ವಿಸ್ತಾರ Explainer: ಅಬಾರ್ಷನ್‌- ಎಲ್ಲಿ ಓಕೆ, ಎಲ್ಲಿ ನಾಟ್‌ ಓಕೆ? - Vistara News

EXPLAINER

ವಿಸ್ತಾರ Explainer: ಅಬಾರ್ಷನ್‌- ಎಲ್ಲಿ ಓಕೆ, ಎಲ್ಲಿ ನಾಟ್‌ ಓಕೆ?

15 ವಾರಗಳ ನಂತರ ಅಬಾರ್ಷನ್‌ ನಿಷೇಧಿಸಿದ ಅಮೆರಿಕದ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು, ಇತರ ದೇಶಗಳ ಕಾಯಿದೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

VISTARANEWS.COM


on

abortion
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಬಾರ್ಷನ್‌ ಅಥವಾ ಗರ್ಭಪಾತ. ಸದ್ಯ ಅಮೆರಿಕದ ಸುಪ್ರೀಂ ಕೋರ್ಟ್‌ ಈ ಕುರಿತು ನೀಡಿರುವ ತೀರ್ಪಿನ ಪರಿಣಾಮದಿಂದಾಗಿ ಹಾಟ್‌ ಟಾಪಿಕ್‌ ಆಗಿದೆ. 15 ವಾರ ಮೇಲ್ಪಟ್ಟ ಭ್ರೂಣವನ್ನು ತೆಗೆಸುವ ಹಾಗಿಲ್ಲ ಎಂದು ಸುಪ್ರೀಂ ಕೋರ್ಟ್‌ ರೂಲ್‌ ಮಾಡಿದೆ. ಇದಕ್ಕೂ ಮೊದಲು 24 ವಾರಗಳ ವರೆಗೆ ಗರ್ಭಪಾತ ಮಾಡಿಸಿಕೊಳ್ಳುವ ಅವಕಾಶವಿತ್ತು. ಕೋರ್ಟ್‌ನ ಈ ತೀರ್ಪು ಮಹಿಳೆಯರ ಹಕ್ಕುಗಳ ಉಲ್ಲಂಘನೆ ಅಂತ ಕೂಗು ಎದ್ದಿದೆ. ಪ್ರತಿಭಟನೆಕಾರರು ಬೀದಿಗೆ ಇಳಿದಿದ್ದಾರೆ.

ಅಮೆರಿಕದಲ್ಲಿ ಈ ಹಿಂದೆ ಅಬಾರ್ಷನ್‌ ಬಗ್ಗೆ ಇದ್ದ ಕಾನೂನು ಯಾವುದು? ಅಮೆರಿಕದಂಥ ಮುಂದುವರಿದ ದೇಶಗಳಲ್ಲೂ ಅಬಾರ್ಷನ್‌ಗೆ ಕಾನೂನು ಅಡ್ಡಿ ಆತಂಕ ಇದೆಯಾ? ಹಾಗಿದ್ದರೆ ಬೇರೆ ದೇಶಗಳಲ್ಲಿ ಪರಿಸ್ಥಿತಿ ಹೇಗಿದೆ? ಭಾರತದಲ್ಲಿ ಯಾವ ತಿಂಗಳ ವರೆಗೂ ಅಬಾರ್ಷನ್‌ ಮಾಡಿಸಿಕೊಳ್ಳಬಹುದು? ಭಾರತ ಮೂಲದ ಸವಿತಾ ಹಾಲಪ್ಪನವರ್‌ ಪ್ರಕರಣ ಯುರೋಪ್‌ನಲ್ಲಿ ಮೂಡಿಸಿದ ಸಂಚಲನವೇನು? ಈ ಬಗ್ಗೆ ವಿವರವಾಗಿ ನೋಡೋಣ.

ಮಗು ಬೇಕು ಎಂದುಕೊಂಡಿರುವವರಿಗೆ ಗರ್ಭಪಾತ ಆದರೆ ಅದು ದುರಂತ; ಮಗು ಬೇಡ ಅಂದುಕೊಂಡಿರುವವವರಿಗೆ ಗರ್ಭಪಾತ ಆಗದೇ ಇದ್ದರೆ ಅದೂ ದುರಂತವೇ. ದಶಕಗಳ ಹಿಂದೆ ಆರೋಗ್ಯಕರವಾದ, ವೈಜ್ಞಾನಿಕವಾದ ಗರ್ಭಪಾತದ ವಿಧಾನಗಳ ಲಭ್ಯತೆ ಇಲ್ಲದೇ ಇದ್ದಾಗಲೂ ಅಬಾರ್ಷನ್‌ಗಳು ಆಗ್ತಾ ಇದ್ದವು. ನಂತರ ಹೆಚ್ಚಿನ ಆಧುನಿಕ ಸಮಾಜಗಳಲ್ಲಿ ಗಂಡ ಹೆಂಡತಿಗೆ ಎರಡೇ ಮಗು, ನಂತರ ಅದಕ್ಕೂ ಮುಂದುವರಿದು ಒಂದೇ ಮಗು ಎಂಬ ಮನೋಧರ್ಮ ಬಂತು. ಶಿಕ್ಷಣ ಹೆಚ್ಚಾದಷ್ಟೂ ಮಕ್ಕಳು ಮಾಡಿಕೊಳ್ಳುವ ಪ್ರಮಾಣ ಕಡಿಮೆಯಾಯಿತು, ಅಬಾರ್ಷನ್‌ ಹೆಚ್ಚಾಯಿತು. ಇದೇ ಸಂದರ್ಭದಲ್ಲಿ ಅಬಾರ್ಷನ್‌ ಕುರಿತು ಪಾಲಿಸಿ ಮತ್ತು ಕಾನೂನುಗಳನ್ನು ರೂಪಿಸುವ ಅಗತ್ಯವೂ ಸರ್ಕಾರಗಳ ಮೇಲೆ ಬಿತ್ತು. ಸಾಂಪ್ರದಾಯಿಕ ಮನೋಭಾವ ಹೆಚ್ಚಾಗಿರುವ, ಮತೀಯತೆ ಗಾಢವಾಗಿರುವ, ಶಿಕ್ಷಣ ಪ್ರಮಾಣ ಕಡಿಮೆ ಇರುವ ದೇಶಗಳಲ್ಲಿ ಅಬಾರ್ಷನ್‌ಗೆ ನಿಷೇಧ ಎಂಬ ಸಾಮಾನ್ಯ ಅಭಿಪ್ರಾಯವಿದೆ. ಹಾಗಂತ ಆಧುನಿಕ ಮನೋಧರ್ಮದ ದೇಶಗಳಲ್ಲೆಲ್ಲಾ ಅಬಾರ್ಷನ್‌ಗೆ ಮುಕ್ತ ಸಮ್ಮತಿಯಿದೆ ಎಂದರ್ಥವಲ್ಲ. ಈ ಬಗ್ಗೆ ನಾವು ವಿವರವಾಗಿ ನೋಡೋಣ.

ಅಮೆರಿಕದಲ್ಲಿ ಬಂದ ತೀರ್ಪು ಏನು?

ಮಿಸಿಸಿಪ್ಪಿ ರಾಜ್ಯದ ರಿಪಬ್ಲಿಕನ್‌ ಪಕ್ಷದ ಸರಕಾರ ಜಾರಿಗೆ ತಂದಿದ್ದ ʼ15 ವಾರಗಳ ಬಳಿಕ ಗರ್ಭಪಾತ ನಿಷೇಧʼ ಕಾಯಿದೆಯನ್ನು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ಎತ್ತಿ ಹಿಡಿಯಿತು. 9 ನ್ಯಾಯಮೂರ್ತಿಗಳಿದ್ದ ಪೀಠದಲ್ಲಿ 6 ಮಂದಿ ಗರ್ಭಪಾತದ ವಿರುದ್ಧವಾಗಿ ನಿಲುವು ತಾಳಿದರು. 2018ರಲ್ಲಿ ಮಿಸಿಸಿಪ್ಪಿ ರಾಜ್ಯ ಸರ್ಕಾರ 15 ವಾರಗಳ ನಂತರದ ಭ್ರೂಣ ತೆಗೆಸುವುದನ್ನು ನಿಷೇಧಿಸಿತ್ತು. ವೈದ್ಯಕೀಯ ತುರ್ತುಪರಿಸ್ಥಿತಿ, ಭ್ರೂಣದಲ್ಲಿ ಗಂಭೀರ ಅಸಹಜತೆ ಇದ್ದಾಗ ಮಾತ್ರ ಅಬಾರ್ಷನ್‌ ಮಾಡಬಹುದು ಎಂದು ಕಾಯಿದೆ ಹೇಳಿತ್ತು. ಈಗ, ಅಬಾರ್ಷನ್‌ ಬಗ್ಗೆ ರಾಜ್ಯಗಳು ತಮ್ಮದೇ ಆದ ಕಾಯಿದೆ ರೂಪಿಸಬಹುದು ಎಂದಿದೆ. ಈಗಾಗಲೇ ಅಮೆರಿಕದ 11 ರಾಜ್ಯಗಳಲ್ಲಿ ಅಬಾರ್ಷನ್‌ ಮೇಲೆ ಕಟ್ಟುನಿಟ್ಟಾದ ನಿಷೇಧಗಳಿವೆ. ಇತರ 12 ರಾಜ್ಯಗಳಲ್ಲಿ ಯಾವಾಗ ಬೇಕಿದ್ದರೂ ನಿರ್ಬಂಧ ವಿಧಿಸಬಹುದಾದ ಅವಕಾಶಗಳನ್ನು ಹೊಂದಿರುವ ಕಾನೂನುಗಳಿವೆ.

ರೋ ಮತ್ತು ವೇಡ್‌ ಪ್ರಕರಣ

1937ರಲ್ಲಿ ಸುಪ್ರೀಂ ಕೋರ್ಟ್ ನೀಡಿದ Roe v Wade ಪ್ರಕರಣದ ತೀರ್ಪನ್ನು ಐತಿಹಾಸಿಕ ಎನ್ನಲಾಗುತ್ತದೆ. ಆ ಪ್ರಕರಣದಲ್ಲಿ, ಮಹಿಳೆಗೆ ಇರುವ ಖಾಸಗಿತನದ ಹಕ್ಕಿನಡಿ ಗರ್ಭಪಾತದ ಹಕ್ಕು ಕೂಡ ಬರುತ್ತದೆ ಎಂದು ಕೋರ್ಟ್‌ ವ್ಯಾಖ್ಯಾನಿಸಿತ್ತು. ಆದರೆ ಈಗ, ತಾನೇ ನೀಡಿದ ತೀರ್ಪಿಗೆ ಉಲ್ಟಾ ಹೊಡೆದಿರುವ ಕೋರ್ಟ್‌, ಸಂವಿಧಾನದಲ್ಲಿ ಗರ್ಭಪಾತದ ಉಲ್ಲೇಖವಿಲ್ಲ ಎಂದು ಹೇಳಿದೆ. ಈ ತೀರ್ಪು ಅಮೆರಿಕದಲ್ಲಿ ಸಾಕಷ್ಟು ವಾದವಿವಾದ, ಕೋಲಾಹಲ ಎಬ್ಬಿಸುವ ಸಾಧ್ಯತೆ ಇದೆ. ಯಾಕೆಂದರೆ ಈ ಹಕ್ಕನ್ನು ಪಡೆಯುವ ಮುನ್ನ ಸಾಕಷ್ಟು ಹೋರಾಟಗಳು ನಡೆದಿದ್ದವು. ಅಮೆರಿಕದ ರಾಜಕೀಯದಲ್ಲಿ ಈ ಬಗ್ಗೆ ಬಿಸಿಯೇರಿದ ವಾಗ್ಯುದ್ಧಗಳು, ಚಳವಳಿ ಎಲ್ಲವೂ ನಡೆದಿದ್ದವು. ಇತ್ತೀಚಿಗಿನ ಒಂದು ದಶಕದಲ್ಲಿ ಅಮೆರಿಕದಲ್ಲಿ ಗರ್ಭಪಾತ ಪ್ರಕರಣಗಳು ಏರಿದ್ದವು. ಕಳೆದ ಮೂರು ವರ್ಷಗಳಲ್ಲಿ ಇದು ಶೇ.8ರಷ್ಟು ಏರಿಕೆಯಾಗಿತ್ತು. ಸಂಪ್ರದಾಯವಾದಿ ವಲಯದಲ್ಲಿ ಇದು ಕಳವಳ ಹುಟ್ಟಿಸಿತ್ತು. ಆದರೆ ಕೋರ್ಟ್‌ ತೀರ್ಪಿನಿಂದಾಗಿ, ದೇಶ ಮತ್ತೆ ಸಂಪ್ರದಾಯವಾದಿ ಮನಸ್ಸತ್ವದತ್ತ ವಾಲುತ್ತಿದೆ ಎಂಬ ಅಭಿಪ್ರಾಯ ಉಂಟಾಗಿದೆ. ಹಾಗೆಯೇ, ಜಗತ್ತಿನ ಅತ್ಯಂತ ಆಧುನಿಕ ದೇಶದಲ್ಲೇ ಹೀಗಾದರೆ, ಇತರ ದೇಶಗಳ ಕತೆ ಏನಾದೀತು ಎಂಬ ಆತಂಕವೂ ಮೂಡುವಂತಾಗಿದೆ.

ಭಾರತದಲ್ಲಿ ಕಾಯಿದೆ ಹೇಗಿದೆ?

ವೈದ್ಯಕೀಯ ಗರ್ಭಧಾರಣೆ ತಡೆ ಕಾಯಿದೆ- 1971ರಲ್ಲಿ ದೇಶದಲ್ಲಿ ಗರ್ಭಪಾತ ಯಾವ ಅವಧಿಯವರೆಗೆ ಮಾಡಬಹುದು, ಯಾವಾಗ ಮಾಡಬಾರದು ಎಂಬುದನ್ನು ನಿಯಮಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, 20ನೇ ವಾರದ ಒಳಗೆ ಮಾಡಿಕೊಳ್ಳುವ ಅಬಾರ್ಷನ್‌ ಕಾನೂನುಬದ್ಧವಾದುದು. ಇದಕ್ಕೆ ಡಾಕ್ಟರ್‌ ಒಪ್ಪಿಗೆ ಇರಬೇಕು ಹಾಗೂ ಮಾನ್ಯತೆ ಪಡೆದ ವೈದ್ಯಕೀಯ ಸಂಸ್ಥೆಯ ವೈದ್ಯರಿಂದ ಇದನ್ನು ಮಾಡಿಸಬಹುದು.

ಆದರೆ ಇದರ ಮಾನದಂಡದಲ್ಲೂ ಸ್ವಲ್ಪ ವ್ಯತ್ಯಾಸಗಳಿವೆ. ಗರ್ಭದ 12ನೇ ವಾರಗಳವರೆಗೆ ಒಬ್ಬ ವೈದ್ಯರ ಅನುಮತಿ ಪಡೆದು ಅಬಾರ್ಷನ್‌ ಮಾಡಬಹುದು. 12ರಿಂದ ಮೇಲ್ಪಟ್ಟು 20 ವಾರಗಳ ಒಳಗೆ ಆಗಿದ್ದರೆ ಇಬ್ಬರು ವೈದ್ಯರ ಒಪ್ಪಿಗೆ ಬೇಕು.

2020ರಲ್ಲಿ ಈ ಕಾಯಿದೆಗೆ ಒಂದು ತಿದ್ದುಪಡಿ ತರಲಾಯಿತು. ಕೆಲವು ಪ್ರಕರಣಗಳಲ್ಲಿ ಮಾತ್ರ 24ನೇ ವಾರದವರೆಗೆ ಗರ್ಭಪಾತ ಮಾಡಿಸುವ ಹಕ್ಕನ್ನು ನೀಡಲಾಯಿತು. ಭ್ರೂಣದಲ್ಲಿ ಗಂಭೀರವಾದ ಅಸಹಜತೆ ಇದ್ದರೆ, ರೇಪ್‌ನಿಂದಾಗಿ ಮಹಿಳೆ ಗರ್ಭವತಿಯಾಗಿದ್ದು ಆ ಮಗು ಆಕೆಗೆ ಬೇಡವಾಗಿದ್ದರೆ, ಅಂಥ ಸಂದರ್ಭದಲ್ಲಿ 24ನೇ ವಾರದವರೆಗೂ ಅಬಾರ್ಷನ್‌ ಮಾಡಿಸಲು ಅವಕಾಶವಿದೆ.

ಈ ಕಾಯಿದೆ ಇನ್ನೂ ಒಂದು ಅಂಶವನ್ನು ಹೇಳಿದೆ- ತೀರಾ ಗಂಭೀರವಾದ ಆರೋಗ್ಯ- ದೈಹಿಕ ಅಸಹಜತೆ ಭ್ರೂಣದಲ್ಲಿ ಇದ್ದರೆ, ಅಂಥ ಗರ್ಭವನ್ನು ತೆಗೆಸಲು 24ನೇ ವಾರದ ನಂತರವೂ ಈಗಿನ ತಂತ್ರಜ್ಞಾನದ ಬೆಳವಣಿಗೆಗಳ ಕಾರಣದಿಂದಾಗಿ ಅವಕಾಶವಿದೆ. ಆದರೆ ಇದನ್ನು ಒಂದು ವೈದ್ಯಕೀಯ ಮಂಡಳಿ ಶಿಫಾರಸು ಮಾಡಬೇಕು. ಈ ಮಂಡಳಿಯಲ್ಲಿ ಗೈನಕಾಲಜಿಸ್ಟ್‌, ಮಕ್ಕಳ ತಜ್ಞ, ರೇಡಿಯಾಲಜಿಸ್ಟ್‌, ಮತ್ತು ಸರ್ಕಾರ ನಿಗದಿಪಡಿಸಿದ ಇತರ ತಜ್ಞರು ಇರಬೇಕು.

ಇಂಥ ಮಹಿಳೆಯ ಗುರುತನ್ನು ಯಾರೂ ಬಹಿರಂಗಪಡಿಸುವಂತಿಲ್ಲ. ಹಾಗೆ ಬಹಿರಂಗಪಡಿಸುವುದು ಕ್ರಿಮಿನಲ್‌ ಅಪರಾಧ. ಮಹಿಳೆಯ ಒಪ್ಪಿಗೆಯಿಲ್ಲದೇ ಆಕೆಗೆ ಅಬಾರ್ಷನ್‌ ನೆರವೇರಿಸುವುದು ಗುರುತರ ದಂಡನೀಯ ಅಪರಾಧ. ಹಾಗೇ ಗರ್ಭಧಾರಣೆ ತಡೆ ಕ್ರಮಗಳು ವಿಫಲಗೊಂಡ ಕಾರಣದಿಂದ ಆಕೆ ಗರ್ಭ ಧರಿಸಿದ್ದರೆ, ಅದನ್ನೂ ತೆಗೆಸಲು ಅವಕಾಶವಿದೆ. ಇಲ್ಲಿ ಮಹಿಳೆ ವಿವಾಹಿತೆಯೇ ಅಲ್ಲವೇ ಎಂಬುದು ಗಣನೆಗೆ ಬರುವುದಿಲ್ಲ.

ಭಾರತದಲ್ಲಿ ವೈದ್ಯರ ಸಹಾಯವಿಲ್ಲದೆ ಸ್ವಯಂ ಆಗಿ ಗರ್ಭಪಾತ ಮಾಡಿಕೊಳ್ಳುವುದು ಭಾರತೀಯ ದಂಡಸಂಹಿತೆಯ ಪ್ರಕಾರ ಕ್ರಿಮಿನಲ್‌ ಕೃತ್ಯ. 20ನೇ ವಾರದವರೆಗೆ ಅಬಾರ್ಷನ್‌ಗೆ ಅವಕಾಶ ನೀಡಿದ್ದರೂ ಭಾರತದಲ್ಲಿ ಅಬಾರ್ಷನ್‌ ಮಾಡಿಸಿಕೊಳ್ಳುವುದನ್ನು ಅಪರಾಧ ಎಂಬಂತೆಯೇ ನೋಡುವ ಮನೋಭಾವ ಹಲವು ವಲಯಗಳಲ್ಲಿ ಇದೆ. ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿಯ ಪ್ರಕಾರ, ಭಾರತದಲ್ಲಿ ಮಾತೃತ್ವ ಮರಣಗಳಿಗೆ ಕಾರಣವಾಗುವ ಅಂಶಗಳಲ್ಲಿ ಅಸುರಕ್ಷಿತ ಅಬಾರ್ಷನ್‌ಗಳು ಮೂರನೇ ಸ್ಥಾನದಲ್ಲಿವೆ. 2007-2011ರ ಅವಧಿಯಲ್ಲಿ ದೇಶದಲ್ಲಿನ 67% ಅಬಾರ್ಷನ್‌ಗಳು ಅಸುರಕ್ಷಿತ ರೀತಿಯಲ್ಲಿ ನಡೆದಿವೆ.

ಈಗ ಬೇರೆ ದೇಶಗಳ ಕತೆ ಏನು ನೋಡೋಣ.

24 ದೇಶಗಳಲ್ಲಿ ಅಬಾರ್ಷನ್ ಎಂಬುದು ಸಂಪೂರ್ಣ ನಿಷೇಧಿತ ಕೃತ್ಯ. ಈ 24 ದೇಶಗಳಲ್ಲಿ ಜಗತ್ತಿನ 5% ಸಂತಾನೋತ್ಪತ್ತಿ ಪ್ರಾಯದ ಮಹಿಳೆಯರು (ಸುಮಾರು 9 ಕೋಟಿ) ಇದ್ದಾರೆ. ಇದರಲ್ಲಿ ಸೆನೆಗಲ್, ಮಾರಿತಾನಿಯಾ, ಈಜಿಪ್ಟ್, ಲಾವೋಸ್, ಫಿಲಿಪೀನ್ಸ್, ಎಲ್ ಸಾಲ್ವಡಾರ್, ಹೊಂಡುರಾಸ್, ಪೋಲೆಂಡ್, ಮಾಲ್ಟಾ ಮುಂತಾದ ದೇಶಗಳಿವೆ. ಇದರಲ್ಲಿನ ಕೆಲವು ದೇಶಗಳ ಕಾನೂನುಗಳು ಎಷ್ಟು ಕಠಿಣವಾಗಿವೆ ಎಂದರೆ, ಅಬಾರ್ಷನ್ ಮಾಡಿಸಿಕೊಂಡ ಮಹಿಳೆಯರಿಗೆ ಜೈಲುವಾಸ ಖಚಿತ. ಉದಾಹರಣೆಗೆ, ಎಲ್ ಸಾಲ್ವಡಾರ್ನಲ್ಲಿ ಅಚಾನಕ್ ಗರ್ಭಪಾತಕ್ಕೆ ಈಡಾದ ಮಹಿಳೆಯರ ಮೇಲೆ ಕೊಲೆ ಆರೋಪವನ್ನು ಹೊರಿಸಿ ಜೈಲಿನಲ್ಲಿಡಲಾಗಿದೆ.

ಅಬಾರ್ಷನ್ ಅನ್ನು ಯಾವುದೇ ಸಂದರ್ಭದಲ್ಲಿ ನಿಷೇಧಿಸಿರುವ ಯುರೋಪ್ನ ಏಕೈಕ ದೇಶ ಮಾಲ್ಟಾ. ಕಳೆದ ವರ್ಷ ಇಲ್ಲಿನ ಶತಮಾನಗಳಷ್ಟು ಹಳೆಯದಾದ ಅಬಾರ್ಷನ್ ಕಾನೂನನ್ನು ಕಿತ್ತುಹಾಕುವಂತೆ ಆಗ್ರಹಿಸಿ ದೊಡ್ಡ ಸಂಖ್ಯೆಯ ಮಂದಿ ಪ್ರತಿಭಟನೆ ನಡೆಸಿದರು. ಇನ್ನೊಂದು ಕಡೆ ಪೋಲೆಂಡ್ನಲ್ಲಿ ಇತ್ತೀಚೆಗೆ ಅಬಾರ್ಷನ್ ಕಾಯಿದೆಯನ್ನು ಇನ್ನಷ್ಟು ಬಿಗಿ ಮಾಡಲಾಗಿದ್ದು, ಕೇವಲ ರೇಪ್, ಕುಟುಂಬ ಸಂಬಂಧದೊಳಗಿನ ಗರ್ಭಕಟ್ಟುವಿಕೆ, ಅಥವಾ ತಾಯಿಯ ಜೀವ ಗಂಡಾಂತರದಲ್ಲಿದ್ದರೆ ಮಾತ್ರ ಗರ್ಭಪಾತಕ್ಕೆ ಅವಕಾಶ ನೀಡಲಾಗಿದೆ.

ಆಫ್ರಿಕಾದಲ್ಲಿ ಕಳೆದ ಮೂರು ದಶಕಗಳಲ್ಲಿ ಅನುದ್ದೇಶಿತ ಗರ್ಭಧಾರಣೆಗಳ ಸಂಖ್ಯೆ ಶೇ.15ರಷ್ಟು ಇಳಿದಿದ್ದರೆ, ಅಬಾರ್ಷನ್ ಪ್ರಮಾಣ ಶೇ.13ರಷ್ಟು ಏರಿದೆ. ಹೆಚ್ಚಿನ ಆಫ್ರಿಕನ್ ದೇಶಗಳು ಗರ್ಭಪಾತವನ್ನು ಬಹುತೇಕ ಬ್ಯಾನ್ ಮಾಡಿವೆ ಅಥವಾ ಕಠಿಣವಾಗಿ ನಿರ್ಬಂಧಿಸಿವೆ. ನೈಜೀರಿಯಾದಲ್ಲಿ ತಾಯಿಯ ಜೀವ ಅಪಾಯದಲ್ಲಿದ್ದರೆ ಮಾತ್ರವೇ ಅಬಾರ್ಷನ್ಗೆ ಅವಕಾಶವಿದೆ. ಜಿಂಬಾಬ್ವೆ, ಬೋಟ್ಸ್ವಾನಾಗಳಲ್ಲಿ ಕುಟುಂಬದೊಳಗಿನ ಸಂಬಂಧದಿಂದ ಆದ ಗರ್ಭ, ರೇಪ್ ಅಥವಾ ಭ್ರೂಣದಲ್ಲಿ ಸಮಸ್ಯೆಯಿದ್ದರೆ ಮಾತ್ರ ತೆಗೆಸಲು ಅವಕಾಶ.

50 ದೇಶಗಳಲ್ಲಿ ತಾಯಿಯ ಜೀವ ಅಪಾಯದಲ್ಲಿದ್ದರೆ ಗರ್ಭಪಾತಕ್ಕೆ ಅವಕಾಶ ಮಾಡಿಕೊಡಲಾಗಿದೆ. ಲಿಬಿಯಾ, ನೈಜೀರಿಯಾ, ಇರಾನ್, ವೆನೆಜುವೆಲಾ ಮುಂತಾದ ದೇಶಗಳಲ್ಲಿ ಹೀಗಿದೆ. ಬ್ರೆಜಿಲ್ನಲ್ಲಿ ರೇಪ್ ಅಥವಾ ಭ್ರೂಣದ ಅಸಹಜತೆಯಿದ್ದರೆ ಗರ್ಭಪಾತದ ಅವಕಾಶವಿದ್ದರೂ ಮೂವರು ವೈದ್ಯರಿಂದ ಶಿಫಾರಸು ಪಡೆಯುವುದು ಅಗತ್ಯವಿದೆ. ರೇಪ್ ಬಳಿಕ ಅಬಾರ್ಷನ್ ಮಾಡಿಸಿಕೊಳ್ಳುವವರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಾರೆ.

ಇನ್ನು ಕೆಲವು ದೇಶಗಳಲ್ಲಿ ಗರ್ಭಪಾತ ಮಾಡಿಸಿಕೊಳ್ಳುವುದು ಅಷ್ಟು ಕಷ್ಟವಿಲ್ಲ. ಕೆನಡಾ, ಆಸ್ಟ್ರೇಲಿಯಾ, ಯುರೋಪ್ನ ಹಲವಾರು ದೇಶಗಳಲ್ಲಿ ಗರ್ಭದ ಅವಧಿಯನ್ನು ಹೊರತುಪಡಿಸಿ ಅಬಾರ್ಷನ್ಗೆ ಬೇರೇನೂ ನಿಷೇಧವಿಲ್ಲ. ಕೆನಡಾದಲ್ಲಿ ಅಬಾರ್ಷನ್ ಕುರಿತು ಯಾವುದೇ ಕಾನೂನು ಇಲ್ಲ. 1998ರಲ್ಲಿ ಅಬಾರ್ಷನ್ ನಿಷೇಧಿಸುವ ಫೆಡರಲ್ ಕಾಯಿದೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿತು. “ಈ ಕಾಯಿದೆ ವ್ಯಕ್ತಿಯ ಜೀವನ, ಸ್ವಾತಂತ್ರ್ಯ, ಸುರಕ್ಷತೆಯನ್ನು ಉಲ್ಲಂಘಿಸುತ್ತಿದೆʼʼ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು.

ಹೆಚ್ಚಿನ ಯುರೋಪಿಯನ್ ದೇಶಗಳು ಅವಧಿಗೊಳಪಟ್ಟು ಅಬಾರ್ಷನ್‌ಗೆ ಅನುಮತಿ ನೀಡಿವೆ. ಸರಾಸರಿ ಅವಧಿ ಎಂದರೆ 12- 14 ವಾರಗಳು. ಇನ್ನಷ್ಟು ವಿಳಂಬವಾಗಿ ಅಬಾರ್ಷನ್ ಮಾಡಿಸಿಕೊಳ್ಳುವುದಕ್ಕೂ ಕೆಲವು ದೇಶಗಳಲ್ಲಿ ವಿನಾಯಿತಿಗಳಿವೆ. ಉದಾಹರಣೆಗೆ ಬ್ರಿಟನ್ನಲ್ಲಿ, ಭ್ರೂಣದಲ್ಲಿ ಗಂಭೀರ ಸಮಸ್ಯೆಯಿದ್ದರೆ, ಜನನಪೂರ್ವ ಅವಧಿಯವರೆಗೂ ಅಬಾರ್ಷನ್ ಮಾಡಿಸಿಕೊಳ್ಳುವ ಅವಕಾಶ ನೀಡಲಾಗಿದೆ.

ಯುರೋಪ್, ಲ್ಯಾಟಿನ್ ಅಮೆರಿಕ, ಅಮೆರಿಕ, ಕಟ್ಟುನಿಟ್ಟಾದ ಕ್ಯಾಥೊಲಿಕ್ ಸಂಪ್ರದಾಯದ ದೇಶಗಳಲ್ಲೂ ಗರ್ಭಪಾತದ ಹಕ್ಕಿನ ಬಗ್ಗೆ ಸಾಕಷ್ಟು ವಾದವಿವಾದಗಳು, ಹೋರಾಟಗಳು ನಡೆದಿವೆ. ಇವುಗಳ ಹಿನ್ನೆಲೆಯಲ್ಲಿ ಅಲ್ಲಿನ ಕಾನೂನುಗಳೂ ಬದಲಾಗಿವೆ. ಕಳೆದ ವರ್ಷ ಕೊಲಂಬಿಯಾದಲ್ಲಿ ʼಕಾಸಾ ಜಸ್ಟಾʼ ಎಂಬ ಹೋರಾಟ ನಡೆದು, ಆ ಹಿನ್ನೆಲೆಯಲ್ಲಿ ಅಲ್ಲಿನ ಸಾಂವಿಧಾನಿಕ ಕೋರ್ಟ್ 24ನೇ ವಾರದವರೆಗೂ ಗರ್ಭಪಾತವನ್ನು ಮಾನ್ಯ ಮಾಡಿತು. ಮೆಕ್ಸಿಕೋದ ಸುಪ್ರೀಂ ಕೋರ್ಟ್ ಕೂಡ, ಅಬಾರ್ಷನ್ ಮಾಡಿಸಿಕೊಂಡ ಮಹಿಳೆಯನ್ನು ಬಂಧನಕ್ಕೊಳಪಡಿಸುವ ಅಧಿಕಾರಿಗಳ ಅಧಿಕಾರವನ್ನು ರದ್ದುಪಡಿಸಿತು.

ಸವಿತಾ ಹಾಲಪ್ಪನವರ್ ಪ್ರಕರಣ

ಅಬಾರ್ಷನ್ ವಿಚಾರದಲ್ಲಿ ಇಡೀ ಜಗತ್ತಿನ ಗಮನ ಸೆಳೆದ ದುರಂತಮಯ, ಮಾನವೀಯ ನೆಲೆಯ ಘಟನೆ ಎಂದರೆ ಐರ್ಲೆಂಡ್ನಲ್ಲಿ ಸಂಭವಿಸಿದ ಸವಿತಾ ಹಾಲಪ್ಪನವರ್ ಅವರ ಅಬಾರ್ಷನ್ ಪ್ರಕರಣ. ಯುರೋಪ್ನಲ್ಲಿ ಅಬಾರ್ಷನ್ ಬಗ್ಗೆ ಅತಿ ಹೆಚ್ಚು ನಿರ್ಬಂಧ ಹೊಂದಿದ್ದ ದೇಶವೆಂದರೆ ಐರ್ಲೆಂಡ್. ಪಕ್ಕದ ಇಂಗ್ಲೆಂಡ್ನಲ್ಲಿ ಈ ಬಗ್ಗೆ ಆಧುನಿಕವಾದ ಚಿಂತನೆ ಇದ್ದರೂ ಐರ್ಲೆಂಡ್ ಮಾತ್ರ ಇನ್ನೂ ಪುರಾತನವಾದ ಕಾಯಿದೆಯನ್ನೇ ಹೊಂದಿತ್ತು. ತಾಯಿಯ ಜೀವಕ್ಕೆ ಅಪಾಯ ಇದ್ದರೆ ಅಥವಾ ಭ್ರೂಣದ ಹೃದಯಬಡಿತ ನಿಂತಿದ್ದರೆ ಮಾತ್ರವೇ ಅಬಾರ್ಷನ್ ಮಾಡಿಸಬಹುದು ಎಂಬ ಕಠೋರ ಕಾಯಿದೆ ಅಲ್ಲಿತ್ತು. ಇದರಿಂದಾಗಿ, ಅಬಾರ್ಷನ್ ಮಾಡಿಸಿಕೊಳ್ಳಬಯಸುವ ಮಹಿಳೆಯರು ಸದ್ದಿಲ್ಲದೇ ಅಕ್ಕಪಕ್ಕದ ಇಂಗ್ಲೆಂಡ್ ಮುಂತಾದ ದೇಶಗಳಿಗೆ ಹೋಗಿ ಗರ್ಭ ತೆಗೆಸಿಕೊಂಡು ಬರುತ್ತಿದ್ದರು.

2012ರಲ್ಲಿ ಮಾತ್ರ ಒಂದು ದುರಂತ ನಡೆದುಹೋಯಿತು. ಕರ್ನಾಟಕ ಮೂಲದ ಸವಿತಾ ಹಾಲಪ್ಪವರ್ ಎಂಬ 31 ವರ್ಷದ ಹೆಣ್ಣುಮಗಳು ಗರ್ಭವತಿಯಾಗಿದ್ದರು. ಇದ್ದಕ್ಕಿದ್ದಂತೆ ಗರ್ಭ ಜಾರಿದ ಅನುಭವವಾಗಿ, ವೈದ್ಯರಲ್ಲಿಗೆ ತೆರಳಿದ ಅವರಿಗೆ ಭ್ರೂಣ ಉಳಿಯುವುದಿಲ್ಲ ಎಂದು ಅರಿವಾಗಿ ಅದನ್ನು ತೆಗೆಸಲು ಮುಂದಾದರು. ಆಗ ಗರ್ಭಕ್ಕೆ 17 ವಾರವಾಗಿತ್ತು. ವೈದ್ಯರು ಅಬಾರ್ಷನ್ ಮಾಡುವುದಿಲ್ಲ ಎಂದರು. ಭ್ರೂಣದ ಹೃದಯ ಇನ್ನೂ ಬಡಿದುಕೊಳ್ಳುತ್ತಿದೆ ಎಂಬ ಕಾರಣ ನೀಡಿದರು. ಸವಿತಾ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶ ನೀಡುವಂತೆ ಮೇಲ್ಮನವಿ ಮಾಡಬೇಕಾಯಿತು. ಆದರೆ ಅವಕಾಶ ಸಿಗಲಿಲ್ಲ. ಈ ನಡುವೆ ಆಕೆಯಲ್ಲಿ ಸೆಪ್ಸಿಸ್ ಎಂಬ ಸೋಂಕು ರೋಗ ಉಂಟಾಯಿತು. ಅಬಾರ್ಷನ್ ಬಗ್ಗೆ ಚರ್ಚೆ ನಡೆಯುತ್ತಿದ್ದಾಗಲೇ, ಒಂದೇ ವಾರದಲ್ಲಿ ಆಕೆ ಬಹು ಅಂಗವೈಫಲ್ಯದಿಂದ ಮೃತಪಟ್ಟರು.

ಈ ಪ್ರಕರಣ ಐರ್ಲೆಂಡ್ನಲ್ಲಿ ಹಾಗೂ ವಿಶ್ವಾದ್ಯಂತ ಗರ್ಭಪಾತದ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಮಹಿಳಾ ಸಮುದಾಯದಲ್ಲಿ ಆಕ್ರೋಶದ ಅಲೆಯನ್ನು ಎಬ್ಬಿಸಿತು. ಸಾವಿರಾರು ಮಂದಿ ಬೀದಿಗೆ ಇಳಿದರು. ಇದೆಲ್ಲದರಿಂದ ಎಚ್ಚೆತ್ತ ಐರ್ಲೆಂಡ್ ಪ್ರಕರಣದ ಸಮಗ್ರವಾದ ತನಿಖೆ ನಡೆಸಿತು. 2019ರಲ್ಲಿ ತನ್ನ ಸಂವಿಧಾನದಲ್ಲಿ ತಿದ್ದುಪಡಿ ತಂದಿತು. ಅದರ ಪ್ರಕಾರ ಇಂದು 12 ವಾರಗಳವರೆಗಿನ ಗರ್ಭಪಾತ ಸಂಪೂರ್ಣ ಕಾನೂನುಬದ್ಧ ಹಾಗೂ ಕೆಲವು ನಿರ್ಬಂಧಗಳಿಗೆ ಒಳಪಟ್ಟು 24 ವಾರಗಳವರೆಗೆ ಅಬಾರ್ಷನ್ ಮಾಡಿಸಿಕೊಳ್ಳಬಹುದಾಗಿದೆ. ಆದರೆ ಈ ಬದಲಾವಣೆ ಉಂಟಾಗಬೇಕಾದರೆ ಸವಿತA ಎಂಬ ಮುಗ್ಧ ಹೆಣ್ಣುಮಗಳು ಬಲಿಯಾಗಬೇಕಾಯಿತು.

ನಮ್ಮ ನಡುವೆಯೂ ಇಂಥ ಸಾವಿರಾರು ಸವಿತಾಗಳು ಇರಬಹುದು. ಅಬಾರ್ಷನ್ ಎಂಬುದು ಕಾನೂನುಬದ್ಧವಾದಾಗ, ಆ ಕುರಿತು ಮುಜುಗರ ಆತಂಕಗಳು ಇಲ್ಲದೇ ಹೋದಾಗ ಅನೇಕ ಹೆಣ್ಣುಮಕ್ಕಳ ಜೀವ ಉಳಿಯುತ್ತದೆ. ಅಮೆರಿಕದ ಸುಪ್ರೀಂ ಕೋರ್ಟ್ ಇಂದು ತೆಗೆದುಕೊಂಡಿರುವ ನಿರ್ಧಾರ ಮಹಿಳಾ ಹಕ್ಕುಗಳನ್ನು ಮಾತ್ರವಲ್ಲ ಮನುಕುಲವನ್ನೇ ಒಂದು ಹೆಜ್ಜೆ ಹಿಂದಕ್ಕೆ ಎಳೆಯುವ ತೀರ್ಪು ಎಂದು ಹೋರಾಟಗಾರರು, ತಜ್ಞರು ವಾದಿಸುತ್ತಿದ್ದಾರೆ. ಅಮೆರಿಕದ ಮಾದರಿಯನ್ನು ಇತರ ದೇಶಗಳೂ ಅನುಸರಿಸಿದರೆ ನಾವು ಇದುವರೆಗೆ ಹೋರಾಟಗಳ ಮೂಲಕ ಸಾಧಿಸಿರುವ ಸ್ತ್ರೀ ಸಮಾನತೆ, ಆರೋಗ್ಯಕರ ತಾಯ್ತನ ಮುಂತಾದ ಆಶಯಗಳೆಲ್ಲ ಮಣ್ಣುಗೂಡಲಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi : 2019ರಲ್ಲಿ ಬಿಹಾರದ ಒಂದು ಕ್ಷೇತ್ರದಲ್ಲಿ ಸೋತಿದ್ದೆವು; ಈ ಬಾರಿ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದ ಮೋದಿ

Narendra Modi: ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

VISTARANEWS.COM


on

Narendra modi
Koo

ಬೆಂಗಳೂರು: ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ 2019ರ ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಬಿಹಾರದಲ್ಲಿ ಒಂದು ಸ್ಥಾನ ಕಳೆದುಕೊಂಡಿತ್ತು. ಈ ಬಾರಿ ಈ ಬಾರಿ ನಾವು ಒಂದನ್ನೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi ) ಹೇಳಿದ್ದಾರೆ. ಎನ್​ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಎಲ್ಲ ಸೀಟ್​ಗಳನ್ನು ಗೆಲ್ಲುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಮಿತ್ರಪಕ್ಷ ಜೆಡಿಯು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ರೋಡ್ ಶೋ (Modi Patna Road Show) ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆಡಳಿತಾರೂಢ ಮೈತ್ರಿಕೂಟವು 2019 ರ ಲೋಕಸಭಾ ಚುನಾವಣೆಗಿಂತ ರಾಜ್ಯದಲ್ಲಿ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಕಳೆದ ಬಾರಿ ಕಳೆದುಕೊಂಡ ಏಕೈಕ ಕ್ಷೇತ್ರವನ್ನು ಸಹ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

ರಾಜ್ಯ ಮತ್ತು ಅದರ ಜನರೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದೇನೆ. ನಾನು ಹಲವಾರು ಕೆಲಸಕ್ಕಾಗಿ ಆಗಾಗ್ಗೆ ಇಲ್ಲಿಗೆ ಬಂದಿದ್ದೇನೆ. ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದೇನೆ. ನನಗೆ ಇಲ್ಲಿ ಬಹಳ ಹಳೆಯ ಸಂಪರ್ಕಗಳಿವೆ ಎಂಬುದಾಗಿ ಅವರು ಹೇಳಿಕೊಂಡರು.

ಮುಂದುವರಿದ ಪ್ರಧಾನಿ ನರೇಂದ್ರ ಮೋದಿ, ಈ ಬಾರಿ ಪೂರ್ವ ಭಾರತದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತನ್ನು ಭಾರಿ ಪ್ರಮಾಣದಲ್ಲಿ ವಿಸ್ತರಿಸಲಿದೆ. ಇದು ಎನ್​ಡಿಎಯ 400 ಸ್ಥಾನಗಳ ಗಡಿ ಸುಲಭವಾಗಿ ತಲುಪಲು ನೆರವಾಗುತ್ತದೆ ಎಂದು ಹೇಳಿದರು. ಪೂರ್ವ ಭಾರತದಲ್ಲಿ ಬಿಜೆಪಿಯ ಏಳಿಗೆಯ ಬಗ್ಗೆ ಕೇಳಿದಾಗ, ವಲಯವನ್ನು ಬೆಳವಣಿಗೆಯ ಎಂಜಿನ್ ಆಗಿ ಅಭಿವೃದ್ಧಿಪಡಿಸಲು ವಿಶೇಷ ಗಮನ ಹರಿಸುವ ಬಗ್ಗೆ ಪ್ರಧಾನಿ ಮಾತನಾಡಿದರು.

ಇದನ್ನೂ ಓದಿ: Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

ನೀವು ನನ್ನ 2013 ರ ಭಾಷಣವನ್ನು ಆಲಿಸಿದ್ದರೆ ನೆನಪಿರಬಹುದು. ನಾನು ಪ್ರಧಾನಿ ಆಗಿದ್ದ ವೇಳೆ ಭಾರತವನ್ನು ಅಭಿವೃದ್ಧಿಪಡಿಸಲು ಬಯಸಿದ ವೇಳೆ ಪೂರ್ವ ಭಾರತವನ್ನು ಬೆಳವಣಿಗೆಯ ಎಂಜಿನ್ ಆಗಿ ಪರಿವರ್ತಿಸಿದ್ದೆನೆ ಎಂದು ನಾನು ಹೇಳಿದ್ದೆ” ಎಂದು ಅವರು ಪಾಟ್ನಾದಲ್ಲಿ ರೋಡ್ ಶೋ ನಡೆಸುವಾಗ ಹೇಳಿದರು.

ನಾವು ಮೂಲಸೌಕರ್ಯ, ಆರೋಗ್ಯ ಇತ್ಯಾದಿಗಳ ಮೇಲೆ ಗಮನ ಹರಿಸಿದ್ದೇವೆ. ಈ ಸಮೀಕ್ಷೆಯನ್ನು ಪರಿಗಣಿಸಿದರೆ, ಪೂರ್ವ ಭಾರತದ ಚುನಾವಣಾ ಫಲಿತಾಂಶಗಳು ಅದನ್ನು ಪ್ರತಿಬಿಂಬಿಸಲಿವೆ. ಜನರು ಆಶ್ಚರ್ಯಚಕಿತರಾಗಲಿದ್ದಾರೆ. ತೆಲಂಗಾಣ, ಒಡಿಶಾ, ಬಂಗಾಳ, ಬಿಹಾರ, ಜಾರ್ಖಂಡ್, ಅಸ್ಸಾಂನಲ್ಲಿ ಬಿಜೆಪಿ ಹೊಸ ಹುಟ್ಟುಪಡೆಯಲಿಎ ಎಂದು ಹೇಳಿದರು.

Continue Reading

EXPLAINER

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

Dubai Airport: ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

VISTARANEWS.COM


on

Dubai Airport
Koo

ನವದೆಹಲಿ: 2.92 ಲಕ್ಷ ಕೋಟಿ ರೂಪಾಯಿ (35 ಬಿಲಿಯನ್ ಡಾಲರ್) ವೆಚ್ಚದಲ್ಲಿ 400 ಗೇಟ್ ಗಳು ಮತ್ತು ಐದು ಸಮಾನಾಂತರ ರನ್ ವೇಗಳಿರುವ ವಿಶ್ವದ ಅತ್ಯಂತ ದೊಡ್ಡ ಏರ್​ಪೋರ್ಟ್​​ ನಿರ್ಮಾಣ (Dubai Airport) ಮಾಡುವುದಾಗಿ ದುಬೈ ಆಡಳಿತ ಭಾನುವಾರ ಪ್ರಕಟಿಸಿದೆ. ಅದಕ್ಕೆ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಎಂದು ಹೆಸರಿಡುವುದಾಗಿ ಹೇಳಿದೆ.

“ಇಂದು, ನಾವು ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್​ಗಳ ವಿನ್ಯಾಸಗಳನ್ನು ಅನುಮೋದಿಸಿದ್ದೇವೆ. ದುಬೈ ಏವಿಯೇಷನ್ ಕಾರ್ಪೊರೇಷನ್​​ನ ಕಾರ್ಯತಂತ್ರದ ಭಾಗವಾಗಿ 128 ಬಿಲಿಯನ್ ಡಾಲರ್ ವೆಚ್ಚದಲ್ಲಿ ಕಟ್ಟಡದ ನಿರ್ಮಾಣವನ್ನು ಪ್ರಾರಂಭಿಸಿದ್ದೇವೆ” ಎಂದು ದುಬೈ ಆಡಳಿತಗಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಪ್ರಕಟಿಸಿದ್ದಾರೆ.

“ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ. ಮುಂಬರುವ ವರ್ಷಗಳಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಲ್ಲಾ ಕಾರ್ಯಾಚರಣೆಗಳನ್ನು ಅದಕ್ಕೆ ವರ್ಗಾಯಿಸಲಾಗುವುದು” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಈ ವಿಮಾನ ನಿಲ್ದಾಣ ವಿಶ್ವದ ಅತಿ ದೊಡ್ಡ ನಿಲ್ದಾಣವಾಗುವ ವೇಳೆ ಅಲ್ಲಿ ಇರಬಹುದಾದ ಕೆಲವೊಂದು ಸೌಲಭ್ಯಗಳು ಹಾಗೂ ಇನ್ನಿತರ ಮಾಹಿತಿಗಳ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ಆ ಕುರಿತು ಇಲ್ಲಿದೆ ಸಂಕ್ಷಿಪ್ತ ವಿವರ ಇಲ್ಲಿದೆ.

ಸಾಮರ್ಥ್ಯ ಎಷ್ಟು?


ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಹೆಚ್ಚು ಸಾಮರ್ಥ್ಯ ಹೊಂದಿರುವ ವಿಮಾನ ನಿಲ್ದಾಣವಾಗಲಿದೆ. ವಾರ್ಷಿಕವಾಗಿ 2.6 ಕೋಟಿ (260 ಮಿಲಿಯನ್) ಪ್ರಯಾಣಿಕರು ಈ ವಿಮಾನದ ಮೂಲಕ ಪ್ರಯಾಣ ಮಾಡಲಿದ್ದಾರೆ.

ಗಾತ್ರ ಎಷ್ಟು?
ಇದು ಪ್ರಸ್ತುತ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

ಮೂಲಸೌಕರ್ಯ ಹೇಗಿರುತ್ತದೆ?

ವಿಮಾನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣವು 400 ವಿಮಾನ ಗೇಟ್ ಗಳನ್ನು ಹೊಂದಿರುತ್ತದೆ. ಏಕಕಾಲಕ್ಕೆ ಇಲ್ಲಿ ಅಷ್ಟೊಂದು ವಿಮಾನಗಳು ಪ್ರವೇಶಿಸಬಹುದು.

ರನ್ ವೇಗಳು ಎಷ್ಟು?

ವಿಮಾನಗಳ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಇದು ಐದು ಸಮಾನಾಂತರ ರನ್ ವೇಗಳನ್ನು ಹೊಂದಿರುತ್ತದೆ. ಒಂದೇ ಬದಿಯಲ್ಲಿ ಅಷ್ಟೊಂದು ವಿಮಾನಗಳು ಏಕಕಾಲಕ್ಕೆ ಟೇಕ್​ಆಫ್​ ಅಥವಾ ಲ್ಯಾಂಡಿಂಗ್ ಆಗಬಹುದು.

ಹೊಸತೇನು?

ಈ ವಿಮಾನ ನಿಲ್ದಾಣದಲಲಿ ಹೊಸ ವಾಯುಯಾನ ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ ಎಂದು ಅವರು ಹೇಳದಿ್ದಾರೆ. ಇದು ವಾಯುಯಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಎಂದು ಹೇಲಾಗಿದೆ.

ವೆಚ್ಚ ಎಷ್ಟು?

ಈ ಯೋಜನೆಗೆ ಸುಮಾರು 2.9 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ.

ಮುಗಿಯುವುದು ಯಾವಾಗ?

ವರ್ಷಕ್ಕೆ 150 ಮಿಲಿಯನ್ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯವಿರುವ ಮೊದಲ ಹಂತವು 10 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದುವರಿದ ಭಾಗವು ಆ ಬಳಿಕ ಸಾಗಲಿದೆ.

ಇದನ್ನೂ ಓದಿ: Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

ಲಾಜಿಸ್ಟಿಕ್ಸ್ ಮತ್ತು ವಾಯು ಸಾರಿಗೆ ಕ್ಷೇತ್ರಗಳಲ್ಲಿ ವಿಶ್ವದ ಪ್ರಮುಖ ಕಂಪನಿಗಳಿಗೆ ಆತಿಥ್ಯ ವಹಿಸುವ “ದುಬೈ ದಕ್ಷಿಣದ ವಿಮಾನ ನಿಲ್ದಾಣದ ಸುತ್ತಲೂ” ಅವರು ಇಡೀ ನಗರವನ್ನು ನಿರ್ಮಿಸುತ್ತಿದ್ದಾರೆ. ಒಂದು ಮಿಲಿಯನ್ ಜನರಿಗೆ ಉಳಿದುಕೊಳ್ಳುವುದಕ್ಕೂ ಅವಕಾಶ ಮಾಡಿಕೊಡುತ್ತೇವೆ ಎಂದು ಆಡಳಿತಗಾರ ಹೇಳಿದ್ದರೆ.

“ನಾವು ಭವಿಷ್ಯದ ಪೀಳಿಗೆಗಾಗಿ ಹೊಸ ಯೋಜನೆಯನ್ನು ನಿರ್ಮಿಸುತ್ತಿದ್ದೇವೆ ನಮ್ಮ ಮಕ್ಕಳು ಮತ್ತು ಅವರ ಮಕ್ಕಳಿಗೆ ನಿರಂತರ ಮತ್ತು ಸ್ಥಿರ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಿದ್ದೇವೆ. ದುಬೈ ವಿಶ್ವದ ವಿಮಾನ ನಿಲ್ದಾಣ, ಅದರ ಬಂದರು, ಅದರ ನಗರ ಕೇಂದ್ರ ಮತ್ತು ಅದರ ಹೊಸ ಜಾಗತಿಕ ಕೇಂದ್ರವಾಗಲಿದೆ.

Continue Reading

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading
Advertisement
Prajwal Revanna Case
ಕರ್ನಾಟಕ5 hours ago

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

IPL 2024
ಪ್ರಮುಖ ಸುದ್ದಿ5 hours ago

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

Chetan Chandra
ಕರ್ನಾಟಕ6 hours ago

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Virat kohli
Latest6 hours ago

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Sunil Narine
ಪ್ರಮುಖ ಸುದ್ದಿ6 hours ago

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

vijay Rao herur
ಸಿನಿಮಾ6 hours ago

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Virat Kohli
ಪ್ರಮುಖ ಸುದ್ದಿ7 hours ago

Virat kohli: ಕೊಹ್ಲಿಯನ್ನುಔಟ್ ಮಾಡಿ ಕೆಣಕಿದ ಇಶಾಂತ್​ ಶರ್ಮಾ; ವಿಡಿಯೊ ನೋಡಿ

Ravindra Jadeja
ಕ್ರೀಡೆ7 hours ago

Ravindra Jadeja : ವಿಕೆಟ್​ಗೆ ಹೋಗುತ್ತಿದ್ದ ಚೆಂಡು ತಡೆದ ಜಡೇಜಾಗೆ ಔಟ್ ಕೊಟ್ಟ ಅಂಪೈರ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ7 hours ago

Rain News: ಬಾಗಲಕೋಟೆಯಲ್ಲಿ ಸಿಡಿಲಿಗೆ ಬಾಲಕ ಬಲಿ; ಬೆಳಗಾವಿಯ ಮನೆಗಳಿಗೆ ನುಗ್ಗಿದ ಮಳೆ ನೀರು

IPL 2024
ಪ್ರಮುಖ ಸುದ್ದಿ7 hours ago

IPL 2024 : ಅತಿಯಾಗಿ ಸಂಭ್ರಮಿಸುತ್ತಿದ್ದ ಡೆಲ್ಲಿ ಬೌಲರ್​ ರಸಿಕ್ ಸಲಾಮ್​ನನ್ನು ತಳ್ಳಿದ ರಜತ್​ ಪಾಟೀದಾರ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ10 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ11 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ11 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ15 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ16 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ24 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ3 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ3 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌