Plastic Ban | ಬೆಂಗಳೂರಿನಲ್ಲಿ ಏಕ ಬಳಕೆ ಪ್ಲಾಸ್ಟಿಕ್‌ ನಿಯಂತ್ರಣಕ್ಕೆ ಫೀಲ್ಡಿಗಿಳಿದ ಮಾರ್ಷಲ್ಸ್‌ - Vistara News

ಪರಿಸರ

Plastic Ban | ಬೆಂಗಳೂರಿನಲ್ಲಿ ಏಕ ಬಳಕೆ ಪ್ಲಾಸ್ಟಿಕ್‌ ನಿಯಂತ್ರಣಕ್ಕೆ ಫೀಲ್ಡಿಗಿಳಿದ ಮಾರ್ಷಲ್ಸ್‌

ಜುಲೈ 1 ರಿಂದ ಏಕ ಬಳಕೆ ಪ್ಲಾಸ್ಟಿಕ್‌ ನಿಷೇಧಿಸಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಬಿಬಿಎಂಪಿ ನಿರ್ಧರಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ನಿಷೇಧಿತ ಪ್ಲಾಸ್ಟಿಕ್ ಸೀಜ್ ಮಾಡಲು ಮಾರ್ಷಲ್ ಗಳು ರಸ್ತೆಗಿಳಿದಿದ್ದಾರೆ.

VISTARANEWS.COM


on

plastic ban
ಬಿಬಿಎಂಪಿ ಮಾರ್ಷಲ್‌ಗಳಿಂದ ದಂಡ ಪ್ರಯೋಗ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಅರಣ್ಯ ಮತ್ತು ಹವಾಮಾನ ಬದಲಾವಣೆ ನಿಯಂತ್ರಣ ಸಚಿವಾಲಯವು ಏಕ ಬಳಕೆ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ನಿಷೇಧಿಸಿದ ಹೊರಡಿಸಿದ್ದ ಆದೇಶವು ಜು.೧ ರಿಂದ ದೇಶಾದ್ಯಂತ ಜಾರಿಗೆ ಬಂದಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪರಿಸರ ಹೋರಾಟಗಾರರು, ಪ್ಲಾಸ್ಟಿಕ್‌ ವಿರೋಧಿಗಳು ಕೇಂದ್ರದ ಈ ಕ್ರಮವನ್ನು ಸ್ವಾಗತಿಸಿದ್ದಾರೆ. ಆದರೆ ಕೆಲ ಪ್ಲಾಸ್ಟಿಕ್‌ ಸಾಮಗ್ರಿಗಳ ನಿಷೇಧದಿಂದ ದುಬಾರಿ ಬೆಲೆ ತೆತ್ತು ಪರ್ಯಾಯ ಸಾಮಗ್ರಿಗಳನ್ನು ಕೊಳ್ಳಬೇಕಾಗದುತ್ತದೆ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸಿದ್ದಾರೆ.

ಪರಿಸರಕ್ಕೆ ಕಂಟಕವಾಗಿರುವ ಪ್ಲಾಸ್ಟಿಕ್‌ ಬಳಕೆಯನ್ನು 2016ರಲ್ಲೇ ನಿಷೇಧಿಸಲಾಗಿತ್ತು. ಆದರೆ ಇದರ ಜಾರಿಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿರಲಿಲ್ಲ. ಇದೀಗ ಜುಲೈ 1ರಿಂದ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ ಬಳಸಿದರೆ ಅಂತಹವರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ. ಹೀಗಾಗಿ ಇದರ ಬಿಸಿ ಎಲ್ಲರಿಗೂ ತಟ್ಟಿದೆ.

ಇದನ್ನೂ ಓದಿ | Plastic Ban |‌ ರಾಜ್ಯದಲ್ಲಿ ಜುಲೈ 1ರಿಂದ ಏಕ ಬಳಕೆ ಪ್ಲಾಸ್ಟಿಕ್‌ ನಿಷೇಧ

ಹೊಸ ನಿಯಮ ಕಟ್ಟುನಿಟ್ಟಾಗಿ ಜಾರಿಯಾಗುತ್ತಿದ್ದಂತೆ ಬಿಬಿಎಂಪಿ ಮಾರ್ಷಲ್‌ಗಳು ಫೀಲ್ಡ್‌ ಗಿಳಿದು ದಾಳಿ ನಡೆಸಿದರು. ಪ್ರಮುಖವಾಗಿ ಶಾಪಿಂಗ್‌ ಏರಿಯಾವಾಗಿರುವ ಕೆ.ಆರ್.ಮಾರುಕಟ್ಟೆ, ಅವಿನ್ಯೂ ರೋಡ್ ಗಳಲ್ಲಿ ಮಾರ್ಷಲ್‌ಗಳು ಕಾರ್ಯಚರಣೆ ನಡೆಸಿದರು. ಹೋಲ್ ಸೆಲ್ ಮಳಿಗೆ, ರಸ್ತೆ ಬದಿ ವ್ಯಾಪಾರಿಗಳ ಮೇಲೂ ದಾಳಿ ನಡೆಸಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಕ್ಕೆ ಪಡೆಯಲಾಯಿತು.

ಈ ಪ್ಲಾಸ್ಟಿಕ್‌ ಬಳಸುತ್ತಿದ್ದರೆ ನಿಲ್ಲಿಸಿ ಬಿಡಿ?
ಸರ್ಕಾರದ ಆದೇಶದ ಪ್ರಕಾರ ಯಾವುದೇ ವ್ಯಕ್ತಿಯಾಗಲಿ, ಚಿಲ್ಲರೆ ವ್ಯಾಪಾರಿ ಅಥವಾ ಮಾರಾಟಗಾರರು ಏಕ ಬಳಕೆಯ ಯಾವುದೇ ರೀತಿಯ ಪ್ಲಾಸ್ಟಿಕ್ ಬಳಸುವಂತಿಲ್ಲ. ಪ್ರಮುಖವಾಗಿ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಸ್ಟ್ರಾ ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಡ್ ಮತ್ತು ಊಟದ ಟೇಬಲ್‌ ಮೇಲೆ ಹಾಕುವ ಪ್ಲಾಸ್ಟಿಕ್‌ ಹಾಳೆ, ಥರ್ಮೋಕೋಲ್, ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‌ನಿಂದ ತಯಾರಾದಂತಹ ವಸ್ತುಗಳ ಬಳಕೆಯನ್ನು ನಿಷೇಧಿಸಲಾಗಿದೆ. ಈ ನಿಷೇಧಿತ ಪ್ಲಾಸ್ಟಿಕ್‌ ಅನ್ನು ನೀವು ಏನಾದರೂ ಬಳಸುತ್ತಿದ್ದರೆ ನಿಲ್ಲಿಸಿಬಿಡಿ, ಇಲ್ಲವಾದರೆ ಮಾರ್ಷಲ್‌ಗಳು ದಂಡ ಹಾಕುತ್ತಾರೆ.

ಗಂಗಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ

ಕೊಪ್ಪಳದ ಗಂಗಾವತಿ ನಗರಸಭೆ ಅಧಿಕಾರಿಳು ಪ್ಲಾಸ್ಟಿಕ್‌ ಬಳಕೆಯ ವಿರುದ್ಧ ದಿಢೀರ್‌ ಕಾರ್ಯಾಚರಣೆ ವೇಳೆ ಅಂಗಡಿ ಮಾಲೀಕರು ಹಾಗೂ ಸಿಬ್ಬಂದಿಗಳ ಮಧ್ಯೆ ವಾಗ್ವಾದವೇ ನಡೆಯಿತು. ನಗರಸಭೆಯ ಪರಿಸರ ವಿಭಾಗದ ಎಂಜಿನೀಯರ್ ಚೇತನ್ ಕುಮಾರ್ ಮತ್ತು ಹಿರಿಯ ಆರೋಗ್ಯ ನಿರೀಕ್ಷಕ ನಾಗರಾಜ್ ನೇತೃತ್ವದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವ ಅಂಗಡಿ-ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು. ಈ ವೇಳೆ ಅಪಾರ ಪ್ರಮಾಣದ ಪ್ಲಾಸ್ಟಿಕ್ ಕವರ್‌ಗಳನ್ನು ವಶಕ್ಕೆ ಪಡೆದುಕೊಂಡರು. ಭಗೀರಥ ಉಪ್ಪಾರ ವೃತ್ತದಿಂದ ಹಿಡಿದು ಬೇರೂನಿ ಮಸೀದಿ ಭಾಗದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು.

ಇದನ್ನೂ ಓದಿ | ಜುಲೈ 1ರಿಂದ ಪ್ಲಾಸ್ಟಿಕ್‌ ಸ್ಟ್ರಾ ಬಳಕೆ ನಿಷೇಧ, ಸಣ್ಣ ಟೆಟ್ರಾ ಪ್ಯಾಕ್‌ ಜ್ಯೂಸ್‌ ಇನ್ನು ಸಿಗಲ್ವಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

Mysore News: ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದ ನಾನಾ ಕಡೆ ದಾಳಿ ನಡೆಸಿ ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ. ಪಾಲಿಕೆಯ ಆಯುಕ್ತರ ನೇತೃತ್ವದಲ್ಲಿ ನಗರದ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿ, ಸುಮಾರು 1515 ಕೆಜಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 1.61 ಲಕ್ಷ ರೂ. ದಂಡ ವಸೂಲಿ ಮಾಡಿದೆ.

VISTARANEWS.COM


on

banned plastic seized by corporation in Mysore
Koo

ಮೈಸೂರು: ನಗರದ ನಾನಾ ಕಡೆ ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡು ದಂಡ (Mysore News) ವಿಧಿಸಿದ್ದಾರೆ.

ಪಾಲಿಕೆಯ ಆಯುಕ್ತರ ನೇತೃತ್ವದಲ್ಲಿ ನಗರದ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿ, ಸುಮಾರು 1515 ಕೆಜಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 1.61 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ಇದನ್ನೂ ಓದಿ: RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಸೂಕ್ತ ಮಾಹಿತಿಯ ಮೇರೆಗೆ ಆಯಕ್ತರ ಆದೇಶದಂತೆ ನಗರದ ಧನ್ವಂತ್ರಿ ರಸ್ತೆಯಲ್ಲಿರುವ, ಮಲ್ಲೇಶ್‌ ಎಂಬುವವರಿಗೆ ಸೇರಿದ ಧನ್ವಂತ್ರಿ ಎಂಟರ್‌ಪ್ರೈಸಸ್‌ ಗೋದಾಮಿಗೆ ವಲಯ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಿ, ಗೋದಾಮಿನಲ್ಲಿ ಸಂಗ್ರಹಿಸಿದ್ದ ನಿಷೇಧಿತ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು 25 ಸಾವಿರ ರೂ ದಂಡ ವಿಧಿಸಿದ್ದಾರೆ.

ನಿಗದಿತ ಸ್ಥಳದಲ್ಲಿ ಕಟ್ಟಡ ತ್ಯಾಜ್ಯ ವಿಲೇವಾರಿ ಮಾಡಿ

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ, ದುರಸ್ತಿ ಮತ್ತು ತೆರವುಗೊಳಿಸುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05, ಹಂಚ್ಯಾ-ಸಾತಗಳ್ಳಿ `ಎ’ ವಲಯದಲ್ಲಿ ಖಾಲಿ ಪ್ರದೇಶವನ್ನು ಕಟ್ಟಡ ತ್ಯಾಜ್ಯದ ವಿಲೇವಾರಿಗೆಂದು ಗುರುತಿಸಿದೆ.

ಇದನ್ನೂ ಓದಿ: Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಖಾಸಗಿ ವ್ಯಕ್ತಿಗಳು ನಗರ ಪಾಲಿಕೆಯಿಂದ ನಿಗದಿಗೊಳಿಸಿರುವ ಸ್ಥಳದಲ್ಲೇ ಕಡ್ಡಾಯವಾಗಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದೆ. ಒಂದು ವೇಳೆ ನಗರ ಪ್ರದೇಶದ ಇತರೆ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಕಂಡುಬoದಲ್ಲಿ ಸಂಬoಧಪಟ್ಟ ಕಟ್ಟಡದ ಮಾಲೀಕರಿಗೆ ಮತ್ತು ವಾಹನದ ಮಾಲೀಕರಿಗೆ ಭಾರೀ ಮೊತ್ತದ ದಂಡ ವಿಧಿಸುವುದಲ್ಲದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Continue Reading

ಪ್ರವಾಸ

Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

ಊಟಿಗೆ ಯಾವ ಸಮಯದಲ್ಲಿ ಬೇಕಾದರೂ ಭೇಟಿ ನೀಡಬಹುದು. ಇಲ್ಲಿ ಪ್ರತಿಯೊಂದು ತಿಂಗಳೂ ಏನಾದರೂ ಒಂದು ವಿಶೇಷ ಇದ್ದೇ ಇರುತ್ತದೆ. ಹೀಗಾಗಿ ನಿಮ್ಮ ಆಸಕ್ತಿಗೆ ಅನುಗುಣವಾಗಿ ಊಟಿಗೆ ಪ್ರವಾಸ (Ooty Tour) ಹೊರಡುವ ಯೋಜನೆ ಮಾಡಬಹುದು. ಊಟಿಯ ಅದ್ಭುತಗಳ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

By

Ooty Tour
Koo

ಬೇಸಿಗೆಯ ಬಿಸಿಲಿನ ಕಣ್ತಪ್ಪಿಸಿ ಪ್ರಕೃತಿಯ ಮಡಿಲಲ್ಲಿ ಕಾಲ ಕಳೆಯಬೇಕು ಎನ್ನುವ ಆಸೆ ಮನದಲ್ಲಿ ಮೂಡಿದಾಗ ಕೂಡಲೇ ನೆನಪುಗುವುದು ದಕ್ಷಿಣ ಭಾರತದ (southern India) ಸುಪ್ರಸಿದ್ಧ ಪ್ರವಾಸಿ ತಾಣ ಊಟಿ (Ooty Tour). ದಕ್ಷಿಣ ಭಾರತದ ನೀಲಗಿರಿ ಬೆಟ್ಟಗಳಲ್ಲಿ ( Nilgiri Hills) ನೆಲೆಯಾಗಿರುವ ಸುಂದರವಾದ ಗಿರಿಧಾಮ ಪ್ರದೇಶವಾಗಿರುವ ಊಟಿಯಲ್ಲಿ ಕಣ್ತುಂಬಿಕೊಳ್ಳಲು ಸಾಕಷ್ಟು ಪ್ರದೇಶಗಳಿವೆ. ಪ್ರಶಾಂತವಾದ ಭೂದೃಶ್ಯಗಳು, ಆಹ್ಲಾದಕರ ಹವಾಮಾನ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಇದು ಹೊಂದಿದೆ.

ಪ್ರವಾಸ ಪ್ರಿಯರಿಗಾಗಿ ಊಟಿ ಏನನ್ನಾದರೂ ನೀಡುತ್ತದೆ. ಅದು ಪ್ರಕೃತಿಯ ಪ್ರೀತಿ, ಸಾಹಸದ ಪ್ರಜ್ಞೆ ಅಥವಾ ಶಾಂತಿ ಮತ್ತು ಶಾಂತತೆಯ ಹಂಬಲವನ್ನು ತಣಿಸುತ್ತದೆ. ಪ್ರತಿ ಋತುವಿಗೂ ತನ್ನದೇ ಆದ ವಿಶೇಷತೆಯನ್ನು ಒದಗಿಸುತ್ತದೆ. ವರ್ಷವಿಡೀ ಬೇಸಿಗೆಯು ಬಹುವರ್ಣದ ಹೂವುಗಳನ್ನು ತರುತ್ತದೆ. ಮಳೆಗಾಲ ಬಂದೊಡನೆ ಎಲ್ಲವನ್ನೂ ಮಂಜಿನಿಂದ ಆವರಿಸುವಂತೆ ಮಾಡುತ್ತದೆ. ಶರತ್ಕಾಲದಲ್ಲಿ ಉಲ್ಲಾಸಕರವಾದ ಗಾಳಿ ಮತ್ತು ಚಳಿಗಾಲದ ತಂಪು ಅಪ್ಪುಗೆಯನ್ನು ಮರೆಯಲಾಗದು.

ಗಿರಿಧಾಮಗಳ ರಾಣಿ ಎಂದೂ ಕರೆಯಲಾಗುವ ಊಟಿಗೆ ವರ್ಷಪೂರ್ತಿ ಭೇಟಿ ಮಾಡಬಹುದು. ಪ್ರತಿ ಋತುವಿನಲ್ಲಿ ಇದು ತನ್ನದೇ ಆದ ವೈಭವವನ್ನು ತೊಂಬಿಕೊಂಡು ತನುಮನಕ್ಕೆ ಸಂತೋಷವನ್ನು ಉಣಬಡಿಸುತ್ತದೆ. ನಿಖರವಾಗಿ ಯಾವಾಗ ಹೋಗಬೇಕೆಂದು ತಿಳಿಯುವುದು ಖಂಡಿತವಾಗಿಯೂ ನಮ್ಮ ಪ್ರಯಾಣದ ಅನುಭವವನ್ನು ಸುಧಾರಿಸುತ್ತದೆ. ಊಟಿಯಲ್ಲಿ ಪ್ರತಿ ಸೀಸನ್ ಏನು ವಿಶೇಷ ಎಂಬ ಮಾಹಿತಿ ಇಲ್ಲಿದೆ.


ಬೇಸಿಗೆಯ ವೈಭವ; ಮಾರ್ಚ್‌ನಿಂದ ಜೂನ್

ಊಟಿಗೆ ಪ್ರವಾಸ ಹೋಗಲು ಅತ್ಯಂತ ಜನಪ್ರಿಯ ಸಮಯವೆಂದರೆ ಬೇಸಿಗೆಯ ತಿಂಗಳು. ಮಾರ್ಚ್‌ನಿಂದ ಜೂನ್‌ವರೆಗೆ ಹಗಲಿನ ತಾಪಮಾನವು ಇಲ್ಲಿ 15 ಡಿಗ್ರಿ ಸೆಲ್ಸಿಯಸ್ ನಿಂದ 25 ಡಿಗ್ರಿ ಸೆಲ್ಸಿಯಸ್‌ವರೆಗೆ ಇರುತ್ತದೆ. ಇದು ಬಿಸಿಯಾದ ಬಯಲು ಪ್ರದೇಶಗಳಿಗೆ ಹೋಲಿಸಿದರೆ ಇದು ತುಂಬಾ ಆರಾಮದಾಯಕವಾಗಿದೆ. ಈ ಅವಧಿಯಲ್ಲಿ ಹವಾಮಾನವು ತಂಪಾಗಿರುತ್ತದೆ. ಇದು ಹಸಿರು ಕಣಿವೆಗಳು, ಹೂಬಿಡುವ ಹೂವುಗಳು ಮತ್ತು ಬೀಳುವ ಕ್ಯಾಸ್ಕೇಡ್‌ಗಳನ್ನು ಅನ್ವೇಷಿಸಲು ಸೂಕ್ತವಾಗಿದೆ. ಪ್ರತೀ ವರ್ಷ ಮೇ ತಿಂಗಳಲ್ಲಿ, ಬೊಟಾನಿಕಲ್ ಗಾರ್ಡನ್ಸ್‌ನಲ್ಲಿ ಅದ್ಭುತವಾದ ಪುಷ್ಪ ಪ್ರದರ್ಶನವನ್ನು ನಡೆಸಲಾಗುತ್ತದೆ.


ಮಾನ್ಸೂನ್‌ ಮ್ಯಾಜಿಕ್ -ಜುಲೈನಿಂದ ಸೆಪ್ಟೆಂಬರ್

ಒಮ್ಮೆ ಮಳೆ ಬಂದರೆ ಮತ್ತೆ ಎಲ್ಲವೂ ಹಸಿರು ಬಣ್ಣಕ್ಕೆ ತಿರುಗುತ್ತದೆ. ಆದರೆ ಈ ಬಾರಿ ಹೆಚ್ಚು ತೀವ್ರವಾಗಿ ಇಡೀ ಪ್ರದೇಶವು ಸೊಂಪಾದ ಸಸ್ಯಗಳಿಂದ ಆವೃತವಾಗಿದೆ. ಎಷ್ಟರಮಟ್ಟಿಗೆ ಎಂದರೆ ಕೆಲವೊಮ್ಮೆ ಇಡೀ ಪಟ್ಟಣವು ದಟ್ಟವಾದ ಎಲೆಗಳ ಅಡಿಯಲ್ಲಿ ಕಣ್ಮರೆಯಾಗುತ್ತದೆ. ಈ ತಿಂಗಳುಗಳಲ್ಲಿ ಜುಲೈನಿಂದ ಸೆಪ್ಟೆಂಬರ್ ವರೆಗೆ, ಊಟಿಯ ಮೇಲೆ ಮಧ್ಯಮ ಅಥವಾ ಭಾರೀ ಮಳೆ ಬೀಳುತ್ತದೆ. ಇದು ಸುತ್ತಲಿನ ಎಲ್ಲವನ್ನೂ ರಿಫ್ರೆಶ್ ಮಾಡಿದಂತೆ ಭಾಸವಾಗುತ್ತದೆ. ಬೇಸಿಗೆಯ ಶಾಖದ ಅನಂತರ ಮತ್ತೊಮ್ಮೆ ಜೀವಂತ ತಳೆದಂತೆ ಕಾಣುತ್ತದೆ. ಮಳೆಯ ಕಾರಣದಿಂದ ಹೊರಾಂಗಣ ಚಟುವಟಿಕೆಗಳು ಸೀಮಿತವಾಗಿರಬಹುದು. ಆದರೆ ಮಂಜಿನಿಂದ ಆವೃತವಾದ ಪರ್ವತಗಳ ಮೂಲಕ ಹರಿಯುವ ತೊರೆಗಳ ಸೌಂದರ್ಯ ಇಮ್ಮಡಿಯಾಗುತ್ತದೆ.


ಶರತ್ಕಾಲದ ಅದ್ಭುತ- ಅಕ್ಟೋಬರ್‌ನಿಂದ ನವೆಂಬರ್

ಮಳೆಗಾಲ ಅವಧಿ ಮುಗಿದ ಅನಂತರ, ಶರತ್ಕಾಲದಲ್ಲಿ ಆಕಾಶವು ಮತ್ತೆ ನೀಲಿ ಬಣ್ಣಕ್ಕೆ ತಿರುಗುತ್ತದೆ. ಚಳಿಗಾಲ ಪ್ರಾರಂಭವಾಗುವವರೆಗೆ ಪ್ರಶಾಂತ ಪರಿಸರ ಮನಸ್ಸಿಗೆ ಹಿತ ನೀಡುತ್ತದೆ. ಈ ಸಮಯದಲ್ಲಿ ತಾಪಮಾನವು 10 ಡಿಗ್ರಿಯಿಂದ 20 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ. ಹೀಗಾಗಿ ಇದು ಚಟುವಟಿಕೆಗಳಿಗೆ ಸೂಕ್ತವಾಗಿರುತ್ತದೆ. ಟ್ರೆಕ್ಕಿಂಗ್, ಬೋಟಿಂಗ್, ದೃಶ್ಯವೀಕ್ಷಣೆ ನಡೆಸಲು ಸೂಕ್ತ ಸಮಯವಾಗಿರುತ್ತದೆ. ಹವಾಮಾನವು ಸಾಕಷ್ಟು ಸ್ನೇಹಪರವಾಗಿರುತ್ತದೆ. ಛಾಯಾಗ್ರಹಣಕ್ಕೆ ಇದು ಸೂಕ್ತ ಸಮಯ. ಈ ಸಂದರ್ಭದಲ್ಲಿ ಊಟಿ ಮಾರಿಯಮ್ಮನ್ ದೇವಾಲಯದ ಉತ್ಸವವನ್ನು ಕಣ್ತುಂಬಿಕೊಳ್ಳಲು ಮರೆಯಬೇಡಿ.


ಚಳಿಗಾಲದ ವಂಡರ್ ಲ್ಯಾಂಡ್ (ಡಿಸೆಂಬರ್‌ನಿಂದ ಫೆಬ್ರವರಿ)

ಚಳಿಗಾಲದಲ್ಲಿ ರಾತ್ರಿಯ ಸಮಯದಲ್ಲಿ ತಾಪಮಾನವು ತೀವ್ರವಾಗಿ ಇಳಿಯುತ್ತದೆ. ಸುಮಾರು 5 ಡಿಗ್ರಿ ಸೆಲ್ಸಿಯಸ್ ಗಿಂತಲೂ ಕೆಳಗೆ ಇಳಿಯುತ್ತದೆ. ಮುಂಜಾನೆಯು ಸಾಮಾನ್ಯವಾಗಿ ಮಂಜಿನಿಂದ ಕೂಡಿರುತ್ತದೆ. ಆದರೆ ಇಡೀ ದಿನ ತಂಪಾಗಿರುತ್ತದೆ.

ಇದನ್ನೂ ಓದಿ: Kochi Tour: ವಾರಾಂತ್ಯದ ಪ್ರವಾಸಕ್ಕೆ ಕೊಚ್ಚಿ ಸೂಕ್ತ ತಾಣ; ಏನೇನಿವೆ ಆಕರ್ಷಣೆ?

ಸಾಕಷ್ಟು ಬಿಸಿಲು ಸಿಗುತ್ತದೆ. ಆದರೂ ಪ್ರದೇಶದ ಸುತ್ತಲಿನ ದಟ್ಟವಾದ ಕಾಡುಗಳಿಂದಾಗಿ ಸೂರ್ಯನ ಬೆಳಕು ಅಷ್ಟೇನೂ ನೆಲದ ಮಟ್ಟವನ್ನು ತಲುಪುವುದಿಲ್ಲ, ಆದ್ದರಿಂದ ಚಹಾ ತೋಟಗಳ ಸುತ್ತಲೂ ಮಾಂತ್ರಿಕ ಸ್ಪರ್ಶ ನೀಡಿದಂತೆ ಭಾಸವಾಗುತ್ತದೆ. ಸಾಹಸಿಗಳು ನೀಲಗಿರಿಯ ಅತೀ ಎತ್ತರದ ಪ್ರದೇಶವಾದ ದೊಡ್ಡಬೆಟ್ಟ ಶಿಖರದಲ್ಲಿ ಚಾರಣಕ್ಕೆ ಹೋಗಬಹುದು ಅಥವಾ ವಿವಿಧ ಜಾತಿಯ ಪ್ರಾಣಿಗಳು, ಪಕ್ಷಿಗಳು, ಸರೀಸೃಪಗಳು, ಕೀಟಗಳನ್ನು ಮುದುಮಲೈ ವನ್ಯಜೀವಿ ಅಭಯಾರಣ್ಯದಲ್ಲಿ ಅನ್ವೇಷಿಸಬಹುದು. ಜನವರಿಯಲ್ಲಿ ಇಲ್ಲಿ ವಾರ್ಷಿಕ ಚಹಾ ಪ್ರವಾಸೋದ್ಯಮ ಉತ್ಸವ ನಡೆಯುತ್ತದೆ. ಇಲ್ಲಿ ಸಾಂಸ್ಕೃತಿಕ ಪ್ರದರ್ಶನಗಳನ್ನು ಆನಂದಿಸಬಹುದು, ವಿವಿಧ ಮಾದರಿಯ ಚಹಾಗಳನ್ನು ಸವಿಯಬಹುದು.

Continue Reading

ಕರ್ನಾಟಕ

Climate Plan: ರಾಜ್ಯ ಸರ್ಕಾರದ ಹವಾಮಾನ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಒಪ್ಪಿಗೆ; ಏನಿದು ಯೋಜನೆ?

ಹವಾಮಾನ ಬದಲಾವಣೆ ಕುರಿತ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ 2 (Climate Plan) ಅನ್ನು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MOEF & CC) ಏಪ್ರಿಲ್ 2021 ರಲ್ಲಿ ಕಳುಹಿಸಲಾಗಿತ್ತು. ಮೂರು ವರ್ಷಗಳ ಅನಂತರ ಅದನ್ನು ಕಾರ್ಯಗತಗೊಳಿಸಲು ರಾಜ್ಯಕ್ಕೆ ಅನುಮೋದನೆ ನೀಡಲಾಗಿದೆ.

VISTARANEWS.COM


on

By

Climate Plan
Koo

ಬೆಂಗಳೂರು: ಕರ್ನಾಟಕ (karnataka) ಸರ್ಕಾರ (government) 2021ರಲ್ಲಿ ಸಿದ್ಧಪಡಿಸಲಾದ ಹವಾಮಾನ ಕ್ರಿಯಾ ಯೋಜನೆ (Climate Plan) ಇತ್ತೀಚೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದೆ. ಈ ಬಾರಿ ಕರ್ನಾಟಕದಲ್ಲಿ ಅತ್ಯಂತ ಭೀಕರ ಬರಗಾಲ (worst droughts) ಎದುರಾಗಿದೆ. ಆದರೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ನಿರೀಕ್ಷೆ ಇದೆ. ಈ ನಡುವೆ ಇದೀಗ ಹವಾಮಾನ ಕ್ರಿಯಾ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹವಾಮಾನ ಬದಲಾವಣೆ ಕುರಿತ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ 2 ಅನ್ನು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MOEF & CC) ಏಪ್ರಿಲ್ 2021ರಲ್ಲಿ ಕಳುಹಿಸಲಾಗಿತ್ತು. ಮೂರು ವರ್ಷಗಳ ಅನಂತರ ಅದನ್ನು ಕಾರ್ಯಗತಗೊಳಿಸಲು ರಾಜ್ಯಕ್ಕೆ ಅನುಮೋದನೆ ನೀಡಲಾಗಿದೆ.

42 ವಿವಿಧ ಇಲಾಖೆಗಳೊಂದಿಗೆ ಹಲವು ಬಾರಿ ಸಭೆ ನಡೆಸಿದ ಅಭಿವೃದ್ಧಿ ಆಯುಕ್ತರು, ಜೂನ್‌ನಲ್ಲಿ ಮಾದರಿ ನೀತಿ ಸಂಹಿತೆ ಹಿಂಪಡೆದ ಅನಂತರ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದರೊಂದಿಗೆ ಹವಾಮಾನ ಯೋಜನೆಯನ್ನು ಜಾರಿಗೆ ತಂದ ಮೊದಲ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಲಿದೆ ಎಂದು ತಿಳಿಸಿದ್ದರು. ಹವಾಮಾನ ಕ್ರಿಯಾ ಯೋಜನೆ ಕಾರ್ಯಕ್ರಮಕ್ಕೆ ನಿರ್ದಿಷ್ಟ ಯೋಜನೆಗಳು, ಕಾರ್ಯಕ್ಷಮತೆ ಸೂಚಕಗಳು ಮತ್ತು ಗುರಿಗಳನ್ನು ಸಿದ್ಧಪಡಿಸಲು ನಾವು ಎಲ್ಲಾ ಇಲಾಖೆಗಳಿಗೆ ತಿಳಿಸಿದ್ದೇವೆ. ಮಾದರಿ ನೀತಿ ಸಂಹಿತೆ ಹಿಂತೆಗೆದುಕೊಂಡ ತಕ್ಷಣ ನಾವು ಸಚಿವ ಸಂಪುಟದ ಮುಂದೆ ಸಲ್ಲಿಕೆ ಮಾಡಲು ಯೋಜಿಸಿದ್ದೇವೆ ಎಂದು ಅಭಿವೃದ್ಧಿ ಆಯುಕ್ತ ಡಾ. ಶಾಲಿನಿ ರಜನೀಶ್ ಹೇಳಿದ್ದಾರೆ.

ಶೀಘ್ರ ಜಾರಿಯಾಗಬೇಕು

ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದ ಮೇಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಕ್ರಿಯಾ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸಬೇಕು ಎನ್ನುತ್ತಾರೆ ತಜ್ಞರು. ಪರಿಸರ ಇಲಾಖೆಯ ಅಧಿಕಾರಿಯ ಪ್ರಕಾರ, ಕ್ರಿಯಾ ಯೋಜನೆಯಲ್ಲಿ ಸೂಚಿಸಲಾದ ಕ್ರಮಗಳನ್ನು ಸಂಯೋಜಿಸಲು ಮತ್ತು ತಮ್ಮ ಗುರಿಗಳನ್ನು ಸಲ್ಲಿಸಲು ಸಂಬಂಧಿಸಿದ ಎಲ್ಲಾ ಇಲಾಖೆಗಳು ಕೆಲಸ ಮಾಡಬೇಕಾಗುತ್ತದೆ. ಪ್ರಸ್ತುತ ಕಾರ್ಯನಿರ್ವಹಣೆಯೊಂದಿಗೆ ಬೇಸ್‌ಲೈನ್‌ನಂತೆ ಕಾರ್ಯನಿರ್ವಹಿಸುವ ಪಟ್ಟಿಯನ್ನು ಸಿದ್ಧಪಡಿಸಬೇಕು. ಉದಾಹರಣೆಗೆ, ಅರಣ್ಯ ಇಲಾಖೆಯು ತಾನು ಯೋಜಿಸಿರುವ ಅರಣ್ಯೀಕರಣದ ಪ್ರಮಾಣ ಮತ್ತು ಐದು ವರ್ಷಗಳಲ್ಲಿ ಗುರಿಯನ್ನು ಸಲ್ಲಿಸಬೇಕು ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಏನೆಲ್ಲಾ ಒಳಗೊಂಡಿರುತ್ತದೆ?

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಸಿದ್ಧಪಡಿಸಿದ ಕ್ರಿಯಾ ಯೋಜನೆಯು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸಲು ಹಲವಾರು ಮಧ್ಯಸ್ಥಿಕೆಗಳು ಮತ್ತು ಮೌಲ್ಯಮಾಪನ ತಂತ್ರಗಳನ್ನು ಸೂಚಿಸುತ್ತದೆ. ಕೃಷಿ, ತೋಟಗಾರಿಕೆ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು 10 ಇತರ ಕ್ಷೇತ್ರಗಳಲ್ಲಿ ಕ್ರಮಗಳನ್ನು ಜಾರಿಗೆ ತರಲು 2025 ಮತ್ತು 2030 ರ ನಡುವೆ ರಾಜ್ಯಕ್ಕೆ 52,827 ಕೋಟಿ ರೂಪಾಯಿ ಅಗತ್ಯವಿದೆ ಎಂದು ಯೋಜನೆ ಸೂಚಿಸುತ್ತದೆ.

ಹಣಕಾಸು ಅಂದಾಜು ಹೆಚ್ಚಳ ಸಾಧ್ಯತೆ

ಅರಣ್ಯೀಕರಣದಿಂದ ನವೀಕರಿಸಬಹುದಾದ ಶಕ್ತಿಯ ಬಳಕೆಯವರೆಗೆ, ಯೋಜನೆಯು ಪ್ರತಿಯೊಂದು ಇಲಾಖೆಗೆ ಕ್ರಮಗಳನ್ನು ಸೂಚಿಸುತ್ತದೆ.

ಹಣಕಾಸಿನ ಅಂದಾಜುಗಳನ್ನು 2021ರಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಈಗ ಹೆಚ್ಚಾಗಿರಬಹುದು. ಕ್ರಿಯಾ ಯೋಜನೆಯು ಹಣವನ್ನು ಸಂಗ್ರಹಿಸಲು ಹಲವಾರು ಹಣಕಾಸು ವಿಧಾನಗಳನ್ನು ರೂಪಿಸುತ್ತದೆ. ನಾವು ಇಲಾಖೆ-ನಿರ್ದಿಷ್ಟ ಯೋಜನೆಗಳನ್ನು ಹೊಂದಬಹುದು ಎಂದು ಕ್ರಿಯಾ ಯೋಜನೆ ತಯಾರಿಕೆಯ ಭಾಗವಾಗಿದ್ದ ಪ್ರೊ. ಕೃಷ್ಣ ರಾಜ್ ಹೇಳಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.


ಖಾಸಗಿ ಹೂಡಿಕೆಗಳನ್ನು ಆಕರ್ಷಿಸುವುದರಿಂದ ಹಿಡಿದು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಉತ್ತಮ ಬಳಕೆಗೆ, ಯೋಜನೆಯು ವಿವಿಧ ಹಣಕಾಸು ವಿಧಾನಗಳನ್ನು ವಿವರಿಸುತ್ತದೆ.ಬರ ಮತ್ತು ಪ್ರವಾಹಗಳ ಆವರ್ತನ ಹೆಚ್ಚಾಗಿದೆ. ತಾಪಮಾನ ಮತ್ತು ಮಳೆಯ ಮಾದರಿಗಳು ಅನಿರೀಕ್ಷಿತವಾಗಿವೆ. ಇವುಗಳು ಅನೇಕ ಕ್ಷೇತ್ರಗಳ ಮೇಲೆ, ವಿಶೇಷವಾಗಿ ಕೃಷಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ಕೃಷಿಯ ಮೇಲೆ ಪರಿಣಾಮ ಬೀರಿದರೆ, ಅದು ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಕ್ರಮವನ್ನು ಕಾರ್ಯಗತಗೊಳಿಸುವುದು ನಿರ್ಣಾಯಕವಾಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚಿನ ಬರ ಪರಿಸ್ಥಿತಿ ಮತ್ತು ನೀರಿನ ಕೊರತೆಯಿಂದಾಗಿ ಅಧಿಕಾರಿಗಳು ಮತ್ತು ನಾಗರಿಕರಲ್ಲಿ ಜಾಗೃತಿ ಹೆಚ್ಚಾಗಿದೆ ಮತ್ತು ಆದ್ದರಿಂದ ಈ ಕ್ರಮಕ್ಕೆ ಇದು ಸರಿಯಾದ ಸಮಯ ಎಂದು ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

ಏನು ಕ್ರಮ ?

ಕೃಷಿಗೆ ಶುಷ್ಕ- ಋತುವಿಗೆ ಸಂಬಂಧಿಸಿದ ವಿವಿಧ ಬೆಳೆ ಯೋಜನೆ, ನಿಖರವಾದ ನೀರಾವರಿ ತಂತ್ರಜ್ಞಾನ ಅಳವಡಿಕೆ. ಅರಣ್ಯಕ್ಕೆ ಹವಾಮಾನಕ್ಕೆ ಪೂರಕವಾದ ಅರಣ್ಯೀಕರಣ ಕಾರ್ಯಕ್ರಮಗಳು, ಜಾನುವಾರುಗಳ ಸಮಗ್ರ ರೋಗಗಾಲ ಮೇಲೆ ಕಣ್ಗಾವಲು ಮತ್ತು ತಕ್ಷಣ ಪ್ರತಿಕ್ರಿಯೆ ನೀಡಲು ಕ್ರಮ. ಅಂತರ್ಜಲ ಹೆಚ್ಚಳಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದು. ಶಕ್ತಿ ಮೂಲಗಳಲ್ಲಿ ನವೀಕರಿಸಬಹುದಾದ ವಸ್ತುಗಳ ಮೇಲೆ ಹೆಚ್ಚಿನ ಗಮನ ಹರಿಸುವುದು ಮೊದಲಾದವುಗಳನ್ನು ಹವಾಮಾನ ಕ್ರಿಯಾ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ.

Continue Reading

ಪ್ರವಾಸ

Kanyakumari Tour: ತುಂಬಾ ದುಬಾರಿ ಏನಿಲ್ಲ, ನೀವೂ ಮಾಡಬಹುದು ಕನ್ಯಾಕುಮಾರಿ ಪ್ರವಾಸ

ಪ್ರವಾಸದ ಯೋಜನೆ ಕೆಲವೊಮ್ಮೆ ಜೇಬಿಗೆ ಕತ್ತರಿ ಹಾಕುತ್ತದೆ ಎನ್ನುವ ಭಯವಿರುತ್ತದೆ. ಆದರೆ ಕನ್ಯಾಕುಮಾರಿಗೆ ಪ್ರವಾಸ (Kanyakumari Tour) ಹೊರಡುವ ಯೋಜನೆ ಮಾಡಿದರೆ ಇಲ್ಲಿ ಜೇಬಿಗೆ ಭಾರವಾಗದ ಹಲವು ತಾಣಗಳಿವೆ. ಆದರೆ ಸ್ವಲ್ಪ ಬುದ್ದಿವಂತಿಕೆ ತೋರಬೇಕು ಅಷ್ಟೇ. ಕನ್ಯಾಕುಮಾರಿಯ ಪ್ರಮುಖ ಸ್ಥಳಗಳ ಪರಿಚಯ ಇಲ್ಲಿದೆ.

VISTARANEWS.COM


on

By

Kanyakumari Tour
Koo

ನೈಸರ್ಗಿಕ ಸೌಂದರ್ಯಕ್ಕೆ ಹೆಸರುವಾಸಿಯಾಗಿರುವ ಕನ್ಯಾಕುಮಾರಿಗೆ ಪ್ರವಾಸ (Kanyakumari Tour) ಹೊರಡುವ ಯೋಚನೆಯಲ್ಲಿದ್ದರೆ ಇಲ್ಲಿನ ಕೆಲವೊಂದು ಸಂಗತಿಗಳನ್ನು ಮಿಸ್ ಮಾಡಿಕೊಳ್ಳದಿರಿ. ಅತ್ಯದ್ಭುತ ನೈಸರ್ಗಿಕ ಸೌಂದರ್ಯ ಮತ್ತು ಆಧ್ಯಾತ್ಮಿಕ ಮಹತ್ವ ಎರಡಕ್ಕೂ ಹೆಸರುವಾಸಿಯಾಗಿರುವ ಕನ್ಯಾಕುಮಾರಿಗೆ ಜೀವನದಲ್ಲೊಮ್ಮೆಯಾದರೂ ಭೇಟಿ ನೀಡಲೇಬೇಕು.


ಕನ್ಯಾಕುಮಾರಿ ನಗರವು ಐಷಾರಾಮಿ ಹಾಟ್‌ಸ್ಪಾಟ್ ಎಂಬ ಖ್ಯಾತಿಯನ್ನು ಪಡೆದಿದ್ದರೂ ಇಲ್ಲಿ ನಿಮ್ಮ ಬಜೆಟ್ ಮೀರದ ಹಾಗೆ ಪ್ರವಾಸ ಮಾಡಲು ಹಲವು ಆಯ್ಕೆಗಳನ್ನೂ ನೀಡುತ್ತದೆ. ಕೆಲವು ಯೋಜನೆ ಮತ್ತು ಸ್ಥಳೀಯರ ಸಲಹೆ ಪಡೆದರೆ ಬಜೆಟ್ ಮೀರದ ಹಾಗೆ ಪ್ರವಾಸವನ್ನೂ ಪೂರ್ಣಗೊಳಿಸಬಹುದು. ಜೀವನದಲ್ಲಿ ಅತ್ಯಂತ ಸುಂದರ ಅನುಭವವನ್ನು ತಮ್ಮದಾಗಿಸಿಕೊಳ್ಳಬಹುದು.

ಸೂರ್ಯೋದಯ – ಸೂರ್ಯಾಸ್ತ

ಕನ್ಯಾಕುಮಾರಿಗೆ ಭೇಟಿ ನೀಡುವ ಅವಕಾಶ ಸಿಕ್ಕಾಗ ಇಲ್ಲಿನ ಸೂರ್ಯೋದಯ, ಸೂರ್ಯಾಸ್ತವನ್ನು ವೀಕ್ಷಿಸುವ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಅರಬ್ಬಿ ಸಮುದ್ರ (Arabian Sea), ಬಂಗಾಳ ಕೊಲ್ಲಿ (Bay of Bengal) ಮತ್ತು ಹಿಂದೂ ಮಹಾಸಾಗರದ (Indian Ocean) ಭೇಟಿಯ ಸ್ಥಳದಲ್ಲಿ ಅತ್ಯಂತ ಸುಂದರವಾದ ಸೂರ್ಯೋದಯ ಮತ್ತು ಸೂರ್ಯಾಸ್ತವನ್ನು ಕಣ್ತುಂಬಿ ಕೊಳ್ಳಬಹದು. ಇದಕ್ಕಾಗಿ ಯಾವುದೇ ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ; ತೀರದ ಪಕ್ಕದಲ್ಲಿ ಕುಳಿತುಕೊಂಡು ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿ ಕೊಳ್ಳಬಹುದು.

ಐಕಾನಿಕ್ ಹೆಗ್ಗುರುತು

ಕನ್ಯಾಕುಮಾರಿಯು ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಪ್ರದರ್ಶಿಸುವ ಅನೇಕ ಪ್ರಸಿದ್ಧ ತಾಣಗಳನ್ನು ಹೊಂದಿದೆ. ಹೆಚ್ಚಿನ ಸ್ಥಳಗಳು ಕಡಿಮೆ ಪ್ರವೇಶ ಶುಲ್ಕವನ್ನು ಹೊಂದಿವೆ ಅಥವಾ ಉಚಿತ ಪ್ರವೇಶವನ್ನು ನೀಡುತ್ತವೆ.
ಹಿಂದೂ ಸಂತ ಸ್ವಾಮಿ ವಿವೇಕಾನಂದರ ಗೌರವಾರ್ಥವಾಗಿ ನಿರ್ಮಿಸಲಾದ ವಿವೇಕಾನಂದ ರಾಕ್ ಮೆಮೋರಿಯಲ್‌ ಗೆ ಹೋಗಲು ದೋಣಿಯಲ್ಲಿ ತೆರಳಬೇಕು. ಈಲ್ಲಿ ಅದ್ಭುತವಾದ ನೋಟಗಳಲ್ಲದೆ, ಧ್ಯಾನ ಮಂದಿರಕ್ಕೂ ಭೇಟಿ ನೀಡಬಹುದು.

ಪ್ರಾಚೀನ ತಮಿಳು ಕವಿ ತಿರುವಳ್ಳುವರ್ ಅವರನ್ನು ಗೌರವಿಸುವ ತಿರುವಳ್ಳುವರ್ ಪ್ರತಿಮೆ ಕನ್ಯಾಕುಮಾರಿ ಕರಾವಳಿಯ ಹೊರವಲಯದಲ್ಲಿದೆ. ಈ ಬೃಹತ್ ರಚನೆಯು ನಿಮ್ಮ ಬಜೆಟ್ ಅನ್ನು ಮೀರಿಸುವುದಿಲ್ಲ. ಅಲ್ಲದೇ ಅತ್ಯಂತ ಸುಂದರ ದೃಶ್ಯಾವಳಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ನೀಡುತ್ತದೆ.


ಪ್ರಕೃತಿಯ ನಡುವೆ ಸುಂದರ ಸಮಯ

ಕನ್ಯಾಕುಮಾರಿಯಲ್ಲಿ ಸುಂದರವಾದ ಪ್ರಕೃತಿಕ ತಾಣಗಳಿಗೆ ಕೊರತೆಯಿಲ್ಲ, ಆದ್ದರಿಂದ ಪ್ರಕೃತಿ ಪ್ರಿಯರು ಇಲ್ಲಿ ಉತ್ತಮ ಸಮಯವನ್ನು ಕಳೆಯಬಹುದು. ಈ ಪ್ರದೇಶವು ಸುಂದರವಾದ ಕಡಲತೀರಗಳಿಂದ ಹಿಡಿದು ಸೊಂಪಾದ ಭೂದೃಶ್ಯಗಳವರೆಗೆ ಎಲ್ಲವನ್ನೂ ನೀಡುತ್ತದೆ.

ಕನ್ಯಾಕುಮಾರಿ ಬೀಚ್ ನಲ್ಲಿ ಸೂರ್ಯನ ಸ್ನಾನ ಅಥವಾ ಸಮುದ್ರದಲ್ಲಿ ಈಜಲು ಕೆಲವು ಗಂಟೆಗಳ ಕಾಲ ಕಳೆಯಬಹುದು. ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವರ್ ಪ್ರತಿಮೆಯನ್ನು ನೋಡುತ್ತಾ ಧ್ಯಾನ ಮಗ್ನರಾಗಿ ಕುಳಿತುಕೊಳ್ಳಬಹುದು. ಕನ್ಯಾಕುಮಾರಿಯಿಂದ ಸುಮಾರು 13 ಕಿಲೋಮೀಟರ್ ದೂರದಲ್ಲಿರುವ ಸುಚಿಂದ್ರಂ ದೇವಸ್ಥಾನದ ಕೊಳ ಪ್ರಶಾಂತ ವಾತಾವರಣದ ಮಧ್ಯ ಇದೆ. ಪುರಾತನ ದೇವಾಲಯಗಳಿಂದ ಆವೃತವಾಗಿದೆ. ಇದು ಸುಮ್ಮನೆ ನಡಿಗೆ, ಧ್ಯಾನಕ್ಕಾಗಿ ಸೂಕ್ತ ಅವಕಾಶವನ್ನು ಕಲ್ಪಿಸುತ್ತದೆ.

ವೈಭವದ ಸಾಂಸ್ಕೃತಿಕ ಪರಂಪರೆ

ಕನ್ಯಾಕುಮಾರಿ ನಗರವು ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯ ಒಳನೋಟವನ್ನು ನೀಡುತ್ತದೆ. ಕನ್ಯಾಕುಮಾರಿ ಅಮ್ಮನ್ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ಯಾತ್ರಿಕರನ್ನು ಆಹ್ವಾನಿಸುತ್ತದೆ. ದೇವಾಲಯದ ಎತ್ತರದ ಗೋಪುರ, ಸಂಕೀರ್ಣವಾದ ಕೆತ್ತಿದ ಕಂಬಗಳು ಈ ಪ್ರದೇಶದಲ್ಲಿ ಅನುಸರಿಸುವ ಸಂಪ್ರದಾಯಗಳು, ಆಚರಣೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತದೆ.


ಇದನ್ನೂ ಓದಿ: Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

ಸ್ಥಳೀಯ ಖಾದ್ಯ ರುಚಿ

ಬಜೆಟ್ ಸ್ನೇಹಿ ಕರಕುಶಲ ವಸ್ತುಗಳು, ಸಾಂಪ್ರದಾಯಿಕ ಕಲಾಕೃತಿಗಳನ್ನು ಇಲ್ಲಿ ಖರೀದಿ ಮಾಡಬಹುದು, ಜೊತೆಗೆ ಸ್ಥಳೀಯ ತಿನಿಸುಗಳು, ಸಮುದ್ರಾಹಾರ ತಿಂಡಿಗಳು, ಬಾಳೆಹಣ್ಣು ಚಿಪ್ಸ್, ತೆಂಗಿನಕಾಯಿ ಸಿಹಿತಿಂಡಿಗಳು ಕೈಗೆಟಕುವ ದರದಲ್ಲಿ ಲಭ್ಯವಾಗುತ್ತದೆ.

Continue Reading
Advertisement
ಸೈಬರ್‌ ಸೇಫ್ಟಿ cyber safety rules
ಅಂಕಣ2 mins ago

ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

Swati Maliwal Case
ದೇಶ28 mins ago

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

IPL 2024
ಐಪಿಎಲ್ 202431 mins ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

New Criminal Laws
ದೇಶ38 mins ago

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

IPL 2024
ಕ್ರೀಡೆ44 mins ago

IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

IPL 2024
ಪ್ರಮುಖ ಸುದ್ದಿ59 mins ago

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

Virat kohli
ಕ್ರೀಡೆ1 hour ago

Virat kohli : ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು; ಇಲ್ಲಿದೆ ವಿಡಿಯೊ

Tips for Mothers
ಆರೋಗ್ಯ1 hour ago

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

virat kohli
ಕ್ರಿಕೆಟ್2 hours ago

Virat kohli : ಕೇಕೆ ಹಾಕುತ್ತಿದ್ದ ಸಿಎಸ್​ಕೆ ಅಭಿಮಾನಿಗಳ ಬಾಯ್ಮುಚ್ಚಿಸಿದ ಕೊಹ್ಲಿ; ಇಲ್ಲಿದೆ ವಿಡಿಯೊ

IPL 2024
ಕ್ರಿಕೆಟ್2 hours ago

IPL 2024 : ಚೆನ್ನೈ ಮಣಿಸಿ ಪ್ಲೇಆಫ್​ಗೇರುವ ಮುನ್ನವೇ ಸಿಕ್ಸರ್​​ಗಳ ವಿಶೇಷ ದಾಖಲೆ ಬರೆದ ಆರ್​ಸಿಬಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌