ಲಂಡನ್‌ನಲ್ಲಿರುವ ಬಸವೇಶ್ವರ ಪ್ರತಿಮೆಗೆ ಸಚಿವ ರಾಜೀವ್‌ ಚಂದ್ರಶೇಖರ್‌ ನಮನ - Vistara News

ವಿದೇಶ

ಲಂಡನ್‌ನಲ್ಲಿರುವ ಬಸವೇಶ್ವರ ಪ್ರತಿಮೆಗೆ ಸಚಿವ ರಾಜೀವ್‌ ಚಂದ್ರಶೇಖರ್‌ ನಮನ

ಲಂಡನ್‌ಗೆ ಭೇಟಿ ನೀಡಿರುವ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ಅಲ್ಲಿ ಪ್ರತಿಷ್ಠಾಪಿಸಲಾಗಿರುವ ವಿಶ್ವಗುರು ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದರು.

VISTARANEWS.COM


on

neeraj patil london
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್: ಬ್ರಿಟನ್ ಪ್ರವಾಸದಲ್ಲಿರುವ ಕೇಂದ್ರ ಕೌಶಲಾಭಿವೃದ್ಧಿ, ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್, ಐಟಿ ಖಾತೆಗಳ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಶುಕ್ರವಾರ ಲಂಡನ್‌ನಲ್ಲಿರುವ ವಿಶ್ವಗುರು ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ್ದಾರೆ.

ಬ್ರಿಟನ್ ಸಂಸತ್‌ ಭವನದ ಎದುರುಗಡೆ ಥೇಮ್ಸ್‌ ನದಿ ದಂಡೆಯಲ್ಲಿ ಸ್ಥಾಪಿತವಾಗಿರುವ ಜಗಜ್ಯೋತಿ ಬಸವೇಶ್ವರ ಪುತ್ಥಳಿಗೆ ಅವರು ಪುಷ್ಪ ನಮನ ಸಲ್ಲಿಸಿದರು. ಬಸವಣ್ಣನ ಮೌಲ್ಯಯುತ ವಿಚಾರಗಳನ್ನು ಬ್ರಿಟನ್‌ನಲ್ಲಿ ಪ್ರಚಾರ ಮಾಡಲು ಲಂಡನ್‌ನ ಬಸವೇಶ್ವರ ಫೌಂಡೇಷನ್‌ ನಡೆಸುತ್ತಿರುವ ಪ್ರಯತ್ನಗಳನ್ನು ಅವರು ಪ್ರಶಂಸಿಸಿದರು.

ನಾಡಿನ ಹೆಮ್ಮೆಯ ಇತಿಹಾಸ ಪುರುಷರಾಗಿರುವ ಬಸವೇಶ್ವರ ಪುತ್ಥಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2015ರ ನವೆಂಬರ್ 14ರಂದು ಅನಾವರಣ ಮಾಡಿದ್ದರು. ಕಳೆದ ಬಸವ ಜಯಂತಿ ಸಂದರ್ಭದಲ್ಲಿ ಬ್ರಿಟನ್‌ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಮತ್ತೆ ಈ ಪ್ರತಿಮೆಗೆ ಗೌರವ ಸಲ್ಲಿಸಿ, ಇಲ್ಲಿ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಲಂಡನ್‌ನ ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್‌ ಅಧ್ಯಕ್ಷ, ನಗರದ ಮಾಜಿ ಮೇಯರ್ ಡಾ. ನೀರಜ್ ಪಾಟೀಲ್ ಅವರು ಸಚಿವ ರಾಜೀವ್‌ ಚಂದ್ರಶೇಖರ್‌ ಅವರನ್ನು ಬರಮಾಡಿಕೊಂಡು, ಪ್ರತಿಮೆಯ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ| ಬಸವ ಜಯಂತಿ: ಭಕ್ತಿ ಭಂಡಾರಿ ಬಸವಣ್ಣನವರ ನೆನಪು, ಸಂದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ಘರ್ಷಣೆ ಸಂಭವಿಸಿದ ಅನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (Pakistan occupied Kashmir) ಉದ್ವಿಗ್ನತೆ ಹೆಚ್ಚಾಗಿದೆ. ಮುಜಫರಾಬಾದ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಮೀರ್‌ಪುರ, ಆಜಾದ್ ಜಮ್ಮು ಮತ್ತು ಕಾಶ್ಮೀರ (ಎಜೆಕೆ) ನಲ್ಲಿ ಮಾರುಕಟ್ಟೆ, ಶಾಲೆ ಮತ್ತು ಕಚೇರಿಗಳನ್ನು ಮುಚ್ಚಲಾಗಿದೆ.

VISTARANEWS.COM


on

By

Pakistan Occupied Kashmir
Koo

ಪಾಕ್ ಆಕ್ರಮಿತ ಕಾಶ್ಮೀರದ (Pakistan occupied Kashmir) ಕೆಲವು ಭಾಗಗಳಲ್ಲಿ ಹಿಂಸಾತ್ಮಕ ಘರ್ಷಣೆಗಳು (protest) ಮುಂದುವರಿದಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ನಾಗರಿಕರನ್ನು ಹತ್ಯೆ (murder) ಮಾಡಲಾಗಿದೆ. ಮುಜಫರಾಬಾದ್‌ನಲ್ಲಿ (Muzaffarabad) ಪ್ರತಿಭಟನಾಕಾರರನ್ನು ಪೊಲೀಸರು ನಿಯಂತ್ರಿಸಿದ್ದರೂ ಸಾಮಾನ್ಯ ಜನ ಜೀವನ ಮತ್ತು ವ್ಯವಹಾರಗಳು ಅಸ್ತವ್ಯಸ್ತಗೊಂಡಿದೆ.

ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ಘರ್ಷಣೆ ಸಂಭವಿಸಿದ ಅನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಮುಜಫರಾಬಾದ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಮೀರ್‌ಪುರ, ಆಜಾದ್ ಜಮ್ಮು ಮತ್ತು ಕಾಶ್ಮೀರ (jammu and kashmir) ನಲ್ಲಿ ಮಾರುಕಟ್ಟೆ, ಶಾಲೆ ಮತ್ತು ಕಚೇರಿಗಳನ್ನು ಮುಚ್ಚಲಾಗಿದೆ.

ಕಾರಣ ಏನು?

ಅವಾಮಿ ಆಕ್ಷನ್ ಕಮಿಟಿ (AAC) ಶುಕ್ರವಾರ ಹಣದುಬ್ಬರದ ವಿರುದ್ಧ ಪಿಒಕೆಯ ಕೆಲವು ಭಾಗಗಳಲ್ಲಿ ಪ್ರತಿಭಟನೆಗಳನ್ನು ನಡೆಸಿತು. ಇದು ಪಾಕಿಸ್ತಾನಿ ಭದ್ರತಾ ಪಡೆಗಳ ಮೇಲೆ ಹಲ್ಲೆಗೆ ಕಾರಣವಾಗಿತ್ತು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಮುಜಫರಾಬಾದ್‌ನಲ್ಲಿ ಮೇ 10 ರಂದು ನಡೆದ ಮುಷ್ಕರದಿಂದ ನಗರ ಸ್ತಬ್ಧವಾಗಿತ್ತು.

ಪ್ರತಿಭಟಕರರ ಶಾಂತಿಯುತ ಪ್ರದರ್ಶನಗಳಿಗೆ ಅಡ್ಡಿಯಾಗಿದ್ದರಿಂದ ಪ್ರತಿಭಟನೆ ಉಗ್ರ ರೂಪ ಪಡೆದಿತ್ತು.
ಎಎಸಿ ಹೆಚ್ಚಿನ ತೆರಿಗೆಗಳು, ವಿದ್ಯುತ್ ಬಿಲ್‌ಗಳು ಮತ್ತು ಹಣದುಬ್ಬರ ಹಠಾತ್ ಏರಿಕೆ ವಿರುದ್ಧ ಶುಕ್ರವಾರ ಎಎಸಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿತು. ಜನರ ಮನೆಗಳು ಮತ್ತು ಮಸೀದಿಗಳ ಸುತ್ತಲೂ ಪೊಲೀಸರು ಅಶ್ರುವಾಯು ಶೆಲ್ ಅನ್ನು ಆಶ್ರಯಿಸಿದಾಗ ಘರ್ಷಣೆಗಳು ಭುಗಿಲೆದ್ದಿತು.

ಇದರಿಂದ ಸಮಹ್ನಿ, ಸೆಹನ್ಸಾ, ಮೀರ್‌ಪುರ್, ರಾವಲಕೋಟ್, ಖುಯಿರಟ್ಟಾ, ತಟ್ಟಪಾನಿ ಮತ್ತು ಹಟ್ಟಿಯಾನ್ ಬಾಲಾ ಮುಂತಾದ ಪಿಒಕೆಯ ಬಹು ಭಾಗಗಳಲ್ಲಿ ಮುಷ್ಕರಕ್ಕೆ ಕರೆ ನೀಡಲಾಯಿತು.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಏನಾಗುತ್ತಿದೆ?

ಅವಾಮಿ ಕ್ರಿಯಾ ಸಮಿತಿಯು ಪಿಒಕೆಯ ಮುಜಫರಾಬಾದ್‌ಗೆ ಶಾಂತಿಯುತ ಮೆರವಣಿಗೆಗಳನ್ನು ಶುಕ್ರವಾರ ನಡೆಸಿತು, ವಿದ್ಯುತ್ ಬಿಲ್‌ಗಳ ಮೇಲೆ ವಿಧಿಸಲಾದ “ಅನ್ಯಾಯ” ತೆರಿಗೆಗಳ ವಿರುದ್ಧ ಪ್ರತಿಭಟಿಸಿತು. ಇದು ಹಣದುಬ್ಬರ ಗಗನಕ್ಕೇರಲು ಕಾರಣವಾಯಿತು. ಇಸ್ಲಾಂ ಗಢ್ ಬಳಿ ಪ್ರತಿಭಟನಾಕಾರರು ಮತ್ತು ಪೊಲೀಸರು ಘರ್ಷಣೆ ಮಾಡಿದಾಗ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದವು.

ಎಎಸಿ ಮುಜಫರಾಬಾದ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿತು. ]ಇದು ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಿತು. ಮೆರವಣಿಗೆಯನ್ನು ತಡೆಯಲು ಪೊಲೀಸರು ನಗರಕ್ಕೆ ಹೋಗುವ ರಸ್ತೆಗಳಿಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಹಾಕಿದರು. ಇದು ಘರ್ಷಣೆಗೆ ಕಾರಣವಾಯಿತು. ರಾತ್ರಿಯ ದಾಳಿಯಲ್ಲಿ ಪೊಲೀಸರು ಅನೇಕ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದಾಗ ಸಮಿತಿಯು ಶನಿವಾರ ಮುಷ್ಕರಕ್ಕೆ ಕರೆ ನೀಡಿತು.

ಪಿಒಕೆ ಸರ್ಕಾರವು ಈ ಪ್ರದೇಶದಲ್ಲಿ ಸೆಕ್ಷನ್ 144 ಅನ್ನು ವಿಧಿಸಿದರೆ, ಮೇ 10 ಮತ್ತು 11 ರಂದು ಶಿಕ್ಷಣ ಸಂಸ್ಥೆ ಮತ್ತು ಕಚೇರಿಗಳನ್ನು ಮುಚ್ಚಲಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದ ಎಲ್ಲಾ ಜಿಲ್ಲೆಗಳಲ್ಲಿ ಶನಿವಾರ ಜನರು ಸಾವಿರಾರು ಸಂಖ್ಯೆಯಲ್ಲಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಸಾಮಾಜಿಕ ಮಾಧ್ಯಮಗಳಲ್ಲಿನ ವಿಡಿಯೋ ಮತ್ತು ಫೋಟೋಗಳಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಲಾಠಿಗಳನ್ನು ಬಳಸಿರುವುದನ್ನು ತೋರಿಸಿತ್ತು. ಅಶ್ರುವಾಯು ಬಳಸಿ ಗುಂಪನ್ನು ಚದುರಿಸಲು ಪೊಲೀಸರು ಪ್ರಯತ್ನಿಸಿದರು. ಹಿಂಸಾತ್ಮಕ ಘರ್ಷಣೆಯ ಅನಂತರ ಶುಕ್ರವಾರ ಹತ್ತಾರು ಪೊಲೀಸ್ ಸಿಬ್ಬಂದಿ ಮತ್ತು ಪ್ರತಿಭಟನಾಕಾರರು ಗಾಯಗೊಂಡಿದ್ದರು.

ಇದನ್ನೂ ಓದಿ: America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

ಮೂವರು ಸಾವು

ಪಾಕಿಸ್ತಾನಿ ಪಡೆಗಳು ನಿರಾಯುಧ ನಾಗರಿಕರ ಮೇಲೆ ಗುಂಡು ಹಾರಿಸಿದ್ದು ಘರ್ಷಣೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪಿಒಕೆ ಕಾರ್ಯಕರ್ತ ಅಮ್ಜದ್ ಅಯೂಬ್ ಮಿರ್ಜಾ ಹೇಳಿದ್ದಾರೆ.‌ ಮಿರ್ಜಾ ಅವರು ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಕರೆ ನೀಡಿದ್ದು, ಪರಿಸ್ಥಿತಿ ಕೈ ಮೀರುತ್ತಿದೆ. ಕೇಂದ್ರವು ದೂರ ಉಳಿಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಭಾರತವು ಈಗ ತನ್ನೆಲ್ಲ ಗಮನವನ್ನು ಪಾಕಿಸ್ತಾನಿ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಮೇಲೆ ಕೇಂದ್ರೀಕರಿಸಬೇಕು ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ ಈ ಆಕ್ರಮಿತ ಪ್ರದೇಶದ ಸ್ವಾತಂತ್ರ್ಯಕ್ಕೆ ಸಹಾಯ ಮಾಡಬೇಕು ಎಂದು ತಿಳಿಸಿದರು.

Continue Reading

ವಿದೇಶ

Nijjar Killing Case: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ; ನಾಲ್ಕನೇ ಆರೋಪಿ ಅರೆಸ್ಟ್‌

Nijjar Killing Case: ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ಕನೇ ಆರೋಪಿ, ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು 22 ವರ್ಷದ ಅಮನ್‌ದೀಪ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕೊಲೆ ಮತ್ತು ನಿಜ್ಜರ್ ಹತ್ಯೆಯ ಪಿತೂರಿ ನಡೆಸಿರುವ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ನಿಜ್ಜಾರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಕರನ್‌ ಬ್ರಾರ್‌ (22), ಕಮಲ್‌ಪ್ರೀತ್‌ ಸಿಂಗ್‌ (22) ಮತ್ತು ಕರಣ್‌ಪ್ರೀತ್‌ ಸಿಂಗ್‌ (28) ಎಂಬ ಮೂವರನ್ನು ಬಂಧಿಸಲಾಗಿತ್ತು.

VISTARANEWS.COM


on

Nijjar Killing Case
Koo

ಒಟ್ಟಾವ: ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜಾರ್‌ (Nijjar Killing Case)ನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ಕನೇ ಆರೋಪಿ, ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೆನಡಾದ ತನಿಖಾ ತಂಡ ತಿಳಿಸಿದೆ.

ಬಂಧಿತ ಆರೋಪಿಯನ್ನು 22 ವರ್ಷದ ಅಮನ್‌ದೀಪ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕೊಲೆ ಮತ್ತು ನಿಜ್ಜರ್ ಹತ್ಯೆಯ ಪಿತೂರಿ ನಡೆಸಿರುವ ಪ್ರಕರಣ ದಾಖಲಿಸಲಾಗಿದೆ. ಬ್ರಾಂಪ್ಟನ್, ಸರ್ರೆ ಮತ್ತು ಅಬಾಟ್ಸ್ಫೋರ್ಡ್‌ನಲ್ಲಿ ವಾಸಿಸುತ್ತಿದ್ದ ಅಮನ್‌ದೀಪ್‌ ಸಿಂಗ್‌ನನ್ನು ಈ ಮೊದಲೇ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿ ಒಂಟಾರಿಯೊದಲ್ಲಿ ವಶಕ್ಕೆ ಪಡೆಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಪರಾಧಿಗಳ ಪತ್ತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಹಿಂದೆ ನಿಜ್ಜಾರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಕರನ್‌ ಬ್ರಾರ್‌ (22), ಕಮಲ್‌ಪ್ರೀತ್‌ ಸಿಂಗ್‌ (22) ಮತ್ತು ಕರಣ್‌ಪ್ರೀತ್‌ ಸಿಂಗ್‌ (28) ಎಂಬ ಮೂವರನ್ನು ಬಂಧಿಸಲಾಗಿತ್ತು. ಇವರ ವಿರುದ್ಧವೂ ನಿಜ್ಜಾರ್‌ ಹತ್ಯೆಯ ಸಂಚು ನಡೆಸಿದ ಆರೋಪ ಕೇಳಿ ಬಂದಿದೆ.

ಪ್ರಕರಣದ ಹಿನ್ನೆಲೆ

ಕಳೆದ ವರ್ಷ ಜನವರಿಯಲ್ಲಿ ನಿಜ್ಜಾರ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರ ಹತ್ಯೆಯನ್ನು ಕೆನಡಾದಲ್ಲಿರುವ ಖಲಿಸ್ತಾನಿಗಳು ಸಂಭ್ರಮಾಚರಣೆ ಮಾಡಿದ ಕೆಲವೇ ದಿನಗಳಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು ಕೆನಡಾದ ಸುರ‍್ರೆ ನಗರದಲ್ಲಿ ಕೊಲೆ ಮಾಡಲಾಗಿತ್ತು.

ಪಂಜಾಬಿಗಳೇ ಹೆಚ್ಚಿರುವ ಸುರ‍್ರೆ ನಗರದ ಗುರುನಾನಕ್‌ ಸಿಖ್‌ ಗುರುದ್ವಾರದ ಬಳಿಕ ಖಲಿಸ್ತಾನಿ ಉಗ್ರನ ಹತ್ಯೆ ನಡೆದಿತ್ತು. ಪಂಜಾಬ್‌ನಲ್ಲಿ ಅರ್ಚಕರೊಬ್ಬರ ಕೊಲೆಗೆ ಪಿತೂರಿ ನಡೆಸಿರುವುದು, ಮೂಲಭೂತವಾದದ ಪ್ರಸರಣ ಸೇರಿ ನಾಲ್ಕು ಪ್ರಕರಣಗಳಲ್ಲಿ ಎನ್‌ಐಎ ಈತನ ವಿರುದ್ಧ ತನಿಖೆ ನಡೆಸುತ್ತಿದೆ. ಅಲ್ಲದೆ ಈತನ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಕೂಡ ಎನ್‌ಐಎ ಘೋಷಿಸಿತ್ತು.

ಇದನ್ನೂ ಓದಿ: Avtar Khanda Dies: ಬ್ರಿಟನ್‌ನಲ್ಲಿ ಭಾರತದ ತಿರಂಗಾ ಕೆಳಗಿಳಿಸಿದ್ದ ಖಲಿಸ್ತಾನ್ ಉಗ್ರ ಅವತಾರ್‌ ಖಂಡಾ ಸಾವು

ಖಲಿಸ್ತಾನ್‌ ಟೈಗರ್‌ ಫೋರ್ಸ್‌ (KTF) ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಈತ ಪ್ರತ್ಯೇಕವಾದಿಗಳಿಗೆ ಹೆಚ್ಚಿನ ನೆರವು ಒದಗಿಸುತ್ತಿದ್ದ. ಭಾರತದಲ್ಲಿ ಹಲವು ಉಗ್ರ ಚಟುವಟಿಕೆಗಳ ಹಿಂದೆ ಈತನ ಕೈವಾಡವಿದೆ. ಕೆನಡಾದಲ್ಲೂ ಸಿಖ್‌ ಸಮುದಾಯದವರನ್ನು ಎತ್ತಿ ಕಟ್ಟುತ್ತಿದ್ದ. ಹಾಗಾಗಿ ಈತನು ಸೇರಿ ಸುಮಾರು 40 ಉಗ್ರರನ್ನು ಭಾರತವು ಮೋಸ್ಟ್‌ ವಾಂಟೆಡ್‌ ಉಗ್ರರ ಪಟ್ಟಿಗೆ ಸೇರಿಸಿತ್ತು. ಇದಕ್ಕೂ ಮೊದಲು ಖಲಿಸ್ತಾನಿ ಉಗ್ರ, ಖಲಿಸ್ತಾನ್‌ ನಾಯಕ, ಬಂಧಿತ ಅಮೃತ್‌ಪಾಲ್‌ ಸಿಂಗ್‌ನ ಆಪ್ತ, ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್‌ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರ ರೂವಾರಿ ಅವತಾರ್‌ ಸಿಂಗ್‌ ಖಂಡಾ ಲಂಡನ್‌ನಲ್ಲಿ ಮೃತಪಟ್ಟಿದ್ದ. ಅಮೃತ್‌ಪಾಲ್‌ ಸಿಂಗ್‌ ಬಂಧನದ ಬಳಿಕ ಕೆನಡಾದಲ್ಲಿರುವ ಖಲಿಸ್ತಾನಿಗಳು ಇನ್ನಷ್ಟು ತೀವ್ರವಾಗಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದರು.

Continue Reading

ವಿದೇಶ

Chinese Apps: ಟಿಕ್‌ಟಾಕ್‌ ಮಾತ್ರ ಅಲ್ಲ.. ಚೀನಾದ ಈ ಆಪ್‌ಗಳೂ ಅಷ್ಟೇ ಡೇಂಜರಸ್‌; ಶಾಕಿಂಗ್‌ ವರದಿ ಔಟ್‌

Chinese Apps: ಆಸ್ಟ್ರೇಲಿಯನ್‌ ಸ್ಟ್ರಾಟೆಜಿಕ್‌ ಪಾಲಿಸಿ ಎಂಬ ಸಂಸ್ಥೆಯ ಸಂಶೋಧಕರು ನಡೆಸಿ ಈ ಬಗ್ಗೆ ವರದಿ ನೀಡಿದ್ದಾರೆ. ಈ ವರದಿಯನ್ನು ಮೇ 2 ರಂದು ಆಸ್ಟ್ರೇಲಿಯಾ ಸರ್ಕಾರ ಮತ್ತು ಇತರ ರಾಷ್ಟ್ರಗಳ ಸರ್ಕಾರಕ್ಕೆ ಸಲ್ಲಿಸಿದ್ದು, ಬೀಜಿಂಗ್‌ನ ಕೆಲವು ಮೂಲಭೂತವಾದ ಮುಖಂಡರು ಚೀನಾದ ಟೆಕ್‌ ಕಂಪನಿಗಳ ಜೊತೆ ಕೈಜೋಡಿಸಿ ಪ್ರಪಂಚಾದ್ಯಂತ ಸಾಮಾಜಿಕ ಜಾಲತಾಣ ಆಪ್‌ ಅಥವಾ ಆನ್‌ಲೈನ್‌ ಗೇಮಿಂಗ್‌ ಆಪ್‌ಗಳ ಬಳಕೆದಾರರ ವೈಯಕ್ತಿಕ ವಿವರ ಮತ್ತು ದಾಖಲೆಗಳನ್ನು ಕದಿಯುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.

VISTARANEWS.COM


on

Chinese app
Koo

ಕ್ಯಾನ್‌ಬೆರಾ: ಭಾರತದಲ್ಲಿ ಮಾತ್ರವಲ್ಲದೇ ಟಿಕ್‌ ಟಾಕ್‌(TikTok) ಸೇರಿದಂತೆ ಅನೇಕ ಚೈನೀಸ್‌ ಆಪ್‌ಗಳ(Chinese apps) ಬಗ್ಗೆ ಇದೀಗ ಆಸ್ಟ್ರೇಲಿಯಾ(Australia)ದಲ್ಲೂ ಕಳವಳ ವ್ಯಕ್ತವಾಗಿದ್ದು, ಅಲ್ಲಿನ ಸರ್ಕಾರ ಅವುಗಳನ್ನು ಬ್ಯಾನ್‌ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ. ಟಿಕ್‌ಟಾಕ್‌ ಮಾತ್ರವಲ್ಲದೇ ವಿವಿಧ ಚೀನಾ ನಿರ್ಮಿತ ಮನೋರಂಜನಾ ಆಪ್‌ಗಳು, ಗೇಮಿಂಗ್‌ ಆಪ್‌ಗಳು ಬಳಕೆದಾರರ ವೈಯಕ್ತಿಕ ಮಾಹಿತಿ ಅಥವಾ ದಾಖಲೆಗಳನ್ನು ಕಳೆ ಹಾಕುತ್ತಿದೆ ಎಂಬುದು ಬಯಲಾಗಿದೆ.

ಆಸ್ಟ್ರೇಲಿಯನ್‌ ಸ್ಟ್ರಾಟೆಜಿಕ್‌ ಪಾಲಿಸಿ(Australian Strategic Policy) ಎಂಬ ಸಂಸ್ಥೆಯ ಸಂಶೋಧಕರು ನಡೆಸಿ ಈ ಬಗ್ಗೆ ವರದಿ ನೀಡಿದ್ದಾರೆ. ಈ ವರದಿಯನ್ನು ಮೇ 2 ರಂದು ಆಸ್ಟ್ರೇಲಿಯಾ ಸರ್ಕಾರ ಮತ್ತು ಇತರ ರಾಷ್ಟ್ರಗಳ ಸರ್ಕಾರಕ್ಕೆ ಸಲ್ಲಿಸಿದ್ದು, ಬೀಜಿಂಗ್‌ನ ಕೆಲವು ಮೂಲಭೂತವಾದ ಮುಖಂಡರು ಚೀನಾದ ಟೆಕ್‌ ಕಂಪನಿಗಳ ಜೊತೆ ಕೈಜೋಡಿಸಿ ಪ್ರಪಂಚಾದ್ಯಂತ ಸಾಮಾಜಿಕ ಜಾಲತಾಣ ಆಪ್‌ ಅಥವಾ ಆನ್‌ಲೈನ್‌ ಗೇಮಿಂಗ್‌ ಆಪ್‌ಗಳ ಬಳಕೆದಾರರ ವೈಯಕ್ತಿಕ ವಿವರ ಮತ್ತು ದಾಖಲೆಗಳನ್ನು ಕದಿಯುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.

ಚೀನಾ ಇಡೀ ಪ್ರಪಂಚದಲ್ಲಿ ಅತ್ಯಂತ ಬಲಶಾಲಿ ರಾಷ್ಟ್ರವೆಂದೆನಿಸಿಕೊಳ್ಳಬೇಕೆಂದು ಹವಣಿಸುತ್ತಿದೆ. ಅದಕ್ಕಾಗಿ ಜಾಗತಿಕ ಮಾಹಿತಿ ವ್ಯವಸ್ಥೆಯನ್ನು ತನ್ನ ಹತೋಟಿಯಲ್ಲಿಟ್ಟುಕೊಳ್ಳಬೇಕು ಮತ್ತು ಚೀನಾದ ಸಾಂಸ್ಕೃತಿಕ, ತಾಂತ್ರಿಕ, ಆರ್ಥಿಕ ಮತ್ತು ಮಿಲಿಟರಿ ಪ್ರಭಾವವನ್ನು ಹೆಚ್ಚಿಸಬೇಕು ಪ್ರಯತ್ನ ನಡೆಸುತ್ತಿದೆ. ಆಪ್‌ಗಳು ಕೇಳುವ ಸ್ವವಿವರಗಳು ಚೀನಾಗೆ ಬಹಳ ಉಪಯೋಗ ಆಗುತ್ತಿದೆ. ಈ ನಿಟ್ಟಿನಲ್ಲಿ ಇಂತಹ ಆಪ್‌ಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕಿದೆ ಎಂದು ವರದಿಯಲ್ಲಿ ತಿಳಿಸಿದೆ. ಇನ್ನು ಆಸ್ಟ್ರೇಲಿಯಾ ನೀಡಿರುವ ವರದಿ ಬಗ್ಗೆ ಇದುವರೆಗೆ ಚೀನಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಟಿಕ್ ಟಾಕ್ ಸೇರಿದಂತೆ ಹಲವು ಚೀನೀ ಆ್ಯಪ್​ಗಳನ್ನು ನಿಷೇಧಿಸಿದ್ದ ಭಾರತ ಸರ್ಕಾರ ಬಳಿಕ ಚೀನಾ ಮೂಲದ 200ಕ್ಕೂ ಹೆಚ್ಚು ಲೋನ್ ಮತ್ತು ಬೆಟ್ಟಿಂಗ್ ಆ್ಯಪ್​ಗಳನ್ನು ಬ್ಯಾನ್‌ ಮಾಡಿತ್ತು. ಅವುಗಳಲ್ಲಿ 138 ಬೆಟ್ಟಿಂಗ್ ಆ್ಯಪ್​ಗಳು ಮತ್ತು 94 ಲೋನ್ ಆ್ಯಪ್​ಗಳು ಸೇರಿದ್ದವು. ಈ ಆ್ಯಪ್​ಗಳನ್ನು ತಡೆಹಿಡಿಯಲು ಗೃಹ ಸಚಿವಾಲಯದಿಂದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯಕ್ಕೆ ನೇರವಾಗಿ ಸೂಚನೆ ನೀಡಲಾಗಿತ್ತು.

ಇದನ್ನೂ ಓದಿ:Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

ಮೊದಲಿಗೆ ಗೃಹ ಇಲಾಖೆಯು 28 ಚೀನೀ ಲೋನ್ ಆ್ಯಪ್​ಗಳ ಬಗ್ಗೆ ಪರಿಶೀಲನೆ ನಡೆಸಲು ಆರಂಭಿಸಿತ್ತು. ಆ ಸಂದರ್ಭದಲ್ಲಿ ಅಂಥ 94 ಆ್ಯಪ್​ಗಳು ಬೇರೆ ಬೇರೆ ಆನ್​ಲೈನ್ ತಾಣಗಳಲ್ಲಿ ಲಭ್ಯ ಇದ್ದುದು ಗಮನಕ್ಕೆ ಬಂದಿದೆ. ಈ ಆ್ಯಪ್​ಗಳು ಜನರ ಗಮನ ಸೆಳೆದು ಭಾರೀ ಪ್ರಮಾಣದಲ್ಲಿ ಹಣಕಾಸು ವಂಚನೆ ಎಸಗುತ್ತಿವುದು ಗೊತ್ತಾಗಿದೆ. ಅಲ್ಲದೇ, ಈ ಆ್ಯಪ್​ಗಳ ಮೂಲಕ ಗೂಢಚಾರಿಕೆ, ಪಿತೂರಿ ಇತ್ಯಾದಿ ಪಾತಕಗಳನ್ನು ಎಸಗುವುದರ ಜೊತೆಗೆ ಜನರ ವೈಯಕ್ತಿಕ ಮಾಹಿತಿಯನ್ನು ಕದ್ದು ಭದ್ರತಾ ಅಪಾಯ ಒಡ್ಡುವಂತೆ ತೋರಿದ್ದವು. ಹೀಗಾಗಿ, ಈ ಅಪ್ಲಿಕೇಶನ್​ಗಳನ್ನು ನಿಷೇಧಿಸಲು ಸರ್ಕಾರ ನಿರ್ಧಿಸಿತ್ತು.

Continue Reading

ಪ್ರಮುಖ ಸುದ್ದಿ

ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ರಸ್ತೆ ಬದಿಯೇ ಅತ್ಯಾಚಾರ ಎಸಗಿದ ದುಷ್ಟ; ಭೀಕರ ವಿಡಿಯೊ ಇಲ್ಲಿದೆ

ಮಹಿಳೆಯ ಕುತ್ತಿಗೆಗೆ ಹಿಂದಿನಿಂದ ಬೆಲ್ಟ್‌ ಮೂಲಕ ಬಿಗಿಯುವ, ಆಕೆಯನ್ನು ಎಳೆಯುವ, ಆಕೆಯನ್ನು ಪ್ರಜ್ಞೆತಪ್ಪಿಸಿದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನ ಮಧ್ಯೆಯೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

US
Koo

ವಾಷಿಂಗ್ಟನ್‌: ಅಮೆರಿಕದ ನ್ಯೂಯಾರ್ಕ್‌ ಸಿಟಿಯಲ್ಲಿ (New York City) ದುಷ್ಟನೊಬ್ಬ ಮಹಿಳೆಯ ಕುತ್ತಿಗೆಗೆ ಬೆಲ್ಟ್‌ ಬಿಗಿದು, ಆಕೆಯನ್ನು ದರದರನೆ ಎಳೆದುಕೊಂಡು ಹೋಗಿ, ರಸ್ತೆಯ ಬದಿಯೇ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯ ಮೇಲೆ ಮೃಗೀಯವಾಗಿ ದೌರ್ಜನ್ಯ ಎಸಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದ್ದು, ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ನ್ಯೂಯಾರ್ಕ್‌ ಸಿಟಿಯ ಸೌತ್‌ ಬ್ರಾಂಕ್ಸ್‌ನ ಈಸ್ಟ್‌ 152ನೇ ಸ್ಟ್ರೀಟ್‌ನಲ್ಲಿ ಮೇ 1ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮನೆಗೆ ನಡೆದುಕೊಂಡು ಹೋಗುವಾಗ ದುರುಳನು ಕೃತ್ಯ ಎಸಗಿದ್ದಾನೆ. ಸುಮಾರು 45 ವರ್ಷದ ಮಹಿಳೆಯು ನಡೆದುಕೊಂಡು ಹೋಗುವಾಗ ಮುಸುಕುಧಾರಿ ವ್ಯಕ್ತಿಯು ಆಕೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದಿದ್ದಾನೆ. ರಸ್ತೆ ಬದಿ ನಿಂತಿದ್ದ ಎರಡು ಕಾರುಗಳ ಮಧ್ಯದ ಜಾಗದವರೆಗೆ ಆಕೆಯನ್ನು ಎಳೆದುಕೊಂಡು ಹೋಗಿದ್ದಾನೆ. ಅಲ್ಲಿ, ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮಹಿಳೆಯ ಕುತ್ತಿಗೆಗೆ ಹಿಂದಿನಿಂದ ಬೆಲ್ಟ್‌ ಮೂಲಕ ಬಿಗಿಯುವ, ಆಕೆಯನ್ನು ಎಳೆಯುವ, ಆಕೆಯನ್ನು ಪ್ರಜ್ಞೆತಪ್ಪಿಸಿದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನ ಮಧ್ಯೆಯೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಪ್ರಜ್ಞೆ ತಪ್ಪಿಸಿದ ಬಳಿಕ ಅತ್ಯಾಚಾರ ಎಸಗಿದ ದುಷ್ಟನು, ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ಞೆ ತಪ್ಪಿಸಿ, ಅತ್ಯಾಚಾರ ಎಸಗಿದ ಬಳಿಕ ದುಷ್ಟನು ಮಹಿಳೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ರಸ್ತೆ ಬದಿ ಬಿದ್ದಿದ್ದ ಮಹಿಳೆಯನ್ನು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳಷ್ಟೇ ಮ್ಯಾನ್ಹಟನ್‌ನಲ್ಲಿ ಯುವತಿಯೊಬ್ಬರಿಗೆ ದುಷ್ಟನೊಬ್ಬ ರಾತ್ರಿ ಲೈಂಗಿಕ ಕಿರುಕುಳ ನೀಡಿದ್ದ. ಇದಾದ ಬಳಿಕವೂ ದುಷ್ಕರ್ಮಿಯ ಸುಳಿವು ಪೊಲೀಸರಿಗೆ ಸಿಕ್ಕಿರಲಿಲ್ಲ. ಹಾಗಾಗಿ, ಅಮೆರಿಕದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Continue Reading
Advertisement
Arvind Kejriwal
ದೇಶ1 hour ago

Arvind Kejriwal: ಚೀನಾದಿಂದ ಭಾರತದ ನೆಲ ವಾಪಸ್‌ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

Prajwal Revanna Case: Beware of making a statement Parameshwara warns to HD Kumaraswamy
ರಾಜಕೀಯ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Road Accident
ಕ್ರೈಂ1 hour ago

Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

Ram Charan get mobbed by fans during public appearances
ಸಿನಿಮಾ2 hours ago

Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

Mother's Day 2024 Duniya Vijay jaggesh Post Viral
ಸಿನಿಮಾ2 hours ago

Mother’s Day 2024: ಅಮ್ಮನ ನೆನೆದಾಗ ಮಗುವಾಗುವೆ ಎಂದ ಜಗ್ಗೇಶ್‌: ದುನಿಯಾ ವಿಜಯ್‌ ಭಾವುಕ ಪೋಸ್ಟ್‌!

Job Alert
ಉದ್ಯೋಗ2 hours ago

Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Dead Body Found
ಕ್ರೈಂ2 hours ago

Dead Body Found : ಡ್ಯಾಂನಲ್ಲಿ ಬಿದ್ದಿತ್ತು ವ್ಯಕ್ತಿ ಶವ; ರೈಲು ಬೋಗಿ ಒಳಗೆ ಕೊಳೆಯುತ್ತಿತ್ತು ಮಹಿಳೆಯ ಡೆಡ್‌ಬಾಡಿ

Narendra Modi
ದೇಶ2 hours ago

Narendra Modi: ಚುನಾವಣೆ ಪ್ರಚಾರದ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದ ಮೋದಿ; ಏನವು?

Prajwal Revanna Case Preetham Gowda close aides arrested and Congress hits back at BJP
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಹಂಚಿಕೆ ಕೇಸ್‌; ಪ್ರೀತಂ ಗೌಡ ಅತ್ಯಾಪ್ತರ ಸೆರೆ: ಬಿಜೆಪಿಗೆ ಚೆಕ್‌ಮೇಟ್‌?

Mother's Day
ಮಹಿಳೆ2 hours ago

Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Two people of pen drive allottees arrested
ಕ್ರೈಂ3 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ10 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

ಟ್ರೆಂಡಿಂಗ್‌