ನಮ್ಮ ಚಳ್ಳಕೆರೆ; ಭಾರತದ ಭವಿಷ್ಯದ ವಿಜ್ಞಾನ ಕೇಂದ್ರ - Vistara News

ತಂತ್ರಜ್ಞಾನ

ನಮ್ಮ ಚಳ್ಳಕೆರೆ; ಭಾರತದ ಭವಿಷ್ಯದ ವಿಜ್ಞಾನ ಕೇಂದ್ರ

ಡಿಆರ್‌ಡಿಓ ಇತ್ತೀಚೆಗೆ ಚಳ್ಳಕೆರೆಯಲ್ಲಿ ಚಾಲಕ ರಹಿತ ವಿಮಾನದ ಮೊದಲ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ. ಈ ಮೂಲಕ ಚಳ್ಳಕೆರೆ ಜಗತ್ತಿನ ಗಮನ ಸೆಳೆದಿದೆ. ಭಾರತದ ಪ್ರಮುಖ ನಾಲ್ಕು ವಿಜ್ಞಾನ ಸಂಸ್ಥೆಗಳು ಇಲ್ಲಿರುವುದರಿಂದ ಭವಿಷ್ಯದ ಭಾರತದ ವಿಜ್ಞಾನ ಕೇಂದ್ರವಾಗಿ ರೂಪುಗೊಳ್ಳುತ್ತಿದೆ. ಈ ಬಗ್ಗೆ ತಜ್ಞರ ಒಳನೋಟ ಇಲ್ಲಿದೆ.

VISTARANEWS.COM


on

challakere science city
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಿರೀಶ್ ಲಿಂಗಣ್ಣ
ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ (ಬಿಎಆರ್‌ಸಿ), ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ), ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ಈ ನಾಲಕ್ಕೂ ಸಂಸ್ಥೆಗಳು ಜೊತೆಯಾಗಿ ಕರ್ನಾಟಕದ ಚಿತ್ರದುರ್ಗದಲ್ಲಿ 8,000 ಎಕರೆ ಭೂ ಪ್ರದೇಶದಲ್ಲಿ ಹೊಸದಾದ ಪಟ್ಟಣ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿವೆ. ಭಾರತದ ಪ್ರಮುಖ ವಿಜ್ಞಾನ ಸಂಸ್ಥೆಗಳು ಈಗ ಚಿತ್ರದುರ್ಗದ ಚಳ್ಳಕೆರೆಗೆ ಕಾಲಿಡುತ್ತಿರುವುದರಿಂದ, ಚಿತ್ರದುರ್ಗ ಭವಿಷ್ಯದ ಭಾರತದ ವಿಜ್ಞಾನ ಕೇಂದ್ರವಾಗಿ ರೂಪುಗೊಳ್ಳಬಹುದಾಗಿದೆ.

ಬೆಂಗಳೂರಿನಿಂದ 200 ಕಿಲೋಮೀಟರ್ ದೂರದಲ್ಲಿರುವ ಚಳ್ಳಕೆರೆಯಲ್ಲಿ 8,000 ಎಕರೆಗೂ ಹೆಚ್ಚಿನ ಜಾಗದಲ್ಲಿ ಐಐಎಸ್‌ಸಿ, ಡಿಆರ್‌ಡಿಓ, ಇಸ್ರೊ ಹಾಗೂ ಬಿಎಆರ್‌ಸಿ ಸಂಸ್ಥೆಗಳನ್ನು ಒಳಗೊಂಡ ನೂತನ ಪಟ್ಟಣ ನಿರ್ಮಾಣಗೊಳ್ಳುತ್ತಿದೆ. ಈ ಪ್ರದೇಶವು ಒಂದು ವಿನೂತನ ಪಟ್ಟಣವಾಗಿ ರೂಪುಗೊಳ್ಳಲಿದ್ದು, ಭಾರತದ ಅತಿದೊಡ್ಡ ವಿಜ್ಞಾನ ಕೇಂದ್ರಗಳಲ್ಲಿ ಒಂದಾಗಲಿದೆ.

ಬೆಂಗಳೂರು ನಗರ ಈಗಾಗಲೇ ಮಿತಿಮೀರಿ ಬೆಳೆದು, ಅಪಾರವಾದ ಜನಸಾಂದ್ರತೆಯನ್ನು ಹೊಂದಿದೆ. ಆದ್ದರಿಂದ ಸರ್ಕಾರ ಇನ್ನೂ ಹೆಚ್ಚಿನ ಯೋಜನೆಗಳನ್ನು ಬೆಂಗಳೂರಿಗೆ ತಂದು ಸುರಿಯುವುದು ಬೇಡ ಎಂದು ನಿರ್ಧರಿಸಿದೆ. ಇದರಿಂದಾಗಿ, ಕರ್ನಾಟಕದ ಬೇರೆ ನಗರಗಳು, ಪಟ್ಟಣಗಳೂ ಸಹ ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಲಿವೆ. ಪ್ರಸ್ತುತ ವಿಜ್ಞಾನ ಕೇಂದ್ರದ ಯೋಜನೆಯ ಮೂಲಕ ಚಿತ್ರದುರ್ಗ ಹಾಗೂ ಸುತ್ತಲಿನ ಪ್ರದೇಶಗಳಲ್ಲೂ ಬದಲಾವಣೆ ಕಂಡುಬರಲಿದೆ.

ಚಿತ್ರದುರ್ಗ ಜಿಲ್ಲೆಯು ಪೂರ್ತಿಯಾಗಿ ಬಂಡೆಗಲ್ಲಿನ ಭೂಪ್ರದೇಶವನ್ನು ಹೊಂದಿದ್ದು, ವೇದಾವತಿ ನದಿ ಕಣಿವೆಯಲ್ಲಿ ಬೆಳೆದಿದೆ. ಚಿತ್ರದುರ್ಗದ ವಾಯುವ್ಯ ದಿಕ್ಕಿನಲ್ಲಿ ತುಂಗಭದ್ರಾ ನದಿ ಹರಿಯುತ್ತದೆ. ಈ ಯೋಜನೆ ಜಾರಿಗೊಂಡ ಬಳಿಕ, ಚಿತ್ರದುರ್ಗಕ್ಕೆ ಹೆಚ್ಚಿನ ಅಭಿವೃದ್ಧಿಯ ವೇಗ ಲಭ್ಯವಾಗಲಿದ್ದು, ಚಿತ್ರದುರ್ಗದ ಸುತ್ತಮುತ್ತಲಿನ ರಸ್ತೆಗಳು ಹಾಗೂ ಚಿತ್ರದುರ್ಗ – ಬೆಂಗಳೂರು ಮಧ್ಯದ ರಸ್ತೆಯೂ ಅಭಿವೃದ್ಧಿ ಹೊಂದುವ ಎಲ್ಲಾ ಸಾಧ್ಯತೆಗಳಿವೆ.

ಡಿಆರ್‌ಡಿಓ ಯುಎವಿ ಯೋಜನೆ

DRDO
ಮಾನವರಹಿತ ವೈಮಾನಿಕ ವಾಹನ (UAV)

ಈಗಾಗಲೇ ಲಭ್ಯವಿರುವ ಮಾಹಿತಿಗಳ ಪ್ರಕಾರ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅತ್ಯಾಧುನಿಕ ಅನ್ ಮ್ಯಾನ್ಡ್ ಏರಿಯಲ್ ವೆಹಿಕಲ್ (ಯುಎವಿ – ಮಾನವ ರಹಿತ ವಿಮಾನ) ಯೋಜನೆಯನ್ನು ಆಯೋಜಿಸುತ್ತಿದ್ದು, ಭಾರತದ ಸೇನಾಪಡೆಗಳಿಗೆ ಅಂತಹಾ ಆಧುನಿಕ ವಿಮಾನಗಳನ್ನು, ಹಾರಾಟ ಉಪಕರಣಗಳನ್ನು ತಯಾರಿಸುವ ಹಾಗೂ ಪರೀಕ್ಷಿಸುವ ಕೇಂದ್ರವನ್ನು ಒಳಗೊಳ್ಳಲಿದೆ.

ಇದರೊಡನೆ, ಪ್ರಸ್ತುತ ಪಟ್ಟಣದಲ್ಲಿ ಮಾನವ ರಹಿತ ವಿಮಾನಗಳ ಹಾರಾಟ, ಭೂಸ್ಪರ್ಶಕ್ಕೆ ಅಗತ್ಯವಿರುವ ಏರ್ ಸ್ಟ್ರಿಪ್ ಅನ್ನು ಹೊಂದಿರಲಿದೆ. ಸಣ್ಣ ಗಾತ್ರದ ಮಾನವ ಚಾಲಿತ ವಿಮಾನಗಳೂ ಇಲ್ಲಿ ಹಾರಾಟ ನಡೆಸಲು ಸಾಧ್ಯವಿದೆ.

ಏರೋನಾಟಿಕಲ್ ಟೆಸ್ಟ್ ರೇಂಜ್

ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ಎಟಿಆರ್) ಡಿಆರ್‌ಡಿಓದ ಒಂದು ಹೊರಾಂಗಣ ಪರೀಕ್ಷಾ ಮತ್ತು ಮೌಲ್ಯಮಾಪನ ಕೇಂದ್ರವಾಗಿದೆ. ಇದು ಸಂಪೂರ್ಣವಾಗಿ ಮಾನವ ಚಾಲಿತ ಹಾಗೂ ಮಾನವ ರಹಿತ ವಿಮಾನಗಳ ಸಂಶೋಧನೆಗೆ ಉಪಯೋಗವಾಗಲಿದೆ. ಪ್ರಸ್ತುತ ಎಟಿಆರ್ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ (ಎಡಿಇ) ಆಡಳಿತದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಏರ್ ಟ್ರಾಫಿಕ್ ಡಿಸ್ಪ್ಲೇ ಸಿಸ್ಟಮ್ ಹೊಂದಿರುವ ಎಟಿಆರ್ ಚಿತ್ರದುರ್ಗದಲ್ಲಿ ರೇಂಜ್ ಕಂಟ್ರೋಲ್ ಸೆಂಟರ್ (ಆರ್‌ಸಿಸಿ) ವ್ಯವಸ್ಥೆಯೂ ಇದೆ. ಇಲ್ಲಿ ಒಂದು ರೇಡಾರ್ ಸೆಂಟರ್ ಇದ್ದು, ಅಲ್ಲಿ ಪ್ರೈಮರಿ ಹಾಗೂ ಸೆಕೆಂಡರಿ ಸರ್ವೈಯಲೆನ್ಸ್ ರೇಡಾರ್‌ಗಳು, ಮಿಷನ್ ವೀಡಿಯೋ ಡಿಸ್ಟ್ರಿಬ್ಯೂಷನ್ ಹಾಗೂ ಡಿಸ್ಪ್ಲೇ ಸಿಸ್ಟಮ್, ಮಾನವ ರಹಿತ ವೈಮಾನಿಕ ವಾಹನಗಳಾದ ರುಸ್ತುಂ -1 ಹಾಗೂ ರುಸ್ತುಂ – 2 ಗಳನ್ನು ಒಳಗೊಂಡ ಎರಡು ಹ್ಯಾಂಗರ್‌ಗಳು ಇವೆ. ಪ್ರಸ್ತುತ ಈ ರನ್ ವೇ 2.2 ಕಿಲೋಮೀಟರ್ ಉದ್ದವಾಗಿದ್ದು, ಇದರ ಯಾವ ತುದಿಯಿಂದಲೂ ವಿಮಾನಗಳು ಭೂಸ್ಪರ್ಶ ಮಾಡಬಹುದು, ಹಾರಾಟ ನಡೆಸಬಹುದಾಗಿದೆ.

ಎಟಿಆರ್ ಮುಂದಿನ ದಿನಗಳಲ್ಲಿ ಏರೋಸ್ಟಾಟ್ಸ್, ಗಾಳಿಯಿಂದ ನೆಲಕ್ಕೆ ದಾಳಿ ನಡೆಸುವ ಆಯುಧಗಳು, ಪ್ಯಾರಾಶೂಟ್‌ಗಳು, ಹಾಗೂ ಮಾನವ ರಹಿತ ವಿಮಾನಗಳ ಪರೀಕ್ಷೆಗಳನ್ನು ನಡೆಸುವ ಉದ್ದೇಶ ಹೊಂದಿದೆ. ಆದರೆ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಪರೀಕ್ಷಾ ಉಡಾವಣೆ ಈ ಕೇಂದ್ರದಲ್ಲಿ ನಡೆಸುವುದಿಲ್ಲ.

ಚಿತ್ರದುರ್ಗದ ಸಮೀಪದಲ್ಲಿರುವ ಚಳ್ಳಕೆರೆ ಎಟಿಆರ್ ನಲ್ಲಿ ಇಲ್ಲಿಯ ತನಕ ತಪಸ್ ಬಿಎಚ್ – 201 ವಿಮಾನದ 65 ಹಾರಾಟಗಳು ಪೂರ್ಣಗೊಂಡಿವೆ. ಟ್ಯಾಕ್ಟಿಕಲ್ ಏರ್‌ಬಾರ್ನ್ ಪ್ಲಾಟ್‌ಫಾರ್ಮ್ ಫಾರ್ ಏರಿಯಲ್ ಸರ್ವಯಲೆನ್ಸ್ ಬಿಯಾಂಡ್ ಹಾರಿಜ಼ಾನ್ – 201 (ತಪಸ್ ಬಿಎಚ್ – 201) ಒಂದು ಮೀಡಿಯಂ ಆಲ್ಟಿಟ್ಯೂಡ್ ಲಾಂಗ್ ಎಂಡ್ಯುರೆನ್ಸ್ (ಎಂಎಎಲ್ಇ) ಮಾನವ ರಹಿತ ವಿಮಾನವಾಗಿದ್ದು, ಸಂಪೂರ್ಣವಾಗಿ ಭಾರತದಲ್ಲಿ ಎಡಿಇಯಿಂದ ನಿರ್ಮಾಣಗೊಂಡಿದೆ. ಇನ್ನೊಂದೆಡೆ, ಎಟಿಆರ್ ನಲ್ಲಿ ಜಾಗತಿಕ ಗುಣಮಟ್ಟದ ಆ್ಯಕ್ಟಿವ್ ಇಲೆಕ್ಟ್ರಾನಿಕಲಿ ಸ್ಕ್ಯಾನಿಂಗ್ ಆಂಟೆನಾ ಅರೇ ವ್ಯವಸ್ಥೆಯೂ ಮುಂದಿನ ದಿನಗಳಲ್ಲಿ ಲಭ್ಯವಾಗಲಿದೆ.

ಬಿಎಆರ್‌ಸಿ ಕೇಂದ್ರ

ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ಭಾರತದ ಒಂದು ಪ್ರಮುಖ ಶಕ್ತಿ ಕೇಂದ್ರವಾಗಿ ಹೊರಹೊಮ್ಮಲಿದೆ. ಇಲ್ಲಿ ಧಾತು ಪುಷ್ಟೀಕರಣದ ಕಾರ್ಯ ಕೈಗೊಳ್ಳಲಾಗುವುದು. ಕೈಗಾದ ಬಳಿಕ, ಚಳ್ಳಕೆರೆಯ ಬಿಎಆರ್‌ಸಿ ಕೇಂದ್ರವು ಭಾರತದ ಎರಡನೇ ಪ್ರಮುಖ ಅಣುಶಕ್ತಿ ಕೇಂದ್ರವಾಗಲಿದೆ. ಇಲ್ಲಿ ಅಣುಶಕ್ತಿ ಸ್ಥಾವರಗಳಿಗೆ ಶಕ್ತಿ ನೀಡುವ ಥೋರಿಯಂ, ಯುರೇನಿಯಂನಂತಹ ಧಾತುಗಳನ್ನು ಪುಷ್ಟೀಕರಿಸಲಾಗುವುದು.

ರಾಜ್ಯದಲ್ಲಿ ಇಸ್ರೋದ ಮತ್ತೊಂದು ಕೇಂದ್ರ

ಇಸ್ರೋ ಸಂಸ್ಥೆಯ ಮುಖ್ಯ ಉದ್ದೇಶ ರಿಮೋಟ್ ಸೆನ್ಸಿಂಗ್ ಹಾಗೂ ಸಂವಹನದ ಗುರಿ ಸಾಧಿಸುವುದಾಗಿದೆ. ಈ ಯೋಜನೆಯ ಗುರಿ ಹೈದರಾಬಾದಿನಲ್ಲಿರುವ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಏಜೆನ್ಸಿಗೆ ಸರಿಸಮವಾಗಿ ಕೆಲಸ ಮಾಡುವುದಾಗಿದ್ದು, ಈ ಕೇಂದ್ರ ಯುರೋಪಿನ ಬಾಹ್ಯಾಕಾಶ ಕೇಂದ್ರಗಳು ಹಾಗೂ ಅಮೆರಿಕಾದ ಬಾಹ್ಯಾಕಾಶ ಕೇಂದ್ರಗಳೊಡನೆ ಸಂಪರ್ಕ ಹೊಂದಿರಲಿದ್ದು, ಅವುಗಳ ಮಧ್ಯ ಹೆಚ್ಚಿನ ಪ್ರಮಾಣದ ಮಾಹಿತಿ ವಿನಿಮಯವಾಗಲಿದೆ.

ಟು ಸ್ಟೇಜ್ ಟು ಆರ್ಬಿಟ್ ಮಾದರಿಯ ಮರುಬಳಕೆಯ ಲಾಂಚ್ ವೆಹಿಕಲ್ ನಿರ್ಮಾಣಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಈ ಮಹತ್ವಾಕಾಂಕ್ಷೆಯ ಈ ನೂತನ ಕೇಂದ್ರವನ್ನು ಏಪ್ರಿಲ್ ಅಂತ್ಯದ ಮೊದಲು ನಿರ್ಣಾಯಕ ಹಂತಕ್ಕೆ ತರಲಿದೆ. ಭಾರತದ ಈ ಮರುಬಳಸಬಹುದಾದ ಉಡಾವಣಾ ವಾಹನದ ತಂತ್ರಜ್ಞಾನವನ್ನು ಇಸ್ರೋ ಚಿತ್ರದುರ್ಗದ ಏರ್ ಸ್ಟ್ರಿಪ್ನಲ್ಲಿ ಪರೀಕ್ಷೆಗೆ ಒಳಪಡಿಸಲಿದೆ.

ಈ ಆರ್‌ಎಲ್‌ವಿ ಲ್ಯಾಂಡಿಂಗ್ ಎಕ್ಸ್ಪರಿಮೆಂಟ್ ಅಥವಾ ಆರ್‌ಎಲ್‌ವಿಎಲ್ಇಎಕ್ಸ್ ಪರೀಕ್ಷೆಯು ರೆಕ್ಕೆಯನ್ನು ಹೊಂದಿರುವ, ಮಾನವ ರಹಿತ ಹಾರಾಟದ ಮೂಲ ಮಾದರಿಯನ್ನು 2.3ರಿಂದ 2.4 ಕಿಲೋಮೀಟರ್ ಎತ್ತರಕ್ಕೆ ಹೆಲಿಕಾಪ್ಟರ್ ಮೂಲಕ ಒಯ್ದು, ಆ ಬಳಿಕ ಅದನ್ನು ಏರ್ ಸ್ಟ್ರಿಪ್‌ನಲ್ಲಿ ಭೂಸ್ಪರ್ಶ ಮಾಡುವಂತೆ ಬಿಡಲಾಗುವುದು.

“ಈ ಮೂಲ ಮಾದರಿಯನ್ನು ಏರ್ ಸ್ಟ್ರಿಪ್‌ನಿಂದ 3.7 ಕಿಲೋಮೀಟರ್ ದೂರದಲ್ಲಿ ಬಿಡುಗಡೆಗೊಳಿಸಲಾಗುವುದು. ಆ ನಂತರ ಈ ದೂರವನ್ನು ಅದು ಅದರ ಪಾಡಿಗೆ ವೇಗವನ್ನು ಗಳಿಸಿಕೊಳ್ಳುತ್ತಾ, ನಿಯಂತ್ರಣ ಉಳಿಸಿಕೊಳ್ಳುತ್ತಾ, ಯಾವುದೇ ವಿಮಾನದಂತೆ ಕೆಳಗಡೆ ಆಗಮಿಸಿ, ಹಿಂದಿನ ಚಕ್ರಗಳು ಮೊದಲು ಭೂಸ್ಪರ್ಶವಾಗುವಂತೆ ನೆಲಕ್ಕೆ ಇಳಿಯಬೇಕು. ಆ ಬಳಿಕ ಬ್ರೇಕಿಂಗ್ ಉದ್ದೇಶಕ್ಕೆ ಒಂದು ಪ್ಯಾರಾಶೂಟ್ ಸಹ ಬಳಕೆಗೆ ಬರುತ್ತದೆ” ಎಂದು ಇಸ್ರೋ ಅಧ್ಯಕ್ಷರಾದ ಎಸ್ ಸೋಮನಾಥ್ ವಿವರಿಸಿದ್ದಾರೆ.

ಈ ಹಿಂದೆ, 2020ರಲ್ಲಿ ಇಸ್ರೋ 2,700 ಕೋಟಿ ರೂ ವೆಚ್ಚದಲ್ಲಿ ಹ್ಯುಮನ್ ಸ್ಪೇಸ್ ಫ್ಲೈಟ್ ಇನ್ಫ್ರಾಸ್ಟ್ರಕ್ಚರ್ ಸೆಂಟರ್ ನಿರ್ಮಾಣಕ್ಕಾಗಿ ಮನವಿ ಸಲ್ಲಿಸಿತ್ತು. ಈ ಕೇಂದ್ರವೂ ಸಹ ಚಿತ್ರದುರ್ಗ ಜಿಲ್ಲೆಯಲ್ಲೇ ನಿರ್ಮಾಣಗೊಳ್ಳಲಿದ್ದು, ಇದು ಮುಂದಿನ ಮೂರು ವರ್ಷಗಳಲ್ಲಿ ಕಾರ್ಯಸನ್ನದ್ಧವಾಗಲಿದೆ.

ಭಾರತೀಯ ವಿಜ್ಞಾನ ಸಂಸ್ಥೆಯ ಕೇಂದ್ರ

ಭಾರತೀಯ ವಿಜ್ಞಾನ ಸಂಸ್ಥೆ ಒಂದು ವೃತ್ತಾಕಾರದ, ಸಿಂಕ್ರೊಟ್ರಾನ್ ಎಂಬ ಬಹುದೊಡ್ಡ ಕಾಂತೀಯ ವ್ಯವಸ್ಥೆಯನ್ನು 2,000 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಾಣಗೊಳಿಸಲು ಯೋಜನೆ ಹಾಕಿಕೊಂಡಿದೆ. ಈ ಕೇಂದ್ರದಲ್ಲಿ ಇಲೆಕ್ಟ್ರಾನ್‌ಗಳು ಬೆಳಕಿನ ವೇಗದಲ್ಲಿ ಚಲಿಸುತ್ತಿರುತ್ತವೆ. ಇಲ್ಲಿ ಇನ್ನೂ ಉತ್ತಮ ಉಪಯುಕ್ತ ಔಷಧ ಅನ್ವೇಷಣೆಯ ಕುರಿತು ಪ್ರಯೋಗಗಳು ಹಾಗೂ ಸಂಶೋಧನೆಗಳು, ಮೆಡಿಕಲ್ ಇಮೇಜಿಂಗ್ ಉಪಕರಣಗಳು, ಕ್ಯಾನ್ಸರ್ ರೋಗ ಚಿಕಿತ್ಸೆಗೆ ಚಿಕಿತ್ಸಾ ವಿಧಾನಗಳ ಸಂಶೋಧನೆಗಳು ಹಾಗೂ ಔಷಧಿಗಳಿಗೆ ಜೀವಂತ ಜೀವಕೋಶಗಳು ಹೇಗೆ ವರ್ತಿಸುತ್ತವೆ ಎಂಬುದನ್ನು ತಿಳಿದುಕೊಳ್ಳುವ ಪ್ರಯೋಗಗಳು ನಡೆಯಲಿವೆ.

challakere science city

ಸಿಂಕ್ರೋಟ್ರಾನ್ ಒಂದೇ ಅಂದಾಜು ನೂರು ಎಕರೆಗಳ ಭೂಪ್ರದೇಶವನ್ನು ವ್ಯಾಪಿಸಿರಲಿದ್ದು, ಅದಕ್ಕೆ ಒಂದು ವೃತ್ತಾಕಾರದ ಸುರಂಗವನ್ನೂ ಜೋಡಿಸಲಾಗುವುದು. ಆದರೆ ಈ ಕೇಂದ್ರವು ನೆಲದಾಳದಲ್ಲಿಯೂ ಇರಬಹುದು ಅಥವಾ ನೆಲದ ಮೇಲೂ ಇರಬಹುದಾಗಿದ್ದು, ಜಿನಿವಾದಲ್ಲಿರುವ ಸಿಇಆರ್‌ಎನ್ ಕೇಂದ್ರವನ್ನು ಹೋಲಲಿದೆ. ಸಿಇಆರ್‌ಎನ್ ಅತ್ಯಧಿಕ ಶಕ್ತಿಯ ಭೌತಶಾಸ್ತ್ರ ವಿಷಯದ ಸಂಶೋಧನೆ ಕೈಗೊಳ್ಳುತ್ತಿದ್ದು, ಚಿತ್ರದುರ್ಗದ ಐಐಎಸ್‌ಸಿ ಕೇಂದ್ರ 2.5ರಿಂದ 6 ಗಿಗಾ ಇಲೆಕ್ಟ್ರಾನ್ ವೋಲ್ಟ್ ವ್ಯಾಪ್ತಿಯಲ್ಲಿ ಜೀವಶಾಸ್ತ್ರ ಹಾಗೂ ವಸ್ತು ವಿಜ್ಞಾನದ ಕುರಿತು ಸಂಶೋಧನೆ ನಡೆಸಲಿದೆ.

ಏನು ಈ ಸಿಂಕ್ರೋಟ್ರಾನ್?

ಸರಳವಾಗಿ ಹೇಳಬೇಕೆಂದರೆ, ಈ ಸಿಂಕ್ರೋಟ್ರಾನ್ ಎನ್ನುವುದು ಒಂದು ಮುಚ್ಚಿಕೊಂಡಿರುವ, ಅತಿದೊಡ್ಡ ವೃತ್ತಾಕಾರದ ಕಾಂತೀಯ ಸುರಂಗದಂತೆ ಕಂಡುಬರುತ್ತದೆ. ಇದನ್ನು ನೆಲದ ಆಳದಲ್ಲಿ ಅಥವಾ ಭೂಮಿಯ ಮೇಲೂ ಸಹ ನಿರ್ಮಾಣಗೊಳಿಸಬಹುದಾಗಿದೆ. ಇದರೊಳಗೆ ಪ್ರೋಟಾನ್ ಹಾಗೂ ಇಲೆಕ್ಟ್ರಾನ್‌ನಂತಹ ಕಣಗಳು ಬೆಳಕಿನ ವೇಗದಲ್ಲಿ ಚಲಿಸುವಂತೆ ಮಾಡಲು ಶಕ್ತಿ ನೀಡಲಾಗಿರುತ್ತದೆ. ಈ ಕಾಂತೀಯ ಕ್ಷೇತ್ರ ಇಂತಹಾ ಕಣಗಳನ್ನು ಹೇಗೆ ಚಲಿಸುತ್ತದೆಂದರೆ ಅವುಗಳು ವಿದ್ಯುತ್ ಕ್ಷೇತ್ರದಿಂದ ಶಕ್ತಿಯನ್ನು ಗಳಿಸುತ್ತವೆ. ಆ ಬಳಿಕ ಈ ಕಣಗಳನ್ನು ಚಲಿಸುತ್ತಿರುವ ಕಣದ ಕಿರಣದೊಡನೆ ಹುಷಾರಾಗಿ ಜೋಡಿಸಲಾಗುತ್ತದೆ.

ಐಐಎಸ್ಸಿ ಕೇಂದ್ರವು ವಿಜ್ಞಾನದಲ್ಲಿ ಹಲವು ಮೂಲಭೂತ ಪ್ರಯೋಗಗಳನ್ನು ಕೈಗೊಳ್ಳಲಿದ್ದು, ಅವುಗಳು ಕ್ಯಾನ್ಸರ್ ಚಿಕಿತ್ಸೆ, ಮೆಡಿಕಲ್ ಇಮೇಜಿಂಗ್ ಹಾಗೂ ಔಷಧಿ ಸಂಶೋಧನೆಯ ಮೇಲೆ ಪರಿಣಾಮ ಬೀರಲಿವೆ.

ಚಿತ್ರದುರ್ಗ ಬೆಂಗಳೂರಿನಿಂದ 200 ಕಿಲೋಮೀಟರ್ ದೂರದಲ್ಲಿದ್ದು, ವಿಜ್ಞಾನ ನಗರಿ ಎಂದು ಹೆಸರು ಸಂಪಾದಿಸುತ್ತಿದೆ. ಅದಕ್ಕೆ ಕಾರಣವೆಂಬಂತೆ ಚಿತ್ರದುರ್ಗ ಈಗ ನಾಲಕ್ಕು ಪ್ರಮುಖ ವಿಜ್ಞಾನ ಕೇಂದ್ರಗಳ ಆಶ್ರಯ ತಾಣವಾಗುತ್ತಿದೆ. ಚಿತ್ರದುರ್ಗ ಈಗ ಜಗತ್ತಿನ ಪ್ರಮುಖ ವಿಜ್ಞಾನ ಕೇಂದ್ರವಾಗುವ ಹಾದಿಯಲ್ಲಿ ಯಶಸ್ವಿಯಾಗಿ ಸಾಗುತ್ತಿದ್ದು, ಇನ್ನು ಮುಂದಿನ ದಿನಗಳಲ್ಲಿ ವೈಜ್ಞಾನಿಕ ಸಂಶೋಧನೆ ಹಾಗೂ ಅಭಿವೃದ್ಧಿಯಲ್ಲಿ ತನ್ನ ಹಾಗೂ ಭಾರತದ ಹೆಸರಿನ ಛಾಪು ಮೂಡಿಸಲಿದೆ.

– ಲೇಖಕರು ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕರು

ಇದನ್ನೂ ಓದಿ|UAV |ಭಾರತೀಯ ಸೇನೆಯ ಚಾಲಕರಹಿತ ವಿಮಾನ ಚಿತ್ರದುರ್ಗದಲ್ಲಿ ಮೊದಲ ಯಶಸ್ವಿ ಹಾರಾಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

India Yamaha: ಬೆಂಗಳೂರಿನಲ್ಲಿ ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈ. ಲಿಮಿಟೆಡ್‌ನ ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್ ಅನ್ನು ತೆರೆದಿದೆ. ಬೆಂಗಳೂರು ವರ್ತೂರು ಹೋಬಳಿಯ ಅಂಬಲಿಪುರದಲ್ಲಿ ಮೋಟೋ ವರ್ಲ್ಡ್ ಹೆಸರಿನಲ್ಲಿ ಈ ಹೊಸ ಔಟ್‌ಲೆಟ್ ಅನ್ನು ಪ್ರಾರಂಭಿಸಲಾಗಿದೆ.ಯಮಹಾ ಬ್ಲೂ ಸ್ಕ್ವೇರ್ ಶೋರೂಮ್‌ಗಳನ್ನು ಗ್ರಾಹಕರಿಗೆ ವೈಯಕ್ತೀಕರಿಸಿದ ವಿಧಾನದಲ್ಲಿ ಅತ್ಯುತ್ತಮ ಮಾರಾಟ, ಸರ್ವೀಸ್ ಮತ್ತು ನೆರವನ್ನು ನೀಡುವ ಮೂಲಕ ಉತ್ತಮ ಅನುಭವವನ್ನು ನೀಡುವಂತೆ ವಿನ್ಯಾಸಗೊಳಿಸಲಾಗಿದೆ.

VISTARANEWS.COM


on

Yamaha has opened a new Blue Square outlet in Bengaluru
Koo

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (India Yamaha Motor Pvt Ltd) ಪ್ರೈ. ಲಿಮಿಟೆಡ್, ಬೆಂಗಳೂರಿನಲ್ಲಿ ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್ ಅನ್ನು ತೆರೆದಿದೆ. ಬೆಂಗಳೂರು ವರ್ತೂರು ಹೋಬಳಿಯ ಅಂಬಲಿಪುರದಲ್ಲಿ ಮೋಟೋ ವರ್ಲ್ಡ್ ಹೆಸರಿನಲ್ಲಿ ಈ ಹೊಸ ಔಟ್‌ಲೆಟ್ ಅನ್ನು ಪ್ರಾರಂಭಿಸಲಾಗಿದ್ದು, ಈ ಔಟ್‌ಲೆಟ್ 7,100 ಚದರ ಅಡಿಯಷ್ಟು ವಿಶಾಲವಾಗಿದೆ. ಯಮಹಾ ಬ್ಲೂ ಸ್ಕ್ವೇರ್ ಶೋರೂಮ್‌ಗಳನ್ನು ಗ್ರಾಹಕರಿಗೆ ವೈಯಕ್ತೀಕರಿಸಿದ ವಿಧಾನದಲ್ಲಿ ಅತ್ಯುತ್ತಮ ಮಾರಾಟ, ಸರ್ವೀಸ್ ಮತ್ತು ನೆರವನ್ನು ನೀಡುವ ಮೂಲಕ ಉತ್ತಮ ಅನುಭವವನ್ನು ನೀಡುವಂತೆ ವಿನ್ಯಾಸಗೊಳಿಸಲಾಗಿದೆ.

ಈ ಬ್ಲೂ ಸ್ಕ್ವೇರ್ ಔಟ್‌ಲೆಟ್ ಯಮಹಾ ಬ್ರ್ಯಾಂಡ್‌ನ ಹುಮ್ಮಸ್ಸನ್ನು ದಾಟಿಸುತ್ತದೆ ಮತ್ತು ಗ್ರಾಹಕರಿಗೆ ಸಂಪೂರ್ಣ ಸೇವೆಯನ್ನು ಒದಗಿಸುವಂತೆ ವಿನ್ಯಾಸಗೊಂಡಿದೆ. ವೈಯಕ್ತೀಕರಿಸಿದ ವಿಧಾನದ ಮೂಲಕ ಗ್ರಾಹಕರಿಗೆ ಸೇವೆ ಒದಗಿಸಲಾಗುತ್ತಿದ್ದು, ಪ್ರತಿಯೊಬ್ಬ ಗ್ರಾಹಕರು ತೃಪ್ತಿಕರ ಸೇವೆ ಪಡೆಯಲಿದ್ದಾರೆ. ಈ ವಿಶೇಷವಾದ ಔಟ್‌ಲೆಟ್‌ಗಳನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಅನುವು ಮಾಡಿಕೊಟ್ಟಿರುವ ಬ್ರ್ಯಾಂಡ್ ಗ್ರಾಹಕರಿಗೆ ಯಮಹಾ ರೇಸಿಂಗ್ ಜಗತ್ತಿಗೆ ಪ್ರವೇಶಿಸುವ ಅವಕಾಶವನ್ನೂ ನೀಡುತ್ತಿದೆ.

ಇದನ್ನೂ ಓದಿ: Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

ಈ ಪ್ರೀಮಿಯಂ ಔಟ್‌ಲೆಟ್‌ಗಳ ಪ್ರತಿಯೊಂದು ವಿಭಾಗವನ್ನೂ ಅಂತರರಾಷ್ಟ್ರೀಯ ಮೋಟಾರ್‌ ಸ್ಪೋರ್ಟ್‌ಗಳಲ್ಲಿ ತೊಡಗಿಸಿಕೊಂಡಿರುವ ಜಾಗತಿಕ ಬ್ರ್ಯಾಂಡ್‌ ಆದ ಯಮಹಾ ಜತೆಗೆ ಸಂಬಂಧ ಹೊಂದುವ ಹೆಮ್ಮೆಯ ಭಾವವನ್ನು ಮೂಡಿಸುವಂತೆ ಚಿಂತನಶೀಲವಾಗಿ ರಚಿಸಲಾಗಿದೆ. ಯಮಹಾ, ಬ್ರ್ಯಾಂಡ್‌ನ ಹೆಮ್ಮೆಯ ರೇಸಿಂಗ್ ಪರಂಪರೆಯನ್ನು ಪ್ರತಿನಿಧಿಸುವ “ಬ್ಲೂ (ನೀಲಿ)” ಬಣ್ಣ ಮತ್ತು ಗ್ರಾಹಕರು ಯಮಹಾದ ಹರ್ಷದಾಯಕ ಮತ್ತು ಸೊಗಸಾದ ಶ್ರೇಣಿಯ ದ್ವಿಚಕ್ರ ವಾಹನಗಳೊಂದಿಗೆ ಸಂಪರ್ಕ ಸಾಧಿಸಲು ರಚಿಸಲಾದ ಪ್ಲಾಟ್‌ಫಾರ್ಮ್ ಅನ್ನು ಸಂಕೇತಿಸುವ “ಸ್ಕ್ವೇರ್” ಸಂಯೋಜನೆಯ ಮೂಲಕ ಗ್ರಾಹಕರೊಂದಿಗೆ ಉತ್ತಮ ಸಂಪರ್ಕವನ್ನು ಸಾಧಿಸಿದೆ.

ಉದ್ಯಮ-ಪ್ರಧಾನ ಅನುಭವವನ್ನು ಒದಗಿಸುವುದರ ಜತೆಗೆ, ಈ ಬ್ಲೂ ಸ್ಕ್ವೇರ್ ಔಟ್‌ಲೆಟ್‌ಗಳು ಬ್ಲೂ ಸ್ಟ್ರೀಕ್ಸ್ ರೈಡರ್‌ಗಳಿಗೆ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ. ಯಮಹಾದ ವಿಶೇಷ ಬೈಕರ್ ಸಮುದಾಯದ ಸವಾರರು ಇತರ ಸವಾರರನ್ನು ಭೇಟಿ ಮಾಡಲು ಮತ್ತು ಸಂವಹನ ನಡೆಸಲು ಅನುವು ಮಾಡಿಕೊಡುತ್ತದೆ. ಹೊಸ ಔಟ್‌ಲೆಟ್ ಸೇರಿದಂತೆ ಈಗ ಕರ್ನಾಟಕ ಮಾರುಕಟ್ಟೆಯಲ್ಲಿ ಯಮಹಾ 23 ಎಕ್ಸ್‌ಕ್ಲೂಸಿವ್ ಬ್ಲೂ ಸ್ಕ್ವೇರ್ ಶೋ ರೂಂಗಳನ್ನು ಹೊಂದಿದೆ.

ಯಮಹಾದ ಸೂಪರ್‌ಸ್ಪೋರ್ಟ್ ಆರ್3 (321ಸಿಸಿ), ಟಾರ್ಕ್-ರಿಚ್ ಎಂಟಿ -03 (321 ಸಿಸಿ) ಮತ್ತು ಮ್ಯಾಕ್ಸಿ-ಸ್ಪೋರ್ಟ್ಸ್ ಏರಾಕ್ಸ್(155 ಸಿಸಿ) ಮತ್ತು ಏರಾಕ್ಸ್ ವರ್ಷನ್ ಎಸ್ (155 ಸಿಸಿ)ಗಳನ್ನು ಬ್ಲೂ ಸ್ಕ್ವೇರ್ ಶೋರೂಮ್‌ಗಳ ಮೂಲಕ ವಿಶೇಷವಾಗಿ ಮಾರಾಟ ಮಾಡಲಾಗುತ್ತದೆ. ಈ ಪ್ರೀಮಿಯಂ ಔಟ್‌ಲೆಟ್‌ಗಳು ವೈಝಡ್‌ಎಫ್‌-ಆರ್‌15 ಎಂ (155 ಸಿಸಿ), ವೈಝಡ್‌ಎಫ್‌-ಆರ್‌15 ವಿ4 (155ಸಿಸಿ), ವೈಝಡ್‌ಎಫ್‌-ಆರ್‌15ಎಸ್ ವಿ3 (155 ಸಿಸಿ), ಎಂಟಿ-15 ವಿ2 (155 ಸಿಸಿ), ಬ್ಲೂ ಕೋರ್ ತಂತ್ರಜ್ಞಾನ ಆಧರಿತ ಮಾಡೆಲ್ ಗಳಾದ ಎಫ್‌ಝಡ್‌ಎಸ್‌-ಎಫ್‌ಐ ವರ್ಷನ್ 4.0 (149 ಸಿಸಿ), ಎಫ್‌ಝಡ್‌ಎಸ್‌-ಎಫ್‌ಐ ವರ್ಷನ್ 3.0 (149 ಸಿಸಿ), ಎಫ್‌ಝಡ್‌-ಎಫ್‌ಐ ವರ್ಷನ್ 3.0 (149 ಸಿಸಿ), ಎಫ್‌ಝಡ್‌-ಎಕ್ಸ್ (149 ಸಿಸಿ), ಮತ್ತು ಸ್ಕೂಟರ್ ಗಳಾದ ಫ್ಯಾಸಿನೋ 125 ಎಫ್ಐ ಹೈಬ್ರಿಡ್ (125 ಸಿಸಿ), ರೇ ಝಡ್ಆರ್ 125 ಎಫ್ಐ ಹೈಬ್ರಿಡ್ (125 ಸಿಸಿ), ರೇ ಝಡ್ಆರ್ ಸ್ಟ್ರೀಟ್ ರಾಲಿ 125 ಎಫ್ಐ ಹೈಬ್ರಿಡ್ (125 ಸಿಸಿ) ಮುಂತಾದ ನವೀಕರಿಸಿದ ಲೈನ್-ಅಪ್‌ಗಳನ್ನು ಪ್ರದರ್ಶಿಸಲಾಗುತ್ತದೆ.

ಇದನ್ನೂ ಓದಿ: Vastu Tips: ನೆಲ ಒರೆಸುವಾಗಲೂ ವಾಸ್ತು ನಿಯಮ ಪಾಲಿಸಲೇಬೇಕು!

ಹೆಚ್ಚು ಸಮಗ್ರವಾದ ಅನುಭವವನ್ನು ಒದಗಿಸುವ ಭರವಸೆಯನ್ನು ನೀಡುತ್ತಾ, ಈ ಪ್ರೀಮಿಯಂ ಬ್ಲೂ ಸ್ಕ್ವೇರ್ ಔಟ್‌ಲೆಟ್‌ಗಳು ಯಮಹಾದ ನಿಜವಾದ ಆ್ಯಕ್ಸೆಸರೀಸ್‌ಗಳು, ಅಧಿಕೃತ ಉಡುಪುಗಳು ಮತ್ತು ಯಮಹಾ ನಿಜವಾದ ಬಿಡಿಭಾಗಗಳನ್ನು ಗ್ರಾಹಕರಿಗೆ ಪ್ರದರ್ಶನ ಮತ್ತು ಮಾರಾಟ ಮಾಡುತ್ತವೆ.

Continue Reading

ತಂತ್ರಜ್ಞಾನ

Agnikul Cosmos: ಯಶಸ್ವಿಯಾಗಿ ರಾಕೆಟ್ ಉಡಾವಣೆ ಮಾಡಿದ ಸ್ಟಾರ್ಟ್ ಅಪ್ ಕಂಪನಿ ಅಗ್ನಿಕುಲ್ ಕಾಸ್ಮೋಸ್; ಮೋದಿ ಅಭಿನಂದನೆ

Agnikul Cosmos: ಚೆನ್ನೈ ಮೂಲದ ಖಾಸಗಿ ಬಾಹ್ಯಾಕಾಶ ಸ್ಟಾರ್ಟ್ ಅಪ್ ಅಗ್ನಿಕುಲ್ ಕಾಸ್ಮೋಸ್ ಅಗ್ನಿಬಾನ್ ಎಸ್‌ಒಆರ್‌ಟಿಇಡಿ ಎಂಬ ರಾಕೆಟ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಐತಿಹಾಸಿಕ ಸಾಧನೆಗೆ ಇಸ್ರೋ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ.

VISTARANEWS.COM


on

Agnikul Cosmos
Koo

ಚೆನ್ನೈ: ಚೆನ್ನೈ ಮೂಲದ ಖಾಸಗಿ ಬಾಹ್ಯಾಕಾಶ ಸ್ಟಾರ್ಟ್ ಅಪ್ ಅಗ್ನಿಕುಲ್ ಕಾಸ್ಮೋಸ್ (Agnikul Cosmos) ಇಂದು (ಮೇ 30) ಅಗ್ನಿಬಾನ್ ಎಸ್‌ಒಆರ್‌ಟಿಇಡಿ (Suborbital Tech Demonstrator) ಎಂಬ ರಾಕೆಟ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಸಂಬಂಧ ಇಸ್ರೋ (Indian Space Research Organisation) ಸಂತಸ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಭಿನಂದನೆ ತಿಳಿಸಿದೆ.‌

ʼʼಅಗ್ನಿಬಾನ್‌ ಸಾರ್ಟೆಡ್ 01 (Agnibaan SOrTeD) ಮಿಷನ್‌ ಅನ್ನು ತಮ್ಮ ಉಡಾವಣಾ ಪ್ಯಾಡ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಅಗ್ನಿಕುಲ್‌ ಕಾಸ್ಮೋಸ್‌ಗೆ ಅಭಿನಂದನೆಗಳು. ಅರೆ-ಕ್ರಯೋಜೆನಿಕ್‌ ಲಿಕ್ವಿಡ್‌ ಎಂಜಿನ್‌ನ ಮೊದಲ ನಿಯಂತ್ರಿತ ಹಾರಾಟವು ಪ್ರಮುಖ ಮೈಲಿಗಲ್ಲು ಎನಿಸಿಕೊಂಡಿದೆʼʼ ಎಂದು ಇಸ್ರೋ ತಿಳಿಸಿದೆ. ಐಐಟಿ ಮದ್ರಾಸ್‌ನ ಪ್ರಾಧ್ಯಾಪಕ ಮತ್ತು ಅಗ್ನಿಕುಲ್‌ನ ಮಾರ್ಗದರ್ಶಕ ಸತ್ಯ ಆರ್. ಚಕ್ರವರ್ತಿ ಕೂಡ ಶ್ರೀಹರಿಕೋಟಾದಿಂದ ಉಡಾವಣೆ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

“ಶ್ರೀಹರಿಕೋಟಾದ ಎಸ್‌ಡಿಎಸ್‌ಸಿ-ಶಾರ್‌(SDSC-SHAR)ನಿಂದ ಭಾರತದ ಮೊದಲ ಮತ್ತು ಏಕೈಕ ಖಾಸಗಿ ಲಾಂಚ್‌ ಪ್ಯಾಡ್‌ನಿಂದ ಅಗ್ನಿಬಾನ್ ಸಾರ್ಟೆಡ್‌ ಮಿಷನ್ 01 ಅನ್ನು ಯಶಸ್ವಿಯಾಗಿ ಉಡಾವಣೆಗೊಳಿಸಲಾಗಿದೆ. ಈ ರಾಕೆಟ್‌ ವಿಶ್ವದ ಮೊದಲ ಸಿಂಗಲ್ ಪೀಸ್ 3 ಡಿ ಮುದ್ರಿತ ಎಂಜಿನ್‌ನಿಂದ ಚಾಲಿತವಾಗಿದೆ ಮತ್ತು ಇದು ಸೆಮಿ ಕ್ರಯೋ ಎಂಜಿನ್ ಹೊಂದಿರುವ ಭಾರತದ ಮೊದಲ ಹಾರಾಟ ಎನಿಸಿಕೊಂಡಿದೆ” ಎಂದು ಅಗ್ನಿಕುಲ್‌ ತಿಳಿಸಿದೆ.

ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ

ಇತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಈ ಅಭೂತಪೂರ್ವ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದಾರೆ. ಎಕ್ಸ್‌ ಮೂಲಕ ಅಭಿನಂದನೆ ತಿಳಿಸಿದ ಅವರು, “ಇಡೀ ರಾಷ್ಟ್ರವೇ ಹೆಮ್ಮೆ ಪಡುವಂತಹ ಗಮನಾರ್ಹ ಸಾಧನೆ. ವಿಶ್ವದ ಮೊದಲ ಸಿಂಗಲ್-ಪೀಸ್ 3ಡಿ ಮುದ್ರಿತ ಅರೆ-ಕ್ರಯೋಜೆನಿಕ್ ಎಂಜಿನ್‌ನಿಂದ ಚಾಲಿತ ಅಗ್ನಿಬಾನ್ ರಾಕೆಟ್‌ನ ಯಶಸ್ವಿ ಉಡಾವಣೆ ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಒಂದು ಮಹತ್ವದ ಕೊಡುಗೆಯಾಗಿದೆ ಮತ್ತು ನಮ್ಮ ಯುವ ಶಕ್ತಿಯ ಗಮನಾರ್ಹ ಜಾಣ್ಮೆಗೆ ಸಾಕ್ಷಿಯಾಗಿದೆ. ಅಗ್ನಿಕುಲ್ ಕಾಸ್ಮೋಸ್ ತಂಡಕ್ಕೆ, ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು” ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

5ನೇ ಪ್ರಯತ್ನ

ಇದು ಅಗ್ನಿಕುಲ್ ಕಾಸ್ಮೋಸ್ ನಡೆಸಿದ 5ನೇ ಪ್ರಯತ್ನವಾಗಿತ್ತು. ಈ ಹಿಂದೆ ರಾಕೆಟ್‌ ಉಡಾವಣೆ ಮಾಡಲು 4 ಬಾರಿ ಪ್ರಯತ್ನ ನಡೆದಿತ್ತಾದರೂ ಕೊನೆಯ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆಯಿಂದ ರದ್ದುಗೊಳಿಸಲಾಗಿತ್ತು. 575 ಕೆಜಿ ತೂಕ ಮತ್ತು 6.2 ಮೀಟರ್ ಉದ್ದದ ರಾಕೆಟ್ ಶ್ರೀಹರಿಕೋಟಾದಿಂದ ಬಂಗಾಳ ಕೊಲ್ಲಿಗೆ ಯಶಸ್ವಿಯಾಗಿ ಹಾರಾಟ ನಡೆಸಿತು. ʼʼಅಗ್ನಿಬಾನ್ ಸಾರ್ಟೆಡ್‌ ಅರೆ-ಕ್ರಯೋಜೆನಿಕ್ ಎಂಜಿನ್‌ನಿಂದ ನಿಯಂತ್ರಿಸಲ್ಪಡುತ್ತದೆ. ಇದು ವಾಣಿಜ್ಯಿಕವಾಗಿ ಲಭ್ಯವಿರುವ ವಾಯುಯಾನ ಟರ್ಬೈನ್ ಇಂಧನವನ್ನು, ಮುಖ್ಯವಾಗಿ ಸೀಮೆಎಣ್ಣೆ ಮತ್ತು ವೈದ್ಯಕೀಯ ದರ್ಜೆಯ ದ್ರವ ಆಮ್ಲಜನಕವನ್ನು ಬಳಸುತ್ತದೆʼʼ ಎಂದು ಅಗ್ನಿಕುಲ್ ಕಾಸ್ಮೋಸ್ ಪ್ರೈವೇಟ್ ಲಿಮಿಟೆಡ್‌ನ ಸಹ ಸಂಸ್ಥಾಪಕ ಮೊಯಿನ್ ಎಸ್‌ಪಿಎಂ ತಿಳಿಸಿದ್ದಾರೆ.

Continue Reading

ಕರ್ನಾಟಕ

LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

LinkedIn: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

VISTARANEWS.COM


on

LinkedIns Tips for Graduates in the Job Search
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ (LinkedIn) ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

2024ರಲ್ಲಿ ಕಂಪನಿಗಳು ಹೊಂದಿಕೊಳ್ಳುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರೆಸುತ್ತಿವೆ. ಹೆಚ್ಚು ಹೊಂದಿಕೊಳ್ಳುವ ಕೆಲಸದ ವ್ಯವಸ್ಥೆಗಳ ಕಡೆಗೆ ಗಮನ ಕೊಡುವ ಟ್ರೆಂಡ್ ಈಗ ನಡೆಯುತ್ತಿದೆ. ಆನ್-ಸೈಟ್ ಹುದ್ದೆಗಳು 15% ರಷ್ಟು ಕಡಿಮೆಯಾಗುತ್ತಿವೆ ಮತ್ತು ವರ್ಷದಿಂದ ವರ್ಷಕ್ಕೆ ಆರಂಭಿಕ ಹಂತದ ಹುದ್ದೆಗಳಿಗೆ 52% ರಷ್ಟು ಹೈಬ್ರಿಡ್ ಸ್ಥಾನಗಳು ಹೆಚ್ಚಾಗುತ್ತಿವೆ. ಈ ಬದಲಾವಣೆಯು ಹೊಸ ಪದವೀಧರರಿಗೆ ಆಯ್ಕೆ ಮಾಡಲು ಮತ್ತು ವೃತ್ತಿ ಜೀವನ ಮುಂದುವರಿಸಲು ವಿಸ್ತಾರವಾದ ಕೆಲಸದ ಅವಕಾಶಗಳನ್ನು ಒದಗಿಸುತ್ತದೆ.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

ಲಿಂಕ್ಡ್‌ಇನ್‌ನ ಕರಿಯರ್ ಸ್ಟಾರ್ಟರ್ 2024 ವರದಿಯ ಪ್ರಕಾರ, ಯುಟಿಲಿಟೀಸ್ ಕ್ಷೇತ್ರ ಬಹಳ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದ್ದು, ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿರುವ ಯುವ ವೃತ್ತಿಪರರು ಆಯ್ಕೆಗೆ ಪರಿಗಣಿಸಬಹುದಾಗಿದೆ. ತೈಲ, ಅನಿಲ ಮತ್ತು ಗಣಿಗಾರಿಕೆ, ರಿಯಲ್ ಎಸ್ಟೇಟ್, ಸಲಕರಣೆ ಬಾಡಿಗೆ ಸೇವೆಗಳು ಮತ್ತು ಗ್ರಾಹಕ ಸೇವಾ ಕ್ಷೇತ್ರಗಳು ಹೊಸ ಪದವೀಧರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಇನ್ನಿತರ ಉನ್ನತ ಉದ್ಯಮಗಳಾಗಿವೆ. ಜತೆಗೆ ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿಲ್ಲದವರು ಶಿಕ್ಷಣ, ಮಾಹಿತಿ ಹಾಗೂ ತಂತ್ರಜ್ಞಾನ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವವರಿಗೆ ಉನ್ನತ ಉದ್ಯೋಗ

ಲಿಂಕ್ಡ್‌ಇನ್‌ನ ಮಾಹಿತಿಯು ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವ ವೃತ್ತಿಪರರಿಗೆ ವಿವಿಧ ಶ್ರೇಣಿಯ ಉನ್ನತ ಉದ್ಯೋಗಗಳ ವಿವರಗಳನ್ನು ತಿಳಿಸುತ್ತದೆ. ಪದವೀಧರರು ಸಾಫ್ಟ್‌ವೇರ್ ಎಂಜಿನಿಯರ್, ಸಿಸ್ಟಮ್ ಎಂಜಿನಿಯರ್ ಮತ್ತು ಪ್ರೋಗ್ರಾಮಿಂಗ್ ಅನಾಲಿಸ್ಟ್ ನಂತಹ ಹುದ್ದೆಗಳಿಗೆ ಹುಡುಕಾಟ ನಡೆಸಬಹುದು. ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಡೇಟಾ ಅನಾಲಿಸ್ಟ್ ಹುದ್ದೆಗಳಿಗೆ ಹೆಚ್ಚಿನ ಸಂಖ್ಯೆಯ ಪದವೀಧರರನ್ನು ನೇಮಿಸಿಕೊಳ್ಳಲಾಗುತ್ತಿದೆ. ಪದವಿ ಇಲ್ಲದವರು ಕೂಡ ಸಾಫ್ಟ್‌ವೇರ್ ಎಂಜಿನಿಯರ್, ಸೆಕ್ರೆಟರಿ ಮತ್ತು ಡಿಸೈನ್ ಎಂಜಿನಿಯರ್‌ನಂತಹ ಹುದ್ದೆಗಳಲ್ಲಿ ಕೆಲಸ ಮಾಡಬಹುದು.

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು ವೇಗದ ಬೆಳವಣಿಗೆ ಹೊಂದುವ ಅವಕಾಶ ನೀಡುತ್ತವೆ. ಸಮುದಾಯ ಮತ್ತು ಸಾಮಾಜಿಕ ಸೇವೆಗಳು, ಕಾನೂನು, ಮಾರ್ಕೆಟಿಂಗ್, ಮಾಧ್ಯಮ ಮತ್ತು ಸಂವಹನದಂತಹ ಕ್ಷೇತ್ರಗಳಲ್ಲಿ ಪದವೀಧರರಿಗೆ ಸಾಕಷ್ಟು ಅವಕಾಶಗಳು ಲಭ್ಯವಿದೆ. ಪದವಿ ಇಲ್ಲದವರು ಶಿಕ್ಷಣ, ಮಾನವ ಸಂಪನ್ಮೂಲ, ಮಾರ್ಕೆಟಿಂಗ್ ಹಾಗೂ ಮಾಧ್ಯಮ ಮತ್ತು ಸಂವಹನದಾದ್ಯಂತ ಸಾಕಷ್ಟು ಉದ್ಯೋಗಾವಕಾಶಗಳನ್ನು ಪಡೆಯುತ್ತಾರೆ.

ಇದನ್ನೂ ಓದಿ: TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

ಈ ಕುರಿತು ಲಿಂಕ್ಡ್‌ಇನ್ ಕರಿಯರ್ ಎಕ್ಸ್‌ಪರ್ಟ್ ಆಂಡ್ ಇಂಡಿಯಾ ಸೀನಿಯರ್ ಮ್ಯಾನೇಜಿಂಗ್ ಎಡಿಟರ್ ನಿರಾಜಿತಾ ಬ್ಯಾನರ್ಜಿ ಮಾತನಾಡಿ, “ಉದ್ಯೋಗ ಮಾರುಕಟ್ಟೆ ಸ್ವಲ್ಪ ಬಿಗುವಾಗಿದ್ದಾಗ ಆರಂಭಿಕ ಹಂತದಲ್ಲಿ ಉದ್ಯೋಗ ದೊರೆಯುವುದು ಕಷ್ಟವಾಗುತ್ತದೆ. ಉದ್ಯಮದ ಟ್ರೆಂಡ್‌ಗಳು ಮತ್ತು ಬೇಡಿಕೆಯ ಉದ್ಯೋಗಗಳ ಕುರಿತು ಅಪ್‌ಡೇಟ್ ಆಗಿರುವುದರಿಂದ ಮತ್ತು ಆರಂಭದಲ್ಲಿಯೇ ಸಿಗುವ ಹುದ್ದೆಗಳಲ್ಲಿ ಮುನ್ನಡೆಯುವುದರಿಂದ ಮುಂದೆ ಆಯ್ಕೆಗಳು ದೊಡ್ಡದಾಗುತ್ತಾ ಹೋಗುತ್ತದೆ. ಇಂದು ಅನೇಕ ಕೌಶಲ್ಯಗಳನ್ನು ಬೇರೆ ಬೇರೆ ಕೈಗಾರಿಕೆಗಳಲ್ಲಿ ಬಳಸಬಹುದಾಗಿದೆ, ಮತ್ತು ಎಐ ಬಳಕೆ ಹೆಚ್ಚುತ್ತಿರುವುದರಿಂದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು ಟೆಕ್-ಸಂಬಂಧಿತ ಹುದ್ದೆಗಳು ಸೃಷ್ಟಿಯಾಗುತ್ತಿವೆ.

ಈ ನೇಮಕಾತಿ ಟ್ರೆಂಡ್‌ಗಳು ಇಂಧನ ವಲಯದಲ್ಲಿರುವಂತಹ ವಿಶಾಲವಾದ ಆರ್ಥಿಕ ಮಾದರಿಗಳನ್ನು ಪ್ರತಿಬಿಂಬಿಸುತ್ತವೆ. ವೈವಿಧ್ಯಮಯ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ವೃತ್ತಿಪರರನ್ನು ಕಂಪನಿಗಳು ಹುಡುಕಲು ತೊಡಗಿವೆ. ತಮ್ಮ ದಿಗಂತವನ್ನು ವಿಸ್ತರಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನುಮತ್ತು ವೃತ್ತಿಪರರ ಜತೆಗಿನ ನೆಟ್‌ವರ್ಕಿಂಗ್ ಅನ್ನು ಬಲಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಉದ್ಯೋಗ ಹುಡುಕಾಟವನ್ನು ಪ್ರಾರಂಭಿಸುವವರಿಗೆ ಲಿಂಕ್ಡ್‌ಇನ್‌ನ ಸಲಹೆಗಳು

ನೇಮಕಾತಿದಾರರ ಗಮನ ಸೆಳೆಯಲು, ಹೆಚ್ಚಿಸಲು ನಿಮ್ಮ ಲಿಂಕ್ಡ್‌ಇನ್ ಪ್ರೊಫೈಲ್‌ನಲ್ಲಿ ನಿಮ್ಮ ಕೌಶಲ್ಯಗಳನ್ನು ಗಮನ ಸೆಳೆಯುವಂತೆ ನಮೂದಿಸಿ. ಲಿಂಕ್ಡ್‌ಇನ್ ನೀವು ತಿಳಿಸಿದ ಕೌಶಲ್ಯಗಳ ಆಧಾರದ ಮೇಲೆ ನಿಮಗೆ ಈ ಮೊದಲು ತಿಳಿದಿರದ, ಆದರೆ ನಿಮಗೆ ಹೊಂದುವ ಉದ್ಯೋಗಾವಕಾಶಗಳನ್ನು ತಿಳಿಸುತ್ತದೆ.

ಲಿಂಕ್ಡ್‌ಇನ್‌ನ ಓಪನ್ ಟು ವರ್ಕ್ ಫೀಚರ್ ಮೂಲಕ ನೀವು ಹೊಸ ಉದ್ಯೋಗದಲ್ಲಿ ಆಸಕ್ತಿಯನ್ನು ಹೊಂದಿದ್ದೀರಿ ಎಂಬುದನ್ನು ತಿಳಿಸಿ. ಜತಗೆ ಈ ಕಾಲದ ಟ್ರೆಂಡ್ ಅಥವಾ ವಿಚಾರಗಳಿಗೆ ತಕ್ಕಂತೆ ನಿಮ್ಮ ಸ್ವಂತ ವಿಚಾರಗಳನ್ನು ಪೋಸ್ಟ್ ಮಾಡುವ ಮೂಲಕ ಮತ್ತು ಸಂಭಾವ್ಯ ಉದ್ಯೋಗದಾತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಅರ್ಥಪೂರ್ಣವಾಗಿ ಸಂವಹನ ನಡೆಸುವ ಮೂಲಕ ಗಮನ ಸೆಳೆಯಬಹುದಾಗಿದೆ. ನಿಮ್ಮ ಭವಿಷ್ಯದ ಉದ್ಯೋಗದಾತರು ನಿಮ್ಮಿಂದ ಕೇವಲ ಒಂದು ಕಾಮೆಂಟ್ ದೂರದಲ್ಲಿರಬಹುದು ಎಂಬುದು ನೆನಪಲ್ಲಿರಲಿ.

ಇದನ್ನೂ ಓದಿ: Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

ಔಟ್ ಆಫ್ ದಿ ಬಾಕ್ಸ್ ಯೋಚಿಸಿ. ಅಂದರೆ ವಿಭಿನ್ನವಾಗಿ ಯೋಚಿಸಿ. ಎಲ್ಲಾ ಕಡೆ ಎಐ ಆವರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಪ್ರೋಗ್ರಾಮಿಂಗ್ ಕೌಶಲ್ಯಗಳನ್ನು ಹೊಂದಿರುವವರನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಹೊರತಾದ ಬೇರೆ ಅಭಿವೃದ್ಧಿ ಹೊಂದುತ್ತಿರುವ ಕೈಗಾರಿಕೆಗಳು ನೇಮಕಮಾಡಿಕೊಳ್ಳುತ್ತಿವೆ. ನಿಮ್ಮ ಮುಂದಿನ ಕೆಲಸ ಅಥವಾ ಹುದ್ದೆಗಾಗಿ ನೀವು ಹುಡುಕಾಟ ನಡೆಸುತ್ತಿರುವಾಗ ಈ ರೀತಿಯ ವೃತ್ತಿ ಪರಿವರ್ತನೆಯ (ಕರಿಯರ್ ಟ್ರಾನ್ಸಿಷನ್) ಟ್ರೆಂಡ್‌ಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಿ. ಏಕೆಂದರೆ ಅದರಿಂದ ನಿಮ್ಮ ಮುಂದೆ ಅವಕಾಶಗಳ ಸಂಖ್ಯೆ ಹೆಚ್ಚುತ್ತದೆ. ನಿಮ್ಮ ಕೌಶಲ್ಯಗಳಿಗೆ ಸಂಬಂಧಿಸಿದ ಲಿಂಕ್ಡ್‌ಇನ್ ಗುಂಪುಗಳಲ್ಲಿ ತೊಡಗಿಸಿಕೊಳ್ಳಿ. ಇದು ನೆಟ್‌ವರ್ಕ್‌ ಸಾಧಿಸಲು ಉತ್ತಮ ಮಾರ್ಗವಾಗಿದೆ ಮತ್ತು ಲಭ್ಯವಿರುವ ವಿಶಾಲವಾದ ಅವಕಾಶಗಳ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಅನುವು ಮಾಡಿ ಕೊಡಲಿದೆ.

ಇದನ್ನೂ ಓದಿ: World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ಪದವೀಧರರು ತಮ್ಮ ಕೌಶಲ್ಯಗಳನ್ನು ಸುಧಾರಿಸಲು ಸಹಾಯ ಮಾಡಲು, ಲಿಂಕ್ಡ್‌ಇನ್ 30 ಜೂನ್ 2024ರವರೆಗೆ ಉಚಿತ ಲಿಂಕ್ಡ್‌ಇನ್ ಕಲಿಕಾ ಕೋರ್ಸ್‌ಗಳನ್ನು ಬಿಡುಗಡೆ ಮಾಡಿದೆ, ಆ ಕೋರ್ಸುಗಳು ಹೀಗಿವೆ.

● ಕಾಲೇಜು ಪದವೀಧರರಿಗೆ ಉದ್ಯೋಗ ಹುಡುಕಾಟ.
● ಇಂಟರ್ನ್‌ಶಿಪ್ ಅನ್ನು ಉದ್ಯೋಗವನ್ನಾಗಿ ಪರಿವರ್ತಿಸಿಕೊಳ್ಳುವುದು.
● ವೃತ್ತಿ ಆರಂಭಿಸುವವರಿಗೆ ಪ್ರೊಫೆಷನಲ್ ನೆಟ್‌ವರ್ಕಿಂಗ್.
● 30-ನಿಮಿಷದ ರೆಸ್ಯೂಮ್ ರಿಫ್ರೆಶ್.
● ಸಾಮಾನ್ಯ ಸಂದರ್ಶನ ಪ್ರಶ್ನೆಗಳಿಗೆ ಸಿದ್ಧರಾಗಿರುವುದು.
● ನಿಮ್ಮ ಕಾಂಪನ್ಸೇಷನ್ ಪ್ಯಾಕೇಜ್ ಮಾತುಕತೆ ನಡೆಸುವುದು.

Continue Reading

ಕರ್ನಾಟಕ

Toyota: ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024; ಟಿಟಿಟಿಐ ವಿದ್ಯಾರ್ಥಿಗಳ ಉತ್ತಮ ಸಾಧನೆ

Toyota: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ದಿಂದ ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ಆಯೋಜಿಸಿದ್ದ ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

VISTARANEWS.COM


on

Toyota Technical Training Institute students Excellent performance in India Skills Competition 2024
Koo

ರಾಮನಗರ: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ದಿಂದ ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ಆಯೋಜಿಸಿದ್ದ ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟೊಯೊಟಾ (Toyota) ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಸಂಯೋಜಿತ ಉತ್ಪಾದನೆ (ಎಡಿಟಿವ್ ಮ್ಯಾನುಫ್ಯಾಕ್ಚರಿಂಗ್ ) ವಿಭಾಗದ ವೈಯಕ್ತಿಕ ಪ್ರತಿಸ್ಪರ್ಧಿಯಾಗಿ ಪ್ರೇಮ್. ವಿ ಚಿನ್ನದ ಪದಕವನ್ನು ಗಳಿಸಿದ್ದಾರೆ. ಮ್ಯಾನುಫ್ಯಾಕ್ಚರಿಂಗ್ ಟೀಮ್ ಚಾಲೆಂಜ್‌ನಲ್ಲಿ ಮೋಹಿತ್ ಎಂ.ಯು, ಹರೀಶ್ ಆರ್, ಮತ್ತು ನೆಲ್ಸನ್ ವಿ ತಂಡ ಚಿನ್ನದ ಪದಕಗಳನ್ನು ಪಡೆದುಕೊಂಡಿದೆ.

ಮೆಕಾಟ್ರಾನಿಕ್ಸ್ ವಿಭಾಗದಲ್ಲಿ ದರ್ಶನ್ ಗೌಡ ಸಿ.ಎಸ್. ಮತ್ತು ಭಾನು ಪ್ರಸಾದ್ ಎಸ್.ಎಂ ತಂಡ ಚಿನ್ನದ ಪದಕ ಗಳಿಸಿದೆ. ಹೇಮಂತ್ ಕೆ.ವೈ ಮತ್ತು ಉದಯ್ ಕುಮಾರ್ ಬಿ ತಂಡ ಬೆಳ್ಳಿ ಪದಕ ಗಳಿಸಿದೆ. ಇದಲ್ಲದೆ, ರೋಹನ್ ಎ.ಎಸ್. ಬೆಳ್ಳಿ ಪದಕ ಮತ್ತು ಸುದೀಪ್ ಎಸ್.ಎಂ. ಅವರು ಕಾರ್ ಪೇಂಟಿಂಗ್‌ನಲ್ಲಿ ವೈಯಕ್ತಿಕ ಸ್ಪರ್ಧಿಯಾಗಿ ಮೆಡಲಿಯನ್ ಆಫ್ ಎಕ್ಸಲೆನ್ಸ್ ಪಡೆದಿದ್ದಾರೆ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ನಡೆದ ಸ್ಪರ್ಧೆಯ “ಆಫ್-ಸೈಟ್” ಭಾಗದ ನಾಲ್ಕು ವಿಭಾಗಗಳಲ್ಲಿ ಟಿಟಿಟಿಐ ಭಾಗವಹಿಸಿತ್ತು. ಮ್ಯಾನುಫ್ಯಾಕ್ಚರಿಂಗ್ ಟೀಮ್ ಚಾಲೆಂಜ್, ಮೆಕಾಟ್ರಾನಿಕ್ಸ್, ಕಾರ್ ಪೇಂಟಿಂಗ್ ಮತ್ತು ಎಡಿಟಿವ್ ಮ್ಯಾನುಫ್ಯಾಕ್ಚರಿಂಗ್ ಸೇರಿದಂತೆ ಹಲವು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಟಿಟಿಟಿಐನ ವಿದ್ಯಾರ್ಥಿಗಳು ಅದ್ಭುತ ಕೌಶಲ್ಯ ಮತ್ತು ಡೆಡಿಕೇಷನ್ ಅನ್ನು ಪ್ರದರ್ಶಿಸಿದ್ದಾರೆ.

ಈ ವೇಳೆ ಎನ್‌ಎಸ್‌ಡಿಸಿ ಯ ಮಾರ್ಕೆಟಿಂಗ್ ಮತ್ತು ಕಮ್ಯುನಿಕೇಷನ್ಸ್ ಜನರಲ್ ಮ್ಯಾನೇಜರ್ ಮೋನಿಕಾ ನಂದಾ ಮಾತನಾಡಿ, “ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಗಮನಾರ್ಹ ಸಾಧನೆ ಮಾಡಿದ ಟೊಯೋಟಾ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಟಿಟಿಟಿಐ) ನ ವಿದ್ಯಾರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರ ಅನುಕರಣೀಯ ಕೌಶಲ್ಯಗಳು ಮತ್ತು ಸಮರ್ಪಣೆ ಟಿಟಿಟಿಐನ ತರಬೇತಿ ಕಾರ್ಯಕ್ರಮಗಳ ಪರಿಣಾಮಕಾರಿತ್ವಕ್ಕೆ ಸಾಕ್ಷಿಯಾಗಿದೆ. ಈ ವಿಜೇತರು ತಮ್ಮ ಸಂಸ್ಥೆಗೆ ಗೌರವವನ್ನು ತರುವುದಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತೀಯ ಕೌಶಲ್ಯ ಅಭಿವೃದ್ಧಿಯ ಖ್ಯಾತಿಯನ್ನು ಹೆಚ್ಚಿಸುತ್ತಾರೆ. ವಿಶ್ವ ಕೌಶಲ್ಯ ಸ್ಪರ್ಧೆಗೆ ಆಯ್ಕೆಯಾದವರು ಈ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರಿಸುತ್ತಾರೆ. ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡುತ್ತಾರೆ ಎಂದು ನಮಗೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಣಕಾಸು ಮತ್ತು ಆಡಳಿತದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜಿ.ಶಂಕರ ಮಾತನಾಡಿ, “ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟಿಟಿಟಿಐ ವಿದ್ಯಾರ್ಥಿಗಳ ಗಮನಾರ್ಹ ಸಾಧನೆಗಳ ಬಗ್ಗೆ ನಾವು ಅಪಾರ ಹೆಮ್ಮೆ ಪಡುತ್ತೇವೆ. ಅವರ ಯಶಸ್ವಿ ಪ್ರಯಾಣ ನಮಗೆ ಹೆಚ್ಚು ಆನಂದವನ್ನು ನೀಡಿದೆ. ಕಠಿಣ ಪರಿಶ್ರಮದಿಂದಾಗಿ ಈ ಮೈಲಿಗಲ್ಲನ್ನು ವಿದ್ಯಾರ್ಥಿಗಳು ತಲುಪಿದ್ದಾರೆ ಎಂದು ತಿಳಿಸಿದ್ದಾರೆ.

Continue Reading
Advertisement
Cardamom Benefits
ಆರೋಗ್ಯ7 mins ago

Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

Karnataka Weather Forecast
ಮಳೆ37 mins ago

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Healthy Salad Tips
ಆಹಾರ/ಅಡುಗೆ1 hour ago

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Lok Sabha Election
ದೇಶ2 hours ago

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Dina Bhavishya
ಭವಿಷ್ಯ2 hours ago

Dina Bhavishya : ತಿಂಗಳ ಮೊದಲ ದಿನವೇ ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರಿಗೆ ಕಿರಿಕಿರಿ ಅನುಭವ

Anti Islam Rally
ವಿದೇಶ7 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Modi Meditation
ದೇಶ8 hours ago

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Yamaha has opened a new Blue Square outlet in Bengaluru
ಬೆಂಗಳೂರು9 hours ago

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

Neha Hiremath
ಕರ್ನಾಟಕ9 hours ago

Neha Hiremath: ಲಿಂಗಾಯತಳಾದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣಪತ್ರ ಮಾಡಿಸಿದ್ದೇಕೆ? ಸರ್ಟಿಫಿಕೇಟ್‌ ಫೋಟೊ ಈಗ ವೈರಲ್

Kanyakumari Tour
ಪ್ರವಾಸ10 hours ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌