ರಾಕೆಟ್‌ ಉಡಾಯಿಸುವಷ್ಟು ಶಕ್ತಿಶಾಲಿ ಜೈವಿಕ ಇಂಧನ ಬ್ಯಾಕ್ಟೀರಿಯಾದಿಂದ ಸೃಷ್ಟಿ - Vistara News

ತಂತ್ರಜ್ಞಾನ

ರಾಕೆಟ್‌ ಉಡಾಯಿಸುವಷ್ಟು ಶಕ್ತಿಶಾಲಿ ಜೈವಿಕ ಇಂಧನ ಬ್ಯಾಕ್ಟೀರಿಯಾದಿಂದ ಸೃಷ್ಟಿ

ಬ್ಯಾಕ್ಟೀರಿಯಾದಿಂದ ಸಿದ್ಧಪಡಿಸಲಾದ ಅಣುವಿನಿಂದ ಜೈವಿಕ ಇಂಧನ ತಯಾರಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ರಾಕೆಟ್‌ ಉಡಾವಣೆಗೂ ಇದನ್ನು ಬಳಸಬಹುದಂತೆ.

VISTARANEWS.COM


on

bio fuel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬ್ಯಾಕ್ಟೀರಿಯಾ ನಿರ್ಮಿತ ಅಣುವೊಂದರಿಂದ ಪ್ರಬಲವಾದ ಜೈವಿಕ ಇಂಧನವನ್ನು ತಯಾರಿಸುವುದರಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ರಾಕೆಟ್‌ಗಳನ್ನೂ ಉಡಾಯಿಸುವಷ್ಟು ಕಾರ್ಯಕ್ಷಮತೆ ಈ ಜೈವಿಕ ಇಂಧನಕ್ಕಿದೆ ಎಂದು ಹೇಳಲಾಗಿದೆ. ಅಮೆರಿಕದ ಲಾರೆನ್ಸ್‌ ಬರ್ಕಲಿ ರಾಷ್ಟ್ರೀಯ ಪ್ರಯೋಗಾಲಯದ ನೇತೃತ್ವದಲ್ಲಿ ಜೈವಿಕ ಇಂಧನ ತಜ್ಞರ ತಂಡವೊಂದು ಈ ನಿಟ್ಟಿನಲ್ಲಿ ಪ್ರಯೋಗಶೀಲವಾಗಿದ್ದು, ಸ್ಟ್ರೆಪ್ಟೋಮೈಸಸ್‌ ಬ್ಯಾಕ್ಟೀರಿಯಾದಿಂದ ನಿರ್ಮಿತವಾದ ಶಿಲೀಂಧ್ರರೋಧಕ ಅಣುವೊಂದರಿಂದ ಈ ಇಂಧನವನ್ನು ತಯಾರಿಸಲಾಗಿದೆ. ಇಂದಿನ ದಿನಗಳಲ್ಲಿ ಉಪಯೋಗಿಸುತ್ತಿರುವ ಯಾವ ಪ್ರಬಲ ಇಂಧನಗಳಿಗೂ, ಉಪಗ್ರಹ ಇಂಧನಗಳಿಗೂ ಸೇರಿದಂತೆ, ಕಡಿಮೆ ಇಲ್ಲದಷ್ಟು ಶಕ್ತಿ ಸಾಂದ್ರತೆ ಈ ಜೈವಿಕ ಇಂಧನದಲ್ಲಿರುವುದನ್ನು ಗುರುತಿಸಲಾಗಿದೆ.

ʻಈ ಜೈವಿಕ ಸಂಶ್ಲೇಷಣೆಯ ಮಾರ್ಗ ಅತ್ಯಂತ ಸ್ವಚ್ಛ ಮತ್ತು ಪರಿಸರ ಸ್ನೇಹಿ. ಇದಕ್ಕಿಂತ ಮೊದಲು, ಇಷ್ಟೊಂದು ಕಾರ್ಯಕ್ಷಮತೆಯ ಇಂಧನವನ್ನು ಸಂಶ್ಲೇಷಿಸುವುದಕ್ಕೆ ಪೆಟ್ರೋಲಿಯಂ ಬಳಸಿ, ಕಲುಷಿತ ಮಾರ್ಗಗಳಿಂದ ಮಾತ್ರವೇ ಸಾಧ್ಯವಿತ್ತುʼ ಎಂದು ಈ ಯೋಜನೆಯ ಮುಖ್ಯಸ್ಥರಾಗಿರುವ ಜೇಯ್‌ ಕೀಸ್ಲಿಂಗ್‌ ತಿಳಿಸಿದ್ದಾರೆ. ʻಈ ಇಂಧನವನ್ನು ತಯಾರಿಸುವುದಕ್ಕೆ ಅಗತ್ಯವಾದ ಬ್ಯಾಕ್ಟೀರಿಯಾಗಳು ಸಸ್ಯಾಹಾರಿಗಳು. ಇಂಥ ಇಂಧನವನ್ನು ಸುಡುವುದರಿಂದ ಯಾವ ಪೆಟ್ರೋಲಿಯಂ ಉತ್ಪನ್ನಗಳನ್ನು ಉರಿಸುವುದಕ್ಕಿಂತಲೂ ಅತಿ ಕಡಿಮೆ ಪ್ರಮಾಣದ ಹಸಿರುಮನೆ ಅನಿಲಗಳು ವಾತಾವರಣಕ್ಕೆ ಸೇರುತ್ತವೆʼ ಎಂಬುದು ಅವರ ಅಭಿಪ್ರಾಯ.

ಈ ಬಗೆಗಿನ ತಾಂತ್ರಿಕ ಪರಿಕರಗಳನ್ನು ವಿವರಿಸಿದ ಅವರು, ಉಪಗ್ರಹ ಇಂಧನವಾಗಿ ಬಳಸಲು ಇದು ಅನುಕೂಲಕರವಾಗಿದೆ. ಈ ಇಂಧನಕ್ಕೆ ಅಗತ್ಯವಾಗಿ ಬೇಕಾದ್ದು ಪಾಲಿಸೈಕ್ಲೋಪ್ರೊಪನೇಟೆಡ್‌ ಫ್ಯಾಟಿಆಸಿಡ್‌ ಮಿಥೈಲ್‌ ಎಸ್ಟರ್ಸ್‌ (ಪಿಒಪಿ-ಎಫ್‌ಎಎಂಇ) ಅಣುಗಳು. ಇದಕ್ಕಾಗಿ ಸ್ಟ್ರೆಪ್ಟೋಮೈಸಸ್‌ ಕುಟುಂಬದ ಬ್ಯಾಕ್ಟೀರಿಯಾಗಳ ಮೇಲೆ ಅಧ್ಯಯನ ನಡೆಸಿದಾಗ, ಎಸ್‌. ಆಲ್ಬಿರೆಟಿಕ್ಯುಲಿ ಸ್ಟ್ರೇನ್‌ನಲ್ಲಿ ಪಿಒಪಿ-ಎಫ್‌ಎಎಂಇ ಅಣುಗಳು ಪತ್ತೆಯಾದವು. ಆದರೆ ಅಗತ್ಯವಾದ ಪ್ರಮಾಣದಲ್ಲಿ ಪಿಒಪಿ-ಎಫ್‌ಎಎಂಇ ತಯಾರಿಸಲು ಈ ಬ್ಯಾಕ್ಟೀರಿಯಾಗಳಿಗೆ ಸಾಧ್ಯವಾಗದಿದ್ದಾಗ, ಅದಕ್ಕಾಗಿ ವಂಶವಾಹಿಗಳನ್ನು ಸೂಕ್ತ ಸ್ವರೂಪಕ್ಕೆ ಮಾರ್ಪಾಡುಗೊಳಿಸಲಾಯಿತು ಎಂದರು.

ಈ ಪ್ರಯೋಗದ ಮುಂದಿನ ಹಂತವಾಗಿ, ಅಗತ್ಯ ಪ್ರಮಾಣದ ಅಣುಗಳ ಉತ್ಪಾದನೆ ಮಾಡಬೇಕಾಗಿದೆ. ಇದರಿಂದ ಮಾತ್ರವೇ ರಾಕೆಟ್‌ ಇಂಧನದ ತಯಾರಿಕೆ ಸಾಧ್ಯವಿದ್ದು, ಕನಿಷ್ಟ ೧೦ ಕೆ.ಜಿ. ಉತ್ಪಾದನೆಯಿಂದ ಮಾತ್ರ ನಿಗದಿತ ಪರೀಕ್ಷೆಗಳು ಸಾಧ್ಯ. ಆದರೆ ವಿಜ್ಞಾನಿಗಳು ಆ ಹಂತವನ್ನಿನ್ನೂ ತಲುಪಿಲ್ಲವಾದ್ದರಿಂದ, ಈ ಸಂಶೋಧನೆ ಮತ್ತು ಪ್ರಯೋಗಗಳ ಮುಂದಿನ ಹಂತಗಳ ಬಗ್ಗೆ ಯಾವುದೂ ನಿರ್ಣಯವಾಗಿಲ್ಲ. ಆದರೆ ಸ್ವಚ್ಛ ಮತ್ತು ಪರಿಸರ ಸ್ನೇಹಿಯಾದ ಇಂಧನದ ಉತ್ಪಾದನೆ ಬಗ್ಗೆ ವಿಜ್ಞಾನಿಗಳು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಸ್ತಾರ Explainer: ʼನಂಬಿʼ ಕೆಟ್ಟವರಲ್ಲ! ದೇಶ ಪ್ರೇಮಿ ವಿಜ್ಞಾನಿ ದೇಶ ದ್ರೋಹಿ ಆಗಿದ್ದು ಹೇಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

India Yamaha: ಬೆಂಗಳೂರಿನಲ್ಲಿ ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈ. ಲಿಮಿಟೆಡ್‌ನ ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್ ಅನ್ನು ತೆರೆದಿದೆ. ಬೆಂಗಳೂರು ವರ್ತೂರು ಹೋಬಳಿಯ ಅಂಬಲಿಪುರದಲ್ಲಿ ಮೋಟೋ ವರ್ಲ್ಡ್ ಹೆಸರಿನಲ್ಲಿ ಈ ಹೊಸ ಔಟ್‌ಲೆಟ್ ಅನ್ನು ಪ್ರಾರಂಭಿಸಲಾಗಿದೆ.ಯಮಹಾ ಬ್ಲೂ ಸ್ಕ್ವೇರ್ ಶೋರೂಮ್‌ಗಳನ್ನು ಗ್ರಾಹಕರಿಗೆ ವೈಯಕ್ತೀಕರಿಸಿದ ವಿಧಾನದಲ್ಲಿ ಅತ್ಯುತ್ತಮ ಮಾರಾಟ, ಸರ್ವೀಸ್ ಮತ್ತು ನೆರವನ್ನು ನೀಡುವ ಮೂಲಕ ಉತ್ತಮ ಅನುಭವವನ್ನು ನೀಡುವಂತೆ ವಿನ್ಯಾಸಗೊಳಿಸಲಾಗಿದೆ.

VISTARANEWS.COM


on

Yamaha has opened a new Blue Square outlet in Bengaluru
Koo

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (India Yamaha Motor Pvt Ltd) ಪ್ರೈ. ಲಿಮಿಟೆಡ್, ಬೆಂಗಳೂರಿನಲ್ಲಿ ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್ ಅನ್ನು ತೆರೆದಿದೆ. ಬೆಂಗಳೂರು ವರ್ತೂರು ಹೋಬಳಿಯ ಅಂಬಲಿಪುರದಲ್ಲಿ ಮೋಟೋ ವರ್ಲ್ಡ್ ಹೆಸರಿನಲ್ಲಿ ಈ ಹೊಸ ಔಟ್‌ಲೆಟ್ ಅನ್ನು ಪ್ರಾರಂಭಿಸಲಾಗಿದ್ದು, ಈ ಔಟ್‌ಲೆಟ್ 7,100 ಚದರ ಅಡಿಯಷ್ಟು ವಿಶಾಲವಾಗಿದೆ. ಯಮಹಾ ಬ್ಲೂ ಸ್ಕ್ವೇರ್ ಶೋರೂಮ್‌ಗಳನ್ನು ಗ್ರಾಹಕರಿಗೆ ವೈಯಕ್ತೀಕರಿಸಿದ ವಿಧಾನದಲ್ಲಿ ಅತ್ಯುತ್ತಮ ಮಾರಾಟ, ಸರ್ವೀಸ್ ಮತ್ತು ನೆರವನ್ನು ನೀಡುವ ಮೂಲಕ ಉತ್ತಮ ಅನುಭವವನ್ನು ನೀಡುವಂತೆ ವಿನ್ಯಾಸಗೊಳಿಸಲಾಗಿದೆ.

ಈ ಬ್ಲೂ ಸ್ಕ್ವೇರ್ ಔಟ್‌ಲೆಟ್ ಯಮಹಾ ಬ್ರ್ಯಾಂಡ್‌ನ ಹುಮ್ಮಸ್ಸನ್ನು ದಾಟಿಸುತ್ತದೆ ಮತ್ತು ಗ್ರಾಹಕರಿಗೆ ಸಂಪೂರ್ಣ ಸೇವೆಯನ್ನು ಒದಗಿಸುವಂತೆ ವಿನ್ಯಾಸಗೊಂಡಿದೆ. ವೈಯಕ್ತೀಕರಿಸಿದ ವಿಧಾನದ ಮೂಲಕ ಗ್ರಾಹಕರಿಗೆ ಸೇವೆ ಒದಗಿಸಲಾಗುತ್ತಿದ್ದು, ಪ್ರತಿಯೊಬ್ಬ ಗ್ರಾಹಕರು ತೃಪ್ತಿಕರ ಸೇವೆ ಪಡೆಯಲಿದ್ದಾರೆ. ಈ ವಿಶೇಷವಾದ ಔಟ್‌ಲೆಟ್‌ಗಳನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಅನುವು ಮಾಡಿಕೊಟ್ಟಿರುವ ಬ್ರ್ಯಾಂಡ್ ಗ್ರಾಹಕರಿಗೆ ಯಮಹಾ ರೇಸಿಂಗ್ ಜಗತ್ತಿಗೆ ಪ್ರವೇಶಿಸುವ ಅವಕಾಶವನ್ನೂ ನೀಡುತ್ತಿದೆ.

ಇದನ್ನೂ ಓದಿ: Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

ಈ ಪ್ರೀಮಿಯಂ ಔಟ್‌ಲೆಟ್‌ಗಳ ಪ್ರತಿಯೊಂದು ವಿಭಾಗವನ್ನೂ ಅಂತರರಾಷ್ಟ್ರೀಯ ಮೋಟಾರ್‌ ಸ್ಪೋರ್ಟ್‌ಗಳಲ್ಲಿ ತೊಡಗಿಸಿಕೊಂಡಿರುವ ಜಾಗತಿಕ ಬ್ರ್ಯಾಂಡ್‌ ಆದ ಯಮಹಾ ಜತೆಗೆ ಸಂಬಂಧ ಹೊಂದುವ ಹೆಮ್ಮೆಯ ಭಾವವನ್ನು ಮೂಡಿಸುವಂತೆ ಚಿಂತನಶೀಲವಾಗಿ ರಚಿಸಲಾಗಿದೆ. ಯಮಹಾ, ಬ್ರ್ಯಾಂಡ್‌ನ ಹೆಮ್ಮೆಯ ರೇಸಿಂಗ್ ಪರಂಪರೆಯನ್ನು ಪ್ರತಿನಿಧಿಸುವ “ಬ್ಲೂ (ನೀಲಿ)” ಬಣ್ಣ ಮತ್ತು ಗ್ರಾಹಕರು ಯಮಹಾದ ಹರ್ಷದಾಯಕ ಮತ್ತು ಸೊಗಸಾದ ಶ್ರೇಣಿಯ ದ್ವಿಚಕ್ರ ವಾಹನಗಳೊಂದಿಗೆ ಸಂಪರ್ಕ ಸಾಧಿಸಲು ರಚಿಸಲಾದ ಪ್ಲಾಟ್‌ಫಾರ್ಮ್ ಅನ್ನು ಸಂಕೇತಿಸುವ “ಸ್ಕ್ವೇರ್” ಸಂಯೋಜನೆಯ ಮೂಲಕ ಗ್ರಾಹಕರೊಂದಿಗೆ ಉತ್ತಮ ಸಂಪರ್ಕವನ್ನು ಸಾಧಿಸಿದೆ.

ಉದ್ಯಮ-ಪ್ರಧಾನ ಅನುಭವವನ್ನು ಒದಗಿಸುವುದರ ಜತೆಗೆ, ಈ ಬ್ಲೂ ಸ್ಕ್ವೇರ್ ಔಟ್‌ಲೆಟ್‌ಗಳು ಬ್ಲೂ ಸ್ಟ್ರೀಕ್ಸ್ ರೈಡರ್‌ಗಳಿಗೆ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ. ಯಮಹಾದ ವಿಶೇಷ ಬೈಕರ್ ಸಮುದಾಯದ ಸವಾರರು ಇತರ ಸವಾರರನ್ನು ಭೇಟಿ ಮಾಡಲು ಮತ್ತು ಸಂವಹನ ನಡೆಸಲು ಅನುವು ಮಾಡಿಕೊಡುತ್ತದೆ. ಹೊಸ ಔಟ್‌ಲೆಟ್ ಸೇರಿದಂತೆ ಈಗ ಕರ್ನಾಟಕ ಮಾರುಕಟ್ಟೆಯಲ್ಲಿ ಯಮಹಾ 23 ಎಕ್ಸ್‌ಕ್ಲೂಸಿವ್ ಬ್ಲೂ ಸ್ಕ್ವೇರ್ ಶೋ ರೂಂಗಳನ್ನು ಹೊಂದಿದೆ.

ಯಮಹಾದ ಸೂಪರ್‌ಸ್ಪೋರ್ಟ್ ಆರ್3 (321ಸಿಸಿ), ಟಾರ್ಕ್-ರಿಚ್ ಎಂಟಿ -03 (321 ಸಿಸಿ) ಮತ್ತು ಮ್ಯಾಕ್ಸಿ-ಸ್ಪೋರ್ಟ್ಸ್ ಏರಾಕ್ಸ್(155 ಸಿಸಿ) ಮತ್ತು ಏರಾಕ್ಸ್ ವರ್ಷನ್ ಎಸ್ (155 ಸಿಸಿ)ಗಳನ್ನು ಬ್ಲೂ ಸ್ಕ್ವೇರ್ ಶೋರೂಮ್‌ಗಳ ಮೂಲಕ ವಿಶೇಷವಾಗಿ ಮಾರಾಟ ಮಾಡಲಾಗುತ್ತದೆ. ಈ ಪ್ರೀಮಿಯಂ ಔಟ್‌ಲೆಟ್‌ಗಳು ವೈಝಡ್‌ಎಫ್‌-ಆರ್‌15 ಎಂ (155 ಸಿಸಿ), ವೈಝಡ್‌ಎಫ್‌-ಆರ್‌15 ವಿ4 (155ಸಿಸಿ), ವೈಝಡ್‌ಎಫ್‌-ಆರ್‌15ಎಸ್ ವಿ3 (155 ಸಿಸಿ), ಎಂಟಿ-15 ವಿ2 (155 ಸಿಸಿ), ಬ್ಲೂ ಕೋರ್ ತಂತ್ರಜ್ಞಾನ ಆಧರಿತ ಮಾಡೆಲ್ ಗಳಾದ ಎಫ್‌ಝಡ್‌ಎಸ್‌-ಎಫ್‌ಐ ವರ್ಷನ್ 4.0 (149 ಸಿಸಿ), ಎಫ್‌ಝಡ್‌ಎಸ್‌-ಎಫ್‌ಐ ವರ್ಷನ್ 3.0 (149 ಸಿಸಿ), ಎಫ್‌ಝಡ್‌-ಎಫ್‌ಐ ವರ್ಷನ್ 3.0 (149 ಸಿಸಿ), ಎಫ್‌ಝಡ್‌-ಎಕ್ಸ್ (149 ಸಿಸಿ), ಮತ್ತು ಸ್ಕೂಟರ್ ಗಳಾದ ಫ್ಯಾಸಿನೋ 125 ಎಫ್ಐ ಹೈಬ್ರಿಡ್ (125 ಸಿಸಿ), ರೇ ಝಡ್ಆರ್ 125 ಎಫ್ಐ ಹೈಬ್ರಿಡ್ (125 ಸಿಸಿ), ರೇ ಝಡ್ಆರ್ ಸ್ಟ್ರೀಟ್ ರಾಲಿ 125 ಎಫ್ಐ ಹೈಬ್ರಿಡ್ (125 ಸಿಸಿ) ಮುಂತಾದ ನವೀಕರಿಸಿದ ಲೈನ್-ಅಪ್‌ಗಳನ್ನು ಪ್ರದರ್ಶಿಸಲಾಗುತ್ತದೆ.

ಇದನ್ನೂ ಓದಿ: Vastu Tips: ನೆಲ ಒರೆಸುವಾಗಲೂ ವಾಸ್ತು ನಿಯಮ ಪಾಲಿಸಲೇಬೇಕು!

ಹೆಚ್ಚು ಸಮಗ್ರವಾದ ಅನುಭವವನ್ನು ಒದಗಿಸುವ ಭರವಸೆಯನ್ನು ನೀಡುತ್ತಾ, ಈ ಪ್ರೀಮಿಯಂ ಬ್ಲೂ ಸ್ಕ್ವೇರ್ ಔಟ್‌ಲೆಟ್‌ಗಳು ಯಮಹಾದ ನಿಜವಾದ ಆ್ಯಕ್ಸೆಸರೀಸ್‌ಗಳು, ಅಧಿಕೃತ ಉಡುಪುಗಳು ಮತ್ತು ಯಮಹಾ ನಿಜವಾದ ಬಿಡಿಭಾಗಗಳನ್ನು ಗ್ರಾಹಕರಿಗೆ ಪ್ರದರ್ಶನ ಮತ್ತು ಮಾರಾಟ ಮಾಡುತ್ತವೆ.

Continue Reading

ತಂತ್ರಜ್ಞಾನ

Agnikul Cosmos: ಯಶಸ್ವಿಯಾಗಿ ರಾಕೆಟ್ ಉಡಾವಣೆ ಮಾಡಿದ ಸ್ಟಾರ್ಟ್ ಅಪ್ ಕಂಪನಿ ಅಗ್ನಿಕುಲ್ ಕಾಸ್ಮೋಸ್; ಮೋದಿ ಅಭಿನಂದನೆ

Agnikul Cosmos: ಚೆನ್ನೈ ಮೂಲದ ಖಾಸಗಿ ಬಾಹ್ಯಾಕಾಶ ಸ್ಟಾರ್ಟ್ ಅಪ್ ಅಗ್ನಿಕುಲ್ ಕಾಸ್ಮೋಸ್ ಅಗ್ನಿಬಾನ್ ಎಸ್‌ಒಆರ್‌ಟಿಇಡಿ ಎಂಬ ರಾಕೆಟ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಐತಿಹಾಸಿಕ ಸಾಧನೆಗೆ ಇಸ್ರೋ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ.

VISTARANEWS.COM


on

Agnikul Cosmos
Koo

ಚೆನ್ನೈ: ಚೆನ್ನೈ ಮೂಲದ ಖಾಸಗಿ ಬಾಹ್ಯಾಕಾಶ ಸ್ಟಾರ್ಟ್ ಅಪ್ ಅಗ್ನಿಕುಲ್ ಕಾಸ್ಮೋಸ್ (Agnikul Cosmos) ಇಂದು (ಮೇ 30) ಅಗ್ನಿಬಾನ್ ಎಸ್‌ಒಆರ್‌ಟಿಇಡಿ (Suborbital Tech Demonstrator) ಎಂಬ ರಾಕೆಟ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಸಂಬಂಧ ಇಸ್ರೋ (Indian Space Research Organisation) ಸಂತಸ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಭಿನಂದನೆ ತಿಳಿಸಿದೆ.‌

ʼʼಅಗ್ನಿಬಾನ್‌ ಸಾರ್ಟೆಡ್ 01 (Agnibaan SOrTeD) ಮಿಷನ್‌ ಅನ್ನು ತಮ್ಮ ಉಡಾವಣಾ ಪ್ಯಾಡ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಅಗ್ನಿಕುಲ್‌ ಕಾಸ್ಮೋಸ್‌ಗೆ ಅಭಿನಂದನೆಗಳು. ಅರೆ-ಕ್ರಯೋಜೆನಿಕ್‌ ಲಿಕ್ವಿಡ್‌ ಎಂಜಿನ್‌ನ ಮೊದಲ ನಿಯಂತ್ರಿತ ಹಾರಾಟವು ಪ್ರಮುಖ ಮೈಲಿಗಲ್ಲು ಎನಿಸಿಕೊಂಡಿದೆʼʼ ಎಂದು ಇಸ್ರೋ ತಿಳಿಸಿದೆ. ಐಐಟಿ ಮದ್ರಾಸ್‌ನ ಪ್ರಾಧ್ಯಾಪಕ ಮತ್ತು ಅಗ್ನಿಕುಲ್‌ನ ಮಾರ್ಗದರ್ಶಕ ಸತ್ಯ ಆರ್. ಚಕ್ರವರ್ತಿ ಕೂಡ ಶ್ರೀಹರಿಕೋಟಾದಿಂದ ಉಡಾವಣೆ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

“ಶ್ರೀಹರಿಕೋಟಾದ ಎಸ್‌ಡಿಎಸ್‌ಸಿ-ಶಾರ್‌(SDSC-SHAR)ನಿಂದ ಭಾರತದ ಮೊದಲ ಮತ್ತು ಏಕೈಕ ಖಾಸಗಿ ಲಾಂಚ್‌ ಪ್ಯಾಡ್‌ನಿಂದ ಅಗ್ನಿಬಾನ್ ಸಾರ್ಟೆಡ್‌ ಮಿಷನ್ 01 ಅನ್ನು ಯಶಸ್ವಿಯಾಗಿ ಉಡಾವಣೆಗೊಳಿಸಲಾಗಿದೆ. ಈ ರಾಕೆಟ್‌ ವಿಶ್ವದ ಮೊದಲ ಸಿಂಗಲ್ ಪೀಸ್ 3 ಡಿ ಮುದ್ರಿತ ಎಂಜಿನ್‌ನಿಂದ ಚಾಲಿತವಾಗಿದೆ ಮತ್ತು ಇದು ಸೆಮಿ ಕ್ರಯೋ ಎಂಜಿನ್ ಹೊಂದಿರುವ ಭಾರತದ ಮೊದಲ ಹಾರಾಟ ಎನಿಸಿಕೊಂಡಿದೆ” ಎಂದು ಅಗ್ನಿಕುಲ್‌ ತಿಳಿಸಿದೆ.

ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ

ಇತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಈ ಅಭೂತಪೂರ್ವ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದಾರೆ. ಎಕ್ಸ್‌ ಮೂಲಕ ಅಭಿನಂದನೆ ತಿಳಿಸಿದ ಅವರು, “ಇಡೀ ರಾಷ್ಟ್ರವೇ ಹೆಮ್ಮೆ ಪಡುವಂತಹ ಗಮನಾರ್ಹ ಸಾಧನೆ. ವಿಶ್ವದ ಮೊದಲ ಸಿಂಗಲ್-ಪೀಸ್ 3ಡಿ ಮುದ್ರಿತ ಅರೆ-ಕ್ರಯೋಜೆನಿಕ್ ಎಂಜಿನ್‌ನಿಂದ ಚಾಲಿತ ಅಗ್ನಿಬಾನ್ ರಾಕೆಟ್‌ನ ಯಶಸ್ವಿ ಉಡಾವಣೆ ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಒಂದು ಮಹತ್ವದ ಕೊಡುಗೆಯಾಗಿದೆ ಮತ್ತು ನಮ್ಮ ಯುವ ಶಕ್ತಿಯ ಗಮನಾರ್ಹ ಜಾಣ್ಮೆಗೆ ಸಾಕ್ಷಿಯಾಗಿದೆ. ಅಗ್ನಿಕುಲ್ ಕಾಸ್ಮೋಸ್ ತಂಡಕ್ಕೆ, ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು” ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

5ನೇ ಪ್ರಯತ್ನ

ಇದು ಅಗ್ನಿಕುಲ್ ಕಾಸ್ಮೋಸ್ ನಡೆಸಿದ 5ನೇ ಪ್ರಯತ್ನವಾಗಿತ್ತು. ಈ ಹಿಂದೆ ರಾಕೆಟ್‌ ಉಡಾವಣೆ ಮಾಡಲು 4 ಬಾರಿ ಪ್ರಯತ್ನ ನಡೆದಿತ್ತಾದರೂ ಕೊನೆಯ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆಯಿಂದ ರದ್ದುಗೊಳಿಸಲಾಗಿತ್ತು. 575 ಕೆಜಿ ತೂಕ ಮತ್ತು 6.2 ಮೀಟರ್ ಉದ್ದದ ರಾಕೆಟ್ ಶ್ರೀಹರಿಕೋಟಾದಿಂದ ಬಂಗಾಳ ಕೊಲ್ಲಿಗೆ ಯಶಸ್ವಿಯಾಗಿ ಹಾರಾಟ ನಡೆಸಿತು. ʼʼಅಗ್ನಿಬಾನ್ ಸಾರ್ಟೆಡ್‌ ಅರೆ-ಕ್ರಯೋಜೆನಿಕ್ ಎಂಜಿನ್‌ನಿಂದ ನಿಯಂತ್ರಿಸಲ್ಪಡುತ್ತದೆ. ಇದು ವಾಣಿಜ್ಯಿಕವಾಗಿ ಲಭ್ಯವಿರುವ ವಾಯುಯಾನ ಟರ್ಬೈನ್ ಇಂಧನವನ್ನು, ಮುಖ್ಯವಾಗಿ ಸೀಮೆಎಣ್ಣೆ ಮತ್ತು ವೈದ್ಯಕೀಯ ದರ್ಜೆಯ ದ್ರವ ಆಮ್ಲಜನಕವನ್ನು ಬಳಸುತ್ತದೆʼʼ ಎಂದು ಅಗ್ನಿಕುಲ್ ಕಾಸ್ಮೋಸ್ ಪ್ರೈವೇಟ್ ಲಿಮಿಟೆಡ್‌ನ ಸಹ ಸಂಸ್ಥಾಪಕ ಮೊಯಿನ್ ಎಸ್‌ಪಿಎಂ ತಿಳಿಸಿದ್ದಾರೆ.

Continue Reading

ಕರ್ನಾಟಕ

LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

LinkedIn: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

VISTARANEWS.COM


on

LinkedIns Tips for Graduates in the Job Search
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ (LinkedIn) ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

2024ರಲ್ಲಿ ಕಂಪನಿಗಳು ಹೊಂದಿಕೊಳ್ಳುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರೆಸುತ್ತಿವೆ. ಹೆಚ್ಚು ಹೊಂದಿಕೊಳ್ಳುವ ಕೆಲಸದ ವ್ಯವಸ್ಥೆಗಳ ಕಡೆಗೆ ಗಮನ ಕೊಡುವ ಟ್ರೆಂಡ್ ಈಗ ನಡೆಯುತ್ತಿದೆ. ಆನ್-ಸೈಟ್ ಹುದ್ದೆಗಳು 15% ರಷ್ಟು ಕಡಿಮೆಯಾಗುತ್ತಿವೆ ಮತ್ತು ವರ್ಷದಿಂದ ವರ್ಷಕ್ಕೆ ಆರಂಭಿಕ ಹಂತದ ಹುದ್ದೆಗಳಿಗೆ 52% ರಷ್ಟು ಹೈಬ್ರಿಡ್ ಸ್ಥಾನಗಳು ಹೆಚ್ಚಾಗುತ್ತಿವೆ. ಈ ಬದಲಾವಣೆಯು ಹೊಸ ಪದವೀಧರರಿಗೆ ಆಯ್ಕೆ ಮಾಡಲು ಮತ್ತು ವೃತ್ತಿ ಜೀವನ ಮುಂದುವರಿಸಲು ವಿಸ್ತಾರವಾದ ಕೆಲಸದ ಅವಕಾಶಗಳನ್ನು ಒದಗಿಸುತ್ತದೆ.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

ಲಿಂಕ್ಡ್‌ಇನ್‌ನ ಕರಿಯರ್ ಸ್ಟಾರ್ಟರ್ 2024 ವರದಿಯ ಪ್ರಕಾರ, ಯುಟಿಲಿಟೀಸ್ ಕ್ಷೇತ್ರ ಬಹಳ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದ್ದು, ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿರುವ ಯುವ ವೃತ್ತಿಪರರು ಆಯ್ಕೆಗೆ ಪರಿಗಣಿಸಬಹುದಾಗಿದೆ. ತೈಲ, ಅನಿಲ ಮತ್ತು ಗಣಿಗಾರಿಕೆ, ರಿಯಲ್ ಎಸ್ಟೇಟ್, ಸಲಕರಣೆ ಬಾಡಿಗೆ ಸೇವೆಗಳು ಮತ್ತು ಗ್ರಾಹಕ ಸೇವಾ ಕ್ಷೇತ್ರಗಳು ಹೊಸ ಪದವೀಧರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಇನ್ನಿತರ ಉನ್ನತ ಉದ್ಯಮಗಳಾಗಿವೆ. ಜತೆಗೆ ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿಲ್ಲದವರು ಶಿಕ್ಷಣ, ಮಾಹಿತಿ ಹಾಗೂ ತಂತ್ರಜ್ಞಾನ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವವರಿಗೆ ಉನ್ನತ ಉದ್ಯೋಗ

ಲಿಂಕ್ಡ್‌ಇನ್‌ನ ಮಾಹಿತಿಯು ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವ ವೃತ್ತಿಪರರಿಗೆ ವಿವಿಧ ಶ್ರೇಣಿಯ ಉನ್ನತ ಉದ್ಯೋಗಗಳ ವಿವರಗಳನ್ನು ತಿಳಿಸುತ್ತದೆ. ಪದವೀಧರರು ಸಾಫ್ಟ್‌ವೇರ್ ಎಂಜಿನಿಯರ್, ಸಿಸ್ಟಮ್ ಎಂಜಿನಿಯರ್ ಮತ್ತು ಪ್ರೋಗ್ರಾಮಿಂಗ್ ಅನಾಲಿಸ್ಟ್ ನಂತಹ ಹುದ್ದೆಗಳಿಗೆ ಹುಡುಕಾಟ ನಡೆಸಬಹುದು. ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಡೇಟಾ ಅನಾಲಿಸ್ಟ್ ಹುದ್ದೆಗಳಿಗೆ ಹೆಚ್ಚಿನ ಸಂಖ್ಯೆಯ ಪದವೀಧರರನ್ನು ನೇಮಿಸಿಕೊಳ್ಳಲಾಗುತ್ತಿದೆ. ಪದವಿ ಇಲ್ಲದವರು ಕೂಡ ಸಾಫ್ಟ್‌ವೇರ್ ಎಂಜಿನಿಯರ್, ಸೆಕ್ರೆಟರಿ ಮತ್ತು ಡಿಸೈನ್ ಎಂಜಿನಿಯರ್‌ನಂತಹ ಹುದ್ದೆಗಳಲ್ಲಿ ಕೆಲಸ ಮಾಡಬಹುದು.

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು ವೇಗದ ಬೆಳವಣಿಗೆ ಹೊಂದುವ ಅವಕಾಶ ನೀಡುತ್ತವೆ. ಸಮುದಾಯ ಮತ್ತು ಸಾಮಾಜಿಕ ಸೇವೆಗಳು, ಕಾನೂನು, ಮಾರ್ಕೆಟಿಂಗ್, ಮಾಧ್ಯಮ ಮತ್ತು ಸಂವಹನದಂತಹ ಕ್ಷೇತ್ರಗಳಲ್ಲಿ ಪದವೀಧರರಿಗೆ ಸಾಕಷ್ಟು ಅವಕಾಶಗಳು ಲಭ್ಯವಿದೆ. ಪದವಿ ಇಲ್ಲದವರು ಶಿಕ್ಷಣ, ಮಾನವ ಸಂಪನ್ಮೂಲ, ಮಾರ್ಕೆಟಿಂಗ್ ಹಾಗೂ ಮಾಧ್ಯಮ ಮತ್ತು ಸಂವಹನದಾದ್ಯಂತ ಸಾಕಷ್ಟು ಉದ್ಯೋಗಾವಕಾಶಗಳನ್ನು ಪಡೆಯುತ್ತಾರೆ.

ಇದನ್ನೂ ಓದಿ: TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

ಈ ಕುರಿತು ಲಿಂಕ್ಡ್‌ಇನ್ ಕರಿಯರ್ ಎಕ್ಸ್‌ಪರ್ಟ್ ಆಂಡ್ ಇಂಡಿಯಾ ಸೀನಿಯರ್ ಮ್ಯಾನೇಜಿಂಗ್ ಎಡಿಟರ್ ನಿರಾಜಿತಾ ಬ್ಯಾನರ್ಜಿ ಮಾತನಾಡಿ, “ಉದ್ಯೋಗ ಮಾರುಕಟ್ಟೆ ಸ್ವಲ್ಪ ಬಿಗುವಾಗಿದ್ದಾಗ ಆರಂಭಿಕ ಹಂತದಲ್ಲಿ ಉದ್ಯೋಗ ದೊರೆಯುವುದು ಕಷ್ಟವಾಗುತ್ತದೆ. ಉದ್ಯಮದ ಟ್ರೆಂಡ್‌ಗಳು ಮತ್ತು ಬೇಡಿಕೆಯ ಉದ್ಯೋಗಗಳ ಕುರಿತು ಅಪ್‌ಡೇಟ್ ಆಗಿರುವುದರಿಂದ ಮತ್ತು ಆರಂಭದಲ್ಲಿಯೇ ಸಿಗುವ ಹುದ್ದೆಗಳಲ್ಲಿ ಮುನ್ನಡೆಯುವುದರಿಂದ ಮುಂದೆ ಆಯ್ಕೆಗಳು ದೊಡ್ಡದಾಗುತ್ತಾ ಹೋಗುತ್ತದೆ. ಇಂದು ಅನೇಕ ಕೌಶಲ್ಯಗಳನ್ನು ಬೇರೆ ಬೇರೆ ಕೈಗಾರಿಕೆಗಳಲ್ಲಿ ಬಳಸಬಹುದಾಗಿದೆ, ಮತ್ತು ಎಐ ಬಳಕೆ ಹೆಚ್ಚುತ್ತಿರುವುದರಿಂದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು ಟೆಕ್-ಸಂಬಂಧಿತ ಹುದ್ದೆಗಳು ಸೃಷ್ಟಿಯಾಗುತ್ತಿವೆ.

ಈ ನೇಮಕಾತಿ ಟ್ರೆಂಡ್‌ಗಳು ಇಂಧನ ವಲಯದಲ್ಲಿರುವಂತಹ ವಿಶಾಲವಾದ ಆರ್ಥಿಕ ಮಾದರಿಗಳನ್ನು ಪ್ರತಿಬಿಂಬಿಸುತ್ತವೆ. ವೈವಿಧ್ಯಮಯ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ವೃತ್ತಿಪರರನ್ನು ಕಂಪನಿಗಳು ಹುಡುಕಲು ತೊಡಗಿವೆ. ತಮ್ಮ ದಿಗಂತವನ್ನು ವಿಸ್ತರಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನುಮತ್ತು ವೃತ್ತಿಪರರ ಜತೆಗಿನ ನೆಟ್‌ವರ್ಕಿಂಗ್ ಅನ್ನು ಬಲಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಉದ್ಯೋಗ ಹುಡುಕಾಟವನ್ನು ಪ್ರಾರಂಭಿಸುವವರಿಗೆ ಲಿಂಕ್ಡ್‌ಇನ್‌ನ ಸಲಹೆಗಳು

ನೇಮಕಾತಿದಾರರ ಗಮನ ಸೆಳೆಯಲು, ಹೆಚ್ಚಿಸಲು ನಿಮ್ಮ ಲಿಂಕ್ಡ್‌ಇನ್ ಪ್ರೊಫೈಲ್‌ನಲ್ಲಿ ನಿಮ್ಮ ಕೌಶಲ್ಯಗಳನ್ನು ಗಮನ ಸೆಳೆಯುವಂತೆ ನಮೂದಿಸಿ. ಲಿಂಕ್ಡ್‌ಇನ್ ನೀವು ತಿಳಿಸಿದ ಕೌಶಲ್ಯಗಳ ಆಧಾರದ ಮೇಲೆ ನಿಮಗೆ ಈ ಮೊದಲು ತಿಳಿದಿರದ, ಆದರೆ ನಿಮಗೆ ಹೊಂದುವ ಉದ್ಯೋಗಾವಕಾಶಗಳನ್ನು ತಿಳಿಸುತ್ತದೆ.

ಲಿಂಕ್ಡ್‌ಇನ್‌ನ ಓಪನ್ ಟು ವರ್ಕ್ ಫೀಚರ್ ಮೂಲಕ ನೀವು ಹೊಸ ಉದ್ಯೋಗದಲ್ಲಿ ಆಸಕ್ತಿಯನ್ನು ಹೊಂದಿದ್ದೀರಿ ಎಂಬುದನ್ನು ತಿಳಿಸಿ. ಜತಗೆ ಈ ಕಾಲದ ಟ್ರೆಂಡ್ ಅಥವಾ ವಿಚಾರಗಳಿಗೆ ತಕ್ಕಂತೆ ನಿಮ್ಮ ಸ್ವಂತ ವಿಚಾರಗಳನ್ನು ಪೋಸ್ಟ್ ಮಾಡುವ ಮೂಲಕ ಮತ್ತು ಸಂಭಾವ್ಯ ಉದ್ಯೋಗದಾತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಅರ್ಥಪೂರ್ಣವಾಗಿ ಸಂವಹನ ನಡೆಸುವ ಮೂಲಕ ಗಮನ ಸೆಳೆಯಬಹುದಾಗಿದೆ. ನಿಮ್ಮ ಭವಿಷ್ಯದ ಉದ್ಯೋಗದಾತರು ನಿಮ್ಮಿಂದ ಕೇವಲ ಒಂದು ಕಾಮೆಂಟ್ ದೂರದಲ್ಲಿರಬಹುದು ಎಂಬುದು ನೆನಪಲ್ಲಿರಲಿ.

ಇದನ್ನೂ ಓದಿ: Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

ಔಟ್ ಆಫ್ ದಿ ಬಾಕ್ಸ್ ಯೋಚಿಸಿ. ಅಂದರೆ ವಿಭಿನ್ನವಾಗಿ ಯೋಚಿಸಿ. ಎಲ್ಲಾ ಕಡೆ ಎಐ ಆವರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಪ್ರೋಗ್ರಾಮಿಂಗ್ ಕೌಶಲ್ಯಗಳನ್ನು ಹೊಂದಿರುವವರನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಹೊರತಾದ ಬೇರೆ ಅಭಿವೃದ್ಧಿ ಹೊಂದುತ್ತಿರುವ ಕೈಗಾರಿಕೆಗಳು ನೇಮಕಮಾಡಿಕೊಳ್ಳುತ್ತಿವೆ. ನಿಮ್ಮ ಮುಂದಿನ ಕೆಲಸ ಅಥವಾ ಹುದ್ದೆಗಾಗಿ ನೀವು ಹುಡುಕಾಟ ನಡೆಸುತ್ತಿರುವಾಗ ಈ ರೀತಿಯ ವೃತ್ತಿ ಪರಿವರ್ತನೆಯ (ಕರಿಯರ್ ಟ್ರಾನ್ಸಿಷನ್) ಟ್ರೆಂಡ್‌ಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಿ. ಏಕೆಂದರೆ ಅದರಿಂದ ನಿಮ್ಮ ಮುಂದೆ ಅವಕಾಶಗಳ ಸಂಖ್ಯೆ ಹೆಚ್ಚುತ್ತದೆ. ನಿಮ್ಮ ಕೌಶಲ್ಯಗಳಿಗೆ ಸಂಬಂಧಿಸಿದ ಲಿಂಕ್ಡ್‌ಇನ್ ಗುಂಪುಗಳಲ್ಲಿ ತೊಡಗಿಸಿಕೊಳ್ಳಿ. ಇದು ನೆಟ್‌ವರ್ಕ್‌ ಸಾಧಿಸಲು ಉತ್ತಮ ಮಾರ್ಗವಾಗಿದೆ ಮತ್ತು ಲಭ್ಯವಿರುವ ವಿಶಾಲವಾದ ಅವಕಾಶಗಳ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಅನುವು ಮಾಡಿ ಕೊಡಲಿದೆ.

ಇದನ್ನೂ ಓದಿ: World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ಪದವೀಧರರು ತಮ್ಮ ಕೌಶಲ್ಯಗಳನ್ನು ಸುಧಾರಿಸಲು ಸಹಾಯ ಮಾಡಲು, ಲಿಂಕ್ಡ್‌ಇನ್ 30 ಜೂನ್ 2024ರವರೆಗೆ ಉಚಿತ ಲಿಂಕ್ಡ್‌ಇನ್ ಕಲಿಕಾ ಕೋರ್ಸ್‌ಗಳನ್ನು ಬಿಡುಗಡೆ ಮಾಡಿದೆ, ಆ ಕೋರ್ಸುಗಳು ಹೀಗಿವೆ.

● ಕಾಲೇಜು ಪದವೀಧರರಿಗೆ ಉದ್ಯೋಗ ಹುಡುಕಾಟ.
● ಇಂಟರ್ನ್‌ಶಿಪ್ ಅನ್ನು ಉದ್ಯೋಗವನ್ನಾಗಿ ಪರಿವರ್ತಿಸಿಕೊಳ್ಳುವುದು.
● ವೃತ್ತಿ ಆರಂಭಿಸುವವರಿಗೆ ಪ್ರೊಫೆಷನಲ್ ನೆಟ್‌ವರ್ಕಿಂಗ್.
● 30-ನಿಮಿಷದ ರೆಸ್ಯೂಮ್ ರಿಫ್ರೆಶ್.
● ಸಾಮಾನ್ಯ ಸಂದರ್ಶನ ಪ್ರಶ್ನೆಗಳಿಗೆ ಸಿದ್ಧರಾಗಿರುವುದು.
● ನಿಮ್ಮ ಕಾಂಪನ್ಸೇಷನ್ ಪ್ಯಾಕೇಜ್ ಮಾತುಕತೆ ನಡೆಸುವುದು.

Continue Reading

ಕರ್ನಾಟಕ

Toyota: ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024; ಟಿಟಿಟಿಐ ವಿದ್ಯಾರ್ಥಿಗಳ ಉತ್ತಮ ಸಾಧನೆ

Toyota: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ದಿಂದ ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ಆಯೋಜಿಸಿದ್ದ ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

VISTARANEWS.COM


on

Toyota Technical Training Institute students Excellent performance in India Skills Competition 2024
Koo

ರಾಮನಗರ: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ದಿಂದ ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ಆಯೋಜಿಸಿದ್ದ ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟೊಯೊಟಾ (Toyota) ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಸಂಯೋಜಿತ ಉತ್ಪಾದನೆ (ಎಡಿಟಿವ್ ಮ್ಯಾನುಫ್ಯಾಕ್ಚರಿಂಗ್ ) ವಿಭಾಗದ ವೈಯಕ್ತಿಕ ಪ್ರತಿಸ್ಪರ್ಧಿಯಾಗಿ ಪ್ರೇಮ್. ವಿ ಚಿನ್ನದ ಪದಕವನ್ನು ಗಳಿಸಿದ್ದಾರೆ. ಮ್ಯಾನುಫ್ಯಾಕ್ಚರಿಂಗ್ ಟೀಮ್ ಚಾಲೆಂಜ್‌ನಲ್ಲಿ ಮೋಹಿತ್ ಎಂ.ಯು, ಹರೀಶ್ ಆರ್, ಮತ್ತು ನೆಲ್ಸನ್ ವಿ ತಂಡ ಚಿನ್ನದ ಪದಕಗಳನ್ನು ಪಡೆದುಕೊಂಡಿದೆ.

ಮೆಕಾಟ್ರಾನಿಕ್ಸ್ ವಿಭಾಗದಲ್ಲಿ ದರ್ಶನ್ ಗೌಡ ಸಿ.ಎಸ್. ಮತ್ತು ಭಾನು ಪ್ರಸಾದ್ ಎಸ್.ಎಂ ತಂಡ ಚಿನ್ನದ ಪದಕ ಗಳಿಸಿದೆ. ಹೇಮಂತ್ ಕೆ.ವೈ ಮತ್ತು ಉದಯ್ ಕುಮಾರ್ ಬಿ ತಂಡ ಬೆಳ್ಳಿ ಪದಕ ಗಳಿಸಿದೆ. ಇದಲ್ಲದೆ, ರೋಹನ್ ಎ.ಎಸ್. ಬೆಳ್ಳಿ ಪದಕ ಮತ್ತು ಸುದೀಪ್ ಎಸ್.ಎಂ. ಅವರು ಕಾರ್ ಪೇಂಟಿಂಗ್‌ನಲ್ಲಿ ವೈಯಕ್ತಿಕ ಸ್ಪರ್ಧಿಯಾಗಿ ಮೆಡಲಿಯನ್ ಆಫ್ ಎಕ್ಸಲೆನ್ಸ್ ಪಡೆದಿದ್ದಾರೆ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ನಡೆದ ಸ್ಪರ್ಧೆಯ “ಆಫ್-ಸೈಟ್” ಭಾಗದ ನಾಲ್ಕು ವಿಭಾಗಗಳಲ್ಲಿ ಟಿಟಿಟಿಐ ಭಾಗವಹಿಸಿತ್ತು. ಮ್ಯಾನುಫ್ಯಾಕ್ಚರಿಂಗ್ ಟೀಮ್ ಚಾಲೆಂಜ್, ಮೆಕಾಟ್ರಾನಿಕ್ಸ್, ಕಾರ್ ಪೇಂಟಿಂಗ್ ಮತ್ತು ಎಡಿಟಿವ್ ಮ್ಯಾನುಫ್ಯಾಕ್ಚರಿಂಗ್ ಸೇರಿದಂತೆ ಹಲವು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಟಿಟಿಟಿಐನ ವಿದ್ಯಾರ್ಥಿಗಳು ಅದ್ಭುತ ಕೌಶಲ್ಯ ಮತ್ತು ಡೆಡಿಕೇಷನ್ ಅನ್ನು ಪ್ರದರ್ಶಿಸಿದ್ದಾರೆ.

ಈ ವೇಳೆ ಎನ್‌ಎಸ್‌ಡಿಸಿ ಯ ಮಾರ್ಕೆಟಿಂಗ್ ಮತ್ತು ಕಮ್ಯುನಿಕೇಷನ್ಸ್ ಜನರಲ್ ಮ್ಯಾನೇಜರ್ ಮೋನಿಕಾ ನಂದಾ ಮಾತನಾಡಿ, “ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಗಮನಾರ್ಹ ಸಾಧನೆ ಮಾಡಿದ ಟೊಯೋಟಾ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಟಿಟಿಟಿಐ) ನ ವಿದ್ಯಾರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರ ಅನುಕರಣೀಯ ಕೌಶಲ್ಯಗಳು ಮತ್ತು ಸಮರ್ಪಣೆ ಟಿಟಿಟಿಐನ ತರಬೇತಿ ಕಾರ್ಯಕ್ರಮಗಳ ಪರಿಣಾಮಕಾರಿತ್ವಕ್ಕೆ ಸಾಕ್ಷಿಯಾಗಿದೆ. ಈ ವಿಜೇತರು ತಮ್ಮ ಸಂಸ್ಥೆಗೆ ಗೌರವವನ್ನು ತರುವುದಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತೀಯ ಕೌಶಲ್ಯ ಅಭಿವೃದ್ಧಿಯ ಖ್ಯಾತಿಯನ್ನು ಹೆಚ್ಚಿಸುತ್ತಾರೆ. ವಿಶ್ವ ಕೌಶಲ್ಯ ಸ್ಪರ್ಧೆಗೆ ಆಯ್ಕೆಯಾದವರು ಈ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರಿಸುತ್ತಾರೆ. ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡುತ್ತಾರೆ ಎಂದು ನಮಗೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಣಕಾಸು ಮತ್ತು ಆಡಳಿತದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜಿ.ಶಂಕರ ಮಾತನಾಡಿ, “ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟಿಟಿಟಿಐ ವಿದ್ಯಾರ್ಥಿಗಳ ಗಮನಾರ್ಹ ಸಾಧನೆಗಳ ಬಗ್ಗೆ ನಾವು ಅಪಾರ ಹೆಮ್ಮೆ ಪಡುತ್ತೇವೆ. ಅವರ ಯಶಸ್ವಿ ಪ್ರಯಾಣ ನಮಗೆ ಹೆಚ್ಚು ಆನಂದವನ್ನು ನೀಡಿದೆ. ಕಠಿಣ ಪರಿಶ್ರಮದಿಂದಾಗಿ ಈ ಮೈಲಿಗಲ್ಲನ್ನು ವಿದ್ಯಾರ್ಥಿಗಳು ತಲುಪಿದ್ದಾರೆ ಎಂದು ತಿಳಿಸಿದ್ದಾರೆ.

Continue Reading
Advertisement
Anti Islam Rally
ವಿದೇಶ2 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Modi Meditation
ದೇಶ2 hours ago

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Yamaha has opened a new Blue Square outlet in Bengaluru
ಬೆಂಗಳೂರು3 hours ago

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

Neha Hiremath
ಕರ್ನಾಟಕ4 hours ago

Neha Hiremath: ಲಿಂಗಾಯತಳಾದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣಪತ್ರ ಮಾಡಿಸಿದ್ದೇಕೆ? ಸರ್ಟಿಫಿಕೇಟ್‌ ಫೋಟೊ ಈಗ ವೈರಲ್

Kanyakumari Tour
ಪ್ರವಾಸ4 hours ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sri Huligemma Devi Maharathotsava in Hulagi
ಧಾರ್ಮಿಕ4 hours ago

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Vijayanagara ZP CEO Sadashiva Prabhu instructed that Dadara Rubella Lasika Abhiyan should be conducted neatly
ಆರೋಗ್ಯ5 hours ago

Vijayanagara News: ದಡಾರ, ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ

District administration all preparations for vote counting says DC Prashanth Kumar Mishra
ಬಳ್ಳಾರಿ5 hours ago

Lok Sabha Election 2024: ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ

Exit Polls
Lok Sabha Election 20245 hours ago

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

Heart Attack
ದೇಶ5 hours ago

Heart Attack: ತಿರಂಗಾ ಹಿಡಿದು ಕುಣಿಯುವಾಗಲೇ ಹೃದಯಾಘಾತಕ್ಕೆ ನಿವೃತ್ತ ಯೋಧ ಬಲಿ; ಸಾವಿನಲ್ಲೂ ಸಾರ್ಥಕತೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌