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Karnataka Weather Forecast : ವಾಯುಭಾರ ಕುಸಿತದಿಂದಾಗಿ ಕೇರಳ ಕರಾವಳಿಯಲ್ಲಿ ಚಂಡಮಾರುತ ಎದ್ದಿದೆ. ಇದರ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಗಾಳಿಯೊಂದಿಗೆ ಗುಡುಗು ಸಹಿತ ವಿಪರೀತ ಮಳೆಯಾಗುವ (Rain News) ಮುನ್ಸೂಚನೆ ಇದೆ.

VISTARANEWS.COM


on

By

karnataka weather forecast karnataka rains
Koo

ಬೆಂಗಳೂರು: ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ (Karnataka Weather Forecast) ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಗಾಳಿ ವೇಗವು 40-50 ಕಿ.ಮೀನಲ್ಲಿ ಇರಲಿದ್ದು, ಇದರೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆಯಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಜತೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಬಾಗಲಕೋಟೆ, ಗದಗ, ಕೊಪ್ಪಳ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರದಲ್ಲೂ ಇದೇ ಪರಿಸ್ಥಿತಿ ಇರಲಿದೆ.

ಇದನ್ನೂ ಓದಿ: Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

ಚಿಕ್ಕಮಗಳೂರಲ್ಲಿ ಮಳೆಗೆ ಮರ ಬಿದ್ದು ಮಹಿಳೆ ಸಾವು

ನಿನ್ನೆ ಭಾನುವಾರ ಚಿಕ್ಕಮಗಳೂರಲ್ಲಿ ಸುರಿದ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದರು. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

Karnataka Weather Forecast

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿತ್ತು. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗಿತ್ತು. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Heavy Rain News : ರಾಜ್ಯದ ಹಲವು ಭಾಗಗಳಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಗುಡುಗು ಸಹಿತ ಭಾರಿ ಗಾಳಿ ಮಳೆ ಅನಾಹುತಗಳು ಸಂಭವಿಸಿದೆ. ಭಾನುವಾರ ಚಿಕ್ಕಮಗಳೂರಲ್ಲಿ ವಿಪರೀತ ಮಳೆಯಾಗುತ್ತಿದ್ದರೆ, ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆಯು ನೆಲಕಚ್ಚಿದೆ.

VISTARANEWS.COM


on

By

Karnataka Weather Forecast Heavy rain in chikkmagalur
Koo

ಚಿಕ್ಕಮಗಳೂರು/ಬೆಂಗಳೂರು: ಭಾನುವಾರ ರಾಜ್ಯದ ವಿವಿಧೆಡೆ ವರುರ್ಣಾಭಟ (Karnataka Weather Forecast) ಜೋರಾಗಿದೆ. ಚಿಕ್ಕಮಗಳೂರಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Karnataka Weather Forecast

ಇನ್ನೂ ಮಳೆಯ (Rain News) ಅವಾಂತರಕ್ಕೆ ಜನರು ಕಂಗಲಾಗಿದ್ದಾರೆ. ಚಿಕ್ಕಮಗಳೂರು ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಶಿರವಾಸೆ, ಮುತ್ತೋಡಿ, ಮಲಂದೂರು ಸುತ್ತಮುತ್ತ ಗುಡುಗು, ಸಿಡಿಲು ಬಿರುಗಾಳಿ ಸಹಿತ ನಿರಂತರ ಮಳೆಯಾಗುತ್ತಿದೆ. ಶಿರವಾಸೆ ಗ್ರಾ.ಪಂ ವ್ಯಾಪ್ತಿಯ ಹತ್ತಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಕೂಲಿ ಕಾರ್ಮಿಕರು ಪರದಾಟ ಅನುಭವಿಸುತ್ತಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ ರೈತರು, ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. ಕಾಫಿನಾಡ ಬಯಲುಸೀಮೆ ಭಾಗದಲ್ಲೂ ಧಾರಾಕಾರ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಯಲು ಸೀಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಬೆಂಗಳೂರಲ್ಲೂ ಮಳೆ ಮೋಡಿ

ವೀಕೆಂಡ್‌ ಮೂಡ್‌ನಲ್ಲಿದ್ದ ಸಿಟಿ ಮಂದಿಗೆ ಮಳೆಯು ಮೋಡಿ ಮಾಡಿದೆ. ಬೆಂಗಳೂರಿನ ಉಲ್ಲಾಳ, ನಾಗರಬಾವಿ, ವಿಜಯನಗರ, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಇತ್ತ ಕೆಲ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಪಾದಾಚಾರಿಗಳು ರಸ್ತೆ ದಾಟಲು ಆಗದೆ ಪರದಾಡುವಂತಾಗಿದೆ.

ಇದನ್ನೂ ಓದಿ: Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ನಿನ್ನೆ ಶನಿವಾರ ಸುರಿದ ಮಳೆಯಿಂದ ಅವಾಂತರ‌ವೇ ಸೃಷ್ಟಿಯಾಗಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ಮುಕ್ಕಾಲು ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌

ರಾಜ್ಯಾದ್ಯಂತ ಮಳೆಯು ಅಬ್ಬರಿಸಲಿದ್ದು, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯು 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder Case : ಪತಿಯ ಡೆಡ್ಲಿ ಅಟ್ಯಾಕ್‌ಗೆ ಪತ್ನಿ ಸಾವು; ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

Murder case : ರಾಮನಗರದಲ್ಲಿ ಪತಿಯಿಂದಲೇ ಮಹಿಳೆಯೊಬ್ಬರ ಬರ್ಬರ ಹತ್ಯೆಯಾಗಿದೆ. ಯಾದಗಿರಿಯಲ್ಲಿ ಜಮೀನಿಗೆ ತೆರಳುತ್ತಿದ್ದ ಯುವಕನ ಮೇಲೆ ದಾಳಿ ಮಾಡಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಇತ್ತ ಬಾಗಲಕೋಟೆಯಲ್ಲಿ ಯುವಕನೊರ್ವ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

By

Murder case
Koo

ರಾಮನಗರ/ಯಾದಗಿರಿ: ರಾಮನಗರದ (Ramanagar News) ದೊಡ್ಡ ಮುದುವಾಡಿ ಗ್ರಾಮದಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ (Murder case) ನಡೆದಿದೆ. ರಾಜೇಶ್ ಎಂಬಾತ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ಮಹಿಳೆ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಆರೋಪಿಗಾಗಿ ಹುಡುಕಾಟ ನಡೆದಿದ್ದು, ಯಾಕಾಗಿ ಹತ್ಯೆ ನಡೆದಿದೆ ಎಂಬುದು ತಿಳಿದು ಬಂದಿಲ್ಲ.

ರೈಲಿಗೆ ತಲೆ ಕೊಟ್ಟು ಯುವಕ ಸೂಸೈಡ್‌

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಯರಗೊಪ್ಪ ಸಮೀಪ ರೈಲಿಗೆ ತಲೆ ಕೊಟ್ಟು ಅಪರಿಚಿತ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈಲು ಹರಿದು ರುಂಡ, ಮುಂಡ ಬೇರೆ ಬೇರೆಯಾಗಿದೆ. ಯುವಕನ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Drowned in water : ಕೆರೆಯಲ್ಲಿ ಈಜುವ ಸವಾಲು; ಜೋಶ್‌ನಲ್ಲಿ ನೀರಿಗೆ ಇಳಿದ ಟೆಕ್ಕಿ ಮೃತ್ಯು

ಯಾದಗಿರಿಯಲ್ಲಿ ಯುವಕನನ್ನು ಅಟ್ಟಾಡಿಸಿ ಹೊಡೆದ ಗುಂಪು

ಯಾದಗಿರಿಯ ಸೈದಾಪುರ ಪಟ್ಟಣದಲ್ಲಿ ಹತ್ತಾರ ಜನರ ಗುಂಪೊಂದು ಮಾರಕಾಸ್ತ್ರ ಹಾಗೂ ದೊಣ್ಣೆಗಳಿಂದ ಯುವಕನ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಲಾಗಿದೆ. ಭಾನುವಾರ ನಸುಕಿನ ಜಾವ ಘಟನೆ ನಡೆದಿದೆ.

ಒಂದು ಸಮುದಾಯದ ಯುವಕರ ಗುಂಪಿನಿಂದ ಮತ್ತೊಂದು ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಸಾಬಣ್ಣ ಆನಂಪಲ್ಲಿ ಹಲ್ಲೆಗೊಳಾದವರು. ನಸುಕಿನ ಜಾವ ಸಾಬಣ್ಣ ಎಂದಿನಂತೆ ಜಮೀನಿಗೆ ತೆರಳುತ್ತಿದ್ದರು. ಈ ವೇಳೆ ಸೈದಾಪುರ ಪಟ್ಟಣದ ಹೊರಭಾಗದಲ್ಲಿ ಯುವಕರ ಗುಂಪು ಕಾದು ಕುಳಿತು ಸಾಬಣ್ಣ ಬರುತ್ತಿದ್ದಂತೆ ಮನಬಂದಂತೆ ಹಲ್ಲೆ ಮಾಡಿ ಪರಾರಿ ಆಗಿದ್ದಾರೆ.

ಇನ್ನೂ ಗಂಭೀರ ಗಾಯಗೊಂಡಿದ್ದ ಸಾಬಣ್ಣನನ್ನು ರಾಯಚೂರುನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಳೆ ದ್ವೇಷಕ್ಕೆ ಸಾಬಣ್ಣನ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ. 15 ದಿನಗಳ ಹಿಂದೆ ಮದುವೆ ಮೆರವಣಿಗೆ ವಿಚಾರದಲ್ಲಿ ಯುವಕರ ಗ್ಯಾಂಗ್ ಹಾಗೂ ಸಾಬಣ್ಣ ನಡುವೆ ಜಗಳವಾಗಿತ್ತು. ಈ ಸಂಬಂಧ ಸೈದಾಪುರ ಠಾಣೆಯಲ್ಲಿ ಕೂಡ ಕೇಸ್ ದಾಖಲಾಗಿತ್ತು. ಇದನ್ನೇ ಮನಸ್ಸಿನಲ್ಲಿಟ್ಟುಕೊಂಡು ಸಾಬಣ್ಣನ ಮೇಲೆ ಹಲ್ಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
CBSE 12th results 2024
ಪ್ರಮುಖ ಸುದ್ದಿ34 mins ago

CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ವಿದೇಶ43 mins ago

Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

Murder Case in hubballi
ಹುಬ್ಬಳ್ಳಿ49 mins ago

Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Kareena Kapoor Saif Ali Khan share a kiss in front of paparazzi
ಬಾಲಿವುಡ್49 mins ago

Kareena Kapoor: ರೊಮ್ಯಾಂಟಿಕ್‌ ಮೂಡ್‌ನಲ್ಲಿ ಸೈಫ್-ಕರೀನಾ: ಫೋಟೊಗ್ರಾಫರ್‌ಗಳ ಮುಂದೆಯೇ ಕಿಸ್ಸಿಂಗ್‌!

shivamogga road accident hit and run
ಕ್ರೈಂ1 hour ago

Hit and Run: ಆಟೋಗೆ ಗುದ್ದಿ ವಿದ್ಯಾರ್ಥಿನಿಯನ್ನು ಕೊಂದು ಪರಾರಿಯಾದ ಕ್ಯಾಂಟರ್ ಚಾಲಕ

Karnataka Rain
ಮಳೆ1 hour ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

Lok Sabha Election 2024
ದೇಶ2 hours ago

Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

Lok Sabha Elections 2024 Jr NTR, Allu Arjun, Chiranjeevi cast votes
ಟಾಲಿವುಡ್2 hours ago

Lok Sabha Elections 2024: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್‌​!

shivamogga triple murder case
ಕ್ರೈಂ2 hours ago

Murder Case: ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

Turbo Trailer Out mammoottys raj b shetty looks menacing
ಮಾಲಿವುಡ್2 hours ago

Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ6 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ7 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ18 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ19 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ19 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ22 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ24 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌