ಗೊರಕೆಯೆಂಬ ಘೋರ ವೈರಿ- ಇದರಿಂದ ಮುಕ್ತಿ ಹೇಗೆ? - Vistara News

ಆರೋಗ್ಯ

ಗೊರಕೆಯೆಂಬ ಘೋರ ವೈರಿ- ಇದರಿಂದ ಮುಕ್ತಿ ಹೇಗೆ?

ನಾವು ಗೊರಕೆ ಹೊಡೆಯುವುದು ನಮಗೆ ಸಮಸ್ಯೆಯಲ್ಲ. ಆದರೆ ಪಕ್ಕದಲ್ಲಿ ಮಲಗಿದವರಿಗೆ ಕಿವಿಯ ಪಕ್ಕ ರೈಲು ಹಾದುಹೋದಂತೆ ಅನಿಸಿ ಅವರ ನಿದ್ರೆಕೆಡುತ್ತದೆ. ಇದರಿಂದ ಪಾರಾಗುವುದು ಹೇಗೆ?

VISTARANEWS.COM


on

snoring
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗೊರಕೆ ಎಂಬ ಸಮಸ್ಯೆ ಒಬ್ಬಿಬ್ಬರದಲ್ಲ. ಸಮಸ್ಯೆ ಸಣ್ಣದಾಗಿ ಕಂಡರೂ ಪರಿಣಾಮ ದೊಡ್ಡದು. ಎಷ್ಟೋ ಸಾರಿ ಈ ಗೊರಕೆಯೇ ದಂಪತಿಗಳ ನಡುವೆ ವಿರಸ ತರಿಸಿದೆ. ವಿಚ್ಚೇದನದವರೆಗೂ ಹೋಗಿದೆ. ಒಬ್ಬರ ನಿದ್ದೆಗೆ ಇನ್ನೊಬ್ಬರ ಗೊರಕೆ ಎಂಥ ತೊಂದರೆಗಳನ್ನೂ ತಂದೊಡ್ಡಬಹುದು. ಕೆಲವರ ಗೊರಕೆ ಎಂಥಾ ಭೀಕರ ಸದ್ದುಗಳನ್ನು ಹೊರಡಿಸುತ್ತದೆ ಎಂದರೆ ಪಕ್ಕದಲ್ಲಿ ಮಲಗುವವರು ಯಾವ ಜನ್ಮದಲ್ಲಿ ಯಾವ ಪಾಪ ಮಾಡಿದ್ದರೋ ಅನಿಸಿಬಿಡುತ್ತದೆ. ಇಂಥ ಗೊರಕೆಯಿಂದ ಜೀವನ ಪರ್ಯಂತ ಮುಕ್ತಿ ಪಡೆಯುವುದು ಸಾಧ್ಯವಿಲ್ಲವಾದರೂ, ದಿನನಿತ್ಯದ ಜೀವನಕ್ರಮದಲ್ಲಿ, ಆಹಾರದಲ್ಲಿ ಒಂದಿಷ್ಟು ಬದಲಾವಣೆ, ಮಾಡಿಕೊಳ್ಳುವುದರಿಂದ ಹಾಗೂ ಕೆಲವು ಸುಲಭವಾಗಿ ಮನೆಯಲ್ಲೇ ಮಾಡಿಕೊಳ್ಳಬಹುದಾದ ಮನೆಮದ್ದುಗಳಿಂದಲೂ ಕೊಂಚ ಮಟ್ಟಿನ ಪರಿಹಾರ ಪಡೆಯಬಹುದು.

1. ನಮ್ಮ ಮೂಗು ಹಾಗೂ ಗಂಟಲ ನಡುವೆ ತೆಳುವಾದ ಪಟ್ಟಿಯಂತಹ ರಚನೆಯಿರುತ್ತದೆ. ಈ ಪಟ್ಟಿಗಳು ನಿದ್ದೆ ಬಂದಾಗ ಸಡಿಲಗೊಂಡು, ಇದರ ಮೂಲಕ ಉಸಿರಾಟದ ಗಾಳಿ ಹಾದುಹೋಗುವಾಗ ಅದು ಅದುರುತ್ತದೆ. ಈ ಅದುರುವಿಕೆಯಿಂದಲೇ ಗೊರಕೆ ಉಂಟಾಗುತ್ತದೆ.ಸಡಿಲಗೊಂಡ ಈ ಪಟ್ಟಿಗಳನ್ನು ಮತ್ತೆ ಹಳೆಯ ಸ್ಥಿತಿ ತರಲು ಶಸ್ತ್ರ ಚಿಕಿತ್ಸೆಯಿಂದ ಸಾಧ್ಯವಿದ್ದರೂ ಸಾಮಾನ್ಯವಾಗಿ ಯಾರೂ ಆ ಮಾರ್ಗವನ್ನು ಬಳಸುವುದಿಲ್ಲ. ಹಾಗಾಗಿ, ಗೊರಕೆ ಸಮಸ್ಯೆಯಿಂದ ಮುಕ್ತರಾಗಲು ಮನಸ್ಸಿದ್ದರೆ, ದೈನಂದಿನ ಜೀವನಕ್ರಮದಲ್ಲಿ ಕೆಲವು ಉಪಾಯಗಳನ್ನು ಅನುಸರಿಸಿ ಸುಧಾರಣೆ ಮಾಡಿಕೊಳ್ಳಬಹುದು.

2. ನೇರವಾಗಿ ಮಲಗುವ ಬದಲು ಒಂದು ಬದಿಗೆ ವಾಲಿ ಮಲಗಿಕೊಳ್ಳಿ. ಬಹುತೇಕರಿಗೆ ಈ ಕ್ರಮದಿಂದ ಪರಿಹಾರ ಸಿಗುತ್ತದೆ.

3. ಮಲಗುವಾಗ ಒಂದು ಹೆಚ್ಚುವರಿ ದಿಂಬನ್ನು ತಲೆಯಡಿ ಇರಿಸಿ. ತಲೆಯನ್ನು ಸ್ವಲ್ಪ ಏರಿಸಿದ ಭಂಗಿಯಲ್ಲಿ ಮಲಗಿಕೊಳ್ಳಬಹುದು. ಇದರಿಂದ ಉಸಿರಾಟದ ಗಾಳಿ ಸರಾಗವಾಗಿ ಹೋಗಲು ಅನುಕೂಲ ಸಿಕ್ಕಿದಂತಾಗಿ ಪಟ್ಟಿಯ ಮೇಲೆ ಹೆಚ್ಚು ಒತ್ತಡ ಬೀಳುವುದಿಲ್ಲ. ಹಾಗಾಗಿ ಅವುಗಳ ಅದುರುವಿಕೆ ಕಡಿಮೆಯಾಗಿ ಶಬ್ದವೂ ಕಡಿಮೆಯಾಗುತ್ತದೆ.

4. ಒಂದು ವೇಳೆ ನೀವು ಧೂಮಪಾನ, ಮದ್ಯಪಾನ ಮಾಡುತ್ತಿದ್ದರೆ ಅದನ್ನು ಬಿಡಲು ಪ್ರಯತ್ನಿಸಿ. ಗೊರಕೆಗೆ ಬಹಳ ಸಾರಿ ಈ ಕಾರಣವೂ ಇರುತ್ತದೆ. ಒಂದು ಅಭ್ಯಾಸವನ್ನು ಬಿಡುವುದು ಕಷ್ಟವಾದರೂ ನಿಮ್ಮ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು ಎಂಬ ಯೋಚನೆಯಿರಲಿ. ಆಗ ನೀವು ಪ್ರಯತ್ನಪೂರ್ವಕವಾಗಿಯಾದರೂ ಬಿಡುವತ್ತ ಗಮನ ಹರಿಸುತ್ತೀರಿ.

5. ನಿಮ್ಮ ನಿದ್ದೆಯ ಕ್ರಮವನ್ನು ಗಮನಿಸಿ. ಪ್ರತಿದಿನಕ್ಕೆ ಬೇಕಾದ ಎಂಟು ಗಂಟೆಗಳ ನಿದ್ದೆ ನಿಮಗೆ ಸಿಗುತ್ತದೋ ನೋಡಿ. ಬಹಳ ಸಾರಿ ನಿದ್ದೆಯ ಕೊರತೆಯಿಂದ, ಎಷ್ಟೆಷ್ಟು ಹೊತ್ತಿಗೋ ನಿದ್ದೆ ಮಾಡುವುದರಿಂದ ಅಂಕೆ ತಪ್ಪಿ ಗೊರಕೆ ಬಂದಿರುತ್ತದೆ. ರಾತ್ರಿ ಬೇಗ ಮಲಗಿ ಬೇಗ ಏಳುವ ಕ್ರಮ ರೂಢಿಸಿಕೊಳ್ಳಿ.

6. ಅಗತ್ಯ ಸಂದರ್ಭಗಳಲ್ಲಿ ನೇಸಲ್‌ ಸ್ಟ್ರಿಪ್‌ ಬಳಸಿ. ಇದನ್ನು ಮೂಗಿನ ಬ್ರಿಡ್ಜ್‌ ಮೇಲೆ ಅಂಟಿಸಿಕೊಳ್ಳುವುದರಿಂದಲೂ ಗೊರಕೆಯಿಂದ ಮುಕ್ತಿ ಸಿಗುತ್ತದೆ.

ಇದನ್ನೂ ಓದಿ: ಕಣ್ಣಿನ ಸುತ್ತ ಕಪ್ಪು ರಿಂಗ್‌ ರೋಡು! ತೊಲಗಿಸುವ ಉಪಾಯ ಇಲ್ಲಿದೆ ನೋಡು!!

7. ಹಾಲಿನ ಉತ್ಪನ್ನಗಳನ್ನು ಕಡಿಮೆ ಮಾಡಿ. ಮಲಗುವ ಮೊದಲು ಹಾಲಿನ ಉತ್ಪನ್ನ ಸೇವಿಸಬೇಡಿ. ಸೇವಿಸಿದ್ದರೂ ನಿದ್ದೆಗೆ ಮೊದಲು ಕೆಲವು ಗಂಟೆಗಳ ಗ್ಯಾಪ್‌ ಇರಲಿ.

8. ತೂಕ ಇಳಿಸಿಕೊಳ್ಳಿ. ನಿಯಮಿತವಾಗಿ ವ್ಯಾಯಾಮ ಮಾಡಿ. ಉತ್ತಮ ಆಹಾರ ಕ್ರಮ ರೂಡಿಸಿಕೊಳ್ಳಿ. ಜಂಕ್‌ನಿಂದ ದೂರವಿರಿ. ಇವೆಲ್ಲವುಗಳಿಂದ ಶಿಸ್ತಾದ ಜೀವನಕ್ರಮ ರೂಢಿಸಿಕೊಳ್ಳುವ ಮೂಲಕವೂ ಗೊರಕೆ ಕಾಲ ಕ್ರಮೇಣ ಕಡಿಮೆಯಾಗುತ್ತದೆ.

9. ನಿಮ್ಮ ದೈನಂದಿನ ಬದುಕಿನಲ್ಲಿ ಈ ಕೆಲವು ಬದಲಾವಣೆಗಳ ಜೊತೆಗೆ ಕೆಲವು ಮನೆಮದ್ದುಗಳನ್ನೂ ಟ್ರೈ ಮಾಡಬಹುದು. ಪ್ರತಿದಿನ ಮಲಗುವ ಮುನ್ನ ಬಿಸಿ ಹಾಲಿಗೆ ಅರಿಶಿನ ಸೇರಿಸಿ ಕುಡಿಯಿರಿ. ಶೀತ, ನೆಗಡಿಯಂತ ಸಮಸ್ಯೆಯಿಂದ ಗೊರಕೆ ಬರುತ್ತಿದ್ದರೆ ಇದರಿಂದ ಕಡಿಮೆಯಾಗುತ್ತದೆ. ದಿನನಿತ್ಯ ಹಸಿ ಬೆಳ್ಳುಳ್ಳಿಯನ್ನು ಅನ್ನದೊಂದಿಗೆ ಬೆರೆಸಿ ಸೇವಿಸುತ್ತಾ ಬಂದಲ್ಲಿ ನಿಧಾನವಾಗಿ ಗೊರಕೆಯಿಂದ ಮುಕ್ತಿ ದೊರೆಯುತ್ತದೆ. ಹಸುವಿನ ಹಾಲಿನ ಬದಲು ಸೋಯಾ ಹಾಲನ್ನು ಬಳಸುತ್ತಾ ಬಂದಲ್ಲಿ ಗೊರಕೆಯ ಸಮಸ್ಯೆಯಿಂದ ಕೊಂಚ ಪಾರಾಗಬಹುದು. ಮಲಗುವ ಮುನ್ನ ಒಂದು ಚಮಚ ಜೇನುತುಪ್ಪವನ್ನು ಸೇವಿಸಿ. ಏಲಕ್ಕಿಯ ಪರಿಮಳವನ್ನು ಆಘ್ರಾಣಿಸುತ್ತಿರುವುದರಿಂದ ಶೀತ ನೆಗಡಿ, ಕಟ್ಟಿದ ಮೂಗಿನ ಸಮಸ್ಯೆ ಕಡಿಮೆಯಾಗುತ್ತದೆ. ಏಲಕ್ಕಿ ಪುಡಿಯನ್ನು ನೀರಿನಲ್ಲಿ ಕುದಿಸಿ ಅದನ್ನು ಬಿಸಿಯಾಗಿಯೇ ಕುಡಿಯುವ ಮೂಲಕವೂ ಗೊರಕೆ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಯೋಗ ದಿನ ಅಷ್ಟೇ ಅಲ್ಲ, ದಿನಾ ಯೋಗ ಮಾಡಬೇಕೆನ್ನಲು 11 ಕಾರಣಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Crowd Funding: ರಾಜಸ್ಥಾನದ ಜೈಪುರದಲ್ಲಿ ಮಗುವಿನ ಚಿಕಿತ್ಸೆಗೆ ಸಾರ್ವಜನಿಕರು ಅಭೂತಪೂರ್ವಾಗಿ ಸ್ಪಂದಿಸಿದ್ದಾರೆ. ಸೊಂಟದ ಕೆಳಗೆ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಮಗುವಿನ ಚಿಕಿತ್ಸೆಗಾಗಿ 17.5 ಕೋಟಿ ರೂ. ಬೇಕಾಗಿತ್ತು. ಸುಮಾರು 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹವಾಗಿದ್ದು, ಮಗುವಿಗೆ ಚಿಕಿತ್ಸೆ ನೀಡಲಾಗಿದೆ. ಉಳಿದ ಮೊತ್ತವನ್ನು ವರ್ಷದೊಳಗೆ ಮೂರು ಕಂತಿಗಳಲ್ಲಿ ಪಾವತಿಸಬಹುದಾದ ಅವಕಾಶವಿದೆ. ಸದ್ಯ ಸಾರ್ವಜನಿಕರ ಮಾನವೀಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Crowd Funding
Koo

ಜೈಪುರ: ಮಾನವೀಯತೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ರಾಜಸ್ಥಾನದ 22 ತಿಂಗಳ ಮಗುವಿನ ಚಿಕಿತ್ಸೆಗೆ ಸ್ಪಂದಿಸಿದ ಅನೇಕರು ಭರಪೂರ ದೇಣಿಗೆ ನೀಡಿದ್ದಾರೆ. ಕ್ರಿಕೆಟ್‌ ಅಟಗಾರರಿಂದ ಹಿಡಿದು, ನಟರು, ತರಕಾರಿ ಮಾರುವವರು, ಬೀದಿಬದಿ ವ್ಯಾಪಾರಿಗಳು ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಸೊಂಟದ ಕೆಳಗೆ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಮಗುವಿನ ಚಿಕಿತ್ಸೆಗಾಗಿ ಸುಮಾರು 17.5 ಕೋಟಿ ರೂ. ಮೊತ್ತದ ಇಂಜೆಕ್ಷನ್‌ ನೀಡಬೇಕಾಗಿದ್ದು, ಇದಕ್ಕಾಗಿ ಇವರೆಲ್ಲ ಒಂದಾಗಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡಿ ಮಗುವಿನ ನೆರವಿಗೆ ಧಾವಿಸಿದ್ದಾರೆ (Crowd Funding).

ರಾಜಸ್ಥಾನದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನರೇಶ್‌ ಶರ್ಮಾ ಅವರ ಪುತ್ರ ಹೃದಯಾಂಶ್‌ ಶರ್ಮಾ (22 ತಿಂಗಳು) ಅಪರೂಪದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (Spinal muscular atrophy) ಎಂಬ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಕಾರಣದಿಂದ ಆತನ ಸೊಂಟದ ಕೆಳಭಾಗ ಸಂಪೂರ್ಣ ನಿಷ್ಕ್ರೀಯವಾಗಿತ್ತು. ಇದನ್ನು ವಾಸಿ ಮಾಡಲು, ಸಂಪೂರ್ಣ ಗುಣಮುಖನಾಗಲು ವಿಶ್ವದ ಅತ್ಯಂತ ದುಬಾರಿ ಔಷಧಿಗಳಲ್ಲಿ ಒಂದಾದ ಜೀನ್ ಥೆರಪಿ ಇಂಜೆಕ್ಷನ್‌ ಜೊಲ್ಗೆನ್ಸ್ಮಾ (Zolgensma)ದ ಸಿಂಗಲ್ ಡೋಸ್ ಪಡೆದುಕೊಳ್ಳಬೇಕು ಎಂದು ವೈದ್ಯರು ಸೂಚಿಸಿದ್ದರು. ಅತ್ಯಂತ ದುಬಾರಿಯಾದ ಇದರ ಬೆಲೆ ಅಂದಾಜು 17.5 ಕೋಟಿ ರೂ.

ದೇಣಿಗೆ ಸಂಗ್ರಹಕ್ಕೆ ಮುಂದಾದ ಪೊಲೀಸರು

ಇಷ್ಟೊಂದು ದುಬಾರಿ ಮೊತ್ತ ಭರಿಸಲು ನರೇಶ್‌ ಶರ್ಮಾ ಅವರ ಕುಟುಂಬಕ್ಕೆ ಸಾಧ್ಯವಿರಲಿಲ್ಲ. ಈ ಹಿನ್ನೆಲೆಯಲ್ಲಿ ನೆರವಿಗೆ ಧಾವಿಸಿದ ರಾಜಸ್ಥಾನ ಪೊಲೀಸರು ಸಾವರ್ಜನಿಕ ದೇಣಿಗೆ ಸಂಗ್ರಹಕ್ಕೆ ಮುಂದಾದರು. ಮಗುವಿಗೆ 2 ವರ್ಷ ತುಂಬುವ ಮೊದಲೇ ಈ ಚಿಕಿತ್ಸೆ ನಡೆಯಬೇಕಿರುವುದರಿಂದ ಪೊಲೀಸರು ಫೆಬ್ರವರಿಯಲ್ಲಿ ಕ್ರೌಡ್‌ ಫಡಿಂಗ್‌ ಅಭಿಯಾನ ಆರಂಭಿಸಿದರು. ಈ ಅಭಿಯಾನಕ್ಕೆ ಸೂಕ್ತ ಸ್ಪಂದನೆ ದೊರೆಯಿತು. ಸೆಲೆಬಿಟಿಗಳಾದ ಕ್ರಿಕೆಟಿಗ ದೀಪಕ್‌ ಚಹರ್‌ ಮತ್ತು ಬಾಲಿವುಡ್‌ ನಟ, ಬಹಭಾಷಾ ಕಲಾವಿದ ಸೋನು ಸೂದ್‌ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಈ ವಿಚಾರವನ್ನು ಹಂಚಿಕೊಂಡು ನೆರವು ನೀಡಲು ಮನವಿ ಮಾಡಿದರು.

ಹರಿದು ಬಂದ ನೆರವು

ಬಳಿಕ ಜೈಪುರದ ವಿವಿಧ ಕಡೆಗಳಿಂದ ನೆರವು ಹರಿದು ಬರತೊಡಗಿತು. ಅಂಗಡಿಯವರು, ವಿದ್ಯಾರ್ಥಿಗಳು, ಗೃಹಣಿಯರು, ತರಕಾರಿ, ಹಣ್ಣು ಮಾರಾಟಗಾರರು, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲರೂ ನೆರವಿನ ಹಸ್ತ ಚಾಚಿದರು. ವಿವಿಧ ಎನ್‌ಜಿಒಗಳು ಮತ್ತು ಸಂಸ್ಥೆಗಳು ಕೂಡ ಈ ಅಭಿಯಾನಕ್ಕೆ ಕೈ ಜೋಡಿಸಿದವು. ʼʼರಾಜಸ್ಥಾನದಲ್ಲಿ ಕ್ರೌಡ್‌ ಫಡಂಗ್‌ಗೆ ಈ ರೀತಿಯ ಸ್ಪಂದನೆ ದೊರೆಯುತ್ತಿರುವುದು ಇದು ಮೊದಲ ಬಾರಿʼʼ ಎಂದು ಅಭಿಯಾನದಲ್ಲಿ ತೊಡಗಿಸಿಕೊಂಡಿರುವವರು ಅಭಿಪ್ರಾಯಪಡುತ್ತಾರೆ.

3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

3 ತಿಂಗಳ ಅವಧಿಯಲ್ಲಿ ಸುಮಾರು 9 ಕೋಟಿ ರೂ. ಸಂಗ್ರಹವಾಗಿದೆ. ಇದೀಗ ಜೈಪುರದ ಜೆ.ಕೆ. ಲಾನ್‌ ಆಸ್ಪತ್ರೆಯಲ್ಲಿ ಹೃದಯಾಂಶ್‌ಗೆ ಇಂಜೆಕ್ಷನ್‌ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಉಳಿದ ಮೊತ್ತವನ್ನು ವರ್ಷದೊಳಗೆ ಮೂರು ಕಂತಿಗಳಲ್ಲಿ ಪಾವತಿಸಬಹುದಾದ ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ.

ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ ಎನ್ನುವುದು ಆನುವಂಶಿಕ ಅಸ್ವಸ್ಥತೆಯಾಗಿದ್ದು, ಇದರಲ್ಲಿ ಬೆನ್ನುಹುರಿ ಮತ್ತು ಮೆದುಳಿನ ಕಾಂಡದಲ್ಲಿನ ನರ ಕೋಶಗಳ ಕೊರತೆಯೊಂದಾಗಿ ವ್ಯಕ್ತಿಗೆ ಸ್ನಾಯುಗಳ ಚಲನೆಯನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಇದು ಸ್ನಾಯು ದೌರ್ಬಲ್ಯಕ್ಕೆ ಕಾರಣವಾಗುತ್ತದೆ ಮತ್ತು ಕೈಕಾಲುಗಳ ಚಲನೆ ಮತ್ತು ಉಸಿರಾಟದ ಮೇಲೂ ಪರಿಣಾಮ ಬೀರುತ್ತದೆ. ಇದರ ಚಿಕಿತ್ಸೆಗಾಗಿ ಬಳಸುವ ಜೊಲ್ಗೆನ್ಸ್ಮಾ ಇಂಜೆಕ್ಷನ್‌ ಅನ್ನು ಸ್ವಿಸ್ ಫಾರ್ಮಾ ದೈತ್ಯ ನೊವಾರ್ಟಿಸ್ (Novartis) ತಯಾರಿಸುತ್ತದೆ.

ಇದನ್ನೂ ಓದಿ: kodagu News : ಒಮ್ಮಿಂದೊಮ್ಮೆಗೇ ಜೋರಾಯಿತು ನೋವು; ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಸ್ಟಾಫ್‌ ನರ್ಸ್‌

Continue Reading

ಆರೋಗ್ಯ

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

ಮಾನಸಿಕ ಒತ್ತಡ ಹೆಚ್ಚಿದಾಗ ದೇಹದ ನಾನಾ ಭಾಗಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಅಂಥವುಗಳಲ್ಲಿ ಒಂದು ಕುತ್ತಿಗೆ ನೋವು. ಒತ್ತಡ (neck pain) ಶಮನ ಮಾಡುವುದರ ಜೊತೆಗೆ, ಇನ್ನೂ ಕೆಲವು ತಂತ್ರಗಳು ನೋವಿನಿಂದ ಮುಕ್ತಿ ನೀಡಬಲ್ಲವು. ಕುತ್ತಿಗೆ ನೋವಿನಿಂದ ಪಾರಾಗುವ (Health Tips in Kannada) ಉಪಾಯ ಇಲ್ಲಿದೆ.

VISTARANEWS.COM


on

Health Tips in Kannada
Koo

ಮಾನಸಿಕ ಒತ್ತಡವು ದೇಹದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಬಲ್ಲದು. ಜೀರ್ಣಾಂಗಗಳ ಆರೋಗ್ಯದಲ್ಲಿ ಏರುಪೇರು, ಬೆನ್ನು ನೋವು, ಕುತ್ತಿಗೆ ನೋವು- ಹೀಗೆ ತರಹೇವಾರಿ ಸಮಸ್ಯೆಗಳನ್ನು ಹುಟ್ಟುಹಾಕಬಲ್ಲದು. ಅದರಲ್ಲೂ ತೀವ್ರವಾದ ಆತಂಕ ಮತ್ತು ಒತ್ತಡವು ಅಷ್ಟೇ ತೀವ್ರವಾದ ಕುತ್ತಿಗೆ ನೋವನ್ನು ಸೃಷ್ಟಿಸಬಲ್ಲದು. ಮಾನಸಿಕ ಒತ್ತಡ ಹೆಚ್ಚಾದಷ್ಟೂ ಸ್ನಾಯುಗಳ ಮೇಲಿನ ಒತ್ತಡವೂ ಹೆಚ್ಚುತ್ತದೆ. ಇದರಿಂದ ನೋವು ಮತ್ತು ಕಿರಿಕಿರಿ ಇನ್ನಷ್ಟು (Health Tips in Kannada) ಏರುತ್ತದೆ.

Neck Pain

ಒತ್ತಡಕ್ಕೂ ಕುತ್ತಿಗೆಗೂ…:

ಸಂಬಂಧ ಇದೆ ಎನ್ನುವುದನ್ನು ಅಧ್ಯಯನಗಳು ದೃಢಪಡಿಸಿವೆ. ನಮ್ಮ ದೇಹದಲ್ಲಿ ಒತ್ತಡ ಹೆಚ್ಚಾದಷ್ಟಕ್ಕೂ ಶರೀರ ಫೈಟ್‌-ಫ್ಲೈಟ್‌ ಎನ್ನುವ ಅವಸ್ಥೆಗೆ ತಲುಪುತ್ತದೆ. ಹೀಗಿರುವಾಗ ಸ್ನಾಯುಗಳ ಮೇಲಿನ ಒತ್ತಡ ಏರುತ್ತದೆ. ದೀರ್ಘ ಕಾಲ ಒತ್ತಡ ಶಮನಕ್ಕೆ ಯಾವುದೇ ಮಾರ್ಗವನ್ನು ಅನುಸರಿಸದಿದ್ದರೆ, ತಡೆಯಲಾರದಂಥ ಕುತ್ತಿಗೆ ನೋವು ಕಾಡುತ್ತದೆ. ಮಾತ್ರವಲ್ಲ, ಒತ್ತಡ ಹೆಚ್ಚಿದಾಗ ನಿದ್ದೆಗೆಡುವುದು, ಉರಿಯೂತ ಹೆಚ್ಚುವಂಥ ಆಹಾರಗಳನ್ನು ತಿನ್ನುವುದು, ಯಾವ್ಯಾವುದೋ ಭಂಗಿಗಳಲ್ಲಿ ಕುಳಿತುಕೊಳ್ಳುವುದು ಸಹ ಹೆಚ್ಚಾಗುತ್ತದೆ. ಇವೆಲ್ಲವುಗಳ ಕೃಪೆಯಿಂದ ಕುತ್ತಿಗೆ ನೋವು ಅಸಹನೀಯ ಎನ್ನುವಷ್ಟಾಗುತ್ತದೆ. ಇದಕ್ಕೆ ಮದ್ದುಂಟೇ?

ಭಂಗಿ

ಮೊದಲಿಗೆ ಕುಳಿತುಕೊಳ್ಳುವ, ಮಲಗುವ ಭಂಗಿಗಳ ಬಗ್ಗೆ ಗಮನ ಕೊಡಿ. ದಿನವಿಡೀ ಕಂಪ್ಯೂಟರ್‌ನಲ್ಲಿ ಕೆಲಸ ಮಾಡುವವರಾಗಿದ್ದರೆ ಕಣ್ಣಿನ ಮಟ್ಟಕ್ಕೇ ಪರದೆ ಇರಿಸಿಕೊಳ್ಳಿ. ಭುಜಗಳನ್ನು ನಿರಾಳವಾಗಿ ಇರಿಸಿಕೊಳ್ಳಿ. ಕೂರುವ ಕುರ್ಚಿ ನಿಮ್ಮ ಎತ್ತರಕ್ಕೆ ಸರಿಯಾಗಿರಲಿ. ಮಲಗುವಾಗಲೂ ಸರಿಯಾಗ ಭಂಗಿಗಳು ಅಗತ್ಯ. ಬೆನ್ನು, ಕುತ್ತಿಗೆ ನೋವಿನ ಸಂದರ್ಭಗಳಲ್ಲಿ ಸೂಕ್ತ ಎತ್ತರದ ದಿಂಬುಗಳಿರಲಿ.

Pain pressure irritation in neck muscles Excessive Use Of Electronic Gadgets

ಸ್ಟ್ರೆಚ್‌ ಮಾಡಿ

ತಾಸುಗಟ್ಟಲೆ ಒಂದೇ ಭಂಗಿಯಲ್ಲಿ ಕುಳಿತುಕೊಳ್ಳುವುದು ಅಥವಾ ನಿಲ್ಲುವುದು ಸರಿಯಲ್ಲ. ಇದರಿಂದ ಸ್ನಾಯುಗಳ ಮೇಲಿನ ಒತ್ತಡ ದ್ವಿಗುಣಗೊಳ್ಳುತ್ತದೆ. ಸದಾ ಒಂದೇ ಭಂಗಿಯಲ್ಲಿ ಕೂರುವ ಬದಲು ತಾಸಿಗೊಮ್ಮೆ ಕೆಲವು ನಿಮಿಷಗಳ ವಿರಾಮ ತೆಗೆದುಕೊಳ್ಳಿ. ಬೆನ್ನು, ಕುತ್ತಿಗೆ ಮತ್ತು ತೋಳುಗಳನ್ನು ಚೆನ್ನಾಗಿ ಸ್ಟ್ರೆಚ್‌ ಮಾಡಿ. ಇದರಿಂದ ನೋವು ಹೆಚ್ಚಾಗುವುದನ್ನು ತಡೆಯಬಹುದು.

ತೂಕ ಎತ್ತದಿರಿ

ದೇಹದಲ್ಲಿ ಯಾವುದೇ ಭಾಗದಲ್ಲಿ ನೋವಿದ್ದರೆ, ತೂಕ ಎತ್ತುವ ಸಾಹಸಕ್ಕೆ ಕೈ ಹಾಕಬೇಡಿ. ಹೀಗೆಂದರೆ ಜಿಮ್‌ಗೆ ಹೋಗಿ ತೂಕ ಎತ್ತುವವರಿಗೆ ಮಾತ್ರವೇ ಇದು ಅನ್ವಯಿಸುತ್ತದೆ ಎಂದು ಭಾವಿಸುವಂತಿಲ್ಲ. ಮನೆಯಲ್ಲೇ ಗ್ರೈಂಡರ್‌ ಎತ್ತುವುದು, ಮಂಚ, ಕುರ್ಚಿ-ಮೇಜುಗಳನ್ನು ಜರುಗಿಸುವುದು- ಇಂಥವೆಲ್ಲ ಬೆನ್ನು ಮತ್ತು ಕುತ್ತಿಗೆಯ ಮೇಲೆ ಒತ್ತಡ ಹೆಚ್ಚಿಸುತ್ತವೆ.

Water-Sleep-Exercise For Neck Pain

ದಿಂಬು

ಮಲಗುವಾಗ ಹಾಕುವ ದಿಂಬಿನ ಎತ್ತರದ ಬಗ್ಗೆ ಗಮನ ನೀಡಿ. ತೀರಾ ಎತ್ತರದ ದಿಂಬು ಮತ್ತು ದಿಂಬೇ ಇಲ್ಲದಿರುವುದು- ಈ ಎರಡೂ ವಿಷಯಗಳು ಕುತ್ತಿಗೆ ನೋವನ್ನು ಹೆಚ್ಚಿಸುತ್ತವೆ. ಮೆಮರಿ ಫೋಮ್‌ ದಿಂಬುಗಳು ಕುತ್ತಿಗೆ ನೋವಿನ ತೀವ್ರತೆಯನ್ನು ಗಣನೀಯವಾಗಿ ತಗ್ಗಿಸುತ್ತವೆ. ಖರೀದಿಸುವಾಗ ದುಬಾರಿ ಎನಿಸಿದರೂ, ನಿಮ್ಮ ಕುತ್ತಿಗೆಯ ಆರೋಗ್ಯಕ್ಕಾಗಿ ಇದೇನು ದೊಡ್ಡದೆನಿಸದು.

ಫಿಸಿಯೊಥೆರಪಿ

ಕುತ್ತಿಗೆ ನೋವಿಗೆ ಫಿಸಿಯೊಥೆರಪಿ ಉತ್ತಮ ಮದ್ದಾಗಬಲ್ಲದು. ಈ ಬಗ್ಗೆ ವೈದ್ಯರ ಸಲಹೆ ಕೇಳಿ ಮುಂದುವರಿಯುವುದು ಒಳ್ಳೆಯದು. ನೋವಿಗೆ ಕಾರಣವೇನೆಂದು ಪತ್ತೆ ಮಾಡಿ, ಅದಕ್ಕೆ ಸರಿ ಹೊಂದುವ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಜೊತೆಗೆ ವ್ಯಾಯಾಮ, ಮಸಾಜ್‌ ಮುಂತಾದವು ಬಿಗಿದ ಸ್ನಾಯುಗಳನ್ನು ಸಡಿಲ ಮಾಡುತ್ತದೆ.

Hot Pack For Neck Pain

ಬಿಸಿ-ತಣ್ಣಗಿನ ಪ್ಯಾಕ್‌

ಕುತ್ತಿಗೆಯ ಸ್ನಾಯುಗಳ ಬಿಗಿತ ಅಥವಾ ಉರಿಯೂತವನ್ನು ಶಮನ ಮಾಡುವುದಕ್ಕೆ ಬಿಸಿ ಇಲ್ಲವೇ ತಣ್ಣಗಿನ ಪ್ಯಾಕ್‌ಗಳು ಸಹಾಯ ಮಾಡುತ್ತವೆ. ಹೀಟಿಂಗ್‌ ಪ್ಯಾಡ್‌, ಬಿಸಿ ನೀರಿನ ಬಟ್ಟೆ ಮುಂತಾದವು ೧೫ ನಿಮಿಷಗಳ ಕುತ್ತಿಗೆಯ ಮೇಲಿದ್ದರೆ ಆರಾಮ ನೀಡಬಲ್ಲವು. ಪ್ರತಿಯಾಗಿ, ತಣ್ಣನೆಯ ಪ್ಯಾಡ್‌ ಅಥವಾ ತಣ್ಣೀರು ಬಟ್ಟೆಯೂ ಅನುಕೂಲವಾಗುತ್ತದೆ.

ಇದನ್ನೂ ಓದಿ: Moringa Leaves Health Benefits: ನುಗ್ಗೆ ಸೊಪ್ಪು ಏಕೆ ತಿನ್ನಬೇಕು? ಏನಿದೆ ಇದರಲ್ಲಿ ವಿಶೇಷ ಗುಣ?

ಒತ್ತಡ ನಿರ್ವಹಣೆ

ಇದು ಎಲ್ಲಕ್ಕಿಂತ ಅತ್ಯಂತ ಮಹತ್ವದ್ದು. ಯೋಗ, ಪ್ರಾಣಾಯಾಮ, ದೀರ್ಘ ಉಸಿರಾಟ, ಧ್ಯಾನ, ಸಂಗೀತ ಕೇಳುವುದು ಅಥವಾ ಇನ್ಯಾವುದೇ ರೀತಿಯ ಒತ್ತಡ ನಿರ್ವಹಣೆಯ ತಂತ್ರಗಳು ನೋವಿನಿಂದ ಮುಕ್ತಿ ನೀಡಬಲ್ಲವು.

Continue Reading

ಆರೋಗ್ಯ

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

ಬೇಸಿಗೆಯಲ್ಲಿ ಸಾಕಷ್ಟು ನೀರಿನಂಶವನ್ನು ದೇಹಕ್ಕೆ ಒದಗಿಸುವತ್ತಲೂ ಗಮನ ನೀಡಬೇಕಾಗಿರುವುದರಿಂದ, ಮಾವಿನ ಜ್ಯೂಸ್‌ ಸೇವನೆಯೂ ಸೂಕ್ತವೇ. ಬೇಸಿಗೆಯಲ್ಲಿ ಮಾವಿನ ಹಣ್ಣಿನ ತಾಜಾ ರಸ ಕುಡಿಯುವುದು ಆಪ್ಯಾಯಮಾನ ಎನಿಸುತ್ತದೆ. ದಾಹ ತಣಿಸಲು ಮತ್ತು ಬಾಯಿಯ ರುಚಿ ತಣಿಯಲು ಎರಡಕ್ಕೂ ಒಳ್ಳೆಯ ಉಪಾಯವಿದು. ಮಾವಿನಲ್ಲಿ ಏನಿದೆ ಅಂಥ ಗುಣಕಾರಿ ಅಂಶಗಳು? ಈ ಬಗ್ಗೆ (Mango Juice Benefits) ಇಲ್ಲಿದೆ ಮಾಹಿತಿ.

VISTARANEWS.COM


on

Mango Juice Benefits
Koo

ಬೇಸಿಗೆಯೆಂದರೆ ಬೆವರಷ್ಟೇ ಅಲ್ಲ, ಮಾವಿನ ಹಣ್ಣಿನ ಕಾಲವೂ ಹೌದು. ಇದು ರುಚಿಗೆ ಮಾತ್ರವೇ ಅಲ್ಲ, ಆರೋಗ್ಯದ ಮೇಲಾಗುವ ಲಾಭದಾಯಕ ಪರಿಣಾಮಗಳಿಗಾಗಿಯೂ ಜನಪ್ರಿಯ. ತಾಜಾ ಹಣ್ಣನ್ನು ತಿನ್ನುವುದು ಎಲ್ಲಕ್ಕಿಂತ ಒಳ್ಳೆಯ ಆಯ್ಕೆ. ಆದರೆ ಬೇಸಿಗೆಯಲ್ಲಿ ಸಾಕಷ್ಟು ನೀರಿನಂಶವನ್ನು ದೇಹಕ್ಕೆ ಒದಗಿಸುವತ್ತಲೂ ಗಮನ ನೀಡಬೇಕಾಗಿರುವುದರಿಂದ, ಮಾವಿನ ಜ್ಯೂಸ್‌ ಸೇವನೆಯೂ ಸೂಕ್ತವೇ. ಸದಾ ಕಾಲ ಅದನ್ನೇ ಕುಡಿಯುವುದನ್ನು ಯಾರೂ ಮಾಡುವುದಿಲ್ಲ, ಮಾಡಬಾರದು. ನೀರು ಎಲ್ಲಕ್ಕಿಂತ ಶ್ರೇಷ್ಠವಾದ ಪಾನೀಯ. ಆದರೆ ಒಮ್ಮೊಮ್ಮೆ ಮಾವಿನ ಜ್ಯೂಸ್‌ (Mango Juice) ಸಹ ಬಾಯಾರಿಕೆಗೆ ರುಚಿಕರ ಆಯ್ಕೆಯಾಗಿ ಒದಗಬಲ್ಲದು. ಜ್ಯೂಸರ್‌ಗೆ ಹಾಕಿ ಇದರ ನಾರಿನಂಶವನ್ನು ತೆಗೆಯುವುದು, ಮಿಕ್ಸರ್‌ಗೆ ಹಾಕಿ ನಾರಿನಂಶವನ್ನು ಸೋಸಿ ತೆಗೆಯುವುದು- ಇಂಥವೆಲ್ಲ ಸೂಕ್ತವಲ್ಲ. ಹಣ್ಣನ್ನು ಸೇವಿಸುವಾಗ ಅದರ ನೀರು ಮಾತ್ರವಲ್ಲ, ನಾರಿನಂಶಗಳನ್ನೂ ಜೊತೆಗೆ ಸೇರಿಸಿಕೊಂಡರೆ ಆರೋಗ್ಯಕರ. ಏನು ಲಾಭಗಳು ದೊರೆಯುತ್ತವೆ (Mango Juice Benefits) ಮಾವಿನ ತಾಜಾ ಜ್ಯೂಸ್‌ ಕುಡಿಯುವುದರಿಂದ?

Mango Juice

ಸತ್ವಗಳಿಂದ ಭರಿತ

ಇದರಲ್ಲಿರುವ ಪಿಷ್ಟ ಮತ್ತು ನೈಸರ್ಗಿಕ ಸಕ್ಕರೆಯಂಶ ದೇಹ ದಣಿದಂಥ ಹೊತ್ತಿನಲ್ಲಿ ತ್ವರಿತವಾಗಿ ಚೇತರಿಸಿಕೊಳ್ಳುವಂತೆ ಮಾಡುತ್ತದೆ. ಒಂದು ಸರ್ವಿಂಗ್‌ ತಾಜಾ ಮಾವಿನ ಹಣ್ಣಿನ ರಸದಿಂದ ಅಂದಾಜು 24 ಗ್ರಾಂ ಪಿಷ್ಟ ಮತ್ತು 22 ಗ್ರಾಂನಷ್ಟು ಪ್ರಾಕೃತಿಕ ಸಕ್ಕರೆಯಂಶ ದೊರೆಯುತ್ತದೆ. ವ್ಯಾಯಾಮ ಮಾಡಿ ದಣಿದಾಗ, ಬಿಸಿಲಿನಲ್ಲಿ ಬಸವಳಿದು ಬಂದಂಥ ಸಂದರ್ಭಗಳಲ್ಲಿ ಒಂದು ಗ್ಲಾಸ್‌ ತಂಪಾದ ಮಾವಿನ ಹಣ್ಣಿನ ರಸ ಇಡೀ ದೇಹಕ್ಕೆ ಚೈತನ್ಯ ನೀಡಬಲ್ಲದು. ಜೊತೆಗೆ, ವಿಟಮಿನ್‌ ಸಿ ಮತ್ತು ಎ, ನಾರು, ಹಲವು ರೀತಿಯ ಉತ್ಕರ್ಷಣ ನಿರೋಧಕಗಳಿಂದ ಮಾವು ಸಮೃದ್ಧವಾಗಿದೆ.

Antioxidants in it keep immunity strong Benefits Of Mandakki

ಪ್ರತಿರೋಧಕತೆ ಹೆಚ್ಚಳ

ಮಾವಿನಲ್ಲಿ ವಿಟಮಿನ್‌ ಸಿ ಅಂಶ ಭರಪೂರವಿದೆ. ಸುಮಾರು 100 ಮಿ.ಲೀ. ತಾಜಾ ಮಾವಿನ ರಸದಲ್ಲಿ ಅಂದಾಜು 14 ಎಂ.ಜಿ.ಯಷ್ಟು ವಿಟಮಿನ್‌ ಸಿ ದೊರೆಯುತ್ತದೆ. ಸೋಂಕುಗಳ ವಿರುದ್ಧ ಹೋರಾಡುವಂಥ ಪ್ರತಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದರಿಂದ ಹಿಡಿದು, ಕೊಲಾಜಿನ್‌ ಉತ್ಪಾದನೆಯವರೆಗೆ ಬಹಳಷ್ಟು ರೀತಿಯ ಕೆಲಸಗಳನ್ನು ಸಿ ಜೀವಸತ್ವ ನಿರ್ವಹಿಸುತ್ತದೆ.

ealthy internal organs of human digestive system / highlighted blue organs

ಜೀರ್ಣಾಂಗಗಳ ಸಾಮರ್ಥ್ಯ ಹೆಚ್ಚಳ

ಜೀರ್ಣಾಂಗಗಳಲ್ಲಿ ಒಳ್ಳೆಯ ಬ್ಯಾಕ್ಟೀರಿಯಗಳ ಸಂಖ್ಯೆಯನ್ನು ಹೆಚ್ಚಿಸುವುದಕ್ಕೆ ನಾರಿನಂಶದ ಅಗತ್ಯವಿದೆ. ಮಾವಿನಲ್ಲಿ ನಾರು ಹೇರಳವಾಗಿದೆ. ಇದರಿಂದ ಜೀರ್ಣಾಂಗಗಳ ಕ್ಷಮತೆಯನ್ನು ಹೆಚ್ಚಿಸಬಹುದು. ಬೇಕಾದ ಅಂಶಗಳನ್ನು ಜೀರ್ಣ ಮಾಡಿ, ಬೇಡದ್ದನ್ನು ದೇಹದಿಂದ ಹೊರಹಾಕುವುದಕ್ಕೆ ಸುಲಭವಾಗುತ್ತದೆ. ಈ ಮೂಲಕ ಮಲಬದ್ಧತೆಯನ್ನು ದೂರ ಮಾಡುತ್ತದೆ.

Closeup of woman eye with visual effects

ದೃಷ್ಟಿ ಚುರುಕು

ಮಾವಿನಲ್ಲಿರುವ ವಿಟಮಿನ್‌ ಎ ಸತ್ವದಿಂದ ದೃಷ್ಟಿಯನ್ನು ಚೆನ್ನಾಗಿರಿಸಿಕೊಳ್ಳಲು ಅನುಕೂಲ. ಕಣ್ಣಿನ ಹೊರಕವಚವಾದ ಕಾರ್ನಿಯಾದ ಆರೋಗ್ಯ ರಕ್ಷಣೆಗೆ ಎ ಜೀವಸತ್ವ ಅಗತ್ಯವಾಗಿ ಬೇಕು. ಕಣ್ಣಿನಲ್ಲಿರುವ ರೊಡೊಪ್ಸಿನ್‌ ಎಂಬ ಪ್ರೊಟೀನ್‌ಗೂ ವಿಟಮಿನ್‌ ಎ ಅಗತ್ಯ. ಇದು ಕಡಿಮೆ ಬೆಳಕಿನ ಸಂದರ್ಭಗಳಲ್ಲೂ ದೃಷ್ಟಿ ಸ್ವಚ್ಛವಾಗಿ ಕೆಲಸ ಮಾಡುವುದನ್ನು ಸಾಧ್ಯವಾಗಿಸುತ್ತದೆ.

Makhna Seed benifit

ಚರ್ಮದ ಕಾಂತಿ ಹೆಚ್ಚಳ

ಚರ್ಮ ಬಿಗಿಯಾಗಿರುವುದಕ್ಕೆ, ಸುಕ್ಕಾಗದಂತೆ ತಡೆಯುವುದಕ್ಕೆ, ಕಾಂತಿಯುಕ್ತ ಆಗಿರುವುದಕ್ಕೆ ಬೇಕಾಗುವುದು ಕೊಲಾಜಿನ್‌ ಸತ್ವ. ಇದರ ಉತ್ಪತ್ತಿಗೆ ಅಗತ್ಯವಾದದ್ದು ವಿಟಮಿನ್‌ ಸಿ ಅಂಶ. ಇದರಿಂದ ವಯಸ್ಸಾದಂತೆ ಕಾಣುವುದನ್ನು ಮುಂದೂಡಬಹುದು. ಕಾಡುವ ಉರಿಯೂತದ ನಿವಾರಣೆಗೂ ವಿಟಮಿನ್‌ ಸಿ ಯಂಥ ಉತ್ಕರ್ಷಣ ನಿರೋಧಕಗಳ ಆವಶ್ಯಕತೆಯಿದೆ.

active brain

ಮೆದುಳು ಕ್ಷೇಮ

ಮಾವಿನಲ್ಲಿ ಉತ್ಕರ್ಷಣ ನಿರೋಧಕಗಳು ವಿಫುಲವಾಗಿವೆ. ಉತ್ಕರ್ಷಣ ನಿರೋಧಕಗಳ ಸಾಂದ್ರತೆ ಹೆಚ್ಚಿದಷ್ಟಕ್ಕೂ ದೇಹದ ಅಂಗಾಂಗಗಳು ಕ್ಷೇಮವಾಗಿ ಇರುತ್ತವೆ. ಮುಕ್ತಕಣಗಳನ್ನು ನಿರ್ಬಂಧಿಸುವುದರಿಂದ ಮೆದುಳನ್ನು ಕಾಡುವ ಅಲ್‌ಜೈಮರ್ಸ್‌ನಂಥ ರೋಗಗಳು ಹತ್ತಿರ ಬಾರದಂತೆ ನೋಡಿಕೊಳ್ಳಬಹುದು.

ಇದನ್ನೂ ಓದಿ: Vertigo Problem: ನಿಮಗೆ ಇದ್ದಕ್ಕಿದ್ದಂತೆ ತಲೆ ಸುತ್ತುತ್ತಿದೆಯೆ? ಈ ವಿಷಯ ತಿಳಿದುಕೊಂಡಿರಿ

ಜೋಕೆ!

ಒಳ್ಳೆಯದೆಂಬ ನೆವದಿಂದ ಮಿತಿಮೀರಿದ ಪ್ರಮಾಣದಲ್ಲಿ ಮಾವಿನ ಜ್ಯೂಸ್‌ ಸೇವಿಸಿದರೆ ಹೊಟ್ಟೆಯ ಆರೋಗ್ಯ ಹಾಳಾಗಬಹುದು. ಅತಿಯಾದ ನಾರಿನ ಅಂಶವಿರುವ ಆಹಾರದ ಸೇವನೆಯಿಂದ ಡಯರಿಯ ಕಾಡಬಹುದು. ಮಾವಿನಲ್ಲಿರುವ ಅಧಿಕ ಸಕ್ಕರೆಯಂಶದಿಂದ ತೂಕ ಹೆಚ್ಚಬಹುದು. ಮಧುಮೇಹಿಗಳು ಮಾವಿನ ಸೇವನೆಯ ಮೇಲೆ ನಿಯಂತ್ರಣ ಇರಿಸಿಕೊಳ್ಳದಿದ್ದರೆ, ಸಕ್ಕರೆ ಕಾಯಿಲೆ ನಿಯಂತ್ರಣ ತಪ್ಪಬಹುದು.

Continue Reading

ಕೊಡಗು

kodagu News : ಒಮ್ಮಿಂದೊಮ್ಮೆಗೇ ಜೋರಾಯಿತು ನೋವು; ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಸ್ಟಾಫ್‌ ನರ್ಸ್‌

kodagu News : ಕಾಫಿ ತೋಟದಲ್ಲಿ ಕೆಲಸಕ್ಕಿದ್ದ ಅಸ್ಸಾಂ ಮೂಲದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮತ್ತಷ್ಟು ನೋವು ಕಾಣಿಸಿಕೊಂಡಿತ್ತು. ಮಾರ್ಗ ಮಧ್ಯೆ ಆಂಬ್ಯುಲೆನ್ಸ್‌ನಲ್ಲೇ ಮಗು ಜನಿಸಿದೆ.

VISTARANEWS.COM


on

By

kodagu News Woman gives birth to baby in ambulance
Koo

ಕೊಡಗು: ನೋವಿನಲ್ಲಿ ನರಳುವಾಗ ಉಪಚರಿಸುವ ಎರಡನೇ ದೇವರು ಅಂದರೆ ಶುಶ್ರೂಷಕಿಯರು (Nursing staff). ಆಸ್ಪತ್ರೆಯಲ್ಲಿ ಡಾಕ್ಟರ್‌ಗಳಿಗಿಂತಲೂ ಹೆಚ್ಚು ಆಪ್ತರಾಗುತ್ತಾರೆ. ಆಂಬ್ಯುಲೆನ್ಸ್‌ನಲ್ಲೇ (108 Ambulance) ಹೆರಿಗೆ ನೋವು ಅನುಭವಿಸಿದ ಹೆಣ್ಮಗಳಿಗೆ ಅಲ್ಲೇ ಹೆರಿಗೆ ಮಾಡಿಸುವ ಮೂಲಕ ಕಷ್ಟ ಕಾಲದಲ್ಲಿ ನೆರವಾಗಿ ತಾಯಿ-ಮಗುವನ್ನು ಬದುಕಿಸಿದ್ದಾರೆ. ಕೊಡಗಿನ (kodagu News) ಸೋಮವಾರಪೇಟೆಯಿಂದ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಹೆರಿಗೆಗೆಂದು ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವ ಸಂದರ್ಭ ತಾಯಿ ಮಾರ್ಗ ಮಧ್ಯೆ ಮಗುವಿಗೆ ಜನ್ಮ ನೀಡಿದ್ದಾರೆ. ಸೋಮವಾರಪೇಟೆ ಬಳಿಯ ಬಳಗುಂದ ಗ್ರಾಮದ ಕಾಫಿ ತೋಟವೊಂದರಲ್ಲಿ ಕಾರ್ಮಿಕರಾಗಿರುವ ಅಸ್ಸಾಂ ಮೂಲದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.

ಹೀಗಾಗಿ ಕುಟುಂಬಸ್ಥರು ಅವರನ್ನು ಸೋಮವಾರಪೇಟೆ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಸೋಮವಾರಪೇಟೆ ಸರಕಾರಿ ಆಸ್ಪತ್ರೆಯ ಸ್ಟಾಫ್ ನರ್ಸ್ ಹೇಮಂತ್‌ಕುಮಾರ್ ಮತ್ತು ಆಂಬ್ಯುಲೆನ್ಸ್ ಚಾಲಕ ಪ್ರಸನ್ನ ಅವರು, ಮಹಿಳೆಯನ್ನು ಹೆರಿಗೆಗೆಂದು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುತ್ತಿದ್ದರು.

ಇದನ್ನೂ ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಆದರೆ ಆಸ್ಪತ್ರೆಗೆ ಕರೆತರುವ ದಾರಿಯಲ್ಲೇ ಗರಗಂದೂರು ಗ್ರಾಮದ ಬಳಿ ಹೆರಿಗೆ ನೋವು ಒಮ್ಮಿಂದೊಮ್ಮೆಗೇ ಜೋರಾಯಿತು. ಮಹಿಳೆ ನೋವಿನಿಂದ ನರಳಿದರು. ಬೇರೆ ಯಾರೇ ಆಗಿದ್ದರೂ ಆಸ್ಪತ್ರೆ ಇನ್ನೇನು ಹತ್ತಿರದಲ್ಲಿದೆ. ರಿಸ್ಕ್‌ ಬೇಡ ಎನ್ನುತ್ತಿದ್ದರೇನೋ. ಆದರೆ, ಸ್ಟಾಫ್ ನರ್ಸ್ ಹೇಮಂತ್‌ಕುಮಾರ್ ಅವರು ಸುಮ್ಮನೆ ಕೂರಲಿಲ್ಲ.

ಕೂಡಲೇ ಹೆರಿಗೆ ಬೇಕಾಗುವ ರೀತಿಯಲ್ಲಿ ಅಲ್ಲೇ ಒತ್ತಡಗಳನ್ನು ಸೃಷ್ಟಿ ಮಾಡಿದರು. ಜತೆಗಿದ್ದವರ ಸಹಕಾರದಿಂದ ಆಗಲೇ ಹೊರಗೆ ಬರಲು ಕಾಯುತ್ತಿದ್ದ ಮಗುವನ್ನು ಅತ್ಯಂತ ಜತನದಿಂದ ಹೊರತೆಗೆದು ಹೆರಿಗೆ ಮಾಡಿಸಿಯೇ ಬಿಟ್ಟರು. ಆಂಬ್ಯುಲೆನ್ಸ್‌ ವಾಹನವು ಆಸ್ಪತ್ರೆ‌ ತಲುಪುವದಕ್ಕಿಂತ ಮುಂಚೆಯೇ ಅಂಬ್ಯುಲೆನ್ಸ್ ನಲ್ಲಿಯೇ ಹೆರಿಗೆ ಮಾಡಿಸಿದ್ದಾರೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
viral video garbage bengaluru roads
ವೈರಲ್ ನ್ಯೂಸ್17 mins ago

Viral video: ʼಅಸಹ್ಯಕರ!ʼ ಬೆಂಗಳೂರಿನ ರಸ್ತೆಗಳ ಕಸದ ವಿಡಿಯೋ ಪೋಸ್ಟ್‌ ಮಾಡಿದ ಕಿರಣ್ ಮಜುಂದಾರ್ ಶಾ

Stone pelting
ದೇಶ20 mins ago

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Crowd Funding
ದೇಶ22 mins ago

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Prajwal Revanna Case
ಕರ್ನಾಟಕ43 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

copper mine lift collapse
ಪ್ರಮುಖ ಸುದ್ದಿ1 hour ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ1 hour ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ2 hours ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ2 hours ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ3 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

SSLC Result
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ43 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ13 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202415 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202419 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ19 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು21 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌