Viral Video: ಹಾರ್ಸ್‌ ಟ್ರೇಡಿಂಗ್‌ಗೂ ಜಿಎಸ್‌ಟಿ ಎಂದ ನಿರ್ಮಲಾ ಸೀತಾರಾಮನ್‌; ಭರ್ಜರಿ ಟ್ರೋಲ್‌ - Vistara News

ವೈರಲ್ ನ್ಯೂಸ್

Viral Video: ಹಾರ್ಸ್‌ ಟ್ರೇಡಿಂಗ್‌ಗೂ ಜಿಎಸ್‌ಟಿ ಎಂದ ನಿರ್ಮಲಾ ಸೀತಾರಾಮನ್‌; ಭರ್ಜರಿ ಟ್ರೋಲ್‌

ನಿರ್ಮಲಾ ಸೀತಾರಾಮನ್‌ ಜಿಎಸ್‌ಟಿ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಆದ ʼಪದ ಎಡವಟ್ಟುʼ ಕಾಂಗ್ರೆಸ್‌ಗೆ ಗೇಲಿಯ ಅಸ್ತ್ರವಾಗಿದೆ. ಹೌದು, ಕುದುರೆ ವ್ಯಾಪಾರಕ್ಕೂ ತೆರಿಗೆ ಹಾಕಿ ಎನ್ನುತ್ತಿದ್ದಾರೆ ಕಾಂಗ್ರೆಸ್‌ ನಾಯಕರು!

VISTARANEWS.COM


on

Nirmala Sitharaman
ನಿರ್ಮಲಾ ಸೀತಾರಾಮನ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಾತನಾಡುವಾಗ ಬಾಯ್ತಪ್ಪಿ ಹೇಳಿದ ಶಬ್ದವೊಂದನ್ನು ಕಾಂಗ್ರೆಸ್‌ ನಾಯಕರು ವ್ಯಂಗ್ಯ ಮಾಡುತ್ತಿದ್ದಾರೆ. ಸರಕು ಮತ್ತು ಸೇವಾ ತೆರಿಗೆಯ 47ನೇ ಸಭೆಯ ಬಳಿಕ ಮಾಧ್ಯಮಗಳಿಗೆ ಅದರ ಬಗ್ಗೆ ಮಾಹಿತಿ ನೀಡುವಾಗ ನಿರ್ಮಲಾ ಅವರು ಹಾರ್ಸ್‌ ರೇಸಿಂಗ್‌ ಎಂದು ಹೇಳುವ ಬದಲು “ಹಾರ್ಸ್‌ ಟ್ರೇಡಿಂಗ್‌ʼ ಎಂದು ಹೇಳಿ ಟ್ರೋಲ್‌ ಆಗುತ್ತಿದ್ದಾರೆ. ಅಂದಹಾಗೆ, ನಿರ್ಮಲಾ ಸೀತಾರಾಮನ್‌ ಈ ಮಾತುಗಳನ್ನಾಡಿದ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್‌ “”ಕ್ಯಾಸಿನೋ, ಆನ್‌ಲೈನ್‌ ಗೇಮ್‌ಗಳು, ಹಾರ್ಸ್‌ ರೇಸಿಂಗ್‌ ಮತ್ತು ಲಾಟರಿ ಮೇಲೆ ಶೇ.28ರಷ್ಟು ತೆರಿಗೆ ಹೇರುವ ನಿರ್ಧಾರವನ್ನು ಜಿಎಸ್‌ಟಿ ಮಂಡಳಿ ಸದ್ಯಕ್ಕೆ ಜಾರಿಗೊಳಿಸುವುದಿಲ್ಲ. ಈ ಕುರಿತು ಇನ್ನಷ್ಟು ಸಮಾಲೋಚನೆಗಳ ಅಗತ್ಯವಿದ್ದು, ಮುಂದಿನ ದಿನಗಳಲ್ಲಿ ಅದು ಜಾರಿಯಾಗಲಿದೆʼʼ ಎಂದು ಹೇಳಿದರು. ಆದರೆ ಈ ವೇಳೆ ಹಾರ್ಸ್‌ ರೇಸಿಂಗ್‌ ಎಂದು ಹೇಳುವ ಬದಲು ಹಾರ್ಸ್‌ ಟ್ರೇಡಿಂಗ್‌ (ಕುದುರೆ ವ್ಯಾಪಾರ) ಎಂದು ಹೇಳಿ, ನಂತರ ಸರಿಪಡಿಸಿಕೊಂಡರು! ಆದರೆ, ಮಹಾರಾಷ್ಟ್ರದ ಶಿವಸೇನೆ ಶಾಸಕರ ಬಂಡಾಯದ ಹಿನ್ನೆಲೆಯಲ್ಲಿ, ನಿರ್ಮಲಾ ಬಳಸಿದ “ಹಾರ್ಸ್‌ ಟ್ರೇಡಿಂಗ್‌ʼ ಪದ ಗೇಲಿಗೊಳಗಾಗಿದೆ.

ಕೆಪಿಸಿಸಿ ವಕ್ತಾರ ಡಾ. ಶಂಕರ ಗುಹಾ ದ್ವಾರಕಾನಾಥ್‌ ಬೆಳ್ಳೂರ್‌ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ತಮ್ಮ ಸೋಷಿಯಲ್‌ ಮೀಡಿಯಾ ವೇದಿಕೆಗಳಲ್ಲಿ ಈ ವಿಡಿಯೋ ಹಂಚಿಕೊಂಡು ಬಿಜೆಪಿ ಮತ್ತು ನಿರ್ಮಲಾ ಸೀತಾರಾಮನ್‌ ಅವರನ್ನು ಟ್ರೋಲ್‌ ಮಾಡುತ್ತಿದ್ದಾರೆ.

ಹಾರ್ಸ್‌ ಟ್ರೇಡಿಂಗ್‌ ಅಥವಾ ಕುದುರೆ ವ್ಯಾಪಾರ ಎಂಬುದನ್ನು ರಾಜಕೀಯದಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತದೆ. ಅಧಿಕಾರಕ್ಕಾಗಿ ಇನ್ನೊಂದು ಪಕ್ಷದ ಜನಪ್ರತಿನಿಧಿಗಳನ್ನು ಹಣಕೊಟ್ಟು ಖರೀದಿಸುವುದಕ್ಕೆ ಪರ್ಯಾಯವಾಗಿ ಈ ಪದ ಬಳಕೆಯಲ್ಲಿದೆ. ಅದರಲ್ಲೂ ಹಾರ್ಸ್‌ ಟ್ರೇಡಿಂಗ್‌ ಹೆಚ್ಚು ಅನ್ವಯ ಆಗುವುದು ಬಿಜೆಪಿಗೇ ಎಂಬ ಆರೋಪವೂ ಇದೆ! ಈಗಂತೂ ಮಹಾರಾಷ್ಟ್ರದಲ್ಲಿ ಶಿವಸೇನೆಯ 40ಕ್ಕೂ ಶಾಸಕರು ಬಂಡಾಯವೆದ್ದು, ಕೊನೆಗೂ ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಿಯೇ ಬಿಟ್ಟಿದ್ದಾರೆ. ಹೀಗೆ ಮಹಾರಾಷ್ಟ್ರ ಮಹಾ ವಿಕಾಸ್‌ ಅಘಾಡಿ ಸರ್ಕಾರ ಪತನವಾಗುವುದಕ್ಕೂ ಬಿಜೆಪಿ ಕಾರಣ. ಅಲ್ಲಿಯೂ ಅಧಿಕಾರಕ್ಕಾಗಿ ಆ ಪಕ್ಷ ಕುದುರೆ ವ್ಯಾಪಾರ ನಡೆಸಿತು ಎಂಬ ಆರೋಪವಿದೆ. ಇಷ್ಟೆಲ್ಲದರ ಮಧ್ಯೆ ಹಣಕಾಸು ನಿರ್ಮಲಾ ಸೀತಾರಾಮನ್‌ ಹೇಳಿದ ಹಾರ್ಸ್‌ ಟ್ರೇಡಿಂಗ್‌ ಮೇಲೆ ಜಿಎಸ್‌ಟಿ ಹೇರಿಕೆಯ ಮಾತುಗಳು ಕಾಂಗ್ರೆಸ್‌ಗೆ ಸಿಕ್ಕ ಟೀಕಾಸ್ತ್ರವಾಗಿದೆ.

ವಿಡಿಯೋವನ್ನು ಶೇರ್‌ ಮಾಡಿಕೊಂಡ ಕೆಪಿಸಿಸಿ ವಕ್ತಾರ ಡಾ. ಶಂಕರ್‌ ಗುಹಾ “ಕುದುರೆ ವ್ಯಾಪಾರ ಎಂಬುದು ಬಿಜೆಪಿ ಪಾಲಿಗೆ ಅತ್ಯಂತ ಮಹತ್ವದ ಉದ್ಯಮ ಎಂದು ಒಪ್ಪಿಕೊಂಡಿದ್ದಕ್ಕೆ ನಿರ್ಮಲಾ ಸೀತಾರಾಮನ್‌ ಅವರಿಗೆ ಧನ್ಯವಾದಗಳು. ಅದರಂತೆ ಈಗ ಮಹಾರಾಷ್ಟ್ರದಲ್ಲಿ ಜಿಎಸ್‌ಟಿ ಸಂಗ್ರಹವಾಗಿದೆ ಎಂದು ನೀವೊಮ್ಮೆ ಖಚಿತಪಡಿಸಿಕೊಂಡುಬಿಡಿ. ಯಾಕೆಂದರೆ ಅಲ್ಲಿ ಇದರಿಂದ ದೊಡ್ಡ ಮೊತ್ತದ ಹಣ ಸಂಗ್ರಹವಾಗಲಿದೆ!” ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಟ್ವೀಟ್‌ ಮಾಡಿ “”ನಿರ್ಮಲಾ ಸೀತಾರಾಮನ್‌ ಅವರ ಆಲೋಚನಾ ಸಾಮರ್ಥ್ಯ ಬರೀ ಚುನಾವಣೆ, ಮತಗಳಿಕೆಗೆ ಸೀಮಿತವಲ್ಲ ಎಂದು ನನಗೆ ತಿಳಿದಿತ್ತು. ಈಗದನ್ನು ಅವರು ಸಾಕ್ಷೀಕರಿಸಿದ್ದಾರೆ. ನಿರ್ಮಲಾ ಜೀ ಹೇಳಿದಂತೆ ಆಗಬೇಕು. ಹಾರ್ಸ್‌ ಟ್ರೇಡಿಂಗ್‌ ಮೇಲೆ ಕೂಡ ಜಿಎಸ್‌ಟಿ ಹೇರಬೇಕುʼʼ ಎಂದು ಹೇಳಿದ್ದಾರೆ. ಹಾಗೇ ಇನ್ನೊಬ್ಬ ಕಾಂಗ್ರೆಸ್‌ ನಾಯಕ ಡಾ. ವಿನೀತ್‌ ಪುನಿಯಾ ಟ್ವೀಟ್‌ ಮಾಡಿ “”ಕುದುರೆ ವ್ಯಾಪಾರದ ಮೇಲೆ ಜಿಎಸ್‌ಟಿ ಹೇರುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಈ ಬಿಜೆಪಿ ವಿರೋಧಿ ತೆರಿಗೆ ಜಾರಿಗೆ ಪ್ರಧಾನಮಂತ್ರಿ ಮತ್ತು ಗೃಹ ಮಂತ್ರಿ ಅವಕಾಶ ಕೊಡಲಿಕ್ಕಿಲ್ಲʼʼ ಎಂದು ವ್ಯಂಗ್ಯ ಮಾಡಿದ್ದಾರೆ. ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಟ್ವೀಟ್‌ ಮಾಡಿ “ಸತ್ಯ ಹೊರಬಿದ್ದಿತೇ? ಕುದುರೆ ವ್ಯಾಪಾರದ ಮೇಲೆ ಜಿಎಸ್‌ಟಿ!-ದಯವಿಟ್ಟು ಮೊದಲು ಜಾರಿಗೆ ತನ್ನಿʼ ಎಂದಿದ್ದಾರೆ.

ಇದನ್ನೂ ಓದಿ: GST rate hike| ಜಿಎಸ್‌ಟಿ ನಷ್ಟಪರಿಹಾರ ವಿತರಣೆ ತೀರ್ಮಾನ ಇನ್ನೂ ಆಗಿಲ್ಲ ಎಂದ ವಿತ್ತ ಸಚಿವೆ ನಿರ್ಮಲಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

BAN vs NEP: ನೇಪಾಳ ತಂಡದ ಬೌಲಿಂಗ್​ ಇನಿಂಗ್ಸ್​ನ 5ನೇ ಓವರ್​ ನಾಯಕ ರೋಹಿತ್ ಪೌಡೆಲ್ ಎಸೆದರು. ಈ ಓವರ್​ನ 4ನೇ ಎಸೆತಕ್ಕೆ ಬಾಂಗ್ಲಾದೇಶದ ಬ್ಯಾಟರ್​ ತೌಹಿದ್ ಹೃದಯೋಯ್ ಸಿಕ್ಸರ್​ ಬಾರಿಸುವ ಯತ್ನದಲ್ಲಿ ಸಂದೀಪ್ ಲಮಿಚಾನೆಗೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಈ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ನೇಪಾಳದ ಅಭಿಮಾನಿಯೊಬ್ಬ ಸಂತಸದಲ್ಲಿ ಸ್ಟೇಡಿಯಂನ ಮುಂದೆ ಇದ್ದ ಸ್ವಿಮ್ಮಿಂಗ್ ಪೂಲ್​ಗೆ ಜಿಗಿದ್ದಾನೆ.

VISTARANEWS.COM


on

BAN vs NEP
Koo

ಕಿಂಗ್‌ಸ್ಟನ್‌: ಸೋಮವಾರ ನಡೆದ ಟಿ20 ವಿಶ್ವಕಪ್​ನ(T20 World Cup 2024) ಲೀಗ್​ ಪಂದ್ಯದಲ್ಲಿ ನೇಪಾಳ(BAN vs NEP) ತಂಡ ಬಾಂಗ್ಲಾದೇಶ ವಿರುದ್ಧ ಸೋಲು ಕಂಡರೂ ಕೂಡ ಅಭಿಮಾನಿಯೊಬ್ಬ ನೇಪಾಳ ತಂಡಕ್ಕೆ ಬೆಂಬಲ ಸೂಚಿಸಿದ ರೀತಿ ಎಲ್ಲರ ಗಮನಸೆಳೆದಿದೆ. ಬಾಂಗ್ಲಾದೇಶದ ವಿಕೆಟ್​ ಪತನಗೊಂಡ ವೇಳೆ ಈ ಅಭಿಮಾನಿ ಸ್ಟೇಡಿಯಂನಲ್ಲಿದ್ದ ಸ್ವಿಮ್ಮಿಂಗ್ ಪೂಲ್​ಗೆ(Nepal Fan Jumps in Swimming Pool) ಜಿಗಿದು ಸಂಭ್ರಮಿಸಿದ್ದಾನೆ. ಈ ವಿಡಿಯೊವನ್ನು ಐಸಿಸಿ ತನ್ನ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ. ವಿಡಿಯೊ ಎಲ್ಲೆಡೆ ವೈರಲ್​ ಆಗಿದೆ.

ನೇಪಾಳ ತಂಡದ ಬೌಲಿಂಗ್​ ಇನಿಂಗ್ಸ್​ನ 5ನೇ ಓವರ್​ ನಾಯಕ ರೋಹಿತ್ ಪೌಡೆಲ್ ಎಸೆದರು. ಈ ಓವರ್​ನ 4ನೇ ಎಸೆತಕ್ಕೆ ಬಾಂಗ್ಲಾದೇಶದ ಬ್ಯಾಟರ್​ ತೌಹಿದ್ ಹೃದಯೋಯ್ ಸಿಕ್ಸರ್​ ಬಾರಿಸುವ ಯತ್ನದಲ್ಲಿ ಸಂದೀಪ್ ಲಮಿಚಾನೆಗೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಈ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ನೇಪಾಳದ ಅಭಿಮಾನಿಯೊಬ್ಬ ಸಂತಸದಲ್ಲಿ ಸ್ಟೇಡಿಯಂನ ಮುಂದೆ ಇದ್ದ ಸ್ವಿಮ್ಮಿಂಗ್ ಪೂಲ್​ಗೆ ಜಿಗಿದ್ದಾನೆ. ಈ ವಿಡಿಯೊವನ್ನು ಐಸಿಸಿ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುವುದರ ಜತೆಗೆ ಈ ದೃಶ್ಯಕ್ಕೆ ಉತ್ತಮ ಎಸೆತ, ಉತ್ತಮ ಕ್ಯಾಚ್, ಉತ್ತಮ ಪೂಲ್ ಆಚರಣೆ ಎಂದು ಇನ ಬರೆದುಕೊಂಡಿದೆ.


ಇಲ್ಲಿನ ಸೇಂಟ್ ವಿನ್ಸೆಂಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ 19.3 ಓವರ್​ಗಳಲ್ಲಿ ಕೇವಲ 106 ರನ್​ಗೆ ಕುಸಿತ ಕಂಡಿತು. ಈ ಮೊತ್ತವನ್ನು ನೋಡುವಾಗ ಬಾಂಗ್ಲಾ ಸೋಲು ಕಾಣಬಹುದೆಂದು ಊಹಿಸಲಾಯಿತು. ಆದರೆ, ಬಾಂಗ್ಲಾ ಬೌಲರ್​ಗಳು ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ನಡೆಸಿ ನೇಪಾಳವನ್ನು 85 ರನ್​ಗೆ ಕಟ್ಟಿಹಾಕಿ ಅಮೋಘ ಗೆಲುವು ಸಾಧಿಸಿದರು. ಈ ಗೆಲುವಿನೊಂದಿಗೆ ಬಾಂಗ್ಲಾ ಸೂಪರ್​-8 ಹಂತಕ್ಕೂ ಪ್ರವೇಶ ಪಡೆಯಿತು. ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ ತಂಡದ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಇದನ್ನೂ ಓದಿ T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

ಸಣ್ಣ ಮೊತ್ತವನ್ನು ಚೇಸಿಂಗ್​ ನಡೆಸಿದ ನೇಪಾಳ ಆರಂಭಿಕ ಆಘಾತ ಎದುರಿಸಿದರೂ ಕೂಡ ಮಧ್ಯಮ ಕ್ರಮಾಂಕದಲ್ಲಿ ಕುಶಾಲ್ ಮಲ್ಲ ಮತ್ತು ದೀಪೇಂದ್ರ ಸಿಂಗ್ ಐರಿ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದ ಕಾರಣ ತಂಡ ಚೇತರಿಕೆಯ ಹಾದಿಗೆ ಮರಳಿ ಗೆಲುವು ಕಾಣುವ ಸ್ಥಿತಿಯಲ್ಲಿತ್ತು. ಆದರೆ, ಮುಸ್ತಫಿಜುರ್​ ರೆಹಮಾನ್​ ಅವರು ಉಭತ ಆಟಗಾರರ ವಿಕೆಟ್​ ಬೇಟೆಯಾಡಿ ಬಾಂಗ್ಲಾಗೆ ಯಶಸ್ಸು ತಂದುಕೊಟ್ಟರು. ಕುಶಾಲ್ ಮಲ್ಲ 27 ರನ್​ ಬಾರಿಸಿದರೆ, ದೀಪೇಂದ್ರ ಸಿಂಗ್ 25 ರನ್​ ಗಳಿಸಿದರು. ಇವರಿಬ್ಬರ ವಿಕೆಟ್​ ಪತನಗೊಳ್ಳುತ್ತಿದ್ದಂತೆ ನೆಪಾಳ ಸೋಲು ಕೂಡ ಖಚಿತಗೊಂಡಿತು.

ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಮುಸ್ತಫಿಜುರ್ ರೆಹಮಾನ್ 7 ರನ್​ಗೆ 3 ವಿಕೆಟ್​ ಪಡೆದರು. ನಾಯಕ ಶಕೀಬ್​ 2 ವಿಕೆಟ್​ ಕಿತ್ತು ಮಿಂಚಿದರು. ಮುಂದಿನ ಪಂದ್ಯದಲ್ಲಿ ಶಕೀಬ್​ ಮೊದಲ ಎಸೆತದಲ್ಲೇ ವಿಕೆಟ್​ ಕಿತ್ತರೆ ಬ್ರೋಕನ್​ ಹ್ಯಾಟ್ರಿಕ್​ ವಿಕೆಟ್​ ಕಿತ್ತ ದಾಖಲೆ ಮಾಡಲಿದ್ದಾರೆ.

Continue Reading

ವಿದೇಶ

Goat With Plastic Teeth: ಬಕ್ರೀದ್‌ಗೆ ಪ್ಲಾಸ್ಟಿಕ್‌ ಹಲ್ಲಿರುವ ಮೇಕೆ ಮಾರಲು ಯತ್ನಿಸಿದ ಪಾಕಿಸ್ತಾನಿ!

Goat With Plastic Teeth: ನೆರೆಯ ಪಾಕಿಸ್ತಾನದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಬಲಿ ಕೊಡಲು ಪ್ಲಾಸ್ಟಿಕ್‌ ಹಲ್ಲು ಹೊಂದಿರುವ ಮೇಕೆಯನ್ನು ಮಾರಾಟ ಮಾಡಿದ ವ್ಯಾಪಾರಿಯನ್ನು ಬಂಧಿಸಲಾಗಿದೆ. ಪಾಕಿಸ್ತಾನದ ಗುಲ್ಬರ್ಗ್ ಚೌರಂಗಿ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗ್ರಾಹಕರೊಬ್ಬರು ಆಡುಗಳ ಪೈಕಿ ಒಂದರಿಂದ ಪ್ಲಾಸ್ಟಿಕ್ ಹಲ್ಲುಗಳನ್ನು ತೆಗೆದು ಹಾಕುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Goat With Plastic Teeth
Koo

ಇಸ್ಲಾಮಾಬಾದ್‌: ನೆರೆಯ ಪಾಕಿಸ್ತಾನದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಪ್ಲಾಸ್ಟಿಕ್‌ ಹಲ್ಲು ಹೊಂದಿರುವ ಮೇಕೆಯನ್ನು (Goat With Plastic Teeth) ಮಾರಾಟ ಮಾಡಿದ ವ್ಯಾಪಾರಿಯನ್ನು ಬಂಧಿಸಲಾಗಿದೆ. ಬಕ್ರೀದ್‌ ಹಿನ್ನೆಲೆಯಲ್ಲಿ ದೇಶಾದ್ಯಂತ ಮೇಕೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಮೇಕೆಯನ್ನು ಬಲಿ ಕೊಡಲು ಬಳಸಲಾಗುತ್ತದೆ. ಇದೇ ವೇಳೆ ಈ ವ್ಯಾಪಾರಿ ಬಲಿ ಕೊಡಲು ಪ್ಲಾಸ್ಟಿಕ್‌ ಹಲ್ಲು ಹೊಂದಿರುವ ಮೇಕೆಯನ್ನು ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದಾನೆ (Viral News).

ಪಾಕಿಸ್ತಾನದ ಗುಲ್ಬರ್ಗ್ ಚೌರಂಗಿ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗ್ರಾಹಕರೊಬ್ಬರು ಆಡುಗಳ ಪೈಕಿ ಒಂದರಿಂದ ಪ್ಲಾಸ್ಟಿಕ್ ಹಲ್ಲುಗಳನ್ನು ತೆಗೆದು ಹಾಕುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಧಿತ ವ್ಯಾಪಾರಿ ಹೈದರಾಬಾದ್ ಮತ್ತು ಕರಾಚಿ ಮೂಲದವನಾಗಿದ್ದು, ಪೊಲೀಸ್‌ ವಿಚಾರಣೆ ವೇಳೆ ಬಕ್ರೀದ್‌ಗೆ ಬಲಿ ಕೊಡಲಿರುವ ಮೇಕೆಗಳ ಮಾರಾಟದಲ್ಲಿ ಮೋಸ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ತನಿಖೆಯ ಭಾಗವಾಗಿ ಪೊಲೀಸರು ಏಳು ಹೆಚ್ಚುವರಿ ಮೇಕೆಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ಹೇಳಿದ್ದೇನು?

”ಕೃತಕ ಹಲ್ಲುಗಳನ್ನು ಹೊಂದಿರುವ ಮೇಕೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ನಮ್ಮ ಗಮನಕ್ಕೆ ಬಂದಿತ್ತು. ವಿಚಾರಣೆ ನಡೆಸಿದಾಗ ಬಲಿ ಕೊಡುವ ಉದ್ದೇಶಕ್ಕಾಗಿ ಈ ಮೇಕೆಯನ್ನು ಮಾರಾಟ ಮಾಡಲಾಗಿದೆ ಎನ್ನುವ ಅಂಶ ತಿಳಿದು ಬಂತು. ಕೂಡಲೇ ಕ್ರಮ ಕೈಗೊಂಡ ಮೋಸ ಎಸಗಿದ ವ್ಯಾಪಾರಿಯನ್ನು ವಸಕ್ಕೆ ಪಡೆದಿದ್ದೇವೆʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಚಾರಣೆ ವೇಳೆ ಆತ ತಾನು ಹೈದರಾಬಾದ್‌ ಮೂಲದವನೆಂದೂ ಬಕ್ರೀದ್‌ ಸಂದರ್ಭದಲ್ಲಿ ತನ್ನಲ್ಲಿರುವ ಮೇಕೆಗಳನ್ನು ಮಾರಾಟ ಮಾಡಲು ಕರಾಚಿಗೆ ತೆರಳಿದ್ದಾಗಿ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ. ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಪಾಕಿಸ್ತಾನದಲ್ಲಿ ಜೂನ್‌ 17ರಂದು ಬಕ್ರೀದ್‌ ಆಚರಿಸಲಾಗುತ್ತಿದೆ. ಜೂನ್ 7 ರಂದು ಜಿಲ್ಲಾ ಹಜ್ ಚಂದ್ರನ ದರ್ಶನದ ನಂತರ ಜೂನ್ 17ರಂದು ನಿಗದಿಯಾಗಿರುವ ಬಕ್ರೀದ್‌ ಮುಸ್ಲಿಮರ ಮಹತ್ವದ ಧಾರ್ಮಿಕ ಹಬ್ಬವಾಗಿದ್ದು, ಪ್ರಾಣಿಗಳನ್ನು ಬಲಿ ನೀಡುವ ಮೂಲಕ ಪ್ರವಾದಿ ಇಬ್ರಾಹಿಂ ದೇವರನ್ನು ಸ್ಮರಿಸಲಾಗುತ್ತದೆ. ಬಳಿಕ ಬಲಿ ಕೊಟ್ಟ ಪ್ರಾಣಿಯ ಮಾಂಸವನ್ನು ಸಾಂಪ್ರದಾಯಿಕವಾಗಿ ಹಂಚಿಕೊಳ್ಳಲಾಗುತ್ತದೆ. ಹೀಗಾಗಿ ಬಲಿ ಕೊಡಲು ಮೇಕೆಗಳಿಗೆ ಬೇಡಿಕೆ ಹೆಚ್ಚಿದೆ. ಬಲಿ ಕೊಡಲು ಪರಿಶುದ್ಧ ಮೇಕೆಯನ್ನೇ ಆಯ್ಕೆ ಮಾಡಿಕೊಳ್ಳಬೇಕೆಂಬ ನಿಯಮವಿದ್ದು, ಈತ ಲಾಭ ಮಾಡುವ ಉದ್ದೇಶದಿಂದ ಪ್ಲಾಸ್ಟಿಕ್‌ ಹಲ್ಲು ಹೊಂದಿರುವ ಮೇಕೆಯನ್ನು ಮಾರಾಟ ಮಾಡಿದ್ದ.

ಇದನ್ನೂ ಓದಿ: Donkey Population In Pak: ಹೆಚ್ಚುಹೆಚ್ಚು ಕತ್ತೆಗಳನ್ನು ಸಾಕಿ, ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಿ; ಪಾಕ್‌ಗೆ ಚೀನಾ ಸಲಹೆ!

ಕತ್ತೆಗಳ ಸಂಖ್ಯೆ ಹೆಚ್ಚಳ

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಪಾಕಿಸ್ತಾನದಲ್ಲಿ ಕಳೆದ ಒಂದು ವರ್ಷದಲ್ಲಿ ಕತ್ತೆಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಇದು ದೇಶದ ಕೃಷಿ ಚಟುವಟಿಕೆಗಳಲ್ಲಿ ಆಶಾದಾಯಕ ಬೆಳವಣಿಗೆಯನ್ನು ತೋರಿಸಿದೆ. ಕತ್ತೆಗಳ ಸಂಖ್ಯೆಯು 2022-23ರ ಆರ್ಥಿಕ ವರ್ಷದಲ್ಲಿ 5.9 ಮಿಲಿಯನ್‌ ತಲುಪಿದ್ದು, ಹಿಂದಿನ ಅವಧಿಯಲ್ಲಿ 5.7 ಮಿಲಿಯನ್‌ ನಷ್ಟಿತ್ತು. ಒಂದು ವರ್ಷದಲ್ಲಿ ಕತ್ತೆಗಳ ಸಂಖ್ಯೆ ಸರಿಸುಮಾರು ಎರಡು ಲಕ್ಷ ಹೆಚ್ಚಳವಾಗಿದೆ.

Continue Reading

ವೈರಲ್ ನ್ಯೂಸ್

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Viral News: ನೀವು ಐಸ್‌ಕ್ರೀಂ ಪ್ರಿಯರೆ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇ ಬೇಕು. ಉತ್ತರ ಪ್ರದೇಶದ ಮಹಿಳೆಯೊಬ್ಬರು ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿ ತರಿಸಿದ ಐಸ್‌ಕ್ರೀಂನಲ್ಲಿ ಜರಿಹುಳ ಪತ್ತೆಯಾಗಿದೆ. ಸದ್ಯ ಈ ಫೋಟೊ, ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕೆಲವು ದಿನಗಳ ಹಿಂದೆ ಮುಂಬೈಯ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತರಿಸಿದ ಐಸ್‌ಕ್ರೀಂನಲ್ಲಿ ಮನುಷ್ಯನ ಕೈ ಬೆರಳು ಪತ್ತೆಯಾಗಿತ್ತು. ಆ ಘಟನೆ ಮರೆಯಾಗುವ ಮುನ್ನವೇ ಈ ಬೆಳವಣಿಗೆ ನಡೆದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆಯ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ.

VISTARANEWS.COM


on

Viral News
Koo

ಲಕ್ನೋ: ಇತ್ತೀಚೆಗೆ ಮುಂಬೈಯ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತರಿಸಿದ ಐಸ್‌ಕ್ರೀಂನಲ್ಲಿ ಮನುಷ್ಯನ ಕೈ ಬೆರಳು ಪತ್ತೆಯಾಗಿತ್ತು. ಈ ಶಾಕ್‌ನಿಂದ ಜನರು ಇನ್ನೂ ಹೊರ ಬಂದಿಲ್ಲ. ಅದಕ್ಕಿಂತ ಮೊದಲೇ ಇನ್ನೊಂದು ಅಂತಹ ಅವಾಂತರ ಎದುರಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಮಹಿಳೆಯೊಬ್ಬರು ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿ ತರಿಸಿದ ಪ್ರತಿಷ್ಠಿತ ಬ್ರ್ಯಾಂಡ್‌ನ ಐಸ್‌ಕ್ರೀಂನಲ್ಲಿ ಜರಿಹುಳ (Centipede) ಕಂಡು ಬಂದಿದೆ. ಸದ್ಯ ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ (Viral News).

ಉತ್ತರ ಪ್ರದೇಶದ ನೋಯ್ಡಾ ಸೆಕ್ಟರ್‌ 12ರಲ್ಲಿ ವಾಸವಾಗಿರುವ ದೀಪಾ ದೇವಿ ಎನ್ನುವ ಮಹಿಳೆ ತನ್ನ 5 ವರ್ಷದ ಮಗನಿಗೆ ಮಾವಿನ ಹಣ್ಣಿನ ಮಿಲ್ಕ್‌ ಶೇಕ್‌ ಮಾಡಿಕೊಡಲು ಆನ್‌ಲೈನ್‌ ಆ್ಯಪ್‌ ಮೂಲಕ ವೆನಿಲ್ಲಾ ಪ್ಲೇವರ್‌ನ ಐಸ್‌ಕ್ರೀಂ ಆರ್ಡರ್‌ ಮಾಡಿದ್ದರು. ಕೆಲಚೇ ಹೊತ್ತಲ್ಲಿ ಪಾರ್ಸಲ್‌ ಏನೋ ಆಕೆಯ ಕೈ ಸೇರಿತು. ಆದರೆ ಬಾಕ್ಸ್‌ ಓಪನ್‌ ಮಾಡಿದಾಗ ಅವರಿಗೆ ಆಘಾತ ಎದುರಾಗಿತ್ತು. ಬಾಕ್ಸ್‌ನ ಮುಚ್ಚಳ ತೆರೆಯುತ್ತಿದ್ದಂತೆ ಐಸ್‌ಕ್ರೀಂನಲ್ಲಿ ಹುದುಗಿದ್ದ ಜರಿಹುಳ ಕಂಡು ಅವರು ಬೆಚ್ಚಿ ಬಿದ್ದಿದ್ದಾರೆ. ಐಸ್‌ಕ್ರೀಂ ಬಂದ ಖುಷಿ ಜರ್ರನೆ ಕರಗಿ ಹೋಗಿತ್ತು.

ವಿಡಿಯೊ ವೈರಲ್‌

ಐಸ್‌ಕ್ರೀಂ ಬಾಕ್ಸ್‌ ಮತ್ತು ಅದರಲ್ಲಿನ ಹುಳವನ್ನು ತೋರಿಸುವ ವಿಡಿಯೊ ವೈರಲ್‌ ಆಗಿದೆ. ವಿಡಿಯೊದಲ್ಲಿ ದೀಪ ದೇವಿ ಅವರು ಬಾಕ್ಸ್‌ ಮುಚ್ಚಳ ತೆರೆಯುತ್ತಿದ್ದಂತೆ ಅದರಲ್ಲಿ ಹುಳ ಇರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ. ಸದ್ಯ ಈ ಘಟನೆ ಆಹಾರ ಸುರಕ್ಷತೆಯ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ. ದೇಶಾದ್ಯಂತ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ. ಹುಳ ಪತ್ತೆಯಾಗಿರುವ ಕುರಿತು ದೀಪಾ ದೇವಿ ಅವರು ಡೆಲಿವರಿ ಮಾಡಿರುವ ಆ್ಯಪ್‌ಗೆ ದೂರು ನೀಡಿದ್ದು, ಕೂಡಲೇ ಅವರು ಹಣವನ್ನು ಹಿಂದಿರುಗಿಸಿದ್ದಾರೆ. ಜತೆಗೆ ಐಸ್‌ಕ್ರೀಂ ಕಂಪನಿಗೆ ಮಾಹಿತಿ ರವಾನಿಸಿದ್ದಾರೆ.

ಈ ವಿಷಯ ಹೊರ ಬೀಳುತ್ತಿದ್ದಂತೆ ಕ್ರಮಕ್ಕೆ ಮುಂದಾದ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಸೆಕ್ಟರ್ -22 ರಲ್ಲಿರುವ ಆ್ಯಪ್‌ ಸ್ಟೋರ್‌ಗೆ ಭೇಟಿ ನೀಡಿ ಆ ಬ್ಯಾಚ್ ಐಸ್‌ಕ್ರೀಂ ಮಾರಾಟವನ್ನು ನಿಲ್ಲಿಸಿದೆ. ಜತೆಗೆ ಐಸ್‌ಕ್ರೀಂ ತಯಾರಿಕಾ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಈ ಬಗ್ಗೆ ಭಾನುವಾರ ಪ್ರಕರಣ ದಾಖಲಾಗಿದೆ. ಇನ್ನು ಐಸ್‌ಕ್ರೀಂನಲ್ಲಿ ಏನೇನು ಪತ್ತೆಯಾಗುತ್ತವೋ ಎಂದು ನೆಟ್ಟಿಗರು ಆತಂಕಗೊಂಡಿದ್ದಾರೆ.

ಇದನ್ನೂ ಓದಿ: Italian Parliament: ಇಟಲಿ ಪಾರ್ಲಿಮೆಂಟ್‌ನಲ್ಲಿ ಸಂಸದರ ಮಾರಾಮಾರಿ! ವಿಡಿಯೊ ನೋಡಿ

ಮಾನವನ ಬೆರಳು ಪತ್ತೆ

ಕೆಲವು ದಿನಗಳ ಹಿಂದೆ ಮುಂಬೈಯಲ್ಲಿ ಐಸ್‌ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು. ಮುಂಬೈಯ ಮಲಾಡ್ ಪ್ರದೇಶದ ಮಹಿಳೆಯೊಬ್ಬಳು ದಿನಸಿ ವಸ್ತುಗಳ ಜತೆಗೆ ತನ್ನ ಸಹೋದರನಿಗಾಗಿ ಮೂರು ಬಟರ್ ಸ್ಕಾಚ್ ಕೋನ್ ಐಸ್‌ಕ್ರೀಂ ಅನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದರು. ಮನೆಗೆ ಬಂದ ಐಸ್‌ಕ್ರೀಂ ಅನ್ನು ಸಹೋದರ ಬಿಚ್ಚಿ ತಿನ್ನುವಾಗ ನಾಲಿಗೆಗೆ ಏನೋ ತಗುಲಿದ ಹಾಗೆ ಆಗಿತ್ತು. ಆಗ ಆತ ಸೂಕ್ಷ್ಮವಾಗಿ ನೋಡಿದಾಗ ಮನುಷ್ಯನ ಕೈ ಬೆರಳು ಕಂಡು ಬಂದಿತ್ತು. ಅದು ಸುಮಾರು 2 ಸೆಂಟಿಮೀಟರ್ ಉದ್ದವಿತ್ತು. ಮಹಿಳೆಯ ಸಹೋದರ ವೈದ್ಯನಾಗಿದ್ದ ಕಾರಣ ಆತ ಅದು ಮನುಷ್ಯನ ಕೈ ಬೆರಳು ಎಂದು ಕೂಡಲೇ ಪತ್ತೆ ಹಚ್ಚಿದ್ದ. ಈ ಸುದ್ದಿ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

Continue Reading

ವೈರಲ್ ನ್ಯೂಸ್

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Shivraj Chouhan: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆಯ್ಕೆಯಾಗಿದ್ದಾರೆ. ದೆಹಲಿಯಿಂದ ಅವರು ಭೋಪಾಲ್‌ಗೆ ರೈಲಿನಲ್ಲಿ ತೆರಳಿದ್ದು, ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಜನ ಸಾಮಾನ್ಯರೊಂದಿಗೆ ಬೆರೆತು ಪ್ರಯಾಣ ಬೆಳೆಸಿದ ಅವರ ಸರಳತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಶಿವರಾಜ್ ಸಿಂಗ್ ಚೌಹಾಣ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ಅವರ ವಿರುದ್ಧ ಬರೋಬ್ಬರಿ 8.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

VISTARANEWS.COM


on

Shivraj Chouhan
Koo

ಭೋಪಾಲ್‌: ಕೇಂದ್ರ ಸಚಿವ, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Chouhan) ರೈಲಿನಲ್ಲಿ ಸಾಮಾನ್ಯರಂತೆ ಪ್ರಯಾಣ ಬೆಳೆಸಿರುವ ವಿಡಿಯೊ ಸದ್ಯ ವೈರಲ್‌ ಆಗಿದೆ. ಕೇಂದ್ರ ಸಚಿವರ ಸರಳತೆಗೆ ಮೆಚ್ಚುಗೆ ವ್ಯಕ್ತವಾಗಿದೆ (Viral News). ಲೋಕಸಭಾ ಚುನಾವಣೆಯಲ್ಲಿ ತಮ್ಮ ತವರು ಕ್ಷೇತ್ರ ವಿದಿಶಾದಿಂದ ಜಯಗಳಿಸಿರುವ ಅವರು ದೆಹಲಿಯಿಂದ ಭೋಪಾಲ್‌ಗೆ ರೈಲಿನಲ್ಲಿ ತೆರಳಿದರು.

ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ತಮ್ಮ ಪತ್ನಿಯೊಂದಿಗೆ ದೆಹಲಿಯಿಂದ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಸಂಚರಿಸಿದ್ದು, ಪ್ರಯಾಣದ ವೇಳೆ ರೈಲಿನಲ್ಲಿದ್ದ ಸಹಯಾತ್ರಿಕರೊಂದಿಗೆ ನಗು ನಗುತ್ತಾ ಮಾತನಾಡಿದರು. ಚಿಕ್ಕ ಮಕ್ಕಳನ್ನು ಎತ್ತಿ ಮುದ್ದಾಡಿ, ಫೋಟೊಗಳಿಗೆ ಪೋಸ್ ನೀಡಿದರು. ಕೆಲವರು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸುತ್ತಿರುವುದು ಸಹ ಕಂಡುಬಂತು.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ರೈಲು ಪ್ರಯಾಣದ ಚಿತ್ರಗಳನ್ನು ಹಂಚಿಕೊಂಡಿರುವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು, ಭಾರತೀಯ ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.

ʼʼಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಮುಂದಾಳತ್ವದಲ್ಲಿ ಭಾರತೀಯ ರೈಲ್ವೆ ನಿರ್ವಹಣೆ ಮತ್ತು ಕಾರ್ಯಾಚರಣೆಯ ಎಲ್ಲ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಿಗೆ ಸಾಕ್ಷಿಯಾಗಿದೆ. ನವ ಭಾರತದ ವೇಗದ ಅಗತ್ಯಗಳನ್ನು ಪೂರೈಸಲು ಮತ್ತು ಪ್ರಯಾಣವನ್ನು ಸುರಕ್ಷಿತ ಮತ್ತು ಆರಾಮದಾಯಕವಾಗಿಸಲು ಭಾರತೀಯ ರೈಲ್ವೆ ನಿರಂತರವಾಗಿ ಕೆಲಸ ಮಾಡುತ್ತಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಕಳೆದ ವರ್ಷ ನಡೆದ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನ ಪಾತ್ರ ವಹಿಸಿದ್ದರು. ಮುಖ್ಯಮಂತ್ರಿಯಾಗಿ ಹಲವು ಜನಪರ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ ಖ್ಯಾತಿ ಅವರದ್ದು. ಸದ್ಯ ಶಿವರಾಜ್ ಸಿಂಗ್ ಚೌಹಾಣ್ ಅವರು ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಆಯ್ಕೆಯಾಗಿದ್ದಾರೆ. ಬುಡಕಟ್ಟು ನಾಯಕ ಅರ್ಜುನ್ ಮುಂಡಾ ಅವರ ಬದಲಿಗೆ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಹೊಣೆ ಹೊತ್ತಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ಅವರ ವಿರುದ್ಧ ಬರೋಬ್ಬರಿ 8.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ಇದನ್ನೂ ಓದಿ: MP Urinating Case: ಮೂತ್ರ ವಿಸರ್ಜನೆ ಕೇಸ್;‌ ಆದಿವಾಸಿ ವ್ಯಕ್ತಿಯ ಕಾಲು ತೊಳೆದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್;‌ ವಿಡಿಯೊ ವೈರಲ್

ಶಿವರಾಜ್ ಸಿಂಗ್ ಚೌಹಾಣ್‌ಗೆ ಸಿಗದ ಸಿಎಂ ಹುದ್ದೆ; ಬಿಕ್ಕಿ ಬಿಕ್ಕಿ ಅತ್ತ ಮಹಿಳೆಯರು!

ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಮರಳಿದ್ದರೂ ಮುಖ್ಯಮಂತ್ರಿಯಾಗಿ ಹೊಸ ಮುಖ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿತ್ತು. ನಿರ್ಗಮಿತ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಪಾಲ ಮುಂಗುಭಾಯ್ ಪಟೇಲ್ ಅವರಿಗೆ ರಾಜೀನಾಮೆ ಸಲ್ಲಿಸಿ ಹೊರ ಬಂದಾಗ ಮಹಿಳಾ ಅಭಿಮಾನಿಗಳು ಅವರನ್ನು ಭೇಟಿ ಮಾಡಿ ತಮ್ಮ ದುಃಖ ವ್ಯಕ್ತಪಡಿಸಿದ್ದರು. ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅಪ್ಪಿಕೊಂಡ ಮಹಿಳೆಯರು ಬಿಕ್ಕಿ ಬಿಕ್ಕಿ ಅತ್ತಿರುವ ವಿಡಿಯೊ ವೈರಲ್ ಆಗಿತ್ತು.

Continue Reading
Advertisement
Encounter In Bandipora
ದೇಶ15 mins ago

Encounter In Bandipora: ಬಂಡಿಪೋರಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

BAN vs NEP
ಕ್ರೀಡೆ17 mins ago

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

BS Yediyurappa pocso case
ಪ್ರಮುಖ ಸುದ್ದಿ33 mins ago

BS Yediyurappa: ಇಂದು ಸಿಐಡಿ ಮುಂದೆ ಹಾಜರಾಗಲಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

Kiccha Sudeep Replies To Darshan Ban Matter Entertainment
ಸ್ಯಾಂಡಲ್ ವುಡ್42 mins ago

Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

T20 World Cup 2024
ಕ್ರೀಡೆ44 mins ago

T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

Nikhil Gupta
ವಿದೇಶ49 mins ago

Nikhil Gupta: ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಸಂಚು ಆರೋಪ; ಜೆಕ್‌ ಗಣರಾಜ್ಯದಿಂದ ನಿಖಿಲ್‌ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

BAN vs NEP
ಕ್ರೀಡೆ1 hour ago

BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

Actor Darshan of many acquaintance unknown of darshan
ಸ್ಯಾಂಡಲ್ ವುಡ್1 hour ago

Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

Lok Sabha Election Result
Lok Sabha Election 20241 hour ago

Rajat Sharma: ಕಾಂಗ್ರೆಸ್ ನಾಯಕರ ವಿರುದ್ಧ ಖ್ಯಾತ ಪತ್ರಕರ್ತ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇಕೆ?

Flesh-Eating Bacteria
ಆರೋಗ್ಯ2 hours ago

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ16 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ17 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ22 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌