ಪಿಎಸ್‌ಐ ನೇಮಕಾತಿ ಅಕ್ರಮ | ಇಡಿ ತನಿಖೆ ಇಲ್ಲವೆಂದ ಗೃಹ ಸಚಿವ - Vistara News

ಕರ್ನಾಟಕ

ಪಿಎಸ್‌ಐ ನೇಮಕಾತಿ ಅಕ್ರಮ | ಇಡಿ ತನಿಖೆ ಇಲ್ಲವೆಂದ ಗೃಹ ಸಚಿವ

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣವನ್ನು ಇಡಿ ತನಿಖಾ ಸಂಸ್ಥೆಗೆ ವರ್ಗಾವಣೆ ಮಾಡವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದರು.

VISTARANEWS.COM


on

ಪಿಎಸ್‌ಐ ನೇಮಕಾತಿ ಅಕ್ರಮ
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ತನಿಖೆಯನ್ನು ಪ್ರಸ್ತುತ ಸಿಐಡಿ ಉತ್ತಮವಾಗಿಯೇ ನಿರ್ವಹಣೆ ಮಾಡುತ್ತಿದ್ದು, ಹಗರಣದ ತನಿಖೆಯನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಳಗಾವಿಯ ನಿಪ್ಪಾಣಿಯಲ್ಲಿ ಗುರುವಾರ ನೂತನ ಪೊಲೀಸ್ ಠಾಣೆ ಉದ್ಘಾಟಿಸಿ ಮಾತನಾಡಿದ ಅವರು, ಸಿಐಡಿ ಅಧಿಕಾರಿಗಳು ಈ ಪ್ರಕರಣದಲ್ಲಿ ಯಾವುದೇ ಮುಲಾಜಿಗೆ ಒಳಗಾಗದೆ, ಅತ್ಯುತ್ತಮವಾಗಿ ಮತ್ತು ಯಶಸ್ವಿಯಾಗಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ತೇಜೋವಧೆಗೆ ವಿಜಯೇಂದ್ರ ಹೆಸರು
ಪಿಎಸ್‌ಐ ಹಗರಣದಲ್ಲಿ ಬಿ.ವೈ. ವಿಜಯೇಂದ್ರ ಅವರ ಹೆಸರನ್ನು ತಳಕು ಹಾಕಿರುವ ವಿಚಾರವು ರಾಜಕೀಯ ಪ್ರೇರಿತವಾಗಿರುವುದು. ಅವರನ್ನು ತೇಜೋವಧೆ ಮಾಡಬೇಕೆಂದು ಹೀಗೆ ಮಾಡಲಾಗುತ್ತಿದೆ. ಅನಾವಶ್ಯಕವಾಗಿ ಅವರ ಹೆಸರನ್ನು ಎಳೆದು ತರಲಾಗಿದ್ದು, ರಾಜಕೀಯ ಲಾಭ ಪಡೆಯುವ ಕೆಲಸಕ್ಕೆ ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ.

ಯಾರದ್ದೋ ತೇಜೋವಧೆ ಮಾಡಿ ರಾಜಕೀಯ ಲಾಭ ಪಡೆಯಬಾರದು. ಅಲ್ಲದೆ, ನಾನು ಅಂದಿನಿಂದಲೂ ಹೇಳುತ್ತಾ ಬಂದಿದ್ದು, ಇದಕ್ಕೆ ಸಂಬಂಧಪಟ್ಟ ಸಾಕ್ಷ್ಯಾಧಾರ ಕೊಡಲಿ. ಆದರೆ, ಆರೋಪ ಮಾಡಿ ಸಾಕ್ಷಿ ಕೊಡದೆ ಬೆನ್ನು ತೋರಿಸಿ ಓಡಿ ಹೋಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದನ್ನು ಓದಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ, ಬಂಧಿತ ಎಡಿಜಿಪಿ ಅಮೃತ್‌ ಪಾಲ್‌ ವಿಚಾರಣೆ ಇಂದು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಸಿಂಗಾಪುರ ಮಾಧ್ಯಮಗಳಲ್ಲೂ ಪ್ರಜ್ವಲ್‌ ರೇವಣ್ಣ ಕೇಸ್‌ ಸದ್ದು!

Prajwal Revanna Case: ಸಿಂಗಾಪುರದ ಸಿಎನ್‌ಎ ನ್ಯೂಸ್‌ ಚಾನೆಲ್‌ನಲ್ಲಿ ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ಸುದ್ದಿ ಪ್ರಸಾರವಾಗಿದ. ದೇಶದಾದ್ಯಂತ ಪ್ರಜ್ವಲ್‌ ರೇವಣ್ಣ ಪ್ರಕರಣ ಸಂಚಲನ ಸೃಷ್ಟಿಸಿರುವ ನಡುವೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಪ್ರಕರಣ ಸದ್ದು ಮಾಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಕೇಸ್ ರಾಜ್ಯ, ದೇಶದಾದ್ಯಂತ ಸಂಚಲನ ಸೃಷ್ಟಿಸಿರುವ ನಡುವೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಪ್ರಕರಣ ಸದ್ದು ಮಾಡಿದೆ. ಸಿಂಗಾಪುರ ಮಾಧ್ಯಮಗಳಲ್ಲೂ ಪ್ರಕರಣದ ಬಗ್ಗೆ ಸುದ್ದಿ ಪ್ರಸಾರವಾಗಿದ್ದು, ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಿರುವ ಕುರಿತು ಸುದ್ದಿ ಪ್ರಕಟವಾಗಿದೆ.

ಸಿಂಗಾಪುರದ ಸಿಎನ್‌ಎ ನ್ಯೂಸ್‌ ಚಾನೆಲ್‌ನಲ್ಲಿ ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ಸುದ್ದಿ ಪ್ರಸಾರವಾಗಿದೆ. ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿದೆ. ಈ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಆದರೆ, ರೇವಣ್ಣ ಕುಟುಂಬ ಮಾತ್ರ ಆರೋಪಗಳಲ್ಲಿ ಹುರುಳಿಲ್ಲ ಎಂದು ತಿಳಿಸಿದೆ ಎಂದು ವಿದೇಶಿ ಮಾಧ್ಯಮದಲ್ಲಿ ಸುದ್ದಿ ಪ್ರಸಾರವಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

Hassan Pen Drive Case Prajwal seeks 7 days time to appear for questioning

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ (Karnataka politics) ಅತೀವ ಕೋಲಾಹಲ ಸೃಷ್ಟಿಸಿರುವ ಹಾಸನದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟೀಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಹೆಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟೀಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೊಟೀಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಹಾಗೂ ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತೀಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

Continue Reading

ರಾಜಕೀಯ

Prajwal Revanna Case: ಮಹಿಳೆಗೆ ಅನ್ಯಾಯ ಮಾಡಿದ್ರೆ ಅಂಥವರ ಜತೆ ಬಿಜೆಪಿ ಇರಲ್ಲ; ಪ್ರಜ್ವಲ್‌ನನ್ನು ಬಿಟ್ಟಿದ್ದು ಕಾಂಗ್ರೆಸ್‌ ತಪ್ಪು ಎಂದ ಶಾ

Prajwal Revanna Case: ಒಕ್ಕಲಿಗ ಬೆಲ್ಟ್‌ನಲ್ಲಿ ಚುನಾವಣೆ ಆಗುವವರೆಗೂ ಪ್ರಜ್ವಲ್‌ ರೇವಣ್ಣ ಅವರ ಮೇಲೆ ನೀವು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ವಿಷಯದಲ್ಲಿ ಭಾರಿ ರಾಜಕೀಯ ಮಾಡಿದ್ದೀರಿ. ಆರೋಪಿ ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದೀರಿ. ಧೈರ್ಯವಿದ್ದರೆ ಸತ್ಯವನ್ನು ಜನರ ಮುಂದೆ ಹೇಳಿ. ಇಂತಹ ಕೃತ್ಯ ಮಾಡುವವರಿಗೆ ಕಠೋರವಾದ ಶಿಕ್ಷೆ ಆಗಬೇಕು, ವಿಳಂಬವಾಗಬಾರದು ಅನ್ನೋದು ನಮ್ಮ ನಿಲುವು. ಇಂತಹ ಭಯಾನಕ ಅಪರಾಧದ ನಡುವೆಯೂ ಇವರು ರಾಜಕೀಯ ಮಾಡುತ್ತಿದ್ದಾರೆ ಎಂದು ಅಮಿತ್‌ ಶಾ ಗುಡುಗಿದ್ದಾರೆ.

VISTARANEWS.COM


on

Prajwal Revanna Case BJP will not be with those who do injustice to women says Amit Shah
Koo

ಹುಬ್ಬಳ್ಳಿ: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಯಾವುದೇ ಮಹಿಳೆಗೆ ಅನ್ಯಾಯ ಮಾಡಿದರೂ ಅಂಥವರ ಜತೆಗೆ ಬಿಜೆಪಿ ಇರಲ್ಲ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರೇ ಇಲ್ಲಿ ಸ್ವಲ್ಪ ಕೇಳಿಸಿಕೊಳ್ಳಿ. ಪ್ರಜ್ವಲ್‌ ಮೇಲೆ ಕ್ರಮವನ್ನು ನೀವು ತೆಗೆದುಕೊಳ್ಳಬೇಕಿತ್ತು, ನಾವಲ್ಲ ಎಂದು ಗುಡುಗಿದ್ದಾರೆ.

ಹುಬ್ಬಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಒಕ್ಕಲಿಗ ಬೆಲ್ಟ್‌ನಲ್ಲಿ ಚುನಾವಣೆ ಆಗುವವರೆಗೂ ಪ್ರಜ್ವಲ್‌ ರೇವಣ್ಣ ಅವರ ಮೇಲೆ ನೀವು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ವಿಷಯದಲ್ಲಿ ಭಾರಿ ರಾಜಕೀಯ ಮಾಡಿದ್ದೀರಿ. ಆರೋಪಿ ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದೀರಿ. ಧೈರ್ಯವಿದ್ದರೆ ಸತ್ಯವನ್ನು ಜನರ ಮುಂದೆ ಹೇಳಿ. ಇಂತಹ ಕೃತ್ಯ ಮಾಡುವವರಿಗೆ ಕಠೋರವಾದ ಶಿಕ್ಷೆ ಆಗಬೇಕು, ವಿಳಂಬವಾಗಬಾರದು ಅನ್ನೋದು ನಮ್ಮ ನಿಲುವು. ಇಂತಹ ಭಯಾನಕ ಅಪರಾಧದ ನಡುವೆಯೂ ಇವರು ರಾಜಕೀಯ ಮಾಡುತ್ತಿದ್ದಾರೆ ಎಂದು ಗುಡುಗಿದರು.

ನಿಮಗಾಗದಿದ್ದರೆ ಕರ್ನಾಟಕದ ಸುರಕ್ಷತೆಯನ್ನು ನಮಗೆ ಬಿಡಿ

ಏಪ್ರಿಲ್ 18ರಂದು ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆಯಾಯಿತು. ಇದು ವೈಯಕ್ತಿಕ ಕೇಸ್‌ ಎಂದು ಕಾಂಗ್ರೆಸ್ ನಾಯಕರು ಹೇಳಿದರು. ನಿಮಗೆ ಆಗದಿದ್ದರೆ ಬಿಡಿ, ನಾವು ಕರ್ನಾಟಕವನ್ನು ಸುರಕ್ಷಿತವನ್ನಾಗಿ ಮಾಡುತ್ತೇವೆ. ನಾವು ಕರ್ನಾಟಕದ ಹೆಣ್ಣು ಮಕ್ಕಳಿಗೆ ಸುರಕ್ಷತೆಯನ್ನು ಕೊಡುತ್ತೇವೆ ಎಂದು ಅಮಿತ್‌ ಶಾ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Prajwal Revanna Case BJP will not be with those who do injustice to women says Amit Shah

ಕಾಂಗ್ರೆಸ್‌ನಿಂದ ವೋಟ್‌ ಬ್ಯಾಂಕ್‌ ರಾಜಕಾರಣ

ಕಾಂಗ್ರೆಸ್‌ನವರು ವೋಟ್ ಬ್ಯಾಂಕ್‌ಗಾಗಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡಿದ್ದಾರೆ. ಬಾಂಬ್ ಬ್ಲಾಸ್ಟ್‌ ಆದರೆ ಇವರಿಗೆ ಯಾವುದೇ ಲೆಕ್ಕವಿಲ್ಲ. ನೀವು ಪ್ರಲ್ಹಾದ್ ಜೋಶಿಯವರಿಗೆ ಹಾಕುವ ಒಂದೊಂದು ಮತವೂ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುತ್ತದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾದರೆ ಭಯೋತ್ಪಾದನೆಯು ಸಂಪೂರ್ಣ ನಿರ್ಮೂಲನೆಯಾಗುತ್ತದೆ. ಕಾಂಗ್ರೆಸ್‌ನವರು ವೋಟ್ ಬ್ಯಾಂಕ್ ಕಾರಣಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಆಯೋಜನೆ ಮಾಡಿದ್ದ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಬರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯವನ್ನು ಕಿತ್ತುಹಾಕಿದ್ದಾರೆ ಎಂದು ಅಮಿತ್‌ ಶಾ ಹೇಳಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಕಾಂಗ್ರೆಸ್‌ನವರು ಸುಳ್ಳು ಹೇಳುತ್ತಾರೆ

ಪ್ರಲ್ಹಾದ್ ಜೋಶಿಯವರನ್ನು ದೆಹಲಿಗೆ ನೀವು ಕಳುಹಿಸಿ, ಅವರನ್ನು ದೊಡ್ಡವರನ್ನಾಗಿ ನಾವು ಮಾಡುತ್ತೇವೆ. ಜೋಶಿ ನೋಡಲು ಸೀದಾ ಸಾದಾ ಕಾಣುತ್ತಾರೆ. ಹುಬ್ಬಳ್ಳಿ- ಧಾರವಾಡದ ಅಭಿವೃದ್ಧಿ ವಿಷಯ ಬಂದಾಗ ನನ್ನ ಜತೆಗೂ ಜಗಳ ಮಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರದ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಪರಸ್ಪರ ಜಗಳದಲ್ಲಿ ತೊಡಗಿದ್ದಾರೆ. ನೀತಿ ಸಂಹಿತೆ ಜಾರಿಯಾಗಿದ್ದಕ್ಕೆ ಬರ ಪರಿಹಾರ ವಿಳಂಬವಾಗಿದೆ. ಕಾಂಗ್ರೆಸ್‌ನವರು ಸುಳ್ಳು ಹೇಳಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಈಗ ಹಣ ಬಿಡುಗಡೆಯಾಗಿದೆ ಎಂದು ಹೇಳಿದರು.

ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ಅಶೋಕ್

ಬೆಂಗಳೂರು: ಲೈಂಗಿಕ ಹಗರಣ ಕೇಸ್‌ನಲ್ಲಿ ಸಿಲುಕಿರುವ ಪ್ರಜ್ವಲ್‌ ರೇವಣ್ಣ (‌Prajwal Revanna Case) ಅವರು ಕಾಂಗ್ರೆಸ್‌ ಬೆಂಬಲಿತ ಸಂಸದ. ಈಗ ಅವರು ನಮ್ಮ ಎನ್‌ಡಿಎ ಅಭ್ಯರ್ಥಿ ಆಗಿರಬಹುದು. ಆದರೆ, ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಮಾಡಿಕೊಂಡಿತ್ತು. ಆ ವೇಳೆ ಪ್ರಜ್ವಲ್‌ ಗೆಲುವು ಸಾಧಿಸಿದ್ದು ಕಾಂಗ್ರೆಸ್‌ ಬೆಂಬಲದಿಂದ ಎಂಬುದನ್ನು ಮರೆಯಬೇಡಿ. ಅವರ ಕೇಸ್‌ ಬಗ್ಗೆ ಗೊತ್ತಿದ್ದೂ ವಿದೇಶಕ್ಕೆ ಹಾರಲು ಹೇಗೆ ಬಿಟ್ಟಿರಿ? ನಿಮಗೆ ಅವರನ್ನು ಅರೆಸ್ಟ್‌ ಮಾಡಲು ಆಗದಿದ್ದರೆ ನಮಗೆ ಅಧಿಕಾರವನ್ನು ಕೊಡಿ. ನಾವು 24 ಗಂಟೆಯೊಳಗೆ ಹಿಡಿದುಹಾಕುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಅವರು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಆರ್.‌ ಅಶೋಕ್‌, ಈ ಹಿಂದೆ ನೀವು ಮೈತ್ರಿ ಮಾಡಿಕೊಂಡು ಗೆಲ್ಲಿಸಿ ಆರಿಸಿ ಕಳಿಸಿದ್ದೀರಿ. ಜೋಡೆತ್ತು ಅಂತ ಹೇಳಿಕೊಂಡು ಓಡಾಡಿದ್ದು ಮರೆತುಹೋಯಿತಾ? ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕೈ ಇಳಿಸೋಕೆ, ಡಿ.ಕೆ. ಶಿವಕುಮಾರ್‌ ಅವರು ಕೈ ಎತ್ತೋಕೆ! ಅವರು ಇನ್ನೂ ನಮ್ಮ‌ ಅಭ್ಯರ್ಥಿ. ನಮ್ಮ ಬೆಂಬಲಿತ ಸಂಸದ ಆಗೋಕೆ ಒಂದು ತಿಂಗಳು, 13 ದಿನ ಬೇಕು. ಆಮೇಲೆ ನಾವು ಏನು ಮಾಡುತ್ತೇವೆ ಎಂಬುದನ್ನು ನೀವು ಕೇಳಿ ಎಂದು ಹೇಳಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಭಯೋತ್ಪಾದನಾ ಚಟುವಟಿಕೆಗೆ ಅವರು ಹೇಳಿದ ಮಾತೆಲ್ಲ ಸುಳ್ಳಾಯಿತು. ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ಹೇಳಿದ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. 28 ಸ್ಥಾನದಲ್ಲಿ ಕೆಲವು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟಿದ್ದು, ಅಲ್ಲಿ ಯಾರು ಸ್ಪರ್ಧಿಸಬೇಕೆಂದು ಜೆಡಿಎಸ್‌ ತೀರ್ಮಾನಿಸುತ್ತದೆ. ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಅವರ ಜತೆಗೆ ಇದ್ದು ಮೊದಲಿಗೆ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್‌ ಉತ್ತರ ನೀಡಬೇಕು. ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್‌ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ ಎಂದು ಒಪ್ಪಿಕೊಳ್ಳಲಿ ಎಂದು ಆರ್.‌ ಅಶೋಕ್‌ ಸವಾಲು ಹಾಕಿದರು.

ಈ ದೇಶದ ಕಾನೂನಿಗೆ, ಸಂವಿಧಾನಕ್ಕೆ ಬಿಜೆಪಿ ಗೌರವ ನೀಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಘಟನೆಗೆ ಪಕ್ಷ ಬೆಂಬಲ ನೀಡುವುದಿಲ್ಲ. ಬಿಜೆಪಿಯಿಂದ ಕಠಿಣ ಕ್ರಮ ವಹಿಸಲಾಗುತ್ತದೆ. ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಇಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅಥವಾ ಪೊಲೀಸ್‌ ಇಲಾಖೆಯ ಮೇಲೆ ಹಿಡಿತ ಇಲ್ಲ ಎಂದು ಕಾಂಗ್ರೆಸ್‌ ಸರ್ಕಾರ ಒಪ್ಪಿಕೊಳ್ಳಲಿ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಏಕೆ ಪ್ರಶ್ನೆ ಮಾಡಬೇಕು, ರಾಜ್ಯದ ಕಾನೂನು ಪಾಲನೆ ಕೇಂದ್ರ ಸರ್ಕಾರ ಮಾಡಬೇಕೆ ಎಂದು ಪ್ರಶ್ನಿಸಿದರು.

Continue Reading

ಕ್ರೈಂ

‌Prajwal Revanna Case: ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ಅಶೋಕ್ ಉಲ್ಟಾ ಹೊಡೆದಿದ್ದೇಕೆ?

‌Prajwal Revanna Case: ಈ ಹಿಂದೆ ನೀವು ಮೈತ್ರಿ ಮಾಡಿಕೊಂಡು ಪ್ರಜ್ವಲ್‌ ರೇವಣ್ಣ ಅವರನ್ನು ಗೆಲ್ಲಿಸಿ ಆರಿಸಿ ಕಳಿಸಿದ್ದೀರಿ. ಜೋಡೆತ್ತು ಅಂತ ಹೇಳಿಕೊಂಡು ಓಡಾಡಿದ್ದು ಮರೆತುಹೋಯಿತಾ? ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕೈ ಇಳಿಸೋಕೆ, ಡಿ.ಕೆ. ಶಿವಕುಮಾರ್‌ ಅವರು ಕೈ ಎತ್ತೋಕೆ! ಅವರು ಇನ್ನೂ ನಮ್ಮ‌ ಅಭ್ಯರ್ಥಿ. ನಮ್ಮ ಬೆಂಬಲಿತ ಸಂಸದ ಆಗೋಕೆ ಒಂದು ತಿಂಗಳು, 13 ದಿನ ಬೇಕು. ಆಮೇಲೆ ನಾವು ಏನು ಮಾಡುತ್ತೇವೆ ಎಂಬುದನ್ನು ನೀವು ಕೇಳಿ ಎಂದು ಆರ್.‌ ಅಶೋಕ್‌ ಹೇಳಿದರು.

VISTARANEWS.COM


on

Prajwal Revanna Case Prajwal Congress supported MP Says Ashok
Koo

ಬೆಂಗಳೂರು: ಲೈಂಗಿಕ ಹಗರಣ ಕೇಸ್‌ನಲ್ಲಿ ಸಿಲುಕಿರುವ ಪ್ರಜ್ವಲ್‌ ರೇವಣ್ಣ (‌Prajwal Revanna Case) ಅವರು ಕಾಂಗ್ರೆಸ್‌ ಬೆಂಬಲಿತ ಸಂಸದ. ಈಗ ಅವರು ನಮ್ಮ ಎನ್‌ಡಿಎ ಅಭ್ಯರ್ಥಿ ಆಗಿರಬಹುದು. ಆದರೆ, ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಮಾಡಿಕೊಂಡಿತ್ತು. ಆ ವೇಳೆ ಪ್ರಜ್ವಲ್‌ ಗೆಲುವು ಸಾಧಿಸಿದ್ದು ಕಾಂಗ್ರೆಸ್‌ ಬೆಂಬಲದಿಂದ ಎಂಬುದನ್ನು ಮರೆಯಬೇಡಿ. ಅವರ ಕೇಸ್‌ ಬಗ್ಗೆ ಗೊತ್ತಿದ್ದೂ ವಿದೇಶಕ್ಕೆ ಹಾರಲು ಹೇಗೆ ಬಿಟ್ಟಿರಿ? ನಿಮಗೆ ಅವರನ್ನು ಅರೆಸ್ಟ್‌ ಮಾಡಲು ಆಗದಿದ್ದರೆ ನಮಗೆ ಅಧಿಕಾರವನ್ನು ಕೊಡಿ. ನಾವು 24 ಗಂಟೆಯೊಳಗೆ ಹಿಡಿದುಹಾಕುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಅವರು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಆರ್.‌ ಅಶೋಕ್‌, ಈ ಹಿಂದೆ ನೀವು ಮೈತ್ರಿ ಮಾಡಿಕೊಂಡು ಗೆಲ್ಲಿಸಿ ಆರಿಸಿ ಕಳಿಸಿದ್ದೀರಿ. ಜೋಡೆತ್ತು ಅಂತ ಹೇಳಿಕೊಂಡು ಓಡಾಡಿದ್ದು ಮರೆತುಹೋಯಿತಾ? ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕೈ ಇಳಿಸೋಕೆ, ಡಿ.ಕೆ. ಶಿವಕುಮಾರ್‌ ಅವರು ಕೈ ಎತ್ತೋಕೆ! ಅವರು ಇನ್ನೂ ನಮ್ಮ‌ ಅಭ್ಯರ್ಥಿ. ನಮ್ಮ ಬೆಂಬಲಿತ ಸಂಸದ ಆಗೋಕೆ ಒಂದು ತಿಂಗಳು, 13 ದಿನ ಬೇಕು. ಆಮೇಲೆ ನಾವು ಏನು ಮಾಡುತ್ತೇವೆ ಎಂಬುದನ್ನು ನೀವು ಕೇಳಿ ಎಂದು ಹೇಳಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಭಯೋತ್ಪಾದನಾ ಚಟುವಟಿಕೆಗೆ ಅವರು ಹೇಳಿದ ಮಾತೆಲ್ಲ ಸುಳ್ಳಾಯಿತು. ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ಹೇಳಿದ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. 28 ಸ್ಥಾನದಲ್ಲಿ ಕೆಲವು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟಿದ್ದು, ಅಲ್ಲಿ ಯಾರು ಸ್ಪರ್ಧಿಸಬೇಕೆಂದು ಜೆಡಿಎಸ್‌ ತೀರ್ಮಾನಿಸುತ್ತದೆ. ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಅವರ ಜತೆಗೆ ಇದ್ದು ಮೊದಲಿಗೆ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್‌ ಉತ್ತರ ನೀಡಬೇಕು. ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್‌ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ ಎಂದು ಒಪ್ಪಿಕೊಳ್ಳಲಿ ಎಂದು ಆರ್.‌ ಅಶೋಕ್‌ ಸವಾಲು ಹಾಕಿದರು.

ಈ ದೇಶದ ಕಾನೂನಿಗೆ, ಸಂವಿಧಾನಕ್ಕೆ ಬಿಜೆಪಿ ಗೌರವ ನೀಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಘಟನೆಗೆ ಪಕ್ಷ ಬೆಂಬಲ ನೀಡುವುದಿಲ್ಲ. ಬಿಜೆಪಿಯಿಂದ ಕಠಿಣ ಕ್ರಮ ವಹಿಸಲಾಗುತ್ತದೆ. ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಇಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅಥವಾ ಪೊಲೀಸ್‌ ಇಲಾಖೆಯ ಮೇಲೆ ಹಿಡಿತ ಇಲ್ಲ ಎಂದು ಕಾಂಗ್ರೆಸ್‌ ಸರ್ಕಾರ ಒಪ್ಪಿಕೊಳ್ಳಲಿ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಏಕೆ ಪ್ರಶ್ನೆ ಮಾಡಬೇಕು, ರಾಜ್ಯದ ಕಾನೂನು ಪಾಲನೆ ಕೇಂದ್ರ ಸರ್ಕಾರ ಮಾಡಬೇಕೆ ಎಂದು ಪ್ರಶ್ನಿಸಿದರು.

ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ

ಕಳೆದ ಎಂಟು ತಿಂಗಳಿಂದ ರೈತರಿಗೆ ಸರ್ಕಾರ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಎಂಟು ತಿಂಗಳಿಂದ ಹಾಲಿನ 5 ರೂ. ಪ್ರೋತ್ಸಾಹಧನ ನೀಡಿಲ್ಲ. ಸುಮಾರು 700 ಕೋಟಿ ರೂಪಾಯಿಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಜನರಿಗೆ ತೆರಿಗೆ ಹಾಕಿ ಅವರಿಂದ ವಸೂಲಿ ಮಾಡಿ ನಂತರ ಮಹಿಳೆಯರಿಗೆ ಹಣ ನೀಡುತ್ತೇವೆ ಎಂದು ನಾಟಕವಾಡಿದ್ದಾರೆ. ಉಚಿತ ಕೊಡುವ ಬದಲು ವಿದ್ಯಾರ್ಥಿಗಳಿಗೆ ಉಚಿತ ಪಾಸ್‌, ಶಾಲೆ, ಆಸ್ಪತ್ರೆ ನಿರ್ಮಾಣ ಮೊದಲಾದ ಯೋಜನೆಗಳನ್ನು ನೀಡಬೇಕಿತ್ತು. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಡ ಎಂದು ಆರ್.‌ ಅಶೋಕ್‌ ಗುಡುಗಿದರು.

ಇದನ್ನೂ ಓದಿ: Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

ಖಜಾನೆ ಖಾಲಿ ಮಾಡಿಕೊಂಡ ಬಳಿಕ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಕಳೆದ 50 ವರ್ಷದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ತಿಳಿಸಲು ಸವಾಲು ಹಾಕುತ್ತೇನೆ. ಕಾಂಗ್ರೆಸ್‌ನ ಯೋಗ್ಯತೆಗೆ ಕರ್ನಾಟಕಕ್ಕೆ ಒಂದು ಕೋಟಿ ರೂ. ಕೂಡ ಬರ ಪರಿಹಾರ ನೀಡಿಲ್ಲ ಎಂದು ಆರ್.‌ ಅಶೋಕ್‌ ದೂರಿದರು.

ಚೊಂಬು ಬಳಸದಂತೆ ಮಾಡಿದ್ದು ಮೋದಿ

ರಾಹುಲ್‌ ಗಾಂಧಿ ಎಲ್ಲೇ ಹೋದರೂ ಪಂಗನಾಮ ಸಿಗುತ್ತಿದೆ. ಅವರ ನಾಯಕತ್ವದ ಮೇಲೆ ವಿಶ್ವಾಸ ಇಲ್ಲವೆಂದೇ ಸಿಎಂ ಸಿದ್ದರಾಮಯ್ಯ ಕೇವಲ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದಾರೆ. ಇವರಿಗೆ ನೈತಿಕತೆ ಇದ್ದರೆ ಹಿಂದಿನ ಯುಪಿಎ ಸರ್ಕಾರ ಏನು ಮಾಡಿದೆ ಎಂದು ಜಾಹೀರಾತು ನೀಡಬೇಕಿತ್ತು. ಇದೇ ಕಾಂಗ್ರೆಸ್‌ ದೇಶಕ್ಕೆ ಚೊಂಬು ನೀಡಿತ್ತು. ನಂತರ ಬಂದ ಪ್ರಧಾನಿ ನರೇಂದ್ರ ಮೋದಿ ಶೌಚಾಲಯಗಳನ್ನು ಕಟ್ಟಿಸಿ ಚೊಂಬು ಬಳಸದಂತೆ ಮಾಡಿದರು ಎಂದು ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದರು.

ಎಚ್‌ಎಎಲ್‌ ಮುಚ್ಚುತ್ತಾರೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು. ಅದೇ ಎಚ್‌ಎಎಲ್‌ ಈಗ 84 ಸಾವಿರ ಕೋಟಿ ರೂ. ವಹಿವಾಟು ನಡೆಸುತ್ತಿದೆ. ಇಂದು ಎಲ್ಲ ಸಾರ್ವಜನಿಕ ಉದ್ದಿಮೆಗಳು ಲಾಭ ಮಾಡುತ್ತಿವೆ. 2022 ರ ವೇಳೆಗೆ 6 ಕೋಟಿ ಹೊಸ ಎಂಎಸ್‌ಎಂಇ ಉದ್ಯಮಗಳು ಸೃಷ್ಟಿಯಾಗಿವೆ. ರೋಜ್‌ಗಾರ್‌ ಯೋಜನೆಯಡಿ 7.5 ಲಕ್ಷ ಜನರಿಗೆ ಉದ್ಯೋಗ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಎಷ್ಟು ಉದ್ಯೋಗ ಸೃಷ್ಟಿಸಿದ್ದಾರೆ ಎಂದು ಹೇಳಲಿ ಎಂದು ಆರ್.‌ ಅಶೋಕ್‌ ಸವಾಲೆಸೆದರು.

ಇದನ್ನೂ ಓದಿ: Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

ಡಾ.ಬಿ.ಆರ್‌.ಅಂಬೇಡ್ಕರ್‌ ರಚಿತ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲು ಇಲ್ಲ. ಕಾಂಗ್ರೆಸ್‌ಗೆ ಮೊದಲೇ ಅಂಬೇಡ್ಕರ್‌ ಬಗ್ಗೆ ಗೌರವವಿಲ್ಲ. ಆದ್ದರಿಂದ ಸಂವಿಧಾನವನ್ನೇ ತಿರುಚಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ. ಪಿತೃಗಳಿಗೆ ತಿಥಿಯಲ್ಲಿ ವಡೆ ಇಡುತ್ತಾರೆ. ಅಂತಹ ಹೆಸರಿನ ಸ್ಯಾಮ್‌ ಪಿತ್ರೋಡಾ ಅವರು, ಜನರ ಪಿತ್ರಾರ್ಜಿತ ಆಸ್ತಿಗಳಿಗೆ ತರ್ಪಣ ಬಿಡಲು ಸಲಹೆ ನೀಡಿದ್ದಾರೆ. ಈ ಹೇಳಿಕೆಯನ್ನು ಕಾಂಗ್ರೆಸ್‌ ನಮ್ಮದಲ್ಲ ಎಂದಿದೆ, ಆದರೆ ಹೇಳಿಕೆ ಬದಲಿಸಲು ಕಾಂಗ್ರೆಸ್‌ ಹಿರಿಯರೇ ಸೂಚನೆ ನೀಡಿದ್ದಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ಟಾಸ್ಕ್‌ ಫೋರ್ಸ್‌ ರಚಿಸಿ

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಕೂಡಲೇ ಟಾಸ್ಕ್‌ ಫೋರ್ಸ್‌ ರಚಿಸಿ ಪ್ರತಿ ತಾಲೂಕಿಗೆ 5 ಕೋಟಿ ರೂ. ಮೀಸಲಿಡಬೇಕು ಎಂದು ಆರ್‌.ಅಶೋಕ ಆಗ್ರಹಿಸಿದರು.

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ಗಂಡಾಂತರ; ಜ್ಯೋತಿಷಿ ಮೊರೆ ಹೋದ ದೇವೇಗೌಡ, ರೇವಣ್ಣ!

Prajwal Revanna Case: ಬೆಂಗಳೂರಿನ ನಿವಾಸಕ್ಕೆ ಬುಧವಾರ ಜ್ಯೋತಿಷಿಯನ್ನು ಕರೆಸಿಕೊಂಡಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ರೇವಣ್ಣ ಅವರು, ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿರುವುದರಿಂದ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ (Prajwal Revanna Case) ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈಗಾಗಲೇ ವಿಚಾರಣೆಗೆ ಹಾಜರಾಗಲು ಎಸ್‌ಐಟಿಯಿಂದ ನೋಟಿಸ್‌ ಕೂಡ ನೀಡಲಾಗಿದೆ. ಹೀಗಾಗಿ ಕುಟುಂಬದಲ್ಲಿನ ಸಮಸ್ಯೆ ಪರಿಹಾರಕ್ಕಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಇದೀಗ ಜ್ಯೋತಿಷ್ಯದ ಮೊರೆ ಹೋಗಿದ್ದು, ಇದಕ್ಕಾಗಿ ಜ್ಯೋತಿಷಿ ಜತೆ ಚರ್ಚೆ ನಡೆಸಿದ್ದಾರೆ.

ಪದ್ಮನಾಭನಗರದ ನಿವಾಸಕ್ಕೆ ಬುಧವಾರ ಜ್ಯೋತಿಷಿಯನ್ನು ಕರೆಸಿಕೊಂಡಿರುವ ದೇವೇಗೌಡರು ಹಾಗೂ ರೇವಣ್ಣ ಅವರು, ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಕುಟುಂಬದಲ್ಲಿ ಏನಾದರೂ ಸಮಸ್ಯೆಗಳು ಬಂದಾಗ ದೇವೇಗೌಡರ ಕುಟುಂಬಸ್ಥರು ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ಹೋಮ-ಹವನ, ವಿಶೇಷ ಪೂಜೆ ಮಾಡುತ್ತಾರೆ. ಹೀಗಾಗಿ ಸದ್ಯ ಜ್ಯೋತಿಷಿಗಳ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

Hassan Pen Drive Case Prajwal seeks 7 days time to appear for questioning

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರು ತಮ್ಮ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಇದೇ ಮೊದಲ ಬಾರಿಗೆ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ತಾವು ಬೆಂಗಳೂರಿನಲ್ಲಿ ಇಲ್ಲದ ಕಾರಣ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡಬೇಕು ಎಂದು ಸಿಐಡಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಂಸದ ಪ್ರಜ್ವಲ್‌ ರೇವಣ್ಣ, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” (As I am not in Bangalore to attend the enquiry, I have communicated to C.I.D Bangalore through my Advocate. Truth will prevail soon) ಎಂದು ಬರೆದುಕೊಂಡಿದ್ದಾರೆ.

ಪ್ರಜ್ವಲ್‌ ಪರವಾಗಿ ವಕೀಲರಿಂದ ಪತ್ರ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿಚಾರವಾಗಿ ವಿಚಾರಣೆಗೆ ಹಾಜರಾಗಲು ಗಡುವು ವಿಸ್ತರಣೆ ಮಾಡುವಂತೆ ಪ್ರಜ್ವಲ್‌ ಪರ ವಕೀಲರಾದ ಅರುಣ್‌ ಜಿ. ಅವರು ಸಿಐಡಿಗೆ ಪತ್ರ ಬರೆದು ಕೋರಿದ್ದಾರೆ.

ಇದನ್ನೂ ಓದಿ | Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

ಪತ್ರದಲ್ಲೇನಿದೆ?

ಪ್ರಜ್ವಲ್‌ ರೇವಣ್ಣ ಅವರು ಖುದ್ದಾಗಿ ಎಸ್‌ಐಟಿ ಮುಂದೆ ಹಾಜರಾಗಲು ನೀಡಿರುವ ನೋಟಿಸ್‌ಗೆ ಸಂಬಂಧಿಸಿದಂತೆ, ನನ್ನ ಕಕ್ಷಿದಾರರಾದ ಪ್ರಜ್ವಲ್ ಅವರ ಮನೆಯ ಮೇಲೆ ತಮ್ಮ ಕಚೇರಿಯಿಂದ ಕಳುಹಿಸಿರುವ ನೋಟಿಸ್‌ ಅಂಟಿಸಲಾಗಿದೆ. ಇದರ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಪ್ರಜ್ವಲ್ ಅವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲಂ 41 (ಎ) ಸಿ.ಆ‌ರ್.ಪಿ.ಸಿ. ದಿನಾಂಕ:30-04-2024ರ ತಮ್ಮ ನೋಟಿಸ್‌ನಲ್ಲಿ ತಾವು ದಿನಾಂಕ: 01-05-2024ರಂದು ತಮ್ಮ ಮುಂದೆ ಹಾಜರಾಗಲು ತಿಳಿಸಿರುತ್ತೀರಿ. ಆದರೆ, ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು, ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಲಾಗಿದೆ. ನನ್ನ ಕಕ್ಷಿದಾರರು ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ನನ್ನ ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರುತ್ತೇನೆ ಎಂದು ವಕೀಲ ಅರುಣ್‌ ಅವರು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Continue Reading
Advertisement
Prajwal Revanna Case
ಕರ್ನಾಟಕ6 mins ago

Prajwal Revanna Case: ಸಿಂಗಾಪುರ ಮಾಧ್ಯಮಗಳಲ್ಲೂ ಪ್ರಜ್ವಲ್‌ ರೇವಣ್ಣ ಕೇಸ್‌ ಸದ್ದು!

Prajwal Revanna Case BJP will not be with those who do injustice to women says Amit Shah
ರಾಜಕೀಯ13 mins ago

Prajwal Revanna Case: ಮಹಿಳೆಗೆ ಅನ್ಯಾಯ ಮಾಡಿದ್ರೆ ಅಂಥವರ ಜತೆ ಬಿಜೆಪಿ ಇರಲ್ಲ; ಪ್ರಜ್ವಲ್‌ನನ್ನು ಬಿಟ್ಟಿದ್ದು ಕಾಂಗ್ರೆಸ್‌ ತಪ್ಪು ಎಂದ ಶಾ

Adhir Ranjan
ದೇಶ19 mins ago

Adhir Ranjan: ಟಿಎಂಸಿ ಬದಲು ಬಿಜೆಪಿಗೆ ಮತ ಹಾಕೋದೇ ಬೆಸ್ಟ್‌ ಎಂದ ಕಾಂಗ್ರೆಸ್‌ ನಾಯಕ!

Viral Video
ಕ್ರಿಕೆಟ್21 mins ago

Viral Video: ಕಾಲಿನ ಗಾಯವನ್ನು ಲೆಕ್ಕಿಸದೆ ರೋಲರ್ ಓಡಿಸಿ ಪಿಚ್​ ಸಿದ್ಧಪಡಿಸಿದ ಮೊಹಮ್ಮದ್​ ಶಮಿ

Prajwal Revanna Case Prajwal Congress supported MP Says Ashok
ಕ್ರೈಂ49 mins ago

‌Prajwal Revanna Case: ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ಅಶೋಕ್ ಉಲ್ಟಾ ಹೊಡೆದಿದ್ದೇಕೆ?

shyam rangeela
ದೇಶ51 mins ago

Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Prajwal Revanna Case
ಪ್ರಮುಖ ಸುದ್ದಿ52 mins ago

Prajwal Revanna Case: ಪ್ರಜ್ವಲ್ ಗಂಡಾಂತರ; ಜ್ಯೋತಿಷಿ ಮೊರೆ ಹೋದ ದೇವೇಗೌಡ, ರೇವಣ್ಣ!

Chaitra Achar
ಫ್ಯಾಷನ್1 hour ago

Chaitra Achar: ನೋಡುಗರ ಹುಬ್ಬೇರಿಸಿದ ನಟಿ ಚೈತ್ರಾ ಆಚಾರ್‌ ಪಾರದರ್ಶಕ ನಿಟ್‌ವೇರ್

Veena kashappanavar
ಕರ್ನಾಟಕ2 hours ago

Veena Kashappanavar: ರಾಜಕೀಯದಿಂದ ದೂರ ಸರಿದ್ರಾ ವೀಣಾ ಕಾಶಪ್ಪನವರ್‌? ಭಾವನಾತ್ಮಕ ಪೋಸ್ಟ್‌ ಹಾಕಿದ ಕೈ ನಾಯಕಿ!

Mayank Yadav
ಕ್ರೀಡೆ2 hours ago

Mayank Yadav: ಗಾಯಾಳು ಮಾಯಾಂಕ್‌ ಯಾದವ್‌ ಐಪಿಎಲ್​ನಿಂದ ಔಟ್​?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌